Category Archives: Blog

Your blog category

ಗಾಜಿಯಾಬಾದ್‌ನಲ್ಲಿ 4 ವರ್ಷದ ಮಗುವನ್ನು ಕೊಂದಿದ್ದ ಆರೋಪಿಯ ಎನ್​ಕೌಂಟರ್; ಶವ ಬೇಡವೆಂದ ಕುಟುಂಬಸ್ಥರು – Kannada News | Accused who killed 4 year old girl in Ghaziabad encounter family refuses to claim body

ಗಾಜಿಯಾಬಾದ್, ಏಪ್ರಿಲ್ 22: ಮಾವ, ಮಾವ ಎಂದು ಮುದ್ದಾಗಿ ಕರೆಯುತ್ತಾ ಮನೆತುಂಬ ಓಡಾಡಿಕೊಂಡಿದ್ದ 4 ವರ್ಷದ ಹೆಣ್ಣುಮಗುವಿನ ಮೇಲೆ ಆ 55 ವರ್ಷದ ಮಾವನ ಕಣ್ಣು ಬಿದ್ದಿತ್ತು. ತನ್ನ ಸ್ವಂತ ತಂಗಿಯ 4 ವರ್ಷದ ಮಗುವನ್ನು ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದ ಆ ವ್ಯಕ್ತಿ ಆ ಮಗುವಿನ ಮೇಲೆ ಅತ್ಯಾಚಾರ (Child Abuse) ನಡೆಸಿದ್ದ. ಬಳಿಕ ಈ ವಿಷಯವನ್ನು ಆ ಮಗು ಮನೆಯವರಿಗೆ ಹೇಳಬಹುದು ಎಂಬ ಭಯದಿಂದ ಮಗುವನ್ನು ಕೊಲೆ ಮಾಡಿದ್ದ. ಬಳಿಕ ತನಗೇನೂ ಗೊತ್ತೇ ಇಲ್ಲವೆಂಬಂತೆ ಮಗುವಿನ ಶವದ ಮುಂದೆ ಮನೆಯವರ ಜೊತೆ ಅತ್ತು ನಾಟಕವಾಡಿದ್ದ.

ಗಾಜಿಯಾಬಾದ್​​ನ ಶಾಲಿಮಾರ್ ಗಾರ್ಡನ್ ಪ್ರದೇಶದಲ್ಲಿ ಕಾರಿನಲ್ಲಿ ಮಗುವಿನ ಶವವನ್ನು ಮುಚ್ಚಿಡಲಾಗಿತ್ತು. ಆ ಮಗುವಿನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದು ಸೋದರಮಾವನೇ ಎಂಬುದು ಪೊಲೀಸ್ ತನಿಖೆ ವೇಳೆ ಬಯಲಾಗಿತ್ತು. ಇದರಿಂದ ಆತನ ಕುಟುಂಬ ಆಘಾತಗೊಂಡಿತ್ತು. ಅವರಿಗೆ ಇಡೀ ಊರಿನಲ್ಲಿ ತಲೆ ಎತ್ತಿಕೊಂಡು ತಿರುಗದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಕೊಲೆ ಆರೋಪಿ ಜಾಸಿಮ್ ತಲೆಮರೆಸಿಕೊಂಡಿದ್ದ. ಆತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಆತನನ್ನು ಹಿಡಿದುಕೊಟ್ಟವರಿಗೆ 50,000 ರೂ. ಬಹುಮಾನ ಘೋಷಿಸಲಾಗಿತ್ತು.

ಇದನ್ನೂ ಓದಿ: ‘ಮಂಚಕ್ಕೆ ಕೈ-ಕಾಲು ಕಟ್ಟಿ ಹಾಕಿ ಬೆಂಕಿ ಹಚ್ಚಿದೆ’: ಪ್ರಿಯಕರನ ಕೊಲೆ ಮಾಡಿದ್ದಾಗಿ ತಪ್ಪೊಪ್ಪಿದ ಯುವತಿ ಬಿಚ್ಚಿಟ್ಟಳು ಹಲವು ರಹಸ್ಯ!

ಆತನನ್ನು ಪತ್ತೆಹಚ್ಚಿದ ಪೊಲೀಸರು ಆತನನ್ನು ಬಂಧಿಸಲು ಪ್ರಯತ್ನಿಸಿದ್ದರು. ಆದರೆ, ಭಾನುವಾರ ತಡರಾತ್ರಿ ತೀಲಾ ಮಾಡ್ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಪೊಲೀಸರು ಜಾಸಿಮ್​ನನ್ನು ಕೊಂದಿದ್ದಾರೆ. ಬಂಧನದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುವಾಗ ಆತ ಪೊಲೀಸರ ಮೇಲೆ ಗುಂಡು ಹಾರಿಸಿದ್ದ. ಇದರಿಂದ ಪೊಲೀಸರು ಎನ್​ಕೌಂಟರ್ ನಡೆಸಿದ್ದರು. ದೆಹಲಿ ರೈಲು ನಿಲ್ದಾಣದಲ್ಲಿ ಪರಾರಿಯಾಗಲು ಯತ್ನಿಸುತ್ತಿದ್ದಾಗ ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಆತನನ್ನು ಪತ್ತೆಹಚ್ಚಲಾಯಿತು.

ಇದನ್ನೂ ಓದಿ: ಅತ್ತಿಗೆ ಜೊತೆ ಅನೈತಿಕ ಸಂಬಂಧ: ಸಹೋದರನಿಂದಲೇ ನಡೀತು ಚಿಕ್ಕಪ್ಪನ ಮಗನ ಬರ್ಬರ ಕೊಲೆ; ಮೂವರು ವಶಕ್ಕೆ

ಲೋನಿಯ ಬಂತ್ಲಾ ಕಾಲುವೆಯ ಬಳಿ ಜಾಸಿಮ್ ಇದ್ದಾನೆ ಎಂಬ ಸುಳಿವಿನ ಮೇರೆಗೆ ಪೊಲೀಸ್ ತಂಡಗಳು ಬಲೆ ಬೀಸಿ ಆತನನ್ನು ಹಿಡಿಯಲು ಪ್ರಯತ್ನಿಸಿದವು. ಆಗ ಆತ ತಪ್ಪಿಸಿಕೊಳ್ಳಲು ಪೊಲೀಸರ ಮೇಲೆ ಹಲ್ಲೆ ನಡೆಸಿದಾಗ ಪೊಲೀಸರು ಗುಂಡು ಹಾರಿಸಿ ಕೊಂದಿದ್ದಾರೆ. ಈ ಎನ್‌ಕೌಂಟರ್‌ನಲ್ಲಿ ಇಬ್ಬರು ಪೊಲೀಸರು, ಹೆಡ್ ಕಾನ್‌ಸ್ಟೆಬಲ್‌ಗಳಾದ ಅಮಿತ್ ಮತ್ತು ಇಕ್ಬಾಲ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಗುವಿನ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ್ದ ಜಾಸಿಮ್ ಹತ್ಯೆಯಾದ ಸುದ್ದಿ ತಿಳಿದರೂ ಅವರ ಕುಟುಂಬದವರು ಆತನ ಶವವನ್ನು ವಶಕ್ಕೆ ಪಡೆದು, ಸಂಸ್ಕಾರ ಮಾಡಲು ನಿರಾಕರಿಸಿದ್ದಾರೆ. ಆತ ಮಗುವನ್ನು ಕೊಂದಿ ದಿನವೇ ನಮ್ಮೆಲ್ಲರ ಪಾಲಿಗೆ ಸತ್ತುಹೋಗಿದ್ದಾನೆ ಎಂದು ಕುಟುಂಬಸ್ಥರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಬೆನ್ನಿಗೆ ಚೂರಿ ಹಾಕಿದ ಬೆಸ್ಟ್ ಫ್ರೆಂಡ್: ಪ್ರೀತಿಸಿ ಮದುವೆಯಾದ ಪತ್ನಿ ಈಗ ಗೆಳೆಯನ ಪಾಲು – Kannada News | Bangalore Relationship Betrayal: Wife Elopes with Friend, Gym Trainer Seeks Justice

ಪ್ರೀತಿಸಿ ಮದುವೆಯಾದ ಪತ್ನಿ ಈಗ ಗೆಳೆಯನ ಪಾಲು

ಬೆಂಗಳೂರು, ಏ.22: ರಾಜ್ಯದಲ್ಲಿ ಗಂಡನನ್ನು ಬಿಟ್ಟು ಬೇರೊಬ್ಬನ ಜತೆಗೆ ಓಡಿ ಹೋಗಿರುವ ಪ್ರಕರಣಗಳೇ ವರದಿಯಾಗುತ್ತಿದೆ. ಬೆಂಗಳೂರು, ಮಂಡ್ಯದಲ್ಲಿ ಇಂದು ಬೆಳಿಗ್ಗೆಯಿಂದ ಎರಡು ಪ್ರಕರಣಗಳು ಪತ್ತೆಯಾಗಿದೆ. ಇದೀಗ ಮತ್ತೊಂದು ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪ್ರೀತಿಸಿ, ಮನೆಯವರ ಒಪ್ಪಿಗೆ ಪಡೆದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಜಿಮ್ ಟ್ರೈನರ್ ಒಬ್ಬರಿಗೆ ಸ್ವಂತ ಸ್ನೇಹಿತನೇ ಕಣ್ಣು ಹಾಕಿರುವ ಘಟನೆ ಬೆಳಕಿಗೆ ಬಂದಿದೆ. “ಅವನು ನನಗೆ ಅಣ್ಣನ ಸಮಾನ” ಎಂದು ಪತಿ ನಿತೇಶ್‌ಗೆ ಹೇಳುತ್ತಿದ್ದ ಪತ್ನಿಯು ಈಗ ಅದೇ ಸ್ನೇಹಿತನ ಜೊತೆ ನಾಪತ್ತೆಯಾಗಿರುವುದು ಸಂಚಲನ ಮೂಡಿಸಿದೆ.

ಜಿಮ್ ಟ್ರೈನರ್ ನಿತೇಶ್ ಮತ್ತು ನವೀನ್ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುವಾಗ ಸ್ನೇಹಿತರಾಗಿದ್ದರು. ನಿತೇಶ್ ಯುವತಿಯೊಬ್ಬರನ್ನು ಪ್ರೀತಿಸಿ ಮದುವೆಯಾದ ಬಳಿಕ, ಸ್ನೇಹಿತ ನವೀನ್ ಅವರ ಮನೆಯಲ್ಲೇ ಬಾಡಿಗೆಗೆ ವಾಸವಿದ್ದರು. ಈ ವೇಳೆ ನವೀನ್ ತನ್ನ ಪತ್ನಿ ಮೇಲೆ ಕಣ್ಣು ಹಾಕಿರುವುದು ನಿತೇಶ್ ಗಮನಕ್ಕೆ ಬಂದಿತ್ತು. ನವೀನ್‌ನ ನಂಬರ್ ಅನ್ನು ಹುಡುಗಿಯ ಹೆಸರಿನಲ್ಲಿ ಸೇವ್ ಮಾಡಿಕೊಂಡು ಪತ್ನಿ ಚಾಟಿಂಗ್ ಮಾಡುತ್ತಿದ್ದಳು. ಈ ಬಗ್ಗೆ ಹಲವು ಬಾರಿ ಬುದ್ಧಿ ಮಾತು ಹೇಳಿದ್ದ ನಿತೇಶ್, ನಂತರ ಬನಶಂಕರಿಯ ಬೇರೊಂದು ಮನೆಗೆ ಶಿಫ್ಟ್ ಆಗಿದ್ದರು.

ಬನಶಂಕರಿಗೆ ಹೋದ ಮೇಲೂ ನವೀನ್ ಜೊತೆಗಿನ ಸಂಪರ್ಕ ಮುಂದುವರಿದಿತ್ತು. ಮೂರು ದಿನಗಳ ಹಿಂದೆ ಹೊಟ್ಟೆನೋವು ಎಂದು ಕೆಲಸಕ್ಕೆ ರಜೆ ಹಾಕಿದ್ದ ಪತ್ನಿ, ಬ್ಯಾಗ್ ಪ್ಯಾಕ್ ಮಾಡಿಕೊಂಡು ಪ್ರಿಯಕರ ನವೀನ್ ಜೊತೆ ಎಸ್ಕೇಪ್ ಆಗಿದ್ದಾಳೆ. ಪತ್ನಿ ನಾಪತ್ತೆಯಾದ ಬಗ್ಗೆ ನಿತೇಶ್ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರು ಯುವತಿ ಮತ್ತು ನವೀನ್‌ನನ್ನು ಪತ್ತೆಹಚ್ಚಿ ಠಾಣೆಗೆ ಕರೆತಂದಿದ್ದಾರೆ. ಆದರೆ ಪೊಲೀಸರ ಮುಂದೆ ಪತ್ನಿ ಒಂದು ಶಾಕಿಂಗ್​​​ ಹೇಳಿಕೆಯನ್ನು ನೀಡಿದ್ದಾರೆ.

ಇದನ್ನೂ ಓದಿ: ‘ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!’ ಪತ್ನಿ ವಿರುದ್ಧ ಪತಿ ಆಕ್ರೋಶ

“ನಾನು ಯಾವುದೇ ಕಾರಣಕ್ಕೂ ಗಂಡನ ಜೊತೆ ಹೋಗಲ್ಲ, ಬದಲಾಗಿ ಪಿಜಿ (PG) ಹೋಗುತ್ತೇನೆ” ಎಂದು ಯುವತಿ ಹಠ ಹಿಡಿದಿದ್ದಾಳೆ.ಇದರಿಂದ ಕಂಗೆಟ್ಟಿರುವ ನಿತೇಶ್, “ನನಗೆ ಮೋಸವಾಗಿದೆ, ನ್ಯಾಯ ಕೊಡಿಸಿ” ಎಂದು ಪೊಲೀಸರ ಮುಂದೆ ಅಳಲು ತೋಡಿಕೊಂಡಿದ್ದಾರೆ. ಜಯನಗರ ಪೊಲೀಸರು ಈ ಸಂಬಂಧ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:33 pm, Wed, 22 April 26

Source link

ಈ ವರ್ಷದ ಪ್ರಮುಖ ಸೆಕ್ಟರ್ ಇದು; ಗಮನಿಸಬೇಕಾದ 6 ಪ್ರಮುಖ ಮ್ಯೂಚುವಲ್ ಫಂಡ್​ಗಳಿವು – Kannada News | Major Mutual Funds tracking the energy sector in 2026 year

ಪಶ್ಚಿಮ ಏಷ್ಯಾ ಬಿಕ್ಕಟ್ಟು ಪರಿಸ್ಥಿತಿಯು ಇಂಧನ ಕ್ಷೇತ್ರದ ಮೇಲೆ ಎಲ್ಲರ ಚಿತ್ತ ನೆಡುವಂತೆ ಮಾಡಿದೆ. ತೈಲ, ಅನಿಲ, ವಿದ್ಯುತ್ ಇತ್ಯಾದಿ ಎನರ್ಜಿ ಸೆಕ್ಟರ್ ಈಗ ಅತ್ಯಗತ್ಯ ಎನಿಸಿದೆ. ಇಂಧನ ಭದ್ರತೆಯ ಪ್ರಾಮುಖ್ಯತೆ ಈಗ ಎಲ್ಲರಿಗೂ ಗೊತ್ತಾಗಿದೆ. ಭಾರತವು 2030ರ ವೇಳೆಗೆ 500GW ನವೀಕರಿಸಬಹುದಾದ ಇಂಧನ ಗುರಿಯನ್ನು ಹೊಂದಿದ್ದು, ಈ ಹಿನ್ನೆಲೆಯಲ್ಲಿ ಎನರ್ಜಿ ಫಂಡ್‌ಗಳು ಹೂಡಿಕೆದಾರರ ನೆಚ್ಚಿನ ಆಯ್ಕೆಯಾಗಿವೆ. ಇಂಧನ (Energy) ವಲಯದಲ್ಲಿ ಗಮನಿಸಬೇಕಾದ 6 ಪ್ರಮುಖ ಮ್ಯೂಚುವಲ್ ಫಂಡ್‌ಗಳ (Mutual Funds) ಬಗ್ಗೆ ಮಾಹಿತಿ ಇಲ್ಲಿದೆ.

1. ನಿಪ್ಪಾನ್ ಇಂಡಿಯಾ ಪವರ್ ಆಂಡ್ ಇನ್ಫ್ರಾ ಫಂಡ್

ಇದು ಶಕ್ತಿ ಮತ್ತು ಮೂಲಸೌಕರ್ಯ ವಲಯದಲ್ಲಿ ಹೂಡಿಕೆ ಮಾಡುವ ಅತ್ಯಂತ ಹಳೆಯ ಫಂಡ್‌ಗಳಲ್ಲಿ ಒಂದಾಗಿದೆ. ಈ ಫಂಡ್ ಪ್ರಮುಖವಾಗಿ ರಿಲಯನ್ಸ್ ಇಂಡಸ್ಟ್ರೀಸ್, NTPC ಮತ್ತು ಟಾಟಾ ಪವರ್‌ಗಳಂತಹ ದೊಡ್ಡ ಕಂಪನಿಗಳಲ್ಲಿ ಹೆಚ್ಚಿನ ಹೂಡಿಕೆ ಹೊಂದಿದೆ. ಇತ್ತೀಚಿನ ವರದಿಗಳ ಪ್ರಕಾರ, ಇದು ಸ್ಥಿರವಾದ ಆದಾಯವನ್ನು ನೀಡುತ್ತಾ ಬಂದಿದೆ.

2. ಎಸ್‌ಬಿಐ ಎನರ್ಜಿ ಅಪರ್ಚುನಿಟಿಸ್ ಫಂಡ್

ಇದು ಹೊಸ ತಲೆಮಾರಿನ ಎನರ್ಜಿ ಫಂಡ್ ಆಗಿದ್ದು, ಸಾಂಪ್ರದಾಯಿಕ ತೈಲ ಮತ್ತು ಅನಿಲ ಕಂಪನಿಗಳ ಜೊತೆಗೆ ಹಸಿರು ಇಂಧನ (Green Energy) ಕಂಪನಿಗಳ ಮೇಲೆ ಹೆಚ್ಚು ಗಮನ ಹರಿಸುತ್ತದೆ. ಗೇಲ್ (GAIL) ಮತ್ತು ಎನ್‌ಟಿಪಿಸಿ (NTPC) ಈ ಫಂಡ್‌ನ ಪ್ರಮುಖ ಹೂಡಿಕೆಗಳಾಗಿವೆ.

ಇದನ್ನೂ ಓದಿ: ಆರ್​ಬಿಐನಿಂದ ಹೊಸ ಇ-ಮ್ಯಾಂಡೇಟ್ ಫ್ರೇಮ್​ವರ್ಕ್; 15,000 ರೂವರೆಗಿನ ರಿಕರಿಂಗ್ ಪೇಮೆಂಟ್ಸ್​ಗೆ ಒಟಿಪಿ ಬೇಕಿಲ್ಲ

3. ಟಾಟಾ ರಿಸೋರ್ಸಸ್ ಆಂಡ್ ಎನರ್ಜಿ ಫಂಡ್

ಈ ಫಂಡ್ ಇಂಧನ ಮಾತ್ರವಲ್ಲದೆ ಲೋಹ (Metals) ಮತ್ತು ಗಣಿಗಾರಿಕೆ ವಲಯದಲ್ಲೂ ಹೂಡಿಕೆ ಮಾಡುತ್ತದೆ. ವೇದಾಂತ ಮತ್ತು ಅಲ್ಟ್ರಾಟೆಕ್ ಸಿಮೆಂಟ್‌ನಂತಹ ಕಂಪನಿಗಳಲ್ಲಿ ಹೂಡಿಕೆ ಮಾಡುವ ಮೂಲಕ ಇದು ವೈವಿಧ್ಯತೆಯನ್ನು ಕಾಯ್ದುಕೊಂಡಿದೆ.

4. ಡಿಎಸ್‌ಪಿ ನ್ಯಾಚುರಲ್ ರಿಸೋರ್ಸಸ್ ಆಂಡ್ ಎನರ್ಜಿ ಫಂಡ್

ಈ ಫಂಡ್‌ನ ವಿಶೇಷತೆಯೆಂದರೆ ಇದು ಜಾಗತಿಕ ಇಂಧನ ಮಾರುಕಟ್ಟೆಯಲ್ಲೂ ಹೂಡಿಕೆ ಮಾಡುತ್ತದೆ (BlackRock ಮೂಲಕ). ಭಾರತೀಯ ಕಂಪನಿಗಳಾದ ONGC ಮತ್ತು ಆಯಿಲ್ ಇಂಡಿಯಾದಲ್ಲಿ ಇದು ಬಲವಾದ ಹೂಡಿಕೆ ಹೊಂದಿದೆ.

5. ಐಸಿಐಸಿಐ ಪ್ರುಡೆನ್ಶಿಯಲ್ ಎನರ್ಜಿ ಆಪರ್ಚುನಿಟಿಸ್ ಫಂಡ್

ಇಂಧನ ಸಂವಹನ (Power Transmission) ಮತ್ತು ವಿತರಣಾ ಕಂಪನಿಗಳ ಮೇಲೆ ಇದು ಹೆಚ್ಚು ಒತ್ತು ನೀಡುತ್ತದೆ. ಮಾರುಕಟ್ಟೆಯಲ್ಲಿ ಇಂಧನ ಬೇಡಿಕೆ ಹೆಚ್ಚಾದಂತೆಲ್ಲಾ ಈ ಫಂಡ್ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದೆ.

6. ಕೊಟಾಕ್ ಎನರ್ಜಿ ಆಪರ್ಚುನಿಟಿಸ್ ಫಂಡ್ (Kotak Energy Opportunities Fund)

ಹೊಸದಾಗಿ ಮಾರುಕಟ್ಟೆಗೆ ಬಂದಿರುವ ಈ ಫಂಡ್, ಇಂಧನ ಪರಿವರ್ತನೆಯ (Energy Transition) ಲಾಭ ಪಡೆಯಲು ಪ್ರಯತ್ನಿಸುತ್ತಿದೆ. ಅಂದರೆ ಸಾಂಪ್ರದಾಯಿಕ ಇಂಧನದಿಂದ ಸೌರ ಮತ್ತು ಪವನ ಶಕ್ತಿಯತ್ತ ಬದಲಾಗುತ್ತಿರುವ ಕಂಪನಿಗಳನ್ನು ಇದು ಗುರಿಯಾಗಿಸಿಕೊಂಡಿದೆ.

2026ರಲ್ಲಿ ಇಂಧನ ವಲಯದಲ್ಲಿ ಏಕೆ ಹೂಡಿಕೆ ಮಾಡಬೇಕು?

ಭಾರತ ಸರ್ಕಾರವು ನವೀಕರಿಸಬಹುದಾದ ಇಂಧನಕ್ಕೆ ಒತ್ತು ನೀಡುತ್ತಿದೆ. ಸೌರಶಕ್ತಿ (PM Suryaghar) ಮತ್ತು ಹಸಿರು ಹೈಡ್ರೋಜನ್ ಯೋಜನೆಗಳಿಗೆ ಭಾರಿ ಪ್ರೋತ್ಸಾಹ ನೀಡುತ್ತಿದೆ. ಇಂಧನ ವಲಯದಲ್ಲಿ ಹೂಡಿಕೆ ಮಾಡಬೇಕೆನ್ನಲು ಇದು ಒಂದು ಕಾರಣ.

ಕೈಗಾರಿಕೆಗಳು ಮತ್ತು ಎಲೆಕ್ಟ್ರಿಕ್ ವಾಹನಗಳ (EV) ಬಳಕೆ ಹೆಚ್ಚಾದಂತೆ ವಿದ್ಯುತ್ ಬೇಡಿಕೆ ಗಣನೀಯವಾಗಿ ಏರುತ್ತಿರುವುದು ಮತ್ತೊಂದು ಸಂಗತಿ.

ಸರ್ಕಾರ ಮೂಲಸೌಕರ್ಯ ಅಭಿವೃದ್ಧಿ ಹೆಚ್ಚಿಸುತ್ತಿದೆ. ವಿದ್ಯುತ್ ಸರಬರಾಜು ಜಾಲ (Grid Modernization) ಸುಧಾರಿಸಲು ಸರ್ಕಾರ ಲಕ್ಷಾಂತರ ಕೋಟಿ ರೂಪಾಯಿ ಹೂಡಿಕೆ ಮಾಡುತ್ತಿದೆ.

ಇದನ್ನೂ ಓದಿ: ಭಾರತದ ಷೇರು ಮಾರುಕಟ್ಟೆ ಇವತ್ತು ಕುಸಿತ; ಏನಿರಬಹುದು ಕಾರಣಗಳು? ಇಲ್ಲಿದೆ ಡೀಟೇಲ್ಸ್

ಗಮನಿಸಿ: ಇವು ‘ಸೆಕ್ಟೋರಲ್ ಫಂಡ್‌’ಗಳಾದ ಕಾರಣ ರಿಸ್ಕ್ ಹೆಚ್ಚಿರುತ್ತದೆ. ಆದ್ದರಿಂದ ಹೂಡಿಕೆ ಮಾಡುವ ಮುನ್ನ ನಿಮ್ಮ ಆರ್ಥಿಕ ಸಲಹೆಗಾರರನ್ನು ಸಂಪರ್ಕಿಸುವುದು ಸೂಕ್ತ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಜೈಲಿನೊಳಗೆ ಇದ್ದುಕೊಂಡೇ ವಿಧ್ವಂಸಕ ಕೃತ್ಯ ಎಸಗಲು ಸಂಚು: ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ NIA ನ್ಯಾಯಾಲಯ – Kannada News | Bengaluru Prison Terror Plot: NIA Jails T. Naseer and 6 Others for 7 Years

ಬೆಂಗಳೂರು, ಏಪ್ರಿಲ್​​ 22: ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯ ಎಸಗಲು ಜೈಲಿನಲ್ಲಿಯೇ ಸಂಚೂರೂಪಿಸಿದ್ದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಲಷ್ಕರ್-ಎ-ತೈಬಾ ಸಂಘಟನೆಯ ಸದಸ್ಯ ಟಿ. ನಾಸೀರ್ ಸೇರಿದಂತೆ ಏಳು ಆರೋಪಿಗಳಿಗೆ ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನ್ಯಾಯಾಲಯವು ಏಳು ವರ್ಷದ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ನಾಸೀರ್ ಸೇರಿ ಸಯ್ಯದ್ ಸುಹೈಲ್ ಖಾನ್, ಮೊಹಮ್ಮದ್ ಉಮರ್, ಜಾಹಿದ್ ತಬ್ರೇಜ್, ಸಯ್ಯದ್ ಮುದಸ್ಸಿರ್ ಪಾಶಾ, ಮೊಹಮ್ಮದ್ ಫೈಸಲ್ ರಬ್ಬಾನಿ ಮತ್ತು ಸಲ್ಮಾನ್ ಖಾನ್​​ ಶಿಕ್ಷೆಗೆ ಒಳಪಟ್ಟವರಾಗಿದ್ದು, 48,000 ದಂಡವನ್ನೂ ವಿಧಿಸಲಾಗಿದೆ.

ಬೆಂಗಳೂರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಾಸೀರ್ ನೇತೃತ್ವದಲ್ಲಿ ಲಷ್ಕರ್-ಎ-ತೈಬಾ ಸಂಪರ್ಕಿತ ಉಗ್ರ ಸಂಚು ರೂಪಿಸಲಾಗಿತ್ತು ಎಂದು ಎನ್‌ಐಎ ತಿಳಿಸಿದ್ದು, ಈ ಪ್ರಕರಣದಲ್ಲಿ ಆರೋಪಿಗಳು ಈಗಾಗಲೇ ತಪ್ಪೊಪ್ಪಿಕೊಂಡಿದ್ದರು. ಈ ಸಂಚಿನಲ್ಲಿ ಜೈಲಿನಲ್ಲಿ ಇರುವ ಯುವಕರನ್ನು ಗುರುತಿಸಿ, ನೇಮಕ ಮಾಡಿ, ತರಬೇತಿ ನೀಡಿ, ಮತಾಂತರಗೊಳಿಸಿ, ಉಗ್ರವಾದದತ್ತ ಆಕರ್ಷಿಸಿ ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಆರೋಪಿಗಳು ಯೋಜಿಸಿದ್ದರು. 2023ರ ಜುಲೈನಲ್ಲಿ ಶಸ್ತ್ರಾಸ್ತ್ರಗಳು, ಗುಂಡುಗಳು ಮತ್ತು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಂಡ ನಂತರ ಬೆಂಗಳೂರು ಸೆಂಟ್ರಲ್ ಕ್ರೈಮ್ ಬ್ರಾಂಚ್ (CCB) ಈ ಬಗ್ಗೆ ಪ್ರಕರಣ ದಾಖಲಿಸಿತ್ತು.

ಇದನ್ನೂ ಓದಿ: ಇನ್ಸ್‌ಪೆಕ್ಟರ್​​​ನಿಂದಲೇ ಲಂಚ ಸ್ವೀಕರಿಸುತ್ತಿದ್ದ ಎಸ್‌ಡಿಎ ಲೋಕಾಯುಕ್ತ ಬಲೆಗೆ!

ಆರೋಪಿಗಳು ಬೆಂಗಳೂರಿನಲ್ಲಿಯೂ ಉಗ್ರ ದಾಳಿಗಳನ್ನು ನಡೆಸುವ ಯೋಜನೆ ರೂಪಿಸಿದ್ದರು ಎಂಬುದು ಬಯಲಾದ ಕಾರಣ, ನಂತರ ಈ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೆತ್ತಿಕೊಂಡಿತ್ತು. 2008ರ ಬೆಂಗಳೂರು ಸರಣಿ ಸ್ಫೋಟ ಪ್ರಕರಣದಲ್ಲಿ ಟಿ. ನಾಸೀರ್ ಅದಾಗಲೇ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದ ಎಂಬುದಿಲ್ಲಿ ಗಮನಾರ್ಹ. ಬಂಧಿತರಲ್ಲಿ ಸಲ್ಮಾನ್ ಖಾನ್ ಎಂಬಾತನನ್ನು ರುವಾಂಡಾ ಗಣರಾಜ್ಯದಿಂದ ಹಸ್ತಾಂತರದ ಮೂಲಕ ಭಾರತಕ್ಕೆ ತರಲಾಗಿತ್ತು. ಈ ಪ್ರಕರಣದಲ್ಲಿ 11 ಮಂದಿ ಬಂಧಿತ ಆರೋಪಿಗಳು ಹಾಗೂ ಪರಾರಿಯಾಗಿರುವ ಜುನೈದ್ ಅಹ್ಮದ್ ವಿರುದ್ಧ ಎನ್‌ಐಎ ಆರೋಪಪಟ್ಟಿ ಸಲ್ಲಿಸಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಇನ್ಸ್‌ಪೆಕ್ಟರ್​​​ನಿಂದಲೇ ಲಂಚ ಸ್ವೀಕರಿಸುತ್ತಿದ್ದ ಎಸ್‌ಡಿಎ ಲೋಕಾಯುಕ್ತ ಬಲೆಗೆ! – Kannada News | Lokayukta trap in Bengaluru: SDA caught red handed taking Rs 10,000 bribe from inspector at Hebbal office

ಬೆಂಗಳೂರು, (ಏಪ್ರಿಲ್ 22):  ಇನ್ಸ್​ಪೆಕ್ಟರ್​  (Inspector) ಬಳಿಯೇ ಲಂಚ (Bribe) ಸ್ವೀಕರಿಸುವಾಗ ಎಸ್​​ಡಿಎ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.  ಇನ್ನೊಂದೆಡೆ ಬೆಂಗಳೂರಿನ (Bengaluru) ಹೆಬ್ಬಾಳದ ಪಶುಸಂಗೋಪನೆ ಇಲಾಖೆ ಆಯುಕ್ತರ ಕಚೇರಿಯ ಎಸ್‌ಡಿಎ ಸಹ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇಲಾಖಾ ತನಿಖೆಯ ಅಂತಿಮ ಆದೇಶ ಪ್ರಕ್ರಿಯೆ ಕಾರ್ಯಗತಗೊಳಿಸಲು ಪಶುಸಂಗೋಪನೆ ಇಲಾಖೆ ಆಯುಕ್ತರ ಕಚೇರಿಯ ಎಸ್‌ಡಿಎ ಮುದಾಸಿರ್ ಎನ್ನುವರು ವಿಜಯಪುರ ಜಿಲ್ಲೆಯ ಪಶುಸಂಗೋಪನೆ ಇನ್ಸ್‌ಪೆಕ್ಟರ್‌ ಮಲ್ಲಿಕಾರ್ಜುನ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಅದರಂತೆ 10 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ರೆಡ್​ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರೆ. ಸದ್ಯ ಮುದಾಸಿರ್‌ನನ್ನು ವಶಕ್ಕೆ ಪಡೆದು ಲೋಕಾಯುಕ್ತ ಪೊಲೀಸರಿಂದ ವಿಚಾರಣೆ ನಡೆಸಿದ್ದಾರೆ.

ಪಿಎಸ್​​ಐ, ಕಾನ್ಸ್​ಟೇಬಲ್ ಲೋಕಾ ಬಲೆಗೆ

ಬಾಗಲಕೋಟೆ: ಇಸ್ಪೀಟ್ ಆಡುವವರ ಬಳಿ ಲಂಚ ಸ್ವೀಕರಿಸುವಾಗ ಪೊಲೀಸ್​ ಸಬ್ ಇನ್ಸ್​ಪೆಕ್ಟರ್ ಹಾಗೂ ಕಾನ್ಸ್​​​ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕೆರೂರು ಠಾಣೆಯ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​​ ಭೀಮಪ್ಪ ರಬಕವಿ ಹಾಗೂ ಕಾನ್ಸ್​ಟೇಬಲ್ ಸಂತೋಷ್ ಬಿರಾದಾರ ಎನ್ನುವರು ಮುತ್ತಪ್ಪ ನಾಯ್ಕರ್​ ಎಂಬುವರಿಂದ ಲಂಚ ಸ್ವೀಕರಿಸುವಾಗ ರೆಡ್​ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ: 1.2 ಲಕ್ಷ ಹಣ ಪಡೆಯುವಾಗ ಪಿಡಿಓ, ಯುಟ್ಯೂಬರ್ ಲೋಕಾಯುಕ್ತ ಬಲೆಗೆ

ಇಸ್ಪೀಟ್ ಆಡುತ್ತಿದ್ದ ಓರ್ವ ಆರೋಪಿ ರಕ್ಷಣೆಗೆ ಮುಂದಾಗಿದ್ದ ಪೊಲೀಸರು, ಬೈಕ್ ಬಿಡಲು 2 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ಮುತ್ತಪ್ಪ ನಾಯ್ಕರ್ ಎಂಬುವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ದೂರಿನ ಅನ್ವಯ ಲೋಕಾಯುಕ್ತ SP ಮಹಾಲಿಂಗ ನಂದಗಾಂವಿ ಮಾರ್ಗದರ್ಶನದಲ್ಲಿ ದಾಳಿ ನಡೆಸಿ, ಪಿಎಸ್​ಐ ಭೀಮಪ್ಪ, ಪಿಸಿ ಬಿರಾದಾರನನ್ನು 1.70 ಲಕ್ಷ ಲಂಚ ಸ್ವೀಕರಿಸುವಾಗ ಹಿಡಿದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಶಾರುಖ್ ಖಾನ್ ಸಿನಿಮಾ ಹಿಂದಿಕ್ಕಿ ನಂಬರ್ 1 ಆದ ‘ಧುರಂಧರ್ 2’ – Kannada News | Dhurandhar 2 movie became highest grossed Indian movie in UK

ರಣವೀರ್ ಸಿಂಗ್ (Ranveer Singh) ನಟಿಸಿ, ಆದಿತ್ಯ ಧರ್ ನಿರ್ದೇಶನ ಮಾಡಿರುವ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭಾರಿ ದೊಡ್ಡ ಹಿಟ್ ಆಗಿದೆ. ಬಾಕ್ಸ್ ಆಫೀಸ್​​ನಲ್ಲಿ ಹಲವು ಹೊಸ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಅದು ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲಿಯೂ ಸಹ ‘ಧುರಂಧರ್ 2’ ಸಿನಿಮಾ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಇದೀಗ ‘ಧುರಂಧರ್ 2’ ಸಿನಿಮಾ ಶಾರುಖ್ ಖಾನ್ ನಟಿಸಿರುವ ಬ್ಲಾಕ್ ಬಸ್ಟರ್ ಸಿನಿಮಾ ‘ಪಠಾಣ್’ವನ್ನು ಹಿಂದಿಕ್ಕಿ ನಂಬರ್ ಎನಿಸಿಕೊಂಡಿದೆ. ಅಸಲಿಗೆ ಭಾರತದಲ್ಲಿ ಕೆಲ ವಾರದ ಹಿಂದೆಯೇ ‘ಪಠಾಣ್’ ಸಿನಿಮಾವನ್ನು ‘ಧುರಂಧರ್ 2’ ಹಿಂದಿಕ್ಕಿದೆ ಆದರೆ ಈ ಬಾರಿ ಯುನೈಟೆಡ್ ಕಿಂಗ್​​ಡಮ್​​ನಲ್ಲೂ ಸಹ ‘ಪಠಾಣ್’ ಸಿನಿಮಾವನ್ನು ‘ಧುರಂಧರ್ 2’ ಸಿನಿಮಾ ಸೋಲಿಸಿದೆ.

‘ಧುರಂಧರ್ 2’ ಸಿನಿಮಾ ಯುಕೆಯಲ್ಲಿ ಬಿಡುಗಡೆಯಾಗಿ 33 ದಿನಗಳಲ್ಲಿ ಸುಮಾರು 55.63 ಕೋಟಿ ರೂ ಗಳಿಕೆ ಮಾಡಿದೆ. 2023 ರಲ್ಲಿ ಬಿಡುಗಡೆಯಾಗಿದ್ದ ಶಾರುಖ್ ಖಾನ್ ಅವರ ‘ಪಠಾಣ್’ ಯುಕೆಯಲ್ಲಿ 55 ಕೋಟಿ ರೂಪಾಯಿ ಗಳಿಕೆ ಮಾಡಿ, ಯುಕೆ ಬಾಕ್ಸ್ ಆಫೀಸ್​​ನಲ್ಲಿ ಅತಿ ಹೆಚ್ಚು ಹಣ ಗಳಿಸಿದ ಸಿನಿಮಾ ಎನಿಸಿಕೊಂಡಿತ್ತು. ಇದೀಗ ಮೂರು ವರ್ಷಗಳ ಬಳಿಕ ಆ ದಾಖಲೆಯನ್ನು ‘ಧುರಂಧರ್ 2’ ಸಿನಿಮಾ ಮುರಿದು ಹಾಕಿದೆ.

ಇದನ್ನೂ ಓದಿ:ಆಮಿರ್ ಮಾತಿಗೆ ಮಣಿದ ರಣವೀರ್ ಸಿಂಗ್; 10 ಕೋಟಿ ಮರಳಿಸಿದ ‘ಧುರಂಧರ್’ ನಟ

ಈ ಚಿತ್ರವು ಕೇವಲ ಯುಕೆಯಲ್ಲಿ ಮಾತ್ರವಲ್ಲದೆ, ಇನ್ನೂ ಕೆಲವು ದೇಶಗಳಲ್ಲಿ ಸಹ ದಾಖಲೆ ಮೊತ್ತದ ಗಳಿಕೆ ಮಾಡಿದೆ. ಉತ್ತರ ಅಮೇರಿಕಾದಲ್ಲಿ ಅತಿ ಹೆಚ್ಚು ಹಣ ಗಳಿಸಿದ ಭಾರತೀಯ ಸಿನಿಮಾ ಎನಿಸಿಕೊಂಡಿದೆ. ‘ಬಾಹುಬಲಿ 2’ ಸಿನಿಮಾದ ದಾಖಲೆಯನ್ನು ಉತ್ತರ ಅಮೆರಿಕನಲ್ಲಿ ಮುರಿದಿದೆ ‘ಧುರಂಧರ್ 2’. ಮತ್ತು ಜರ್ಮನಿಯಲ್ಲೂ ಸಹ ಗಳಿಕೆಯಲ್ಲಿ ದಾಖಲೆಯನ್ನು ಈ ಸಿನಿಮಾ ಬರೆದಿದೆ.

ಆದಿತ್ಯ ಧರ್ ನಿರ್ದೇಶನದ ಈ ಸ್ಪೈ ಆಕ್ಷನ್ ಥ್ರಿಲ್ಲರ್‌ನಲ್ಲಿ ರಣವೀರ್ ಸಿಂಗ್ ಅವರೊಂದಿಗೆ ಸಂಜಯ್ ದತ್, ಅರ್ಜುನ್ ರಾಂಪಾಲ್, ಅಕ್ಷಯ್ ಖನ್ನಾ ಮತ್ತು ಆರ್ ಮಾಧವನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ವಿಶ್ವದಾದ್ಯಂತ ಈ ಚಿತ್ರವು ಈಗಾಗಲೇ ಸುಮಾರು 1,787 ಕೋಟಿ ರೂ.ಗಳಿಗೂ ಹೆಚ್ಚು ಗಳಿಕೆ ಮಾಡಿದ್ದು, ಶೀಘ್ರದಲ್ಲೇ ‘ಬಾಹುಬಲಿ 2’ ಚಿತ್ರದ ಒಟ್ಟು ಗಳಿಕೆಯನ್ನು ಮೀರಿಸುವತ್ತ ಮುನ್ನುಗ್ಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮನೆಲಿ ನೈಟಿ ಹಾಕಿಕೊಳ್ತಿದ್ಲು ಎಂದು ಹೆಂಡತಿಯನ್ನೇ ಸುಟ್ಟ ಪತಿ! ಪತ್ನಿಯ ಸ್ಥಿತಿ ಗಂಭೀರ – Kannada News | Domestic Violence: Man burns Wife over wearing nighty instead of saree at home

ಮನೆಲಿ ನೈಟಿ ಹಾಕಿಕೊಳ್ತಿದ್ಲು ಎಂದು ಹೆಂಡತಿಯನ್ನೇ ಸುಟ್ಟ ಪತಿ!

ಬೆಳಗಾವಿ , ಏಪ್ರಿಲ್ 22: ಜಿಲ್ಲೆಯಲ್ಲಿ ಪತ್ನಿಯ (Wife) ಉಡುಪಿನ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ದಾರುಣ ಅಂತ್ಯ ಕಂಡಿರುವ ಘಟನೆ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ನೈಟಿ ಧರಿಸಿದ್ದ ಕಾರಣಕ್ಕೆ ಪತ್ನಿಗೇ ಕಿರಾತಕ ಗಂಡ ಬೆಂಕಿ ಹಚ್ಚಿದ್ದು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.

ಸೀರೆ ಉಡುತ್ತಿರಲಿಲ್ಲ ಅಂತ ಜಗಳ

ಪತಿ ಪತ್ನಿಯರ ನಡುವೆ ಸಾವಿರ ಅಸಮಾಧಾನವಿರುತ್ತದೆ. ಕೆಲವರು ಬುದ್ಧಿ ಜೀವಿಗಳಂತೆ ಪರಸ್ಪರ ಮಾತನಾಡಿಕೊಂಡು ಸಮಸ್ಯೆ ಬಗೆಹರಿಸಿಕೊಂಡರೆ, ಇನ್ನೂ ಕೆಲವರು ಕೋಪದ ಕೈಗೆ ಬುದ್ಧಿಕೊಟ್ಟು ಆತುರದ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇತ್ತೀಚಿಗೆ ಅನೈತಿಕ ಸಂಬಂಧದ ವಿಚಾರಕ್ಕೆ ಸಂಸಾರದಲ್ಲಿ ಬಿರುಕು ಬಂದು ಕೊನೆಗೆ ಕೊಲೆಯಲ್ಲಿ ಅಂತ್ಯವಾಗುವ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ. ಆದರೆ ಇಲ್ಲೊಬ್ಬ ಮಹಾಶಯ ತನ್ನ ಹೆಂಡತಿ, ಮನೆಯಲ್ಲಿ ಸೀರೆ ಉಡದೆ ನೈಟಿ ಹಾಕುತ್ತಿದ್ದಳು ಎಂಬ ವಿಚಾರಕ್ಕೆ ರೊಚ್ಚಿಗೆದ್ದು ಪತ್ನಿಯನ್ನೇ ಸುಡಲು ಮುಂದಾಗೊರುವ ಘಟನೆ ನಡೆದಿದೆ.

ಮಂಜುಳಾ ಪಾಟೀಲ್ ಮತ್ತು ಕೃಷ್ಣಾಜಿ ಪಾಟೀಲ್ ದಂಪತಿ ಎಂಟು ವರ್ಷಗಳ ಹಿಂದೆ ವಿವಾಹವಾಗಿದ್ದರು. ಮನೆಯಲ್ಲಿ ಪತ್ನಿ ಸೀರೆ ಬದಲು ನೈಟಿ ಅಥವಾ ಗೌನ್ ಧರಿಸುತ್ತಿದ್ದ ವಿಚಾರಕ್ಕೆ ಆಗಾಗ ಜಗಳ ನಡೆಯುತ್ತಿತ್ತು. ಇದೇ ವಿಚಾರವಾಗಿ ಮತ್ತೊಮ್ಮೆ ವಾಗ್ವಾದ ಉಂಟಾಗಿ, ಅದು ಅತಿರೇಕಕ್ಕೆ ತಲುಪಿದ ಸಂದರ್ಭದಲ್ಲಿ ಕೃಷ್ಣಾಜಿ ಪತ್ನಿ ಮಂಜುಳಾಗೆ ಬೆಂಕಿ ಹಚ್ಚಿದ್ದಾನೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ ಕಸ ಹಾಕಲು ಹೋದ ವಿವಾಹಿತ ಮಹಿಳೆ ನಿಗೂಢ ನಾಪತ್ತೆ: ಪ್ರಿಯಕರನ ಜೊತೆ ಪರಾರಿಯಾದ ಆರೋಪ, ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಪತ್ನಿಯ ದೇಹದ ಶೇ80ರಷ್ಟು ಭಾಗ ಸುಟ್ಟು ಕರಕಲು!

ಘಟನೆಯಿಂದ ಮಂಜುಳಾ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯ ದೇಹದ ಶೇ80ರಷ್ಟು ಭಾಗ ಸುಟ್ಟಿದೆ. ಗಂಭೀರ ಗಾಯಗಳಿಂದ ಬಳಲಿದ ಆಕೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಗೋವಾಕ್ಕೆ ಸ್ಥಳಾಂತರಿಸಲಾಗಿದೆ.

ಮನೆಯಲ್ಲಿ ಗಲಾಟೆಯ ಶಬ್ದ ಕೇಳಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ನಂದಗಡ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Gold Rates: ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಯಥಾಸ್ಥಿತಿ; ಇಲ್ಲಿದೆ ದರಪಟ್ಟಿ – Kannada News | Gold Price Today on 22nd April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 22: ಚಿನ್ನದ ಬೆಲೆ ಇಂದು ಬುಧವಾರ ಇಳಿಕೆ ಕಂಡಿದೆ. ಗ್ರಾಮ್​ಗೆ 50 ರೂನಷ್ಟು ಅಲ್ಪ ಕುಸಿತ ಇದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ (Gold Rates) ಯಥಾಸ್ಥಿತಿ ಇದೆ. ಕೆಲವೆಡೆ ಅಲ್ಪಸ್ವಲ್ಪ ಏರಿಳಿತಗಳಿವೆ. ಬೆಳ್ಳಿ ಬೆಲೆಯಲ್ಲಿ ಇವತ್ತು ಬದಲಾವಣೆಯಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,54,750 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,41,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 22ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,475 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,185 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,606 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 265 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,475 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,185 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 265 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,185 ರೂ
  • ಚೆನ್ನೈ: 14,250 ರೂ
  • ಮುಂಬೈ: 14,185 ರೂ
  • ದೆಹಲಿ: 14,200 ರೂ
  • ಕೋಲ್ಕತಾ: 14,185 ರೂ
  • ಕೇರಳ: 14,185 ರೂ
  • ಅಹ್ಮದಾಬಾದ್: 14,190 ರೂ
  • ಜೈಪುರ್: 14,200 ರೂ
  • ಲಕ್ನೋ: 14,200 ರೂ
  • ಭುವನೇಶ್ವರ್: 14,185 ರೂ

ಇದನ್ನೂ ಓದಿ: ಮಾಸಿಕ 20,500 ರೂ ಆದಾಯ ತರಬಲ್ಲ ಪೋಸ್ಟ್ ಆಫೀಸ್​ನ ಎಸ್​ಸಿಎಸ್​ಎಸ್ ಸ್ಕೀಮ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 585 ರಿಂಗಿಟ್ (13,880 ರುಪಾಯಿ)
  • ದುಬೈ: 537.50 ಡಿರಾಮ್ (13,733 ರುಪಾಯಿ)
  • ಅಮೆರಿಕ: 149.50 ಡಾಲರ್ (14,022 ರುಪಾಯಿ)
  • ಸಿಂಗಾಪುರ: 190.60 ಸಿಂಗಾಪುರ್ ಡಾಲರ್ (14,041 ರುಪಾಯಿ)
  • ಕತಾರ್: 532 ಕತಾರಿ ರಿಯಾಲ್ (13,686 ರೂ)
  • ಸೌದಿ ಅರೇಬಿಯಾ: 544 ಸೌದಿ ರಿಯಾಲ್ (13,604 ರುಪಾಯಿ)
  • ಓಮನ್: 57.05 ಒಮಾನಿ ರಿಯಾಲ್ (13,899 ರುಪಾಯಿ)
  • ಕುವೇತ್: 44.43 ಕುವೇತಿ ದಿನಾರ್ (13,606 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 265 ರೂ
  • ಚೆನ್ನೈ: 275 ರೂ
  • ಮುಂಬೈ: 265 ರೂ
  • ದೆಹಲಿ: 265 ರೂ
  • ಕೋಲ್ಕತಾ: 265 ರೂ
  • ಕೇರಳ: 275 ರೂ
  • ಅಹ್ಮದಾಬಾದ್: 265 ರೂ
  • ಜೈಪುರ್: 265 ರೂ
  • ಲಕ್ನೋ: 265 ರೂ
  • ಭುವನೇಶ್ವರ್: 275 ರೂ
  • ಪುಣೆ: 265

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಮಳೆ ಬಂದರೆ ಆಫೀಸ್‌ಗೆ ಬರುವಂತಿಲ್ಲ! ಉದ್ಯೋಗಿಗಳಿಗೆ 7 ದಿನಗಳ ‘ರೈನ್‌ ಲೀವ್’ ನೀಡಿದ ಕಂಪನಿ, ಬೆಂಗಳೂರಿಗೂ ಈ ವ್ಯವಸ್ಥೆ ಬೇಕು – Kannada News | Unique ‘Rain Leave’ Policy in China: How This Company Prioritizes Staff Welfare

ಬೀಜಿಂಗ್, ಏ.22: ಸಾಮಾನ್ಯವಾಗಿ ಮಳೆ ಬಂದರೆ ಕೆಲಸಕ್ಕೆ ಹೋಗಲು ಕಿರಿಕಿರಿ ಎನಿಸುವುದು ಸಹಜ. ಆದರೆ ಚೀನಾದ ಹುನಾನ್ ಪ್ರಾಂತ್ಯದ ಸ್ನ್ಯಾಕ್ ಕಂಪನಿಯೊಂದು ತನ್ನ ಉದ್ಯೋಗಿಗಳಿಗೆ ಮಳೆಯ ದಿನಗಳಲ್ಲಿ ಮನೆಯಲ್ಲೇ ಇರಲು ‘ರೈನ್‌ ಲೀವ್’ (Rain Leave) ಆಫರ್ ನೀಡಿದೆ. ಲಾಟರಿ ಮೂಲಕ ಆಯ್ಕೆಯಾದ ಅದೃಷ್ಟವಂತ ಉದ್ಯೋಗಿಗೆ 7 ದಿನಗಳ ಕಾಲ ಈ ವಿಶೇಷ ರಜೆ ಸಿಕ್ಕಿದೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಇದನ್ನು ನೋಡಿದ ಅನೇಕರ ಬೆಂಗಳೂರಿಗೂ ಬಿಸಿಲು ಜಾಸ್ತಿ ಇದ್ರೆ ರಜೆ ನೀಡಬೇಕು ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

ಚೀನಾದ ಪ್ರಸಿದ್ಧ ಸ್ಪೈಸಿ ಸ್ನ್ಯಾಕ್ ಕಂಪನಿ ‘ಮಾಲಾ ವಾಂಗ್ಜಿ’ (Mala Wangzi) ತನ್ನ ಉದ್ಯೋಗಿಗಳಿಗಾಗಿ ವಾರ್ಷಿಕ ಲಾಟರಿ ಕಾರ್ಯಕ್ರಮ ಹಮ್ಮಿಕೊಂಡಿತ್ತು. ದಕ್ಷಿಣ ಚೀನಾದಲ್ಲಿ ಏಪ್ರಿಲ್ ತಿಂಗಳಲ್ಲಿ ಅತಿಯಾದ ಮಳೆ ಮತ್ತು ಆರ್ದ್ರತೆ ಇರುವುದರಿಂದ, ಉದ್ಯೋಗಿಗಳಿಗೆ ಪ್ರಯಾಣ ಮಾಡುವುದು ಕಷ್ಟ ಎಂಬ ಅಂಶವನ್ನು ಮನಗಂಡು ಕಂಪನಿಯ ಮಾಲೀಕರು ಈ ವಿಭಿನ್ನ ಯೋಜನೆಯನ್ನು ಘೋಷಿಸಿದ್ದರು.

ಕಂಪನಿಯ ಮಾರ್ಕೆಟಿಂಗ್ ಮುಖ್ಯಸ್ಥ ಜಂಗ್ ಜಿಲಾಂಗ್ ಹಂಚಿಕೊಂಡಿರುವ ವಿಡಿಯೋದಲ್ಲಿ ಉದ್ಯೋಗಿಗಳು ಲಾಟರಿ ಎತ್ತುವುದನ್ನು ಕಾಣಬಹುದು. ಅಲ್ಲಿ ಸಿಕ್ಕ ಬಹುಮಾನಗಳು ಹೀಗಿವೆ. 7 ದಿನಗಳ ಸಂಪೂರ್ಣ ಸಂಬಳ ಸಹಿತ ‘ಮಳೆ ರಜೆ’. ಇದನ್ನು ಉದ್ಯೋಗಿ ತನಗೆ ಬೇಕಾದಾಗ ಬಳಸಬಹುದು. ಆಟೋಮ್ಯಾಟಿಕ್ ಡ್ರೈಯರ್, ಹೇರ್ ಡ್ರೈಯರ್, ರೈನ್ ಬೂಟ್ಸ್, ಛತ್ರಿ ಮತ್ತು ಡಿಹ್ಯೂಮಿಡಿಫೈಯರ್ ಸೇರಿ ಹಲವು ಉಪಯುಕ್ತ ವಸ್ತುಗಳು ನೀಡಲಾಗಿದೆ. ಮಳೆಯ ದಿನಗಳಲ್ಲಿ ಕೆಲಸಕ್ಕೆ ಎರಡು ಬಾರಿ ತಡವಾಗಿ ಬಂದರೂ ಯಾವುದೇ ದಂಡ ವಿಧಿಸದ ‘ಲೇಟ್-ಫಾರ್-ವರ್ಕ್ ಪಾಸ್’ ಕೂಡ ನೀಡಲಾಗಿದೆ.

ಇದನ್ನೂ ಓದಿ: Video: ಬಿಸಿಲಿನಿಂದ ಪಾರಾಗಲು ಹೊಸ ಮಾರ್ಗ ಕಂಡುಕೊಂಡ ಬೆಂಗಳೂರಿನ ಯುವತಿ

ನಮ್ಮ ನಗರದಲ್ಲಿ 90 ದಿನಗಳ ಪೈಕಿ 82 ದಿನ ಮಳೆ ಬರುತ್ತದೆ. ಉದ್ಯೋಗಿಗಳು ಮಳೆಯಲ್ಲಿ ನೆನೆಯುತ್ತಾ ಕಷ್ಟಪಟ್ಟು ಆಫೀಸ್‌ಗೆ ಬರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇವೆ. ಅವರ ಮನಸ್ಥಿತಿಯನ್ನು ಉತ್ತಮವಾಗಿರಿಸುವುದು ನಮ್ಮ ಗುರಿ” ಎಂದು ಕಂಪನಿಯ ಮಾಲೀಕರು ತಿಳಿಸಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತನ್ನ ಮರಿ ಎಂದು ಭಾವಿಸಿ 3 ತಿಂಗಳ ಮಗುವನ್ನು ಒತ್ತೆಯಾಳಾಗಿರಿಸಿಕೊಂಡ ಮಂಗ – Kannada News | Dramatic Rescue: Toddler Freed After Monkey Holds Him for Hours in Uttar Pradesh

ಮುಜಫರ್ ನಗರ, ಏಪ್ರಿಲ್ 22: ಮಂಗ(Monkey)ವೊಂದು ಮೂರು ತಿಂಗಳ ಮಗುವನ್ನು ಒತ್ತೆಯಾಳಾಗಿರಿಸಿಕೊಂಡಿದ್ದ ಘಟನೆ ಮುಜಫರ್​ನಗರದ ಚರ್ತವಾಲ್ ಪಟ್ಟಣದಲ್ಲಿ ನಡೆದಿದೆ. ಆ ದೃಶ್ಯ ಇಡೀ ಊರನ್ನೇ ಬೆಚ್ಚಿಬೀಳಿಸಿತ್ತು. ಮೂರು ತಿಂಗಳ ಹಸುಗೂಸನ್ನು ತನ್ನ ಕೈಯಲ್ಲಿ ಹಿಡಿದುಕೊಂಡು, ಎರಡು ಗಂಟೆಗಳ ಕಾಲ ಇಡೀ ಊರನ್ನೇ ಆತಂಕದ ತುದಿಯಲ್ಲಿ ನಿಲ್ಲಿಸಿದ್ದ ಮಂಗನ ಕಥೆ ಈಗ ವೀಡಿಯೊ ಸಮೇತ ವೈರಲ್ ಆಗಿದೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ, ಗುಲಿಸ್ತಾ ಅವರ ಮನೆಯಲ್ಲಿ ಮೂರು ತಿಂಗಳ ಮಗು ಹಾಸಿಗೆಯ ಮೇಲೆ ನೆಮ್ಮದಿಯಾಗಿ ನಿದ್ದೆ ಮಾಡುತ್ತಿತ್ತು. ಮನೆಯವರೆಲ್ಲಾ ಕೆಲಸದಲ್ಲಿ ನಿರತರಾಗಿದ್ದಾಗ, ಹೆಣ್ಣು ಮಂಗವೊಂದು ಛಾವಣಿಯ ಮೂಲಕ ಸದ್ದಿಲ್ಲದೆ ಮನೆಯೊಳಗೆ ನುಸುಳಿತ್ತು.

ತಾಯಿ ಗುಲಿಸ್ತಾ ಕೋಣೆಯೊಳಗೆ ಬಂದಾಗ ಕಂಡ ದೃಶ್ಯ ಅವರ ಎದೆ ನಡುಗುವಂತೆ ಮಾಡಿತ್ತು. ಮಗುವಿನ ಪಕ್ಕದಲ್ಲೇ ಕುಳಿತಿದ್ದ ಮಂಗವು ಕಂದಮ್ಮನನ್ನು ಮುಟ್ಟುತ್ತಾ, ಪ್ರೀತಿಯಿಂದ ಸವರುತ್ತಿತ್ತು. ತಾಯಿಯ ಕಿರುಚಾಟ ಕೇಳಿ ನೆರೆಹೊರೆಯವರು ಓಡಿಬಂದರು. ಜನರನ್ನು ನೋಡಿ ಕೆರಳಿದ ಮಂಗವು ಮಗುವನ್ನು ಬಿಡಲು ನಿರಾಕರಿಸಿದ್ದಲ್ಲದೆ, ಯಾರಾದರೂ ಹತ್ತಿರ ಬಂದರೆ ಆಕ್ರಮಣ ಮಾಡಲು ಶುರು ಮಾಡಿತು.

ಪರಿಸ್ಥಿತಿ ಕೈಮೀರುತ್ತಿರುವುದನ್ನು ಕಂಡು ಪ್ರಾಣಿ ರಕ್ಷಕ ಸನ್ನಿ ಚೋಪ್ರಾ ಅವರನ್ನು ಕರೆಸಲಾಯಿತು. ಆಹಾರ ನೀಡಿದರೂ ಮಂಗ ಮಗುವನ್ನು ಬಿಡಲಿಲ್ಲ. ಆಗ ಚೋಪ್ರಾ ಒಂದು ಉಪಾಯ ಮಾಡಿದರು. ಮೊಬೈಲ್ ಫೋನ್‌ನಲ್ಲಿ ಮಂಗಗಳ ವೀಡಿಯೊಗಳನ್ನು ಪ್ಲೇ ಮಾಡಿ ಮಂಗನ ಮುಂದೆ ಹಿಡಿದರು. ಮಂಗವು ವೀಡಿಯೊ ವೀಕ್ಷಣೆಯಲ್ಲಿ ಮಗ್ನನಾಗುತ್ತಿದ್ದಂತೆಯೇ, ರಕ್ಷಣಾ ಸಿಬ್ಬಂದಿ ಅತ್ಯಂತ ನಾಜೂಕಿನಿಂದ ಮಗುವನ್ನು ಅಲ್ಲಿಂದ ಎಳೆದು ಸುರಕ್ಷಿತವಾಗಿ ರಕ್ಷಿಸಿದರು.

ಮತ್ತಷ್ಟು ಓದಿ: ಕೋತಿ ಕಿತಾಪತಿಗೆ ಹೆಜ್ಜೇನು ದಾಳಿ: ಜೀವ ಬಿಟ್ಟ ಕಾರು ಶೋರೂಂ ಮೇಲ್ವಿಚಾರಕ!

ಮಗು ಸುರಕ್ಷಿತವಾಗಿ ಸಿಕ್ಕ ನಂತರ ರಕ್ಷಕ ಸನ್ನಿ ಚೋಪ್ರಾ ಒಂದು ಆಘಾತಕಾರಿ ವಿಷಯವನ್ನು ಬಹಿರಂಗಪಡಿಸಿದ್ದಾರೆ, ಆ ಹೆಣ್ಣು ಮಂಗ ತನ್ನ ಸ್ವಂತ ಮರಿಯನ್ನು ಆರು ದಿನಗಳ ಹಿಂದಷ್ಟೇ ಕಳೆದುಕೊಂಡಿತ್ತು. ಮರಿಯನ್ನು ಕಳೆದುಕೊಂಡ ಆ ಮಂಗ ಆಘಾತದಲ್ಲಿತ್ತು. ಈ ಹಸುಗೂಸನ್ನು ನೋಡಿದಾಗ ಅದು ತನ್ನ ಮರಿಯೇ ಎಂದು ಭಾವಿಸಿ, ಆ ಪ್ರೀತಿಯಿಂದಲೇ ಮಗುವನ್ನು ತನ್ನ ಬಳಿ ಇಟ್ಟುಕೊಂಡಿತ್ತು. ಮಗುವಿಗೆ ಯಾವುದೇ ಹಾನಿ ಮಾಡದಿದ್ದರೂ, ತನ್ನ ಮರಿಯನ್ನು ಯಾರಾದರೂ ಕಿತ್ತುಕೊಳ್ಳುತ್ತಾರೆ ಎಂಬ ಭಯದಲ್ಲಿ ಅದು ಆಕ್ರಮಣಕಾರಿ ವರ್ತನೆ ತೋರಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 3:07 pm, Wed, 22 April 26

Source link