ಗಂಡು ಮಗು ಆಸೆ: ಕನಸು ಈಡೇರದಿದ್ದಾಗ ಹೆಂಡ್ತಿ ಮಕ್ಕಳನ್ನ ಬಿಟ್ಟು ಹೋಗ್ಬಿಟ್ಟ – Kannada News | Husband Cheats Wife At Bengaluru for three Baby girls

ಬೆಂಗಳೂರು, (ಜನವರಿ 04): ಗಂಡು ಮಗುವಿನ ಹಂಬಲ, ಹೆಣ್ಣು ಮಗುವಿಗೆ ತಾತ್ಸಾರ ಇದು ಭಾರತೀಯ ಸಮಾಜದ ಡಿಎನ್’ಎಯಲ್ಲಿ ಹಾಸು ಹೊಕ್ಕಾಗಿರುವ ಸಮಸ್ಯೆ. ಹೌದು…ಈಗಾಗಲೇ ಎರಡು ಹೆಣ್ಣು ಮಕ್ಕಳಿದ್ದು, ಮೂರನೇಯದ್ದು ಗಂಡು ಮಗು ಆಗುತ್ತೆ ಎಂದು ಆಸೆ ಇಟ್ಟುಕೊಂಡಿದ್ದ. ಆದರೆ ಮೂರನೇ ಮಗು ಸಹ ಹೆಣ್ಣು ಆಗಿದೆ. ಇದರಿಂದ ಮನನೊಂದ ವ್ಯಕ್ತಿಯೋರ್ವ ಹೆಂಡತಿ ಮಕ್ಕಳನ್ನು ಬಿಟ್ಟು ನಾಪತ್ತೆಯಾಗಿದ್ದಾನೆ. ಬೆಂಗಳೂರಿನಲ್ಲಿ ಈ ಘಟನೆ ನಡೆದಿದ್ದು, ಮೂರು ಮಕ್ಳಳನ್ನು ಸಾಕಲಾಗದೇ ಕಂಗಾಲಾದ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. Source link

Read More

ಬಿಸಿಸಿಐ ವಿರುದ್ಧ ತೊಡೆ ತಟ್ಟಿರುವ ಬಾಂಗ್ಲಾ ತಂಡದ ಟಿ20 ವಿಶ್ವಕಪ್ ಪ್ರದರ್ಶನ ಹೇಗಿದೆ? – Kannada News | Bangladesh T20 World Cup History: Poor Performance and 2026 India Boycott Reason

ಆ ಬಳಿಕ 2009, 2010 ಮತ್ತು 2012 ರಲ್ಲಿ ನಡೆದ ನಂತರದ ಆವೃತ್ತಿಗಳಲ್ಲೂ ಬಾಂಗ್ಲಾ ತಂಡ ನಿರಾಶಾದಾಯಕ ಪ್ರದರ್ಶನ ನೀಡಿತು, ಗುಂಪು ಹಂತದಲ್ಲಿ ಒಂದೇ ಒಂದು ಗೆಲುವು ದಾಖಲಿಸಲು ವಿಫಲವಾಯಿತು. 2014 ಮತ್ತು 2016 ರಲ್ಲಿ ಸೂಪರ್ 10 ಸುತ್ತಿಗೆ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಗಿದ್ದ ಬಾಂಗ್ಲಾ, ಈ ಸುತ್ತಿನಲ್ಲಿ ಸತತ ಸೋಲುಗಳನ್ನು ಅನುಭವಿಸಿತು. Source link

Read More

ಚಳಿಗಾಲದಲ್ಲಿ ರಕ್ತದೊಡ್ಡ ಅಪಾಯ ಹೆಚ್ಚು; ಇಲ್ಲಿದೆ ಉಪಯುಕ್ತವಾಗಬಲ್ಲ ಕೆಲ ಯೋಗಾಸನಗಳು

ಇತ್ತೀಚಿನ ದಿನಗಳಲ್ಲಿ ಅಧಿಕ ರಕ್ತದೊತ್ತಡ (ಬಿಪಿ) ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಚಳಿಗಾಲದಲ್ಲಿ ಈ ಸಮಸ್ಯೆ ವಿಶೇಷವಾಗಿ ಗಂಭೀರವಾಗುತ್ತದೆ. ಶೀತವು ರಕ್ತನಾಳಗಳನ್ನು ಸಂಕುಚಿತಗೊಳಿಸುತ್ತದೆ. ಇದು ರಕ್ತದೊತ್ತಡ ಹೆಚ್ಚಿಸುತ್ತದೆ. ಹೈಬ್ಲಡ್ ಪ್ರೆಷರ್ ಸ್ಥಿತಿಯನ್ನು ದೀರ್ಘಕಾಲದವರೆಗೆ ನಿಯಂತ್ರಿಸದಿದ್ದರೆ, ಅದು ಹೃದಯ, ಮೂತ್ರಪಿಂಡಗಳು ಮತ್ತು ಮೆದುಳಿಗೆ ಹಾನಿಯನ್ನುಂಟುಮಾಡುತ್ತದೆ. ವೃದ್ಧರು, ಬೊಜ್ಜು ಹೊಂದಿರುವವರು ಮತ್ತು ಈಗಾಗಲೇ ಬಿಪಿ ಸಮಸ್ಯೆ ಹೊಂದಿರುವವರಿಗೆ ಈ ಚಳಿಗಾಲ ಹೆಚ್ಚಿನ ಅಪಾಯಕಾರಿಯಾಗಬಹುದು. ಆದ್ದರಿಂದ, ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡುವುದು ಬಹಳ ಮುಖ್ಯ. ಯೋಗ ಆಸನಗಳು ದೇಹವನ್ನು ಸಕ್ರಿಯವಾಗಿಡುವುದಲ್ಲದೆ, ಒತ್ತಡವನ್ನು ಕಡಿಮೆ ಮಾಡಲು…

Read More

ಈ ಜ್ಯೂಸ್‌ ಕುಡಿಯಿರಿ, ನಿಮ್ಮ ಹೊಟ್ಟೆಯ ಕೊಬ್ಬು ಬೆಣ್ಣೆಯಂತೆ ಕರಗುತ್ತದೆ – Kannada News | Drink bottled gourd juice to lose belly fat

ಪ್ರಸ್ತುತ ಕಾಲದಲ್ಲಿ ಬೊಜ್ಜಿನ (fat) ಸಮಸ್ಯೆ ಅಧಿಕ ಜನರನ್ನು ಕಾಡುತ್ತಿರುವ ಬಹು ದೊಡ್ಡ ಸಮಸ್ಯೆಯಾಗಿದೆ. ಅನಾರೋಗ್ಯಕರ ಆಹಾರ ಪದ್ಧತಿ, ಕೆಟ್ಟ ಜೀವನಶೈಲಿ ಇವೆಲ್ಲವೂ ಬೊಜ್ಜಿಗೆ ಪ್ರಮುಖ ಕಾರಣ. ಈ ಸಮಸ್ಯೆಯನ್ನು ನಿರ್ಲಕ್ಷ್ಯ ಮಾಡುತ್ತಾ ಹೋದರೆ ಮುಂದಿನ ದಿನಗಳಲ್ಲಿ ದೀರ್ಘಕಾಲದ ಕಾಯಿಲೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ. ಇದಲ್ಲದೆ ಹೊಟ್ಟೆಯ ಬೊಜ್ಜು ದೇಹ ಸೌಂದರ್ಯವನ್ನೇ ಹಾಳು ಮಾಡುತ್ತದೆ. ಹೀಗಿರುವಾಗ ಆರೋಗ್ಯಕರ ಆಹಾರ ಸೇವನೆ ಮಾಡುವ ಮೂಲಕ, ವ್ಯಾಯಾಮ ಮಾಡುವ ಮೂಲಕ ಬೊಜ್ಜು, ತೂಕ ಇಳಿಕೆಯನ್ನು ಮಾಡಬಹುದು. ಇದಲ್ಲದೆ ಸೋರೆಕಾಯಿ ಜ್ಯೂಸ್‌…

Read More

ಹಿಂದೂ ಯುವತಿಯನ್ನು ಮುಸ್ಲಿಂ ವ್ಯಕ್ತಿ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಸ್ಪಿ – Kannada News | Uttara Kannada SP Talks about Muslim Rafiq Kills Hindu Woman Rajnitha In Yellapur

ಶಿರಸಿ, (ಜನವರಿ 04): ರಂಜಿತಾ ಎನ್ನುವ ಹಿಂದೂ ಯುವತಿಯ ಹತ್ಯೆ ಪ್ರಕಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪ್ರಕರಣದ ಆರೋಪಿ ಯಲ್ಲಾಪುರದ ರಾಮಾಪುರ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾಳಮ್ಮನಗರದ ಆರೋಪಿ ಮಹಮ್ಮದ್ ರಫೀಕ್ ಇಮಾಮ್‌ಸಾಬ್ (30) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಮಾಪುರ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ರಫಿಕ್‌ನ ಮೃತದೇಹ ಪತ್ತೆಯಾಗಿದೆ. ನಿನ್ನೆ ಆಶ್ರಯ ನಗರ ನಿವಾಸಿ ರಂಜಿತಾ ಮಲ್ಲಪ್ಪ ಬನ್ಸೊಡೆ (30) ಎಂಬ ಮಹಿಳೆಯ ಕೊಲೆಯಾಗಿತ್ತು. ಆರೋಪಿ ಮಹಮ್ಮದ್ ರಫೀಕ್ ಇಮಾಮ್‌ಸಾಬ್ ಕೊಲೆ ಮಾಡಿ ಪರಾರಿಯಾದ ಆರೋಪ…

Read More

Ashes Sydney Test: ಹಠಾತ್ತನೆ ಸ್ಥಗಿತಗೊಂಡ ಸಿಡ್ನಿ ಟೆಸ್ಟ್ ಪಂದ್ಯ

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್‌ ನಡುವೆ ನಡೆಯುತ್ತಿರುವ ಆಶಸ್ ಸರಣಿ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಸರಣಿಯ ಕೊನೆಯ ಪಂದ್ಯ ಸಿಡ್ನಿ ಮೈದಾನದಲ್ಲಿ ಇಂದಿನಿಂದ ಆರಂಭವಾಗಿದೆ. ಆದರೆ ಪಂದ್ಯದ ಮೊದಲ ದಿನದಾಟ ಭಾಗಶಃ ಮಳೆಗೆ ಆಹುತಿಯಾಯಿತು. ಹೀಗಾಗಿ ಆರಂಭಿಕ ಆಘಾತದಿಂದ ಹೊರಬಂದಿದ್ದ ಇಂಗ್ಲೆಂಡ್​ಗೆ ಬೃಹತ್ ಮೊತ್ತವನ್ನು ಕಲೆಹಾಕಲು ಸಾಧ್ಯವಾಗಲಿಲ್ಲ. ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಆರಂಭಿಸಿರುವ ಇಂಗ್ಲೆಂಡ್‌ ಮೊದಲ ದಿನದಾಟದಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 211 ರನ್ ಕಲೆಹಾಕಿದೆ. ಆದಾಗ್ಯೂ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಡುವಲ್ಲಿ ತಂಡದ…

Read More

ಆಗದವರ ಮುಖಕ್ಕೆ ಗುದ್ದಿದ ಸ್ಪರ್ಧಿಗಳು: ವಿಡಿಯೋ ನೋಡಿ – Kannada News | Bigg Boss Kannada 12: Contestants punched punching bags

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಇನ್ನೇನು ಮುಗಿಯುವ ಹಂತದಲ್ಲಿದೆ. ಫಿನಾಲೆಗೆ ಇನ್ನು ಕೆಲವೇ ದಿನಗಳಷ್ಟೆ ಬಾಕಿ ಇದೆ. ಮನೆಯಲ್ಲಿ ಈಗ ಉಳಿದಿರುವುದು ಬಹುತೇಕ ಗಟ್ಟಿ ಸ್ಪರ್ಧಿಗಳೇ. ಇಂದು ಭಾನುವಾರದ ಎಪಿಸೋಡ್ ಆಗಿದ್ದು, ಇಂದು (ಡಿಸೆಂಬರ್ 04) ಮನೆಯಿಂದ ಒಬ್ಬರು ಹೊರಗೆ ನಡೆಯಲಿದ್ದಾರೆ. ಇದೀಗ ಬಿಗ್​​ಬಾಸ್ ಮನೆಯಲ್ಲಿ ಸ್ಪರ್ಧಿಗಳು ತಮಗೆ ಆಗದ ಸ್ಪರ್ಧಿಯ ಮುಖವನ್ನು ಪಂಚಿಂಗ್​ ಬ್ಯಾಗಿಗೆ ಅಂಟಿಸಿ ಮನಸೋ ಇಚ್ಛೆ ಗುದ್ದಿದ್ದಾರೆ. ರಕ್ಷಿತಾ ಅಂತೂ ಕಂಟ್ರೋಲ್ ತಪ್ಪಿ, ಬ್ಯಾಗ್ ಕಿತ್ತು ಹೋಗುವಂತೆ ಗುದ್ದಿದ್ದಾರೆ….

Read More

ಸಭೆಯನ್ನ ನಗೆ ಗಡಲಲ್ಲಿ ತೇಲಿಸಿದ ಸಿಎಂ ಕುರ್ಚಿ ಮಾತು, ಜೋರಾಗಿ ನಕ್ಕ ಡಿಕೆಶಿ – Kannada News | Dk Shivakumar smile after CM Siddaramaiah jokes about chair at devanga Function

ಬೆಂಗಳೂರು, (ಜನವರಿ 04): ಸದ್ಯ ಕರ್ನಾಟಕ ಕಾಂಗ್ರೆಸ್​​ನಲ್ಲಿ ಸಿಎಂ ಕುರ್ಚಿಯದ್ದೇ ಮಾತು. ಈ ಸಂಬಂಧ ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (dk Shivakumar) ಬಣಗಳ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇದರ ಮಧ್ಯೆ ಸಿಎಂ ಸಿದ್ದರಾಮಯ್ಯ, ಕುರ್ಚಿ ಬಗ್ಗೆ ಮಾತನಾಡಿ ಸಭೆಯನ್ನು ನಗೆ ಗಡಲಲ್ಲಿ ತೇಲಿಸಿದ್ದಾರೆ. ಹೌದು…ಬೆಂಗಳೂರಿನಲ್ಲಿ ದೇವಾಂಗ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ವೇಳೆ ಸಿಎಂ, ತಮ್ಮ ಕುರ್ಚಿಯಲ್ಲಿ ಬೇರೊಬ್ಬರನ್ನು ಕುಳಿತುಕೊಳ್ಳಲು ಹೇಳಿದ್ದಾರೆ. ಇದನ್ನು ಕೇಳಿ ಸಿಎಂ ಕುರ್ಚಿ ಆಕಾಂಕ್ಷಿ ಡಿಸಿಎಂ ಡಿಕೆ ಶಿವಕುಮಾರ್ ಜೋರಾಗಿ…

Read More

Vastu Tips: ಮನೆಯಲ್ಲಿ ಹಂಸಗಳ ಫೋಟೋ ಇಡುವುದು ಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? – Kannada News | Vastu Tips: Swan Images for Home Prosperity and Harmony; Vastu Benefits

ವಾಸ್ತು ಶಾಸ್ತ್ರವು ಮನೆಯಲ್ಲಿ ಯಾವ ರೀತಿಯ ವಸ್ತುಗಳನ್ನು ಇಡಬೇಕು? ಯಾವ ರೀತಿಯ ವಸ್ತುಗಳನ್ನು ಇಡಬಾರದು ಎಂಬುದನ್ನು ಹೇಳುತ್ತದೆ. ಅವುಗಳನ್ನು ಎಲ್ಲಿ ಇಡಬೇಕು ಎಂಬುದನ್ನು ಸಹ ಇದು ವಿವರಿಸುತ್ತದೆ. ಅನೇಕ ಜನರು ತಮ್ಮ ಮನೆ ನಿರ್ಮಾಣ ಮತ್ತು ಮನೆಯಲ್ಲಿರುವ ವಸ್ತುಗಳನ್ನು ವಾಸ್ತು ಪ್ರಕಾರ ಆಯಾ ದಿಕ್ಕಿನಲ್ಲಿ ಜೋಡಿಸುತ್ತಾರೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಕೆಲವು ಚಿತ್ರಗಳು ಅಥವಾ ಪ್ರತಿಮೆಗಳನ್ನು ಹೊಂದಿರುವುದು ಒಳ್ಳೆಯದು. ಇವುಗಳನ್ನು ಮನೆಯಲ್ಲಿ ಇಡುವುದು ಪವಿತ್ರವೆಂದು ಪರಿಗಣಿಸಲಾಗುತ್ತದೆ. ಪೂರ್ವ ದಿಕ್ಕಿನಲ್ಲಿ ಹಂಸಗಳ ಚಿತ್ರ ಇದ್ದರೆ ಶುಭ: ವಾಸ್ತು…

Read More

IPL 2026: ನಾಯಕನೂ ಸೇರಿದಂತೆ ಆರ್​ಸಿಬಿಯ ನಾಲ್ವರು ಸ್ಟಾರ್ ಆಟಗಾರರಿಗೆ ಇಂಜುರಿ

2026 ರ ಟಿ20 ವಿಶ್ವಕಪ್ ಮುಗಿದ ತಕ್ಷಣ, ಐಪಿಎಲ್ ಸೀಸನ್ ಆರಂಭವಾಗಲಿದೆ. ಕಳೆದ ಡಿಸೆಂಬರ್‌ನಲ್ಲಿ ನಡೆದ ಹರಾಜಿನಲ್ಲಿ ಎಲ್ಲಾ 10 ತಂಡಗಳು ಈಗಾಗಲೇ ತಮ್ಮ ಆಟಗಾರರನ್ನು ಆಯ್ಕೆ ಮಾಡಿವೆ. ಆದರೆ ಮುಂದಿನ ಆವೃತ್ತಿಯ ಐಪಿಎಲ್ ಪ್ರಾರಂಭವಾಗುವ ಮೊದಲೇ ಹಾಲಿ ಚಾಂಪಿಯನ್ ಆರ್​ಸಿಬಿ ತಂಡಕ್ಕೆ ಆಘಾತವೆಂಬಂತೆ ತಂಡದ ನಾಲ್ವರು ಸ್ಟಾರ್ ಆಟಗಾರರು ಗಾಯಕ್ಕೆ ತುತ್ತಾಗಿದ್ದಾರೆ. ಗಾಯದಿಂದ ಬಳಲುತ್ತಿರುವ ನಾಲ್ವರು ಆರ್​ಸಿಬಿ ಆಟಗಾರರಲ್ಲಿ ಫಿಲ್ ಸಾಲ್ಟ್, ರಜತ್ ಪಾಟಿದಾರ್, ಜೋಶ್ ಹ್ಯಾಜಲ್‌ವುಡ್ ಮತ್ತು ಟಿಮ್ ಡೇವಿಡ್ ಸೇರಿದ್ದಾರೆ. ಈ ನಾಲ್ವರು…

Read More