Category Archives: Blog

Your blog category

Home Names: ನಿಮ್ಮ ಕನಸಿನ ಮನೆಗೆ ‘ರಾಜಮನೆತನದ’ ಕಳೆ ನೀಡಬೇಕೇ? ಇಲ್ಲಿದೆ ಅದ್ಭುತ ಸಂಸ್ಕೃತ ಹೆಸರುಗಳು! – Kannada News | 10 Vastu Approved Sanskrit Home Names for Positive Energy and Prosperity

ಮನೆ ಕೇವಲ ಇಟ್ಟಿಗೆಗಳ ಕಟ್ಟಡವಲ್ಲ ಹಿರಿಯರು ಹೇಳುವಂತೆ, ಇಟ್ಟಿಗೆ ಮತ್ತು ಕಲ್ಲುಗಳು ಕೇವಲ ಒಂದು ಭೌತಿಕ ರಚನೆಯನ್ನು ನಿರ್ಮಿಸುತ್ತವೆ. ಆದರೆ ಆ ರಚನೆಯನ್ನು ‘ಮನೆ’ಯನ್ನಾಗಿ ಪರಿವರ್ತಿಸುವುದು ಅಲ್ಲಿ ವಾಸಿಸುವ ಜನರು, ಅವರ ಕನಸುಗಳು ಮತ್ತು ಅಲ್ಲಿನ ಶಕ್ತಿ. ಪ್ರತಿಯೊಬ್ಬರಿಗೂ ತಮ್ಮ ಜೀವನದ ಸಾಧನೆಯ ಸಂಕೇತವಾಗಿ ಒಂದು ಸುಂದರ ಮನೆ ಇರಬೇಕೆಂಬ ಆಸೆಯಿರುತ್ತದೆ. ಮಗುವಿಗೆ ಹೆಸರಿಡುವುದು ಹೇಗೆ ಅದರ ಗುರುತನ್ನು ನಿರ್ಧರಿಸುತ್ತದೆಯೋ, ಹಾಗೆಯೇ ನಿಮ್ಮ ಮನೆಗೆ ನೀವು ಇಡುವ ಹೆಸರು ಅಲ್ಲಿನ ಸಕಾರಾತ್ಮಕ ಶಕ್ತಿ (Positive Vibrations) ಮತ್ತು ಕಂಪನಗಳನ್ನು ನಿರ್ಧರಿಸುತ್ತದೆ.

ವಾಸ್ತು ಮತ್ತು ಹೆಸರಿನ ಮಹತ್ವ:

ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ಮನೆಗೆ ಅರ್ಥಪೂರ್ಣ ಹೆಸರಿಡಲು ಬಹಳ ಆಸಕ್ತಿ ತೋರಿಸುತ್ತಿದ್ದಾರೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಹೆಸರು ಅಲ್ಲಿನ ನಿವಾಸಿಗಳ ಮನಸ್ಥಿತಿಯ ಮೇಲೆ ಪ್ರಭಾವ ಬೀರುತ್ತದೆ. ನಿಮ್ಮ ಮನೆ ಕೇವಲ ಒಂದು ವಿಳಾಸವಾಗದೆ, ನಿಮ್ಮ ಯಶಸ್ಸಿನ ಸಾಕ್ಷಿಯಾಗಲಿ ಎಂಬ ಉದ್ದೇಶದಿಂದ, ಸಕಾರಾತ್ಮಕತೆಯನ್ನು ಆಕರ್ಷಿಸುವ 10 ಶ್ರೇಷ್ಠ ಸಂಸ್ಕೃತ ಹೆಸರುಗಳನ್ನು ಇಲ್ಲಿ ಪಟ್ಟಿ ಮಾಡಲಾಗಿದೆ.

ಸಕಾರಾತ್ಮಕ ಶಕ್ತಿ ತುಂಬುವ 10 ಆಯ್ದ ಹೆಸರುಗಳು:

ನಿರ್ವಾಣಂ (Nirvanam):

ಸಂಸ್ಕೃತದ ಈ ಹೆಸರು ಮನಸ್ಸಿಗೆ ಪರಮ ಶಾಂತಿ ಮತ್ತು ಮುಕ್ತಿಯ ಭಾವನೆಯನ್ನು ನೀಡುತ್ತದೆ. ನಿಮ್ಮ ಮನೆಯ ವಾತಾವರಣ ಯಾವಾಗಲೂ ಪ್ರಶಾಂತವಾಗಿರಬೇಕು ಮತ್ತು ಒತ್ತಡ ಮುಕ್ತವಾಗಿರಬೇಕು ಎಂದು ನೀವು ಬಯಸಿದರೆ, ಇದು ಅತ್ಯುತ್ತಮ ಆಯ್ಕೆ.

ಅಮೃತಾಲಯ (Amrutalaya):

ಇದರ ಅರ್ಥ ‘ಅಮೃತದಂತಹ ಸುಖವಿರುವ ಮನೆ’. ಈ ಹೆಸರು ಮನೆಯಲ್ಲಿ ತೃಪ್ತಿ, ಮಾಧುರ್ಯ ಮತ್ತು ಸದಾಕಾಲ ಹರಿಯುವ ಸಂತೋಷವನ್ನು ಸೂಚಿಸುತ್ತದೆ. ಇದು ಕುಟುಂಬದಲ್ಲಿ ಪ್ರೀತಿಯನ್ನು ಹೆಚ್ಚಿಸುತ್ತದೆ.

ಸ್ನೇಹಸದನಂ (Snehasadanam):

ಹೆಸರೇ ಸೂಚಿಸುವಂತೆ ಇದು ಪ್ರೀತಿ ಮತ್ತು ಅನ್ಯೋನ್ಯತೆಯ ತಾಣ. ಕುಟುಂಬ ಸದಸ್ಯರ ನಡುವೆ ಬಾಂಧವ್ಯ ಗಟ್ಟಿಯಾಗಲು ಮತ್ತು ಪರಸ್ಪರ ಸ್ನೇಹಭಾವ ನೆಲೆಸಲು ಈ ಹೆಸರು ಪ್ರೇರಣೆ ನೀಡುತ್ತದೆ.

ಅಮ್ರೇಷಂ (Amresham):

ಅಮ್ರೇಷಂ ಎಂದರೆ ಶಕ್ತಿ ಮತ್ತು ಅಭಯದ ಸಂಕೇತ. ಈ ಹೆಸರಿರುವ ಮನೆಯಲ್ಲಿ ವಾಸಿಸುವವರು ಹೆಚ್ಚು ಸುರಕ್ಷಿತ ಭಾವನೆಯನ್ನು ಹೊಂದಿರುತ್ತಾರೆ ಮತ್ತು ಇದು ನಕಾರಾತ್ಮಕ ದೃಷ್ಟಿಯಿಂದ ಮನೆಯನ್ನು ರಕ್ಷಿಸುತ್ತದೆ ಎಂದು ನಂಬಲಾಗಿದೆ.

ಸೌರಭ್ (Saurabh):

ಸುಗಂಧ ಮತ್ತು ತಾಜಾತನ ಎಂಬ ಅರ್ಥವನ್ನು ಹೊಂದಿರುವ ಈ ಹೆಸರು, ಮನೆಯಲ್ಲಿ ಸದಾ ಹೊಸ ಚೈತನ್ಯವಿರುವಂತೆ ಮಾಡುತ್ತದೆ. ಸಕಾರಾತ್ಮಕ ಶಕ್ತಿಯು ಮನೆಯ ಮೂಲೆ ಮೂಲೆಯಲ್ಲೂ ಪಸರಿಸಲು ಇದು ಸಹಕಾರಿ.

ಸತ್ಯಲೋಕಂ (Satyalokam):

ಯಾರು ತಮ್ಮ ಜೀವನದಲ್ಲಿ ಪ್ರಾಮಾಣಿಕತೆ ಮತ್ತು ಸತ್ಯದ ಹಾದಿಯನ್ನು ಅನುಸರಿಸುತ್ತಾರೋ, ಅಂತಹವರಿಗೆ ಈ ಹೆಸರು ಸೂಕ್ತ. ಇದು ಮನೆಯಲ್ಲಿ ಪವಿತ್ರ ಮತ್ತು ಧಾರ್ಮಿಕ ವಾತಾವರಣವನ್ನು ನಿರ್ಮಿಸುತ್ತದೆ.

ಮಂಗಳಾಲಯ (Mangalalaya):

ಶುಭ ಮತ್ತು ಅದೃಷ್ಟದ ಪ್ರತೀಕವೇ ಮಂಗಳಾಲಯ. ಹೊಸದಾಗಿ ಮನೆ ಕಟ್ಟಿದವರಿಗೆ ಅಥವಾ ಜೀವನದಲ್ಲಿ ಹೊಸ ಆರಂಭ ಮಾಡುವವರಿಗೆ ಇದು ಅತ್ಯಂತ ಮಂಗಳಕರ ಹೆಸರಾಗಿದೆ.

ಇದನ್ನೂ ಓದಿ: ದೇವರಿಗೆ ದೀಪ ಹಚ್ಚುವಾಗ ಈ ವಿಷ್ಯ ತಿಳಿದಿರಲಿ; ಇದು ನಿಮ್ಮ ಅದೃಷ್ಟವನ್ನೇ ಬದಲಿಸಲಿದೆ

ಸುಕೃತಂ (Sukrutam):

ಒಳ್ಳೆಯ ಕಾರ್ಯಗಳು ಮತ್ತು ಶುದ್ಧ ಮನಸ್ಸಿನ ಫಲವೇ ಸುಕೃತ. ನಿಮ್ಮ ಮನೆಗೆ ಈ ಹೆಸರಿಟ್ಟರೆ, ಅದು ಸತ್ಕರ್ಮಗಳ ಶಕ್ತಿಯನ್ನು ಆಕರ್ಷಿಸುತ್ತದೆ ಮತ್ತು ಮನೆಯಲ್ಲಿ ಪುಣ್ಯದ ವಾತಾವರಣವಿರುತ್ತದೆ.

ಶಾಂತಿವನಂ (Shantivanam):

ನಗರದ ಗದ್ದಲದಿಂದ ದೂರವಿದ್ದು, ಪ್ರಕೃತಿಗೆ ಹತ್ತಿರವಾಗಿ ಬದುಕುವವರಿಗೆ ಮತ್ತು ಏಕಾಂತವನ್ನು ಬಯಸುವವರಿಗೆ ಇದು ಹೇಳಿ ಮಾಡಿಸಿದ ಹೆಸರು. ಇದು ಮನೆಯನ್ನು ಶಾಂತಿಯ ದ್ವೀಪವನ್ನಾಗಿ ಮಾಡುತ್ತದೆ.

ಅನ್ನಪೂರ್ಣ (Annapurna):

ಸಮೃದ್ಧಿಯ ದೇವತೆ ಅನ್ನಪೂರ್ಣೇಶ್ವರಿಯ ಹೆಸರಿದು. ಈ ಹೆಸರಿರುವ ಮನೆಯಲ್ಲಿ ಆಹಾರ, ಸಂಪತ್ತು ಮತ್ತು ಸಂತೋಷಕ್ಕೆ ಎಂದಿಗೂ ಕೊರತೆಯಾಗುವುದಿಲ್ಲ ಎಂಬುದು ಭಕ್ತರ ದೃಢ ನಂಬಿಕೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

41 ನಿಮಿಷದಲ್ಲಿ ಅತ್ಯಾಚಾರ, ಕೊಲೆ, ದರೋಡೆ; ಐಆರ್​ಎಸ್​ ಅಧಿಕಾರಿ ಮನೆಯಲ್ಲಿ ನಡೆದಿದ್ದೇನು? ಆರೋಪಿ ಸಿಕ್ಕಿದ್ದು ಹೇಗೆ? – Kannada News | Rape and murder in 40 minutes Delhi IRS Officer Daughter killed by former Employee Rahul how he Caught

ನವದೆಹಲಿ, ಏಪ್ರಿಲ್ 23: ಬುಧವಾರ ಬೆಳಗ್ಗೆ 6.40ಕ್ಕೆ ದೆಹಲಿಯ ಐಷಾರಾಮಿ ಪ್ರದೇಶವಾದ ಕೈಲಾಶ್ ಹಿಲ್ಸ್​ನಲ್ಲಿರುವ ಐಆರ್​ಎಸ್​ ಅಧಿಕಾರಿಯೊಬ್ಬರ (IRS Officer) ಮನೆಯೊಳಗೆ ಭೀಕರ ಘಟನೆ ನಡೆದಿತ್ತು. ಬೆಳಗ್ಗೆ 6.30ಕ್ಕೆ ಐಆರ್​ಎಸ್​ ಅಧಿಕಾರಿ ತನ್ನ ಹೆಂಡತಿಯ ಜೊತೆ ವಾಕಿಂಗ್​​ಗೆ ಹೋದಕೂಡಲೆ ಅದೇ ಮನೆಯ ಮಾಜಿ ಕೆಲಸಗಾರ ರಾಹುಲ್ ಆ ಮನೆಯೊಳಗೆ ನುಗ್ಗಿದ್ದ. ತನ್ನನ್ನು ಕೆಲಸದಿಂದ ತೆಗೆದುಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಸಂಚು ಮಾಡಿದ್ದ ಆತನಿಗೆ ಆ ಮನೆಯ ಹೊರಗೆ ಕೆಲಸಗಾರರಿಗಾಗಿ ಎಲ್ಲಿ ಕೀ ಇಟ್ಟಿರುತ್ತಾರೆ ಎಂಬುದು ಗೊತ್ತಿತ್ತು. ಆ ಮನೆಯಲ್ಲಿ ಎಲ್ಲಿ ಸಿಸಿಟಿವಿ ಇದೆ, ಮನೆ ಮಾಲೀಕ ಎಷ್ಟು ಗಂಟೆಗೆ ಹೋಗಿ ಎಷ್ಟು ಗಂಟೆಗೆ ವಾಕಿಂಗ್ ಮುಗಿಸಿ ವಾಪಾಸ್ ಬರುತ್ತಾರೆ ಎಲ್ಲವೂ ಆತನಿಗೆ ಗೊತ್ತಿತ್ತು. ಹೀಗಾಗಿ, ಕೆಲಸದವರಿಗಾಗಿ ಹೊರಗೆ ಇಟ್ಟಿದ್ದ ಕೀ ತೆಗೆದುಕೊಂಡು ಬಾಗಿಲು ತೆರೆದು ಒಳಗೆ ಹೋದ ಅವನು ಸೀದಾ ಹೋಗಿದ್ದು ಮೇಲಿನ ಮಹಡಿಗೆ.

ಮೇಲಿನ ಮಹಡಿಯಲ್ಲಿ ಐಆರ್​ಎಸ್​ ಅಧಿಕಾರಿಯ 22 ವರ್ಷದ ಮಗಳ ರೂಂ ಇತ್ತು. ಪಿಯುಸಿಯಲ್ಲಿ ಟಾಪರ್ ಆಗಿದ್ದ ಆಕೆ ಅಪ್ಪನಂತೆ ಅಧಿಕಾರಿಯಾಗಬೇಕೆಂದು ಯುಪಿಎಸ್​ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು. ಅಪ್ಪ-ಅಮ್ಮ ವಾಕಿಂಗ್​ಗೆ ಹೋಗುವ ಮುನ್ನವೇ ಎದ್ದು ಓದಲು ಕೂರುತ್ತಿದ್ದ ಆಕೆ ಅಂದು ಕೂಡ ಅಲ್ಲಿ ಓದುತ್ತಾ ಕುಳಿತಿದ್ದರು. ಆಗ ಆ ರೂಂಗೆ ಬಂದ ರಾಹುಲ್​ನನ್ನು ಕಂಡು ಆಕೆ ಹೆದರಿ ಕಿರುಚಿದ್ದರು. ಆದರೆ, ಆಕೆಯ ಕೂಗು ಯಾರಿಗೂ ಕೇಳಲಿಲ್ಲ. ಅಷ್ಟರಲ್ಲಿ ರಾಹುಲ್ ಟೇಬಲ್ ಲ್ಯಾಂಪ್​ನಿಂದ ಆಕೆಯ ತಲೆಗೆ ಹೊಡೆದಿದ್ದ. ಇದರಿಂದ ಆಕೆಯ ತಲೆಯಲ್ಲಿ ರಕ್ತ ಬಂದು, ಪ್ರಜ್ಞಾಹೀನರಾಗಿದ್ದರು. ಆಕೆಗೆ ಪ್ರಜ್ಞೆ ಹೋಗುತ್ತಿದ್ದಂತೆ ಆಕೆಯ ಮೇಲೆ ಅಮಾನುಷವಾಗಿ ಅತ್ಯಾಚಾರ ಮಾಡಿದ್ದ ರಾಹುಲ್ ಆಕೆಯ ಕುತ್ತಿಗೆಗೆ ಮೊಬೈಲ್ ಚಾರ್ಜರ್​ನ ವೈರ್ ಸುತ್ತಿ ಕತ್ತು ಹಿಸುಕಿ ಕೊಂದಿದ್ದ.

ಆಕೆಯ ಮೈಯಲ್ಲಿದ್ದ ರಕ್ತ ಆತನ ಮೈಗೂ ಮೆತ್ತಿಕೊಂಡಿತ್ತು. ಹೀಗೇ ಮನೆಯಿಂದ ಆಚೆ ಹೋದರೆ ಸಿಕ್ಕಿಹಾಕಿಕೊಳ್ಳುವುದು ಗ್ಯಾರಂಟಿ ಎಂದು ಆತ ಮೃತ ಯುವತಿಯ ಸಹೋದರನ ಬಟ್ಟೆ ತೆಗೆದುಕೊಂಡು ಬಾತ್​ರೂಂಗೆ ಹೋಗಿ ಬಟ್ಟೆ ಬದಲಾಯಿಸಿದ್ದ, ಶೂ ಕೂಡ ಚೇಂಜ್ ಮಾಡಿದ್ದ. ಬಳಿಕ ಕೆಳಗಿನ ಮಹಡಿಗೆ ಬಂದು ಐಆರ್​ಎಸ್​ ಅಧಿಕಾರಿಯ ರೂಂನಿಂದ ಎರಡೂವರೆ ಲಕ್ಷ ರೂ. ಹಣ ತೆಗೆದುಕೊಂಡು ಬ್ಯಾಗ್​​ನಲ್ಲಿಟ್ಟುಕೊಂಡಿದ್ದ. ನಂತರ ಏನೂ ಆಗಿಯೇ ಇಲ್ಲವೆಂಬಂತೆ ಬಾಗಿಲು ಲಾಕ್ ಮಾಡಿ, 7.21ಕ್ಕೆ ಮನೆಯಿಂದ ಹೊರಗೆ ಹೋಗಿದ್ದ. ಅದಾದ ಸ್ವಲ್ಪ ಹೊತ್ತಿನಲ್ಲೇ ಮನೆಗೆ ಬಂದ ಐಆರ್​ಎಸ್​ ಅಧಿಕಾರಿ ದಂಪತಿ ಮಗಳ ರೂಂಗೆ ಹೋದಾಗ ಅಲ್ಲಿ ಆಕೆ ಪ್ರಜ್ಞೆ ತಪ್ಪಿ ಬಿದ್ದಿರುವುದನ್ನು ನೋಡಿ ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಅಷ್ಟರಲ್ಲಾಗಿಯೇ ಆಕೆ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದರು.

ಇದನ್ನೂ ಓದಿ: ಆದಾಯ ತೆರಿಗೆ​ ಅಧಿಕಾರಿ ಜಿಮ್​ನಲ್ಲಿದ್ದಾಗ ಮನೆಯಲ್ಲಿ ಮಗಳ ಬರ್ಬರ ಹತ್ಯೆ

ಹಾಡಹಗಲೇ ಕೇವಲ 41 ನಿಮಿಷದಲ್ಲಿ ಆ ಐಷಾರಾಮಿ ಮನೆಯಲ್ಲಿ ಭೀಕರ ಹತ್ಯೆ ನಡೆದಿತ್ತು. ಈ ಘಟನೆಯ ಮಾಹಿತಿ ತಿಳಿದ ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ಪರಿಶೀಲಿಸಿದಾಗ ರಾಹುಲ್ ಓಡಾಡಿದ್ದು ಕಂಡುಬಂದಿತ್ತು. ಆತ ಆ ಮನೆಯಲ್ಲಿ ಕೆಲಸಕ್ಕಿದ್ದಾಗ ಹಣ ಕದ್ದಿದ್ದರಿಂದ ಆತನನ್ನು ಕೆಲಸದಿಂದ ತೆಗೆದುಹಾಕಿದ್ದ ವಿಷಯ ತಿಳಿದ ಪೊಲೀಸರಿಗೆ ಸೇಡಿಗಾಗಿ ಆತನೇ ಈ ಕೃತ್ಯ ಎಸಗಿದ್ದಾನೆಂಬುದು ಮನದಟ್ಟಾಗಿತ್ತು. ಈ ಘಟನೆ ನಡೆದ 12 ಗಂಟೆಯೊಳಗೆ ಪೊಲೀಸರು ರಾಹುಲ್​ನನ್ನು ಓಯೋ ಹೋಟೆಲ್​ನಿಂದ ಬಂಧಿಸಿದ್ದಾರೆ. ಸಿಸಿಟಿವಿ ದೃಶ್ಯ ಆಧರಿಸಿ ರಾಹುಲ್ ಅಲ್ಲಿಂದ ಹೋಗಿದ್ದ ಆಟೋ ಚಾಲಕನನ್ನು ವಿಚಾರಿಸಿದ ಪೊಲೀಸರಿಗೆ ಆತ ಓಯೋ ಹೋಟೆಲ್​ ಬಳಿ ಇಳಿದುಕೊಂಡ ಮಾಹಿತಿ ಸಿಕ್ಕಿತ್ತು. ಆತನನ್ನು ಹಿಡಿಯಲು ವಿಶೇಷ ತಂಡ ರಚಿಸಲಾಗಿತ್ತು. ಕೊನೆಗೂ ಹೋಟೆಲ್​ನಲ್ಲಿ ತಣ್ಣಗೆ ಕುಳಿತಿದ್ದ ರಾಹುಲ್ ಪೊಲೀಸರ ಅತಿಥಿಯಾಗಿದ್ದ.

ನಿನ್ನೆ ರಾತ್ರಿಯೇ ದೆಹಲಿಯಿಂದ ತನ್ನ ಊರಾದ ರಾಜಸ್ಥಾನಕ್ಕೆ ತೆರಳಲು ರಾಹುಲ್ ಪ್ಲಾನ್ ಮಾಡಿದ್ದ. ಅಲ್ಲಿಯವರೆಗೂ ತನ್ನ ಬಗ್ಗೆ ಯಾರಿಗೂ ಅನುಮಾನ ಬರುವುದಿಲ್ಲ ಎಂಬುದು ಅವನ ಲೆಕ್ಕಾಚಾರವಾಗಿತ್ತು. ಆದರೆ, ಪೊಲೀಸರು ಅವನಿಗಿಂತ ಬಹಳ ಹೆಜ್ಜೆ ಮುಂದಿದ್ದರು. ರಾಹುಲ್ ಐಆರ್​ಎಸ್​ ಅಧಿಕಾರಿಯ ಮನೆಯ ಬಳಿ ಒಂದೆರಡು ದಿನದಿಂದ ಓಡಾಡಿದ್ದನ್ನು ಸ್ಥಳೀಯ ಅಂಗಡಿಯವರು ನೋಡಿದ್ದರು. ಆತ ಅದೇ ಮನೆಯಲ್ಲಿ ಕೆಲಸ ಮಾಡುತ್ತಿದ್ದುದರಿಂದ ಅವರಿಗೆ ಅವನ ಪರಿಚಯವಿತ್ತು. ಅವನನ್ನು ಕೆಲಸದಿಂದ ವಜಾಗೊಳಿಸಿದ್ದು ಕೂಡ ಅವರಿಗೆ ಗೊತ್ತಿತ್ತು. ಹೀಗಾಗಿ, ಪೊಲೀಸರ ವಿಚಾರಣೆ ವೇಳೆ ಅಂಗಡಿಯವರು ರಾಹುಲ್ ಬಗ್ಗೆ ಹೇಳಿದ್ದರಿಂದ ಪೊಲೀಸರು ಸಿಸಿಟಿವಿಯಲ್ಲಿ ರಾಹುಲ್​ನನ್ನು ಪತ್ತೆಹಚ್ಚಲು ಸಹಾಯವಾಗಿತ್ತು.

ಇದನ್ನೂ ಓದಿ: ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಕುಟ್ಟ ಖಾಸಗಿ ಹೋಂಸ್ಟೇ ಪರವಾನಗಿ ರದ್ದು

ಪೊಲೀಸರು ವಿಚಾರಣೆ ವೇಳೆ ರಾಹುಲ್ ಆ 41 ನಿಮಿಷ ಆ ಮನೆಯಲ್ಲಿ ತಾನು ಏನೇನು ಮಾಡಿದನೆಂಬುದರ ಸಂಪೂರ್ಣ ಮಾಹಿತಿ ನೀಡಿದ್ದಾನೆ. ಆತನನ್ನು ಹಿಡಿಯಲು 15 ತಂಡಗಳನ್ನು ರಚಿಸಲಾಗಿತ್ತು. ಆನ್‌ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್‌ಗೆ ವ್ಯಸನಿಯಾಗಿದ್ದ ರಾಹುಲ್ ಜನರಿಂದ ಹಣವನ್ನು ಸಾಲವಾಗಿ ಪಡೆಯುತ್ತಿದ್ದ. ಅಪರಾಧಕ್ಕೂ ಮುನ್ನ ತನ್ನ ಫೋನ್ ಅನ್ನು 10,000 ರೂಪಾಯಿಗೆ ಮಾರಿದ್ದ. ಐಆರ್‌ಎಸ್ ಅಧಿಕಾರಿಯ ಮಗಳನ್ನು ಕೊಲೆ ಮಾಡಿದ ನಂತರ 2.5 ಲಕ್ಷ ರೂಪಾಯಿಗಳನ್ನು ಕದ್ದಿದ್ದ. ಹಣಕ್ಕಾಗಿ ಆ ಮನೆಗೆ ದರೋಡೆಗೆ ಹೋದ ಆತ ತನ್ನ ಸೇಡು ತೀರಿಸಿಕೊಳ್ಳಲು ಅತ್ಯಾಚಾರ ಮತ್ತು ಕೊಲೆ ನಡೆಸಿದ್ದ. ಪೊಲೀಸರು ಮನೆ ಹತ್ತಿರದ ಸಿಸಿಟಿವಿ ದೃಶ್ಯಾವಳಿಗಳನ್ನು ತನಿಖೆಗಾಗಿ ಪರಿಶೀಲಿಸಿದಾಗ ರಾಹುಲ್ ಬೆಳಿಗ್ಗೆ 6:30ಕ್ಕೆ ಆ ಕಾಲೋನಿಗೆ ಬಂದಿರುವುದು ಕಂಡುಬಂದಿತ್ತು. ಅವನು ಬೆಳಿಗ್ಗೆ 6:40ರ ಸುಮಾರಿಗೆ ಮನೆಯೊಳಗೆ ಪ್ರವೇಶಿಸಿದನು. ನಂತರ ಬೆಳಿಗ್ಗೆ 7:20ಕ್ಕೆ ಅಲ್ಲಿಂದ ಮಾಡಿ ಪರಾರಿಯಾಗಿದ್ದನು. ಅವನು 41 ನಿಮಿಷಗಳಲ್ಲಿ ಅತ್ಯಾಚಾರ ಮತ್ತು ಕೊಲೆ ಮಾಡಿದ್ದಾನೆ ಎಂದು ಜಂಟಿ ಆಯುಕ್ತ ವಿಜಯ್ ಕುಮಾರ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಮೈಸೂರಲ್ಲೊಂದು ಮನಕಲಕುವ ಘಟನೆ: ಇರುವೆ ಕಚ್ಚಿ ಐಸಿಯುವಿನಲ್ಲಿದ್ದ ಹಸುಳೆ ಸಾವು? – Kannada News | Cheluvamba Hospital: Mysuru Infant Dies in ICU, Parents Allege Ant Bites and Negligence

ಮೈಸೂರು, ಏಪ್ರಿಲ್​​ 23: ವೈದ್ಯರ ನಿರ್ಲಕ್ಷ್ಯಕ್ಕೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿ ಡಿಸ್ಚಾರ್ಜ್​​ ಆಗಿದ್ದ ರೋಗಿಯೋರ್ವ ನರಳಿ ನರಳಿ ಪ್ರಾಣಬಿಟ್ಟಿರುವ ಆರೋಪ ನಿನ್ನೆಯಷ್ಟೇ ಕೇಳಿಬಂದಿತ್ತು. ಅದು ಮಾಸುವ ಮುನ್ನವೇ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನವಜಾತ ಶಿಶುವೊಂದು ಇರುವೆ ಕಚ್ಚಿ ಮೃತಪಟ್ಟಿರುವ ಬಗ್ಗೆ ಮೈಸೂರಿನಲ್ಲಿ (Mysuru) ದೂರು ಕೇಳಿಬಂದಿದೆ. ಚೆಲುವಾಂಬ ಆಸ್ಪತ್ರೆವಿರುದ್ಧ ಮೃತ ಮಗುವಿನ ಪೋಷಕರು ದೂರಿದ್ದು, ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವೇ ಹಸುಳೆಯ ಸಾವಿಗೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏಪ್ರಿಲ್ 15ರಂದು ಅವಧಿ ಪೂರ್ವ ಗಂಡು ಮಗುವಿನ ಜನನವಾಗಿತ್ತು. ಕೇವಲ 7 ತಿಂಗಳಿಗೆ ಹುಟ್ಟಿದ್ದ ಮಗು 1 ಕೆಜಿ 40 ಗ್ರಾಂ ಮಾತ್ರ ತೂಕ ಹೊಂದಿತ್ತು. ಈ ಹಿನ್ನೆಲೆ ಚೆಲುವಾಂಬ ಆಸ್ಪತ್ರೆಯ ಐಸಿಯುನಲ್ಲಿ ಶಿಶುವಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೇಳೆ ಮಗುವಿಗೆ ಇರುವೆ ಕಚ್ಚಿರುವ ಆರೋಪ ಕೇಳಿಬಂದಿದೆ. ತುಂಬಾ ಇರುವೆಗಳಿದ್ದ ಬಗ್ಗೆ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗೆ ಈ ಮೊದಲೇ ತಿಳಿಸಿದ್ದೆವು. ಆದರೆ ಸಿಹಿ ಕಾರಣಕ್ಕೆ ಒಂದೆರಡು ಇರುವೆಗಳು ಬಂದಿವೆ ಎಂಬ ಸಮಜಾಯಿಷಿಯನ್ನು ಅವರು ನೀಡಿದ್ದರು. ಈಗ ನೋಡಿದರೆ ಮಗುವೇ ತೀರಿಕೊಂಡಿದೆ ಎಂದು ಪೋಷಕರು ಅಲವತ್ತುಕೊಂಡಿದ್ದಾರೆ. ಅಲ್ಲದೆ, ನಮಗೆ ನ್ಯಾಯ ಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ನದಿಗೆ ಈಜಲು ಇಳಿದಿದ್ದ ಇಬ್ಬರು ವಿದ್ಯಾರ್ಥಿನಿಯರು ಜಲಸಮಾಧಿ; ಮೂರೇ ದಿನದಲ್ಲಿ 10 ಮಂದಿ ಕಾವೇರಿ ಪಾಲು!

ಆರೋಪ ಅಲ್ಲಗಳೆದ ಆಸ್ಪತ್ರೆ

ಇನ್ನು ಮೃತ ಮಗುವಿನ ಪೋಷಕರ ಆರೋಪಗಳನ್ನು ಆಸ್ಪತ್ರೆಯ ಪ್ರಭಾರ ವೈದ್ಯಾಧಿಕಾರಿ ಡಾ. ಲಕ್ಷ್ಮೀಕಾಂತ್ ಅಲ್ಲಗಳೆದಿದ್ದಾರೆ. 21 ವಾರಕ್ಕೆ ಮಗು ಹುಟ್ಟಿದ್ದು, ಜನನದ ಸಂದರ್ಭ ಶಿಶು ಕೇವಲ 1 ಕೆಜಿ ಇತ್ತು. ಮಗು ಅಳುತ್ತಿಲ್ಲ ಎನ್ನುವ ಕಾರಣಕ್ಕೆ ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದೆವು. ಐಸಿಯುನಲ್ಲಿ ಚಿಕಿತ್ಸೆ ಹಿನ್ನೆಲೆ ಮಗುವಿನ ಕೈ ಮತ್ತು ಬಾಯಿಗೆ ಪ್ಲಾಸ್ಟರ್ ಹಾಕಿದ್ದೆವು. ಹೀಗಾಗಿ ಆ ಭಾಗದಲ್ಲಿ ಮಾರ್ಕ್​​ಗಳು ಉಂಟಾಗಿವೆ. ಕಳೆದ ಒಂದು ವಾರದಿಂದ ಮಗುವಿನ ಜೀವ ಉಳಿಸಲು ಪ್ರಯತ್ನ ಮಾಡಲಾಗಿದೆ. ನಮ್ಮ ಸಿಬ್ಬಂದಿಗಳಿಂದ ಯಾವುದೇ ನಿರ್ಲಕ್ಷ್ಯ ಆಗಿಲ್ಲ. ಐಸಿಯುನಲ್ಲಿ ಗ್ಲೂಕೊಸ್ ಇರುವುದರಿಂದ ಒಂದೊಂದು ಇರುವೆ ಇರಬಹುದು. ಆದರೆ ಮಗುವಿನ ಪೋಷಕರು ಹೇಳುವಂತೆ ಇರುವೆ ಕಚ್ಚಿ ಸಾವು ಉಂಟಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಜಿಬಿಎ ಘನ ತ್ಯಾಜ್ಯ ಟೆಂಡರ್: IAS ಅಧಿಕಾರಿಗಳ ವಿರುದ್ಧ ಲಂಚ ಆರೋಪ, ಹೈಕೋರ್ಟ್ ಮೊರೆಹೋದ ಗುತ್ತಿಗೆದಾರ – Kannada News | GBB Solid Waste Tender: IAS Officers Accused of 15% Bribery, Contractor Files High Court Petition

ಹೈಕೋರ್ಟ್ (ಸಂಗ್ರಹ ಚಿತ್ರ)Image Credit source: google

ಬೆಂಗಳೂರು, ಏಪ್ರಿಲ್​​ 23: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಘನತ್ಯಾಜ್ಯ ನಿರ್ವಹಣೆ ಟೆಂಡರ್ ಪ್ರಕ್ರಿಯೆಯಲ್ಲಿ ಹಿರಿಯ ಐಎಎಸ್ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಇದೀಗ ಪ್ರಕರಣ ಹೈಕೋರ್ಟ್ (High Court) ಮೆಟ್ಟಿಲೇರಿದೆ. ಐಎಎಸ್ ಅಧಿಕಾರಿಗಳಾದ ತುಷಾರ್ ಗಿರಿನಾಥ್ ಮತ್ತು ಕರಿಗೌಡ ವಿರುದ್ಧ ಲಂಚದ ಆರೋಪ ಮಾಡಿರುವ ಗುತ್ತಿಗೆದಾರ ಎಸ್.ಎನ್.ಬಾಲಸುಬ್ರಮಣಿಯನ್ ಸಲ್ಲಿಸಿದ್ದ ರಿಟ್ ಅರ್ಜಿ ಹೈಕೋರ್ಟ್​ ವಿಚಾರಣೆ ಕೈಗೆತ್ತಿಕೊಂಡಿದ್ದು, ಈ ವೇಳೆ ಸರ್ಕಾರದ ಪರವಾಗಿ ಎಜಿ ಶಶಿಕಿರಣ್ ಶೆಟ್ಟಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ವಾದ ಪ್ರತಿವಾದ ಆಲಿಸಿದ ಕೋರ್ಟ್, ವಿಚಾರಣೆಯನ್ನು ನಾಳೆಗೆ (ಏಪ್ರಿಲ್ 24) ಮುಂದೂಡಿದೆ.

ಶೇ. 15ರಷ್ಟು ಲಂಚ ನೀಡುವಂತೆ ಒತ್ತಡ

ಗುತ್ತಿಗೆದಾರ ಎಸ್.ಎನ್. ಬಾಲಸುಬ್ರಮಣಿಯನ್, ಸಿ.ವಿ. ರಾಮನ್ ನಗರ ಪ್ಯಾಕೇಜ್-1ರ ಟೆಂಡರ್‌ನಲ್ಲಿ ಎಲ್1 ಬಿಡ್‌ದಾರರಾಗಿದ್ದರು. ಆದರೆ, ಜಿಬಿಎ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಅಧಿಕಾರಿ ಕರಿಗೌಡ ಸರ್ಕಾರದ ಪರವಾಗಿ ಒಟ್ಟು ಗುತ್ತಿಗೆ ಮೊತ್ತದ ಶೇ. 15ರಷ್ಟು ಲಂಚ ನೀಡುವಂತೆ ಒತ್ತಡ ಹೇರಿದ್ದಾರೆ ಮತ್ತು ಹಣ ನೀಡದಿದ್ದರೆ ಟೆಂಡರ್ ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಅರ್ಜಿದಾರರ ಪರ ವಕೀಲ ಪಿ. ಪ್ರಸನ್ನ ಕುಮಾರ್ ವಾದ ಮಂಡಿಸಿದರು. ಲಂಚಕ್ಕೆ ಒಪ್ಪದ ಕಾರಣ ಮಾರ್ಚ್ 26ರಂದು ಟೆಂಡರ್ ರದ್ದುಪಡಿಸಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ವಾಹನ ತಪಾಸಣೆ ನಡೆಸಿ ಬಿಡಲು ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದ ಆರ್​​ಟಿಒ ಅಧಿಕಾರಿಗಳು

ಇನ್ನು ಸರ್ಕಾರದ ಪರವಾಗಿ ವಾದ ಮಾಡಿದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಗುತ್ತಿಗೆದಾರರ ಪರ ವಕೀಲರ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಾರ್ಚ್ 10ರಂದು ಅಧಿಕಾರಿಗಳು ಲಂಚ ಕೇಳಿದ್ದಾರೆ ಎಂದು ಅರ್ಜಿದಾರರು ಹೇಳುತ್ತಿದ್ದಾರೆ, ಆದರೆ ಅಂದು ಅವರು ಬೆಂಗಳೂರಿನಲ್ಲಿ ಇರಲಿಲ್ಲ, ದೆಹಲಿಯಲ್ಲಿದ್ದರು. ಅದಕ್ಕೆ ಪೂರಕವಾಗಿ ವಿಮಾನ ಪ್ರಯಾಣದ ಬೋರ್ಡಿಂಗ್ ಪಾಸ್ ಇದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಹಿರಿಯ ಅಧಿಕಾರಿಗಳ ಮೇಲೆ ಸುಳ್ಳು ಆರೋಪ ಮಾಡಿರುವುದಕ್ಕೆ ಅರ್ಜಿಯನ್ನು ವಜಾಗೊಳಿಸುವಂತೆ ಮನವಿ ಮಾಡಿದರು.

ಇದನ್ನೂ ಓದಿ: ಇನ್ಸ್‌ಪೆಕ್ಟರ್​​​ನಿಂದಲೇ ಲಂಚ ಸ್ವೀಕರಿಸುತ್ತಿದ್ದ ಎಸ್‌ಡಿಎ ಲೋಕಾಯುಕ್ತ ಬಲೆಗೆ!

ಎಲ್ಲ ರೀತಿಯ ತನಿಖೆಗೂ ಸಿದ್ಧವಿರುವುದಾಗಿ ಅರ್ಜಿದಾರರ ವಕೀಲರು ತಿಳಿಸಿದ್ದು, ಲಂಚದ ಬೇಡಿಕೆ ಬಗ್ಗೆ ಪ್ರಮಾಣಪತ್ರ ಸಲ್ಲಿಸುವುದಾಗಿ ಹೇಳಿದ್ದಾರೆ. ವಾದ ಪ್ರತಿವಾದದ ಬಳಿಕ ಹೈಕೋರ್ಟ್‌ನ ಏಕಸದಸ್ಯ ಪೀಠವು ವಿಚಾರಣೆಯನ್ನು ನಾಳೆಗೆ ಅಂದರೆ ಏಪ್ರಿಲ್​ 23ಕ್ಕೆ ಮುಂದೂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Source link

ಶ್ರೀಲೀಲಾ ಮೊದಲ ಹಿಂದಿ ಸಿನಿಮಾಕ್ಕೆ ಹಲವು ಅಡೆ-ತಡೆ, ಬಿಡುಗಡೆಗೆ ಹಿನ್ನಡೆ – Kannada News | Sreeleela’s first Hindi movie not releasing soon

ಶ್ರೀಲೀಲಾ (Sreeleela) ಭಾರತದ ಸ್ಟಾರ್ ಪ್ಯಾನ್ ಇಂಡಿಯಾ ನಟಿ ಆಗುವತ್ತ ದಾಪುಗಾಲಿಟ್ಟಿದ್ದಾರೆ. ಕನ್ನಡದ ಈ ನಟಿ, ಈಗಾಗಲೇ ತೆಲುಗು ಚಿತ್ರರಂಗದಲ್ಲಿ ಸ್ಟಾರ್ ನಟಿ ಎನಿಸಿಕೊಂಡಿದ್ದು, ತಮಿಳಿನಲ್ಲೂ ಬ್ಯುಸಿ ಆಗಿದ್ದಾರೆ. ಶ್ರೀಲೀಲಾ ಈಗಾಗಲೇ ಕೆಲವು ಹಿಂದಿ ಸಿನಿಮಾಗಳನ್ನೂ ಸಹ ಒಪ್ಪಿಕೊಂಡಿದ್ದು, ದೊಡ್ಡ ನಿರ್ಮಾಣ ಸಂಸ್ಥೆಗಳ ಜೊತೆಗೆ ಕೆಲಸ ಮಾಡುತ್ತಿದ್ದಾರೆ. ಶ್ರೀಲೀಲಾ ಮೊದಲ ಹಿಂದಿ ಸಿನಿಮಾ ಒಪ್ಪಿಕೊಂಡು ವರ್ಷವಾಗುತ್ತಾ ಬಂದಿದೆ. ಆದರೆ ಸಿನಿಮಾದ ಬಿಡುಗಡೆ ಇನ್ನೂ ಸಾಕಷ್ಟು ತಡ ಆಗಬಹುದು ಎಂದು ಸ್ವತಃ ನಿರ್ದೇಶಕರೇ ಹೇಳಿದ್ದಾರೆ. ಮೊದಲ ಹಿಂದಿ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇರಿಸಿಕೊಂಡಿದ್ದ ಶ್ರೀಲೀಲಾಗೆ ಇದು ಬೇಸರ ತಂದಂತಿದೆ.

ಕಾರ್ತಿಕ್ ಆರ್ಯನ್ ನಾಯಕನಾಗಿ ನಟಿಸಿ, ಖ್ಯಾತ ನಿರ್ದೇಶಕ ಅನುರಾಗ್ ಬಸು ನಿರ್ದೇಶಿಸುತ್ತಿರುವ ಸಿನಿಮಾ ಮೂಲಕ ಶ್ರೀಲೀಲಾ ಬಾಲಿವುಡ್​​ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಮೊದಲ ಸಿನಿಮಾಕ್ಕೆ ಅನುರಾಗ್ ಬಸು ಅಂಥಹಾ ನಿರ್ದೇಶಕರು ಶ್ರೀಲೀಲಾಗೆ ದೊರಕಿದ್ದಾರೆ. ಆದರೆ ಸಿನಿಮಾದ ಮೊದಲ ಪೋಸ್ಟರ್ ಬಂದು ಒಂದೂವರೆ ವರ್ಷವಾಗಿದೆ ಆದರೆ ಸಿನಿಮಾದ ಚಿತ್ರೀಕರಣ ಆಮೆಗಿಂತಲೂ ನಿಧಾನ ಗತಿಯಲ್ಲಿ ಸಾಗುತ್ತಿದೆ. ಅಸಲಿಗೆ ಈ ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿದಿದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಆದರೆ ವಾಸ್ತವವಾಗಿ ಚಿತ್ರದ ಕೇವಲ ಕೆಲವೇ ಭಾಗಗಳು ಮಾತ್ರ ಪೂರ್ಣಗೊಂಡಿವೆ ಎಂದು ತಿಳಿದುಬಂದಿದೆ. ಇದರರ್ಥ ಸಿನಿಮಾದ ಬಿಡುಗಡೆ ಈ ವರ್ಷ ಆಗುವುದು ಅನುಮಾನವೇ ಎಂಬಂತಾಗಿದೆ.

ಇದನ್ನೂ ಓದಿ:ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಮಿಂಚಿದ ಶ್ರೀಲೀಲಾ: ವಿಡಿಯೋ ನೋಡಿ

ನಿರ್ದೇಶಕ ಅನುರಾಗ್ ಬಸು ಇತ್ತೀಚೆಗೆ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ‘ತಂಡವು ಕೇವಲ 45 ದಿನಗಳಿಗಿಂತ ಹೆಚ್ಚು ಚಿತ್ರೀಕರಣ ನಡೆಸಿದೆ ಮತ್ತು ಶೂಟಿಂಗ್ ಈಗಷ್ಟೇ ಆರಂಭವಾಗಿದೆ ಎಂದು ತಿಳಿಸಿದ್ದಾರೆ. ಕಳೆದ ವರ್ಷ ಈ ಚಿತ್ರವನ್ನು ಘೋಷಿಸಿದಾಗ, ಇದು ಡಿಸೆಂಬರ್ 2025 ರಲ್ಲಿ ತೆರೆಗೆ ಬರಲಿದೆ ಎಂದು ತಂಡ ಖಚಿತಪಡಿಸಿತ್ತು. ಆದರೆ ವಿವಿಧ ಕಾರಣಗಳಿಂದಾಗಿ ಚಿತ್ರೀಕರಣ ವಿಳಂಬವಾಗಿದೆ. ಹೆಚ್ಚಿನ ಚಿತ್ರೀಕರಣ ಮುಗಿದಿದೆ ಎಂದು ಭಾವಿಸುವುದು ತಪ್ಪು ಎಂದು ನಿರ್ದೇಶಕರೇ ಈಗ ದೃಢಪಡಿಸಿದ್ದಾರೆ. ಇದೊಂದು ಪ್ರೇಮಕಥೆಯಾಗಿದ್ದು, ಇಷ್ಟು ಸುದೀರ್ಘ ಸಮಯ ತೆಗೆದುಕೊಳ್ಳುವುದು ಸಾಮಾನ್ಯವಲ್ಲ. ನಿರ್ದೇಶಕರ ಈ ಇತ್ತೀಚಿನ ಹೇಳಿಕೆಯು ಚಿತ್ರತಂಡದ ನಡುವೆ ಭಿನ್ನಾಭಿಪ್ರಾಯಗಳು ಇರಬಹುದೇ ಎಂಬ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಈ ಸಿನಿಮಾದ ಹೆಸರು ಸಹ ವಿವಾದಕ್ಕೆ ಈಡಾಗಿದೆ. ಸಿನಿಮಾ ಪ್ರಾರಂಭವಾದಾಗ ಸಿನಿಮಾಕ್ಕೆ ‘ಆಶಿಖಿ 3’ ಎಂದು ಕರೆಯಲಾಗಿತ್ತು. ಆದರೆ ಕೆಲವು ವಿವಾದಗಳ ಬಳಿಕ ಆ ಹೆಸರನ್ನು ಕೈಬಿಡಲಾಗಿದೆ. ಸಿನಿಮಾಕ್ಕೆ ಬೇರೆ ಹೆಸರಿಡಲು ತೀರ್ಮಾನಿಸಲಾಗಿದೆ. ಇನ್ನು ಶ್ರೀಲೀಲಾ, ಇದು ಮಾತ್ರವೇ ಅಲ್ಲದೆ ಇನ್ನೂ ಎರಡು ಹೊಸ ಹಿಂದಿ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಇದರ ಜೊತೆಗೆ ತಮಿಳಿನಲ್ಲಿ ಎರಡು ಹೊಸ ಸಿನಿಮಾ, ತೆಲುಗಿನಲ್ಲಿ ಎರಡು ಹೊಸ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್, ವಿದ್ಯಾರ್ಥಿನಿ ಹೇಳಿದ್ದೇನು? – Kannada News | SSLC Results 2026: Mysuru Student Manaswini Missed Top Place Just 1 Marks

ಮೈಸೂರು, (ಏಪ್ರಿಲ್ 23): 2025-26ನೇ ಸಾಲಿನ ಕರ್ನಾಟಕ SSLC ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆ ಬರೆದಿದ್ದ 7,70,209 ಮಕ್ಕಳ ಪೈಕಿ 7,24,794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆ ಮೂಲಕ ಈ ವರ್ಷ ಎಸ್​​ಎಸ್​​ಎಲ್​​ಸಿಯಲ್ಲಿ ಶೇ.94.1ರಷ್ಟು ವಿದ್ಯಾರ್ಥಿಗಳು ಪಾಸ್​​ ಆಗಿದ್ದಾರೆ. ಇದರಲ್ಲಿ ಮೈಸೂರಿನ ವಿದ್ಯಾರ್ಥಿನಿ ಕೇವಲ ಒಂದು ಅಂಕದಿಂದ ಔಟ್ ಆಫ್ ಔಟ್ ಮಿಸ್ ಮಾಡಿಕೊಂಡಿದ್ದಾಳೆ. ಹೌದು.. ಮೈಸೂರಿನ ಸರಸ್ವತಿಪುರಂನಲ್ಲಿರುವ ವಿಜಯ ವಿಠ್ಠಲ್ ವಿದ್ಯಾ ಸಂಸ್ಥೆ ವಿದ್ಯಾರ್ಥಿನಿ ಮನಸ್ವಿನಿ ಪ್ರದೀಪ್‌ 625 ಕ್ಕೆ 624 ಅಂಕ ಪಡೆದುಕೊಂಡಿದ್ದಾರೆ. ಎಲ್ಲಾ ವಿಷಯದಲ್ಲೂ ಔಟ್ ಆಫ್ ಔಟ್ ತೆಗೆದಿದ್ದಾಳೆ. ಆದ್ರೆ, ವಿಜ್ಞಾನದಲ್ಲಿ ಕೇವಲ 1 ಅಂಕ ಕಡಿಮೆಯಾಗಿದೆ. ಇದರಿಂದ ಔಟ್ ಆಫ್​​ ಔಟ್​​ನಿಂದ ವಂಚಿತಳಾಗಿದ್ದಾಳೆ. ಇನ್ನು ಈ ಬಗ್ಗೆ ಮಾತನಾಡಿರುವ ಮನಸ್ವಿನಿ ಸಂತಸ ಜೊತೆಗೆ ಕೇವಲ ಒಂದು ಅಂಕ ಕಡಿಮೆಯಾಗಿರುವುದಕ್ಕೆ ಕೊಂಚ ಬೇಸರ ಹೊರಹಾಕಿದ್ದಾಳೆ.

ಇದನ್ನೂ ಓದಿ: Karnataka SSLC Result 2026: 625ಕ್ಕೆ 625 ಅಂಕ ಪಡೆದ ಟಾಪರ್ಸ್ ಯಾರು? ಇಲ್ಲಿದೆ ಮಾಹಿತಿ

Source link

ಪ್ರೆಗ್ನೆಂಟ್ ಎಂಬ ಕಾರಣಕ್ಕೆ ದೀಪಿಕಾ ಪಡುಕೋಣೆ ಪಾತ್ರಕ್ಕೆ ಕತ್ತರಿ? ‘ರಾಕಾ’ ಚಿತ್ರತಂಡದ ಸ್ಪಷ್ಟನೆ – Kannada News | Deepika Padukone Raaka Movie role trimming rumours clarified Allu Arjun Atlee

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ (Deepika Padukone) ಎರಡನೇ ಬಾರಿ ತಾಯಿಯಾಗುತ್ತಿರುವ ಸಂಭ್ರಮದಲ್ಲಿದ್ದಾರೆ. ಈ ಸುದ್ದಿ ಹೊರಬಿದ್ದ ಬೆನ್ನಲ್ಲೇ, ಅವರು ನಟಿಸುತ್ತಿರುವ ಬಹುನಿರೀಕ್ಷಿತ ‘ರಾಕಾ’ (Raaka) ಸಿನಿಮಾ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಲವು ವದಂತಿಗಳು ಹರಿದಾಡುತ್ತಿದ್ದವು. ದೀಪಿಕಾ ಗರ್ಭಿಣಿಯಾಗಿರುವ ಕಾರಣ ಚಿತ್ರದಲ್ಲಿ ಅವರ ಪಾತ್ರಕ್ಕೆ ಕತ್ತರಿ ಹಾಕಲಾಗುತ್ತಿದೆ ಅಥವಾ ಅವರನ್ನು ಸಿನಿಮಾದಿಂದ ಕೈಬಿಡಲಾಗುತ್ತಿದೆ ಎಂಬ ಸುದ್ದಿಗಳು ಹಬ್ಬಿದ್ದವು. ಆದರೆ, ಈಗ ಚಿತ್ರತಂಡ ಈ ಎಲ್ಲಾ ವದಂತಿಗಳಿಗೆ ಅಧಿಕೃತವಾಗಿ ಸ್ಪಷ್ಟನೆ ನೀಡಿದೆ.

ಅಲ್ಲು ಅರ್ಜುನ್ ನಾಯಕನಾಗಿ ನಟಿಸುತ್ತಿರುವ ‘ರಾಕಾ’ ಚಿತ್ರದಿಂದ ದೀಪಿಕಾ ಅವರ ಪಾತ್ರವನ್ನು ಟ್ರಿಮ್ ಮಾಡಲಾಗುತ್ತಿದೆ ಎಂಬ ವರದಿಗಳು ಸಂಪೂರ್ಣ ಆಧಾರರಹಿತ ಎಂದು ಚಿತ್ರತಂಡ ಹೇಳಿದೆ. ಈ ಬಗ್ಗೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಚಿತ್ರತಂಡದವರು, ‘ಎಲ್ಲವೂ ಯೋಜನೆಯಂತೆಯೇ ನಡೆಯುತ್ತಿದೆ. ದೀಪಿಕಾ ಪಡುಕೋಣೆ ಈ ಚಿತ್ರದಲ್ಲಿ ಅತ್ಯಂತ ನಿರ್ಣಾಯಕ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಚಿತ್ರೀಕರಣವು ಯಾವುದೇ ಅಡೆತಡೆಯಿಲ್ಲದೆ ಸಾಗುತ್ತಿದೆ’ ಎಂದು ತಿಳಿಸಿದ್ದಾರೆ.

ವರದಿಗಳ ಪ್ರಕಾರ, ದೀಪಿಕಾ ಪಡುಕೋಣೆ ಅವರು ಗರ್ಭಿಣಿಯಾಗಿದ್ದರೂ ಸಹ ಚಿತ್ರದ ಕೆಲಸಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಚಿತ್ರೀಕರಣದ ವೇಳಾಪಟ್ಟಿಗೆ ಯಾವುದೇ ತೊಂದರೆಯಾಗದಂತೆ ಅವರು ಪಾಲ್ಗೊಂಡಿದ್ದಾರೆ. ಅಷ್ಟೇ ಅಲ್ಲದೇ, ಚಿತ್ರದ ಕೆಲವು ಪ್ರಮುಖ ಸಾಹಸ ದೃಶ್ಯಗಳಲ್ಲೂ ಅವರು ಭಾಗಿಯಾಗಿದ್ದಾರೆ ಎನ್ನಲಾಗಿದೆ. ಪ್ರೆಗ್ನೆಂಟ್ ಆದ ಕಾರಣ ಚಿತ್ರತಂಡವು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಚಿತ್ರೀಕರಣ ನಡೆಸುತ್ತಿದೆ.

ಅಟ್ಲಿ ನಿರ್ದೇಶನದ ಈ ಚಿತ್ರವನ್ನು ‘ಸನ್ ಪಿಕ್ಚರ್ಸ್’ ಸಂಸ್ಥೆ ನಿರ್ಮಿಸುತ್ತಿದೆ. ಈಗಾಗಲೇ ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾದ ಅವರ ಫಸ್ಟ್ ಲುಕ್ ಪೋಸ್ಟರ್ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ. ಅಲ್ಲು ಅರ್ಜುನ್ ಮತ್ತು ದೀಪಿಕಾ ಪಡುಕೋಣೆ ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಚಿತ್ರವು 2027ರಲ್ಲಿ ಬಿಡುಗಡೆ ಆಗಲಿದೆ.

ಇದನ್ನೂ ಓದಿ: ಪ್ರೆಗ್ನೆನ್ಸಿಯಲ್ಲಿರುವಾಗಲೇ ದೊಡ್ಡ ರಿಸ್ಕ್ ತೆಗೆದುಕೊಂಡ ದೀಪಿಕಾ ಪಡುಕೋಣೆ

ಈ ಮೊದಲು ದೀಪಿಕಾ ಪಡುಕೋಣೆ ಅವರು ‘ಸ್ಪಿರಿಟ್’ ಹಾಗೂ ‘ಕಲ್ಕಿ 2898 ಎಡಿ’ ಸಿನಿಮಾದ ಸೀಕ್ವೆಲ್​​ನಿಂದ ಹೊರಬಂದಿದ್ದರು. ದಿನಕ್ಕೆ ಕೇವಲ 8 ಗಂಟೆ ಮಾತ್ರ ಕೆಲಸ ಮಾಡುವುದಾಗಿ ಅವರು ಷರತ್ತು ಹಾಕಿದ್ದರಿಂದ ಆ ಸಿನಿಮಾ ತಂಡಗಳು ಅವರನ್ನು ಬಿಟ್ಟು ಬೇರೆ ನಟಿಯರನ್ನು ಆಯ್ಕೆ ಮಾಡಿಕೊಂಡವು. ಆದರೂ ದೀಪಿಕಾ ಡಿಮ್ಯಾಂಡ್ ಕಡಿಮೆ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಯುವ ಜೊತೆಗಿನ ಫೋಟೋ ಹಂಚಿಕೊಂಡು ಮಹಿಳೆಯರಿಗೆ ಸಂದೇಶ ಕೊಟ್ಟ ಶ್ರೀದೇವಿ ಭೈರಪ್ಪ – Kannada News | Sridevi Byrappa’s Empowering Message for Women Amidst Yuva Divorce Case

ನಟ ಯುವ ರಾಜ್​ಕುಮಾರ್ (Yuva) ಹಾಗೂ ಶ್ರೀದೇವಿ ಬೈರಪ್ಪ ವಿವಾಹ ಆದ ಕೆಲವೇ ವರ್ಷಗಳಲ್ಲಿ ದೂರ ಆಗುವ ನಿರ್ಧಾರಕ್ಕೆ ಬಂದರು. ನಟಿಯ ಜೊತೆ ಯುವ ಅಫೇರ್ ಹೊಂದಿದ್ದಾರೆ ಎಂದು ಶ್ರೀದೇವಿ ಆರೋಪಿಸಿದ್ದಾರೆ. ಇದೇ ಕಾರಣ ನೀಡಿ ಅವರು ಯುವ ಅವರಿಂದ ವಿಚ್ಛೇದನ ಕೇಳಿದ್ದಾರೆ. ಈ ಪ್ರಕರಣ ಇನ್ನೂ ಕೋರ್ಟ್​​ನಲ್ಲಿ ಇದೆ ಎನ್ನಲಾಗಿದೆ. ಈಗ ಶ್ರೀದೇವಿ ಅವರು ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ಅದು ಕೂಡ ಯುವ ಜೊತೆಗಿನ ಫೋಟೋ ಹಂಚಿಕೊಂಡು! ಫೋಟೋ ಕ್ಯಾಪ್ಶನ್​​ ಅಲ್ಲಿ ಉದ್ದನೆಯ ಸಂದೇಶ ಬರೆದಿದ್ದಾರೆ.

‘ತಡವಾಗುವುದಕ್ಕೂ ಮೊದಲು ಮಹಿಳೆಯರೇ ನಿಮ್ಮ ಹಕ್ಕುಗಳ ಬಗ್ಗೆ ತಿಳಿಯಿರಿ’ ಎಂದು ಬರಹ ಆರಂಭಿಸಿದ್ದಾರೆ ಶ್ರೀದೇವಿ. ‘ನಾನು ಈ ಹಕ್ಕುಗಳ ಬಗ್ಗೆ ಶಿಕ್ಷಣದ ಮೂಲಕ ಕಲಿತಿಲ್ಲ. ಕಠಿಣ ಸಮಯಗಳಲ್ಲಿ ಮತ್ತು ಎಲ್ಲಾ ಮಹಿಳೆಯರು ಘನತೆಯಿಂದ ಬದುಕುವ ಸಲುವಾಗಿ ನಮಗಿಂತ ಮೊದಲು ಹೋರಾಡಿದ ಜನರಿಂದ ಕಲಿತಿದ್ದೇನೆ. ಮದುವೆ ಮಾಡಿ ಮತ್ತೊಂದು ಮನೆಗೆ ಕಳುಹಿಸಿಕೊಡಲು ಮಾತ್ರ ನಾವು ಹುಡುಗಿಯರನ್ನು ಸಿದ್ಧಪಡಿಸುತ್ತೇವೆ. ಆದರೆ, ಅವರ ಅವರ ಹಕ್ಕುಗಳನ್ನು ಪಡೆದುಕೊಳ್ಳಲು ಸಿದ್ಧಪಡಿಸೋದು ತುಂಬಾನೇ ಕಡಿಮೆ’ ಎಂದು ಅವರು ಹೇಳಿದ್ದಾರೆ.

‘ನೋವು ಮತ್ತು ಸಂಕಟಗಳನ್ನು ಅನುಭವಿಸುತ್ತಿರುವ, ಇನ್ನೂ ಹೋರಾಡಲು ಮತ್ತು ಬಿಟ್ಟುಕೊಡದ ಮಸ್ಥಿತಿ ಇರುವ ಮಹಿಳೆರಿಗೆ ಎರಡು ಸಂದೇಶ.

1. ‘ಸಂತೋಷದಿಂದ ದಾಂಪತ್ಯ ಆರಂಭಿಸಿ ನಂತರ ಅವರು ನಿಮ್ಮ ಬಗ್ಗೆ ಸುಳ್ಳು ಆರೋಪ ಮಾಡಿದರೆ ತಾಳ್ಮೆಯಿಂದ ಇರಿ. ನಿಮ್ಮ ಮೇಲೆ ನಿಮಗೆ ನಂಬಿಕೆ ಇರಲಿ. ಸಾಬೀತುಪಡಿಸಬೇಕಿರುವುದು ಅವರ ಜವಾಬ್ದಾರಿ, ನಿಮ್ಮದಲ್ಲ. ಮಹಿಳೆಯರಿಗೆ ಅವಮಾನ ಮಾಡುವುದು ಅವರು ತಪ್ಪಿಸಿಕೊಳ್ಳಲು ಬಳಸುವ ಅಗ್ಗದ ತಂತ್ರ. ನೆನಪಿಡಿ, ನ್ಯಾಯಾಲಯವು ಪುರಾವೆಗಳನ್ನು ಕೇಳುತ್ತದೆಯೇ ಹೊರತು, ಕೆಲವು ಅಗ್ಗದ ಸ್ಕ್ರಿಪ್ಟ್ ಅಲ್ಲ’ ಎಂದಿದ್ದಾರೆ ಶ್ರೀದೇವಿ.

2. ‘ಸೋಶಿಯಲ್ ಮೀಡಿಯಾ ಫೋಟೋಗಳನ್ನು ತೆಗೆದುಹಾಕಲು ನಿಮ್ಮನ್ನು ಅವರು ಒತ್ತಾಯಿಸುತ್ತಾರೆ. ಅದಕ್ಕೆ ಅವರು ನೀಡುತ್ತಿರುವ ಕಾರಣ, ನಮಗೆ ಅದನ್ನು ಇಟ್ಟುಕೊಳ್ಳಲು ಕಾನೂನುಬದ್ಧ ಹಕ್ಕಿಲ್ಲ ಎಂದು. ಮದುವೆಯಾಗಿದ್ದರೂ ಅಕ್ರಮ ಸಂಬಂಧದಲ್ಲಿ ಇರುವುದು ಮತ್ತು ಮದುವೆ ಆದರೂ ಸ್ವತಂತ್ರವಾಗಿ ಓಡಾಡುವುದು ಕಾನೂನುಬದ್ಧವಲ್ಲ’ ಎಂದಿದ್ದಾರೆ ಅವರು.

‘ಪ್ರತಿಯೊಂದು ಗಾಯವು ಗೋಚರಿಸುವುದಿಲ್ಲ. ಆದರೆ ಪ್ರತಿಯೊಂದು ಮೌನಕ್ಕೂ ಬೆಲೆ ಇರುತ್ತದೆ. ಮಹಿಳೆಯರಿಗೆ ಹಾನಿ ಮಾಡುವ ಮತ್ತು ಅವರನ್ನು ಹಗುರವಾಗಿ ಪರಿಗಣಿಸುವ ಸಮಾಜವನ್ನು ನಾವು ಸಾಮಾನ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ. ನಮ್ಮ ಪೀಳಿಗೆಯೊಂದಿಗೆ ಇದು ಕೊನೆಗೊಳ್ಳಬೇಕು. ನಮ್ಮ ಮನೆಗಳಲ್ಲಿರುವ ಹೆಣ್ಣು ಮಕ್ಕಳು ವಾಸಿಸಲು ಉತ್ತಮ ಹಾಗೂ ಸುರಕ್ಷಿತ ಜಗತ್ತನ್ನು ಹೊಂದಬೇಕು’ ಎಂದು ತಮ್ಮ ಸಾಲುಗಳನ್ನು ಪೂರ್ಣಗೊಳಿಸಿದ್ದಾರೆ.

ಇದನ್ನೂ ಓದಿ: ಯುವ ಹಾಗೂ ಆ ನಟಿ ಬಗ್ಗೆ ಕೇಳಿದ್ದಕ್ಕೆ ರಾಜ್​​ಕುಮಾರ್ ಹಾಡಿನ ಮೂಲಕ ಉತ್ತರಿಸಿದ ಶ್ರೀದೇವಿ

2019ರಲ್ಲಿ ಯುವ ಹಾಗೂ ಶ್ರೀದೇವಿ ವಿವಾಹ ನಡೆಯಿತು. ಇಬ್ಬರೂ ಪ್ರೀತಿಸಿ ಮದುವೆ ಆದರು. ವಿವಾಹ ಆದ ಕೆಲ ವರ್ಷಗಳ ಬಳಿಕ ಇಬ್ಬರೂ ದೂರ ಆಗುವ ನಿರ್ಧಾರಕ್ಕೆ ಬಂದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 3:05 pm, Thu, 23 April 26

Source link

ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳ ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ, ನಾಲ್ವರ ಸ್ಥಿತಿ ಚಿಂತಾಜನಕ – Kannada News | Train Collision Near Copenhagen Leaves Several Critically Injured

ಡೆನ್ಮಾರ್ಕ್​, ಏಪ್ರಿಲ್ 23: ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಕಾರಣ 12 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡೆನ್​ಮಾರ್ಕ್​ನಲ್ಲಿ ನಡೆದಿದೆ. ಕೋಪನ್ ಹ್ಯಾಗನ್ ನಿಂದ ಉತ್ತರಕ್ಕೆ ಸುಮಾರು 40 ಕಿ.ಮೀ ದೂರದಲ್ಲಿರುವ ಹಿಲ್ಲರೋಡ್ ಬಳಿ ಬೆಳಗ್ಗೆ 6.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು,12 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, 4 ಮಂದಿಗೆ ಅತ್ಯಂತ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಎಲ್ಲಾ ಪ್ರಯಾಣಿಕರನ್ನು ರೈಲುಗಳಿಂದ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡಿಕ್ಕಿಯ ಕಾರಣವನ್ನು ನಿರ್ಧರಿಸಲು ತನಿಖೆಗಳು ನಡೆಯುತ್ತಿವೆ, ಸ್ಥಳದಿಂದ ಬಂದ ಚಿತ್ರಗಳು ಎರಡೂ ರೈಲುಗಳ ಮುಂಭಾಗದ ಭಾಗಗಳು ತೀವ್ರವಾಗಿ ಹಾನಿಗೊಳಗಾಗಿರುವುದನ್ನು ತೋರಿಸುತ್ತವೆ, ಆದರೂ ರೈಲುಗಳು ಹಳಿ ತಪ್ಪಿಲ್ಲ. ಈ ಮಾರ್ಗವನ್ನು ಸ್ಥಳೀಯ ನಿವಾಸಿಗಳು, ಕಾರ್ಮಿಕರು ಮತ್ತು ಶಾಲಾ ಮಕ್ಕಳು ಹೆಚ್ಚಾಗಿ ಬಳಸುತ್ತಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ – Kannada News | SSLC Results 2026: Number of students failing in third language Hindi has decreased

ಬೆಂಗಳೂರು, (ಏಪ್ರಿಲ್ 23): ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಲಿ (Karnataka School Examination and Assessment Board) 2025–26ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ (10ನೇ ತರಗತಿ) ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು, ಈ ಬಾರಿ ರಾಜ್ಯದಲ್ಲಿ ದಾಖಲೆಯ ಮಟ್ಟದ ಸಾಧನೆ ಕಂಡುಬಂದಿದೆ. ಒಟ್ಟಾರೆ ಉತ್ತೀರ್ಣ ಪ್ರಮಾಣವು ಶೇಕಡಾ 94.10 ಆಗಿದ್ದು, ಕಳೆದ ವರ್ಷಗಳಿಗಿಂತ ಗಮನಾರ್ಹ ಏರಿಕೆಯಾಗಿದೆ. ಅದರಲ್ಲೂ ಮುಖ್ಯವಾಗಿ ಈ ಬಾರಿ ಹಿಂದಿ ಬಗ್ಗೆ ಭಾರೀ ಗೊಂದಲಗಳು ಉದ್ಭವಿಸಿದ್ದವು. ಪರೀಕ್ಷೆ ಸಮಯದಲ್ಲೇ ಅಂಕ ಇಲ್ಲ ಗ್ರೇಡ್ ನೀಡುವ ಬಗ್ಗೆ ತೀರ್ಮಾನಿಸಲಾಗಿದ್ದು, ಕೊನೆ ಹೈಕೋರ್ಟ್ ಏಕಾಏಕಿ ಈ ರೀತಿ ಮಾಡುವುದು ಸರಿ ಅಲ್ಲ. ಅಂಕ ನೀಡಿಬೇಕೆಂದು ಆದೇಶಿಸಿದ್ದು, ಅದರಂತೆ ಇದೀಗ ಗ್ರೇಡ್ ಬದಲಾಗಿ ಅಂಕಗಳನ್ನ ನೀಡಲಾಗಿದೆ. ಹೀಗೆ ಹಲವು ಗೊಂದಲಗಳ ನಡುವೆಯೇ ಹಿಂದಿ ಪರೀಕ್ಷೆಯಲ್ಲಿ ಫೇಲಾದವರ ಸಂಖ್ಯೆ ಇಳಿಕೆಯಾಗಿದ್ದು, 11,128 ವಿದ್ಯಾರ್ಥಿಗಳು ಹಿಂದಿ ಭಾಷೆಯಲ್ಲಿ ಅನುತ್ತೀರ್ಣರಾಗಿದ್ದಾರೆ. ಇದೀಗ ಫೇಲಾದವರಿಗೆ ತೃತೀಯ ಭಾಷೆಗೆ ಅಂಕಗಳ ಉತ್ತಮ ಪಡಿಸಲು ಶುಲ್ಕ ವಿನಾಯಿತಿ ನೀಡಲಾಗಿದೆ.

ಇದನ್ನೂ ಓದಿ: SSLC District Wise Result: ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ

Source link