Category Archives: Blog

Your blog category

National Panchayati Raj Day 2026: ಏಪ್ರಿಲ್ 24 ರಂದೇ ರಾಷ್ಟ್ರೀಯ ಪಂಚಾಯತ್‌ ರಾಜ್‌ ದಿನ ಆಚರಿಸುವುದು ಏಕೆ? – Kannada News | National Panchayati Raj Day 2026: What are the history, significance of this day

ದೇಶದ ಅಭಿವೃದ್ಧಿ ಹಳ್ಳಿಗಳಿಂದಲೇ ಆರಂಭವಾಗಬೇಕು. ಗ್ರಾಮಕ್ಕೆ ಧಕ್ಕೆ ಬಂದರೆ ಇಡೀ ಭಾರತಕ್ಕೆ ಧಕ್ಕೆ ಬರಬಹುದು ಎನ್ನುವ ಗಾಂಧೀಜಿಯವರ ಮಾತಿದೆ. ಹೀಗಾಗಿ ಒಂದು ದೇಶವು ಅಭಿವೃದ್ಧಿಯತ್ತ ಸಾಗಬೇಕಾದರೆ ಹಳ್ಳಿಗಳ ಅಭಿವೃದ್ಧಿಯು ಮುಖ್ಯ. ಈ ಗ್ರಾಮಗಳ ಅಭಿವೃದ್ಧಿಗೆ ಪಂಚಾಯತ್‌ ರಾಜ್‌ ವ್ಯವಸ್ಥೆ ಬಹಳ ಮುಖ್ಯವಾದದ್ದಾಗಿದೆ. ಗ್ರಾಮ ಪಂಚಾಯತ್ ಪಾತ್ರವನ್ನು ಗುರುತಿಸುವುದು ಹಾಗೂ ಹಳ್ಳಿಗಳ ಅಭಿವೃದ್ಧಿ ಹೆಚ್ಚು ಒತ್ತು ನೀಡುವುದಾಗಿದೆ. ಈ ವ್ಯವಸ್ಥೆ ಜಾರಿಗೆ ಬಂದ ಸವಿ ನೆನಪಿಗಾಗಿ ಪ್ರತಿ ವರ್ಷ ಏಪ್ರಿಲ್ 24 ರಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನವನ್ನು (National Panchayati Raj Day) ಆಚರಿಸಲಾಗುತ್ತದೆ.

ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಇತಿಹಾಸವೇನು?

ಗ್ರಾಮೀಣ ಮಟ್ಟದಲ್ಲಿ ಅಧಿಕಾರ ವಿಕೇಂದ್ರೀಕರಣ, ಪಂಚಾಯತ್ ರಾಜ್‌ನ 1992ರ ಸಂವಿಧಾನ ತಿದ್ದುಪಡಿಯು (73ನೇ ತಿದ್ದುಪಡಿ) 1993ರ ಏಪ್ರಿಲ್ 24ರಂದು ಜಾರಿಗೆ ಬಂದವು. ಹೀಗಾಗಿ ಪಂಚಾಯತ್ ರಾಜ್ ಸಚಿವಾಲಯವು ಪ್ರತಿವರ್ಷ ಏಪ್ರಿಲ್ 24ರಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನವನ್ನಾಗಿ ಆಚರಿಸಲಾಗುತ್ತಿದೆ.

ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಮಹತ್ವ, ಆಚರಣೆ ಹೇಗೆ?

ಪಂಚಾಯತ್‌ ರಾಜ್‌ ವ್ಯವಸ್ಥೆಯು ಗ್ರಾಮಗಳ ಅಭಿವೃದ್ಧಿಯತ್ತ ಹೆಚ್ಚು ಗಮನ ಹರಿಸುತ್ತದೆ. ಹಾಗೂ ಆಡಳಿತ ವ್ಯವಸ್ಥೆಯಲ್ಲಿ ಗ್ರಾಮೀಣ ಪ್ರಜೆಗಳ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಜಾರಿಗೆ ತಂದ ವ್ಯವಸ್ಥೆಯಾಗಿದೆ. ಗ್ರಾಮೀಣ ಭಾರತದಲ್ಲಿ ಪ್ರಜಾಪ್ರಭುತ್ವದ ತಳಹದಿಯನ್ನು ಬಲಪಡಿಸುವುದು, ಗ್ರಾಮ ಪಂಚಾಯತ್‌ಗಳ ಪಾತ್ರವನ್ನು ಗುರುತಿಸುವುದು, ಪಂಚಾಯತ್‌ ರಾಜ್‌ ಸಂಸ್ಥೆಗಳು ಹಳ್ಳಿಗಳ ಅಭಿವೃದ್ಧಿಗೆ ಇನ್ನಷ್ಟು ಕೆಲಸ ಮಾಡುವಂತೆ ಪ್ರೋತ್ಸಾಹಿಸುವುದು ಈ ದಿನದ ಉದ್ದೇಶವಾಗಿದೆ.

ಇದನ್ನೂ ಓದಿ: ನಮ್ಮ ಬದುಕಿಗೆ ಇರುವುದೊಂದೇ ಪೃಥ್ವಿ; ಭೂಮಿ ತಾಯಿಯ ಸಂರಕ್ಷಣೆ ನಮ್ಮೆಲ್ಲರ ಹೊಣೆ

ಈ ವಿಶೇಷ ದಿನದಂದು ಕೇಂದ್ರ ಸರಕಾರವು ಪ್ರಮುಖವಾಗಿ ನ್ಯಾನ್‌ಜಿ ದೇಶಮುಖ್‌ ರಾಷ್ಟ್ರೀಯ ಗೌರವ ಗ್ರಾಮ ಸಭಾ ಪುರಸ್ಕಾರ್‌, ದೀನ್‌ ದಯಾಳ್‌ ಉಪಾಧ್ಯಾಯ್‌ ಪಂಚಾಯತ್‌ ಸಶಕ್ತೀಕರಣ ಪುರಸ್ಕಾರ, ಮಕ್ಕಳ ಸ್ನೇಹಿ ಗ್ರಾಮ ಸಭಾ ಪುರಸ್ಕಾರ, ಗ್ರಾ. ಪಂ. ಅಭಿವೃದ್ಧಿ ಯೋಜನಾ ಪುರಸ್ಕಾರವನ್ನು ನೀಡಿ ಉತ್ತಮವಾಗಿ ಕೆಲಸ ಮಾಡುವ ಗ್ರಾಮ ಪಂಚಾಯತ್ ನ್ನು ಗುರುತಿಸಿ ಗೌರವಿಸುತ್ತವೆ. ಈ ದಿನದಂದು ವಿವಿಧ ಜಾಗೃತಿ ಕಾರ್ಯಕ್ರಮಗಳು ಚಟುವಟಿಕೆಗಳು, ವಿಚಾರ ಸಂಕಿರಣಗಳು, ಕಾರ್ಯಗಾರಗಳು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ಇನ್ನಷ್ಟು ಜೀವನ ಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ – Kannada News | A Calm Start: PM Modi Seen by Hooghly River During Kolkata Visit

ಕೋಲ್ಕತ್ತಾ,ಏಪ್ರಿಲ್ 24: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿದು ಕೆಲವೇ ಗಂಟೆಗಳ ಬಳಿಕ ಪ್ರಧಾನಿ ಮೋದಿ ಕೋಲ್ಕತ್ತಾದ ಹೂಗ್ಲಿಯಲ್ಲಿ ದೋಣಿ ವಿಹಾರ ನಡೆಸಿದ್ದಾರೆ. ಸೂರ್ಯ ಉದಯಿಸುವ ಸಮಯದಲ್ಲಿ ಕೈಯಲ್ಲಿ ಕ್ಯಾಮರಾ ಹಿಡಿದು ಪ್ರಧಾನಿ ಮೋದಿ ವಿಹಾರಕ್ಕೆ ಹೊರಟಿರುವ ಚಿತ್ರಗಳನ್ನು ಅವರೇ ಹಂಚಿಕೊಂಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ 92.88ರಷ್ಟು ಮತದಾನ ದಾಖಲಾಗಿತ್ತು. ಪ್ರಧಾನಿ ಮೋದಿ ತಮ್ಮ ಎಕ್ಸ್​ ಖಾತೆಯಲ್ಲಿ ಮರದ ದೋಣಿಯ ಮೇಲೆ ಕ್ಯಾಮರಾ ಹಿಡಿದು ಕುಳಿತಿರುವುದನ್ನು ಕಾಣಬಹುದು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 10:21 am, Fri, 24 April 26

Source link

ತುಮಕೂರಿನಲ್ಲಿ ಸುಡುವ ಬಿಸಿಲಿಗೆ 35 ನವಿಲುಗಳು ಬಲಿ! ಹಕ್ಕಿ ಜ್ವರದ ಸೋಂಕು ಹರಡಿರುವ ಶಂಕೆ – Kannada News | Tumakuru Peacock Deaths: 35 Peacocks Die Amid Heatwave and Bird Flu Fears

ಸುಡುವ ಬಿಸಿಲಿಗೆ 35 ನವಿಲುಗಳು ಬಲಿ!Image Credit source: MediaForge AI

ತುಮಕೂರು, ಏಪ್ರಿಲ್ 24: ಜಿಲ್ಲೆಯಲ್ಲಿ ಬಿಸಿಲಿನ (Heat wave) ತಾಪಮಾನ ಏರುತ್ತಿರುವ ಹಿನ್ನೆಲೆಯಲ್ಲಿ ಈ ವಾರ ಬರೋಬ್ಬರಿ 35 ನವಿಲುಗಳು ಸಾವನ್ನಪ್ಪಿರುವ ಆತಂಕಕಾರಿ ಘಟನೆ ತುಮಕೂರಿನಲ್ಲಿ ನಡೆದಿದೆ. ನಗರದ ಹೊರವಲಯದ ಬೊಮ್ಮನಹಳ್ಳಿ ಮತ್ತು ಮಾಚೇನಹಳ್ಳಿ ಸುತ್ತಮುತ್ತಲಿನ ಸುಮಾರು 1 ಕಿಲೋಮೀಟರ್ ವ್ಯಾಪ್ತಿಯಲ್ಲಿ ಈ ಸಾವುಗಳು ಸಂಭವಿಸಿದ್ದು, ರಾಜ್ಯದಲ್ಲಿ ಹಕ್ಕಿ ಜ್ವರದ ಸೋಂಕು ಹರಡುತ್ತಿರುವುದೂ ಈ ಸಾವುಗಳಿಗೆ ಕಾರಣವಿರಬಹುದು ಎಂದು ಅನುಮಾನ ವ್ಯಕ್ತವಾಗಿದೆ.

ಸಾವಿಗೆ ನಿಖರ ಕಾರಣವೇನು?

ಅರಣ್ಯ ಇಲಾಖೆ ಹಾಗೂ ಪಶುವೈದ್ಯಕೀಯ ತಂಡಗಳು ಸ್ಥಳಕ್ಕೆ ಭೇಟಿ ನೀಡಿ ಮೃತ ಮಯೂರಗಳ ಶವಪರೀಕ್ಷೆ ನಡೆಸಿ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿವೆ. ವರದಿಗಳು ಇನ್ನೂ 48 ಗಂಟೆಗಳೊಳಗೆ ಲಭ್ಯವಾಗಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಪ್ರಾಥಮಿಕ ವರದಿ ಹೇಳುವಂತೆ ನವಿಲುಗಳ ಶ್ವಾಸಕೋಶದ ಮೇಲೆ ತೀವ್ರ ಪರಿಣಾಮ ಬೀರಿದೆ. ಅತಿಯಾದ ಶಾಖ ಮತ್ತು ನಿರ್ಜಲೀಕರಣವೇ ಸಾವಿಗೆ ಪ್ರಮುಖ ಕಾರಣ ಎಂದು ಕಂಡುಬಂದಿದ್ದರೂ, ಹಕ್ಕಿ ಜ್ವರದಂತಹ ಸಾಂಕ್ರಾಮಿಕ ರೋಗಗಳ ಸಾಧ್ಯತೆಯನ್ನು ನಾವು ತಳ್ಳಿಹಾಕುವಂತಿಲ್ಲ ಎಂದು ಅರಣ್ಯ ಅಧಿಕಾರಿ ತಿಳಿಸಿದ್ದಾರೆ.

ಕಳೆದ ವರ್ಷವೂ ಇಂತದ್ದೇ ಘಟನೆ!

ಮುಂಜಾಗ್ರತಾ ಕ್ರಮವಾಗಿ ಮೃತದೇಹಗಳು ಪತ್ತೆಯಾದ ಪ್ರದೇಶಗಳನ್ನು ಸ್ಯಾನಿಟೈಸ್ ಮಾಡಲಾಗಿದ್ದು, ಸ್ಥಳೀಯ ಜಲಮೂಲಗಳ ನೀರಿನ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ ಕೀಟನಾಶಕ ಮಿಶ್ರಿತ ಬೀಜಗಳನ್ನು ಸೇವಿಸಿ 20 ನವಿಲುಗಳು ಸಾವನ್ನಪ್ಪಿದ್ದವು. ಇದೀಗ ಅರಣ್ಯ ಇಲಾಖೆಯ ಆರು ಸದಸ್ಯರ ತಂಡವು ಈ ಸಾಮೂಹಿಕ ಸಾವಿನ ಹಿಂದಿನ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿಸಿದೆ. ಮುಂದಿನ 48 ಗಂಟೆಗಳಲ್ಲಿ ಪ್ರಯೋಗಾಲಯದ ವರದಿ ಲಭ್ಯವಾಗಲಿದ್ದು, ಸಾವಿನ ರಹಸ್ಯ ಹೊರಬೀಳಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿ, ಕತ್ತು ಸೀಳಿ ಫ್ಲಶ್ ಮಾಡಲು ಯತ್ನಿಸಿದ 19 ವರ್ಷದ ಯುವತಿಯ ಬಂಧನ – Kannada News | Bengaluru: Foxconn Worker Held After Newborn Found in Toilet; Shocking Details Emerge

ಬೆಂಗಳೂರು, ಏ.24 : ಸಿಲಿಕಾನ್ ಸಿಟಿಯ ಹೊಸೂರು ರಸ್ತೆಯಲ್ಲಿರುವ ಪ್ರಸಿದ್ಧ ಆಪಲ್ ಫೋನ್ ಉತ್ಪಾದನಾ ಘಟಕದ (ಫಾಕ್ಸ್‌ಕಾನ್) ಆವರಣದಲ್ಲಿ ಭ್ರೂಣವೊಂದು ಪತ್ತೆಯಾದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಘಟಕದಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಖಾನೆಯ ಶೌಚಾಲಯದ ಬ್ಲಾಕ್‌ನಲ್ಲಿ ಶುಚಿಗೊಳಿಸುವ ಸಿಬ್ಬಂದಿಗೆ ಭ್ರೂಣವೊಂದು ಪತ್ತೆಯಾಗಿತ್ತು. ಕೂಡಲೇ ಅವರು ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದು, ನಂತರ ಪೊಲೀಸರಿಗೆ ದೂರು ನೀಡಲಾಯಿತು.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯೊಬ್ಬಳನ್ನು ಬಂಧನ ಮಾಡಲಾಗಿದೆ. ಘಟನೆ ನಡೆದ ಸಮಯದಲ್ಲಿ ಶೌಚಾಲಯದ ಕಡೆಗೆ ಹೋದವರ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ, ಅಲ್ಲಿನ ಸಿಬ್ಬಂದಿಯೊಬ್ಬರ ಮೇಲೆ ಅನುಮಾನ ವ್ಯಕ್ತಪಡಿಸಿದರು. ಈ ಬಗ್ಗೆ ತನಿಖೆ ನಡೆಸಿದಾಗ ಪೊಲೀಸರಿಗೆ ಅಚ್ಚರಿಯ ವಿಚಾರವೊಂದು ತಿಳಿಯಿತು. 19 ವರ್ಷದ ಯುವತಿಯು ಈ ಕೃತ್ಯ ಎಸಗಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಆಕೆಯನ್ನು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಭ್ರೂಣವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಯುವತಿಯು ಗರ್ಭಪಾತ ಮಾಡಿಕೊಂಡಿದ್ದಾಳೆಯೇ ಅಥವಾ ಅಕ್ರಮ ಗರ್ಭಧಾರಣೆಯನ್ನು ಮುಚ್ಚಿಡಲು ಈ ಕೃತ್ಯ ಎಸಗಿದ್ದಾಳೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ಪ್ರೀತಿಸಿ ಮದುವೆಯಾದ ಎಂಜಿನಿಯರ್ ದಾರುಣ ಅಂತ್ಯ: ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ?

ಅಷ್ಟಕ್ಕೂ ಶೌಚಾಲಯದ ನಡೆದದ್ದೇನು?

ಸಿಲಿಕಾನ್ ಸಿಟಿಯಲ್ಲಿ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. 19 ವರ್ಷದ ಯುವತಿಯೊಬ್ಬಳು ಶೌಚಾಲಯದಲ್ಲಿ ನವಜಾತ ಶಿಶುವಿಗೆ ಜನ್ಮ ನೀಡಿ, ಅತ್ಯಂತ ಕ್ರೂರವಾಗಿ ಮಗುವಿನ ಕತ್ತು ಸೀಳಿ, ದೇಹವನ್ನು ಶೌಚಾಲಯದ ಗುಂಡಿಯಲ್ಲಿ ಫ್ಲಶ್ (Flush) ಮಾಡಲು ಯತ್ನಿಸಿದ್ದಳು. ಶೌಚಾಲಯಕ್ಕೆ ಹೋದ ಯುವತಿ ಅಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾಳೆ. ಬಳಿಕ ಮಗುವನ್ನು ಕೊಂದು ಸಾಕ್ಷ್ಯ ನಾಶಪಡಿಸಲು ಮಗುವಿನ ದೇಹವನ್ನು ಶೌಚಾಲಯದ ಪೈಪ್‌ ಒಳಗೆ ತಳ್ಳಲು ಪ್ರಯತ್ನಿಸಿದ್ದಾಳೆ.

ಈ ಕೃತ್ಯ ಬೆಳಕಿಗೆ ಬಂದಿದ್ದು ಹೇಗೆ?

ಶೌಚಾಲಯದ ಪೈಪ್ ಬ್ಲಾಕ್ ಆಗಿದ್ದರಿಂದ ಶುಚಿಗೊಳಿಸುವ ಸಿಬ್ಬಂದಿ ಪರೀಕ್ಷಿಸಿದಾಗ ಮಗುವಿನ ದೇಹ ಪತ್ತೆಯಾಗಿದೆ. ಇದನ್ನು ಕಂಡು ಬೆಚ್ಚಿಬಿದ್ದ ಸಿಬ್ಬಂದಿ ಕೂಡಲೇ ಆಡಳಿತ ಮಂಡಳಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಹಾಗೂ ಅಲ್ಲಿನ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿದಾಗ 19 ವರ್ಷದ ಯುವತಿಯ ಮೇಲೆ ಅನುಮಾನ ವ್ಯಕ್ತವಾಗಿತ್ತು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:08 am, Fri, 24 April 26

Source link

ಪ್ರಶಾಂತ್-ಕೃತಿ ನಿಶ್ಚಿತಾರ್ಥದಲ್ಲಿ ಸೆಲೆಬ್ರಿಟಿ ದಂಡು; ಇಲ್ಲಿವೆ ಸುಂದರ ಫೋಟೋಗಳು

Source link

ಐಆರ್​ಎಸ್ ಅಧಿಕಾರಿ ಮಗಳ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ, ಆರೋಪಿಯ ಕ್ರೌರ್ಯ, ಉಸಿರಿರುವವರೆಗೂ ಹೋರಾಡಿದ್ದ ಯುವತಿ – Kannada News | IRS Officer’s Daughter Brutally Murdered in Delhi: Civil Services Aspirant Fought Till End

ನವದೆಹಲಿ, ಏಪ್ರಿಲ್ 24:  ತನ್ನ ಮನೆಯ ಕೊಠಡಿಯಲ್ಲಿ ಕುಳಿತು ದೇಶ ಸೇವೆ ಮಾಡುವ ಕನಸಿನೊಂದಿಗೆ ಸಿವಿಲ್ ಸರ್ವೀಸಸ್ ಪರೀಕ್ಷೆಗೆಂದು ಓದುತ್ತಿದ್ದ 22 ವರ್ಷದ ಯುವತಿಯ ಕೊಲೆ(Murder) ಪ್ರಕರಣದಲ್ಲಿ ಆಘಾತಕಾರಿ ಸತ್ಯಗಳು ಹೊರಬರುತ್ತಿವೆ. ಮರಣೋತ್ತರ ಪರೀಕ್ಷೆಯ ವರದಿಯು ಆಕೆ ಸಾವನ್ನಪ್ಪುವ ಮೊದಲು ಎದುರಿಸಿದ ನರಕಯಾತನೆಯನ್ನು ಎತ್ತಿ ತೋರಿಸಿದೆ. ಈ ಘಟನೆ ದೆಹಲಿಯಲ್ಲಿ ನಡೆದಿದೆ.

ಸಾವಿನವರೆಗೂ ಹೋರಾಡಿದ್ದ ಯುವತಿ
ವೈದ್ಯಕೀಯ ವರದಿಗಳ ಪ್ರಕಾರ, ಯುವತಿಯ ತೋಳುಗಳು ಮತ್ತು ಕೈಗಳ ಮೇಲೆ ಅನೇಕ ಮೂಗೇಟುಗಳಿವೆ. ಇದು ಆಕೆ ಸುಲಭವಾಗಿ ಶರಣಾಗಲಿಲ್ಲ, ಬದಲಾಗಿ ತನ್ನ ಪ್ರಾಣ ಉಳಿಸಿಕೊಳ್ಳಲು ದಾಳಿಕೋರನೊಂದಿಗೆ ಕೊನೆಯ ಕ್ಷಣದವರೆಗೂ ಸೆಣಸಾಡಿದ್ದಾಳೆ ಎಂಬುದನ್ನು ಸಾಬೀತುಪಡಿಸಿದೆ. ಆದರೆ, ಆರೋಪಿ ಮೊಂಡಾದ ವಸ್ತುವಿನಿಂದ ಆಕೆಯ ಮುಖಕ್ಕೆ ಬಲವಾಗಿ ಹೊಡೆದ ಪರಿಣಾಮ ಆಕೆಯ ಮೂಗಿನ ಮೂಳೆ ಮುರಿದುಹೋಗಿತ್ತು.

ಚಾರ್ಜಿಂಗ್ ಕೇಬಲ್‌ನಿಂದ ಉಸಿರುಗಟ್ಟಿಸಿ ಹತ್ಯೆ
ಯುವತಿಯ ಕುತ್ತಿಗೆಯ ಸ್ನಾಯುಗಳಲ್ಲಿ ರಕ್ತಸ್ರಾವ ಮತ್ತು ಥೈರಾಯ್ಡ್ ಕಾರ್ಟಿಲೆಜ್ ಮುರಿತಗೊಂಡಿರುವುದು ಕಂಡುಬಂದಿದೆ. ಮೊಬೈಲ್ ಚಾರ್ಜಿಂಗ್ ಕೇಬಲ್ ಬಳಸಿ ಕತ್ತು ಹಿಸುಕಿದ ಪರಿಣಾಮ ಉಸಿರುಕಟ್ಟುವಿಕೆಯಿಂದ ಸಾವು ಸಂಭವಿಸಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಆಕೆ ಪ್ರಜ್ಞಾಹೀನಳಾದ ನಂತರ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಹೆಚ್ಚಿನ ವಿಧಿವಿಜ್ಞಾನ ಪರೀಕ್ಷೆಗಾಗಿ ಮಾದರಿಗಳನ್ನು ಸಂರಕ್ಷಿಸಲಾಗಿದೆ.

ಮತ್ತಷ್ಟು ಓದಿ: ನನ್ನಿಂದ ತಪ್ಪಾಗಿದೆ, ಐಆರ್​ಎಸ್ ಅಧಿಕಾರಿ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿ ಹೇಳಿದ್ದೇನು?

ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಆರೋಪಿ ರಾಹುಲ್ ಮೀನಾ ಬೆಳಗ್ಗೆ 6.30ಕ್ಕೆ ಬಿಡಿ ಕೀಲಿ ಬಳಸಿ ಮನೆ ಪ್ರವೇಶಿಸಿದ್ದಾನೆ. ಪೋಷಕರು ಜಿಮ್‌ಗೆ ತೆರಳಿದ ಸಮಯವನ್ನೇ ಹೊಂಚು ಹಾಕಿ ಈತ ಒಳನುಗ್ಗಿದ್ದ. ಹತ್ಯೆಯ ನಂತರ ಯುವತಿಯ ಬೆರಳಚ್ಚು ಬಳಸಿ ಲಾಕರ್ ತೆರೆಯಲು ಪ್ರಯತ್ನಿಸಿದ್ದಾನೆ. ಅದು ವಿಫಲವಾದಾಗ ಸ್ಕ್ರೂಡ್ರೈವರ್‌ನಿಂದ ಲಾಕರ್ ಒಡೆದು ನಗದು ಮತ್ತು ಆಭರಣ ದೋಚಿದ್ದಾನೆ.

ಪರಾರಿಯಾಗುವ ಮೊದಲು ತನ್ನ ರಕ್ತದ ಕಲೆಗಳಿರುವ ಬಟ್ಟೆಗಳನ್ನು ಬದಲಿಸಿಕೊಂಡು, ಬೆಳಗ್ಗೆ 7.20ಕ್ಕೆ ಅಂದರೆ ಪೋಷಕರು ಬರುವ ಕೆಲವೇ ನಿಮಿಷಗಳ ಮೊದಲು ಅಲ್ಲಿಂದ ಕಾಲ್ಕಿತ್ತಿದ್ದಾನೆ. ಈ ಘಟನೆಗೂ ಕೆಲವೇ ಗಂಟೆಗಳ ಮೊದಲು ರಾಜಸ್ಥಾನದ ಅಲ್ವಾರ್‌ನಲ್ಲಿ ತನ್ನದೇ ಸ್ನೇಹಿತನ ಪತ್ನಿಯ ಮೇಲೆ ಅತ್ಯಾಚಾರ ಎಸಗಿದ್ದ ರಾಹುಲ್ ಮೀನಾ, ಅಲ್ಲಿಂದ ದೆಹಲಿಗೆ ಬಂದು ಈ ಕೃತ್ಯವೆಸಗಿದ್ದಾನೆ. ಕೆಲಸದಿಂದ ವಜಾಗೊಳಿಸಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಇಡೀ ಕುಟುಂಬವನ್ನೇ ನಾಶಮಾಡಲು ಈತ ಮುಂದಾಗಿದ್ದ ಎಂಬುದು ಪ್ರಾಥಮಿಕ ತನಿಖೆಯಿಂದ ಸ್ಪಷ್ಟವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸಿದ್ದರಾಮಯ್ಯ ಆಪ್ತರಿಂದ ಸಭೆ, ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ: ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು – Kannada News | Karnataka Congress Internal Rift: CM Siddaramaiah’s Loyalists Hold Secret Meeting Amid Leadership Change Rumors

ಬೆಂಗಳೂರು, ಏಪ್ರಿಲ್ 24: ದಾವಣಗೆರೆ ಉಪಚುನಾವಣೆ ಬೆಳವಣಿಗಗಳ ಬಳಿಕ ಕರ್ನಾಟಕ ಕಾಂಗ್ರೆಸ್‌ನಲ್ಲಿ ಆಂತರಿಕ ಅಸಮಾಧಾನ ಮತ್ತೆ ಭುಗಿಲೆದ್ದಿದೆ. ಪಕ್ಷದಲ್ಲಿ ನಡೆಯುತ್ತಿರುವ ಏಕಪಕ್ಷೀಯ ನಿರ್ಧಾರಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೌನದ ಬಗ್ಗೆ ಅವರ ಆಪ್ತ ಸಚಿವರು ಸಭೆ ನಡೆಸಿ ಚರ್ಚೆ ಮಾಡಿದ್ದಾರೆ. ಬೆಂಗಳೂರಿನ ಕನ್ನಿಂಗ್ಹ್ಯಾಮ್ ರಸ್ತೆಯ ಖಾಸಗಿ ಕಟ್ಟಡದಲ್ಲಿ ಸಚಿವರಾದ ಭೈರತಿ ಸುರೇಶ್, ಡಾ. ಜಿ. ಪರಮೇಶ್ವರ, ಮಹದೇವಪ್ಪ, ಸತೀಶ್ ಜಾರಕಿಹೊಳಿ, ಜಮೀರ್ ಅಹಮದ್ ಮತ್ತು ದಿನೇಶ್ ಗುಂಡುರಾವ್ ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ಸಭೆಯಲ್ಲಿ ಪಕ್ಷದ ಹಿರಿಯ ನಾಯಕರ ಅಸ್ತಿತ್ವಕ್ಕೆ ಕುತ್ತು ಬರುವ ಸಾಧ್ಯತೆ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಲಾಯಿತು. 2028ರ ಚುನಾವಣೆಯಲ್ಲಿ ಸಮುದಾಯಗಳು ದೂರ ಸರಿಯುವ ಆತಂಕವೂ ಚರ್ಚೆಗೆ ಬಂದಿದೆ. ಈ ಬೆಳವಣಿಗೆಗಳ ನಡುವೆ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ದೆಹಲಿಗೆ ತೆರಳಿದ್ದು ತೀವ್ರ ಚರ್ಚೆಗೆ ಕಾರಣವಾಗಿದೆ. ಡಿಕೆ ಶಿವಕುಮಾರ್ ಅವರು ಸಿಎಂ ಆಪ್ತರ ಸಭೆ ಬಗ್ಗೆ ಮಾಹಿತಿ ಇಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಕಾಂಗ್ರೆಸ್‌ನ ಈ ಆಂತರಿಕ ಬೆಳವಣಿಗೆಗಳಿಗೆ ವಿಪಕ್ಷ ನಾಯಕರು ‘ಹುಡುಗಾಟಿಕೆಯ ರಾಜಕಾರಣ’ ಎಂದು ಟೀಕಿಸಿದ್ದು, ಮೂರು-ನಾಲ್ಕು ತಿಂಗಳಲ್ಲಿ ಸ್ಪೋಟಕ ಬೆಳವಣಿಗೆಗಳು ಆಗಲಿವೆ. ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆ ಆಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಉಪಚುನಾವಣೆಗೂ ಮುನ್ನ ಕೊಂಚ ಸದ್ದಡಗಿದ್ದ ಸಿಎಂ ಕುರ್ಚಿ ಚರ್ಚೆ ಇದೀಗ ಮತ್ತೆ ಮುನ್ನೆಲೆಗೆ ಬರುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ, ಮೂವರು ಸಜೀವದಹನ , ಐವರ ಸ್ಥಿತಿ ಗಂಭೀರ – Kannada News | Rajasthan Tragedy: Fire Breaks Out After Collision, Casualties Reported

ಚುರು, ಏಪ್ರಿಲ್ 24: ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ ಸಂಭವಿಸಿ, ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರು ಸಜೀವದಹನವಾಗಿದ್ದು, ಐವರ ಸ್ಥಿತಿ ಗಂಭೀರವಾಗಿರುವ ಘಟನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ನಡೆದಿದೆ. ಹಮೀರ್ವಾಸ್ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಪಿಲಾನಿ-ಸಾದುಲ್‌ಪುರ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮದುವೆಯಲ್ಲಿ ಭಾಗವಹಿಸಿ ಪಿಲಾನಿಯಿಂದ ಹಿಂದಿರುಗುತ್ತಿದ್ದ ಮಹೀಂದ್ರಾ ಬೊಲೆರೊ ತ್ರಿಪಾಲಿ ಟೋಲ್ ಪ್ಲಾಜಾ ಬಳಿ ಡಂಪರ್ ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಅಪಘಾತ ಎಷ್ಟು ಭೀಕರವಾಗಿತ್ತೆಂದರೆ ಎರಡೂ ವಾಹನಗಳಿಗೂ ಕ್ಷಣದಲ್ಲಿ ಬೆಂಕಿ ತಗುಲಿತ್ತು. ಗಾಯಗೊಂಡ ಐದು ಜನರನ್ನು ನಂತರ ಪಿಲಾನಿಯ ಬಿರ್ಲಾ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಯಿತು. ಈಗ ಅವರನ್ನು ಉತ್ತಮ ಚಿಕಿತ್ಸೆಗಾಗಿ ಜೈಪುರದ ಮತ್ತೊಂದು ಆಸ್ಪತ್ರೆಗೆ ಕಳುಹಿಸಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ

ಇಂದು (ಏಪ್ರಿಲ್ 24) ವರನಟ ಡಾ.ರಾಜ್ ಕುಮಾರ್ ಅವರಿಗೆ 97ನೇ ವರ್ಷದ ಜನ್ಮದಿನ. 97ನೇ ಜಯಂತಿ ಆಚರಿಸಲು ಕಂಠೀರವ ಸ್ಟುಡಿಯೋದಲ್ಲಿ ಸಕಲ ಸಿದ್ಧತೆಗಳು ನಡೆದಿದೆ. ಹೂವಿನ ಅಲಂಕಾರದಿಂದ ಸಮಾಧಿ ಸಿದ್ಧವಾಗಿದೆ. ಇಂದು ರಾಜ್ ಕುಟುಂಬದಿಂದ ಸಮಾಧಿಗೆ ಪೂಜೆ ಸಲ್ಲಿಸಲಾಗುತ್ತದೆ. ನಂತರ ಅವರ 97ನೇ ವರ್ಷದ ಜನ್ಮದಿನ ಆಚರಣೆ ಮಾಡಲಾಗುತ್ತದೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಶೋಭಾ ಕರಂದ್ಲಾಜೆ ಭಾಗಿ ಆಗಲಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ನಮ್ಮ ಸೋಲಿಗೆ ಇವರೇ ಕಾರಣ; ಹೀನಾಯ ಆಟದ ಬಳಿಕ ಹೇಳಿಕೆ ನೀಡಿದ ಪಾಂಡ್ಯ – Kannada News | Hardik Pandya on MI’s Record Loss to CSK: They Are the Reason for Our Defeat

ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಸಿಎಸ್​​ಕೆ ವಿರುದ್ಧ 103 ರನ್​​ಗಳ ಸೋಲು ಕಂಡಿದೆ. ಮುಂಬೈ ಇಂಡಿಯನ್ಸ್ ಇತಿಹಾಸದಲ್ಲೇ ಅತ್ಯಂತ ಹೀನಾಯ ಸೋಲು ಇದಾಗಿದೆ. ಸಿಎಸ್​ಕೆ ನೀಡಿದ 207 ರನ್​​ಗಳ ಬೃಹತ್ ಮೊತ್ತ ಬೆನ್ನು ಹತ್ತಿದ ಮುಂಬೈ ಅತ್ಯಂತ ಹೀನಾಯ ಪ್ರದರ್ಶನ ನೀಡಿತು. ಕೇವಲ 104 ರನ್​​ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು. ಕ್ಯಾಪ್ಟನ್ ಪಾಂಡ್ಯ 1 ರನ್​​ಗೆ ಔಟ್ ಆದರು. ಪಂದ್ಯ ಮುಗಿದ ಬಳಿಕ ರವಿ ಶಾಸ್ತ್ರಿ ಜೊತೆ ಮಾತನಾಡಿದ ಪಾಂಡ್ಯ, ಮುಂಬೈ ತಂಡದ ಸೋಲಿಗೆ ಕಾರಣ ನೀಡಿದರು. ನಾಲ್ಕು ಪಂದ್ಯಗಳಲ್ಲಿ 2 ಶತಕ ಬಾರಿಸಿದ ಸಂಜು ಅವರನ್ನು ಹೊಗಳಿದರು.

‘ಪಿಚ್ ಬದಲಾಗಿದೆ ಎಂದು ನಾನು ಹೇಳುವುದಿಲ್ಲ. ನಾನು ಹಾಗೆ ಹೇಳಲು ಇಷ್ಟಪಡುವ ವ್ಯಕ್ತಿಯೂ ಅಲ್ಲ’ ಎಂದು ಪಾಂಡ್ಯ ಹೇಳಿದ್ದಾರೆ. ಕೆಲವರು ಸೋಲಿನ ಬಳಿಕ ‘ಪಿಚ್ ಸರಿ ಇರಲಿಲ್ಲ, ಪಿಚ್ ಬದಲಾಗಿತ್ತು’ ಎಂಬ ಕಾರಣವನ್ನು ನೀಡುತ್ತಾರೆ. ಈ ಕಾರಣದಿಂದ ಹಾರ್ದಿಕ್ ಈ ರೀತಿ ಹೇಳಿಕೆ ನೀಡಿದ್ದಾರೆ.

‘ಚೆನ್ನೈ ತಂಡದವರು ಚೆನ್ನಾಗಿ ಬ್ಯಾಟ್ ಮಾಡಿದರು. ಈ ಮೂಲಕ 207 ರನ್ ಗಳಿಸಿದರು. ಅವರು ರನ್ ಗಳಿಸಿದ್ದು ಇದೇ ಪಿಚ್​​ನಲ್ಲಿ, ಇದೇ ಮಣ್ಣಿನಲ್ಲಿ. ನಾವು ಆಡಿದ್ದು ಇದೇ ಮೈದಾನದಲ್ಲಿ. ನಾವು ಉತ್ತಮವಾಗಿ ಬ್ಯಾಟ್ ಮಾಡಬೇಕಿತ್ತು. ಸಂಜು ಅದ್ಭುತವಾಗಿ ಬ್ಯಾಟಿಂಗ್ ಆಡಿದರು. ಅವರು ಬ್ಯಾಟರ್​​ಗಳು ಬರೋದು ಹಾಗೂ ರನ್ ಪೇರಿಸುವ ಕೆಲಸ ಮಾಡಿದರು. ಈ ಮೂಲಕ ಒಳ್ಳೆಯ ಮೊತ್ತ ಕಲೆ ಹಾಕಿದರು’ ಎಂದಿದ್ದಾರೆ ಹಾರ್ದಿಕ್ ಪಾಂಡ್ಯ.

‘ಈ ಪಿಚ್​​ನಲ್ಲಿ ಸಾಮಾನ್ಯವಾಗಿ ಬರುವ ರನ್​​ಗಿಂತ ಹೆಚ್ಚಿನ ರನ್ ಬಂದಿತ್ತು. ಇದನ್ನು ಚೇಸ್ ಮಾಡಲು ನಮಗೆ ಉತ್ತಮ ಪವರ್‌ಪ್ಲೇ ಅಗತ್ಯವಿತ್ತು. ಆವೇಗದಲ್ಲಿ ನಾವು ಆಡಬೇಕಿತ್ತು. ಆದರೆ ಹಾಗಾಗಲಿಲ್ಲ’ ಎಂದು ಪಾಂಡ್ಯ ಹೇಳಿದರು. ಸದ್ಯ ಹಾರ್ದಿಕ್ ಪಾಂಡ್ಯ ನಾಯಕತ್ವದ ಬಗ್ಗೆ ಟೀಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಬರೋಬ್ಬರಿ 103 ರನ್..! ಐಪಿಎಲ್ ಇತಿಹಾಸದಲ್ಲೇ ಅತಿ ಹೀನಾಯ ಸೋಲು ಕಂಡ ಮುಂಬೈ

ಸಂಜು ಸ್ಯಾಮ್ಸನ್ಸ್ ಕೇವಲ 54 ಬಾಲ್​​ಗಳಲ್ಲಿ 101 ರನ್ ಸಿಡಿಸಿದರು. ಇದರಲ್ಲಿ 6 ಸಿಕ್ಸ್, 10 ಫೋರ್ ಸೇರಿದೆ. ಈ ಮೊತ್ತ ತಂಡಕ್ಕೆ ಆಸರೆ ಆಯಿತು. ಉಳಿದ ಯಾವುದೇ ಸಿಎಸ್​​ಕೆ ಆಟಗಾರರು 25 ರನ್ ಗಡಿ ದಾಟಿಲ್ಲ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:46 am, Fri, 24 April 26

Source link