Category Archives: Blog

Your blog category

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ ಲೈಸೆನ್ಸ್ ರದ್ದು ಮಾಡಿದ ಆರ್​ಬಿಐ; ಪೇಟಿಎಂ ಗ್ರಾಹಕರಿಗೆ ತೊಂದರೆಯಾ? – Kannada News | Paytm payments Bank Ltd licence canceled by RBI, know what happens next

ನವದೆಹಲಿ, ಏಪ್ರಿಲ್ 24: ಭಾರತೀಯ ರಿಸರ್ವ್ ಬ್ಯಾಂಕ್ (RBI) ಇಂದು ಶುಕ್ರವಾರ ಒಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್​ನ (PPBL) ಬ್ಯಾಂಕಿಂಗ್ ಪರವಾನಗಿಯನ್ನು (Licence) ಅಧಿಕೃತವಾಗಿ ರದ್ದುಗೊಳಿಸಿದೆ. ಕಳೆದ ನಾಲ್ಕು ವರ್ಷಗಳಿಂದ ಪಿಪಿಬಿಎಲ್​ಗೆ ಆರ್​ಬಿಐ ವಿವಿಧ ನಿರ್ಬಂಧಗಳನ್ನು ವಿಧಿಸಿತ್ತು. ಈಗ ಈ ಸಂಸ್ಥೆಯು ಇನ್ಮುಂದೆ ಯಾವುದೇ ಬ್ಯಾಂಕಿಂಗ್ ಚಟುವಟಿಕೆ ನಡೆಸುವಂತಿಲ್ಲ. ತತ್​ಕ್ಷಣದಿಂದಲೇ ಜಾರಿಯಾಗುವಂತೆ ಲೈಸೆನ್ಸ್ ಅನ್ನು ಹಿಂಪಡೆಯಲಾಗಿದೆ.

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಪರವಾನಗಿ ರದ್ದತಿಗೆ ಕಾರಣ

ಆರ್‌ಬಿಐ ಪ್ರಕಾರ, ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ತನ್ನ ವ್ಯವಹಾರಗಳನ್ನು ನಡೆಸುತ್ತಿದ್ದ ರೀತಿ ಠೇವಣಿದಾರರು ಹಾಗು ಬ್ಯಾಂಕ್​ನ ಹಿತಾಸಕ್ತಿಗೆ ಮಾರಕವಾಗಿತ್ತು. ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ 1949 ರ ಸೆಕ್ಷನ್ 22(4) ರ ಅಡಿಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಕಂಪನಿಯು ಬ್ಯಾಂಕಿಂಗ್ ನಿಯಮಗಳನ್ನು ಪದೇ ಪದೇ ಉಲ್ಲಂಘಿಸಿರುವುದು ಮತ್ತು ಆಡಳಿತಾತ್ಮಕ ವೈಫಲ್ಯಗಳೇ ಈ ಕಠಿಣ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ.

ಇಂದಿನಿಂದ (ಏಪ್ರಿಲ್ 24) ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಯಾವುದೇ ರೀತಿಯ ಬ್ಯಾಂಕಿಂಗ್ ವ್ಯವಹಾರಗಳನ್ನು ಅಥವಾ ಹಣಕಾಸು ಚಟುವಟಿಕೆಗಳನ್ನು ನಡೆಸುವಂತಿಲ್ಲ. ಬ್ಯಾಂಕನ್ನು ಮುಚ್ಚುವ ಪ್ರಕ್ರಿಯೆಯನ್ನು (Winding up) ಪ್ರಾರಂಭಿಸಲು ಆರ್‌ಬಿಐ ಶೀಘ್ರದಲ್ಲೇ ಹೈಕೋರ್ಟ್ ಮೊರೆ ಹೋಗಲಿದೆ.

ಇದನ್ನೂ ಓದಿ: ರುಪಾಯಿ ಮೌಲ್ಯ ಕುಸಿತ; ಆತಂಕ ಪಡಬೇಕಿಲ್ಲ; ದೀರ್ಘಾವಧಿ ಹೂಡಿಕೆಗೆ ಒಳ್ಳೆಯ ಅವಕಾಶ: ಸಿಇಎ ಅನಂತನಾಗೇಶ್ವರನ್

ಗ್ರಾಹಕರ ಹಣ ಸುರಕ್ಷಿತವೇ?

ಪೇಟಿಎಂ ಬ್ಯಾಂಕ್‌ನಲ್ಲಿ ಹಣ ಇಟ್ಟಿರುವ ಗ್ರಾಹಕರಿಗೆ ಆರ್‌ಬಿಐ ಅಭಯ ನೀಡಿದೆ. ಠೇವಣಿದಾರರಿಗೆ ನೀಡಬೇಕಾದ ಪೂರ್ಣ ಹಣವನ್ನು ಹಿಂತಿರುಗಿಸಲು ಬ್ಯಾಂಕ್ ಬಳಿ ಸಾಕಷ್ಟು ನಗದು ಹಣ (Liquidity) ಲಭ್ಯವಿದೆ ಎಂದು ಕೇಂದ್ರ ಬ್ಯಾಂಕ್ ತಿಳಿಸಿದೆ. ಆದ್ದರಿಂದ ಗ್ರಾಹಕರು ಆತಂಕಪಡುವ ಅಗತ್ಯವಿಲ್ಲ.

ಪೇಟಿಎಂ ಕಂಪನಿಗೆ 2015ರಲ್ಲಿ ಬ್ಯಾಂಕಿಂಗ್ ಲೈಸೆನ್ಸ್ ಸಿಕ್ಕಿತ್ತು. 2017ರಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಆರಂಭವಾಯಿತು. ಬಹಳ ಬೇಗ ಅದು ಜನಪ್ರಿಯವಾಗಿತ್ತು. 3 ಕೋಟಿ ಬ್ಯಾಂಕ್ ಅಕೌಂಟ್​ಗಳು; 10 ಕೋಟಿ ಕೆವೈಸಿಯುಕ್ತ ಗ್ರಾಹಕರು; ಮತ್ತು 30 ಕೋಟಿ ವ್ಯಾಲಟ್ ಬಳಕೆದಾರರನ್ನು ಅದು ಹೊಂದಿತ್ತು. ಹಾಗೆಯೇ, 80 ಲಕ್ಷ ಫಾಸ್​ಟ್ಯಾಗ್ ಗ್ರಾಹಕರ ಬಳಗವೂ ಅದಕ್ಕಿತ್ತು.

ಆದರೆ, ಕೆವೈಸಿ ಸರಿಯಾಗಿ ಪಡೆಯದೆಯೇ ಅಕೌಂಟ್​ಗಳನ್ನು ನೀಡಲಾಗಿದೆ ಎಂಬಿತ್ಯಾದಿ ಹಲವು ನಿಯಮಗಳ ಉಲ್ಲಂಘನೆ ಆಗಿರುವ ಆರೋಪ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಮೇಲೆ ಕೇಳಿಬಂದಿತು. ಈ ಸಂಬಂಧ ಆರ್​ಬಿಐ ಹಲವು ಬಾರಿ ಆ ಸಂಸ್ಥೆಗೆ ನೋಟೀಸ್ ಕೊಟ್ಟಿತ್ತು. ಆದರೂ ಉಲ್ಲಂಘನೆ ಮುಂದುವರಿದಿತ್ತು. 2022ರಲ್ಲಿ ಹೊಸ ಗ್ರಾಹಕರನ್ನು ಸೇರಿಸಿಕೊಳ್ಳದಂತೆ ಪೇಮೆಂಟ್ಸ್ ಬ್ಯಾಂಕ್​ಗೆ ಆರ್​ಬಿಐ ನಿರ್ಬಂಧ ವಿಧಿಸಿತು.

ಇದನ್ನೂ ಓದಿ: ಕ್ರೆಡಿಟ್ ಕಾರ್ಡ್ ಇದ್ದೂ ಅದನ್ನು ಬಳಸದೇ ಇದ್ದರೆ ಏನಾಗುತ್ತೆ? ಕ್ರೆಡಿಟ್ ಸ್ಕೋರ್ ಕಡಿಮೆ ಆಗುತ್ತಾ?

2024ರಲ್ಲಿ ಇರುವ ಗ್ರಾಹಕರಿಂದಲೇ ಹೊಸ ಡೆಪಾಸಿಟ್, ಕ್ರೆಡಿಟ್ ಟ್ರಾನ್ಸಾಕ್ಷನ್ಸ್, ಟಾಪಪ್, ವ್ಯಾಲಟ್ಸ್, ಫಾಸ್​ಟ್ಯಾಗ್ ಇತ್ಯಾದಿಯನ್ನು ಪಡೆಯದಂತೆಯೂ ನಿರ್ಬಂಧಿಸಲಾಯಿತು.

ಈಗ ಅಂತಿಮವಾಗಿ ಪರವಾನಗಿಯನ್ನೇ ರದ್ದುಗೊಳಿಸುವ ಮೂಲಕ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ನ ಬ್ಯಾಂಕಿಂಗ್ ಅಧ್ಯಾಯ ಕೊನೆಗೊಂಡಂತಾಗಿದೆ. ಆದರೆ, ಪೇಟಿಎಂನ ಇತರ ಯುಪಿಐ (UPI) ಮತ್ತು ಪೇಮೆಂಟ್ ಅಗ್ರಿಗೇಟರ್ ಸೇವೆಗಳು ಸಾಮಾನ್ಯದಂತೆ ಮುಂದುವರಿಯಲಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಸಂಜಯ್ ದತ್ ಹೊಸ ಸಿನಿಮಾ; ‘ಖಳನಾಯಕ್ ರಿಟರ್ನ್ಸ್’ ಫಸ್ಟ್ ಲುಕ್ ಟೀಸರ್ ಬಿಡುಗಡೆ – Kannada News | Sanjay Dutt Khalnayak Returns First Look Teaser released Khalnayak Sequel update

ಬಾಲಿವುಡ್ ಚಿತ್ರರಂಗದ ಇತಿಹಾಸದಲ್ಲಿ ‘ಖಳನಾಯಕ್’ ಸಿನಿಮಾಗೆ ವಿಶೇಷ ಸ್ಥಾನವಿದೆ. ಸುಮಾರು ಮೂರು ದಶಕಗಳ ಹಿಂದೆ ಸಂಜಯ್ ದತ್ (Sanjay Dutt) ಅವರಿಗೆ ಭಾರಿ ಜನಪ್ರಿಯತೆ ತಂದುಕೊಟ್ಟ ಈ ಚಿತ್ರದ ಸೀಕ್ವೆಲ್ ಈಗ ಸಿದ್ಧವಾಗುತ್ತಿದೆ. ಚಿತ್ರತಂಡವು ಶುಕ್ರವಾರ (ಏಪ್ರಿಲ್ 24) ‘ಖಳನಾಯಕ್ ರಿಟರ್ನ್ಸ್’ (Khalnayak Returns) ಸಿನಿಮಾದ ಪವರ್‌ಫುಲ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದೆ. ಬಿಡುಗಡೆಯಾಗಿರುವ ಟೀಸರ್‌ನಲ್ಲಿ ಸಂಜಯ್ ದತ್ ಅತ್ಯಂತ ರಗಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಟೀಸರ್​ನಲ್ಲಿ ಸಂಜಯ್ ದತ್ ಅವರ ತೀಕ್ಷ್ಣವಾದ ಕಣ್ಣುಗಳು ಮತ್ತು ಆಕ್ರಮಣಕಾರಿ ಶೈಲಿಯ ಲುಕ್ ಹೈಲೈಟ್ ಆಗಿದೆ. ಮತ್ತೆ ‘ಬಲ್ಲು’ ಪಾತ್ರದ ಗತ್ತು ಕಾಣಿಸಿದೆ. ಟೀಸರ್‌ನ ಹಿನ್ನೆಲೆ ಸಂಗೀತ ಮತ್ತು ದೃಶ್ಯಗಳು ಅಭಿಮಾನಿಗಳಲ್ಲಿ ಹಳೆಯ ನೆನಪುಗಳನ್ನು ಮರುಕಳಿಸುವಂತೆ ಮಾಡಿವೆ. ಸದ್ಯಕ್ಕಂತೂ ಸಂಜಯ್ ದತ್ ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳ ಮೂಲಕ ಮಿಂಚುತ್ತಿದ್ದಾರೆ.

ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಟೀಸರ್ ಹಂಚಿಕೊಂಡಿರುವ ಸಂಜಯ್ ದತ್, ‘ಯಾವುದೇ ಕಥೆ ಮುಗಿಯುವುದಿಲ್ಲ. ಅದು ಮತ್ತೆ ಆರಂಭವಾಗುತ್ತದೆ. ಖಳನಾಯಕ್ ರಿಟರ್ನ್ಸ್’ ಎಂದು ಬರೆದುಕೊಂಡಿದ್ದಾರೆ. ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಚಿತ್ರದ ಪೋಸ್ಟರ್‌ಗಳನ್ನು ಸಹ ಅನಾವರಣಗೊಳಿಸಲಾಯಿತು. ‘ಪ್ರತಿ ಕಥೆಗೂ ಒಂದು ಸಮಯವಿರುತ್ತದೆ. ಈಗ ಅದರ ಸಮಯ ಬಂದಿದೆ’ ಎಂಬ ಕ್ಯಾಪ್ಷನ್ ನೀಡಿರುವುದು ಕುತೂಹಲ ಹೆಚ್ಚಿಸಿದೆ.

‘ಖಳನಾಯಕ್ ರಿಟರ್ನ್ಸ್’ ಫಸ್ಟ್ ಲುಕ್ ಟೀಸರ್:

ಸುಭಾಷ್ ಘೈ ನಿರ್ದೇಶನದಲ್ಲಿ 1993ರಲ್ಲಿ ತೆರೆಕಂಡಿದ್ದ ‘ಖಳನಾಯಕ್’ ಸಿನಿಮಾ ಬಾಲಿವುಡ್‌ನ ಸೂಪರ್ ಹಿಟ್ ಚಿತ್ರಗಳಲ್ಲಿ ಒಂದು. ಆ ಸಿನಿಮಾದಲ್ಲಿ ಸಂಜಯ್ ದತ್ ಜೊತೆಗೆ ಜಾಕಿ ಶ್ರಾಫ್ ಮತ್ತು ಮಾಧುರಿ ದೀಕ್ಷಿತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು. ಆ ಚಿತ್ರದ ಹಾಡುಗಳು ಇಂದಿಗೂ ಜನಪ್ರಿಯ. ಈಗ ಸೀಕ್ವೆಲ್‌ನಲ್ಲಿ ಸಂಜಯ್ ದತ್ ಅವರೊಂದಿಗೆ ಹಳೆಯ ತಾರಾಗಣ ಇರುತ್ತದೆಯೇ ಅಥವಾ ಹೊಸಬರು ಸೇರಿಕೊಳ್ಳುತ್ತಾರೆಯೇ ಎಂಬ ಮಾಹಿತಿ ಇನ್ನು ಬಹಿರಂಗವಾಗಿಲ್ಲ.

ಇದನ್ನೂ ಓದಿ: ‘ಧುರಂಧರ್’ ಯಶಸ್ಸಿನ ಬೆನ್ನಲ್ಲೇ ಸಂಜಯ್ ದತ್ ಹೊಸ ಸಿನಿಮಾ ‘ಆಖ್ರಿ ಸವಾಲ್’

ಸದ್ಯಕ್ಕೆ ಚಿತ್ರದ ಕಥೆ ಮತ್ತು ಉಳಿದ ಪಾತ್ರವರ್ಗದ ಬಗ್ಗೆ ಹೆಚ್ಚಿನ ವಿವರಗಳನ್ನು ಚಿತ್ರತಂಡ ಗುಟ್ಟಾಗಿಟ್ಟಿದೆ. ಸಂಜಯ್ ದತ್ ಅವರ ಈ ಮಾಸ್ ಲುಕ್ ನೋಡಿದ ಮೇಲೆ ಬಾಲಿವುಡ್‌ನಲ್ಲಿ ಮತ್ತೊಂದು ದೊಡ್ಡ ಆ್ಯಕ್ಷನ್ ಸಿನಿಮಾ ಸಿದ್ಧವಾಗುತ್ತಿದೆ ಎಂಬುದು ಖಚಿತವಾಗಿದೆ. ‘ಧುರಂಧರ್ 2’ ಯಶಸ್ಸಿನಲ್ಲಿ ತೇಲುತ್ತಿರುವ ಸಂಜಯ್ ದತ್ ಅವರು ಸಿಕ್ಕಾಪಟ್ಟೆ ಬ್ಯುಸಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

RCB vs GT: 6,6,6,6,6,6.. 20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್ – Kannada News | IPL 2026: Devdutt Padikkal’s Explosive Fifty Propels RCB in GT’s 207 Chase

ಐಪಿಎಲ್ 2026 ರ 34 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ನೀಡಿರುವ 207 ರನ್​ಗಳ ಗುರಿ ಬೆನ್ನಟ್ಟಿದ ಆರ್​ಸಿಬಿ ಪರ ಲೋಕಲ್ ಬಾಯ್ ದೇವದತ್ ಪಡಿಕ್ಕಲ್ ಅಬ್ಬರದ ಅರ್ಧಶತಕ ಬಾರಿಸಿದರು. ಎಂದಿನಂತೆ ಎರಡನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಪಡಿಕ್ಕಲ್ ಎದುರಿಸಿದ ಮೊದಲ ಎಸೆತವನ್ನೇ ಸಿಕ್ಸರ್​ಗಟ್ಟಿದರು. ಆ ನಂತರವೂ ಒಂದೇ ಗೇರ್​ನಲ್ಲಿ ಬ್ಯಾಟ್ ಬೀಸಿದ ಪಡಿಕ್ಕಲ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

ವಾಸ್ತವವಾಗಿ ಇಂದಿನ ಪಂದ್ಯದಲ್ಲಿ ಫಿಲ್ ಸಾಲ್ಟ್ ಆಡಿರಲಿಲ್ಲ. ಹೀಗಾಗಿ ಅವರ ಬದಲಿಗೆ ಜೆಕೋಬ್ ಬೆಥೆಲ್​ಗೆ ತಂಡದಲ್ಲಿ ಆಡುವ ಅವಕಾಶ ಸಿಕ್ಕಿತು. ಅದರಂತೆ ವಿರಾಟ್ ಕೊಹ್ಲಿ ಜೊತೆ ಇನ್ನಿಂಗ್ಸ್ ಆರಂಭಿಸಿದ ಬೆಥೆಲ್ 14 ರನ್ ಬಾರಿಸಿ ಔಟಾದರು. ಆ ನಂತರ ಬಂದ ಪಡಿಕ್ಕಲ್ ಕೊಹ್ಲಿ ಜೊತೆಗೆ ಶತಕದ ಜೊತೆಯಾಟ ಕಟ್ಟಿದರು. ಮಾತ್ರವಲ್ಲದೆ 20 ಎಸೆತಗಳಲ್ಲಿ 6 ಸಿಕ್ಸರ್ ಹಾಗೂ 2 ಬೌಂಡರಿಗಳ ಸಹಿತ ಅರ್ಧಶತಕ ಪೂರೈಸಿದರು. ಅಂದರೆ ಪಡಿಕ್ಕಲ್ ಕೇವಲ ಬೌಂಡರಿ ಸಿಕ್ಸರ್​ಗಳಿಂದಲೇ 44 ರನ್ ಕಲೆಹಾಕಿದರು. ಈ ಅರ್ಧಶತಕದೊಂದಿಗೆ ಪಡಿಕ್ಕಲ್ ಐಪಿಎಲ್‌ನಲ್ಲಿ 2000 ರನ್​ಗಳನ್ನು ಸಹ ಪೂರೈಸಿದರು.

Source link

ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ – Kannada News | Kedarnath Temple Opens To devotees choas after people Jumping Barricades

ಕೇದಾರನಾಥ, ಏಪ್ರಿಲ್ 24: ಈ ವರ್ಷದ ಚಾರ್ ಧಾಮ್ ಯಾತ್ರೆ (Char Dham Yatra) ಉತ್ತರಾಖಂಡದಲ್ಲಿ ಅಧಿಕೃತವಾಗಿ ಪ್ರಾರಂಭವಾಗಿದೆ. ಕೇದಾರನಾಥ (Kedarnath) ದೇವಾಲಯದ ಬಾಗಿಲುಗಳು ಏಪ್ರಿಲ್ 22ರಂದು ಭಕ್ತರಿಗೆ ತೆರೆಯಲ್ಪಟ್ಟವು. ಗರ್ವಾಲ್ ಹಿಮಾಲಯದಲ್ಲಿ ಎತ್ತರದಲ್ಲಿರುವ ಈ ದೇವಾಲಯವು 22 ಕಿಲೋಮೀಟರ್ ಕಷ್ಟಕರವಾದ ಚಾರಣ ಮತ್ತು ಸೀಮಿತ ಹೆಲಿಕಾಪ್ಟರ್ ಪ್ರವೇಶದ ಹೊರತಾಗಿಯೂ ಮೊದಲ ದಿನವೇ ಅಗಾಧವಾದ ಜನಸಾಗರವನ್ನು ಕಂಡಿತು. ಸಾವಿರಾರು ಜನರು ಏಕಕಾಲದಲ್ಲಿ ಆಗಮಿಸಿದ್ದರಿಂದ ದೇವಾಲಯದ ಸುತ್ತಮುತ್ತಲಿನ ಹಲವಾರು ಪ್ರದೇಶಗಳಲ್ಲಿ ನೂಕುನುಗ್ಗಲು ಉಂಟಾಯಿತು. ಇದರಿಂದ ಕಾಲ್ತುಳಿತವೂ ಉಂಟಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಲಾಡ್ಲೆ ಮಶಾಕ್ ದರ್ಗಾ ಕೇಸ್​​ ಮತ್ತೆ ಮುನ್ನೆಲೆಗೆ: ಯುಟಿ ಖಾದರ್​​ ಪತ್ರಕ್ಕೆ ಹಿಂದೂ ಸಂಘಟನೆಗಳು ಸಿಡಿದಿದ್ದೇಕೆ? – Kannada News | Aland Dargah Conflict: Speaker UT Khader’s Plea to Drop Cases Sparks Hindu Anger

ಲಾಡ್ಲೆ ಮಶಾಕ್ ದರ್ಗಾ, ಯುಟಿ ಖಾದರ್​​ ಪತ್ರImage Credit source: tv9 kannada

ಕಲಬುರಗಿ, ಏಪ್ರಿಲ್​ 24: ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದ್ದ ಜಿಲ್ಲೆಯ ಆಳಂದದ ಲಾಡ್ಲೆ ಮಶಾಕ್ ದರ್ಗಾ (ladle mashak dargah) ಗಲಭೆ ಪ್ರಕರಣಕ್ಕೆ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಈ ಪ್ರಕರಣದಲ್ಲಿ ಬಂಧಿತರಾಗಿರುವ ಅಮಾಯಕ ಮುಸ್ಲಿಂ ಯುವಕರನ್ನು ಬಿಡುಗಡೆ ಮಾಡುವಂತೆ ಸಭಾಧ್ಯಕ್ಷ ಯು.ಟಿ. ಖಾದರ್ (U.T. Khader) ಗೃಹ ಸಚಿವ ಜಿ ಪರಮೇಶ್ವರ್​ಗೆ ಬರೆದಿರುವ ಪತ್ರವು ತೀವ್ರ ವಿವಾದಕ್ಕೆ ಕಾರಣವಾಗಿದೆ. ಸ್ಪೀಕರ್ ಅವರ ಈ ನಡೆಯನ್ನು ಹಿಂದೂ ಸಂಘಟನೆಗಳು ತೀವ್ರವಾಗಿ ಖಂಡಿಸಿದ್ದು, ಸರ್ಕಾರದ ವಿರುದ್ಧ ಹೋರಾಟದ ಎಚ್ಚರಿಕೆ ನೀಡಿವೆ.

ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ತೆರಳಿದ್ದ ವೇಳೆ ಮುಸ್ಲಿಂರಿಂದ ಹಿಂದೂ ಸಂಘಟನೆ ಮುಖಂಡರು, ಡಿಸಿ, ಎಸ್ಪಿ, ಕೇಂದ್ರ ಸಚಿವರ ಮೇಲೆ ದೊಡ್ಡ ಪ್ರಮಾಣದ ಕಲ್ಲುತೂರಾಟ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ, ಪ್ರಕರಣದಲ್ಲಿ ಬಂಧಿತರಾಗಿರುವ ಅಮಾಯಕ ಮುಸ್ಲಿಂರನ್ನ ಬಿಡುಗಡೆ ಮಾಡಬೇಕೆಂದು ಸ್ಪೀಕರ್ ಯು.ಟಿ ಖಾದರ್ ಬರೆದಿರುವ ಪತ್ರಕ್ಕೆ ಹಿಂದೂ ಸಂಘಟನೆಗಳು ಕಿಡಿಕಾರಿವೆ‌.

ಯು.ಟಿ ಖಾದರ್ ಪತ್ರಕ್ಕೆ ಶಿವಸೇನೆ ಕಿಡಿ

ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾ ಕಲ್ಲು ತೂರಾಟ ಪ್ರಕರಣದಲ್ಲಿ ಅಮಾಯಕ ಮುಸ್ಲಿಂ ಯುವಕರ ಹೆಸರು ಸಿಲುಕಿಸಲಾಗಿದ್ದು, ಪ್ರಕರಣದಿಂದ ಅವರನ್ನ ಕೈಬಿಡಬೇಕೆಂದು ಸರ್ಕಾರದ ಪ್ರಧಾನ ಕಾರ್ಯದರ್ಶಿ ಮತ್ತು ಗೃಹ ಸಚಿವರಿಗೆ ಯು.ಟಿ ಖಾದರ್ ಬರೆದಿರುವ ಪತ್ರಕ್ಕೆ ಶಿವಸೇನೆ ಕಿಡಿಕಾರಿದೆ.

ಇದನ್ನೂ ಓದಿ: ಆಳಂದ ಲಾಡ್ಲೇ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಬದಲಾವಣೆ: ಪೂಜೆ ಬಳಿಕ ಹಿಂದೂಗಳು ಸ್ಫೋಟಕ ಆರೋಪ

ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ಕೆಲ ಕಿಡಿಗೇಡಿಗಳು ಮಲ-ಮೂತ್ರ ಎರೆಚಿ ಅಪವಿತ್ರಗೊಳಿಸಿದ್ದರು. ಅದಕ್ಕಾಗಿ 2022ರಲ್ಲಿ ಹಿಂದೂ ಸಂಘಟನೆಗಳು ಶಿವಲಿಂಗ ಶುದ್ದೀಕರಣಕ್ಕೆ ತೆರಳಿದ್ದ ಸಂದರ್ಭದಲ್ಲಿ ನೂರಾರು ಮುಸ್ಲಿಂ ಯುವಕರು ಪೂಜೆ ಸಲ್ಲಿಸಿ ಹೊರಬರ್ತಿದ್ದ ಕೇಂದ್ರ ಸಚಿವ ಭಗವಂತ್ ಖೂಬಾ, ಡಿಸಿ, ಎಸ್ಪಿ, ಹಿಂದೂ ಮುಖಂಡರ ಕಾರಿನ ಮೇಲೆ ಮನಸೋ ಇಚ್ಛೆ ಕಲ್ಲು ತೂರಾಟ ಮಾಡಿದ್ದಲ್ಲದೇ, ದೊಣ್ಣೆಗಳನ್ನ ಹಿಡಿದು ಗಲಭೆ ಎಬ್ಬಿಸಿದ್ದರು.

ಗಲಭೆಗೆ ಸಂಬಂಧಿಸಿದಂತೆ ಮಾಸ್ಟರ್ ಮೈಂಡ್ ಅನ್ಸಾರಿ ಸೇರಿದಂತೆ ನೂರಾರು ಜನರ ವಿರುದ್ಧ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಪ್ರಕರಣದಲ್ಲಿ ಅಮಾಯಕ ಮುಸ್ಲಿಂರನ್ನ ಸಹ ಸಿಲುಕಿಸಲಾಗಿದ್ದು, ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನ ವಾಪಸ್ಸು ಪಡೆಯಬೇಕೆಂದು ಯು.ಟಿ ಖಾದರ್ ಮನವಿ ಮಾಡಿದ್ದಾರೆ. ಇನ್ನು ಪ್ರಕರಣದಲ್ಲಿ ಮುಸ್ಲಿಂರನ್ನ ಕೈಬಿಟ್ಟರೆ ದೊಡ್ಡ ಮಟ್ಟದ ಹೋರಾಟ ನಡೆಸಲಾಗುವುದು ಅಂತಾ ಸರ್ಕಾರಕ್ಕೆ ಹಿಂದೂ ಸಂಘಟನೆಗಳು ಎಚ್ಚರಿಕೆ ನೀಡಿವೆ.

ಇದನ್ನೂ ಓದಿ: ಲಾಡ್ಲೇ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಕೋರ್ಟ್‌ ಗ್ರೀನ್‌ ಸಿಗ್ನಲ್‌

ಆಳಂದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ, ಮುಸ್ಲಿಂರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನ ಕೈಬಿಡಿ ಎಂದಿರುವ ಯು.ಟಿ ಖಾದರ್ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಒಂದು ಸಮುದಾಯ ಪರ ಕೆಲಸ ಮಾಡುತ್ತಿರುವುದು ಹಿಂದೂ ಸಂಘಟನೆಗಳ ಆಕ್ರೋಶ ಮತ್ತಷ್ಟು ಹೆಚ್ಚಾಗುವಂತೆ ಮಾಡಿದ್ದು ಮಾತ್ರ ಸುಳ್ಳಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ದೇವರಿಗೆ ಥ್ಯಾಂಕ್ಸ್; ಕ್ಯಾನ್ಸರ್ ಗೆದ್ದು ಬಂದಿದ್ದಾಗಿ ಘೋಷಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು – Kannada News | Israeli PM Benjamin Netanyahu treated for early stage prostate cancer

ನವದೆಹಲಿ, ಏಪ್ರಿಲ್ 24: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಪ್ರಾಸ್ಟೇಟ್ ಕ್ಯಾನ್ಸರ್​ಗೆ ತುತ್ತಾಗಿದ್ದರು ಎಂಬ ವಿಷಯ ಹೊರಬಿದ್ದಿದೆ. ಆದರೆ, ಅವರು ಈ ವಿಷಯವನ್ನು ಗುಟ್ಟಾಗಿಟ್ಟಿದ್ದರು. ಚಿಕಿತ್ಸೆ ಪಡೆದು ಕ್ಯಾನ್ಸರ್​ನಿಂದ ಸಂಪೂರ್ಣವಾಗಿ ಗುಣಮುಖರಾಗಿರುವ ಅವರು ಈ ವಿಷಯವನ್ನು ಖುದ್ದಾಗಿ ಬಹಿರಂಗಪಡಿಸಿದ್ದಾರೆ. ಎಕ್ಸ್​​ನಲ್ಲಿನ ಪೋಸ್ಟ್‌ನಲ್ಲಿ ಅವರು ತಮ್ಮ ಪ್ರಾಸ್ಟೇಟ್‌ ಕ್ಯಾನ್ಸರ್​​ಗೆ ಸಂಬಂಧಿಸಿದ ಸಣ್ಣ ವೈದ್ಯಕೀಯ ಸಮಸ್ಯೆಯನ್ನು ಅನುಭವಿಸಿದ್ದಾಗಿ ಹೇಳಿಕೊಂಡಿದ್ದಾರೆ. ಈಗ ಸಂಪೂರ್ಣವಾಗಿ ಚಿಕಿತ್ಸೆ ನೀಡಲಾಗಿದೆ. ನಾನು ಕ್ಯಾನ್ಸರ್​​ ಅನ್ನು ಜಯಿಸಿದ್ದೇನೆ. ದೇವರಿಗೆ ಧನ್ಯವಾದಗಳು ಎಂದು ನೆತನ್ಯಾಹು ಪೋಸ್ಟ್ ಮಾಡಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ತೀವ್ರ ಸಂಘರ್ಷದ ಕಾರಣದಿಂದ ನನ್ನ ಆರೋಗ್ಯದ ಬಗ್ಗೆ ಅಪ್​ಡೇಟ್ ನೀಡಲು ಸ್ವಲ್ಪ ಸಮಯ ತೆಗೆದುಕೊಂಡೆ ಎಂದು ನೆತನ್ಯಾಹು ಎಕ್ಸ್​​ನಲ್ಲಿನ ಪೋಸ್ಟ್‌ನಲ್ಲಿ ಹೇಳಿದ್ದಾರೆ. “ನಾನು ನಿಮ್ಮೊಂದಿಗೆ ಮೂರು ವಿಷಯಗಳನ್ನು ಹಂಚಿಕೊಳ್ಳಲು ಕೇಳಿಕೊಳ್ಳುತ್ತೇನೆ. 1 – ದೇವರಿಗೆ ಧನ್ಯವಾದಗಳು, ನಾನು ಆರೋಗ್ಯವಾಗಿದ್ದೇನೆ. 2 – ನಾನು ಅತ್ಯುತ್ತಮ ದೈಹಿಕ ಸ್ಥಿತಿಯಲ್ಲಿದ್ದೇನೆ. 3 – ನನ್ನ ಪ್ರಾಸ್ಟೇಟ್‌ನಲ್ಲಿ ನನಗೆ ಸಣ್ಣ ವೈದ್ಯಕೀಯ ಸಮಸ್ಯೆ ಇತ್ತು, ಅದಕ್ಕೆ ಸಂಪೂರ್ಣವಾಗಿ ಚಿಕಿತ್ಸೆ ನೀಡಲಾಯಿತು. ನನ್ನ ಜೊತೆಗೆ ಇದ್ದಿದ್ದಕ್ಕೆ ದೇವರಿಗೆ ಧನ್ಯವಾದಗಳು” ಎಂದು ನೆತನ್ಯಾಹು ಹೇಳಿದ್ದಾರೆ.

ಇದನ್ನೂ ಓದಿ: ಲೆಬನಾನ್‌ನೊಂದಿಗೆ ಶೀಘ್ರದಲ್ಲೇ ಇಸ್ರೇಲ್ ನೇರ ಮಾತುಕತೆ; ನೆತನ್ಯಾಹು ಘೋಷಣೆ

“ದೇವರಿಗೆ ಧನ್ಯವಾದಗಳು, ನಾನು ಇದನ್ನೂ ಸಹ ಜಯಿಸಿದೆ. ಜೆರುಸಲೆಮ್‌ನ ಹಡಸ್ಸಾ ಆಸ್ಪತ್ರೆಯ ವೈದ್ಯರು ಮತ್ತು ಅದ್ಭುತ ವೈದ್ಯಕೀಯ ತಂಡಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಇಸ್ರೇಲ್ ನಾಗರಿಕರೇ, ನಿಮಗೆ ನನಗೆ ಒಂದೇ ಒಂದು ವಿನಂತಿ ಇದೆ. ನಿಮ್ಮ ಆರೋಗ್ಯವನ್ನು ನೋಡಿಕೊಳ್ಳಿ. ತಪಾಸಣೆಗೆ ಒಳಗಾಗಿ ಮತ್ತು ವೈದ್ಯರ ಸೂಚನೆಗಳನ್ನು ಅನುಸರಿಸಿ” ಎಂದು ನೆತನ್ಯಾಹು ತಮ್ಮ ಪೋಸ್ಟ್‌ನಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಇಸ್ರೇಲ್ ಕ್ಯಾನ್ಸರ್ ಇದ್ದಂತೆ : ಪಾಕ್ ಸಚಿವ ಖ್ವಾಜಾ ಆಸಿಫ್ ವಿವಾದಾತ್ಮಕ ಹೇಳಿಕೆ, ನೆತನ್ಯಾಹು ತೀವ್ರ ವಾಗ್ದಾಳಿ

ಇಸ್ರೇಲ್​ನ ಪ್ರಧಾನ ಮಂತ್ರಿ ಕಚೇರಿ ಬಿಡುಗಡೆ ಮಾಡಿದ ಮತ್ತು ದಿ ಜೆರುಸಲೆಮ್ ಪೋಸ್ಟ್ ಉಲ್ಲೇಖಿಸಿದ ಅಧಿಕೃತ ವೈದ್ಯಕೀಯ ವರದಿಯ ಪ್ರಕಾರ, ನೆತನ್ಯಾಹು ಆರಂಭಿಕ ಹಂತದ ಪ್ರಾಸ್ಟೇಟ್ ಕ್ಯಾನ್ಸರ್‌ಗೆ ಯಶಸ್ವಿ ಚಿಕಿತ್ಸೆ ಪಡೆದಿದ್ದಾರೆ. ಏಪ್ರಿಲ್ 20, 2026ರ ದಿನಾಂಕದ ವರದಿಯು ಇಸ್ರೇಲಿ ಪ್ರಧಾನಿ ಈ ಹಿಂದೆ ಡಿಸೆಂಬರ್ 29, 2024ರಂದು ಪ್ರಾಸ್ಟೇಟ್ ಹೈಪರ್‌ಪ್ಲಾಸಿಯಾಕ್ಕೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಎಂದು ಸೂಚಿಸುತ್ತದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

RCB vs GT: ಅತಿ ಹೆಚ್ಚು ಶತಕಗಳು; ಅನಗತ್ಯ ದಾಖಲೆ ಬರೆದ ಆರ್​​ಸಿಬಿ

Source link

Chikkamagaluru Rain: ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ – Kannada News | Heavy rain disrupts normal life in Across Chikkamagaluru

ಚಿಕ್ಕಮಗಳೂರು, (ಏಪ್ರಿಲ್ 24): ಜಿಲ್ಲೆಯ (Chikkamagaluru) ಕೊಟ್ಟಿಗೆಹಾರ, ಚಾರ್ಮಾಡಿ ,ಬಣಕಲ್, ಆಲ್ದೂರು ಹಾಗೂ ಮತ್ತಿಕಟ್ಟೆಯಲ್ಲಿ ಭಾರೀ ಗಾಳಿ, ಗುಡುಗು-ಸಿಡಿಲಿನ ಸಹಿತ ಮಳೆ ಸುರಿಯುತ್ತಿದೆ. ಹಲವೆಡೆ ಭಾರೀ ಆಲಿಕಲ್ಲಿನ ಮಳೆಯಾಗಿದೆ. ಇನ್ನು ಮೂಡಿಗೆರೆ ತಾಲೂಕಿನ ಬಾಳೂರು ಬಳಿ ರಸ್ತೆಗೆ ಅಡ್ಡಲಾಗಿ ಮರ ಬದ್ದಿದ್ದು, ಬಾಳೂರು ಕಳಸ‌ ರಸ್ತೆ ಸಂಚಾರ ಬಂದ್ ಆಗಿದೆ. ಇನ್ನು ಇದ್ದಕ್ಕಿದ್ದಂತೆ ಆರಂಭವಾದ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಹಗಲಲ್ಲಿ ಭಾರೀ ಬಿಸಿಲು, ಸಂಜೆಯಾಗುತ್ತಿದ್ದಂತೆ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲು-ಮಳೆಯಿಂದ ಭೂಮಿಯ ಧಗೆ ಹೆಚ್ಚಾಗಿ ಜನರು ಹೈರಾಣಾಗಿದ್ದಾರೆ. ಮತ್ತೊಂದೆಡೆ ಕಾಫಿ, ಅಡಿಕೆಗೆ ನೀರು ಹಾಯಿಸಲು ಪರದಾಡುತ್ತಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

‘ನಿಮ್ಮ ಕಾಲುಗಳು ಎಷ್ಟು ಸುಂದರ‘: ಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯೊಂದಿಗೆ ಆಸ್ಪತ್ರೆ ಸಿಬ್ಬಂದಿ ಅಸಭ್ಯ ವರ್ತನೆ – Kannada News | Hospital Staff Assault Patient; Sister Fights Back, Accused Arrested

ಆಸ್ಪತ್ರೆ ಸಿಬ್ಬಂದಿಗೆ ಸಂತ್ರಸ್ತೆ ಸಹೋದರಿಯಿಂದ ಥಳಿತImage Credit source: tv9 kannada

ರಾಯಚೂರು, ಏಪ್ರಿಲ್​ 24: ಚಿಕಿತ್ಸೆಗೆ ಅಂತ ಆಸ್ಪತ್ರೆಗೆ ಬಂದಿದ್ದ ಮಹಿಳೆ ಜೊತೆ ಆಸ್ಪತ್ರೆ ಸಿಬ್ಬಂದಿ ಕಾಲು ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ (physical assault) ಘಟನೆ ರಾಯಚೂರು (Raichur) ನಗರದಲ್ಲಿ ಇತ್ತೀಚೆಗೆ ನಡೆದಿತ್ತು. ಇದೇ ಕಾರಣಕ್ಕೆ ಸಂತ್ರಸ್ತೆ ಕಡೆಯವರು ಸಿಬ್ಬಂದಿಗೆ ಸಾರ್ವಜನಿಕವಾಗಿ ಥಳಿಸಿದ್ದು, ವಿಡಿಯೋ ವೈರಲ್ ಆಗಿದೆ. ಸದ್ಯ ಆರೋಪಿಯನ್ನು ಪೊಲೀಸರು ಖೆಡ್ಡಾಗೆ ಬಿದ್ದಿದ್ದಾರೆ.

ರಾಯಚೂರು ನಗರದಲ್ಲಿ ಇತ್ತೀಚೆಗೆ ವಿಚಿತ್ರ ಘಟನೆಯೊಂದು ನಡೆದಿತ್ತು. ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮೆಹಬೂಬ್ ಎನ್ನುವ ಸಿಬ್ಬಂದಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಜೊತೆ ತೀರಾ ಅಸಭ್ಯವಾಗಿ ವರ್ತಿಸಿದ್ದನಂತೆ. ಆಗ ಕಣ್ಣೀರಿಡುತ್ತಾ ಆ ಸಂತ್ರಸ್ತೆ ಅಲ್ಲಿಂದ ಹೊರಟು ಹೋಗಿದ್ದರು. ಈ ವಿಚಾರ ತಿಳಿದ ಸಂತ್ರಸ್ತೆ ಸಹೋದರಿ, ಮೆಹಬೂಬ್​​ನನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಹಾರಿಕೆ ಉತ್ತರ ಕೊಡುತ್ತಿದ್ದಂತೆ ಕೆರಳಿದ್ದ ಸಂತ್ರಸ್ತೆ ಸಹೋದರಿ ಆತನಿಗೆ ಸರಿಯಾಗಿ ಥಳಿಸಿದ್ದಾರೆ.

ಇದನ್ನೂ ಓದಿ: ಮದುವೆಯಾಗುತ್ತೇನೆಂದು ನಂಬಿಸಿ ಕೈಕೊಟ್ಟ ಇಂಜಿನಿಯರ್; ಫೋಟೋ, ವೀಡಿಯೋ ಸಮೇತ ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ!

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಂತ್ರಸ್ತೆ ಘಟನೆ ಬಗ್ಗೆ ಎಳೆಎಳೆಯಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ಮಾಹಿತಿ ಬಿಚ್ಚಿಟ್ಟಿದ್ದಾಳೆ. ಆತನಿಗೆ ಥಳಿಸಿದ್ದರ ಹಿಂದಿನ ಅಸಲಿ ಕಾರಣವನ್ನ ರಿವೀಲ್ ಮಾಡಿದ್ದಾರೆ.

ಸಂತ್ರಸ್ತೆ ಬಿಚ್ಚಿಟ್ಟ ಅಸಲಿ ಕಥೆ ಏನು?

ರಾಯಚೂರಿನ ಪ್ರತಿಯೊಬ್ಬರಿಗೂ ನಾನು ಈ ವಿಷಯವನ್ನು ತಿಳಿಸಲು ಬಯಸುತ್ತೇನೆ. ಆತನ ಹೆಸರು ಮೆಹಬೂಬ್. ಈತ ಸುರಕ್ಷಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ. ನಾನು ತೀವ್ರವಾದ ಡಿವಿಟಿ (DVT) ಸಮಸ್ಯೆಯಿಂದ ಬಳಲುತ್ತಿದ್ದೆ, ಹಾಗಾಗಿ ನನ್ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ವೈದ್ಯರು ನನ್ನನ್ನು ಅಡ್ಮಿಟ್ ಆಗಲು ಹೇಳಿದರು. ಆಗ ಮೆಹಬೂಬ್ ಬಂದು ಪರದೆಯನ್ನು ಎಳೆದು, ನನ್ನ ಕಾಲನ್ನು ಮುಟ್ಟುತ್ತಾ, “ನಿಮ್ಮ ಕಾಲುಗಳು ಎಷ್ಟು ಸುಂದರ ಮತ್ತು ಮೃದುವಾಗಿವೆ, ನಿಮಗೆ ಮದುವೆಯಾಗಿದೆ ಅಲ್ವಾ, ಗಂಡನ ಜೊತೆ ನಿಮಗೆ ಆಪ್ತವಾಗಲು ಅನಿಸುವುದಿಲ್ಲವೇ?” ಎಂದು ಅಸಭ್ಯವಾಗಿ ಮಾತನಾಡಲಾರಂಭಿಸಿದ.

ನಾನು ಈಗಾಗಲೇ ನೋವಿನಲ್ಲಿದ್ದೆ, ಇದನ್ನು ಕೇಳಿ ಅಳಲು ಪ್ರಾರಂಭಿಸಿದೆ. ಸುರಕ್ಷಾ ಆಸ್ಪತ್ರೆಯವರು ಆತನನ್ನು ಕೆಲಸದಿಂದ ತೆಗೆದುಹಾಕುವ ಮೂಲಕ ಅಗತ್ಯ ಕ್ರಮಕೈಗೊಂಡರು. ಪೊಲೀಸರು ಸ್ಥಳಕ್ಕೆ ಬಂದರು, ಆದರೆ ಆತನನ್ನು ಕೆಲಸದಿಂದ ತೆಗೆದುಹಾಕಿದ್ದರಿಂದ ಆತ ಬುದ್ದಿ ಕಲಿತಿರಬಹುದು ಎಂದು ನಾವು ಭಾವಿಸಿದೆವು. ಆದರೆ ನಂತರ ನನ್ನ ಅಕ್ಕ ಆತನಿಗೆ ಎಚ್ಚರಿಕೆ ನೀಡಲು ಫೋನ್ ಮಾಡಿದಾಗ, ಆತ “ನಾನು ನಿಮಗೆ ಯಾರಿಗೂ ಹೆದರುವುದಿಲ್ಲ, ನೀವು ಏನು ಬೇಕಾದರೂ ಮಾಡಿಕೊಳ್ಳಿ” ಎಂದು ಉದ್ಧಟತನದಿಂದ ಉತ್ತರಿಸಿದ್ದಾನೆ. ಇದು ನನ್ನ ಕುಟುಂಬದವರನ್ನು ಮತ್ತೆ ಕೆರಳಿಸಿತು. ನಾನು ಸಹಾಯಕ್ಕಾಗಿ ಬಜರಂಜದಳ, ಬಿಜೆಪಿ ನಾಯಕರು ಮತ್ತು ಎಲ್ಲರನ್ನೂ ವಿನಂತಿಸಿದೆ. ಎಲ್ಲರಿಗೂ ಕರೆ ಮಾಡಿದೆ. ಆದರೆ ನಮಗೆ ಸಹಾಯ ಮಾಡಲು ಯಾರೂ ಬರಲಿಲ್ಲ. ಆದ್ದರಿಂದಲೇ ಈ ಕ್ರಮವನ್ನು ತೆಗೆದುಕೊಳ್ಳಬೇಕಾಯಿತು ಎಂದಿದ್ದಾರೆ.

ಮೆಹಬೂಬ್​​ಗೆ ಪೊಲೀಸರಿಂದ ಖಡಕ್​ ಎಚ್ಚರಿಕೆ

ಇತ್ತ ಘಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಸದರ ಬಜಾರ್ ಪೊಲೀಸರು ಆರೋಪಿ ಮೆಹಬೂಬ್ ನನ್ನ ಬಂಧಿಸಿ ದಂಡಾಧಿಕಾರಿಗಳ ಎದುರು ಹಾಜರುಪಡಿಸಿದ್ದಾರೆ. ಇನ್ನೊಮ್ಮೆ ಹೆಣ್ಣು ಮಕ್ಕಳ ತಂಟೆಗೆ ಹೋಗದಂತೆ, ಚುಡಾಯಿಸಿದಂತೆ ಎಚ್ಚರಿಕೆ ನೀಡಿದ್ದಾರೆ. ಆದರೆ ಸಂತ್ರಸ್ತೆ ಈ ಬಗ್ಗೆ ಖುದ್ದು ದೂರು ನೀಡಿಲ್ಲ. ಹೀಗಾಗಿ ಪೊಲೀಸರು ಘಟನೆ ಖಾಸಗಿ ಆಸ್ಪತ್ರೆಯಲ್ಲಿ ನಡೆದಿರುವುದರಿಂದ ನೀವೇ ದೂರು ದಾಖಲಿಸಿ ಅಂತ ಆ ಖಾಸಗಿ ಆಸ್ಪತ್ರೆ ಆಡಳಿತ ವರ್ಗದವರಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಹಸುಗೂಸಿಗೆ ಹಾಲುಣಿಸಿದ ಕೆಲವೇ ಕ್ಷಣದಲ್ಲಿ ತಾಯಿ ಸಾವು: ಮಹಿಳಾ ಉದ್ಯೋಗಿ ಸಾವಿನ ಸುತ್ತ ಅನುಮಾನದ ಹುತ್ತ

ಇತ್ತ ಸಂತ್ರಸ್ತೆ ಧೈರ್ಯವಾಗಿ ನಡೆದ ಘಟನೆಯನ್ನ ಪೋಸ್ಟ್ ಮಾಡಿರುವ ಹಿನ್ನೆಲೆ ನೆಟ್ಟಿಗರು ಆಕೆಯ ಧೈರ್ಯಕ್ಕೆ ಮೆಚ್ಚಿ ಕಮೆಂಟ್ ಮಾಡುತ್ತಿದ್ದಾರೆ. ನ್ಯಾಯಕ್ಕಾಗಿ ಧ್ವನಿ ಎತ್ತಿರುವ ಸಂತ್ರಸ್ತೆ ಪರ ನೆಟ್ಟಿಗರು ವಾದ ಮಾಡ್ತಿದ್ದು, ಆರೋಪಿಗೆ ತಕ್ಕ ಶಿಕ್ಷೆ ಆಗಬೇಕು ಅಂತ ಒತ್ತಾಯಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Jerax Review: ಜನರನ್ನೇ ಜೆರಾಕ್ಸ್ ಮಾಡುವ ಯಂತ್ರದೊಳಗೆ ಇದೆ ಸಖತ್ ಸಸ್ಪೆನ್ಸ್ – Kannada News | Jerax web series review: Srinidhi Bengaluru gives first of its kind story to Kannada OTT

ನಟ ನಾಗಭೂಷಣ (Nagabhushana) ಅವರು ಕನ್ನಡ ಚಿತ್ರರಂಗದಲ್ಲಿ ತಮ್ಮದೇ ರೀತಿಯಲ್ಲಿ ಗುರುತಿಸಿಕೊಂಡಿದ್ದಾರೆ. ಸಿನಿಮಾ ಮತ್ತು ವೆಬ್ ಸಿರೀಸ್​ ಮೂಲಕ ಅವರು ಜನರನ್ನು ರಂಜಿಸಿದ್ದಾರೆ. ಹೆಚ್ಚಾಗಿ ಅವರು ಸಾಮಾನ್ಯ ಹುಡುಗನ ಪಾತ್ರವನ್ನೇ ಮಾಡುತ್ತಾರೆ. ನಮ್ಮ-ನಿಮ್ಮ ನಡುವೆ ಇರುವ ಸಾಮಾನ್ಯ ವ್ಯಕ್ತಿಯಾಗಿ ಕಾಣಿಸಿಕೊಂಡು ಮನರಂಜನೆ ನೀಡುತ್ತಾರೆ. ಆದರೆ ‘ಜೆರಾಕ್ಸ್’ (Jerax Web Series) ವೆಬ್ ಸರಣಿಯಲ್ಲಿ ಒಂದು ಟ್ವಿಸ್ಟ್ ಇದೆ. ಈ ವೆಬ್ ಸಿರೀಸ್​ನಲ್ಲಿ ಕೂಡ ಅವರು ಸಾಮಾನ್ಯ ವ್ಯಕ್ತಿಯ ಪಾತ್ರ ಮಾಡಿದ್ದರೂ ಸಹ, ಆ ಪಾತ್ರಕ್ಕೆ ಅಸಮಾನ್ಯ ಶಕ್ತಿ ಇರುತ್ತದೆ! ‘ಜೀ5’ (Zee5) ಒಟಿಟಿ ಮೂಲಕ ಈ ವೆಬ್ ಸಿರೀಸ್ ಬಿಡುಗಡೆ ಆಗಿದೆ.

‘ಜೆರಾಕ್ಸ್’ ವೆಬ್ ಸರಣಿಯಲ್ಲಿ ಒಂದು ವಿಶೇಷವಾದ ಕಥೆ ಇದೆ. ರಾಜಕೀಯ, ಪ್ರೀತಿ-ಪ್ರೇಮ, ಕಾಮಿಡಿ ಜೊತೆಗೆ ಒಂದು ಫ್ಯಾಂಟಸಿ ಕಹಾನಿಯನ್ನು ತೋರಿಸಲಾಗಿದೆ. ‘ಬ್ಲಿಂಕ್’ ಖ್ಯಾತಿಯ ನಿರ್ದೇಶಕ ಶ್ರೀನಿಧಿ ಬೆಂಗಳೂರು ಅವರು ಈ ವೆಬ್ ಸರಣಿಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಬಹಳ ಥ್ರಿಲ್ಲಿಂಗ್ ಆಗಿ ‘ಜೆರಾಕ್ಸ್’ ವೆಬ್ ಸಿರೀಸ್ ಮೂಡಿಬಂದಿದೆ. ಪಟಪಟನೆ ಸಾಗುವ 6 ಎಪಿಸೋಡ್​ಗಳು ಈ ಸೀರಿಸ್​​ನಲ್ಲಿವೆ.

ನಾಗಭೂಷಣ ಮಾತ್ರವಲ್ಲದೇ ‘ಜೆರಾಕ್ಸ್​’ ವೆಬ್ ಸರಣಿಯಲ್ಲಿ ಹಲವು ಕಲಾವಿದರು ನಟಿಸಿದ್ದಾರೆ. ಪಾಯಲ್ ಚಂಗಪ್ಪ, ಮಂಜು ಪಾವಗಡ, ತುಕಾಲಿ ಸಂತೋಷ್, ಓಂ ಪ್ರಕಾಶ್ ರಾವ್, ವಿಜಯ್ ಪ್ರಸಾದ್, ಉಷಾ ಭಂಡಾರಿ, ಯಶ್ವಂತ್ ಶೆಟ್ಟಿ, ಸುಧಾಕರ್ ಗೌಡ, ಜಗಪ್ಪ, ರಿಚರ್ಡ್ ಲೂಯಿಸ್ ಸೇರಿದಂತೆ ಹಲವರು ನಟಿಸಿದ್ದಾರೆ. ಎಲ್ಲ ಪಾತ್ರಕ್ಕೂ ಅದರದ್ದೇ ಆದ ತೂಕ ಇದೆ. ಮೊದಲ ಸಂಚಿಕೆಯಿಂದ ಕೊನೆ ಸಂಚಿಕೆ ತನಕ ಸಸ್ಪೆನ್ಸ್ ತುಂಬಿದೆ.

ಇದರ ಶೀರ್ಷಿಕೆಯೇ ಸೂಚಿಸುವಂತೆ ಜೀವಂತ ಮನುಷ್ಯರನ್ನು ನಕಲು ಮಾಡುವ ಕಥೆ ಇದರಲ್ಲಿದೆ. ಇದರ ಕಥಾನಾಯಕ ಪ್ರಕಾಶ. ಆತನ (ನಾಗಭೂಷಣ) ಬದುಕಿನಲ್ಲಿ ಒಂದು ಪವಾಡ ನಡೆಯುತ್ತದೆ. ಅವನ ಅಂಗಡಿಯಲ್ಲಿ ಇರುವ ಜೆರಾಕ್ಸ್ ಯಂತ್ರದ ಮೂಲಕ ಮನುಷ್ಯರನ್ನೇ ನಕಲು ಮಾಡುವ ಶಕ್ತಿ ಅವನಿಗೆ ಸಿದ್ಧಿಸುತ್ತದೆ. ಆ ಶಕ್ತಿಯನ್ನು ಬಳಸಿಕೊಂಡು ಶ್ರೀಮಂತನಾಗಬೇಕು ಎಂಬುದು ಅವನ ಆಸೆ. ಆದರೆ ನಂತರ ಆಗುವುದೇ ಬೇರೆ.

ಬೇರೆ ವ್ಯಕ್ತಿಗಳನ್ನು ನಕಲು ಮಾಡಿ, ಅವರ ದೇಹದ ಒಳಗೆ ತಾನೇ ಸೇರಿಸಿಕೊಂಡು ತನ್ನ ಎಲ್ಲ ಆಸೆಯನ್ನು ಈಡೇರಿಸಿಕೊಳ್ಳಲು ಪ್ರಕಾಶ ಮುಂದಾಗುತ್ತಾನೆ. ಆದರೆ ಅವನ ಈ ಕೆಲಸದಲ್ಲಿ ಹತ್ತು ಹಲವು ವಿಘ್ನಗಳು ಎದುರಾಗುತ್ತವೆ. ಅದರಿಂದ ಅವನ ಜೀವನವೇ ಬದಲಾಗುತ್ತದೆ. ಅವನು ಜೆರಾಕ್ಸ್ ಯಂತ್ರದ ನಕಲು ಮಾಡಿದ ವ್ಯಕ್ತಿಗಳಿಂದ ಅವನಿಗೇ ತೊಂದರೆ ಶುರುವಾಗುತ್ತದೆ. ಪ್ರೀತಿಸಿದ ಹುಡುಗಿಯೂ ಕೈತಪ್ಪಿ ಹೋಗಬಹುದಾದ ಸಂದರ್ಭ ಬರುತ್ತದೆ.

ಇದನ್ನೂ ಓದಿ: ‘ಅಣ್ಣ ಫ್ರಮ್ ಮೆಕ್ಸಿಕೋ’ ಸಿನಿಮಾ ಟೀಸರ್ ನೋಡಿ ಮೆಚ್ಚಿಕೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಮನುಷ್ಯರನ್ನೇ ನಕಲು ಮಾಡುವ ಜೆರಾಕ್ಸ್ ಯಂತ್ರದ ಹಾವಳಿ ಇಡೀ ಊರಿನಲ್ಲಿ ಅವಾಂತರ ಸೃಷ್ಟಿಸುತ್ತದೆ. ಎಲ್ಲರ ಬದುಕು ಉಲ್ಟಾ ಪಲ್ಟಾ ಆಗುತ್ತದೆ. ಅಂತಿಮವಾಗಿ ಅದನ್ನೆಲ್ಲ ಪ್ರಕಾಶ ಹೇಗೆ ಸರಿ ಮಾಡುತ್ತಾನೆ ಎಂಬುದೇ ಇಂಟರೆಸ್ಟಿಂಗ್ ಕಹಾನಿ. ಈ ರೀತಿಯ ಒಂದು ಡಿಫರೆಂಟ್ ಕಥೆಯನ್ನು ಇಟ್ಟುಕೊಂಡು ನಿರ್ದೇಶಕ ಶ್ರೀನಿಧಿ ಬೆಂಗಳೂರು ಅವರು ವೆಬ್ ಸಿರೀಸ್ ಮಾಡಿದ್ದಾರೆ.

ಸೂಪರ್ ಹೀರೋ ರೀತಿಯ ಕಥೆಗಳೇ ಅಪರೂಪ ಆಗಿರುವ ಕನ್ನಡದ ಮಟ್ಟಿಗೆ ಇದು ಒಂದು ಡಿಫರೆಂಟ್ ಪ್ರಯತ್ನವಾಗಿದೆ. ಚಿಕ್ಕದಾದ ಚೊಕ್ಕದಾದ ಒಂದು ಫ್ಯಾಂಟಸಿ ವೆಬ್ ಸಿರೀಸ್ ನೋಡಬೇಕು ಎಂದು ಬಯಸುವ ಪ್ರೇಕ್ಷಕರಿಗೆ ‘ಜೆರಾಕ್ಸ್’ ಉತ್ತಮ ಆಯ್ಕೆ ಆಗಿದೆ. ಇದರಲ್ಲಿ ಯಾವುದೇ ಅನಗತ್ಯ ಅಂಶಗಳನ್ನು ತುರುಕಿಲ್ಲ. ಕಥೆಗೆ ಎಷ್ಟು ಬೇಕೋ ಅಷ್ಟನ್ನು ಅಚ್ಚುಕಟ್ಟಾಗಿ ತೋರಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link