Category Archives: Blog

Your blog category

Cap d’Agde: ಈ ನಗರದಲ್ಲಿ ಬಟ್ಟೆ ಧರಿಸಿ ಹೊರ ಬಂದರೆ ಬೀಳುತ್ತೆ ಭಾರೀ ದಂಡ – Kannada News | Cap d’Agde: World’s Most Famous no cloth Village; Checkout more details here

ಈ ಒಂದು ನಗರಕ್ಕೆ ನೀವು ಟ್ರಿಪ್​​ ಹೋಗಲು ಯೋಚಿಸುತ್ತಿದ್ದರೆ, ನೀವು ಬಟ್ಟೆ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಹೌದು ಉಟ್ಟ ಬಟ್ಟೆಯಲ್ಲಿ ನೀವಿಲ್ಲಿಗೆ ಹೋಗಿ ದಿನಗಟ್ಟಲೆ ತಂಗಿ ಬರಬಹುದು. ಯಾಕೆಂದ್ರೆ ಈ ನಗರದಲ್ಲಿ ಎಲ್ಲೆಂದರಲ್ಲಿ ನಿಮಗೆ ಬೆತ್ತಲೆಯಾಗಿ ತಿರುಗಾಡುವ ಸ್ವಾತಂತ್ರ್ಯವಿದೆ. ಇಂತಹ ವಿಚಿತ್ರ ಸಂಸ್ಕೃತಿಯನ್ನು ಹೊಂದಿರುವ ಸ್ಥಳವೇ ಫ್ರಾನ್ಸ್‌ನ ಕ್ಯಾಪ್ ಡಿ’ಅಗ್ಡೆ (Cap d’Agde) ನಗರ. ಇದು ಫ್ರಾನ್ಸ್‌ನ ದಕ್ಷಿಣ ಭಾಗದಲ್ಲಿರುವ ಮೆಡಿಟರೇನಿಯನ್ ಕರಾವಳಿಯಲ್ಲಿರುವ ಇದು ಒಂದು ಸುಂದರ ನಗರ. ಈ ನಗರ ವಿಶ್ವದ  ಏಕೈಕ ನಗ್ನ ನಗರವಾಗಿದ್ದು, ಬೆತ್ತಲೆಯಾಗಿ ತಮ್ಮ ಪ್ರವಾಸವನ್ನು ಆನಂದಿಸಲೆಂದೇ ಸಾಕಷ್ಟು ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಇತ್ತೀಚಿನ ದಿನಗಳಲ್ಲಿ ಈ ತಾಣ ಹನಿಮೂನ್ ಪಾಯಿಂಟ್​ ಎಂದೇ ಪ್ರಸಿದ್ಧವಾಗಿದೆ.

ಸುಂದರವಾದ ಕಡಲತೀರಗಳಿಗೆ ಹೆಸರುವಾಸಿಯಾದ ಈ ನಗರದಲ್ಲಿ ಜನರಿಗೆ ಬಟ್ಟೆ ಇಲ್ಲದೆ ಸುತ್ತಾಡುವ ಸ್ವಾತಂತ್ರ್ಯವಿದೆ. ಪ್ರವಾಸಿಗರು ರೆಸ್ಟೋರೆಂಟ್‌ಗಳು ಮತ್ತು ಸೂಪರ್‌ಮಾರ್ಕೆಟ್‌ಗಳಲ್ಲಿ ಬಟ್ಟೆ ಇಲ್ಲದೆಯೇ ತಿರುಗಾಡಬಹುದು. ಒಂದು ಅಂದಾಜಿನ ಪ್ರಕಾರ, ಪ್ರತಿ ವರ್ಷ 50 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಇಲ್ಲಿಗೆ ಬರುತ್ತಾರೆ. ಬೇಸಿಗೆಯಲ್ಲಿ ಇಲ್ಲಿಗೆ ಬರುವ ಪ್ರವಾಸಿಗರಲ್ಲಿ ಹೆಚ್ಚಿನವರು ಫ್ರಾನ್ಸ್, ಬೆಲ್ಜಿಯಂ, ಜರ್ಮನಿ, ಇಟಲಿ, ಅಮೆರಿಕ, ಡೆನ್ಮಾರ್ಕ್ ಮತ್ತು ಕೆನಡಾದವರು ಎಂದು ವರದಿಯಾಗಿದೆ.

ಇದನ್ನೂ ಓದಿ: ಭಾರತೀಯ ಸ್ಲೀಪರ್ ಬಸ್‌ನಲ್ಲಿ ಪ್ರಯಾಣಿಸಿ ಅನುಭವ ಬಿಚ್ಚಿಟ್ಟ ವಿದೇಶಿಗ

ಬಟ್ಟೆ ಧರಿಸಿ ಹೊರ ಬಂದರೆ ಬೀಳುತ್ತೆ ಭಾರೀ ದಂಡ:
ಈ ತಾಣದಲ್ಲಿ ಬಟ್ಟೆ ಧರಿಸಲು ಅವಕಾಶವಿದೆ.ಆದರೆ ಇಲ್ಲಿ ಬಟ್ಟೆ ಧರಿಸುವುದಕ್ಕೂ ನೇಕೆಡ್‌ ಟ್ಯಾಕ್ಸ್ ಕಟ್ಟಬೇಕಾಗುತ್ತದೆ. ನೀವು ಬಟ್ಟೆ ಧರಿಸಿ ಈ ಸಮುದ್ರ ದಂಡೆಗೆ ಹೋಗಲು ಬಯಸಿದ್ದಲ್ಲಿ ದುಡ್ಡು ಕಟ್ಟಿ ನೀವು ಇಲ್ಲಿ ಬಟ್ಟೆ ಧರಿಸಿ ಸುತ್ತಾಡಬಹುದು. ಆದರೆ ಬಟ್ಟೆ ಧರಿಸುವವರ ಸಂಖ್ಯೆ ಇಲ್ಲಿ ತೀರಾ ಕಡಿಮೆ. ಇದಲ್ಲದೇ ಇಲ್ಲಿ ಮತ್ತೊಂದು ನಿಯಮವಿದೆ. ಇಲ್ಲಿಗೆ ಬಂದ ಜೋಡಿ ಸಾವರ್ಜನಿಕ ಪ್ರದೇಶಗಳಲ್ಲಿ ಅಸಭ್ಯವಾಗಿ ವರ್ತಿಸಿದರೆ ಅಂದರೆ ಸುಮಾರು 12,860 ಪೌಂಡ್‌ ಅಂದರೆ ಭಾರತದ ಕರೆನ್ಸಿ ಪ್ರಕಾರ ಸುಮಾರು 12 ಲಕ್ಷ ರೂಪಾಯಿಗಳ ದಂಡವನ್ನು ಕಟ್ಟಬೇಕಾಗುತ್ತದೆ. ಇದಲ್ಲದೆ, ಈ ನಗರದಲ್ಲಿ ಫೋಟೋಗ್ರಫಿಗೂ ಕೂಡ ಅವಕಾಶವಿಲ್ಲ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬರಲಿದೆ ಹೊಸ ಆದಾಯ ತೆರಿಗೆ ಕಾಯ್ದೆ; ಬಜೆಟ್​ನಲ್ಲಿ ಘೋಷಣೆ, ಏ. 1ರಿಂದ ಜಾರಿ – Kannada News | New Income Tax law come into effect from 2026 April 1st, here are few highlights

ನವದೆಹಲಿ, ಜನವರಿ 7: ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ತಂದಿರುವ ಮತ್ತು ತರುತ್ತಿರುವ ಸರ್ಕಾರ ಇದೀಗ ಆದಾಯ ತೆರಿಗೆ (Income Tax) ವಿಭಾಗದಲ್ಲಿ ಗುರುತರ ಬದಲಾವಣೆ ತರಲು ಹೊರಟಿದೆ. 1961ರ ಇನ್ಕಮ್ ಟ್ಯಾಕ್ಸ್ ಕಾಯ್ದೆ ಬದಲು ಹೊಸ ಕಾಯ್ದೆಯನ್ನು ಜಾರಿಗೆ ತರಲಿದೆ. ಆರು ದಶಕದಲ್ಲೇ ಇದು ಭಾರತದ ಆದಾಯ ತೆರಿಗೆ ವ್ಯವಸ್ಥೆಯಲ್ಲಿ ಆಗುತ್ತಿರುವ ಬಹುದೊಡ್ಡ ಬದಲಾವಣೆ ಎನ್ನಲಾಗಿದೆ.

ಫೆಬ್ರುವರಿ 1ರಂದು ಮಂಡನೆಯಾಗಲಿರುವ ಕೇಂದ್ರ ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಹೊಸ ಆದಾಯ ತೆರಿಗೆ ಜಾರಿಗೆ ತರಲಾಗುವುದನ್ನು ಘೋಷಿಸಲಿದ್ದಾರೆ. ಹೊಸ ಕಾಯ್ದೆಯ ಮುಖ್ಯಾಂಶಗಳನ್ನೂ ಅವರು ಬಹಿರಂಗಪಡಿಸಬಹುದು. ವರದಿಗಳ ಪ್ರಕಾರ, ಹೊಸ ಐಟಿ ಕಾಯ್ದೆಯು 2026ರ ಏಪ್ರಿಲ್ 1ರಿಂದ ಜಾರಿಗೆ ಬರಬಹುದು.

ಇದನ್ನೂ ಓದಿ: ಇಂಡಿಯಾ ರೇಟಿಂಗ್ಸ್ ಪ್ರಕಾರ ಮುಂದಿನ ವರ್ಷ ಭಾರತದ ಜಿಡಿಪಿ ಬೆಳವಣಿಗೆ ಶೇ. 6.9

ಹೊಸ ಆದಾಯ ತೆರಿಗೆ ಕಾಯ್ದೆಯಲ್ಲಿ ಏನಿರಬಹುದು?

ಈಗಿರುವ 1961ರ ಆದಾಯ ತೆರಿಗೆ ಕಾಯ್ದೆಗೆ ಹೋಲಿಸಿದರೆ ಹೊಸ ಆದಾಯ ತೆರಿಗೆ ಕಾಯ್ದೆ ಹೆಚ್ಚು ಸರಳವಾಗಿರುತ್ತದೆ. ಇದರ ನಿಯಮಗಳು ಸರಳವಾಗಿದ್ದು, ಸಾಮಾನ್ಯ ತೆರಿಗೆ ಪಾವತಿದಾರರಿಗೆ ಸ್ಪಷ್ಟವಾಗಿ ಅರ್ಥವಾಗುವಂತಿರುತ್ತವೆ ಎಂದು ಹೇಳಲಾಗುತ್ತಿದೆ. ಹಳೆಯದಲ್ಲಿ ಇರುವ 819 ಸೆಕ್ಷನ್ ಸಂಖ್ಯೆಯನ್ನು 536ಕ್ಕೆ ಇಳಿಸಲಾಗಿದೆ. 47 ಚಾಪ್ಟರ್​ಗಳನ್ನು 23ಕ್ಕೆ ಇಳಿಸಲಾಗಿದೆ.

ಹೊಸ ಕಾಯ್ದೆಯಲ್ಲಿ ಮತ್ತೊಂದು ಮುಖ್ಯ ಅಂಶ ಎಂದರೆ, ಟ್ಯಾಕ್ಸ್ ಸಿಸ್ಟಂನಲ್ಲಿ ತಂತ್ರಜ್ಞಾನ ಅಳವಡಿಕೆ ಹೆಚ್ಚು ಗಾಢವಾಗಿರಲಿದೆ. ಭೌತಿಕ ದಾಖಲೆಗಳ ಗೋಜಲುಗಳನ್ನು ಕಡಿಮೆ ಮಾಡಲಾಗುತ್ತದೆ. ಅಂದರೆ, ಪ್ರೀ ಫಿಲ್ಡ್ ರಿಟರ್ನ್​ಗಳು, ಎಐಎಸ್, ಟಿಐಎಸ್ ಸ್ಟೇಟ್ಮೆಂಟ್​ಗಳು ಇತ್ಯಾದಿ ಬಳಕೆ ಹೆಚ್ಚುವಂತೆ ಮಾಡಬಹುದು. ಈ ಆಟೊಮೇಟೆಡ್ ವ್ಯವಸ್ಥೆಯಿಂದ ಟಿಡಿಎಸ್ ಮತ್ತು ಟಿಸಿಎಸ್ ಹೊಂದಿಕೆಯಲ್ಲಿರುವ ದೋಷಗಳನ್ನು ಗುರುತಿಸಲು ಸಾಧ್ಯವಾಗುತ್ತದೆ.

ಇದನ್ನೂ ಓದಿ: 50 ವರ್ಷದಲ್ಲಿ ವಿಶ್ವ ಹೇಗಿರುತ್ತೆ? ಫ್ರಾನ್ಸ್, ಜಪಾನ್, ಜರ್ಮನಿಯನ್ನೂ ಹಿಂದಿಕ್ಕುತ್ತಾ ಪಾಕಿಸ್ತಾನ? ಭಾರತ ಹೇಗಿದ್ದೀತು?

12 ಲಕ್ಷ ರೂವರೆಗೆ ತೆರಿಗೆ ವಿನಾಯಿತಿ ಕೊಟ್ಟಿರುವುದು ಮುಂದುವರಿಯುತ್ತದಾ?

ಕಳೆದ ಬಾರಿಯ ಬಜೆಟ್​ನಲ್ಲಿ ಹೊಸ ಟ್ಯಾಕ್ಸ್ ರೆಜಿಮೆಯಲ್ಲಿ 12 ಲಕ್ಷ ರೂವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ. 75,000 ರೂ ಟ್ಯಾಕ್ಸ್ ಡಿಡಕ್ಷನ್ ಸೇರಿಸಿದರೆ 12,75,000 ರೂ ಒಳಗಿನ ಆದಾಯ ಇರುವವರಿಗೆ ಟ್ಯಾಕ್ಸ್ ಬಾಧ್ಯತೆ ಇರುವುದಿಲ್ಲ. ಈಗ ಹೊಸ ಇನ್ಕಮ್ ಟ್ಯಾಕ್ಸ್ ಕಾಯ್ದೆ ಜಾರಿಗೆ ಬಂದರೆ ಈ ಟ್ಯಾಕ್ಸ್ ವಿನಾಯಿತಿ ಕ್ರಮಕ್ಕೆ ಸಂಚಕಾರವೇನೂ ಆಗದು. ಅದೆಲ್ಲವೂ ತನ್ನಂತಾನೇ ಮುಂದುವರಿಯಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

‘ಪಲ್ಲವಿ ಅನುಪಲ್ಲವಿ’ ಚಿತ್ರಕ್ಕೆ 43 ವರ್ಷ; ಮತ್ತೆ ಕನ್ನಡ ಚಿತ್ರರಂಗದಲ್ಲಿ ಅನಿಲ್ ಕಪೂರ್? – Kannada News | 43 Years of Pallavi Anupallavi Actor Anil Kapoor wants to do Kannada Cinema again

ನಟ ಅನಿಲ್ ಕಪೂರ್ (Anil Kapoor) ಅವರು ಬಾಲಿವುಡ್​​ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಹೀರೋ ಆಗಿ ಮಾತ್ರವಲ್ಲದೇ ಪೋಷಕ ಪಾತ್ರಗಳ ಮೂಲಕವೂ ಅವರು ಜನಮನ ಗೆದ್ದಿದ್ದಾರೆ. ಚಿತ್ರರಂಗದಲ್ಲಿ ಅವರಿಗೆ ನಾಲ್ಕೂವರೆ ದಶಕಗಳ ಅನುಭವ ಇದೆ. ಹಿಂದಿ ಚಿತ್ರರಂಗದಲ್ಲಿ ಹೀರೋ ಆಗಿ ಮಿಂಚುವುದಕ್ಕೂ ಮುನ್ನ ಅವರು ತೆಲುಗು ಮತ್ತು ಕನ್ನಡ ಸಿನಿಮಾದಲ್ಲಿ ನಟಿಸಿದ್ದರು. ಅನಿಲ್ ಕಪೂರ್ ಅವರು ಅಭಿನಯಿಸಿದ ಏಕೈಕ ಕನ್ನಡ ಸಿನಿಮಾ ‘ಪಲ್ಲವಿ ಅನುಪಲ್ಲವಿ’ (Pallavi Anupallavi) ತೆರೆಕಂಡು ಈಗ 43 ವರ್ಷಗಳು ಕಳೆದಿವೆ. ಅದನ್ನು ಈಗ ಅನಿಲ್ ಕಪೂರ್ ನೆನಪು ಮಾಡಿಕೊಂಡಿದ್ದಾರೆ.

ಮಣಿರತ್ನಂ ನಿರ್ದೇಶನ ಮಾಡಿದ್ದ ‘ಪಲ್ಲವಿ ಅನುಪಲ್ಲವಿ’ ಸಿನಿಮಾ 1983ರ ಜನವರಿ 7ರಂದು ಬಿಡುಗಡೆ ಆಗಿತ್ತು. ಅನಿಲ್ ಕಪೂರ್ ಅವರು ಹೀರೋ ಆಗಿ ನಟಿಸಿದ್ದರು. ಇಳೆಯರಾಜ ಸಂಗೀತ ನೀಡಿದ ಹಾಡುಗಳು ಸೂಪರ್ ಹಿಟ್ ಆದವು. ಇಂದಿಗೂ ಸಿನಿಪ್ರಿಯರಿಗೆ ‘ಪಲ್ಲವಿ ಅನುಪಲ್ಲವಿ’ ಸಿನಿಮಾದ ಹಾಡುಗಳು ಫೇವರಿಟ್ ಆಗಿವೆ. ‘ಓ ಪ್ರೇಮಿ ಓ ಪ್ರೇಮಿ’ ಹಾಡಿನ ತುಣುಕನ್ನು ಅನಿಲ್ ಕಪೂರ್ ಅವರು ಇಂದು (ಜನವರಿ 7) ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘43 ವರ್ಷಗಳ ಹಿಂದೆ ನಾನು ಕನ್ನಡ ಚಿತ್ರರಂಗದಲ್ಲಿ ಮೊದಲ ಹೆಜ್ಜೆ ಇಟ್ಟೆ. ಅಂದಿನಿಂದ ಇಂದಿನ ತನಕ, ಕನ್ನಡ ಸಿನಿಮಾ ಬೆಳೆದ ಭಾರತೀಯ ಚಿತ್ರರಂಗವನ್ನು ಜಾಗತಿಕ ಮಟ್ಟದಲ್ಲಿ ಮರು ವ್ಯಾಖ್ಯಾನಿಸುತ್ತಿರುವುದನ್ನು ನೋಡಿದರೆ ಅಚ್ಚರಿ ಆಗುತ್ತದೆ’ ಎಂದು ಅನಿಲ್ ಕಪೂರ್ ಅವರು ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಕನ್ನಡ ಚಿತ್ರರಂಗದ ಈಗಿನ ಸಾಧಕರಿಗೂ ಅನಿಲ್ ಕಪೂರ್ ಸಲಾಂ ಎಂದಿದ್​ದಾರೆ. ‘ಕನ್ನಡ ಚಿತ್ರರಂಗವನ್ನು ಮೇಲಕ್ಕೆ ತೆಗೆದುಕೊಂಡು ಹೋಗಿದ್ದಕ್ಕಾಗಿ ಯಶ್, ಪ್ರಶಾಂತ್ ನೀಲ್, ರಿಷಬ್ ಶೆಟ್ಟಿ ಹಾಗೂ ಕಾಂತಾರ, ಕೆಜಿಎಫ್ ತಂಡಗಳಿಗೆ ನಾನು ಸೆಲ್ಯೂಟ್ ಎನ್ನುತ್ತೇನೆ. ಈ ಅದ್ಭುತ ಚಿತ್ರರಂಗದ ಜೊತೆ ನನ್ನ ಕೊನೆಯ ಒಡನಾಟ ಇದಲ್ಲ ಎಂದು ಭಾವಿಸುತ್ತೇನೆ’ ಎಂದು ಅನಿಲ್ ಕಪೂರ್ ಹೇಳಿದ್ದಾರೆ.

ಇದನ್ನೂ ಓದಿ: ನಟ ಅನಿಲ್ ಕಪೂರ್​ಗೆ ‘ಪಲ್ಲವಿ ಅನುಪಲ್ಲವಿ’ ಆಫರ್ ಸಿಕ್ಕಿದ್ದು ಹೇಗೆ? ಇಲ್ಲಿದೆ ವಿವರ

ಈ ಮೂಲಕ ಮತ್ತೆ ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡಲು ಅನಿಲ್ ಕಪೂರ್ ಅವರು ಉತ್ಸಾಹ ತೋರಿಸಿದ್ದಾರೆ. ಈಗಾಗಲೇ ‘ಟಾಕ್ಸಿಕ್’ ಸಿನಿಮಾದಲ್ಲಿ ಅನಿಲ್ ಕಪೂರ್ ನಟಿಸಿರಬಹುದು ಎಂದು ಕೆಲಸ ಅಭಿಮಾನಿಗಳು ಊಹಿಸಿದ್ದಾರೆ. ಪ್ರಶಾಂತ್ ನೀಲ್ ಅವರ ‘ಡ್ರ್ಯಾಗನ್’ ಸಿನಿಮಾದಲ್ಲಿ ಅನಿಲ್ ಕೂಡ ಕೂಡ ಇರಬಹುದು ಎಂದು ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ. ಇದೆಲ್ಲವೂ ಬರೀ ಊಹೆಗಳಷ್ಟೇ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪ್ರಧಾನಿ ಮೋದಿಗೆ ಕರೆ ಮಾಡಿದ ಇಸ್ರೇಲ್ ಪಿಎಂ ನೆತನ್ಯಾಹು; ಗಾಜಾ ಶಾಂತಿ ಯೋಜನೆ ಕುರಿತು ಚರ್ಚೆ – Kannada News | Israeli PM Benjamin Netanyahu Calls PM Modi Discuss Strategic Partnership and Gaza Peace Plan Status

ನವದೆಹಲಿ, ಜನವರಿ 7: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ದೂರವಾಣಿ ಕರೆ ಮಾಡಿದ್ದರು. ಫೋನ್​ನಲ್ಲಿ ತಮ್ಮ ಗೆಳೆಯ ನೆತನ್ಯಾಹು ಜೊತೆ ಮಾತನಾಡಿದ ಮೋದಿ (PM Modi) ಹಲವು ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. “ಇಬ್ಬರು ನಾಯಕರು ಹೊಸ ವರ್ಷದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು ಮತ್ತು ಎರಡೂ ದೇಶಗಳ ಜನರಿಗೆ ಶಾಂತಿ ಮತ್ತು ಸಮೃದ್ಧಿಯನ್ನು ಹಾರೈಸಿದರು” ಎಂದು ಪ್ರಧಾನ ಮಂತ್ರಿ ಕಚೇರಿಯ ಹೇಳಿಕೆ ತಿಳಿಸಿದೆ. ಗಾಜಾ ಶಾಂತಿ ಯೋಜನೆಯ ಅನುಷ್ಠಾನದ ಕುರಿತು ನೆತನ್ಯಾಹು ಪ್ರಧಾನ ಮಂತ್ರಿ ಮೋದಿಗೆ ವಿವರಿಸಿದ್ದಾರೆ ಎಂದು ಪ್ರಕಟಣೆ ಹೇಳಿದೆ.

ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳನ್ನು ಚರ್ಚಿಸಿದರು. ಎಕ್ಸ್​ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪವನ್ನು ಹೆಚ್ಚಿನ ದೃಢನಿಶ್ಚಯದಿಂದ ಪುನರುಚ್ಚರಿಸಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಪ್ರಧಾನಿ ಮೋದಿಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ಫೋನ್; ಭಯೋತ್ಪಾದನೆ, ಗಾಜಾ ಶಾಂತಿ ಯೋಜನೆಯ ಬಗ್ಗೆ ಚರ್ಚೆ

“ನನ್ನ ಸ್ನೇಹಿತರಾದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಿದ್ದಕ್ಕೆ, ಅವರಿಗೆ ಮತ್ತು ಇಸ್ರೇಲ್ ಜನರಿಗೆ ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿ ಸಂತೋಷವಾಗಿದೆ. ಮುಂಬರುವ ವರ್ಷದಲ್ಲಿ ಭಾರತ-ಇಸ್ರೇಲ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಕುರಿತು ನಾವು ಚರ್ಚಿಸಿದ್ದೇವೆ” ಎಂದು ನರೇಂದ್ರ ಮೋದಿ ಹೇಳಿದರು.

“ನಾವು ಪ್ರಾದೇಶಿಕ ಪರಿಸ್ಥಿತಿಯ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ. ಇನ್ನೂ ಹೆಚ್ಚಿನ ದೃಢನಿಶ್ಚಯದಿಂದ ಭಯೋತ್ಪಾದನೆಯನ್ನು ಎದುರಿಸಲು ನಮ್ಮ ದೃಢಸಂಕಲ್ಪವನ್ನು ಪುನರುಚ್ಚರಿಸಿದ್ದೇವೆ” ಎಂದು ಮೋದಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಇದು ಬುದ್ಧನ ಉದಾತ್ತ ಚಿಂತನೆಗೆ ಸಾಕ್ಷಿ: ಪವಿತ್ರ ಪಿಪ್ರಹ್ವಾ ಅವಶೇಷಗಳ ಪ್ರದರ್ಶನವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

2026ರಲ್ಲಿ ಭಾರತ ಮತ್ತು ಇಸ್ರೇಲ್ ನಾಯಕರ ನಡುವಿನ ಮೊದಲ ನೇರ ಸಂಭಾಷಣೆ ಇದಾಗಿದೆ. ಕಳೆದ ವರ್ಷ ಡಿಸೆಂಬರ್ 11ರಂದು ಪ್ರಧಾನಿ ಮೋದಿ ಅವರಿಗೆ ಬೆಂಜಮಿನ್ ನೆತನ್ಯಾಹು ಅವರಿಂದ ದೂರವಾಣಿ ಕರೆ ಬಂದಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸ್ಟಾರ್ ಹೀರೋಗಳ ಜೊತೆ ಕೆಲಸ ಮಾಡಿದ ಆ ನಿರ್ದೇಶಕ ಸಲಿಂಗಿ – Kannada News | Bollywood’s Hidden Truth: Simi Chandhok Reveals Gay Director who work with Salman Khan

ಸ್ಟಾರ್ ಹಿರೋಗಳು, ನಟಿಯರು, ನಿರ್ದೇಶಕರು ಹಾಗೂ ನಿರ್ಮಾಪಕರು ತಮ್ಮ ಲೈಂಗಿಕತೆ ಬಗ್ಗೆ ಮಾತನಾಡೋಕೆ ಹೆಚ್ಚು ಇಷ್ಟಪಡೋದಿಲ್ಲ. ಕರಣ್ ಜೋಹರ್ ಅವರು ಪರುಷಪ್ರಿಯ ಎಂಬ ಆರೋಪ ಇದೆ. ಆದರೆ, ಇದನ್ನು ಅವರು ಒಪ್ಪಿಕೊಳ್ಳೋದಿಲ್ಲ. ಹೀಗಿರುವಾಗಲೇ ಹಿರಿಯ ಪತ್ರಕರ್ತೆ ಸಿಮಿ ಚಂದೋಕ್ ಅವರು ಒಂದು ಬಾಂಬ್ ಸಿಡಿಸಿದ್ದಾರೆ. ಹಲವು ಸ್ಟಾರ್​​ಗಳ ಜೊತೆ ಕೆಲಸ ಮಾಡಿದ ನಿರ್ದೇಶಕ ಸಲಿಂಗಿ ಎಂದು ಆರೋಪ ಮಾಡಿದ್ದಾರೆ.

ಬಾಲಿವುಡ್ ಹೀರೋಗಳು ಈ ವಿಷಯವನ್ನು ಯಾಕೆ ಓಪನ್ ಆಗಿ ಒಪ್ಪಿಕೊಳ್ಳೋದಿಲ್ಲ ಎಂಬುದಕ್ಕೆ ಸಿಮಿ ಉತ್ತಮ ಉದಾಹರಣೆ ನೀಡಿದ್ದಾರೆ. ‘ಬಾಲಿವುಡ್ ನಟನೋರ್ವ ತಾನು ಗೇ ಎಂದು ಒಪ್ಪಿಕೊಂಡ ಎಂದಿಟ್ಟುಕೊಳ್ಳಿ. ಆ ಬಳಿಕ ಆತ ಸಿನಿಮಾದಲ್ಲಿ ಹೀರೋಯಿನ್ ಜೊತೆ ರೊಮ್ಯಾಂಟಿಕ್ ಆಗಿ ಕಾಣಿಸಿಕೊಳ್ಳುತ್ತಾನೆ. ಇದನ್ನು ಪ್ರೇಕ್ಷಕ ಒಪ್ಪಿಕೊಳ್ಳುತ್ತಾನಾ’ಎಂದು ಅವರು ಪ್ರಶ್ನೆ ಮಾಡಿದ್ದಾರೆ.

‘ಬಾಲಿವುಡ್​ನ ಓರ್ವ ಖ್ಯಾತ ನಿರ್ದೇಶಕ ಸಲಿಂಗಿ. ಅವರ ಹೆಸರನ್ನು ನಾನು ಇಲ್ಲಿ ಹೇಳುವುದಿಲ್ಲ. ಅವರು ಸಲ್ಮಾನ್ ಖಾನ್, ರಣವೀರ್ ಸಿಂಗ್, ಹೃತಿಕ್ ರೋಷನ್, ಶಾಹಿದ್ ಕಪೂರ್ ಹಾಗೂ ಇತರರ ಜೊತೆ ಕೆಲಸ ಮಾಡಿದ್ದಾರೆ. ಅವರು ಗೇ ಎಂದು ಆ ನಟರೆಲ್ಲರಿಗೂ ಗೊತ್ತು. ಮಹಿಳೆಯರ ಜೊತೆ ಆತ ಹೆಚ್ಚು ಸಮಯ ಇರೋದಿಲ್ಲ’ ಎಂದಿದ್ದಾರೆ ಅವರು.
‘ಓರ್ವ ನಿರ್ದೇಶಕ ತನ್ನ ಲೈಂಗಿಕತೆಯ ಬಗ್ಗೆ ಬಹಿರಂಗವಾಗಿ ಹೇಳಿದರೆ, ಅನೇಕ ಪ್ರಮುಖ ನಟರು ಅವರೊಂದಿಗೆ ಕೆಲಸ ಮಾಡಲು ಹಿಂಜರಿಯುತ್ತಾರೆ. ಹೀರೋಗಳು ಕಾಸ್ಟಿಂಗ್ ಕೌಚ್‌ಗೆ ಹೆದರುತ್ತಾರೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಾಲಿವುಡ್ ವೇದಿಕೆಯಲ್ಲಿ ತುಳು ಸಿನಿಮಾವನ್ನು ಕೊಂಡಾಡಿದ ಸುನಿಲ್ ಶೆಟ್ಟಿ

‘ಅನೇಕ ನಟರಿಗೆ ಆರಂಭಿಕ ದಿನಗಳಲ್ಲಿ ಕಾಂಪ್ರಮೈಸ್ ಆಗುವಂತೆ ಕೇಳಲಾಯಿತು. ಆಯುಷ್ಮಾನ್ ಖುರಾನಾ, ರಣವೀರ್ ಸಿಂಗ್ ಇದನ್ನು ಓಪನ್ ಆಗಿ ಹೇಳಿದ್ದಾರೆ. ಶಾರುಖ್ ಖಾನ್ ಹಾಗೂ ಕರಣ್ ಜೋಹರ್ ಸಂಬಂಧದ ಬಗ್ಗೆ ಚರ್ಚೆ ಆಗಿತ್ತು. ಶಾರುಖ್ ಖಾನ್ ಇದನ್ನು ತಳ್ಳಿ ಹಾಕಿದ್ದರು’ ಎಂದು ಹಳೆಯ ಘಟನೆ ನೆನಪಿಸಿಕೊಂಡಿದ್ದಾರೆ. ಈಗ ಆ ನಿರ್ದೇಶಕ ಯಾರು ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ಆಗುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 3:04 pm, Wed, 7 January 26

Source link

ನನ್ನ ಮಗಳ ಬಟ್ಟೆ ಬಿಚ್ಚಿದ್ದು ಪೊಲೀಸರೇ: BJP ಕಾರ್ಯಕರ್ತೆ ತಾಯಿ ಕಣ್ಣೀರು – Kannada News | Hubballi Police assault On BJP Worker During arrest Alleged By Woman Mother

ಹುಬ್ಬಳ್ಳಿ, (ಜನವರಿ 07): ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು, ಬಿಜೆಪಿ ಕಾರ್ಯಕರ್ತೆಯನ್ನ ಬಟ್ಟೆಬಿಚ್ಚಿ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಆದ್ರೆ, ಮಹಿಳೆಯೇ ವಿವಸ್ತ್ರಗೊಂಡು ಹೈಡ್ರಾಮಾ ಸೃಷ್ಟಿಸಿದ್ದಾಳೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದ್ದು, ಇದರ ನಡುವೆ ಮಹಿಳೆಯ ತಾಯಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಪೊಲೀಸರ ಮೇಲೆ ಗಂಭೀರ ಆರೋಪ ಮಾಡಿ ಕಣ್ಣೀರಿಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ವೈಭವ್, ಜಾರ್ಜ್​ ಸ್ಫೋಟಕ ಶತಕ; ಆಫ್ರಿಕಾಗೆ ಬೃಹತ್ ಗುರಿ ನೀಡಿದ ಯಂಗ್ ಇಂಡಿಯಾ – Kannada News | Youth ODI: India U19 Dominates SA with 392 Runs; Vaibhav, Aaron Century Stars

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಯೂತ್ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ಟೀಂ ಇಂಡಿಯಾ ರನ್​ಗಳ ಬೃಹತ್ ಮೊತ್ತ ಕಲೆಹಾಕಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಯುವ ತಂಡ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 392 ರನ್​ಗಳ ಬೃಹತ್ ಮೊತ್ತ ಕಲೆಹಾಕಿದೆ. ಈ ಮೂಲಕ ಆಫ್ರಿಕಾ ಗೆಲುವಿಗೆ 393 ರನ್​ಗಳ ಟಾರ್ಗೆಟ್ ನೀಡಿದೆ. ಟೀಂ ಇಂಡಿಯಾ ಪರ ಆರಂಭಿಕರಿಬ್ಬರು ಶತಕದ ಇನ್ನಿಂಗ್ಸ್ ಆಡಿದರು. ಆರನ್ ಜಾರ್ಜ್​ 118 ರನ್​ಗಳ ಇನ್ನಿಂಗ್ಸ್ ಆಡಿದರೆ, ನಾಯಕ ವೈಭವ್ ಸೂರ್ಯವಂಶಿ ಕೂಡ ಸ್ಫೋಟಕ 127 ರನ್ ಬಾರಿಸಿದರು.

ಸರಣಿಯ ಮೊದಲೆರಡು ಪಂದ್ಯಗಳನ್ನು ಗೆದ್ದುಕೊಂಡಿರುವ ಭಾರತ ತಂಡ, ಈ ಪಂದ್ಯವನ್ನು ಗೆದ್ದು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಇರಾದೆಯಲ್ಲಿದೆ. ಹೀಗಾಗಿ ಈ ಪಂದ್ಯವನ್ನು ಗೆಲ್ಲಬೇಕಾದರೆ, ಟೀಂ ಇಂಡಿಯಾ ಬೃಹತ್ ಮೊತ್ತವನ್ನು ಕಲೆಹಾಕಬೇಕಿತ್ತು. ಅದರಂತೆ ಮೊದಲು ಬ್ಯಾಟಿಂಗ್‌ ಆರಂಭಿಸಿದ ಟೀಂ ಇಂಡಿಯಾ ಪರ ಆರನ್ ಜಾರ್ಜ್​ ಹಾಗೂ ವೈಭವ್ ಸೂರ್ಯವಂಶಿ ಸ್ಫೋಟಕ ಆರಂಭ ಒದಗಿಸಿಕೊಟ್ಟರು.

ಈ ಜೋಡಿ ಮೊದಲ 6 ಓವರ್​ಗಳಲ್ಲೇ ತಂಡವನ್ನು 50 ರನ್​ಗಳ ಗಡಿ ದಾಟಿಸಿದರು. ಆರಂಭದಿಂದಲೂ ಎಂದಿನಂತೆ ಹೊಡಿಬಡಿ ಆಟವನ್ನಾಡಿದ ನಾಯಕ ವೈಭವ್ ಹಾಗೂ ಆರನ್ ಆಫ್ರಿಕಾ ಬೌಲರ್​ಗಳನ್ನು ಕಾಡಿದರು. ಇನ್ನಿಂಗ್ಸ್​ನ 7ನೇ ಓವರ್​ನಲ್ಲಿ ಬೌಂಡರಿಗಳ ಮಳೆಗರೆದ ವೈಭವ್ 2 ಸಿಕ್ಸರ್ ಹಾಗೂ 2 ಬೌಂಡರಿ ಬಾರಿಸಿ, 8ನೇ ಓವರ್​ನಲ್ಲಿ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಜಾರ್ಜ್​ ಕೂಡ 32 ಎಸೆತಗಳಲ್ಲಿ ಅರ್ಧಶತಕ ದಾಟಿದರು. ಇಲ್ಲಿಗೆ ನಿಲ್ಲದ ಇವರಿಬ್ಬರು ತಲಾ ಶತಕ ಕೂಡ ಬಾರಿಸಿದರು.

ವೈಭವ್ ಸೂರ್ಯವಂಶಿ ಕೇವಲ 63 ಎಸೆತಗಳಲ್ಲಿ ಎಂಟು ಸಿಕ್ಸರ್ ಮತ್ತು ಆರು ಬೌಂಡರಿಗಳ ಸಹಿತ ಶತಕ ಬಾರಿಸಿದರು. ಶತಕದ ಬಳಿಕ ಹೆಚ್ಚು ಹೊತ್ತು ನಿಲ್ಲದ ವೈಭವ್ 10 ಸಿಕ್ಸರ್ ಮತ್ತು ಒಂಬತ್ತು ಬೌಂಡರಿಗಳನ್ನು ಒಳಗೊಂಡಂತೆ ಒಟ್ಟು 127 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇದು ವೈಭವ್ ಅವರ ಅಂಡರ್-19 ಏಕದಿನ ವೃತ್ತಿಜೀವನದಲ್ಲಿ ಮೂರನೇ ಶತಕವಾಗಿದೆ. ಈ ಹಿಂದೆ ಅವರು ಇಂಗ್ಲೆಂಡ್ ಮತ್ತು ಯುಎಇ ಅಂಡರ್-19 ತಂಡದ ವಿರುದ್ಧ ಎರಡು ಶತಕಗಳನ್ನು ಬಾರಿಸಿದ್ದರು. ಆದರೆ ನಾಯಕನಾಗಿ ವೈಭವ್​ಗೆ ಇದು ಮೊದಲ ಶತಕವಾಗಿದೆ.

ಆದಾಗ್ಯೂ ಈ ಜೋಡಿ ಮೊದಲ ವಿಕೆಟ್​ಗೆ 227 ರನ್​ಗಳ ದಾಖಲೆಯ ಜೊತೆಯಾಟ ನೀಡಿತು. ಇದಕ್ಕೆ ತೆಗೆದುಕೊಂಡಿದ್ದು, ಕೇವಲ 26 ಓವರ್​ಗಳು ಮಾತ್ರ. ಇವರಿಬ್ಬರು ಇರುವವರೆಗೆ ತಂಡ 500 ರನ್ ಕಲೆಹಾಕುವ ಲಕ್ಷಣಗಳು ಗೋಚರಿಸಿದವು. ಆದರೆ ವೈಭವ್ ಔಟಾದ ಬಳಿಕ ಸ್ಕೋರ್ ಬೋರ್ಡ್​ ವೇಗ ಕುಸಿಯಿತು. ಜಾರ್ಜ್​ ಕೂಡ ಶತಕ ಬಾರಿಸಿದ ಬೆನ್ನಲ್ಲೇ ವಿಕೆಟ್ ಒಪ್ಪಿಸಿದರು. ಅಂತಿಮವಾಗಿ ಜಾರ್ಜ್​ 106 ಎಸೆತಗಳಲ್ಲಿ 16 ಬೌಂಡರಿ ಸಹಿತ 118 ರನ್ ಬಾರಿಸಿದರು.

ಆ ಬಳಿಕ ಬಂದ ವೇದಾಂತ್ 34 ರನ್​ಗಳ ಕಾಣಿಕೆ ನೀಡಿದರೆ, ಅಭಿಗ್ಯಾನ್ ಇನ್ನಿಂಗ್ಸ್ ಕೂಡ 21 ರನ್​ಗಳಿಗೆ ಅಂತ್ಯವಾಯಿತು. ಇಲ್ಲಿ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಆಫ್ರಿಕಾ ವೇಗಿಗಳು ಭಾರತ ತಂಡವನ್ನು 400 ರನ್​ಗಳ ಗಡಿ ದಾಟದಂತೆ ನೋಡಿಕೊಂಡರು. ಕೊನೆಯಲ್ಲಿ ಮೊಹಮ್ಮದ್ 28 ರನ್, ಹೆನಿಲ್ 19 ರನ್ ಬಾರಿಸಿ ತಂಡವನ್ನು 400 ರನ್​ಗಳ ಸನಿಹಕ್ಕೆ ತಂದರು. ಆಫ್ರಿಕಾ ಪರ ಸೋನಿ 3 ವಿಕೆಟ್ ಪಡೆದರು.

Source link

Personality Test: ಈ ಚಿತ್ರದಲ್ಲಿ ನಿಮಗೆ ಮೊದಲು ಕಾಣಿಸುವ ಅಂಶ ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ರಿವೀಲ್‌ ಮಾಡುತ್ತೆ – Kannada News | Personality Test: Discover the secret of your personality through this optical illusion picture

ಪ್ರತಿಯೊಬ್ಬರ ವ್ಯಕ್ತಿತ್ವ, ಅವರ ನಡೆ ನುಡಿ, ಭಾವನಾತ್ಮಕ ನಿಲುವು, ಪ್ರೀತಿ ವ್ಯಕ್ತಪಡಿಸುವ ರೀತಿ ಇವೆಲ್ಲವೂ ಭಿನ್ನವಾಗಿರುತ್ತವೆ. ಸಂಖ್ಯಾಶಾಸ್ತ್ರ, ಜ್ಯೋತಿಷ್ಯಶಾಸ್ತ್ರಗಳ ಮೂಲಕ ಈ ನಿಗೂಢ ಸ್ವಭಾವಗಳ ಬಗ್ಗೆ ತಿಳಿದುಕೊಳ್ಳುವಂತೆ ವ್ಯಕ್ತಿತ್ವ ಪರೀಕ್ಷೆಯ ಮೂಲಕವೂ ಪರೀಕ್ಷಿಸಬಹುದು. ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ (Personality Test) ಈ ವ್ಯಕ್ತಿತ್ವ ಪರೀಕ್ಷೆಯ ವಿಧವಾಗಿದ್ದು, ಈ ಚಿತ್ರಗಳಲ್ಲಿ ಮೊದಲು ಕಾಣಿಸುವ ಅಂಶಗಳ ಆಧಾರದ ಮೇಲೆ ನಾವು ನಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ತಿಳಿಯಬಹುದಾಗಿದೆ. ಇಲ್ಲೊಂದು ಅಂತಹದ್ದೇ ಚಿತ್ರ ಹರಿದಾಡುತ್ತಿದ್ದು, ಬೆಕ್ಕು, ಫ್ರೈಡ್‌ ಎಗ್‌ ಅಥವಾ ಕಿತ್ತಳೆ ಅದರಲ್ಲಿ ನಿಮ್ಮ ಕಣ್ಣಿಗೆ ಮೊದಲು ಕಾಣಿಸಿದ್ದೇನು ಎಂಬುದರ ಮೇರೆಗೆ ನೀವು ಭಾವನಾತ್ಮಕ ವ್ಯಕ್ತಿಯೇ ಎಂಬುದನ್ನು ಟೆಸ್ಟ್‌ ಮಾಡಿ.

ನಿಮ್ಮ ವ್ಯಕ್ತಿತ್ವದ ರಹಸ್ಯವನ್ನು ತಿಳಿಸುತ್ತೆ ಈ ಚಿತ್ರ:

ಈ ಚಿತ್ರದಲ್ಲಿ ಮಲಗಿರುವ ಬೆಕ್ಕು, ಫ್ರೈಡ್‌ ಎಗ್‌ ಮತ್ತು ಕಿತ್ತಳೆ ಈ ಮೂರು ಅಂಶಗಳಿದ್ದು, ಇದರಲ್ಲಿ ನಿಮಗೆ ಮೊದಲು ಕಾಣಿಸಿದ್ದೇನು ಎಂಬುದರ ಆಧಾರದ ಮೇಲೆ ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ಪರೀಕ್ಷಿಸಿ.

ಕಿತ್ತಳೆ: ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ನೀವು ಮೊದಲು ಕಿತ್ತಳೆ ಹಣ್ಣನ್ನು ನೋಡಿದ್ದರೆ, ಅದರರ್ಥ ನೀವು ಪ್ರಕಾಶಮಾನವಾದ ಆಂತರಿಕ ಶಕ್ತಿ ಮತ್ತು ಬಲವಾದ ಜೀವ ಶಕ್ತಿ ಹೊಂದಿರುವ ವ್ಯಕ್ತಿ. ನೀವು ಸಂತೋಷ, ಮತ್ತು ಭಾವನಾತ್ಮಕ ಪ್ರಾಮಾಣಿಕತೆಯನ್ನು ಹಂಬಲಿಸುತ್ತೀರಿ. ಏನಾದರೂ ಕೆಟ್ಟದ್ದು ಸಂಭವಿಸಿದರೆ ನೀವು ಬಹಳ ಬೇಗನೇ ಬೇಸರಗೊಳ್ಳುತ್ತೀರಿ. ಇನ್ನೂ ನಿಮ್ಮ ಮನಸ್ಥಿತಿ ಉತ್ತಮವಾಗಿದ್ದಾಗ, ನೀವು ಇತರರಿಗೆ ಸ್ಫೂರ್ತಿಯನ್ನು ತುಂಬುತ್ತೀರಿ.

ಇದನ್ನೂ ಓದಿ: ಕಣ್ಣಿನ ಬಣ್ಣದಿಂದ ತಿಳಿಯಬಹುದು ವ್ಯಕ್ತಿಯ ವ್ಯಕ್ತಿತ್ವದ ರಹಸ್ಯ

ಬೆಕ್ಕು: ಈ ನಿರ್ಧಿಷ್ಟ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ನೀವು ಮೊದಲು ಬೆಕ್ಕನ್ನು ನೋಡಿದರೆ, ನೀವು ಅರ್ಥಗರ್ಭಿತರು, ಸ್ವತಂತ್ರರು ಮತ್ತು ಆಳವಾಗಿ ಗ್ರಹಿಸುವ ಸಾಮರ್ಥ್ಯವನ್ನು ಹೊಂದಿರುವವರು ಎಂದರ್ಥ.  ನೀವು ವೈಯಕ್ತಿಕ ಸ್ಥಳ ಮತ್ತು ಭಾವನಾತ್ಮಕ ಸುರಕ್ಷತೆಯನ್ನು ಗೌರವಿಸುವ ವ್ಯಕ್ತಿಯಾಗಿರುತ್ತೀರಿ.

ಫ್ರೈಡ್‌ ಎಗ್:‌ ನೀವು ಮೊದಲು ಹುರಿದ ಮೊಟ್ಟೆಗಳನ್ನು ನೋಡಿದರೆ, ನೀವು ದೃಢ ಮನಸ್ಸಿನವರು, ಪ್ರಾಯೋಗಿಕರು ಮತ್ತು ಭಾವನಾತ್ಮಕವಾಗಿ ಪ್ರಾಮಾಣಿಕರು ಎಂದರ್ಥ. ನೀವು ಇಷ್ಟವಾದರೂ ಇಷ್ಟವಾಗದಿದ್ದರೂ ಜನ ನಿಮ್ಮ ಬಳಿ ಸಲಹೆ ಕೇಳಲು ಯಾವಾಗಲೂ ಬರುತ್ತಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಜ್ಯ ರಾಜಕಾರಣದಲ್ಲಿ ಹೊಸ ದಾಖಲೆ ಮಾಡಿದ ಬೆನ್ನಲ್ಲೇ ಸಿದ್ದರಾಮಯ್ಯ ಅಚ್ಚರಿ ಮಾತು – Kannada News | I Don’t Know How Long Will I Stay In Politics Says Siddaramaiah Amid Power Tussle

ಹಾವೇರಿ (ಜನವರಿ 07): ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ದಾಖಲೆ ಬರೆದು ಸಿದ್ದರಾಮಯ್ಯ (Siddaramaiah) ಅವರು ಇವತ್ತಿಗೆ ರೆಕಾರ್ಡ್ ರಾಮಯ್ಯ ಆಗಿದ್ದಾರೆ. ಹೌದು…ದೇವರಾಜು ಅರಸು ಅವರ ದಾಖಲೆ ಅಳಿಸಿ ಇವತ್ತಿಗೆ ಸಿದ್ದರಾಮಯ್ಯ ತಮ್ಮ ಹೆಸರಲ್ಲಿ ದಾಖಲೆ ಬರೆದಿದ್ದಾರೆ. ಕರ್ನಾಟಕದ ದೀರ್ಘಾವಧಿ ಸಿಎಂ ಆಗಿ ಸಿದ್ದರಾಮಯ್ಯ ರಾಜಕೀಯದಲ್ಲಿ ಮಿಂಚಿದ್ದಾರೆ. ಈ ನಡುವೆ ಪವರ್ ಶೇರ್ ಕಥೆ ಏನು? ಸಿದ್ದರಾಮಯ್ಯ ನೆಕ್ಸ್ಟ್ ಗೇಮ್ ಏನು? ಎಂಬ ಕುತೂಹಲ ಇದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಜನರ ಆಶೀರ್ವಾದದಿಂದ ದಾಖಲೆ ಬರೆದಿದ್ದೀನಿ, ಇನ್ನೆಷ್ಟು ದಿನ ಇರ್ತಿನೋ ಎನ್ನುವ ಅಚ್ಚರಿ ಮಾತುಗಳನ್ನಾಡಿದ್ದಾರೆ.

ಕರ್ನಾಟಕ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕಾಂಗ್ರೆಸ್ ಜೊತೆಗಿನ ಮೈತ್ರಿಗೆ ಬಿಜೆಪಿ ನಾಯಕರ ವಿರುದ್ಧ ಸಿಎಂ ಫಡ್ನವೀಸ್ ವಾಗ್ದಾಳಿ, ಕಠಿಣ ಕ್ರಮದ ಎಚ್ಚರಿಕೆ – Kannada News | Devendra Fadnavis angry on BJP Leaders for alliance with Congress in Ambernath local body

ಮುಂಬೈ, ಜನವರಿ 7: ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇಂದು (ಜನವರಿ 7) ಕಾಂಗ್ರೆಸ್ ಜೊತೆಗಿನ ಯಾವುದೇ ಮೈತ್ರಿಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಂತಹ ಒಪ್ಪಂದವನ್ನು “ಸ್ವೀಕಾರಾರ್ಹವಲ್ಲ” ಎಂದು ಕರೆದಿದ್ದಾರೆ. ಅಂಬರ್ನಾಥ್‌ನಲ್ಲಿ ಸ್ಥಳೀಯ ಮಟ್ಟದಲ್ಲಿ ಬಿಜೆಪಿ (BJP) ನಾಯಕರು ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಫಡ್ನವೀಸ್ ಅಸಮಾಧಾನ ಹೊರಹಾಕಿದ್ದಾರೆ. ಅವರು ತೆಗೆದುಕೊಂಡ ನಿರ್ಧಾರವನ್ನು ಸರಿಪಡಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಅಂಬರ್ನಾಥ್ ಮುನ್ಸಿಪಲ್ ಕೌನ್ಸಿಲ್‌ನಲ್ಲಿ ನಡೆದ ಅಚ್ಚರಿಯ ರಾಜಕೀಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಈ ಸ್ಪಷ್ಟೀಕರಣ ಬಂದಿದೆ. ಅಲ್ಲಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಅಧಿಕಾರಕ್ಕೆ ಬರುವುದನ್ನು ತಡೆಯಲು ಬಿಜೆಪಿ ಮತ್ತು ಕಾಂಗ್ರೆಸ್ ಕೈಜೋಡಿಸಿವೆ ಎಂದು ವರದಿಯಾಗಿದೆ. ಈ ಕ್ರಮವು ಮಹಾರಾಷ್ಟ್ರ ರಾಜ್ಯದಲ್ಲಿ ರಾಜಕೀಯ ಉದ್ವಿಗ್ನತೆಯನ್ನು ಹೆಚ್ಚಿಸಿದೆ.

ಇದನ್ನೂ ಓದಿ: ಕರ್ನಾಟಕ ಗೂಂಡಾ ರಾಜ್ಯವಾಗುತ್ತಿದೆ, ರಾಜ್ಯಪಾಲರ ಮಧ್ಯಪ್ರವೇಶವಾಗಲಿ; ಬಿಜೆಪಿ ನಾಯಕ ರವಿಕುಮಾರ್ ಆಗ್ರಹ

“ಕಾಂಗ್ರೆಸ್ ಜೊತೆಗಿನ ಮೈತ್ರಿ ಸ್ವೀಕಾರಾರ್ಹವಲ್ಲ. ಅಂಬರ್ನಾಥ್‌ನಲ್ಲಿ ಸ್ಥಳೀಯ ಮಟ್ಟದಲ್ಲಿ ತೆಗೆದುಕೊಂಡ ನಿರ್ಧಾರವನ್ನು ಸರಿಪಡಿಸಲಾಗುವುದು. ಕಾಂಗ್ರೆಸ್ ಜೊತೆ ಯಾವುದೇ ಮೈತ್ರಿ ಇರುವುದಿಲ್ಲ” ಎಂದು ಫಡ್ನವೀಸ್ ಹೇಳಿದ್ದಾರೆ.

“ಕಾಂಗ್ರೆಸ್ ಮುಕ್ತ ಭಾರತ”ಕ್ಕಾಗಿ ಬಿಜೆಪಿಯ ದೀರ್ಘಕಾಲದ ಅಭಿಯಾನದ ಹೊರತಾಗಿಯೂ ಮುಂಬೈನಿಂದ ಸುಮಾರು 70 ಕಿ.ಮೀ ದೂರದಲ್ಲಿರುವ ಅಂಬರ್ನಾಥ್​​ನಲ್ಲಿ ಶಿವಸೇನೆಯ ಶಿಂಧೆ ಬಣವನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದಾಗಿ ಬಿಜೆಪಿ-ಕಾಂಗ್ರೆಸ್ ಮೈತ್ರಿಯು ರಾಜಕೀಯ ವಲಯಗಳಲ್ಲಿ ತೀಕ್ಷ್ಣ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ. ಅಲ್ಲಿನ ಕಾಂಗ್ರೆಸ್-ಬಿಜೆಪಿ ಮೈತ್ರಿಕೂಟಕ್ಕೆ ಅಂಬರ್ನಾಥ್ ವಿಕಾಸ್ ಅಘಾಡಿ ಎಂದು ಹೆಸರಿಸಲಾಗಿದೆ. ಈ ಬೆಳವಣಿಗೆಗಳು ಶಿವಸೇನೆಯ ಶಿಂಧೆ ಬಣದಲ್ಲಿ ಗಮನಾರ್ಹ ಅಸಮಾಧಾನವನ್ನು ಉಂಟುಮಾಡಿದೆ. ಬಿಜೆಪಿ-ಕಾಂಗ್ರೆಸ್ ಮೈತ್ರಿಕೂಟದ ನಂತರ ಶಿಂಧೆ ಬಣವು ಕೋಪಗೊಂಡಿದೆ.

ಇದನ್ನೂ ಓದಿ: ಸ್ಥಳೀಯ ಸಂಸ್ಥೆ ಚುನಾವಣೆ: JDS ಜೊತೆ ಮೈತ್ರಿಗೆ ಮಂಡ್ಯದಲ್ಲಿ ಬಿಜೆಪಿಗರ ಅಪಸ್ವರ

ಶಿವಸೇನೆಯ ಶಿಂಧೆ ಬಣದ ಭದ್ರಕೋಟೆ ಎಂದು ಅಂಬರ್ನಾಥ್ ಪರಿಗಣಿಸಲಾಗಿದೆ. ಏಕನಾಥ್ ಶಿಂಧೆ ಅವರ ಮಗ ಶ್ರೀಕಾಂತ್ ಶಿಂಧೆ ಈ ಕ್ಷೇತ್ರದ ಸಂಸದರಾಗಿದ್ದಾರೆ. ಇತ್ತೀಚೆಗೆ ನಡೆದ ಪುರಸಭೆ ಚುನಾವಣೆಯಲ್ಲಿ ಶಿಂಧೆ ಬಣವು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಆದರೆ ಬಹುಮತಕ್ಕೆ ಸ್ವಲ್ಪ ಕಡಿಮೆ ಇತ್ತು. ಬಿಜೆಪಿಯ ಅಭ್ಯರ್ಥಿಯನ್ನು ಮೇಯರ್ ಆಗಿ ಆಯ್ಕೆ ಮಾಡಲಾಯಿತು. ಮುನ್ಸಿಪಲ್ ಕೌನ್ಸಿಲ್ ಸರ್ಕಾರ ರಚಿಸಲು ಬಿಜೆಪಿ ತಮ್ಮೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆ ಎಂದು ಶಿಂಧೆ ಬಣ ನಿರೀಕ್ಷಿಸಿತ್ತು. ಆದರೆ, ಅನಿರೀಕ್ಷಿತ ತಿರುವಿನಲ್ಲಿ ಶಿಂಧೆ ಬಣವನ್ನು ಬೈಪಾಸ್ ಮಾಡಿ ಸ್ಥಳೀಯ ಮಟ್ಟದಲ್ಲಿ ಕಾಂಗ್ರೆಸ್ ಜೊತೆ ಕೌನ್ಸಿಲ್ ಸರ್ಕಾರವನ್ನು ಬಿಜೆಪಿ ರಚಿಸಿತು. ಈ ನಿರ್ಧಾರವು ತೀಕ್ಷ್ಣವಾದ ರಾಜಕೀಯ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:57 pm, Wed, 7 January 26

Source link