Category Archives: Blog

Your blog category

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಉಪವಿಭಾದಲ್ಲಿ 34 ಮಂದಿ ಬಾಂಗ್ಲಾ ಅಕ್ರಮ ವಲಸಿಗರು ಪತ್ತೆ – Kannada News | 34 Illegal Bangladeshi Migrants Detained in Bengaluru’s Electronic City Sub Division, Police Crackdown Intensifies

ಬೆಂಗಳೂರು, ಜನವರಿ 13: ಬೆಂಗಳೂರಿನ (Bangalore) ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಪೊಲೀಸರು ಶಂಕಿತ ಅಕ್ರಮ ಬಾಂಗ್ಲಾ ವಲಸಿಗರ (Bangadesh Immigrants) ವಿರುದ್ಧ ಸರಣಿ ಕಾರ್ಯಾಚರಣೆ ನಡೆಸಿ ಒಟ್ಟು 34 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿಯ ಆಧಾರದ ಮೇಲೆ ಕಳೆದ ಒಂದು ವಾರದಲ್ಲಿ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದಾಳಿ ನಡೆಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 7ಕ್ಕೂ ಹೆಚ್ಚು, ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16, ಹಾಗೂ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 10 ಮಂದಿ ಶಂಕಿತ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆಯಲಾಗಿದೆ.

ವಶಕ್ಕೆ ಪಡೆದವರು ಅಕ್ರಮವಾಗಿ ಬಾಂಗ್ಲಾದೇಶದಿಂದ ಭಾರತಕ್ಕೆ ಪ್ರವೇಶಿಸಿರುವ ಆರೋಪ ಎದುರಿಸುತ್ತಿದ್ದು ನಕಲಿ ಪಾಸ್‌ಪೋರ್ಟ್, ಆಧಾರ್ ಕಾರ್ಡ್ ಸೇರಿದಂತೆ ವಿವಿಧ ದಾಖಲೆಗಳನ್ನು ಸೃಷ್ಟಿಸಿಕೊಂಡು ಇಲ್ಲಿಗೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಹೆಚ್ಚಿನವರು ಗುಜರಿ ಗೋದಾಮುಗಳ ಶೆಡ್‌ಗಳಲ್ಲಿ ವಾಸವಿದ್ದು, ಕೆಲವರು ಅಪಾರ್ಟ್‌ಮೆಂಟ್‌ಗಳಲ್ಲಿ ಕೆಲಸ ಮಾಡುತ್ತಿದ್ದರು. ಇನ್ನೂ ಕೆಲವರು ರಾತ್ರಿ ಸಮಯದಲ್ಲಿ ಚಿಂದಿ ಆಯುವ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆ ವೇಳೆ ವಶಕ್ಕೆ ಪಡೆದ ಎಲ್ಲ ಶಂಕಿತರನ್ನು ದಾಖಲೆಗಳ ಪರಿಶೀಲನೆಗಾಗಿ ಎಫ್‌ಆರ್‌ಆರ್‌ಒ (Foreigners Regional Registration Office) ಮುಂದೆ ಹಾಜರುಪಡಿಸಲಾಗಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಪೊಲೀಸರು ತಿಳಿಸಿದ್ದಾರೆ.

ಅಕ್ರಮವಾಗಿ ನೆಲೆಸಿದ್ದ ಇಬ್ಬರು ನೈಜೀರಿಯಾ ಪ್ರಜೆಗಳು ವಶಕ್ಕೆ

ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹಾರಗದ್ದೆ ಗ್ರಾಮದಲ್ಲಿ ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ನೆಲೆಸಿದ್ದ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆಯಲಾದವರನ್ನು ಡೊವ್ಯಾರೋ(34) ಹಾಗೂ ಮಾನ್ಯುಯಲ್ ನಾಜುಬಿ (32) ಎಂದು ಗುರುತಿಸಲಾಗಿದೆ. ಬಾಂಗ್ಲಾ ವಲಸಿಗರು ವಾಸ ಇರುವ ಬಗ್ಗೆ ದೂರು ಬಂದ ಹಿನ್ನೆಲೆ ಜಿಗಣಿ ಪೊಲೀಸರು ಕಾರ್ಯಾಚರಣೆ ನಡೆಸಿದ ವೇಳೆ ನೈಜೀರಿಯಾ ಪ್ರಜೆಗಳು ಪತ್ತೆಯಾಗಿದ್ದಾರೆ.

ಇದನ್ನೂ ಓದಿ: ಜೈ ಬಾಂಗ್ಲಾ: ದೇಶ ವಿರೋಧಿ ಘೋಷಣೆ ಕೂಗಿದ ಆರೋಪ, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮುಸ್ಲಿಂ ಮಹಿಳೆಯ ಬಂಧನ

ಕೋಗಿಲು ಲೇಔಟ್​​ನಲ್ಲಿ ಬಾಂಗ್ಲಾ ಅಕ್ರಮ ವಲಸಿಗರಿಲ್ಲ: ಪರಮೇಶ್ವರ್

ಕೋಗಿಲು ಲೇಔಟ್​ನಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಇರಲಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಅಲ್ಲಿ ವಾಸವಿದ್ದವರ ಪಟ್ಟಿ ಪಡೆದು ನೋಡಿದ್ದೇವೆ, ಅದರಲ್ಲಿ ಬಾಂಗ್ಲಾದವರಿಲ್ಲ. ಬಾಂಗ್ಲಾದೇಶದವರು ಇದ್ದಾರೆ ಎಂಬುದು ಸತ್ಯಕ್ಕೆ ದೂರವಾಗಿದೆ ಎಂದು ಪರಮೇಶ್ವರ ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೊನೆಗೂ ಗೆದ್ದ ಚಿರಂಜೀವಿ: ‘ಶಂಕರ ವರ ಪ್ರಸಾದ್’ ಗಳಿಸಿದ್ದೆಷ್ಟು? – Kannada News | Megastar Chiranjeevi starrer Mana Shankara Vara Prasad Garu movie first day collection

ಮೆಗಾಸ್ಟಾರ್ ಚಿರಂಜೀವಿ (Megastar Chiranjeevi), ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ನಟ. ತೆಲುಗು ಚಿತ್ರರಂಗದ ಲಿಜೆಂಡ್​ಗಳಲ್ಲಿ ಒಬ್ಬರು. ರಾಜಕೀಯಕ್ಕೆ ಹೋಗಿ ಚಿತ್ರರಂಗದಿಂದ ದೂರಾಗಿದ್ದ ಚಿರಂಜೀವಿ ಬಳಿಕ ರಾಜಕೀಯ ತೊರೆದು ಸಂಪೂರ್ಣವಾಗಿ ಮತ್ತೆ ಚಿತ್ರರಂಗಕ್ಕೆ ತೊಡಗಿಸಿಕೊಂಡರು. ಆದರೆ ಅವರಿಗೆ ದೊಡ್ಡ ಯಶಸ್ಸು ಸಿಕ್ಕಿರಲಿಲ್ಲ. 2019ರ ಬಳಿಕ ಚಿರಂಜೀವಿ ನಟಿಸಿದ ನಾಲ್ಕು ಸಿನಿಮಾಗಳಲ್ಲಿ ನಟಿಸಿದ್ದರು. ನಾಲ್ಕೂ ಸಿನಿಮಾಗಳು ಸೋತಿದ್ದವು. ಇದೀಗ ಕೊನೆಗೂ ‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ ಮೂಲಕ ಗೆಲುವು ಸಾಧಿಸಿದ್ದಾರೆ ನಟ ಚಿರಂಜೀವಿ.

ಅನಿಲ್ ರವಿಪುಡಿ ನಿರ್ದೇಶನದ ‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ ಜನವರಿ 12 ರಂದು ಬಿಡುಗಡೆ ಆಗಿದ್ದು, ಮೊದಲ ದಿನ ಭರ್ಜರಿ ಗಳಿಕೆ ಮಾಡಿದೆ. ಸಿನಿಮಾ ನೋಡಿದ ಬಹುತೇಕ ಮಂದಿ ಸಿನಿಮಾದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ‘ಸಂಕ್ರಾಂತಿಗೆ ಬಿಡುಗಡೆ ಆದ ಪಕ್ಕಾ ಎಂಟರ್ಟೈನರ್’ ಎಂದು ವಿಮರ್ಶಕರು ಸಹ ಕೊಂಡಾಡಿದ್ದಾರೆ. ಆ ಮೂಲಕ ಈ ಸಂಕ್ರಾಂತಿಗೆ ತೆಲುಗು ಚಿತ್ರರಂಗದಲ್ಲಿ ಹಿಟ್ ಸಿನಿಮಾ ಆಗುವ ಎಲ್ಲ ಲಕ್ಷಣಗಳನ್ನು ಚಿರಂಜೀವಿ ನಟನೆಯ ‘ಮನ ಶಂಕರ ವರ ಪ್ರಸಾದ್’ ಸಿನಿಮಾ ತೋರಿಸಿದೆ.

‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ ಮೊದಲ ದಿನ ಬಾಕ್ಸ್ ಆಫೀಸ್​ನಲ್ಲಿ ಸುಮಾರು 38 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದು ಭಾರತದ ಬಾಕ್ಸ್ ಆಫೀಸ್​ ಲೆಕ್ಕಾಚಾರವಾಗಿದೆ. ಸಿನಿಮಾ ಅಡ್ವಾನ್ಸ್ ಬುಕಿಂಗ್​​ನಿಂದಲೇ ಸುಮಾರು 10-12 ಕೋಟಿ ಗಳಿಕೆ ಮಾಡಿತ್ತು. ಬಳಿಕ ಸಿನಿಮಾ ಬಿಡುಗಡೆ ಆದ ದಿನ ಅಂದರೆ ಸೋಮವಾರದಂದು 28.7 ಕೋಟಿಗೂ ಹೆಚ್ಚು ಮೊತ್ತವನ್ನು ಗಳಿಸಿದೆ. ಆ ಮೂಲಕ ಭಾರತದ ಬಾಕ್ಸ್ ಆಫೀಸ್​ ಕಲೆಕ್ಷನ್ ಮೊದಲ ದಿನ ಸುಮಾರು 40 ಕೋಟಿ ವರೆಗೂ ಆಗಿದೆ. ವಿದೇಶಗಳಲ್ಲಿ ವಿಶೇಷವಾಗಿ ಉತ್ತರ ಅಮೆರಿಕದಲ್ಲಿ ಸಿನಿಮಾ ಚೆನ್ನಾಗಿ ಕಲೆಕ್ಷನ್ ಮಾಡಿದ್ದು, ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಸುಮಾರು 15 ಕೋಟಿ ಗಳಿಕೆ ಆಗಿದೆ ಎನ್ನಲಾಗುತ್ತಿದೆ. ಆ ಮೂಲಕ ಸಿನಿಮಾದ ಒಟ್ಟು ಕಲೆಕ್ಷನ್ 55 ಕೋಟಿ ದಾಟಿದೆ.

ಇದನ್ನೂ ಓದಿ:ಈ ವರ್ಷವೂ ಬಿಡುಗಡೆ ಆಗಲ್ಲ ಮೆಗಾಸ್ಟಾರ್ ಚಿರಂಜೀವಿ ಸಿನಿಮಾ

ಚಿರಂಜೀವಿಯ ಈ ಹಿಂದಿನ ಸಿನಿಮಾ ‘ಭೋಲಾ ಶಂಕರ್’ ಗಳಿಸಿದ್ದ ಒಟ್ಟು ಮೊತ್ತವೇ 45 ಕೋಟಿ ಆಗಿತ್ತು. ಆದರೆ ಈ ಮೊತ್ತವನ್ನು ಮೊದಲ ದಿನವೇ ಹಿಂದಿಕ್ಕಿದೆ ‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ. ಚಿರಂಜೀವಿಯ ಈ ಹಿಂದಿನ ಕೆಲ ಸಿನಿಮಾಗಳಿಗೆ ಹೋಲಿಸಿದರೆ ಯಾವುದೇ ಅತಿಯಾದ ಆಕ್ಷನ್ ಇಲ್ಲದೆ, ಅತಿಯಾದ ಸಾಮಾಜಿಕ ಸಂದೇಶ, ಒಣ ಭಾಷಣಗಳು ಇಲ್ಲದೆ, ಕೇವಲ ಮನೊರಂಜನೆಗಾಗಿ ಮಾಡಿದ ಸಿನಿಮಾ ಇದಾಗಿದ್ದು, ಇದೇ ಕಾರಣಕ್ಕೆ ಜನರಿಗೆ ಸಿನಿಮಾ ಬಹಳ ಇಷ್ಟವಾಗಿದೆ. ಭರಪೂರ ಹಾಸ್ಯ, ಅದರಲ್ಲೂ ಸ್ವತಃ ಚಿರಂಜೀವಿಯೇ ಹಾಸ್ಯ ದೃಶ್ಯಗಳಲ್ಲಿ ನಟಿಸಿರುವುದು ಪ್ರೇಕ್ಷಕರಿಗೆ ಬಹುವಾಗಿ ಹಿಡಿಸಿದೆ.

ಸಿನಿಮಾನಲ್ಲಿ ಚಿರಂಜೀವಿ ಜೊತೆಗೆ ಸ್ಟಾರ್ ನಟ ವಿಕ್ಟರಿ ವೆಂಕಟೇಶ್ ಸಹ ನಟಿಸಿದ್ದು ಸಿನಿಮಾಕ್ಕೆ ಪಾಸಿಟಿವ್ ಆಗಿ ಪರಿಣಮಿಸಿದೆ. ಸಿನಿಮಾನಲ್ಲಿ ನಯನತಾರಾ ಮತ್ತು ಕ್ಯಾತರೀನ್ ಥೆರೆಸಾ ನಾಯಕಿ. ಸಿನಿಮಾ ನಿರ್ದೇಶನ ಮಾಡಿರುವುದು ಅನಿಲ್ ರವಿಪುಡಿ. ಸಂಕ್ರಾಂತಿ ಹಬ್ಬಕ್ಕೆ ಬಿಡುಗಡೆ ಆದ ಅನಿಲ್ ರವಿಪೂಡಿ ನಿರ್ದೇಶನದ ಎಲ್ಲ ಸಿನಿಮಾಗಳು ಹಿಟ್ ಆಗಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Bengaluru: ಟ್ರಾಫಿಕ್​​ ನಿಯಮ ಉಲ್ಲಂಘಿಸುವ ಮುನ್ನ ಜೋಕೆ: ಇನ್ಮುಂದೆ ದಾಖಲಾಗುತ್ತೆ FIR – Kannada News | Bengaluru Traffic Police Begin Registering FIRs for Traffic Violations

ಬೆಂಗಳೂರು, ಜನವರಿ 13: ರಸ್ತೆಯಲ್ಲಿ ಸಂಚಾರ ಪೊಲೀಸರು ಇಲ್ಲ, ಕ್ಯಾಮರಾಗಳ ಕಣ್ಣಿಗೆ ಕಾಣಿಸಲ್ಲ ಎಂದು ಮೊಂಡತನ ಮಾಡಿ ಟ್ರಾಫಿಕ್​​ ನಿಯಮಗಳನ್ನು ಉಲ್ಲಂಘಿಸಿ ವಾಹನಗಳ ಚಾಲನೆ ಮಾಡ್ತಿದ್ದೀರಾ? ಹಾಗಿದ್ರೆ ಸಂಕಷ್ಟ ಎದುರಿಸೋಕೆ ಸಿದ್ಧರಾಗಿ. ಸಂಚಾರ ನಿಯಮಗಳ ಪಾಲನೆ ಮಾಡದಿದ್ರೆ ಇನ್ಮುಂದೆ ದಂಡ ಒಂದೇ ಬೀಳಲ್ಲ, ಕೇಸ್​​ ಕೂಡ ದಾಖಲಾಗುತ್ತೆ. ಟ್ರಾಫಿಕ್​​ ರೂಲ್ಸ್​​ ಬ್ರೇಕ್​​ ಮಾಡೋರ ವಿರುದ್ಧ ಬೆಂಗಳೂರಲ್ಲಿ ಪೊಲೀಸರು ಈಗಾಗಲೇ ಎಫ್​ಐಆರ್​​ ದಾಖಲಿಸಲು ಆರಂಭಿಸಿದ್ದಾರೆ.

ಹೌದು, ಸಿಗ್ನಲ್ ಜಂಪ್ ಮಾಡುವುದು, ಏಕಮಾರ್ಗ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಲಾಯಿಸುವುದು ಹಾಗೂ ರಸ್ತೆಗಳ ಮೇಲೆ ವಾಹನ ನಿಲ್ಲಿಸಿ ಸಂಚಾರಕ್ಕೆ ಅಡಚಣೆ ಉಂಟುಮಾಡುವಂತಹ ಪ್ರಕರಣಗಲಿಗೆ ಸಂಬಂಧಿಸಿ ಆಯಾ ಪ್ರದೇಶಗಳ ವ್ಯಾಪ್ತಿಯ ಸಂಚಾರ ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ. ಈ ಬಗ್ಗೆ ಸ್ವತಃ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಅನೂಪ್ ಶೆಟ್ಟಿ ಅವರೇ ಮಾಹಿತಿ ನೀಡಿರೋದಾಗಿ ದಿ ನ್ಯೂ ಇಂಡಿಯನ್​​ ಎಕ್ಸ್ಪ್ರೆಸ್​​ ವರದಿ ಮಾಡಿದೆ.

ಇದನ್ನೂ ಓದಿ: ಬೆಂಗಳೂರಿನ ಸಂಚಾರ ಉಲ್ಲಂಘನೆ ಗುರುತಿಸಲು ಹೆಲ್ಮೆಟ್​​ನ್ನು ಟ್ರಾಫಿಕ್ ಪೊಲೀಸ್ ಸಾಧನವಾಗಿ ಪರಿವರ್ತಿಸಿದ ಟೆಕ್ಕಿ

ಸಿಗ್ನಲ್ ಜಂಪ್ ಮಾಡುವುದು ಮತ್ತು ಏಕಮಾರ್ಗ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಚಲಿಸುವುದು ಬೆಂಗಳೂರಿನಲ್ಲಿ ಸಾಮಾನ್ಯ ಎನ್ನುವ ಸ್ಥಿತಿ ನಿರ್ಮಾಣವಾಗಿರುವ ಕಾರಣ ಇಲಾಖೆ ಕಠಿಣ ಕ್ರಮ ಜಾರಿಗೆ ಮುಂದಾಗಿದೆ. ಪೊಲೀಸ್‌ ಅಂಕಿ ಅಂಶಗಳ ಪ್ರಕಾರ 2025ರ ಜನವರಿಯಿಂದ ನವೆಂಬರ್‌ವರೆಗೆ ಬೆಂಗಳೂರಿನಲ್ಲಿ 6,62,447 ಸಿಗ್ನಲ್ ಜಂಪಿಂಗ್ ಪ್ರಕರಣಗಳು ಹಾಗೂ 3,02,962 ನೋ-ಎಂಟ್ರಿ ಉಲ್ಲಂಘನೆಗಳು ದಾಖಲಾಗಿವೆ. ಏಕಮುಖ ರಸ್ತೆಯಲ್ಲಿನ ಸಂಚಾರ ಟ್ರಾಫಿಕ್​​ ಸಮಸ್ಯೆಗೆ ಕಾರಣವಾಗುವ ಜೊತೆಗೆ ಅಪಘಾತಗಳಿಗೂ ಎಡೆಮಾಡಿಕೊಡುವ ಸಾಧ್ಯತೆ ಇರುತ್ತದೆ. ಹೀಗಾಗಿ ಇಂತಹ ಸಂದರ್ಭಗಳಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್)ಯ ಸೆಕ್ಷನ್‌ 285 (ಸಾರ್ವಜನಿಕ ಮಾರ್ಗದಲ್ಲಿ ಅಪಾಯ ಅಥವಾ ಅಡ್ಡಿ ಉಂಟುಮಾಡುವುದು) ಅಡಿಯಲ್ಲಿ ನಿಯಮ ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಾಗಲಿದೆ.

ಇದೇ ಸೆಕ್ಷನ್‌ ಅಡಿಯಲ್ಲಿ, ಬಸ್​​ ಹಾಗೂ ರೈಲು ನಿಲ್ದಾಣಗಳ ಬಳಿ ರಸ್ತೆ ಮೇಲೆ ವಾಹನಗಳನ್ನು ನಿಲ್ಲಿಸಿ ಸುಗಮ ಸಂಚಾರಕ್ಕೆ ತೊಂದರೆ ಉಂಟು ಮಾಡುವ ಆಟೋರಿಕ್ಷಾ ಹಾಗೂ ಕಾರುಗಳ ಮೇಲೂ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಸಿಗ್ನಲ್ ಜಂಪಿಂಗ್ ಕೂಡ ಗಂಭೀರ ಅಪಘಾತಗಳಿಗೆ ಕಾರಣವಾಗಬಹುದು. ಹೀಗಾಗಿ ಇಂತಹ ಸಂದರ್ಭಗಳಲ್ಲಿ ಬಿಎನ್‌ಎಸ್‌ನ ಸೆಕ್ಷನ್‌ 281 (ಸಾರ್ವಜನಿಕ ಮಾರ್ಗದಲ್ಲಿ ಅಜಾಗರೂಕ ಅಥವಾ ನಿರ್ಲಕ್ಷ್ಯ ಚಾಲನೆ) ಅಡಿಯಲ್ಲಿ ಕೇಸ್​​ ದಾಖಲಾಗಲಿದೆ.  ಹಿಂದೆ ನಿಯಮಗಳನ್ನು ಉಲ್ಲಂಘಿಸುತ್ತಿದ್ದವರು ಸ್ಥಳದಲ್ಲೇ ದಂಡ ಪಾವತಿಸಿ ಮತ್ತೆ ಅದೇ ತಪ್ಪು ಮಾಡುತ್ತಿದ್ದರು. ಆದರೆ ಈಗ ಎಫ್‌ಐಆರ್‌ ದಾಖಲಾದ ಬಳಿಕ ವಾಹನವನ್ನು ವಶಪಡಿಸಿಕೊಳ್ಳಲಾಗುತ್ತದೆ ಮತ್ತು ದಂಡ ಪಾವತಿಸಲು ನ್ಯಾಯಾಲಯವನ್ನು ಸಂಪರ್ಕಿಸಬೇಕಾಗುತ್ತದೆ. ಇದು ದೀರ್ಘ ಪ್ರಕ್ರಿಯೆಯಾಗಿರುವ ಕಾರಣ ಪರಿಣಾಮ ದೊಡ್ಡದಿರಲಿದೆ ಎಂಬುದು ಪೊಲೀಸರ ಅಭಿಪ್ರಾಯ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 11:41 am, Tue, 13 January 26

Source link

ಗಾಜಿಯಾಬಾದ್: ಮಣಿಕಟ್ಟು ಸೀಳಿಕೊಂಡು ಅಪಾರ್ಟ್​ಮೆಂಟ್​ನ 11ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟ ಯುವಕ – Kannada News | Ghaziabad Tragedy: 28 Year Old Man Dies After Fall From Residential Building

ಗಾಜಿಯಾಬಾದ್, ಜನವರಿ 13: ಯುವಕನೊಬ್ಬ ಮಣಿಕಟ್ಟು ಸೀಳಿಕೊಂಡು ಅಪಾರ್ಟ್​ಮೆಂಟ್​(Apartment)ನ 11ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ. 11 ನೇ ಮಹಡಿಯಲ್ಲಿರುವ ತನ್ನ ಮನೆಯ ಬಾಲ್ಕನಿಯಿಂದ ಹಾರಿ 28 ವರ್ಷದ ಯಜ್ಞ ಪಾಂಡೆ ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಇಂದಿರಾಪುರಂನ ಸೊಸೈಟಿಯೊಂದರ ನಿವಾಸಿಯಾಗಿರುವ ಯಜ್ಞ ಪಾಂಡೆ ಸೋಮವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ತನ್ನ ಮಣಿಕಟ್ಟನ್ನು ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಕುಟುಂಬ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ಜಾಹೀರಾತು ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪಾಂಡೆ ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿಯಾಗಿದೆ. ಇಲ್ಲಿಯವರೆಗೆ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಮತ್ತು ಆತ್ಮಹತ್ಯೆಗೆ ನಿಖರವಾದ ಕಾರಣ ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಅವರು ತಮ್ಮ ತಾಯಿ, ತಂದೆ ಮತ್ತು ಸಹೋದರಿಯನ್ನು ಅಗಲಿದ್ದಾರೆ. ಅವರ ತಂದೆ ಮಾಧ್ಯಮ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿಯಾಗಿದೆ.

ಮತ್ತಷ್ಟು ಓದಿ:ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಬೆಂಗಳೂರಿನ ಡೆಂಟಲ್ ಕಾಲೇಜಿನ 6 ಉಪನ್ಯಾಸಕರು ಕೆಲಸದಿಂದ ವಜಾ

ಮತ್ತೊಂದು ಘಟನೆ

ಶಾಲೆಗೆ ಹೋಗು ಎಂದದ್ದಕ್ಕೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ
ಬಾಲಕ ಜಗದೀಶನ ತಾಯಿಯ ಕುಟುಂಬ ಅಯ್ಯಪ್ಪ ಮಾಲೆ ಹಾಕಿದ್ದರು. ಈ ಸಂಬಂಧ ಅಲ್ಲಿಗೆ ಹೋಗಿ ಜಗದೀಶ್ ವಾಪಸ್ ಬಂದಿದ್ದ. ನಂತರ ಶಾಲೆಗೆ ಹೋಗಲು ನಿರಾಕರಿಸಿದ್ದ. ಇದರಿಂದ ತಂದೆ ಬುದ್ದಿವಾದ ಹೇಳಿದ್ದಕ್ಕೆ ಶಾಲೆಗೆ ತೆರಳಿದ್ದ ಬಾಲಕ ಗೆಳೆಯನ ಜೊತೆಗೆ ಮನೆಗೆ ವಾಪಸ್ ಬರುವಾಗ ಗೆಳೆಯನನ್ನು ಕಳಿಸಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ಚೆನ್ನಕಾಟಯ್ಯನ ಗುಡ್ಲು ಗ್ರಾಮದಲ್ಲಿ ಜಗದೀಶ್ (14) ಎಂಬ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 11:49 am, Tue, 13 January 26

Source link

ತುಮಕೂರು ಮಹಾತ್ಮಾ ಗಾಂಧಿ ಇಂಡೋರ್ ಸ್ಟೇಡಿಯಂಗೆ ಪರಮೇಶ್ವರ್ ಹೆಸರು! ಬಿಜೆಪಿ ಪ್ರತಿಭಟನೆ – Kannada News | BJP Protests Renaming of Tumakuru Mahatma Gandhi Indoor Stadium After G Parameshwara

ತುಮಕೂರು ಮಹಾತ್ಮಾ ಗಾಂಧಿ ಇಂಡೋರ್ ಸ್ಟೇಡಿಯಂಗೆ ಪರಮೇಶ್ವರ್ ಹೆಸರು!

ತುಮಕೂರು, ಜನವರಿ 13: ತುಮಕೂರಿನ (Tumakur) ಜಿಲ್ಲಾಮಟ್ಟದ ಏಕೈಕ ಕ್ರೀಡಾಂಗಣಕ್ಕೆ ಗೃಹ ಸಚಿವ ಡಾ. ಜಿ ಪರಮೇಶ್ವರ (G Prameshwara) ಹೆಸರು ಇಟ್ಟಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಅಷ್ಟಕ್ಕೂ ಅವರ ಹೆಸರು ಇಟ್ಟಿದ್ದಷ್ಟೇ ಆದರೆ ವಿವಾದವಾಗುತ್ತಿರಲಿಲ್ಲವೇನೋ. ಮಹಾತ್ಮಾ ಗಾಂಧೀಜಿ (mahatma Gandhi) ಹೆಸರಿನ ಬದಲಿಗೆ ಪರಮೇಶ್ವರ್ ಹೆಸರು ಇಟ್ಟಿರುವುದು ಪ್ರತಿಪಕ್ಷ ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿದೆ. ಇದನ್ನು ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಯಡಿ 60 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗಿದೆ. ಹೊರಾಂಗಣ ಕ್ರೀಡಾಂಗಣದ ಮುಂಬಾಗದಲ್ಲೇ ಒಳಾಂಗಣ ಸ್ಟೇಡಿಯಂ ಇದೆ. ಇದಕ್ಕೆ ಪ್ರತ್ಯೇಕ ನಾಮಫಲಕ ಇಲ್ಲದ್ದಿದ್ರೂ ಮಹಾತ್ಮಾ ಗಾಂಧಿ ಇಂಡೋರ್ ಸ್ಟೇಡಿಯಂ ಅಂತಲೇ ಕರೆಯಲಾಗುತ್ತಿತ್ತು. ಆದರೆ, 3 ದಿನದ ಹಿಂದೆ ದಿಢೀರ್ ಆಗಿ ಗೃಹಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಹೆಸರನ್ನು ನಾಮಕರಣ ಮಾಡಲಾಗಿದೆ. ಡಾ. ಜಿ. ಪರಮೇಶ್ವರ್ ಒಳಾಂಗಣ ಕ್ರೀಡಾ ಸಂಕೀರ್ಣ ಎಂಬ ನಾಮಫಲಕವನ್ನು ಅಳವಡಿಸಿದೆ. ಇದು ಬಿಜೆಪಿಗರ ಆಕ್ರೋಶ ಭುಗಿಲೇಳುವಂತೆ ಮಾಡಿದೆ.

ಇದರ ವಿರುದ್ಧ ಸೋಮವಾರ ಸಂಜೆ ಬಿಜೆಪಿಯ ನೂರಾರು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಮೂಲಕ ಕ್ರೀಡಾಂಗಣ ಬಳಿ ಲಗ್ಗೆ ಹಾಕಿದರು. ದ್ವಾರದ ಬಳಿಯೇ ಕುಳಿತು ಪ್ರತಿಭಟನೆ ನಡೆಸಿದರು. ಇನ್ನು ಪರಮೇಶ್ವರ್ ಹೆಸರಿನ ನಾಮಫಲಕ ತೆರವಿಗೆ ಮುಂದಾಗುತ್ತಿದ್ದಂತೆಯೇ ಜಟಾಪಟಿಯೇ ನಡೆಯಿತು. ಪೊಲೀಸರ ಬ್ಯಾರಿಕೇಡ್‌ ತಳ್ಳಿ ಒಳನುಗ್ಗಲು ಯತ್ನಿಸಿದರು. ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ಪೊಲೀಸರು ಅಂತಿಮವಾಗಿ ಬಿಜೆಪಿ ಮುಖಂಡರು ಸೇರಿ 30ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ಬಿಜೆಪಿ ಶಾಸಕ ಸುರೇಶ್‌ಗೌಡ ಮಾತನಾಡಿ, ಇದು ಪರಮೇಶ್ವರ್ ಅವರ ಹಿಂಬಾಲಕರು ಮೆಚ್ಚಿಸಲೆಂದು ಮಾಡಿರುವುದು. ಪರಮೇಶ್ವರ್ ಅವರೇ ಈ ತಪ್ಪು ಸರಿಪಡಿಸಬೇಕೆಂದು ಒತ್ತಾಯಿಸಿದ್ದಾರೆ. ಇನ್ನು ಶಾಸಕ ಜ್ಯೋತಿ ಗಣೇಶ್ ಮಾತನಾಡಿ, ಸ್ಥಳೀಯ ಸಂಸ್ಥೆ ಅಥವಾ ಸಂಬಂಧ ಪಟ್ಟ ಇಲಾಖೆಯಿಂದ ಠರಾವು ಪಡೆಯದೇ ಈ ರೀತಿ ಹೆಸರುಬದಲಿಸಿದ್ದು ಸರಿಯಲ್ಲ ಎಂದಿದ್ದಾರೆ.

ಇದನ್ನೂ ಓದಿ: ಮನರೇಗಾ ಯೋಜನೆ ಹೆಸರು ಬದಲಾವಣೆ: ಕೇಂದ್ರದ ಕ್ರಮಕ್ಕೆ ಮಲ್ಲಿಕಾರ್ಜುನ ಖರ್ಗೆ ಆಕ್ಷೇಪ

ಇದೇ ತಿಂಗಳ 16 ರಿಂದ ಇದೇ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಒಲಂಪಿಕ್ ಕ್ರೀಡಾಕೂಟ ನಡೆಯುತ್ತಿದೆ. ಇದೇ ಸಂದರ್ಭ ಸರ್ಕಾರದ ಆದೇಶ ಇಲ್ಲದ್ದಿದ್ದರೂ ಅಧಿಕಾರಿಗಳು ತರಾತುರಿಯಲ್ಲಿ ಮಹಾತ್ಮಾ ಗಾಂಧೀಜಿ ಹೆಸರು ಬದಲಿಸಿ ಡಾ.ಜಿ.ಪರಮೇಶ್ವರ್ ಹೆಸರಿನ ನಾಮಫಲಕ ಹಾಕಿ ವಿವಾದ ಸೃಷ್ಟಿಸಿದ್ದಾರೆ. ಪರಮೇಶ್ವರ್ ಅವರೇ ಮಧ್ಯಪ್ರವೇಶಿಸಿ ಈ ವಿವಾದಕ್ಕೆ ತೆರೆ ಎಳೆಯಬೇಕಿದೆ.

ಪರಮೇಶ್ವರ್ ಹೇಳಿದ್ದೇನು?

ತುಮಕೂರಿನಲ್ಲಿ ಗಾಂಧೀಜಿ ಮೈದಾನ ಹೆಸರು ಬದಲಾವಣೆ ಆರೋಪ ಸಂಬಂಧ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಗಾಂಧಿ ಹೆಸರು ಬದಲಾವಣೆ ಮಾಡಲು ಆಗುತ್ತಾ? ಮಹಾತ್ಮ ಗಾಂಧೀಜಿ ಸ್ಟೇಡಿಯಂಗೆ ಇರುವ ಹೆಸರು ತೆಗೆಯುತ್ತಾರೆ ಎಂದರೆ ಅದು ಹುಚ್ಚರು ಹೇಳುವ ಮಾತು ಎಂದಿದ್ದಾರೆ. ಅಲ್ಲಿ ಶೆಡ್ ಇದೆ, ಅದನ್ನು ಒಳಾಂಗಣ ಕ್ರೀಡಾಂಗಣ ಮಾಡಿದ್ದಾರೆ. ಅದಕ್ಕೆ ಡಾ.ಪರಮೇಶ್ವರ್​​ ಹೆಸರು ಇಡುವಂತೆ ಪತ್ರ ಬರೆದಿದ್ದರು. ಆ ವಿಚಾರಕ್ಕೆ ಅವರು ರಾಜಕೀಯ ಮಾಡೋಕೆ ಹೊರಟರೆ ಹೇಗೆ? ಕ್ರೀಡಾಂಗಣಕ್ಕೆ ಮಹಾತ್ಮ ಗಾಂಧೀಜಿ ಹೆಸರು ತೆಗೆಯಲು ಆಗುತ್ತಾ ಎಂದು ಪರಮೇಶ್ವರ್ ಪ್ರಶ್ನಿಸಿದ್​ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:34 am, Tue, 13 January 26

Source link

ಬಾಂಗ್ಲಾದೇಶ: ಪೊಲೀಸ್ ಕಸ್ಟಡಿಯಲ್ಲಿ ಶೇಖ್ ಹಸೀನಾ ಪಕ್ಷದ ಹಿಂದೂ ನಾಯಕ ಚಾಕಿ ಸಾವು – Kannada News | Proloy Chaki: Awami League Hindu Leader Dies in Bangladesh Police Custody

ಢಾಕಾ, ಜನವರಿ 13: ಬಾಂಗ್ಲಾದೇಶ(Bangladesh)ದ ಪೊಲೀಸ್ ಕಸ್ಟಡಿಯಲ್ಲಿದ್ದ ಶೇಖ್ ಹಸೀನಾರ ಪಕ್ಷದ ಹಿಂದೂ ನಾಯಕ ಪ್ರಳಯ್ ಚಾಕಿ ಸಾವನ್ನಪ್ಪಿದ್ದಾರೆ. ಜೈಲು ಅಧಿಕಾರಿಗಳು ಅವರಿಗೆ ವೈದ್ಯಕೀಯ ಆರೈಕೆ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ಅವರ ಕುಟುಂಬದಿಂದ ಆರೋಪ ಕೇಳಿಬಂದಿದೆ. ಗಾಯಕರೂ ಆಗಿದ್ದ 60 ವರ್ಷದ ಪ್ರಳಯ್  ಚಾಕಿ, ಅವಾಮಿ ಲೀಗ್‌ನ ಪಬ್ನಾ ಜಿಲ್ಲಾ ಘಟಕದ ಸಾಂಸ್ಕೃತಿಕ ವ್ಯವಹಾರಗಳ ಕಾರ್ಯದರ್ಶಿಯಾಗಿದ್ದರು, ಜೈಲು ಕಸ್ಟಡಿಯಲ್ಲಿದ್ದಾಗ ರಾಜ್‌ಶಾಹಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಬಾಂಗ್ಲಾದೇಶದ ದಿನಪತ್ರಿಕೆ ದಿ ಡೈಲಿ ಸ್ಟಾರ್ ವರದಿ ಮಾಡಿದೆ.

ಪಬ್ನಾ ಜೈಲಿನ ಸೂಪರಿಂಟೆಂಡೆಂಟ್ ಎಂಡಿ ಒಮೋರ್ ಫಾರೂಕ್ ಮಾತನಾಡಿ, ಚಾಕಿ ಮಧುಮೇಹ ಮತ್ತು ಹೃದ್ರೋಗ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಈ ಕಾರಣದಿಂದಾಗಿ, ಜೈಲು ವೈದ್ಯರು ಮೊದಲು ಅವರನ್ನು ಪಬ್ನಾ ಸದರ್ ಆಸ್ಪತ್ರೆಗೆ ಕಳುಹಿಸಲಾಗಿತ್ತು, ಮತ್ತು ಅಲ್ಲಿಂದ ಶುಕ್ರವಾರ ರಾತ್ರಿ ಅವರನ್ನು ರಾಜಶಾಹಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಪಬ್ನಾ ಜಿಲ್ಲಾ ಜೈಲಿನ ಸೂಪರಿಂಟೆಂಡೆಂಟ್ ಓಮೋರ್ ಫಾರೂಕ್ ಹೇಳಿದರು.

ಅವರು ಭಾನುವಾರ ರಾತ್ರಿ 9 ಗಂಟೆಯ ನಂತರ ರಾಜಶಾಹಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದ್ದಾರೆ ಎಂದು ಫಾರೂಕ್ ಹೇಳಿದರು. ಪ್ರಸಿದ್ಧ ಗಾಯಕ ಮತ್ತು ಸಂಗೀತ ನಿರ್ದೇಶಕರಾಗಿದ್ದರು. ಅವರು ಪಬ್ನಾದ ಶ್ರೀ ಶ್ರೀ ರಾಮ ಕೃಷ್ಣ ಸೇವಾಶ್ರಮದ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದರು. ಆ ಸಮಯದಲ್ಲಿ ಯಾವುದೇ ಪ್ರಕರಣದಲ್ಲಿ ಹೆಸರಿಲ್ಲದಿದ್ದರೂ ಅವರ ತಂದೆಯನ್ನು ಬಂಧಿಸಲಾಗಿದೆ ಎಂದು ಅವರ ಮಗ ಸೋನಿ ಚಾಕಿ ಆರೋಪಿಸಿದ್ದಾರೆ.

ಮತ್ತಷ್ಟು ಓದಿ: ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆ!

ಆಗಸ್ಟ್ 4 ರ ಹಿಂಸಾಚಾರಕ್ಕೆ ಸಂಬಂಧಿಸಿದ ಸ್ಫೋಟಕ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ನಂತರ ತೋರಿಸಲಾಗಿದೆ ನನ್ನ ತಂದೆ ಬಹಳ ದಿನಗಳಿಂದ ಮಧುಮೇಹ ಮತ್ತು ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು. ಜೈಲಿನಲ್ಲಿ ಅವರ ಸ್ಥಿತಿ ಹದಗೆಟ್ಟಿತು, ಆದರೆ ಅಧಿಕಾರಿಗಳು ನಮಗೆ ಅಧಿಕೃತವಾಗಿ ಮಾಹಿತಿ ನೀಡಲಿಲ್ಲ ಎಂದು ಸೋನಿ ಆರೋಪಿಸಿದ್ದಾರೆ.

ಇತರರು ತಿಳಿಸಿದ ನಂತರ ನಾವು ಆಸ್ಪತ್ರೆಗೆ ಹೋದೆವು, ಆದರೆ ಅವರಿಗೆ ಸರಿಯಾದ ಚಿಕಿತ್ಸೆ ಸಿಗಲಿಲ್ಲ, ಅದು ಅವರ ಸಾವಿಗೆ ಕಾರಣವಾಯಿತು. ಆರೋಪಗಳನ್ನು ತಿರಸ್ಕರಿಸಿದ ಫಾರೂಕ್, ಚೌಕಿಯ ವೈದ್ಯಕೀಯ ದಾಖಲೆಗಳ ಆಧಾರದ ಮೇಲೆ ಅವರಿಗೆ ಔಷಧಿಗಳನ್ನು ನೀಡಲಾಗಿದೆ ಎಂದು ಒತ್ತಿ ಹೇಳಿದರು. ಅವರ ಸ್ಥಿತಿ ಗಂಭೀರವಾದ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಅವರು ಹೇಳಿದರು. ಕಳೆದ ಕೆಲವು ತಿಂಗಳುಗಳಲ್ಲಿ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ಹಿಂಸಾಚಾರದ ಸರಣಿ ನಡೆದಿದೆ.

Source link

ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್

ಕಿಚ್ಚ ಸುದೀಪ್ ಅವರು ಇತ್ತೀಚೆಗೆ ಕುಣಿಗಲ್ ಉತ್ಸವಕ್ಕೆ ತೆರಳಿದ್ದರು. ವೇದಿಕೆ ಮೇಲೆ ಮಾತನಾಡುವಾಗ ಅವರು ಬಿಗ್ ಬಾಸ್ ವಿಷಯವನ್ನು ಪ್ರಸ್ತಾಪ ಮಾಡಿದರು. ‘ಈ ವಾರ ಫಿನಾಲೆ ನೋಡ್ತಾ ಇದೀರಾ’ ಎಂದು ಕೇಳಿದರು ಮತ್ತು ನೆರೆದಿದ್ದ ಅನೇಕರು ಗಿಲ್ಲಿ ಗಿಲ್ಲಿ ಎಂದು ಘೋಷಣೆ ಕೂಗಿದರು. ಆಗ ಸುದೀಪ್ ಅವರು ‘ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ’ ಎಂದು ನೇರವಾಗಿ ಹೇಳಿದರು. ಆ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಆ ಸಂದರ್ಭದ ವಿಡಿಯೋ ಮೇಲಿದೆ ನೋಡಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬಿಗ್ ಬಾಸ್ ಎದುರು ವಿಚಿತ್ರ ಆಸೆ ಹೇಳಿಕೊಂಡ ಗಿಲ್ಲಿ ನಟ; ಈಡೇರುತ್ತಾ ಬಯಕೆ? – Kannada News | Big Boss Kannada: Gilli Actor’s Bizarre Wishes Shock Fans

ಬಿಗ್ ಬಾಸ್ (Bigg Boss) ಮನೆಯಲ್ಲಿ ಈ ವಾರ ಸಾಕಷ್ಟು ಮನರಂಜನೆ ನೀಡುವ ಕೆಲಸ ಆಗುತ್ತಿದೆ. ಸ್ಪರ್ಧಿಗಳು ಇದನ್ನು ಸಾಕಷ್ಟು ಎಂಜಾಯ್ ಮಾಡುತ್ತಿದ್ದಾರೆ. ಎಲ್ಲಾ ಸ್ಪರ್ಧಿಗಳು ತಮ್ಮ ಆಸೆ ಹೇಳಿಕೊಳ್ಳುತ್ತಿದ್ದಾರೆ. ಸೋ ಶೀಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದೆ. ಗಿಲ್ಲಿಯ ಆಸೆ ವಿಚಿತ್ರವಾಗಿತ್ತು ಎಂದೇ ಹೇಳಬಹುದು.

ಪ್ರತಿ ಬಾರಿಯೂ ಬಿಗ್ ಬಾಸ್ ಪೂರ್ಣಗೊಳ್ಳುವಾಗ ಸ್ಪರ್ಧಿಗಳ ವಿಶ್ ಕೇಳಲಾಗುತ್ತದೆ. ಈ ವಿಶ್​​ ಪೈಕಿ ಯಾವುದು ಸಾಧ್ಯವೋ ಅದನ್ನು ಬಿಗ್ ಬಾಸ್ ಈಡೇರಿಸುತ್ತಾರೆ. ಸ್ಪರ್ಧಿಗಳು ಮೂರು ವಿಶ್ ತಿಳಿಸಬೇಕು ಮತ್ತು ಇದರ ಪೈಕಿ ಯಾವುದಾದರೂ ಒಂದು ಈಡೇರುತ್ತದೆ. ಈ ಬಾರಿ ಗಿಲ್ಲಿ ನಟ ವಿಚಿತ್ರ ಬೇಡಿಕೆ ಇಟ್ಟಿದ್ದಾರೆ. ಇದನ್ನು ಬಿಗ್ ಬಾಸ್ ಈಡೇರಿಸುತ್ತಾರಾ ಎಂಬುದು ಸದ್ಯದ ಪ್ರಶ್ನೆ ಎಂದೇ ಹೇಳಬಹುದು.

ಬಿಗ್ ಬಾಸ್​ ಮನೆಯಲ್ಲಿ ಸ್ಪರ್ಧಿಗಳು ನೂರಾರು ದಿನ ಇರುತ್ತಾರೆ. ಹೊರಗಿನ ಜಗತ್ತು ನೋಡದೇ ಅಷ್ಟು ದಿನ ದೊಡ್ಮನೆಯಲ್ಲಿ ಇರೋದು ಸುಲಭದ ಮಾತಲ್ಲ. ಆದರೆ, ಆ ಸಾಧನೆಯನ್ನು ಸ್ಪರ್ಧಿಗಳು ಮಾಡುತ್ತಾರೆ. ಹೀಗಾಗಿ, ಅವರನ್ನು ಖುಷಿಪಡಿಸೋ ಸಂಪ್ರದಾಯವನ್ನು ಬಿಗ್ ಬಾಸ್ ಇಟ್ಟುಕೊಂಡು ಬಂದಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅನೇಕರು ವಿವಿಧ ಬೇಡಿಕೆ ಇಟ್ಟಿದ್ದಾರೆ.

‘ಬಿಗ್ ಬಾಸ್ ಮನೆ ಟಿವಿಯಲ್ಲಿ ಒಳ್ಳೆಯ ಸಿನಿಮಾ ನೋಡಬೇಕು. ಬಿಗ್ ಬಾಸ್ ಮನೆ ಒಳಗಿರೋ ಆನೆ ಮೇಲೆ ಕೂರಬೇಕು. ನಲ್ಲಿ ಮೂಳೆ ಇಷ್ಟ. ಅದನ್ನು ತಿಂದು ಮಲಗಬೇಕು. ಆದರೆ, ನಾಯಿ ಕೂಗೋ ಸೌಂಡ್ ಬರಬಾರದು’ ಎಂದು ಬೇಡಿಕೆ ಇಟ್ಟರು ಗಿಲ್ಲಿ. ಇದನ್ನು ಬಿಗ್ ಬಾಸ್ ಈಡೇರಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ‘ಕಿತ್ತೋದ್ ಕೆಲಸ ಮಾಡಿಲ್ಲ, ನನ್ನಿಂದ ಕೆಲವರ ಹೊಟ್ಟೆಪಾಡು ನಡೆಯುತ್ತಿದೆ’; ಸುದೀಪ್

ಈ ಮೊದಲು ಸ್ಪರ್ಧಿಗಳು ಸುದೀಪ್ ಅವರಿಂದ ಅಡುಗೆ ಮಾಡಿಸಿ ತರಿಸಿಕೊಂಡಿದ್ದರು. ಕೆಲ ಸ್ಪರ್ಧಿಗಳು ಸೆಲೆಬ್ರಿಟಿಗಳಿಂದ ವಿಶ್ ಪಡೆದ ಉದಾಹರಣೆಯೂ ಇದೆ. ಗಿಲ್ಲಿ ಈ ರೀತಿಯ ವಿಶ್​​ಗಳನ್ನು ಪಡೆಯಬಹುದು ಎಂಬುದು ಅನೇಕರ ಆಲೋಚನೆ ಆಗಿತ್ತು. ಆದರೆ, ಅಲ್ಲಾಗಿದ್ದೇ ಬೇರೆ. ಅವರು, ವಿಚಿತ್ರ ಬೇಡಿಕೆಯನ್ನು ಇಟ್ಟಿದ್ದಾರೆ ಎಂದರೂ ತಪ್ಪಾಗಲಿಕ್ಕಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​  

Source link

ಸಿಗರೇಟ್ ಕೊಡಲಿಲ್ಲ ಎಂದು ಕುಡಿದ ಮತ್ತಿನಲ್ಲಿ ಅಂಗಡಿ ಮಾಲೀಕರ ಸಂಬಂಧಿಗೆ ಬೆಂಕಿ ಹಚ್ಚಿದ ವ್ಯಕ್ತಿ – Kannada News | A Night of Rage: Andheri Man Set Ablaze After Drunken Attack

ಬೆಂಕಿ-ಸಾಂದರ್ಭಿಕ ಚಿತ್ರImage Credit source: ThoughtCo

ಮುಂಬೈ, ಜನವರಿ 13: ಸಿಗರೇಟ್ ಕೊಡಲಿಲ್ಲ ಎಂದು ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಅಂಗಡಿ ಮಾಲೀಕರ ಸಂಬಂಧಿಗೆ ಬೆಂಕಿ(Fire) ಹಚ್ಚಿದ ಘಟನೆ ಮುಂಬೈನಲ್ಲಿ ನಡೆದಿದೆ. ಈ ಆರೋಪದ ಮೇಲೆ ಜೋಗೇಶ್ವರಿ ನಿವಾಸಿ ನಾಗೇಂದ್ರ ಯಾದವ್ (22) ಎಂಬಾತನನ್ನು ಅಂಬೋಲಿ ಪೊಲೀಸರು ಬಂಧಿಸಿದ್ದಾರೆ. ರಾಜೇಂದ್ರ ಯಾದವ್ (44) ಗಂಭೀರ ಸ್ಥಿತಿಯಲ್ಲಿದ್ದಾರೆ. ಅವರ ದೇಹದ ಶೇ.25ರಷ್ಟು ಭಾಗ ಸುಟ್ಟು ಹೋಗಿದೆ. ಈ ಇಡೀ ಘಟನೆ ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.

ರಾಜೇಂದ್ರ ಜೋಗೇಶ್ವರಿ ಪಶ್ಚಿಮದ ಯಾದವ್ ನಗರದ ಬಂಡಿವ್ಲಿ ಹಿಲ್ ರಸ್ತೆಯಲ್ಲಿರುವ ಫೇಕು ಪೆಹಲ್ವಾನ್ ಚಾಲ್ ನಿವಾಸಿ. ಆರೋಪಿ ನಾಗೇಂದ್ರ ಅದೇ ಪ್ರದೇಶದಲ್ಲಿ ವಾಸಿಸುತ್ತಿದ್ದು, ರಾಜೇಂದ್ರ ಅವರ ಸೋದರಳಿಯ ಪಂಕಜ್ ನಡೆಸುತ್ತಿದ್ದ ಪಾನ್ ಅಂಗಡಿಯಿಂದ ಸಿಗರೇಟ್ ಖರೀದಿಸುತ್ತಿದ್ದ.

ಜನವರಿ 10 ರಂದು ರಾತ್ರಿ 10.30 ರ ಸುಮಾರಿಗೆ ಪಾನ್ ಅಂಗಡಿಗೆ ಭೇಟಿ ನೀಡುವ ಮೊದಲು ನಾಗೇಂದ್ರ ಸ್ನೇಹಿತನೊಂದಿಗೆ ಮದ್ಯ ಸೇವಿಸಿದ್ದ. ಬಾಕಿ ಇರುವ ಹಣ ಕೊಟ್ಟರೆ ಸಿಗರೇಟ್ ಕೊಡುತ್ತೇನೆ ಎಂದಿದ್ದಕ್ಕೆ ನಾಗೇಂದ್ರ ಅಂಗಡಿ ಮಾಲೀಕನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಮೊದಲು ವಾಗ್ವಾದ ನಡೆಯಿತು ಅಷ್ಟರಲ್ಲಿ, ರಾಜೇಂದ್ರ ಮಧ್ಯಪ್ರವೇಶಿಸಿ ನಾಗೇಂದ್ರ ಅವರನ್ನು ತಕ್ಷಣ ಸ್ಥಳದಿಂದ ಹೊರಹೋಗುವಂತೆ ಸೂಚಿಸಿದ್ದರು.

ಸುಮಾರು 20 ನಿಮಿಷಗಳಲ್ಲಿ ಪೆಟ್ರೋಲ್ ಮತ್ತು ಬೆಂಕಿಕಡ್ಡಿಯೊಂದಿಗೆ ಸ್ಥಳಕ್ಕೆ ಹಿಂತಿರುಗಿದ್ದ, ರಾಜೇಂದ್ರನೊಂದಿಗೆ ವಾಗ್ವಾದ ಮಾಡಲು ಪ್ರಾರಂಭಿಸಿದ್ದ,ರಾಜೇಂದ್ರ ಹಿಂದೆ ಸರಿದಾಗ, ಆರೋಪಿ ಅವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಇದರ ನಂತರ, ಆರೋಪಿ ಪರಾರಿಯಾಗಿದ್ದಾನೆ, ಆದರೆ ರಾಜೇಂದ್ರನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಜೋಗೇಶ್ವರಿಯ ಮಲ್ಲಿಕಾ ಆಸ್ಪತ್ರೆಯಲ್ಲಿ ಪಾನ್ ಅಂಗಡಿಯಲ್ಲಿ ಬೆಂಕಿ ಹಚ್ಚಲಾದ ರಾಜೇಂದ್ರ ಯಾದವ್.

ಮತ್ತಷ್ಟು ಓದಿ: 20 ದಿನ ಸಾವು ಬದುಕಿನ ನಡುವೆ ಹೋರಾಡಿದರೂ ಉಳಿಯಲಿಲ್ಲ ಜೀವ! ಚಿಕಿತ್ಸೆ ಫಲಿಸದೆ ಸಾವು

ನಾನು ಈ ಪಾನ್ ಅಂಗಡಿಯನ್ನು ಹಲವು ವರ್ಷಗಳಿಂದ ನಡೆಸುತ್ತಿದ್ದೇನೆ. ನಾಗೇಂದ್ರ ಯಾವಾಗಲೂ ಬರುತ್ತಿದ್ದ. ಬಾಕಿ ಹಣ ಪಾವತಿಸದ ಹೊರತು ನಾನು ಅವನಿಗೆ ಸಿಗರೇಟ್ ನೀಡಲು ನಿರಾಕರಿಸಿದಾಗ ಆತ ಕುಡಿದಿದ್ದ. ನಮ್ಮ ಜಗಳದ ಸಮಯದಲ್ಲಿ ನನ್ನ ಚಿಕ್ಕಪ್ಪ ನನಗೆ ಸಹಾಯ ಮಾಡಲು ಪ್ರಯತ್ನಿಸಿದರು. ಇದರಿಂದಾಗಿ, ನಾಗೇಂದ್ರ ಅವನ ಮೇಲೆ ಸೇಡು ತೀರಿಸಿಕೊಂಡರು ಎಂದು ಪಂಕಜ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

‘ಕಿತ್ತೋದ್ ಕೆಲಸ ಮಾಡಿಲ್ಲ, ನನ್ನಿಂದ ಕೆಲವರ ಹೊಟ್ಟೆಪಾಡು ನಡೆಯುತ್ತಿದೆ’; ಸುದೀಪ್ – Kannada News | Sudeep’s Dhruvanth Bigg Boss Applause: Gilli Fans vs. Kiccha’s Viral Reply

ಯಾವುದೇ ಕೆಲಸ ಮಾಡಿದರೂ ಅದಕ್ಕೆ ಪರ-ವಿರೋಧ ಚರ್ಚೆ ಇದ್ದೇ ಇರುತ್ತದೆ. ಕಿಚ್ಚ ಸುದೀಪ್ (Kichcha Sudeep) ವಿಷಯದಲ್ಲಿ ಅನೇಕ ಬಾರಿ ಹೀಗೆಯೇ ಆಗಿದೆ. ಅವರು ಈ ಸೀಸನ್ ಚಪ್ಪಾಳೆಯನ್ನು ಧ್ರುವಂತ್​​ಗೆ ನೀಡಿದ್ದರು. ಇದನ್ನು ಅನೇಕರು ಟೀಕೆ ಮಾಡಿದ್ದರು. ಆದರೆ, ಈ ಬೆನ್ನಲ್ಲೆ ಸುದೀಪ್ ಅಭಿಮಾನಿಗಳು ಸಿಟ್ಟಿಗೆದ್ದಿದ್ದಾರೆ. ಸುದೀಪ್ ಅವರು 10ನೇ ಸೀಸನ್​ ಅಲ್ಲಿ ಹೇಳಿದ ಮಾತನ್ನು ನೆನಪಿಸಿಕೊಂಡಿದ್ದಾರೆ. ಆ ವಿಡಿಯೋ ವೈರಲ್ ಮಾಡಲಾಗುತ್ತಿದೆ.

ಧ್ರುವಂತ್ ಅವರಿಗೆ ಇಡೀ ಸೀಸನ್​​ನ ಕಿಚ್ಚನ ಚಪ್ಪಾಳೆ ಸಿಕ್ಕಿದ್ದು ಅನೇಕರ ಕೋಪಕ್ಕೆ ಕಾರಣ ಆಗಿದೆ. ‘ಧ್ರುವಂತ್ ಸಾಕಷ್ಟು ಮನರಂಜನೆ ನೀಡಿದ್ದಾರೆ. ಅವರ ವಿಟಿ ವಿಶೇಷವಾಗಿ ಇರುತ್ತದೆ’ ಎಂದು ಸುದೀಪ್ ಬಿಗ್ ಬಾಸ್ ವೇದಿಕೆ ಮೇಲೆ ಹೇಳಿದ್ದರು. ಇದು ಗಿಲ್ಲಿ ಫ್ಯಾನ್ಸ್​​ನ ಕೆರಳಿಸಿದೆ. ‘ಸೀಸನ್ ಆರಂಭದಿಂದಲೂ ಗಿಲ್ಲಿ ಮನರಂಜನೆ ನೀಡುತ್ತಾ ಬಂದವರು. ಧ್ರುವಂತ್​ಗೆ ಹೋಲಿಸಿದರೆ ಗಿಲ್ಲಿ ತುಂಬಾನೇ ಬೆಟರ್’ ಎಂದು ಗಿಲ್ಲಿ ಫ್ಯಾನ್ಸ್ ವಾದ ಮುಂದಿಡುತ್ತಿದ್ದಾರೆ. ಸುದೀಪ್ ಅವರನ್ನು ಟೀಕಿಸುವ ಕೆಲಸ ಕೂಡ ಆಗಿದೆ. ಈ ವಿಷಯದಲ್ಲಿ ಸುದೀಪ್ ಅಭಿಮಾನಿಗಳು ಸುಮ್ಮನೆ ಕೂತಿಲ್ಲ. ಹಳೆಯ ವಿಡಿಯೋನ ವೈರಲ್ ಮಾಡುತ್ತಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 10’ರ ಸಂದರ್ಭದಲ್ಲಿ ಸುದೀಪ್ ಅವರನ್ನು ಸೋಶಿಯಲ್ ಮೀಡಿಯದಲ್ಲಿ ಟೀಕಿಸಲಾಯಿತು. ಈ ಟೀಕೆಯ ಸಂದರ್ಭದಲ್ಲಿ ಸುದೀಪ್ ಒಂದು ಮಾತನ್ನು ಹೇಳಿದ್ದರು. ‘ನನಗಾಗೇ ದುಡ್ಡು ಕೊಟ್ಟು ಸೃಷ್ಟಿಸಿದ ಟ್ರೋಲ್ ಪೇಜ್​​ಗಳಿವೆ. ನಾನು ಗುಡ್ ಮಾರ್ನಿಂಗ್ ಎಂದರೆ ನಿನ್ನ ಗುಡ್ ಮಾರ್ನಿಂಗ್ ಯಾರಿಗೆ ಬೇಕು ಎನ್ನುತ್ತಾರೆ. ಅವರು ನನ್ನ ಬಗ್ಗೆ ಮಾತನಾಡುತ್ತಾರೆ. ನಾನು ಮಜಾ ತೆಗೆದಿಕೊಳ್ಳುತ್ತೇನೆ. ಕಿತ್ತೋದ್ ಕೆಲಸ ನಾನಂತೂ ಮಾಡಿಲ್ಲ. ಅವರ ಟ್ರೋಲ್ ಬಗ್ಗೆ ನಂಗೆ ಬೇಸರ ಇಲ್ಲ. ಏಕೆಂದರೆ ನನ್ನಿಂದ ಅವರ ಹೊಟ್ಟೆ ಪಾಡು ನಡೆಯುತ್ತಿದೆ’ ಎಂದು ಕಿಚ್ಚ ಹೇಳಿದ್ದರು.

ಇದನ್ನೂ ಓದಿ: ಕಿಚ್ಚ ಸುದೀಪ್ ಮಾತಿಗೂ ಬೆಲೆ ಕೊಡದ ಗಿಲ್ಲಿ; ಅಸಮಾಧಾನ ಹೊರಹಾಕಿದ ಬಿಗ್ ಬಾಸ್

ಕಿಚ್ಚ ಸುದೀಪ್ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪರ-ವಿರೋಧ ಚರ್ಚೆ ನಡೆದಿದೆ. ಕೆಲವೊಮ್ಮೆ ಸೋಶಿಯಲ್ ಮೀಡಿಯಾದಲ್ಲಿ ಆಗುವ ಚರ್ಚೆ ಬಗ್ಗೆ ಸುದೀಪ್ ಅವರು ಮಾತನಾಡಿದ್ದು ಇದೆ. ಈ ವಾರ ಆ ಬಗ್ಗೆ ಮಾತನಾಡುತ್ತಾರಾ ಎಂಬ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 10:23 am, Tue, 13 January 26

Source link