ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ರಾತ್ರಿಪೂರ್ತಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ

ಆನೇಕಲ್​, ಜನವರಿ 08: ಹಳೆ ದ್ವೇಷದ ಹಿನ್ನೆಲೆ ರೌಡಿಶೀಟರ್ ಗಂಗಾ ಮತ್ತು ಆತನ ಗ್ಯಾಂಗ್, ರೌಡಿಶೀಟರ್ ಕಾರ್ತಿಕ್ ಅಲಿಯಾಸ್ ಸಲಗನನ್ನು ಅಪಹರಿಸಿ ರಾತ್ರಿಪೂರ್ತಿ ಚಿತ್ರಹಿಂಸೆ ನೀಡಿದೆ. ಆನೇಕಲ್ ತಾಲೂಕಿನ ಹುಸ್ಕೂರು ಬಳಿ ಈ ಘಟನೆ ನಡೆದಿದ್ದು, ಕಾರ್ತಿಕ್‌ನನ್ನು ಕಿಡ್ನ್ಯಾಪ್ ಮಾಡುವುದಲ್ಲದೆ, ಆತನ ಬೆರಳನ್ನು ಕತ್ತರಿಸಿ ಕ್ರೂರವಾಗಿ ಹಲ್ಲೆ ಮಾಡಲಾಗಿದೆ. ಇಡೀ ರಾತ್ರಿ ಚಿತ್ರಹಿಂಸೆ ನೀಡಿದ ನಂತರ, ಗ್ಯಾಂಗ್ ಕಾರ್ತಿಕ್‌ನನ್ನು ಹುಸ್ಕೂರು ಬಳಿಯೇ ರಸ್ತೆಗೆ ಎಸೆದು ಪರಾರಿಯಾಗಿದೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಕಾರ್ತಿಕ್‌ನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ…

Read More

ಖುಲಾಯಿಸಲಿದೆಯಾ ಅದೃಷ್ಟ… ಟಿ20 ವಿಶ್ವಕಪ್​ಗೆ ಶ್ರೇಯಸ್ ಅಯ್ಯರ್ ಆಯ್ಕೆ ಸಾಧ್ಯತೆ – Kannada News | T20 World Cup 2026: Shreyas Iyer in line to replace injured Tilak Varma

ಟಿ20 ವಿಶ್ವಕಪ್​ಗೆ 15 ಸದಸ್ಯರುಗಳ ಭಾರತ ತಂಡವನ್ನು ಘೋಷಿಸಲಾಗಿದೆ. ಈ ತಂಡದಲ್ಲಿ ಸ್ಥಾನ ಪಡೆದಿದ್ದ ಟೀಮ್ ಇಂಡಿಯಾದ ಎಡಗೈ ದಾಂಡಿಗ ತಿಲಕ್ ವರ್ಮಾ ಗಾಯಗೊಂಡಿದ್ದಾರೆ. ಈ ಗಾಯದ ಕಾರಣ ಅವರು ಮುಂಬರುವ ಟಿ20 ಸರಣಿಯಲ್ಲಿ ಕಾಣಿಸಿಕೊಳ್ಳುವುದು ಅನುಮಾನ. ಏಕೆಂದರೆ ತೊಡೆಸಂಧು ಗಾಯದ ಸಮಸ್ಯೆಗೆ ಒಳಗಾಗಿರುವ ತಿಲಕ್ ವರ್ಮಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಯ ಮೊದಲೆರಡು ಪಂದ್ಯಗಳಿಗೆ ಅಲಭ್ಯರಾಗಲಿರುವುದು ಖಚಿತವಾಗಿದೆ. ಆ ಬಳಿಕ ಸಂಪೂರ್ಣ ಫಿಟ್​ನೆಸ್ ಸಾಧಿಸಿದರೆ ಮಾತ್ರ ಅವರು ನ್ಯೂಝಿಲೆಂಡ್ ವಿರುದ್ಧದ…

Read More

ಅವನಿಗೆ ಕೊಟ್ಟ ಮಾತು ನೆರವೇರಿಸುತ್ತೇನೆ; ಮಗನ ಡಿಢೀರ್ ಸಾವಿನಿಂದ ಜರ್ಝರಿತಗೊಂಡ ಮೈನಿಂಗ್ ಕಿಂಗ್ – Kannada News | Vedanta Chairman Anil Agarwal’s son Agnivesh dies of cardiac arrest in US

ಅನಿಲ್ ಅಗರ್ವಾಲ್ ಮತ್ತು ಮಗ ಅಗ್ನಿವೇಶ್ ಅಗರ್ವಾಲ್ ನವದೆಹಲಿ, ಜನವರಿ 8: ವೇದಾಂತ ಗ್ರೂಪ್​ನ ಛೇರ್ಮನ್ ಅನಿಲ್ ಅಗರ್ವಾಲ್ ಅವರ ಮಗ ಅಗ್ನಿವೇಶ್ ಅಗರ್ವಾಲ್ (Agnivesh Agarwal) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ತಂದೆ ಅನಿಲ್ ಅಗರ್ವಾಲ್, ತಾಯಿ ಕಿರಣ್ ಅಗರ್ವಾಲ್ ಮತ್ತು ಸಹೋದರಿ ಪ್ರಿಯಾ ಅಗರ್ವಾಲ್ ಹೆಬ್ಬಾರ್ ಅವರನ್ನು ಅಗಲಿದ್ದಾರೆ. ವರದಿಗಳ ಪ್ರಕಾರ, ಅಮೆರಿಕದಲ್ಲಿ ಅಗ್ನಿವೇಶ್ ಹೃದಯ ಸ್ತಂಭನಗೊಂಡು (cardiac arrest) ಇಹಲೋಕ ತ್ಯಜಿಸಿದ್ದಾರೆ. ಅಗ್ನಿವೇಶ್ ನಿಧನಕ್ಕೆ ತಂದೆ ಅಗರ್ವಾಲ್, ಪ್ರಧಾನಿ ನರೇಂದ್ರ…

Read More

ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ – Kannada News | Next CM DK Shivakumar Slogans Echo at KPCC Office Bangalore Amid Leadership Buzz in Karnataka Congress

ಬೆಂಗಳೂರು, ಜನವರಿ 8: ಬೆಂಗಳೂರಿನ ಕೆಪಿಸಿಸಿ ಕಚೇರಿ ಮುಂದೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿ ಎಂಬ ಘೋಷಣೆಗಳು ಮೊಳಗಿವೆ. ಕಾರ್ಯಕರ್ತರು, ‘‘ಮುಂದಿನ ಸಿಎಂ ಡಿಕೆ ಶಿವಕುಮಾರ್ ಸಾಹೇಬ್ರಿಗೆ ಜೈ’’ ಎಂದು ಘೋಷಣೆ ಕೂಗಿ ಜೈಕಾರ ಹಾಕಿದ್ದಾರೆ. ಆದರೆ, ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್ ಅವರನ್ನು ಅಸ್ಸಾಂ ಚುನಾವಣೆಗೆ ಹಿರಿಯ ವೀಕ್ಷಕರನ್ನಾಗಿ ನೇಮಿಸಿದೆ. ಈ ನಿರ್ಧಾರ, ನಾಯಕತ್ವ ಬದಲಾವಣೆಯ ಕುರಿತ ಚರ್ಚೆಗಳಿಗೆ ಪಂಚರಾಜ್ಯಗಳ ಚುನಾವಣೆ ಮುಗಿಯುವವರೆಗೆ ವಿರಾಮ ನೀಡುವ ಪರೋಕ್ಷ ಸಂದೇಶ ಎಂದು ಕಾಂಗ್ರೆಸ್ ವಲಯದಲ್ಲಿ…

Read More

ಬೆಂಗಳೂರಿನಲ್ಲಿ 6 ವರ್ಷದ ಬಾಲಕಿ ಕೊಲೆ ಪ್ರಕರಣ: ಸಿಸಿಟಿವಿ ದೃಶ್ಯದಿಂದ ಹೊರಬಿತ್ತು ಸ್ಫೋಟಕ ಸತ್ಯ – Kannada News | Bengaluru Child Abduction: Yusuf Meer Suspect in Whitefield Murder Probe

ಬೆಂಗಳೂರು, ಜ.8: ವೈಟ್ ಫೀಲ್ಡ್ ಬಳಿ ಆರು ವರ್ಷದ ಬಾಲಕಿಯನ್ನು (Bengaluru Child Abduction) ದುಷ್ಕರ್ಮಿಗಳು ಅಪಹರಿಸಿ ಕೊಲೆ ಮಾಡಿ ಮೋರಿಗೆ ಎಸೆದ ಪ್ರಕರಣ ಸಂಬಂಧಿಸಿದಂತೆ ಸ್ಫೋಟಕ ಸತ್ಯ ಹೊರ ಬಂದಿದೆ. ಪಶ್ಚಿಮ ಬಂಗಾಳ ಮೂಲದ ಇಜಾಮುಲ್‌ ಶೇಕ್‌ ಎಂಬುವವರ ಪುತ್ರಿ ಶಹಜಾನ್‌ ಕತೂನ್‌ (6) ಕೊಲೆಯಾದ ಬಾಲಕಿ. ಇದೀಗ ಈ ಬಾಲಕಿಯ ಕೊಲೆಯ ಸುತ್ತ, ಹಲವು ಅನುಮಾನಗಳು ಮೂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ನಡೆದಿದ್ದಾರೆ.ಈ ಬಾಲಕಿಯ ಕೊಲೆಗೆ ಆಕೆಯ ತಾಯಿಯೇ ನೇರ ಕಾರಣ ಎಂದು…

Read More

Viral Video: ಹಣ ಕೊಡಿ ಇಲ್ದಿದ್ರೆ ಟ್ರಕ್ ಪಂಕ್ಚರ್ ಮಾಡ್ತೀವಿ, ಕೈಯಲ್ಲಿ ಮೊಳೆಗಳ ಹಿಡಿದು ಹೆಂಗಸರ ಹಗಲು ದರೋಡೆ – Kannada News | Viral Video Shows Women Alleged Extortion of Truck Drivers, Police Take Cognisance

ಕಸ ಕುಡಿಸುವ ಕೈಯಲ್ಲಿ ಈ ಮಹಿಳೆಯರು ಹಿಡಿದಿರುವುದು ಪೊರಕೆಯಲ್ಲ, ಮೊಳೆ ತುಂಬಿರುವ ಕೋಲು, ಇದು ಅವರನ್ನು ರಕ್ಷಿಸಿಕೊಳ್ಳುವುದಕ್ಕೋಸ್ಕರ ಅಲ್ಲವೇ ಅಲ್ಲ, ಜನರನ್ನು ಬೆದರಿಸಿ ಸುಲಿಗೆ ಮಾಡಲು. ರಸ್ತೆಗಳಲ್ಲಿ ಟ್ರಕ್ ಚಾಲಕರನ್ನು ಬೆದರಿಸಿ ಹಣ(Money) ವಸೂಲಿ ಮಾಡುವ ಮಹಿಳೆಯರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮೊಳೆಯನ್ನು ಕೋಲಿಗೆ ಅಂಟಿಸಿಕೊಂಡು ರಸ್ತೆಯಲ್ಲಿ ನಿಂತಿರುವ ಮಹಿಳೆಯರು ಅಲ್ಲಿ ಹೋಗಿ ಬರುವ ಟ್ರಕ್ ಚಾಲಕರ ಬಳಿ ಹಣ ವಸೂಲಿ ಮಾಡಿದ್ದಾರೆ. ಎಲ್ಲರೂ ಇದು ಜನರನ್ನು ಬೆದರಿಸುವ ಮಾರ್ಗ ಎಂದೇ ಕರೆದಿದ್ದಾರೆ. ಈ…

Read More

‘ಟಾಕ್ಸಿಕ್’ ಇದು ನಿಜಕ್ಕೂ ದೊಡ್ಡವರ ಕತೆ, ಸಣ್ಣವರಿಗಲ್ಲ – Kannada News | Yash’s Toxic movie is only for adults not for minors

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ಇಂದು (ಜನವರಿ 08) ಬಿಡುಗಡೆ ಆಗಿದೆ. ಭಾರತದ ಬಹು ನಿರೀಕ್ಷಿತ ಸಿನಿಮಾ ಎನಿಸಿಕೊಂಡಿರುವ ‘ಟಾಕ್ಸಿಕ್’ ಆ ನಿರೀಕ್ಷೆಗೆ ತಕ್ಕಂತೆ ಗುಣಮಟ್ಟದ ಮೇಕಿಂಗ್ ಉಳ್ಳ ಟೀಸರ್ ಅನ್ನೇ ಬಿಡುಗಡೆ ಮಾಡಿದೆ. ಯಶ್, ‘ಕೆಜಿಎಫ್’ ಸಿನಿಮಾಕ್ಕಿಂತಲೂ ಹೆಚ್ಚು ರಗಡ್ ಆಗಿ ಸಿನಿಮಾನಲ್ಲಿ ಕಾಣಿಸಿಕೊಂಡಿರುವುದು ಟೀಸರ್​​ನಿಂದಲೇ ತಿಳಿಯುತ್ತಿದೆ. ಸಿನಿಮಾವನ್ನು ಪಕ್ಕಾ ಹಾಲಿವುಡ್ ‘ಮಾನದಂಡ’ಗಳಿಗೆ ಅನುಗುಣವಾಗಿ ನಿರ್ಮಿಸಿರುವುದು ಟೀಸರ್​​ನಿಂದಲೇ ತಿಳಿಯುತ್ತಿದೆ. ಜೊತೆಗೆ ‘ಟಾಕ್ಸಿಕ್’ ಸಿನಿಮಾ ಪಕ್ಕಾ ‘ದೊಡ್ಡವರ’ ಸಿನಿಮಾ, ಈ ಸಿನಿಮಾ ಕಿರಿಯರಿಗಲ್ಲ ಎಂಬುದನ್ನು…

Read More

Video: ಟೊಮೊಟೊ ಕೊಡಲ್ಲ ಎಂದಿದ್ದಕ್ಕೆ ಮನೆಯೊಡತಿಗೆ ಬೆದರಿಕೆ ಹಾಕಿದ ಸಾಕು ಗಿಳಿ – Kannada News | Parrot threatens owner with calling police

ಗಿಳಿ (Parrot) ಬುದ್ದಿವಂತ ಪಕ್ಷಿಎನ್ನುವುದು ಎಲ್ಲರಿಗೂ ತಿಳಿದ ವಿಚಾರ. ಮನುಷ್ಯರಂತೆ ಮಾತನಾಡಬಲ್ಲದು ಕೂಡ. ಹೀಗಾಗಿ ಎಲ್ಲರೂ ಈ ಗಿಳಿಯನ್ನು ಸಾಕಲು ಇಷ್ಟ ಪಡುತ್ತಾರೆ. ಆದರೆ ಇಲ್ಲೊಂದು ಸಾಕು ಗಿಳಿಯೂ ಮನೆ ಒಡತಿಗೆ (owner) ಬೆದರಿಕೆ ಹಾಕಿದೆ. ಟೊಮೊಟೊ ಕೊಡದಿದ್ದರೆ ಪೊಲೀಸರನ್ನು ಕರೆಯುತ್ತೇನೆ ಎಂದು ಹೆದರಿಸಿದೆ. ಗಿಳಿಯ ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. @aalianadim ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋ ಮನೆಯ ಸಾಕು ಗಿಳಿಯದ್ದಾಗಿದೆ. ಪಂಜರದಲ್ಲಿರುವ ಗಿಳಿಯೂ ಮಹಿಳೆಯ ಬಳಿ ಟೊಮೆಟೊ…

Read More

ಚಿಕ್ಕಮಗಳೂರು: ಮುತ್ತಿಗೆಪುರ ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನಯಾನ ಭಾಗ್ಯ! ಫ್ಲೈಟ್​ನಲ್ಲಿ ಚಿಣ್ಣರ ಸಂಭ್ರಮ ನೋಡಿ – Kannada News | Chikkamagaluru Government School Students Take First Flight Trip, Muttigepura Kids’ Joy Goes Viral

ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರವಾಸ ಕೈಗೊಂಡ ಈ ಮಕ್ಕಳು, ಫ್ಲೈಟ್‌ನಲ್ಲಿ ಪ್ರಯಾಣಿಸುವ ಮೂಲಕ ಜೀವನದಲ್ಲಿ ಮರೆಯಲಾಗದ ಅನುಭವ ಪಡೆದುಕೊಂಡಿದ್ದಾರೆ. ವಿಮಾನದಲ್ಲಿ ಕುಳಿತು ಹಾರಾಟದ ಸಂಭ್ರಮ ಅನುಭವಿಸಿದ ಪುಟ್ಟ ಮಕ್ಕಳ ಮುಖದಲ್ಲಿ ಕಂಡ ಖುಷಿ ನೋಡುವುದೇ ಒಂದು ಹಬ್ಬದಂತಿತ್ತು. ಬೆಂಗಳೂರಿಗೆ ಫ್ಲೈಟ್ ಮೂಲಕ ತೆರಳಿ, ಅಲ್ಲಿಂದ ಬಸ್‌ನಲ್ಲಿ ಹಿಂತಿರುಗುವಂತೆ ಪ್ರವಾಸವನ್ನು ಯೋಜಿಸಲಾಗಿತ್ತು. ಈ ವಿಶಿಷ್ಟ ಪ್ರವಾಸ ಶಿಕ್ಷಕರು, ಪೋಷಕರು, ದಾನಿಗಳು ಹಾಗೂ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (SDMC) ಅವರ ಸಹಕಾರದಿಂದ ಸಾಧ್ಯವಾಗಿದೆ. ಮಕ್ಕಳಿಗೆ ಪುಸ್ತಕದ ಪಾಠಕ್ಕಷ್ಟೇ ಸೀಮಿತವಲ್ಲದೆ,…

Read More

ಸಿದ್ದರಾಮಯ್ಯ-ಡಿ.ಕೆ. ಶಿವಕುಮಾರ್​​ ನಡುವೆ ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!

ಬೆಂಗಳೂರು, ಜನವರಿ 08: ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆಯ ಗಡುವು ಮತ್ತೆ ಮುಂದಕ್ಕೆ ಹೋಗಿದೆ. ಪಂಚರಾಜ್ಯ ಚುನಾವಣೆ ಮುಗಿಯುವವರೆಗೂ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳದಿರಲು ಹೈಕಮಾಂಡ್​​ ನಿರ್ಧರಿಸಿದೆ ಎನ್ನಲಾಗಿದೆ. ಇತ್ತೀಚೆಗೆ, ಸಿಎಂ ಸಿದ್ದರಾಮಯ್ಯ ‘ಎಷ್ಟು ದಿನ ಇರುತ್ತೇವೋ ಗೊತ್ತಿಲ್ಲ’ ಎಂದು ಹೇಳಿದ್ದರೆ, ಡಿ.ಕೆ. ಶಿವಕುಮಾರ್ ‘ಕೊಟ್ಟ ಮಾತಿಗೆ’ ಬದ್ಧರಾಗಿರಬೇಕು ಎಂದು ಹೇಳಿರೋದು ನಾನಾ ಚರ್ಚೆಗಳಿಗೆ ಕಾರಣವಾಗಿತ್ತು. ದೇವರಾಜು ಅರಸು ಅವರ ದಾಖಲೆಯನ್ನೂ ಸಿಎಂ ಆಗಿ ಸಿದ್ದರಾಮಯ್ಯ ಮುರಿದಿರುವ ಕಾರಣ, ಅಧಿಕಾರ ಹಸ್ತಾಂತರ ವಿಚಾರ ಮತ್ತೆ ಮುನ್ನೆಲೆಗೆ…

Read More