ಗಿಲ್ಲಿ ಮೇಲೆ ರಕ್ಷಿತಾಗೆ ನಿಜಕ್ಕೂ ಆಗಿದೆ ಪ್ರೀತಿ? ಈ ಘಟನೆಗಳೇ ಸಾಕ್ಷಿ – Kannada News | Rakshita Shetty’s Gilli Love in Bigg Boss Kannada: Is it True

ಗಿಲ್ಲಿ ರೀತಿಯ ಹುಡುಗ ಬೇಕು ಎಂದು ರಕ್ಷಿತಾ ಶೆಟ್ಟಿ ಆಗಾಗ ಹೇಳುತ್ತಾ ಇರುತ್ತಾರೆ. ಬಿಗ್ ಬಾಸ್ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲಿ ಅವರಿಗೆ ಗಿಲ್ಲಿ ಮೇಲಿನ ಒಲವು ಹೆಚ್ಚಿದಂತೆ ಕಾಣಿಸುತ್ತಿದೆ. ಅವರು ಸದಾ ಗಿಲ್ಲಿ ಜೊತೆ ಇರುತ್ತಾರೆ. ಗಿಲ್ಲಿಗೆ ಪ್ರೀತಿ ವಿಷಯದಲ್ಲಿ ಕೆಲವು ಸಲಹೆಗಳನ್ನು ಕೂಡ ನೀಡಿದ್ದಾರೆ. ಇವುಗಳನ್ನು ನೋಡಿದರೆ ಗಿಲ್ಲಿ ಮೇಲೆ ರಕ್ಷಿತಾಗೆ ನಿಜಕ್ಕೂ ಲವ್ ಆಗಿದೆಯೇ ಎಂಬ ಪ್ರಶ್ನೆ ಮೂಡುವಂತೆ ಆಗಿದೆ. ಆ ಬಗ್ಗೆ ಇಲ್ಲಿದೆ ವಿವರ. ಗಿಲ್ಲಿ ನಟ ಹಾಗೂ ಕಾವ್ಯಾ ಮಧ್ಯೆ ಒಳ್ಳೆಯ ಬಾಂಡಿಂಗ್…

Read More

Indian Army Recruitment 2026: ಭಾರತೀಯ ಸೇನೆಯಲ್ಲಿ 350 ಇಂಜಿನಿಯರಿಂಗ್ ಪದವೀಧರರ ನೇಮಕಾತಿ; ತಿಂಗಳಿಗೆ 1,77,500 ರೂ. ಸಂಬಳ – Kannada News | Indian Army SSC Tech 67 Recruitment 2026: 350 Engineering Graduate Posts

ಭಾರತೀಯ ಸೇನೆಯು ಇತ್ತೀಚೆಗೆ 67ನೇ ಶಾರ್ಟ್ ಸರ್ವಿಸ್ ಕಮಿಷನ್ (Tech) ಕೋರ್ಸ್‌ಗೆ ಪ್ರವೇಶಕ್ಕಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಕೋರ್ಸ್‌ಗೆ ಪ್ರವೇಶಕ್ಕಾಗಿ ಎಂಜಿನಿಯರಿಂಗ್ ಪದವೀಧರ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 350 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಪುರುಷ ಅಭ್ಯರ್ಥಿಗಳು ಮಾತ್ರ SSC ಟೆಕ್ 67 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಹೊಂದಿರುತ್ತಾರೆ. ಆಯ್ಕೆಯಾದವರಿಗೆ ಅಕ್ಟೋಬರ್ 2026 ರಿಂದ ಪ್ರಿ-ಕಮಿಷನಿಂಗ್ ಟ್ರೈನಿಂಗ್ ಅಕಾಡೆಮಿ (PCTA) ನಲ್ಲಿ ಕೋರ್ಸ್ ಪ್ರಾರಂಭವಾಗುತ್ತದೆ. ಅರ್ಹ ಅಭ್ಯರ್ಥಿಗಳು ಅಧಿಕೃತ…

Read More

ಕಾಲೇಜು ಆಡಳಿತ ಮಂಡಳಿಯಿಂದ ಕಿರುಕುಳ ಆರೋಪ: ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ – Kannada News | Harassment Allegations Against Management: Dental Student Loses Her Life in Anekal

ಆನೇಕಲ್​​, ಜನವರಿ 09: ಡೆಂಟಲ್ ಕಾಲೇಜು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ನಡೆದಿದೆ. ಯಶಸ್ವಿನಿ (23) ಮೃತ ವಿದ್ಯಾರ್ಥಿನಿಯಾಗಿದ್ದು, ಕಾಲೇಜು ಆಡಳಿತ ಮಂಡಳಿ ಕಿರುಕುಳಕ್ಕೆ ನೊಂದ ಈಕೆ ದುಡುಕಿನ ನಿರ್ಧಾರ ತೆಗೆದುಕೊಂಡಿರುವ ಆರೋಪ ಕೇಳಿಬಂದಿದೆ. ಮೃತ ವಿದ್ಯಾರ್ಥಿನಿಯ ಸ್ನೇಹಿತರು ಶವಾಗಾರದ ಮುಂದೆ ಪ್ರತಿಭಟನೆ ನಡೆಸಿದ್ದು, ಯಶಸ್ವಿನಿ ಸಾವಿಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ. ಪರಿಮಳ-ಭೋದೆವಯ್ಯ ದಂಪತಿಯ ಒಬ್ಬಳೇ ಮಗಳು ಯಶಸ್ವಿನಿ ಬೊಮ್ಮನಹಳ್ಳಿಯ ಪ್ರತಿಷ್ಠಿತ ಖಾಸಗಿ ಡೆಂಟಲ್​​ ಕಾಲೇಜಿನಲ್ಲಿ Oral Medicine and…

Read More

ಸಿಗದ ವ್ಹೀಲ್​ಚೇರ್, ಕೆಲಸದ ಒತ್ತಡ, ನ್ಯಾಯಾಲಯದಿಂದ ಹಾರಿ ಪ್ರಾಣ ಬಿಟ್ಟ ದಿವ್ಯಾಂಗ ಕ್ಲರ್ಕ್​ – Kannada News | Disabled Clerk Suicide: Saket Court Work Pressure, Wheelchair Plea Ignored

ನವದೆಹಲಿ, ಜನವರಿ 09: ಕೆಲಸದ ಒತ್ತಡದಿಂದ ಬೇಸತ್ತು ದಿವ್ಯಾಂಗ ಗುಮಾಸ್ತರೊಬ್ಬರು ದೆಹಲಿಯ ಸಾಕೇತ್ ನ್ಯಾಯಾಲಯದ ಕಟ್ಟಡದಿಂದ ಹಾರಿ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ಉದ್ಯೋಗಿಯನ್ನು ನ್ಯಾಯಾಲಯದ ಆವರಣದಲ್ಲಿ ಗುಮಾಸ್ತರಾಗಿದ್ದ ಹರೀಶ್ ಸಿಂಗ್ ಮಹಾರ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆತ್ಮಹತ್ಯೆ ಪತ್ರವೂ ಪತ್ತೆಯಾಗಿದ್ದು, ಅದರಲ್ಲಿ ಅವರು ಈ ಕಠಿಣ ಕ್ರಮ ತೆಗೆದುಕೊಳ್ಳಲು ಕಾರಣಗಳನ್ನು ವಿವರಿಸಿದ್ದಾರೆ. ಹರೀಶ್ ಶೇ.60ರಷ್ಟು ಅಂಗವಿಕಲರಾಗಿದ್ದರು. ತಮ್ಮ ಸಾವಿಗೆ ಯಾರೂ ಕಾರಣರಲ್ಲ ಎಂದು ಆತ್ಮಹತ್ಯೆಗೆ…

Read More

ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ! – Kannada News | Biligirirangana Betta Fire: Shops Burnt, Lakhs Loss, Cylinders Explode

ಚಾಮರಾಜನಗರ, ಜನವರಿ 09: ಬಿಳಿಗಿರಿರಂಗನ ಬೆಟ್ಟದ ಬಸ್ ನಿಲ್ದಾಣದ ಬಳಿ ಸಂಭವಿಸಿದ ಅಗ್ನಿ ಅವಘಡದಲ್ಲಿ 8ಕ್ಕೂ ಹೆಚ್ಚು ಅಂಗಡಿಗಳು ಭಸ್ಮವಾಗಿವೆ. ಮೂರಕ್ಕೂ ಹೆಚ್ಚು ಸಿಲಿಂಡರ್‌ಗಳು ಸ್ಫೋಟಗೊಂಡಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದು, ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಶಾರ್ಟ್ ಸರ್ಕ್ಯೂಟ್ ಆಗಿರಬಹುದು ಅಥವಾ ಕಿಡಿಗೇಡಿಗಳ ಕೃತ್ಯವಾಗಿದ್ದಿರಬಹುದೆಂದು ಶಂಕೆ ವ್ಯಕ್ತವಾಗಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರ ಸ್ಫೋಟಕ ಹೇಳಿಕೆ – Kannada News | K.N. Rajanna says he is an aspirant for the KPCC president post

ಬೆಂಗಳೂರು, ಜನವರಿ 09: ಪಕ್ಷದ ಅಧ್ಯಕ್ಷ ಗಿರಿ ಕೊಟ್ರೆ ಮಂತ್ರಿ ಸ್ಥಾನ ಬಿಡ್ತೀನಿ ಎಂದು ಸಚಿವನಾಗಿದ್ದಾಗಲೇ ಹೇಳಿದ್ದೆ. ಈಗ ಬಿಡೋಕೆ ಯಾವುದೇ ಸ್ಥಾನ ಬಾಕಿ ಇಲ್ಲ. ನಾನು ಕೆಪಿಸಿಸಿ ಅಧ್ಯಕ್ಷನಾದ್ರೆ ಪಕ್ಷ ಸಂಘಟನೆ ಮಾಡ್ತೀನಿ. ಹೈಕಮಾಂಡ್​​ಗೆ ಈ ಬಗ್ಗೆ ವಿಷಯ ತಿಳಿಸಿದ್ದೇನೆ ಎಂದು ಮಾಜಿ ಸಚಿವ ಕೆ.ಎನ್​. ರಾಜಣ್ಣ ಹೇಳಿದ್ದಾರೆ. ಸಂಪುಟ ಪುನಾರಚನೆ ಆದ್ರೆ ಮತ್ತೆ ಸಚಿವರು ಆಗ್ತೀರಾ ಎಂಬ ಪ್ರಶ್ನೆಗೂ ಉತ್ತರಿಸಿದ ಅವರು, ಸಚಿವನಾದರೂ ಹೀಗೆ ಇರ್ತೇನೆ. ಇಲ್ಲ ಅಂದ್ರೂ ಹೀಗೆ ಇದ್ದೇನೆ. ನಾನು ಯಾವತ್ತೂ…

Read More

Shukra Dosha Remedies: ಜಾತಕದಲ್ಲಿ ಶುಕ್ರ ದೋಷವಿದ್ದರೆ ಶುಕ್ರವಾರದಂದು ತಪ್ಪದೇ ಈ ಕೆಲಸ ಮಾಡಿ – Kannada News | Shukra Dosha Remedies: Strengthen Weak Venus on Fridays with Vastu Tips

ಜಾತಕದಲ್ಲಿ ಶುಕ್ರ ದೋಷ ಅಥವಾ ಶುಕ್ರ ದುರ್ಬಲ ಸ್ಥಾನದಲ್ಲಿ ಇರುವವರಿಗೆ ಶುಕ್ರವಾರದಂದು ವಾಸ್ತು ಶಾಸ್ತ್ರವು ಕೆಲವು ವಿಶೇಷ ಪರಿಹಾರಗಳನ್ನು ಸೂಚಿಸಿದೆ. ಈ ಪರಿಹಾರಗಳನ್ನು ಅನುಸರಿಸಿದರೆ, ಜಾತಕದಲ್ಲಿ ಶುಕ್ರ ದೋಷದ ಪರಿಣಾಮಗಳು ನಿವಾರಣೆಯಾಗುತ್ತವೆ ಮತ್ತು ದುರ್ಬಲ ಶುಕ್ರನು ಬಲಶಾಲಿಯಾಗುತ್ತಾನೆ. ಇದರೊಂದಿಗೆ, ಶುಕ್ರನು ಅಶುಭ ಫಲಿತಾಂಶಗಳನ್ನು ನೀಡುವ ಬದಲು ಶುಭ ಫಲಿತಾಂಶಗಳನ್ನು ನೀಡಲು ಪ್ರಾರಂಭಿಸುತ್ತಾನೆ ಎಂದು ನಂವಲಾಗಿದೆ. ಜಾತಕದಲ್ಲಿ ಶುಕ್ರ ದೋಷದ ಲಕ್ಷಣ: ಜಾತಕದಲ್ಲಿ ಶುಕ್ರ ದೋಷ ಅಥವಾ ಶುಕ್ರ ದುರ್ಬಲ ಸ್ಥಾನದಲ್ಲಿರುವ ಜನರು ಆರ್ಥಿಕ ನಷ್ಟವನ್ನು ಅನುಭವಿಸುತ್ತಾರೆ. ಅಂತಹ…

Read More

ಸರ್ಕಾರಿ ಶಾಲೆಯ ಜಾಗ ಕಬಳಿಸಿ ನಿರ್ಮಾಣವಾಗ್ತಿದೆ ಮಸೀದಿ! ಮುಳಬಾಗಿಲು ಗುಂಡ್ಲಹಳ್ಳಿ ಗ್ರಾಮದಲ್ಲಿ ಭಾರಿ ವಿವಾದ – Kannada News | Alleged Encroachment of Government School Land for Mosque Construction Sparks Major Controversy in Mulbagal, Kolar

ಸರ್ಕಾರಿ ಶಾಲೆಯ ಜಾಗ ಕಬಳಿಸಿ ನಿರ್ಮಾಣವಾಗ್ತಿದೆ ಮಸೀದಿ! ಕೋಲಾರ, ಜನವರಿ 9: ಕೋಲಾರ (Kolar) ಜಿಲ್ಲೆಯ ಮುಳಬಾಗಿಲು ತಾಲೂಕಿನ ಸಿ.ಗುಂಡ್ಲಹಳ್ಳಿ ಗ್ರಾಮದಲ್ಲಿ ಸರ್ಕಾರಿ ಶಾಲೆಯ ಜಾಗವನ್ನು ಒತ್ತುವರಿ ಮಾಡಿ ಮಸೀದಿ (Mosque) ನಿರ್ಮಾಣ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ ವಿಷಯ ಗ್ರಾಮದಲ್ಲಿ ವಿವಾದಕ್ಕೆ ಕಾರಣವಾಗಿದ್ದು, ಸ್ಥಳೀಯರು ಹಾಗೂ ಗ್ರಾಮಸ್ಥರು ಮಸೀದಿ ನಿರ್ಮಾಣಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಗ್ರಾಮದ ಸರ್ಕಾರಿ ಶಾಲೆಗೆ ಸೇರಿದ ಜಾಗದಲ್ಲಿ ಹಾಗೂ ಶಾಲಾ ಆವರಣದ ಸಮೀಪದಲ್ಲಿರುವ ದೇವಸ್ಥಾನದ ಬಳಿಯೇ ಮಸೀದಿ ನಿರ್ಮಾಣ ಕಾಮಗಾರಿ…

Read More

ತುಮಕೂರು ಜನರಿಗೆ ಗುಡ್​​ನ್ಯೂಸ್​: ಮೆಟ್ರೋ ಮಾರ್ಗದ ಕಾಮಗಾರಿ ಆರಂಭ, ಯಾವೆಲ್ಲ ಮಾರ್ಗದಲ್ಲಿ ಸಂಚಾರಿಸಲಿದೆ? – Kannada News | Namma Metro Phase 4: Bengaluru Tumakuru DPR Finalized

ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಗೆ ಅಧಿಕೃತವಾಗಿ ಘೋಷಣೆ ಬೆಂಗಳೂರು, ಜ.9: ಬಹುಕಾಲ ಬೇಡಿಕೆಯಾಗಿದ್ದ ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಯು ಅಧಿಕೃತವಾಗಿ ಘೋಷಣೆ ಆಗಿ, ಇದೀಗ ಅಡಿಪಾಯಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಮಹತ್ವಾಕಾಂಕ್ಷೆಯ ಅಂತರ್​ ಜಿಲ್ಲಾ ಕಾರಿಡಾರ್‌ ಬಗ್ಗೆ ಯೋಜನಾ ವರದಿ (ಡಿಪಿಆರ್) ತಯಾರಿಕೆ ಮಾಡಲಾಗಿದೆ. ನಿರ್ಮಾಣ ಕಾರ್ಯಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇದರ ವೆಚ್ಚ ಹಾಗೂ ವಿಸ್ತರಣೆ ಹೆಚ್ಚಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಯೋಜನೆ ಬಂದರೆ ಬೆಂಗಳೂರು ಹಾಗೂ ತುಮಕೂರು ಜನರಿಗೆ…

Read More

ಪಾರ್ಟಿಯಲ್ಲಿ ಶಂಕರ್​​ ನಾಗ್ ಹಾಡು ಹಾಡಿದ ಯಶ್; ಇಲ್ಲಿದೆ ವಿಡಿಯೋ – Kannada News | Yash Sings Shankar Nag Song: Viral Video Proves Kannada Love

ನಟ ರಾಕಿಂಗ್ ಸ್ಟಾರ್ ಯಶ್ ಅವರು ಶಂಕರ್​ ನಾಗ್ ಅವರ ದೊಡ್ಡ ಅಭಿಮಾನಿ. ಇದು ಹಲವು ಬಾರಿ ಸಾಬೀತಾಗಿದೆ. ಯಶ್​ ಅವರು ‘ಗೂಗ್ಲಿ’ ಸಿನಿಮಾದಲ್ಲಿ ಶಂಕರ್ ನಾಗ್ ಗೆಟಪ್​​ನಲ್ಲಿಯೂ ಕಾಣಿಸಿಕೊಂಡಿದ್ದರು. ಈಗ ಯಶ್ ಅವರು ಪಾರ್ಟಿಯಲ್ಲಿ ಶಂಕರ್ ನಾಗ್ ಸಿನಿಮಾದ ಹಾಡು ಹಾಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಯಶ್ ಅವರ ಕನ್ನಡ ಪ್ರೀತಿಗೆ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ಅಂದಹಾಗೆ ಇದು ಅವರ ಬರ್ತ್​​​ಡೇ ಪಾರ್ಟಿ ಸಂದರ್ಭದ ವಿಡಿಯೋ ಹೌದೋ ಅಥವಾ ಇಲ್ಲವೋ…

Read More