Category Archives: Blog

Your blog category

SRH vs DC IPL 2026 Live Score: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ – Kannada News | Sunrisers Hyderabad vs Delhi Capitals IPL 2026 Live Cricket Score SRH vs DC Match on 21st April latest news in Kannada

ಐಪಿಎಲ್ 2026 ರ 31 ನೇ ಪಂದ್ಯದು ಸನ್‌ರೈಸರ್ಸ್ ಹೈದರಾಬಾದ್ ಮತ್ತು ದೆಹಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ಆರಂಭವಾಗಿದೆ. ಎರಡೂ ತಂಡಗಳು ತಲಾ 6 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಸಮಬಲ ಸಾಧಿಸಿವೆ. ಆದರೆ, ಉತ್ತಮ ರನ್ ರೇಟ್ ನಿಂದಾಗಿ ಹೈದರಾಬಾದ್ ನಾಲ್ಕನೇ ಸ್ಥಾನದಲ್ಲಿದೆ. ದೆಹಲಿ ತಂಡವು ತಮ್ಮ ನಾಲ್ಕನೇ ಗೆಲುವನ್ನು ಎದುರು ನೋಡುತ್ತಿದೆ. ಹೈದರಾಬಾದ್ ತಂಡವು ತವರು ನೆಲದಲ್ಲಿ ಸತತ ಮೂರನೇ ಗೆಲುವಿನ ಗುರಿಯನ್ನು ಹೊಂದಿದೆ.

Source link

‘ಜೈಲರ್ 2’ ಸಿನಿಮಾ ಮುಗಿಸಿದ ರಜನೀಕಾಂತ್, ಮುಂದೇನು? – Kannada News | Rajinikanth completes Jailer 2 movie shooting

ವಯಸ್ಸು 75 ದಾಟಿದ್ದರೂ ಈಗಲೂ ಒಂದರ ಹಿಂದೊಂದು ನಟಿಸುತ್ತಿದ್ದಾರೆ ಸೂಪರ್ ಸ್ಟಾರ್ ರಜನೀಕಾಂತ್ (Rajinikanth). ಒಂದರ ಹಿಂದೊಂದು ಹಿಟ್ ಸಿನಿಮಾಗಳನ್ನು ನೀಡುತ್ತಿದ್ದಾರೆ. 2023 ರಲ್ಲಿ ಬಿಡುಗಡೆ ಆಗಿದ್ದ ರಜನೀಕಾಂತ್ ನಟನೆಯ ‘ಜೈಲರ್’ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿತ್ತು. ಸಿನಿಮಾದ ಹಾಡುಗಳು ಸಹ ಬ್ಲಾಕ್ ಬಸ್ಟರ್ ಎನಿಸಿಕೊಂಡಿದ್ದವು. ಇದೀಗ ಅದೇ ನಿರ್ದೇಶಕನೊಟ್ಟಿಗೆ ‘ಜೈಲರ್ 2’ ಸಿನಿಮಾ ಆರಂಭಿಸಿದ್ದ ರಜನೀಕಾಂತ್ ಇದೀಗ ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ.

ಕಳೆದ ವರ್ಷ ಆರಂಭವಾಗಿದ್ದ ‘ಜೈಲರ್ 2’ ಸಿನಿಮಾದ ಶೂಟಿಂಗ್ ನಿನ್ನೆಯಷ್ಟೆ ಮುಗಿದಿದೆ. ರಜನೀಕಾಂತ್, ನಿರ್ದೇಶಕ ನೆಲ್ಸನ್ ಸೇರಿದಂತೆ ಇಡೀ ಚಿತ್ರತಂಡ ಕೇಕ್ ಕತ್ತರಿಸಿ ಶೂಟಿಂಗ್ ಮುಗಿದಿದ್ದನ್ನು ಸಂಭ್ರಮಿಸಿದ್ದಾರೆ. ಸಿನಿಮಾದ ಚಿತ್ರೀಕರಣ, ಕೇರಳ, ಹೈದರಾಬಾದ್, ಚೆನ್ನೈಗಳಲ್ಲಿ ನಡೆದಿದ್ದು, ಕರ್ನಾಟಕದಲ್ಲಿಯೂ ಕೆಲ ದೃಶ್ಯಗಳ ಚಿತ್ರೀಕರಣವನ್ನು ಮಾಡಲಾಗಿದೆ. ರಜನೀಕಾಂತ್ ಜೊತೆಗೆ ಹೊರಾಂಗಣ ಚಿತ್ರೀಕರಣ ಕಷ್ಟ ಎಂದು ಹಲವು ನಿರ್ದೇಶಕರುಗಳು ಸೆಟ್​​ಗಳಲ್ಲಿಯೇ ಚಿತ್ರೀಕರಿಸುತ್ತಾರೆ. ಆದರೆ ನೆಲ್ಸನ್, ‘ಜೈಲರ್ 2’ ಸಿನಿಮಾದ ಬಹುಭಾಗವನ್ನು ಹೊರಾಂಗಣದಲ್ಲಿಯೇ ಚಿತ್ರೀಕರಿಸಿದ್ದಾರೆ ಎನ್ನಲಾಗುತ್ತಿದೆ.

‘ಜೈಲರ್’ ಸಿನಿಮಾ ತನ್ನ ಅದ್ಧೂರಿ ಕ್ಯಾಮಿಯೋಗಳಿಂದ, ಅತಿಥಿ ಪಾತ್ರಗಳಿಂದ ಭಾರಿ ದೊಡ್ಡ ಹಿಟ್ ಆಗಿತ್ತು. ಶಿವರಾಜ್ ಕುಮಾರ್, ಮೋಹನ್​​ಲಾಲ್, ತಮನ್ನಾ ಇನ್ನೂ ಹಲವರು ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಈಗ ‘ಜೈಲರ್ 2’ನಲ್ಲೂ ಸಹ ಹಲವು ಅತಿಥಿ ಪಾತ್ರಗಳು ಇದ್ದು, ಅವುಗಳಲ್ಲಿ ಖ್ಯಾತ ನಟರುಗಳು ನಟಿಸಿದ್ದಾರೆ ಎನ್ನಲಾಗುತ್ತಿದೆ. ಶಿವರಾಜ್ ಕುಮಾರ್, ಮೋಹನ್​​ಲಾಲ್ ಜೊತೆಗೆ ಬಾಲಿವುಡ್​​ನ ಶಾರುಖ್ ಖಾನ್ ಸಹ ನಟಿಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ಅದಿನ್ನೂ ಖಾತ್ರಿ ಆಗಿಲ್ಲ. ತೆಲುಗಿನ ನಟ ಬಾಲಕೃಷ್ಣ ಸಹ ನಟಿಸಿದ್ದಾರೆ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ.

ಇದನ್ನೂ ಓದಿ:ರಜನೀಕಾಂತ್​​ಗೆ ಕೈಕೊಟ್ಟ ಶಾರುಖ್ ಖಾನ್, ‘ಜೈಲರ್ 2’ಗೆ ನೋ?

‘ಜೈಲರ್ 2’ ಸಿನಿಮಾನಲ್ಲಿ ರಜನೀಕಾಂತ್ ಜೊತೆಗೆ ರಮ್ಯಾಕೃಷ್ಣ, ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಇನ್ನೂ ಕೆಲವರಿದ್ದಾರೆ. ಸಿನಿಮಾಕ್ಕೆ ಸಂಗೀತ ನೀಡಿರುವುದು ಅನಿರುದ್ಧ್ ರವಿಚಂದ್ರನ್, ಸಿನಿಮಾಕ್ಕೆ ಸನ್ ನೆಟ್​​ವರ್ಕ್ಸ್​ನ ಕಲಾನಿಧಿ ಮಾರನ್ ಬಂಡವಾಳ ಹೂಡಿದ್ದಾರೆ. ಸಿನಿಮಾ ಆಗಸ್ಟ್ ತಿಂಗಳಲ್ಲಿ ಬಿಡಗುಡೆ ಆಗುವ ಸಾಧ್ಯತೆ ಇದೆ.

‘ಜೈಲರ್ 2’ ಸಿನಿಮಾದ ಚಿತ್ರೀಕರಣ ಮುಗಿಸಿರುವ ರಜನೀಕಾಂತ್ ಅವರು ಕಮಲ್ ಹಾಸನ್ ನಿರ್ಮಾಣ ಮಾಡುತ್ತಿರುವ ಹೊಸ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಆದರೆ ಆ ಸಿನಿಮಾದ ನಿರ್ದೇಶಕ ಇನ್ನೂ ಖಾತ್ರಿ ಆಗಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ. ಅದಾದ ಬಳಿಕ ಕಮಲ್ ಮತ್ತು ರಜನೀಕಾಂತ್ ಒಟ್ಟಿಗೆ ಮತ್ತೊಂದು ಸಿನಿಮಾನಲ್ಲಿ ನಟಿಸಲಿದ್ದಾರಂತೆ. ಆ ಸಿನಿಮಾವನ್ನು ನೆಲ್ಸನ್ ಅವರೇ ನಿರ್ದೇಶನ ಮಾಡಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪಹಲ್ಗಾಮ್ ಕರಾಳ ನೆನಪಿಗೆ 1 ವರ್ಷ: ದಾಳಿಯಲ್ಲಿ ಪ್ರಾಣಬಿಟ್ಟ ಬೆಂಗಳೂರಿನ ಭರತ್ ತಂದೆಯ ನೋವಿನ ಮಾತು – Kannada News | 1 year for pahalgam terror attack: Bengaluru Bharath Bhushan Father Shares his grief

ಬೆಂಗಳೂರು, ಏಪ್ರಿಲ್ 21):  ಪುಲ್ವಾಮ ಮಾತ್ರವಲ್ಲ ಪಹಲ್ಗಾಮ್ ದಾಳಿ (pahalgam terror attack) ಭಾರತದ ಇತಿಹಾಸದಲ್ಲಿ ಅತ್ಯಂತ ಕರಾಳ ದಿನ. ಮಿನಿ ಸ್ವಿಟ್ಜರ್​ಲ್ಯಾಂಡ್​ ಎಂದೇ ಕರೆಯುವ ಜಮ್ಮು ಮತ್ತು ಕಾಶ್ಮೀರದ (Jammu And Kashmir) ಅನಂತನಾಗ್ ಜಿಲ್ಲೆಯ ಪಹಲ್ಗಾಮ್​​​ ದಾಳಿಗೆ ನಾಳೆಗೆ (ಏಪ್ರಿಲ್ 22) ಒಂದು ವರ್ಷ. ಕುಟುಂಬಸ್ಥರ ಜೊತೆ ಪ್ರಕೃತಿ ಸೌಂದರ್ಯದಲ್ಲಿ ಎಂಜಾಯ್ ಮಾಡುತ್ತಿದ್ದವರ ಮೇಲೆ ಭಯೋತ್ದಾದಕರು ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಕರ್ನಾಟಕದ ಇಬ್ಬರು ಸೇರಿದಂತೆ 26 ಮಂದಿ ದುರ್ಮರಣಕ್ಕೀಡಾಗಿದ್ದರು. ಹೌದು… ಬೆಂಗಳೂರಿನಲ್ಲಿ ವಾಸವಿದ್ದ ಹಾವೇರಿಯ ಭರತ್ ಭೂಷಣ್, ಪಹಲ್ಗಾಮ್ ಗೆ ಪ್ರವಾಸಕ್ಕೆ ತೆರಳಿದ್ದಾಗ ಭಯೋತ್ಪಾದರಕ ನೀಚ ಕೃತ್ಯಕ್ಕೆ ಬಲಿಯಾಗಿದ್ದರು. ಭರತ್ ತನ್ನ ಮೂರು ವರ್ಷದ ಮಗನನ್ನ ಕೈಯಲ್ಲಿ ಹಿಡಿದುಕೊಂಡು ನಿಂತಿದ್ದ ವೇಳೆ ಮಗುವನ್ನ ಕೆಳಗೆ ಇಳಿಸಿದ ಉಗ್ರರು, ಪತ್ನಿ ಮುಂದೆಯೇ ಭರತ್ ತಲೆಗೆ ಗುಂಡು ಹಾರಿಸಿ ಹತ್ಯೆ ಗೈದಿದ್ದರು. 40 ವರ್ಷಗಳಿಂದ ಕುಟುಂಬದಲ್ಲಿದ್ದ ಭರತ್​​​​​​​​ ಭೂಷಣ್ ಈಗ ಒಂದು ವರ್ಷದಿಂದ ಇಲ್ಲ ಎನ್ನುವುದನ್ನು ಕಲ್ಪಿಸಿಕೊಳ್ಳಲು ಪೋಷಕರಿಗೆ ಸಾಧ್ಯವಾಗುತ್ತಿಲ್ಲ. ಈ ಸಂಬಂಧ ಟಿವಿ9 ಕನ್ನಡದ ಜೊತೆಗೆ ತಂದೆ ಚೆನ್ನವೀರಪ್ಪ ತಾಯಿ ಶೈಲಾ ಕುಮಾರಿ ನೋವು ಹಂಚಿಕೊಂಡಿದ್ದಾರೆ.

ಭರತ್ ಭೂಷಣ್ ಕುಟುಂಬ ಆರ್.ಆರ್ ನಗರ ವಿಧಾನಸಭಾ ಕ್ಷೇತದ ಮತ್ತಿಕೆರೆಯ ಗೋಕುಲದಲ್ಲಿ ವಾಸವಾಗಿದ್ದಾರೆ. ಭರತ್ ಭೂಷಣ್ ತಂದೆ- ಚೆನ್ನವೀರಪ್ಪ ಅವರಿಗೆ 76 ವರ್ಷ, ತಾಯಿ ಶೈಲಾ ಕುಮಾರಿ ಅವರಿಗೆ 70 ವರ್ಷ. ಈ ವಯಸ್ಸಿನಲ್ಲಿ ಮಗನನ್ನು ಕಳೆದುಕೊಂಡು ಇಬ್ಬರು ಹಿರಿಯ ಜೀವಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ನೋಡಿ: Pahelgam Terrorist Attack: ಶವಪೆಟ್ಟಿಗೆಯಲ್ಲಿ ಪತಿ ಭರತ್ ಭೂಷಣ್ ದೇಹ ನೋಡುತ್ತಲೇ ಕುಸಿದುಬಿದ್ದ ಪತ್ನಿ ಸುಜಾತಾ

ಇನ್ನೂ ಭರತ್ ಭೂಷಣ್ ತಂದೆ ಚೆನ್ನವೀರಪ್ಪ ಅವರಿಗೆ ಇಬ್ಬರು ಮಕ್ಕಳಿದ್ದು, ಭರತ್ ಭೂಷಣ್ ಎರಡನೇ ಪುತ್ರ. ಭರತ್ ಭೂಷಣ್ ಗೆ ಸದ್ಯ 41 ವರ್ಷ ವಯಸ್ಸಾಗಿತ್ತು.ಬಿಇ ಮೆಕಾನಿಕಲ್, ಎಂಬಿಎ ಪದವಿ ಪಡೆದಿದ್ದ, ಹೆಂಡತಿ ಡಾ. ಸುಜಾತಾ ಎಂಬಿಬಿಎಸ್. ಎಂಡಿ ಮಾಡಿದ್ದು, ಭರತ್ ಗೆ 3.5 ವರ್ಷದ ಅವೀಶ್ ಸೂರ್ಯಾಂಶ್ ಅನ್ನೋ ಮಗನಿದ್ದಾನೆ. ಈ ತಿಂಗಳು ಏಪ್ರಿಲ್ 11 ರಂದು ಭರತ್ ಭೂಷಣ್ ತೀರಿಕೊಂಡ ನಕ್ಷತ್ರದ ಪ್ರಕಾರ ಕುಟುಂಬಸ್ಥರು ವರ್ಷದ ತಿಥಿ ಕಾರ್ಯ ಮಾಡಿದ್ದಾರೆ. ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ, ಜಮ್ಮ- ಕಾಶ್ಮೀರ ಸರ್ಕಾರ ಮತ್ತು ಸಂಘ ಸಂಸ್ಥೆಗಳು ಸೇರಿ ಒಟ್ಟು- 35 ಲಕ್ಷದಷ್ಟು ಪರಿಹಾರ ನೀಡಿದ್ರಂತೆ.

ಒಟ್ಟಿನಲ್ಲಿ ಜಮ್ಮ-ಕಾಶ್ಮೀರದ ಪಹಲ್ಗಾಮ್ ದಾಳಿಗೆ ನಾಳೆಗೆ ಒಂದು ವರ್ಷವಾಗ್ತಿದ್ದು, ಉಗ್ರರ ದಾಳಿಗೆ ಬಲಿಯಾದ ಬೆಂಗಳೂರಿನ ಕನ್ನಡಿಗ ಭರತ್ ಭೂಷಣ್ ತಂದೆ-ತಾಯಿ ಭರತ್ ಇಲ್ಲದೆ ಕಣ್ಣೀರಲ್ಲಿ ಕೈತೊಳೆಯುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

CRPF Recruitment 2026: CRPF ನೇಮಕಾತಿ; 9,000ಕ್ಕೂ ಹೆಚ್ಚು ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | CRPF Constable Recruitment 2026: 9175 Technical & Tradesman Vacancies – Apply Now!

ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನImage Credit source: gemini ai

ದೇಶದ ಪ್ರತಿಷ್ಠಿತ ಭದ್ರತಾ ಪಡೆಯಾದ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಕಾನ್ಸ್‌ಟೇಬಲ್ (ತಾಂತ್ರಿಕ ಮತ್ತು ಟ್ರೇಡ್ಸ್‌ಮನ್) ಹುದ್ದೆಗಳ ಭರ್ತಿಗಾಗಿ ಬೃಹತ್ ನೇಮಕಾತಿ ಅಭಿಯಾನವನ್ನು ಕೈಗೊಂಡಿದೆ. ಒಟ್ಟು 9,175 ಖಾಲಿ ಹುದ್ದೆಗಳಿದ್ದು, ಇದರಲ್ಲಿ 9,096 ಹುದ್ದೆಗಳು ಪುರುಷರಿಗೆ ಹಾಗೂ 79 ಹುದ್ದೆಗಳು ಮಹಿಳಾ ಅಭ್ಯರ್ಥಿಗಳಿಗೆ ಮೀಸಲಾಗಿವೆ. ದೇಶಸೇವೆಯೊಂದಿಗೆ ಉತ್ತಮ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಇದು ಸುಸಮಯ.

ಅರ್ಜಿ ಸಲ್ಲಿಕೆ ಮತ್ತು ಪ್ರಮುಖ ದಿನಾಂಕಗಳು:

ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಏಪ್ರಿಲ್ 20 ರಿಂದ ಪ್ರಾರಂಭವಾಗಿದೆ. ಆಸಕ್ತ ಅಭ್ಯರ್ಥಿಗಳು CRPF ನ ಅಧಿಕೃತ ವೆಬ್‌ಸೈಟ್ rect.crpf.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮೇ 19 ಕೊನೆಯ ದಿನಾಂಕವಾಗಿದೆ. ಕೊನೆಯ ಕ್ಷಣದ ಗಡಿಬಿಡಿಯನ್ನು ತಪ್ಪಿಸಲು ಅಭ್ಯರ್ಥಿಗಳು ಆದಷ್ಟು ಬೇಗ ಅರ್ಜಿ ಸಲ್ಲಿಸುವುದು ಸೂಕ್ತ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:

ವಿದ್ಯಾರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 10 ನೇ ತರಗತಿ (SSLC) ಉತ್ತೀರ್ಣರಾಗಿರಬೇಕು. ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಿತ ವ್ಯಾಪಾರದಲ್ಲಿ ಐಟಿಐ (ITI) ಪ್ರಮಾಣಪತ್ರ ಅಥವಾ ಕೌಶಲ್ಯದ ಅಗತ್ಯವಿರುತ್ತದೆ. ಚಾಲಕ (Driver) ಹುದ್ದೆಗೆ ಭಾರಿ ಮೋಟಾರ್ ವಾಹನ ಚಾಲನಾ ಪರವಾನಗಿ (HMV License) ಕಡ್ಡಾಯವಾಗಿದೆ. ಮೋಟಾರ್ ಮೆಕ್ಯಾನಿಕ್ ಹುದ್ದೆಗಳಿಗೆ ಐಟಿಐ ಜೊತೆಗೆ ಕೆಲಸದ ಅನುಭವದ ಅಗತ್ಯವಿದೆ.

ವಯೋಮಿತಿ:

ಚಾಲಕ ಹುದ್ದೆಗೆ 21 ರಿಂದ 27 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಉಳಿದ ಟ್ರೇಡ್ಸ್‌ಮನ್ ಹುದ್ದೆಗಳಿಗೆ (ಟೈಲರ್, ಕುಕ್, ಬಾರ್ಬರ್, ಇತ್ಯಾದಿ) 18 ರಿಂದ 23 ವರ್ಷದೊಳಗಿರಬೇಕು. ಸರ್ಕಾರದ ನಿಯಮಗಳ ಪ್ರಕಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಇದನ್ನೂ ಓದಿ: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ?

CRPF ಅಭ್ಯರ್ಥಿಗಳನ್ನು ವಿವಿಧ ಹಂತಗಳಲ್ಲಿ ಪರೀಕ್ಷಿಸಿ ಆಯ್ಕೆ ಮಾಡುತ್ತದೆ:

ಮೊದಲು ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ ನಡೆಯುತ್ತದೆ. ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆಯಾದವರಿಗೆ ದೈಹಿಕ ಗುಣಮಟ್ಟ ಮತ್ತು ದಕ್ಷತೆ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ನಂತರ ಆಯಾ ಕೆಲಸದ ಕುರಿತಾದ ಪ್ರಾಯೋಗಿಕ ಪರೀಕ್ಷೆ ನಡೆಯುತ್ತದೆ. ಅಂತಿಮವಾಗಿ ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ತಪಾಸಣೆಯ ನಂತರ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.

ವೇತನ ಶ್ರೇಣಿ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಆಕರ್ಷಕ ವೇತನವನ್ನು ಪಡೆಯುತ್ತಾರೆ. ವೇತನ ಶ್ರೇಣಿ-3 ರ ಅಡಿಯಲ್ಲಿ ಮಾಸಿಕ 21,700 ರೂ. ನಿಂದ 69,100 ರೂ. ವರೆಗೆ ಸಂಬಳ ಮತ್ತು ಸರ್ಕಾರದ ಇತರ ಭತ್ಯೆಗಳು ಲಭ್ಯವಿರುತ್ತವೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ – Kannada News | Mrunal Thakur shared dance shoot video with Varun Dhawan

ನಟಿ ಮೃಣಾಲ್ ಠಾಕೂರ್ (Mrunal Thakur) ಬಲು ಬೇಡಿಕೆಯ ಪ್ಯಾನ್ ಇಂಡಿಯಾ ನಟಿ. ತೆಲುಗು ಸಿನಿಮಾಗಳ ಜೊತೆಗೆ ಬಾಲಿವುಡ್ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಮೃಣಾಲ್ ಠಾಕೂರ್ ನಟನೆಯ ತೆಲುಗು ಸಿನಿಮಾ ‘ಡಕಾಯತ್’ ಬಿಡುಗಡೆ ಆಗಿದೆ. ಇದೀಗ ಬಾಲಿವುಡ್​​ನ ನಟ ವರುಣ್ ಧವನ್ ಜೊತೆಗೆ ‘ಹೈ ಜವಾನಿ ಥೋ ಇಷ್ಕ್ ಹೋನಾ ಹೈ’ ಸಿನಿಮಾನಲ್ಲಿ ನಟಿಸಿದ್ದಾರೆ. ಹಾಡಿನ ಚಿತ್ರೀಕರಣದ ವಿಡಿಯೋ ಒಂದನ್ನು ನಟಿ ಮೃಣಾಲ್ ಠಾಕೂರ್ ಹಂಚಿಕೊಂಡಿದ್ದಾರೆ. ಹಾಡಿನಲ್ಲಿ ವರುಣ್ ಹಾಗೂ ಮೃಣಾಲ್ ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ

ಸಂಗೀತ ನಿರ್ದೇಶಕರು ತಮ್ಮ ಸಿನಿಮಾಗಳಿಗೆ ಲೈವ್ ಸಂಗೀತವನ್ನು ರೆಕಾರ್ಡ್ ಮಾಡುವದು ಉಂಟು. ಲೈವ್ ರೆಕಾರ್ಡ್, ಅತ್ಯುತ್ತಮ ಸಂಗೀತವನ್ನು ನೀಡುತ್ತದೆ ಎಂಬ ನಂಬಿಕೆ ಇದೆ. ಭಾರತದಲ್ಲಿ ಚೆನ್ನೈನ ಪ್ರತಿಷ್ಠಿತ ಸನ್​​ಶೈನ್ ಆರ್ಕೆಸ್ಟ್ರಾ ಮೂಲಕ ರೆಕಾರ್ಡ್ ಮಾಡಲಾಗುತ್ತದೆ. ವಿದೇಶದಲ್ಲಿ ರಾಯಲ್ ಫಿಲಾರ್ಮೋನಿಕ್ ಆರ್ಕೆಸ್ಟ್ರಾ ಬಲು ಜನಪ್ರಿಯ ಆರ್ಕೆಸ್ಟ್ರಾ. ಇದೀಗ ಎಆರ್ ರೆಹಮಾನ್ ಅವರು ‘ರಾಮಾಯಣ’ ಸಿನಿಮಾಕ್ಕಾಗಿ ಈ ಎರಡೂ ಆರ್ಕೆಸ್ಟ್ರಾಗಳನ್ನು ಒಂದೆಡೆ ಸೇರಿಸಿ ಸಂಗೀತ ರೆಕಾರ್ಡ್ ಮಾಡುತ್ತಿದ್ದಾರೆ. ನೆನಪಿರಲಿ, ‘ರಾಮಾಯಣ’ ಸಿನಿಮಾಕ್ಕೆ ರೆಹಮಾನ್ ಜೊತೆಗೆ ಹಾಮ್ಸ್ ಝೀಮರ್ ಸಹ ಸಂಗೀತ ನೀಡುತ್ತಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಆಟೋ, ಕ್ಯಾಬ್​​ ಚಾಲಕರಿಗೆ ಕನ್ನಡ ಕಡ್ಡಾಯ ಪ್ರಸ್ತಾಪಕ್ಕೆ ಭಾರಿ ವಿರೋಧ; ಕಾರಣ ಇಲ್ಲಿದೆ – Kannada News | Compulsory Kannada for Auto, Cab Drivers Faces Strong Opposition in Karnataka

ಬೆಂಗಳೂರು, ಏಪ್ರಿಲ್​​ 21: ರಾಜ್ಯದಲ್ಲಿ ಆಟೋ ಮತ್ತು ಕ್ಯಾಬ್ ಚಾಲನೆ ಮಾಡುವ ಚಾಲಕರಿಗೆ ಕಡ್ಡಾಯವಾಗಿ ಕನ್ನಡ ಗೊತ್ತಿರಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಆಗ್ರಹಿಸಿತ್ತು. ಮಹಾರಾಷ್ಟ್ರ ಸರ್ಕಾರ ಮರಾಠಿ ಭಾಷೆ ಕಡ್ಡಾಯಗೊಳಿಸಿ ಇತ್ತೀಚೆಗೆ ಆದೇಶ ಹೊರಡಿಸಿದ್ದು, ಎಲ್ಲಾ ವಾಣಿಜ್ಯ ವಾಹನ ಚಾಲಕರು ಪರವಾನಗಿ ಹೊಂದಲು ಸ್ಥಳೀಯ ಭಾಷೆಯಾದ ಮರಾಠಿ ಓದಲು, ಬರೆಯಲು ಮತ್ತು ಮಾತನಾಡಲು ಬರಬೇಕು ಎಂಬ ನಿಯಮ ಜಾರಿಗೆ ತರೋದಾಗಿ ಹೇಳಿತ್ತು. ಅದೇ ರೀತಿ ರಾಜ್ಯದಲ್ಲಿಯೂ ನಿಯಮ ತರಬೇಕೆಂಬ ಆಗ್ರಹ ಕೇಳಿಬಂದಿತ್ತು. ಆದರೆ ಈ ವಿಚಾರಕ್ಕೀಗ ಆಟೋ ಚಾಲಕರ ಸಂಘಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಆಟೋ ರಿಕ್ಷಾ ಡ್ರೈವರ್ಸ್ ಯೂನಿಯನ್ (ARDU) ಪ್ರಧಾನ ಕಾರ್ಯದರ್ಶಿ ಡಿ. ರುದ್ರಮೂರ್ತಿ, ಬೆಂಗಳೂರು ನಗರದ ಬಹುಸಾಂಸ್ಕೃತಿಕ ಸ್ವಭಾವವನ್ನು ಗಮನಿಸಿದರೆ ಈ ನಿಯಮ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಜನಸಂಚಾರ ವೈವಿಧ್ಯಮಯವಾಗಿದೆ. ಎಲ್ಲವೂ ಡಿಜಿಟಲ್ ಆಗಿರುವುದರಿಂದ ಆಟೋ ಓಡಿಸಲು ಕನ್ನಡ ತಿಳಿದಿರಬೇಕೆಂಬ ಅನಿವಾರ್ಯತೆ ಕಡಿಮೆ ಇದೆ. ಆ್ಯಪ್​​ನಲ್ಲಿ  ಸ್ಥಳ ನಮೂದಿಸಿ, ಮತ್ತೊಂದು ಆ್ಯಪ್ ಮೂಲಕ ಹಣ ಪಾವತಿಸಲಾಗುತ್ತದೆ. ಅಲ್ಲದೆ ಚಾಲಕರು ಬಹುತೇಕ ಬಹುಭಾಷಾ ಜ್ಞಾನ ಹೊಂದಿದ್ದಾರೆ. ಹೀಗಾಗಿ ಇಂತಹ ನಿಯಮ ಸಾವಿರಾರು ಚಾಲಕರ ಜೀವನೋಪಾಯಕ್ಕೆ ತೊಂದರೆ ಉಂಟುಮಾಡಬುದು ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಗುಂಡಿ ಬಿದ್ದ ರಸ್ತೆಗಳು, ಹದಗೆಟ್ಟ ವ್ಯವಸ್ಥೆ; ರಾಜ್ಯ ಸರ್ಕಾರದ ವಿರುದ್ಧ ಮೋಹನ್‌ದಾಸ್ ಪೈ ಸಿಡಿಮಿಡಿ!

ಸರ್ಕಾರವು ಇಂತಹ ನಿಯಮಗಳನ್ನು ತರುವ ಬದಲು, ಪ್ರಸ್ತುತವಾಗಿ ಎದುರಿಸುತ್ತಿರುವ ಗ್ಯಾಸ್ ಸಮಸ್ಯೆ ನಿವಾರಣೆಗೆ ಗಮನಹರಿಸಬೇಕು. ಈಗ ನಮ್ಮ ದೊಡ್ಡ ಸಮಸ್ಯೆ LPG ದರ ಏರಿಕೆ. ಇದರಿಂದ ಆಟೋ ಚಾಲಕರ ಜೀವನೋಪಾಯದ ಮೇಲೆ ಪರಿಣಾಮ ಬೀಳುತ್ತಿದೆ. ಹೀಗಾಗಿ ಈ ನಿಟ್ಟಿನಲ್ಲಿ ಸರ್ಕಾರದಿಂದ ಸಹಾಯ ಬೇಕಾಗಿದೆ ಎಂದು ಆದರ್ಶ ಆಟೋ ಡ್ರೈವರ್ಸ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಸಿ. ಸಂಪತ್ ತಿಳಿಸಿದ್ದಾರೆ.

ಇದಕ್ಕೆ ವಿರುದ್ಧವಾಗಿ ಕೆಲವು ಕ್ಯಾಬ್ ಚಾಲಕರು ನಿಯಂತ್ರಣದ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ವರ್ಷ ಮಾತ್ರವೇ ಸುಮಾರು 5,000 ಕೇರಳದ ಕ್ಯಾಬ್ ಚಾಲಕರು ಕೆಲಸ ಆರಂಭಿಸಿದ್ದಾರೆ. ಪಂಜಾಬ್‌ನಿಂದಲೂ ಹಲವರು ಬರುತ್ತಿದ್ದಾರೆ. ಕೆಲ ಸಂದರ್ಭಗಳಲ್ಲಿ ಹೊರರಾಜ್ಯದ ಚಾಲಕರಯ ಡ್ರಗ್ಸ್​​ ದಂಧೆಯಲ್ಲಿ ಭಾಗಿಯಾಗಿರುವ ಉದಾಹರಣೆಗಳೂ ಇವೆ ಎಂದು ಓಲಾ-ಉಬರ್ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ತನ್ವೀರ್ ಪಾಷಾ ಹೇಳಿದ್ದಾರೆ. ಅವರ ಪ್ರಕಾರ ಭಾಷೆ ಸಂಬಂಧಿತ ನಿಯಮ ಅಥವಾ ಕಠಿಣ ನಿಯಂತ್ರಣ ಕ್ರಮಗಳನ್ನು ಸರ್ಕಾರ ಜಾರಿಗೆ ತರುವುದು ಅಗತ್ಯವಿದೆ ಎಂದು ಡೆಕ್ಕನ್​​ ಹೆರಾಲ್ಡ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ! ಇಡಿ ದಾಳಿ ವೇಳೆ ಸಿಕ್ಕಿತು ಮಹತ್ವದ ದಾಖಲೆ – Kannada News | Nalapad Haris Under ED Scanner:Rs.37 Lakh Seized, Bitcoin Scam Link Probed

ಬೆಂಗಳೂರು, ಏ.21: ಎನ್.ಎ. ಹ್ಯಾರಿಸ್ ಅವರ ನಿವಾಸದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ನೆನ್ನೆ (ಏ.20) 21 ಗಂಟೆಗಳ ಕಾಲ ನಿರಂತರವಾಗಿ ದಾಳಿ ನಡೆಸಿದ್ದಾರೆ. ಈ ಮಹತ್ವದ ಶೋಧ ಕಾರ್ಯಾಚರಣೆಯಲ್ಲಿ 37 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. ನಗದು ಜೊತೆಗೆ, ಬ್ಯಾಂಕ್ ಖಾತೆಗಳಿಗೆ ಸಂಬಂಧಿಸಿದ ದಾಖಲೆಗಳು, ಆಸ್ತಿಪಾಸ್ತಿ ವಿವರಗಳು ಮತ್ತು ವಿವಿಧ ಹೂಡಿಕೆಗಳಿಗೆ ಸಂಬಂಧಿಸಿದ ಪ್ರಮುಖ ದಾಖಲೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ದಾಖಲೆಗಳು ಹ್ಯಾರಿಸ್ ಅವರ ದೊಡ್ಡ ಸಾಮ್ರಾಜ್ಯದ ಭಾಗವಾಗಿರಬಹುದು, ಆದರೆ ಇ.ಡಿ. ದಾಳಿಯಲ್ಲಿ ಅವುಗಳ ಪತ್ತೆ ಮಹತ್ವ ಪಡೆದಿದೆ. ದಾಳಿಯ ಸಂದರ್ಭದಲ್ಲಿ, ಅಧಿಕಾರಿಗಳು ರಾಯ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದ ವಿವರಗಳನ್ನೂ ಕಲೆಹಾಕಿದ್ದಾರೆ ಎಂದು ವರದಿಯಾಗಿದೆ. ಈ ದಾಳಿ ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದ್ದು, ಇದರ ಪ್ರಮುಖ ಆರೋಪಿ ಶ್ರೀಕಿಯನ್ನು ಸಹ ತನಿಖೆಯ ವ್ಯಾಪ್ತಿಗೆ ತರಲಾಗಿದೆ. ಶ್ರೀಕಿ ಜೈಲಿನಿಂದ ಹೊರಬಂದ ನಂತರ ಐಷಾರಾಮಿ ಜೀವನ ನಡೆಸುತ್ತಿದ್ದ ಬಗ್ಗೆ ಇ.ಡಿ. ಪರಿಶೀಲನೆ ನಡೆಸುತ್ತಿದ್ದು, ಇದು ಹ್ಯಾರಿಸ್ ಪ್ರಕರಣದ ತನಿಖೆಯಲ್ಲಿ ಮಹತ್ವದ ಪಾತ್ರ ವಹಿಸುವ ಸಾಧ್ಯತೆಯಿದೆ. ಶ್ರೀಕಿ ಮನೆಯಲ್ಲಿ ಸುಲಭವಾಗಿ ದಾಖಲೆಗಳು ಸಿಗದಿದ್ದರೂ, ಇ.ಡಿ. ಅಧಿಕಾರಿಗಳು ಪ್ರಮುಖ ಮಾಹಿತಿಗಾಗಿ ಶೋಧ ಮುಂದುವರಿಸಿದ್ದಾರೆ.  ಆದರೆ ಈ ಶೋಧದಲ್ಲಿ ತಮ್ಮ ಮನೆಯಿಂದ ಕೇವಲ ಎರಡು ಮೊಬೈಲ್ ಫೋನ್‌ಗಳನ್ನು ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದು, “ಒಂದು ನಯ ಪೈಸೆ” ಕೂಡ ಪತ್ತೆಯಾಗಿಲ್ಲ ಎಂದು ನಲಪಾಡ್​​ ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Swapna Shastra: ಸ್ವಪ್ನ ಶಾಸ್ತ್ರದ ಪ್ರಕಾರ ಕನಸಿನಲ್ಲಿ ನವಿಲು ಕಂಡರೆ ಏನರ್ಥ? – Kannada News | Peacock Dream Meaning: Good or Bad? Decoding Swapna Shastra Interpretations

ಸ್ವಪ್ನ ಶಾಸ್ತ್ರದ ಪ್ರಕಾರ, ಪ್ರತಿಯೊಂದು ಕನಸಿಗೂ ಅದರದ್ದೇ ಆದ ಅರ್ಥ ಮತ್ತು ಸಂದೇಶವಿರುತ್ತದೆ. ಅದರಲ್ಲಿಯೂ ನವಿಲಿನ ಕನಸು ಬೀಳುವುದು ಅತ್ಯಂತ ವಿಶೇಷ. ಇದನ್ನು ಸೌಂದರ್ಯ, ಸಮೃದ್ಧಿ ಮತ್ತು ಆಧ್ಯಾತ್ಮಿಕತೆಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ನವಿಲು ಕನಸಿನಲ್ಲಿ ಕಾಣಿಸಿಕೊಂಡರೆ, ಅದು ನಿಮ್ಮ ಜೀವನದಲ್ಲಿ ಬರಲಿರುವ ದೊಡ್ಡ ಬದಲಾವಣೆಯ ಮುನ್ಸೂಚನೆಯಾಗಿರುತ್ತದೆ. ಆದರೆ, ಕನಸಿನ ಸನ್ನಿವೇಶಕ್ಕೆ ಅನುಗುಣವಾಗಿ ಅದರ ಫಲಗಳು ಬದಲಾಗುತ್ತವೆ. ಅವುಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.

ಶುಭ ಸೂಚನೆ ನೀಡುವ ನವಿಲಿನ ಕನಸುಗಳು:

ನೀವು ಅವಿವಾಹಿತರಾಗಿದ್ದು, ಕನಸಿನಲ್ಲಿ ಜೋಡಿ ನವಿಲುಗಳನ್ನು ಕಂಡರೆ ಶೀಘ್ರದಲ್ಲೇ ಕಂಕಣ ಭಾಗ್ಯ ಕೂಡಿಬರಲಿದೆ ಎಂದರ್ಥ. ಇದು ಸುಂದರ ದಾಂಪತ್ಯ ಮತ್ತು ಸ್ಥಿರ ಭವಿಷ್ಯದ ಸಂಕೇತವಾಗಿದೆ.

ಅಪರೂಪದ ಬಿಳಿ ನವಿಲು:

ಕನಸಿನಲ್ಲಿ ಬಿಳಿ ನವಿಲು ಕಾಣುವುದು ಅತ್ಯಂತ ವಿರಳ ಮತ್ತು ಶುಭ. ಇದು ಲಕ್ಷ್ಮಿ ದೇವಿಯ ಆಶೀರ್ವಾದವನ್ನು ಸೂಚಿಸುತ್ತದೆ. ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಹಠಾತ್ ಸುಧಾರಣೆ ಕಂಡುಬರಲಿದ್ದು, ಅನಿರೀಕ್ಷಿತ ಧನಲಾಭವಾಗುವ ಸಾಧ್ಯತೆ ಇರುತ್ತದೆ.

ನವಿಲು ಗರಿಗಳು:

ಶ್ರೀಕೃಷ್ಣನ ಶಿರದಲ್ಲಿ ರಾರಾಜಿಸುವ ನವಿಲು ಗರಿ ಕನಸಿನಲ್ಲಿ ಕಂಡರೆ, ನಿಮ್ಮ ಜೀವನದ ಅಡೆತಡೆಗಳು ನಿವಾರಣೆಯಾಗಲಿವೆ ಎಂದರ್ಥ. ಇದು ಗ್ರಹ ದೋಷಗಳ ಶಾಂತಿ ಮತ್ತು ಸಕಾರಾತ್ಮಕ ಶಕ್ತಿಯ ಆಗಮನವನ್ನು ಸೂಚಿಸುತ್ತದೆ.

ಎಚ್ಚರಿಕೆಯ ಅಗತ್ಯವಿರುವ ಸಂದರ್ಭಗಳು:

ಸ್ವಪ್ನ ಶಾಸ್ತ್ರದ ಪ್ರಕಾರ, ಕೆಲವು ನಿರ್ದಿಷ್ಟ ಸಂದರ್ಭಗಳಲ್ಲಿ ನವಿಲಿನ ಕನಸು ಎಚ್ಚರಿಕೆಯ ಗಂಟೆಯೂ ಆಗಿರಬಹುದು. ಸತ್ತ ನವಿಲು ಕನಸಲ್ಲಿ ಕಂಡರೆ ಆರ್ಥಿಕ ನಷ್ಟ ಅಥವಾ ವೃತ್ತಿಜೀವನದಲ್ಲಿ ಎದುರಾಗಬಹುದಾದ ಸಂಕಷ್ಟವನ್ನು ಸೂಚಿಸುತ್ತದೆ. ಇಂತಹ ಕನಸು ಬಿದ್ದರೆ ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರುವುದು ಉತ್ತಮ.

ಇದನ್ನೂ ಓದಿ: ದೇವರಿಗೆ ದೀಪ ಹಚ್ಚುವಾಗ ಈ ವಿಷ್ಯ ತಿಳಿದಿರಲಿ; ಇದು ನಿಮ್ಮ ಅದೃಷ್ಟವನ್ನೇ ಬದಲಿಸಲಿದೆ

ನವಿಲುಗಳ ಕಾದಾಟ:

ಕನಸಿನಲ್ಲಿ ನವಿಲುಗಳು ಪರಸ್ಪರ ಜಗಳವಾಡುತ್ತಿದ್ದರೆ, ಅದು ನಿಮ್ಮ ವೈಯಕ್ತಿಕ ಸಂಬಂಧಗಳಲ್ಲಿ ಬಿರುಕು ಮೂಡಬಹುದು ಅಥವಾ ನಿಮ್ಮಲ್ಲಿ ಅಹಂಕಾರ ಹೆಚ್ಚಾಗುತ್ತಿದೆ ಎಂಬುದರ ಸೂಚನೆಯಾಗಿದೆ. ಅದಲ್ಲದೇ ನವಿಲು ಹಾರದೆ ಅಥವಾ ನರ್ತಿಸದೆ ಸುಮ್ಮನೆ ನೆಲದ ಮೇಲೆ ಕುಳಿತಿದ್ದರೆ, ಅದು ನಿಮ್ಮ ಕೆಲಸಗಳಲ್ಲಿ ವಿಳಂಬ ಅಥವಾ ಅವಕಾಶಗಳು ಕೈತಪ್ಪುವ ಸಾಧ್ಯತೆಯನ್ನು ತೋರಿಸುತ್ತದೆ.

ಕಪ್ಪು ನವಿಲು:

ಕಪ್ಪು ಬಣ್ಣದ ನವಿಲು ಕನಸಿನಲ್ಲಿ ಕಂಡರೆ ಅದು ಮಾನಸಿಕ ಗೊಂದಲ ಅಥವಾ ಗೌರವಕ್ಕೆ ಧಕ್ಕೆ ಬರುವಂತಹ ಸಂದೇಶವನ್ನು ನೀಡುತ್ತದೆ ಎನ್ನಲಾಗುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗಾಂಧಿ ಕುಟುಂಬವನ್ನು ಸಂತೋಷಪಡಿಸಲು ನಿಮ್ಮ ಘನತೆ ಕಳೆದುಕೊಂಡಿರಿ; ಖರ್ಗೆಗೆ ಯಡಿಯೂರಪ್ಪ ತಿರುಗೇಟು – Kannada News | Karnataka Former CM BS Yediyurappa condems Mallikarjun Kharges Terrorist Statement on PM Modi

ಬೆಂಗಳೂರು, ಏಪ್ರಿಲ್ 21: ತಮಿಳುನಾಡಿನ ಚೆನ್ನೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭಯೋತ್ಪಾದಕ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆದಿದ್ದಾರೆ. ಇದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, “ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರೇ, ನಮ್ಮ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಭಯೋತ್ಪಾದಕ’ ಎಂದು ನೀವು ನೀಡಿರುವ ಅತ್ಯಂತ ಹೇಯ ಹೇಳಿಕೆಯು ನಿಮ್ಮ ದುರಹಂಕಾರದ ಪರಮಾವಧಿಯಷ್ಟೇ ಅಲ್ಲ, ನಿಮ್ಮ ಕೊಳಕು, ವಿಷಕಾರಿ ಮನಸ್ಥಿತಿಯನ್ನು ಸಹ ಬಹಿರಂಗಪಡಿಸಿದೆ. ಭಾರತದ ಜನರು, ನಮ್ಮ ಗೌರವಾನ್ವಿತ ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಅಚಲ ನಂಬಿಕೆಯೊಂದಿಗೆ, ಅವರನ್ನು ಸತತ ಮೂರನೇ ಬಾರಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರಿಸಿದ್ದಾರೆ. ಅವರನ್ನು ಟೀಕಿಸುತ್ತಾ ಅವರನ್ನು ಈ ರೀತಿ ಅವಮಾನಿಸುವುದು ಮೋದಿ ಅವರನ್ನು ಬೆಂಬಲಿಸುವ ಕೋಟ್ಯಂತರ ಭಾರತೀಯರನ್ನು ಅವಮಾನಿಸಿದಂತೆ!” ಎಂದಿದ್ದಾರೆ.

“ಮೂರನೇ ಬಾರಿಗೆ ಜನ ಪ್ರಧಾನಿಯಾಗಿ ಮೋದಿ ಅವರನ್ನು ಆಯ್ಕೆ ಮಾಡಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಇಂತಹ ದುರ್ವರ್ತನೆ ಅಭ್ಯಾಸವಾಗಿದೆ. ನಿಮ್ಮ ರಾಜಕೀಯ ವೈಷಮ್ಯಕ್ಕೆ ಪ್ರಧಾನಿಯವರನ್ನು ಕೀಳಾಗಿ ನೋಡಬೇಡಿ. ಕೂಡಲೇ ಮಲ್ಲಿಕಾರ್ಜುನ ಖರ್ಗೆ ಕ್ಷಮೆ ಕೇಳಬೇಕು” ಎಂದು ಯಡಿಯೂರಪ್ಪ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದ ಮಲ್ಲಿಕಾರ್ಜುನ ಖರ್ಗೆ; ಕ್ಷಮೆಯಾಚನೆಗೆ ಬಿಜೆಪಿ ಒತ್ತಾಯ

“ಇಂತಹ ನೀಚ ನಡವಳಿಕೆಯು ಕಾಂಗ್ರೆಸ್ ನಾಯಕರಿಗೆ ಅಭ್ಯಾಸವಾಗಿ ಹೋಗಿದೆ. ಪ್ರತಿ ಬಾರಿ ಚುನಾವಣೆಗಳು ಬಂದಾಗ, ಅವರು ಇಂತಹ ಕೀಳು ಮಟ್ಟದ ಹೇಳಿಕೆಗಳನ್ನು ನೀಡುತ್ತಲೇ ಇರುತ್ತಾರೆ. ಜನರು ಅವರಿಗೆ ಪ್ರತಿಕ್ರಿಯೆಯಾಗಿ ಪಾಠ ಕಲಿಸುತ್ತಿದ್ದಾರೆ. ಆದರೂ, ಸರಿಪಡಿಸಲು ನಿರಾಕರಿಸುವ ಅವರ ನಡವಳಿಕೆಯು ಅವರ ದುರಹಂಕಾರಕ್ಕೆ ಕನ್ನಡಿಯಾಗಿದೆ” ಎಂದು ಯಡಿಯೂರಪ್ಪ ಕಿಡಿಕಾರಿದ್ದಾರೆ.

ಇದನ್ನೂ ಓದಿ: RSS ಬಗ್ಗೆ ಅವಹೇಳನಕಾರಿ ಮಾತು: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸಿಡಿದೆದ್ದ ಬಿಜೆಪಿ, ದೂರು ದಾಖಲು

“ಖರ್ಗೆಯವರೇ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಶ್ವದಾದ್ಯಂತ ಅನೇಕ ದೇಶಗಳ ನಾಯಕರು ಅಪ್ರತಿಮ ಜಾಗತಿಕ ನಾಯಕ ಎಂದು ಹೊಗಳುತ್ತಿದ್ದಾರೆ. ವಿಶ್ವದ 26ಕ್ಕೂ ಹೆಚ್ಚು ರಾಷ್ಟ್ರಗಳು ಮೋದಿ ಅವರ ನಾಯಕತ್ವವನ್ನು ಗೌರವಿಸಿ ಅವರಿಗೆ ತಮ್ಮ ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ನೀಡಿ ಗೌರವಿಸಿವೆ. ಇಡೀ ಜಗತ್ತು ಭಾರತದತ್ತ ಹೆಮ್ಮೆಯಿಂದ ನೋಡುತ್ತಿರುವಾಗ, ನಿಮ್ಮ ರಾಜಕೀಯ ದುರುದ್ದೇಶಕ್ಕಾಗಿ ದೇಶದ ಪ್ರಧಾನಿಯ ವಿರುದ್ಧ ಇಂತಹ ಕೀಳು ಮಟ್ಟದ ಪದಗಳನ್ನು ಬಳಸುತ್ತಿರುವುದು ನಿಮ್ಮ ಕೀಳು ಮನಸ್ಥಿತಿ ಮತ್ತು ನಿಮ್ಮ ರಾಜಕೀಯ ಹತಾಶೆಯನ್ನು ಸಾಬೀತುಪಡಿಸುತ್ತದೆ. ಅಧಿಕಾರಕ್ಕಾಗಿ ನಡೆಯುತ್ತಿರುವ ಹುಚ್ಚು ಹೋರಾಟದಲ್ಲಿ ಒಂದು ಕುಟುಂಬವನ್ನು ಸಂತೋಷಪಡಿಸುವ ಸಲುವಾಗಿ ನೀವು ನಿಮ್ಮ ಘನತೆಯನ್ನು ಕಳೆದುಕೊಂಡಿದ್ದೀರಿ. ನಿಮ್ಮಂತಹ ಹಿರಿಯ ವ್ಯಕ್ತಿಯ ಇಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ರಾಷ್ಟ್ರದ ಜನರು ಎಂದಿಗೂ ಕ್ಷಮಿಸುವುದಿಲ್ಲ. ಇಂತಹ ಕೀಳು ಮಟ್ಟದ ಹೇಳಿಕೆಗಾಗಿ ನೀವು ತಕ್ಷಣ ಕ್ಷಮೆಯಾಚಿಸಬೇಕೆಂದು ನಾನು ಒತ್ತಾಯಿಸುತ್ತೇನೆ” ಎಂದು ಮಾಜಿ ಸಿಎಂ ಯಡಿಯೂರಪ್ಪ ಒತ್ತಾಯಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:56 pm, Tue, 21 April 26

Source link