ಟ್ರಸ್ಟ್ ಮಾಡುವ ನೆಪದಲ್ಲಿ ಮಠದ ಆಸ್ತಿ ಲೂಟಿ? ಪೀಠಾಧಿಪತಿ ಹುಟ್ಟುಹಬ್ಬದಂದೇ ಗಲಾಟೆ, ಹೈಡ್ರಾಮಾ – Kannada News | Chikkaballapur Matha Property Row: Swamiji Accused of Land Grab
ಚಿಕ್ಕಬಳ್ಳಾಪುರ, ಜನವರಿ 10: ಪ್ರತಿಷ್ಠಿತ ಮಠದ ಸಾದ್ವಿ ವೃದ್ಧೆಯ ಸೇವೆಗೆಂದು ಬಂದ ವ್ಯಕ್ತಿಯೋರ್ವ ಮಠ ಮುನ್ನಡೆಸಿಕೊಂಡು ಹೋಗುತ್ತೇನೆಂದು ಮಠದ ಪೀಠಾಧಿಪತಿಯಾಗಿದ್ದ. ಕೊನೆಗೆ ಮಠದ ಅಭಿವೃದ್ಧಿಗೆ ಟ್ರಸ್ಟ್ ಒಂದನ್ನು ಮಾಡುತ್ತೇನೆ ಅಂತೇಳಿ ಟ್ರಸ್ಟ್ ನೋಂದಣಿ ನೆಪದಲ್ಲಿ ಮಠಕ್ಕೆ ಸೇರಿದ ಆಸ್ತಿಗಳನ್ನು (Property) ತನ್ನ ಹೆಸರಿಗೆ ಮಾಡಿಕೊಂಡಿದ್ದಾನೆಂದು ಆರೋಪಿಸಿ ಸಾದ್ವಿಯ ಸಂಬಂಧಿಕರು ಇಂದು ಮಠಕ್ಕೆ ನುಗ್ಗಿ, ಸ್ವಾಮೀಜಿಯನ್ನು ಹಿಡಿದು ಎಳೆದಾಡಿ ತಳ್ಳಾಡಿ, ನೂಕುನುಗ್ಗಲಾಗಿದ್ದು, ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಕಳವಾರದ ಬಳಿ ಇರುವ ಓಂಕಾರ…