‘ಜನ ನಾಯಗನ್’ ರಿಲೀಸ್​ಗೆ ಸಂಕಷ್ಟ? ಇನ್ನೂ ಸಿಕ್ಕಿಲ್ಲ ಸೆನ್ಸಾರ್ ಪತ್ರ – Kannada News | Jana Nayagan Movie Team in Trouble Censor Certificate not issued amid Release Preparation

ದೊಡ್ಡ ದೊಡ್ಡ ಸಿನಿಮಾಗಳು ರಿಲೀಸ್ ಆಗುತ್ತವೆ ಎಂದಾಗ ಅದಕ್ಕೆ ಸಾಕಷ್ಟು ಅಡೆತಡೆಗಳು ಎದುರಾಗುತ್ತವೆ. ಈ ರೀತಿ ಆಗಬಾರದು ಎಂಬ ಕಾರಣದಿಂದ ನಿರ್ಮಾಪಕರು ಈ ಬಗ್ಗೆ ಹೆಚ್ಚು ಜಾಗೃತಿವಹಿಸುತ್ತಾರೆ. ಸೆನ್ಸಾರ್ ಪ್ರಕ್ರಿಯೆಯನ್ನು ಬೇಗ ಪೂರ್ಣಗೊಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ‘ಜನ ನಾಯಗನ್’ ಸಿನಿಮಾ (Jana Nayagan Movie) ಕೂಡ ಇದೇ ಕೆಲಸ ಮಾಡಿತ್ತು. ಆದರೆ, ಸೆನ್ಸಾರ್ ಮಂಡಳಿಯವರು ಸಿನಿಮಾ ನೋಡಿ ತಿಂಗಳಾದರೂ ಸೆನ್ಸಾರ್ ಪತ್ರ ಸಿಕ್ಕಿಲ್ಲ. ಸಿನಿಮಾ ರಿಲೀಸ್​​ಗೆ ಮೂರು ದಿನ ಮಾತ್ರ ಬಾಕಿ ಉಳಿದಿದೆ. ಇದು ತಂಡದ ಚಿಂತೆಗೆ ಕಾರಣ…

Read More

Video: ಶಿಲ್ಲಾಂಗ್ ಬೀದಿಯಲ್ಲಿ ಖುಷಿಯಿಂದ ಕುಣಿದ ವಿದೇಶಿ ಯುವತಿ, ಸ್ಥಳೀಯರ ಕಾಳಜಿಗೊಂದು ಸಲಾಂ – Kannada News | Shillong Street Moment Goes Viral as Locals Safeguard Dancing Tourist

ಶಿಲ್ಲಾಂಗ್, ಜನವರಿ 06: ವಿದೇಶಿ ಹೆಣ್ಣುಮಕ್ಕಳೆಂದರೆ ಸಾಕು ಕೆಟ್ಟ ದೃಷ್ಟಿಯಿಂದ ನೋಡುವ ಸಾಕಷ್ಟು ಜನರಿದ್ದಾರೆ. ಆದರೆ ಶಿಲ್ಲಾಂಗ್​ನ ಜನತೆ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ ಆಗಿದ್ದಾರೆ. ಶಿಲ್ಲಾಂಗನ ಬೀದಿಯಲ್ಲಿ  ವಿದೇಶಿ ಯುವತಿ ಖುಷಿಯಿಂದ ಕುಣಿದಿದ್ದಾಳೆ, ಆದರೆ ಸ್ಥಳೀಯರು ಯಾರೂ ಕೂಡ ಆಕೆಯನ್ನು ಕೆಟ್ಟದಾಗಿ ನೋಡುವುದು ಹಾಗಿರಲಿ, ಆಕೆಯ ಹತ್ತಿರ ಸುಳಿಯಲು ಕೂಡ ಯಾರಿಗೂ ಬಿಡದೆ ಆಕೆಯನ್ನು ರಕ್ಷಣೆ ಮಾಡಿರುವ ವಿಡಿಯೋ ಎಲ್ಲರ ಹೃದಯ ಗೆದ್ದಿದೆ. ಹೊಸ ವರ್ಷದ ಆಚರಣೆ ಸಂದರ್ಭದಲ್ಲಿ ವಿದೇಶಿ ಯುವತಿಯೊಬ್ಬರು ಶಿಲ್ಲಾಂಗ್​ನ ಬೀದಿಯಲ್ಲಿ ನೃತ್ಯ…

Read More

ಇರಾನ್ ಆರ್ಥಿಕತೆ ಪಾತಾಳಕ್ಕೆ, ನಿರುದ್ಯೋಗ, ಹಣದುಬ್ಬರದಿಂದ ಬೇಸತ್ತು ಬೀದಿಗಿಳಿದ ಜನ, ಪ್ರತಿಭಟನೆಯಲ್ಲಿ 35 ಮಂದಿ ಸಾವು – Kannada News | Iran Sees Deadly Unrest Amid Economic Protests India Advises Citizens to Stay Alert

ಇರಾನ್, ಜನವರಿ 06: ಇರಾನ್​(Iran)ನ ರಾಜಧಾನಿ ಟೆಹ್ರಾನ್​ನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಹಿಂಸಾಚಾರ ತೀವ್ರ ಸ್ವರೂಪವನ್ನು ಪಡೆದಿದ್ದು ಇಲ್ಲಿಯವರೆಗೆ 35ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 1,200 ಮಂದಿಯನ್ನು ಬಂಧಿಸಲಾಗಿದೆ. ಕೇವಲ ನಗರ ಮಾತ್ರವಲ್ಲ ಹಳ್ಳಿಯ ಜನರು ಕೂಡ ಬೀದಿಗಿಳಿದಿದ್ದಾರೆ.ಡಿಸೆಂಬರ್ ಅಂತ್ಯದಲ್ಲಿ ಪ್ರಾರಂಭವಾದ ಪ್ರತಿಭಟನೆಗಳು ಈಗ ದೊಡ್ಡ ಪ್ರಮಾಣದಲ್ಲಿ ಉಲ್ಬಣಗೊಂಡಿವೆ. ಹದಗೆಡುತ್ತಿರುವ ಆರ್ಥಿಕತೆ, ಹಣದುಬ್ಬರ ಮತ್ತು ನಿರುದ್ಯೋಗ ಸಮಸ್ಯೆ ದೇಶದಲ್ಲಿ ತಾಂಡವವಾಡುತ್ತಿದ್ದು, ಆಯತೊಲ್ಲಾ ಅಲಿ ಖಮೇನಿ ವಿರುದ್ಧ ಜನರು ಬೀದಿಗಿಳಿದಿದ್ದಾರೆ. ಬೀದಿಗಿಳಿಯುತ್ತಿರುವ ಸಾರ್ವಜನಿಕರು ಸರ್ವಾಧಿಕಾರ ವಿರೋಧಿ ಘೋಷಣೆಗಳನ್ನು ಕೂಗುತ್ತಿದ್ದಾರೆ,…

Read More

ಕೈ ಮುರಿದು, ಕಣ್ಣಿಗೆ ಚಾಕು ಇರಿದ ಪತ್ನಿ: ಪೊಲೀಸ್​​ ಠಾಣೆಗೆ ಓಡೋಡಿ ಬಂದ ರೌಡಿಶೀಟರ್​​ – Kannada News | Notorious Rowdy Syed Asgar Attacked by Wife: Hand Broken, Eye Stabbed in Bengaluru

ರೌಡಿಶೀಟರ್​​ ಮೇಲೆ ಪತ್ನಿಯಿಂದ ಹಲ್ಲೆ ಬೆಂಗಳೂರು, ಜನವರಿ 06: ಖಾಕಿ ಭಯವಿಲ್ಲದೆ ರೌಡಿಶೀಟರ್​​ಗಳು ಮೇಲಿಂದ ಮೇಲೆ ಅಟ್ಟಹಾಸ ಮೆರೆಯೋದನ್ನು ನಾವು ನೋಡಿದ್ದೇವೆ, ಕೇಳಿದ್ದೇವೆ. ಜೈಲಿಗೆ ಹೋಗಿ ಶಿಕ್ಷೆ ಅನುಭವಿಸಿ ಬಂದರೂ ಕೆಲವರು ಮಾತ್ರ ಬುದ್ಧಿ ಕಲಿಯಲ್ಲ. ಕಾರಾಗೃಹದಿಂದ ಹೊರಬಂದ ಬಳಿಕವೂ ಮತ್ತದೇ ತಮ್ಮ ಹಳೇ ಚಾಳಿ ಮುಂದುವರಿಸುತ್ತಾರೆ. ಕೆಲವೊಮ್ಮೆ ಪೊಲೀಸರ ಕಣ್ಣಿಗೂ ಯಾಮಾರಿಸಿ ಓಡಾಡಿಕೊಂಡು ಇರ್ತಾರೆ. ಇಂತಹುದ್ದೇ ಸಾಲಿಗೆ ಸೇರುವ ರೌಡಿಶೀಟರ್​​ ಸೈಯದ್ ಅಸ್ಗರ್ ಈಗ ತಾನಾಗಿಯೇ ಪೊಲೀಸರ ಬಳಿ ಓಡೋಡಿ ಬಂದಿದ್ದಾನೆ. ಇದಕ್ಕೆಲ್ಲ ಕಾರಣ ಆತನ…

Read More

Kumkumarchana: ಕುಂಕುಮಾರ್ಚನೆಯನ್ನು ಮಹಿಳೆಯರು ಮಾಡಿಸಬಹುದಾ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Kumkumarchana: Who Can Perform This Devotional Practice and Its Benefits

ಕುಂಕುಮಾರ್ಚನೆಯ ಮಹತ್ವ ಮತ್ತು ಅದನ್ನು ಯಾರು ಆಚರಿಸಬಹುದು ಎಂಬ ಕುರಿತು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ದೇವಸ್ಥಾನಗಳಲ್ಲಿ, ಮನೆಯಲ್ಲಿ ದೇವಿಗೆ ಕುಂಕುಮಾರ್ಚನೆ ಮಾಡಿಸುವುದು ಸಾಮಾನ್ಯ. ಆದರೆ ಈ ಪೂಜಾ ವಿಧಿಯನ್ನು ವಯಸ್ಸಾದವರು, ದೇವ ಭಕ್ತಿ ಇರುವವರು ಅಥವಾ ಆಧ್ಯಾತ್ಮಿಕ ಕ್ಷೇತ್ರದಲ್ಲಿ ಇರುವವರು ಮಾತ್ರ ಮಾಡಬೇಕೇ ಎಂಬ ಪ್ರಶ್ನೆ ಹಲವರಲ್ಲಿದೆ. ಇದಕ್ಕೆ ಗುರೂಜಿಯವರು ‘ಕುಂಕುಮಾರ್ಚನೆಯನ್ನು ಎಲ್ಲರೂ ಮಾಡಿಸಬಹುದು’ ಎಂದು ಸ್ಪಷ್ಟ ಉತ್ತರವನ್ನು ನೀಡಿದ್ದಾರೆ. ವಿದ್ಯಾರ್ಥಿಗಳು, ವ್ಯಾಪಾರಸ್ಥರು,…

Read More

IPL 2026: ಬಾಂಗ್ಲಾದೇಶ್​ನಲ್ಲಿ ಐಪಿಎಲ್ ಬ್ಯಾನ್: ಮುಂದೇನು?

ಬಾಂಗ್ಲಾದೇಶ್ ಸರ್ಕಾರವು ಇಂಡಿಯನ್ ಪ್ರೀಮಿಯರ್ ಲೀಗ್ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳ ಪ್ರಸಾರವನ್ನು ಅನಿರ್ದಿಷ್ಟಾವಧಿಗೆ ನಿಷೇಧಿಸಿದೆ. ಐಪಿಎಲ್​ನಿಂದ ಬಾಂಗ್ಲಾ ಆಟಗಾರ ಮುಸ್ತಫಿಝುರ್ ರೆಹಮಾನ್ ಅವರನ್ನು ಹೊರಗಿಟ್ಟ ಬೆನ್ನಲ್ಲೇ ಬಾಂಗ್ಲಾದೇಶ್ ತನ್ನ ದೇಶದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ರಸಾರಕ್ಕೆ ನಿಷೇಧ ಹೇರಿದೆ. ಇದಕ್ಕೂ ಮುನ್ನವೇ ಬಾಂಗ್ಲಾದೇಶ್​​ನ ಕ್ರೀಡಾ ಸಚಿವಾಲಯದ ಉಸ್ತುವಾರಿ ಸಚಿವ ಆಸಿಫ್ ನಜ್ರುಲ್ ಬಾಂಗ್ಲಾದಲ್ಲಿ ಐಪಿಎಲ್ ಬ್ಯಾನ್ ಮಾಡುವ ಸೂಚನೆ ನೀಡಿದ್ದರು.  ಬಾಂಗ್ಲಾದೇಶ್ ಆಟಗಾರನಿಗೆ ಮಾಡಲಾದ ಅವಮಾನಕ್ಕೆ ಪ್ರತೀಕಾರವಾಗಿ ನಮ್ಮ ದೇಶದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನ ಪಂದ್ಯಗಳ ಪ್ರಸಾರವನ್ನು ನಿಲ್ಲಿಸುವಂತೆ ನಾನು ಮಾಹಿತಿ ಮತ್ತು ಪ್ರಸಾರ ಸಚಿವರನ್ನು ವಿನಂತಿಸಿದ್ದೇನೆ…

Read More

Suresh Kalmadi Death: ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್​ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ ನಿಧನ – Kannada News | Former union minister, Senior Congress Leader Suresh Kalmadi Passes Away at 81 in Pune

ನವದೆಹಲಿ, ಜನವರಿ 06: ಕೇಂದ್ರದ ಮಾಜಿಸ ಚಿವ, ಕಾಂಗ್ರೆಸ್​​ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ(Suresh Kalmadi) ನಿಧನರಾಗಿದ್ದಾರೆ. ಸುರೇಶ್ ಕಲ್ಮಾಡಿ ದೀರ್ಘಕಾಲದ ಅನಾರೋಗ್ಯದಿಂದ ಮಂಗಳವಾರ ಪುಣೆಯ ದೀನನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಪಾರ್ಥಿವ ಶರೀರವನ್ನು ಪುಣೆಯ ಎರಾಂಡ್‌ವಾನೆಯಲ್ಲಿರುವ ಕಲ್ಮಾಡಿ ಹೌಸ್‌ನಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಇರಿಸಲಾಗುವುದು. ಮಧ್ಯಾಹ್ನ 3.30 ಕ್ಕೆ ವೈಕುಂಠ ಸ್ಮಶಾನಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಅವರು ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ ಮಾಜಿ ಅಧ್ಯಕ್ಷರಾಗಿದ್ದರು.ಕಳೆದ ಕೆಲವು ದಿನಗಳಿಂದ ಆರೋಗ್ಯ…

Read More

ಅಬ್ಬರ ಸಿಡಿಲಬ್ಬರ… ಟ್ರಾವಿಸ್ ಹೆಡ್​ ಬ್ಯಾಟ್​ನಿಂದ ದಾಖಲೆಯ ಸೆಂಚುರಿ – Kannada News | Travis Head record Breaking Century in Ashes 2026

ಆ್ಯಶಸ್ ಸರಣಿಯಲ್ಲಿ ಟ್ರಾವಿಸ್ ಹೆಡ್ (Travis Head) ಸಿಡಿಲಬ್ಬರ ಮುಂದುವರೆದಿದೆ. ಸಿಡ್ನಿ ಕ್ರಿಕೆಟ್​ ಗ್ರೌಂಡ್​ನಲ್ಲಿ ನಡೆಯುತ್ತಿರುವ ಈ ಸರಣಿಯ 5ನೇ ಪಂದ್ಯದಲ್ಲೂ ಹೆಡ್ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಅದು ಕೂಡ ಅತೀ ವೇಗದಲ್ಲಿ ಎಂಬುದು ವಿಶೇಷ. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 384 ರನ್​ ಕಲೆಹಾಕಿದ್ದರು. Source link

Read More

Dharwad: ಶಾರ್ಟ್​​ ಸರ್ಕ್ಯೂಟ್​ನಿಂದ ಬೆಂಕಿ; ಮೂರು ಅಂಗಡಿಗಳು ಅಗ್ನಿಗಾಹುತಿ – Kannada News | Three Shops Catch Fire After Short Circuit in Malabaddi Layout, Dharwad

ಧಾರವಾಡ, ಜನವರಿ 06: ಶಾರ್ಟ್​​ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂರು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ಧಾರವಾಡ ನಗರದ ಮಾಳಮಡ್ಡಿ ಬಡಾವಣೆಯಲ್ಲಿ ನಡೆದಿದೆ. ಹಣ್ಣಿನ ಅಂಗಡಿ ಸೇರಿ ಎರಡು ಅಂಗಡಿಗಳು ನಿರ್ನಾಮವಾಗಿದ್ದು, ಬೆಂಕಿ ಕಂಡು ಸ್ಥಳೀಯರು ಅದನ್ನು ಆರಿಸುವ ಯತ್ನ ಮಾಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿದ್ದು, ದೊಡ್ದ ಅನಾಹುತ ತಪ್ಪಿದೆ. ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source…

Read More

ಎದುರಾಳಿಯಾಗಿ ಗಿಲ್ಲಿನ ಆಯ್ಕೆ ಮಾಡಿದ ಧ್ರುವಂತ್; ಗೆದ್ದಿದ್ದು ಯಾರು?

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಧ್ರುವಂತ್ ಹಾಗೂ ಗಿಲ್ಲಿ ಮಧ್ಯೆ ಟಾಸ್ಕ್ ನಡೆದಿದೆ. ಸ್ವತಃ ಧ್ರುವಂತ್ ಅವರು ಗಿಲ್ಲಿಯನ್ನು ಎದುರಾಳಿಯಾಗಿ ಆಯ್ಕೆ ಮಾಡಿಕೊಂಡರು. ಈ ವೇಳೆ ಕಠಿಣ ಟಾಸ್ಕ್ ಒಂದನ್ನು ಬಿಗ್ ಬಾಸ್ ನೀಡಿದರು. ಈ ಟಾಸ್ಕ್ ಅಲ್ಲಿ ಗಿಲ್ಲಿ ಅವರು ಸೋತಿದ್ದಾರೆ ಎನ್ನಲಾಗಿದೆ. ಧ್ರುವಂತ್ ಅವರು ಗೆಲುವು ಕಂಡಿದ್ದಾರೆ. ಟಾಪ್ 6ಗೆ ಆಯ್ಕೆ ಆಗೋಕೆ ಆಡುತ್ತಿರುವ ಟಾಸ್ಕ್ ಇದಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More