Headlines

ಆಟವಾಡುತ್ತಾ ಪಾತ್ರೆಯೊಳಗೆ ಸಿಲುಕಿದ್ದ ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು! – Kannada News | Thiruvananthapuram: Toddler Saved from Pot by Brave Kerala Rescuers

ತಿರುವನಂತಪುರಂ, ಏ.24: ಆಟವಾಡುತ್ತಿದ್ದಾಗ ಪಾತ್ರೆಯೊಳಗೆ ಸಿಲುಕಿಕೊಂಡಿದ್ದ ಪುಟ್ಟ ಮಗುವೊಂದನ್ನು ಕೇರಳದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಅತ್ಯಂತ ನಾಜೂಕಾಗಿ ರಕ್ಷಿಸಿದ್ದಾರೆ. ಇವರ ಈ ಸಮಯೋಚಿತ ಕಾರ್ಯಕ್ಕೆ ಈಗ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಮನೆಯಲ್ಲಿ ಆಟವಾಡುತ್ತಿದ್ದ ಎರಡು ವರ್ಷದ ಮಗು ಅಡುಗೆ ಮನೆಯಲ್ಲಿದ್ದ ದೊಡ್ಡದಾದ ಅಲ್ಯೂಮಿನಿಯಂ ಪಾತ್ರೆಯೊಳಗೆ ಇಳಿದಿದೆ. ಆದರೆ, ಹೊರಬರಲು ಪ್ರಯತ್ನಿಸಿದಾಗ ಮಗುವಿನ ಸೊಂಟದ ಭಾಗ ಪಾತ್ರೆಯಲ್ಲಿ ಸಿಲುಕಿಕೊಂಡಿದೆ. ಮಗುವಿನ ಅಳು ಕೇಳಿ ಓಡಿ ಬಂದ ಪೋಷಕರು ಎಷ್ಟೇ ಪ್ರಯತ್ನಿಸಿದರೂ ಮಗುವನ್ನು ಹೊರತೆಗೆಯಲು…

Read More

ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು – Kannada News | Sadhu Kokila talks about Dr Rajkumar watch video

ಡಾ ರಾಜ್​ಕುಮಾರ್ (Dr Rajkumar) ಜಯಂತಿ ನಿಮಿತ್ತ ಗೀತ-ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರಾಜ್​ಕುಮಾರ್ ಕುಟುಂಬದ ಸದಸ್ಯರ ಜೊತೆಗೆ ಶಾಸಕ ಗೋಪಾಲಯ್ಯ ಮತ್ತು ಚಿತ್ರರಂಗದ ಕೆಲ ಗಣ್ಯರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ನಟ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರೂ ಆಗಿರುವ ಸಾಧು ಕೋಕಿಲ ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅಣ್ಣಾವ್ರ ಬಗ್ಗೆ ಮಾತನಾಡಿದರು. ನಾವೆಲ್ಲ, ಅಣ್ಣಾವ್ರನ್ನು ಒಮ್ಮೆ ಮುಟ್ಟಲು ಕಾಯುತ್ತಿದ್ದೆವು. ಅವರ ಮಾತು, ಅವರ ನಡೆ-ನುಡಿ, ಅವರ ಮೈಕಟ್ಟು ಎಲ್ಲವೂ ಅದ್ಭುತ. ಅವರ ಮೈಯ್ಯಂತೂ ರೇಷ್ಮೆಯಂತೆ ನುಣುಪಾಗಿ ಇರುತ್ತಿತ್ತು ಎಂದು…

Read More

ಕೊಲೆಗಾರನಿಗೆ ನಾಯಕನ ಪಟ್ಟ: ‘ಲಾರೆನ್ಸ್ ಆಫ್ ಪಂಜಾಬ್’ ಸಾಕ್ಷ್ಯಚಿತ್ರ ನಿಷೇಧ – Kannada News | Lawrence of Punjab Dacuseries banned by Central government

‘ನಾಯಕ’ ಎಂದರೆ ಒಳ್ಳೆಯವ, ಮಹಿಳೆಯರ ಘನತೆ ಕಾಪಾಡುವವ, ಶಿಷ್ಟರ ರಕ್ಷಣೆ ಮಾಡುವಾತ, ಸುಳ್ಳು ಹೇಳದವ, ಅನ್ಯಾಯದ ವಿರದ್ಧ ಹೋರಾಡುವವ, ಹಣಕ್ಕಾಗಿ ತನ್ನ ಆದರ್ಶ ತ್ಯಜಿಸದವ, ಹಿಂಸೆಯ ವಿರುದ್ಧ ನಿಲ್ಲುವವ. ಆದರೆ ಇತ್ತೀಚೆಗಿನ ಸಿನಿಮಾಗಳಲ್ಲಿ ‘ನಾಯಕ’ ಎಂದರೆ ರೌಡಿ, ಮಹಿಳಾ ಪೀಡಕ, ಹಿಂಸೆಯನ್ನು ಎಂಜಾಯ್ ಮಾಡುವವ ಎಂದಾಗಿದೆ. ಆದರೆ ಈಗ ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗಿ, ನಿಜ ಜೀವನದಲ್ಲಿ ರೌಡಿ, ಭೂಗತ ಪಾತಕಿ, ಕೊಲೆಗಾರರ ಆಗಿರುವವನನ್ನು ‘ನಾಯಕ’ನನ್ನಾಗಿಸಲಾಗುತ್ತಿದೆ. ಇಂಥಹದೇ ಥೀಮ್​​ನ ಒಂದು ಡಾಕ್ಯು ಸೀರೀಸ್ ಒಂದು ಬಿಡುಗಡೆ…

Read More

ಕ್ಯಾನ್ಸರ್ ಸಂಬಂಧಿತ ಚಿಕಿತ್ಸೆಗೆ ದಾಖಲಾಗಿದ್ದ ವೃದ್ಧೆ ಸಾವು! ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಆರೋಪ – Kannada News | Ballari Hospital Negligence: Elderly Cancer Patient Dies Post Surgery, Family alleges

ಕ್ಯಾನ್ಸರ್ ಸಂಬಂಧಿತ ಚಿಕಿತ್ಸೆಗೆ ದಾಖಲಾಗಿದ್ದ ವೃದ್ಧೆ ಸಾವು! ಬಳ್ಳಾರಿ, ಏಪ್ರಿಲ್ 24: ಜಿಲ್ಲೆಯ ಬಿಎಂಇಆರ್‌ಸಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ (Cancer) ಚಿಕಿತ್ಸೆಗೆ ದಾಖಲಾಗಿದ್ದ ವೃದ್ಧೆ ಸಾವನ್ನಪ್ಪಿದ ಘಟನೆ ವಿವಾದಕ್ಕೆ ಕಾರಣವಾಗಿದ್ದು, ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಆಪರೇಷನ್ ನಂತರ ಸೂಕ್ತ ಔಷಧಿ, ಇಂಜೆಕ್ಷನ್ ನೀಡದ ಕಾರಣದಿಂದ ವೈದ್ಧೆ ಸಾವನ್ನಪ್ಪಿದ್ದಾರೆ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ದರೆ ಅಕ್ಕಮ್ಮ ಬದುಕುತ್ತಿದ್ದರು ಎಂದು ಕುಟುಂಬಸ್ಥರ ಅಳಲು ಬಾಯಿಯ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ…

Read More

Video: ಮರಳಿ ಬಾಲ್ಯವನ್ನು ನೆನಪಿಸುವಂತಿದೆ ಈ ದೃಶ್ಯ; ಪಾಠದ ನಡುವೆ ತಿಂಡಿ ತಿಂದ ಪುಟಾಣಿ – Kannada News | A little boy who stole and ate a snack between lessons

ಪುಟ್ಟ ಮಕ್ಕಳು (little kids) ಕ್ಲಾಸ್ ರೂಮ್ ನಲ್ಲಿ ಶಿಕ್ಷಕರಿಗೆ ತಿಳಿಯದಂತೆ ಚಾಕಲೇಟ್ ತಿನ್ನೋದು, ಟಿಫನ್ ಬಾಕ್ಸ್ ತೆರೆದು ತಿಂಡಿ ತಿನ್ನೋದು ಹೀಗೆ ಇನ್ನಿತ್ತರ ಚಟುವಟಿಕೆಯಲ್ಲಿ ತೊಡಗಿ ಸಿಕ್ಕಿ ಬೀಳುತ್ತಾರೆ. ನೀವು ಕೂಡ ಶಿಕ್ಷಕರಿಗೆ ಚಳ್ಳೆ ಹಣ್ಣು ತಿನ್ನಿಸಿರಬಹುದು. ಕೆಲವೊಮ್ಮೆ ಟೀಚರ್ ಕೈಯಲ್ಲಿ ಸಿಕ್ಕಿ ಬಿದ್ದು ನೆಪಗಳನ್ನು ಹೇಳಿದ್ದೀರಬಹುದು. ಈ ಪುಟಾಣಿಯದ್ದು ಅದೇ ಕಥೆ. ಪುಟಾಣಿಯು ಶಿಕ್ಷಕರನ್ನು ಯಾಮಾರಿಸುವ ವಿಡಿಯೋ ವೈರಲ್ ಆಗಿದೆ. ಟೀಚರ್ ಹೋಮ್ ವರ್ಕ್ ಮಾಡೋದಕ್ಕೆ ಹೇಳಿದ್ರೆ ಈ ಪುಟ್ಟ ಹುಡುಗ ಟಿಫನ್ ಬಾಕ್ಸ್…

Read More

Vastu Mirrors: ಮನೆಯ ಈ ಭಾಗಗಳಲ್ಲಿ ತಪ್ಪಿಯೂ ಕನ್ನಡಿ ಇಡಬೇಡಿ; ವಾಸ್ತು ತಜ್ಞರ ಸಲಹೆ ಇಲ್ಲಿದೆ – Kannada News | Vastu Mirrors: Avoid These Key Placement Mistakes for Positive Home Energy

ಮನೆಯಲ್ಲಿರುವ ಪ್ರತಿಯೊಂದು ವಸ್ತುವೂ ತನ್ನದೇ ಆದ ಶಕ್ತಿಯನ್ನು ಹೊಂದಿರುತ್ತದೆ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಇದರಲ್ಲಿ ಕನ್ನಡಿ ಅತ್ಯಂತ ಮುಖ್ಯವಾದುದು. ಸರಿಯಾದ ದಿಕ್ಕಿನಲ್ಲಿರುವ ಕನ್ನಡಿ ಮನೆಯಲ್ಲಿ ಧನಾತ್ಮಕ ಶಕ್ತಿಯನ್ನು ಹೆಚ್ಚಿಸಿದರೆ, ತಪ್ಪು ಸ್ಥಳದಲ್ಲಿರುವ ಕನ್ನಡಿ ನಕಾರಾತ್ಮಕತೆಯನ್ನು ಆಹ್ವಾನಿಸುತ್ತದೆ. ಕನ್ನಡಿಗೆ ಸಂಬಂಧಿಸಿದಂತೆ ನೀವು ಮಾಡಬಾರದ ಕೆಲವು ಪ್ರಮುಖ ತಪ್ಪುಗಳು ಇಲ್ಲಿವೆ. ಹಾಸಿಗೆಯ ಮುಂದೆ ಕನ್ನಡಿ: ವಾಸ್ತು ಶಾಸ್ತ್ರದ ಪ್ರಕಾರ, ಮಲಗುವ ಕೋಣೆಯಲ್ಲಿ ಹಾಸಿಗೆಗೆ ನೇರವಾಗಿ ಎದುರಾಗಿ ಕನ್ನಡಿಯನ್ನು ಇಡಬಾರದು. ಮಲಗಿರುವಾಗ ನಿಮ್ಮ ಪ್ರತಿಬಿಂಬ ಕನ್ನಡಿಯಲ್ಲಿ ಕಂಡರೆ ಅದು ಆರೋಗ್ಯದ…

Read More

ಮೊಬೈಲ್ ಕೊಡದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ: ಪೊಲೀಸ್ ಕಮಿಷನರ್ ಹೇಳಿದ್ದೇನು ನೋಡಿ – Kannada News | Hubballi Tragedy: 14 Year Old Boy ends life After Mother Takes Away Mobile Phone; Police Chief Issues Advisory

ಮೊಬೈಲ್ ಕೊಡದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆImage Credit source: tv9 ಹುಬ್ಬಳ್ಳಿ, ಏಪ್ರಿಲ್ 24: ಮೊಬೈಲ್ ಗೇಮ್‌ಗೆ (Mobile Game) ದಾಸನಾಗಿದ್ದ ಬಾಲಕನೊಬ್ಬ ತಾಯಿ ಫೋನ್ ಕಿತ್ತುಕೊಂಡಿದ್ದಕ್ಕೆ ಮನನೊಂದು ನೇಣಿಗೆ ಶರಣಾಗಿರುವ ದಾರುಣ ಘಟನೆ ಹುಬ್ಬಳ್ಳಿಯ ಉದಯನಗರದಲ್ಲಿ ನಡೆದಿದೆ. 14 ವರ್ಷದ ಸಮರ್ಥ್ ಆತ್ಮಹತ್ಯೆ ಮಾಡಿಕೊಂಡ ಬಾಲಕ. ಉದಯನಗರದ ನಿವಾಸಿಯಾದ ಸಮರ್ಥ್ ಕಳೆದ ಕೆಲವು ದಿನಗಳಿಂದ ‘ಫ್ರೀಫೈರ್’ (Free Fire) ನಂತಹ ಆನ್‌ಲೈನ್ ಗೇಮ್‌ಗಳಿಗೆ ವಿಪರೀತ ಅಡಿಕ್ಟ್ ಆಗಿದ್ದ. ಗುರುವಾರ ರಾತ್ರಿ ಸತತವಾಗಿ ಗೇಮ್…

Read More

ರೈಲಿನ ಮೇಲೆ ಹತ್ತಿ ಹೈವೋಲ್ಟೇಜ್ ತಂತಿ ಸ್ಪರ್ಶಿಸಿ ಒಂದೇ ಕ್ಷಣದಲ್ಲಿ ಸುಟ್ಟು ಕರಕಲಾದ ವ್ಯಕ್ತಿ – Kannada News | Fatal Misstep: Youth Dies After Contact with Overhead Rail Wire in Darbhanga

ದರ್ಭಂಗ, ಏಪ್ರಿಲ್ 24: ಕೇವಲ ಒಂದು ಕ್ಷಣದ ಅಜಾಗರೂಕತೆ ಅಥವಾ ದುಸ್ಸಾಹಸ ಹೇಗೆ ಪ್ರಾಣಕ್ಕೆ ಕುತ್ತು ತರುತ್ತದೆ ಎಂಬುದಕ್ಕೆ ಈ ವೈರಲ್ ವಿಡಿಯೋ ಸಾಕ್ಷಿಯಾಗಿದೆ. ಬಿಹಾರದ ದರ್ಭಂಗದಲ್ಲಿ ವ್ಯಕ್ತಿಯೊಬ್ಬ ರೈಲಿನ ಮೇಲೇರಿ ನಡೆಯುವ ಸಾಹಸ ಮಾಡಲು ಹೋಗಿ ವಿದ್ಯುತ್ ತಂತಿ ಸ್ಪರ್ಶಿಸಿ ಪ್ರಾಣಬಿಟ್ಟಿದ್ದಾರೆ. ಸರಕು ರೈಲು ನಿಧಾನವಾಗಿ ಚಲಿಸುತ್ತಿದ್ದಾಗ ಯುವಕ ಬೋಗಿಯ ಮೇಲೆ ಹತ್ತಿದ್ದಾನೆ. ಇದನ್ನು ಗಮನಿಸಿದ ನಿಲ್ದಾಣದಲ್ಲಿದ್ದ ಜನರು ಮತ್ತು ಪ್ರಯಾಣಿಕರು, ಕೆಳಗಿಳಿಯಪ್ಪಾ, ಅಪಾಯವಿದೆ ಎಂದು ಪದೇ ಪದೇ ಕಿರುಚುತ್ತಾ ಎಚ್ಚರಿಕೆ ನೀಡಿದ್ದಾರೆ. ಆದರೆ, ಯಾವುದನ್ನೂ…

Read More

ಬಿಜೆಪಿ ಮಾಜಿ ಮುಖಂಡನ ಪುತ್ರನಿಂದ ಯುವತಿಗೆ ದೋಖಾ ಕೇಸ್​: ಹೈಕೋರ್ಟ್​​ನಿಂದ ಮಹತ್ವದ ಆದೇಶ – Kannada News | BJP Ex Leader’s Son Cheating Case: High Court Orders 75K Monthly Payment for Child and Mother

ಬೆಂಗಳೂರು, ಏಪ್ರಿಲ್​​ 24: ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಮಗುವಿಗೆ ಜನ್ಮ ನೀಡಿದ ಬಳಿಕ ವಂಚಿಸಿದ್ದ ಪುತ್ತೂರಿನ ಬಿಜೆಪಿ ಮಾಜಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ಮೇಲಿನ ಪ್ರಕರಣ ಸಂಬಂಧ ಹೈಕೋರ್ಟ್​​ ಮಹತ್ವದ ಆದೇಶ ನೀಡಿದೆ. ಪ್ರಕರಣ ರದ್ದು ಕೋರಿ ಕೃಷ್ಣ ಜೆ.ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಷರತ್ತಿನ ಮೇರೆಗೆ ಕೃಷ್ಣ ಜೆ.ರಾವ್ ವಿರುದ್ಧದ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದೆ….

Read More

ದಾವಣಗೆರೆ ಉಪಚುನಾವಣೆ ಅಭ್ಯರ್ಥಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ; ಮನೆಗೆ ನುಗ್ಗಿ ಅಟ್ಯಾಕ್ ಮಾಡಿದ ಗ್ಯಾಂಗ್! – Kannada News | Shahbaz Khan Attacked in Bengaluru After Davangere By Election Return

ದಾವಣಗೆರೆ ಉಪಚುನಾವಣೆ ಅಭ್ಯರ್ಥಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಬೆಂಗಳೂರು, ಏಪ್ರಿಲ್ 24: ದಾವಣಗೆರೆ ಉಪಚುನಾವಣೆಯ (Byelection) ಅಭ್ಯರ್ಥಿ,‘ಯಂಗ್ ಸ್ಟಾರ್ ಎಂಪೋರಿಯಂ’ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಶಹಬಾಜ್ ಖಾನ್​ಗೆ ಈ ಹಿಂದೆ ಹಲ್ಲೆ ನಡೆಸಿ, ಕಸದ ಬುಟ್ಟಿಗೆ ಹಾಕುತ್ತೇವೆ ಎಂದು ಬೆದರಿಕೆಯೊಂದು ಬಂದಿತ್ತು. ಅದರಂತೆಯೇ ನಗರದ ಸುದ್ದುಗುಂಟೆ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅವರ ಮೇಲೆ ದಾಳಿ ನಡೆಸಿದ ಘಟನೆ ನಡೆದಿದ್ದು, ಸುದ್ದುಗುಂಟೆ ಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಪಕ್ಷದಿಂದ ವಜಾಗೊಳಿಸಿದ್ದಕ್ಕೆ ಗ್ಯಾಂಗ್ ಕಟ್ಟಿಕೊಂಡು…

Read More