Headlines

CBSE Class 10 Results 2026: ಇಂದೇ ಪ್ರಕಟವಾಗಲಿದೆ ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ; ವೀಕ್ಷಿಸಲು ಈ ಲಿಂಕ್​ ಬಳಸಿ – Kannada News | CBSE Class 10 Results 2026: Expected Date, How to Check Online and DigiLocker Access

ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (CBSE) 10ನೇ ತರಗತಿಯ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲು ಸಕಲ ಸಿದ್ಧತೆ ನಡೆಸಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ಏಪ್ರಿಲ್ 14 ಅಥವಾ 15ರ ಒಳಗಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗುವ ನಿರೀಕ್ಷೆಯಿದೆ. ಈ ವರ್ಷದ ಪರೀಕ್ಷೆ ಬರೆದ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಫಲಿತಾಂಶದ ಕುರಿತಾದ ಸಂಪೂರ್ಣ ವಿವರ ಇಲ್ಲಿದೆ. ಶೀಘ್ರದಲ್ಲೇ ಫಲಿತಾಂಶ ಪ್ರಕಟ: ಸಿಬಿಎಸ್ಇ ಈ ಬಾರಿ ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ ಮಾಡಿಕೊಂಡಿದೆ. ಸಾಮಾನ್ಯವಾಗಿ ಮೇ…

Read More

ಮನೆಯಲ್ಲಿ ಗರ್ಭಿಣಿ ಹೆಂಡತಿಗೆ ಬೇರೆ ಜಾತಿ ಎಂದು ಕಿರುಕುಳ: ಹೆತ್ತವರ ಮೇಲೆ ದೂರು ನೀಡಿದ ಮಗ – Kannada News | Inter Caste Marriage Harassment: Nelamangala Couple Faces Threats, Police Complaint

ನೆಲಮಂಗಲ, ಏ.14: ಪ್ರೀತಿಸಿ ಮದುವೆಯಾದ ಜೋಡಿಗೆ ಜಾತಿಯ ಹೆಸರಿನಲ್ಲಿ ಕಿರುಕುಳ ನೀಡಿ, ಕೊಲೆ ಬೆದರಿಕೆ ಹಾಕಿರುವ ಅಮಾನವೀಯ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್‌ನಲ್ಲಿ ಬೆಳಕಿಗೆ ಬಂದಿದೆ. ಸದ್ಯ 6 ತಿಂಗಳ ಗರ್ಭಿಣಿಯಾಗಿರುವ ಸೊಸೆಗೆ ಸ್ವಂತ ಅತ್ತೆ-ಮಾವನೇ ಜಾತಿ ನಿಂದನೆ ಮಾಡಿ ಜೀವಬೆದರಿಕೆ ಹಾಕಿದ್ದು, ಈ ಸಂಬಂಧ ದಂಪತಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಹೆತ್ತವರ ಮೇಲೆ ಸ್ವತಃ ಮಗನೇ ದೂರು ನೀಡಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ನೆಲಮಂಗಲದ ಸುಭಾಷ್ ನಗರದ ನಿವಾಸಿಗಳಾದ ಅಭಿಷೇಕ್ ಮತ್ತು ವಿದ್ಯಾಶ್ರೀ…

Read More

ಬಾಗಲಕೋಟೆ: ರಸ್ತೆ ಬದಿಯ ಹಳ್ಳಕ್ಕೆ ನುಗ್ಗಿದ ಸ್ಲೀಪರ್ ಬಸ್, ಪ್ರಯಾಣಿಕರು ಜಸ್ಟ್ ಮಿಸ್ – Kannada News | Bagalkote Bus Accident: Sleeper Bus Plunges into Roadside Ditch Near Ambedkar Statue; Passengers Safe

ಬಾಗಲಕೋಟೆ, ಏಪ್ರಿಲ್ 14: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮವಾಗಿ ಖಾಸಗಿ ಸ್ಲೀಪರ್ ಬಸ್ಸೊಂದು ರಸ್ತೆ ಬದಿಯ ಹಳ್ಳಕ್ಕೆ ನುಗ್ಗಿದ ಘಟನೆ ಹಳೆ ಬಾಗಲಕೋಟೆ ನಗರದ ಅಂಬೇಡ್ಕರ್ ಮೂರ್ತಿ ಬಳಿ ನಡೆದಿದೆ. ಈ ಬಸ್ ಬೆಳಿಗ್ಗೆ ಬೆಂಗಳೂರಿನಿಂದ ಬಾಗಲಕೋಟೆಗೆ ಆಗಮಿಸುತ್ತಿತ್ತು. ಅದೃಷ್ಟವಶಾತ್, ಭಾರಿ ಅನಾಹುತ ತಪ್ಪಿದೆ. ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಸುಮಾರು ಐದರಿಂದ ಆರು ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಯಾಳುಗಳಿಗೆ ವೈದ್ಯಕೀಯ ನೆರವು…

Read More

‘ಟಾಕ್ಸಿಕ್​’ ಚಿತ್ರಕ್ಕಾಗಿ ಫುಲ್ ಎಗ್ಸೈಟ್ ಆದ ತಾರಾ ಸುತಾರಿಯಾ

‘ಟಾಕ್ಸಿಕ್’ ಸಿನಿಮಾದಲ್ಲಿ ಬಾಲಿವುಡ್ ನಟಿ ತಾರಾ ಸುತಾರಿಯಾ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ‘ಟಾಕ್ಸಿಕ್’  ಬಗ್ಗೆ ಸಖತ್ ಎಗ್ಸೈಟ್ ಆಗಿದ್ದಾರೆ. ಈ ವಿಷಯವನ್ನು ಅವರು ಫರ್ಹಾನ್ ಅಖ್ತರ್ ಜೊತೆ ಹಂಚಿಕೊಂಡಿದ್ದಾರೆ. ಇದರಿಂದ ಫ್ಯಾನ್ಸ್ ಕೂಡ ಖುಷಿ ಆಗಿದ್ದಾರೆ. ‘ಟಾಕ್ಸಿಕ್’ ಸಿನಿಮಾ ಬಗ್ಗೆ ಅನೇಕರಿಗೆ ಅನುಮಾನ ಇದೆ. ಆದರೆ, ಈ ಅನುಮಾನವನ್ನು ತಾರಾ ಸುತಾರಿಯಾ ದೂರ ಮಾಡಿದ್ದಾರೆ.  ಅಲ್ಲದೆ, ಸಿನಿಮಾ ಜೂನ್ 4ರಂದೇ ರಿಲೀಸ್ ಆಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​…

Read More

ಪತ್ನಿಯ ಕೊಂದು ಸೆಪ್ಟಿಕ್ ಟ್ಯಾಂಕ್‌ಗೆ ಎಸೆದ ಪತಿ, ಅಪ್ಪ ಮಾಡಿದ್ದನ್ನ ಕಣ್ಣಾರೆ ಕಂಡು ಸತ್ಯ ಬಿಚ್ಚಿಟ್ಟ 4 ವರ್ಷದ ಮಗ – Kannada News | Odisha Murder: Husband Kills Wife, Dumps Body in Septic Tank; 4 year Old Son Reveals Truth

ಒಡಿಶಾ, ಏಪ್ರಿಲ್ 14: ಕುಡಿತದ ಅಮಲು ಮತ್ತು ಅನಗತ್ಯ ಸಂಶಯ ಒಂದು ಸಂಸಾರವನ್ನು ಹೇಗೆ ಬೀದಿಪಾಲು ಮಾಡುತ್ತದೆ ಎಂಬುದಕ್ಕೆ ಒಡಿಶಾದ ಬೋರ್ಗಾನ್ ಗ್ರಾಮದಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಹೆಂಡತಿಯ ನಡತೆಯ ಮೇಲೆ ಸಂಶಯಪಟ್ಟ ವ್ಯಕ್ತಿಯೊಬ್ಬ ಆಕೆಯನ್ನು ಬರ್ಬರವಾಗಿ ಕೊಲೆ(Murder) ಮಾಡಿ, ಶವವನ್ನು ಮನೆಯ ಸೆಪ್ಟಿಕ್ ಟ್ಯಾಂಕ್‌ಗೆ ಎಸೆದಿದ್ದಾನೆ. ಆದರೆ, ತಾನು ಮಾಡಿದ್ದನ್ನು ಯಾರಿಗೂ ತಿಳಿಯದಂತೆ ಬಚ್ಚಿಡಬಹುದು ಅಂದುಕೊಂಡಿದ್ದ ಹಂತಕನಿಗೆ ತನ್ನ 4 ವರ್ಷದ ಮಗನೇ ಸಾಕ್ಷಿಯಾಗುತ್ತಾನೆ ಎಂದು ತಿಳಿದಿರಲಿಲ್ಲ. ಸಂಭ್ರಮದ ಬೆನ್ನಲ್ಲೇ ಸಂಭವಿಸಿದ ದುರಂತ ಬೋರ್ಗಾನ್…

Read More

Spiritual Tips: ಮನೆಯಲ್ಲಿ ಊಟದ ನಂತರ ನಮ್ಮ ತಟ್ಟೆಯನ್ನು ನಾವೇ ತೊಳೆಯಬೇಕು ಯಾಕೆ ಗೊತ್ತಾ? – Kannada News | The Spiritual and Scientific Benefits of Clearing Your Own Plate After Meals

ಊಟದ ನಂತರ ತಮ್ಮ ತಟ್ಟೆಯನ್ನು ನಾವೇ ಏಕೆ ತೆಗೆಯಬೇಕು ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಆಹಾರ ಸೇವನೆಯನ್ನು ಅನ್ನಯಜ್ಞ ಎಂದು ಕರೆಯಲಾಗುತ್ತದೆ. ಈ ಯಜ್ಞದ ಪ್ರಾರಂಭದಿಂದ ಮುಕ್ತಾಯದವರೆಗೆ ವಿನಯ, ವಿಧೇಯತೆ, ಭಕ್ತಿ ಮತ್ತು ಕೃತಜ್ಞತಾ ಭಾವ ಇರಬೇಕು. ಮನೆಯಲ್ಲಿ ತಾಯಿ, ಶ್ರೀಮತಿ, ಅಕ್ಕ, ತಂಗಿಯರು ಅಥವಾ ಬೇರೆಯವರು ಆಹಾರ ತಯಾರಿಸಿರಬಹುದು, ಅಥವಾ ನೀವೇ ತಯಾರಿಸಿರಬಹುದು. ಅನ್ನವು ಪರಬ್ರಹ್ಮ…

Read More

“ನನ್ನನ್ನ ಯಾಕೆ ಮದುವೆಯಾಗಲ್ಲ?”: ನಡುರಸ್ತೆಯಲ್ಲೇ ಯುವತಿಯನ್ನು ಬೆದರಿಸಿದ ಮುಸ್ತಫಾ ಖಾದ್ರಿ; ವಿಡಿಯೋ ವೈರಲ್ – Kannada News | Mustafa Qadri’s Love Jihad Scam: New Koppal Video Shows Blackmail Plot

ಕೊಪ್ಪಳ, ಏ.14: ಜಿಲ್ಲೆಯಲ್ಲಿ ಭಾರೀ ಸಂಚಲನ ಮೂಡಿಸಿರುವ ಮುಸ್ತಫಾ ಖಾದ್ರಿ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮತ್ತೊಂದು ಹೊಸ ವಿಡಿಯೋ ವೈರಲ್ ಆಗಿದ್ದು, ಆರೋಪಿಯ ಅಸಲಿ ಮುಖವಾಡ ಕಳಚಿದೆ. ಯುವತಿಯೊಬ್ಬಳನ್ನು ಬಲವಂತವಾಗಿ ಪ್ರೀತಿಸುವಂತೆ ಮತ್ತು ಮದುವೆಯಾಗುವಂತೆ ಮುಸ್ತಫಾ ಪೀಡಿಸುತ್ತಿರುವುದು ಈ ವಿಡಿಯೋದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಮುಸ್ತಫಾ ಖಾದ್ರಿ ಬೈಕ್ ಮೇಲೆ ಕುಳಿತು ಯುವತಿಯ ಜೊತೆ ಜಗಳವಾಡುತ್ತಿದ್ದಾನೆ. “ಇಷ್ಟು ದಿನ ಮಾತಾಡಿದ್ದು, ಲವ್ ಮಾಡಿದ್ದೇನು? ಈಗ ಯಾಕೆ ನನ್ನನ್ನ ಲವ್ ಮಾಡಲ್ಲ,…

Read More

ಪರಪ್ಪನ ಅಗ್ರಹಾರದಲ್ಲಿ ಹೈಡ್ರಾಮಾ: ಜೈಲಧಿಕಾರಿಗಳ ಮೇಲೆ ಕೈದಿಗಳಿಂದ ಹಲ್ಲೆಗೆ ಯತ್ನ, ಲಘು ಲಾಠಿ ಪ್ರಹಾರ! – Kannada News | High Drama at Parappana Agrahara Jail: Inmates Attempt Attack on Officials; Staff Resort to Lathi Charge During Raid

ಬೆಂಗಳೂರು, ಏಪ್ರಿಲ್ 14: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಮತ್ತು ಜೈಲು ಸಿಬ್ಬಂದಿ ನಡುವೆ ಸಂಘರ್ಷ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಮಾರ್ಚ್ 29ರ ತಡರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜೈಲಿನಿಂದಲೇ ವಿಡಿಯೋ ಮಾಡಿ ಹೊರಬಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಅಧೀಕ್ಷಕ ಕರ್ಣ ಕ್ಷತ್ರಿ ನೇತೃತ್ವದಲ್ಲಿ ವಿಚಾರಣಾ ಬಂಧಿಗಳ ವಿಭಾಗದ ಟವರ್-1ರಲ್ಲಿ ತಪಾಸಣೆ ನಡೆಸಲಾಗುತ್ತಿತ್ತು. ಈ ವೇಳೆ ತಪಾಸಣೆಗೆ ಅಡ್ಡಿಪಡಿಸಿದ ಕೈದಿಗಳಾದ ಇನಾಕ್ ಜಾಯ್,…

Read More

ಲವ್ ಜಿಹಾದ್ ಪ್ರಕರಣ: 9000 ವಿಡಿಯೋ, ಫೋಟೋ ಪತ್ತೆಯಾದ್ರೂ ಅರೆಸ್ಟ್ ಇಲ್ಲವೇಕೆ? ಪೊಲೀಸರಿಗೆ ಕಾಂಗ್ರೆಸ್​ ಶಾಸಕರಿಂದ ಒತ್ತಡ ಆರೋಪ – Kannada News | Musthafa Khadri Love Jihad: Police Face Heat Over Evidence, Political Pressure in Koppal

ಕೊಪ್ಪಳ, ಏ.14: ಜಿಲ್ಲೆಯಲ್ಲಿ ಬೆಳಕಿಗೆ ಬಂದಿರುವ ಮುಸ್ತಫಾ ಖಾದ್ರಿ ಎಂಬಾತನ ಲವ್ ಜಿಹಾದ್ ಆರೋಪ ಪ್ರಕರಣ ಈಗ ಹೊಸ ತಿರುವು ಪಡೆದಿದೆ. ಆರೋಪಿಯ ಮೊಬೈಲ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋಗಳು ಮತ್ತು ಅಕ್ರಮ ಚಟುವಟಿಕೆಗಳ ಸಾಕ್ಷ್ಯಗಳಿದ್ದರೂ ಪೊಲೀಸರು ಆತನನ್ನು ಬಂಧಿಸಲು ಹಿಂಜರಿಯುತ್ತಿರುವುದು ಸಾರ್ವಜನಿಕರಲ್ಲಿ ಮತ್ತು ರಾಜಕೀಯ ವಲಯದಲ್ಲಿ ಹಲವು ಅನುಮಾನಗಳನ್ನು ಮೂಡಿಸಿದೆ. ಬಂಧಿತನಾಗದ ಆರೋಪಿ ಮುಸ್ತಫಾ ಖಾದ್ರಿಯ ಮೊಬೈಲ್‌ನಲ್ಲಿ ಸುಮಾರು 9,000ಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಮತ್ತು 7,000ಕ್ಕೂ ಅಧಿಕ ಫೋಟೋಗಳು ಪತ್ತೆಯಾಗಿವೆ ಎಂದು ಹೇಳಲಾಗಿದೆ. ಇದಲ್ಲದೆ, ಈತ…

Read More

ನೀನೆಂಥಾ ಕಳ್ಳ ಮಾರಾಯಾ: ಕದಿಯಲು ಹೋಗಿ ಶೆಟರ್​ನಲ್ಲಿ ತಲೆ ಸಿಕ್ಕಿಸಿಕೊಂಡ ಕಳ್ಳ – Kannada News | Theft Gone Wrong: Burglar Gets Trapped in Shop Shutter Mid Break In

ಲಕ್ನೋ, ಏಪ್ರಿಲ್ 14: ಕಳ್ಳನೊಬ್ಬ ಕಳ್ಳತನ ಮಾಡಿ ಓಡಿ ಹೋಗುವಾಗ ಶೆಟರ್ ಹಾಗೂ ಗೋಡೆಯ ಮಧ್ಯದಲ್ಲಿ ತಲೆ ಸಿಕ್ಕಿಸಿಕೊಂಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ. ಇಂದಿರಾಪುರಂ ಪ್ರದೇಶದ ಅಭಯ್ ಖಾಂಡ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕಳ್ಲನೊಬ್ಬ ಹೃದ್ರೋಗ ತಜ್ಞರ ಚಿಕಿತ್ಸಾಲಯದ ಮೇಲ್ಛಾವಣಿಯ ಮೂಲಕ ಪ್ರವೇಶಿಸಲು ಪ್ರಯತ್ನಿಸಿದ್ದಾನೆ. ಹಿಂದೆ ಬರಲೂ ಆಗದೆ ಮುಂದೆ ಹೋಗಲೂ ಆಗದೆ ಫಜೀತಿ ಅನುಭವಿಸಿದ್ದಾನೆ.ಆತ ಕೂಗಿಕೊಂಡಾಗ ನಿಕ್ ಸಿಬ್ಬಂದಿ ವಿಷಯ ಗೊತ್ತಾಗಿತ್ತು. ಪೊಲೀಸರಿಗೆ ಆತನನ್ನು ಸುರಕ್ಷಿತವಾಗಿ ಕೆಳಗಿಳಿಸುವುದು ಕೂಡ ಕಷ್ಟದ ಕೆಲಸವಾಗಿತ್ತು….

Read More