Category Archives: Blog

Your blog category

ಮಾರ್ಕ್, ಡೆವಿಲ್ ರೀತಿಯೇ ಬುಕ್ ಮೈ ಶೋ ರೇಟಿಂಗ್ ನಿಷೇಧಿಸಿದ ಚಿರಂಜೀವಿ ಸಿನಿಮಾ – Kannada News | Audience rating and review not allowed to Mana Shankara Vara Prasad Garu on Book My Show

ಮೆಗಾ ಸ್ಟಾರ್ ಚಿರಂಜೀವಿ ನಟನೆಯ ‘ಮನ ಶಂಕರ ವರಪ್ರಸಾದ್ ಗಾರು’ (Mana Shankara Vara Prasad Garu) ಸಿನಿಮಾ ಜನವರಿ 12ರಂದು ಬಿಡುಗಡೆ ಆಗುತ್ತಿದೆ. ಸಂಕ್ರಾಂತಿ ಪ್ರಯುಕ್ತ ಈ ಚಿತ್ರವನ್ನು ನೋಡಲು ಚಿರಂಜೀವಿ (Chiranjeevi) ಫ್ಯಾನ್ಸ್ ಕಾತರದಿಂದ ಕಾದಿದ್ದಾರೆ. ಫಸ್ಟ್ ಡೇ ಫಸ್ಟ್ ಶೋ ಈ ಚಿತ್ರವನ್ನು ನೋಡಿ ತಮ್ಮ ಅನಿಸಿಕೆ ತಿಳಿಸಬೇಕು ಎಂಬುದು ಅಭಿಮಾನಿಗಳ ಆಸೆ. ಆದರೆ ‘ಬುಕ್ ಮೈ ಶೋ’ (Book My Show) ಮೂಲಕ ಯಾರೂ ಕೂಡ ಈ ಸಿನಿಮಾಗೆ ರೇಟಿಂಗ್ ನೀಡುವಂತಿಲ್ಲ. ವಿಮರ್ಶೆ ತಿಳಿಸುವಂತಿಲ್ಲ! ಈ ರೀತಿ ನ್ಯಾಯಾಲಯದ ಆದೇಶ ಇದೆ. ಈ ಮೊದಲು ಕನ್ನಡದ ‘ದಿ ಡೆವಿಲ್’, ‘ಮಾರ್ಕ್’, ‘45’ ಸಿನಿಮಾಗಳು ಕೂಡ ಇದೇ ಹಾದಿಯನ್ನು ಅನುಸರಿಸಿದ್ದವು.

ದರ್ಶನ್ ಅಭಿನಯದ ‘ದಿ ಡೆವಿಲ್’, ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’, ಶಿವರಾಜ್​​ಕುಮಾರ್ ಅಭಿನಯದ ‘45’ ಸಿನಿಮಾಗಳು ಬಿಡುಗಡೆ ಆಗುವಾಗ ಫ್ಯಾನ್ಸ್ ವಾರ್ ನಡೆಯುತ್ತಿತ್ತು. ಆಗ ಕೆಲವರು ಬೇಕಂತಲೇ ಈ ಸಿನಿಮಾಗಳಿಗೆ ನೆಗೆಟಿವ್ ಪ್ರಚಾರ ಮಾಡುವ ಸಾಧ್ಯತೆ ಇತ್ತು. ಅದನ್ನು ತಪ್ಪಿಸಲು ಕೋರ್ಟ್​ ಮೊರೆ ಹೋಗಲಾಗಿತ್ತು. ‘ಬುಕ್ ಮೈ ಶೋ’ ರೀತಿಯ ಪ್ಲಾಟ್​ಫಾರ್ಮ್ ಮೂಲಕ ಜನರು ವಿಮರ್ಶೆ ಅಥವಾ ರೇಟಿಂಗ್ ನೀಡುವುದನ್ನು ತಡೆಯಲಾಗಿತ್ತು.

ಚಿರಂಜೀವಿ ಅಭಿನಯದ ‘ಮನ ಶಂಕರ ವರಪ್ರಸಾದ್ ಗಾರು’ ಸಿನಿಮಾ ಸಹ ಕೋರ್ಟ್​​ ಮೊರೆ ಹೋಗಿದೆ. ಈ ಸಿನಿಮಾಗೆ ರಿವ್ಯೂ ಮತ್ತು ರೇಟಿಂಗ್ ನೀಡುವ ಆಯ್ಕೆಯನ್ನು ತೆಗೆದುಹಾಕಲಾಗಿದೆ. ಕೋರ್ಟ್ ಆದೇಶದ ಮೇರೆಗೆ ಈ ರೀತಿ ಮಾಡಲಾಗಿದೆ ಎಂದು ‘ಬುಕ್ ಮೈ ಶೋ’ ಪ್ರಕಟಿಸಿದೆ. ಸ್ಟಾರ್ ನಟರ ಸಿನಿಮಾಗಳು ಈ ನಿರ್ಧಾರ ತೆಗೆದುಕೊಳ್ಳುತ್ತಿರುವುದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಸಿನಿಮಾಗಳ ವಿರುದ್ಧ ಅಪಪ್ರಚಾರ ಮಾಡಲು ಕೆಲವು ಕಿಡಿಗೇಡಿಗಳು ‘ಬುಕ್ ಮೈ ಶೋ’ ರೀತಿಯ ವೇದಿಕೆಗಳನ್ನು ಬಳಸಿಕೊಳ್ಳುತ್ತಾರೆ. ಅದರಿಂದಾಗಿ ಸಿನಿಮಾಗಳಿಗೆ ಹೊಡೆತ ಬೀಳುತ್ತದೆ. ಅದೇ ರೀತಿ, ಕೆಲವರು ಅತಿಯಾಗಿ ಸಿನಿಮಾವನ್ನು ಹೊಗಳುತ್ತಾರೆ. ಹಣ ಪಡೆದು ಉತ್ತಮ ರೇಟಿಂಗ್ ನೀಡಲಾಗುತ್ತದೆ. ಇದರಿಂದ ಪ್ರೇಕ್ಷಕರಿಗೆ ಮೋಸ ಆದಂತೆ ಆಗುತ್ತದೆ. ಇಂಥ ಸಮಸ್ಯೆಗಳನ್ನು ತಪ್ಪಿಸಲು ವಿಮರ್ಶೆ ಮತ್ತು ರೇಟಿಂಗ್ ನೀಡುವ ಆಯ್ಕೆಯನ್ನೇ ಚಿತ್ರತಂಡಗಳು ತೆಗೆದು ಹಾಕುತ್ತಿವೆ.

ಇದನ್ನೂ ಓದಿ: ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ

ಅನಿಲ್ ರವಿಪುಡಿ ಅವರು ‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ‘ಶೈನ್ ಸ್ಕ್ರೀನ್ಸ್’ ಮತ್ತು ‘ಗೋಲ್ಡ್ ಬಾಕ್ಸ್ ಎಂಟರ್​ಟೇನ್ಮೆಂಟ್’ ಸಂಸ್ಥೆಗಳ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಚಿರಂಜೀವಿ ಜೊತೆಯಲ್ಲಿ ನಯನತಾರಾ, ದಗ್ಗುಬಾಟಿ ವೆಂಕಟೇಶ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ‘ದಿ ರಾಜಾ ಸಾಬ್’ ಸಿನಿಮಾಗೆ ‘ಮನ ಶಂಕರ ವರ ಪ್ರಸಾದ್ ಗಾರು’ ಚಿತ್ರ ಪೈಪೋಟಿ ನೀಡಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ಮನೆ ಹೊರಗೆ ಉದ್ಯಮಿ ಮೇಲೆ ಗುಂಡಿನ ದಾಳಿ – Kannada News | Gunshots at the Gate: Fear Returns to Bihar’s Streets ,Businessman Shot Outside Home in Patna

ಪಾಟ್ನಾ, ಜನವರಿ 11: ಬಿಹಾರದ ಉದ್ಯಮಿಯೊಬ್ಬರ ಮೇಲೆ ಮನೆಯ ಹೊರಗೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಉದ್ಯಮಿ ಮನೆಯ ಮುಂದೆ ಬೈಕ್​ನಲ್ಲಿ ಬಂದು ನಿಲ್ಲುತ್ತಾರೆ. ಅಷ್ಟರೊಳಗೆ ಆತನಿಗಾಗಿ ಕಾಯುತ್ತಿದ್ದ ದುಷ್ಕರ್ಮಿಗಳು ಆತನನ್ನು ಹಿಡಿದು ಥಳಿಸಿ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಸ್ಥಳೀಯರು ಕೂಡಲೇ ಓಡಿ ಬಂದು ಉದ್ಯಮಿಯನ್ನು ವಿಚಾರಿಸುತ್ತಿರುವುದು ವಿಡಿಯೋದಲ್ಲಿ ಕಾಣಬಹುದು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಸಿಕ್ಸರ್​ಗಳ ಸುರಿಮಳೆ… ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣ

Source link

ಕಾಫಿ ತೋಟದ ಕಾರ್ಮಿಕರನ್ನು ಅಟ್ಟಾಡಿಸಿದ ಗಜರಾಜ! – Kannada News | Hassan Elephant Attack: Coffee Workers Flee Lone Tusker in Bikkodu Plantation

ಹಾಸನ, ಜನವರಿ 11: ಜಿಲ್ಲೆ ಬೇಲೂರು ತಾಲ್ಲೂಕಿನ ಬಿಕ್ಕೋಡು ಸಮೀಪದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಕೊಡಗು ಭಾಗದಿಂದ ಬಂದಿರುವ ಒಂಟಿ ಸಲಗ ಕಾಫಿ ತೋಟದೊಳಗೆ ನುಗ್ಗಿ ಕಾರ್ಮಿಕರನ್ನು ಅಟ್ಟಾಡಿಸಿದೆ. ಕಾಡಾನೆ ಕಾಣುತ್ತಿದ್ದಂತೆ ಕಾರ್ಮಿಕರು ಕೂಗಾಡುತ್ತಾ ಜೀವ ಭಯದಿಂದ ಓಡಿದ್ದಾರೆ. ಮಹಿಳೆಯರು ಹಾಗೂ ಮಕ್ಕಳು ಘೀಳಿಡುತ್ತ ಮನೆಗಳತ್ತ ಓಡಿದ್ದು, ಸಲಗ ಮನೆ ಬಾಗಿಲವರೆಗೂ ಹಿಂಬಾಲಿಸಿದೆ. ಕೊನೆಗೆ ಕಾರ್ಮಿಕರು ಮನೆಗಳೊಳಗೆ ಪ್ರವೇಶಿಸಿ ಜೀವ ಉಳಿಸಿಕೊಂಡು ನಿಟ್ಟುಸಿರು ಬಿಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link

ವಿಜಯ ಹಝಾರೆ ಟೂರ್ನಿಯ ಕ್ವಾರ್ಟರ್ ಫೈನಲ್ ವೇಳಾಪಟ್ಟಿ ಪ್ರಕಟ – Kannada News | Vijay hazare trophy schedule quarter final schedule 2026

ವಿಜಯ ಹಝಾರೆ ಟೂರ್ನಿಯ ಮೊದಲ ಸುತ್ತಿನ ಪಂದ್ಯಗಳು ಮುಗಿದಿವೆ. 32 ತಂಡಗಳ ನಡುವಣ ಕದನದಲ್ಲಿ ದ್ವಿತೀಯ ಸುತ್ತಿಗೆ ಅರ್ಹತೆ ಪಡೆದಿರುವುದು 8 ತಂಡಗಳು. ಈ ಎಂಟು ತಂಡಗಳ ನಡುವೆ ಕ್ವಾರ್ಟರ್ ಫೈನಲ್ ಪಂದ್ಯಗಳು ನಡೆಯಲಿವೆ. ಈ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿವೆ…

Source link

Bengaluru Air Quality: ಅಂತೂ ಇಂತೂ ಸುಧಾರಿಸಿತು ರಾಜ್ಯದ ಏರ್ ಕ್ವಾಲಿಟಿ! – Kannada News | Bangalore Air Pollution Crisis: State’s Air Quality is getting slightly better compared to last month

ಅಂತೂ ಇಂತೂ ಸುಧಾರಿಸಿತು ರಾಜ್ಯದ ಏರ್ ಕ್ವಾಲಿಟಿ!

ಬೆಂಗಳೂರು, ಜನವರಿ 11: ಕಳೆದ ತಿಂಗಳಿಗೆ ಹೋಲಿಸಿದರೆ ಇಂದು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) ಮಧ್ಯಮ ಮಟ್ಟದಲ್ಲಿದ್ದು, ರಾಜ್ಯದ ವಿವಿಧೆಡೆ ಏರ್ ಕ್ವಾಲಿಟಿ ಸುಧಾರಿಸಿದಂತೆ ಕಾಣುತ್ತಿದೆ. ನಗರದಲ್ಲಿನ ವಾಹನಗಳ ಹೊಗೆ, ಧೂಳು ಮತ್ತು ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಗಮನಕ್ಕೆ ಬರುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಹಂತ ಹಂತವಾಗಿ ಸುಧಾರಿಸುತ್ತಿದೆಯಾ ಏರ್ ಕ್ವಾಲಿಟಿ?

ಬೆಂಗಳೂರಿನ ಗಾಳಿಯ ಗುಣಮಟ್ಟ 147 ಇದ್ದು, ಡಿಸೆಂಬರ್ ತಿಂಗಳಿಗೆ ಹೋಲಿಸಿದರೆ ಸ್ವಲ್ಪ ಸುಧಾರಣೆ ಕಂಡಿದೆ. ಕಳೆದ ತಿಂಗಳಿನಲ್ಲಿ ಒಮ್ಮೆ 200ರ ಗಡಿ ದಾಟಿದ್ದ ಏರ್ ಕ್ವಾಲಿಟಿ, ನಗರವಾಸಿಗಳಲ್ಲಿ ಆತಂಕ ಮೂಡಿಸಿತ್ತು. ಸಿಲ್ಕ್ ಬೋರ್ಡ್​, ವೈಟ್​ಫೀಲ್ಡ್ ಸೇರಿದಂತೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಹದಗೆಟ್ಟಿತ್ತು. ಇದೀಗ ವಾತಾವರಣ ಸಲ್ಪ ಸುಧಾರಣೆ ಕಂಡಿದ್ದರೂ, ಏರ್ ಕ್ವಾಲಿಟಿ ಅನಾರೋಗ್ಯಕಾರಿ ಹಂತದಲ್ಲೇ ಇದೆ. ಇದು ಹೀಗೆ ಮುಂದುವರೆದರೆ ಬೆಂಗಳೂರಿನ ಪರಿಸ್ಥಿತಿ ದೆಹಲಿಯಂತಾಗಬಹುದೆಂದು ತಜ್ಞರು ಎಚ್ಚರಿಸಿದ್ದಾರೆ.

ಇಂದು ಬೆಂಗಳೂರಿನ PM2.5 58 ಮತ್ತು PM10 77 ಇದೆ. PM10 ಎನ್ನುವುದು ನಮಗಿಂತ 7 ಪಟ್ಟು ತೆಳುವಾದ ಧೂಳಿನ ಕಣಗಳಾದರೆ, PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಆದರೆ ಬೆಂಗಳೂರಿನಲ್ಲಿಂದು ಈ ಸೂಕ್ಷ್ಮ ಕಣಗಳ ಪ್ರಮಾಣ ಕಡಿಮೆಯಿದ್ದು, ಉಸಿರಾಟಕ್ಕೆ ಯೋಗ್ಯವಲ್ಲದಿದ್ದರೂ ಮುಂಚಿನ ದಿನಗಳಷ್ಟು ಹಾನಿಕಾರಕವೇನಲ್ಲ.

ಸುರಕ್ಷತಾ ಕ್ರಮಗಳನ್ನು ಅನುಸರಿಸಿ

ಈ ಪರಿಸ್ಥಿತಿಯಲ್ಲಿ ಸುರಕ್ಷತೆ ಅತ್ಯಂತ ಮುಖ್ಯ. ಹೊರಗೆ ಹೋಗುವಾಗ ಮಾಸ್ಕ್ ಧರಿಸುವುದು ಉತ್ತಮ. ಸಾಧ್ಯವಾದರೆ ಬೆಳಿಗ್ಗೆ ಅಥವಾ ಸಂಜೆ ಪೀಕ್ ಟ್ರಾಫಿಕ್ ಸಮಯದಲ್ಲಿ ಹೊರಗೆ ಹೋಗುವುದನ್ನು ತಪ್ಪಿಸಬೇಕು. ಮನೆಯೊಳಗೆ ಗಿಡಗಳನ್ನು ಬೆಳೆಸುವುದು, ಸಾಕಷ್ಟು ನೀರು ಕುಡಿಯುವುದು ಮತ್ತು ಸ್ವಚ್ಛತೆ ಕಾಪಾಡುವುದು ಮಾಲಿನ್ಯದ ಪರಿಣಾಮವನ್ನು ಕಡಿಮೆ ಮಾಡಲು ಸಹಾಯಕವಾಗುತ್ತದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –147
  • ಮಂಗಳೂರು-96
  • ಮೈಸೂರು – 77
  • ಬೆಳಗಾವಿ – 98
  • ಕಲಬುರ್ಗಿ-107
  • ಶಿವಮೊಗ್ಗ – 130
  • ಬಳ್ಳಾರಿ – 76
  • ಹುಬ್ಬಳ್ಳಿ- 77
  • ಉಡುಪಿ –91
  • ವಿಜಯಪುರ –64

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Video: ಇದು ಜೀಪೋ ಜೇನು ಗೂಡೋ, 16 ಆಸನಗಳ ಜೀಪಿನಲ್ಲಿ 60 ಮಂದಿಯ ಪ್ರಯಾಣ – Kannada News | Rajasthan: Viral Video Shows 60 Passengers Risking Their Lives By Travelling In 16 Seater Jeep

ಬನ್ಸ್ವಾರಾ, ಜನವರಿ 11: ಹದಿನಾರು ಆಸನಗಳಿರುವ ಜೀಪಿನಲ್ಲಿ ಬರೋಬ್ಬರಿ ಎಂದರೆ 20 ಮಂದಿ ಪ್ರಯಾಣಿಸಬಹುದು ಆದರೆ ಬರೋಬ್ಬರಿ 60 ಮಂದಿ ಪ್ರಯಾಣಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ರಾಜಸ್ಥಾನದ ಬನ್ಸ್ವಾರಾ ಜಿಲ್ಲೆಯ ಆನಂದಪುರಿಯಲ್ಲಿ ಈ ಆಘಾತಕಾರಿ ವಿಡಿಯೋ ಚಿತ್ರೀಕರಿಸಲಾಗಿದೆ. 16 ಆಸನಗಳ ಜೀಪಿನಲ್ಲಿ ಸುಮಾರು 60 ಪ್ರಯಾಣಿಕರು ತುಂಬಿ ತುಳುಕುತ್ತಿರುವುದನ್ನು ಕಾಣಬಹುದು. ವಾಹನದೊಳಗಿನ ಎಲ್ಲಾ ಆಸನಗಳು ಭರ್ತಿಯಾಗಿದ್ದವು, ಆದರೆ ಹಲವಾರು ಪ್ರಯಾಣಿಕರು ಹೊರಗೆ ಬಾನೆಟ್, ಛಾವಣಿ ಸಾಲನೆ ಚಾಲಕನ ಬಾಗಿಲಿನ ಮೇಲೂ ನೇತಾಡುತ್ತಿರುವುದನ್ನು ಕಾಣಬಹುದು. ಈ ಅಪಾಯಕಾರಿ ಪ್ರಯಾಣದಲ್ಲಿ ವೃದ್ಧರು, ಮಹಿಳೆಯರು ಮತ್ತು ಚಿಕ್ಕ ಮಕ್ಕಳು ಕೂಡಾ ಇರುವುದು ಆತಂಕ ಮೂಡಿಸಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕೊಡಗು ಜಿಲ್ಲೆಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಇಳಿಕೆ: ಕಾರಣ ಇಲ್ಲಿದೆ – Kannada News | Coorg Sees a Drop in Tourist Numbers from 20 Lakh to 18 Lakh in 2025

ಮಡಿಕೇರಿ, ಜನವರಿ 11: ಕರ್ನಾಟಕದ ಕಾಶ್ಮೀರ ಎಂದೇ ಕರೆಸಿಕೊಳ್ಳುವ ಕೊಡಗು ಪ್ರವಾಸಿಗರ ನೆಚ್ಚಿನ ತಾಣ. ಚಳಿಗಾಲ ಬಂತಂದ್ರೆ ಸಾಕು ರಾಜ್ಯದ ಮಾತ್ರವಲ್ಲದೆ ದೇಶ-ವಿದೇಶಗಳ ಪ್ರವಾಸಿಗರೂ ಇಲ್ಲಿಗೆ ಭೇಟಿ ನೀಡ್ತಾರೆ. ಪ್ರಕೃತಿ ಸೌಂದರ್ಯದ ಜೊತೆ ಇಲ್ಲಿನ ಚಳಿಯ ವಾತಾವರಣವನ್ನು ಎಂಜಾಯ್​​ ಮಾಡ್ತಾರೆ. ಸಾಲು ಸಾಲು ರಜೆಯ ಸಮಯದಲ್ಲಂತೂ ಜಿಲ್ಲೆಯಲ್ಲಿ ಜನ ಜಂಗುಳಿಯೇ ಕಾಣಸಿಗುತ್ತೆ. ಆದ್ರೆ 2025 ಕೊಡಗು ಜಿಲ್ಲೆಯ ಪ್ರವಾಸೋದ್ಯಮಕ್ಕೆ ಲಾಭಕ್ಕಿಂತ ನಷ್ಟವನ್ನೇ ಹೆಚ್ಚಾಗಿ ತಂದಿದೆಯಂತೆ.

ಬೆಟ್ಟಗುಡ್ಡಗಳು, ಪ್ರಕೃತಿ ಸೌಂದರ್ಯ, ನದಿ ತೊರೆಗಳು, ಕೂಲ್ ಕೂಲ್ ವಾತಾವರಣ ಕಾರಣಕ್ಕೆ ಫೇಮಸ್​​ ಆಗಿರೋ ಕೊಡಗಿಗೆ ಪ್ರತಿವರ್ಷ ಕನಿಷ್ಠ 20 ಲಕ್ಷ ಪ್ರವಾಸಿಗರು ಭೇಟಿ ನೀಡ್ತಾರೆ. ಆದ್ರೆ ಈ ಕಳೆದ 2-3 ವರ್ಷಗಳಿಂದ ಜಿಲ್ಲೆಯಲ್ಲಿ ಸೀಸನಲ್ ಟೂರಿಸಂ ಎನ್ನುವ ಕಲ್ಪನೆಯೇ ಮಾಯವಾಗಿದೆ. 2025ರಲ್ಲಿ ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯಲ್ಲಿ ಸುಮಾರು 2 ಲಕ್ಷ ಇಳಿಕೆಯಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಅಂಕಿ-ಅಂಶ ಮಾಹಿತಿ ನೀಡಿದ್ದು, ವಾರ್ಷಿಕವಾಗಿ ಪ್ರವಾಸಿಗರ ಸಂಖ್ಯೆ 18 ಲಕ್ಷವನ್ನು ದಾಟಿಲ್ಲ ಎನ್ನಲಾಗಿದೆ. ಮಡಿಕೇರಿಯಲ್ಲಿ ನಿರ್ಮಿಸಲಾಗಿರೋ ಕೂರ್ಗ್ ವಿಲೇಜ್, ನೆಹರು ಮಂಠಪದಂತಹ ತಾಣಗಳುಕೂಡ ಪ್ರವಾಸಿಗರ ಆಕರ್ಷಿಸುವಲ್ಲಿ ವಿಫಲವಾಗಿವೆ ಎನ್ನಾಗಿದೆ.

ಇದನ್ನೂ ಓದಿ: ಗ್ರಾಮ ಸಮಿತಿಯ ಮಾತು ಕೇಳದಿದ್ದಕ್ಕೆ ಎರಡು ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ?

ನಿರಂತರ ಸರ್ಕಾರಿ ರಜೆಗಳಿದ್ದಾಗ ಜಿಲ್ಲೆಯ ಹೋಮ್​ ಸ್ಟೇ, ರೆಸಾರ್ಟ್​ಗಳು ಬುಕಿಂಗ್ ಆಗಿರುತ್ತವೆ. ಆದ್ರೆ ಕಳೆದ ವರ್ಷ ಮೇ ತಿಂಗಳಲ್ಲಿ ಶುರುವಾಗಿದ್ದ ಮಳೆ ಬಹುತೇಕ ನವೆಂಬರ್ ಅಂತ್ಯದವರೆಗೂ ಸುರಿದಿದೆ. ಇದೂ ಕೂಡ ಪ್ರವಾಸಿಗರು ಜಿಲ್ಲೆಗೆ ಆಗಮಿಸಲು ಹಿಂದೇಟು ಹಾಕಲು ಪ್ರಮುಖ ಕಾರಣ ಎನ್ನಲಾಗುತ್ತಿದೆ. ಇದರ ಹಿಂದಿನ ವರ್ಷ ಸಂಭವಿಸಿದ ವಯನಾಡು ದುರಂತ ಕೂಡ ಕೊಡಗು ಜಿಲ್ಲೆಗೆ ಮಳೆಗಾಲದಲ್ಲಿ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯ ಮೇಲೆ ಪರಿಣಾಮ ಬೀರಿತ್ತು. ಹೀಗಾಗಿ 2026ರಲ್ಲಾದರೂ ಜಿಲ್ಲೆಯ ಪ್ರವಾಸೋದ್ಯಮ ತಮ್ಮ ಕೈಹಿಡಿಯಬಹುದು ಎಂದು ಇದೇ ಉದ್ಯಮವನ್ನು ನಂಬಿಕೊಂಡ ಸಾವಿರಾರು ಕುಟುಂಬಗಳು ಕನಸು ಕಂಡಿವೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

IND vs NZ: ಟೀಮ್ ಇಂಡಿಯಾದ ಮೂವರು ಆಟಗಾರರು ಅಲಭ್ಯ – Kannada News | IND vs NZ: who misses out from India’s ODI squad?

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿಯು ಇಂದಿನಿಂದ ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್​​ನಲ್ಲಿ ರಾಜ್​ಕೋಟ್​​ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಮೂವರು ಆಟಗಾರರು ಕಾಣಿಸಿಕೊಳ್ಳುವುದಿಲ್ಲ.

ಅಂದರೆ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಂಡಿದ್ದ ಮೂವರು ಆಟಗಾರರು ಈ ಬಾರಿ ತಂಡದಲ್ಲಿ ಸ್ಥಾನ ಪಡೆದಿಲ್ಲ. ಅದರಲ್ಲೂ ಕೊನೆಯ ಪಂದ್ಯದಲ್ಲಿ ಶತಕ ಸಿಡಿಸಿದ್ದ ಆಟಗಾರನನ್ನು 15 ಸದಸ್ಯರುಗಳ ತಂಡದಿಂದ ಕೈ ಬಿಡಲಾಗಿದೆ. ಅದರಂತೆ ನ್ಯೂಝಿಲೆಂಡ್ ವಿರುದ್ಧದ ಸರಣಿಗೆ ಅಲಭ್ಯರಾಗಿರುವ ಮೂವರು ಆಟಗಾರರ ಪಟ್ಟಿ ಈ ಕೆಳಗಿನಂತಿದೆ…

ಧ್ರುವ್ ಜುರೆಲ್: ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಎರಡನೇ ವಿಕೆಟ್ ಕೀಪರ್ ಆಗಿ ಧ್ರುವ್ ಜುರೆಲ್ ಕಾಣಿಸಿಕೊಂಡಿದ್ದರು. ಇದಾಗ್ಯೂ ಅವರಿಗೆ ಆಡುವ ಬಳಗದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಆದರೆ ಈ ಬಾರಿ ಅವರನ್ನು 15 ಸದಸ್ಯರುಗಳ ಬಳಗದಿಂದಲೇ ಕೈ ಬಿಡಲಾಗಿದೆ.

ತಿಲಕ್ ವರ್ಮಾ: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಸರಣಿಯಲ್ಲಿ ಕಾಣಿಸಿಕೊಂಡಿದ್ದ ತಿಲಕ್ ವರ್ಮಾ ಅವರನ್ನು ಸಹ ಈ ಬಾರಿ ತಂಡದಿಂದ ಕೈ ಬಿಡಲಾಗಿದೆ. ಏಕೆಂದರೆ ಕಳೆದ ಸರಣಿಯಲ್ಲಿ ಶುಭ್​​ಮನ್ ಗಿಲ್ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ತಿಲಕ್ ವರ್ಮಾಗೆ ಅವಕಾಶ ನೀಡಲಾಗಿತ್ತು.

ರುತುರಾಜ್ ಗಾಯಕ್ವಾಡ್: ಸೌತ್ ಆಫ್ರಿಕಾ ವಿರುದ್ಧದ 2ನೇ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ 105 ರನ್​ಗಳ ಭರ್ಜರಿ ಇನಿಂಗ್ಸ್ ಆಡಿದ್ದರು. ಆದರೆ ಈ ಬಾರಿ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಬದಲಾಗಿ ಗಾಯದಿಂದ ಚೇತರಿಸಿಕೊಂಡಿರುವ ಶ್ರೇಯಸ್ ಅಯ್ಯರ್ ಅವರನ್ನು ಆಯ್ಕೆ ಮಾಡಲಾಗಿದೆ.

ಭಾರತ ಏಕದಿನ ತಂಡ : ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ರಿಷಭ್ ಪಂತ್, ನಿತೀಶ್ ಕುಮಾರ್ ರೆಡ್ಡಿ, ಯಶಸ್ವಿ ಜೈಸ್ವಾಲ್.

Published On – 7:23 am, Sun, 11 January 26

Source link

ಚಿತ್ರಮಂದಿರಕ್ಕೆ ಬೆಂಕಿ ಇಟ್ಟ ಪ್ರಭಾಸ್ ಫ್ಯಾನ್ಸ್; ‘ದಿ ರಾಜಾ ಸಾಬ್’ ನೋಡುವಾಗ ಘಟನೆ – Kannada News | Fire inside theatre during Prabhas starrer The Raja Saab movie screening

ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಜನವರಿ 9ರಂದು ಬಿಡುಗಡೆ ಆಯಿತು. ಪ್ರಭಾಸ್ (Prabhas) ಅವರ ಅಭಿಮಾನಿಗಳು ಈ ಸಿನಿಮಾವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಎಲ್ಲ ಚಿತ್ರಮಂದಿರಗಳಲ್ಲಿ ಸಂಭ್ರಮಾಚರಣೆ ಜೋರಾಗಿದೆ. ಆದರೆ ಕೆಲವರು ಸಂಭ್ರಮದ ವೇಳೆ ಮೈಮರೆತಿದ್ದಾರೆ. ‘ದಿ ರಾಜಾ ಸಾಬ್’ (The Raja Saab) ಸಿನಿಮಾ ಪ್ರದರ್ಶನ ಆಗುತ್ತಿದ್ದ ಚಿತ್ರಮಂದಿರದ ಒಳಗೆ ಪಟಾಕಿ ಸಿಡಿಸಲಾಗಿದೆ. ಆರತಿ ಬೆಳಗಲಾಗಿದೆ. ಇದರಿಂದಾಗಿ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್, ದೊಡ್ಡ ಅನಾಹುತ ಆಗುವುದು ತಪ್ಪಿದೆ.

ಇದು ಪ್ರಭಾಸ್ ನಟಿಸಿರುವ ಮೊದಲ ಹಾರರ್ ಸಿನಿಮಾ. ಆ ಕಾರಣದಿಂದ ಈ ಚಿತ್ರದ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಮಾರುತಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಪ್ರಭಾಸ್ ಅವರು ಬೇರೆ ಬೇರೆ ಗೆಟಪ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಎಂಟ್ರಿ ಸೀನ್ ನೋಡಿ ಖುಷಿಯಾದ ಪ್ರೇಕ್ಷಕರು ಚಿತ್ರಮಂದಿರದ ಒಳಗೆ ಪಟಾಕಿ ಹೊಡೆದಿದ್ದಾರೆ.

ಅಂದಹಾಗೆ, ಈ ಘಟನೆ ನಡೆದಿರುವುದು ಆಂಧ್ರದಲ್ಲೋ ಅಥವಾ ತೆಲಂಗಾಣದಲ್ಲೋ ಅಲ್ಲ. ಬದಲಿಗೆ, ಒಡಿಸ್ಸಾದಲ್ಲಿ! ಪ್ರಭಾಸ್ ಅವರು ಫ್ಯಾನ್ ಇಂಡಿಯಾ ಸ್ಟಾರ್. ಅವರಿಗೆ ಎಲ್ಲ ಕಡೆಗಳಲ್ಲಿ ಅಭಿಮಾನಿಗಳು ಇದ್ದಾರೆ. ಒಡಿಸ್ಸಾದ ರಾಯಗಡದಲ್ಲಿ ಇರುವ ‘ಅಶೋಕ ಟಾಕೀಸ್’ನಲ್ಲಿ ಅಭಿಮಾನಿಗಳು ಆರತಿ ಬೆಳಗಿದ್ದಾರೆ. ಪಟಾಕಿ ಹಚ್ಚಿದ್ದಾರೆ. ಇದರಿಂದ ಚಿತ್ರಮಂದಿರದ ಪರದೆ ಬಳಿ ಬೆಂಕಿ ಹೊತ್ತಿಕೊಂಡಿದೆ.

ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ದೊಡ್ಡ ಅನಾಹುತಿ ತಪ್ಪಿದೆ ಎಂದು ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಅದೇ ರೀತಿ ಬೇರೆ ಚಿತ್ರಮಂದಿರಗಳಲ್ಲಿ ಪ್ರಭಾಸ್ ಅವರ ಅಭಿಮಾನಿಗಳು ಮೊಸಳೆಯ ಪ್ರತಿಕೃತಿಯನ್ನು ಹಿಡಿದು ಬಂದಿದ್ದಾರೆ. ಈ ಸಿನಿಮಾದಲ್ಲಿ ಪ್ರಭಾಸ್ ಅವರು ಮೊಸಳೆ ಜೊತೆ ಫೈಟ್ ಮಾಡುವ ದೃಶ್ಯವಿದೆ. ಅದರಿಂದ ಪ್ರೇರೇಪಿತರಾದ ಅಭಿಮಾನಿಗಳು ಚಿತ್ರಮಂದಿರಕ್ಕೆ ಮೊಸಳೆ ಹೊತ್ತು ತಂದಿದ್ದಾರೆ.

ಇದನ್ನೂ ಓದಿ: ‘ದಿ ರಾಜಾ ಸಾಬ್’ ಪ್ರೀಮಿಯರ್ ಶೋ: ಚಿತ್ರಮಂದಿರದಲ್ಲಿ ಪ್ರಭಾಸ್ ಫ್ಯಾನ್ಸ್ ಗಲಾಟೆ

‘ದಿ ರಾಜಾ ಸಾಬ್’ ಸಿನಿಮಾ ವಿಶ್ರ ಪ್ರತಿಕ್ರಿಯೆ ಪಡೆದಿದೆ. ನಿರೀಕ್ಷಿತ ಮಟ್ಟಕ್ಕಿಂತ ಕಡಿಮೆ ಕಲೆಕ್ಷನ್ ಆಗುತ್ತಿದೆ. ಪ್ರಭಾಸ್, ಸಂಜಯ್ ದತ್, ನಿಧಿ ಅಗರ್​ವಾಲ್, ಬೋಮನ್ ಇರಾನಿ, ಮಾಳವಿಕಾ ಮೋಹನನ್, ರಿದ್ಧಿ ಕುಮಾರ್ ಮುಂತಾದ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link