ಇಂದು ಮಹಿಳಾ ಪ್ರೀಮಿಯರ್ ಲೀಗ್ನ ಮೊದಲ ಡಬಲ್ ಹೆಡರ್ ಪಂದ್ಯ. ದಿನದ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸುತ್ತಿದೆ. ಆರ್ಸಿಬಿ ವಿರುದ್ಧದ ಆರಂಭಿಕ ಸೋಲಿನ ನಂತರ ಹರ್ಮನ್ಪ್ರೀತ್ ಕೌರ್ ನೇತೃತ್ವದ ಮುಂಬೈ ತಂಡವು ಮತ್ತೆ ಗೆಲುವಿನ ಲಯಕ್ಕೆ ಮರಳಲು ಪ್ರಯತ್ನಿಸುತ್ತಿದೆ. ಏತನ್ಮಧ್ಯೆ, ಡೆಲ್ಲಿ ಕೂಡ ಗೆಲುವಿನೊಂದಿಗೆ ಲೀಗ್ ಆರಂಭಿಸಲು ನೋಡುತ್ತಿದೆ. ಟಾಸ್ ಗೆದ್ದ ಡೆಲ್ಲಿ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ.
ಬೆಂಗಳೂರು, ಜನವರಿ 10: ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿ ಜನವರಿ 17ರಂದು ಬಳ್ಳಾರಿಯಲ್ಲಿ ಬೃಹತ್ ಹೋರಾಟಕ್ಕೆ ಮುಂದಾಗಿದೆ. ಗಲಭೆ ಮತ್ತು ಅದರ ನಂತರದ ಬೆಳವಣಿಗೆಗಳನ್ನು ವಿರೋಧಿಸಿ ಬಿಜೆಪಿ ಪಾದಯಾತ್ರೆ ನಡೆಸಲು ನಿರ್ಧರಿಸಿದೆ ಎಂದು ಬಿಜೆಪಿ ಶಾಸಕ ಜನಾರ್ಧನ ರೆಡ್ಡಿ ಘೋಷಿಸಿದ್ದಾರೆ. ಪಾದಯಾತ್ರೆ ಜೊತೆಗೆ ಸಮಾವೇಶ ಮಾಡುವ ಚಿಂತನೆ ನಡೆದಿದ್ದು, ಈ ಕುರಿತು ಪಕ್ಷದ ಅಧ್ಯಕ್ಷರ ಜೊತೆ ಚರ್ಚಿಸಿದ್ದೇನೆ. 2 ದಿನದಲ್ಲಿ ಹೋರಾಟದ ರೂಪರೇಷೆ ಅಂತಿಮವಾಗುತ್ತೆ ಎಂದು ಹೇಳಿದ್ದಾರೆ.
ಅಯೋಧ್ಯೆ, ಜನವರಿ 10: ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ರಾಮ ಮಂದಿರದ (Ram Temple) ಸುತ್ತ 15 ಕಿಮೀ ವ್ಯಾಪ್ತಿಯಲ್ಲಿ ಆಲ್ಕೋಹಾಲ್, ಮಾಂಸಾಹಾರ ಪದಾರ್ಥಗಳ ಮಾರಾಟವನ್ನು ನಿಷೇಧಿಸಿದೆ. ‘ಪಂಚಕೋಸಿ ಪರಿಕ್ರಮ’ದ ಅಡಿಯಲ್ಲಿ ಗುರುತಿಸಲಾದ ಪ್ರದೇಶಗಳಲ್ಲಿ ಮಾಂಸಾಹಾರವನ್ನು ಪೂರೈಸುವ ಆನ್ಲೈನ್ ಫುಡ್ ಡೆಲಿವರಿ ಪ್ಲಾಟ್ಫಾರ್ಮ್ಗಳ ಬಗ್ಗೆ ಪದೇ ಪದೇ ದೂರುಗಳು ಬಂದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ಅಯೋಧ್ಯೆಯಲ್ಲಿರುವ ಕೆಲವು ಹೋಟೆಲ್ಗಳು ಮತ್ತು ಹೋಂಸ್ಟೇಗಳು ಅತಿಥಿಗಳಿಗೆ ಮಾಂಸಾಹಾರಿ ಆಹಾರ ಮತ್ತು ಆಲ್ಕೋಹಾಲ್ ನೀಡುತ್ತಿವೆ. ಇದನ್ನು ತಕ್ಷಣ ನಿಲ್ಲಿಸಬೇಕೆಂದು ಅಧಿಕಾರಿಗಳು ಹೋಟೆಲ್ಗಳಿಗೆ ಮತ್ತು ಹೋಂಸ್ಟೇಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಅಯೋಧ್ಯೆ ಮತ್ತು ಫೈಜಾಬಾದ್ ಅನ್ನು ಸಂಪರ್ಕಿಸುವ ಮಾರ್ಗವಾದ 14 ಕಿ.ಮೀ. ರಾಮ್ ಪಥ್ನಲ್ಲಿ ಮದ್ಯ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಲು ಅಯೋಧ್ಯೆ ಪುರಸಭೆಯು ಮೇ 2025ರಲ್ಲಿಯೇ ನಿರ್ಧಾರ ತೆಗೆದುಕೊಂಡಿದ್ದರೂ, ಈ 9 ತಿಂಗಳಲ್ಲಿ ಮದ್ಯ ಮಾರಾಟದ ಮೇಲಿನ ನಿಷೇಧವನ್ನು ಸರಿಯಾಗಿ ಜಾರಿಗೆ ತರಲಾಗಿರಲಿಲ್ಲ. ಈ ಬಗ್ಗೆ ಸ್ಥಳೀಯರು ದೂರು ನೀಡಿದ ಬಳಿಕ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.
ನಿಷೇಧದ ಹೊರತಾಗಿಯೂ ಆನ್ಲೈನ್ ಪ್ಲಾಟ್ಫಾರ್ಮ್ಗಳ ಮೂಲಕ ಪ್ರವಾಸಿಗರಿಗೆ ಮಾಂಸಾಹಾರಿ ಆಹಾರ ಪದಾರ್ಥಗಳನ್ನು ತಲುಪಿಸಲಾಗುತ್ತಿದೆ ಎಂಬ ದೂರುಗಳು ಬಂದಿವೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. “ದೂರುಗಳ ನಂತರ ಆನ್ಲೈನ್ ಮೂಲಕವೂ ಮಾಂಸಾಹಾರ ಪದಾರ್ಥಗಳ ಡೆಲಿವರಿ ಮೇಲೆ ನಿಷೇಧ ಹೇರಲಾಗಿದೆ. ಎಲ್ಲಾ ಹೋಟೆಲ್ಗಳು, ಅಂಗಡಿಯವರು ಮತ್ತು ವಿತರಣಾ ಕಂಪನಿಗಳಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ” ಎಂದು ಅವರು ಹೇಳಿದ್ದಾರೆ.
ಹೋಟೆಲ್ಗಳು ಮತ್ತು ಅಂಗಡಿಗಳಲ್ಲಿ ಮಾಂಸಾಹಾರಿ ಆಹಾರ ಮಾರಾಟದ ಮೇಲಿನ ನಿಷೇಧವನ್ನು ಮೊದಲೇ ಘೋಷಿಸಲಾಗಿತ್ತು. ಆದರೂ ಆನ್ಲೈನ್ನಲ್ಲಿ ಮಾಂಸಾಹಾರಿ ಆಹಾರವನ್ನು ಆರ್ಡರ್ ಮಾಡುವುದರ ಮೇಲೆ ಯಾವುದೇ ಪೂರ್ವ ನಿಷೇಧವಿರಲಿಲ್ಲ. ಹಲವಾರು ಪ್ರವಾಸಿಗರು ಆನ್ಲೈನ್ ಅರ್ಜಿಗಳ ಮೂಲಕ ಆಹಾರವನ್ನು ಆರ್ಡರ್ ಮಾಡುತ್ತಿದ್ದಾರೆ ಸ್ಥಳೀಯರಿಂದ ಹಲವಾರು ದೂರುಗಳು ಬಂದಿತ್ತು. ಇದು ಜನರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಆರೋಪಿಸಲಾಗಿದೆ. ಈ ದೂರುಗಳನ್ನು ಗಣನೆಗೆ ತೆಗೆದುಕೊಂಡು ಉತ್ತರ ಪ್ರದೇಶ ಸರ್ಕಾರವು ಆನ್ಲೈನ್ ಪ್ಲಾಟ್ಫಾರ್ಮ್ಗಳಿಗೂ ನಿಷೇಧವನ್ನು ವಿಸ್ತರಿಸಲು ನಿರ್ಧರಿಸಿದೆ. ಈ ನಿರ್ಧಾರವನ್ನು ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, ಜ.10: ಪ್ರೀತಿಯನ್ನು ಒತ್ತಾಯದಿಂದ ಮಾಡಬಾರದು. ಬಲವಂತವಾಗಿ ಮಾಡುವ ಪ್ರೀತಿಯೂ ಯಾವತ್ತೂ ಶಾಶ್ವತವಾಗಿರುವುದಿಲ್ಲ. ಇತ್ತೀಚಿನ ದಿನಗಳಲ್ಲಿ ಬಲವಂತವಾಗಿ ಪ್ರೀತಿ ಮಾಡುವಂತೆ ಒತ್ತಾಯಿಸಿ ಕೊಲೆ ಮಾಡಿರುವ ಪ್ರಕರಣಗಳು ಹೆಚ್ಚಾಗಿದೆ. ಇದೀಗ ಅಂತಹದೇ ಘಟನೆಯೊಂದು ನಡೆದಿದೆ. ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಯುವತಿಯನ್ನು ಕೊಲೆ ಮಾಡಲು ಸ್ಕೆಚ್ ಹಾಕಿರುವ ಘಟನೆ ನೆಲಮಂಗಲ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಈ ಯುವಕಯುವತಿ ಕೊಲ್ಲಲು ಆನ್ಲೈನ್ ಮೂಲಕ ಗನ್ ಖರೀದಿಸಿದ್ದ ಎಂದು ಹೇಳಲಾಗಿದೆ. ಯುವತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಮಲ್ಲಾಪುರದ್ದವಳು ಎಂದು ಹೇಳಲಾಗಿದೆ. ಈ ವಿಷಯ ತಿಳಿದು ಯುವತಿ 112ಗೆ ಕರೆ ಮಾಡಿ ಮಾಹಿತಿ ನೀಡಿದ್ದಾಳೆ. ಇನ್ನು ಯುವಕ ಗನ್ ಹಿಡಿದು ಓಡಾಡುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಪೊಲೀಸರು ಸಿಸಿಟಿವಿ ವಿಡಿಯೋವನ್ನು ನೋಡಿ ತನಿಖೆ ನಡೆಸಿದ್ದಾರೆ. ಈ ವೇಳೆ ಹಾಡಹಗಲೇ ಗನ್ ಹಿಡಿದು ಓಡಾಡಿದ ಯುವಕ ಗೊತ್ತಾಗಿದೆ. ಪ್ರೀತಿಗೆ ತಿರಸ್ಕಾರ ಮಾಡಿದಕ್ಕೆ ಯುವತಿಯನ್ನು ಕೊಲೆ ಮಾಡಲು ಸ್ಕೆಚ್ ಹಾಕಿದ್ದ ಎಂದು ಹೇಳಲಾಗಿದೆ. ಬಿಹಾರ ಮೂಲಕ ಯುವಕ ಎಂದು ಹೇಳಲಾಗಿದೆ. ಯುವತಿ ನೀಡಿದ ಮಾಹಿತಿ ಪ್ರಕಾರ ಎಲ್ಲ ಕಡೆ ಯುವಕನಿಗಾಗಿ ಹುಡುಕಾಟ ನಡೆಸಿದ್ದರೆ. ಇದೀಗ ಗನ್ ಸಮೇತ ಬಿಹಾರ ಮೂಲದ ಆರೋಪಿ ವಶಕ್ಕೆ ಪಡೆಯಲಾಗಿದೆ. ಅರ್ಪನಾ ಚೆಟ್ಟೀರ್ನ್ನು ಶುಭಂ ಎಂಬ 28 ವಯಸ್ಸಿನ ಬಿಹಾರದ ಮೂಲದ ಯುವಕ ಮೂರು ವರ್ಷದಿಂದ ಪ್ರೀತಿ ಮಾಡುತ್ತಿದ್ದ, ಆದರೆ ಈ ಪ್ರೀತಿಯನ್ನು ಅರ್ಪನಾ ಒಪ್ಪಿಲ್ಲ. ರೋಸ್ ರಾಯಲ್ ಆಸ್ಪತ್ರೆಯಲ್ಲಿ ನರ್ಸಿಂಗ್ ಮಾಡುತ್ತಿದ್ದ ಅರ್ಪನಾಗೆ ಪ್ರತಿದಿನ ಪ್ರೀತಿಸು ಎಂದು ಕಿರುಕುಳ ನೀಡುತ್ತಿದ್ದ, ಆದರೆ ಇದಕ್ಕೆ ಅರ್ಪನಾ ಒಪ್ಪಿಲ್ಲ. ಈ ಯುವಕ ಬೆಂಗಳೂರಿನಲ್ಲಿ ಪೀಜಾ ಡಿಲಿವೆರಿ ಬಾಯ್ ಕೆಲಸ ಮಾಡುತ್ತಿದ್ದ, ಪ್ರೀತಿ ಮಾಡದೇ ಇದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ, ಈ ಹಿನ್ನೆಲೆ ಪೊಲೀಸರಿಗೆ ಕರೆ ಮಾಡಿ ದೂರು ನೀಡಿದ್ದಾಳೆ. ತಕ್ಷಣ ಹುಡುಗಿಯ ದೂರಿಗೆ ಪೊಲೀಸರು ಪ್ರತಿಕ್ರಿಯೆ ನೀಡಿದ್ದಾರೆ. ಇದೀಗ ಪೊಲೀಸರ ಆತನನ್ನು ಬಂಧಿಸಿದ್ದಾರೆ.
ಬಾಗಲಕೋಟೆ, ಜನವರಿ 10: ಟ್ರ್ಯಾಕ್ಟರ್ ಪಲ್ಟಿ (Tractor Accident) ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ತಾಯಿ ಕೂಡ ಸಾವನ್ನಪ್ಪಿರುವಂತಹ (death)ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಬಳಿ ನಡೆದಿದೆ. ತಾಯಿ ರುಕ್ಮಿಣಿ ಬಾಯಿ ನಾಯಕ್(36), ಶಿವಾನಿ ನಾಯಕ್(6) ಮತ್ತು 4 ವರ್ಷದ ರೋಷನ್ ನಾಯಕ್ ಮೃತ ದುರ್ದೈವಿಗಳು. ಸದ್ಯ ಸ್ಥಳಕ್ಕೆ ಅಮೀನ್ಗಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ನಡೆದದ್ದೇನು?
ಕಬ್ಬು ಕಟಾವು ಮಾಡುವ ಐವರು ಕಾರ್ಮಿಕರು ಟ್ರ್ಯಾಕ್ಟರ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಕಮತಗಿ ಬಳಿ ಹುಕ್ ಕಟ್ ಆಗಿ ಟ್ರ್ಯಾಕ್ಟರ್ ಪಲ್ಟಿ ಹೊಡೆದು ದುರಂತ ಸಂಭವಿಸಿದೆ. ಮೃತಪಟ್ಟ ದುರ್ದೈವಿಗಳು ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಾಂಡಾ ನಿವಾಸಿಗಳು.
ಲಾರಿ ಡಿಕ್ಕಿ: ಕಾರು ಚಾಲಕ ಸ್ಥಳದಲ್ಲೇ ದುರ್ಮರಣ; ನಾಲ್ವರಿಗೆ ಗಂಭೀರ ಗಾಯ
ಲಾರಿ ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬ್ಯಾಡರಹಳ್ಳಿ ಗೇಟ್ ಬಳಿ ನಡೆದಿದೆ. ಕಾರು ಚಾಲಕ ಸೈಮನ್ ಸಾವನ್ನಪ್ಪಿದ್ದು, ಶಕೀಲಾ, ಹ್ಯಾಲಿಸನ್, ಲಿಯೋ, ಇಲಿಯಾಸ್ ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಬೆಂಗಳೂರಿನಿಂದ ದಾಬಸ್ಪೇಟೆಗೆ ಕಾರಿನಲ್ಲಿ ತೆರಳುತ್ತಿದ್ದರು. ಲಾರಿ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಬೈಕ್ ಅಪಘಾತ: ಸವಾರ ಸಾವು
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾವಿನಕಟ್ಟೆಯಲ್ಲಿ ಬೈಕ್ ಅಪಘಾತದಲ್ಲಿ ಸವಾರ ಚೇತನ್ ಮೊಗವೀರ(24) ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ತಮ್ಮ ನಿವಾಸಕ್ಕೆ ತೆರಳುತ್ತಿರುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.
ವಾಸ್ತು ಶಾಸ್ತ್ರವು ಒಂದು ಪ್ರಾಚೀನ ವಿಜ್ಞಾನ. ನಿಮ್ಮ ಮನೆಯಲ್ಲಿ ಯಾವುದೇ ವಾಸ್ತು ದೋಷಗಳಿವೆಯೇ ಎಂದು ನಿರ್ಧರಿಸಲು ಬಳಸಬಹುದಾದ ಕೆಲವು ಚಿಹ್ನೆಗಳನ್ನು ವಾಸ್ತು ಶಾಸ್ತ್ರವು ವಿವರಿಸುತ್ತದೆ. ನಿಮ್ಮ ಮನೆಯಲ್ಲಿ ಈ ಲಕ್ಷಣಗಳು ಕಂಡುಬಂದರೆ, ಅವುಗಳನ್ನು ನಿರ್ಲಕ್ಷಿಸಬೇಡಿ ಮತ್ತು ಅವುಗಳನ್ನು ಸರಿಪಡಿಸಲು ಕ್ರಮಗಳನ್ನು ತೆಗೆದುಕೊಳ್ಳಿ.
ಮನೆಯಲ್ಲಿ ವಾಸ್ತು ದೋಷ:
ಕಠಿಣ ಪರಿಶ್ರಮದ ಹೊರತಾಗಿಯೂ ಯಶಸ್ಸಿನ ಕೊರತೆ, ಯಾವಾಗಲೂ ಸಮಸ್ಯೆ ವಾಸ್ತು ದೋಷದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಮನೆಯಲ್ಲಿ ನಿರಂತರ ಆರೋಗ್ಯ ಮತ್ತು ಆರ್ಥಿಕ ಸಮಸ್ಯೆಗಳು ಸಹ ವಾಸ್ತು ದೋಷದ ಸಂಕೇತಗಳಾಗಿವೆ. ಇದಲ್ಲದೇ ಮನೆಯ ಈಶಾನ್ಯ ಮೂಲೆಯಲ್ಲಿರುವ ಶೌಚಾಲಯವು ವಾಸ್ತು ದೋಷಕ್ಕೆ ಕಾರಣವಾಗಬಹುದು. ನೈಸರ್ಗಿಕ ಬೆಳಕಿನ ಕೊರತೆಯಿರುವ ಮನೆಯ ಮೂಲೆಗಳಲ್ಲಿ ನಕಾರಾತ್ಮಕ ಶಕ್ತಿಯು ವಾಸಿಸಬಹುದು, ಇದು ವಾಸ್ತು ದೋಷಗಳಿಗೆ ಕಾರಣವಾಗಬಹುದು. ಇದಲ್ಲದೆ, ಮನೆಯ ಸುತ್ತಲೂ ಮತ್ತು ಮುಖ್ಯ ದ್ವಾರದಲ್ಲಿ ಅಸ್ತವ್ಯಸ್ತವಾಗಿರುವುದು ಸಹ ವಾಸ್ತು ದೋಷಗಳಿಗೆ ಕಾರಣವಾಗಬಹುದು.
ಬೆಂಗಳೂರು, ಜನವರಿ 10: ಇಂದಿರಾನಗರದಲ್ಲಿ ಕಾರು ಅಪಘಾತ ಸಂಭವಿಸಿದ್ದು, ಕೂದಲೆಳೆ ಅಂತರದಲ್ಲಿ 8 ಜನರು ಪಾರಾಗಿದ್ದಾರೆ. ಗುರುವಾರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮದ್ಯಪಾನ ಮಾಡಿ ಚಾಲಕ ಕಾರು ಚಲಾಯಿಸಿದ್ದಾನೆ. ಎಡಕ್ಕೆ ತಿರುಗಿಸದೇ ನೇರವಾಗಿ ಡಿವೈಡರ್ರನ್ನು ಹಾರಿಸುವ ಮೂಲಕ ಹೋಟೆಲ್ಗೆ ಡಿಕ್ಕಿ ಹೊಡೆದಿದೆ. ಕಾರು ಡಿವೈಡರ್ ಹಾರಿ ತಮ್ಮೆಡೆಗೆ ಬರುತ್ತಿರುವುದನ್ನ ಕಂಡ ಯುವಕ-ಯುವತಿಯರ ತಂಡ ಸೇರಿದಂತೆ ಇಬ್ಬರು ಬೈಕ್ ಚಾಲಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಜೀವನ್ ಭೀಮಾನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಭಯಾನಕ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.
ಗದಗ, ಜ.10: ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆಯಾಗಿರುವ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ. ತಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆಯಾಗಿದೆ. ಗಂಗವ್ವ ಬಸವರಾಜ ರಿತ್ತಿ ಮನೆ ಜಾಗದಲ್ಲಿ ಈ ನಿಧಿ ಪತ್ತೆಯಾಗಿದೆ. ಇದೀಗ ನಿಧಿ ನೋಡಲು ನೂರಾರು ಜನ ಸೇರಿದ್ದಾರೆ. ಸ್ಥಳಕ್ಕೆ ಎಡಿಸಿ ದುರ್ಗೇಶ್, ಎಸ್ಪಿ ರೋಹನ್ ಜಗದೀಶ್, ಎಸಿ ರಂಗಪ್ಪ, ತಹಶೀಲ್ದಾರ್ ಶ್ರೀನಿವಾಸ ಕುಲಕರ್ಣಿ ನೀಡಿದ್ದಾರೆ. ಲಕ್ಕುಂಡಿ ಪ್ರಾಧಿಕಾರದ ಸದಸ್ಯರು, ಪುರತತ್ವ ಸಿಬ್ಬಂದಿಯಿಂದ ಪರಿಶೀಲನೆ ಮಾಡಲಾಗುತ್ತದೆ. ಪತ್ತೆಯಾದ ಚಿನ್ನಾಭರಣ ಯಾರ ಕಾಲದ್ದು ಎಂಬ ತನಿಖೆ ಕೂಡ ನಡೆಯುತ್ತಿದೆ.
ಕೊಲ್ಕತ್ತಾ, ಜನವರಿ 10: ಐ-ಪ್ಯಾಕ್ (I-PAC) ಕಲ್ಲಿದ್ದಲು ಹಗರಣ ಪ್ರಕರಣದ ತನಿಖೆಗೆ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (CM Mamata Banerjee) ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ (ಇಡಿ) ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. “ನ್ಯಾಯಯುತ ಮತ್ತು ಸ್ವತಂತ್ರ ತನಿಖೆ ನಡೆಸುವ ಹಕ್ಕನ್ನು ರಾಜ್ಯ ಸರ್ಕಾರ ಅಡ್ಡಿಪಡಿಸಿದೆ” ಎಂದು ಇಡಿ ತನ್ನ ಅರ್ಜಿಯಲ್ಲಿ ಹೇಳಿದೆ.
ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್ ಮೇಲಿನ ದಾಳಿಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಡಿ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆಗೆ ಒತ್ತಾಯಿಸಿದೆ. ಕೊಲ್ಕತ್ತಾ ಹೈಕೋರ್ಟ್ನಲ್ಲಿ ಸಲ್ಲಿಸಿದ ಅರ್ಜಿಯಲ್ಲಿ, ಕೊಲ್ಕತ್ತಾದಲ್ಲಿರುವ ಐ-ಪ್ಯಾಕ್ ನಿರ್ದೇಶಕ ಪ್ರತೀಕ್ ಜೈನ್ ಅವರ ಮನೆ ಮೇಲೆ ದಾಳಿ ನಡೆದಾಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂಸ್ಥೆಯ ತನಿಖೆಗೆ ಅಡ್ಡಿಪಡಿಸಿದರು ಮತ್ತು ಅಲ್ಲಿದ್ದ ಮಹತ್ವದ ದಾಖಲೆಗಳನ್ನು ತೆಗೆದುಕೊಂಡರು ಎಂದು ಇಡಿ ಆರೋಪಿಸಿದೆ.
“ರಾಜ್ಯ ಪೊಲೀಸರ ಸಹಾಯದಿಂದ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಡಿ ಅಧಿಕಾರಿಗಳ ಕಾನೂನುಬದ್ಧ ಕಸ್ಟಡಿಯಿಂದ ಡಿಜಿಟಲ್ ಸಾಧನಗಳು, ಎಲೆಕ್ಟ್ರಾನಿಕ್ ಸಂಗ್ರಹಣಾ ಮಾಧ್ಯಮಗಳು ಮತ್ತು ಪ್ರಮುಖ ಅಪರಾಧ ದಾಖಲೆಗಳನ್ನು ಬಲವಂತವಾಗಿ ವಶಪಡಿಸಿಕೊಂಡು, ಮುಚ್ಚಿಟ್ಟಿದ್ದಾರೆ” ಎಂದು ಇಡಿ ಆರೋಪಿಸಿದೆ. ಆದರೆ. ಕೊಲ್ಕತ್ತಾ ಹೈಕೋರ್ಟ್ ಇಡಿಗೆ ತುರ್ತು ಪರಿಹಾರ ನೀಡಲು ನಿರಾಕರಿಸಿತ್ತು. ಈ ಪ್ರಕರಣದ ವಿಚಾರಣೆಯನ್ನು ಮುಂದೂಡಿತ್ತು. ಹೀಗಾಗಿ, ಇಡಿ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಜನವರಿ 11 ರಿಂದ ಅಂದರೆ ನಾಳೆಯಿಂದ ಪ್ರಾರಂಭವಾಗಲಿದೆ. ಈ ಸರಣಿಗೆ ಸಿದ್ಧತೆಗಳ ನಡುವೆ, ಭಾರತ ತಂಡಕ್ಕೆ ಆಘಾತಕ್ಕಾರಿ ಸುದ್ದಿಯೊಂದು ಸಿಕ್ಕಿದೆ. ಮೊದಲ ಪಂದ್ಯಕ್ಕೆ 24 ಗಂಟೆಗಳಿಗೂ ಕಡಿಮೆ ಸಮಯವಿರುವಾಗ ತಂಡದ ಸ್ಟಾರ್ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ರಿಷಭ್ ಪಂತ್ ನೆಟ್ ಅಭ್ಯಾಸದ ವೇಳೆ ಗಾಯಗೊಂಡಿದ್ದಾರೆ.
ವರದಿಗಳ ಪ್ರಕಾರ, ಥ್ರೋ-ಡೌನ್ ತಜ್ಞರ ವಿರುದ್ಧ ಬ್ಯಾಟಿಂಗ್ ಮಾಡುವಾಗ ರಿಷಭ್ ಪಂತ್ ಅವರ ಸೊಂಟಕ್ಕೆ ಚೆಂಡು ಬಲವಾಗಿ ಬಡಿದಿದೆ. ಇದರಿಂದ ತೀವ್ರ ನೋವಿನಿಂದ ಬಳಲಿದ ಪಂತ್ಗೆ ಅಭ್ಯಾಸ ಮುಂದುವರೆಸಲು ಸಾಧ್ಯವಾಗಲಿಲ್ಲ. ಹೀಗಾಗಿ ಪಂತ್ ಅರ್ಧಕ್ಕೆ ಅಭ್ಯಾಸ ನಿಲ್ಲಿಸಿ ಮೈದಾನವನ್ನು ತೊರೆದಿದ್ದಾರೆ.
ಇಂಜುರಿಗೊಳ್ಳುವುದಕ್ಕೂ ಮುನ್ನ ರಿಷಭ್ ಪಂತ್ ಸುಮಾರು 50 ನಿಮಿಷಗಳ ಕಾಲ ನೆಟ್ಸ್ನಲ್ಲಿ ಅಭ್ಯಾಸ ಮಾಡಿದ್ದರು. ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡುತ್ತಿದ್ದ ಪಂತ್ ಇದೀಗ ಗಾಯಕ್ಕೆ ತುತ್ತಾಗಿದ್ದಾರೆ. ಪಂತ್ ಅವರ ಗಾಯದ ತೀವ್ರತೆಯ ಕುರಿತು ಅಧಿಕೃತ ಹೇಳಿಕೆ ಇನ್ನೂ ಬಿಡುಗಡೆಯಾಗಿಲ್ಲವಾದರೂ, ತಂಡದ ಆಡಳಿತ ಮಂಡಳಿ ಅವರ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ.
ರಿಷಭ್ ಪಂತ್ ಭಾರತೀಯ ತಂಡದಲ್ಲಿ ಪ್ರಮುಖ ಆಟಗಾರರಾಗಿದ್ದು, ಕೆಎಲ್ ರಾಹುಲ್ ನಂತರ ಎರಡನೇ ವಿಕೆಟ್ ಕೀಪರ್ ಆಗಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಆದಾಗ್ಯೂ, ಅವರ ಇತ್ತೀಚಿನ ಏಕದಿನ ಫಾರ್ಮ್ ಮತ್ತು ಆಯ್ಕೆ ಚರ್ಚೆಗಳನ್ನು ನೋಡಿದರೆ, ಈ ಗಾಯವು ತಂಡಕ್ಕೆ ದೊಡ್ಡ ತಲೆನೋವನ್ನುಂಟುಮಾಡಬಹುದು.
ಟೀಂ ಇಂಡಿಯಾ ಈಗ ಪಂತ್ ಅವರ ಚೇತರಿಕೆಯತ್ತ ಗಮನ ಹರಿಸಿದ್ದು, ಗಾಯವು ಗಂಭೀರವಾಗಿಲ್ಲದಿದ್ದರೆ ಪಂತ್ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆದರೆ ಅವರಿಗೆ ವಿಶ್ರಾಂತಿ ಅಗತ್ಯವಿದ್ದರೆ, ಅವರು ಸರಣಿಯ ಆರಂಭಿಕ ಪಂದ್ಯವನ್ನು ತಪ್ಪಿಸಿಕೊಳ್ಳಬಹುದು. ಸರಣಿಯ ಮೊದಲ ಪಂದ್ಯ ವಡೋದರಾದಲ್ಲಿ ನಡೆಯುತ್ತಿದ್ದು, ತಂಡದ ಆಡಳಿತ ಮಂಡಳಿ ಶೀಘ್ರದಲ್ಲೇ ಪಂತ್ ಗಾಯದ ಬಗ್ಗೆ ಹೇಳಿಕೆಯನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ.
ಪಂತ್ ಈ ಹಿಂದೆ 2025 ರ ಇಂಗ್ಲೆಂಡ್ ಪ್ರವಾಸದ ಸಮಯದಲ್ಲಿ ಗಾಯಗೊಂಡಿದ್ದರು. ಲಾರ್ಡ್ಸ್ ಟೆಸ್ಟ್ ಸಮಯದಲ್ಲಿ ಬೆರಳಿಗೆ ಗಾಯ ಮಾಡಿಕೊಂಡದ್ದ ಪಂತ್, ಆ ನಂತರ ಮ್ಯಾಂಚೆಸ್ಟರ್ ಟೆಸ್ಟ್ನ ಮೊದಲ ದಿನದಂದು ತಮ್ಮ ಬಲಗಾಲಿಗೆ ಗಂಭೀರವಾಗಿ ಗಾಯ ಮಾಡಿಕೊಂಡಿದ್ದರು. ಇದರಿಂದ ಪಂತ್ ಸ್ವಲ್ಪ ದಿನಗಳವರೆಗೆ ಕ್ರಿಕೆಟ್ ಮೈದಾನದಿಂದ ದೂರವಿದ್ದರು. ಇದೀಗ ಪಂತ್ ಮತ್ತೆ ಗಾಯಗೊಂಡಿರುವುದು ಟೀಂ ಇಂಡಿಯಾಕ್ಕೆ ಗಮನಾರ್ಹ ಹಿನ್ನಡೆಯಾಗಿದೆ.