Category Archives: Blog

Your blog category

Love and Relationship: ಪ್ರೀತಿಯಲ್ಲಿ ಪದೇ ಪದೇ ನೀವು ಮೋಸ ಹೋಗುತ್ತಿದ್ದೀರಾ? ಜ್ಯೋತಿಷ್ಯ ಕಾರಣ ತಿಳಿಯಿರಿ – Kannada News | Astrology: 5th House and Love Relationships Remedies for Problems

ಜ್ಯೋತಿಷ್ಯ ಲೆಕ್ಕಾಚಾರಗಳ ಪ್ರಕಾರ, ಜಾತಕದ ಐದನೇ ಮನೆಯು ನಮ್ಮ ಹೃದಯದ ಭಾವನೆಗಳು, ಸೃಜನಶೀಲತೆ ಮತ್ತು ಪ್ರೇಮ ಸಂಬಂಧಗಳನ್ನು ನಿಯಂತ್ರಿಸುತ್ತದೆ. ಈ ಮನೆಯ ಅಧಿಪತಿ, ಐದನೇ ಮನೆ ಬಲಶಾಲಿಯಾಗಿದ್ದರೆ ಮತ್ತು ಶುಭ ಗ್ರಹಗಳಿಂದ ನೋಡಲ್ಪಟ್ಟಿದ್ದರೆ, ಆ ವ್ಯಕ್ತಿಯ ಪ್ರೇಮ ಜೀವನವು ಸಂತೋಷವಾಗಿರುತ್ತದೆ. ಆದಾಗ್ಯೂ, ಈ ಮನೆ ಕ್ರೂರ ಅಥವಾ ದುಷ್ಟ ಗ್ರಹಗಳಿಂದ ಪ್ರಭಾವಿತವಾದಾಗ, ಸಂಬಂಧಗಳು ಮುರಿಯಲು ಪ್ರಾರಂಭಿಸುತ್ತವೆ ಎಂದು ಹೇಳಲಾಗಿದೆ.

ನಿಮ್ಮ ಜಾತಕದ ಐದನೇ ಮನೆಯಲ್ಲಿ ಶನಿ, ಮಂಗಳ ಅಥವಾ ಸೂರ್ಯ ದುರ್ಬಲ ಸ್ಥಾನದಲ್ಲಿದ್ದರೆ, ಅದು ಪ್ರೇಮ ಸಂಬಂಧಗಳಿಗೆ ಒಳ್ಳೆಯ ಸಂಕೇತವಲ್ಲ. ಈ ಸಮಯದಲ್ಲಿ ನೀವು ಪ್ರೀತಿಯಲ್ಲಿ ಬಿದ್ದರೆ ಪದೇ ಪದೇ ನೀವು ಮೋಸಕೊಳಗಾಗುವುದಂತೂ ಖಂಡಿತಾ.

ಐದನೇ ಮನೆಯಲ್ಲಿ ಶನಿ ದುರ್ಬಲ ಸ್ಥಾನದಲ್ಲಿದ್ದರೆ ಇದು ಸಂಬಂಧಗಳು ಬೇರ್ಪಡುವಿಕೆಗೆ ಕಾರಣವಾಗಬಹುದು. ಇದಲ್ಲದೇ ಮಂಗಳ ದುರ್ಬಲ ಸ್ಥಾನದಲ್ಲಿದ್ದರೆ ಪ್ರೀತಿಯಲ್ಲಿ ಕೋಪ, ಹೆಮ್ಮೆ ಮತ್ತು ವಿವಾದಗಳನ್ನು ಸೃಷ್ಟಿಸುತ್ತದೆ. ಸೂರ್ಯ ಕೆಟ್ಟ ಸ್ಥಾನದಲ್ಲಿದ್ದರೆ, ಆ ವ್ಯಕ್ತಿ ತನ್ನ ಸಂಗಾತಿಯ ಭಾವನೆಗಳನ್ನು ನಿರ್ಲಕ್ಷಿಸಲು ಪ್ರಾರಂಭಿಸುತ್ತಾನೆ.

ಇದನ್ನೂ ಓದಿ: ಮನೆಯಲ್ಲಿ ತಪ್ಪಿಯೂ ಈ ಜಾಗದಲ್ಲಿ ಹಣ ಇಡಬೇಡಿ, ಸಾಲ ಹೆಚ್ಚಾಗಬಹುದು

ಜ್ಯೋತಿಷ್ಯ ಪರಿಹಾರಗಳು ಯಾವುವು?

  • ಐದನೇ ಮನೆಯನ್ನು ಬಲಪಡಿಸಿ: ನಿಮ್ಮ ಜಾತಕದ ಪ್ರಕಾರ ಐದನೇ ಮನೆಯನ್ನು ಆಳುವ ಗ್ರಹಕ್ಕೆ ಸಂಬಂಧಿಸಿದ ರತ್ನವನ್ನು ಧರಿಸುವುದರಿಂದ ಶುಭ ಫಲಿತಾಂಶಗಳು ಸಿಗುತ್ತವೆ.
  • ರಾಹುವಿಗೆ ಪರಿಹಾರಗಳು: ರಾಹುವು ಅಡೆತಡೆಗಳನ್ನು ಸೃಷ್ಟಿಸುತ್ತಿದ್ದರೆ, ಶನಿವಾರ ಹರಿಯುವ ನೀರಿನಲ್ಲಿ ತೆಂಗಿನಕಾಯಿಯನ್ನು ಬಿಡುವುದು ಅಥವಾ ರಾಹು ಮಂತ್ರವನ್ನು ನಿಯಮಿತವಾಗಿ ಪಠಿಸುವುದು ಪ್ರಯೋಜನಕಾರಿ.
  • ಶಿವ-ಪಾರ್ವತಿಯರ ಆರಾಧನೆ: ಪ್ರೇಮ ಸಂಬಂಧಗಳಲ್ಲಿ ಯಶಸ್ಸನ್ನು ಸಾಧಿಸಲು ಮತ್ತು ವಿಶ್ವಾಸಾರ್ಹ ಸಂಗಾತಿಯನ್ನು ಪಡೆಯಲು ಶಿವ ಮತ್ತು ಪಾರ್ವತಿ ದೇವಿಯನ್ನು ಒಟ್ಟಿಗೆ ಪೂಜಿಸುವುದು ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.
  • ಶುಕ್ರನನ್ನು ಬಲಪಡಿಸಿ: ಶುಕ್ರನು ಪ್ರೀತಿ ಮತ್ತು ಆಕರ್ಷಣೆಯ ಗ್ರಹ. ಶುಕ್ರವಾರದಂದು ಬಿಳಿ ವಸ್ತುಗಳನ್ನು ದಾನ ಮಾಡುವುದರಿಂದ ಪ್ರೇಮ ಜೀವನದಲ್ಲಿ ಮಾಧುರ್ಯ ಮತ್ತು ಸ್ಥಿರತೆ ಹೆಚ್ಚಾಗುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಥ್ರಿಲ್ಲರ್ ಸೂಪರ್ ಥ್ರಿಲ್ಲರ್… ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್ – Kannada News | Ollie Peake Stuns Scorchers With Insane Final Ball Finish

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್​ ಲೀಗ್​ನ 26ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದೆ. ಪರ್ತ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೆಲ್ಬೋರ್ನ್ ರೆನೆಗೇಡ್ಸ್ ಹಾಗೂ ಪರ್ತ್​ ಸ್ಕಾಚರ್ಸ್​ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಪರ್ತ್ ಸ್ಕಾಚರ್ಸ್ ತಂಡವು 19.2 ಓವರ್​ಗಳಲ್ಲಿ 127 ರನ್​ಗಳಿಸಿ ಆಲೌಟ್ ಆಯಿತು.

128 ರನ್​ಗಳ ಸುಲಭ ಗುರಿ ಬೆನ್ನತ್ತಿದ ಮೆಲ್ಬೋರ್ನ್​ ರೆನೆಗೇಡ್ಸ್ ತಂಡವು 72 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಕಣಕ್ಕಿಳಿದ 19 ವರ್ಷದ ಯುವ ದಾಂಡಿಗ ಒಲಿವರ್ ಪೀಕ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು.

ಪರಿಣಾಮ 18 ಓವರ್​ಗಳಾಗುಷ್ಟರಲ್ಲಿ ಮೆಲ್ಬೋರ್ನ್​ ರೆನೆಗೇಡ್ಸ್ ತಂಡವು ಸ್ಕೋರ್ 110 ರನ್​ಗಳ ಗಡಿದಾಟಿತು. ಇದಾಗ್ಯೂ ಕೊನೆಯ ಎರಡು ಓವರ್​ಗಳಲ್ಲಿ 21 ರನ್​ಗಳ ಅವಶ್ಯಕತೆಯಿತ್ತು.

19ನೇ ಓವರ್​ನಲ್ಲಿ ಮೆಲ್ಬೋರ್ನ್​ ಬ್ಯಾಟರ್​ಗಳು 11 ರನ್ ಕಲೆಹಾಕಿದರು. ಅದರಂತೆ ಅಂತಿಮ ಓವರ್​ನಲ್ಲಿ 10 ರನ್​ಗಳು ಬೇಕಿದ್ದರು. ಆರೋನ್ ಹಾರ್ಡಿ ಎಸೆದ 20ನೇ ಓವರ್​ನ ಮೊದಲ ಎಸೆತದಲ್ಲಿ ಒಲಿವರ್ ಪೀಕ್ 2 ರನ್ ಕಲೆಹಾಕಿದರು. 2ನೇ ಎಸೆತದಲ್ಲಿ ಒಂದು ರನ್ ಓಡಿದರು. 3ನೇ ಎಸೆತದಲ್ಲಿ ಸ್ಯಾಮ್ ಎಲಿಯೆಟ್ ಒಂದು ರನ್ ಕಲೆಹಾಕಿದರು. 4ನೇ ಎಸೆತದಲ್ಲಿ ಒಲಿವರ್ ಪೀಕ್ 2 ರನ್ ಗಳಿಸಿದರು. ಆದರೆ ಐದನೇ ಎಸೆತವು ಡಾಟ್ ಆಯಿತು.

ಅಂತಿಮ ಎಸೆತದಲ್ಲಿ ಮೆಲ್ಬೋರ್ನ್ ರೆನೆಗೇಡ್ಸ್ ತಂಡಕ್ಕೆ 4 ರನ್​ಗಳು ಬೇಕಿತ್ತು. ಈ ವೇಳೆ ಸಿಕ್ಸ್ ಸಿಡಿಸುವ ಮೂಲಕ ಒಲಿವರ್ ಪೀಕ್ ಮೆಲ್ಬೋರ್ನ್ ರೆನೆಗೇಡ್ಸ್ ತಂಡಕ್ಕೆ 4 ವಿಕೆಟ್​ಗಳ ರೋಚಕ ಜಯ ತಂದುಕೊಟ್ಟರು. ಇನ್ನು ಈ ಪಂದ್ಯದಲ್ಲಿ 30 ಎಸೆತಗಳಲ್ಲಿ ಅಜೇಯ 42 ರನ್ ಬಾರಿಸಿದ ಪೀಕ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿಯಿತು.

Source link

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 8th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 8: ಸತತ ಏರಿಕೆ ಬಳಿಕ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಕಡಿಮೆಗೊಂಡಿವೆ. ಚಿನ್ನದ ಬೆಲೆ 130 ರೂ ಕಡಿಮೆಗೊಂಡರೆ, ಬೆಳ್ಳಿ ಬೆಲೆ 9 ರೂ ತಗ್ಗಿದೆ. ಅಪರಂಜಿ ಚಿನ್ನದ ಬೆಲೆ (Gold rates) ಗ್ರಾಮ್​ಗೆ 13,800 ರೂಗೆ ಇಳಿಕೆಯಾಗಿದೆ. ವಿದೇಶಗಳಲ್ಲೂ ಚಿನ್ನದ ಬೆಲೆಗಳು ತಗ್ಗಿವೆ. ಬೆಳ್ಳಿ ಬೆಲೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಇಳಿದಿದೆ. ಗ್ರಾಮ್​ಗೆ 9 ರೂನಷ್ಟು ಬೆಳ್ಳಿ ಬೆಲೆ ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,26,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,38,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,26,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,200 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,200 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 8ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,800 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,650 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,350 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 252 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,800 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,650 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 252 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,650 ರೂ
  • ಚೆನ್ನೈ: 12,750 ರೂ
  • ಮುಂಬೈ: 12,650 ರೂ
  • ದೆಹಲಿ: 12,665 ರೂ
  • ಕೋಲ್ಕತಾ: 12,650 ರೂ
  • ಕೇರಳ: 12,650 ರೂ
  • ಅಹ್ಮದಾಬಾದ್: 12,655 ರೂ
  • ಜೈಪುರ್: 12,665 ರೂ
  • ಲಕ್ನೋ: 12,665 ರೂ
  • ಭುವನೇಶ್ವರ್: 12,650 ರೂ

ಇದನ್ನೂ ಓದಿ: ಬರಲಿದೆ ಹೊಸ ಆದಾಯ ತೆರಿಗೆ ಕಾಯ್ದೆ; ಬಜೆಟ್​ನಲ್ಲಿ ಘೋಷಣೆ, ಏ. 1ರಿಂದ ಜಾರಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 569 ರಿಂಗಿಟ್ (12,585 ರುಪಾಯಿ)
  • ದುಬೈ: 496.50 ಡಿರಾಮ್ (12,146 ರುಪಾಯಿ)
  • ಅಮೆರಿಕ: 138.50 ಡಾಲರ್ (12,445 ರುಪಾಯಿ)
  • ಸಿಂಗಾಪುರ: 177.50 ಸಿಂಗಾಪುರ್ ಡಾಲರ್ (12,425 ರುಪಾಯಿ)
  • ಕತಾರ್: 494 ಕತಾರಿ ರಿಯಾಲ್ (12,177 ರೂ)
  • ಸೌದಿ ಅರೇಬಿಯಾ: 503 ಸೌದಿ ರಿಯಾಲ್ (12,052 ರುಪಾಯಿ)
  • ಓಮನ್: 52.60 ಒಮಾನಿ ರಿಯಾಲ್ (12,276 ರುಪಾಯಿ)
  • ಕುವೇತ್: 40.50 ಕುವೇತಿ ದಿನಾರ್ (11,912 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 252 ರೂ
  • ಚೆನ್ನೈ: 272 ರೂ
  • ಮುಂಬೈ: 252 ರೂ
  • ದೆಹಲಿ: 252 ರೂ
  • ಕೋಲ್ಕತಾ: 252 ರೂ
  • ಕೇರಳ: 272 ರೂ
  • ಅಹ್ಮದಾಬಾದ್: 252 ರೂ
  • ಜೈಪುರ್: 252 ರೂ
  • ಲಕ್ನೋ: 252 ರೂ
  • ಭುವನೇಶ್ವರ್: 272 ರೂ
  • ಪುಣೆ: 252

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಸೋಮನಾಥ ಸ್ವಾಭಿಮಾನ ಪರ್ವ, ಎಲ್ಲರೂ ಸೋಮನಾಥ ಭೇಟಿಯ ಫೋಟೊಗಳ ಹಂಚಿಕೊಳ್ಳಲು ಪ್ರಧಾನಿ ಮೋದಿ ಕರೆ – Kannada News | Prime Minister Sends Message to Nation as Somnath Swabhiman Parv Begins

ಸೋಮನಾಥ ದೇವಾಲಯದಲ್ಲಿ ವಾಜಪೇಯಿ ಮತ್ತು ಮೋದಿ

ಅಹಮದಾಬಾದ್, ಜನವರಿ 08: ಗುಜರಾತಿನಲ್ಲಿರುವ ಸೋಮನಾಥ ದೇವಾಲಯ(Somnath Temple)ದಲ್ಲಿ ಇಂದಿನಿಂದ ‘ಸೋಮನಾಥ ಸ್ವಾಭಿಮಾನ ಪರ್ವ’ ಕಾರ್ಯಕ್ರಮ ಶುರುವಾಗಲಿದ್ದು, ನೀವೂ ಕೂಡ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿದ್ದರೆ ಆ ಫೋಟೊವನ್ನು ಹಂಚಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ಜನವರಿ 11ರಂದು ಸೋಮನಾಥಕ್ಕೆ ಭೇಟಿ ನೀಡಲಿದ್ದಾರೆ.

ಸಾವಿರ ವರ್ಷಗಳ ಹಿಂದೆ, ಜನವರಿ 1026 ರಲ್ಲಿ, ಸೋಮನಾಥ ದೇವಾಲಯವು ಅದರ ಇತಿಹಾಸದಲ್ಲಿ ಮೊದಲ ದಾಳಿಯನ್ನು ಎದುರಿಸಿತು. 1026ರ ದಾಳಿ ಮತ್ತು ನಂತರದ ಅನೇಕ ದಾಳಿಗಳು ನಮ್ಮ ಶಾಶ್ವತ ನಂಬಿಕೆಯನ್ನು ಅಲುಗಾಡಿಸಲು ಸಾಧ್ಯವಾಗಲಿಲ್ಲ. ಬದಲಾಗಿ, ಅವು ಭಾರತದ ಸಾಂಸ್ಕೃತಿಕ ಏಕತೆಯ ಪ್ರಜ್ಞೆಯನ್ನು ಬಲಪಡಿಸಿದವು ಮತ್ತು ಸೋಮನಾಥವನ್ನು ಮತ್ತೆ ಮತ್ತೆ ಕಟ್ಟಿ ನಿಲ್ಲಿಸಲಾಯಿತು ಎಂದು ಪ್ರಧಾನಿ ಮೋದಿ ಪೋಸ್ಟ್​​ನಲ್ಲಿ ಬರೆದಿದ್ದಾರೆ.

ಪ್ರಧಾನಿ ಮೋದಿ ಕೂಡ ಸೋಮನಾಥಕ್ಕೆ ಭೇಟಿ ನೀಡಿದ್ದ ಹಳೆಯ ಫೋಟೊಗಳನ್ನು ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ. ನಿಮ್ಮ ಫೋಟೋಗಳನ್ನು #SomnathSwabhimanParv ನೊಂದಿಗೆ ಹಂಚಿಕೊಳ್ಳಿ ಎಂದು ಮೋದಿ ಬರೆದಿದ್ದಾರೆ.

ಪ್ರಧಾನಿ ಮೋದಿ ಪೋಸ್ಟ್​

ಈ ಸೋಮನಾಥ ಸ್ವಾಭಿಮಾನ ಪರ್ವವು ತಮ್ಮ ತತ್ವಗಳು ಮತ್ತು ಮೌಲ್ಯಗಳಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳದ ಭಾರತ ಮಾತೆಯ ಅಸಂಖ್ಯಾತ ಪುತ್ರರನ್ನು ಸ್ಮರಿಸುವ ಆಚರಣೆಯಾಗಿದೆ. ಎಷ್ಟೇ ಕಠಿಣ ಮತ್ತು ಭಯಾನಕ ಕಾಲ ಬಂದರೂ ಅವರ ಸಂಕಲ್ಪ ಅಚಲವಾಗಿತ್ತು. ನಮ್ಮ ನಾಗರಿಕತೆ ಮತ್ತು ಸಾಂಸ್ಕೃತಿಕ ಪ್ರಜ್ಞೆಗೆ ಅವರ ನಿಷ್ಠೆ ಅಚಲವಾಗಿತ್ತು. ಸಾವಿರ ವರ್ಷಗಳ ಅಚಲ ನಂಬಿಕೆಯ ಈ ಸಂದರ್ಭವು ರಾಷ್ಟ್ರೀಯ ಏಕತೆಗಾಗಿ ಶ್ರಮಿಸುವ ಮನೋಭಾವವು ನಮ್ಮಲ್ಲಿಯೇ ಉಳಿಯುವಂತೆ ಮಾಡುತ್ತದೆ.

ಮೋದಿ ಮತ್ತೊಂದು ಪೋಸ್ಟ್​

ಅಕ್ಟೋಬರ್ 31, 2001 ರಂದು ಸೋಮನಾಥದಲ್ಲಿ ನಡೆದ ಒಂದು ಕಾರ್ಯಕ್ರಮದ ಕೆಲವು ಕ್ಷಣಗಳನ್ನು ಮೋದಿ ಹಂಚಿಕೊಂಡಿದ್ದಾರೆ. 1951 ರಲ್ಲಿ ಸೋಮನಾಥ ದೇವಾಲಯವನ್ನು ಮರು ನಿರ್ಮಿಸಲಾಗಿತ್ತು, ಉದ್ಘಾಟನೆಯ 50 ನೇ ವಾರ್ಷಿಕೋತ್ಸವವನ್ನು ನಾವು ಆಚರಿಸಿದ ವರ್ಷ ಇದು.

ಮತ್ತಷ್ಟು ಓದಿ: ಧ್ವಂಸಗೊಂಡಿದ್ದ ಸೋಮನಾಥ ದೇವಾಲಯವನ್ನು ಮತ್ತೆ ಕಟ್ಟುವುದು ನೆಹರುಗೆ ಇಷ್ಟವಿರಲಿಲ್ಲ: ಸುಧಾಂಶು ತ್ರಿವೇದಿ

ಆ ಐತಿಹಾಸಿಕ ಸಮಾರಂಭವು ಆಗಿನ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರ ಸಮ್ಮುಖದಲ್ಲಿ ನಡೆಯಿತು. ಸೋಮನಾಥ ದೇವಾಲಯದ ಪುನರ್ನಿರ್ಮಾಣದಲ್ಲಿ ಸರ್ದಾರ್ ಪಟೇಲ್ ಮತ್ತು ಕೆ.ಎಂ. ಮುನ್ಷಿ ಮತ್ತು ಇತರ ಅನೇಕ ಮಹಾನ್ ವ್ಯಕ್ತಿಗಳ ಪ್ರಯತ್ನಗಳು ಹೆಚ್ಚಿತ್ತು. 2001 ರ ಈ ಕಾರ್ಯಕ್ರಮದಲ್ಲಿ ಆಗಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಗೃಹ ಸಚಿವ ಅಡ್ವಾಣಿ ಮತ್ತು ಇತರ ಅನೇಕ ಗಣ್ಯರು ಭಾಗವಹಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕದಲ್ಲಿ ಇಂದಿಗೂ ಜೀವಂತವಾಗಿದೆ ಜಾತಿ ಭೂತ: ಮಗಳಿಗೆ ಅಂತರ್ಜಾತಿ ವಿವಾಹ ಮಾಡಿದ ತಪ್ಪಿಗೆ ಊರಿನಿಂದ ಬಹಿಷ್ಕಾರ – Kannada News | Karnataka Casteism: Family Boycotted for Inter Caste Marriage; Justice Sought

ಚಾಮರಾಜನಗರ, ಜ.8: ಕರ್ನಾಟಕದಲ್ಲಿ ಇಂದಿಗೂ ಜಾತಿವಾದ ಜೀವಂತವಾಗಿದೆ ಎಂದರೆ ನಂಬಲು ಅಸಾಧ್ಯ, ಆದರೆ ಕೆಲವೊಂದು ಜಿಲ್ಲೆಗಳಲ್ಲಿ ಇಂದಿಗೂ ಜಾತಿ ಪ್ರೇಮ ಅತಿಯಾಗಿದೆ. ಜಾತಿ ಇರುವುದು ಮನೆಯೊಗಿನ ಸಂಸ್ಕೃತಿಗೆ ಹೊರತು ಸಾರ್ವಜನಿವಾಗಿ ಜಾತಿ ವಿಚಾರಗಳನ್ನು ತರಬಾರದು. ಇದೀಗ ಚಾಮರಾಜನಗರದಲ್ಲಿ ನಡೆದ ಘಟನೆ ಕೂಡ ಇಂತಹದೇ ಜಾತಿ ವಿಚಾರಕ್ಕಾಗಿ ಸಾಮಾಜಿಕ ಬಹಿಷ್ಕಾರ (social boycott) ಪದ್ಧತಿ ಜೀವಂತವಾಗಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ಮಗಳಿಗೆ ಬೇರೆ ಜಾತಿಯ ಯುವಕನ ಜೊತೆ ಮದುವೆ ಮಾಡಿದ್ದಕ್ಕೆ ಕುಟಂಬವನ್ನೇ ಬಾಹಿಷ್ಕಾರ ಮಾಡಲಾಗಿದೆ. ಬಂಡಿಗೆರೆ ಗ್ರಾಮದ ಕೃಷ್ಣರಾಜು ಎಂಬುವವರ ಕುಟುಂಬವನ್ನು ಸಾಮಾಜಿಕ ಬಹಿಷ್ಕಾರ ಮಾಡಲಾಗಿದೆ. ಸರ್ಕಾರ ಈ ಬಗ್ಗೆ ಕಾಯ್ದೆ ತಂದರೂ, ಸಾಮಾಜಿಕ ಬಹಿಷ್ಕಾರ ಪದ್ಧತಿ ನಿಂತಿಲ್ಲ ಎಂಬುದು ವಿಪರ್ಯಾಸದ ವಿಚಾರವಾಗಿದೆ.

ಇದೀಗ ಈ ಕುಟುಂಬದ ರಕ್ಷಣೆಗೆ ಸರ್ಕಾರ ಬರುತ್ತಾ? ಎಂಬ ಪ್ರಶ್ನೆ ಮೂಡಿದೆ. ಇನ್ನು ಈ ಬಹಿಷ್ಕಾರದಿಂದ ಹೊರಬರಬೇಕೆಂದರೆ 5 ಲಕ್ಷ ರೂ. ತಪ್ಪು ಕಾಣಿಕೆ ಕೊಡಬೇಕು ಎಂದು ಹೇಳಲಾಗಿದೆ. ಕೃಷ್ಣಮೂರ್ತಿ ತಮ್ಮ ಮಗಳಿಗೆ 2023ರಲ್ಲಿ ಬೇರೆ ಜಾತಿ ಯುವಕನ ಜತೆಗೆ ಮದುವೆ ಮಾಡಿದ್ದರು. 2 ವರ್ಷಗಳ ಹಿಂದೆ ಮಗಳು ಆಸೆಯಂತೆ ಆಕೆ ಪ್ರೀತಿಸಿದ ಯುವಕ ಜತೆಗೆ ಮದುವೆ ಮಾಡಿದ್ದಾರೆ. ಇದೀಗ ಮಗಳಿಗೆ ಅಂತರ್ಜಾತಿ ಯುವಕನ ಜೊತೆಗೆ ಮದುವೆ ಮಾಡಿರುವುದೇ ತಪ್ಪಾಗಿದೆ.

ಇದನ್ನೂ ಓದಿ: ವಿಷವಿಕ್ಕಿ ಹುಲಿಗಳ ಕೊಂದು ತುಂಡರಿಸುತ್ತಿದ್ದ ಕ್ರೂರಿ! ಅರಣ್ಯಾಧಿಕಾರಿಗಳ ನಿದ್ದೆಗೆಡಿಸಿದ್ದ ಮರಿ ವೀರಪ್ಪನ್ ಕೊನೆಗೂ ಬಂಧನ

ಮಗಳು ಪ್ರೀತಿಸಿ ಮದುವೆಯಾದ ಮೂರೇ ತಿಂಗಳಿಗೆ ಗಂಡನನ್ನು ಕಳೆದುಕೊಂಡಿದ್ದಾಳೆ. ಅಳಿಯ ತಿರಿಕೊಂಡ ನಂತರ ಮಗುಳು ಒಬ್ಬಂಟಿಯಾಗಿದ್ದಾಳೆ. ಈ ಕಾರಣಕ್ಕೆ ಕೃಷ್ಣಮೂರ್ತಿ ದಂಪತಿ ಪತಿಯ ಸಾವಿನ ಬಳಿಕ ಮಗಳನ್ನ ಬಂಡಿಗೆರೆ ಗ್ರಾಮಕ್ಕೆ ಕರೆಕೊಂಡು ಬಂದಿದ್ದಾರೆ. ಈ ವಿಚಾರ ತಿಳಿದು ಉಪ್ಪಾರ ಸಮಾಜದ ನಾಯಕರು ಕೆಂಡಮಂಡಲ ಆಗಿದ್ದಾರೆ. ನಿಮ್ಮನ್ನು ಮತ್ತು ನಿಮ್ಮ ಮಗಳನ್ನು ಯಾವುದೇ ಕಾರಣಕ್ಕೂ ಊರಿಗೆ ಸೇರಿಸಿಕೊಳ್ಳುವುದಿಲ್ಲ ಎಂದು ಊರಿನಿಂದ ಹೊರ ಹಾಕಿದ್ದಾರೆ. ಉಪ್ಪಾರ ಸಮಾಜದ ಯಜಮಾನರು ಕೃಷ್ಣಮೂರ್ತಿ ಕುಟುಂಬವನ್ನು ಊರಿನಿಂದ ಬಹಿಷ್ಕಾರ ಮಾಡಿದ್ದಾರೆ ಎಂದು ಹೇಳಲಾಗಿದೆ. ಆದರೆ ಈ ಬಗ್ಗೆ ಪೊಲೀಸರಿಗೂ ದೂರು ನೀಡಿದ್ರೂ ಯಾವುದೇ ಪ್ರಯೋಜ ಆಗಿಲ್ಲ ಎಂದು ಕುಟುಂಬ ಹೇಳಿದೆ. ತಮ್ಮದೆ ಉಪ್ಪಾರ ಸಮುದಾಯದವರು ನಮ್ಮನ್ನು ಬಹಿಷ್ಕಾರ ಮಾಡಿದ್ದಾರೆ ಎಂದು ಕಣ್ಣೀರು ಹಾಕಿದ್ದಾರೆ. ಇನ್ನು ಈ ಕುಟುಂಬಕ್ಕೆ ಪೊಲೀಸ್​​, ಕೋರ್ಟ್ ಕಚೇರಿ ಎಂದು ಹೋದ್ರೆ ಸರಿ ಇರಲ್ಲ ಎಂದು ಬೆದರಿಕೆ ಕೂಡ ಹಾಕಿದ್ದಾರೆ. ಇದೀಗ ನ್ಯಾಯಕ್ಕಾಗಿ ಕೃಷ್ಣಮೂರ್ತಿ ಕುಟುಂಬ ಹೋರಾಡುತ್ತಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹೋಟೆಲ್​ಗೆ ಕರೆಸಿಕೊಂಡು 17 ವರ್ಷದ ಮಹಿಳಾ ಶೂಟರ್ ಮೇಲೆ ಅತ್ಯಾಚಾರ, ನ್ಯಾಷನಲ್ ಕೋಚ್ ಅಮಾನತು – Kannada News | Haryana Police Probe Allegations Against National Coach Involving in Teen Shooter Physical Assault Charges

ಫರೀದಾಬಾದ್, ಜನವರಿ 08: ಹೋಟೆಲ್​ಗೆ ಕರೆಸಿಕೊಂಡು ಹದಿನೇಳು ವರ್ಷದ ಮಹಿಳಾ ಶೂಟರ್(Shooter)​ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ರಾಷ್ಟ್ರೀಯ ತರಬೇತುದಾರ(National Coach) ಅಂಕುಶ್ ಭಾರದ್ವಾಜ್​ನನ್ನು ಅಮಾನತುಗೊಳಿಸಲಾಗಿದೆ. ಹೋಟೆಲ್​ಗೆ ಕರೆಸಿ, ಆಕೆಯ ಕೆರಿಯರ್ ಹಾಳು ಮಾಡುವುದಾಗಿ ಬೆದರಿಕೆ ಹಾಕಿ ಬಳಿಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಈ ಕುರಿತು ಬಾಲಕಿಯ ಪೋಷಕರು ಎಫ್​ಐಆರ್ ದಾಖಲಿಸಿದ್ದಾರೆ. ದೂರಿನ ಪ್ರಕಾರ, ಕಳೆದ ವರ್ಷ ಡಿಸೆಂಬರ್ 16 ರಂದು, ದೆಹಲಿಯ ಡಾ. ಕರ್ಣಿ ಸಿಂಗ್ ಶೂಟಿಂಗ್ ಅಕಾಡೆಮಿಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಶೂಟಿಂಗ್ ಸ್ಪರ್ಧೆಯಿಂದ ಕ್ರೀಡಾಪಟು ಹಿಂದಿರುಗುವ ಒಂದು ದಿನ ಮೊದಲು ಈ ಘಟನೆ ನಡೆದಿದೆ.

ಆರೋಪಿ ತರಬೇತುದಾರ ರಾಷ್ಟ್ರೀಯ ರೈಫಲ್ ಅಸೋಸಿಯೇಷನ್ ​​ಆಫ್ ಇಂಡಿಯಾ (ಎನ್‌ಆರ್‌ಎಐ) ನೇಮಿಸಿಕೊಂಡಿರುವ 13 ರಾಷ್ಟ್ರೀಯ ಪಿಸ್ತೂಲ್ ತರಬೇತುದಾರರಲ್ಲಿ ಒಬ್ಬರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ತರಬೇತುದಾರನನ್ನು ಅಮಾನತುಗೊಳಿಸಲಾಗಿದೆ. ಫರಿದಾಬಾದ್‌ನ ಸೂರಜ್‌ಕುಂಡ್‌ನಲ್ಲಿರುವ ಹೋಟೆಲ್‌ನ ಲಾಬಿಯಲ್ಲಿ ತರಬೇತುದಾರ ಶೂಟರ್‌ಳನ್ನು ಆಹ್ವಾನಿಸಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ .

ಮತ್ತಷ್ಟು ಓದಿ: ಬೆಂಗಳೂರಿನಲ್ಲಿ ಉದ್ಯಮಿ ಮೇಲೆ ಫೈರಿಂಗ್​: ಕೂದಲೆಳೆ ಅಂತರದಲ್ಲಿ ಬಚಾವ್​!

ಆಕೆಯ ಕಾರ್ಯಕ್ಷಮತೆಯನ್ನು ವಿಶ್ಲೇಷಿಸುವುದಾಗಿ ಮತ್ತು ಆಕೆಯ ಶೂಟಿಂಗ್ ಬಗ್ಗೆ ವಿವರವಾಗಿ ಚರ್ಚಿಸುವುದಾಗಿ ಅವರು ಹೇಳಿಕೊಂಡಿದ್ದಾರೆ. ಈ ನೆಪದಲ್ಲಿ ಅವರು ಕ್ರೀಡಾಪಟುವನ್ನು ತಮ್ಮ ಕೋಣೆಗೆ ಹೋಗುವಂತೆ ಒತ್ತಡ ಹೇರಿದ್ದರು. ಚರ್ಚೆ ಹೆಚ್ಚು ಆಳವಾಗಿರುತ್ತದೆ ಎಂದು ಹೇಳಿದ್ದರು. ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ, ಆಕೆಯ ವೃತ್ತಿಜೀವನವನ್ನು ಹಾಳು ಮಾಡುವುದಾಗಿ ಮತ್ತು ಆಕೆಯ ಕುಟುಂಬಕ್ಕೆ ಹಾನಿ ಮಾಡುವುದಾಗಿ ತರಬೇತುದಾರ ಬೆದರಿಕೆ ಹಾಕಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಘಟನೆಯ ನಂತರ ಸಂತ್ರಸ್ತೆ ಆಘಾತದಿಂದ ಹೋಟೆಲ್‌ನಿಂದ ಹೊರಬಂದಳು ಮತ್ತು ನಂತರ ತನ್ನ ಕುಟುಂಬದವರಿಗೆ ತನ್ನ ಅನುಭವವನ್ನು ವಿವರಿಸಿದಳು, ನಂತರ ಪೊಲೀಸರಿಗೆ ದೂರು ನೀಡಲಾಗಿದೆ. ಘಟನೆಯ ದಿನದ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ತಕ್ಷಣ ಹಂಚಿಕೊಳ್ಳುವಂತೆ ಪೊಲೀಸರು ಹೋಟೆಲ್ ಸಿಬ್ಬಂದಿಯನ್ನು ಕೇಳಿಕೊಂಡಿದ್ದಾರೆ.

ಆರೋಪಿಯನ್ನು ಇನ್ನೂ ಬಂಧಿಸಲಾಗಿಲ್ಲ ಅಥವಾ ಅವನಿಗೆ ಯಾವುದೇ ನೋಟಿಸ್ ನೀಡಲಾಗಿಲ್ಲ. ದೂರಿನ ಆಧಾರದ ಮೇಲೆ, ಪೊಲೀಸರು ಪೋಕ್ಸೊ ಸೇರಿದಂತೆ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ .

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Optical Illusion: ಬುದ್ಧಿವಂತರಿಗೊಂದು ಸವಾಲ್;‌ ಈ ಚಿತ್ರಗಳ ನಡುವಿನ ಮೂರು ವ್ಯತ್ಯಾಸಗಳನ್ನು ಗುರುತಿಸಬಲ್ಲಿರಾ – Kannada News | Optical Illusion: Find the difference between two picture within 45 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media

ನಿಮ್ಮ ಏಕಾಗ್ರತೆಯನ್ನು ಪರೀಕ್ಷಿಸುವಂತಹ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ಖಂಡಿತ ನೆರವಾಗುತ್ತದೆ. ಸೋಷಿಯಲ್‌ ಮೀಡಿಯಾದಲ್ಲಿ ಕಣ್ಣಾಯಿಸಿದ್ದಲ್ಲೆಲಾ ಈ ಒಗಟಿನ ಚಿತ್ರಗಳು ಕಾಣ ಸಿಗುತ್ತವೆ. ಇದೀಗ ನಿಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸಲು ಇದೊಂದು ಒಳ್ಳೆಯ ಸಮಯ. ಈ ಚಿತ್ರಗಳ ನಡುವೆ ಮೂರು ವ್ಯತ್ಯಾಸಗಳಿವೆ, ನೀವು ಅದನ್ನು 45 ಸೆಕೆಂಡುಗಳೊಳಗೆ ಕಂಡು ಹಿಡಿಯಬೇಕು.

ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸುತ್ತದೆ?

ಒಗಟುಗಳನ್ನು ಬಿಡಿಸುವ ಮೂಲಕ ನಿಮ್ಮ ಮೆದುಳಿನ ಸಾಮರ್ಥ್ಯ ಹೆಚ್ಚಿಸಿಕೊಳ್ಳಬಹುದು. ಈ ಇಲ್ಯೂಷನ್ ಚಿತ್ರದಲ್ಲಿ ಪುಟ್ಟ ಹುಡುಗಿಯೊಬ್ಬಳು ಮಳೆಯಲ್ಲಿ ಕೊಡೆ ಹಿಡಿದು ಆಟವಾಡುತ್ತಿದ್ದಾಳೆ. ಇಲ್ಲಿರುವ ಎರಡು ಚಿತ್ರಗಳು ಒಂದೇ ರೀತಿ ಕಂಡರೂ  ಇದರಲ್ಲಿ ಮೂರು ಸಣ್ಣ ವ್ಯತ್ಯಾಸಗಳಿವೆ. ಎರಡು ಫೋಟೋಗಳ ನಡುವಿನ ವ್ಯತ್ಯಾಸಗಳನ್ನು 45 ಸೆಕೆಂಡುಗಳೊಳಗೆ ಕಂಡುಹಿಡಿಯಲು ಸಾಧ್ಯವಾದರೆ ನಿಮ್ಮ ವೀಕ್ಷಣಾ ಸಾಮರ್ಥ್ಯ ಅತ್ಯುತ್ತಮವಾಗಿದೆ ಎಂದರ್ಥ.

ಇದನ್ನೂ ಓದಿ:ಹದ್ದಿನ ಕಣ್ಣು ನಿಮ್ಮದಾಗಿದ್ರೆ ಈ ಚಿತ್ರದಲ್ಲಿರುವ ಮುಖಗಳನ್ನು ಗುರುತಿಸಿ

ಈ ಒಗಟು ಬಿಡಿಸಲು ಸಾಧ್ಯವಾಯಿತೇ?

ಈ ಎರಡು ಚಿತ್ರಗಳಲ್ಲಿನ ವ್ಯತ್ಯಾಸವನ್ನು ಕಂಡು ಹಿಡಿಯಲು ರೆಡಿ ಇದ್ರೆ ಈ ಚಿತ್ರಗಳತ್ತ ಕಣ್ಣು ಹಾಯಿಸಿ. ಎಷ್ಟೇ ಪ್ರಯತ್ನ ಪಟ್ಟರೂ ಇಲ್ಲಿ ನೀಡಿರುವ ಸಮಯದೊಳಗೆ ಮೂರು ವ್ಯತ್ಯಾಸಗಳನ್ನು ಕಂಡು ಹಿಡಿಯಲು ಸಾಧ್ಯವಾಗುತ್ತಿಲ್ಲವೇ. ನಾವೇ ಆ ವ್ಯತ್ಯಾಸಗಳನ್ನು ಹೇಳುತ್ತೇವೆ. ಈ ಕೆಳಗಿನ ಚಿತ್ರದಲ್ಲಿ ಮೂರು ವ್ಯತ್ಯಾಸಗಳನ್ನು ಗುರುತಿಸಿದ್ದೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Toxic Teaser: ಹಾಲಿವುಡ್​ ರೇಂಜ್​​​ನಲ್ಲಿದೆ ‘ಟಾಕ್ಸಿಕ್​’ ಟೀಸರ್; ಎಲ್ಲರಿಗೂ ಇದೇ ವಾರ್ನಿಂಗ್ – Kannada News | Yash Birthday, Rocking Star Rocks in Toxic Teaser Toxic Teaser Review Yash In Rocking Look

‘ಟಾಕ್ಸಿಕ್’ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಯಶ್ ನಟನೆಯ ಈ ಚಿತ್ರಕ್ಕೆ ಗೀತು ಮೋಹನ್​​ದಾಸ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಮಾರ್ಚ್ 19ರಂದು ತೆರೆಗೆ ಬರಲಿದೆ. ಅದಕ್ಕೂ ಮೊದಲು ಚಿತ್ರದ ಟೀಸರ್ ರಿಲೀಸ್ ಆಗಿದೆ. ಯಶ್ ಬರ್ತ್​ಡೇ (ಜನವರಿ 8) ಪ್ರಯುಕ್ತ ಸರಿಯಾಗಿ 10 ಗಂಟೆ 10 ನಿಮಿಷಕ್ಕೆ ಟೀಸರ್ ಬಿಡುಗಡೆ ಕಂಡಿದೆ. ಸಿನಿಮಾ ಹೇಗಿರಬಹುದು ಎಂಬುದಕ್ಕೆ ಕ್ಲ್ಯಾರಿಟಿ ಸಿಕ್ಕಂತೆ ಆಗಿದೆ.

‘ಟಾಕ್ಸಿಕ್’ ಸಿನಿಮಾ ತಂಡ ಇತ್ತೀಚೆಗೆ ಯಶ್ ಅವರ ಪೋಸ್ಟರ್ ರಿಲೀಸ್ ಮಾಡಿತು. ಆ ಬಳಿಕ ಸಿನಿಮಾದಲ್ಲಿ ನಟಿಸಿದ ನಯನತಾರಾ, ರುಕ್ಮಿಣಿ ವಸಂತ್ ಸೇರಿದಂತೆ ಎಲ್ಲಾ ಹೀರೋಯಿನ್​​ಗಳ ಪೋಸ್ಟರ್ ಬಿಡುಗಡೆ ಮಾಡಿತ್ತು. ಈಗ ತಂಡ ಟೀಸರ್ ರಿಲೀಸ್ ಮಾಡಿ ಸಿನಿಮಾದ ಪ್ರಚಾರಕ್ಕೆ ಮುನ್ನುಡಿ ಬರೆದಿದೆ.

‘ಟಾಕ್ಸಿಕ್’ ಸಿನಿಮಾಗೆ ಕೆವಿಎನ್ ಸಂಸ್ಥೆ ಬಂಡವಾಳ ಹೂಡಿದೆ. ದೊಡ್ಡ ಬಜೆಟ್​​ನ ಚಿತ್ರಕ್ಕೆ ಖರ್ಚು ಮಾಡಲಾಗಿದೆ. ಟೀಸರ್ ನೋಡಿದವರಿಗೆ ಅದ್ದೂರಿತನ ಸ್ಪಷ್ಟವಾಗಿ ಕಾಣಿಸಿದೆ. ಮಲಯಾಳಂ ನಿರ್ದೇಶಕಿ ಗೀತು ಮೋಹನ್​​ದಾಸ್ ಅವರು ಈ ಚಿತ್ರವನ್ನು ಕಟ್ಟಿಕೊಟ್ಟಿದ್ದಾರೆ. ರೆಟ್ರೋ ಶೈಲಿಯಲ್ಲಿ ಸಿನಿಮಾ ಮೂಡಿಬರುತ್ತಿದೆ. ಗೀತು ಜೊತೆ ಯಶ್ ಕೂಡ ಸಿನಿಮಾಗೆ ಕಥೆ ಬರೆದಿದ್ದಾರೆ.

ಇದನ್ನೂ ಓದಿ: ‘ಟಾಕ್ಸಿಕ್’: ಯಾರ ಬಗ್ಗೆ ಎಚ್ಚರಿಸಿದ್ದರೋ ಅವನೇ ಎದುರು ಬರುತ್ತಿದ್ದಾನೆ

‘ಟಾಕ್ಸಿಕ್’ ಚಿತ್ರ ‘ಧುರಂಧರ್ 2’ ವಿರುದ್ಧ ತೆರೆಗೆ ಬರುತ್ತಿದೆ. ಈಗಾಗಲೇ ಹಿಂದಿಯಲ್ಲಿ ‘ಧುರಂಧರ್’ ಸಿನಿಮಾ ರಿಲೀಸ್ ಆಗಿ ಸೂಪರ್ ಹಿಟ್ ಆಗಿದೆ. ಇದರ ಸೀಕ್ವೆಲ್ ಆಗಿ ‘ಧುರಂದರ್ 2’ ರಿಲೀಸ್ ಆಗುತ್ತಿದೆ. ಈ ಕಾರಣದಿಂದ ‘ಟಾಕ್ಸಿಕ್​​’ಗೆ ದೊಡ್ಡ ಸ್ಪರ್ಧೆ ಏರ್ಪಡುತ್ತಿದೆ. ಅದನ್ನು ಸರಿಯಾದ ರೀತಿಯಲ್ಲಿ ಎದುರಿಸಲು ಎಲ್ಲ ರೀತಿಯ ಸಿದ್ಧತೆ ನಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 10:16 am, Thu, 8 January 26

Source link

ಮೈಸೂರು ಬಿಜೆಪಿಯಲ್ಲಿ ಭಿನ್ನಮತದ ಕಿಡಿಹಚ್ಚಿದ ಪ್ರತಾಪ್ ಸಿಂಹ ಆ ಒಂದು ಹೇಳಿಕೆ! – Kannada News | Mysuru BJP Infighting Erupts as Pratap Simha and L Nagendra Clash Over Chamaraja Ticket

ಎಲ್.ನಾಗೇಂದ್ರ v/s ಪ್ರತಾಪಸಿಂಹ ಜಟಾಪಟಿ

ಬೆಂಗಳೂರು, ಜನವರಿ 8: ರಾಜ್ಯ ರಾಜಕಾರಣಕ್ಕೆ ಎಂಟ್ರಿಯಾಗುತ್ತಿರುವ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಬಹಿರಂಗ ಹೇಳಿಕೆ ನೀಡಿದ ಬೆನ್ನಲ್ಲೇ ಬಿಜಪಿಯ (BJP) ಮೈಸೂರು ಘಟಕದಲ್ಲಿ ಅಸಮಾಧಾನ ಸ್ಫೋಟಗೊಳ್ಳುವ ಸುಳಿವು ಗೋಚರಿಸಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಮಾಜಿ ಶಾಸಕ, ಹಾಲಿ ನಗರ ಬಿಜೆಪಿ ಅಧ್ಯಕ್ಷ ಎಲ್. ನಾಗೇಂದ್ರ ನಡುವೆ ಜಟಾಪಟಿ ಏರ್ಪಡುವ ಎಲ್ಲ ಲಕ್ಷಣ ಕಾಣಿಸಿದೆ. ಚಾಮರಾಜ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರವೇ ಈ ಜಟಾಪಟಿಗೆ ಮೂಲ ಕಾರಣವಾಗಿದ್ದು, ಇದೀಗ ಪ್ರತಾಪ್ ಸಿಂಹಗೆ ಬಹಿರಂಗವಾಗಿಯೇ ಎಲ್. ನಾಗೇಂದ್ರ ಟಾಂಗ್ ಕೊಟ್ಟಿದ್ದಾರೆ.

ಜನವರಿ 5ರಂದು ಮೈಸೂರಿನ ಚಾಮರಾಜ ಕ್ಷೇತ್ರದಲ್ಲಿ ಆಯೋಜಿಸಿದ್ದ ಸ್ನೇಹ ಬಳಗದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ, ರಾಜ್ಯ ರಾಜಕಾರಣಕ್ಕೆ ಪ್ರವೇಶಿಸುವ ಸುಳಿವು ನೀಡಿದ್ದರು. 2024ರ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದ ಬಳಿಕ ರಾಷ್ಟ್ರ ರಾಜಕಾರಣದಿಂದ ರಾಜ್ಯ ರಾಜಕಾರಣದತ್ತ ಹೆಜ್ಜೆ ಇಡುವುದಾಗಿ ಪರೋಕ್ಷವಾಗಿ ಹೇಳಿದ್ದ ಪ್ರತಾಪ್ ಸಿಂಹ, ‘ಚಾಮರಾಜ ಕ್ಷೇತ್ರ ಹಣದ ಪ್ಯಾಕೇಟ್ ಕೊಟ್ಟು ಗೆಲ್ಲುವ ಕ್ಷೇತ್ರ ಅಲ್ಲ. ಇಲ್ಲಿ ಮತದಾರರು ಕೆಲಸ ನೋಡಿ ಬೆಂಬಲಿಸುವ ಪ್ರಜ್ಞಾವಂತರು’ ಎಂದು ಹೇಳಿಕೆ ನೀಡಿ ಚಾಮರಾಜ ಕ್ಷೇತ್ರದಿಂದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಯುವ ಒಲವು ವ್ಯಕ್ತಪಡಿಸಿದ್ದರು. ಈ ಹೇಳಿಕೆಯೇ ಇದೀಗ ಮೈಸೂರು ಬಿಜೆಪಿಯಲ್ಲಿ ಭಿನ್ನಮತದ ಕಿಡಿಹಚ್ಚಿದೆ.

ಕೋರ್ಟ್‌ನಿಂದ ಯಾವ ಸ್ಟೇ ಕೂಡ ತಂದಿಲ್ಲ: ಪ್ರತಾಪ್ ಸಿಂಹಗೆ ನಾಗೇಂದ್ರ ಟಾಂಗ್

ಪ್ರತಾಪ್ ಸಿಂಹ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಎಲ್. ನಾಗೇಂದ್ರ, ‘ಚಾಮರಾಜ ಕ್ಷೇತ್ರದ ಟಿಕೆಟ್ ಯಾರಿಗೆ ಕೊಡಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ಈ ಮೂಲಭೂತ ವಿಚಾರ ಪ್ರತಾಪ್ ಸಿಂಹಗೆ ಗೊತ್ತಿರಬೇಕಿತ್ತು. ಅವರು ಯಾವ ಕಾರಣಕ್ಕೆ ಆ ರೀತಿ ಹೇಳಿಕೆ ನೀಡಿದರು ಗೊತ್ತಿಲ್ಲ’ ಎಂದು ಹೇಳಿದ್ದಾರೆ. ನಾನು ಪಕ್ಷದ ಸಂಘಟನೆಗಾಗಿ ದುಡಿಯುತ್ತಿದ್ದೇನೆ, ನನ್ನ ವಿರುದ್ಧ ಯಾವುದೇ ಆಪಾದನೆಗಳಿಲ್ಲ. ನಾನು ಕೋರ್ಟ್‌ನಿಂದ ಯಾವ ಸ್ಟೇ ಕೂಡ ತಂದಿಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.

ಪಾರ್ಲಿಮೆಂಟ್ ಟಿಕೆಟ್ ವಿಚಾರವನ್ನೂ ಎತ್ತಿಹಿಡಿದ ನಾಗೇಂದ್ರ, ‘ಆ ಸಮಯದಲ್ಲೂ ಅವರಿಗೆ ಟಿಕೆಟ್ ಯಾಕೆ ಸಿಗಲಿಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ. ನಾನು ಕಡಿಮೆ ಅಂತರದಲ್ಲಿ ಸೋತಿದ್ದೇನೆ. ನನ್ನ ಕ್ಷೇತ್ರದ ಜೊತೆಗೆ ಇನ್ನೂ ನಾಲ್ಕು ಕ್ಷೇತ್ರಗಳನ್ನು ಗೆಲ್ಲಿಸುವ ಗುರಿ ಇದೆ. ನಮ್ಮ ವರಿಷ್ಠರು ಎಲ್ಲವನ್ನೂ ಗಮನಿಸುತ್ತಿದ್ದಾರೆ’ ಎಂದು ಹೇಳಿದರು. ಪಕ್ಷದ ಇತಿ-ಮಿತಿಯನ್ನು ಮೀರಿ ಯಾರೂ ವರ್ತಿಸಬಾರದು, ಸಾರ್ವಜನಿಕರಿಗೆ ಗೊಂದಲ ಮೂಡಿಸಬಾರದು ಎಂದೂ ಎಚ್ಚರಿಕೆ ನೀಡಿದ್ದಾರೆ.

2028ರ ಟಿಕೆಟ್​ಗೆ ಈಗಲೇ ಶುರುವಾಯ್ತು ಕಲಹ

‘ಕಳೆದ ಬಾರಿ ಅವರು (ಪ್ರತಾಪ್ ಸಿಂಹ) ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆ ಪ್ರಚಾರಕ್ಕೂ ಬಂದಿರಲಿಲ್ಲ. ಯದುವೀರ್ ಅವರಿಗೆ ನಾವು 56,500 ಮತ ದೊರಕಿಸಿಕೊಟ್ಟಿದ್ದೇವೆ. ಅವರು (ಪ್ರತಾಪ್ ಸಿಂಗ ಉದ್ದೇಶಿಸಿ) ಈಗ ರಾಜ್ಯ ನಾಯಕರಾಗಿ ಬೆಳೆದಿದ್ದಾರೆ. ಅವರು ಬೇರೆ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿ. ಅವರು ಬೇರೆ ಊರಿನಿಂದ ಬಂದವರು, ನಾನು ಇದೇ ಊರಿನವನು. ನನ್ನ ಹುಟ್ಟೂರಲ್ಲೇ ನನ್ನ ಹೋರಾಟ’ ಎಂದು ನಾಗೇಂದ್ರ ಹೇಳಿದ್ದಾರೆ. ಅಲ್ಲದೆ, 2028ರಲ್ಲೂ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಮಂಡಲ ಅಧ್ಯಕ್ಷರು ಯಾರ ಪರ ಇದ್ದಾರೆ ಎಂದು ಕೇಳಿದರೆ ಸ್ಪಷ್ಟವಾಗುತ್ತದೆ ಎಂದು ಹೇಳಿದ ನಾಗೇಂದ್ರ, ‘ನನಗೆ ಅವರಿಗಿಂತ ನೂರು ಪಟ್ಟು ಹೆಚ್ಚು ಕಾರ್ಯಕರ್ತರು ಜೊತೆಗಿದ್ದಾರೆ. ನನ್ನ ಸಂಬಂಧಿಕರು, ಸ್ನೇಹಿತರು ಎಲ್ಲರೂ ನನ್ನ ಜೊತೆ ಇದ್ದಾರೆ. ಬಿಜೆಪಿಯಲ್ಲಿದ್ದು ‘ಕವರ್ ಸಂಸ್ಕೃತಿ’ ಬಗ್ಗೆ ಮಾತನಾಡಬಾರದಿತ್ತು. ಮುಂದಿನ ದಿನಗಳಲ್ಲಿ ಅವರ ವರ್ತನೆ ಬದಲಿಸಿಕೊಳ್ಳಲಿ’ ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ: ರಾಜ್ಯ ರಾಜಕಾರಣಕ್ಕೆ ಪ್ರತಾಪ್ ಸಿಂಹ ಅಧಿಕೃತ ಎಂಟ್ರಿ: ಕ್ಷೇತ್ರ ಯಾವುದು ಗೊತ್ತಾ?

ಒಟ್ಟಿನಲ್ಲಿ, ಪ್ರತಾಪ್ ಸಿಂಹ ರಾಜ್ಯ ರಾಜಕಾರಣದ ಬಗ್ಗೆ ಹಾಗೂ ಮುಂದಿನ ಚುನಾವಣೆ ಬಗ್ಗೆ ಬಹಿರಂಗವಾಗಿ ಮಾತನಾಡಿದ ಬೆನ್ನಲ್ಲೇ ಮೈಸೂರು ಬಿಜೆಪಿಯಲ್ಲಿ ಅಸಮಾಧಾನ ತೀವ್ರಗೊಂಡಿಡದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಆಸ್ಟ್ರೇಲಿಯಾ ಆಟಗಾರ

Source link