ಬೆಂಗಳೂರು, ಜ.17: ಗಂಡನ ಜತೆಗೆ ಜಗಳ ಮಾಡಿಕೊಂಡ ಮಹಿಳೆಯೊಬ್ಬರು 4 ವರ್ಷ ಮಗಳು ಜತೆಗೆ ಬೆಂಕಿ ಹಚ್ಚಿಕೊಂಡ ಘಟನೆ ಬೆಂಗಳೂರಿನ (Bengaluru Tragedy) ಸಂಜಯನಗರದಲ್ಲಿ ನಡೆದಿದೆ. ಮನೆ.. ಮನೆ.. ಹೋಗಿ ಕೆಲಸ ಮಾಡಿಕೊಂಡಿದ್ದ ಈ ಮಹಿಳೆ, ಗಂಡ ಮತ್ತು ಮಗಳ ಜತೆಗೆ ಸುಂದರ ಜೀವನ ನಡೆಸುತ್ತಿದ್ದರು. ಅದ್ಯಾಕೋ ಗೊತ್ತಿಲ್ಲ ಮನೆ ಕೆಲಸ ಮಾಡುತ್ತಿದ್ದ ವೇಳೆ ಪತಿಯೊಂದಿಗೆ ಫೋನ್ನಲ್ಲಿ ಜಗಳ ಮಾಡಿಕೊಂಡಿದ್ದಾಳೆ. ನಂತರ ಮಹಿಳೆ ಮನೆ ಹೋಗಿ ನಾಲ್ಕು ವರ್ಷದ ಮಗಳ ಜತೆಗೆ ಬೆಂಕಿ ಹಚ್ಚಿಕೊಂಡಿದ್ದಾಳೆ. ತಾಯಿ ಮತ್ತು ಮಗಳು ಇಬ್ಬರೂ ಸುಟ್ಟ ಗಾಯಗೊಂಡಿದ್ದರು. ಆಸ್ಪತ್ರೆ ಸೇರಿಸಿದ್ರು ಯಾವುದೇ ಪ್ರಯೋಜನ ಆಗಿಲ್ಲ, ಇಬ್ಬರೂ ಕೂಡ ಸಾವನ್ನಪ್ಪಿದ್ದಾರೆ. ಸೀತಾಲಕ್ಷ್ಮಿ ಎಂಬ ಈ ಮಹಿಳೆ ತನ್ನ ಮೇಲೆ ಮತ್ತು ಮಗಳ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ಸಂಜೆ 7 ಗಂಟೆ ಸುಮಾರಿಗೆ ನಗರದ ಸಂಜಯನಗರದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ.
ತಾಯಿ ಬೆಂಕಿ ಹಚ್ಚಿಕೊಳ್ಳುತ್ತಿದ್ದಂತೆ, ನೋವು ತಡೆಯಲಾರದೆ ಮಗಳು ಸಹಾಯಕ್ಕಾಗಿ ಕಿರುಚಿದ್ದಾಳೆ. ಈ ವೇಳೆ ಅಕ್ಕ ಪಕ್ಕದಲ್ಲಿದ್ದ ಮನೆಯವರು ಧಾವಿಸಿ, ಬಾಗಿಲು ಒಡೆದು ನೋಡಿದಾಗ, ತಾಯಿ ಮತ್ತು ಮಗಳು ಇಬ್ಬರೂ ತೀವ್ರವಾಗಿ ಸುಟ್ಟುಹೋಗಿದ್ದಾರೆ. ಇಬ್ಬರನ್ನೂ ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿ ಆಗದೇ ಇಬ್ಬರು ಸಾವನ್ನಪ್ಪಿದ್ದಾರೆ. ಅಮ್ಮ ಘಟನೆ ನಡೆದ ದಿನ ಸಾವನ್ನಪ್ಪಿದ್ದಾರೆ. ಮಗಳು ಮರುದಿನ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಹೇಳಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಸೀತಾಲಕ್ಷ್ಮಿ ತನ್ನ ಪತಿ ಗೋವಿಂದ್ ಬಹದ್ದೂರ್ ಜೊತೆ ಪ್ರತಿದಿನ ಒಂದಲ್ಲ ಒಂದು ಕಾರಣಕ್ಕೆ ಜಗಳ ಆಡುತ್ತಿದ್ದರು.
ದಂಪತಿಗಳು ಸುಮಾರು ಏಳು ವರ್ಷಗಳ ಹಿಂದೆಯೇ ಬೆಂಗಳೂರಿನಲ್ಲಿ ವಾಸವಾಗಿದ್ದರು. ಗೋವಿಂದ್ ಸೆಕ್ಯುರಿಟಿ ಗಾರ್ಡ್ ಮತ್ತು ದಿನಗೂಲಿ ಕಾರ್ಮಿಕ ಸೇರಿದಂತೆ ವಿವಿಧ ಕೆಲಸಗಳನ್ನು ಮಾಡುತ್ತಿದ್ದರು. ಕೆಲವು ತಿಂಗಳ ಹಿಂದೆ, ಅವರು ತಮ್ಮ ಆರು ವರ್ಷದ ಮಗನೊಂದಿಗೆ ನೇಪಾಳಕ್ಕೆ ಮರಳಿದ್ದರು. ಈ ವೇಳೆ ಸೀತಾಲಕ್ಷ್ಮಿ ತನ್ನ ಗಂಡ ಗೋವಿಂದ್ ಕರೆ ಮಾಡುತ್ತ ಮತ್ತೆ ಯಾವ ಬೆಂಗಳೂರಿಗೆ ಬರುತ್ತಿರಾ? ಎಂದು ಪ್ರತಿದಿನ ಹೇಳುತ್ತಿದ್ದರು. ಪತಿ ಎಷ್ಟು ಹೇಳಿದ್ರೂ ಕೇಳುತ್ತಿರಲಿಲ್ಲ. ಕೆಲಸ ಮುಗಿಸಿಕೊಂಡು ಬರುವೇ ಎಂದು ಹೇಳಿದ್ರೂ ಕೇಳುತ್ತಿರಲಿಲ್ಲ. ಪ್ರತಿದಿನ ಈ ವಿಚಾರವಾಗಿ ಅವರ ಮಧ್ಯೆ ಜಗಳು ಆಗುತ್ತಿತ್ತು ಎಂದು ಹೇಳಿದ್ದಾರೆ. ಇದರಿಂದ ಮನನೊಂದು ಈ ನಿರ್ಧಾರವನ್ನು ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಇದೀಗ ಈ ಬಗ್ಗೆ ತನಿಖೆಗಳು ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ನೀವು ಮನೆಯಲ್ಲಿ ಹಳೆಯ ವಸ್ತುಗಳನ್ನು ವಿಂಗಡಿಸುವಾಗ ಅಥವಾ ಶುಚಿಗೊಳಿಸುವಾಗ ಪ್ರಮುಖವಾದ ದಾಖಲೆ ಅಥವಾ ಕಳೆದುಹೋಗಿದ್ದ ವಸ್ತುಗಳನ್ನು ಮರಳಿ ಪಡೆಯುವಿರಿ. ಸಂಜೆ ವೇಳೆ ಬಾಲ್ಯದ ಸ್ನೇಹಿತರ ಭೇಟಿಯಿಂದ ಮನಸ್ಸು ಹಗುರವಾಗಲಿದೆ. ನೀವು ತೆಗೆದುಕೊಳ್ಳುವ ನಿರ್ಧಾರವೊಂದು ಕುಟುಂಬದ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ದಾರಿಯಾಗಲಿದೆ. ವಿನಾಕಾರಣ ಬೇರೆಯವರ ಜಗಳದಲ್ಲಿ ಮಧ್ಯಸ್ಥಿಕೆ ವಹಿಸಲು ಹೋಗಬೇಡಿ. ನೀವು ಭವಿಷ್ಯದ ಯೋಜನೆಗಳ ಬಗ್ಗೆ ಚಿಂತನೆ ನಡೆಸಲು ಸೂಕ್ತ ಸಮಯ.
ಸಣ್ಣ ವಿಷಯಕ್ಕೂ ನೀವು ಅತಿಯಾಗಿ ಆಲೋಚಿಸಿ ದಿನದ ನೆಮ್ಮದಿ ಹಾಳುಮಾಡಿಕೊಳ್ಳುವ ಸಾಧ್ಯತೆ ಇದೆ. ಯಾರದೋ ಮಾತಿಗೆ ಮರುಳಾಗಿ ಇಂದು ಯಾವುದೇ ಹೊಸ ವಸ್ತುಗಳನ್ನು ಅಥವಾ ಎಲೆಕ್ಟ್ರಾನಿಕ್ ಉಪಕರಣಗಳನ್ನು ಖರೀದಿಸಬೇಡಿ. ನಿಮ್ಮ ಸೃಜನಶೀಲ ಹವ್ಯಾಸಗಳಿಗೆ ಮನೆಯವರಿಂದ ಪ್ರೋತ್ಸಾಹ ಸಿಗಲಿದೆ. ನೀರಿಗೆ ಸಂಬಂಧಿಸಿದ ಸ್ಥಳಗಳಿಗೆ ಭೇಟಿ ನೀಡುವಾಗ ಸ್ವಲ್ಪ ಜಾಗರೂಕರಾಗಿರುವುದು ಒಳಿತು. ನಿಮ್ಮ ಮನಸ್ಸು ಅಧ್ಯಾತ್ಮದ ಕಡೆಗೆ ಹೆಚ್ಚು ಒಲಿಯಲಿದೆ. ಕುಟುಂಬದವರೊಂದಿಗೆ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡುವ ಸಂಭವವಿದೆ.
ಹತ್ತಿರದ ಸಂಬಂಧಿಗಳ ಶುಭ ಸಮಾರಂಭದಲ್ಲಿ ಭಾಗವಹಿಸುವ ಯೋಗವಿದೆ. ದೀರ್ಘಕಾಲದ ನಂತರ ಹಿರಿಯರ ಆಶೀರ್ವಾದ ಪಡೆಯುವುದರಿಂದ ಮನಸ್ಸಿನ ಗೊಂದಲಗಳು ತಿಳಿಯಾಗಲಿವೆ. ನಿಮ್ಮ ಬುದ್ಧಿವಂತಿಕೆಯನ್ನು ಮೆಚ್ಚಿ ಯಾರಾದರೂ ಸಲಹೆ ಕೇಳಿ ಬರಬಹುದು. ಉದ್ಯೋಗದಲ್ಲಿರುವವರಿಗೆ ನಾಳೆಯ ಕೆಲಸದ ಸಿದ್ಧತೆಗಾಗಿ ಸ್ವಲ್ಪ ಸಮಯ ವ್ಯಯಿಸಬೇಕಾದ ಅನಿವಾರ್ಯ ಎದುರಾಗಬಹುದು. ಮನೆಯ ಶುಭ ಕಾರ್ಯಗಳ ಕುರಿತು ಚರ್ಚೆಗಳು ನಡೆಯಲಿವೆ. ಆರ್ಥಿಕವಾಗಿ ಇದು ಲಾಭದಾಯಕ ದಿನವಾಗಿದ್ದು, ಮಕ್ಕಳ ಅಗತ್ಯತೆಗಳಿಗಾಗಿ ಹಣ ವ್ಯಯಿಸುವಿರಿ.
ನೀವು ಅಧ್ಯಾತ್ಮ ಅಥವಾ ಯೋಗಾಭ್ಯಾಸದಲ್ಲಿ ಅತಿ ಹೆಚ್ಚು ಸಮಯ ಕಳೆಯುವಿರಿ. ನೀವು ತುಂಬ ನಂಬಿಕೆ ಇರಿಸಿದ್ದ ವ್ಯಕ್ತಿಯಿಂದ ವಂಚನೆ ಆಗಿರುವ ಬಗ್ಗೆ ಮಾಹಿತಿ ತಿಳಿಯಲಿದೆ. ಪ್ರಾಪಂಚಿಕ ವಿಷಯಗಳಿಗಿಂತ ಒಳಮನಸ್ಸಿನ ಶಾಂತಿ ಮುಖ್ಯವೆಂದು ನಿಮಗನಿಸುತ್ತದೆ. ಹತ್ತಿರದ ಕಾಡು ಅಥವಾ ಗುಡ್ಡಗಾಡು ಪ್ರದೇಶಗಳಿಗೆ ಸಣ್ಣ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಆದಾಯ ಹೆಚ್ಚಿಸಿಕೊಳ್ಳಲು ಬೇಕಾದ ಪ್ರಯತ್ನಗಳನ್ನು ಮಾಡುವಿರಿ. ಮಕ್ಕಳ ವರ್ತನೆಯಿಂದ ಸ್ವಲ್ಪ ಬೇಸರವಾಗಬಹುದು, ಆದರೆ ಪ್ರೀತಿಯಿಂದ ಅವರಿಗೆ ಬುದ್ಧಿ ಹೇಳುವುದು ಸೂಕ್ತ.
ಸ್ನೇಹಿತರ ವರ್ತನೆಯಿಂದ ಸ್ವಲ್ಪ ಮಟ್ಟಿಗೆ ಕಿರಿಕಿರಿ ಆಗಲಿದೆ. ಇತರರು ಮಾಡಬೇಕಿದ್ದ ಕೆಲಸಗಳನ್ನು ನೀವೇ ಮಾಡಬೇಕಾಗುವುದರಿಂದ ದೈಹಿಕ ಶ್ರಮ ನಿಮ್ಮನ್ನು ಆವರಿಸಿಕೊಳ್ಳಲಿವೆ. ಮನೆ ರಿಪೇರಿ ಅಥವಾ ತೋಟದ ಕೆಲಸಗಳಲ್ಲಿ ಬಿಡುವಿಲ್ಲದೆ ತೊಡಗಿಕೊಳ್ಳುವಿರಿ. ನಿಮ್ಮ ಪರಿಶ್ರಮಕ್ಕೆ ತಕ್ಕಂತೆ ಹಣಕಾಸಿನ ಲಾಭವು ಅಲ್ಪ ಪ್ರಮಾಣದಲ್ಲಿ ಇರಲಿದೆ. ಹಳೆಯ ಸಾಲವನ್ನು ಮರುಪಾವತಿಸಲು ಅಥವಾ ನೀಡಿದ ಹಣವನ್ನು ವಾಪಸ್ ಪಡೆಯಲು ಗಟ್ಟಿಯಾಗಿ ಪ್ರಯತ್ನಿಸಿ. ಕಾಲುನೋವು ಅಥವಾ ಕೀಲು ನೋವಿನ ಬಗ್ಗೆ ಎಚ್ಚರವಿರಲಿ.
ನೀವು ಅನಿರೀಕ್ಷಿತವಾಗಿ ದೂರದ ಊರಿನಿಂದ ಬಂದ ಅತಿಥಿಗಳನ್ನು ಸ್ವಾಗತಿಸುವಿರಿ. ಅವರಿಗೆ ಆಗಬೇಕಾದ ಕೆಲಸದ ಸಲುವಾಗಿ ಓಡಾಟ ಹೆಚ್ಚಾಗಿ ಇರಲಿದೆ. ನೀವು ಈ ಹಿಂದೆ ಮಾಡಿದ ಸಹಾಯಕ್ಕೆ ಪ್ರತಿಯಾಗಿ ಅವಕಾಶವೊಂದನ್ನು ಪಡೆದುಕೊಳ್ಳಲು ಉತ್ತಮ ಯೋಗ ಸಿಗಲಿದೆ. ಕೋಪ ಮಾಡಿಕೊಳ್ಳುವುದೋ ಅಥವಾ ಹಣಕಾಸನ್ನು ನೀಡುವ ಮೂಲಕವೋ ಮಾಡುವ ಬದಲಾಗಿ, ಪ್ರೀತಿ ಮತ್ತು ಅನುಕಂಪದ ಮೂಲಕ ಜನರ ಮನಸ್ಸನ್ನು ಗೆಲ್ಲುವಿರಿ. ಆಧ್ಯಾತ್ಮಿಕ ಗ್ರಂಥಗಳ ಓದಿನಲ್ಲಿ ಆಸಕ್ತಿ ಮೂಡಲಿದೆ.
ಉನ್ನತ ವಿದ್ಯಾಭ್ಯಾಸಕ್ಕೆ ವಿದೇಶಕ್ಕೆ ತೆರಳಬೇಕು ಎಂದು ಪ್ರಯತ್ನಿಸುತ್ತಾ ಇರುವವರಿಗೆ ಯಾವುದಾದರೂ ಮೂಲದಿಂದ ಮುಖ್ಯವಾದ ಮಾಹಿತಿ ದೊರೆಯಲಿದೆ. ನಿಗೂಢ ಅಥವಾ ರಹಸ್ಯವಾದ ವಿಷಯಗಳನ್ನು ತಿಳಿದುಕೊಳ್ಳುವ ಕುತೂಹಲ ನಿಮಗಿರುತ್ತದೆ. ಆನ್ ಲೈನ್ ವ್ಯವಹಾರಗಳಲ್ಲಿ ಸಣ್ಣ ಮಟ್ಟಿನ ಮೋಸ ಹೋಗುವ ಸಂಭವವಿರುವುದರಿಂದ ಜಾಗ್ರತೆ ಇರಲಿ. ವಾಹನದಲ್ಲಿ ಸಂಚರಿಸುವಾಗ ದಾಖಲೆಗಳನ್ನು ಮರೆಯಬೇಡಿ. ಸಂಜೆ ವೇಳೆ ಮನೆಯಲ್ಲಿ ಸಣ್ಣ ಮಟ್ಟಿನ ವಾಗ್ವಾದ ನಡೆಯಬಹುದು, ಮೌನವೇ ಅದಕ್ಕೆ ಉತ್ತಮ ಪರಿಹಾರ.
ಹೊಸಬರ ಪರಿಚಯದಿಂದ ನಾನಾ ಬಗೆಯಲ್ಲಿ ಅನುಕೂಲ ಆಗುವ ಯೋಗವಿದೆ. ನೀವು ಹೊಸ ತಂತ್ರಜ್ಞಾನ ಅಥವಾ ಸಾಮಾಜಿಕ ಜಾಲತಾಣದ ಮೂಲಕ ಲಾಭದಾಯಕ ಸುದ್ದಿಯೊಂದನ್ನು ಪಡೆಯುವಿರಿ. ಹಳೆಯ ಗೆಳೆಯರೊಂದಿಗೆ ಸೇರಿ ಪಿಕ್ನಿಕ್ ಹೋಗಲು ಅಥವಾ ಔತಣಕೂಟ ಆಯೋಜಿಸಲು ಇದು ಸಕಾಲ. ನಿಮ್ಮ ಮಾತಿನ ಚಾಕಚಕ್ಯತೆಯಿಂದ ನಿಂತುಹೋಗಿದ್ದ ಕಾರ್ಯವೊಂದಕ್ಕೆ ಮರುಜೀವ ಸಿಗಲಿದೆ. ಆರೋಗ್ಯದ ದೃಷ್ಟಿಯಿಂದ ನಿದ್ರೆಯ ಕಡೆಗೆ ಹೆಚ್ಚಿನ ಗಮನ ಹರಿಸುವುದು ಮುಖ್ಯ.
ಖರ್ಚನ್ನು ಕಡಿಮೆ ಮಾಡಬೇಕು ಎಂದು ದಿನದ ಆರಂಭದಲ್ಲಿಯೇ ಅಂದುಕೊಳ್ಳಲಿದ್ದೀರಿ. ಆದರೆ ನಿಮ್ಮ ಮನಸ್ಸು ಅಲಂಕಾರ ಮತ್ತು ಸೌಂದರ್ಯದ ಕಡೆಗೆ ಹೆಚ್ಚು ವಾಲುವುದರಿಂದ ಸ್ವಂತಕ್ಕಾಗಿ ಅಥವಾ ಮನೆಯ ಅಲಂಕಾರಕ್ಕಾಗಿ ಖರ್ಚು ಮಾಡುವಿರಿ. ಪ್ರೇಮ ಸಂಬಂಧಗಳಲ್ಲಿ ಇದ್ದ ಒಡಕುಗಳು ದೂರವಾಗಿ ಹೊಸ ಒಪ್ಪಂದಗಳು ಏರ್ಪಡಲಿವೆ. ಮನೆಯಲ್ಲಿ ಮದುವೆ ಪ್ರಸ್ತಾವ ಮಾಡುವ ಯೋಗ ಸಹ ಇದೆ. ಮಹಿಳೆಯರಿಗೆ ತವರು ಮನೆಯಿಂದ ವಿಶೇಷ ಕಾಣಿಕೆ ಸಿಗಬಹುದು. ಆಹಾರದಲ್ಲಿ ಸಿಹಿ ಪದಾರ್ಥಗಳ ಅತಿಯಾದ ಸೇವನೆ ಬೇಡ.
ಅಂಡರ್-19 ವಿಶ್ವಕಪ್ 2026 (U19 World Cup 2026) ಅನ್ನು ಗೆಲುವಿನೊಂದಿಗೆ ಆರಂಭಿಸಿದ್ದ ಭಾರತ ಯುವ ಪಡೆ ಇದೀಗ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸಿದೆ. ಮೊದಲ ಪಂದ್ಯದಲ್ಲಿ ಅಮೆರಿಕವನ್ನು ಮಣಿಸಿದ್ದ ಆಯುಷ್ ಪಡೆ, ಇದೀಗ ತನ್ನ ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಬಗ್ಗುಬಡಿದಿದೆ. ಮೊದಲ ಪಂದ್ಯದಂತೆ ಈ ಪಂದ್ಯಕ್ಕೂ ಮಳೆ ಸಾಕಷ್ಟು ಬಾರಿ ಅಡ್ಡಿಪಡಿಸಿತು. ಅಂತಿಮವಾಗಿ ಈ ಮಳೆ ಪೀಡಿತ ಪಂದ್ಯವನ್ನು ಡಕ್ವರ್ತ್-ಲೂಯಿಸ್ ವಿಧಾನದಡಿಯಲ್ಲಿ 10 ರನ್ಗಳಿಂದ ಗೆದ್ದುಕೊಳ್ಳುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಯಿತು. ಭಾರತದ ಗೆಲುವಿನಲ್ಲಿ ವೈಭವ್ ಸೂರ್ಯವಂಶಿ ಮತ್ತು ಅಭಿಗ್ಯಾನ್ ಕುಂಡು ಅವರ ನಿರ್ಣಾಯಕ ಇನ್ನಿಂಗ್ಸ್ ಜೊತೆಗೆ ಬೌಲರ್ಗಳ ಸಾಂಘೀಕ ಪ್ರದರ್ಶನ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿತು.
ಸೂರ್ಯವಂಶಿ, ಕುಂಡು ಅರ್ಧಶತಕ
ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್ನಲ್ಲಿ ನಡೆದ ಈ ಪಂದ್ಯದಲ್ಲಿ ಬಾಂಗ್ಲಾದೇಶ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆದಾಗ್ಯೂ, ಮಳೆಯಿಂದಾಗಿ, ಪಂದ್ಯವನ್ನು ತಲಾ 49 ಓವರ್ಗಳಿಗೆ ಇಳಿಸಲಾಯಿತು. ಭಾರತವು ಆರಂಭದಲ್ಲಿಯೇ ಪ್ರಮುಖ ವಿಕೆಟ್ಗಳನ್ನು ಕಳೆದುಕೊಂಡು ಹಿನ್ನಡೆ ಅನುಭವಿಸಿತು. ತಂಡದ ನಾಯಕ ಆಯುಷ್ ಮ್ಹಾತ್ರೆ, ವೇದಾಂತ್ ತ್ರಿವೇದಿ ಮತ್ತು ವಿಹಾನ್ ಮಲ್ಹೋತ್ರಾ ಬೇಗನೆ ಪೆವಿಲಿಯನ್ ಸೇರಿಕೊಂಡರು. ಆ ನಂತರ ವೈಭವ್ ಸೂರ್ಯವಂಶಿ ಮತ್ತು ಅಭಿಗ್ಯಾನ್ ಕುಂಡು ಉತ್ತಮ ಜೊತೆಯಾಟವನ್ನಾಡಿ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಸೂರ್ಯವಂಶಿ 67 ಎಸೆತಗಳನ್ನು ಎದುರಿಸಿ ಆರು ಬೌಂಡರಿ ಮತ್ತು ಮೂರು ಸಿಕ್ಸರ್ಗಳನ್ನು ಒಳಗೊಂಡಂತೆ 72 ರನ್ ಗಳಿಸಿ ಔಟಾದರು.
ಅಭಿಗ್ಯಾನ್ ಕುಂಡು ಕೂಡ 112 ಎಸೆತಗಳಲ್ಲಿ 80 ರನ್ ಗಳಿಸಿ ತಂಡವನ್ನು ಸ್ಪರ್ಧಾತ್ಮಕ ಮೊತ್ತಕ್ಕೆ ಕೊಂಡೊಯ್ದರು. ಕುಂಡು ತಮ್ಮ ಇನ್ನಿಂಗ್ಸ್ನಲ್ಲಿ ನಾಲ್ಕು ಬೌಂಡರಿ ಮತ್ತು ಮೂರು ಸಿಕ್ಸರ್ಗಳನ್ನು ಬಾರಿಸಿದರು. ಇವರಿಬ್ಬರನ್ನು ಹೊರತುಪಡಿಸಿ ಕನಿಷ್ಕ್ ಚೌಹಾಣ್ ಕೂಡ 26 ಎಸೆತಗಳಲ್ಲಿ 28 ರನ್ ಗಳಿಸಿದರು. ಅಂತಿಮವಾಗಿ ಭಾರತ ತಂಡವು 48.4 ಓವರ್ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 238 ರನ್ ಗಳಿಸಿತು. ಬಾಂಗ್ಲಾದೇಶ ಪರ ಅಲ್ ಫಹಾದ್ ಅದ್ಭುತ ಬೌಲಿಂಗ್ ಮಾಡಿ ಐದು ವಿಕೆಟ್ಗಳನ್ನು ಪಡೆದರು.
ಈ ಗುರಿಯನ್ನು ಬೆನ್ನಟ್ಟಿದ ಬಾಂಗ್ಲಾದೇಶ ಉತ್ತಮ ಆರಂಭವನ್ನು ಪಡೆಯಿತು. ಒಂದು ಹಂತದಲ್ಲಿ 17.2 ಓವರ್ಗಳಲ್ಲಿ 2 ವಿಕೆಟ್ಗಳ ನಷ್ಟಕ್ಕೆ 90 ರನ್ಗಳಿಸಿತ್ತು. ಆದಾಗ್ಯೂ, ನಂತರ ಮಳೆಯಿಂದಾಗಿ ಆಟ ಸ್ಥಗಿತಗೊಂಡಿತು. ಪಂದ್ಯ ಪುನರಾರಂಭವಾದಾಗ, ಬಾಂಗ್ಲಾದೇಶಕ್ಕೆ 29 ಓವರ್ಗಳಲ್ಲಿ 165 ರನ್ಗಳ ಗುರಿಯನ್ನು ನೀಡಲಾಯಿತು. ಆದಾಗ್ಯೂ, ಟೀಂ ಇಂಡಿಯಾ, ಬಾಂಗ್ಲಾದೇಶವನ್ನು 28.3 ಓವರ್ಗಳಲ್ಲಿ 146 ರನ್ಗಳಿಗೆ ಆಲೌಟ್ ಮಾಡಿತು. ವಿಹಾನ್ ಮಲ್ಹೋತ್ರಾ 4 ವಿಕೆಟ್ಗಳೊಂದಿಗೆ ಅತಿ ಹೆಚ್ಚು ವಿಕೆಟ್ ಪಡೆದರೆ, ಖಿಲನ್ ಪಟೇಲ್ ಕೂಡ 2 ವಿಕೆಟ್ ಪಡೆದರು. ದೀಪೇಶ್ ದೇವೇಂದ್ರನ್, ಹೆನಿಲ್ ಪಟೇಲ್ ಮತ್ತು ಕನಿಷ್ಕ್ ಚೌಹಾಣ್ ತಲಾ 1 ವಿಕೆಟ್ ಪಡೆದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ನೋವನ್ನು ಮನಸ್ಸನಲ್ಲಿ ಇಟ್ಟುಕೊಂಡೂ ಸಂತೋಷದಿಂದ ಇರುವುದು ಗೊತ್ತು. ಹೊಸ ವಸ್ತ್ರಗಳನ್ನು ಧರಿಸುವಿರಿ. ಉಡುಗೊರೆಯನ್ನು ಸ್ನೇಹಿತರಿಂದ ಸ್ವೀಕರಿಸುವಿರಿ. ಭೂಮಿಯ ವ್ಯವಹಾರದಲ್ಲಿ ಹಿನ್ನಡೆಯಾಗಲಿದೆ. ಇಂದಿನ ಸಮಯವು ವ್ಯರ್ಥವಾಗುವುದು. ಇಂದು ನಿಮ್ಮ ಜವಾಬ್ದಾರಿಯ ಕಾರ್ಯದಲ್ಲಿ ಮಗ್ನರಾಗುವಿರಿ. ರಹಸ್ಯದಿಂದ ಇಂದಿನ ಕೆಲಸವನ್ನು ಮಾಡುವಿರಿ. ನಿಮ್ಮ ಪ್ರಾಮಾಣಿಕತೆಯ ಪರೀಕ್ಷೆ ಆಗಬಹುದು. ಬದಲಾಣೆಗೆ ನೀವು ತೆರೆದುಕೊಳ್ಳಬೇಕಾದೀತು. ಸಂಗಾತಿಯನ್ನು ಭೇಟಿಯಾಗಲು ನಾನಾ ಕಾರಣವನ್ನು ಹುಡುಕುವಿರಿ. ನಿಮ್ಮ ಮಾತಿನಿಂದ ತಾಯಿಗೆ ನೋವಾಗಬಹುದು.
ವೃಷಭ ರಾಶಿ:
ಕೆಲಸಕ್ಕೆ ಸಂಬಂಧಿಸಿದಂತೆ ನೀವು ಕುಟುಂಬದಿಂದ ದೂರ ಉಳಿಯಬೇಕಾದ ಸಂದರ್ಭ ಬರಬಹುದು. ಅಸತ್ಯವನ್ನು ಹೇಳುವುದು ಗೊತ್ತಾದೀತು. ಹಿತವಚನದಿಂದ ಯಾವ ಪರಿವರ್ತನೆಯೂ ಆಗದು. ಒಗ್ಗಟ್ಟಿನ ಕೆಲಸದಲ್ಲಿ ಜಯವಿರಲಿದೆ. ನಿಮ್ಮ ನಡೆವಳಿಕೆಯು ಅಸಹಜತೆ ಎಂದು ಕೆಲವರಿಗೆ ಅನ್ನಿಸಬಹುದು. ಅನಿರೀಕ್ಷಿತ ಬದಲಾವಣೆಯನ್ನು ನೀವು ಸ್ವೀಕರಿಸಲಾರಿರಿ. ಎಂದೋ ಕಳೆದುಕೊಂಡ ವಸ್ತುವು ಇಂದು ಪ್ರಾಪ್ತವಾಗುವುದು. ಹಣದ ಅಭಾವವಿದ್ದರೂ ಖರ್ಚನ್ನು ಮಾಡಬೇಕಾದ ಸ್ಥಿತಿಯು ಬರಬಹುದು. ಮನೆಯಿಂದ ದೂರವಿದ್ದು ಬೇಸರವಾಗಲಿದೆ. ಭವಿಷ್ಯದ ಬಗ್ಗೆ ಗಂಭೀರವಾದ ಚಿಂತನೆ ಮಾಡುವಿರಿ.
ಮಿಥುನ ರಾಶಿ:
ನಿಮ್ಮ ಮೇಲೆ ಸಂದೇಹವು ಬರಬಹುದು. ಭವಿಷ್ಯದ ಬಗ್ಗೆ ಕೆಲವು ವಿಚಾರಗಳನ್ನು ಹಂಚಿಕೊಳ್ಳುವಿರಿ. ನಿಮ್ಮ ಮನೆಯ ಸಮಸ್ಯೆಯನ್ನು ಬೇರೆಯವರ ಜೊತೆ ಹಂಚಿಕೊಳ್ಳುವುದು ಬೇಡ. ಬೇಕಾದಷ್ಟು ಹಣವಿದ್ದರೂ ತುರ್ತಿಗೆ ಪ್ರಯೋಜನಕ್ಕೆ ಬಾರದು. ನಿಮ್ಮ ನಿರ್ಧಾರಕ್ಕೆ ಮನೆಯಿಂದ ನಿಮಗೆ ಬೆಂಬಲವಿರುವುದು. ಸೋಲಿಗೆ ದುಃಖ ಪಡುವುದಕ್ಕಿಂತ ಕಾರಣ ಹುಡುಕಿದರೆ ನೆಮ್ಮದಿ ಹೆಚ್ಚು. ಮನೆಗೆ ಬೇಕಾದ ವಸ್ತುಗಳನ್ನು ನೀವು ಖರೀದಿಸಬೇಕಾಗುವುದು. ವಾತಕ್ಕೆ ಸಂಬಂಧಿಸಿದ ಖಾಯಿಲೆಯಿಂದ ಉತ್ಸಾಹಕ್ಕೆ ಭಂಗ.
ಕರ್ಕಾಟಕ ರಾಶಿ:
ಕೆಲಸವನ್ನು ಪೂರ್ಣಗೊಳಿಸಲು ಹೆಚ್ಚು ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ತಂದೆಯ ಕಾರ್ಯಕ್ಕೆ ನಿಮ್ಮ ಸಹಕಾರವು ಇರಲಿದೆ. ನಿಮ್ಮವರ ಪ್ರೀತಿಯನ್ನು ಕಳೆದುಕೊಳ್ಳುವ ಭಯವು ಇರಲಿದೆ. ಹೇಳಬೇಕಾದ ವಿಚಾರವನ್ನು ನೇರವಾಗಿ ಹೇಳಿ. ನಿಮ್ಮ ಮಾತು ಚೌಕಟ್ಟನ್ನು ಮೀರಬಹುದು. ಎಲ್ಲರ ದೃಷ್ಟಿಯಲ್ಲಿ ಸ್ವಾರ್ಥಿಯಂತೆ ಕಾಣಿಸುವಿರಿ. ಸರ್ಕಾರದ ಸೌಲಭ್ಯವನ್ನು ಪಡೆಯಲು ನೀವು ಓಡಾಟ ಮಾಡುವಿರಿ. ಮಾತಿನಿಂದ ನೀವು ಗೆಲ್ಲವುದು ಸುಲಭವಲ್ಲ. ಚಿತ್ತವನ್ನು ಸಮಾಧಾನವಾಗಿ ಇಟ್ಟಕೊಳ್ಳಲು ವಿಫಲರಾಗುವಿರಿ. ಇಂದು ಮನೋರಂಜನೆಗೆ ಹೆಚ್ಚಿನ ಒತ್ತು ಕೊಡುವಿರಿ.
ಸಿಂಹ ರಾಶಿ:
ನೀವು ಪೂರ್ವಿಕರ ಆಸ್ತಿಯಿಂದಲೂ ಲಾಭ ಪಡೆಯಬಹುದು. ಅಧಿಕಾರಿವರ್ಗದಿಂದ ನಿಮ್ಮ ಗೌರವಕ್ಕೆ ದಕ್ಕೆ ಆಗಬಹುದು. ಸಂಗಾತಿಯ ಇಂಗಿತವನ್ನೇ ಅರಿತು ಕಾರ್ಯವನ್ನು ಮಾಡುವಿರಿ. ಮನೋಭಿಲಾಶೆಯನ್ನು ಪೂರ್ಣಗೊಳಿಸಿಕೊಳ್ಳುವಿರಿ. ಒಂಟಿಯಾಗಿ ಸುತ್ತಾಡಬೇಕೆನಿಸುವುದು. ಕೆಲವರ ಮಾತಿಗೆ ಉತ್ತರವನ್ನು ಕೊಡುವುದು ಇಷ್ಟವಾಗದು. ಇಂದು ನಿಮ್ಮ ಬಳಿ ಸಾಮಾಜಿಕ ಕಳಕಳಿಯಿರುವ ಜನರು ಬರುವರು. ಇನ್ನು ಬಾರದು ಎಂದುಕೊಂಡ ಹಣವು ಇಂದು ನಿಮ್ಮ ಕೈ ಸೇರುವುದು. ಕರ್ತವ್ಯದತ್ತ ನಿಮ್ಮ ಗಮನಹರಿಸುವಿರಿ.
ಕನ್ಯಾ ರಾಶಿ:
ಇಂದು ನಿಮ್ಮ ಆದಾಯದ ಮೂಲ ಹೆಚ್ಚಾಗಲಿದೆ. ತಂದೆ ಮತ್ತು ಮಕ್ಕಳ ನಡುವೆ ಪ್ರೀತಿ ಇರುತ್ತದೆ. ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ಹಳೆಯ ಅನುಭವದ ಆಧಾರದ ಮೇಲೆ ನೀವು ಕೆಲಸವನ್ನು ಮಾಡುವಿರಿ. ಹೂಡಿಕೆಯನ್ನು ಬೇರೆಯವರ ಹೆಸರಿನಲ್ಲಿ ಮಾಡುವಿರಿ. ನಿಮ್ಮ ಕಾಳಜಿಯನ್ನು ವಹಿಸಿಕೊಂಡವರಿಗೆ ಬೇಸರ ಮಾಡದಂತೆ ನಿಮ್ಮನ್ನು ತೋರಿಸಿಕೊಳ್ಳಿ. ನಿಮ್ಮ ಮಾತಿನ ಮೇಲೆ ವಿಶ್ವಾಸದ ಕೊರತೆ ಕಾಣಲಿದೆ. ವಾಹನವನ್ನು ಚಲಾಯಿಸುವಾಗ ಆತುರ ಬೇಡ. ದೂರ ಹೋಗುವವರಿದ್ದರೆ ಹಿರಿಯರ ಆಶೀರ್ವಾದವನ್ನು ಪಡೆದುಕೊಳ್ಳಿ.
ತುಲಾ ರಾಶಿ:
ಮತ್ತೊಬ್ಬರ ಜೊತೆ ಮಾತನಾಡುವಾಗ ಪದಗಳ ಮೇಲೆ ಎಚ್ಚರ ಇರಲಿ. ಶ್ರಮ ಹಾಗೂ ಆರ್ಥಿಕ ವೆಚ್ಚಗಳು ಹೆಚ್ಚಾಗಬಹುದು. ಆದಾಯ ಮತ್ತು ವೆಚ್ಚಗಳ ನಡುವೆ ತುಲನೆ ಬೇಕು. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ನಿಮ್ಮ ನಿರ್ಧಾರವನ್ನು ಯಾರು ಏನೇ ಹೇಳಿದರೂ ಬದಲಾಯಿಸುವುದಿಲ್ಲ. ಪರಸ್ಪರ ಸಾಮರಸ್ಯಕ್ಕಾಗಿ ದಂಪತಿಗಳು ದಾರಿಯನ್ನು ಹುಡುಕುವಿರು. ಕಳೆದು ಹೋದ ಪ್ರೇಮವನ್ನು ಮತ್ತೆ ಯಾರಾದರೂ ನೆನಪಿಸುವರು. ತಪ್ಪನ್ನು ಒಪ್ಪಿಕೊಳ್ಳದೇ ಅಹಂಕಾರವನ್ನು ತೋರಿಸುವಿರಿ. ನಿಮ್ಮ ಬಗ್ಗೆ ಬೇರೆಯವರಿಗೆ ಔದಾರ್ಯಭಾವವು ಇರಲಿದೆ.
ವೃಶ್ಚಿಕ ರಾಶಿ:
ವ್ಯಾಪಾರಿಗಳಿಗೆ ಇಂದು ಸುಲಭವಾ ಲಾಭವಾಗಲಿದೆ. ಕುಟುಂಬದೊಂದಿಗೆ ಉತ್ತಮ ಸಮಯ ಕಳೆಯುವಿರಿ. ಸ್ಪರ್ಧಾತ್ಮಕ ಚಟುವಟಿಕೆಯಲ್ಲಿ ಪರಾಜಯ ಆಗಬಹುದು. ಭಾವನಾತ್ಮಕ ವಿಚಾರಗಳಿಗೆ ಸ್ಪಂದಿಸುವುದು ಕಷ್ಟವಾಗಲವಾಗಲಿದೆ. ನಿಮ್ಮವರ ಮಾತುಗಳಿಂದ ನೀವು ಬೇಸರಗೊಳ್ಳುವಿರಿ. ಸಾಲಗಾರರಿಗೆ ಅತಿಯಾದ ಕಿರಿಕಿರಿಯು ಮೇಲಿಂದ ಮೇಲೆ ಬರಲಿದೆ. ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಳ್ಳುವಿರಿ. ನಿಮ್ಮ ಅಂತಸ್ಸಾಕ್ಷಿಗೆ ಸತ್ಯವನ್ನು ಹೇಳುವ ಧೈರ್ಯ ಬರುವುದು. ವಿದೇಶದಿಂದ ಆಹ್ವಾನವು ಬರಬಹುದು. ಆತುರದ ಪ್ರಯಾಣವನ್ನು ಇಂದು ಮಾಡಬೇಡಿ.
ಧನು ರಾಶಿ:
ನೀವು ಮಾಡಿಕೊಂಡ ಎಡವಟ್ಟಿನಿಂದ ಅವಕಾಶದಿಂದ ವಂಚಿತರಾಗಬೇಕಾಗುವುದು. ಪರಾಧೀನ ಸ್ಥಿತಿಯಿಂದ ಮಾನಸಿಕ ಹಿಂಸೆಯಾದೀತು. ಅಧಿಕಾರದಿಂದ ಮಾತ್ರ ಎಲ್ಲವೂ ಸರಿಯಾಗುವುದು ಎಂಬ ಭ್ರಮೆ ಬೇಡ. ಇಂದಿನ ಕಾರ್ಯವು ಯಾವುದೇ ತೊಂದರೆಗಳಿಲ್ಲದೇ ಮುಗಿಯುವುದು. ಸ್ತ್ರೀಯರು ಅನಾರೋಗ್ಯದಿಂದ ಪೀಡಿತರಾಗುವಿರಿ. ಮುಕ್ತ ಮನಸ್ಸಿನಿಂದ ಮಾತನಾಡುವಿರಿ. ದಾಂಪತ್ಯದಲ್ಲಿ ಹೊಂದಾಣಿಕೆ ಅವಶ್ಯಕತೆ ಅಧಿಕವಾಗಿ ಇರಲಿದೆ. ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತನ್ನು ಕಳೆದುಕೊಳ್ಳುವಿರಿ. ನಿಮಗೆ ಇಂದು ಪ್ರೀತಿ ಪಾತ್ರರಿಂದ ಉಡುಗೊರೆ ಬರಲಿದೆ.
ಮಕರ ರಾಶಿ:
ಶೈಕ್ಷಣಿಕ ಕೆಲಸದಲ್ಲಿ ಯಶಸ್ವಿಯಾಗುವಿರಿ. ಬುದ್ಧಿವಂತಿಕೆಗೆ ಸಂಬಂಧಿಸಿದ ಕಾರ್ಯಗಳಿಂದ ಆದಾಯ ಹೆಚ್ಚಾಗುತ್ತದೆ. ನೀವು ಸ್ನೇಹಿತರಿಂದ ಬೆಂಬಲ ಪಡೆಯಬಹುದು. ಕೃಷಿಕರಿಗೆ ಲಾಭದಲ್ಲಿ ಸ್ವಲ್ಪ ಇಳಿಮುಖ ಇರಲಿದೆ. ಸಾಮಾಜಿಕ ಕಾರ್ಯಗಳಿಂದ ಮೆಚ್ಚುಗೆ ಪಡೆಯುವಿರಿ. ಸಂಬಂಧದಲ್ಲಿ ಒಡಕು ಬರಬಹುದು. ವ್ಯವಹಾರವು ಸರಿಯಾಗಿ ಇರಲಿ. ಅತಿಯಾದ ಕೋಪದಿಂದ ಎಲ್ಲ ಕೆಲಸವನ್ನು ವ್ಯತ್ಯಾಸ ಮಾಡಿಕೊಳ್ಳುವಿರಿ. ಆಲಂಕಾರಿಕ ವಸ್ತುಗಳನ್ನು ಖರೀದಿಸುವಿರಿ. ಅಧಿಕಾರಿಯ ವಿಶ್ವಾಸವನ್ನು ಪಡೆದು ಹೆಚ್ಚಿನ ಸ್ಥಾನ ಪಡೆಯುವಿರಿ.
ಕುಂಭ ರಾಶಿ:
ನಿಮ್ಮ ಪ್ರೀತಿಪಾತ್ರರಿಂದ ನೀವು ಬೆಂಬಲ ಪಡೆಯುತ್ತೀರಿ. ವ್ಯಾಪಾರವು ಸಾಧಾರಣವಾಗಿ ಇರಲಿದೆ. ಉದ್ಯೋಗವನ್ನು ಬದಲಿಸಲು ಮನಸ್ಸು ಇಲ್ಲದಿದ್ದರೂ ನಿಮಗೆ ಅನಿವಾರ್ಯ ಆಗಬಹುದು. ವಾಹನದಿಂದ ಬಿದ್ದು ಪೆಟ್ಟಾಗಬಹುದು. ದುರ್ಬಲರ ಜೊತೆ ಸಂಘರ್ಷ ಬೇಡ. ಆತುರದಲ್ಲಿ ವಾಹನ ಚಾಲನೆಯಿಂದ ತೊಂದರೆಯಾದೀತು. ಇಂದು ಬಂಧುಗಳನ್ನು ಮನೆಗೆ ಆಹ್ವಾನಿಸುವಿರಿ. ಮನಸ್ಸಿನ ನೋವನ್ನು ಮರೆಯಲು ಒಂಟಿಯಾಗಿ ದೂರ ಹೋಗುವಿರಿ. ಪುಣ್ಯಕ್ಷೇತ್ರಗಳ ದರ್ಶನವನ್ನು ಮಾಡುವಿರಿ. ಅನಾರೋಗ್ಯದಿಂದ ಕೆಲಸಗಳಿಗೆ ವಿಘ್ನವು ಬರುವುದು.
ಮೀನ ರಾಶಿ:
ಉದ್ಯೋಗದಲ್ಲಿ ಪ್ರಗತಿಯ ಹಾದಿ ಸುಗಮವಾಗಲಿದೆ. ಆದರೆ ಕೆಲಸದ ಸ್ಥಳದಲ್ಲಿ ಬದಲಾವಣೆಯಾಗಬಹುದು. ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿವೆ. ಆಸ್ತಿಯನ್ನು ಖರೀದಿಸುವ ಕುರಿತು ಮನೆಯಲ್ಲಿ ಚರ್ಚೆಗಳು ನಡೆಯುವುದು. ಆರ್ಥಿಕ ಒತ್ತಡದಿಂದ ನೀವು ಹೊರಬರುವ ಮಾರ್ಗವನ್ನು ಹುಡುಕುವಿರಿ. ಇಂದಿನ ಉತ್ಸಾಹವು ಕೆಲಸಕ್ಕೆ ಪೂರಕವಾಗವುವುದು. ಹಣದ ಹರಿವು ಸಾಧಾರಣವಾಗಿ ಇರಲಿದೆ. ಪ್ರೀತಿಪಾತ್ರರ ವರ್ತನೆಯಿಂದ ಕಿರಿಕಿರಿ ಆಗಬಹುದು. ಹೇಳಲಾಗದ ಮರೆಯಲಾಗದ ಸ್ಥಿತಿ ಇರಲಿದೆ.
ಜನವರಿ 18, 2026ರ ಪಂಚಾಂಗ:
ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಮಕರ, ಮಹಾನಕ್ಷತ್ರ : ಪೂರ್ವಾಷಾಢ, ವಾರ : ಭಾನು, ಪಕ್ಷ : ಕೃಷ್ಣ, ತಿಥಿ : ಅಮಾವಾಸ್ಯಾ, ನಿತ್ಯನಕ್ಷತ್ರ : ಉತ್ತರಾಷಾಢ ಯೋಗ : ಹರ್ಷಣ, ಕರಣ : ನಾಗವಾನ್, ಸೂರ್ಯೋದಯ – 06 – 54 am, ಸೂರ್ಯಾಸ್ತ – 06 – 15 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 16-50 – 18:16, ಯಮಗಂಡ ಕಾಲ 12:35 – 14:00, ಗುಳಿಕ ಕಾಲ 15:25 – 16:50
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಮಧ್ಯ ವಾರದಲ್ಲಿ ಧ್ರುವಂತ್ ಅವರು ಎಲಿಮಿನೇಟ್ ಆದರು. ಕಳೆದ ವಾರ ಕಡಿಮೆ ವೋಟ್ ಪಡೆದ ಅವರನ್ನು ಹೊರಕ್ಕೆ ಹಾಕಲಾಯಿತು. ಮನೆಯವರ ಜೊತೆ ಮಾತನಾಡಲು ಅವರಿಗೆ ಅವಕಾಶ ಸಿಗಲೇ ಇಲ್ಲ. ಈಗ ಅವರು ಕೂದಲನ್ನು ಕಟ್ ಮಾಡಿಕೊಂಡು ಹೊಸ ಸ್ಟೈಲ್ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಲುಕ್ ಗಮನ ಸೆಳೆಯುವ ರೀತಿಯಲ್ಲಿ ಇದೆ. ಇದಕ್ಕೆ ಕಾರಣವನ್ನೂ ಅವರು ನೀಡಿದರು ಮತ್ತು ಮುಂದಿನ ಆಲೋಚನೆಯ ಬಗ್ಗೆಯೂ ಹೇಳಿದರು.
ಎಲಿನಿನೇಷನ್ ಆದ ಬಳಿಕ ಬಿಗ್ ಬಾಸ್ ವೇದಿಕೆ ಕರೆಸೋದು ಸಂಪ್ರದಾಯ. ಅರ್ಧ ವಾರದಲ್ಲಿ ಧ್ರುವಂತ್ ಹೊರಕ್ಕೆ ಹೋಗಿರುವುದರಿಂದ ಅವರಿಗೆ ಸುದೀಪ್ ಜೊತೆ ಮಾತನಾಡಲು ಅವಕಾಶ ಸಿಕ್ಕಿರಲೇ ಇಲ್ಲ. ಈ ಕಾರಣಕ್ಕೆ ಈ ವಾರ ಅವರನ್ನು ವೇದಿಕೆ ಮೇಲೆ ಕರೆಸಲಾಯಿತು ಮತ್ತು ಸುದೀಪ್ ಜೊತೆ ಮಾತನಾಡಿದರು.
‘ಇಲ್ಲಿಂದ ಹೊರ ಹೋಗುತ್ತಿದ್ದಂತೆ ಗಾಡಿನ ಚೇಸ್ ಮಾಡಿಕೊಂಡು ಬಂದರು. ಇದೊಂದು ಬ್ಯೂಟಿಫುಲ್ ಅನುಭವ. 10 ವರ್ಷದ ತಪಸ್ಸು. ನಾಲ್ಕು ತಿಂಗಳಲ್ಲಿ ಸಾಕಷ್ಟು ಸಿಕ್ಕಿತು. ಒಳಗೆ ಕಟಿಂಗ್ ಮಾಡಬೇಕು ಎಂದುಕೊಂಡಿದ್ದೆ ಆಗಿಲ್ಲ, ಹೀಗಾಗಿ ಹೊರಗೆ ಈ ಹೇರ್ಸ್ಟೈಲ್ ಮಾಡಿಸಿದೆ’ ಎಂದಿದ್ದಾರೆ ಅವರು.
ಇದನ್ನೂ ಓದಿ: ಧ್ರುವಂತ್ಗೆ ‘ಸೀಸನ್ ಚಪ್ಪಾಳೆ’ ಕೊಟ್ಟಿದ್ದನ್ನು ಟೀಕಿಸಿದವರಿಗೆ ಕ್ಲ್ಯಾರಿಟಿ ಕೊಟ್ಟ ಸುದೀಪ್
‘ಜನರ ಪ್ರತಿಕ್ರಿಯೆ ಬಗ್ಗೆ ನನಗೆ ಸಂತೋಷ ಇದೆ. ಜೈ ಮಹಾಕಾಲ್ನ ಬ್ರ್ಯಾಂಡ್ ಮಾಡಿದೀರಾ. ನಾನು ಒಳ್ಳೆಯ ಫಿಲ್ಮ್ ಮೇಕರ್ ಆಗಬೇಕು. ಸಿನಿಮಾ ರಂಗದಲ್ಲಿ ಮತ್ತಷ್ಟು ಕೆಲಸ ಮಾಡಬೇಕು’ ಎಂದು ಅವರು ಹೇಳಿದರು.
ಮಹಿಳಾ ಪ್ರೀಮಿಯರ್ ಲೀಗ್ನ ನಾಲ್ಕನೇ ಆವೃತ್ತಿಯಲ್ಲಿ ಆರ್ಸಿಬಿ ತಂಡ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ತನ್ನ ನಾಲ್ಕನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್ಗಳ ಸುಲಭ ಜಯ ದಾಖಲಿಸಿತು. ತಂಡದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ನಾಯಕಿ ಸ್ನೃತಿ ಮಂಧಾನ 96 ರನ್ಗಳ ಇನ್ನಿಂಗ್ಸ್ ಆಡಿದರು. ಆದಾಗ್ಯೂ ಕೇವಲ 4 ರನ್ಗಳಿಂದ ತಮ್ಮ ಚೊಚ್ಚಲ ಡಬ್ಲ್ಯುಪಿಎಲ್ ಶತಕದಿಂದ ವಂಚಿತರಾದರು.
166 ರನ್ಗಳ ಗುರಿ ಬೆನ್ನಟ್ಟಿದ ಆರ್ಸಿಬಿ ಪರ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ಸ್ಮೃತಿ, ಜಾರ್ಜಿಯಾ ವಾಲ್ ಜೊತೆ ಶತಕದ ಜೊತೆಯಾಟ ಕಟ್ಟಿದರು. ಹಾಗೆಯೇ ಅರ್ಧಶತಕವನ್ನು ಸಹ ಪೂರೈಸಿದರು. ಅರ್ಧಶತಕದ ಬಳಿಕ ತಮ್ಮ ಬ್ಯಾಟಿಂಗ್ ಗೇರ್ ಬದಲಿಸಿದ ಸ್ಮೃತಿ ಶತಕದತ್ತ ಹೆಜ್ಜೆ ಹಾಕಿದರು. ಸ್ಮೃತಿಗೆ ಶತಕ ಬಾರಿಸುವ ಅವಕಾಶವೂ ಇತ್ತು. ಆದರೆ ಅಶ್ವನಿ ಅವರ ಬೌಲಿಂಗ್ನಲ್ಲಿ ಬೌಂಡರಿ ಬಾರಿಸಲು ಯತ್ನಿಸಿದ ಸ್ಮೃತಿ ಪಾಯಿಂಟ್ನಲ್ಲಿ ನಿಂತಿದ್ದ ಲೂಸಿ ಹ್ಯಾಮಿಲ್ಟನ್ಗೆ ಕ್ಯಾಚ್ ನೀಡಿದರು.
ಲೂಸಿ ಹ್ಯಾಮಿಲ್ಟನ್ ತಮ್ಮ ಬಲಕ್ಕೆ ಜಿಗಿದು ಅತ್ಯದ್ಭುತ ಕ್ಯಾಚ್ ತೆಗೆದುಕೊಳ್ಳುವ ಮೂಲಕ ಸ್ಮೃತಿ ಮಂಧಾನ ಮಹಿಳಾ ಪ್ರೀಮಿಯರ್ ಲೀಗ್ನ ಮೊಟ್ಟ ಮೊದಲ ಶತಕ ಬಾರಿಸುವುದನ್ನು ತಪ್ಪಿಸಿದರು. ಅಂತಿಮವಾಗಿ ಸ್ಮೃತಿ 61 ಎಸೆತಗಳಲ್ಲಿ 13 ಬೌಂಡರಿ ಹಾಗೂ 3 ಸಿಕ್ಸರ್ಗಳ ಸಹಿತ 96 ರನ್ ಬಾರಿಸಿದರು.
ಬಿಗ್ಬಾಸ್ ಕನ್ನಡ ಸೀಸನ್ 12 (Bigg Boss Kannada) ಮುಗಿಯಲು ಒಂದು ದಿನ ಸಹ ಬಾಕಿ ಇಲ್ಲ. ಸದ್ಯಕ್ಕೆ ಮನೆಯಲ್ಲಿ ಆರು ಮಂದಿ ಸ್ಪರ್ಧಿಗಳಿದ್ದು ಆರರಲ್ಲಿ ಒಬ್ಬರು ವಿನ್ನರ್ ಆಗಲಿದ್ದಾರೆ. ಪ್ರೇಕ್ಷಕರು ಈಗಾಗಲೇ ತಮ್ಮಿಷ್ಟದ ಸ್ಪರ್ಧಿಗೆ ಮತ ಚಲಾಯಿಸುತ್ತಿದ್ದಾರೆ. ಭಾನುವಾರ ಬೆಳಿಗ್ಗೆ 10 ಗಂಟೆಯ ವರೆಗೆ ತಮ್ಮಿಷ್ಟದ ಸ್ಪರ್ಧಿಗೆ ಮತ ಚಲಾವಣೆ ಮಾಡಬಹುದಾಗಿರುತ್ತದೆ. ಯಾವ ಸ್ಪರ್ಧಿಗೆ ಹೆಚ್ಚು ಮತಗಳು ಬಂದಿರುತ್ತವೆಯೋ ಆ ಸ್ಪರ್ಧಿಯನ್ನು ವಿಜೇತರಾಗಿ ಘೋಷಣೆ ಮಾಡಲಾಗುತ್ತದೆ. ಆದರೆ ಈ ಬಾರಿ ಬಿಗ್ಬಾಸ್ ಕನ್ನಡ 12 ಈ ವಿಷಯದಲ್ಲಿ ದಾಖಲೆಯನ್ನೇ ಬರೆದಿದೆ. ವೋಟಿಂಗ್ ಲೈನ್ ಕ್ಲೋಸ್ ಆಗಲು ಇನ್ನೂ 12 ಗಂಟೆ ಇರುವಾಗಲೇ ಕೇವಲ ಒಬ್ಬ ಸ್ಪರ್ಧಿಗೆ 37 ಕೋಟಿಗೂ ಹೆಚ್ಚು ಮತಗಳು ಬಂದಿವೆ.
ಸ್ವತಃ ಸುದೀಪ್ ಅವರು ಶನಿವಾರದ ಎಪಿಸೋಡ್ನಲ್ಲಿ ಈ ವಿಷಯ ಹೇಳಿದ್ದಾರೆ. ಕೇವಲ ಒಬ್ಬ ಸ್ಪರ್ಧಿಗೆ 37 ಕೋಟಿ ಮತಗಳು ಬಂದಿವೆ ಎಂದಿದ್ದಾರೆ. ಇದು ಎಷ್ಟು ದೊಡ್ಡ ಸಂಖ್ಯೆ ಎಂಬುದನ್ನು ಉದಾಹರಣೆಯನ್ನು ಸಹ ಸುದೀಪ್ ನೀಡಿದರು. ಕಳೆದ ಸೀಸನ್ ಅಂದರೆ 11ನೇ ಸೀಸನ್ನಲ್ಲಿ ವಿನ್ನರ್ ಆದವರರಿಗೆ 5 ಕೋಟಿ ಮತಗಳು ಬಂದಿದ್ದವು, ಆದರೆ ಈ ಬಾರಿ ಗೆಲ್ಲಲಿರುವ ಸ್ಪರ್ಧಿಗೆ ಅದರ ಆರು ಪಟ್ಟು ಹೆಚ್ಚು ಮತಗಳು ಈಗಾಗಲೇ ಬಂದು ಬಿಟ್ಟಿದೆ. ನಾಳೆಯ ವೇಳೆಗೆ ಈ ಅಂತರ ಇನ್ನೂ ಹೆಚ್ಚಾಗಲಿದೆ.
ಸುದೀಪ್ ಅವರು ಈ ಬಗ್ಗೆ ಸ್ಪರ್ಧಿಗಳೊಟ್ಟಿಗೆ ಮಾತನಾಡುತ್ತಾ, ಕಳೆದ ಬಾರಿಯ ವಿನ್ನರ್ಗೆ ಐದು ಕೋಟಿ ಮತಗಳು ಬಂದಿದ್ದವು ಈಗ ಎಷ್ಟು ಬಂದಿರಬಹುದು ಊಹಿಸಿ ಎಂದಾಗ ಗಿಲ್ಲಿ ಸೇರಿ ಇನ್ನೂ ಕೆಲವರು 6 ಕೋಟಿ ಹೆಚ್ಚೆಂದರೆ 10 ಕೋಟಿ ಎಂದರು. ಆದರೆ ವೋಟಿಂಗ್ ಲೈನ್ ಕ್ಲೋಸ್ ಆಗಲು ಇನ್ನೂ 24 ಗಂಟೆಗಿಂತಲೂ ಹೆಚ್ಚು ಸಮಯ ಇರುವಾಗಲೇ ಒಬ್ಬ ಸ್ಪರ್ಧಿಗೆ ಅಂದರೆ ಗೆಲ್ಲಲಿರುವ ಸ್ಪರ್ಧಿಗೆ 37 ಕೋಟಿಗೂ ಹೆಚ್ಚು ಮತಗಳು ಬಂದಿವೆ ಎಂಬುದನ್ನು ಸುದೀಪ್ ಬಹಿರಂಗ ಪಡಿಸಿದ್ದಾರೆ.
ಇದು ಮಾತ್ರವೇ ಅಲ್ಲದೆ ಕಳೆದ ವರ್ಷ ಹಾಗೂ ಈ ವರ್ಷ ಈ ವರೆಗೆ ಆರನೇ ಸ್ಪರ್ಧಿಗೆ ಬಂದಿರುವ ಮತಗಳ ಅಂತರವನ್ನು ಸಹ ಸುದೀಪ್ ತೋರಿಸಿದರು. 11ನೇ ಸೀಸನ್ನ 6ನೇ ಸ್ಪರ್ಧಿಗೆ 64 ಲಕ್ಷ ಮತಗಳು ಬಂದಿದ್ದವು. ಆದರೆ ಈ ಸೀಸನ್ನಲ್ಲಿ ವೋಟಿಂಗ್ ಲೈನ್ ಕ್ಲೋಸ್ ಆಗಲು ಇನ್ನೂ ಹಲವು ಗಂಟೆಗಳು ಬಾಕಿ ಇರುವಾಗಲೇ 94 ಲಕ್ಷ ಮತಗಳು ಬಂದಿವೆ. ಈ ಸಂಖ್ಯೆ ಒಂದು ಕೋಟಿಗೂ ಹೆಚ್ಚಾಗುವ ಸಾಧ್ಯತೆ ಇದೆ.
ಮತ್ತೊಂದು ವಿಷಯವನ್ನು ಸಹ ಸುದೀಪ್ ಅವರು ಸ್ಪರ್ಧಿಗಳಿಗೆ ಹೇಳಿದರು. ಗೆಲ್ಲಲಿರುವ ಸ್ಪರ್ಧಿಗೆ ಈಗಾಗಲೇ 37 ಕೋಟಿಗೂ ಹೆಚ್ಚು ಮತಗಳು ಬಂದಿವೆ ಆದರೂ ಸಹ ಮೊದಲ ಸ್ಪರ್ಧಿಗೂ ಎರಡನೇ ಸ್ಪರ್ಧಿಗೂ ಮತಗಳ ಅಂತರ ಬಹಳ ಕಡಿಮೆ ಇದೆ ಎಂದಿದ್ದಾರೆ. ಆ ಮೂಲಕ ಸ್ಪರ್ಧೆ ಇನ್ನೂ ಕಠಿಣವಾಗಿದೆ ಎಂದಿದ್ದಾರೆ. ಮಾತ್ರವಲ್ಲದೆ, ನೀವು (ಸ್ಪರ್ಧಿಗಳು) ಏನು ಪಡೆದುಕೊಂಡಿದ್ದೀರೆಂದರೆ ಎಂಬುದಕ್ಕೆ ಇದು ಸಾಕ್ಷಿ. ಮೊದಲೆಲ್ಲ ಜನ ನೋಡುತ್ತಿದ್ದರು ಆದರೆ ಮತ ಹಾಕುವವರ ಸಂಖ್ಯೆ ಕಡಿಮೆ ಇರುತ್ತಿತ್ತು, ಆದರೆ ಈಗ ಜನರ ಇನ್ವಾಲ್ವ್ಮೆಂಟ್ ಹೆಚ್ಚಾಗಿದೆ. ಪ್ರತಿಯೊಬ್ಬರೂ ವೋಟ್ ಹಾಕುತ್ತಿದ್ದಾರೆ. ಬಿಗ್ಬಾಸ್ ನಮ್ಮ ಜೀವನದ ಭಾಗ ಅಂದುಕೊಂಡಿದ್ದಾರೆ. ಈ ಬಿಗ್ಬಾಸ್ ವೇದಿಕೆ ಸಹ ದಿನೇ ದಿನೇ ದೊಡ್ಡದಾಗುತ್ತಿದೆ. ಭಾಗವಹಿಸಿದವರನ್ನು ಎಲ್ಲಿಗೋ ಕರೆದೊಯ್ಯುತ್ತಿದೆ, ಹಲವು ಅವಕಾಶಗಳನ್ನು ನೀಡುತ್ತಿದೆ. ಈ ರೀತಿಯ ಅವಕಾಶ ಬೇರೆ ಯಾವ ರಿಯಾಲಿಟಿ ಶೋನಲ್ಲೂ ಸಿಗುವುದಿಲ್ಲ ಎಂದರು ಸುದೀಪ್.
ಗಿಲ್ಲಿ, ಅಶ್ವಿನಿ, ರಕ್ಷಿತಾ, ಧನುಶ್, ಕಾವ್ಯಾ, ರಘು ಅವರುಗಳ ಅಭಿಮಾನಿಗಳು, ಗೆಳೆಯರುಗಳು ಈಗಾಗಲೇ ಸ್ಪರ್ಧಿಗಳ ಬಗ್ಗೆ ಅಭಿಯಾನ ಆರಂಭಿಸಿದ್ದು ಮತಗಳನ್ನು ಹಾಕಿಸುತ್ತಿದ್ದಾರೆ. ಮತ ಹಾಕುವಂತೆ ಪ್ರಚಾರ ಮಾಡುತ್ತಿದ್ದಾರೆ. ಗಿಲ್ಲಿಗಾಗಿ ಹಲವೆಡೆ ಅಭಿಮಾನಿಗಳು ಮತ ಅಭಿಯಾನ ಮಾಡುತ್ತಿರುವುದು ಇತ್ತೀಚೆಗೆ ಸಖತ್ ಸುದ್ದಿ ಆಗಿತ್ತು.
ಬಿಗ್ಬಾಸ್ ನಲ್ಲಿ (Bigg Boss) ಈ ವಾರ ಫಿನಾಲೆ ವಾರ ಆಗಿದ್ದ ಕಾರಣ ಯಾವುದೇ ಟಾಸ್ಕ್ಗಳು ಇರಲಿಲ್ಲ ಉಳಿದ ಆರು ಮಂದಿ ಸ್ಪರ್ಧಿಗಳು ಆರಾಮವಾಗಿ ಮಾತನಾಡುತ್ತಾ ಎಂಜಾಯ್ ಮಾಡುತ್ತಾ ಕಾಲ ಕಳೆದರು. ಈ ವಾರ ಮನೆಯಲ್ಲಿ ಯಾವ ಜಗಳವೂ ಸಹ ಇರಲಿಲ್ಲ. ಆದರೆ ವಾರದ ಆರಂಭದಲ್ಲಿ ಬಿಗ್ಬಾಸ್, ಸ್ಪರ್ಧಿಗಳಿಗೆ ಅವರ ಆಸೆ ಕೇಳಿದ್ದರು. ಆಗ ಗಿಲ್ಲಿ, ತಮಗೆ ನಲ್ಲಿ ಮೂಳೆ ತಿನ್ನುವ ಆಸೆ ಆಗಿದೆ ಎಂದಿದ್ದರು. ನಲ್ಲಿ ಮೂಳೆ ತಿಂದು ನಿದ್ದೆ ಮಾಡಬೇಕು ಆಗ ನಾಯಿಗಳು ಬೊಗಳಬಾರದು ಎಂದಿದ್ದರು. ಅದರಂತೆ ಬಿಗ್ಬಾಸ್ ಸಹ ನಲ್ಲಿ ಮೂಳೆ ಕಳಿಸಿದ್ದರು. ಆದರೆ ಅದಾದ ಕೆಲವೇ ದಿನಗಳಲ್ಲಿ ಗಿಲ್ಲಿಗೆ ನಲ್ಲಿ ಮೂಳೆ ಮೇಲೆ ಆಸೆಯೇ ಹೊರಟು ಹೋಗಿದೆ.
ನಲ್ಲಿ ಮೂಳೆ ಕಳಿಸಿದಾಗ ಗಿಲ್ಲಿ ಕಳಿಸಿದ್ದ ಅಷ್ಟೂ ನಲ್ಲಿ ಮೂಳೆಯನ್ನು ಒಬ್ಬರೇ ತಿಂದು ಬಿಟ್ಟರು. ಇತರೆ ಸ್ಪರ್ಧಿಗಳು ಎಚ್ಚರಿಕೆ ನೀಡಿದರೂ ಸಹ ಗಿಲ್ಲಿ ಲೆಕ್ಕ ಮಾಡದೆ ಒಂದೇ ಸಮನೆ ತಿಂದು ಮುಗಿಸಿದರು. ಇದರಿಂದಾಗಿ ಅವರಿಗೆ ಬೇಧಿ ಶುರುವಾಗಿತ್ತು. ಅದರಿಂದ ಬಹಳ ಕಷ್ಟಪಟ್ಟರು. ಎದೆ ಉರಿ ಪ್ರಾರಂಭ ಆಗಿತ್ತು.
ಇಂದು (ಶನಿವಾರ) ಸುದೀಪ್ ಅವರು ಗಿಲ್ಲಿಗೆ ಈ ವಿಷಯವಾಗಿ ಕೇಳಿದ್ದಕ್ಕೆ, ಅಯ್ಯೋ ನಲ್ಲಿ ಮೂಳೆ ಸಹವಾಸವೇ ಸಾಕು ಎನಿಸಿಬಿಟ್ಟಿದೆ ಎಂದರು. ಮತ್ತೊಮ್ಮೆ ನಲ್ಲಿ ಮೂಳೆ ಕಳಿಸಿಕೊಡುತ್ತೇನೆ ಎಂದರೂ ಸಹ ಗಿಲ್ಲಿ, ಬೇಡವೇ ಬೇಡ ಎಂದು ಗೋಗರೆದರು. ನಾನು ಮತ್ತೆ ನಲ್ಲಿ ಮೂಳೆ ತಿನ್ನಲ್ಲ, ಬೇಕಿದ್ದರೆ ಊಟ ಬಿಡುತ್ತೀನಿ ನಲ್ಲಿ ಮೂಳೆ ತಿನ್ನಲ್ಲ ಎಂದು ಗೋಗರೆದರು ಗಿಲ್ಲಿ.
ಅಸಲಿಗೆ ಸುದೀಪ್, ಅದಕ್ಕೂ ಮುಂಚೆ ಮನೆಯವರಿಗೆಲ್ಲ ಈ ವಾರ ಪೂರ್ತಿ ಗಿಲ್ಲಿಯೇ ಅಡುಗೆ ಮಾಡಬೇಕು ಎಂದಿದ್ದರು. ಅದಕ್ಕೆ ಮನೆ ಸದಸ್ಯರು ಬೇಸರ ವ್ಯಕ್ತಪಡಿಸಿದ್ದರು. ಆದರೆ ಗಿಲ್ಲಿ ಮಾತ್ರ ಉತ್ಸಾಹ ಪ್ರದರ್ಶಿಸಿದ್ದರು. ಬಳಿಕ, ಗಿಲ್ಲಿಗೆ 30 ನಲ್ಲಿ ಮೂಳೆ ಕಳಿಸುತ್ತೇನೆ ಅಷ್ಟನ್ನೂ ತಿನ್ನಬೇಕು ಎಂದಾಗ ಮಾತ್ರ ಸಾಧ್ಯವೇ ಇಲ್ಲ ಎಂದರು. ಬೇಕಿದ್ದರೆ ಅಡುಗೆ ಮಾಡುವುದು ಬಿಡುತ್ತೀನಿ, ಆದರೆ ನಲ್ಲಿ ಮೂಳೆ ಮಾತ್ರ ಕಳಿಸಬೇಡಿ ಎಂದು ಗೋಗರೆದರು ಗಿಲ್ಲಿ. ಅತಿಯಾದರೆ ಅಮೃತವೂ ವಿಷ ಎಂಬುದಕ್ಕೆ ಗಿಲ್ಲಿಯ ನಲ್ಲಿ ಪ್ರಸಂಗ ಒಂದೊಳ್ಳೆ ಉದಾಹರಣೆ.