Headlines

ಅಲ್ಲು ಅರ್ಜುನ್ ‘ರಾಕಾ’ ಲುಕ್ ಸಿದ್ಧಪಡಿಸಲು ಪ್ರತಿ ದಿನ 4 ಗಂಟೆ ಮೇಕಪ್ – Kannada News | Allu Arjun spends 4 hours a day on makeup for his Raaka movie getup

‘ಪುಷ್ಪ 2’ ಸಿನಿಮಾದ ಅಭೂತಪೂರ್ವ ಯಶಸ್ಸಿನ ಬಳಿಕ ನಟ ಅಲ್ಲು ಅರ್ಜುನ್ (Allu Arjun) ಅವರ ಮುಂದಿನ ಸಿನಿಮಾ ಮೇಲೆ ದೊಡ್ಡ ನಿರೀಕ್ಷೆ ಸೃಷ್ಟಿ ಆಗಿದೆ. ಈಗ ಅವರು ‘ರಾಕಾ’ (Raaka) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಅದರಲ್ಲಿ ಅಲ್ಲು ಅರ್ಜುನ್ ಅವರ ಗೆಟಪ್ ಗಮನ ಸೆಳೆದಿದೆ. ಆ ಗೆಟಪ್ ಸಲುವಾಗಿ ಅವರು ಎಷ್ಟು ಶ್ರಮ ಹಾಕಿದ್ದಾರೆ ಎಂಬ…

Read More

ಯಡಿಯೂರಪ್ಪ ಮಗನನ್ನು ಗೆಲ್ಲಿಸಿ ಅಂದಿದ್ದ ಶಾಮನೂರು ವಿರುದ್ಧ ಯಾಕೆ ಕ್ರಮ ಆಗಿಲ್ಲ: ಸಿಡಿದೆದ್ದ ಮುಸ್ಲಿಂ ನಾಯಕ – Kannada News | Mlc abdul jabbar First Reaction about Suspended And Hits out at Congress High command

ಬೆಂಗಳೂರು/ದಾವಣಗೆರೆ, (ಏಪ್ರಿಲ್ 15): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್​​ನಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ, ಟಿಕೆಟ್ ವಿಚಾರಕ್ಕೆ ಆರಂಭವಾಗಿ ಇದೀಗ ನಾಯಕರ ತಲೆದಂಡ ತನಕ ಬಂದು ನಿಂತಿದೆ. ಹೌದು…ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್​​ನಿಂದ ಅಮಾನತು ಮಾಡಲಾಗಿದ್ದು, ಇದೀಗ ಸಚಿವ ಜಮಿರ್ ಅಹ್ಮದ್ ಖಾನ್​​ಗೂ ಸಂಕಷ್ಟ ಎದುರಾಗಿದೆ. ಇನ್ನೊಂದೆಡೆ ಕೆಲ ಮುಸ್ಲಿಂ ನಾಯಕರು ಸಹ ಕಾಂಗ್ರೆಸ್ ಹೈಕಮಾಂಡ್​ ನಡೆಗೆ ಆಕ್ರೋಶಗೊಂಡಿದ್ದು, ಈ ಹಿಂದೆ ಶಾಮನೂರು ಶಿವಶಂಕರಪ್ಪನವರು ಬಹಿರಂಗವಾಗಿಯೇ ಯಡಿಯೂರಪ್ಪನವರ ಪುತ್ರ ರಾಘವೇಂದ್ರ ಅವರನ್ನ…

Read More

ನಿದ್ರೆ ಸರಿಯಾಗಿ ಮಾಡದವರಲ್ಲಿ ಕಣ್ಣಿನ ದೃಷ್ಟಿ ದುರ್ಬಲವಾಗುತ್ತಾ? ಇಲ್ಲಿದೆ ತಜ್ಞರು ನೀಡಿರುವ ಸ್ಪಷ್ಟನೆ – Kannada News | Don’t Let Sleep Deprivation Blur Your Vision

ಇಂದಿನ ವೇಗದ ಜೀವನಶೈಲಿಯಲ್ಲಿ ನಿದ್ರೆಯ (Sleep) ಕೊರತೆ ಸಾಮಾನ್ಯ ಸಮಸ್ಯೆಯಾಗುತ್ತಿದೆ. ರಾತ್ರಿಯಾದರೂ ಮೊಬೈಲ್ ಬಳಕೆ ಮಾಡುತ್ತಾ ಸಮಯ ಕಳೆಯುವವರು ಒಂದು ಕಡೆಯಾದರೆ, ಮತ್ತೊಂದು ಕಡೆ ಕೆಲಸದ ಒತ್ತಡ ಮತ್ತು ಅಸ್ಥಿರ ದಿನಚರಿಯಿಂದ ಸರಿಯಾಗಿ ನಿದ್ರೆ ಮಾಡುವುದಿಲ್ಲ. ಇದರ ಪರಿಣಾಮ ಕೇವಲ ದೇಹದ ಮೇಲಷ್ಟೇ ಅಲ್ಲ, ಕಣ್ಣಿನ ಆರೋಗ್ಯದ (Eye Health) ಮೇಲೂ ಬೀಳುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆದರೆ ಇದರಿಂದ ಕಣ್ಣಿನ ದೃಷ್ಟಿ ದುರ್ಬಲವಾಗುತ್ತಾ, ಈ ರೀತಿಯ ಸಮಸ್ಯೆ ತಡೆಯಲು ಏನು ಮಾಡಬಹುದು ಎಂಬುದನ್ನು ಸ್ಟೋರಿ…

Read More

CBSE 10th Results 2026 Out: CBSE 10ನೇ ತರಗತಿ ಫಲಿತಾಂಶ ಪ್ರಕಟ; ರಿಸಲ್ಟ್​ ವೀಕ್ಷಿಸಲು ನೇರ ಲಿಂಕ್ ಇಲ್ಲಿದೆ – Kannada News | CBSE 10th Results 2026 Out: Check Class 10 Marks Online AND DigiLocker Now!

ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯು (CBSE) 2026ರ ಸಾಲಿನ (ಸೆಷನ್ 1) 10ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಅಧಿಕೃತವಾಗಿ ಪ್ರಕಟಿಸಿದೆ. ಈ ವರ್ಷ ಸುಮಾರು 25 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಫಲಿತಾಂಶಕ್ಕಾಗಿ ಕಾಯುತ್ತಿದ್ದ ಲಕ್ಷಾಂತರ ವಿದ್ಯಾರ್ಥಿಗಳ ನಿರೀಕ್ಷೆಗೆ ಈಗ ತೆರೆಬಿದ್ದಿದೆ. ಫೆಬ್ರವರಿ 17 ರಿಂದ ಮಾರ್ಚ್ 11 ರವರೆಗೆ ನಡೆದಿದ್ದ ಪರೀಕ್ಷೆಯ ಫಲಿತಾಂಶಗಳು ಈಗ ಲಭ್ಯವಿದ್ದು, ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ತಮ್ಮ ಅಂಕಪಟ್ಟಿಗಳನ್ನು ವೀಕ್ಷಿಸಬಹುದಾಗಿದೆ. ಫಲಿತಾಂಶ ವೀಕ್ಷಿಸುವುದು ಹೇಗೆ? ಸಿಬಿಎಸ್‌ಇ 10ನೇ…

Read More

ಹಾರ್ಮುಜ್ ನಂತರ ಮಲಕ್ಕಾ ಜಲಸಂಧಿ ಮೇಲೆ ಅಮೆರಿಕ ಕಣ್ಣು; ಭಾರತದ ಬಗಲಿನಲ್ಲೇ ದೊಡ್ಡ ಅಪಾಯದ ಬೀಸುಗತ್ತಿ – Kannada News | After the hormuz usa eyeing the malacca strait that see worlds 40pc trade

ನವದೆಹಲಿ, ಏಪ್ರಿಲ್ 15: ವಿಶ್ವದ ಶೇ. 20 ತೈಲ ಸಾಗಣೆಯಾಗುವ ಹಾರ್ಮುಜ್ ಜಲಸಂಧಿ ಬಂದ್ ಆಗಿದ್ದಕ್ಕೆ ಇಡೀ ಜಗತ್ತು ಶಾಕ್ ಪಡೆದಿದೆ. ಹಾರ್ಮುಜ್ ಜಲಸಂಧಿಯನ್ನು ಇರಾನ್ ನಿಯಂತ್ರಿಸುತ್ತಿದೆ. ಇದನ್ನು ತಡೆಯಲು ಅಮೆರಿಕ ಕಸರತ್ತು ನಡೆಸಿದೆ. ಇದೇ ವೇಳೆ, ಅಮೆರಿಕವು ಹಾರ್ಮುಜ್​ಗಿಂತಲೂ ಮುಖ್ಯವಾಗಿರುವ ಇನ್ನೊಂದು ಜಲಸಂಧಿಗೆ ತಂಟೆಗೆ ತೆರಳುತ್ತಿದೆ ಎನ್ನುವಂತಹ ಸುದ್ದಿಗಳಿವೆ. ಇದು ಸ್ಟ್ರೇಟ್ ಆಫ್ ಮಲಾಕ್ಕ, ಅಥವಾ ಮಲಾಕ್ಕ ಜಲಸಂಧಿ (Malacca strait). ಜಗತ್ತಿನ ಶೇ. 40ರಷ್ಟು ವ್ಯಾಪಾರ ವಹಿವಾಟುಗಳಾಗುವ ಸರಕುಗಳು ಈ ಜಲಸಂಧಿ ಮೂಲಕ ಸಾಗುತ್ತವೆ….

Read More

ಭಾರತದ ಧ್ವಜದ ಬಣ್ಣದ ರಿಬ್ಬನ್ ಕತ್ತರಿಸಲು ನಿರಾಕರಿಸಿದ ಸಿಎಂ ಒಮರ್ ಅಬ್ದುಲ್ಲಾ! – Kannada News | Jammu and Kashmir CM Omar Abdullah refuses to Cut Tricolour Ribbon

ಶ್ರೀನಗರ, ಏಪ್ರಿಲ್ 15: ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ (Omar Abdullah) ಕಾರ್ಯಕ್ರಮವೊಂದರಲ್ಲಿ, ತ್ರಿವರ್ಣದ ರಿಬ್ಬನ್‌ ಅನ್ನು ಕತ್ತರಿಯಿಂದ ಕಟ್ ಮಾಡಲು ನಿರಾಕರಿಸಿದ್ದಾರೆ. ಭಾರತದ ಧ್ವಜವಿರುವ ರಿಬ್ಬನ್ ಅನ್ನು ನಾನು ಕತ್ತರಿಸುವುದಿಲ್ಲ ಎಂದು ಹೇಳಿರುವ ಅವರು ಕಾರ್ಯಕ್ರಮದ ಆಯೋಜಕರಿಗೆ ಆ ರಿಬ್ಬನ್ ಅನ್ನು ಬಿಚ್ಚಿ ಸುತ್ತಿಡಲು ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ಈ ನಿಲುವು ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಕಾರ್ಯಕ್ರಮದ ಉದ್ಘಾಟನೆ ವೇಳೆ ತಾವು ಕತ್ತರಿಸಬೇಕಾಗಿದ್ದ ರಿಬ್ಬನ್‌ನಲ್ಲಿ ಕೇಸರಿ, ಬಿಳಿ ಮತ್ತು ಹಸಿರು ಪಟ್ಟೆಗಳನ್ನು ಗಮನಿಸಿದ ಸಿಎಂ…

Read More

MBA in Temple Management: ದೇವಾಲಯಗಳ ಆಡಳಿತಕ್ಕೂ ಬಂತು ಎಂಬಿಎ ಪದವಿ! ವೃತ್ತಿಜೀವನದ ಹೊಸ ದಾರಿಯಾಗಿ ‘ಟೆಂಪಲ್ ಮ್ಯಾನೇಜ್ಮೆಂಟ್’ – Kannada News | Ujjain Launches MBA in Temple Management: New Course for Pilgrim Tourism and Administration

ಉಜ್ಜಯಿನಿ: ಭಾರತದಲ್ಲಿ ತೀರ್ಥಯಾತ್ರೆ ಎಂಬುದು ಕೇವಲ ಧಾರ್ಮಿಕ ಆಚರಣೆಯಾಗಿ ಉಳಿದಿಲ್ಲ, ಅದು ಪ್ರವಾಸೋದ್ಯಮದ ಬೆನ್ನೆಲುಬಾಗಿ ಬೆಳೆದಿದೆ. ಇಂತಹ ಬೃಹತ್ ಸಂಪನ್ಮೂಲ ಮತ್ತು ಭಕ್ತರ ಸಾಗರವನ್ನು ನಿರ್ವಹಿಸಲು ಈಗ ವೃತ್ತಿಪರರ ಅಗತ್ಯವಿದ್ದು, ಇದಕ್ಕಾಗಿ ‘ದೇವಾಲಯ ನಿರ್ವಹಣೆಯಲ್ಲಿ ಎಂಬಿಎ’ (MBA in Temple Management) ಕೋರ್ಸ್ ಆರಂಭವಾಗುತ್ತಿದೆ. ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಸಾಮ್ರಾಟ್ ವಿಕ್ರಮಾದಿತ್ಯ ವಿಶ್ವವಿದ್ಯಾಲಯವು (ವಿಕ್ರಮ್ ವಿಶ್ವವಿದ್ಯಾಲಯ) ಈ ವಿಶೇಷ ಕೋರ್ಸ್ ಅನ್ನು ಪ್ರಾರಂಭಿಸಲು ಮುಂದಾಗಿದೆ. ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಅನಿಲ್ ಕುಮಾರ್ ಶರ್ಮಾ ಅವರ ಪ್ರಕಾರ, ಈ ಕೋರ್ಸ್‌ಗೆ ಯಾವುದೇ…

Read More

ಸಲ್ಮಾನ್ ಖಾನ್ ಹೊಸ ಸಿನಿಮಾಗೆ ಸಂಕಷ್ಟ: ಕಥೆ ಬದಲಾದರೂ ತಪ್ಪದ ‘ಮಾತೃಭೂಮಿ’ ವಿವಾದ – Kannada News | Salman Khan Maatrubhumi movie release stalled regulatory issues Galwan controversy

ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅಭಿನಯದ ಬಹುನಿರೀಕ್ಷಿತ ‘ಮಾತೃಭೂಮಿ’ ಸಿನಿಮಾದ ಬಿಡುಗಡೆಗೆ ಈಗ ದೊಡ್ಡ ಅಡೆತಡೆ ಎದುರಾಗಿದೆ. ಚಿತ್ರದ ಕಥೆ ಮತ್ತು ಶೀರ್ಷಿಕೆಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿದ ಹೊರತಾಗಿಯೂ, ಈ ವಾರ್ ಡ್ರಾಮಾ ಸದ್ಯಕ್ಕೆ ತೆರೆಗೆ ಬರುವುದು ಅನುಮಾನ ಎನ್ನಲಾಗುತ್ತಿದೆ. ವರದಿಗಳ ಪ್ರಕಾರ, ‘ಮಾತೃಭೂಮಿ’ (Maatrubhumi) ಚಿತ್ರವು ಪ್ರಮಾಣಪತ್ರಕ್ಕಾಗಿ ಇನ್ನೂ ಸೆನ್ಸಾರ್ ಮಂಡಳಿಗೆ ಸಲ್ಲಿಕೆಯಾಗಿಲ್ಲ. ಚಿತ್ರವನ್ನು ಬಿಡುಗಡೆ ಮಾಡುವ ಮೊದಲು ಅನುಸರಿಸಬೇಕಾದ ಕಾನೂನಾತ್ಮಕ ಪ್ರಕ್ರಿಯೆಗಳ ಬಗ್ಗೆ ಚಿತ್ರತಂಡ ಈಗ ಚರ್ಚೆ ನಡೆಸುತ್ತಿದೆ. ‘ಈ ಹಂತದಲ್ಲಿ…

Read More

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ಟೋಪಿ ಹಾಕಲು ಹೋಗಿ ಸಿಕ್ಕಿಬಿದ್ದ ಭೂಪ! – Kannada News | Bengaluru Man Arrested for Exchanging Fake Rs 2000 Notes at RBI

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ಟೋಪಿ ಹಾಕಲು ಹೋಗಿ ಸಿಕ್ಕಿಬಿದ್ದ ಭೂಪ! Image Credit source: google Gemini ಬೆಂಗಳೂರು, ಏಪ್ರಿಲ್ 15: ಭಾರತೀಯ ರಿಸರ್ವ್ ಬ್ಯಾಂಕ್ (RBI) ಕಚೇರಿಯಲ್ಲಿ ಚಲಾವಣೆ ರದ್ದಾಗಿರುವ 2,000 ರೂಪಾಯಿ ಮುಖಬೆಲೆಯ ನಕಲಿ ನೋಟುಗಳನ್ನು ಬದಲಾಯಿಸಲು ಯತ್ನಿಸಿದ 52 ವರ್ಷದ ವ್ಯಕ್ತಿಯನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. 2 ಸಾವಿರ ಮುಖಬೆಲೆಯ 300ಕ್ಕೂ ಹೆಚ್ಚು ನೋಟುಗಳನ್ನು ತಂದಿದ್ದ ವ್ಯಕ್ತಿ, 7 ಲಕ್ಷ ರೂ.ಗೂ ಹೆಚ್ಚು ಮೊತ್ತವನ್ನು ಜಮಾ ಮಾಡುವಂತೆ ಕೇಳಿದ್ದ ಎನ್ನಲಾಗಿದೆ….

Read More

ಒಗ್ಗಟ್ಟಿನಿಂದ ನಿಲ್ಲುತ್ತೇವೆ; ಕ್ಷೇತ್ರ ಪುನರ್ ವಿಂಗಡಣೆ ವಿರುದ್ಧ ಒಂದಾದ ದಕ್ಷಿಣ ಭಾರತ – Kannada News | We Will stand together speak with one voice South India expresses concern over delimitation

ನವದೆಹಲಿ, ಏಪ್ರಿಲ್ 15: ಕ್ಷೇತ್ರ ಪುನರ್ ವಿಂಗಡಣೆ (delimitation) ನಿಯಮಗಳಿಗೆ ಪ್ರಮುಖ ಬದಲಾವಣೆಗಳೊಂದಿಗೆ ಲೋಕಸಭಾ ಸದಸ್ಯರ ಸಂಖ್ಯೆಯನ್ನು 543ರಿಂದ 850ಕ್ಕೆ ಹೆಚ್ಚಿಸುವ ಪ್ರಸ್ತಾವನೆಗೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಒಗ್ಗಟ್ಟಿನ ವಿರೋಧ ವ್ಯಕ್ತವಾಗಿದೆ. ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕದಂತಹ ರಾಜ್ಯಗಳ ರಾಜಕೀಯ ನಾಯಕರು ಮತ್ತು ಪಕ್ಷಗಳು ಈ ಸೀಮಾ ನಿರ್ಣಯವನ್ನು ವಿರೋಧಿಸಿವೆ. ತೆಲಂಗಾಣದ ವಿರೋಧ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಕೇಂದ್ರ ಸರ್ಕಾರದ ಪ್ರಕ್ರಿಯೆಯ ವಿರುದ್ಧ ರಾಜಕೀಯ ಪ್ರತಿಭಟನೆಗೆ ಕರೆ ನೀಡಿದ್ದಾರೆ. ರೇವಂತ್ ರೆಡ್ಡಿ ಪ್ರಧಾನಿ ನರೇಂದ್ರ…

Read More