Category Archives: Blog

Your blog category

IND vs PAK: ‘ಮೈದಾನದಲ್ಲೇ ಉತ್ತರ ಕೊಡ್ತೀವಿ’; ಟೀಂ ಇಂಡಿಯಾಗೆ ಪಾಕ್ ವೇಗಿ ಎಚ್ಚರಿಕೆ

Source link

ಪಿಎಂ ಶ್ರೀ ಶಾಲಾ ಯೋಜನೆ: ಪ್ರೆಸಿಡೆನ್ಸಿ ವಿವಿಯಲ್ಲಿ ಶಿಕ್ಷಕರಿಗೆ ನಾವೀನ್ಯತೆ, ಉದ್ಯಮಶೀಲತೆ ಶಿಬಿರ – Kannada News | PM SHRI: Bengaluru Teachers Boost Innovation and NEP 2020 Skills at IDE Camp

ಬೆಂಗಳೂರು, ಜನವರಿ 09: ರಾಷ್ಟ್ರೀಯ ಶಿಕ್ಷಣ ನೀತಿಗೆ ಪೂರಕವಾಗಿ ಶಿಕ್ಷಣ ಒದಗಿಸುವ ಉದ್ದೇಶದೊಂದಿಗೆ ಕೇಂದ್ರ ಸರ್ಕಾರ ‘ಪಿಎಂ ಶ್ರೀ’ ಶಾಲಾ ಯೋಜನೆಯನ್ನು (pm shri scheme) ರೂಪಿಸಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಪ್ರಾಂಶುಪಾಲರು ಮತ್ತು ಶಿಕ್ಷಕರಿಗೆ ನಾವೀನ್ಯತೆ, ವಿನ್ಯಾಸ ಮತ್ತು ಉದ್ಯಮಶೀಲತೆ (IDE) ಶಿಬಿರ ನಡೆಯುತ್ತಿದೆ. ಶಿಬಿರದ ಮೂರನೇ ದಿನದಂದು ಕೂಡ ಹಲವು ಗಣ್ಯರು ಭಾಗಿಯಾಗಿದ್ದರು.

ಡಿಆರ್‌ಡಿಓದ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ವ್ಯವಸ್ಥೆಗಳ ವಿಶೇಷ ವಿಜ್ಞಾನಿ ಮತ್ತು ಮಹಾನಿರ್ದೇಶಕಿ ಡಾ. ಬಿ. ಕೆ. ದಾಸ್ ಮತ್ತು ಡಾ. ವಿದ್ಯಾ ಕುಮಾರಿ ಶಿಬಿರವನ್ನು ಉದ್ಘಾಟಿಸಿದರು. ಈ ಉಪಕ್ರಮವು ರಾಷ್ಟ್ರೀಯ ಶಿಕ್ಷಣ ನೀತಿ 2020ರ ಗುರಿಗಳನ್ನು ಬೆಂಬಲಿಸುತ್ತದೆ.

ಡಾ. ಅಭಯ್ ಜೆರೆ ಹೇಳಿದ್ದಿಷ್ಟು 

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ ಉಪಾಧ್ಯಕ್ಷ ಮತ್ತು ಶಿಕ್ಷಣ ಸಚಿವಾಲಯ ಅಧಿಕಾರಿ ಡಾ. ಅಭಯ್ ಜೆರೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಪ್ರಾಂಶುಪಾಲರು ಮತ್ತು ಶಿಕ್ಷಕರೊಂದಿಗೆ ಮಾತನಾಡಿದ ಅವರು, ಚಿಕ್ಕ ವಯಸ್ಸಿನಿಂದಲೇ ಶಾಲೆಗಳು ನಾವೀನ್ಯತೆ, ಸಮಸ್ಯೆ ಪರಿಹಾರ ಮತ್ತು ಉದ್ಯಮಶೀಲತಾ ಚಿಂತನೆಯನ್ನು ಪ್ರೋತ್ಸಾಹಿಸಬೇಕು ಎಂದರು. ವಾಡಿಕೆಯಂತೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಕಲಿಸುವ ಬದಲು ಕುತೂಹಲ, ಪ್ರಯೋಗ ಮತ್ತು ನಿಜ ಜೀವನದ ಉದಾಹರಣೆಗಳ ಮೂಲಕ ಕಲಿಸುವಂತೆ ಸಲಹೆ ನೀಡಿದರು.

ನಾವೀನ್ಯತೆ, ವಿನ್ಯಾಸ ಮತ್ತು ಉದ್ಯಮಶೀಲತೆ (IDE) ಶಿಬಿರ ‘ಪಿಎಂ ಶ್ರೀ ಶಾಲಾ’ ಪ್ರಾಂಶುಪಾಲರು ಮತ್ತು ಶಿಕ್ಷಕರಿಗೆ ವಿನ್ಯಾಸ ಚಿಂತನೆ, ನವೀನ ಬೋಧನಾ ವಿಧಾನಗಳು, ಉದ್ಯಮಶೀಲತೆಯ ಮೂಲಭೂತ ಅಂಶಗಳು ಮತ್ತು ಸಮಸ್ಯೆ-ಪರಿಹರಿಸುವ ಕೌಶಲ್ಯಗಳಲ್ಲಿ ಪ್ರಾಯೋಗಿಕ ತರಬೇತಿಯನ್ನು ನೀಡುವ ಗುರಿಯನ್ನು ಹೊಂದಿದೆ. ಇದು ಅವರ ಶಾಲೆಗಳಲ್ಲಿ ನಾವೀನ್ಯತೆಯ ಸಂಸ್ಕೃತಿಯನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ. ಶಿಕ್ಷಣ ವ್ಯವಸ್ಥೆಯನ್ನು ನಿರ್ಮಿಸುವಲ್ಲಿ ಶಿಕ್ಷಕರ ಪ್ರಮುಖ ಪಾತ್ರವನ್ನು ಎತ್ತಿ ತೋರಿಸುತ್ತದೆ.

ಇದನ್ನೂ ಓದಿ: ಪ್ರೆಸಿಡೆನ್ಸಿ ವಿಶ್ವವಿದ್ಯಾಲಯ: ಪ್ರೆಸಿಡೆನ್ಸಿ ಲೀಗಲ್ ಇಂಡಸ್ಟ್ರಿ ಇಂಟರ್‌ಫೇಸ್ ಸಮಿಟ್ 2025 ಸಂಪನ್ನ

ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಕುಲಪತಿ ಡಾ. ನಿಸ್ಸಾರ್ ಅಹ್ಮದ್, ಪ್ರಭಾರ ಉಪ ಕುಲಪತಿ ಡಾ. ಎಸ್. ಜೆ. ತಿರುವೆಂಗಡಂ ಮತ್ತು ಪ್ರೊ. ಡಾ. ಶಿವಪೆರುಮಾಳ್, ಅಧ್ಯಾಪಕ ಸದಸ್ಯರು ಮತ್ತು ಸಂಯೋಜಕರೊಂದಿಗೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು. ಎಐಸಿಟಿಇ ಅಧಿಕಾರಿಗಳು ಸಹ ಆನ್‌ಲೈನ್‌ ಮುಖಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 8:16 pm, Fri, 9 January 26

Source link

ಪ್ರಧಾನಿ ಮೋದಿಯ ದೃಷ್ಟಿ ಮತ್ತು ನಿಲುವು ಕಂಡು ಅಚ್ಚರಿಗೊಂಡ ಎಐ ಸ್ಟಾರ್ಟಪ್​ಗಳ ಮುಖ್ಯಸ್ಥರು – Kannada News | PM Modi’s AI Vision: Boosting Indian Startups for Global Leadership

ಎಐ ಸ್ಟಾರ್ಟಪ್​ಗಳ ಮುಖಂಡರೊಂದಿಗೆ ಪ್ರಧಾನಿ ಸಂವಾದ

ನವದೆಹಲಿ, ಜನವರಿ 9: ಪ್ರಧಾನಿ ನರೇಂದ್ರ ಮೋದಿ (Narendra Modi) ನಿವಾಸದಲ್ಲಿ ನಡೆದ ಎಐ ಸ್ಟಾರ್ಟಪ್​ಗಳ ಸಭೆ, ಅದರಲ್ಲಿ ಭಾಗವಹಿಸಿದವರೆಲ್ಲರ ಹೃದಯ ಹಗುರಾಗಿಸಿದೆ. ಎಐ ವಿಚಾರದಲ್ಲಿ ಪ್ರಧಾನಿ ಹೊಂದಿರುವ ದೃಷ್ಟಿಕೋನ, ನಿಲುವು ಏನು ಎಂಬುದು ಭಾರತೀಯ ಸ್ಟಾರ್ಟಪ್​ಗಳ ಮುಖ್ಯಸ್ಥರ ಅರಿವಿಗೆ ಬಂದಿತ್ತು. ಫೆಬ್ರುವರಿಯಲ್ಲಿ ಇಂಡಿಯಾ ಎಐ ಇಂಪ್ಯಾಕ್ಟ್ ಸಮಿಟ್ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಪ್ರಧಾನಿಗಳು 12 ಸ್ಟಾರ್ಟಪ್​ಗಳ ಮುಖಂಡರನ್ನು ತಮ್ಮ ನಿವಾಸಕ್ಕೆ ಕರೆಸಿ ವಿಚಾರ ವಿನಿಮಯ ಮಾಡಿದ್ದಾರೆ.

ಪ್ರಧಾನಿಯನ್ನು ಭೇಟಿ ಮಾಡಿರುವ ಎಐ ಸ್ಟಾರ್ಟಪ್​ಗಳು ಇಂಡಿಯಾ ಎಐ ಮಿಷನ್ ಅಡಿಯಲ್ಲಿ ಫೌಂಡೇಶನ್ ಮಾಡಲ್​ಗಳನ್ನು ಅಭಿವೃದ್ಧಿಪಡಿಸಲು ಆಯ್ಕೆಯಾಗಿರುವಂಥವಾಗಿವೆ. ಐಟಿ ಮತ್ತು ಎಲೆಕ್ಟ್ರಾನಿಕ್ಸ್ ಸಚಿವ ಡಾ. ಅಶ್ವಿನಿ ವೈಷ್ಣವ್, ರಾಜ್ಯ ಸಚಿವರಾದ ಜಿತಿನ್ ಪ್ರಸಾದ, ಕಾರ್ಯದರ್ಶಿ ಎಸ್ ಕೃಷ್ಣನ್ ಹಾಗೂ ಈ 12 ಸ್ಟಾರ್ಟಪ್​ಗಳ ಮುಖಂಡರು ಪ್ರಧಾನಿಗಳೊಂದಿಗೆ ಮಾತನಾಡಿದ್ದಾರೆ. ಈ ಮಾತುಕತೆ ಸಕಾರಾತ್ಮಕವಾಗಿತ್ತು ಎಂದು ಎಲ್ಲರೂ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಎಐ ಇಂಪ್ಯಾಕ್ಟ್ ಸಮಿಟ್​ಗೆ ಪೂರ್ವಭಾವಿಯಾಗಿ 12 ಸ್ಟಾರ್ಟಪ್​ಗಳೊಂದಿಗೆ ಪ್ರಧಾನಿ ಮೋದಿ ಸಭೆ

ಪ್ರಧಾನಮಂತ್ರಿಗಳು ತಮ್ಮ ನಿಜಜೀವನದ ಅನುಭವಗಳೊಂದಿಗೆ ಮಾತನಾಡಿದ್ದು ನಮಗೆ ತಾಂತ್ರಿಕ ವಿಷಯಗಳ ಬಗ್ಗೆ ಪ್ರೇರಣೆ ಕೊಟ್ಟಿತು ಎಂದು ಸರ್ವಂ ಎಐ ಸಹ-ಸಂಸ್ಥಾಪಕ ಡಾ. ಪ್ರತ್ಯೂಶ್ ಕುಮಾರ್ ಹೇಳಿದ್ದಾರೆ.

ಪ್ರಧಾನಿಯವರಿಗೆ ತಾನು ಏನು ಹೇಳುತ್ತಿದ್ದೇನೆ ಎನ್ನುವ ಸ್ಪಷ್ಟ ಅರಿವು ಇದೆ. ಭಾರತ ಎಐನಲ್ಲಿ ವಿಶ್ವಗುರು ಆಗಬೇಕಾದರೆ ವಿಶ್ವಕ್ಕೆ ಯಾವುದನ್ನು ಪರಿಹರಿಸಲು ಸಾಧ್ಯವಿಲ್ಲವೋ ಆ ಸಮಸ್ಯೆ ಬಗೆಹರಿಸಬೇಕು ಎನ್ನುತ್ತಾರೆ. ಅವರೊಂದಿಗೆ ಮಾತನಾಡಿದ್ದು ಖುಷಿಯಾಯಿತು ಎಂದು ಟೆಕ್ ಮಹೀಂದ್ರ ಸಿಇಒ ನಿಖಿಲ್ ಮಲ್ಹೋತ್ರಾ ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರಧಾನಿಯವರ ಅನುಭವವು ನಮ್ಮ ಚಿಂತನೆಯನ್ನು ಹರಿತಗೊಳಿಸಲು ಸಹಾಯವಾಯಿತು. ಭಾರತಕ್ಕೆ ಏನು ಬೇಕು ಎಂಬುದನ್ನು ಅವರಿಗಿಂತ ತಿಳಿದವರು ಯಾರೂ ಇಲ್ಲ. ನಾವು ಪಾಶ್ಚಿಮಾತ್ಯರನ್ನು ನಕಲು ಮಾಡುವುದು ಬೇಡ. ನಮಗೆ ಏನು ಬೇಕೋ, ಏನು ಅಗತ್ಯವೋ ಅದನ್ನು ನಿರ್ಮಿಸಬೇಕು ಎಂಬುದು ಅವರ ನಿಲುವು ಎಂದು ನ್ಯೂರೋಡಿಎಕ್ಸ್ ಸಿಇಒ ಡಾ. ಸಿದ್ಧಾರ್ಥ್ ಪನ್ವರ್ ವಿವರಿಸಿದ್ದಾರೆ.

ಪ್ರಧಾನಿಗಳ ವಿಶನ್ ಗಮನಿಸಿ ಅಮೆರಿಕದಿಂದ ಭಾರತಕ್ಕೆ ಬಂದಿದ್ದೇನೆ. ಅಮೆರಿಕದಲ್ಲಿ ಅವಕಾಶಗಳು ಸಿಗುತ್ತವೆ. ಆದರೆ, ಭಾರತದಲ್ಲೂ ಮಾಡಲ್ ನಿರ್ಮಿಸಲು ಫಂಡಿಂಗ್ ಸಿಗುತ್ತದೆ ಎನ್ನುವುದು ಉತ್ತೇಜನಕಾರಿ ಸಂಗತಿ ಎಂದು ಗ್ಯಾನ್ ಎಐನ ರಿಸರ್ಚ್ ಎಂಜಿನಿಯರ್ ಆಗಿರುವ ಪಾರ್ಥಸಾರಥಿ ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಕಾಫಿಗೆ ಯೂರೋಪ್​ನಲ್ಲಿ ಬಲು ಬೇಡಿಕೆ; 2025ರಲ್ಲಿ 2 ಬಿಲಿಯನ್ ಡಾಲರ್ ಮುಟ್ಟಿದ ಭಾರತದ ಒಟ್ಟಾರೆ ಕಾಫಿ ರಫ್ತು

ಇಂಡಿಯಾ ಎಐ ಮಿಷನ್​ನಲ್ಲಿ ಆಯ್ಕೆಯಾಗಿರುವ 12 ಸ್ಟಾರ್ಟಪ್​ಗಳು ಅವತಾರ್, ಭಾರತ್​ಜೆನ್, ಫ್ರಾಕ್ಟಲ್, ಗ್ಯಾನ್, ಜೆನ್​ಲೂಪ್, ಜ್ಞಾನಿ, ಇಂಟೆಲಿಹೆಲ್ತ್, ಸರ್ವಂ, ಶೋಧ್ ಎಐ, ಸಾಕೆಟ್ ಎಐ, ಟೆಕ್ ಮಹೀಂದ್ರ ಮತ್ತು ಝೆನ್​ಟೀಕ್ ಆಗಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಬಳ್ಳಾರಿ ಬ್ಯಾನರ್​​ ಗಲಾಟೆ ಕೇಸ್​​ ತನಿಖೆ ಹೊಣೆ ಸಿಐಡಿಗೆ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ – Kannada News | Ballari Banner Firing Case: CID Probe Ordered by Karnataka Government

ಜನಾರ್ದನ ರೆಡ್ಡಿ ಮತ್ತು ಭರತ್​​ ರೆಡ್ಡಿ

ಬೆಂಗಳೂರು, ಜನವರಿ 09: ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ವೇಳೆ ಗುಂಡಿನ ದಾಳಿ ಪ್ರಕರಣದ ತನಿಖೆಯನ್ನುಸಿಐಡಿಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಲ್ಲಾ ಪ್ರಕರಣವನ್ನ ಸಿಐಡಿಗೆ ವರ್ಗಾಯಿಸಲಾಗಿದೆ. ಘಟನೆ ರಾಜಕೀಯ ಸ್ವರೂಪ ಪಡೆದುಕೊಂಡು ತೀವ್ರ ವಿವಾದ ಸೃಷ್ಟಿಸಿರುವ ಹಿನ್ನೆಲೆ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದೆ. ಬಳ್ಳಾರಿ ಪ್ರಕರಣ ಸಿಐಡಿಗೆ ವಹಿಸುವ ವಿಚಾರ ಸಂಬಂಧ ಇಂದೇ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಚರ್ಚೆ ಮಾಡ್ತೇನೆ ಎಂದು ಗೃಹ ಸಚಿವ ಪರಮೇಶ್ವರ್​​ ಹೇಳಿದ್ದರು. ಆ ಬೆನ್ನಲ್ಲೇ ಆದೇಶ ಹೊರಬಿದ್ದಿದೆ.

ಬ್ಯಾನರ್​​ ಗಲಾಟೆ ಪ್ರಕರಣದ ಕೇಸ್​​ ತನಿಖೆ ಸಿಐಡಿಗೆ ವಹಿಸುವ ವಿಚಾರ ಸಂಬಂಧ ಈ ಹಿಂದೆಯೂ ಗೃಹ ಸಚಿವ ಪರಮೇಶ್ವರ್​​ ಸುಳಿವು ನೀಡಿದ್ದರು. ಪೊಲೀಸರ ಗನ್ ಹಾಗೂ ರಿವಾಲ್ವರ್​ನಿಂದ ಫೈರಿಂಗ್​ ಆಗಿಲ್ಲ, ಖಾಸಗಿ ಗನ್​ನಿಂದ ಫೈರಿಂಗ್​ ಆಗಿದ್ದೆಂದು ಎಡಿಜಿಪಿ ದೃಢಪಡಿಸಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ಆರೋಪಿಗಳನ್ನು ಬಂಧಿಸ್ತೇವೆ. ಹತ್ಯೆಗೆ ಪೆಟ್ರೋಲ್ ಬಾಂಬ್ ಬಳಕೆ ಮಾಡಿದ್ದಾರೆಂಬ ಆರೋಪವೂ ಇದ್ದು,ತನಿಖೆ ಆದಮೇಲೆ ಅದೆಲ್ಲ ಗೊತ್ತಾಗುತ್ತೆ. ಅಗತ್ಯಬಿದ್ದರೆ ಸಿಐಡಿಗೆ ಪ್ರಕರಣ ಕೊಡುತ್ತೇವೆ ಎಂದು ಹೇಳಿದ್ದರು.

ಇದನ್ನೂ ಓದಿ: ಬಳ್ಳಾರಿ ಗಲಭೆ ಕೇಸ್​​; ಗನ್‌ಮ್ಯಾನ್‌ ಹೊರತು ಪಡಿಸಿ 25 ಆರೋಪಿಗಳಿಗೆ ಜಾಮೀನು

ಸಿಬಿಐ ತನಿಖೆಗೆ ಆಗ್ರಹಿಸಿದ್ದ ಜನಾರ್ದನ ರೆಡ್ಡಿ

ಗಲಾಟೆ ಪ್ರಕರಣದ ತನಿಖೆ ಬಗ್ಗೆ ಶಾಸಕ ಜನಾರ್ದನ ರೆಡ್ಡಿ ಭಾರಿ ಅಸಮಾಧಾನ ಹೊರ ಹಾಕಿದ್ದರು. ಘಟನೆಯಲ್ಲಿ ಮೃತಪಟ್ಟಿದ್ದ ರಾಜಶೇಖರ್​​ ಮತೃದೇಹ ಹೂಳಲು ಮೊದಲು ಗುಂಡಿ ತೋಡಿ, ಆ ನಂತರ ಶವ ಸುಡಲಾಗಿದೆ. ಶಾಸಕ ಭರತ್ ರೆಡ್ಡಿ ನಿರ್ದೇಶನದಂತೆ ಕೊಲೆಯಾಗಿದೆ. ತಂದೆ ಸಮಾಧಿ ಬಳಿ ರಾಜಶೇಖರ್ ಅಂತ್ಯಕ್ರಿಯೆ ಆಗಬೇಕು ಎಂದಿದ್ದರು. ಆದರೆ ಹೂಳಲು ತೋಡಿದ್ದ ಗುಂಡಿ ಮುಚ್ಚುವಂತೆ ನಿರ್ದೇಶನ ಬಂದಿದೆ. ಹೀಗಾಗಿ ಸ್ಮಶಾನದಲ್ಲಿ ತೋಡಿದ್ದ ಗುಂಡಿಯನ್ನು ತೆಂಗಿನಕಾಯಿ ನೀರು ಹಾಕಿ ಮುಚ್ಚಿದ್ದಾರೆ. ಬಳಿಕ ಯಾವುದೇ ಸಾಕ್ಷ್ಯ ಸಿಗದ ಹಾಗೆ ರಾಜಶೇಖರ್​ ಮೃತದೇಹವನ್ನು ಗ್ಯಾಸ್‌ನಿಂದ ಸುಡಲಾಗಿದೆ. ಘಟನೆ ನಡೆದು 9 ದಿನಗಳಾದರೂ ಒಬ್ಬ ಗನ್​ಮ್ಯಾನ್ ಮಾತ್ರ ಬಂಧನ ಮಾಡಲಾಗಿದೆ. ಭರತ್​​ ರೆಡ್ಡಿಯನ್ನು ಯಾಕೆ ಬಂಧಿಸಿಲ್ಲ ಎಂದು ರೆಡ್ಡಿ ಪ್ರಶ್ನಿಸಿದ್ದರು. ಘಟನೆಗೆ ಕಾರಣಕರ್ತರಾದ ಶಾಸಕನ ಬಂಧನವಾಗಬೇಕು, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 7:52 pm, Fri, 9 January 26

Source link

ಹಿಮಾಚಲ ಪ್ರದೇಶದ ಸಿರ್ಮೌರ್‌ನಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ – Kannada News | 9 killed and 40 injured as bus rolled down into deep gorge in Himachal Pradesh

ಶಿಮ್ಲಾ, ಜನವರಿ 9: ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ ಖಾಸಗಿ ಬಸ್ ಸುಮಾರು 500 ಅಡಿ ಆಳದ ಕಂದಕಕ್ಕೆ ಉರುಳಿದೆ. ಇದರ ಪರಿಣಾಮವಾಗಿ 9 ಜನರು ಸಾವನ್ನಪ್ಪಿದ್ದು, ಸುಮಾರು 40 ಮಂದಿ ಗಾಯಗೊಂಡಿದ್ದಾರೆ. ಶಿಮ್ಲಾದಿಂದ ರಾಜ್‌ಗಢ ಮೂಲಕ ಕುಪ್ವಿಗೆ ತೆರಳುತ್ತಿದ್ದ ಬಸ್ ಹರಿಪುರ್ಧರ್ ಗ್ರಾಮದ ಬಳಿ ರಸ್ತೆಯಿಂದ ಜಾರಿ ಕಣಿವೆಗೆ ಉರುಳಿ ಬಿದ್ದಾಗ ಈ ಅಪಘಾತ (Accident) ಸಂಭವಿಸಿದೆ.

ಅಪಘಾತದಲ್ಲಿ ಸಾವನ್ನಪ್ಪಿದವರ ಬಗ್ಗೆ ದುಃಖ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅಪಘಾತದಲ್ಲಿ ಸಾವನ್ನಪ್ಪಿದವರ ಹತ್ತಿರದ ಸಂಬಂಧಿಕರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ಮತ್ತು ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಆರೈಕೆಯನ್ನು ಖಚಿತಪಡಿಸಿಕೊಳ್ಳುವಂತೆ ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ರಸ್ತೆಯ ಮೇಲಿನ ಹಿಮದಿಂದಾಗಿ ಚಾಲಕ ನಿಯಂತ್ರಣ ಕಳೆದುಕೊಂಡಿರಬಹುದು ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜನವರಿ 30-31ರಂದು ಹೈದರಾಬಾದ್​ನಲ್ಲಿ ಅಪೋಲೋ ಹಾಸ್ಪಿಟಲ್ಸ್​ನಿಂದ ‘ಇಂಟರ್ನ್ಯಾಷನಲ್ ಹೆಲ್ತ್ ಡೈಲೋಗ್’ – Kannada News | Apollo Hospitals organizing International Health Dialogue 2026 on Jan 30 31 at Hyderabad

ಹಿಂದಿನ ವರ್ಷದ ಐಎಚ್​ಡಿ ಸಮಾವೇಶದ ಒಂದು ಚಿತ್ರ

ಹೈದರಾಬಾದ್, ಜನವರಿ 9: ಇದೇ ತಿಂಗಳ ಕೊನೆಯ ಎರಡು ದಿನಗಳಂದು ಅಂತಾರಾಷ್ಟ್ರೀಯ ಆರೋಗ್ಯ ಸಂವಾದ ಕಾರ್ಯಕ್ರಮ ನಡೆಯಲಿದೆ. ಅಪೋಲೋ ಹಾಸ್ಪಿಟಲ್ಸ್ ಆಯೋಜಿಸುತ್ತಿರುವ ಇಂಟರ್ನ್ಯಾಷನಲ್ ಹೆಲ್ತ್ ಡೈಲೋಗ್​ನ 13ನೇ ಆವೃತ್ತಿ (IHD- International Health Dialogue) ಜನವರಿ 30-31ರಂದು ನಡೆಯಲಿದೆ. ಹೈದರಾಬಾದ್​ನಲ್ಲಿ ನಡೆಯುವ 2026ರ ಆವೃತ್ತಿಯ ಈ ಕಾರ್ಯಕ್ರಮದ ಥೀಮ್ ‘ಗ್ಲೋಬಲ್ ವಾಯ್ಸಸ್, ಒನ್ ವಿಶನ್’ (ಜಾಗತಿಕ ಧ್ವನಿಗಳು, ಒಂದೇ ದೃಷ್ಟಿ). ಜಾಗತಿಕ ಹೊರಹೊಮ್ಮುವ ಹೊಸ ಐಡಿಯಾಗಳು, ಇನ್ನೋವೇಶನ್​ಗಳು ಮತ್ತು ನಾಯಕತ್ವವನ್ನು ಒಂದು ಸಾಮಾನ್ಯ ಗುರಿಯತ್ತ ಕೊಂಡೊಯ್ಯುವ ಮೂಲಕ ಪ್ರಬಲವಾದ ಹೆಲ್ತ್​ಕೇರ್ ಸಿಸ್ಟಂಗಳನ್ನು ರೂಪಿಸುವ ಮಾರ್ಗಗಳನ್ನು ಅವಲೋಕಿಸುವುದು ಈ ಸಭೆಯ ಪ್ರಮುಖ ಅಜೆಂಡಾ ಆಗಿರುತ್ತದೆ.

ಆಸ್ಪತ್ರೆ ಕಾರ್ಯಾಚರಣೆಗಳು, ರೋಗಿ ಅನುಭವ ಮತ್ತು ಕ್ಲಿನಿಕಲ್ ಪರಿಣಾಮಗಳ ವಿಚಾರದಲ್ಲಿ ನಾಯಕತ್ವ ಪ್ರೇರಿತ ಸೇಫ್ಟಿ ಮಾಡಲ್​ಗಳು, ಮಾನವ ಕೇಂದ್ರಿತ ವಿನ್ಯಾಸ, ಡಿಜಿಟಲ್ ಪರಿವರ್ತನೆ ಮತ್ತು ಶ್ರೇಷ್ಠತೆ ಸಾಧಿಸುವುದು ಈ ಆಯಾಮಗಳ ಬಗ್ಗೆ ಐಎಚ್​ಡಿ 2026 ಕಾರ್ಯಕ್ರಮದಲ್ಲಿ ಗಮನ ಹರಿಸಲಾಗುತ್ತದೆ.

ಈ ಕಾರ್ಯಕ್ರಮ ಆಯೋಜಿಸುತ್ತಿರುವ ಅಪೋಲೋ ಹಾಸ್ಪಿಟಲ್ಸ್ ಗ್ರೂಪ್​ನ ಜಂಟಿ ಎಂಡಿಯಾಗಿರುವ ಡಾ. ಸಂಗೀತಾ ರೆಡ್ಡಿ ಅವರು ಈ ಕಾರ್ಯಕ್ರಮದ ಬಗ್ಗೆ ಮಾತನಾಡಿ, ಎಐ, ಡಾಟಾ ಮತ್ತು ಡಿಜಿಟಲ್ ಇಕೋಸಿಸ್ಟಂಗಳ ಶಕ್ತಿಯನ್ನು ಒಗ್ಗೂಡಿಸುತ್ತಿದೆ ಎಂದು ಹೇಳಿದ್ದಾರೆ.

‘ಹೆಲ್ತ್​ಕೇರ್ ತಜ್ಞರು, ಇನ್ನೋವೇಟರ್​ಗಳು, ನೀತಿ ರೂಪಕರು, ಪ್ರೇರಕರು (Evangelists) ಒಂದೆಡೆ ಸೇರಿ ಹೆಲ್ತ್​ಕೇರ್ ಕ್ಷೇತ್ರದ ಮುಂದಿನ ಹಾದಿಯನ್ನು ರೂಪಿಸುವ ಒಂದು ವೇದಿಕೆಯಾಗಿ ಇಂಟರ್ನ್ಯಾಷನಲ್ ಹೆಲ್ತ್ ಡೈಲೋಗ್ ಮಾರ್ಪಾಡಾಗಿದೆ. ಹೆಲ್ತ್​ಕೇರ್ ಅನ್ನು ಹೆಚ್ಚು ಸುಸ್ಥಿರವಾಗುವ ನಿಟ್ಟಿನಲ್ಲಿ ಜಾಗತಿಕ ಬದ್ಧತೆಯನ್ನು ಐಎಚ್​ಡಿ ಪ್ರತಿನಿಧಿಸುತ್ತದೆ. ಪ್ರತಿಯೊಂದು ಇನ್ನೋವೇಶನ್ ಕೂಡ ಮಾನವತೆಗೆ ಸೇವೆ ಸಲ್ಲಿಸುತ್ತದೆ. ಪ್ರತಿಯೊಂದು ಜೊತೆಗಾರಿಕೆಯೂ ಕೂಡ ವಿಶ್ವದ ಆರೋಗ್ಯಕ್ಕೆ ಕಾರಣವಾಗುತ್ತದೆ’ ಎಂದು ಡಾ. ಸಂಗೀತಾ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ಎಐ ಇಂಪ್ಯಾಕ್ಟ್ ಸಮಿಟ್​ಗೆ ಪೂರ್ವಭಾವಿಯಾಗಿ 12 ಸ್ಟಾರ್ಟಪ್​ಗಳೊಂದಿಗೆ ಪ್ರಧಾನಿ ಮೋದಿ ಸಭೆ

ಹೈದರಾಬಾದ್​ನಲ್ಲಿ ನಡೆಯುವ ಐಎಚ್​ಡಿ 2026 ಸಮಾವೇಶದಲ್ಲಿ ಈ ಕೆಳಗಿನ ನಾಲ್ಕು ಕಾನ್ಫರೆನ್ಸ್​ಗಳು ಮತ್ತು ಲರ್ನಿಂಗ್ ಸ್ಟ್ರೀಮ್​ಗಳು ಇರಲಿವೆ:

  1. ಐಪಿಎಸ್​ಸಿ (ಇಂಟರ್ನ್ಯಾಷನಲ್ ಪೇಶೆಂಟ್ ಸೇಫ್ಟಿ ಕಾನ್ಫರೆನ್ಸ್): ಸ್ವಯಂಪ್ರೇರಿತವಾದ ಪ್ರಾಕ್ಟಿಸ್ ಮತ್ತು ಹೆಲ್ತ್​ಕೇರ್ ಸಿಸ್ಟಂಗಳು ರೋಗಿ ಸುರಕ್ಷತೆಯನ್ನು ಹೇಗೆ ಸುಧಾರಿಸುತ್ತವೆ ಎಂಬುದನ್ನು ಸಮಾವೇಶದಲ್ಲಿ ಚರ್ಚಿಸಲಾಗುತ್ತದೆ.
  2. ಎಚ್​ಒಪಿಇ (ಹೆಲ್ತ್​ಕೇರ್ ಆಪರೇಷನ್ಸ್ ಮತ್ತು ಪೇಷೆಂಟ್ ಎಕ್ಸ್​ಪೀರಿಯನ್ಸ್ ಕಾನ್ಫರೆನ್ಸ್): ರೋಗಿಗೆ ಚಿಕಿತ್ಸೆ ನೀಡುವ ಪ್ರತೀ ಮುಖ್ಯ ಘಟ್ಟಗಳಲ್ಲೂ ಕ್ಷಮತೆ, ನಾವೀನ್ಯತೆ ತರುವ ಬಗ್ಗೆ ವಿಧಾನಗಳ ಬಗ್ಗೆ ಚರ್ಚಿಸಲಾಗುತ್ತದೆ.
  3. ಟಿಎಚ್​ಐಟಿ (ಟ್ರಾನ್ಸ್​ಫಾರ್ಮಿಂಗ್ ಹೆಲ್ತ್​ಕೇರ್ ವಿತ್ ಐಟಿ): ಈ ಕಾನ್ಫರೆನ್ಸ್​ನಲ್ಲಿ ವಿಶ್ವಾದ್ಯಂತ ಹೆಲ್ತ್​​ಕೇರ್ ಮತ್ತು ಐಟಿ ಮುಖಂಡರನ್ನು ಒಟ್ಟಿಗೆ ಸೇರಲಿದ್ದಾರೆ. ಅವರ ಅತ್ಯಾಧುನಿಕ ವಿಧಾನಗಳ ಬಗ್ಗೆ ಮಾಹಿತಿ ಹಂಚಿಕೊಳ್ಳುತ್ತಾರೆ.
  4. ಕ್ಲಿನೋವೇಟ್: ಕ್ಯಾನ್ಸರ್ ರೋಗ, ಹೃದ್ರೋಗ, ಮಹಿಳಾ ಆರೋಗ್ಯ, ಲ್ಯಾಬ್ ಮೆಡಿಸಿನ್ ಮೇಲೆ ಕ್ಲಿನಿಕಲ್ ಸಿಎಂಇ ಸೀರೀಸ್ ಇರುತ್ತದೆ. ಇದರಲ್ಲಿ ಹೆಲ್ತ್​ಕೇರ್ ವೃತ್ತಿಪರರು ಮತ್ತು ಸಂಶೋಧಕರಿಗೆ ತಜ್ಞರಿಂದ ಕಲಿಕೆ ನೀಡಲಾಗುತ್ತದೆ.

ಜನವರಿ 30 ಮತ್ತು 31ರಂದು ನಡೆಯುವ ಈ ಸಮಾವೇಶದಲ್ಲಿ ಆರೋಗ್ಯ ಕ್ಷೇತ್ರದ ಹಲವು ಮುಖಂಡರು ಮತ್ತು ನೀತಿ ರೂಪಕರು ಪಾಲ್ಗೊಳ್ಳುತ್ತಾರೆ. ನೈಜರ್ ರಿಪಬ್ಲಿಕ್​ನ ಪಬ್ಲಿಕ್ ಹೆಲ್ತ್ ಸಚಿವ ಕರ್ನಲ್ ಮೇಜರ್ ಗರ್ಬಾ ಹಕಿಮಿ, ಪಪುವಾ ನ್ಯೂಗಿನಿಯಾದ ಆರೋಗ್ಯ ಸಚಿವ ಇಲಿಯಾಸ್ ಕಪವೋರೆ, ಕಾಂಗೋ ರಿಪಬ್ಲಿಕ್​ನ ಆರೋಗ್ಯ ಸಚಿವ ಇಬಾರ, ಬರ್ಮುಡಾದ ಆರೋಗ್ಯ ಸಚಿವ ಕಿಮ್ ವಿಲ್ಸನ್ ಅವರು ಭಾಗವಹಿಸುತ್ತಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಕಾಫಿಗೆ ಯೂರೋಪ್​ನಲ್ಲಿ ಬಲು ಬೇಡಿಕೆ; 2025ರಲ್ಲಿ 2 ಬಿಲಿಯನ್ ಡಾಲರ್ ಮುಟ್ಟಿದ ಭಾರತದ ಒಟ್ಟಾರೆ ಕಾಫಿ ರಫ್ತು

ಆರೋಗ್ಯ ಕ್ಷೇತ್ರದ ಹಲವು ಸಂಘ ಸಂಸ್ಥೆಗಳ ಮುಖ್ಯಸ್ಥರಾದ ಡಾ. ಜೋನಾತನ್ ಪೆರ್ಲಿನ್, ಡಾ. ಕಾರ್ಸ್ಟನ್ ಎಂಜೆಲ್, ಡಾ. ಡೀನ್ ಹೋ, ಡಾ ಅತುಲ್ ಮೋಹನ್ ಕೋಚ್ಚರ್, ಡಾ. ನೀಲಮ್ ಧಿಂಗ್ರ, ಡಾ. ಇಯಾಲ್ ಝಿಮ್ಲಿಕ್ಮನ್ ಮೊದಲಾದವರು ಪಾಲ್ಗೊಳ್ಳುತ್ತಿದ್ದಾರೆ.

ಈ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಅಧಿಕೃತ ವೆಬ್​ಸೈಟ್​ಗಳ ಲಿಂಕ್ ಇಲ್ಲಿದೆ:

internationalhealthdialogue.com/

www.patient-safety.co.in

www.hopeconference.co.in/

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On – 7:52 pm, Fri, 9 January 26

Source link

2025ರಲ್ಲಿ ಮೋದಿ, ಟ್ರಂಪ್ 8 ಬಾರಿ ಮಾತನಾಡಿದ್ದರು; ಲುಟ್ನಿಕ್ ಹೇಳಿಕೆಗೆ ಭಾರತ ಸ್ಪಷ್ಟನೆ – Kannada News | PM Modi and Trump spoke 8 times in 2025; MEA rejects Howard Lutnicks claim on India US trade deal

ನವದೆಹಲಿ, ಜನವರಿ 9: ಭಾರತದ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಕರೆ ಮಾಡದ ಕಾರಣದಿಂದಲೇ ಕಳೆದ ವರ್ಷ ಎರಡೂ ದೇಶಗಳ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದವನ್ನು ಮುಂದುವರೆಸಲು ಸಾಧ್ಯವವಾಗಲಿಲ್ಲ ಎಂಬ ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ಸಂದರ್ಶನವೊಂದರಲ್ಲಿ ಹೇಳಿದ್ದರು. ಆದರೆ, ಅವರ ಈ ಹೇಳಿಕೆಯನ್ನು ಭಾರತ ನಿರಾಕರಿಸಿದೆ. ಪರಸ್ಪರ ಪ್ರಯೋಜನಕಾರಿ ಒಪ್ಪಂದವನ್ನು ಮಾಡಿಕೊಳ್ಳಲು ಭಾರತ ಸದಾ ಆಸಕ್ತಿ ಹೊಂದಿತ್ತು ಎಂದು ಭಾರತ ಹೇಳಿದೆ.

ಅಮೆರಿಕ ಮತ್ತು ಭಾರತದ ನಡುವಿನ ವ್ಯಾಪಾರ ಒಪ್ಪಂದವನ್ನು ಪೂರ್ಣಗೊಳಿಸಲು ಭಾರತಕ್ಕೆ 3 ವಾರ ಸಮಯ ನೀಡಲಾಗಿತ್ತು. ಆ ಒಪ್ಪಂದವನ್ನು ಮುಕ್ತಾಯಗೊಳಿಸಲು ಮೋದಿ ಟ್ರಂಪ್‌ಗೆ ಕರೆ ಮಾಡಬೇಕಾಗಿತ್ತು. ಆದರೆ, ಭಾರತದ ಕಡೆಯಿಂದ ಯಾವುದೇ ಫೋನ್ ಬರಲಿಲ್ಲ. ಇದು ಟ್ರಂಪ್ ಅಹಂಗೆ ಹೊಡೆತ ನೀಡಿತು ಎಂದು ಲುಟ್ನಿಕ್ ಪಾಡ್‌ಕ್ಯಾಸ್ಟ್‌ಗೆ ತಿಳಿಸಿದ್ದರು. ಇದು ತೀವ್ರ ಚರ್ಚೆಗೆ ಕಾರಣವಾಗಿತ್ತು.

ಇದನ್ನೂ ಓದಿ: ಮೋದಿ ಟ್ರಂಪ್​ಗೆ ಕರೆ ಮಾಡ್ಲಿಲ್ಲ, ಭಾರತ-ಅಮೆರಿಕದ ವ್ಯಾಪಾರ ಒಪ್ಪಂದ ಮುಂದುವರೀಲಿಲ್ಲ: ವಾಣಿಜ್ಯ ಕಾರ್ಯದರ್ಶಿ

ಈ ಬಗ್ಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಪ್ರತಿಕ್ರಿಯೆ ನೀಡಿದ್ದು, ಅಮೆರಿಕ ನೀಡಿದ ಈ ಹೇಳಿಕೆಗಳು ನಿಖರವಾಗಿಲ್ಲ. ಸಮತೋಲಿತ ಮತ್ತು ಪರಸ್ಪರ ಪ್ರಯೋಜನಕಾರಿ ವ್ಯಾಪಾರ ಒಪ್ಪಂದವನ್ನು ಮಾಡಿಕೊಳ್ಳಲು ಹಲವಾರು ಸುತ್ತಿನ ಮಾತುಕತೆಗಳನ್ನು ನಡೆಸಲಾಗಿತ್ತು. 2025ರಲ್ಲಿ ಪ್ರಧಾನಿ ಮೋದಿ ಮತ್ತು ಟ್ರಂಪ್ 8 ಬಾರಿ ಫೋನ್​ನಲ್ಲಿ ಮಾತನಾಡಿದ್ದಾರೆ ಎಂದು ಜೈಸ್ವಾಲ್ ಹೇಳಿದ್ದಾರೆ.

ಕಳೆದ ವರ್ಷ ಫೆಬ್ರವರಿಯಲ್ಲಿ ಮೋದಿ ಮತ್ತು ಟ್ರಂಪ್ ನಡುವಿನ ಸಭೆಯ ನಂತರ ಭಾರತ ಮತ್ತು ಅಮೆರಿಕದ ನಡುವೆ ವ್ಯಾಪಾರ ಒಪ್ಪಂದದ ಕುರಿತು ಮಾತುಕತೆಗಳು ಪ್ರಾರಂಭವಾದವು. ಎರಡು ಪೂರಕ ಆರ್ಥಿಕತೆಗಳ ನಡುವಿನ ಪರಸ್ಪರ ಪ್ರಯೋಜನಕಾರಿ ವ್ಯಾಪಾರ ಒಪ್ಪಂದದಲ್ಲಿ ನಾವು ಆಸಕ್ತಿ ಹೊಂದಿದ್ದೇವೆ. ಅದನ್ನು ಮುಕ್ತಾಯಗೊಳಿಸಲು ಎದುರು ನೋಡುತ್ತಿದ್ದೇವೆ ಎಂದು ಜೈಸ್ವಾಲ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಬಿದ್ದ ಚಿರತೆ, ವಿಲವಿಲ ಒದ್ದಾಡಿ ಪ್ರಾಣಬಿಟ್ಟಿತು – Kannada News | 3 year old leopard dies after being falling in trap in Chikkaballapur

ಚಿಕ್ಕಬಳ್ಳಾಪುರ, (ಜನವರಿ 09): ಕಾಡು ಹಂದಿಗೆ ಹಾಕಲಾಗಿದ್ದ ಉರುಳಿಗೆ ಚಿರತೆ ಸಿಕ್ಕು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕೇತೇನಹಳ್ಳಿ ಅರಣ್ಯದಲ್ಲಿ ನಡೆದಿದೆ. ಕೇತೇನಹಳ್ಳಿ ಅರಣ್ಯದಲ್ಲಿ ಕಾಡುಹಂದಿಗೆ ಹಾಕಿದ್ದ ಉರುಳಿಗೆ 3 ವರ್ಷದ ಹೆಣ್ಣು ಚಿರತೆ ಸಿಲುಕಿ ಒದ್ದಾಡಿದೆ. ಕೂಡಲೇ ಚಿರತೆಯನ್ನು ಉರುಳಿನಿಂದ ಬಿಡಿಸಿ ಚಿಕಿತ್ಸೆ ನೀಡಲಾಗಿದೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ತಜ್ಞರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನೆರವೇರಿಸಲಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬಿಗ್​​ಬಾಸ್ ಕನ್ನಡ 12ರ ವಿನ್ನರ್ ಯಾರು: ಪ್ರಶಾಂತ್ ಸಂಬರ್ಗಿ ಹೇಳಿದ್ದು ಹೀಗೆ – Kannada News | Bigg Boss Kannada 12: Prashanth Sambargi pics his contestant

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss) ರ ಫಿನಾಲೆ ಹತ್ತಿರವಾಗುತ್ತಿದೆ. ಮನೆಯಲ್ಲಿ ಸದ್ಯಕ್ಕೆ ಎಂಟು ಮಂದಿ ಸದಸ್ಯರಿದ್ದಾರೆ. ಗಿಲ್ಲಿ ಸದ್ಯದ ವಿನ್ನರ್ ಎನ್ನಲಾಗುತ್ತಿದೆ. ಆದರೆ ಅಶ್ವಿನಿ, ರಕ್ಷಿತಾ, ಧನುಶ್ ಸಹ ವಿನ್ನರ್ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದೀಗ ಕೆಲವು ಮಾಜಿ ಸ್ಪರ್ಧಿಗಳು ತಮ್ಮ ಮೆಚ್ಚಿನ ಸ್ಪರ್ಧಿ ಯಾರು? ಈ ಬಾರಿ ಗೆಲ್ಲಬಹುದು ಎಂಬ ಊಹೆಯನ್ನು ಸಹ ಮಾಡುತ್ತಿದ್ದಾರೆ. ಎರಡು ಬಾರಿ ಬಿಗ್​​ಬಾಸ್ ಸ್ಪರ್ಧೆಯಲ್ಲಿ ಭಾಗವಹಿಸಿರುವ ಪ್ರಶಾಂತ್ ಸಂಬರ್ಗಿ ಅವರು ಈ ಬಾರಿ ತಮ್ಮ ಮೆಚ್ಚಿನ ಸ್ಪರ್ಧಿ ಯಾರು ಈ ಬಾರಿ ಯಾರು ಗೆಲ್ಲಬಹುದು ಎಂಬ ಊಹೆಯನ್ನು ಮಾಡಿದ್ದಾರೆ. ಸಂಬರ್ಗಿ ಪ್ರಕಾರ ಈ ಬಾರಿಯ ವಿನ್ನರ್ ಯಾರು? ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ಲಕ್ಷಾಂತರ ರೂ ಲಂಚ ಆರೋಪ: CPRI ಅಧಿಕಾರಿ ಮನೆ ಮೇಲೆ ಸಿಬಿಐ ದಾಳಿ, ಕೋಟ್ಯಂತರ ರೂ ಪತ್ತೆ – Kannada News | CBI Raids Bengaluru CPRI Official: 3.59 Cr Cash, Foreign Currency Seized

ಬೆಂಗಳೂರು, ಜನವರಿ 09: ಸೆಂಟ್ರಲ್ ಪವರ್ ರಿಸರ್ಚ್‌ ಇನ್ಸ್ಟಿಟ್ಯೂಟ್ ಜಂಟಿ ನಿರ್ದೇಶಕ ರಾಜಾರಾಮ್ ಮೋಹನ್ ರಾವ್ ಚೆನ್ನು ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ (CBI Raid) ಮಾಡಿದ್ದಾರೆ. 9.5 ಲಕ್ಷ ರೂ. ಲಂಚ ಆರೋಪ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದ್ದು, ಈ ವೇಳೆ ಅವರ ನಿವಾಸದಲ್ಲಿ 3.59 ಕೋಟಿ ರೂ ನಗದು ಪತ್ತೆ ಆಗಿದೆ. ವಿದೇಶಿ‌ ಕರೆನ್ಸಿ (Foreign currency) ಮತ್ತು ಚಿನ್ನಾಭರಣಗಳು ಸೇರಿದಂತೆ ಪ್ರಮುಖ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರಮುಖ ದಾಖಲೆಗಳು ವಶಕ್ಕೆ

ಲಂಚ ಆರೋಪ ಹಿನ್ನೆಲೆ ದೂರು ದಾಖಲಿಸಿಕೊಂಡು ಬೆಂಗಳೂರಿನಲ್ಲಿರುವ ರಾಜಾರಾಮ್ ಮೋಹನ್ ರಾವ್ ಚೆನ್ನು ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿ ವೇಳೆ ಕೋಟ್ಯಂತರ ರೂ ನಗದು ಸೇರಿದಂತೆ ಯುಎಸ್, ಹಾಂಗ್ ಕಾಂಗ್, ಸಿಂಗಾಪುರ್ ಡಾಲರ್, ಇಂಡೋನೇಷ್ಯಾ ರುಪಿಯಾ,
ಮಲೇಷಿಯನ್ ರಿಂಗಿಟ್, ಯುರೋ ಸೇರಿ ಯುವಾನ್ ವಿದೇಶಿ‌ ಕರೆನ್ಸಿ ಮನೆಯಲ್ಲಿ ಪತ್ತೆ ಆಗಿದೆ. ಜೊತೆಗೆ ಆಭರಣಗಳು ಸೇರಿದಂತೆ ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.

ರಾಜಾರಾಮ್ ಜೊತೆಗೆ ಅತುಲ್ ಖನ್ನಾ ಬಂಧನ

ಇನ್ನು ರಾಜಾರಾಮ್ ಮೋಹನ್ ರಾವ್ ಜೊತೆಗೆ ಸುಧೀರ್ ಗ್ರೂಪ್ ಆಫ್ ಕಂಪನಿಯ ನಿರ್ದೇಶಕನಾಗಿರುವ ಅತುಲ್ ಖನ್ನಾ ಕೂಡ ಬಂಧನವಾಗಿದೆ. ಸುಧೀರ್ ಗ್ರೂಪ್ ಆಫ್ ಕಂಪನಿ ಉತ್ಪಾದಿಸುವ ವಿದ್ಯುತ್ ಉಪಕರಣಗಳಿಗೆ ಅನುಕೂಲಕರ ಪರೀಕ್ಷಾ ವರದಿಗಳನ್ನ ನೀಡಲು ಲಂಚ ಪಡೆದ ಆರೋಪ ಹಿನ್ನೆಲೆ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ಶಿವಮೊಗ್ಗ ಮಹಾನಗರ ಪಾಲಿಕೆ ಮೇಲೆ ಲೋಕಾ ದಾಳಿ: ತಬ್ಬಿಬ್ಬಾದ ಸಿಬ್ಬಂದಿ

ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಶಿವಮೊಗ್ಗ ನಗರ ಪಾಲಿಕೆ ಕಂದಾಯ ವಿಭಾಗ, ಆಡಳಿತ ವಿಭಾಗ, ನ್ಯಾಯಾಂಗ ವಿಭಾಗ, ಟಪಾಲು ವಿಭಾಗದ ಕಚೇರಿಯಲ್ಲಿ ದಾಖಲೆ ಪರಿಶೀಲನೆ ಮಾಡಲಾಗಿದೆ. ಲೋಕಾಯುಕ್ತ ದಾಳಿ ವೇಳೆ ಮಹಾನಗರ ಪಾಲಿಕೆ ಸಿಬ್ಬಂದಿ ತಬ್ಬಿಬ್ಬಾದರು.

ಇದನ್ನೂ ಓದಿ: ಪ್ರತ್ಯೇಕ ಘಟನೆ: ಭೂಸ್ವಾಧೀನ ಪರಿಹಾರ ನೀಡದಕ್ಕೆ NHAI ಕಚೇರಿ, ಡಿಸಿ ಕಾರು ಜಪ್ತಿ

ವಿಲೇವಾರಿಯಾಗದೇ ಇರುವ ಅರ್ಜಿಗಳನ್ನ ಅಧಿಕಾರಿಗಳು ಪರಿಶೀಲಿಸಿದರು. ಈ ವೇಳೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಬೆಳಗ್ಗೆ 11 ಗಂಟೆಯಾದರೂ ಅಧಿಕಾರಿಗಳು ಕಚೇರಿಗಳ ಬೀಗ ಹುಡುಕುತ್ತಿರುವುದು ನೋಡಿ ಸಿಬ್ಬಂದಿಯನ್ನ ತರಾಟೆ ತೆಗೆದುಕೊಂಡರು. ಮಹಾನಗರ ಪಾಲಿಕೆ ಸಿಬ್ಬಂದಿ ಐಡಿ ಕಾರ್ಡ್ ಹಾಕದೆ ಇರುವುದಕ್ಕೂ ತರಾಟೆ ತೆಗೆದುಕೊಂಡರು. ದಿನನಿತ್ಯ ನಿರ್ವಹಿಸುವ ಕಾರ್ಯದ ಬಗ್ಗೆ ಮಾಹಿತಿ ಇಲ್ಲದೆ ಸಿಬ್ಬಂದಿ ಪರದಾಡಿದರು. ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ನಡೆಗೆ ಲೋಕಾಯುಕ್ತ ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link