Category Archives: Blog

Your blog category

ಅದ್ಭುತವಾಗಿ ‘ಅಂದೊಂದಿತ್ತು ಕಾಲ’ ಹಾಡನ್ನು ಹಾಡಿದ ರಾಮನಗರದ ಝೋಹಾನ್ – Kannada News | Saregamapa Little Champ Ramanagara Zohan Sings next Level

ಸರಿಗಮಪ ಲಿಟ್ಲ್​ ಚಾಂಪ್ಸ್  ಜೀ ಕನ್ನಡದಲ್ಲಿ ಪ್ರಸಾರ ಆರಂಭಿಸಿದೆ. ಆಡಿಷನ್​ ಅಲ್ಲಿ ಒಂದಷ್ಟು ಮಕ್ಕಳನ್ನು ಕರೆದು ತರಲಾಗಿದೆ. ಇವರ ಪೈಕಿ ಉತ್ತಮರನ್ನು ಸ್ಪರ್ಧಿಗಳನ್ನಾಗಿ ಆಯ್ಕೆ ಮಾಡುವ ಕೆಲಸ ನಡೆಯುತ್ತಿದೆ. ರಾಮನಗರದ ಝೋಹಾನ್ ಎಂಬ ಬಾಲಕ ‘ಅಂದೊಂದಿತ್ತು ಕಾಲ’ ಹಾಡನ್ನು ಸೂಪರ್ ಹಾಗಿ ಹಾಡಿದ್ದಾನೆ. ಅವನ ಕಂಠಕ್ಕೆ ಜಡ್ಜ್​​ಗಳು ಫಿದಾ ಆಗಿದ್ದು, ಸ್ಪರ್ಧಿಯಾಗಿ ಪರಿಗಣಿಸಿದ್ದಾರೆ. ಮೂರು ವರ್ಷದಿಂದ 15 ವರ್ಷದ ಮಕ್ಕಳು ಇದರಲ್ಲಿ ಭಾಗವಹಿಸಬಹುದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

‘ಅಣ್ಣಾವ್ರ ಸಾಂಗ್​ನ ಹೇಗೆ ಹಾಡಿದ್ದೀನಿ ನೋಡಿ’; ಶಿವಣ್ಣನಿಗೆ ವಿಡಿಯೋ ತೋರಿಸಿದ ಮೋಹನ್​ಲಾಲ್ – Kannada News | Mohanlal Sings Dr. Rajkumar’s Endendu Ninnanu Song; Shows Viral Video to Shivarajkumar

ರಾಜ್​ಕುಮಾರ್ ಮೃತಪಟ್ಟು ಅದೆಷ್ಟೋ ವರ್ಷಗಳು ಕಳೆದಿವೆ. ಆದಾಗ್ಯೂ ಅವರು ಹಾಕಿಕೊಟ್ಟ ಮಾರ್ಗದರ್ಶನ, ಅವರ ವರ್ಚಸ್ಸು ಈಗಲೂ ಹಾಗೆಯೇ ಇದೆ. ಕನ್ನಡಿಗರು ಮಾತ್ರ ಅಲ್ಲ, ಪರಭಾಷಿಗರೂ ರಾಜ್​​ಕುಮಾರ್ ಅವರನ್ನು ತುಂಬಾನೇ ಇಷ್ಟಪಡುತ್ತಾರೆ. ಇತ್ತೀಚೆಗೆ ಮಲಯಾಳಂ ನಟ ಮೋಹನ್​ಲಾಲ್ ಅವರು ರಾಜ್​​ಕುಮಾರ್ ಹಾಡನ್ನು ಹಾಡಿದ್ದರು. ಈಗ ಈ ವಿಡಿಯೋನ ಶಿವರಾಜ್​​ಕುಮಾರ್ ಅವರಿಗೆ ತೋರಿಸಿದ್ದಾರೆ. ಈ ಸಂದರ್ಭದ ವಿಡಿಯೋ ಗಮನ ಸೆಳೆದಿದೆ.

ಇತ್ತೀಚೆಗೆ ಅಮೆರಿಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮೋಹನ್​ಲಾಲ್ ಅವರು ಭಾಗಿ ಆಗಿದ್ದರು. ವೇದಿಕೆ ಮೇಲೆ ಅವರು ಹಾಡು ಹಾಡಿದ್ದಾರೆ. ಅದು ಕೂಡ ರಾಜ್​ಕುಮಾರ್ ಮತ್ತು ಮಂಜುಳಾ ನಟನೆಯ ‘ಎರಡು ಕನಸು’ ಸಿನಿಮಾದ್ದು. ಈ ಚಿತ್ರದ ಎವರ್​​ಗ್ರೀನ್ ಹಾಡು ‘ಎಂದೆಂದೂ ನಿನ್ನನು ಮರೆತು ಬದುಕಿರಲಾರೆ’ ಗೀತೆ ಮೋಹನ್​ಲಾಲ್ ಕಂಠದಿಂದ ಮೂಡಿ ಬಂದಿದೆ.

ಇದನ್ನೂ ಓದಿ: ಡಾ. ರಾಜ್​ಕುಮಾರ್ ಮೇಲಿನ ಅಭಿಮಾನಕ್ಕೆ ಅಮೆರಿಕದಲ್ಲಿ ಕನ್ನಡ ಗೀತೆ ಹಾಡಿದ ಮೋಹನ್​ಲಾಲ್

ಏಪ್ರಿಲ್ 24 ರಾಜ್​​ಕುಮಾರ್ ಜನ್ಮದಿನ. ಈ ವಿಶೇಷ ಸಂದರ್ಭದಲ್ಲಿ ಈ ಹಾಡು ವೈರಲ್ ಆಗಿತ್ತು. ಇದಾದ ಬೆನ್ನಲ್ಲೇ ಇದರ ಮುಂದಿನ ವರ್ಷನ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದೆ. ತಾವು ಹಾಡಿದ ಹಾಡನ್ನು ಶಿವರಾಜ್​​ಕುಮಾರ್ ಅವರಿಗೆ ಮೋಹನ್​ಲಾಲ್ ಅವರು ತೋರಿಸಿದ್ದಾರೆ. ಮೋಹನ್​ಲಾಲ್ ಹಾಡಿದ ಹಾಡಿನ ವಿಡಿಯೋ ನೋಡುತ್ತಾ ಶಿವಣ್ಣ ತಲೆದೂಗಿದ್ದಾರೆ. ‘ನಾನು ಅಣ್ಣಾವ್ರ ಹಾಡನ್ನು ಹಾಡಿದ್ದೀನಿ ಹೇಗಿದೆ ನೋಡಿ’ ಎಂದು ಶಿವಣ್ಣಗೆ ಮೋಹನ್​​ಲಾಲ್ ಹೇಳಿದಂತಿದೆ.

ಶಿವರಾಜ್​​ಕುಮಾರ್ ಹಾಗೂ ಮೋಹನ್​ಲಾಲ್ ಅವರು ‘ಜೈಲರ್ 2’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ರಜನಿಕಾಂತ್ ಹೀರೋ. ಮೊದಲ ಭಾಗದಲ್ಲಿ ಶಿವಣ್ಣ ಹಾಗೂ ಮೋಹನ್​ಲಾಲ್ ಅವರದ್ದು ಅತಿಥಿ ಪಾತ್ರ ಆಗಿತ್ತು. ಎರಡೂ ಪಾತ್ರಗಳು ಜನಮೆಚ್ಚುಗೆ ಪಡೆದಿದ್ದವು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ: ಪಲ್ಲಕ್ಕಿ ಉರುಳಿಬಿದ್ದು ಅವಘಡ, ವಿಡಿಯೋ ವೈರಲ್ – Kannada News | Mangaluru Shocking Video: Footbridge Collapses During Daiva Bhandara Procession in Moodabidri; 8 Injured

ಮಂಗಳೂರು, ಏಪ್ರಿಲ್ 25: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಪುಚ್ಚೆಮೊಗರು ಎಂಬಲ್ಲಿ ದೈವದ ಭಂಡಾರ ಮೆರವಣಿಗೆಯ ಸಂದರ್ಭದಲ್ಲಿ ಸಣ್ಣ ಸೇತುವೆ (ಕಾಲು ಸಂಕ) ಮುರಿದು ಬಿದ್ದು ಸಂಭವಿಸಿದ ಅವಘಡದಲ್ಲಿ ಎಂಟು ಮಂದಿ ಗಾಯಗೊಂಡಿದ್ದಾರೆ. ಪಲ್ಲಕ್ಕಿಯಲ್ಲಿ ದೈವದ ಭಂಡಾರವನ್ನು ಹೊತ್ತು ಸಾಗುತ್ತಿದ್ದಾಗಲೇ ಈ ದುರ್ಘಟನೆ ಸಂಭವಿಸಿದೆ. ಪುಚ್ಚೆಮೊಗರು ಬಾವದಬೈಲು ಎಂಬಲ್ಲಿಂದ ದೈವದ ಭಂಡಾರವನ್ನು ತಾಕೋಡೆ ಬರ್ಕೆ ಧರ್ಮನೇಮೋತ್ಸವಕ್ಕೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತಿತ್ತು. ಕೊಂಬು, ಬ್ಯಾಂಡ್ ವಾದ್ಯಗಳೊಂದಿಗೆ ಭಕ್ತಿ-ಸಂಭ್ರಮದಿಂದ ಮೆರವಣಿಗೆ ಸಾಗುತ್ತಿತ್ತು. ಈ ವೇಳೆ ಹಳ್ಳವೊಂದಕ್ಕೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಕಿರು ಸೇತುವೆಯನ್ನು ಪಲ್ಲಕ್ಕಿ ಹೊತ್ತವರು ದಾಟುತ್ತಿದ್ದಾಗ, ಜನದಟ್ಟಣೆಯ ಭಾರಕ್ಕೆ ಸಂಕವು ಏಕಾಏಕಿ ಕುಸಿದು ಬಿದ್ದಿದೆ.

ಸಂಕ ಮುರಿದು ಬಿದ್ದ ರಭಸಕ್ಕೆ ಪಲ್ಲಕ್ಕಿ ಉರುಳಿದ್ದು, ಸಂಕದ ಮೇಲ್ಭಾಗದ ಬೀಮ್ (ತೊಲೆ) ಪಲ್ಲಕ್ಕಿ ಹೊತ್ತವರ ಮೇಲೆಯೇ ಬಿದ್ದಿದೆ. ಪರಿಣಾಮ ಮಾರೂರಿನ ಸುನಿಲ್ ಶೆಟ್ಟಿ ಮುಕಾಲ್ದಿ, ಲೋಕೇಶ್ ಭಂಡಾರಿ ಸೇರಿದಂತೆ ಪಲ್ಲಕ್ಕಿ ಹೊತ್ತಿದ್ದ ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಘಡದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪಲ್ಲಕ್ಕಿ ಉರುಳಿ ಬಿದ್ದ ಪರಿಣಾಮ ಅದರಲ್ಲಿದ್ದ ಮೊಗಮೂರ್ತಿ ಹಾಗೂ ಇತರ ಪವಿತ್ರ ಧಾರ್ಮಿಕ ಪರಿಕರಗಳಿಗೆ ಹಾನಿಯಾಗಿದೆ ಎನ್ನಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: RCB ಜಸ್ಟ್ 3 ಪಂದ್ಯ ಗೆದ್ದರೆ ಸಾಕು!

Source link

ಮಹೇಶ್ ಬಾಬು ಪತ್ನಿ-ತಾಯಿ ಪಾತ್ರದಲ್ಲಿ ನಟಿಸಿದ ಏಕೈಕ ನಟಿ ಇವರು – Kannada News | Mahesh Babu and Ameesha Patel’s Unique ‘Nani’ Role: Actress Played Lover, Wife, Mother

ಟಾಲಿವುಡ್ ಸೂಪರ್‌ಸ್ಟಾರ್ ಮಹೇಶ್ ಬಾಬು ಜೊತೆ ನಟಿಸಬೇಕೆಂದರೆ ಅದು ಸಣ್ಣ ವಿಷಯವಲ್ಲ. ಅವರ ಜೊತೆ ರೊಮ್ಯಾಂಟಿಕ್ ಆಗಿ ನಟಿಸುವ ಪಾತ್ರ ಎಂದರೆ ನಟಿಯರ ಪಾಲಿಗೆ ಅದು ವಿಶೇಷ. ಅದಕ್ಕಾಗಿ ಅನೇಕ ಸ್ಟಾರ್ ನಾಯಕಿಯರು ಮಹೇಶ್ ಜೊತೆ ನಟಿಸಲು ಆಸಕ್ತಿ ತೋರಿಸುತ್ತಾರೆ. ಹಿಂದೆ, ಬಿಪಾಶಾ ಬಸು, ಪ್ರೀತಿ ಜಿಂಟಾ, ರಶ್ಮಿಕಾ ಮಂದಣ್ಣ ಅದಿತಿ ರಾವ್, ಅಮೀಶಾ ಪಟೇಲ್, ಕೃತಿ ಸನೋನ್ ಅವರಂತಹ ಸ್ಟಾರ್ ನಾಯಕಿಯರು ಮಹೇಶ್ ಜೊತೆ ನಟಿಸಿದ್ದಾರೆ. ಈಗ ಒಂದು ಅಚ್ಚರಿಯ ವಿಷಯವನ್ನು ನಾವು ಹೇಳುತ್ತಿದ್ದೇವೆ.

ಪ್ರಿಯಾಂಕಾ ಚೋಪ್ರಾ ‘ವಾರಣಾಸಿ’ ಚಿತ್ರದಲ್ಲಿ ಮಹೇಶ್ ಜೊತೆ ನಟಿಸುತ್ತಿದ್ದಾರೆ. ಸಮಂತಾ, ಕಾಜಲ್ ಅಗರ್ವಾಲ್, ಸಿಮ್ರಾನ್, ಸೋನಾಲಿ ಬೇಂದ್ರೆ, ಭೂಮಿಕಾ, ತ್ರಿಶಾ, ಇಲಿಯಾನಾ, ತಮನ್ನಾ, ಶ್ರುತಿ ಹಾಸನ್, ಪ್ರಣಿತ, ಪೂಜಾ ಹೆಗ್ಡೆ, ಶ್ರೀಲೀಲಾ ಅವರಂತಹ ಅನೇಕ ಸ್ಟಾರ್ ನಾಯಕಿಯರು ಮಹೇಶ್ ಜೊತೆ ನಟಿಸಿದ್ದಾರೆ. ಆದಾಗ್ಯೂ, ಅವರೆಲ್ಲರೂ ಮಹೇಶ್ ಅವರ ಲವರ್ ಅಥವಾ ಪತ್ನಿಯರ ಪಾತ್ರವನ್ನು ನಿರ್ವಹಿಸಿದ್ದಾರೆ. ಆದರೆ ಒಬ್ಬ ನಾಯಕಿ ನಮ್ಮ ಸೂಪರ್‌ಸ್ಟಾರ್‌ನ ತಾಯಿ ಮತ್ತು ಪತ್ನಿಯಾಗಿ ನಟಿಸಿದ್ದಾರೆ. ಅದೂ ಒಂದೇ ಚಿತ್ರದಲ್ಲಿ. ಅವರೇ ಅಮೀಷಾ ಪಟೇಲ್.

ಮಹೇಶ್ ಬಾಬು ನಟಿಸಿರುವ ‘ನಾನಿ’ ಸಿನಿಮಾವನ್ನು ನಿರ್ದೇಶಕ ಎಸ್ ಜೆ ಸೂರ್ಯ ನಿರ್ದೇಶಿಸಿದ್ದಾರೆ. ಈ ಸಿನಿಮಾದಲ್ಲಿ ಬಾಲಿವುಡ್ ಬ್ಯೂಟಿ ಅಮೀಷಾ ಪಟೇಲ್ ನಾಯಕಿಯಾಗಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಅಮೀಷಾ ಪಟೇಲ್ ಮತ್ತು ಮಹೇಶ್ ಬಾಬು ಪ್ರೇಮಿಗಳಾಗಿ ಕಾಣಿಸಿಕೊಳ್ಳುತ್ತಾರೆ. ನಂತರ ಅವರು ಮದುವೆಯಾಗಿ ಗಂಡ ಹೆಂಡತಿಯಾಗುತ್ತಾರೆ. ಕ್ಲೈಮ್ಯಾಕ್ಸ್ ನಲ್ಲಿ ಜೂನಿಯರ್ ಮಹೇಶ್ ಬಾಬು ಕೂಡ ಹುಟ್ಟುತ್ತಾರೆ. ಕ್ಲೈಮ್ಯಾಕ್ಸ್ ದೃಶ್ಯದಲ್ಲಿ ಅವರು ಮಹೇಶ್ ಬಾಬು ಅವರ ತಾಯಿಯಾಗಿ ಕಾಣಿಸಿಕೊಳ್ಳುತ್ತಾರೆ. ಈ ರೀತಿಯಾಗಿ, ಅದೇ ಸಿನಿಮಾದಲ್ಲಿ ಅಮೀಷಾ ಪಟೇಲ್ ಮಹೇಶ್ ಬಾಬು ಅವರ ಪ್ರೇಮಿ, ಹೆಂಡತಿ ಮತ್ತು ತಾಯಿಯಾಗಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಯಶ್ ‘ರಾಮಾಯಣ’ ಟೀಸರ್ ನೋಡಿ ಮಹೇಶ್ ಬಾಬು ಅಭಿಮಾನಿಗಳಿಗೆ ಹೊಟ್ಟೆಕಿಚ್ಚು?

ಅಮಿಷಾ ಪಟೇಲ್ ‘ಕಹೋನಾ ಪ್ಯಾರ್ ಹೇ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ ‘ಬದ್ರಿ’ ಚಿತ್ರದ ಮೂಲಕ ತೆಲುಗು ಪರದೆಗೆ ಪಾದಾರ್ಪಣೆ ಮಾಡಿದರು. ಅದರಲ್ಲಿ ಸರಯು ಪಾತ್ರದಲ್ಲಿ ತಮ್ಮ ಮುದ್ದಾದ ನಟನೆಯಿಂದ ಗಮನ ಸೆಳೆದರು. ಅವರು ಬಾಲಿವುಡ್‌ಗೆ ಹೋಗಿ ಅಲ್ಲಿಯೇ ನೆಲೆಸಿದ್ದಾರೆ. ಇತ್ತೀಚೆಗೆ ಅವರು ಹೆಚ್ಚು ಸಿನಿಮಾ ಮಾಡುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಲಕ್ಷ್ಮಣ ಸವದಿ ಕಣ್ಣೆದುರಲ್ಲೇ ಹಾರ್ಟ್ ಅಟ್ಯಾಕ್! ಶಾಸಕನ ಮುಂದೇ ಪ್ರಾಣಬಿಟ್ಟ ಆಪ್ತ – Kannada News | Lakshman Savadi Close Friend dies from Heart attack infront of him

ಬೆಳಗಾವಿ, ಏಪ್ರಿಲ್ 25: ಜಿಲ್ಲೆಯ ಅಥಣಿ ತಾಲೂಕಿನ ತಾವಂಶಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ಮನಕಲಕುವ ಘಟನೆಯೊಂದು ಸಂಭವಿಸಿದೆ. ಶಾಸಕ ಲಕ್ಷ್ಮಣ ಸವದಿ ಅವರ ಆತ್ಮೀಯ ಬೆಂಬಲಿಗರಾದ ರಾವಸಾಬ ಬೇವನೂರ (65) ಅವರು ಶಾಸಕರ ಕಣ್ಣೆದುರಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಗ್ರಾಮದಲ್ಲಿ ನಡೆದ ಗೃಹ ಪ್ರವೇಶ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಶಾಸಕರು ತೆರಳಿದ್ದರು. ಈ ಸಂದರ್ಭದಲ್ಲಿ ರಾವಸಾಬ ಅವರಿಗೆ ಇದ್ದಕ್ಕಿದ್ದಂತೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಶಾಸಕರೇ ಮುತುವರ್ಜಿ ವಹಿಸಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಿದರೂ ಸಹ, ಚಿಕಿತ್ಸೆ ಫಲಕಾರಿಯಾಗದೆ ರಾವಸಾಬ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ. ತಮ್ಮ ಬಹುಕಾಲದ ಆಪ್ತನನ್ನು ಕಳೆದುಕೊಂಡ ಶಾಸಕ ಲಕ್ಷ್ಮಣ ಸವದಿ ಅವರು ತೀವ್ರ ಕಂಬನಿ ಮಿಡಿದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹುಬ್ಬಳ್ಳಿ: ಮಹಿಳೆ ನೆಲಕ್ಕೆ ಬಿದ್ದರೂ ಬಿಡದೆ ಎಳೆದಾಡಿ ಸರ ಅಪಹರಿಸಿದ ಖದೀಮ, ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ – Kannada News | CCTV Video: Woman Dragged on Road as Chain Snatcher Escapes in Hubballi’s Sadashiva Nagar

ಹುಬ್ಬಳ್ಳಿ, ಏಪ್ರಿಲ್ 25: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸರಗಳ್ಳರ ಅಟ್ಟಹಾಸ ಮಿತಿಮೀರಿದ್ದು, ಮಹಿಳೆಯೊಬ್ಬರನ್ನು ರಸ್ತೆಯಲ್ಲೇ ಎಳೆದಾಡಿ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಸದಾಶಿವ ನಗರದಲ್ಲಿ ನಡೆದಿದೆ. ಈ ಭೀಕರ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಮೂಲಕ ಜನರಲ್ಲಿ ಭೀತಿ ಹುಟ್ಟಿಸಿದೆ. ಎರಡು ದಿನಗಳ ಹಿಂದೆ ಸದಾಶಿವ ನಗರದ ರಸ್ತೆಯಲ್ಲಿ ಮಹಿಳೆಯೊಬ್ಬರು ನಡೆದುಕೊಂಡು ಹೋಗುತ್ತಿದ್ದಾಗ, ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದ ಖದೀಮ ಆಕೆಯನ್ನು ಗುರಿಯಾಗಿಸಿಕೊಂಡಿದ್ದಾನೆ. ಮಹಿಳೆ ಏಕಾಂಗಿಯಾಗಿರುವುದನ್ನು ಗಮನಿಸಿದ ಕಳ್ಳ, ಏಕಾಏಕಿ ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರಕ್ಕೆ ಕೈ ಹಾಕಿದ್ದಾನೆ. ಈ ವೇಳೆ ಮಹಿಳೆ ಪ್ರತಿರೋಧ ತೋರಿದಾಗ, ಕಳ್ಳ ಆಕೆಯನ್ನು ರಸ್ತೆಯಲ್ಲೇ ಅಮಾನವೀಯವಾಗಿ ಎಳೆದಾಡಿದ್ದಾನೆ.

ಕಳ್ಳನ ಎಳೆದಾಟಕ್ಕೆ ಮಹಿಳೆ ರಸ್ತೆಯ ಮೇಲೆ ಬಿದ್ದರೂ ಸಹ, ಆತ ಮಾತ್ರ ಬಿಡದೆ ಬಲವಂತವಾಗಿ ಸರವನ್ನು ಕಿತ್ತುಕೊಂಡು ಬೈಕ್ ಹತ್ತಿ ಎಸ್ಕೇಪ್ ಆಗಿದ್ದಾನೆ. ಈ ಭಯಾನಕ ದೃಶ್ಯವನ್ನು ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಜನನಿಬಿಡ ಪ್ರದೇಶಗಳಿಗಿಂತ ಏಕಾಂತದ ರಸ್ತೆಗಳನ್ನು ಟಾರ್ಗೆಟ್ ಮಾಡುತ್ತಿರುವ ಕಳ್ಳರು, ಹಾಡಹಗಲೇ ಇಂತಹ ಕೃತ್ಯವೆಸಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಇಷ್ಟೆಲ್ಲಾ ದೊಡ್ಡ ಘಟನೆ ನಡೆದಿದ್ದರೂ ಸಹ ಸಂತ್ರಸ್ತ ಮಹಿಳೆ ಈವರೆಗೆ ಪೊಲೀಸ್ ಠಾಣೆಗೆ ಬಂದು ದೂರು ನೀಡಿಲ್ಲ ಎಂದು ತಿಳಿದುಬಂದಿದೆ. ಆದರೆ, ವೈರಲ್ ಆಗಿರುವ ಸಿಸಿಟಿವಿ ದೃಶ್ಯವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಸ್ವಯಂಪ್ರೇರಿತವಾಗಿ ಮಹಿಳೆಯನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ. ಜೊತೆಗೆ ಸಿಸಿಟಿವಿ ದೃಶ್ಯದ ಆಧಾರದ ಮೇಲೆ ಕಳ್ಳನಿಗಾಗಿ ಬಲೆ ಬೀಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಕಿ ಬೌಲಿಂಗ್​… 6 ಎಸೆತಗಳಲ್ಲಿ ರಬಾಡ ಹೊಸ ವಿಶ್ವ ದಾಖಲೆ  – Kannada News | Kagiso Rabada Creates New World Record in T20 Cricket

ಆರ್​ಸಿಬಿ ವಿರುದ್ಧದ ಈ ಪಂದ್ಯದ ನಾಲ್ಕನೇ ಓವರ್​ನ ಮೊದಲ ಎಸೆತವನ್ನು ರಬಾಡ 153 kmph ವೇಗದಲ್ಲಿ ಎಸೆದಿದ್ದರು. ಇನ್ನು ಎರಡನೇ ಎಸೆತವು  151 kmph ವೇಗದಲ್ಲಿ ಸಾಗಿತು. ಮೂರನೇ ಎಸೆದ ಮೂಡಿ ಬಂದಿದ್ದು ಬರೋಬ್ಬರಿ  154 kmph ವೇಗದಲ್ಲಿ. ನಾಲ್ಕನೇ ಎಸೆತ 152 kmph ವೇಗದಲ್ಲಿ ಸಾಗಿದರೆ, ಐದನೇ ಎಸೆದ ವೇಗ 152 kmph ನಲ್ಲಿತ್ತು. ಇನ್ನು ಕೊನೆಯ ಎಸೆತವನ್ನು 
 151 kmph ವೇಗದಲ್ಲಿ ಎಸೆದಿದ್ದಾರೆ.

Source link

ಅಂಬಿಕಾ ಮರಳಿ ಬರೋ ಸಮಯ ಬಂದಾಯ್ತು; ನಡೆಯುತ್ತಿದೆ ಶರತ್-ದುರ್ಗಾ ಮರು ಮಾಂಗಲ್ಯ – Kannada News | Naa Ninna Bidalare Serial: Ambika’s Return Nears as Sharath and Durga Prepare for Re marriage

‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಈಗ ಮಹತ್ವದ ತಿರುವು ಎದುರಾಗಿದೆ. ಅಂಬಿಕಾಳನ್ನು ಮಾಳವಿಕಾ ತನ್ನ ಶಕ್ತಿಯಿಂದ ಬಂಧಿಸಿಟ್ಟಿದ್ದಾಳೆ. ದುರ್ಗಾಳ ಬಳಿ ಇದ್ದ ತಾಳಿಯನ್ನು ಕಸಿದುಕೊಂಡ ಅವಳು, ಅಂಬಿಕಾಳನ್ನು ಸಂಪೂರ್ಣವಾಗಿ ಹಿಡಿತಕ್ಕೆ ತೆಗೆದುಕೊಂಡಳು. ಈಗ ಆಕೆಯ ಶ್ರಾದ್ಧ ಕೂಡ ಮಾಡಾಗಿದೆ. ಹೀಗಿರುವಾಗಲೇ ಅಂಬಿಕಾ ಮರಳಿ ಬರುವ ಸಮಯ ಬಂದಿದೆ. ಇದಕ್ಕೆ ಒಂದು ಅವಕಾಶ ಸಿಕ್ಕಿದೆ.

ಅಂಬಿಕಾ ಪಾತ್ರ ‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ತುಂಬಾನೇ ಪ್ರಾಮುಖ್ಯತೆ ಪಡೆದಿದೆ. ಏಕೆಂದರೆ, ಈ ಧಾರಾವಾಹಿಯಲ್ಲಿ ಆಕೆಯೇ ಮುಖ್ಯ ಪಾತ್ರಧಾರಿ. ಆಕೆಯನ್ನು ಸಾಯಿಸಲಾಗಿದ್ದು, ಆತ್ಮದ ರೂಪದಲ್ಲಿ ಓಡಾಡುತ್ತಿದ್ದಾಳೆ. ಹೀಗಿರುವಾಗ ಅಂಬಿಕಾ ಆತ್ಮವನ್ನು ಬಂಧಿಸಿಡುವ ಕೆಲಸ ಆಗಿದೆ. ಈ ಕೆಲಸ ಮಾಡಿದ್ದು ಮಾಳವಿಕಾ. ಈ ಮಧ್ಯೆ ಒಂದು ಮುಖ್ಯ ಬೆಳವಣಿಗೆ ನಡೆದಿತ್ತು.

ಅಂಬಿಕಾ ಹಾಗೂ ದುರ್ಗಾ ಅಕ್ಕ-ತಂಗಿ. ಈ ವಿಷಯ ಅಂಬಿಕಾಗೆ ಮಾತ್ರ ಗೊತ್ತಿತ್ತು. ಇದು ದುರ್ಗಾಗೆ ತಿಳಿದಿರಲೇ ಇಲ್ಲ. ಅಂಬಿಕಾ ಆತ್ಮ ಮಾಯಾವಾದ ಬಳಿಕ ಈ ವಿಷಯ ಗೊತ್ತಾಗಿದೆ. ಈಗ ಅಂಬಿಕಾಳನ್ನು ಮತ್ತೆ ಕರೆತರುವ ಪ್ರಯತ್ನದಲ್ಲಿ ದುರ್ಗಾ ಇದ್ದಾಳೆ. ಆದರೆ, ಅದು ಅಷ್ಟು ಸುಲಭದಲ್ಲಿ ಇಲ್ಲ ಎನ್ನಬಹುದು. ಮಾಳವಿಕಾ ತುಂಬಾನೇ ಕೆಟ್ಟವಳು. ಆಕೆ ಉದ್ದೇಶಪೂರ್ವಕವಾಗಿ ದುರ್ಗಾ ತಾಳಿಯನ್ನು (ಮೊದಲು ಅಂಬಿಕಾ ತಾಳಿ ಆಗಿತ್ತು) ಕಸಿದುಕೊಂಡಿದ್ದಾಳೆ. ಈ ಮೂಲಕ ತನ್ನ ಕಾರ್ಯಸಾಧನೆ ಮಾಡಿದ್ದಾಳೆ. ಅವಳ ಬಳಿ ಹೋಗಿ ತಾಳಿ ಕೊಡಿ ಎಂದರೆ ಅವಳು ಯಾವುದೇ ಕಾರಣಕ್ಕೂ ತಾಳಿ ಕೊಡುವುದಿಲ್ಲ.

ಇದನ್ನೂ ಓದಿ: ‘ನಾ ನಿನ್ನ ಬಿಡಲಾರೆ’: ದುರ್ಗಾಗೆ ಗೊತ್ತಾಯ್ತು ಅಂಬಿಕಾ ತನ್ನ ಅಕ್ಕ ಅನ್ನೋ ಸತ್ಯ

ಸದ್ಯ ದುರ್ಗಾಳ ತಂದೆ ಮಾರ್ಗವನ್ನು ಸೂಚಿಸಿದ್ದಾನೆ. ‘ಅಂಬಿಕಾ ತಾಳಿಯನ್ನು ಮರಳಿ ತಂದರೆ ಆಕೆ ಮರಳುತ್ತಾಳೆ’ ಎಂದು ಹೇಳಿದ್ದಾನೆ. ನಿಜಕ್ಕೂ ಆಕೆ ಮರಳುತ್ತಾಳಾ? ಇದಕ್ಕೆ ಎಷ್ಟು ಕಷ್ಟಪಡಬೇಕು ಎಂಬುದು ಮುಂದಿನ ದಿನಗಳಲ್ಲಿ ನೋಡಬೇಕಿದೆ. ಈಗಾಗಲೇ ಆಕೆ ಹೊಗಿ ತಾಳಿ ಕೇಳಿದ್ದಾಳೆ. ಇದನ್ನು ಕೇಳಿ ಮಾಳವಿಕಾ ಶಾಕ್ ಆಗಿದ್ದಾಳೆ. ಆಕೆ ತಾಳಿ ಕೊಟ್ಟಿದ್ದು, ಮರು ಮಾಂಗಲ್ಯಕ್ಕೆ ಸಿದ್ಧತೆ ನಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Bengaluru Air Quality: ಮಂಗಳೂರಿಗರೇ ಎಚ್ಚರ! ಅಪಾಯಕಾರಿಯಾಗಿದೆ ತಲುಪಿದೆ ನಗರದ ವಾಯು ಗುಣಮಟ್ಟ – Kannada News | Bangalore Air Pollution Crisis: Manglore Air Quality gets worse

ಮಂಗಳೂರಿಗರೇ ಎಚ್ಚರ!ಅಪಾಯದ ಮಟ್ಟ ತಲುಪಿದೆ ನಗರದ ವಾಯು ಗುಣಮಟ್ಟ

ಬೆಂಗಳೂರು, ಏಪ್ರಿಲ್ 25: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಹಲವು ದಿನಗಳಿಂದ ಸುಧಾರಣೆ ಕಂಡಿತ್ತು. ಆದರೆ ಇಂದು ಏಕಾಏಕಿ ಮಂಗಳೂರಿನ ಏರ್ ಕ್ವಾಲಿಟಿ ಕುಸಿದಿದ್ದು, ಆತಂಕಕಾರಿ ಮಟ್ಟ ತಲುಪಿದೆ. ಜೊತೆಗೆ ಉಡುಪಿಯ ಗಾಳಿಯೂ ಉಸಿರಾಟಕ್ಕೆ ಯೋಗ್ಯವಲ್ಲದ ಹಂತದಲ್ಲಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 110ಕ್ಕೆ ತಲುಪಿದೆ. ಮಂಗಳೂರು ಮತ್ತು ಉಡುಪಿಯ AQI 150ಕ್ಕಿಂತ ಹೆಚ್ಚಿದ್ದು, ಅನಾರೋಗ್ಯಕರ ಮಟ್ಟದಲ್ಲಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು – 110
  • ಮಂಗಳೂರು-156
  • ಮೈಸೂರು – 134
  • ಬೆಳಗಾವಿ – 136
  • ಕಲಬುರ್ಗಿ-136
  • ಶಿವಮೊಗ್ಗ –116
  • ಬಳ್ಳಾರಿ – 151
  • ಹುಬ್ಬಳ್ಳಿ- 100
  • ಉಡುಪಿ –125
  • ವಿಜಯಪುರ – 109

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link