Udupi Health Dept Recruitment 2025: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನರ್ಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ – Kannada News | Udupi Health Dept Recruitment 2025: Nurse and Worker Jobs – Apply by Jan 16!

ಉಡುಪಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅಧಿಕೃತ ಅಧಿಸೂಚನೆಯ ಮೂಲಕ ನರ್ಸ್, ಮಲ್ಟಿ ರಿಹ್ಯಾಬಿಲಿಟೇಶನ್ ವರ್ಕರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಅದರಲ್ಲೂ ವಿಶೇಷವಾಗಿ ಉಡುಪಿಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 16ರ ಮೊದಲು ಅರ್ಜಿ ಸಲ್ಲಿಸತಕ್ಕದ್ದು. ಶೈಕ್ಷಣಿಕ ಅರ್ಹತೆ: DHFWS ಉಡುಪಿ ಅಧಿಕೃತ ಅಧಿಸೂಚನೆಯ ಪ್ರಕಾರ…

Read More

ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ಕೆಎನ್​​ ರಾಜಣ್ಣ ಖಡಕ್​​ ಮಾತು – Kannada News | No Siddaramaiah, No Congress Party: Says KN Rajanna

ಬೆಂಗಳೂರು, ಜನವರಿ 06: ಕರ್ನಾಟಕದಲ್ಲಿ ಬಿ.ಎಸ್.ಯಡಿಯೂರಪ್ಪ ಇಲ್ಲ ಅಂದರೆ ಬಿಜೆಪಿ ಇಲ್ಲ, ಹೆಚ್.ಡಿ.ದೇವೇಗೌಡರು ಇಲ್ಲ ಅಂದರೆ ಜೆಡಿಎಸ್ ಪಕ್ಷ ಇಲ್ಲ. ಹಾಗೆಯೇ ಸಿದ್ದರಾಮಯ್ಯ ಇಲ್ಲ ಅಂದರೆ ಕಾಂಗ್ರೆಸ್ ಪಕ್ಷ ಇಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ದೀರ್ಘಾವಧಿ ಸಿಎಂ ಆಗಿ ಸಿದ್ದರಾಮಯ್ಯ ದಾಖಲೆ ವಿಚಾರವಾಗಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯಗೆ ಇನ್ನಷ್ಟು ಪುಣ್ಯ, ಶ್ರೇಯಸ್ಸು ಲಭಿಸಲಿ. 2028ರಲ್ಲೂ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂಬ ಆಶಯ ವ್ಯಕ್ತಪಡಿಸಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ….

Read More

ಇನ್ಫೋಸಿಸ್ ಜಾಗ ಮಾರಾಟ: ಸರ್ಕಾರದಿಂದ ತನಿಖೆಗೆ ಆದೇಶ; ತಾನ್ಯಾವ ಕಾನೂನು ಉಲ್ಲಂಘಿಸಿಲ್ಲವೆಂದ ಇನ್ಫೋಸಿಸ್ – Kannada News | Infosys land sale in Attibele, probe ordered as registration violation alleged

ಬೆಂಗಳೂರು, ಜನವರಿ 6: ಆನೇಕಲ್ ತಾಲೂಕಿನಲ್ಲಿ ಇನ್ಫೋಸಿಸ್​ನಿಂದ (Infosys) 53.5 ಎಕರೆ ಭೂಮಿಯನ್ನು ರಿಯಲ್ ಎಸ್ಟೇಟ್ ಸಂಸ್ಥೆಯಾದ ಪೂರವಂಕರಕ್ಕೆ ಮಾರಾಟ ಮಾಡಿದ ಪ್ರಕರಣ ಈಗ ದೊಡ್ಡ ಸದ್ದು ಮಾಡತೊಡಗಿದೆ. ಬೆಂಗಳೂರು ಜಿಲ್ಲಾಧಿಕಾರಿಗಳು (ಡಿಸಿ) ಈ ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ. ತನಿಖೆಯಲ್ಲಿ ಯಾರೇ ತಪ್ಪಿತಸ್ಥರೆಂದು ಗೊತ್ತಾದರೂ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೈಗೌಡ ಅವರು ತಿಳಿಸಿದ್ದಾರೆ. ಏನಿದು ಇನ್ಫೋಸಿಸ್ ಜಮೀನು ಮಾರಾಟ? ಇನ್ಫೋಸಿಸ್ ಸಂಸ್ಥೆ ಅನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ತಾನು ಹೊಂದಿರುವ 53.5 ಎಕರೆ…

Read More

ಒಂದೇ ಇನ್ನಿಂಗ್ಸ್​ನಲ್ಲಿ ಬಿಸಿಸಿಐನ 2 ಪ್ರಶ್ನೆಗಳಿಗೆ ಉತ್ತರಿಸಿದ ಶ್ರೇಯಸ್ ಅಯ್ಯರ್

ಸುಮಾರು 2 ತಿಂಗಳ ಬಳಿಕ ಕ್ರಿಕೆಟ್ ಅಂಗಳದಲ್ಲಿ ಕಾಣಿಸಿಕೊಂಡಿರುವ ಟೀಂ ಇಂಡಿಯಾದ ಅನುಭವಿ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್, ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿ ಆರಂಭಕ್ಕೂ ಮುನ್ನವೇ ತಮ್ಮ ಫಿಟ್ನೆಸ್ ಸಾಭೀತುಪಡಿಸಿರುವುದಲ್ಲದೆ ಅಮೋಘ ಬ್ಯಾಟಿಂಗ್‌ ಪ್ರದರ್ಶನ ನೀಡಿದ್ದಾರೆ. ಈ ಮೂಲಕ ಬಿಸಿಸಿಐಗೆ ತಾನು ಸಂಪೂರ್ಣ ಫಿಟ್ ಆಗಿದ್ದೇನೆ ಎಂಬ ಮೆಸೇಜ್ ನೀಡಿದ್ದಾರೆ. ಹೀಗಾಗಿ ಕಿವೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಅಯ್ಯರ್ ಆಡುವುದು ಖಚಿತವಾಗಿದೆ. ಪ್ರಸ್ತುತ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯ ಆರನೇ ಸುತ್ತಿನ ಪಂದ್ಯದಲ್ಲಿ ಮುಂಬೈ ತಂಡದ ಪರ…

Read More

VHT 2025-26: ಕೇವಲ 9 ರನ್​​ಗಳಿಂದ ದಾಖಲೆಯ 5ನೇ ಶತಕದಿಂದ ವಂಚಿತರಾದ ದೇವದತ್ ಪಡಿಕ್ಕಲ್ – Kannada News | Vijay Hazare Trophy Devdutt Padikkal Misses 5th Ton

ವಿಜಯ್ ಹಜಾರೆ ಟೂರ್ನಿಯ (Vijay Hazare Trophy) 6ನೇ ಸುತ್ತಿನ ಪಂದ್ಯಗಳು ಇಂದು ನಡೆಯುತ್ತಿವೆ. ಇಂದಿನ ಪಂದ್ಯದಲ್ಲಿ ಕರ್ನಾಟಕ ತಂಡಕ್ಕೆ ರಾಜಸ್ಥಾನ ತಂಡ ( Karnataka vs Rajasthan) ಎದುರಾಗಿದೆ. ಗುಜರಾತ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕರ್ನಾಟಕ ತಂಡ ನಿಗದಿತ 50 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 324 ರನ್ ಕಲೆಹಾಕಿದೆ. ತಂಡದ ಪರ ನಾಯಕ ಮಯಾಂಕ್ ಅಗರ್ವಾಲ್ ಭರ್ಜರಿ ಶತಕ ಸಿಡಿಸಿದರೆ, ಅತ್ಯುತ್ತಮ ಫಾರ್ಮ್​ನಲ್ಲಿರುವ ದೇವದತ್ ಪಡಿಕ್ಕಲ್ ( Devdutt Padikkal)…

Read More

ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ನೀಡುವುದಾಗಿ ಭರವಸೆ – Kannada News | DK Shivakumar Visits Ballari: Consoles Mother of Slain Congress Worker

ಬಳ್ಳಾರಿ, ಜನವರಿ 06: ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕಾಂಗ್ರೆಸ್​ ಕಾರ್ಯಕರ್ತ ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ರಾಜಶೇಖರ್ ನಿವಾಸಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ವೇಳೆ ಡಿ.ಕೆ.ಶಿವಕುಮಾರ್ ಮುಂದೆ ಮೃತ ರಾಜಶೇಖರ ತಾಯಿ ತುಳಸಿ ಅವರು ಕಣ್ಣೀರು ಹಾಕಿದರು. ಇಡೀ ಮನೆಗೆ ರಾಜಶೇಖರ್ ಆಧಾರವಾಗಿದ್ದ ಎಂದು ಕಣ್ಣೀರು ಹಾಕಿದರು. ಇಡೀ ಪಕ್ಷವೇ ರಾಜಶೇಖರ ಕುಟುಂಬಸ್ಥರ ಜೊತೆ ಇದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಸರ್ಕಾರದಿಂದ ಕುಟುಂಬಕ್ಕೆ ಅಗತ್ಯ…

Read More

‘ಧುರಂಧರ್’ ಸಿನಿಮಾದ ಟಿಕೆಟ್ ಬೆಲೆ ತಗ್ಗಿಸಿದ ಚಿತ್ರತಂಡ; ಕಾರಣ ಏನು? – Kannada News | Ranveer Singh starrer Dhurandhar movie ticket price slashed due to this reason

ರಿಯಲ್ ಘಟನೆಯನ್ನು ಆಧರಿಸಿ ತಯಾರಾದ ‘ಧುರಂಧರ್’ (Dhurandhar) ಸಿನಿಮಾ ಬಿಡುಗಡೆ ಆಗಿ ಒಂದು ತಿಂಗಳು ಕಳೆದಿದೆ. ಈಗಲೂ ದೇಶಾದ್ಯಂತ ಈ ಸಿನಿಮಾ ಪ್ರದರ್ಶನ ಕಾಣುತ್ತಿದೆ. ರಣವೀರ್ ಸಿಂಗ್, ಸಾರಾ ಅರ್ಜುನ್, ಅಕ್ಷಯ್ ಖನ್ನಾ (Akshaye Khanna) ಮುಂತಾದವರು ನಟಿಸಿದ ಈ ಸಿನಿಮಾಗೆ ಬಹುತೇಕ ಪಾಸಿಟಿವ್ ವಿಮರ್ಶೆ ಸಿಕ್ಕಿದೆ. ಇಷ್ಟು ದಿನಗಳ ತನಕವೂ ಈ ಸಿನಿಮಾದ ಟಿಕೆಟ್ ಬೆಲೆ ದುಬಾರಿ ಆಗಿತ್ತು. ಆದರೆ ಈಗ ಟಿಕೆಟ್ ಬೆಲೆ ಕಡಿಮೆ ಮಾಡಲಾಗಿದೆ. ಆಯ್ದ ಕೆಲವು ಚಿತ್ರಮಂದಿರಗಳಲ್ಲಿ ಈಗ ಕೇವಲ 199…

Read More

ಹರಿದ್ವಾರದ ಘಾಟ್‌ಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧವೇ? – Kannada News | Uttarakhand government plans to ban non Hindus entering 105 ghats in Haridwar

ನವದೆಹಲಿ, ಜನವರಿ 6: 2027ರಲ್ಲಿ ನಡೆಯುವ ಅರ್ಧ ಕುಂಭಮೇಳವನ್ನು ಗಮನದಲ್ಲಿಟ್ಟುಕೊಂಡು ಉತ್ತರಾಖಂಡ ಸರ್ಕಾರವು ಹರಿದ್ವಾರದ (Haridwar) ಗಂಗಾ ಘಾಟ್‌ಗಳಲ್ಲಿ ಹಿಂದೂಯೇತರರ ಪ್ರವೇಶದ ಕುರಿತು ಕಠಿಣ ನಿಯಮಗಳನ್ನು ಜಾರಿಗೆ ತರುವ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿದೆ. ಹರಿದ್ವಾರದಲ್ಲಿ ಸುಮಾರು 120 ಚದರ ಕಿಲೋಮೀಟರ್ ಪ್ರದೇಶದಲ್ಲಿ ಹರಡಿರುವ 105 ಘಾಟ್‌ಗಳಲ್ಲಿ ಹಿಂದೂಯೇತರರಿಗೆ ಪ್ರವೇಶ ನಿಷೇಧವನ್ನು ಪರಿಗಣಿಸಲಾಗುತ್ತಿದೆ. ಇತ್ತೀಚೆಗೆ, ಶ್ರೀ ಗಂಗಾ ಸಭೆಗೆ ಸಂಬಂಧಿಸಿದ ಕೆಲವು ಅಧಿಕಾರಿಗಳು ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಬೇಡಿಕೆಗಳನ್ನು ಸಲ್ಲಿಸಿದ್ದರು. 2027ರಲ್ಲಿ ನಡೆಯುವ ಅರ್ಧ ಕುಂಭಮೇಳದೊಂದಿಗೆ ಹರಿದ್ವಾರದ…

Read More

ಪೈರಸಿ ತಡೆಯಲು ದಿಟ್ಟ ಹೆಜ್ಜೆ ಇಟ್ಟ ತೆಲುಗು ಚಿತ್ರರಂಗ – Kannada News | Tollywood signed memorandum with police to stop piracy

ತೆಲುಗು ಚಿತ್ರರಂಗ (Tollywood), ಭಾರತದ ಚಿತ್ರರಂಗಗಳಲ್ಲಿಯೇ ಅತ್ಯಂತ ಲಾಭದಾಯಕ ಚಿತ್ರರಂಗವಾಗಿದೆ. ಭಾರತೀಯ ಚಿತ್ರರಂಗ ಎಂದರೆ ಬಾಲಿವುಡ್ ಎಂಬ ವಿದೇಶಿಗರ ನಂಬಿಕೆಯನ್ನು ಅಳಿಸಿ ಹಾಕಿದ ಶ್ರೇಯ ತೆಲುಗು ಚಿತ್ರರಂಗಕ್ಕೆ ಸಲ್ಲಬೇಕಿದೆ. ‘ಬಾಹುಬಲಿ’, ‘ಆರ್​ಆರ್​ಆರ್’ ಸೇರಿದಂತೆ ಇನ್ನೂ ಹಲವು ಸಿನಿಮಾಗಳ ಮೂಲಕ ವಿಶ್ವಮಟ್ಟದಲ್ಲಿ ತೆಲುಗು ಚಿತ್ರರಂಗ ಜನಪ್ರಿಯತೆ ಕಂಡಿದೆ. ದೊಡ್ಡ ಚಿತ್ರರಂಗಗಳಲ್ಲಿ ಅತಿ ಹೆಚ್ಚು ಯಶಸ್ವಿ ಸರಾಸರಿ ಹೊಂದಿರುವ ಚಿತ್ರರಂಗವೂ ತೆಲುಗು ಚಿತ್ರರಂಗವೇ ಆಗಿದೆ. ಆದರೆ ತೆಲುಗು ಚಿತ್ರರಂಗವನ್ನು ಪೈರಸಿ ಎಂಬುದು ದಶಕಗಳಿಂದಲೂ ಕಾಡುತ್ತಲೇ ಬಂದಿದೆ. ಆದರೆ ಇತ್ತೀಚೆಗೆ ಈ…

Read More

ಶ್ಯಾಂಪೂಗೆ ಈ ವಸ್ತುವನ್ನು ಬೆರೆಸಿ ಹಚ್ಚಿದರೆ ನಯವಾದ ರೇಷ್ಮೆಯಂತಹ ಕೂದಲು ನಿಮ್ಮದಾಗುತ್ತದೆ

ಹೊಳೆಯುವ ಸೊಂಪಾದ ಕೂದಲು (hair) ನಮ್ಮದಾಗಬೇಕೆಂದು ಪ್ರತಿಯೊಬ್ಬರೂ ಬಯಸುತ್ತಾರೆ. ಇದಕ್ಕಾಗಿ ದುಬಾರಿ ಶ್ಯಾಂಪೂ, ಕಂಡೀಷನರ್‌ಗಳನ್ನು ಹಚ್ಚಿಕೊಳ್ಳುತ್ತಾರೆ. ಹೊಳೆಯುವ ಕೂದಲಿಗಾಗಿ ಕೆರಾಟಿನ್‌ನಂತಹ ಚಿಕಿತ್ಸೆಗಳ ಮೊರೆ ಹೋಗ್ತಾರೆ. ಆದ್ರೆ ಇದರಿಂದ ಯಾವುದೇ ಹೆಚ್ಚಿನ ಫಲಿತಾಂಶಗಳು ದೊರೆಯುವುದಿಲ್ಲ ಬದಲಾಗಿ ಕೂದಲು ಉದುರುವ ಸಮಸ್ಯೆ ಇನ್ನಷ್ಟು ಹೆಚ್ಚಾಗುತ್ತಾರೆ. ಹೀಗಿರುವಾಗ ಶ್ಯಾಂಪೂ ಜೊತೆ ಗ್ಲಿಸರಿನ್‌ ಸೇರಿಸಿ ಕೂದಲಿಗೆ ಹಚ್ಚಿ, ಇದು ಕೂದಲನ್ನು ರೇಷ್ಮೆಯ ಹಾಗೆ ಹೊಳೆಯುವಂತೆ ಮಾಡುವುದಲ್ಲದೆ ಕೂದಲು ಉದುರುವಿಕೆ, ತಲೆಹೊಟ್ಟು ಸಮಸ್ಯೆಗಳನ್ನು ಸಹ ನಿವಾರಿಸುತ್ತದೆ. ಹಾಗಿದ್ರೆ ಕೂದಲಿನ ಆರೈಕೆಗೆ ಗ್ಲಿಸರಿನ್‌ ಅನ್ನು ಹೇಗೆ…

Read More