Category Archives: Blog

Your blog category

Economy: 2024-25ರಲ್ಲಿ ಶೇ. 6.5, 2025-26ರಲ್ಲಿ ಶೇ. 7.4; ಈ ವರ್ಷಕ್ಕೆ ಸರ್ಕಾರದ ಆರ್ಥಿಕ ಬೆಳವಣಿಗೆ ಅಂದಾಜು – Kannada News | Govt releases its first advance estimate, projects economy to grow 7.4pc this fy

ನವದೆಹಲಿ, ಜನವರಿ 7: ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆ (Indian economy) ಶೇ. 7.4ರಷ್ಟು ಬೆಳೆಯುವ ಸಾಧ್ಯತೆ ಇದೆ ಎಂದು ಸರ್ಕಾರ ಅಂದಾಜು ಮಾಡಿದೆ. ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯ ಇಂದು (ಬುಧವಾರ) ಬಿಡುಗಡೆ ಮಾಡಿದ ತನ್ನ ಮೊದಲ ಮುಂಗಡ ಅಂದಾಜು ವರದಿಯಲ್ಲಿ ಈ ಲೆಕ್ಕಾಚಾರ ಹಾಕಿದೆ. 2024-25ರಲ್ಲಿ ಜಿಡಿಪಿ ಶೇ. 6.5ರಷ್ಟು ಹೆಚ್ಚಿತ್ತು. 2025-26ರಲ್ಲಿ ಶೇ. 7.4 ರಷ್ಟು ಹೆಚ್ಚಬಹುದು ಎಂದು ಸರ್ಕಾರ ನಿರೀಕ್ಷಿಸುತ್ತಿದೆ.

2011-12ರ ವರ್ಷದ ಆಧಾರದಲ್ಲಿ (base year) ಜಿಡಿಪಿ 201.90 ಲಕ್ಷ ಕೋಟಿ ರೂ ಮುಟ್ಟಬಹುದು ಎಂದು ಅಂದಾಜು ಮಾಡಲಾಗಿದೆ. 2024-25ರಲ್ಲಿ ಜಿಡಿಪಿ ಗಾತ್ರ 187.97 ಲಕ್ಷ ಕೋಟಿ ರೂ ಇತ್ತು. ಅದಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷ ಶೇ. 7.4ರಷ್ಟು ಹೆಚ್ಚುವ ಸಾಧ್ಯತೆ ಕಾಣುತ್ತಿದೆ ಎಂದು ಈ ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಇಂಡಿಯಾ ರೇಟಿಂಗ್ಸ್ ಪ್ರಕಾರ ಮುಂದಿನ ವರ್ಷ ಭಾರತದ ಜಿಡಿಪಿ ಬೆಳವಣಿಗೆ ಶೇ. 6.9

ನಾಮಿನಲ್ ಜಿಡಿಪಿ ಶೇ. 8 ಹೆಚ್ಚಳ ಸಾಧ್ಯತೆ

ಪ್ರಸಕ್ತ ದರಗಳ ಆಧಾರದ ಜಿಡಿಪಿ (GDP at current prices) ಅಥವಾ ನಾಮಿನಲ್ ಜಿಡಿಪಿ 2025-26ರಲ್ಲಿ 357.14 ಲಕ್ಷ ಕೋಟಿ ರೂ ಮುಟ್ಟಬಹುದು ಎಂದು ಅಂದಾಜಿಸಲಾಗಿದೆ. ಹಿಂದಿನ ವರ್ಷದಲ್ಲಿ (2024-25) ಜಿಡಿಪಿ ಗಾತ್ರ 330.68 ಲಕ್ಷ ಕೋಟಿ ರೂ ಇತ್ತು. ಅಂದರೆ ನಾಮಿನಲ್ ಜಿಡಿಪಿ ಪ್ರಸಕ್ತ ವರ್ಷದಲ್ಲಿ ಶೇ. 8ರಷ್ಟು ಹೆಚ್ಚಬಹುದು ಎಂದು ಸರ್ಕಾರದ ಮೊದಲ ಅಡ್ವಾನ್ಸ್ಡ್ ಎಸ್ಟಿಮೇಟ್​ಗಳಲ್ಲಿ ತಿಳಿಸಲಾಗಿದೆ.

ಇಂಡಿಯಾ ರೇಟಿಂಗ್ಸ್ ಅಂಡ್ ರಿಸರ್ಚ್ ಏಜೆನ್ಸಿ ಕೂಡ ಪ್ರಸಕ್ತ ವರ್ಷದಲ್ಲಿ ಭಾರತದ ಆರ್ಥಿಕತೆಯು ಶೇ. 7.4ರಷ್ಟು ಬೆಳೆಯಬಹುದು ಎಂದು ಅಂದಾಜಿಸಿದೆ. ಸರ್ಕಾರದ ಅಂದಾಜು ಕೂಡ ಇಷ್ಟೇ ಇದೆ. 2023-24ರಲ್ಲಿ ಭಾರತದ ಜಿಡಿಪಿ ಶೇ. 8.2, 2024-25ರಲ್ಲಿ ಶೇ. 6.5ರಷ್ಟು ವೃದ್ಧಿಸಿತ್ತು. 2025-26ರ ಮೊದಲ ಕ್ವಾರ್ಟರ್​ನಲ್ಲಿ ಶೇ. 7.8, ಎರಡನೇ ಕ್ವಾರ್ಟರ್​ನಲ್ಲಿ ಶೇ. 8.2ರಷ್ಟು ಜಿಡಿಪಿ ಹೆಚ್ಚಿದೆ. ಅಂದರೆ ಮೊದಲಾರ್ಧದಲ್ಲಿ ಆರ್ಥಿಕ ಬೆಳವಣಿಗೆ ಶೇ. 8ರ ದರದಲ್ಲಿ ಆಗಿದೆ. ಇನ್ನೆರಡು ಕ್ವಾರ್ಟರ್​ಗಳಲ್ಲೂ ಉತ್ತಮ ಬೆಳವಣಿಗೆ ದಾಖಲಾದರೆ ಜಿಡಿಪಿ ಶೇ 8ರ ಆಸುಪಾಸಿನಲ್ಲಿ ಇದ್ದರೆ ಅಚ್ಚರಿ ಏನಿಲ್ಲ.

ಇದನ್ನೂ ಓದಿ: 50 ವರ್ಷದಲ್ಲಿ ವಿಶ್ವ ಹೇಗಿರುತ್ತೆ? ಫ್ರಾನ್ಸ್, ಜಪಾನ್, ಜರ್ಮನಿಯನ್ನೂ ಹಿಂದಿಕ್ಕುತ್ತಾ ಪಾಕಿಸ್ತಾನ? ಭಾರತ ಹೇಗಿದ್ದೀತು?

ಬಜೆಟ್​ಗೆ ಸಂಬಂಧ ಇರುತ್ತೆ ಈ ಎಸ್ಟಿಮೇಟ್

ಸರ್ಕಾರ ಈ ವರ್ಷದ ಆರ್ಥಿಕ ಬೆಳವಣಿಗೆ ಎಷ್ಟಿರಬಹುದು ಎಂದು ಮುಂಗಡವಾಗಿ ಮಾಡುವ ಅಂದಾಜು ವರದಿಯ ದತ್ತಾಂಶವನ್ನು ಬಜೆಟ್ ಸಿದ್ಧತೆಗೆ ಬಳಸಲಾಗುತ್ತದೆ. ಫೆಬ್ರುವರಿ 1ರಂದು ಬಜೆಟ್ ಮಂಡನೆ ಆಗುತ್ತದೆ. ಇದು ಮೋದಿ 3.0 ಸರ್ಕಾರದ ಮೂರನೇ ಪೂರ್ಣಪ್ರಮಾಣದ ಬಜೆಟ್ ಆಗಿರುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ರಘು ಮೇಲಿನ ಎಮೋಷನ್: ‘ಟಿಕೆಟ್ ಟು ಟಾಪ್ 6’ ಆಟ ಬಿಟ್ಟುಕೊಟ್ಟ ರಕ್ಷಿತಾ ಶೆಟ್ಟಿ – Kannada News | Rakshitha Shetty quits during Ticket to Top 6 task in Bigg Boss Kannada Season 12

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋನಲ್ಲಿ ಈಗ ಅಂತಿಮ ಹಂತದ ಹಣಾಹಣಿಗೆ ಸ್ಪರ್ಧೆ ಏರ್ಪಟ್ಟಿದೆ. ಹಾಗಾಗಿ ಎಲ್ಲರ ನಡುವೆ ಪೈಪೋಟಿ ಜಾಸ್ತಿ ಆಗಿದೆ. ಈ ವಾರ ‘ಟಿಕೆಟ್ ಟು ಟಾಪ್ 6’ ಟಾಸ್ಕ್ ನಡೆಯುತ್ತಿದೆ. ಅಂದರೆ, ಅಂತಿಮ 6 ಮಂದಿಯ ನಡುವೆ ನಡೆಯಲಿರುವ ಸ್ಪರ್ಧೆಗೆ ಯಾರು ಅರ್ಹರು ಎಂಬುದನ್ನು ನಿರ್ಧರಿಸಲು ಟಾಸ್ಕ್ ನೀಡಲಾಗುತ್ತಿದೆ. ಈ ಆಟದಲ್ಲಿ ಈಗಾಗಲೇ ಧ್ರುವಂತ್ ವಿರುದ್ಧ ಸೋತು ಗಿಲ್ಲಿ ನಟ ಅವರು ಔಟ್ ಆಗಿದ್ದಾರೆ. ಅಚ್ಚರಿ ಎಂದರೆ, ರಕ್ಷಿತಾ ಶೆಟ್ಟಿ (Rakshitha Shetty) ಅವರು ಸ್ವತಃ ಆಟದಿಂದ ಹೊರಗೆ ಬಂದಿದ್ದಾರೆ. ಇದಕ್ಕೆ ಕಾರಣ ಆಗಿರುವುದು ಮ್ಯೂಟೆಂಟ್ ರಘು ಮೇಲಿನ ಎಮೋಷನ್!

ಸಾಮಾನ್ಯವಾಗಿ ಬಿಗ್ ಬಾಸ್ ಮನೆಯಲ್ಲಿ ಎಮೋಷನ್​​ಗೆ ಬೆಲೆ ಇಲ್ಲ. ತಾವೇ ಗೆಲ್ಲಬೇಕು ಎಂಬ ಕಾರಣಕ್ಕೆ ಸ್ನೇಹವನ್ನು ಬಲಿಕೊಡುತ್ತಾರೆ. ಹಲವು ದಿನಗಳಿಂದ ಒಟ್ಟಿಗೆ ಇದ್ದವರು ಒಂದು ಆಟಕ್ಕಾಗಿ ಕಿರಿಕ್ ಮಾಡಿಕೊಳ್ಳುತ್ತಾರೆ. ಆದರೆ ಈ ವಾರ ರಕ್ಷಿತಾ ಶೆಟ್ಟಿ ಅವರು ಎಮೋಷನ್​​ಗೆ ಒಳಗಾಗಿದ್ದಾರೆ. ರಘು ಅವರನ್ನು ಸೇವ್ ಮಾಡುವ ಸಲುವಾಗಿ ರಕ್ಷಿತಾ ಶೆಟ್ಟಿ ಸ್ವತಃ ಆಟದಿಂದ ಹೊರಗೆ ಬಂದರು.

ಟಾಸ್ಕ್ ವೇಳೆ ರಾಶಿಕಾ ಶೆಟ್ಟಿ, ಮ್ಯೂಟೆಂಟ್ ರಘು ಮತ್ತು ರಕ್ಷಿತಾ ಶೆಟ್ಟಿ ಅವರು ಒಂದು ತಂಡವಾಗಿ ಆಟ ಆಡಿದರು. ಆದರೆ ಅವರ ತಂಡಕ್ಕೆ ಹಿನ್ನಡೆ ಆಯಿತು. ಹಾಗಾಗಿ ಒಬ್ಬರನ್ನು ‘ಟಿಕೆಟ್ ಟು ಟಾಪ್ 6’ ಆಟದಿಂದ ಹೊರಗೆ ಇಡಬೇಕು ಎಂದು ಸೂಚಿಸಲಾಯಿತು. ಮೂವರೂ ಒಟ್ಟಿಗೆ ಚರ್ಚಿಸಿ ಒಬ್ಬರನ್ನು ಹೊರಗೆ ಇಡಬೇಕಿತ್ತು.

ರಾಶಿಕಾ ಶೆಟ್ಟಿ ಅವರನ್ನು ಆಟದಿಂದ ಹೊರಗೆ ಇಡಲು ರಘು ಮತ್ತು ರಕ್ಷಿತಾ ಆರಂಭದಲ್ಲಿ ತೀರ್ಮಾನಿಸಿದರು. ಆದರೆ ಆ ತೀರ್ಮಾನಕ್ಕೆ ರಾಶಿಕಾ ಒಪ್ಪಿಕೊಳ್ಳಲಿಲ್ಲ. ಒಂದು ವೇಳೆ ಒಮ್ಮತದ ನಿರ್ಧಾರಕ್ಕೆ ಬರದೇ ಇದ್ದರೆ ಮೂವರಿಗೂ ಅವಕಾಶ ತಪ್ಪುತ್ತಿತ್ತು. ಹಾಗಾಗಿ ಅಂತಿಮ ಹಂತದಲ್ಲಿ ರಘು ಅವರು ತಾನೇ ಔಟ್ ಆಗಲು ನಿರ್ಧರಿಸಿದರು. ಆದರೆ ಆಗ ರಕ್ಷಿತಾ ಶೆಟ್ಟಿ ಅವರು ಮನಸ್ಸು ಬದಲಾಯಿಸಿದರು.

ಇದನ್ನೂ ಓದಿ: ಬಿಗ್ ಬಾಸ್ ಕನ್ನಡ: ಟಾಪ್ 6 ಆಟದಿಂದ ಗಿಲ್ಲಿ ನಟ ಔಟ್; ಎಲ್ಲರಿಗೂ ಶಾಕ್

ಮ್ಯೂಟೆಂಟ್ ರಘು ಅವರನ್ನು ರಕ್ಷಿತಾ ಶೆಟ್ಟಿ ಅವರು ಪ್ರೀತಿಯಿಂದ ಅಣ್ಣ ಎಂದು ಕರೆಯುತ್ತಾರೆ. ಹೆಚ್ಚಿನ ಸಂದರ್ಭದಲ್ಲಿ ಅವರಿಬ್ಬರು ಪರಸ್ಪರ ಬೆಂಬಲವಾಗಿ ನಿಂತಿದ್ದಾರೆ. ರಘು ಮೇಲೆ ರಕ್ಷಿತಾ ಶೆಟ್ಟಿ ಅವರಿಗೆ ಬಹಳ ಪ್ರೀತಿ ಇದೆ. ಹಾಗಾಗಿ ರಘು ಅವರು ಆಟದಿಂದ ಹೊರಗೆ ಉಳಿಯುವುದು ರಕ್ಷಿತಾಗೆ ಇಷ್ಟ ಆಗಲಿಲ್ಲ. ಆದ್ದರಿಂದ ಎಮೋಷನ್​​ಗೆ ಒಳಗಾಗಿ ಅವರು ತಮ್ಮ ಆಟವನ್ನು ಬಿಟ್ಟುಕೊಟ್ಟರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

WPL 2026: 4ನೇ ಆವೃತ್ತಿಯ ಡಬ್ಲ್ಯುಪಿಎಲ್​ನಲ್ಲಿ ಆರ್​ಸಿಬಿ ಯಾವ ದಿನ ಯಾವ ತಂಡವನ್ನು ಎದುರಿಸಲಿದೆ? – Kannada News | WPL 2026: RCB Full Schedule, Match Dates and Venues

ಮಹಿಳಾ ಪ್ರೀಮಿಯರ್ ಲೀಗ್​ನ (Women’s Premier League) ನಾಲ್ಕನೇ ಆವೃತ್ತಿಗೆ ಕೇವಲ ಎರಡು ದಿನಗಳು ಬಾಕಿ ಉಳಿದಿವೆ. ಜನವರಿ 9 ರಿಂದ ಈ ಟೂರ್ನಿ ಪ್ರಾರಂಭವಾಗಲಿದ್ದು, ಫೆಬ್ರವರಿ 05 ರಂದು ಕೊನೆಗೊಳ್ಳಲಿದೆ. ಈ ಆವೃತ್ತಿಯ ಪಂದ್ಯಗಳಿಗೆ ಕೇವಲ ಎರಡು ನಗರಗಳು ಆತಿಥ್ಯವಹಿಸುತ್ತಿದ್ದು, ನವಿ ಮುಂಬೈ ಹಾಗೂ ವಡೋದರಾದಲ್ಲಿ ಪಂದ್ಯಾವಳಿ ನಡೆಯಲಿದೆ. ಎಲ್ಲರಿಗೂ ತಿಳಿದಿರುವಂತೆ ಈ ಪಂದ್ಯಾವಳಿಯಲ್ಲಿ ಒಟ್ಟು ಐದು ತಂಡಗಳು ಭಾಗವಹಿಸುತ್ತಿವೆ. ಎಲ್ಲಾ ತಂಡಗಳು ಲೀಗ್ ಹಂತದಲ್ಲಿ ಪರಸ್ಪರ ತಲಾ 2 ಪಂದ್ಯಗಳನ್ನು ಆಡಲಿವೆ. ಈ ರೀತಿಯಾಗಿ ಒಂದು ತಂಡ ಒಟ್ಟು ಎಂಟು ಪಂದ್ಯಗಳನ್ನು ಆಡುತ್ತದೆ. ಟೂರ್ನಿಯಲ್ಲಿ ಒಟ್ಟು 22 ಪಂದ್ಯಗಳು ನಡೆಯಲಿವೆ. ಈ 22 ಪಂದ್ಯಗಳಲ್ಲಿ ಆರ್​ಸಿಬಿ (RCB) ಆಡಲಿರುವ 8 ಪಂದ್ಯಗಳನ್ನು ಯಾವ ದಿನದಂದು ಯಾವ ತಂಡದ ಎದುರು ಎಲ್ಲಿ ಆಡುತ್ತದೆ ಎಂಬುದರ ಪೂರ್ಣ ವಿವರ ಇಲ್ಲಿದೆ.

ಮೊದಲ ಎದುರಾಳಿ ಮುಂಬೈ

ಆರ್​ಸಿಬಿ ಟೂರ್ನಿಯ ಮೊದಲ ಪಂದ್ಯದಲ್ಲೇ ಕಣಕ್ಕಿಳಿಯುತ್ತಿದ್ದು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯ ಜನವರಿ 09 ರಂದು ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣ ನಡೆಯಲಿದೆ. ನಂತರ ಎರಡನೇ ಪಂದ್ಯ ಜನವರಿ 12 ರಂದು ಯುಪಿ ವಾರಿಯರ್ಸ್​ ವಿರುದ್ಧ ನಡೆಯಲಿದ್ದು, ಈ ಪಂದ್ಯಕ್ಕೂ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣ ಆತಿಥ್ಯ ನೀಡಲಿದೆ.

ಮೂರನೇ ಪಂದ್ಯವನ್ನು ಜನವರಿ 16 ರಂದು ಆಡಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಈ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು ಮುಂಬೈನಲ್ಲಿ ಎದುರಿಸಲಿದೆ. ಜನವರಿ 17 ರಂದು ನಡೆಯಲ್ಲಿರುವ ನಾಲ್ಕನೇ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್, ಆರ್​ಸಿಬಿಗೆ ಎದುರಾಳಿಯಾಗಲಿದೆ. ಈ ಪಂದ್ಯವೂ ಕೂಡ ಮುಂಬೈನಲ್ಲಿ ನಡೆಯಲ್ಲಿದೆ.

WPL 2026: ಇನ್ನೇರಡು ದಿನಗಳಲ್ಲಿ ಡಬ್ಲ್ಯುಪಿಎಲ್ ಆರಂಭ; ಇಲ್ಲಿದೆ ಪೂರ್ಣ ವೇಳಾಪಟ್ಟಿ

ಎರಡು ದಿನಗಳ ಬಳಿಕ ಅಂದರೆ ಜನವರಿ 19 ರಂದು ತನ್ನ 5ನೇ ಪಂದ್ಯವನ್ನಾಡಲಿರುವ ಆರ್​ಸಿಬಿ ಈ ಪಂದ್ಯದಲ್ಲಿ ಎರಡನೇ ಬಾರಿಗೆ ಗುಜರಾತ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ನಂತರ ಜನವರಿ 24 ರಂದು ಡೆಲ್ಲಿ ಕ್ಯಾಪಿಟಲ್ಸ್​ಗೆ ಆರ್​ಸಿಬಿ ಎರಡನೇ ಬಾರಿಗೆ ಮುಖಾಮುಖಿಯಾಗಲಿದೆ. ಈ ಎರಡು ಪಂದ್ಯಗಳು ವಡೋದರಲ್ಲಿ ನಡೆಯಲಿವೆ. ಉಳಿದೆರಡು ಪಂದ್ಯಗಳು ಸಹ ಇದೇ ವಡೋದರದಲ್ಲಿ ನಡೆಯಲಿದ್ದು, ಇದರಲ್ಲಿ ಆರ್​ಸಿಬಿ ಕ್ರಮವಾಗಿ ಜನವರಿ 26 ರಂದು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಜನವರಿ 29 ರಂದು ಯುಪಿ ವಾರಿಯರ್ಸ್​ ತಂಡವನ್ನು ಎದುರಿಸಲಿದೆ.

ಆರ್​ಸಿಬಿ ತಂಡ: ಸ್ಮೃತಿ ಮಂಧಾನ (ನಾಯಕಿ), ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಜಾರ್ಜಿಯಾ ವೋಲ್, ನಡಿನ್ ಡಿ ಕ್ಲರ್ಕ್, ರಾಧಾ ಯಾದವ್, ಲಾರೆನ್ ಬೆಲ್, ಲಿನ್ಸೆ ಸ್ಮಿತ್, ಪ್ರೇಮಾ ರಾವತ್, ಅರುಂಧತಿ ರೆಡ್ಡಿ, ಪೂಜಾ ವಸ್ತ್ರಾಕರ್, ಗ್ರೇಸ್ ಹ್ಯಾರಿಸ್, ಗೌತಮಿ ನಾಯಕ್, ಪ್ರತ್ಯೂಷಾ ಕುಮಾರ್, ಡಿ. ಹೇಮಲತಾ, ಸಯಾಲಿ ಸತ್ಘರೆ (ಎಲ್ಲಿಸ್ ಪೆರ್ರಿ ಬದಲಿಗೆ)

ಆರ್​ಸಿಬಿ ಪೂರ್ಣ ವೇಳಾಪಟ್ಟಿ

ದಿನಾಂಕ

ಮುಖಾಮುಖಿ

ಸ್ಥಳ

09-01-2026

ಮುಂಬೈ ಇಂಡಿಯನ್ಸ್ vs ಆರ್​ಸಿಬಿ

ನವಿ ಮುಂಬೈ

12-01-2026

ಆರ್​ಸಿಬಿ vs ಯುಪಿ ವಾರಿಯರ್ಸ್

ನವಿ ಮುಂಬೈ

16-01-2026

ಆರ್​ಸಿಬಿ vs ಗುಜರಾತ್ ಜೈಂಟ್ಸ್

ನವಿ ಮುಂಬೈ

17-01-2026

ದೆಹಲಿ ಕ್ಯಾಪಿಟಲ್ಸ್ vs ಆರ್​ಸಿಬಿ

ನವಿ ಮುಂಬೈ

19-01-2026

ಗುಜರಾತ್ ಜೈಂಟ್ಸ್ vs ಆರ್​ಸಿಬಿ

ವಡೋದರಾ

24-01-2026

ಆರ್​ಸಿಬಿ vs ದೆಹಲಿ ಕ್ಯಾಪಿಟಲ್ಸ್

ವಡೋದರಾ

26-01-2026

ಆರ್​ಸಿಬಿ vs ಮುಂಬೈ ಇಂಡಿಯನ್ಸ್

ವಡೋದರಾ

29-01-2026

ಯುಪಿ ವಾರಿಯರ್ಸ್ vs ಆರ್​ಸಿಬಿ

ವಡೋದರಾ

03-02-2026

ಎಲಿಮಿನೇಟರ್

ವಡೋದರಾ

05-02-2026

ಫೈನಲ್

ವಡೋದರಾ

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪ್ರತ್ಯೇಕ ಘಟನೆ: ರಸ್ತೆ ಬದಿ‌ ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯ ಶವ ಪತ್ತೆ, 16ನೇ ಮಹಡಿಯಿಂದ ಬಿದ್ದು ಟೆಕ್ಕಿ ಸಾವು – Kannada News | Bengaluru Mangaluru techie commits suicide by falling from apartment 16th floor And Medical Student death at Shivamogga

ಬೆಂಗಳೂರು, (ಜನವರಿ 07): ರಸ್ತೆ ಬದಿ‌ ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ (Bengaluru rural)  ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪ ಬಳಿ ಕಾರಿನಲ್ಲಿ ಶವಪತ್ತೆಯಾಗಿದೆ. ಇಂದು (ಜನವರಿ 07) ಬೆಳಗ್ಗೆಯಿಂದ ರಸ್ತೆ ಬದಿ ನಿಲ್ಲಿಸಿದ್ದ ಕಾರಿನಲ್ಲಿ ಮಲಗಿದ್ದ ವ್ಯಕ್ತಿಯನ್ನು ಎಷ್ಟು ಎಬ್ಬಿಸಿದರೂ ಎದ್ದಿಲ್ಲ. ಎಚ್ಚರಗೊಳ್ಳದಿದ್ದಕ್ಕೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನ ನಡೆಸಿದಾಗ ವ್ಯಕ್ತಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಮೆಲ್ನೋಟಕ್ಕೆ ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.

ವ್ಯಕ್ತಿಯ ಜೇಬಿನಲ್ಲಿ ಶಿಡ್ಲಘಟ್ಟ ತಾಲೂಕಿನ ತಾಳಹಳ್ಳಿ ದಾಖಲೆಗಳು ಪತ್ತೆಯಾಗಿದೆ. ಆದ್ರೆ, ಮೃತ ವ್ಯಕ್ತಿ ಯಾರು ಏನು ಎನ್ನುವುದೇ ತಿಳಿದುಬಂದಿಲ್ಲ. ಆದ್ರೆ, ಸಿಕ್ಕ ದಾಖಲೆಗಳ ಆಧಾರದ ಮೇಲೆ ಪೊಲೀಸರು ಮೃತನ ಕುಟುಂಬಸ್ಥರನ್ನ ಸಂಪರ್ಕಿಸುವ ಪಯತ್ನ ನಡೆಸಿದ್ದಾರೆ.

ಇದನ್ನೂ ಓದಿ: ಪತ್ನಿ ಮಗ ಇದ್ರೂ ತಂಗಿ ಜತೆ ಅಣ್ಣ ಸಂಸಾರ: ಅಣ್ಣ-ತಂಗಿ ಲವ್ವಿಡವ್ವಿ ಸಾವಿನಲ್ಲಿ ಅಂತ್ಯ!

16ನೇ ಫ್ಲೋರ್‌ನಿಂದ ಬಿದ್ದು ಟೆಕ್ಕಿ ಆತ್ಮಹತ್ಯೆ

ಬೆಂಗಳೂರು: ಅಪಾರ್ಟ್‌ಮೆಂಟ್‌ನ (Apartment) 16ನೇ ಫ್ಲೋರ್‌ನಿಂದ ಬಿದ್ದು ಟೆಕ್ಕಿಯೊಬ್ಬರು (Techie) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಬಗಲಗುಂಟೆಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ನಿಕ್ಷೇಪ್ (26) ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ. ನಿಕ್ಷೇಪ್ ವರ್ಕ್ ಫ್ರಂ ಹೋಮ್ ಕೆಲಸ ಮಾಡುತ್ತಿದ್ದು, ಸ್ಕಿಜೋಫ್ರೇನಿಯಾ ಖಾಯಿಲೆಯಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ಅಪಾರ್ಟ್‌ಮೆಂಟ್‌ನ 16ನೇ ಮಹಡಿಗೆ ಬಂದು ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಬಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಮಂಗಳೂರಿನ ನಿವಾಸಿಯಾಗಿರುವ ಬಂಗೇರಾ, ವಿದೇಶದಲ್ಲಿ ಇಂಜಿನಿಯರಿಂಗ್ ಮುಗಿಸಿ ತಂದೆ ತಾಯಿ ಜೊತೆ ಬಾಗಲಗುಂಟೆ ಪ್ರಿನ್ಸ್ ಅಪಾರ್ಟ್ಮೆಂಟ್ ವಾಸವಿದ್ದ. ಬಂಗೇರಾ ಕುಟುಂಬ 20ನೇ ಮಹಡಿಯ ಫ್ಲಾಟ್ ನಲ್ಲಿ ವಾಸವಿತ್ತು. ಆದ್ರೆ, ಬಂಗೇರಾ 16ನೇ ಮಹಡಿ ಬಿದ್ದು ಅಚ್ಚರಿಗೆ ಕಾರಣವಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಅನಾರೋಗ್ಯದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದು,ಈ ಬಗ್ಗೆ ಬಾಗಲಗುಂಟೆ ಪೊಲೀಸರು‌ ತನಿಖೆ ಕೈಗೊಂಡಿದ್ದಾರೆ.

ವೈದ್ಯ ವಿದ್ಯಾರ್ಥಿ ಆತ್ಮಹತ್ಯೆ

ಶಿವಮೊಗ್ಗ: ಇನ್ನೊಂದೆಡೆ ಎಂಡಿ ವ್ಯಾಸಂಗ ಮಾಡುತ್ತಿದ್ದ ವೈದ್ಯ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದ ಸಿಮ್ಸ್ ಮೆಡಿಕಲ್ ಕಾಲೇಜಿನ ಭದ್ರಾ ಹಾಸ್ಟೆಲ್ ನಲ್ಲಿ ನಡೆದಿದೆ. ಸಂದೀಪ್ ರಾಜ್ (27) ಆತ್ಮಹತ್ಯೆಗೆ ಶರಣಾದ ಪಿಜಿ ವಿದ್ಯಾರ್ಥಿ.  ಮೂಲತಃ ತುಮಕೂರಿನ ಮಧುಗಿರಿ ಮೂಲದ ಸಂದೀಪ್ ರಾಜ್, ಶಿವಮೊಗ್ಗ ಸಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಡಿ ರೆಡಿಯಾಲಜಿ ವ್ಯಾಸಂಗ ಮಾಡುತ್ತಿದ್ದ. ಇನ್ನು ಸಂದೀಪ್ ರಾಜ್ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು, ಈ ಸಂಬಂಧ ಶಿವಮೊಗ್ಗದ ಖಾಸಗಿ ಮಾನಸಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಹೀಗಾಗಿ ಅನಾರೋಗ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ – Kannada News | Viral Video Indian Common Man Struggling To Get Inside the Train

ನವದೆಹಲಿ, ಜನವರಿ 7: ಪ್ರತಿದಿನ ಅಂತರ್ಜಾಲದಲ್ಲಿ ವಿವಿಧ ರೀತಿಯ ವಿಡಿಯೋಗಳು ವೈರಲ್ (Viral Video) ಆಗುತ್ತಲೇ ಇರುತ್ತವೆ. ಬೆನ್ನಿನ ಮೇಲೆ ಭಾರವಾದ ಹೊರೆಯನ್ನು ಹೊತ್ತು ಸಾಮಾನ್ಯ ವ್ಯಕ್ತಿಯೊಬ್ಬ ರೈಲನ್ನು ಹತ್ತಲು ಪ್ರಯತ್ನಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ಜನದಟ್ಟಣೆಯ ರೈಲನ್ನು ಹತ್ತಲು ಯುವಕನೊಬ್ಬ ಕಷ್ಟಪಡುತ್ತಿರುವ ವಿಡಿಯೋ ಇಂಟರ್​​ನೆಟ್​​​ನಲ್ಲಿ ಹರಿದಾಡುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ವೆನೆಜುವೆಲಾಗೆ ತೆರಳುತ್ತಿದ್ದ ರಷ್ಯಾದ ತೈಲ ಟ್ಯಾಂಕರ್ ವಶಪಡಿಸಿಕೊಂಡ ಅಮೆರಿಕ – Kannada News | US Seizes Russia Flagged, Venezuela linked Oil Tanker In Atlantic

ವಾಷಿಂಗ್ಟನ್, ಜನವರಿ 7: ವೆನೆಜುವೆಲಾದ ಮೇಲೆ ದಾಳಿ ನಡೆಸಿ, ಅಲ್ಲಿನ ಅಧ್ಯಕ್ಷರನ್ನು ಸೆರೆಹಿಡಿದ ಬೆನ್ನಲ್ಲೇ ಅಮೆರಿಕ ಇದೀಗ ವೆನೆಜುವೆಲಾಗೆ (Venezuela) ಸೇರಿದ ರಷ್ಯಾದ ಧ್ವಜ ಹೊತ್ತ ತೈಲ ಟ್ಯಾಂಕರ್ ಅನ್ನು ವಶಪಡಿಸಿಕೊಂಡಿದೆ. ಅಟ್ಲಾಂಟಿಕ್ ಸಾಗರದಲ್ಲಿ ಸುಮಾರು 2 ವಾರಗಳ ಕಾಲ ಯುಎಸ್ ಕೋಸ್ಟ್ ಗಾರ್ಡ್ ಹಡಗನ್ನು ಹಿಂಬಾಲಿಸಿತು. ವೆನೆಜುವೆಲಾದ ತೈಲ ರಫ್ತಿನ ಮೇಲೆ ಅಮೆರಿಕದ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಯುಎಸ್ ಅಧಿಕಾರಿಗಳು ತಿಳಿಸಿದ್ದಾರೆ. ತೈಲ ಖರೀದಿಸಲು ಈ ಹಡಗು ವೆನೆಜುವೆಲಾಗೆ ತೆರಳುತ್ತಿತ್ತು.

ಈ ಕಾರ್ಯಾಚರಣೆಯ ಸಮಯದಲ್ಲಿ ಪರಿಸ್ಥಿತಿ ಅತ್ಯಂತ ಸೂಕ್ಷ್ಮವಾಗಿತ್ತು. ಏಕೆಂದರೆ, ರಷ್ಯಾದ ಮಿಲಿಟರಿ ಹಡಗು ಮತ್ತು ಜಲಾಂತರ್ಗಾಮಿ ನೌಕೆ ಕೂಡ ಆ ಪ್ರದೇಶದಲ್ಲಿತ್ತು. ಆದರೆ, ರಷ್ಯಾ ಮತ್ತು ಅಮೆರಿಕ ದೇಶಗಳ ನಡುವೆ ಯಾವುದೇ ಮಿಲಿಟರಿ ಘರ್ಷಣೆ ಸಂಭವಿಸಿಲ್ಲ ಎಂದು ಅಮೆರಿಕದ ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯ ಬಗ್ಗೆ ರಷ್ಯಾ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.

ಅಮೆರಿಕ ವಶಪಡಿಸಿಕೊಂಡ ಹಡಗನ್ನು ಈ ಹಿಂದೆ ಬೆಲ್ಲಾ-1 ಎಂದು ಹೆಸರಿಸಲಾಗಿತ್ತು. ನಂತರ ಅದು ತನ್ನ ಹೆಸರನ್ನು ಮರಿನೆರಾ ಎಂದು ಬದಲಾಯಿಸಿಕೊಂಡಿತು. ಇದನ್ನು ರಷ್ಯಾದ ಧ್ವಜದ ಅಡಿಯಲ್ಲಿ ನೋಂದಾಯಿಸಲಾಗಿದೆ. ಈ ಹಿಂದೆ, ಈ ಹಡಗು ಕೆರಿಬಿಯನ್ ಸಮುದ್ರದಲ್ಲಿ ಅಮೆರಿಕದ ದಿಗ್ಬಂಧನವನ್ನು ತಪ್ಪಿಸಿತ್ತು. ಯುಎಸ್ ಕೋಸ್ಟ್ ಗಾರ್ಡ್ ಅದನ್ನು ತಡೆದು ತನಿಖೆ ಮಾಡಲು ಪ್ರಯತ್ನಿಸಿದರೂ ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ: ತೈಲ ಸಂಪತ್ತಿನ ಮೇಲೆ ಕಣ್ಣಿಟ್ಟರಾ ಟ್ರಂಪ್? ವೆನೆಜುವೆಲಾ ಮೇಲಿನ ಅಮೆರಿಕ ದಾಳಿ ಕುರಿತ ಕುತೂಹಲಕಾರಿ ಸಂಗತಿ ಇಲ್ಲಿದೆ

ಐಸ್ಲ್ಯಾಂಡ್ ಬಳಿಯ ಉತ್ತರ ಅಟ್ಲಾಂಟಿಕ್ ಸಾಗರದಲ್ಲಿ ಹಡಗನ್ನು ಅಂತಿಮವಾಗಿ ತಡೆಹಿಡಿಯಲಾಯಿತು ಎಂದು ಅಮೆರಿಕದ ಅಧಿಕಾರಿಗಳು ತಿಳಿಸಿದ್ದಾರೆ. ಅದು ಐಸ್ಲ್ಯಾಂಡ್ ಮತ್ತು ಬ್ರಿಟನ್ ನಡುವೆ ಪ್ರಯಾಣಿಸುತ್ತಿತ್ತು. ಸಂಪೂರ್ಣ ಕಾರ್ಯಾಚರಣೆಯನ್ನು ಯುಎಸ್ ಕೋಸ್ಟ್ ಗಾರ್ಡ್ ಮತ್ತು ಸೈನ್ಯ ಜಂಟಿಯಾಗಿ ನಡೆಸಿತು. ಯುಎಸ್ ಸೈನ್ಯದ ಯುರೋಪಿಯನ್ ಕಮಾಂಡ್ (EUCOM) ಸಾಮಾಜಿಕ ಮಾಧ್ಯಮದಲ್ಲಿ ಆ ತೈಲ ಟ್ಯಾಂಕರ್ ಹಡಗು ಯುಎಸ್ ನಿರ್ಬಂಧಗಳನ್ನು ಉಲ್ಲಂಘಿಸುತ್ತಿದೆ. ಇದೇ ಕಾರಣಕ್ಕೆ ಅದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಘೋಷಿಸಿತು.

ವಶಪಡಿಸಿಕೊಂಡ ಹಡಗನ್ನು ಮುಂದೆ ಎಲ್ಲಿಗೆ ಕೊಂಡೊಯ್ಯಲಾಗುತ್ತದೆ ಎಂಬುದು ಸ್ಪಷ್ಟವಾಗಿಲ್ಲ, ಆದರೆ, ಮೂಲಗಳು ಅದನ್ನು ಬ್ರಿಟಿಷ್ ಜಲಪ್ರದೇಶಕ್ಕೆ ಕಳುಹಿಸಬಹುದು ಎಂದು ಸೂಚಿಸುತ್ತವೆ. ಇದರ ಜೊತೆಗೆ ವೆನೆಜುವೆಲಾಗೆ ಸಂಬಂಧಿಸಿದ ಮತ್ತೊಂದು ಟ್ಯಾಂಕರ್ ಎಂ ಸೋಫಿಯಾವನ್ನು ಸಹ ಅಮೆರಿಕ ವಶಕ್ಕೆ ಪಡೆದುಕೊಂಡಿದೆ. ಈ ಹಡಗು ಪನಾಮ ಧ್ವಜದ ಅಡಿಯಲ್ಲಿ ನೋಂದಾಯಿಸಲ್ಪಟ್ಟಿದ್ದು, ನಿರ್ಬಂಧಗಳ ಹೊರತಾಗಿಯೂ ವೆನೆಜುವೆಲಾದಿಂದ ಚೀನಾಕ್ಕೆ ತೈಲವನ್ನು ಸಾಗಿಸುತ್ತಿತ್ತು.

ಇದನ್ನೂ ಓದಿ: ವೆನೆಜುವೆಲಾದ ಮಧ್ಯಂತರ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್​​ಗಿದೆ ಭಾರತದ ನಂಟು; ಇವರೂ ಕೂಡ ಸಾಯಿ ಬಾಬಾ ಭಕ್ತೆ!

ವೆನೆಜುವೆಲಾದ ಅಕ್ರಮ ಮತ್ತು ನಿರ್ಬಂಧಿತ ತೈಲ ಸಾಗಣೆಗಳ ವಿರುದ್ಧ ಅಮೆರಿಕದ ಕ್ರಮವು ವಿಶ್ವಾದ್ಯಂತ ಮುಂದುವರಿಯುತ್ತದೆ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಹೇಳಿದ್ದಾರೆ. ಅಂತಹ ಹಡಗುಗಳು ಎಲ್ಲಿದ್ದರೂ ಅಮೆರಿಕ ಕ್ರಮ ಕೈಗೊಳ್ಳುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ವಿರುದ್ಧ ಅಮೆರಿಕ ಇತ್ತೀಚೆಗೆ ಪ್ರಮುಖ ಕ್ರಮ ಕೈಗೊಂಡ ಸಮಯದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

‘ಹೂವಿನ ಬಾಣದಂತೆ’ ಹುಡುಗಿಗೆ ಜೀ ಕನ್ನಡ ಅವಕಾಶ; ಟ್ರೋಲ್ ಮಾಡಿದವರಿಗೆ ನಿತ್ಯಶ್ರೀ ತಿರುಗೇಟು – Kannada News | Hoovina Baanadanthe fame Nithyashree reacts to trolls after Comedy Khiladigalu show

‘ಹೂವಿನ ಬಾಣದಂತೆ’ (Hoovina Baanadanthe) ಹಾಡನ್ನು ತನ್ನದೇ ರೀತಿಯಲ್ಲಿ ಹಾಡುವ ಮೂಲಕ ನಿತ್ಯಶ್ರೀ ಅವರು ರಾತ್ರೋರಾತ್ರಿ ಫೇಮಸ್ ಆಗಿದ್ದರು. ಆ ಬಳಿಕ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಫಾಲೋವರ್ಸ್ ಸಂಖ್ಯೆ ಹೆಚ್ಚಾಯಿತು. ಅಲ್ಲದೇ ಹೊಸ ಹೊಸ ಅವಕಾಶಗಳು ಕೂಡ ಬರಲು ಆರಂಭಿಸಿದವು. ಇತ್ತೀಚೆಗೆ ನಿತ್ಯಶ್ರೀ ಅವರಿಗೆ ‘ಜೀ ಕನ್ನಡ’ ವಾಹಿನಿ ಕೂಡ ಕರೆದು ಅವಕಾಶ ನೀಡಿದೆ. ‘ಕಾಮಿಡಿ ಕಿಲಾಡಿಗಳು’ (Comedy Khiladigalu) ವೇದಿಕೆಯಲ್ಲಿ ನಟಿಸುವ ಅವಕಾಶ ನಿತ್ಯಶ್ರೀ ಅವರಿಗೆ ಸಿಕ್ಕಿದೆ. ಆದರೆ ಕೆಲವರು ಟ್ರೋಲ್ ಮಾಡಿದ್ದಾರೆ. ಅಂಥವರಿಗೆ ನಿತ್ಯಶ್ರೀ (Nithyashree) ಈಗ ತಿರುಗೇಟು ನೀಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ನಿತ್ಯಶ್ರೀ ಅವರು ಈ ವಿಡಿಯೋ ಹಂಚಿಕೊಂಡಿದ್ದಾರೆ. ತಮ್ಮನ್ನು ಟ್ರೋಲ್ ಮಾಡಿದ ಮಂದಿಗೆ ಅವರು ಉತ್ತರ ಕೊಟ್ಟಿದ್ದಾರೆ. ವಿಡಿಯೋ ಮಾಡುವುದಕ್ಕೂ ಮುನ್ನ ಸ್ವಲ್ಪ ಯೋಚಿಸಿ ಎಂದು ನಿತ್ಯಶ್ರೀ ಅವರು ಹೇಳಿದ್ದಾರೆ. ಈ ವಿಡಿಯೋ ಕೆಲವೇ ಗಂಟೆಗಳಲ್ಲಿ ಮಿಲಿಯನ್​ಗಟ್ಟೆಲೆ ವೀಕ್ಷಣೆ ಕಂಡಿದೆ. ಆದರೆ ಕಮೆಂಟ್ ಆಯ್ಕೆಯನ್ನು ನಿತ್ಯಶ್ರೀ ಅವರು ಆಫ್ ಮಾಡಿದ್ದಾರೆ.

‘ಮೊನ್ನೆ ಆದ ಕಾಮಿಡಿ ಕಿಲಾಡಿಗಳು ಶೋನಲ್ಲಿ ನಾನು ಅತಿಥಿಯಾಗಿ ನಟನೆ ಮಾಡಿದ್ದೇನೆ. ಅದನ್ನು ತುಂಬಾ ಜನರು ಕೆಟ್ಟದಾಗಿ ಟ್ರೋಲ್ ಮಾಡಿದ್ದಾರೆ. ಎಲ್ಲರಿಗೂ ನಾನು ಕೇಳುವುದು ಇಷ್ಟೇ.. ಇದೇ ಅವಕಾಶ ನಿಮ್ಮ ಅಕ್ಕ ಅಥವಾ ತಂಗಿಗೆ ಸಿಕ್ಕಿದ್ದರೆ ಇದನ್ನು ಉಪಯೋಗಿಸಿಕೊಳ್ಳದೇ ಬಿಡುತ್ತಿದ್ದರಾ? ಇದನ್ನು ಕೆಟ್ಟದಾಗಿ ಟ್ರೋಲ್ ಮಾಡುತ್ತಿದ್ರಾ?’ ಎಂದು ನಿತ್ಯಶ್ರೀ ಅವರು ಪ್ರಶ್ನೆ ಮಾಡಿದ್ದಾರೆ.

‘ಹೌದು, ನಾನು ಹಾಡನ್ನು ಕೆಟ್ಟದಾಗಿ ಹಾಡಿದ್ದೇನೆ. ಅದನ್ನು ನಾನು ಅರಿತುಕೊಂಡು ಕ್ಷಮೆ ಕೂಡ ಕೇಳಿದ್ದೇನೆ. ಕ್ಷಮೆ ಕೇಳುವ ಅವಶ್ಯಕತೆ ಇಲ್ಲ ಅಂತ ಅರ್ಜುನ್ ಜನ್ಯ ಸರ್ ಕೂಡ ಹೇಳಿದ್ದಾರೆ. ಹಾಗಂತ ಅದನ್ನು ನಾನು ಸ್ಫೂರ್ತಿಯಾಗಿ ತೆಗೆದುಕೊಳ್ಳುತ್ತಿಲ್ಲ. ಕೇವಲ ನೆನಪು ಮಾಡಿದ್ದೇನೆ ಅಷ್ಟೇ. ಏನು ಪ್ರತಿಭೆ ಇದೆ ಅಂತ ಕೇಳುತ್ತೀರಲ್ಲ.. ನನ್ನ ಜೀವನದಲ್ಲಿ ಮೊದಲ ಬಾರಿಗೆ ವೇದಿಕೆ ಹತ್ತಿದ್ದು ಎಂದರೆ ಅದು ಕಾಮಿಡಿ ಕಿಲಾಡಿಗಳು’ ಎಂದು ನಿತ್ಯಶ್ರೀ ಅವರು ಹೇಳಿದ್ದಾರೆ.

‘ಮೊದಲ ಬಾರಿಗೆ ತುಂಬಾ ಜನ ಕಲಾವಿದರು, ಪ್ರೇಕ್ಷಕರು ಹಾಗೂ ಜಡ್ಜ್​ಗಳು ಇದರು. ಅವರ ಮುಂದೆ ಸ್ಟೇಜ್ ಫಿಯರ್ ಇಲ್ಲದೇ ನಾನು ನಟನೆ ಮಾಡಿದ್ದೇನೆ. ಅದನ್ನು ನಮ್ಮ ಕಡೆ ಟ್ಯಾಲೆಂಟ್ ಅಂತಾನೇ ಕರೆಯೋದು. ಏನು ಸಾಧನೆ ಮಾಡಿದ್ದೀರಿ ಅಂತ ಕೇಳುತ್ತೀರಿ. ಹೌದು, ನಾನು ಸಾಧನೆ ಮಾಡಿಲ್ಲ ನಿಜ. ಸಾಧನೆ ಮಾಡೋಕೆ ನಮ್ಮ ಕರ್ನಾಟಕದ ಜನತೆ ಒಂದು ದಾರಿ ಮಾಡಿಕೊಟ್ಟಿದ್ದಾರೆ. ಅದನ್ನು ನಾನು ಉಪಯೋಗಿಸಿಕೊಳ್ಳುತ್ತಿದ್ದೇನೆ ಅಷ್ಟೇ’ ಎಂದು ನಿತ್ಯಶ್ರೀ ಹೇಳಿದ್ದಾರೆ.

ಇದನ್ನೂ ಓದಿ: ‘ಹೂವಿನ ಬಾಣದಂತೆ’ ಹುಡುಗಿಗೆ ಸಿಗುತ್ತಿದೆ ದೊಡ್ಡ ದೊಡ್ಡ ವೇದಿಕೆ

‘ನೀವು ಮಾಡುವ ವಿಡಿಯೋ ಬಗ್ಗೆ ಒಂದೇ ಒಂದು ಸಲ ಯೋಚನೆ ಮಾಡಿ. ನೀವು ಮಾಡುವ ವಿಡಿಯೋವನ್ನು ನಮ್ಮ ಅಪ್ಪ-ಅಮ್ಮ ಏನಾದರೂ ನೋಡಿದರೆ ಅವರ ಮನಸ್ಸಿಗೆ ಎಷ್ಟು ಬೇಜಾರು ಆಗಬಹುದು ಅಂತ ಯೋಚಿಸಿ. ಆಗಲಾದರೂ ಈ ರೀತಿ ವಿಡಿಯೋ ಮಾಡೋದು ನಿಲ್ಲಿಸಿತ್ತೀರಿ’ ಎಂದಿದ್ದಾರೆ ನಿತ್ಯಶ್ರೀ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IND vs SA: 13 ವರ್ಷಗಳ ಹಳೆಯ ವಿಶ್ವ ದಾಖಲೆ ಮುರಿದ ವೈಭವ್ ಸೂರ್ಯವಂಶಿ

Source link

ಬೆಂಗಳೂರಿನಲ್ಲಿ ಗಾರ್ಮೆಂಟ್ಸ್ ಕಂಪನಿ ಶುರು ಮಾಡಿ ಕೆಲಸಗಾರರ ಆಟಕ್ಕೆ ಬೇಸ್ತು ಬಿದ್ದ ಆಸ್ಟ್ರೇಲಿಯನ್ ಉದ್ಯಮಿ – Kannada News | Australian origin garments businessman in Bengaluru get bitter experience of handling workers

ಬೆಂಗಳೂರು, ಜನವರಿ 7: ಬೆಂಗಳೂರಿನಂಥ ನಗರಗಳಲ್ಲಿ ಒಂದು ಬ್ಯುಸಿನೆಸ್ ನಡೆಸುವುದು ಎಷ್ಟು ಕಷ್ಟ ಎಂಬ ಕಹಿಸತ್ಯವನ್ನು ಆಸ್ಟ್ರೇಲಿಯನ್ ಉದ್ಯಮಿಯೊಬ್ಬರು ಎರಡು ವರ್ಷದಲ್ಲಿ ಅರಿತುಕೊಂಡಿದ್ದಾರೆ. ಗಾರ್ಮೆಂಟ್ಸ್ ಉದ್ಯಮದಲ್ಲಿ (Garments factory) ಕೆಲಸಗಾರರಿಗೆ ಆಗುತ್ತಿರುವ ಶೋಷಣೆ ಬಗ್ಗೆ ಓದಿ ಮರುಗುತ್ತಿದ್ದ 38 ವರ್ಷದ ಕ್ರಿಸ್ ಎಚ್ ಎಂಬುವವರು ತಾವೇ ಒಂದು ಗಾರ್ಮೆಂಟ್ಸ್ ಫ್ಯಾಕ್ಟರಿ ಶುರು ಮಾಡಿ, ಮಾದರಿ ಆಗಲೊರಟಿದ್ದರು. ಆದರೆ, ಒಂದೇ ವರ್ಷದಲ್ಲಿ ಕೆಲಸಗಾರರ ಆಟಗಳಿಗೆ ಬೇಸ್ತುಬಿದ್ದು ಹೋಗಿ, ಚಡಪಡಿಸುತ್ತಿದ್ದಾರೆ. ಲಕ್ಷಾಂತರ ರೂ ನಷ್ಟ ಮಾಡಿಕೊಂಡು ಕಂಪನಿಯನ್ನು ಮುಂದುವರಿಸಬೇಕೋ ಬೇಡವೋ ಎಂದು ಆಲೋಚಿಸುವ ಹಂತಕ್ಕೆ ಹೋಗಿದ್ದಾರೆ.

ಆಸ್ಟ್ರೇಲಿಯಾದ ಕ್ರಿಸ್ ಅವರ ಪತ್ನಿಗೆ ಬೆಂಗಳೂರಿನಲ್ಲಿ ಟೆಕ್ ಕೆಲಸ ಸಿಕ್ಕಿತ್ತು. ಎರಡು ವರ್ಷದ ಹಿಂದೆ ಕ್ರಿಸ್ ಸಿಲಿಕಾನ್ ಸಿಟಿಗೆ ಬಂದಿದ್ದಾರೆ. ಗಾರ್ಮೆಂಟ್ಸ್ ಕಾರ್ಮಿಕರಿಗೆ ಆಗುತ್ತಿರುವ ಶೋಷಣೆ, ಕಡಿಮೆ ಸಂಬಳ, ಮಹಿಳೆಯರಿಗೆ ದೌರ್ಜನ್ಯ ಇತ್ಯಾದಿ ಬಗ್ಗೆ ಅವರು ಓದಿ ತಿಳಿಯುತ್ತಾರೆ. ಬೆನಿವೊಲೆಂಶಿಯಾ ಎನ್ನುವ ಒಂದು ಗಾರ್ಮೆಂಟ್ಸ್ ಕಂಪನಿಯನ್ನೇ ಶುರು ಮಾಡುತ್ತಾರೆ.

ಇದನ್ನೂ ಓದಿ: ಪಿಎಂ ಕಿಸಾನ್ ಸ್ಕೀಮ್- ರೈತರು ಇಕೆವೈಸಿ ಮಾಡಲು 3 ವಿಧಾನಗಳು

ಟೈಲರ್​ಗಳು ಸೇರಿದಂತೆ ವಿವಿಧ ಕಾರ್ಮಿಕರಿಗೆ ಕೈತುಂಬ ಸಂಬಳ ಕೊಡುತ್ತಾರೆ. ಬೇರೆ ಕಡೆ 8,000 ರೂ ಸಂಬಳ ಪಡೆಯುವ ಟೈಲರ್​ಗಳಿಗೆ 30,000 ರೂ ಸಂಬಳ ಕೊಡುತ್ತಾರೆ. ತರಬೇತಿ ಕೊಟ್ಟು ಆ ಟೈಲರ್ ಅನ್ನು ಸರಿಯಾಗಿ ಕೆಲಸಕ್ಕೆ ಬಳಸಿಕೊಳ್ಳಬೇಕೆನ್ನುವಷ್ಟರಲ್ಲಿ ಕೆಲಸ ಬಿಟ್ಟು ಹೋಗುವುದು ಇತ್ಯಾದಿ ಸಮಸ್ಯೆಗಳು ಅವರಿಗೆ ಅಡಿಗಡಿಗೆ ಬಂದೊದಗುತ್ತಿರುತ್ತವೆ.

ಒಬ್ಬ ಲೇಡಿ ಟೈಲರ್​ಳ ಕೆಲಸವನ್ನು ಕ್ರಿಸ್ ಬಹುವಾಗಿ ಪ್ರಶಂಸಿಸುತ್ತಾರೆ. ಆದರೆ, ಆಕೆಯ ಗಂಡನಿಗೆ ಇದನ್ನು ಸಹಿಸಿಕೊಳ್ಳಲು ಆಗದೆ ಪತ್ನಿಯನ್ನು ಕೆಲಸದಿಂದ ಬಿಡಿಸುತ್ತಾನೆ. ‘ಆಕೆ ತರಬೇತಿಯಲ್ಲಿ ಹೊಸ ಕೌಶಲ್ಯಗಳನ್ನು ಚೆನ್ನಾಗಿ ಕಲಿಯುತ್ತಿದ್ದಳು. ನಾನು ಪ್ರಶಂಸಿಸಿದ್ದೆ. ಒಮ್ಮೆ ಮಳೆ ಬರುತ್ತಿತ್ತು. ಆಕೆಯ ಶೂ ನೀರಿನಲ್ಲಿ ನೆನೆಯಬಾರದೆಂದು ಪಕ್ಕಕ್ಕೆ ಜರುಗಿಸಿದೆ. ಅದು ಆಕೆಯ ಪತಿಗೆ ಇಷ್ಟವಾಗಲಿಲ್ಲ. ಆಸ್ಟ್ರೇಲಿಯಾದಲ್ಲಾಗಿದ್ದರೆ ಯಾರಿಗೇ ಆದರೂ ನಾವು ಈ ಕೆಲಸ ಮಾಡುತ್ತಿರುತ್ತೇವೆ’ ಎಂದು ಕ್ರಿಸ್ ಅಚ್ಚರಿಗೊಂಡಿದ್ದಾರೆ.

ಕ್ರಿಸ್ ತಮ್ಮ ಕಂಪನಿಯ ಸೋಷಿಯಲ್ ಮೀಡಿಯಾ ಮ್ಯಾನೇಜ್ ಮಾಡಲು ಒಬ್ಬ ವ್ಯಕ್ತಿಯನ್ನು ನೇಮಕ ಮಾಡುತ್ತಾರೆ. ದಿನವೂ ಇನ್ಸ್​ಟಾದಲ್ಲಿ ಒಂದು ಪೋಸ್ಟ್ ಹಾಕುವಂತೆ ಹೇಳಿರುತ್ತಾರೆ. ಆ ವ್ಯಕ್ತಿ ಎರಡು ತಿಂಗಳಲ್ಲಿ ಹಾಕಿದ್ದು ಮೂರೇ ಪೋಸ್ಟ್. ಇನ್ನು, ಸಂದರ್ಶನಕ್ಕೆಂದು ಬಂದವರು ತಮ್ಮ ಕೌಶಲ್ಯ ತೋರಿಸಲು ಕೇಳಿದಾಗ ಪ್ರತಿಕ್ರಿಯಿಸುವುದೇ ಇಲ್ಲ. ಮತ್ತೊಬ್ಬ ವ್ಯಕ್ತಿ, ಇಂಟರ್ವ್ಯೂಗೆ ಬರಲು ಆಗುವ ವೆಚ್ಚವನ್ನೂ ಭರಿಸಬೇಕೆಂದು ಕೇಳಿದ್ದಾರೆ. ಹೀಗೆ ಬೆಂಗಳೂರಿನಲ್ಲಿ ಕೆಲಸಗಾರರ ವರ್ತನೆಯಿಂದ ಆಸ್ಟ್ರೇಲಿಯಾದ ಕ್ರಿಸ್ ಹೈರಾಣಾಗಿ ಹೋಗಿದ್ದಾರೆ.

ಇದನ್ನೂ ಓದಿ: ಚಿನ್ನದಂತೆ ಬೆಳ್ಳಿಗೂ ಸದ್ಯದಲ್ಲೇ ಬರಲಿದೆ ಹಾಲ್ಮಾರ್ಕ್ ಗುರುತು

ಕೆಲಸಗಾರರು ಸರಿಯಾಗಿ ನಿಲ್ಲದ ಕಾರಣ ಒಂದು ವರ್ಷದಲ್ಲಿ ಇವರ ಕಂಪನಿಗೆ 30 ಲಕ್ಷ ರೂ ನಷ್ಟವಾಗಿದೆಯಂತೆ. ಕೆಲಸಗಾರರಿಗೆ ಉತ್ತಮ ಸೌಕರ್ಯ ಕೊಡಲು ಮತ್ತು ಸೌಜನ್ಯದಿಂದ ನೋಡಿಕೊಳ್ಳಲು ಹೋಗಿ ಇವರೇ ಕಷ್ಟಕ್ಕೆ ಸಿಕ್ಕಿಕೊಂಡಂತಾಗಿದೆ. ತಮ್ಮ ಹಾಗೂ ಕೆಲಸಗಾರರ ಮಧ್ಯೆ ಸಾಂಸ್ಕೃತಿಕ ವ್ಯತ್ಯಾಸ ಇರಬಹುದೆಂದು ಗ್ರಹಿಸಿ, ಸ್ಥಳೀಯ ವ್ಯಕ್ತಿಯೊಬ್ಬರನ್ನು ಆಪರೇಷನಲ್ ಮ್ಯಾನೇಜರ್ ಆಗಿ ನೇಮಕ ಮಾಡಿದ್ದಾರೆ. ಭಾರತೀಯ ಕಾರ್ಮಿಕರನ್ನು ಹೇಗೆ ನಿಭಾಯಿಸಬೇಕೆಂಬ ಪಾಠವನ್ನು ಅವರಿಂದ ಕ್ರಿಸ್ ಕಲಿಯುತ್ತಿದ್ದಾರೆ.

‘ಕೆಲಸಗಾರರೊಂದಿಗೆ ಅಂತರ ಕಾಯ್ದುಕೊಳ್ಳುವುದು, ಹೆಚ್ಚು ಸ್ನೇಹಪೂರ್ವಕವಾಗಿ ವರ್ತಿಸದೇ ಇರುವುದು, ಬಾಸಿಸಂ ತೋರುವುದು ಇವನ್ನು ಆ ಮ್ಯಾನೇಜರ್ ನನಗೆ ಕಲಿಸುತ್ತಿದ್ದಾರೆ’ ಎಂದು ತಮಾಷೆ ಮಾಡುವ ಕ್ರಿಸ್, ಮುಂದಿನ ದಿನಗಳಲ್ಲೂ ಪರಿಸ್ಥಿತಿ ಸರಿ ಹೋಗದಿದ್ದರೆ ಕಂಪನಿಯನ್ನೇ ಮುಚ್ಚುವ ನಿರ್ಧಾರಕ್ಕೆ ಬಂದಿದ್ದಾರೆ.

(ಮಾಹಿತಿ ಮೂಲ: ಮನಿಕಂಟ್ರೋಲ್)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

BJP ಕಾರ್ಯಕರ್ತೆಯನ್ನ ವಿವಸ್ತ್ರಗೊಳಿಸಿದ್ದು ಯಾರು? ಮಹಿಳೆಯ ಹೈಡ್ರಾಮಾವೋ? ಪೊಲಿಸರ ಕ್ರೌರ್ಯವೋ? – Kannada News | BJP worker accuses cops of disrobing her during arrest, police deny allegations

ಹುಬ್ಬಳ್ಳಿ, (ಜನವರಿ 07): ಬಿಜೆಪಿ ಕಾರ್ಯಕರ್ತೆಯನ್ನ (BJP Worker) ಬಟ್ಟೆಬಿಚ್ಚಿ ಪೊಲೀಸರು ಥಳಿಸಿದ ಆರೋಪ ಕೇಳಿ ಬಂದಿದೆ. ಹುಬ್ಬಳ್ಳಿಯ (Hubballi) ಕೇಶ್ವಾಪುರ ಪೊಲೀಸ್ ಠಾಣೆಯ ಪೊಲೀಸರು, ಬಿಜೆಪಿ ಕಾರ್ಯಕರ್ತೆ ಸುಜಾತ ಹಂಡಿ ಬಂಧನದ ವೇಳೆ ವಿವಸ್ತ್ರಗೊಳಿ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ನಡುವೆ ಹಳೆ ವೈಷಮ್ಯದ‌ ಹಿನ್ನಲೆ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ತಿಕ್ಕಾಟ ನಡೆದಿದೆ. ಈ ಸಂಬಂಧ ಕಾಂಗ್ರೆಸ್ ಕಾರ್ಪೋರೇಟರ್ ಸುವರ್ಣ ಕಲ್ಲಕುಂಟ್ಲಾ ನೀಡಿದ ದೂರಿನ ಮೇರೆಗೆ ಕೇಶ್ವಾಪುರ ಪೊಲೀಸರು, ಸುಜಾತ ಅವರನ್ನ ಬಂಧಿಸಲು ಯತ್ನಿಸಿದ್ದಾರೆ. ಈ ವೇಳೆ ದೊಡ್ಡ ಹೈಡ್ರಾಮವೇ ಆಗಿದ್ದು,ಪೊಲೀಸ್ ವಾಹನದಲ್ಲೇ ಬಂಧಿತ ಸುಜಾತ ಅರೆನಗ್ನ ಸ್ಥಿತಿಯಲ್ಲಿರುವ ವಿಡಿಯೋ ವೈರಲ್ ಆಗಿದ್ದು, ಕೇಶ್ವಾಪುರ ಪೊಲೀಸರ ವರ್ತನೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಆದ್ರೆ,
ಇದನ್ನು ಪೊಲೀಸರು ಅಲ್ಲಗೆಳೆದಿದ್ದಾರೆ.

ಅಷ್ಟಕ್ಕೂ ಆಗಿದ್ದೇನು ಅಂದ್ರೆ, ಜನವರಿ 5 ರಂದು ಹುಬ್ಬಳ್ಳಿಯ ಕೇಶ್ವಾಪುರ ಠಾಣೆ ಪೊಲೀಸರು ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿಯನ್ನ ಬಂಧಿಸಿದ್ರು. ಈ ಬಂಧನದ ವೇಳೆ ಸುಜಾತಳನ್ನ ಪೊಲೀಸರು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಅಂತಾ ಆರೋಪಿಸಿದ್ದಾರೆ. ಈ ಸಂಬಂಧ ವೈರಲ್‌ ವಿಡಿಯೋ ಮುಂದಿಟ್ಟುಕೊಂಡು ಇಂದು ಠಾಣೆ ಮುಂದೆ ಪ್ರತಿಭಟಿಸಿದ್ದು, ಪೊಲೀಸರ ಅಮಾನತಿಗೆ ಆಗ್ರಹಿಸಿದ್ದಾರೆ. ನನ್ನ ಮಗಳ ಬಟ್ಟೆ ಬಿಚ್ಚಿ ಪೊಲೀಸರೇ ಹಲ್ಲೆ ನಡೆಸಿದ್ದಾರೆ ಎಂದು ಸುಜಾತ ತಾಯಿ ಕಮಲಮ್ಮ ಸಹ ಆರೋಪಿಸಿದ್ದು, ಮಗಳ ಸ್ಥಿತಿ ನೆನೆದು ಕಣ್ಣೀರಾಗಿದ್ದಾರೆ.

ಇದನ್ನೂ ನೋಡಿ: ನನ್ನ ಮಗಳ ಬಟ್ಟೆ ಬಿಚ್ಚಿದ್ದು ಪೊಲೀಸರೇ: BJP ಕಾರ್ಯಕರ್ತೆ ತಾಯಿ ಕಣ್ಣೀರು

ಪ್ರತಿಭಟನೆ ಜೋರಾಗುತ್ತಿದ್ದಂತೆಯೇ ಸ್ಥಳಕ್ಕೆ ಬಂದ ಹುಬ್ಬಳ್ಳಿ ಪೊಲೀಸ್‌ ಕಮಿಷನರ್ ಶಶಿಕುಮಾರ್‌, ದೂರು ಕೊಟ್ಟರೆ ಕ್ರಮ ಕೈಗೊಳ್ಳುತ್ತೇವೆ ಎಂದು ಮನವೊಲಿಕೆ ಕೆಲಸ ಮಾಡಿದ್ದಾರೆ. ಪೊಲೀಸ್‌ ವಶದಲ್ಲಿದ್ದಾಗ ವಿಡಿಯೋ ಮಾಡಿದ್ಯಾರು? ಅವರ ಬಗ್ಗೆಯೂ ಕ್ರಮ ತೆಗೆದುಕೊಳ್ತೀವಿ. ಹಲ್ಲೆ ಆರೋಪದ ಬಗ್ಗೆಯೂ ತನಿಖೆ ಮಾಡ್ತೀವಿ ಎಂದಿದ್ದಾರೆ.

ಪ್ರಕರಣವನ್ನ ಗಂಭೀರವಾಗಿ ಪರಿಣಿಸಿರೋ ಬಿಜೆಪಿ ನಾಯಕರು, ಕಾಂಗ್ರೆಸ್ ಕಾರ್ಪೊರೇಟರ್‌ ಸುವರ್ಣ ಕಲ್ಲಕುಂಟ್ಲಾ ಕುಮ್ಮಕ್ಕಿನಿಂದಲೇ ದಲಿತ ಮಹಿಳೆ ಮೇಲೆ ಹಲ್ಲೆ ಆಗಿದೆ ಅಂತಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡಾ ರಾಜ್ಯದಲ್ಲಿ ತುಘಲಕ್ ಸಾಮ್ರಾಜ್ಯ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಹ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ಆರೋಪ ತಳ್ಳಿ ಹಾಕಿದ ಪೊಲೀಸ್ರು

ಪೊಲೀಸರು ತಮ್ಮ ವಿರುದ್ಧದ ಆರೋಪವನ್ನ ತಳ್ಳಿ ಹಾಕಿದ್ದಾರೆ. ಮಹಿಳೆ ತಾನಾಗಿಯೇ ಬಟ್ಟೆ ಬಿಚ್ಚಿಕೊಂಡ್ಲು ಅಂತಿದ್ದಾರೆ. ಸಾಲದ್ದಕ್ಕೆ ಕಾರ್ಯಕರ್ತೆಯೇ ಮಹಿಳಾ ಪೊಲೀಸರ ಮೇಲೆ ಹಲ್ಲೆ ಮಾಡಿರುವ ಆರೋಪ ಕೂಡ ಕೇಳಿಬಂದಿದ್ದು, ಮಹಿಳಾ ಪೊಲೀಸರು ಆಯುಕ್ತರ ಮುಂದೆ ಈ ಬಗ್ಗೆ ಕಣ್ಣೀರಿಟ್ಟಿದ್ದಾರೆ. ಇನ್ನು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀಬಾಯಿ ಸಹ ಮಾಹಿತಿ ಪಡೆದಿದ್ದು, ಸುಜಾತಾಳ ಸಹೋದರನೇ ವಿಡಿಯೋ ವೈರಲ್ ಮಾಡಿದ್ದಾನೆ ಎಂದಿದ್ದಾರೆ.

ಇನ್ನು ಸಿಎಂ ಸಿದ್ದರಾಮಯ್ಯರಿಗೆ ಪೊಲೀಸ್ ಅಧಿಕಾರಿಗಳು ಸಂಪೂರ್ಣ ಮಾಹಿತಿ ನೀಡಿದ್ದಾರೆ. ಹುಬ್ಬಳ್ಳಿ ಪ್ರಕರಣದ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಹಾಗೂ ಸಂತೋಷ್ ಲಾಡ್, ಬಿಜೆಪಿ ಕಾರ್ಯಕರ್ತೆಯದ್ದೇ ತಪ್ಪು ಅಂತಿದ್ದಾರೆ.

ಸುಜಾತ ಹಂಡಿಯನ್ನ ಬಂಧಿಸಿದ್ಯಾಕೆ? ಏನಿದು ಪ್ರಕರಣ?

ಸುಜಾತ SIR- BLO ಗಳನ್ನು ಕರೆತಂದು ನಮ್ಮ ವೋಟ್ ಡಿಲಿಟ್ ಮಾಡಿಸಿದ್ದಾರೆ ಎಂಬ ಆರೋಪವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡುತ್ತಿದ್ದಾರೆ. ಇದೇ ಆರೋಪದ ಮೇಲೆ ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ಆಗಿತ್ತು. ಈ ವಿಚಾರ ಇಟ್ಟುಕೊಂಡು ಕಾಂಗ್ರೆಸ್ ಕಾರ್ಪೋರೇಟರ್ ಸುವರ್ಣ ನೀಡಿದ ದೂರಿನ ಮೇರೆಗೆ ಕಲ್ಲಕುಂಟ್ಲಾ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ ಸೆಕ್ಷನ್ 307 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಈ ದೂರಿನ ಮೇರೆಗೆ ಬಿಜೆಪಿ ಕಾರ್ಯಕರ್ತೆ ಸುಜತಾ ಹಂಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಆದ್ರೆ, ಬಂಧನ ವೇಳೆ ಪ್ರತಿರೋಧ ತೋರಿ ಸುಜಾತ ಹಂಡಿ ಚೀರಾಟ ನಡೆಸಿದ್ದಾರೆ. ಈ ವೇಳೆ ವಿವಸ್ತ್ರಗೊಳಿಸಿ ಥಳಿಸಿದ ಆರೋಪ ಕೇಳಿ ಬಂದಿದೆ. ಇನ್ನು ಬಂಧನದ ಸಂದರ್ಭದಲ್ಲಿ ಸುಜಾತ ಅನುಚಿತ ವರ್ತನೆ ತೋರಿದ್ದಾರೆ ಎಂದು ಕೇಶ್ವಾಪುರ ಪೊಲೀಸರು ಮತ್ತೊಂದು ದೂರು ದಾಖಲಿಸಿಕೊಂಡಿದ್ದಾರೆ.

ಹಿಂದೆ ಕಾಂಗ್ರೆಸ್‌ನಲ್ಲಿದ್ದ ಸುಜಾತ ಸದ್ಯ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ. ಈಕೆ ಮೇಲೆ ವಿವಿಧ ಠಾಣೆಗಳಲ್ಲಿ 9 ಕೇಸ್‌ಗಳಿದ್ದು, ವಿವಸ್ತ್ರದ ಆರೋಪವನ್ನ ಪೊಲೀಸರು ತಳ್ಳಿಹಾಕಿದ್ದಾರೆ. ಆದ್ರೆ ಬಿಜೆಪಿ ನಾಯಕರು ಮಾತ್ರ ತನಿಖೆಗೆ ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link