Category Archives: Blog

Your blog category

ಸಿಎಂ ಭಗವಂತ್ ಮಾನ್ ಗುರು ದ್ರೋಹಿ ಎಂದು ಘೋಷಿಸಿದ ಅಕಲ್ ತಖ್ತ್; ಚುನಾವಣೆಗೂ ಮೊದಲೇ ಆಪ್​ಗೆ ಹಿನ್ನಡೆ – Kannada News | Akal Takht declares Punjab CM Bhagwant Mann anti Guru Ahead Of Punjab Elections

ಅಮೃತಸರ, ಜೂನ್ 15: ಪಂಜಾಬ್ ರಾಜಕಾರಣದಲ್ಲಿ ಭಾರಿ ರಾಜಕೀಯ ಬಿರುಗಾಳಿ ಎದ್ದಿದೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ (Bhagwant Mann) ಅವರನ್ನು ಸಿಖ್ ಧರ್ಮದ ಅತ್ಯುನ್ನತ ಧಾರ್ಮಿಕ ಪೀಠವಾದ ‘ಅಕಲ್ ತಖ್ತ್’ ಅಧಿಕೃತವಾಗಿ ಗುರು ದ್ರೋಹಿ ಎಂದು ಘೋಷಿಸಿದೆ. ಸಿಖ್ ಧರ್ಮದ ಸರ್ವೋಚ್ಚ ಸಂಸ್ಥೆಯ ಈ ಧಾರ್ಮಿಕ ಆದೇಶವು ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯ ಸಿದ್ಧತೆಯಲ್ಲಿರುವ ಆಮ್ ಆದ್ಮಿ ಪಕ್ಷಕ್ಕೆ (AAP) ದೊಡ್ಡ ಆಘಾತವನ್ನು ನೀಡಿದೆ.

ಅಕಲ್ ತಖ್ತ್‌ನ ಜತ್ಹೇದಾರ್ ನೇತೃತ್ವದಲ್ಲಿ ನಡೆದ 5 ಮಂದಿ ಸಿಖ್ ಧರ್ಮಗುರುಗಳ ಉನ್ನತ ಮಟ್ಟದ ಸಭೆಯಲ್ಲಿ ಈ ಕಠಿಣ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸಿಖ್ ಧರ್ಮದಲ್ಲಿ ‘ಅಕಲ್ ತಖ್ತ್’ ನೀಡುವ ಆದೇಶಗಳನ್ನು ಅತ್ಯಂತ ಪವಿತ್ರ ಮತ್ತು ಕಡ್ಡಾಯವಾಗಿ ಪಾಲಿಸಬೇಕಾದ ನಿಯಮಗಳೆಂದು ಪರಿಗಣಿಸಲಾಗುತ್ತದೆ. ಧಾರ್ಮಿಕ ನಿಯಮಗಳ ಉಲ್ಲಂಘನೆ, ಸಿಖ್ ಧರ್ಮದ ಗೌರವಕ್ಕೆ ಚ್ಯುತಿ ತರುವುದು ಅಥವಾ ಧಾರ್ಮಿಕ ಸಂಸ್ಥೆಗಳ ಆದೇಶಗಳನ್ನು ನಿರ್ಲಕ್ಷಿಸುವ ವ್ಯಕ್ತಿಗಳ ವಿರುದ್ಧ ಇಂತಹ ಕಠಿಣ ಕ್ರಮ ಜರುಗಿಸಲಾಗುತ್ತದೆ.

ಪಂಜಾಬ್ ಸಿಎಂ ಭಗವಂತ್ ಮಾನ್ ಅವರು ಧಾರ್ಮಿಕ ಸಭೆಗಳು ಮತ್ತು ಗುರುದ್ವಾರಗಳ ಆವರಣದಲ್ಲಿ ಸಿಖ್ ಮರ್ಯಾದೆ ಹಾಗೂ ಸಂಪ್ರದಾಯಗಳನ್ನು ಗಾಳಿಗೆ ತೂರಿದ್ದಾರೆ ಎಂದು ಹಲವು ಸಿಖ್ ಸಂಘಟನೆಗಳು ಅಕಲ್ ತಖ್ತ್‌ಗೆ ದೂರು ನೀಡಿದ್ದವು. ಈ ಹಿಂದೆ ತಮ್ಮ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ ಅಕಲ್ ತಖ್ತ್ ಮುಂದೆ ಖುದ್ದಾಗಿ ಹಾಜರಾಗಿ ಸ್ಪಷ್ಟನೆ ನೀಡುವಂತೆ ಭಗವಂತ್ ಮಾನ್ ಅವರಿಗೆ ಆದೇಶಿಸಲಾಗಿತ್ತು. ಆದರೆ, ಮುಖ್ಯಮಂತ್ರಿ ಭಗವಂತ್ ಮಾನ್ ಈ ಧಾರ್ಮಿಕ ಸಮನ್ಸ್‌ಗಳನ್ನು ನಿರ್ಲಕ್ಷಿಸಿ ಸಭೆಗಳಿಗೆ ಗೈರಾಗಿದ್ದರು. ಇದು ಸಿಖ್ ಧರ್ಮದ ಸರ್ವೋಚ್ಚ ಪೀಠಕ್ಕೆ ಮಾಡಿದ ಅವಮಾನ ಎಂದು ಧರ್ಮಗುರುಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಅನಾರೋಗ್ಯದಿಂದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆಸ್ಪತ್ರೆಗೆ ದಾಖಲು

ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಸಿಖ್ ಸಮುದಾಯದವರು ಭಗವಂತ್ ಮಾನ್ ಅವರೊಂದಿಗೆ ಯಾವುದೇ ಧಾರ್ಮಿಕ ಸಹಕಾರ ಅಥವಾ ನಂಟು ಹೊಂದಬಾರದು ಎಂಬ ಅರ್ಥದಲ್ಲಿ ಅವರನ್ನು ‘ಗುರು ದ್ರೋಹಿ’ ಎಂದು ಘೋಷಿಸಲಾಗಿದೆ. ಪಂಜಾಬ್‌ನಲ್ಲಿ ಸಿಖ್ ಮತದಾರರ ಸಂಖ್ಯೆ ಹೆಚ್ಚಾಗಿದ್ದು, ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿ (SGPC) ಮತ್ತು ಅಕಲ್ ತಖ್ತ್‌ನ ನಿರ್ಧಾರಗಳು ಚುನಾವಣಾ ರಾಜಕಾರಣದಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ. ಹೀಗಾಗಿ, ಈ ನಿರ್ಧಾರದಿಂದ ಚುನಾವಣೆಗೂ ಮುನ್ನವೇ ಆಮ್ ಆದ್ಮಿ ಪಕ್ಷಕ್ಕೆ ಹಿನ್ನಡೆಯಾದಂತಾಗಿದೆ.

ಇದನ್ನೂ ಓದಿ: ಪಂಜಾಬ್​ನ ಅವಳಿ ಸ್ಫೋಟದ ಹಿಂದೆ ಬಿಜೆಪಿ ಕೈವಾಡ; ಸಿಎಂ ಭಗವಂತ್ ಮಾನ್ ಆರೋಪ

ಪಂಜಾಬ್‌ನಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಕಸರತ್ತು ನಡೆಸುತ್ತಿರುವ ಆಮ್ ಆದ್ಮಿ ಪಕ್ಷಕ್ಕೆ ಮುಖ್ಯಮಂತ್ರಿಯವರ ಮೇಲಿನ ಈ ಧಾರ್ಮಿಕ ನಿಷೇಧ ಅಥವಾ ನಕಾರಾತ್ಮಕ ಘೋಷಣೆ ದೊಡ್ಡ ಹಿನ್ನಡೆಯಾಗಿದೆ. ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಶಿರೋಮಣಿ ಅಕಾಲಿದಳ (SAD) ಇದನ್ನು ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳಲು ಆರಂಭಿಸಿವೆ. ಸಿಎಂ ಭಗವಂತ್ ಮಾನ್ ಅವರಿಗೆ ಪಂಜಾಬ್‌ನ ಸಂಸ್ಕೃತಿ ಮತ್ತು ಸಿಖ್ ಧರ್ಮದ ಮೇಲೆ ಗೌರವವಿಲ್ಲ ಎಂಬುದು ಇದರಿಂದ ಸಾಬೀತಾಗಿದೆ ಎಂದು ವಿರೋಧ ಪಕ್ಷಗಳು ವಾಗ್ದಾಳಿ ನಡೆಸುತ್ತಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರೌಡಿ ನಿಗ್ರಹ ಪಡೆ ಮಧ್ಯೆಯೂ 66 ರೌಡಿಗಳಿಗೆ ಮುಕ್ತಿ: ಪೊಲೀಸ್ ಇಲಾಖೆ ಮಾಡಿದ ಎಡವಟ್ಟು ಏನು? – Kannada News | Police Negligence Leads to Release of 66 Rowdy Sheeters; High Court Guidelines Allegedly Violated

ರಾಜ್ಯ ಪೊಲೀಸ್​​ ದೂರುಗಳ ಪ್ರಾಧಿಕಾರImage Credit source: tv9 kannada

ಬೆಂಗಳೂರು, ಜೂನ್​​ 15: ಡಿಕೆ ಶಿವಕುಮಾರ್ (DK Shivakumar) ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಕೂಡಲೇ ಇತ್ತೀಚೆಗೆ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ಮಾಡುವ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದರು. ರೌಡಿಗಳನ್ನ ಮಟ್ಟಹಾಕಲು ಪ್ರತಿ ಠಾಣೆ ವ್ಯಾಪ್ತಿಯಲ್ಲೂ ಆ್ಯಂಟಿ ರೌಡಿ ಸ್ಕ್ವಾಡ್ ರಚನೆಗೆ ಸೂಚಿಸಿದ್ದರು. ಆದರೆ ಇದೀಗ ಪೊಲೀಸ್ ಇಲಾಖೆ ಎಡವಟ್ಟಿನಿಂದ ರೌಡಿಪಟ್ಟಿಯಿಂದ (Rowdy Sheeters) 66 ನಟೋರಿಯಸ್​​ ರೌಡಿ​ಗಳಿಗೆ ಮುಕ್ತಿ ನೀಡಲಾಗಿದೆ.

ಮುಖ್ಯಾಂಶಗಳು

  • ಪೊಲೀಸ್ ಇಲಾಖೆ ಎಡವಟ್ಟಿನಿಂದ ರೌಡಿಪಟ್ಟಿಯಿಂದ 66 ನಟೋರಿಯಸ್​​ ರೌಡಿ​ಗಳಿಗೆ ಮುಕ್ತಿ
  • ಮಾರ್ಗಸೂಚಿ ಪಾಲನೆಯಲ್ಲಿ ಎಡವಿದ ಪೊಲೀಸ್ ಇಲಾಖೆ
  • 100ಕ್ಕೂ ಅಧಿಕ ಬಾರಿ ಮನವಿ ಸಲ್ಲಿಸಿದ್ದ ಸೈಲೆಂಟ್ ಸುನಿಲ್

ಪೊಲೀಸ್ ಇಲಾಖೆಯ ನಿರ್ಲಕ್ಷ್ಯದ ಹಿನ್ನೆಲೆಯಲ್ಲಿ ಸೈಲೆಂಟ್ ಸುನಿಲ್, ಒಂಟೆ ರೋಹಿತ್ ಸೇರಿದಂತೆ ಬರೋಬ್ಬರಿ 66 ರೌಡಿಗಳನ್ನು ರೌಡಿಪಟ್ಟಿಯಿಂದ ಕೈಬಿಡುವಂತೆ ಪೊಲೀಸ್ ದೂರು ಪ್ರಾಧಿಕಾರ ಆದೇಶಿಸಿದೆ. ಹೈಕೋರ್ಟ್ ನೀಡಿದ್ದ ಸ್ಪಷ್ಟ ಮಾರ್ಗಸೂಚಿಗಳನ್ನು ಪಾಲಿಸುವಲ್ಲಿ ಪೊಲೀಸರು ಎಡವಿರುವುದೇ ರೌಡಿಗಳ ಪಾಲಿಗೆ ವರದಾನವಾಗಿ ಪರಿಣಮಿಸಿದೆ.

ಇದನ್ನೂ ಓದಿ: ಸಿಎಂ ಡಿಕೆಶಿ ಸೂಚನೆ ಬೆನ್ನಲ್ಲೇ ರೌಡಿಗಳ ವಿರುದ್ಧ ಸಮರ ಸಾರಿದ ಪೊಲೀಸ್ರು, ವಿಚಾರಣೆಗೆ ಬರದೇ ಆಟವಾಡ್ತಿದ್ದ ರೌಡಿ ಅರೆಸ್ಟ್​

ರೌಡಿಶೀಟರ್ ಪಟ್ಟಿಯಿಂದ ತಮ್ಮ ಹೆಸರನ್ನು ತೆಗೆಯುವಂತೆ ನಟೋರಿಯಸ್ ರೌಡಿ ಸೈಲೆಂಟ್ ಸುನಿಲ್ ಅಲಿಯಾಸ್ ಸುನಿಲ್ ಕುಮಾರ್ ಪೊಲೀಸ್ ಪ್ರಾಧಿಕಾರಕ್ಕೆ 100ಕ್ಕೂ ಅಧಿಕ ಬಾರಿ ಮನವಿ ಸಲ್ಲಿಸಿದ್ದ. ಮೇ 19ರಂದು ನಡೆದ ಪೊಲೀಸ್ ಪ್ರಾಧಿಕಾರದ ಮಹತ್ವದ ಸಭೆಯಲ್ಲಿ, ಸೈಲೆಂಟ್ ಸುನಿಲ್ ಹೆಸರನ್ನು ಅಮೃತಹಳ್ಳಿ ಠಾಣೆಯ ರೌಡಿಪಟ್ಟಿಯಿಂದ ಹಾಗೂ ರೋಹಿತ್ ಅಲಿಯಾಸ್ ಒಂಟೆ ರೋಹಿತ್ ಸೇರಿದಂತೆ ಒಟ್ಟು 66 ಜನರನ್ನು ರೌಡಿಪಟ್ಟಿಯಿಂದ ಮುಕ್ತಗೊಳಿಸಲು ಆದೇಶ ಹೊರಡಿಸಲಾಗಿದೆ. ಇದಕ್ಕೆ ಮುಖ್ಯ ಕಾರಣ, ಪೊಲೀಸರು ರೌಡಿಶೀಟ್ ಮುಂದುವರಿಸಲು ಸೂಕ್ತ ದಾಖಲೆಗಳನ್ನು ಒದಗಿಸದಿರುವುದು ಮತ್ತು ಹೈಕೋರ್ಟ್ ನಿಯಮಗಳನ್ನು ಗಾಳಿಗೆ ತೂರಿರುವುದು.

ಕಳೆದ 2022ರಲ್ಲಿ ಹೈಕೋರ್ಟ್ ಯಾವುದೇ ವ್ಯಕ್ತಿಯ ವಿರುದ್ಧ ರೌಡಿಪಟ್ಟಿ ತೆರೆಯುವ ಮತ್ತು ಅದನ್ನು ಮುಕ್ತಾಯಗೊಳಿಸುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಆದರೆ, ಈ ಮಾರ್ಗಸೂಚಿಗಳನ್ನು ಪಾಲಿಸುವಲ್ಲಿ ಇಲಾಖೆ ಸಂಪೂರ್ಣವಾಗಿ ಎಡವಿದೆ. ಇದೇ ಕಾರಣಕ್ಕೆ 66 ರೌಡಿಗಳನ್ನ ರೌಡಿ ಪಟ್ಟಿಯಿಂದ ಕೈ ಬಿಡಲು ಪೊಲೀಸ್ ಪ್ರಾಧಿಕಾರದಿಂದ ಆದೇಶಿಸಲಾಗಿದೆ.

ಹೈಕೋರ್ಟ್ ಮಾರ್ಗಸೂಚಿಗಳೇನು?

  • ಯಾವುದೇ ವ್ಯಕ್ತಿಯ ವಿರುದ್ಧ ಆಯಾ ವ್ಯಾಪ್ತಿಯ ಠಾಣೆಯಲ್ಲಿ ರೌಡಿಶೀಟ್‌ ತೆರೆಯುವ ಮುನ್ನ ಸಂಬಂಧಿತ ವ್ಯಕ್ತಿಯ ಅಪರಾಧ ಚಟುವಟಿಕೆಗಳ ಬಗ್ಗೆ ಸೂಕ್ತ ಮಾಹಿತಿ ಸಂಗ್ರಹಿಸಬೇಕು. ಬಳಿಕ ರೌಡಿಪಟ್ಟಿ ತೆರೆಯುವ ಪ್ರಕ್ರಿಯೆ ಆರಂಭಿಸಬೇಕು.
  • ರೌಡಿಶೀಟ್‌ ತೆಗೆಯುತ್ತಿರುವ ವ್ಯಕ್ತಿಗೆ ಈ ಕುರಿತು ಮುಚ್ಚಿದ ಲಕೋಟೆಯಲ್ಲಿ ಮಾಹಿತಿ ನೀಡಬೇಕು. ಈ ಕುರಿತು ಆಕ್ಷೇಪಣೆಗಳಿದ್ದರೆ ಎರಡು ವಾರಗಳಲ್ಲಿ ಸಲ್ಲಿಸುವಂತೆ ಸೂಚಿಸಬೇಕು. ಇದರಲ್ಲಿ ಖುದ್ದು ವ್ಯಕ್ತಿಯ ವಿಚಾರಣೆಯ ಅಗತ್ಯವಿರುವುದಿಲ್ಲ. ಅಪರೂಪದ ಪ್ರಕರಣಗಳಲ್ಲಿ ಮಾತ್ರ ಮುಂಚಿತವಾಗಿ ನೋಟಿಸ್‌ ನೀಡುವ ಪ್ರಕ್ರಿಯೆ ಕೈ ಬಿಡಬಹುದು. ಆದರೆ, ಏಕೆ ನೋಟಿಸ್‌ ನೀಡಿಲ್ಲ ಎಂಬುದರ ಬಗ್ಗೆ ರೌಡಿ ರಿಜಿಸ್ಟರ್‌ನಲ್ಲಿ ಕಡ್ಡಾಯವಾಗಿ ನಮೂದಿಸಿರಬೇಕು.
  • ಪೊಲೀಸ್‌ ಅಧೀಕ್ಷಕರು (ಎಸ್ಪಿ), ಉಪವಿಭಾಗದ ಅಧಿಕಾರಿಗಳು ರೌಡಿಶೀಟ್‌ಗೆ ಯಾವುದೇ ವ್ಯಕ್ತಿಯ ಹೆಸರನ್ನು ರೌಡಿಪಟ್ಟಿಗೆ ಸೇರಿಸಲು ಅನುಮೋದನೆ ನೀಡುವ ಮುನ್ನ ದಾಖಲೆಗಳನ್ನು ವಸ್ತುನಿಷ್ಠವಾಗಿ ಪರಿಶೀಲಿಸುವುದು ಕಡ್ಡಾಯ. ಜತೆಗೆ, ಅನುಮೋದನೆಯ ಸ್ಪಷ್ಟ ಕಾರಣ ದಾಖಲಿಸಬೇಕು. ಜತೆಗೆ, ಸಂಬಂಧಪಟ್ಟ ವ್ಯಕ್ತಿಗೆ ಆದೇಶದ ಪ್ರತಿ ನೀಡಬೇಕು. ಈ ಪ್ರತಿಯಲ್ಲಿ ಆದೇಶದ ವಿರುದ್ಧ ಪೊಲೀಸ್‌ ದೂರು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಬಹುದು ಎಂಬ ಉಲ್ಲೇಖ ಮಾಡಿರಬೇಕು.

ರೌಡಿ ಪಟ್ಟಿಯಿಂದ ತೆಗೆಯುವ ಪ್ರಕ್ರಿಯೆ 

  •  ಸಂಬಂಧಪಟ್ಟ ವ್ಯಾಪ್ತಿಯ ಪೊಲೀಸರು ಠಾಣೆಯ ರೌಡಿಪಟ್ಟಿಯನ್ನು 2 ವರ್ಷಕ್ಕೊಮ್ಮೆ ನಿಯಮಿತವಾಗಿ ಪರಿಶೀಲನೆ ಮಾಡಬೇಕು.
  • ಯಾವುದೇ ಭಾದಿತ ವ್ಯಕ್ತಿಯು ರೌಡಿಪಟ್ಟಿಯಲ್ಲಿ ಹೆಸರು ಸೇರ್ಪಡೆಯಾದ ಒಂದು ವರ್ಷದ ಬಳಿಕ ಅಸಮಾಧಾನವಿದ್ದರೆ, ಪಟ್ಟಿಯಿಂದ ತೆಗೆಯುವಂತೆ ಪೊಲೀಸರಿಗೆ ಮನವಿ ಸಲ್ಲಿಸಬಹುದು.
  • ಈ ಮನವಿಯನ್ನು ಪರಿಶೀಲಿಸುವ ಪೊಲೀಸರು ಸನ್ನಡತೆ, ಸಾಮಾಜಿಕ ಸೇವೆ, ಇತರ ಕಾರಣಗಳಿಂದ ರೌಡಿಪಟ್ಟಿಯಿಂದ ತೆಗೆಯಬಹುದು.
  • ಯಾವುದೇ ವ್ಯಕ್ತಿ ತನ್ನ ಹೆಸರನ್ನು ರೌಡಿ ಪಟ್ಟಿಯಿಂದ ತೆಗೆಯಲು ಸಂಬಂಧಪಟ್ಟ ಪೊಲೀಸರಿಗೆ ಮನವಿ ಸಲ್ಲಿಸಿದ 60 ದಿನಗಳ ಒಳಗಡೆ ಅಂತಿಮ ನಿರ್ಧಾರ ಕೈಗೊಳ್ಳಬೇಕು.
  • ಒಂದು ವೇಳೆ ಪೊಲೀಸರು ರೌಡಿಶೀಟ್‌ನಿಂದ ಹೆಸರು ತೆಗೆಯಲು ತಿರಸ್ಕರಿಸಿ ಮುಂದುವರಿಸಿದರೆ ಇದರ ವಿರುದ್ಧ ಬಾಧಿತ ವ್ಯಕ್ತಿಯು 30 ದಿನಗಳ ಒಳಗೆ ಪೊಲೀಸ್‌ ದೂರುಗಳ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಬಹುದು. ಮೇಲ್ಮನವಿಯನ್ನು ಪ್ರಾಧಿಕಾರವು ಬಾಧಿತ ವ್ಯಕ್ತಿಯ ಸಂಬಂಧ ಇರುವ ದಾಖಲೆಗಳು ಹಾಗೂ ಪೊಲೀಸರ ದಾಖಲೆಗಳನ್ನು ಪರಿಶೀಲಿಸಿ 60 ದಿನಗಳ ಒಳಗಡೆ ಮೇಲ್ಮನವಿ ಇತ್ಯರ್ಥಪಡಿಸಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸುಶಾಂತ್ ಸಿಂಗ್ ರಜಪೂತ್ ಕೇಸ್ ಆಧಾರಿತ ‘ಸಾರಿ ಬಾಬು’ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ – Kannada News | Sushant Singh Rajput case Film Sorry Babu First Look poster released Sujeet Singh Rathore

ಬಾಲಿವುಡ್ ಅಂಗಳದಿಂದ ಅತ್ಯಂತ ಇಂಟರೆಸ್ಟಿಂಗ್ ಸುದ್ದಿಯೊಂದು ಹೊರಬಿದ್ದಿದೆ. ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ (Sushant Singh Rajput) ಅವರ ನಿಗೂಢ ಸಾವು ಮತ್ತು ಅದರ ಸುತ್ತ ಮುಸುಕಿದ್ದ ವಿವಾದಗಳನ್ನಾಧರಿಸಿ ಈಗ ಕಮರ್ಷಿಯಲ್ ಸಿನಿಮಾವೊಂದು ತಯಾರಾಗುತ್ತಿದೆ. ಇಡೀ ದೇಶದ ಗಮನ ಸೆಳೆದಿದ್ದ ಆ ಒಂದು ನಿರ್ದಿಷ್ಟ ಪದವನ್ನೇ ಈ ಚಿತ್ರಕ್ಕೆ ಶೀರ್ಷಿಕೆಯಾಗಿ ಇಡಲಾಗಿದೆ. ಹೌದು, ಈ ಸಿನಿಮಾಗೆ ‘ಸಾರಿ ಬಾಬು’ (Sorry Babu) ಎಂದು ಹೆಸರಿಡಲಾಗಿದೆ. ಚಿತ್ರತಂಡವು ಈ ಸಿನಿಮಾದ ಮೊದಲ ಅಧಿಕೃತ ಪೋಸ್ಟರ್ ಬಿಡುಗಡೆ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಇದು ಸಖತ್ ವೈರಲ್ ಆಗುತ್ತಿದೆ.

ಸುಶಾಂತ್ ಸಿಂಗ್ ರಜಪೂತ್ ನಿಧನದ ನಂತರ ಕೂಪರ್ ಆಸ್ಪತ್ರೆಯಲ್ಲಿ ನಡೆದ ಒಂದು ಘಟನೆಯನ್ನು ಈ ಸಿನಿಮಾ ಆಧರಿಸಿದೆ. ಸುಶಾಂತ್ ಸಾವಿನ ಬಳಿಕ ನಟಿ ರಿಯಾ ಚಕ್ರವರ್ತಿ ಮತ್ತು ಕರ್ನಿ ಸೇನೆಯ ಮುಖಂಡ ಸುಜೀತ್ ಸಿಂಗ್ ರಾಥೋಡ್ ಕೂಪರ್ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ ಪಾರ್ಥಿವ ಶರೀರದ ಕೊನೆಯ ದರ್ಶನ ಪಡೆದಿದ್ದರು. ಆ ಸಮಯದಲ್ಲಿ ಸುಶಾಂತ್ ಅವರ ದೇಹವನ್ನು ನೋಡಿ ರಿಯಾ ಚಕ್ರವರ್ತಿ ಬಾಯಿಂದ ಬಂದ ಕೊನೆಯ ಮಾತು ‘ಸಾರಿ ಬಾಬು’ ಆಗಿತ್ತು ಎಂದು ಹೇಳಲಾಗುತ್ತದೆ.

ಈಗ ಅದೇ ಸೂಕ್ಷ್ಮ ಪ್ರಕರಣದ ಹಲವು ಆಯಾಮಗಳನ್ನು ಬೆಳ್ಳಿಪರದೆಯ ಮೇಲೆ ತರಲು ಸಿದ್ಧತೆಗಳು ನಡೆದಿವೆ. ಈ ಇಡೀ ಘಟನೆಗೆ ಕಣ್ಣಾರೆ ಸಾಕ್ಷಿಯಾಗಿದ್ದ ಸುಜೀತ್ ಸಿಂಗ್ ರಾಥೋಡ್ ಅವರೇ ಈ ಚಿತ್ರದಲ್ಲಿ ನಾಯಕ ನಟನಾಗಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಖ್ಯಾತ ನಿರ್ದೇಶಕ ದೀಪಕ್ ಭಾಗವತ್ ಈ ಚಿತ್ರದ ಸಾರಥ್ಯ ವಹಿಸಿದ್ದು, ಕಥೆಯನ್ನು ಯಾವುದೇ ಫಿಲ್ಟರ್ ಇಲ್ಲದೆ ಹೊಸ ದೃಷ್ಟಿಕೋನದಲ್ಲಿ ಪ್ರೇಕ್ಷಕರ ಮುಂದೆ ಇಡಲಿದ್ದಾರೆ ಎನ್ನಲಾಗಿದೆ.

ಈಗ ಬಿಡುಗಡೆಯಾಗಿರುವ ಫಸ್ಟ್ ಲುಕ್ ಪೋಸ್ಟರ್ ಸುಶಾಂತ್ ಅಭಿಮಾನಿಗಳಲ್ಲಿ ಮತ್ತು ಸಿನಿಪ್ರೇಮಿಗಳಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ಪೋಸ್ಟರ್ ವಿನ್ಯಾಸ ಮತ್ತು ಚಿತ್ರದ ಶೀರ್ಷಿಕೆಯನ್ನು ಗಮನಿಸಿದರೆ, ಇದು ಕೂಪರ್ ಆಸ್ಪತ್ರೆಯೊಳಗೆ ನಡೆದ ರಹಸ್ಯಗಳು ಮತ್ತು ಸುಶಾಂತ್ ಕೇಸ್‌ನ ಬಗ್ಗೆ ಇದುವರೆಗೆ ಜಗತ್ತಿಗೆ ತಿಳಿಯದ ವಿವರಗಳನ್ನು ಅನಾವರಣಗೊಳಿಸಲಿದೆ ಎಂಬ ಮುನ್ಸೂಚನೆ ಸಿಗುತ್ತಿದೆ.

ಇದನ್ನೂ ಓದಿ: ನಿಧನರಾಗಿ ಆರೇ ವರ್ಷಕ್ಕೆ ಸುಶಾಂತ್ ಸಿಂಗ್ ರಜಪೂತ್ ಯಾರಿಗೂ ನೆನಪಿಲ್ಲ; ಪುಣ್ಯತಿಥಿಗೆ ಬಾಲಿವುಡ್ ಮೌನ

ಗಮನಿಸಬೇಕಾದ ಅಂಶ ಏನೆಂದರೆ, ಅಂದು ಕೂಪರ್ ಆಸ್ಪತ್ರೆಯಲ್ಲಿ ಸ್ವತಃ ಹಾಜರಿದ್ದ ಸುಜೀತ್ ಸಿಂಗ್ ರಾಥೋಡ್ ಅವರೇ ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವುದರಿಂದ ಸಿನಿಮಾ ಮತ್ತಷ್ಟು ನೈಜ ಹಾಗೂ ಆಸಕ್ತಿದಾಯಕವಾಗಿರಲಿದೆ ಎನ್ನಲಾಗುತ್ತಿದೆ. ನಿರ್ದೇಶಕ ದೀಪಕ್ ಭಾಗವತ್ ಈ ಸೂಕ್ಷ್ಮ ವಿಷಯವನ್ನು ಪರದೆಯ ಮೇಲೆ ಹೇಗೆ ಪ್ರಸ್ತುತಪಡಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹಳೆಯ ಬೆಳ್ಳಿ ಆಭರಣಗಳು ಫಳ ಫಳ ಹೊಳಿಬೇಕು ಅಂದ್ರೆ, ಈ ಕ್ಲೀನಿಂಗ್‌ ಟಿಪ್ಸ್‌ ಪಾಲಿಸಿ – Kannada News | Follow these simple tips to clean silver jewelry

ಚಿನ್ನದಂತೆ ಬೆಳ್ಳಿ ಆಭರಣಗಳನ್ನು (silver jewelry) ಸಹ ಬಹುತೇಕ ಹೆಚ್ಚಿನವರು ಇಷ್ಟಪಟ್ಟು ಧರಿಸುತ್ತಾರೆ. ಹೆಚ್ಚಿನ ಮಹಿಳೆಯರು ಬೆಳ್ಳಿ ಕಾಲುಂಗುರ, ಉಂಗುರ, ಕಾಲ್ಗೆಜ್ಜೆಯನ್ನೇ ಧರಿಸುತ್ತಾರೆ. ಆದರೆ ಈ ಬೆಳ್ಳಿ ಆಭರಣಗಳು ಬಹುಬೇಗನೇ ಹೊಳಪನ್ನು ಕಳೆದುಕೊಂಡು ಕಪ್ಪಾಗಿ ಕಾಣಿಸುತ್ತದೆ. ಗಾಳಿ, ತೇವಾಂಶ ಮತ್ತು ಧೂಳಿಗೆ  ಒಡ್ಡಿಕೊಳ್ಳುವುದರಿಂದ ಬೆಳ್ಳಿ ವಸ್ತುಗಳು ಹೊಳಪನ್ನು ಕಳೆದುಕೊಳ್ಳುತ್ತವೆ. ಇಂತಹ ಸಂದರ್ಭದಲ್ಲಿ ಹೆಚ್ಚಿನವರು ಬೆಳ್ಳಿ ವಸ್ತುಗಳಿಗೆ ಆಭರಣದಂಗಡಿಯಲ್ಲಿ ಪಾಲಿಶ್‌ ಮಾಡಿಸುತ್ತಾರೆ. ಈ ರೀತಿ ದುಡ್ಡು ಖರ್ಚು ಮಾಡುವ ಬದಲು ಈ ಕೆಲವೊಂದು ಕ್ಲೀನಿಂಗ್‌ ಟಿಪ್ಸ್‌ಗಳನ್ನು ಪಾಲಿಸುವ  ಮೂಲಕ ಮನೆಯಲ್ಲಿಯೇ ಬೆಳ್ಳಿ ವಸ್ತುಗಳನ್ನು ಸ್ವಚ್ಛಗೊಳಿಸಬಹುದು, ಅವುಗಳಿಗೆ ಹೊಳಪನ್ನು  ನೀಡಬಹುದು. ಬೆಳ್ಳಿ ಆಭರಣಗಳನ್ನು ಸ್ವಚ್ಛಗೊಳಿಸುವ ಸಿಂಪಲ್‌ ಟಿಪ್ಸ್‌ ಇಲ್ಲಿದೆ.

ಬೆಳ್ಳಿ ಆಭರಣಗಳನ್ನು ಸ್ವಚ್ಛಗೊಳಿಸುವ ಸರಳ ಸಲಹೆ:

ಟೂತ್‌ಪೇಸ್ಟ್‌:  ಬೆಳ್ಳಿ ಆಭರಣಗಳನ್ನು ಸ್ವಚ್ಛಗೊಳಿಸಲು ಟೂತ್‌ಪೇಸ್ಟ್  ಬಳಸಬಹುದು. ಟೂತ್‌ಪೇಸ್ಟ್‌ನಲ್ಲಿ ಬೆಳ್ಳಿಯನ್ನು ಹೊಳಪು ಮಾಡುವಲ್ಲಿ ಪರಿಣಾಮಕಾರಿಯಾದ ರಾಸಾಯನಿಕಗಳಿವೆ. ನಿಮ್ಮ ಬೆಳ್ಳಿ ಆಭರಣಗಳು ಮಸುಕಾಗಲು ಪ್ರಾರಂಭಿಸಿದರೆ, ಆ ಭರಣಗಳಿಗೆ ಸ್ವಲ್ಪ ಪ್ರಮಾಣದ ಪೇಸ್ಟ್ ಅನ್ನು ಹಚ್ಚಿ ಮತ್ತು ಬ್ರಷ್‌ನಿಂದ ವೃತ್ತಾಕಾರದ ಚಲನೆಗಳಲ್ಲಿ ನಿಧಾನವಾಗಿ ಉಜ್ಜಿಕೊಳ್ಳಿ. ನಂತರ, ಟೂತ್‌ಪೇಸ್ಟ್‌ನಲ್ಲಿ ನೆನೆಸಿ ಆಭರಣವನ್ನು ಐದು ನಿಮಿಷಗಳ ಕಾಲ ಒಣಗಲು ಬಿಡಿ. ಬಳಿಕ ಅದನ್ನು ಶುದ್ಧ ನೀರಿನಿಂದ ತೊಳೆಯಿರಿ.

ಅಲ್ಯೂಮಿನಿಯಂ ಫಾಯಿಲ್: ಬೆಳ್ಳಿ ಆಭರಣಗಳನ್ನು ಸ್ವಚ್ಛಗೊಳಿಸಲು ಅಲ್ಯೂಮಿನಿಯಂ ಫಾಯಿಲ್ ಅನ್ನು ಬಳಸಬಹುದು. ಇದನ್ನು ಮಾಡಲು, ಒಂದು ಪಾತ್ರೆಯಲ್ಲಿ ಬೆಚ್ಚಗಿನ ನೀರನ್ನು ಕುದಿಸಿ. ಅಲ್ಯೂಮಿನಿಯಂ ಫಾಯಿಲ್ ಅನ್ನು ಸಣ್ಣ ತುಂಡುಗಳಾಗಿ ಹರಿದು ಆ ನೀರಿನಲ್ಲಿ ಅದ್ದಿ. ಒಂದು ಟೀಚಮಚ ಅಡಿಗೆ ಸೋಡಾ ಸೇರಿಸಿ ಮತ್ತು ಬೆಳ್ಳಿಯನ್ನು ಅದರಲ್ಲಿ ಕೆಲವು ನಿಮಿಷಗಳ ಕಾಲ ನೆನೆಸಿಡಿ. ನಂತರ, ಬ್ರಷ್‌ನಿಂದ ಆಭರಣಗಳನ್ನು ಚೆನ್ನಾಗಿ ಉಜ್ಜಿದರೆ ಕಪ್ಪು ಕಲೆಗಳು ಸಂಪೂರ್ಣವಾಗಿ ನಿವಾರಣೆಯಾಗಿ ಬೆಳ್ಳಿ ಆಭರಣ ಹೊಸದರಂತೆ ಹೊಳೆಯಲು ಪ್ರಾರಂಭಿಸುತ್ತದೆ.

ವಿನೆಗರ್: ಬೆಳ್ಳಿಯನ್ನು ಹೊಳೆಯುವಂತೆ ಮತ್ತು ಹೊಸದಾಗಿ ಕಾಣುವಂತೆ ಮಾಡಲು ವಿನೆಗರ್‌ ಕೂಡ ಸಹಕಾರಿ. ಅರ್ಧ ಕಪ್ ಬಿಳಿ ವಿನೆಗರ್ ಮತ್ತು ಎರಡು ಟೀ ಚಮಚ ಅಡಿಗೆ ಸೋಡಾವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ಬೆರೆಸಿ. ಬೆಳ್ಳಿ ವಸ್ತುವನ್ನು ಈ ಮಿಶ್ರಣದಲ್ಲಿ 2-3 ಗಂಟೆಗಳ ಕಾಲ ನೆನೆಸಿಡಿ. ನಂತರ ತಣ್ಣೀರಿನಿಂದ ತೊಳೆಯಿರಿ. ಇದು ಬೆಳ್ಳಿ ಆಭರಣದ ಹೊಳಪನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ನಿಮ್ಮನೆಯಲ್ಲೂ ನೊಣಗಳ ಕಾಟ ಹೆಚ್ಚಿದ್ಯಾ? ಇವುಗಳನ್ನು ತೊಡೆದು ಹಾಕಲು ಇಲ್ಲಿದೆ ಸುಲಭ ಪರಿಹಾರ

ಅಡಿಗೆ ಸೋಡಾ: ಬೆಳ್ಳಿ ಆಭರಣಗಳನ್ನು ಸ್ವಚ್ಛಗೊಳಿಸಲು ಅಡುಗೆ ಸೋಡಾವನ್ನು ಸಹ ಬಳಸಬಹುದು. ಅಡುಗೆ ಸೋಡಾಕ್ಕೆ ಸ್ವಲ್ಪ ನೀರನ್ನು ಬೆರೆಸಿ  ಪೇಸ್ಟ್ ತಯಾರಿಸಿಕೊಳ್ಳಿ, ನಂತರ ಅದರಲ್ಲಿ ಬೆಳ್ಳಿ ಆಭರಣಗಳನ್ನು ಅದ್ದಿ ಅದನ್ನು ಬ್ರಷ್‌ನಿಂದ ಬೆಳ್ಳಿ ಉಜ್ಜಿ. ಐದು ನಿಮಿಷಗಳ ನಂತರ ಶುದ್ಧ ನೀರಿನಿಂದ ತೊಳೆಯಿರಿ.

ಅಡಿಗೆ ಸೋಡಾ ಮತ್ತು ವಿನೆಗರ್ ಮಿಶ್ರಣ: ಬೆಳ್ಳಿ ಆಭರಣಗಳನ್ನು ಸ್ವಚ್ಛಗೊಳಿಸಲು ಅಡಿಗೆ ಸೋಡಾ ಮತ್ತು ವಿನೆಗರ್ ತುಂಬಾನೇ ಸಹಕಾರಿ. ಒಂದು ಬಟ್ಟಲಿನಲ್ಲಿ 2 ಚಮಚ ಅಡಿಗೆ ಸೋಡಾ ಮತ್ತು 3 ಚಮಚ ವಿನೆಗರ್ ಮಿಶ್ರಣ ಮಾಡಿ. ಈ ಮಿಶ್ರಣದಲ್ಲಿ ಬೆಳ್ಳಿ ಆಭರಣಗಳನ್ನು 10 ನಿಮಿಷಗಳ ಕಾಲ ನೆನೆಸಿಡಿ. ನಂತರ ಹಳೆಯ ಟೂತ್ ಬ್ರಷ್ ನಿಂದ ನಿಧಾನವಾಗಿ ಸ್ಕ್ರಬ್ ಮಾಡಿ ನೀರಿನಿಂದ ತೊಳೆಯಿರಿ. ಇದರಿಂದ ಆಭರಣಗಳು ಹೊಸದರಂತೆ ಹೊಳೆಯುತ್ತವೆ.

ನಿಂಬೆ ಮತ್ತು ಉಪ್ಪು: ನಿಂಬೆ ರಸ ಮತ್ತು ಉಪ್ಪಿನ ಮಿಶ್ರಣ ಬೆಳ್ಳಿ ಆಭರಣಗಳನ್ನು ಸ್ವಚ್ಛಗೊಳಿಸಲು ತುಂಬಾನೇ ಸಹಕಾರಿ. ಇದಕ್ಕಾಗಿ ನಿಂಬೆ ರಸಕ್ಕೆ ಚಿಟಿಕೆ ಉಪ್ಪು ಬೆರೆಸಿ ಪೇಸ್ಟ್ ತಯಾರಿಸಿ. ಈ ಪೇಸ್ಟ್‌ ಅನ್ನು ಆಭರಣಗಳಿಗೆ ಹಚ್ಚಿ 5-7 ನಿಮಿಷಗಳ ಹಾಗೆಯೇ ಬಿಡಿ, ನಂತರ ಒಂದು ಬ್ರಷ್‌ ಸಹಾಯದಿಂದ ಉಜ್ಜಿಕೊಂಡು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ ಮತ್ತು ಒಣ ಬಟ್ಟೆಯಿಂದ ಒರೆಸಿ. ಈ ವಿಧಾನವು ಬೆಳ್ಳಿ ಆಭರಣಗಳ ಹೊಳಪನ್ನು ಮತ್ತಷ್ಟು ಹೆಚ್ಚಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜನರನ್ನು ಬೀದಿ ನಾಯಿಗೆ ಹೋಲಿಸಿದ ರಾಘವ ಲಾರೆನ್ಸ್? ಆಕ್ರೋಶದ ಬಳಿಕ ಸ್ಪಷ್ಟನೆ ನೀಡಿದ ನಟ – Kannada News | Raghava Lawrence clarifies Stray Dog analogy row amid backlash over TVK remarks

ಇತ್ತೀಚೆಗಷ್ಟೇ ರಾಜಕೀಯ ಪ್ರವೇಶದ ಸುಳಿವು ನೀಡಿ ಸುದ್ದಿಯಾಗಿದ್ದ ಖ್ಯಾತ ನಟ, ನೃತ್ಯ ನಿರ್ದೇಶಕ ರಾಘವ ಲಾರೆನ್ಸ್ (Raghava Lawrence) ಈಗ ಹೊಸದೊಂದು ವಿವಾದಕ್ಕೆ ಸಿಲುಕಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಆಡಳಿತದ ಕುರಿತು ಮಾತನಾಡುವಾಗ ಅವರು ಬಳಸಿದ ಉದಾಹರಣೆಯೊಂದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ರಾಘವ ಲಾರೆನ್ಸ್ ಅವರು ಜನರನ್ನು ಬೀದಿ ನಾಯಿಗಳಿಗೆ (Stray Dog) ಹೋಲಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ.

ತಮ್ಮ ರಾಜಕೀಯ ಎಂಟ್ರಿ ಮತ್ತು ವಿಜಯ್ ನೇತೃತ್ವದ ನೂತನ ತಮಿಳುನಾಡು ಸರ್ಕಾರದ ಒಂದು ತಿಂಗಳ ಆಡಳಿತದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದ ರಾಘವ ಲಾರೆನ್ಸ್, ಹೊಸ ಸರ್ಕಾರಕ್ಕೆ ಸ್ವಲ್ಪ ಸಮಯ ನೀಡಬೇಕು ಎಂದು ವಾದಿಸಿದ್ದರು. ‘ಈ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಹೇಗೆ ಕೆಲಸ ಮಾಡಿದೆ ಎಂದು ಕೇಳಿದರೆ, ತುಂಬಾ ಚೆನ್ನಾಗಿ ಮಾಡಿದೆ ಎಂದೇ ಹೇಳುತ್ತೇನೆ. ನಾವು ಹೊಸ ಮನೆಗೆ ಹೋಗುವ ಮುನ್ನ ಒಂದೆರಡು ಬಾರಿ ಭೇಟಿ ನೀಡುತ್ತೇವೆ. ಆದರೆ ಅಲ್ಲಿ ವಾಸಿಸಲು ಆರಂಭಿಸಿದಾಗಷ್ಟೇ ಅಲ್ಲಿನ ಪೈಪ್‌ಗಳು ಅಥವಾ ಫ್ಯಾನ್‌ಗಳಲ್ಲಿರುವ ಸಮಸ್ಯೆಗಳು ನಮಗೆ ನಿಧಾನವಾಗಿ ತಿಳಿಯುತ್ತವೆ’ ಎಂದು ಉದಾಹರಣೆ ನೀಡಿದ್ದರು.

ಮುಂದುವರಿದು ಮಾತನಾಡಿದ್ದ ಅವರು, ‘ಹೊಸ ಮನೆಗೆ ಹೋದಾಗ ಆ ಪ್ರದೇಶದ ಬೀದಿ ನಾಯಿಗಳು ಸಹ ನಮ್ಮನ್ನು ನೋಡಿ ಬೊಗಳುತ್ತವೆ. ಅದು ನಮ್ಮೊಂದಿಗೆ ಹೊಂದಿಕೊಳ್ಳಲು ನಾವು ಅದಕ್ಕೆ ಬಿಸ್ಕೆಟ್ ಅಥವಾ ಬಿರಿಯಾನಿ ನೀಡಬೇಕಾಗುತ್ತದೆ. ಒಂದು ಮನೆ ಮತ್ತು ನಾಯಿಯ ಪರಿಸ್ಥಿತಿಯೇ ಹೀಗಿರುವಾಗ, ಇಡೀ ರಾಜ್ಯವನ್ನು ಆಳುವ ಜವಾಬ್ದಾರಿ ಸಿಕ್ಕಾಗ ಸಮಯ ಬೇಡವೇ? ಅವರಿಗೆ ಸ್ವಲ್ಪ ಸಮಯ ಕೊಡಿ. ಸಕಾರಾತ್ಮಕವಾಗಿ ಯೋಚಿಸಿ. ನೀವು ಬದಲಾವಣೆ ಬಯಸಿದ್ದೀರಿ, ಈಗ ಬದಲಾವಣೆ ಬಂದಿದೆ. ಸಮಯ ನೀಡಿದರೆ ಎಲ್ಲವೂ ಸರಿಹೋಗುತ್ತದೆ’ ಎಂದಿದ್ದರು.

ಲಾರೆನ್ಸ್ ಅವರ ಈ ಸುದ್ದಿಗೋಷ್ಠಿಯ ಸಣ್ಣ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಸಾರ್ವಜನಿಕರು ಕೆರಳಿದ್ದಾರೆ. ತಮಿಳುನಾಡಿನ ಜನರನ್ನು ಲಾರೆನ್ಸ್ ಅವರು ಬೀದಿ ನಾಯಿಗಳಿಗೆ ಹೋಲಿಸಿದ್ದಾರೆ ಎಂದು ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ‘ಸರ್ಕಾರವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಹಕ್ಕು, ಅದನ್ನು ಬೊಗಳುವುದು ಎನ್ನುತ್ತೀರಾ? ಅಧಿಕಾರದ ಅಹಂಕಾರವನ್ನು ಲಾರೆನ್ಸ್ ಬೇಗನೇ ಕಲಿತಿದ್ದಾರೆ’ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ತಮಿಳುನಾಡು ರಾಜಕೀಯದಲ್ಲಿ ಹೊಸ ತಿರುವು; ಎಐಎಡಿಎಂಕೆಗೆ ರಾಜೀನಾಮೆ ನೀಡಿ ಟಿವಿಕೆಯತ್ತ ಮುಖ ಮಾಡಿದ 3 ಶಾಸಕರು

ಟ್ವಿಟರ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ತಾವೇ ಪೂರ್ತಿ ವಿಡಿಯೋ ಹಂಚಿಕೊಳ್ಳುವ ಮೂಲಕ ಸ್ಪಷ್ಟನೆ ನೀಡಿರುವ ರಾಘವ ಲಾರೆನ್ಸ್, ‘ನನ್ನ ಅಭಿಮಾನಿಗಳು ಮತ್ತು ಜನಸಾಮಾನ್ಯರು ನನಗೆ ತಾಯಿಗೆ ಸಮಾನ. ನಾನು ಜನರನ್ನು ನಾಯಿಗಳಿಗೆ ಹೋಲಿಸಿದ್ದೇನೆ ಎಂದು ಕೆಲವರು ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಇದು ಸಂಪೂರ್ಣ ತಪ್ಪು ಮತ್ತು ದಿಕ್ಕು ತಪ್ಪಿಸುವಂತದ್ದಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ನಾನು ಹೇಳಿದ್ದು ಇಷ್ಟೇ – ನಾವು ಹೊಸ ಪರಿಸರಕ್ಕೆ ಅಥವಾ ಹೊಸ ಮನೆಗೆ ಹೋದಾಗ ಸುತ್ತಮುತ್ತಲಿನ ವಾತಾವರಣ, ಅಲ್ಲಿನ ನಾಯಿಗಳ ಸ್ವಭಾವ, ಅವುಗಳ ಅಭ್ಯಾಸಗಳನ್ನು ಅರ್ಥ ಮಾಡಿಕೊಳ್ಳಲು ಸಮಯ ಹಿಡಿಯುತ್ತದೆ ಅಷ್ಟೇ. ಜನರನ್ನು ನಾಯಿಗಳೆಂದು ಕರೆಯುವಷ್ಟು ನಾನು ನಿರ್ದಯಿ ಅಲ್ಲ. ನಾನು ಕೇವಲ ಹೊಸ ವಾತಾವರಣಕ್ಕೆ ಹೊಂದಿಕೊಳ್ಳುವ ಬಗ್ಗೆ ಮಾತನಾಡಿದ್ದೇನೆಯೇ ಹೊರತು ಎಲ್ಲೂ ಜನರನ್ನು ಪ್ರಸ್ತಾಪಿಸಿಲ್ಲ. ದಯವಿಟ್ಟು ಪೂರ್ತಿ ವಿಡಿಯೋ ನೋಡಿ ಸತ್ಯ ತಿಳಿದುಕೊಳ್ಳಿ’ ಎಂದು ಮನವಿ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಭಾರತದ ಅಭಿವೃದ್ಧಿಗೆ ಸ್ಲೋವಾಕಿಯಾ ಪ್ರಧಾನಿ ಮೆಚ್ಚುಗೆ; ದಾಖಲೆಯ ಅಧಿಕಾರಾವಧಿಗೆ ಮೋದಿಗೆ ಅಭಿನಂದನೆ – Kannada News | Slovak PM Robert Fico congratulates PM Narendra Modi on becoming Indias longest serving elected Prime Minister

ಬ್ರಾಟಿಸ್ಲಾವಾ, ಜೂನ್ 15: ಯುರೋಪ್ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi) ಅವರ ಜಾಗತಿಕ ನಾಯಕತ್ವಕ್ಕೆ ಮತ್ತೊಂದು ಮನ್ನಣೆ ಸಿಕ್ಕಿದೆ. ಸ್ಲೋವಾಕಿಯಾದ ಪ್ರಧಾನಿ ರಾಬರ್ಟ್ ಫಿಕೊ ಅವರು ಭಾರತವು ಪ್ರಸ್ತುತ ಸಾಧಿಸುತ್ತಿರುವ ಜಾಗತಿಕ ಆರ್ಥಿಕ ಪ್ರಗತಿಯನ್ನು ಶ್ಲಾಘಿಸಿದ್ದು, ಪ್ರಧಾನಿ ಮೋದಿಯವರ ಐತಿಹಾಸಿಕ ಅಧಿಕಾರಾವಧಿಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

1993ರಲ್ಲಿ ಸ್ಲೋವಾಕಿಯಾ ಸ್ವತಂತ್ರ ರಾಷ್ಟ್ರವಾದ ನಂತರ ಭಾರತದ ಪ್ರಧಾನಮಂತ್ರಿಯೊಬ್ಬರು ಆ ದೇಶಕ್ಕೆ ನೀಡುತ್ತಿರುವ ಮೊದಲ ಐತಿಹಾಸಿಕ ಭೇಟಿ ಇದಾಗಿದ್ದು, ಉಭಯ ದೇಶಗಳ ದ್ವಿಪಕ್ಷೀಯ ಬಾಂಧವ್ಯದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಯಾಗಿದೆ. ಸ್ಲೋವಾಕಿಯಾ ಪ್ರಧಾನಿ ರಾಬರ್ಟ್ ಫಿಕೊ ಭಾರತದ ಪ್ರಧಾನಿ ಮೋದಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ನಂತರ ಜಂಟಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಭಾರತದ ಸಾಧನೆಯನ್ನು ಮುಕ್ತವಾಗಿ ಹೊಗಳಿದ್ದಾರೆ.

ಇದನ್ನೂ ಓದಿ: ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ

“ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತವು ಇಂದು ಜಾಗತಿಕ ಮಟ್ಟದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕ ಶಕ್ತಿಯಾಗಿದೆ. ತಂತ್ರಜ್ಞಾನ, ರಕ್ಷಣೆ, ಮೂಲಸೌಕರ್ಯ ಮತ್ತು ಕೈಗಾರಿಕಾ ವಲಯದಲ್ಲಿ ಭಾರತ ಸಾಧಿಸುತ್ತಿರುವ ಅಭಿವೃದ್ಧಿ ಇಡೀ ಜಗತ್ತಿಗೆ ಮಾದರಿಯಾಗಿದೆ. ಇಷ್ಟು ದೊಡ್ಡ ದೇಶವನ್ನು ದೀರ್ಘಕಾಲದಿಂದ ಯಶಸ್ವಿಯಾಗಿ ಮುನ್ನಡೆಸುತ್ತಾ, ದಾಖಲೆಯ ಅವಧಿಗೆ ಪ್ರಧಾನಿಯಾಗಿ ಮುಂದುವರಿಯುತ್ತಿರುವ ನರೇಂದ್ರ ಮೋದಿ ಅವರ ನಾಯಕತ್ವ ನಿಜಕ್ಕೂ ಶ್ಲಾಘನೀಯ. ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು” ಎಂದು ಸ್ಲೋವಾಕಿಯಾ ಪ್ರಧಾನಿ ರಾಬರ್ಟ್ ಫಿಕೊ ಹೇಳಿದ್ದಾರೆ.

ಭಾರತದ ಪ್ರಚಂಡ ಆರ್ಥಿಕ ಬೆಳವಣಿಗೆ, ಡಿಜಿಟಲ್ ಕ್ರಾಂತಿ ಮತ್ತು ಕೃತಕ ಬುದ್ಧಿಮತ್ತೆ (AI) ವಲಯದಲ್ಲಿನ ಅಭೂತಪೂರ್ವ ಪ್ರಗತಿಯನ್ನು ಸ್ಲೋವಾಕಿಯಾ ಪ್ರಧಾನಿ ರಾಬರ್ಟ್ ಫಿಕೊ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಭಾರತವು ತಂತ್ರಜ್ಞಾನ ವಲಯದಲ್ಲಿ ಪಶ್ಚಿಮ ಯುರೋಪಿನ ಮುಂದುವರಿದ ರಾಷ್ಟ್ರಗಳನ್ನೇ ಹಿಂದಿಕ್ಕಿ ಜಾಗತಿಕ ನಾಯಕನಾಗಿ ಹೊರಹೊಮ್ಮಿದೆ ಎಂದು ಅವರು ಹೇಳಿದ್ದಾರೆ. ಇದೇ ವೇಳೆ, ಭಾರತದಲ್ಲಿ ಸತತ 12 ವರ್ಷಗಳ ಕಾಲ ಪ್ರಧಾನಿಯಾಗಿ ಅತಿ ದೀರ್ಘಾವಧಿಯ ದಾಖಲೆ ನಿರ್ಮಿಸಿರುವ ನರೇಂದ್ರ ಮೋದಿ ಅವರ ರಾಜಕೀಯ ಪಯಣವನ್ನು ‘ರಾಜಕೀಯ ಪವಾಡ’ ಎಂದು ಬಣ್ಣಿಸಿದ್ದಾರೆ. ಅಲ್ಲದೆ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ (UNSC) ಭಾರತದ ಖಾಯಂ ಸದಸ್ಯತ್ವಕ್ಕೆ ಸ್ಲೋವಾಕಿಯಾ ತನ್ನ ಸಂಪೂರ್ಣ ಬೆಂಬಲ ಘೋಷಿಸಿದೆ.

ಇದನ್ನೂ ಓದಿ: Video: ಸ್ಲೋವಾಕಿಯಾದಲ್ಲಿ ಬ್ರೆಡ್ ಮತ್ತು ಉಪ್ಪಿನೊಂದಿಗೆ ಪ್ರಧಾನಿ ಮೋದಿಗೆ ಸ್ವಾಗತ

ಸ್ಲೋವಾಕಿಯಾ ಪ್ರಧಾನಿಯವರ ಪ್ರಶಂಸೆಗೆ ಧನ್ಯವಾದ ಅರ್ಪಿಸಿದ ಪ್ರಧಾನಿ ಮೋದಿ, ಮಧ್ಯ ಯುರೋಪಿಯನ್ ರಾಷ್ಟ್ರವಾದ ಸ್ಲೋವಾಕಿಯಾ ಜೊತೆಗಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಲು ಭಾರತ ಬದ್ಧವಾಗಿದೆ ಎಂದು ತಿಳಿಸಿದರು. ಆಟೋಮೊಬೈಲ್ ಮತ್ತು ಡಿಫೆನ್ಸ್ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವ ಸ್ಲೋವಾಕಿಯಾ ಕಂಪನಿಗಳು ಭಾರತದ ‘ಮೇಕ್ ಇನ್ ಇಂಡಿಯಾ’ ಯೋಜನೆಯಡಿ ಹೂಡಿಕೆ ಮಾಡಲು ಪ್ರಧಾನಿ ಮೋದಿ ಆಹ್ವಾನ ನೀಡಿದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

Video: ಕನಸನ್ನು ಬೆನ್ನಟ್ಟಿ ಹೋದ ವ್ಯಕ್ತಿ; ಇಂದು ಏರ್ ಇಂಡಿಯಾದಲ್ಲಿ ಸ್ವಚ್ಛತಾ ಸಿಬ್ಬಂದಿ – Kannada News | The story of Air India’s cleaning staff’s dream come true

ಪ್ರತಿಯೊಬ್ಬರಿಗೂ ಚಿಕ್ಕಂದಿನಿಂದಲೂ ಕನಸುಗಳಿರುತ್ತವೆ. ಸಣ್ಣ ಮಕ್ಕಳನ್ನು ಕೇಳಿದರೆ ದಕ್ಷ ಅಧಿಕಾರಿಯಾಗಬೇಕು, ವೈದ್ಯನಾಗಬೇಕು ಹೀಗೆ ತಮ್ಮ ಕನಸುಗಳನ್ನು ಹೇಳುತ್ತಾರೆ. ಆದರೆ ಅಂದುಕೊಂಡಿದ್ದನ್ನು ಸಾಧಿಸುವುದು, ಕೆಲಸ ಗಿಟ್ಟಿಸಿಕೊಳ್ಳೋದು ಹೇಳಿದ್ದಷ್ಟು ಸುಲಭವಲ್ಲ. ಇದೀಗ ಏರ್ ಇಂಡಿಯಾದಲ್ಲಿ (Air India) ಕ್ಲೀನರ್ ಆಗಿ ಕೆಲಸ ಮಾಡುವ ವ್ಯಕ್ತಿ ತಮ್ಮ ಕನಸಿನ ಉದ್ಯೋಗ ಗಿಟ್ಟಿಸಿಕೊಂಡು ಖುಷಿಯಿಂದ ಕೆಲಸ ಮಾಡುತ್ತಿದ್ದಾರೆ. ಏರ್ ಇಂಡಿಯಾದ ಸ್ವಚ್ಛತಾ ಸಿಬ್ಬಂದಿಯೊಬ್ಬರ ಹೃದಯಸ್ಪರ್ಶಿ ವಿಡಿಯೋ  ನೆಟ್ಟಿಗರ ಹೃದಯ ಗೆದ್ದಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಕೆಲಸದ ಮೇಲೆ ಅವರಿಗಿರುವ ಪ್ರೀತಿಯನ್ನು ಮೆಚ್ಚಿಕೊಂಡಿದ್ದಾರೆ.

ವರ್ಷ (Vursha) ಎಂಬ ಬಳಕೆದಾರರು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ಕ್ಲಿಪಿಂಗ್ ಉದ್ಯೋಗಿಯ ಜೀವನ ಹಾಗೂ ತಮ್ಮ ಕನಸಿನ ಕೆಲಸದ ಮೇಲಿರುವ ಪ್ರೀತಿಯನ್ನು ಎತ್ತಿ ತೋರಿಸುತ್ತಿದೆ. ಈ ಕ್ಲಿಪ್ ನಲ್ಲಿ ಯಾವುದೂ ಸುಲಭವಲ್ಲ, ಆದರೆ ಎಲ್ಲವೂ ಸಾಧ್ಯ ಎಂದು ಬರೆಯಲಾಗಿದೆ.

ವೈರಲ್‌ ವಿಡಿಯೋ ಇಲ್ಲಿದೆ

ವರ್ಷ ಅವರು ಆಕಸ್ಮಿಕವಾಗಿ  ಏರ್‌ ಇಂಡಿಯಾದ ಸ್ವಚ್ಫತಾ ಸಿಬ್ಬಂದಿಯನ್ನು ಭೇಟಿಯಾಗಿದ್ದಾರೆ. ಇದೇ ವೇಳೆ ಕೆಲಸದ ಬಗ್ಗೆ ಮಾತನಾಡಿದ ರೀತಿ ನನ್ನನ್ನು ಬೆರಗುಗೊಳಿಸಿತು. ಇಷ್ಟು ಆತ್ಮವಿಶ್ವಾಸದಿಂದ ಮಾತನಾಡುತ್ತಿದ್ದ ಸ್ವಚ್ಛತಾ ಸಿಬ್ಬಂದಿಯನ್ನು ನಾನು ಈಗಷ್ಟೇ ಭೇಟಿಯಾದೆ. ಏರ್ ಇಂಡಿಯಾ ಜೊತೆ ಕೆಲಸ ಮಾಡಲು ಇಷ್ಟವಿದೆಯೇ ಎಂದು ನಾನು ಕೇಳಿದಾಗ, ಅವರು ತಮ್ಮ ವರ್ಷಗಳ ಅನುಭವವನ್ನು ಹಂಚಿಕೊಂಡು, ಕ್ಯಾಬಿನ್ ಸಿಬ್ಬಂದಿ ಸೇರಿದಂತೆ ಎಲ್ಲರನ್ನೂ ಶ್ಲಾಘಿಸಿದರು ಎಂದಿದ್ದಾರೆ.

ಏರ್ ಇಂಡಿಯಾಗೆ ಸೇರುವುದು ಅವರ ಕನಸಾಗಿತ್ತು. ಅವರನ್ನು ಭೇಟಿಯಾಗಿದ್ದು ಸಂತೋಷವಾಗಿದೆ. ಜೀವನದ ಉದ್ದೇಶ ಸಂತೋಷವಾಗಿರುವುದು ಹೇಗೆ ಎಂಬುದಕ್ಕೆ ಅವರು ಅತ್ಯುತ್ತಮ ಉದಾಹರಣೆ. ನೀವು ತೆಗೆದುಕೊಳ್ಳಬಹುದಾದ ದೊಡ್ಡ ಸಾಹಸವೆಂದರೆ ನಿಮ್ಮ ಕನಸುಗಳಂತೆ ಜೀವನವನ್ನು ನಡೆಸುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾರ್ಪೊರೇಟ್ ಕೆಲಸದ ಸ್ಥಳಗಳಲ್ಲಿನ ಐದು ವಿಷಕಾರಿ ಅಂಶಗಳನ್ನು ಟೀಕಿಸಿದ ಸ್ಟಾರ್ಟ್ಅಪ್ ಸಂಸ್ಥಾಪಕಿ

ಈ ವಿಡಿಯೋ ನವತ್ತೈದು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಪುಸ್ತಕದ ಮುಖಪುಟ ನೋಡಿ ಎಂದಿಗೂ ನಿರ್ಣಯಿಸಬೇಡಿ ಎಂದಿದ್ದಾರೆ. ಇನ್ನೊಬ್ಬರು, ನೀವು ದೊಡ್ಡ ಅಪ್ಪುಗೆಗೆ ಅರ್ಹರು ಎಂದು ಹೇಳಿದ್ದಾರೆ. ಮತ್ತೊಬ್ಬರು, ಕನಸು ನನಸಾಗಿಸಿಕೊಂಡು ಖುಷಿಯಿಂದ ಇರುವ ನೀವೇ ನಮಗೆ ಸ್ಫೂರ್ತಿ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:12 pm, Mon, 15 June 26

Source link

ಇಂದಿರಾ ಗಾಂಧಿ ಬದುಕಿದ್ದರೆ ಬಿಜೆಪಿಗೆ ನಿಷೇಧ ಹೇರುತ್ತಿದ್ದರು; ವಿವಾದಕ್ಕೀಡಾದ ಅಶೋಕ್ ಗೆಹ್ಲೋಟ್ – Kannada News | Indira Gandhi would have banned BJP Congress Leader Ashok Gehlot sparks Controversy

ಜೈಪುರ, ಜೂನ್ 15: “ಮಾಜಿ ಪ್ರಧಾನಿ ಇಂದಿರಾ ಗಾಂಧಿ (Indira Gandhi) ಇಂದು ಬದುಕಿದ್ದರೆ ಬಿಜೆಪಿಯಂತಹ ಕೋಮು ರಾಜಕಾರಣ ಮಾಡುವ ಪಕ್ಷವನ್ನು ನಿಷೇಧಿಸುತ್ತಿದ್ದರು” ಎಂದು ರಾಜಸ್ಥಾನದ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ (Ashok Gehlot) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೈಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ದೇಶದಲ್ಲಿ ಪ್ರಸ್ತುತ ಆಡಳಿತಾರೂಢ ಬಿಜೆಪಿ ಸೃಷ್ಟಿಸಿರುವ ವಾತಾವರಣ ಅತ್ಯಂತ ಅಪಾಯಕಾರಿ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಜೈಪುರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಅಶೋಕ್ ಗೆಹ್ಲೋಟ್, ದೇಶದ ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. “ನನ್ನ 50 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಭಯಾನಕ ಮತ್ತು ಅಪಾಯಕಾರಿ ವಾತಾವರಣವನ್ನು ನಾನು ಎಂದೂ ನೋಡಿಲ್ಲ. ಭಾರತದ ಸಂವಿಧಾನವು ಯಾವುದೇ ಧರ್ಮದ ಆಧಾರದ ಮೇಲೆ ರಾಜಕಾರಣ ಮಾಡಲು ಅನುಮತಿ ನೀಡುವುದಿಲ್ಲ. ಆದರೆ, ಬಿಜೆಪಿ ಕೇವಲ ಹಿಂದುತ್ವದ ಹೆಸರಿನಲ್ಲಿ ಜನರನ್ನು ಪ್ರಚೋದಿಸಿ, ಧ್ರುವೀಕರಣ ಮಾಡುವ ಮೂಲಕ ದೇಶವನ್ನು ದುರ್ಬಲಗೊಳಿಸುತ್ತಿದೆ. ಇಂದಿರಾ ಗಾಂಧಿಯವರಂತಹ ದೃಢ ನಾಯಕಿ ಇಂದು ಬದುಕಿದ್ದರೆ, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಯಂತಹ ಪಕ್ಷದ ಮೇಲೆ ಖಂಡಿತವಾಗಿಯೂ ನಿಷೇಧ ಹೇರುತ್ತಿದ್ದರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಎನ್‌ಸಿಪಿಐ’ ಜೊತೆ 20 ಟಿಎಂಸಿ ಬಂಡಾಯ ಸಂಸದರ ವಿಲೀನ, ಸಂಸತ್ತಿನಲ್ಲಿ ಹೊಸ ಬಣದ ಉದಯ

“ಇಂದಿರಾ ಗಾಂಧಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದರು. ಆದರೆ, ಖಲಿಸ್ತಾನ್ ರಚನೆಯಾಗಲು ಬಿಡಲಿಲ್ಲ. ರಾಜೀವ್ ಗಾಂಧಿ ದೇಶದ ಏಕತೆಗಾಗಿ ಹುತಾತ್ಮರಾದರು. ಆದರೆ, ಬಿಜೆಪಿ ಸರ್ಕಾರವು ದೇಶದ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಧ್ವಂಸಗೊಳಿಸುತ್ತಿದೆ” ಎಂದು ಅಶೋಕ್ ಗೆಹ್ಲೋಟ್ ನೇರ ಆರೋಪ ಮಾಡಿದರು. “ಜಾರಿ ನಿರ್ದೇಶನಾಲಯ (ED), ಸಿಬಿಐ (CBI) ಮತ್ತು ಆದಾಯ ತೆರಿಗೆ ಇಲಾಖೆಗಳನ್ನು (IT) ವಿರೋಧ ಪಕ್ಷಗಳ ನಾಯಕರನ್ನು ಮಟ್ಟಹಾಕಲು ರಾಜಕೀಯ ಅಸ್ತ್ರಗಳಾಗಿ ಬಳಸಲಾಗುತ್ತಿದೆ. ನ್ಯಾಯಾಂಗದ ಮೇಲೂ ಒತ್ತಡ ಹೇರಲಾಗುತ್ತಿದೆ. ದೇಶದ ಚುನಾವಣಾ ಆಯೋಗವು ಸ್ವತಂತ್ರವಾಗಿ ಕೆಲಸ ಮಾಡುವ ಬದಲು, ಸಂಪೂರ್ಣವಾಗಿ ಬಿಜೆಪಿಯ ‘ಏಜೆಂಟ್’ ತರಹ ವರ್ತಿಸುತ್ತಿದೆ” ಎಂದು ಅವರು ಆರೋಪಿಸಿದರು.

ಲೋಕಸಭೆಯಲ್ಲಿ ಬಿಜೆಪಿಯ ಒಬ್ಬನೇ ಒಬ್ಬ ಮುಸ್ಲಿಂ ಸಂಸದರಿಲ್ಲದಿರುವುದನ್ನು ಪ್ರಶ್ನಿಸಿದ ಅಶೋಕ್ ಗೆಹ್ಲೋಟ್, ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ಶಹನವಾಜ್ ಹುಸೇನ್ ಅವರಂತಹ ಹಿರಿಯ ಮುಸ್ಲಿಂ ನಾಯಕರನ್ನು ಪಕ್ಷದಲ್ಲಿ ಮೂಲೆಗುಂಪು ಮಾಡಲಾಗಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: RSS ವಿಚಾರವಾಗಿ ಮೋಹನ್ ಭಾಗವತ್​ಗೆ ಪ್ರಿಯಾಂಕ್ ಖರ್ಗೆ ಪತ್ರ, ಈ 8 ಅಂಶಗಳಿಗೆ ವಿವರ ನೀಡುವಂತೆ ಆಗ್ರಹ

“ಉತ್ತರ ಪ್ರದೇಶದಲ್ಲಿ 403 ವಿಧಾನಸಭಾ ಸ್ಥಾನಗಳಿವೆ, ಆದರೂ ನೀವು ಒಬ್ಬ ಮುಸ್ಲಿಂ ಅಭ್ಯರ್ಥಿಗೆ ಒಂದೇ ಒಂದು ಸ್ಥಾನವನ್ನು ನೀಡುವುದಿಲ್ಲ, ಆದರೂ ನೀವು ನಿಮ್ಮನ್ನು ರಾಷ್ಟ್ರೀಯ ರಾಜಕೀಯ ಪಕ್ಷ ಎಂದು ಕರೆದುಕೊಳ್ಳುತ್ತೀರಿ! ನೀವು ದೇಶವಾಸಿಗಳಿಗೆ ಹೆಮ್ಮೆ ಪಡಲು 5 ಸ್ಥಾನಗಳನ್ನು ನೀಡಬಹುದಿತ್ತು. ಆದರೆ ನೀವು ‘ನಾವು ಸಂಪೂರ್ಣವಾಗಿ ಹಿಂದುತ್ವ ಪಕ್ಷ’ ಎಂದು ತೋರಿಸಲು ಬಯಸುತ್ತೀರಿ. ಆ ಬಡ ಮುಖ್ತಾರ್ ಅಬ್ಬಾಸ್ ನಖ್ವಿ ಇಷ್ಟು ದಿನ ಬಿಜೆಪಿಯ ಅದ್ಭುತ ವಕೀಲರಾಗಿದ್ದರು. ಶಹನವಾಜ್ ಹುಸೇನ್ ಸಚಿವರಾಗಿದ್ದರು. ಆದರೆ ಇಂದು ನೀವು ಎಲ್ಲರನ್ನೂ ಮನೆಗೆ ಕಳುಹಿಸಿದ್ದೀರಿ” ಎಂದು ಗೆಹ್ಲೋಟ್ ಟೀಕಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸರ್ಕಾರಿ ಶಾಲೆಯಲ್ಲಿ ಓದಿದ 30 ಸಾವಿರ ಮಕ್ಕಳು ಅತಂತ್ರ! ಸರ್ಕಾರದ ಎಡವಟ್ಟಿಗೆ ವಿದ್ಯಾರ್ಥಿಗಳ ಭವಿಷ್ಯದ ಕಥೆ ಏನು? – Kannada News | Karnataka English Medium School: 30,000 Students Struggle for Class 8 Admissions

ಪ್ರಾತಿನಿಧಿಕ ಚಿತ್ರImage Credit source: deccanherald

ಬೆಂಗಳೂರು, ಜೂನ್​​ 15: ಸರ್ಕಾರಿ ಶಾಲೆಯ (government school) ಮಕ್ಕಳಿಗೂ ಇಂಗ್ಲಿಷ್ ಮೀಡಿಯಂ ಶಿಕ್ಷಣ ಸಿಗಲಿ ಎಂಬ ಉದ್ದೇಶದಿಂದ ಆರಂಭವಾದ ಯೋಜನೆಯೊಂದು, ಈಗ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲೆಗೆ ದೂಡಿದೆ. ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಮೀಡಿಯಂ (English Medium) ಓದಿದ ರಾಜ್ಯದ ಸುಮಾರು 30 ಸಾವಿರ ವಿದ್ಯಾರ್ಥಿಗಳು ಈಗ ಮುಂದೇನು ಮಾಡಬೇಕು ತೋಚದೆ ಅತಂತ್ರರಾಗಿದ್ದಾರೆ. ಜೂನ್ ತಿಂಗಳು ಅರ್ಧ ಕಳೆದರೂ ಶಿಕ್ಷಣ ಇಲಾಖೆ ಮಾತ್ರ ಈ ಗೊಂದಲಕ್ಕೆ ಇನ್ನೂ ಮುಕ್ತಿ ನೀಡಿಲ್ಲ.

ಮುಖ್ಯಾಂಶಗಳು

  • ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳ ಮಕ್ಕಳ ಸ್ಥಿತಿ ಅತಂತ್ರ
  • ಇದುವರೆಗೂ 8ನೇ ತರಗತಿ ಇಂಗ್ಲಿಷ್​ ‌ಮೀಡಿಯಂ ಪ್ರಾರಂಭಿಸದ ಸರ್ಕಾರ
  • ವಿದ್ಯಾರ್ಥಿಗಳ ಪೋಷಕರು ಅಸಮಾಧಾನ

30 ಸಾವಿರ ವಿದ್ಯಾರ್ಥಿಗಳ ಸ್ಥಿತಿ ಅತಂತ್ರ

ಕಳೆದ 2018-19ನೇ ಶೈಕ್ಷಣಿಕ ವರ್ಷದಲ್ಲಿ ರಾಜ್ಯ ಸರ್ಕಾರವು ಬಡ ಮತ್ತು ಮಧ್ಯಮ ವರ್ಗದ ಮಕ್ಕಳ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಆಯ್ದ 1001 ಸರ್ಕಾರಿ ಶಾಲೆಗಳಲ್ಲಿ 1ರಿಂದ 7ನೇ ತರಗತಿವರೆಗೆ ಇಂಗ್ಲಿಷ್ ಮಾಧ್ಯಮವನ್ನು ಆರಂಭಿಸಿತ್ತು. ಖಾಸಗಿ ಶಾಲೆಗಳ ಪೈಪೋಟಿಯ ನಡುವೆ ಹೆತ್ತವರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿದ್ದರು. ಅದರಂತೆ ಈ 1001 ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂನಲ್ಲಿ ಓದಿದ ಸುಮಾರು 30 ಸಾವಿರ ವಿದ್ಯಾರ್ಥಿಗಳು ಈಗ ಯಶಸ್ವಿಯಾಗಿ 7ನೇ ತರಗತಿ ಪಾಸಾಗಿದ್ದಾರೆ. ಆದರೆ, ಅಸಲಿ ಸಮಸ್ಯೆ ಇಲ್ಲಿಂದ ಆರಂಭವಾಗಿದೆ.

ಇದನ್ನೂ ಓದಿ: ಶಾಲಾ ಮಕ್ಕಳಿಗಿನ್ನು ಚಪ್ಪಲಿ ಭಾಗ್ಯ!: ಮಕ್ಕಳ ಆರೋಗ್ಯ ಗಮನದಲ್ಲಿರಿಸಿ ಶಿಕ್ಷಣ ಇಲಾಖೆಯಿಂದ ಹೊಸ ಚಿಂತನೆ

7ನೇ ತರಗತಿ ಮುಗಿಸಿದ ಈ ಮಕ್ಕಳಿಗೆ ಮುಂದಿನ 8ನೇ ತರಗತಿಯಲ್ಲಿ ಇಂಗ್ಲಿಷ್ ಮಾಧ್ಯಮವನ್ನು ಮುಂದುವರಿಸಲು ಸರ್ಕಾರ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಪರಿಣಾಮ, 1001 ಶಾಲೆಗಳ 30 ಸಾವಿರ ವಿದ್ಯಾರ್ಥಿಗಳು ಈಗ 8ನೇ ತರಗತಿಗೆ ಎಲ್ಲಿ ಸೇರಬೇಕು ಎಂಬ ಗೊಂದಲದಲ್ಲಿದ್ದಾರೆ. ಇಂಗ್ಲಿಷ್ ಮಾಧ್ಯಮದಲ್ಲೇ ಓದು ಮುಂದುವರಿಸಬೇಕೆಂದರೆ ಪೋಷಕರು ಲಕ್ಷ ಲಕ್ಷ ಹಣ ಕೊಟ್ಟು ಖಾಸಗಿ ಶಾಲೆಗಳಿಗೆ ಸೇರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಇಲ್ಲದಿದ್ದರೆ, ಇಷ್ಟು ವರ್ಷ ಇಂಗ್ಲಿಷ್‌ನಲ್ಲಿ ಓದಿದ ಮಕ್ಕಳು ಮತ್ತೆ ಪುನಃ ಕನ್ನಡ ಮಾಧ್ಯಮಕ್ಕೆ ಹಿಂತಿರುಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೊಸ ಶೈಕ್ಷಣಿಕ ವರ್ಷ ಆರಂಭವಾಗಿ ಜೂನ್ ಅರ್ಧ ತಿಂಗಳು ಕಳೆದಿದ್ದರೂ ಶಿಕ್ಷಣ ಇಲಾಖೆ ಮಾತ್ರ ಈ ಗಂಭೀರ ಸಮಸ್ಯೆಗೆ ಯಾವುದೇ ಪರಿಹಾರ ನೀಡದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ: ನಿಮಗೆ ಪುಣ್ಯ ಬರುತ್ತದೆ ಎಂದ ಪೋಷಕರು 

ಇನ್ನು ಈ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆಯಲ್ಲಿ ಪೋಷಕರೊಬ್ಬರು ಈ ಬಗ್ಗೆ ಮಾತನಾಡಿದ್ದು, 7ನೇ ತರಗತಿವರೆಗೂ ಮಕ್ಕಳು ಇಂಗ್ಲಿಷ್​​ನಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ. 8ನೇ ತರಗತಿ ಆರಂಭ ಮಾಡದಿದ್ದರೆ ವಿದ್ಯಾರ್ಥಿಗಳು ಎಲ್ಲಿ ಓದಬೇಕು, ಎಲ್ಲಿಗೆ ಹೋಗಬೇಕು. ಯಾವುದೇ ಕಾರಣಕ್ಕೂ ಇದನ್ನು ಬಂದ್ ಮಾಡಬಾರದು. ಸರ್ಕಾರಿ ಶಾಲೆಗಳು, ಆಸ್ಪತ್ರೆಗಳನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ. ಸುಮಾರು 30 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು 7ನೇ ತರಗತಿ ಪಾಸ್ ಆಗಿ 8ನೇ ತರಗತಿಗೆ ಬಂದಿದ್ದಾರೆ. ಸರ್ಕಾರ ದ್ವಂದ್ವ ನೀತಿ ಅನುಸರಿಸುತ್ತಿದೆ. ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ ನಿಮಗೆ ಪುಣ್ಯ ಬರುತ್ತದೆ. ದಯವಿಟ್ಟು ಇಂಗ್ಲಿಷ್ ‌ಮಾಧ್ಯಮವನ್ನು ಬಂದ್‌ ಮಾಡಬಾರದು ಎಂದು‌ ಪೋಷಕರು ಮನವಿ ಮಾಡಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಶಾಲೆಗಳಿಗೆ ಸಮಸ್ಯೆ ಏದುರಾಗಿದೆ?

  • ಬಾಗಲಕೋಟೆ-28
  • ಬಳ್ಳಾರಿ-43
  • ಬೆಳಗಾವಿ-74
  • ಬೆಂಗಳೂರು -144
  • ಬೀದರ್ -26
  • ಚಾಮರಾಜನಗರ-17
  • ಚಿಕ್ಕಬಳ್ಳಾಪುರ-20
  • ಚಿಕ್ಕಮಗಳೂರು-21
  • ಚಿತ್ರದುರ್ಗ- 24
  • ದಕ್ಷಿಣ ಕನ್ನಡ-48
  • ದಾವಣಗೆರೆ -31
  • ಧಾರವಾಡ- 28
  • ಗದಗ-17
  • ಹಾಸನ- 38
  • ಹಾವೇರಿ-25
  • ಕಲಬುರಗಿ-39
  • ಕೊಡಗು-08
  • ಕೋಲಾರ-24
  • ಕೊಪ್ಪಳ-20
  • ಮಂಡ್ಯ-32
  • ಮೈಸೂರು-4
  • ರಾಯಚೂರು-33
  • ರಾಮನಗರ-24
  • ಶಿವಮೊಗ್ಗ-30
  • ತುಮಕೂರು-49
  • ಉಡುಪಿ-24
  • ಉತ್ತರ ‌ಕನ್ನಡ-27
  • ವಿಜಯಪುರ-38
  • ಯಾದಗಿರಿ-23

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

RSS ಬಗ್ಗೆ ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ಸಂಸದ ತೇಜಸ್ವಿ ಸೂರ್ಯ ಖಡಕ್ ಉತ್ತರ – Kannada News | BJP MP Tejaswi Surya Hits back at Miister Priyank Kharge over Letter to Mohan bhagwat about RSS Details

ನವದೆಹಲಿ, (ಜೂನ್ 15): ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಮೋಹನ್ ಭಾಗವತ್ (Mohan bhagwat) ಅವರಿಗೆ ಪತ್ರ ಬರೆದು ಆರ್​​​ಎಸ್​​ಎಸ್​​​ನ ನೋಂದಣಿ, ಆದಾಯ, ಆಸ್ತಿಪಾಸ್ತಿ ಸೇರಿದಂತೆ ಇತರೆ ವಿವರ ನೀಡುವಂತೆ ಆಗ್ರಹಿಸಿದ್ದಾರೆ. ಇನ್ನು ಇದಕ್ಕೆ ದೆಹಲಿಯಲ್ಲಿಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ(Tejaswi Surya) ಪ್ರತಿಕ್ರಿಯಿಸಿದ್ದು, ಅವರ ಪ್ರಶ್ನೆಗಳಿಗೆ ಆರ್‌ಎಸ್‌ಎಸ್‌ನವರು ಕಾನೂನಾತ್ಮಕವಾಗಿ ಉತ್ತರಿಸ್ತಾರೆ. ಸಂಘ ಸಂಸ್ಥೆ ಸ್ಥಾಪಿಸುವ ಹಕ್ಕನ್ನು ಸಂವಿಧಾನ ನೀಡಿದೆ. ಕೇವಲ ಆರ್‌ಎಸ್‌ಎಸ್‌ಗೆ ಮಾತ್ರ ಅವಕಾಶ ನೀಡಿಲ್ಲ. ಗ್ರಾಮೀಣ ಭಾಗದ ನಾಲ್ವರು ಯುವಕರು ಸೇರಿ ಸಂಘ ಕಟ್ಟಬಹುದು. ಸಂವಿಧಾನ ಇಲ್ಲದಾಗಲೂ, ಬ್ರಿಟಿಷರ ಕಾಲದಲ್ಲೂ ಕೆಲಸ ಮಾಡಿದೆ. ಸಂಘದ ಆಸ್ತಿ, ವಹಿವಾಟುಗಳು ನಿಯಮಗಳ ಅಡಿಯಲ್ಲಿ ನಡೆಯುತ್ತಿವೆ. ಸಚಿವ ಪ್ರಿಯಾಂಕ್ ಖರ್ಗೆ ಇದೇ ಮೊದಲ ಅಲ್ಲ ಆಡಿಟ್ ಕೇಳ್ತಿರೋದು. ಐಟಿ-ಬಿಟಿ ಇಲಾಖೆಯಲ್ಲಿ ರಿಸರ್ಚ್ ಇನೋವೇಷನ್ ಮಾಡಬೇಕಿತ್ತು. ಆದರೆ ಪ್ರಿಯಾಂಕ್ ಖರ್ಗೆ ಇಲ್ಲಿ ರಿಸರ್ಚ್ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ನಾನೇ ಮೊದಲು ನೋಂದಣಿ ಕೇಳುತ್ತಿದ್ದೇನೆ ಅಂದುಕೊಂಡರೆ ಅದು ತಪ್ಪು.ಹಿಂದೆ ಪಥಸಂಚಲನಕ್ಕೆ ವಿರೋಧಿಸಿದರು, ಕೋರ್ಟ್ ಅನುಮತಿ ನೀಡಿತು. ಮೊದಲು 500 ಸೇರುವ ಜಾಗದಲ್ಲಿ ವಿರೋಧದ ಬಳಿಕ 5 ಸಾವಿರ ಜನ ಸೇರಿದರು. ವಿರೋಧಿಸಿದಷ್ಟು ಅದರ ಚಿಂತನೆಗಳು ಬಲಿಷ್ಠವಾಗುತ್ತವೆ, ಇದಕ್ಕೆ ಸ್ವಾಗತಿಸುತ್ತೇನೆ. ದೇಶದ ಸಂವಿಧಾನದ ಅಡಿಯಲ್ಲಿ ಆರ್‌ಎಸ್‌ಎಸ್ ಕೆಲಸ ಮಾಡುತ್ತಿದೆ. ಸಂವಿಧಾನದ ಮೇಲೆ ಎಂದು ಕೆಲಸ ಮಾಡುವ ಜನರು, ಸಂಘಟನೆ ಯಾರು ಎಂದು ಗೊತ್ತಿದೆ, ನೋಂದಣಿ ಬಗ್ಗೆ ಚರ್ಚೆ ಆಗಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕಾನೂನು ಸಲಹೆ ಪಡೆಯಬೇಕಿತ್ತು. ಇದಕ್ಕೆ ಆರ್‌ಎಸ್‌ಎಸ್ ಮತ್ತು ಜನರು ಮುಂದೆ ಉತ್ತರ ಕೊಡುತ್ತಾರೆ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: RSS ವಿಚಾರವಾಗಿ ಮೋಹನ್ ಭಾಗವತ್​ಗೆ ಪ್ರಿಯಾಂಕ್ ಖರ್ಗೆ ಪತ್ರ, ಈ 8 ಅಂಶಗಳಿಗೆ ವಿವರ ನೀಡುವಂತೆ ಆಗ್ರಹ

Source link