Category Archives: Blog

Your blog category

Samudrika Shastra: ದೇಹದ ಈ ಭಾಗದಲ್ಲಿ ಮಚ್ಚೆ ಇರುವವರಿಗೆ ಹಣಕ್ಕೆಂದೂ ಕೊರತೆಯಾಗದು! – Kannada News | Stomach Birthmark Meaning: Unveiling Destiny and Personality by Samudrika Shastra

ಪ್ರತಿಯೊಬ್ಬ ಮನುಷ್ಯನ ದೇಹದಲ್ಲೂ ಯಾವುದಾದರೂ ಒಂದು ಭಾಗದಲ್ಲಿ ಹುಟ್ಟುಮಚ್ಚೆ ಇರುವುದು ಸಹಜ. ಸಾಮಾನ್ಯವಾಗಿ ನಾವು ಇದನ್ನು ಅಷ್ಟಾಗಿ ಗಮನಿಸುವುದಿಲ್ಲ, ಆದರೆ ಸಾಮುದ್ರಿಕ ಶಾಸ್ತ್ರದ ಪ್ರಕಾರ ದೇಹದ ವಿವಿಧ ಭಾಗಗಳಲ್ಲಿ ಇರುವ ಹುಟ್ಟುಮಚ್ಚೆಗಳು ವ್ಯಕ್ತಿಯ ವ್ಯಕ್ತಿತ್ವ, ಅದೃಷ್ಟ ಮತ್ತು ಜೀವನದ ಹಾದಿಯನ್ನು ಸೂಚಿಸುತ್ತವೆ ಎಂದು ನಂಬಲಾಗಿದೆ. ದೇಹದ ಮೇಲಿನ ಮಚ್ಚೆಗಳು ವ್ಯಕ್ತಿಯ ವ್ಯಕ್ತಿತ್ವವನ್ನು ಬಹಿರಂಗಪಡಿಸುತ್ತವೆ ಎಂದು ಹೇಳಲಾಗುತ್ತದೆ.

ಸಾಮುದ್ರಿಕ ಶಾಸ್ತ್ರದ ಪ್ರಕಾರ ಹೊಟ್ಟೆಯ ಮೇಲೆ ಇರುವ ಹುಟ್ಟುಮಚ್ಚೆ ಪುರುಷರು ಮತ್ತು ಮಹಿಳೆಯರ ಜೀವನದಲ್ಲಿ ವಿಭಿನ್ನ ರೀತಿಯ ಪರಿಣಾಮಗಳನ್ನು ಉಂಟುಮಾಡುತ್ತದೆ. ಪುರುಷರ ಹೊಟ್ಟೆಯ ಮೇಲೆ ಹುಟ್ಟುಮಚ್ಚೆ ಇದ್ದರೆ ಅವರು ತಮ್ಮ ವೃತ್ತಿಜೀವನದಲ್ಲಿ ಉತ್ತಮ ಯಶಸ್ಸನ್ನು ಸಾಧಿಸುತ್ತಾರೆ ಮತ್ತು ಸಾಮಾನ್ಯವಾಗಿ ಆರ್ಥಿಕ ಕೊರತೆಯನ್ನು ಅನುಭವಿಸುವುದಿಲ್ಲ ಎಂದು ಹೇಳಲಾಗುತ್ತದೆ. ಅದೇ ರೀತಿ ಮಹಿಳೆಯರ ಹೊಟ್ಟೆಯ ಮೇಲೆ ಹುಟ್ಟುಮಚ್ಚೆ ಇದ್ದರೆ ಅವರು ಸಂತೋಷದ ವೈವಾಹಿಕ ಜೀವನ, ಕುಟುಂಬ ಸುಖ ಹಾಗೂ ಮಕ್ಕಳ ಸಂತೋಷವನ್ನು ಅನುಭವಿಸುವ ಅದೃಷ್ಟವನ್ನು ಹೊಂದಿರುತ್ತಾರೆ ಎಂಬ ನಂಬಿಕೆ ಇದೆ.

ಹೊಟ್ಟೆಯ ಎಡಭಾಗದಲ್ಲಿ ಹುಟ್ಟುಮಚ್ಚೆ ಇರುವವರನ್ನು ಸಾಮುದ್ರಿಕ ಶಾಸ್ತ್ರದಲ್ಲಿ ಅದೃಷ್ಟವಂತರೆಂದು ಪರಿಗಣಿಸಲಾಗುತ್ತದೆ. ಇಂತಹವರು ಸ್ಪಷ್ಟ ಗುರಿಗಳನ್ನು ಹೊಂದಿದ್ದು ಅವುಗಳನ್ನು ಸಾಧಿಸುವ ದೃಢಸಂಕಲ್ಪದಿಂದ ಮುಂದುವರೆಯುತ್ತಾರೆ. ವೃತ್ತಿಜೀವನ ಸೇರಿದಂತೆ ಜೀವನದ ಹಲವಾರು ಕ್ಷೇತ್ರಗಳಲ್ಲಿ ಅವರಿಗೆ ಯಶಸ್ಸು ದೊರೆಯುತ್ತದೆ ಮತ್ತು ಹಣಕಾಸಿನ ಸಮಸ್ಯೆಗಳು ಸಾಮಾನ್ಯವಾಗಿ ಎದುರಾಗುವುದಿಲ್ಲ. ಇವರ ವ್ಯಕ್ತಿತ್ವ ಇತರರ ಮೇಲೆ ಪ್ರಭಾವ ಬೀರುವುದರ ಜೊತೆಗೆ ಪ್ರೇಮ ಜೀವನವೂ ಬಹುಶಃ ಸಂತೋಷಕರವಾಗಿರುತ್ತದೆ.

ಇದನ್ನೂ ಓದಿ: ಮನೆಯಲ್ಲಿ ತಪ್ಪಿಯೂ ಈ ಜಾಗದಲ್ಲಿ ಹಣ ಇಡಬೇಡಿ, ಸಾಲ ಹೆಚ್ಚಾಗಬಹುದು

ಆದರೆ ಕೆಲವು ಅಭಿಪ್ರಾಯಗಳ ಪ್ರಕಾರ, ಹೊಟ್ಟೆಯ ಎಡಭಾಗದಲ್ಲಿ ಮಚ್ಚೆ ಇರುವವರು ಜೀವನದಲ್ಲಿ ಆರಂಭದಲ್ಲಿ ಅನೇಕ ಸವಾಲುಗಳು ಮತ್ತು ಅಡೆತಡೆಗಳನ್ನು ಎದುರಿಸಬಹುದು. ಗುರಿಗಳನ್ನು ಸಾಧಿಸುವಲ್ಲಿ ಕಷ್ಟ ಅನುಭವಿಸಿದರೂ, ಪರಿಶ್ರಮ ಮತ್ತು ಸಹನೆಯ ನಂತರ ಅದೃಷ್ಟ ಅವರ ಪರವಾಗುತ್ತದೆ ಎಂದು ಹೇಳಲಾಗುತ್ತದೆ. ಇಂತಹವರು ಮಾತನಾಡುವ ಸ್ವಭಾವ ಹೊಂದಿದ್ದು ಬಹು ಗುಣಗಳು ಹಾಗೂ ವಿಭಿನ್ನ ಪ್ರತಿಭೆಗಳನ್ನು ಹೊಂದಿರುತ್ತಾರೆ.

ಇದಲ್ಲದೆ, ಹೊಟ್ಟೆಯ ಮೇಲಿನ ಹುಟ್ಟುಮಚ್ಚೆಗಳು ಕೆಲವೊಮ್ಮೆ ದುರ್ಬಲ ಜೀರ್ಣಾಂಗ ವ್ಯವಸ್ಥೆಯ ಸೂಚಕವಾಗಿರಬಹುದು ಎಂದು ಸಾಮುದ್ರಿಕ ಶಾಸ್ತ್ರ ಹೇಳುತ್ತದೆ. ಇಂತಹವರು ಸಾಮಾನ್ಯವಾಗಿ ಆಹಾರಪ್ರಿಯರಾಗಿದ್ದು ರುಚಿಕರವಾದ ಆಹಾರಗಳತ್ತ ಹೆಚ್ಚು ಆಕರ್ಷಿತರಾಗಿರುತ್ತಾರೆ ಎಂಬ ನಂಬಿಕೆಯೂ ಇದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Tumakuru: ಸೊಸೆ ಕಾಟಕ್ಕೆ ಅತ್ತೆ ಆತ್ಮಹತ್ಯೆ? ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ – Kannada News | Mother in Law Dies by Suicide; Daughter in Law Accused of Harassment in Tumakuru

ತುಮಕೂರು, ಜನವರಿ 08: ಅತ್ತೆ ಕಾಟಕ್ಕೆ ಸೊಸೆ ಮನೆಬಿಟ್ಟು ಹೋಗೋದು, ಗಂಡನಿಂದಲೇ ದೂರವಾಗೋ ಘಟನೆಗಳು ಮಾಮೂಲಾಗಿ ನಡೆಯುತ್ತಲೇ ಇರುತ್ತವೆ. ಆದ್ರೆ ಕಲ್ಪತರು ನಾಡು ತುಮಕೂರಲ್ಲಿ ಈ ಕೇಸ್​ ಉಲ್ಟಾ ಆಗಿದೆ. ಸೊಸೆ ಕಾಟಕ್ಕೆ ಬೇಸೆತ್ತು ಅತ್ತೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಗುಬ್ಬಿ ತಾಲೂಕಿನ ಕಾರೇಕುರ್ಚಿ ಗ್ರಾಮದಲ್ಲಿ ಘಟನೆ ನಡೆದಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಭ್ರಮರಾಂಬಿಕೆ (60) ಶವ ಪತ್ತೆಯಾಗಿದೆ.

ಘಟನೆ ಏನು?

ಸೊಸೆ ಕಾವ್ಯಶ್ರೀ ಪ್ರತ್ಯೇಕವಾಗಿ ಉಳಿಯಲು ಬಯಸಿದ್ದಳು. ಇದೇ ಕಾರಣಕ್ಕೆ ಅಡುಗೆ ಸೇರಿ ಎಲ್ಲವನ್ನೂ ಪ್ರತ್ಯೇಕವಾಗಿ ಮಾಡಿಕೊಳ್ಳುತ್ತಿದ್ದಳು. ಅಲ್ಲದೆ ಈ ನಡುವೆ ಗಂಡನನ್ನು ಬೆಂಗಳೂರಿಗೆ ಕರೆದೊಯ್ಯುವ ಬಗ್ಗೆಯೂ ಮಾತನಾಡುತ್ತಿದ್ದಳು. ಹೀಗಾಗಿ ಎಲ್ಲಿ ಮಗನನ್ನ ಸೊಸೆ ತನ್ನಿಂದ ದೂರ ಮಾಡ್ತಾಳೋ ಎನ್ನುವ ಭಯಕ್ಕೆ ಅತ್ತೆ ಭ್ರಮರಾಂಬಿಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ನಿನ್ನೆ ಬೆಳಗ್ಗೆ ಅನುಮಾನಾಸ್ಪದ ಸ್ಥಿತಿಯಲ್ಲಿ ಭ್ರಮರಾಂಬಿಕೆ ಶವ ಫಾರ್ಮ್​ಹೌಸ್​​ನಿಂದ 200 ಮೀಟರ್ ದೂರವಿರುವ ಪಂಪ್​ಹೌಸ್​​ನಲ್ಲಿ ಪತ್ತೆಯಾಗಿದೆ. ತಾಯಿ ನೇಣುಬಿಗಿದ ಸ್ಥಿಯಲ್ಲಿರೋದನ್ನು ಕಂಡ ಮಗ ಮನುಕುಮಾರ್ ಶವ ಕೆಳಗಿಳಿಸಿದ್ದ. ಬಳಿಕ ಚೇಳೂರು ಪೊಲೀಸರಿಗೆ ಮಾಹಿತಿ ನೀಡಿದ್ದ ಎನ್ನಲಾಗಿದೆ.

ಇದನ್ನೂ ಓದಿ: ಪತ್ನಿ ಮಗ ಇದ್ರೂ ತಂಗಿ ಜತೆ ಅಣ್ಣ ಸಂಸಾರ; ಅಣ್ಣ-ತಂಗಿ ಲವ್ವಿಡವ್ವಿ ಸಾವಿನಲ್ಲಿ ಅಂತ್ಯ!

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಘಟನೆ ಬಗ್ಗೆ ಆರಂಭದಲ್ಲಿ ಅನುಮಾನ ಟಪಟ್ಟಿದ್ದರು. ಮೃತ ಮಹಿಳೆಯ ಒಂದು ಕಣ್ಣಿನ ಗುಡ್ಡೆ ನಾಪತ್ತೆಯಾಗಿದ್ದ ಕಾರಣ, ಇದು ಕೊಲೆಯಾಗಿರಬಹುದೆಂಬ ಲೆಕ್ಕಾಚಾರ ಹಾಕಿದ್ದರು. ಆದರೆ ಈ ಬಗ್ಗೆ ಪರಿಶೀಲನೆ ನಡೆಸಿದಾಗ ಮಧ್ಯರಾತ್ರಿ 1.45ರ ಸುಮಾರಿಗೆ ಫಾರ್ಮ್​​ಹೌಸ್​​ನಿಂದ 200 ಮೀಟರ್ ದೂರದ ಪಂಪ್ ಹೌಸ್​ ಭ್ರಮರಾಂಬಿಕೆ ತಾವೇ ನಡೆದುಕೊಂಡುಬಂದು ಆತ್ಮಹತ್ಯೆಗೆ ಶರಣಾಗಿರೋದು ದೃಢಪಟ್ಟಿದೆ. ನೇಣು ಬಿಗಿದ ಸ್ಥಿತಿಯಲ್ಲಿದ್ದ ಶವ ಕೆಳಗಿಳಿಸುವಾಗ ಕಣ್ಣಿಗೆ ಗಾಯವಾದ ಸಂಗತಿ ಗೊತ್ತಾಗಿದೆ. ಆತ್ಮಹತ್ಯೆಗೆ ಪ್ರೇರಣೆ ನೀಡಿರುವ ಆರೋಪದಡಿ ಸೊಸೆ ಕಾವ್ಯಶ್ರೀ ವಿರುದ್ಧ ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕರ್ನಾಟಕದ ಕಾಫಿಗೆ ಯೂರೋಪ್​ನಲ್ಲಿ ಬಲು ಬೇಡಿಕೆ; 2025ರಲ್ಲಿ 2 ಬಿಲಿಯನ್ ಡಾಲರ್ ಮುಟ್ಟಿದ ಭಾರತದ ಒಟ್ಟಾರೆ ಕಾಫಿ ರಫ್ತು – Kannada News | Indian Coffee exports register new milestone of 2 billion USD, as Karnataka has most of country’s coffee production

ಬೆಂಗಳೂರು, ಜನವರಿ 8: ಭಾರತದ ಕಾಫಿ ರಫ್ತು (coffee exports) ಕಳೆದ ವರ್ಷ (2025) ಹೊಸ ಮೈಲಿಗಲ್ಲು ಮುಟ್ಟಿದೆ. ವರದಿಗಳ ಪ್ರಕಾರ 2025ರಲ್ಲಿ ಭಾರತದ ಒಟ್ಟೂ ಕಾಫಿ ರಫ್ತು ಎರಡು ಬಿಲಿಯನ್ ಡಾಲರ್ ಆಗಿದೆ. ಭಾರತದ ಕಾಫಿಗೆ ಜಾಗತಿಕವಾಗಿ ಬಹಳ ಬೇಡಿಕೆ ಇದೆ. ಶೇ. 15ರಷ್ಟು ಸಿಎಜಿಆರ್​ನಲ್ಲಿ ರಫ್ತು ಬೆಳೆಯುತ್ತಿದೆ. 2024-25ರಲ್ಲಿ ಭಾರತದಲ್ಲಿ ಉತ್ಪಾದನೆಯಾದ ಕಾಫಿ 3.6 ಲಕ್ಷ ಟನ್​ಗಳಷ್ಟಿದೆ. 2025-26ರಲ್ಲಿ ಇದು 4 ಲಕ್ಷ ಟನ್ ದಾಟುವ ನಿರೀಕ್ಷೆ ಇದೆ. ಅತಿ ಹೆಚ್ಚು ಕಾಫಿ ಉತ್ಪಾದಿಸುವ ದೇಶಗಳಲ್ಲಿ ಭಾರತ ಏಳನೇ ಸ್ಥಾನದಲ್ಲಿದೆ.

ಕಾಫಿಯಲ್ಲಿ ಅರೇಬಿಕಾ ಮತ್ತು ರೋಬಸ್ಟಾ ಎರಡು ವೈವಿಧ್ಯತೆಗಳಿವೆ. ರೋಬಸ್ಟಾ ಕಡಿಮೆ ಮೌಲ್ಯದದ್ದಾದರೂ ಕಹಿ ಮತ್ತು ಘಾಟು ಹೆಚ್ಚು. ಯೂರೋಪ್​ನಲ್ಲಿ ಈ ಕಾಫಿಗೆ ಬಹಳ ಬೇಡಿಕೆ ಇದೆ. ಭಾರತದ ಹೆಚ್ಚಿನ ರೋಬಸ್ಟಾ ಕಾಫಿ ಕರ್ನಾಟಕದಲ್ಲೇ ತಯಾರಾಗುವುದು. ಇಟಲಿ, ಜರ್ಮನಿ ಮುಂತಾದ ದೇಶಗಳಿಗೆ ಬಹಳ ರಫ್ತಾಗುತ್ತದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಗಾರ್ಮೆಂಟ್ಸ್ ಕಂಪನಿ ಶುರು ಮಾಡಿ ಕೆಲಸಗಾರರ ಆಟಕ್ಕೆ ಬೇಸ್ತು ಬಿದ್ದ ಆಸ್ಟ್ರೇಲಿಯನ್ ಉದ್ಯಮಿ

ಕಾಫಿಯಲ್ಲಿ ಕರ್ನಾಟಕವೇ ಕಿಂಗ್

ಇನ್ನು, ಅರೇಬಿಕಾ ತಳಿಯ ಕಾಫಿಯಲ್ಲಿ ಫ್ಲೇವರ್ ಕಡಿಮೆ. ಆದರೆ, ಇದಕ್ಕೆ ಹೆಚ್ಚಿನ ಮಾರುಕಟ್ಟೆ ಇದೆ. ಅದರಲ್ಲೂ ಪಶ್ಚಿಮ ಏಷ್ಯನ್ ಭಾಗಗಳಿಗೆ ಇದರ ರಫ್ತಾಗುತ್ತದೆ. ಕರ್ನಾಟಕದಲ್ಲಿ ಕೊಡಗು, ಚಿಕ್ಕಮಗಳೂರಿಲ್ಲಿರುವ ಕಾಫಿ ಎಸ್ಟೇಟ್​ಗಳಲ್ಲಿ ಅರೇಬಿಕಾ ಕಾಫಿ ಹೆಚ್ಚಾಗಿ ಬೆಳೆಯಲಾಗುತ್ತದೆ. ಕೇರಳದಲ್ಲಿ ಬಹುತೇಕ ಅರೇಬಿಕಾ ಕಾಫಿ ಬೆಳೆಯಲಾಗುತ್ತದೆ.

ಭಾರತದ ಒಟ್ಟಾರೆ ಕಾಫಿ ಉತ್ಪಾದನೆಯಲ್ಲಿ ಕರ್ನಾಟಕದ ಪಾಲು ಶೇ. 70ಕ್ಕೂ ಹೆಚ್ಚಿದೆ. ಕೇರಳದಲ್ಲಿ ಶೇ. 20ರಷ್ಟು ಕಾಫಿ ಬೆಳೆಯಲಾಗುತ್ತದೆ. ತಮಿಳುನಾಡಿನಲ್ಲಿ ಶೇ. 5ರಷ್ಟು ಕಾಫಿ ಉತ್ಪಾದನೆ ಇದೆ. ಭಾರತದ ಶೇ. 95ಕ್ಕೂ ಅಧಿಕ ಕಾಫಿಯನ್ನು ದಕ್ಷಿಣ ಭಾರತದಲ್ಲೇ ತಯಾರಿಸಲಾಗುತ್ತದೆ ಎಂಬುದು ವಿಶೇಷ. ಈಶಾನ್ಯ ರಾಜ್ಯಗಳು ಹಾಗೂ ಒಡಿಶಾದಲ್ಲಿ ಸೀಮಿತ ಪ್ರಮಾಣದಲ್ಲಿ ಕಾಫಿ ಬೆಳೆಯಲಾಗುತ್ತದೆ.

ಇದನ್ನೂ ಓದಿ: ಪಿಎಂ ಕಿಸಾನ್ ಸ್ಕೀಮ್- ರೈತರು ಇಕೆವೈಸಿ ಮಾಡಲು 3 ವಿಧಾನಗಳು

ಭಾರತದಲ್ಲಿ ಉತ್ಪಾದನೆಯಾಗುವ ಕಾಫಿಯಲ್ಲಿ ಶೇ. 70ರಷ್ಟನ್ನು ರಫ್ತು ಮಾಡಲಾಗುತ್ತದೆ. 2023-24ರಲ್ಲಿ 1.28 ಬಿಲಿಯನ್ ಡಾಲರ್​ನಷ್ಟು ಕಾಫಿ ರಫ್ತು ಮಾಡಲಾಗಿತ್ತು. 2024-25ರಲ್ಲಿ ಕಾಫಿ ರಫ್ತು ಮೌಲ್ಯ 1.81 ಬಿಲಿಯನ್ ಡಾಲರ್ ಇದೆ. 2025ರ ಕ್ಯಾಲಂಡರ್ ವರ್ಷದಲ್ಲಿ ಇದು 2 ಬಿಲಿಯನ್ ಡಾಲರ್ ಮುಟ್ಟಿದೆ. 2025-26ರ ವರ್ಷದಲ್ಲೂ ಕಾಫಿ ರಫ್ತು 2 ಬಿಲಿಯನ್ ಡಾಲರ್ ಮೈಲಿಗಲ್ಲು ಮುಟ್ಟುವ ನಿರೀಕ್ಷೆ ಇದೆ.

ಭಾರತ 50ಕ್ಕೂ ಅಧಿಕ ದೇಶಗಳಿಗೆ ಕಾಫಿ ರಫ್ತು ಮಾಡತ್ತದೆ. ಇಟಲಿ ದೇಶಕ್ಕೆ ಅತಿಹೆಚ್ಚು ರಫ್ತಾಗುತ್ತದೆ. ಕರ್ನಾಟಕದ ರೋಬಸ್ಟಾ ಕಾಫಿಗೆ ಯೂರೋಪ್ ಅತಿದೊಡ್ಡ ಮಾರುಕಟ್ಟೆಯಾಗಿದೆ. ಇಟಲಿ, ರಷ್ಯಾ, ಜರ್ಮನಿ, ಯುಎಇ, ಬೆಲ್ಜಿಯಂ, ಅಮೆರಿಕ, ಜಪಾನ್ ಮೊದಲಾದ ದೇಶಗಳು ಭಾರತದ ಕಾಫಿಯನ್ನು ಆಮದು ಮಾಡಿಕೊಳ್ಳುತ್ತವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ ಪ್ರಕರಣ: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು ನೋಡಿ! – Kannada News | Hubballi BJP Worker Assault Case: Home Minister G Parameshwara Backs Police Version, Asks BJP Not to Politicise Issue

ಬೆಂಗಳೂರು, ಜನವರಿ 8: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯ ಮೇಲೆ ಹಲ್ಲೆ ಹಾಗೂ ವಿವಸ್ತ್ರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಪ್ರಕರಣದ ಬಗ್ಗೆ ಹುಬ್ಬಳ್ಳಿ ಪೊಲೀಸ್ ಕಮಿಷನರ್ ಶಶಿಕುಮಾರ್ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ ಎಂದರು. ಒಬ್ಬ ಪೊಲೀಸ್ ಕಮಿಷನರ್ ಪ್ರಕರಣದ ಕುರಿತು ಅಧಿಕೃತವಾಗಿ ಹೇಳಿಕೆ ನೀಡಿದ ಬಳಿಕ ಇನ್ನೇನು ಅನುಮಾನಕ್ಕೆ ಅವಕಾಶ ಇದೆ? ಪೊಲೀಸರು ಆಕೆಯನ್ನು ವಿವಸ್ತ್ರ ಮಾಡಿಲ್ಲ. ಆಕೆಯೇ ಸ್ವಯಂವಾಗಿ ಬಟ್ಟೆ ತೆಗೆದುಕೊಂಡಿದ್ದಾಳೆ ಎಂದು ಕಮಿಷನರ್ ಹೇಳಿದ್ದಾರೆ ಎಂದು ಗೃಹ ಸಚಿವರು ತಿಳಿಸಿದರು.

ಈ ವಿಷಯದಲ್ಲಿ ಬಿಜೆಪಿಯವರು ಅನಗತ್ಯ ರಾಜಕೀಯ ಮಾಡಬಾರದು ಎಂದು ಪರಮೇಶ್ವರ್ ಹೇಳಿದರು. ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಯೇ ವಿವರವಾಗಿ ಸ್ಪಷ್ಟನೆ ನೀಡಿರುವಾಗ, ಮತ್ತೆ ಇದನ್ನು ರಾಜಕೀಯ ವಿಚಾರವನ್ನಾಗಿ ಮಾಡುವುದು ಸರಿಯಲ್ಲ. ಸತ್ಯ ಹೊರಬರಬೇಕು, ಆದರೆ ಅದನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಬಾರದು ಎಂದು ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಟಾಕ್ಸಿಕ್’ ಟೀಸರ್​​​ನಲ್ಲಿ ಮಾಸ್ ಹಾಗೂ ಹಸಿಬಿಸಿ ದೃಶ್ಯ; ಇಲ್ಲಿವೆ ಫೋಟೋಸ್ – Kannada News | Yash Starrer Toxic Movie Teaser Yash Look is So bold Teaser Is full of Bold scenes

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಮಾರ್ಚ್​ 19ರಂದು ತೆರೆಗೆ ಬರಲಿದೆ. ಇದಕ್ಕಾಗಿ ಅವರ ಫ್ಯಾನ್ಸ್ ಕಾಯುತ್ತಿದ್ದಾರೆ. ಯಶ್ ಜನ್ಮದಿನದ ಪ್ರಯುಕ್ತ ಇಂದು (ಏಪ್ರಿಲ್ 8) ಟೀಸರ್ ರಿಲೀಸ್ ಆಗಿದ್ದು, ಗಮನ ಸೆಳೆಯೋ ರೀತಿಯಲ್ಲಿ ಇದೆ.

‘ಟಾಕ್ಸಿಕ್’ ಸಿನಿಮಾದಲ್ಲಿ ವಿವಿಧ ರೀತಿಯ ಗನ್ ಬಳಕೆ ಆಗಿದೆ. ಇಲ್ಲಿ ಬಾಂಬ್ ಸಿಡಿಯುತ್ತೆ. ಯಶ್ ಅವರು ತಮ್ಮ ರಗಡ್ ಲುಕ್ ಮೂಲಕ ಮಿಂಚುತ್ತಾರೆ. ಈ ಟೀಸರ್ ನೋಡಿದ ಎಲ್ಲರೂ ವಿವಿಧ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.

ಯಶ್ ಅವರು ಶರ್ಟ್​​ಲೆಸ್ ಆಗಿ ಎಂಟ್ರಿ ಕೊಡುತ್ತಾರೆ. ಈ ಸಿನಿಮಾದಲ್ಲಿ ಅವರ ಪಾತ್ರದ ಹೆಸರು ರಾಯ. ಇದು ಪಕ್ಕಾ ಸ್ಥಳೀಯ ಹೆಸರು. ಸಿನಿಮಾ ಮೇಕಿಂಗ್ ಹಾಲಿವುಡ್ ಸ್ಟೈಲ್​​​​ನಲ್ಲಿ ಇದೆ ಎಂಬುದು ವಿಶೇಷ.

ಹಸಿಬಿಸಿ ದೃಶ್ಯಗಳು ಕೂಡ ಟೀಸರ್​​​ನಲ್ಲಿ ಇವೆ. ಹೀಗಾಗಿ, ಈ ಸಿನಿಮಾ ಎ ಸರ್ಟಿಫಿಕೆಟ್ ಪಡೆಯೋದು ಪಕ್ಕಾ ಎಂದು ಹೇಳಲಾಗುತ್ತಾ ಇದೆ. ಯಶ್ ಫ್ಯಾನ್ಸ್​​ಗೆ ಟೀಸರ್ ಇಷ್ಟ ಆಗಿದೆ.

ಯಶ್ ಅವರು ಸಖತ್ ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ. ಅವರು ಸಿಗಾರ್ ಸೇದುತ್ತಾ ಎಂಟ್ರಿ ಕೊಟ್ಟಿದ್​ದಾರೆ. ಈ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ. ‘ಧುರಂಧರ್ 2’ ಎದುರು ‘ಟಾಕ್ಸಿಕ್’ ತೆರೆಗೆ ಬರುತ್ತಿದೆ.

Published On – 11:12 am, Thu, 8 January 26

Source link

‘ಟಾಕ್ಸಿಕ್’ ಇದು ನಿಜಕ್ಕೂ ದೊಡ್ಡವರ ಕತೆ, ಸಣ್ಣವರಿಗಲ್ಲ – Kannada News | Yash’s Toxic movie is only for adults not for minors

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ಇಂದು (ಜನವರಿ 08) ಬಿಡುಗಡೆ ಆಗಿದೆ. ಭಾರತದ ಬಹು ನಿರೀಕ್ಷಿತ ಸಿನಿಮಾ ಎನಿಸಿಕೊಂಡಿರುವ ‘ಟಾಕ್ಸಿಕ್’ ಆ ನಿರೀಕ್ಷೆಗೆ ತಕ್ಕಂತೆ ಗುಣಮಟ್ಟದ ಮೇಕಿಂಗ್ ಉಳ್ಳ ಟೀಸರ್ ಅನ್ನೇ ಬಿಡುಗಡೆ ಮಾಡಿದೆ. ಯಶ್, ‘ಕೆಜಿಎಫ್’ ಸಿನಿಮಾಕ್ಕಿಂತಲೂ ಹೆಚ್ಚು ರಗಡ್ ಆಗಿ ಸಿನಿಮಾನಲ್ಲಿ ಕಾಣಿಸಿಕೊಂಡಿರುವುದು ಟೀಸರ್​​ನಿಂದಲೇ ತಿಳಿಯುತ್ತಿದೆ. ಸಿನಿಮಾವನ್ನು ಪಕ್ಕಾ ಹಾಲಿವುಡ್ ‘ಮಾನದಂಡ’ಗಳಿಗೆ ಅನುಗುಣವಾಗಿ ನಿರ್ಮಿಸಿರುವುದು ಟೀಸರ್​​ನಿಂದಲೇ ತಿಳಿಯುತ್ತಿದೆ. ಜೊತೆಗೆ ‘ಟಾಕ್ಸಿಕ್’ ಸಿನಿಮಾ ಪಕ್ಕಾ ‘ದೊಡ್ಡವರ’ ಸಿನಿಮಾ, ಈ ಸಿನಿಮಾ ಕಿರಿಯರಿಗಲ್ಲ ಎಂಬುದನ್ನು ಸಹ ಟೀಸರ್ ಸಾರಿ ಹೇಳುತ್ತಿದೆ.

ಈಗ ಬಿಡುಗಡೆ ಆಗಿರುವ ‘ಟಾಕ್ಸಿಕ್’ ಸಿನಿಮಾದ ಟೀಸರ್​​ನಲ್ಲಿಯೇ ಹಸಿ ಬಿಸಿ ದೃಶ್ಯವಿದೆ. ಯಶ್, ಸ್ಮಶಾನದ ಮುಂದೆ ಕಾರಿನಲ್ಲಿ ಯುವತಿಯೊಟ್ಟಿಗೆ ಲೈಂಗಿಕತೆಯಲ್ಲಿ ತೊಡಗಿರುವ ದೃಶ್ಯವಿದೆ. ಅದನ್ನು ಯಶ್ ಅವರ ರಾಯ ಪಾತ್ರದ ‘ಶಕ್ತಿ’ಯನ್ನು ತೋರ್ಪಡಿಸಲು ನಿರ್ದೇಶಕರು ಬಳಸಿದಂತಿದೆ. ಟೀಸರ್ ನೋಡಿದರೆ ‘ಟಾಕ್ಸಿಕ್’ ಸಿನಿಮಾಕ್ಕೆ ‘ಎ’ ಪ್ರಮಾಣ ಪತ್ರ ಸಿಗುವುದು ಪಕ್ಕಾ ಎನಿಸುತ್ತಿದೆ. ಈ ದೃಶ್ಯವೊಂದೇ ಅಲ್ಲದೆ ಕಳೆದ ವರ್ಷ ಯಶ್ ಹುಟ್ಟುಹಬ್ಬಕ್ಕೆ ಬಿಡುಗಡೆ ಆಗಿದ್ದ ಟೀಸರ್​​ನಲ್ಲಿಯೂ ಸಹ ಸಾಕಷ್ಟು ಹಸಿ-ಬಿಸಿ ದೃಶ್ಯಗಳಿದ್ದವು.

ಕಳೆದ ವರ್ಷ ಬಿಡುಗಡೆ ಆಗಿದ್ದ ಟೀಸರ್​​ನಲ್ಲಿ ಸಾಕಷ್ಟು ವಿದೇಶಿ ಯುವತಿಯರು ಅರೆನಗ್ನರಾಗಿ, ಮಾದಕ ನೃತ್ಯ ಮಾಡುತ್ತಿರುವ ದೃಶ್ಯಗಳು, ಮಾದಕ ವಸ್ತುವನ್ನು ಬಳಸುತ್ತಿರುವ ದೃಶ್ಯಗಳು, ಅಶ್ಲೀಲ ಸಜ್ಞೆಗಳನ್ನು ಮಾಡುತ್ತಿರುವ ದೃಶ್ಯಗಳನ್ನು ಒಳಗೊಂಡಿತ್ತು. ಇದನ್ನೆಲ್ಲ ನೋಡಿದರೆ ‘ಟಾಕ್ಸಿಕ್’ ಸಿನಿಮಾಕ್ಕೆ ಸಿಬಿಎಫ್​​ಸಿ ‘ಎ’ ಪ್ರಮಾಣ ಪತ್ರ ನೀಡುವುದು ಖಾತ್ರಿ ಎನ್ನಬಹುದು.

ಇದನ್ನೂ ಓದಿ:ಫ್ಯಾನ್ಸ್ ಭೇಟಿಯಾಗಲು ಸಾಧ್ಯವಾಗುತ್ತಿಲ್ಲ: ಹುಟ್ಟುಹಬ್ಬಕ್ಕೂ ಮುನ್ನ ಯಶ್ ಸಂದೇಶ

ಅಸಲಿಗೆ ಇದನ್ನು ಮೊದಲೇ ಊಹಿಸಿಯೇ ಚಿತ್ರತಂಡ ಹೆಜ್ಜೆ ಇಟ್ಟಿದೆ ಅನಿಸುತ್ತದೆ. ಇದೇ ಕಾರಣಕ್ಕೆ ‘ಟಾಕ್ಸಿಕ್’ ಸಿನಿಮಾದ ಅಡಿಬರಹದಲ್ಲೇ ಇದು ಮಕ್ಕಳಿಗೆ ಅಥವಾ ಅಪ್ತಾಪ್ತರಿಗಲ್ಲ ಎಂಬ ಸುಳಿವನ್ನು ಚಿತ್ರತಂಡ ನೀಡಿದೆ. ‘ಟಾಕ್ಸಿಕ್’ ಸಿನಿಮಾದ ಅಡಿಬರಹ ಅಥವಾ ಟ್ಯಾಗ್​ಲೈನ್ ‘ಎ ಫೇರಿ ಟೇಲ್ ಆಫ್ ಗ್ರೋನ್ ಅಪ್ಸ್’ (ಒಂದು ದೊಡ್ಡವರ ಕತೆ) ಎಂದಿದೆ. ಹಾಗಾಗಿ ಹೆಚ್ಚು ಹಸಿ-ಬಿಸಿ ದೃಶ್ಯಗಳನ್ನು ಚಿತ್ರೀಕರಿಸಿರುವುದು ಯೋಜಿತ ನಿರ್ಣಯವೇ ಆಗಿದೆ.

ಯಶ್ ತಮ್ಮ ಈ ವರೆಗಿನ ವೃತ್ತಿ ಜೀವನದಲ್ಲಿ ಹಸಿ-ಬಿಸಿ ದೃಶ್ಯಗಳಲ್ಲಿ ನಟಿಸಿದ್ದಿಲ್ಲ. ಆದರೆ ‘ಟಾಕ್ಸಿಕ್’ನಲ್ಲಿ ಮೊದಲ ಬಾರಿಗೆ ಇಂಥಹಾ ದೃಶ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇದನ್ನು ಯಶ್ ಅಭಿಮಾನಿಗಳು, ವಿಶೇಷವಾಗಿ ಅವರ ಮಹಿಳಾ ಅಭಿಮಾನಿಗಳು ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ಸಿನಿಮಾ ನಿರ್ದೇಶನ ಮಾಡಿರುವುದು ಗೀತು ಮೋಹನ್​​ದಾಸ್, ಬಂಡವಾಳ ಹೂಡಿರುವುದು ಕೆವಿಎನ್ ಮತ್ತು ಯಶ್ ಅವರ ಮಾನ್​ಸ್ಟರ್ ಮೈಂಡ್ಸ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 11:19 am, Thu, 8 January 26

Source link

ಬಳ್ಳಾರಿ ಗಲಭೆ: 30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು – Kannada News | Ballari Unrest: Congress, BJP Leaders Face Notices, Arrests; Cabinet to Discuss

ಬಳ್ಳಾರಿ, ಜ.8: ಬಳ್ಳಾರಿ ಗಲಭೆಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರಿಗೂ ನೊಟೀಸ್ ನೀಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 107 ಜನರಿಗೆ ನೊಟೀಸ್ ಕೊಟ್ಟಿದ್ದರು. ಅದರಲ್ಲಿ 30 ಕಾಂಗ್ರೆಸ್​​​ ಕಾರ್ಯಕರ್ತರು ಎಂದು ಹೇಳಲಾಗಿದೆ. ಇದೀಗ ಈ 107 ಮಂದಿಯಲ್ಲಿ ಬಹುತೇಕರು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ಗಲಭೆ ಸಂದರ್ಭದಲ್ಲಿ ಸೆರೆಯಾದ ವಿಡಿಯೋ ಆಧಾರಿಸಿ ಪೊಲೀಸರು ಇವರ ಬಂಧನಕ್ಕೆ ಬಲೆ ಬಿಸಿದ್ದಾರೆ. ಕಾಂಗ್ರೆಸ್​​ ಸರ್ಕಾರವೇ ಅಧಿಕಾರದಲ್ಲಿದ್ದರು ತಮ್ಮದೇ ಕಾರ್ಯಕರ್ತರಿಗೆ ನೋಟಿಸ್​​ ನೀಡಿರುವುದು ಅಚ್ಚರಿ ಮೂಡಿಸಿದೆ. ಬಿಜೆಪಿ ನಾಯಕರನ್ನು ಹಾಗೂ ಕಾರ್ಯಕರ್ತರನ್ನು ಮಾತ್ರ ಈ ಪ್ರಕರಣದಲ್ಲಿ ಟಾರ್ಗೆಟ್​​ ಮಾಡಲಾಗುತ್ತಿದೆ ಎಂಬ ಆರೋಪಗಳು ಬಂದಿತ್ತು. ಆದರೆ ಇದೀಗ ಪೊಲೀಸರು 30ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರಿಗೂ ನೊಟೀಸ್ ನೀಡಿದ್ದಾರೆ. ಬಿಜೆಪಿ ಕಾರ್ಯಕರ್ತರಿಗೂ ಕೂಡ ನೋಟಿಸ್​​ ನೀಡಲಾಗಿತ್ತು. ಇದೀಗ ಈ ಗಲಾಟೆಗೆ ಬಿಜೆಪಿ ನಾಯಕರಿಗೂ ನೋಟಸ್​​ ನೀಡಲು ಮುಂದಾಗಿದೆ. ಮತ್ತೆ ಬಿಜೆಪಿಯ 33 ಜನರಿಗೆ ನೋಟಿಸ್​​ ನೀಡಲಾಗಿದೆ. ಶಾಸಕ ಜರ್ನಾದನ ರೆಡ್ಡಿ, ಸೋಮಶೇಖರ್​​​​​ ರೆಡ್ಡಿ, ರಾಮುಲು ಸೇರಿದಂತೆ ಒಟ್ಟು 33 ಜನರಿಗೆ ನೋಟಿಸ್​​ ನೀಡಲಾಗಿದೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲೂ ಚರ್ಚೆಯಾಗಲಿದೆ ಎಂದು ಹೇಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನಷ್ಟು ತನಿಖೆಯನ್ನು ನಡೆಸಿದ್ದಾರೆ. ಈಗಾಗಲೇ 26 ಜನರನ್ನು ಪೊಲೀಸ್​​ ಬಂಧಿಸಿದ್ದಾರೆ. ಇದರ ಜತೆಗೆ ರೆಡ್ಡಿ ಆಪ್ತರಾಗಿರುವ ಸುರೇಶ್​​ ಬಾಬು ಕೂಡ ಪೊಲೀಸರು ಠಾಣೆಗೆ ಬರುವಂತೆ ಸೂಚಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

Source link

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ: ಮಹಾ ದಾಸೋಹದಲ್ಲಿ ಹೊಸ ದಾಖಲೆ, ಲಕ್ಷಲಕ್ಷ ರೊಟ್ಟಿ ಸಂಗ್ರಹ! – Kannada News | Koppal Gavi Mutt Dasoha Sets New Record with Over 18 Lakh Rotis Collected During Jatre

ಕೊಪ್ಪಳ, ಜನವರಿ 8: ಕೊಪ್ಪಳದ ಗವಿ ಮಠದ ಮಹಾದಾಸೋಹ ಈ ಬಾರಿ ಹೊಸ ದಾಖಲೆ ಬರೆದಿದ್ದು, ಅಪಾರ ಪ್ರಮಾಣದ ಅನ್ನದಾನ ಹಾಗೂ ಪ್ರಸಾದ ಸಂಗ್ರಹದೊಂದಿಗೆ ಭಕ್ತರಲ್ಲಿ ಭಾರೀ ಸಂಭ್ರಮ ಮೂಡಿಸಿದೆ. ಗವಿ ಮಠದ ಜಾತ್ರೆಯ ಪ್ರಮುಖ ವೈಶಿಷ್ಟ್ಯವಾಗಿರುವ ದಾಸೋಹವು ಈ ವರ್ಷ ಜನವರಿ 1ರಿಂದ ಆರಂಭವಾಗಿದ್ದು, ಕಳೆದ ಎಂಟು ದಿನಗಳಿಂದ ನಿರಂತರವಾಗಿ ನಡೆಯುತ್ತಿದೆ. ಈ ಬಾರಿ ಗವಿ ಮಠದ ದಾಸೋಹದಲ್ಲಿ ದಾಖಲೆ ಪ್ರಮಾಣದ ಆಹಾರ ಸಂಗ್ರಹವಾಗಿದೆ. ಒಟ್ಟು 18 ಲಕ್ಷಕ್ಕೂ ಅಧಿಕ ರೊಟ್ಟಿಗಳು ಸಂಗ್ರಹವಾಗಿದ್ದು, ಇದು ಇತಿಹಾಸದಲ್ಲೇ ಅತ್ಯಧಿಕ ಎನ್ನಲಾಗಿದೆ. ಜೊತೆಗೆ 25 ಕ್ವಿಂಟಾಲ್ ಬುಂದಿ, 175 ಕ್ವಿಂಟಾಲ್ ಮೈಸೂರು ಪಾಕ್, 62 ಕ್ವಿಂಟಾಲ್ ಶೇಂಗಾ ಹೊಳಿಗೆ, 467 ಕ್ವಿಂಟಾಲ್ ಮಾದಲಿ, 5 ಕ್ವಿಂಟಾಲ್ ಜಿಲೇಬಿ ಹಾಗೂ ಸುಮಾರು 6 ಲಕ್ಷ ಮಿರ್ಚಿ ಸೇರಿದಂತೆ ವಿವಿಧ ಖಾದ್ಯಗಳು ದಾಸೋಹಕ್ಕೆ ಹರಿದು ಬಂದಿವೆ.

ಇದುವರೆಗೆ ನಡೆದ ದಾಸೋಹದಲ್ಲಿ ಸುಮಾರು 8 ಲಕ್ಷ ರೊಟ್ಟಿಗಳ ವಿತರಣೆಯಾಗಿದ್ದು, ಪ್ರಸಾದ ತಯಾರಿಗಾಗಿ 650 ಕ್ವಿಂಟಾಲ್ ಅಕ್ಕಿ ಬಳಕೆಯಾಗಿದೆ. ಕಳೆದ ಹಲವು ದಿನಗಳಿಂದ ಸಾವಿರಾರು ಸ್ವಯಂಸೇವಕರು ದಾಸೋಹದ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಮಾಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Love and Relationship: ಪ್ರೀತಿಯಲ್ಲಿ ಪದೇ ಪದೇ ನೀವು ಮೋಸ ಹೋಗುತ್ತಿದ್ದೀರಾ? ಜ್ಯೋತಿಷ್ಯ ಕಾರಣ ತಿಳಿಯಿರಿ – Kannada News | Astrology: 5th House and Love Relationships Remedies for Problems

ಜ್ಯೋತಿಷ್ಯ ಲೆಕ್ಕಾಚಾರಗಳ ಪ್ರಕಾರ, ಜಾತಕದ ಐದನೇ ಮನೆಯು ನಮ್ಮ ಹೃದಯದ ಭಾವನೆಗಳು, ಸೃಜನಶೀಲತೆ ಮತ್ತು ಪ್ರೇಮ ಸಂಬಂಧಗಳನ್ನು ನಿಯಂತ್ರಿಸುತ್ತದೆ. ಈ ಮನೆಯ ಅಧಿಪತಿ, ಐದನೇ ಮನೆ ಬಲಶಾಲಿಯಾಗಿದ್ದರೆ ಮತ್ತು ಶುಭ ಗ್ರಹಗಳಿಂದ ನೋಡಲ್ಪಟ್ಟಿದ್ದರೆ, ಆ ವ್ಯಕ್ತಿಯ ಪ್ರೇಮ ಜೀವನವು ಸಂತೋಷವಾಗಿರುತ್ತದೆ. ಆದಾಗ್ಯೂ, ಈ ಮನೆ ಕ್ರೂರ ಅಥವಾ ದುಷ್ಟ ಗ್ರಹಗಳಿಂದ ಪ್ರಭಾವಿತವಾದಾಗ, ಸಂಬಂಧಗಳು ಮುರಿಯಲು ಪ್ರಾರಂಭಿಸುತ್ತವೆ ಎಂದು ಹೇಳಲಾಗಿದೆ.

ನಿಮ್ಮ ಜಾತಕದ ಐದನೇ ಮನೆಯಲ್ಲಿ ಶನಿ, ಮಂಗಳ ಅಥವಾ ಸೂರ್ಯ ದುರ್ಬಲ ಸ್ಥಾನದಲ್ಲಿದ್ದರೆ, ಅದು ಪ್ರೇಮ ಸಂಬಂಧಗಳಿಗೆ ಒಳ್ಳೆಯ ಸಂಕೇತವಲ್ಲ. ಈ ಸಮಯದಲ್ಲಿ ನೀವು ಪ್ರೀತಿಯಲ್ಲಿ ಬಿದ್ದರೆ ಪದೇ ಪದೇ ನೀವು ಮೋಸಕೊಳಗಾಗುವುದಂತೂ ಖಂಡಿತಾ.

ಐದನೇ ಮನೆಯಲ್ಲಿ ಶನಿ ದುರ್ಬಲ ಸ್ಥಾನದಲ್ಲಿದ್ದರೆ ಇದು ಸಂಬಂಧಗಳು ಬೇರ್ಪಡುವಿಕೆಗೆ ಕಾರಣವಾಗಬಹುದು. ಇದಲ್ಲದೇ ಮಂಗಳ ದುರ್ಬಲ ಸ್ಥಾನದಲ್ಲಿದ್ದರೆ ಪ್ರೀತಿಯಲ್ಲಿ ಕೋಪ, ಹೆಮ್ಮೆ ಮತ್ತು ವಿವಾದಗಳನ್ನು ಸೃಷ್ಟಿಸುತ್ತದೆ. ಸೂರ್ಯ ಕೆಟ್ಟ ಸ್ಥಾನದಲ್ಲಿದ್ದರೆ, ಆ ವ್ಯಕ್ತಿ ತನ್ನ ಸಂಗಾತಿಯ ಭಾವನೆಗಳನ್ನು ನಿರ್ಲಕ್ಷಿಸಲು ಪ್ರಾರಂಭಿಸುತ್ತಾನೆ.

ಇದನ್ನೂ ಓದಿ: ಮನೆಯಲ್ಲಿ ತಪ್ಪಿಯೂ ಈ ಜಾಗದಲ್ಲಿ ಹಣ ಇಡಬೇಡಿ, ಸಾಲ ಹೆಚ್ಚಾಗಬಹುದು

ಜ್ಯೋತಿಷ್ಯ ಪರಿಹಾರಗಳು ಯಾವುವು?

  • ಐದನೇ ಮನೆಯನ್ನು ಬಲಪಡಿಸಿ: ನಿಮ್ಮ ಜಾತಕದ ಪ್ರಕಾರ ಐದನೇ ಮನೆಯನ್ನು ಆಳುವ ಗ್ರಹಕ್ಕೆ ಸಂಬಂಧಿಸಿದ ರತ್ನವನ್ನು ಧರಿಸುವುದರಿಂದ ಶುಭ ಫಲಿತಾಂಶಗಳು ಸಿಗುತ್ತವೆ.
  • ರಾಹುವಿಗೆ ಪರಿಹಾರಗಳು: ರಾಹುವು ಅಡೆತಡೆಗಳನ್ನು ಸೃಷ್ಟಿಸುತ್ತಿದ್ದರೆ, ಶನಿವಾರ ಹರಿಯುವ ನೀರಿನಲ್ಲಿ ತೆಂಗಿನಕಾಯಿಯನ್ನು ಬಿಡುವುದು ಅಥವಾ ರಾಹು ಮಂತ್ರವನ್ನು ನಿಯಮಿತವಾಗಿ ಪಠಿಸುವುದು ಪ್ರಯೋಜನಕಾರಿ.
  • ಶಿವ-ಪಾರ್ವತಿಯರ ಆರಾಧನೆ: ಪ್ರೇಮ ಸಂಬಂಧಗಳಲ್ಲಿ ಯಶಸ್ಸನ್ನು ಸಾಧಿಸಲು ಮತ್ತು ವಿಶ್ವಾಸಾರ್ಹ ಸಂಗಾತಿಯನ್ನು ಪಡೆಯಲು ಶಿವ ಮತ್ತು ಪಾರ್ವತಿ ದೇವಿಯನ್ನು ಒಟ್ಟಿಗೆ ಪೂಜಿಸುವುದು ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.
  • ಶುಕ್ರನನ್ನು ಬಲಪಡಿಸಿ: ಶುಕ್ರನು ಪ್ರೀತಿ ಮತ್ತು ಆಕರ್ಷಣೆಯ ಗ್ರಹ. ಶುಕ್ರವಾರದಂದು ಬಿಳಿ ವಸ್ತುಗಳನ್ನು ದಾನ ಮಾಡುವುದರಿಂದ ಪ್ರೇಮ ಜೀವನದಲ್ಲಿ ಮಾಧುರ್ಯ ಮತ್ತು ಸ್ಥಿರತೆ ಹೆಚ್ಚಾಗುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಥ್ರಿಲ್ಲರ್ ಸೂಪರ್ ಥ್ರಿಲ್ಲರ್… ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್ – Kannada News | Ollie Peake Stuns Scorchers With Insane Final Ball Finish

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್​ ಲೀಗ್​ನ 26ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದೆ. ಪರ್ತ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೆಲ್ಬೋರ್ನ್ ರೆನೆಗೇಡ್ಸ್ ಹಾಗೂ ಪರ್ತ್​ ಸ್ಕಾಚರ್ಸ್​ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಪರ್ತ್ ಸ್ಕಾಚರ್ಸ್ ತಂಡವು 19.2 ಓವರ್​ಗಳಲ್ಲಿ 127 ರನ್​ಗಳಿಸಿ ಆಲೌಟ್ ಆಯಿತು.

128 ರನ್​ಗಳ ಸುಲಭ ಗುರಿ ಬೆನ್ನತ್ತಿದ ಮೆಲ್ಬೋರ್ನ್​ ರೆನೆಗೇಡ್ಸ್ ತಂಡವು 72 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಕಣಕ್ಕಿಳಿದ 19 ವರ್ಷದ ಯುವ ದಾಂಡಿಗ ಒಲಿವರ್ ಪೀಕ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು.

ಪರಿಣಾಮ 18 ಓವರ್​ಗಳಾಗುಷ್ಟರಲ್ಲಿ ಮೆಲ್ಬೋರ್ನ್​ ರೆನೆಗೇಡ್ಸ್ ತಂಡವು ಸ್ಕೋರ್ 110 ರನ್​ಗಳ ಗಡಿದಾಟಿತು. ಇದಾಗ್ಯೂ ಕೊನೆಯ ಎರಡು ಓವರ್​ಗಳಲ್ಲಿ 21 ರನ್​ಗಳ ಅವಶ್ಯಕತೆಯಿತ್ತು.

19ನೇ ಓವರ್​ನಲ್ಲಿ ಮೆಲ್ಬೋರ್ನ್​ ಬ್ಯಾಟರ್​ಗಳು 11 ರನ್ ಕಲೆಹಾಕಿದರು. ಅದರಂತೆ ಅಂತಿಮ ಓವರ್​ನಲ್ಲಿ 10 ರನ್​ಗಳು ಬೇಕಿದ್ದರು. ಆರೋನ್ ಹಾರ್ಡಿ ಎಸೆದ 20ನೇ ಓವರ್​ನ ಮೊದಲ ಎಸೆತದಲ್ಲಿ ಒಲಿವರ್ ಪೀಕ್ 2 ರನ್ ಕಲೆಹಾಕಿದರು. 2ನೇ ಎಸೆತದಲ್ಲಿ ಒಂದು ರನ್ ಓಡಿದರು. 3ನೇ ಎಸೆತದಲ್ಲಿ ಸ್ಯಾಮ್ ಎಲಿಯೆಟ್ ಒಂದು ರನ್ ಕಲೆಹಾಕಿದರು. 4ನೇ ಎಸೆತದಲ್ಲಿ ಒಲಿವರ್ ಪೀಕ್ 2 ರನ್ ಗಳಿಸಿದರು. ಆದರೆ ಐದನೇ ಎಸೆತವು ಡಾಟ್ ಆಯಿತು.

ಅಂತಿಮ ಎಸೆತದಲ್ಲಿ ಮೆಲ್ಬೋರ್ನ್ ರೆನೆಗೇಡ್ಸ್ ತಂಡಕ್ಕೆ 4 ರನ್​ಗಳು ಬೇಕಿತ್ತು. ಈ ವೇಳೆ ಸಿಕ್ಸ್ ಸಿಡಿಸುವ ಮೂಲಕ ಒಲಿವರ್ ಪೀಕ್ ಮೆಲ್ಬೋರ್ನ್ ರೆನೆಗೇಡ್ಸ್ ತಂಡಕ್ಕೆ 4 ವಿಕೆಟ್​ಗಳ ರೋಚಕ ಜಯ ತಂದುಕೊಟ್ಟರು. ಇನ್ನು ಈ ಪಂದ್ಯದಲ್ಲಿ 30 ಎಸೆತಗಳಲ್ಲಿ ಅಜೇಯ 42 ರನ್ ಬಾರಿಸಿದ ಪೀಕ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿಯಿತು.

Source link