Category Archives: Blog

Your blog category

ಹೊಸ ವರ್ಷಕ್ಕೆ ಒಟಿಟಿಗೆ ಬಂದಿವೆ ಹೊಸ ಸಿನಿಮಾಗಳು: ಪಟ್ಟಿ ಇಲ್ಲಿದೆ

Source link

IND vs BAN: ಬಾಂಗ್ಲಾದೇಶ ಪ್ರವಾಸವನ್ನು ಮತ್ತೆ ಮುಂದೂಡಿದ ಬಿಸಿಸಿಐ – Kannada News | Team India Bangladesh Tour Postponed: BCCI Cites Security Concerns

ಬಿಸಿಸಿಐ ಈ ಪ್ರವಾಸವನ್ನು ಮುಂದೂಡಿದರೆ, ಅದು ಬಿಸಿಬಿಗೆ ಸಾಕಷ್ಟು ನಷ್ಟವನ್ನುಂಟುಮಾಡಬಹುದು. ಈಗಾಗಲೇ ಆರ್ಥಿಕವಾಗಿ ದುರ್ಬಲವಾಗಿರುವ ಬಾಂಗ್ಲಾ ಮಂಡಳಿಯು, ಭಾರತ ಪ್ರವಾಸದಿಂದ ಆದಾಯ ಗಳಿಸುವ ನಿರೀಕ್ಷಿಸುತ್ತಿತ್ತು. ಆದರೆ ಈ ಪ್ರವಾಸವನ್ನು ರದ್ದುಗೊಳಿಸುವುದರಿಂದ ಬಾಂಗ್ಲಾದೇಶ ಮಂಡಳಿಗೆ ಪ್ರಾಯೋಜಕತ್ವ ಮತ್ತು ಪ್ರಸಾರ ಒಪ್ಪಂದಗಳಿಂದ ಲಕ್ಷಾಂತರ ರೂಪಾಯಿಗಳ ನಷ್ಟವಾಗಬಹುದು. ಇದಲ್ಲದೆ, ಈ ಸರಣಿಯು ಭವಿಷ್ಯದಲ್ಲೂ ನಡೆಯದಿದ್ದರೆ, ಮಂಡಳಿಯ ಆದಾಯದ ಮೇಲೆ ಪರಿಣಾಮ ಬೀರುವುದು ಖಚಿತ.

Source link

‘ಕೊರಗಜ್ಜ’ ಸಿನಿಮಾ ತಂಡದ ವಿರುದ್ಧ ಕೊಡಗಿನ ದೈವಾರಾಧಕರು ಮತ್ತು ನರ್ತಕರು ರೊಚ್ಚಿಗೆದ್ದಿದ್ದೇಕೆ? – Kannada News | Koragajja movie Reels Controversy: Devotees Condemn Movie Promotion

ಕೊರಗಜ್ಜ ಸಿನಿಮಾ ತಂಡದ ವಿರುದ್ಧ ಆಕ್ರೋಶ

ಕೊಡಗು, ಜನವರಿ 03: ಕೊರಗಜ್ಜ (Koragajja) ತುಳುನಾಡು ಸೇರಿದಂತೆ ಕೊಡಗು (Kodagu) ಜಿಲ್ಲೆಯ ಆರಾಧ್ಯ ದೈವ. ಆದರೆ ಇದೇ ದೈವದ ಹೆಸರಲ್ಲಿ ರೀಲ್ಸ್​ ಸ್ಪರ್ಧೆಗೆ ‘ಕೊರಗಜ್ಜ’ ಸಿನಿಮಾ ತಂಡ ಕರೆ ನಿಡಿದೆ. ಗೆದ್ದವರಿಗೆ ವಿದೇಶ ಪ್ರವಾಸದ ಜೊತೆ ಒಂದು ಕೋಟಿ ರೂ ಬಹುಮಾನದ ಆಮಿಷವನ್ನೂ ಒಡ್ಡಿದೆ. ‘ಕೊರಗಜ್ಜ’ ಸಿನಿಮಾ ತಂಡ ಆಯೋಜಿಸಿರುವ ರೀಲ್ಸ್ ಸ್ಪರ್ಧೆಗೆ ಇದೀಗ ಕೊಡಗಿನಲ್ಲಿ ದೈವ ನರ್ತಕರ ಮತ್ತು ಆರಾಧಕರಿಂದ ತೀವ್ರ ಖಂಡನೆ ವ್ಯಕ್ಯವಾಗಿದೆ.

ಇತ್ತೀಚೆಗೆ ಮಲೆನಾಡು ಭಾಗದ ಸ್ಥಳೀಯ ದೈವಗಳನ್ನ ಇಟ್ಟುಕೊಂಡು ಸಿನಿಮಾ ಮಾಡಿ ಯಶಸ್ಸು ಗಳಿಸುವುದು ಹೆಚ್ಚಾಗಿದೆ. ‘ರಂಗಿತರಂಗ’, ‘ಕಾಂತಾರ’ ಮತ್ತು ‘ಕಾಂತಾರ ಚಾಪ್ಟರ್-1’ ಈ ನಿಟ್ಟಿನಲ್ಲಿ ಭರ್ಜರಿ ಯಶಸ್ಸು ಗಳಿಸಿದ ಸಿನಿಮಾಗಳು. ಇದರ ಬೆನ್ನಲ್ಲೇ ಇದೀಗ ‘ಕೊರಗಜ್ಜ’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ತುಳನಾಡಿನ ಆರಾಧ್ಯ ದೈವವಾಗಿರುವ ಕೊರಗಜ್ಜನನ್ನ ಇಟ್ಟುಕೊಂಡು ಈ ಸಿನಿಮಾದಲ್ಲಿ ಕಥೆ ಹೆಣೆಯಲಾಗಿದೆ ಎನ್ನಲಾಗಿದೆ. ಸದ್ಯ ಈ ಚಿತ್ರತಂಡ ಸಿನಿಮಾದ ಪ್ರಚಾರಕ್ಕಾಗಿ ಇದೀಗ ಕೊರಗಜ್ಜನ ರೀಲ್ಸ್ ಮಾಡುವ ಸ್ಪರ್ಧೆ ಆಯೋಜಿಸಿದೆ. ಇದಕ್ಕೆ ಭರ್ಜರಿ ಬಹುಮಾನವನ್ನೂ ಇಟ್ಟಿದೆ.

ಇದನ್ನೂ ಓದಿ: ಕಂಬಳ ವಲಯದಲ್ಲಿ ಬಿರುಗಾಳಿ ಎಬ್ಬಿಸಿದ ಅದೊಂದು ಘಟನೆ: ಅಷ್ಟಕ್ಕೂ ನಡೆದಿದ್ದೇನು?

ಈಗಾಗಲೇ ಸಾವಿರಾರು ರೀಲ್ಸ್​ಗಳು ಕೂಡ ಸಿದ್ಧವಾಗಿವೆ. ಆದರೆ ಸಿನಿಮಾ ತಂಡದ ಈ ಪ್ರಚಾರದ ಗಿಮಿಕ್ಕ್​ ಅನ್ನ ಕೊಡಗಿನ ದೈವ ಆರಾಧಕರು ಹಾಗೂ ದೈವ ನರ್ತಕರು ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಮಡಿಕೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಸಂಘದ ಸದಸ್ಯರು ಸಿನಿಮಾ ತಂಡ ಕೀಳು ಅಭಿರುಚಿಗಾಗಿ ಈ ರೀಲ್ಸ್ ಸ್ಪರ್ಧೆಗೆ ಕರೆ ಕೊಟ್ಟಿದೆ ಎಂದು ಟೀಕಿಸಿದೆ.

ಕೊರಗಜ್ಜ ಸಿನಿಮಾ ತಂಡದ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ

ಈ ರೀಲ್ಸ್ ಸ್ಪರ್ಧೆ ಆಯೋಜನೆಯಿಂದ ಸಾವಿರಾರು ಯುವ ಜನತೆ ಬೀದಿ ಬೀದಿಗಳಲ್ಲಿ ಕೊರಗಜ್ಜನ ವೇಷ ಧರಿಸಿ ಕುಣಿಯಲು ಶುರುಮಾಡುತ್ತಾರೆ, ಇದರಿಂದ ದೈವ ನಿಂದನೆಯಾಗುತ್ತದೆ. ದೇವರ ಅಪಹಾಸ್ಯ ಮಾಡಿದಂತಾಗುತ್ತದೆ. ಇದು ಜನಪದ ಕಲೆಯಲ್ಲ. ಬದಲಿಗೆ ದೈವ ಆರಾಧನೆ. ಕೊರಗಜ್ಜನನ್ನ ನಂಬುವ ಕೋಟ್ಯಂತರ ಭಕ್ತರಿದ್ದಾರೆ. ಕೊರಗಜ್ಜನ ರೀಲ್ಸ್ ಮಾಡುವುದರಿಂದ ಇವರೆಲ್ಲರ ನಂಬಿಕೆಗೆ ಘಾಸಿಯಾಗುತ್ತದೆ ಎಂದು ದೈವ ಆರಾಧಕರು ಆಕ್ರೋಶ ಹೊರ ಹಾಕಿದ್ದಾರೆ. ಕೊರಗಜ್ಜ ಸಿನಿಮಾ ತಂಡದ ವಿರುದ್ಧ ಫಿಲ್ಮ್ ಚೇಂಬರ್ ಸೂಕ್ತ ಕ್ರಮಕ್ಕೆ ಮುಂದಾಗಬೇಕೆಂದು ದೈವ ನರ್ತಕ ಮಂಜುನಾಥ್​​ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮತ್ತೆ ದೈವಾರಾಧಕರ ಕೋಪಕ್ಕೆ ಗುರಿಯಾದ ರಿಷಬ್; ನಿಯಮಗಳ ವಿರುದ್ಧ ಹೋದ ನಟ?

ಸುಧೀರ್ ಅತ್ತಾವರ ನಿರ್ದೇಶನದ ಈ ಸಿನಿಮಾದ ಕೊರಗಜ್ಜ ಹಾಡುಗಳನ್ನ ಬಳಸಿ ರೀಲ್ಸ್ ಮಾಡುವಂತೆ ಸಿನಿಮಾ ತಂಡ ಕರೆ ನೀಡಿದೆ. ಇದಕ್ಕಾಗಿ ಒಂದು ಕೋಟಿ ರೂ ಬಹುಮಾನ ಮೀಸಲಿಟ್ಟಿದೆ. ಅಂತಿಮ ಮೂರು ಸ್ಪರ್ಧಿಗಳಿಗೆ ವಿದೇಶ ಪ್ರವಾಸದ ಬಹುಮಾನವನ್ನೂ ಘೋಷಿಸಿದೆ. ಅತಿಹೆಚ್ಚು ಲೈಕ್ಸ್ ಗಳಿಸುವ ಸ್ಪರ್ಧಿಗಳಿಗೆ ಈ ಎಲ್ಲಾ ಬಹುಮಾನ ಲಭಿಸಲಿವೆ ಎಂದು ಚಿತ್ರ ತಂಡ ಆಫರ್ ನೀಡಿದೆ. ಆದರೆ ನಂಬಿದವರಿಗೆ ಇಂಬು ನೀಡುವ ದೇವರೆಂದೇ ಖ್ಯಾತಿಯಾಗಿರುವ ಕೊರಗಜ್ಜನನ್ನ ಬಳಸಿ ರೀಲ್ಸ್ ಮಾಡಲು ಹೊರಟಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಒಂದು ಆವೃತ್ತಿಯಲ್ಲಿ ಅತ್ಯಧಿಕ ಶತಕ; ಜಂಟಿಯಾಗಿ 2ನೇ ಸ್ಥಾನಕ್ಕೇರಿದ ದೇವದತ್ ಪಡಿಕ್ಕಲ್ – Kannada News | Devdutt Padikkal’s 4th Century in Vijay Hazare Trophy: Karnataka Star Shines

ವಿಜಯ್ ಹಜಾರೆ ಟ್ರೋಫಿಯ 5ನೇ ಸುತ್ತಿನ ಪಂದ್ಯದಲ್ಲಿ ಕರ್ನಾಟಕ ಹಾಗೂ ತ್ರಿಪುರ ತಂಡಗಳು ಮುಖಾಮುಖಿಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕರ್ನಾಟಕ ತಂಡದ ಪರ ಆರಂಭಿಕ ದೇವದತ್ ಪಡಿಕ್ಕಲ್ ಅಮೋಘ 108 ರನ್​ಗಳ ಇನ್ನಿಂಗ್ಸ್ ಆಡಿದರು. ಈ ಆವೃತ್ತಿಯಲ್ಲಿ ದೇವದತ್ ಕಲೆಹಾಕುತ್ತಿರುವ 4ನೇ ಶತಕ ಇದಾಗಿದೆ. ಅಂದರೆ ಈ ಆವೃತ್ತಿಯಲ್ಲಿ ನಡೆದಿರುವ ಐದು ಪಂದ್ಯಗಳ ನಾಲ್ಕು ಇನ್ನಿಂಗ್ಸ್​ಗಳಲ್ಲಿ ದೇವದತ್ ಬ್ಯಾಟ್ ಶತಕದ ಇನ್ನಿಂಗ್ಸ್ ಆಡಿದೆ.

ಈ ಟೂರ್ನಿಯಲ್ಲಿ ಅದ್ಭುತ ಫಾರ್ಮ್​ನಲ್ಲಿರುವ ದೇವದತ್ ಟೂರ್ನಿಯ ಐದನೇ ಪಂದ್ಯದಲ್ಲೇ 4ನೇ ಶತಕ ಸಿಡಿಸುವ ಮೂಲಕ ಒಂದು ಆವೃತ್ತಿಯ ವಿಜಯ್ ಹಜಾರೆ ಟ್ರೋಫಿಯಲ್ಲಿ ಅತ್ಯಧಿಕ ಶತಕಗಳನ್ನು ಬಾರಿಸಿದ ಬ್ಯಾಟ್ಸ್‌ಮನ್​ಗಳ ಪಟ್ಟಿಯಲ್ಲಿ ಜಂಟಿಯಾಗಿ ಎರಡನೇ ಸ್ಥಾನಕ್ಕೇರಿದ್ದಾರೆ. ಮೊದಲನೇ ಸ್ಥಾನದಲ್ಲಿರುವ ತಮಿಳುನಾಡು ಬ್ಯಾಟ್ಸ್‌ಮನ್ ಎನ್​ ಜಗದೀಸನ್ ಹಾಗೂ ಕನ್ನಡಿಗ ಕರುಣ್ ನಾಯರ್ ತಲಾ 5 ಶತಕಗಳನ್ನು ಬಾರಿಸಿದ್ದರೆ, ಪಡಿಕ್ಕಲ್ 4 ಶತಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಪಡಿಕ್ಕಲ್ ಈ ಹಿಂದೆಯೂ ಅಂದರೆ 2020-21 ರ ಆವೃತ್ತಿಯಲ್ಲಿ 4 ಶತಕ ಬಾರಿಸಿದ್ದರು.

Source link

ಮದ್ಯದ ನಶೆಯಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ: ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದ ಯುವಕರು ಜೈಲುಪಾಲು – Kannada News | Bangalore: Drunk Youths Harass Women, Attack Police on New Year’s Eve, Land in Jail

ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದ ಯುವಕರು ಜೈಲುಪಾಲು

ಬೆಂಗಳೂರು, ಜನವರಿ 3: ಹೊಸ ವರ್ಷ (New Year) ಬರಮಾಡಿಕೊಳ್ಳಲು ಬೆಂಗಳೂರಿನ (Bangalore) ಜನ ತುದಿಗಾಲಲ್ಲಿ ನಿಂತಿದ್ದರು. ಪಾರ್ಟಿ ಪಬ್ಬು ಎಂದು ಎಂಜಾಯ್ ಮಾಡಿದ್ದರು. ರಾತ್ರಿ ಇಡೀ ಕುಣಿದು ಕುಪ್ಪಳಿಸಿದ್ದರು. ಆ ಸಂದರ್ಭದಲ್ಲಿ ಮದ್ಯದ ನಶೆಯಲ್ಲಿದ್ದ ಇಬ್ಬರು ಯುವಕರು ಯಡವಟ್ಟು ಮಾಡಿಕೊಂಡು ಇದೀಗ ಜೈಲು ಪಾಲಾಗಿದ್ದಾರೆ.

ತಮಿಳುನಾಡು ಮೂಲದ 22 ವರ್ಷದ ಅನ್ಶ್ ಮೆಹ್ತಾ ಮತ್ತು ಪರ್ವ್ ರಾತಿ ಬೊಮ್ಮನಹಳ್ಳಿಯಲ್ಲಿ ಮನೆ ಮಾಡಿಕೊಂಡಿದ್ದು, ಖಾಸಗಿ ಕಂಪನಿ ಉದ್ಯೋಗಿಗಳು. 31 ರಂದು ಸಂಜೆ ಪಾರ್ಟಿಗೆ ಹೋಗಿದ್ದ ಆಸಾಮಿಗಳು ಕುಣಿದು ಕುಪ್ಪಳಿಸಿದ್ದಾರೆ. ಹೀಗೆ ಜಾಲಿ ಮಾಡುತ್ತಾ ಮನೆ ಸೇರಿಕೊಂಡಿದ್ದರೆ ಏನೂ ಆಗುತ್ತಿರಲಿಲ್ಲ. ಆದರೆ ಈ ಕಿಡಿಗೇಡಿಗಳು ಜನವರಿ 1 ರಂದು ಮುಂಜಾನೆ 1.40 ರ ಸುಮಾರಿಗೆ ‘ಇಂಡಿಯನ್ ಎಕ್ಸ್​ಪ್ರೆ’ಸ್ ಬಳಿ ಇರುವ ಸೂಜಿ ಪಬ್ ಬಳಿ‌ ಕ್ಯಾಬ್​ಗಾಗಿ ಕಾಯುತ್ತಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ.

ಪೊಲೀಸ್ ಸಿಬ್ಬಂದಿ ಮೇಲೆಯೇ ಹಲ್ಲೆ

ಯುವತಿಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಬೀಟ್ ಪೊಲೀಸ್ ಸಿಬ್ಬಂದಿ ರವಿ ಪ್ರಶ್ನಿಸಿದ್ದರು. ಆದರೂ ಸುಮ್ಮನಾಗದ ಕಿಡಿಗೇಡಿಗಳು ಪೊಲೀಸ್ ಸಿಬ್ಬಂದಿ ಮೇಲೆಯೇ ಹಲ್ಲೆ ಮಾಡಿದ್ದು ರಿಫ್ಲೆಕ್ಟರ್ ಜಾಕೆಟ್ ಹರಿದಿದ್ದರು. ನಂತರ ಇತರೆ ಸಿಬ್ಬಂದಿ ಸಹಾಯದೊಂದಿಗೆ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು, ತಕ್ಷಣ ವಿಧಾನಸೌಧ ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ಅಷ್ಟಕ್ಕೂ ಸುಮ್ಮನಾಗದ ಯುವಕರು ಪೊಲೀಸ್ ಠಾಣೆಯಲ್ಲಿಯೂ ಇನ್ಸ್​​ಪೆಕ್ಟರ್​​ಗೆ ಆವಾಜ್ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ. ಠಾಣೆಯಲ್ಲಿ ಕೂರಿಸಿಕೊಂಡ ಪೊಲೀಸರು ಎಫ್ಐಆರ್ ದಾಖಲಿಸಿ ಇಬ್ಬರನ್ನೂ ಜೈಲಿಗೆ ಅಟ್ಟಿದ್ದಾರೆ‌.

ಇದನ್ನೂ ಓದಿ: ರಾತ್ರಿ ಗಂಡನಿಲ್ಲದ ವೇಳೆ ಪ್ರೇಮಿಯನ್ನು ಮನೆಗೆ ಕರೆದು ಗುಪ್ತಾಂಗ ಕತ್ತರಿಸಿದ ಮಹಿಳೆ!

ತಾನಾಯ್ತು ತಮ್ಮ ಕೆಲಸ ಆಯ್ತು ಅಂತಾ ಹೋಗಿದ್ದಿದ್ದರೆ‌ ಯುವಕರು ಜೈಲಿಗೆ ಹೋಗುವ ಪರಿಸ್ಥಿತಿ ಬರುತ್ತಿರಲಿಲ್ಲ. ಆದ್ರೆ ಮದ್ಯದ ನಶೆಯಲ್ಲಿ ಮಾಡಬಾರದ್ದನ್ನು ಮಾಡಿ ಈಗ ಕಂಬಿ ಎಣಿಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs SA: ನಾಯಕನಾಗಿ ಮೊದಲ ಪಂದ್ಯದಲ್ಲೇ ಎಡವಿದ ವೈಭವ್ ಸೂರ್ಯವಂಶಿ – Kannada News | Vaibhav Suryavanshi: India U19’s Youngest Captain at 14, Struggles on Debut

ದಕ್ಷಿಣ ಆಫ್ರಿಕಾದ ಬೆನೋನಿಯಲ್ಲಿ ನಡೆದ ಸರಣಿಯ ಮೊದಲ ಪಂದ್ಯದಲ್ಲಿ ವೈಭವ್ ಮಾತ್ರವಲ್ಲದೆ, ಟೀಂ ಇಂಡಿಯಾದ ಅಗ್ರ ಕ್ರಮಾಂಕವೂ ಸಂಪೂರ್ಣವಾಗಿ ವಿಫಲವಾಯಿತು. ಜಾರ್ಜ್ ಮತ್ತು ವೈಭವ್ ನಂತರ, ವಿಕೆಟ್ ಕೀಪರ್ ಅಭಿಗ್ಯಾನ್ ಕುಂಡು ಮತ್ತು ವೇದಾಂತ್ ತ್ರಿವೇದಿ ಕೂಡ ಪರಿಣಾಮಕಾರಿ ಇನ್ನಿಂಗ್ಸ್ ಆಡುವಲ್ಲಿ ವಿಫಲರಾಗಿ ಪೆವಿಲಿಯನ್‌ ಸೇರಿಕೊಂಡರು.

Source link

ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ವಿಡಿಯೋ ತೋರಿಸಿ ಆರೋಪ ಮಾಡಿದ ಜನಾರ್ದನ ರೆಡ್ಡಿ – Kannada News | Janardhana Reddy Accuses Congress MLA Bharat Reddy of Links With Ganja Peddler, Cites Video Evidence

ಬಳ್ಳಾರಿ, ಜನವರಿ 3: ಗಾಂಜಾ ಪೆಡ್ಲರ್ ಜೊತೆಗೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಇದ್ದಾರೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ಬಳ್ಳಾರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ವಿಡಿಯೋ ಪ್ರದರ್ಶಿಸಿ ಈ ಆರೋಪ ಮಾಡಿದ್ದಾರೆ. ಬಳ್ಳಾರಿಯಲ್ಲಿ ತಮ್ಮ ಮನೆ ಮುಂದೆ ಫೈರಿಂಗ್ ಘಟನೆ ವಿಚಾರವಾಗಿ ಭರತ್ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿದ ಜನಾರ್ದನ ರೆಡ್ಡಿ, ಭರತ್ ರೆಡ್ಡಿ ಗಾಂಜಾ ಪೆಡ್ಲರ್ ದೌಲಾ ಎಂಬಾತನ ಜೊತೆ ಇದ್ದ ಎಂದು ಆರೋಪಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಪ್ರದರ್ಶಿಸಿದ ವಿಡಿಯೋದಲ್ಲಿ, ಶಾಸಕ ನಾರಾ ಭರತ್ ರೆಡ್ಡಿ ಗಾಂಜಾ ಪೆಡ್ಲರ್ ದೌಲಾ ಜೊತೆಗೆ ಕಾಲ ಮೇಲೆ ಕಾಲು ಹಾಕಿಕೊಂಡು ಕುಳಿತಿರುವ ದೃಶ್ಯಗಳು ಇವೆ. ಇದನ್ನು ಆಧಾರವಾಗಿಟ್ಟುಕೊಂಡು ಜನಾರ್ದನ ರೆಡ್ಡಿ ಕಾಂಗ್ರೆಸ್ ಶಾಸಕನ ಮೇಲೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ದೌಲಾ ಮೇಲೆ 50 ಕೆಜಿ ಗಾಂಜಾ ಪೆಡ್ಲಿಂಗ್ ಸೇರಿದಂತೆ 18 ಪ್ರಕರಣಗಳು ದಾಖಲಾಗಿವೆ ಎಂದು ಅವರು ತಿಳಿಸಿದ್ದಾರೆ.

ಬಳ್ಳಾರಿ ಫೈರಿಂಗ್ ವಿಚಾರದಲ್ಲಿ ಮೃತ ಕಾಂಗ್ರೆಸ್ ಕಾರ್ಯಕರ್ತರನಿಗೆ ನ್ಯಾಯ ಸಿಗಬೇಕಾದರೆ ತಪ್ಪಿತಸ್ಥರಾದ ಸತೀಶ್ ರೆಡ್ಡಿ ಮತ್ತು ಅವರ ಅಂಗರಕ್ಷಕರನ್ನು ತಕ್ಷಣ ಬಂಧಿಸಬೇಕು ಎಂದು ಜನಾರ್ದನ ರೆಡ್ಡಿ, ಸೋಮಶೇಖರ್ ರೆಡ್ಡಿ ಸೇರಿದಂತೆ ಇತರರು ಆಗ್ರಹಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಸರ್ಕಾರವನ್ನು ಒತ್ತಾಯಿಸಿ, ಇಲ್ಲವಾದರೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ನಾಯಕ ಶ್ರೀರಾಮುಲು ಕೂಡ ಭರತ್ ರೆಡ್ಡಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಳ್ಳಾರಿ ಗಲಭೆಗೆ ತಲೆದಂಡ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್ ನೆಜ್ಜೂರು? – Kannada News | Ballari Riot Fallout: Suspended SP Pavan Nejjuru Attempts to end his life? Reports Trigger Concern

ಬೆಂಗಳೂರು, ಜನವರಿ 3: ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ನಡೆದ ಹಿಂಸಾಚಾರದ ಬೆನ್ನಲ್ಲೇ ಅಮಾನತುಗೊಂಡಿದ್ದ ಎಸ್‌ಪಿ ಪವನ್ ನಜ್ಜೂರ್ ತುಮಕೂರಿನಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಆಘಾತಕಾರಿ ಸುದ್ದಿಗಳು ಹರಿದಾಡುತ್ತಿವೆ. ಸ್ನೇಹಿತನ ಫಾರ್ಮ್‌ಹೌಸ್‌ನಲ್ಲಿ ಮಾತ್ರೆ ಸೇವಿಸಿದ್ದ ನಜ್ಜೂರ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಆದರೆ, ಈ ಸುದ್ದಿಯನ್ನು ಅಧಿಕೃತ ಮೂಲಗಳು ಖಚಿತಪಡಿಸಿಲ್ಲ.

ಬಳ್ಳಾರಿಯಲ್ಲಿ ಡ್ಯೂಟಿಗೆ ಸೇರಿಕೊಂಡ ಕೆಲವೇ ಗಂಟೆಗಳಲ್ಲಿ ಕರ್ತವ್ಯ ಲೋಪದ ಆರೋಪದಡಿ ಪವನ್ ನಜ್ಜೂರ್ ಅವರನ್ನು ಸರ್ಕಾರ ಅಮಾನತುಗೊಳಿಸಿತ್ತು. 11 ವರ್ಷಗಳ ನಂತರ ಅವರಿಗೆ ಈ ಎಕ್ಸಿಕ್ಯೂಟಿವ್ ಹುದ್ದೆ ಸಿಕ್ಕಿತ್ತು. ಈ ಅಮಾನತು ಆದೇಶದಿಂದ ಮನನೊಂದು ಅವರು ಈ ಕೃತ್ಯಕ್ಕೆ ಮುಂದಾಗಿರಬಹುದು ಎಂದು ಊಹಿಸಲಾಗಿದೆ. ಆದಾಗ್ಯೂ, ಈ ಬಗ್ಗೆ ಇನ್ನಷ್ಟೇ ಅಧಿಕೃತ ಸ್ಪಷ್ಟನೆ ಲಭ್ಯವಾಗಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಮಾನವೀಯ ಕೃತ್ಯ: ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಆಸ್ಪತ್ರೆಯಲ್ಲಿ ಬಿಟ್ಟು ಪರಾರಿ; 10 ದಿನದಿಂದ ನರಳಾಟ – Kannada News | Bagalkot: Relatives Abandon Critically Ill Man at Hospital; Public Outrage

ಅನಾರೋಗ್ಯಕ್ಕೆ ಒಳಗಾಗಿರುವ ವ್ಯಕ್ತಿ

ಬಾಗಲಕೋಟೆ, ಜನವರಿ 03: ತೀವ್ರ ಅನಾರೋಗ್ಯಕ್ಕೆ ಒಳಗಾಗಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದುಕೊಂಡು  ಬಂದು ಬಳಿಕ ಬಿಟ್ಟು ಪರಾರಿ ಆಗಿರುವಂತಹ ಘಟನೆಯೊಂದು ಬಾಗಲಕೋಟೆ (Bagalkote) ಜಿಲ್ಲೆಯ ರಬಕವಿ-ಬನಹಟ್ಟಿ (Rabkavi Banhatti) ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಸಂಬಂಧಿಕರಿಂದಲೇ ಅಮಾನವೀಯ ಕೃತ್ಯ ಎಸಗಲಾಗಿದ್ದು, ಸುಮಾರು ಹತ್ತು ದಿನಗಳಿಂದ ಸೂಕ್ತ ಆರೈಕೆ ಇಲ್ಲದೆ ವ್ಯಕ್ತಿ ಆಸ್ಪತ್ರೆಯಲ್ಲಿ ನರಳಾಡುತ್ತಿದ್ದಾರೆ. ಸದ್ಯ ಸಂಬಂಧಿಕರ ಈ ಕೃತ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ನಡೆದದ್ದೇನು?

ತೀವ್ರ ಅನಾರೋಗ್ಯಕ್ಕೆ ಒಳಗಾಗಿರುವ ವ್ಯಕ್ತಿಯ ಹೆಸರು ವಿಠ್ಠಲ ರಾವಳ್ (22) ಎಂದು ತಿಳಿದುಬಂದಿದ್ದು, ಮೂಲತಃ ಬನಹಟ್ಟಿ ನಿವಾಸಿಯಾಗಿದ್ದಾರೆ. ಆಧಾರ ಕಾರ್ಡ ಪರಿಶೀಲನೆ ಮಾಡಿದ ಬಳಿಕ ಬನಹಟ್ಟಿ ನಿವಾಸಿ ಎಂದು ತಿಳಿದು ಬಂದಿದೆ. ವಾಸಿಯಾಗದ ರೋಗಕ್ಕೆ ತುತ್ತಾಗಿರುವ ಕಾರಣಕ್ಕೆ ವಿಠ್ಠಲ ರಾವಳ್​​ರನ್ನು ಸಂಬಂಧಿಕರು ಆಸ್ಪತ್ರೆಗೆ ಕರೆತಂದು ಬಿಟ್ಟು ಹೋಗಿದ್ದಾರೆ. ಸುಮಾರು ಹತ್ತು ದಿನಗಳಿಂದ ಸೂಕ್ತ ಆರೈಕೆ ಇಲ್ಲದೆ ನರಳಾಡಿದ್ದಾರೆ. ಸ್ನಾನ ಹಾಗೂ ಸ್ವಚ್ಚತೆ ಇಲ್ಲದಿರುವುದರಿಂದ ಗಬ್ಬೆದ್ದು ನಾರುತ್ತಿದ್ದು, ಇದರಿಂದ ಇತರೆ ರೋಗಿಗಳೂ ಪರದಾಡುವಂತಾಗಿದೆ.

ಇದನ್ನೂ ಓದಿ: ಬಾಗಲಕೋಟೆ: ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ತಾಯಿ, ಮಗು ರಕ್ಷಣೆ

ಸದ್ಯ ಸ್ಥಳೀಯರು ಶಾಸಕರು ಹಾಗೂ ಪೊಲೀಸ್​ರಿಗೆ ಮಾಹಿತಿ ನೀಡಿದ್ದಾರೆ. ಇತ್ತ ಸಂಬಂಧಿಕರ ಬಗ್ಗೆ ಪರಿಶೀಲನೆ ಮಾಡಲಾಗಿದ್ದು, ಎಂಟು ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್ ಆಫ್​​ ಆಗಿದೆ. ಇನ್ನು ಮನೆಗೆ ಬೀಗ ಹಾಕಿಕೊಂಡು ಹೋಗಿದ್ದಾರೆ.

ಚಿಕಿತ್ಸೆ ಕೂಡಿಸಲು ಮುಂದಾದ ಶಾಸಕ ಸಿದ್ದು ಸವದಿ

ಸ್ಥಳೀಯರ ಮಾಹಿತಿ ಬೆನ್ನಲ್ಲೇ ಇದೀಗ ಖಾಸಗಿ ಆಸ್ಪತ್ರೆಯಲ್ಲಿ ವಿಠ್ಠಲ ರಾವಳ್​​​ಗೆ ಚಿಕಿತ್ಸೆ ಕೂಡಿಸಲು ಶಾಸಕ ಸಿದ್ದು ಸವದಿ ಮುಂದಾಗಿದ್ದಾರೆ. ಅಲ್ಲದೇ ಒಂದು ವಾರದಿಂದ ಡಾ. ನದಾಪ್​ ಚಿಕಿತ್ಸೆ ನೀಡುವುದರ ಜೊತೆಗೆ ಅವರ ಊಟೋಪಚಾರ ಹಾಗೂ ಹೆಚ್ಚಿನ ಚಿಕಿತ್ಸೆಗೆ ಹಣ ನೀಡಲು ಮುಂದಾಗಿದ್ದಾರೆ. ಇನ್ನು ಸಂಬಂಧಿಕರಾಗಲಿ ಅಥವಾ ಸಮಾಜದ ಮುಖಂಡರಾಗಲಿ ವಿಠ್ಠಲ ರಾವಳ್ ಹತ್ತಿರ ಸುಳಿಯುತ್ತಿಲ್ಲ. ಸದ್ಯ ಸಂಬಂಧಿಕರ ನೀಚ ಕೃತ್ಯ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On – 3:24 pm, Sat, 3 January 26

Source link

NALCO Recruitment 2025: GATE ಪಾಸಾದವರಿಗೆ ಗುಡ್​ ನ್ಯೂಸ್​; ನ್ಯಾಷನಲ್ ಅಲ್ಯೂಮಿನಿಯಂ ಕಂಪನಿಯಲ್ಲಿ ಭರ್ಜರಿ ನೇಮಕಾತಿ – Kannada News | NALCO GET Recruitment 2025: 115 Engineering Jobs via GATE 2025 Apply Now!

ಗೇಟ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಗುಡ್​ ನ್ಯೂಸ್​ ಇಲ್ಲಿದೆ. ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ (NALCO), ಗ್ರಾಜುಯೇಟ್ ಎಂಜಿನಿಯರ್ ಟ್ರೈನಿ (GET) ಹುದ್ದೆಗೆ ಖಾಲಿ ಹುದ್ದೆಯ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಕಂಪನಿಯ ಅಧಿಕೃತ ವೆಬ್‌ಸೈಟ್ nalcoindia.com ಮೂಲಕ ಜನವರಿ 22 ರವರೆಗೆ ಅರ್ಜಿ ಸಲ್ಲಿಸಬಹುದು. ಕಂಪನಿಯು ಒಟ್ಟು ಸುಮಾರು 115 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹತಾ ಮಾನದಂಡಗಳು:

ಅರ್ಜಿದಾರರು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನದಲ್ಲಿ ಪೂರ್ಣಾವಧಿಯ, ನಿಯಮಿತ ಪದವಿಯನ್ನು ಹೊಂದಿರಬೇಕು. ಅಭ್ಯರ್ಥಿಗಳು ಗೇಟ್ 2025 ಪರೀಕ್ಷೆಯಲ್ಲಿ ಕನಿಷ್ಠ ಶೇ. 65 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಸಾಮಾನ್ಯ ವರ್ಗದವರಿಗೆ ಗರಿಷ್ಠ ವಯಸ್ಸಿನ ಮಿತಿ 30 ವರ್ಷಗಳು. ಅರ್ಹತೆಯ ಕುರಿತು ಹೆಚ್ಚಿನ ಮಾಹಿತಿಗಾಗಿ, ದಯವಿಟ್ಟು ಖಾಲಿ ಹುದ್ದೆಯ ಅಧಿಸೂಚನೆಯನ್ನು ಪರಿಶೀಲಿಸಿ.

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು 500 ರೂ. ಶುಲ್ಕವನ್ನು ಪಾವತಿಸಬೇಕಾಗುತ್ತದೆ, ಆದರೆ ಇತರ ವರ್ಗಗಳ ಅರ್ಜಿದಾರರು 100 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಶುಲ್ಕವನ್ನು ಪಾವತಿಸಬಹುದು.

ಇದನ್ನೂ ಓದಿ: ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವುದು ಹೇಗೆ?

  • nalcoindia.com ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ನೀಡಲಾದ ವೃತ್ತಿ ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
  • ಈಗ ಆಯಾ ಹುದ್ದೆಗೆ ಅರ್ಜಿ ಸಲ್ಲಿಸಲು ಲಿಂಕ್ ಅನ್ನು ಕ್ಲಿಕ್ ಮಾಡಿ.
  • ವಿವರಗಳನ್ನು ನಮೂದಿಸಿ ಮತ್ತು ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಶುಲ್ಕವನ್ನು ಪಾವತಿಸಿ ಮತ್ತು ಸಲ್ಲಿಸಿ.

NALCO ಹುದ್ದೆಯ ನೇಮಕಾತಿ ಅಧಿಸೂಚನೆಯನ್ನು ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಆಯ್ಕೆ ಪ್ರಕ್ರಿಯೆ ಏನು?

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಅವರ ಗೇಟ್ ಅಂಕಗಳು ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಆಯ್ಕೆ ಪ್ರಕ್ರಿಯೆಯ ವಿವರಗಳನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link