ಧಗಧಗಿಸಿದ ಮಲೆ ಮಹದೇಶ್ವರ ಬೆಟ್ಟಡ ಒಡಲು: 100 ಎಕರೆ ವನಸಂಪತ್ತು ನಾಶ – Kannada News | Chamarajanagar Wildfire: Over 100 Acres Burnt in Male Mahadeshwara Sanctuary
ಚಾಮರಾಜನಗರ, ಏಪ್ರಿಲ್ 19: ಮಲೆ ಮಹದೇಶ್ವರ ವನ್ಯಜೀವಿಧಾಮದ ಒಡಲಿಗೆ ಬೆಂಕಿ ಬಿದ್ದಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಸುಮಾರು 100 ಎಕರೆಗೂ ಅಧಿಕ ವಿಸ್ತೀರ್ಣದ ಅಮೂಲ್ಯ ವನಸಂಪತ್ತು ಬೆಂಕಿಗಾಹುತಿಯಾಗಿದೆ. ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡೆಬೋಳಿ ಬೆಟ್ಟದಲ್ಲಿ ಈ ದುರ್ಘಟನೆ ಸಂಭವಿಸಿದೆ. ಗಿಡಮೂಲಿಕೆಗಳ ಕಾಶಿಯಂತಿದ್ದ ಕಡೆಬೋಳಿ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ವನ್ಯ ಸಂಪತ್ತು ಮತ್ತು ಅಪರೂಪದ ಗಿಡಮೂಲಿಕೆಗಳು ಸುಟ್ಟು ಕರಕಲಾಗಿವೆ. ಬೇಸಿಗೆ ಆರಂಭಕ್ಕೂ ಮುನ್ನವೇ ಫೈರ್ ಲೇನ್ (ಬೆಂಕಿ ರೇಖೆ) ನಿರ್ಮಾಣ ಮಾಡಲಾಗಿದೆ…