Category Archives: Blog

Your blog category

‘ನಾವು ಹೋಗಲು ಬಿಡಲ್ಲ’: ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು – Kannada News | Tears for Teacher: Students Protest Transfer of Favourite Educator in Government School

ಕೊಪ್ಪಳ, ಜ.3: ಕೊಪ್ಪಳ ತಾಲೂಕಿನ ಬಹದ್ದೂರ ಬಂಡಿ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರ ವರ್ಗಾವಣೆ ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಶಾಲಾ ಗೇಟ್‌ ಬಂದ್‌ ಮಾಡಿ ಭಾವುಕರಾಗಿ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ನೆಚ್ಚಿನ ಶಿಕ್ಷಕರಾದ ವೀರಪ್ಪ ಅವರನ್ನು ಶಾಲೆಯಿಂದ ಹೊರಗೆ ಹೋಗದಂತೆ ಕಣ್ಣೀರು ಹಾಕಿದ್ದಾರೆ. “ನಾವು ಹೋಗಲ್ಲ, ಸರ್ ಬರಬೇಕು,” ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಈ ಬಗ್ಗೆ ಪೊಷಕರೊಬ್ಬರು ಮಾತನಾಡಿದ್ದಾರೆ. ವೀರಪ್ಪ ಸರ್​​ ಅವರು ನಮ್ಮ ಮಕ್ಕಳನ್ನು ಅವರ ಮನೆಯ ಮಕ್ಕಳಿಗಿಂತ ಹೆಚ್ಚಾಗಿ ನೋಡ್ಕೊಂಡಿದ್ದಾರೆ. ನಮ್ಮ ಮಕ್ಕಳು ಅವರ ಪ್ರೀತಿಗೆ ಸೋತಿದ್ದಾರೆ. ಜತೆಗೆ ನಮ್ಮ ಮಕ್ಕಳು ಉದ್ದಾರ ಆಗಿದ್ದಾರೆ ಎಂದು ಹೇಳಿದ್ದಾರೆ. ಇನ್ನು ಮಕ್ಕಳ ಕಣ್ಣೀರು ನೋಡಿ ಶಿಕ್ಷಕರು ನಾಳೆ ಶಾಲೆಗೆ ಬರುವುದಾಗಿ ಭರವಸೆ ನೀಡಿದ್ದಾರೆ. ನಾಳೆ ನೀವು ಶಾಲೆಗೆ ಬರದಿದ್ದರೆ ನಾವು ಕೂಡ ನಾಳೆ ಶಾಲೆಗೆ ಬರುವುದಿಲ್ಲ ಎಂದು ಹೇಳಿದ್ದಾರೆ .

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Tirupati Security Breach: ತಿರುಪತಿ ದೇಗುಲದಲ್ಲಿ ಭಾರಿ ಭದ್ರತಾ ಲೋಪ, ಗೋಪುರ ಏರಿ ಕುಡುಕನಿಂದ ಅವಾಂತರ – Kannada News | Tirupati Security Breach: Drunk Man Climbs Gopuram at Govindaraja Swamy Temple, Sparks Safety Concerns

ತಿರುಪತಿಯ ಗೋವಿಂದರಾಜ ಸ್ವಾಮಿ ದೇವಸ್ಥಾನ

ತಿರುಪತಿ, ಜನವರಿ 3: ತಿರುಪತಿ ದೇಗುಲದಲ್ಲಿ (Tirupati Temple) ಭಾರಿ ಭದ್ರತಾ ಲೋಪ ಉಂಟಾಗಿದ್ದು, ಕುಡುಕನೊಬ್ಬ ಕಂಪೌಂಡ್ ಹಾರಿ ದೇಗುಲದ ಆವರಣ ಪ್ರವೇಶಿಸಿದ್ದಲ್ಲದೆ ಗೋಪುರ ಏರಿ ಅವಾಂತರ ಸೃಷ್ಟಿಸಿದ್ದಾನೆ. ತಿರುಪತಿಯ ಗೋವಿಂದರಾಜ ಸ್ವಾಮಿ ದೇವಸ್ಥಾನದಲ್ಲಿ (Govindaraja Swamy Temple) ಶುಕ್ರವಾರ ರಾತ್ರಿ ಈ ಘಟನೆ ಸಂಭವಿಸಿದೆ. ದೇಗುಲದಲ್ಲಿ ‘ಏಕಾಂತ ಸೇವೆ’ ಮುಗಿದ ಸಂದರ್ಭದಲ್ಲಿ ಆಗಂತುಕ ಭದ್ರತಾ ಪಡೆಗಳ ಕಣ್ತಪ್ಪಿಸಿ ಕಂಪೌಂಡ್ ಹಾರಿ ಒಳಬಂದು ಏಕಾಏಕಿ ಗೀಪುರ ಏರಿದ್ದಾನೆ. ನಂತರ ಅಲ್ಲಿದ ಕಳಶಗಳನ್ನು ಎಳೆಯಲು ಯತ್ನಿಸಿದ್ದಾನೆ. ಇದು ದೇಗುಲದ ಸಿಬ್ಬಂದಿ ಮತ್ತು ಭಕ್ತರಲ್ಲಿ ಭಯ ಹುಟ್ಟಿಸಿತು. ನಂತರ ಆರೋಪಿಯನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದರು.

ಆರೋಪಿಯನ್ನು ನಿಜಾಮಾಬಾದ್ ಜಿಲ್ಲೆಯ ಕೂರ್ಮಾವಾಡಾದ ಪೆದ್ದ ಮಲ್ಲ ರೆಡ್ಡಿ ಕಾಲೋನಿಯ ನಿವಾಸಿ ತಿರುಪತಿ ಎಂದು ಗುರುತಿಸಲಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸುಮಾರು ಮೂರು ಗಂಟೆಗಳ ಕಾಲ ಶ್ರಮಿಸಿ ಆತನನ್ನು ಗೋಪುರದಿಂದ ಸುರಕ್ಷಿತವಾಗಿ ಕೆಳಗೆ ಇಳಿಸಿದರು.

ಪೊಲೀಸರ ಬಳಿ ಮದ್ಯದ ಬಾಟಲ್ ಕೇಳಿದ ಕುಡುಕ!

ಮದ್ಯದ ಅಮಲಿನಲ್ಲಿ ದೇಗುಲದ ಗೋಪುರವನ್ನು ಏರಿದ ವ್ಯಕ್ತ ಕೆಳಗಿಳಿಯಲು ನಿರಾಕರಿಸಿದ್ದಾನೆ. ಅಲ್ಲದೆ, ಪೊಲೀಸರು ತನಗೆ ಮದ್ಯದ ಬಾಟಲ್ ನೀಡಬೇಕೆಂದು ಒತ್ತಾಯಿಸಿದ್ದಾನೆ. ತಿರುಪತಿ ಪೂರ್ವ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸುಮಾರು ಮೂರು ಗಂಟೆಗಳ ಕಾಲ ಆತನನ್ನು ಕೆಳಗೆ ಇಳಿಸಲು ಶ್ರಮಿಸಿದರು. ಅಪಾಯಕಾರಿ ಪರಿಸ್ಥಿತಿಯ ಚಾಣಾಕ್ಷತೆಯಿಂದ ಕಾರ್ಯನಿರ್ವಹಿಸಿದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕಬ್ಬಿಣದ ಏಣಿಗಳನ್ನು ಬಳಸಿ, ಹಗ್ಗಗಳ ಸಹಾಯದಿಂದ ಆತನನ್ನು ಗೋಪುರದ ಮೇಲಿನಿಂದ ಕೆಳಕ್ಕೆ ಕರೆತಂದರು. ನಂತರ ಆತನನ್ನು ವಶಕ್ಕೆ ಪಡೆಯಲಾಯಿತು.

ಇದನ್ನೂ ಓದಿ: ಹಿಮಾಚಲ ಪ್ರದೇಶದ ಪೊಲೀಸ್ ಸ್ಟೇಷನ್ ಬಳಿ ಭಾರೀ ಸ್ಫೋಟ

ಘಟನೆ ಬಗ್ಗೆ ವಿವರವಾದ ತನಿಖೆ ನಡೆಯುತ್ತಿದೆ. ತನಿಖೆ ಪೂರ್ಣಗೊಂಡ ನಂತರ ಘಟನೆಗೆ ಸಂಬಂಧಿಸಿದ ಎಲ್ಲಾ ಮಾಹಿತಿ ನೀಡುತ್ತೇವೆ ಎಂದು ಪೂರ್ವ ಡಿಎಸ್ಪಿ ಭಕ್ತವತ್ಸಲಂ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:18 am, Sat, 3 January 26

Source link

ಸಿದ್ದರಾಮಯ್ಯಗೆ ಪ್ರಶ್ನೆಗಳ ಸುರಿಮಳೆ ಸುರಿಸಿದ ಲಹರ್ ಸಿಂಗ್! ಸಿರೋಯಾ ಎಕ್ಸ್ ಪೋಸ್ಟ್​ನಲ್ಲೇನಿದೆ? – Kannada News | Lahar Singh Questions Siddaramaiah’s GRAAM Survey Report, X post goes viral

ಸಿಎಂ ಮುಂದೆ ಪ್ರಶ್ನೆಗಳ ಸುರಿಮಳೆ ಸುರಿಸಿದ ಲಹರ್ ಸಿಂಗ್ ಸಿರೋಯಾ!

ಬೆಂಗಳೂರು, ಜನವರಿ 03: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರಿ ವರದಿ ಮತ್ತು ಸಮೀಕ್ಷೆ ನಡೆಸುವ ಸಂಸ್ಥೆ GRAAM (ಗ್ಲೋಬಲ್ ರಿಸರ್ಚ್ ಅಂಡ್ ಅಕಾಡೆಮಿಕ್ ಅಸೋಸಿಯೇಷನ್ ಮೆಥೋಡ್ಸ್) ಸಂಶೋಧನೆ ವರದಿಗಳ ಬಗ್ಗೆ ಸಂಸದ, ಹಿರಿಯ ಬಿಜೆಪಿ ನಾಯಕ ಲಹರ್ ಸಿಂಗ್ ಸಿರೋಯಾ ತಮ್ಮ ಎಕ್ಸ್ ಖಾತೆಯಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು, 6 ಮಹತ್ವದ ಪ್ರಶ್ನೆಗಳನ್ನು ಸಿಎಂ ಮುಂದಿಟ್ಟಿದ್ದಾರೆ. ಸಿಎಂ, ಡಿಸಿಎಂ ಕುರ್ಚಿ ಕದನದ ಮಧ್ಯ ಸಿರೋಯಾ ಪೋಸ್ಟ್ ಮತ್ತು ಅವರು ಕೇಳಿರುವ ಪ್ರಶ್ನೆಗಳು ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಮಾಡಿದೆ.

ಪೋಸ್ಟ್ ಇಲ್ಲಿದೆ

ಇದನ್ನೂ ಓದಿ ಇವಿಎಂ ಬಗ್ಗೆ ಕರ್ನಾಟಕದ ಬಹುಪಾಲು ಜನರಿಗಿದೆ ವಿಶ್ವಾಸ: ಸಿಂ ಸಿದ್ದರಾಮಯ್ಯ, ಖರ್ಗೆ ತವರಲ್ಲೇ ಹೆಚ್ಚು!

ಸಿರೋಯಾ ಕೇಳಿರುವ ಪ್ರಶ್ನೆಗಳಿವು

2025ರ ಆಗಸ್ಟ್‌ನಲ್ಲಿ ಸಿದ್ದರಾಮಯ್ಯ ಸರ್ಕಾರದ ಇವ್ಯಾಲ್ಯುವೇಶನ್ & ಮ್ಯಾನಿಟರಿಂಗ್ ಅಥಾರಿಟಿ (EMA) ನಡೆಸಿದ ಸಮೀಕ್ಷೆ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.

  1.  ನಿಮ್ಮ ಸಮೀಕ್ಷೆಯ ವೆಬ್ಸೈಟ್​ನಲ್ಲಿದ್ದ ವರದಿಯನ್ನು ‘ಮತ ಚೋರಿ’ ಆರೋಪಗಳ ಮೊದಲು ನಡೆಸಲಾಗಿತ್ತು ಎಂದು ಹೇಳಿ ತೆಗೆದುಹಾಕಿದ ಕಾರಣವೇನು?
  2.  GRAAM ಅಧ್ಯಕ್ಷ ಡಾ. ಆರ್. ಬಾಲಸುಬ್ರಹ್ಮಣಿಯನ್ ಹಾರ್ವರ್ಡ್, ಕೊರ್ನೆಲ್ ಶಿಕ್ಷಣ ಹೊಂದಿರುವವರಾಗಿ ಸಮೀಕ್ಷೆ ನಡೆಸಲು ಯೋಗ್ಯರಲ್ಲರಾ?
  3.  ಡಾ. ಬಾಲಸುಬ್ರಹ್ಮಣಿಯನ್ ಪ್ರಧಾನಮಂತ್ರಿ ಮೋದಿಯ ಕುರಿತು ಪುಸ್ತಕ ಬರೆದಿದ್ದರೆ, ಅವರ ವೃತ್ತಿಪರತೆ ಮೇಲೆ ಪ್ರಭಾವವಾಯಿತೆ? ಹಾಗಾದರೆ ನೆಹರು-ಗಾಂಧಿ ರಾಜವಂಶದ ಬಗ್ಗೆ ಪುಸ್ತಕಗಳನ್ನು ಬರೆದವರೆಲ್ಲರೂ ಭ್ರಷ್ಟ ವೃತ್ತಿಪರರೇ? ಅಥವಾ ಹೊಗಳುಭಟ್ಟರೇ
  4. ಡಾ. ಬಾಲಸುಬ್ರಮಣಿಯನ್ (ಅವರು ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರಿನಲ್ಲಿ ದಶಕಗಳಿಂದ ಕೆಲಸ ಮಾಡಿದ್ದಾರೆ) ಅವರ ಸೈದ್ಧಾಂತಿಕ ಸಂಬಂಧದ ಬಗ್ಗೆ ಸಿದ್ದರಾಮಯ್ಯ ಅವರಿಗೆ ತಿಳಿದಿದ್ದರೆ, ಸಿದ್ದರಾಮಯ್ಯ ಅವರ ಮೊದಲ ಅವಧಿಯಲ್ಲಿ ಮತ್ತು ಈಗ, ಲೋಕಸಭಾ ಚುನಾವಣೆಗೆ ಮೊದಲು ಮತ್ತು ನಂತರ ಅವರ ಎರಡನೇ ಅವಧಿಯಲ್ಲಿ ಸರ್ಕಾರದ ಅನೇಕ ಕಾರ್ಯಕ್ರಮಗಳನ್ನು ಅಧ್ಯಯನ ಮಾಡಲು ಮತ್ತು ಮುನ್ಸೂಚನೆ ನೀಡಲು ವಿವಿಧ ಸರ್ಕಾರಿ ಇಲಾಖೆಗಳು GRAAM ಗೆ ಗುತ್ತಿಗೆಗಳನ್ನು ಏಕೆ ನೀಡಿವೆ
  5. 2013-2018 ರ ನಡುವೆ ಸಿದ್ದರಾಮಯ್ಯ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ ಡಾ. ಬಾಲಸುಬ್ರಮಣಿಯನ್ ಅವರ ನೇತೃತ್ವದಲ್ಲಿ GRAAM ನಡೆಸಿದ ಸಮೀಕ್ಷೆಗಳು ಮತ್ತು ಅಧ್ಯಯನಗಳ ಪಟ್ಟಿಯನ್ನು ತನಿಖಾ ತಾಣ ದಿ ಫೈಲ್ ಬಿಡುಗಡೆ ಮಾಡಿದೆ. ಆದರೆ ಈಗ ಈ ಯಾವುದೇ ಸಮೀಕ್ಷೆಗಳು ಮತ್ತು ಅಧ್ಯಯನಗಳನ್ನು ಕೇಂದ್ರ ಅಥವಾ ರಾಜ್ಯ ಚುನಾವಣಾ ಆಯೋಗವು ನಡೆಸುತ್ತಿಲ್ಲ ಯಾಕೆ?
  6. ಹಿಂದೆ ಕರ್ನಾಟಕ ಕಾಂಗ್ರೆಸ್ ಸರ್ಕಾರ GRAAM ವರದಿಗಳನ್ನು ಏಕೆ ಸ್ವೀಕರಿಸಿ, ಈಗ ಅದು ಸಮಸ್ಯಾತ್ಮಕವಾಗಿದೆ ಎನ್ನುತ್ತಿರುವಿದೇಕೆ? ಪ್ರಧಾನಿ ಮೋದಿ ಮೇಲಿನ ಕರ್ನಾಟಕ ಕಾಂಗ್ರೆಸ್‌ನ ದ್ವೇಷವೇ ಅವರನ್ನು ಮುನ್ನಡೆಸುತ್ತಿದೆಯೇ ಅಥವಾ ಡಿಕೆ ಶಿವಕುಮಾರ್ ಇಂದ ಸಿದ್ದರಾಮಯ್ಯ ಅವರ ಕುರ್ಚಿಯನ್ನು ಉಳಿಸಬೇಕಾದ ರಾಹುಲ್‌ಗಾಂಧಿಯವರ ಮೇಲೆ ಭಯವೇ ?

ಈ 6 ಪ್ರಶ್ನೆಗಳನ್ನು ಹಾಕಿರುವ ಲಹರ್ ಸಿಂಗ್, ಕೊನೆಯ 3 ಪ್ರಶ್ನೆಗಳನ್ನು ಸೂಕ್ಷ್ಮವಾಗಿ ಗಮನಿಸಿ ಎಂದೂ ಬರೆದುಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Shani Dev: ಇಂದು ವರ್ಷದ ಮೊದಲ ಶನಿವಾರ: ವರ್ಷ ಪೂರ್ತಿ ಶನಿ ದೇವರ ಆಶೀರ್ವಾದ ಪಡೆಯಲು ಈ ಪರಿಹಾರ ಮಾಡಿ – Kannada News | To get shani dev blessing year 2026 saturday remedies

ಹೊಸ ವರ್ಷ ಪ್ರಾರಂಭವಾಗಿದೆ. ಇಂದು ಹೊಸ ವರ್ಷದ ಮೊದಲ ಶನಿವಾರ. ಶನಿವಾರ ಶನಿ ದೇವರಿಗೆ ಸಮರ್ಪಿತವಾಗಿದೆ. ಶನಿವಾರದಂದು ಪೂಜೆ ಮತ್ತು ಉಪವಾಸ ಮಾಡುವುದರಿಂದ ಶನಿ ದೇವರ ಆಶೀರ್ವಾದ ಸದಾ ನಿಮ್ಮ ಮೇಲಿರುತ್ತದೆ. ಜೊತೆಗೆ ಜೀವನದ ಎಲ್ಲಾ ದುಃಖ ಮತ್ತು ತೊಂದರೆಗಳು ದೂರವಾಗುತ್ತದೆ ಎಂದು ನಂಬಲಾಗಿದೆ.

ಹೊಸ ವರ್ಷದ ಮೊದಲ ಶನಿವಾರದಂದು ಪ್ರಾರ್ಥನೆ ಮತ್ತು ಉಪವಾಸದ ಜೊತೆಗೆ ಕೆಲವು ವಿಶೇಷ ಕಾರ್ಯಗಳನ್ನು ಮಾಡಿದರೆ, ಶನಿ ದೇವರ ಆಶೀರ್ವಾದ ದೊರೆಯುತ್ತದೆ. ಪ್ರಗತಿಯ ಹೊಸ ಮಾರ್ಗಗಳು ತೆರೆದುಕೊಳ್ಳುತ್ತವೆ. ಹಾಗಾದರೆ, ಶನಿ ದೇವರನ್ನು ಮೆಚ್ಚಿಸಲು ವರ್ಷದ ಮೊದಲ ಶನಿವಾರ ಯಾವ ವಿಶೇಷ ಕಾರ್ಯಗಳನ್ನು ಮಾಡಬೇಕೆಂದು ಇಲ್ಲಿ ತಿಳಿದುಕೊಳ್ಳಿ.

ಸಾಸಿವೆ ಎಣ್ಣೆಯ ದೀಪ ಹಚ್ಚಿ:

ಶನಿವಾರ ಸ್ನಾನ ಮಾಡಿ ಸ್ವಚ್ಛವಾದ ಬಟ್ಟೆಗಳನ್ನು ಧರಿಸಿ. ನಂತರ, ಶನಿ ದೇವಸ್ಥಾನಕ್ಕೆ ಭೇಟಿ ನೀಡಿ ಮತ್ತು ಕಪ್ಪು ಬತ್ತಿಯಿಂದ ಸಾಸಿವೆ ಎಣ್ಣೆಯ ದೀಪವನ್ನು ಬೆಳಗಿಸಿ. ವರ್ಷದ ಮೊದಲ ಶನಿವಾರ ಇದನ್ನು ಮಾಡುವುದರಿಂದ ವರ್ಷವಿಡೀ ಶನಿ ದೇವರ ಆಶೀರ್ವಾದ ಸಿಗುತ್ತದೆ ಎಂದು ನಂಬಲಾಗಿದೆ.

ದಾನ ಮಾಡಿ:

ವರ್ಷದ ಮೊದಲ ಶನಿವಾರ ದಾನ ಮಾಡಲು ಮರೆಯಬೇಡಿ. ಹಾಗೆ ಮಾಡುವುದು ತುಂಬಾ ಪುಣ್ಯ. ಶನಿವಾರ ಶನಿ ದೇವರನ್ನು ಪೂಜಿಸುವುದರ ಜೊತೆಗೆ, ಬಡವರಿಗೆ ಅಥವಾ ನಿರ್ಗತಿಕರಿಗೆ ಎಳ್ಳು ದಾನ ಮಾಡಿ. ಹಾಗೆ ಮಾಡುವುದರಿಂದ ನಿಮ್ಮ ಜಾತಕದಲ್ಲಿ ಶನಿಯು ಬಲಗೊಳ್ಳುತ್ತದೆ ಮತ್ತು ನೀವು ಆರ್ಥಿಕ ಸಮಸ್ಯೆಗಳಿಂದ ಮುಕ್ತರಾಗುತ್ತೀರಿ.

ಇದನ್ನೂ ಓದಿ: ಪ್ರಪಂಚದ ಏಕೈಕ ಜಲಾಧಿವಾಸ ಗಣಪ; ಗುಡ್ಡಟ್ಟು ವಿನಾಯಕ ದೇವಸ್ಥಾನದ ಇಂಟರೆಸ್ಟಿಂಗ್​ ಸಂಗತಿ ಇಲ್ಲಿದೆ

ಬಡವರಿಗೆ ಸಾಸಿವೆ ಎಣ್ಣೆ ನೀಡಿ:

ವರ್ಷದ ಮೊದಲ ಶನಿವಾರ, ಕಬ್ಬಿಣದ ಪಾತ್ರೆಯಲ್ಲಿ ಸಾಸಿವೆ ಎಣ್ಣೆಯನ್ನು ತುಂಬಿಸಿ ಅದರಲ್ಲಿ ನಿಮ್ಮ ಮುಖವನ್ನು ನೋಡಿ. ನಂತರ, ಅದನ್ನು ಬಡವರಿಗೆ ದಾನ ಮಾಡಿ. ಹಾಗೆ ಮಾಡುವುದರಿಂದ ನಿಮ್ಮ ಜೀವನದಿಂದ ನಕಾರಾತ್ಮಕತೆ ದೂರವಾಗುತ್ತದೆ ಮತ್ತು ಯಶಸ್ಸಿಗೆ ಹೊಸ ಮಾರ್ಗಗಳು ತೆರೆಯುತ್ತವೆ.

ತೆಂಗಿನಕಾಯಿಯಿಂದ ಈ ಕೆಲಸ ಮಾಡಿ:

ವರ್ಷದ ಮೊದಲ ಶನಿವಾರ, ತೆಂಗಿನಕಾಯಿಯನ್ನು ತುಂಡರಿಸಿ, ಅದರಲ್ಲಿ ಸಕ್ಕರೆ ಮತ್ತು ಹಿಟ್ಟನ್ನು ತುಂಬಿಸಿ. ನಂತರ, ಸಂಜೆ, ತೆಂಗಿನಕಾಯಿಯನ್ನು ಏಕಾಂತ ಸ್ಥಳದಲ್ಲಿ ಮಣ್ಣಿನಲ್ಲಿ ಹೂತುಹಾಕಿ. ಹೀಗೆ ಮಾಡುವುದರಿಂದ ಜೀವನದ ಕಷ್ಟಗಳಿಂದ ಮುಕ್ತಿ ಸಿಗುತ್ತದೆ.

ಶನಿ ಸ್ತೋತ್ರ ಪಠಿಸಿ:

ಶನಿವಾರ ಬೆಳಿಗ್ಗೆ ಸ್ನಾನ ಮಾಡಿದ ನಂತರ, ಶನಿ ಸ್ತೋತ್ರವನ್ನು 21 ಬಾರಿ ಪಠಿಸಿ. ಹಾಗೆ ಮಾಡುವುದರಿಂದ ಶನಿದೇವನು ಪ್ರಸನ್ನನಾಗುತ್ತಾನೆ. ಇದು ಶನಿಯ ದುಷ್ಪರಿಣಾಮಗಳಿಂದ ಪರಿಹಾರವನ್ನು ನೀಡುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

International Mind-Body Wellness Day 2026: ದೈಹಿಕ, ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳಲು ಈ ಸರಳ ಅಭ್ಯಾಸಗಳನ್ನು ಪಾಲಿಸಿ – Kannada News | International Mind Body Wellness Day 2026: Know the history and importance of Mind Body Wellness Day

ಅಂತಾರಾಷ್ಟ್ರೀಯ ಮನಸ್ಸು ದೇಹ ಸ್ವಾಸ್ಥ್ಯ ದಿನImage Credit source: Freepik

ಮಾನಸಿಕ ಮತ್ತು ದೈಹಿಕ ಆರೋಗ್ಯದ ಸಮತೋಲನವು ಜೀವನದ ಗುಣಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಮಾನಸಿಕ ಮತ್ತು ದೈಹಿಕ ಆರೋಗ್ಯವು ಬೇರ್ಪಡಿಸಲಾಗದಂತೆ ಸಂಬಂಧ ಹೊಂದಿದ್ದು, ಈ ಎರಡೂ ಆರೋಗ್ಯವು ಉತ್ತಮವಾಗಿದ್ದಾಗ, ವ್ಯಕ್ತಿಯು ಉತ್ತಮ, ಸಕಾರಾತ್ಮಕ ಜೀವನವನ್ನು ನಡೆಸಲು ಸಾಧ್ಯ. ಅಲ್ಲದೆ, ಮಾನಸಿಕ ಶಾಂತಿ ಮತ್ತು ದೈಹಿಕ ಸದೃಢತೆಯು ಒತ್ತಡವನ್ನು ಕಡಿಮೆ ಮಾಡಲು, ಆತ್ಮವಿಶ್ವಾಸವನ್ನು ಹೆಚ್ಚಿಸಲು ಮತ್ತು ಒಟ್ಟಾರೆ ಯೋಗಕ್ಷೇಮವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ ಈ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಲು ಪ್ರತಿ ವರ್ಷ ಜನವರಿ 03 ರಂದು ಅಂತಾರಾಷ್ಟ್ರೀಯ ಮನಸ್ಸು ದೇಹದ ಸ್ವಾಸ್ಥ್ಯ (Mind-Body Wellness) ದಿನವನ್ನು ಆಚರಿಸಲಾಗುತ್ತದೆ.

ಅಂತಾರಾಷ್ಟ್ರೀಯ ಮನಸ್ಸು-ದೇಹ ಸ್ವಾಸ್ಥ್ಯ ದಿನದ ಇತಿಹಾಸವೇನು?

ಜನವರಿ 3 ರಂದು ಅಂತರರಾಷ್ಟ್ರೀಯ ಮನಸ್ಸು-ದೇಹ ಸ್ವಾಸ್ಥ್ಯ ದಿನವನ್ನು ಆಚರಿಸಲಾಗುತ್ತದೆ, ಈ ದಿನವು ಮಾನಸಿಕ ಮತ್ತು ದೈಹಿಕ ಆರೋಗ್ಯದ ಮಹತ್ವವನ್ನು ಅರ್ಥಮಾಡಿಕೊಳ್ಳಲು ಮತ್ತು ಉತ್ತೇಜಿಸಲು ಮೀಸಲಾಗಿದೆ. 2019 ರಲ್ಲಿ ಆರಂಭವಾದ ಈ ದಿನವು ಜನರನ್ನು ಸಮತೋಲಿತ ಜೀವನಶೈಲಿಯತ್ತ ಪ್ರೇರೇಪಿಸುವ ಉದ್ದೇಶವನ್ನು ಹೊಂದಿದೆ.

ಅಂತಾರಾಷ್ಟ್ರೀಯ ಮನಸ್ಸು-ದೇಹ ಸ್ವಾಸ್ಥ್ಯ ದಿನದ ಉದ್ದೇಶವೇನು?

  • ಈ ದಿನದ ಪ್ರಮುಖ ಉದ್ದೇಶ ಮಾನಸಿಕ ಮತ್ತು ದೈಹಿಕ ಆರೋಗ್ಯದ ನಡುವೆ ಸಾಮರಸ್ಯವನ್ನು ಉತ್ತೇಜಿಸುವುದು
  • ಮಾನಸಿಕ ಮತ್ತು ದೈಹಿಕ ಆರೋಗ್ಯದ ಸ್ವಾಸ್ಥ್ಯದ ಬಗ್ಗೆ ಅರಿವು ಮೂಡಿಸುವುದು.
  • ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಲು ಪ್ರೇರೇಪಿಸುವುದು.
  • ಈ ದಿನವು ಆರೋಗ್ಯಕರ ಆಹಾರ ಸೇವನೆ ಮತ್ತು ಆರೋಗ್ಯಕ ಜೀವನಶೈಲಿಯನ್ನು ಅಳವಡಿಸಿಕೊಳ್ಳಲು ಜನರಿಗೆ ಪ್ರೇರೇಪಿಸುತ್ತದೆ.

ದೈಹಿಕ, ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳಲು ಈ ಸರಳ ಅಭ್ಯಾಸಗಳನ್ನು ಪಾಲಿಸಿ:

ಪ್ರತಿದಿನ ವ್ಯಾಯಾಮ ಮಾಡಿ: ವ್ಯಾಯಾಮವು ದೈಹಿಕ ಮತ್ತು ಮಾನಸಿಕ ಆರೋಗ್ಯ ಎರಡಕ್ಕೂ ಪ್ರಯೋಜನಕಾರಿಯಾಗಿದೆ. ನಿಯಮಿತ ವ್ಯಾಯಾಮವು ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ, ತೂಕವನ್ನು ನಿಯಂತ್ರಣದಲ್ಲಿಡುತ್ತದೆ ಮತ್ತು ಹೃದಯ, ಸ್ನಾಯುಗಳ ಆರೋಗ್ಯವನ್ನು ಸುಧಾರಿಸುತ್ತದೆ. ವಾಸ್ತವವಾಗಿ, ವ್ಯಾಯಾಮವು ದೇಹದಲ್ಲಿ ಎಂಡಾರ್ಫಿನ್‌ಗಳನ್ನು (ಸಂತೋಷದ ಹಾರ್ಮೋನುಗಳು) ಹೆಚ್ಚಿಸುತ್ತದೆ. ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯು ಪ್ರತಿದಿನ 30 ನಿಮಿಷಗಳ ವ್ಯಾಯಾಮ ಮಾಡಬೇಕು.ನೃತ್ಯ, ಈಜು, ವಾಕಿಂಗ್‌ ಈ ರೀತಿಯ ಯಾವುದೇ ಚಟುವಟಿಕೆಯಲ್ಲಿ ನಿಮ್ಮನ್ನು ನೀವು ತೊಡಗಿಸಿ.

ಚೆನ್ನಾಗಿ ನಿದ್ದೆ ಮಾಡಿ: ನಿದ್ರೆ ಮಾನಸಿಕ ಶಾಂತಿಯನ್ನು ನೀಡುವುದಲ್ಲದೆ ನಿಮ್ಮ ಹೃದಯದ ಆರೋಗ್ಯವನ್ನೂ ಸುಧಾರಿಸುತ್ತದೆ. ಪ್ರತಿದಿನ 7 ರಿಂದ 9 ಗಂಟೆಗಳ ಕಾಲ ನಿದ್ರೆ ಮಾಡುವುದರಿಂದ ಬೊಜ್ಜು ಮತ್ತು ಜೀರ್ಣಕಾರಿ ಸಮಸ್ಯೆಗಳಿಂದ ನಿಮ್ಮನ್ನು ನೀವು ಕಾಪಾಡಿಕೊಳ್ಳಬಹುದು. ಅಲ್ಲದೆ ಒತ್ತಡಮುಕ್ತ ಜೀವನವನ್ನು ನಡೆಸಬಹುದು.

ಇದನ್ನೂ ಓದಿ: ವಸುದೈವ ಕುಟುಂಬಕಂ; ಜಾಗತಿಕ ಕುಟುಂಬ ದಿನದ ಆಚರಣೆಯ ಬಗ್ಗೆ ತಿಳಿಯಿರಿ

 ಆರೋಗ್ಯಕರ ಆಹಾರ ಸೇವನೆ: ನೀವು ಏನು ತಿನ್ನುತ್ತೀರೋ ಅದು ನಿಮ್ಮ ಮನಸ್ಸಿಗೆ ಸಂಬಂಧಿಸಿದೆ ಎಂದು ಹೇಳಲಾಗುತ್ತದೆ. ಇದರರ್ಥ ನೀವು ಏನು ತಿನ್ನುತ್ತೀರಿ ಎಂಬುದು ನಿಮ್ಮ ಮನಸ್ಸಿನ ಮೇಲೆ ಪರಿಣಾಮ ಬೀರುತ್ತದೆ. ಹೆಚ್ಚು ಜಂಕ್‌, ಎಣ್ಣೆಯುಕ್ತ ಮತ್ತು ಮಸಾಲೆಯುಕ್ತ ಆಹಾರವನ್ನು ಸೇವನೆ ಮಾಡುವುದರಿಂದ ದೇಹಕ್ಕೆ ಸರಿಯಾದ ಪೋಷಕಾಂಶ ದೊರೆಯುವುದಿಲ್ಲ. ಈ ಪೋಷಕಾಂಶಗಳ ಕೊರತೆಯು ದಿನವಿಡೀ ಆಯಾಸ ಮತ್ತು ದೌರ್ಬಲ್ಯಕ್ಕೆ ಕಾರಣವಾಗಬಹುದು. ಪ್ರೋಟೀನ್, ಜೀವಸತ್ವಗಳು, ಕಬ್ಬಿಣ ಮತ್ತು ಕ್ಯಾಲ್ಸಿಯಂ ಸಮೃದ್ಧವಾಗಿರುವ ಆಹಾರವನ್ನು ಸೇವಿಸುವುದರಿಂದ ನಿಮ್ಮ ದೇಹವು ಫಿಟ್ ಆಗಿರುವುದಲ್ಲದೆ ನಿಮ್ಮ ಮನಸ್ಸನ್ನು ಆರೋಗ್ಯಕರವಾಗಿರಿಸುತ್ತದೆ.

ಧ್ಯಾನ ಮಾಡಿ: ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಧ್ಯಾನವು ಒಂದು ಮಾರ್ಗವಾಗಿದೆ.  ಹೌದು ಧ್ಯಾನವು ಮಾನಸಿಕ ಒತ್ತಡ, ಆತಂಕ ಮತ್ತು ಖಿನ್ನತೆಯಿಂದ ಪರಿಹಾರವನ್ನು ನೀಡುವುದಲ್ಲದೆ, ಯಾವುದೇ ರೀತಿಯ ವ್ಯಸನಗಳನ್ನು ನಿವಾರಿಸುವಲ್ಲಿಯೂ ಪ್ರಯೋಜನಕಾರಿ. ಹಾಗಾಗಿ ಬೆಳಗ್ಗಿ 10 ರಿಂದ 15 ನಿಮಿಷಗಳ ಕಾಲ ಧ್ಯಾನ ಮಾಡಿ.

ನಿಮಗಾಗಿ ಸಮಯ ಮೀಸಲಿಡಿ: ನಿಮ್ಮ ದೇಹ ಮತ್ತು ಮನಸ್ಸು ಎರಡನ್ನೂ ಆರೋಗ್ಯಕರವಾಗಿ ಮತ್ತು ಸಂತೋಷವಾಗಿಡಲು ನಿಮಗಾಗಿ ಸ್ವಲ್ಪ ಸಮಯವನ್ನು ಮೀಸಲಿಡಿ. ಪ್ರಯಾಣ, ನೃತ್ಯ, ಸಂಗೀತ ಅಥವಾ ಯಾವುದೇ ನಿಮ್ಮ ಇಷ್ಟದ ಕೆಲಸಗಳನ್ನು ಮಾಡಿ, ಇದು ಒತ್ತಡವನ್ನು ನಿವಾರಿಸಿ ನಿಮ್ಮ ಮನಸ್ಸಿಗೆ ವಿಶ್ರಾಂತಿಯನ್ನು ನೀಡುತ್ತದೆ. ಇನ್ನೊಂದೇನೆಂದರೆ ಯಾವಾಗಲೂ ಸಕಾರಾತ್ಮಕವಾಗಿರಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶ್ರದ್ಧಾಂಜಲಿಗೂ ಪೋಸ್ಟರ್ ಹಾಕ್ತಾರೆ; ಗಿಲ್ಲಿ ತಿರುಗೇಟಿಗೆ ಮಂಕಾದ ಅಶ್ವಿನಿ ಗೌಡ – Kannada News | Gilli’s Shraddhanjali Poster Counter Silences Ashwini Gowda in Heated Spat

ಅಶ್ವಿನಿ ಗೌಡ ಹಾಗೂ ಗಿಲ್ಲಿ ನಟ ಮಧ್ಯೆ ಬಿಗ್ ಬಾಸ್ (Bigg Boss) ಅಲ್ಲಿ ಒಳ್ಳೆಯ ಕಾಂಪಿಟೇಷನ್ ಬೆಳೆದಿದೆ. ಇಬ್ಬರ ಮಧ್ಯೆ ಆಗಾಗ ಕಿರಿಕ್​​ಗಳು ಆಗುತ್ತಲೇ ಇರುತ್ತವೆ. ಜನವರಿ 2ರ ಎಪಿಸೋಡ್​​ನಲ್ಲಿ ಇಬ್ಬರ ಮಧ್ಯೆ ಕಿರಕ್ ಆಗಿದೆ. ಕಳಪೆ ಕೊಡೋ ವಿಷಯದಲ್ಲಿ ಅಶ್ವಿನಿ ಗೌಡ ಹಾಗೂ ಗಿಲ್ಲಿ ಮಧ್ಯೆ ಘನಘೋರ ಜಗಳ ನಡೆದಿದೆ. ಅಶ್ವಿನಿ ಟ್ರಿಗರ್ ಮಾಡಿ, ಅವರಿಗೆ ತಿರುಗೇಟು ನೀಡಿದ್ದಾರೆ ಗಿಲ್ಲಿ.

ಅಶ್ವಿನಿ ಗೌಡ ಅವರು ಮೊದಲು ಗಿಲ್ಲಿಗೆ ಕಳಪೆ ನೀಡಿದರು. ಇದಕ್ಕೆ ಅವರು ಕೊಟ್ಟ ಕಾರಣ ಸೂಕ್ತ ಆಗಿರಲಿಲ್ಲ ಎಂದು ಗಿಲ್ಲಿಗೆ ಅನಿಸಿದೆ. ಇಬ್ಬರ ಮಧ್ಯೆ ಈ ವಿಯಕ್ಕೆ ಚರ್ಚೆಗಳು ನಡೆದವು. ಆ ಬಳಿಕ ಗಿಲ್ಲಿ ನಟ ಅವರು ಕಳಪೆಗೆ ಅಶ್ವಿನಿ ಗೌಡ ಹೆಸರನ್ನು ತೆಗೆದುಕೊಂಡರು. ಈ ವೇಳೆ ಏಟಿನ ಮೇಲೆ ಏಟನ್ನು ಕೊಟ್ಟಿದ್ದಾರೆ.

‘ನೀನು ಜೋಕರ್’ ಎಂದು ಅಶ್ವಿನಿ ಅವರು ಗಿಲ್ಲಿಗೆ ಹೇಳಿದರು. ಇದಕ್ಕೆ ತಿರುಗೇಟು ಕೊಟ್ಟ ಗಿಲ್ಲಿ, ‘ಹೌದು ನಾನು ಜೋಕರ್’ ಎಂಬುದನ್ನು ಒಪ್ಪಿಕೊಂಡರು. ಹಾಸ್ಯ ಶೋಗಳನ್ನು ಮಾಡುತ್ತಾ ಎಲ್ಲರನ್ನೂ ನಗಿಸೋ ಕೆಲಸ ಗಿಲ್ಲಿಯದ್ದು. ಈ ಕಾರಣದಿಂದಲೇ ಅವರು ತಮ್ಮನ್ನು ತಾವು ಜೋಕರ್ ಎಂದು ಕರೆದುಕೊಂಡರು.

ಅಶ್ವಿನಿ ಗೌಡ ಅವರು ಈವರೆಗೆ ಕ್ಯಾಪ್ಟನ್ ಆಗಿಯೇ ಇಲ್ಲ. ಈ ಬಗ್ಗೆ ಅವರಿಗೆ ಬೇಸರ ಇದೆ. ಈ ವಿಷಯ ಇಟ್ಟುಕೊಂಡು ಗಿಲ್ಲಿ ಕೌಂಟರ್ ಕೊಟ್ಟರು. ‘ನಿಮಗೆ ಈವರೆಗೆ ಕ್ಯಾಪ್ಟನ್ ಆಗೋಕೆ ಸಾಧ್ಯವಾಗಿಲ್ಲ’ ಎಂದರು. ಈ ಮಾತು ಅಶ್ವಿನಿಗೆ ಚುಚ್ಚಿದೆ.

ಇದನ್ನೂ ಓದಿ: ಈ ವಾರ ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ

ಫೈನಲ್ ಟಾಸ್ಕ್ ಅಲ್ಲಿ ಅಶ್ವಿನಿ ಹಾಗೂ ಧನುಷ್ ಆಡಬೇಕಿತ್ತು. ಇದಕ್ಕಾಗಿ ಪೋಸ್ಟರ್ ಹಾಕಲಾಗಿತ್ತು. ಇದನ್ನು ಅಶ್ವಿನಿ ಹೈಲೈಟ್ ಮಾಡಿದರು. ‘ನನ್ನ ಫೋಟೋ ಕೊನೆಪಕ್ಷ ಪೋಸ್ಟರ್​ ಅಲ್ಲಾದರೂ ಬಂತು’ ಎಂದು ಹೆಮ್ಮೆಯಿಂದ ಬೀಗಿದರು. ಇದಕ್ಕೆ ಗಿಲ್ಲಿ ನಟ ಕೊಟ್ಟ ಕೌಂಟರ್ ಅವರಿಂದ ಸಹಿಸಿಕೊಳ್ಳೋಕೆ ಸಾಧ್ಯವಾಗಿಲ್ಲ. ‘ಶ್ರದ್ಧಾಂಜಲಿಗೂ ಪೋಸ್ಟರ್ ಹಾಕ್ತಾರೆ ಅದ್ರಲ್ಲೇನಿದೆ’ ಎಂದರು. ಈ ಡೈಲಾಗ್​​ಗೆ ಅವರಿಂದ ಉತ್ತರ ಹೇಳಲು ಸಾಧ್ಯವಾಗಲೇ ಇಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 11:17 am, Sat, 3 January 26

Source link

ರಾಷ್ಟ್ರಪತಿ, ಪ್ರಧಾನ ಮಂತ್ರಿಯ AI ಡೀಪ್‌ಫೇಕ್ ವಿಡಿಯೋ ಸೃಷ್ಟಿಸಿದ ವ್ಯಕ್ತಿಯ ಬಂಧನ – Kannada News | Deepfake Scandal: Muzaffarpur Arrest Over AI Generated President, PM Video

ಎಐ ಡೀಪ್‌ಫೇಕ್ ವಿಡಿಯೋ ಮಾಡಿದ ಆರೋಪಿ

ಮುಜಫರ್ಪುರ, ಜ.2: ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಯ ಹೆಸರು, ಧ್ವನಿಗಳು, ಫೋಟೋವನ್ನು ಬಳಸಿಕೊಂಡು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ನಕಲಿ ವೀಡಿಯೊವನ್ನು ರಚಿಸಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊರ್ವನನ್ನು ಮುಜಫರ್ಪುರ ಪೊಲೀಸರು ಬಂಧಿಸಿದ್ದಾರೆ. ಜನವರಿ 2, 2026 ರಂದು, ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿ ಅವರ AI ವೀಡಿಯೊಗಳನ್ನು ಬಳಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾನೆ. ಈ ಕೃತ್ಯವನ್ನು ಮಾಡಿದ ವ್ಯಕ್ತಿಯನ್ನು ಪ್ರಮೋದ್​​ ಕುಮಾರ್​ ಎಂದು ಗುರುತಿಸಲಾಗಿದೆ. ಭಾರತದ ರಾಷ್ಟ್ರಪತಿ ಹಾಗೂ ಪ್ರಧಾನಿ ಮಂತ್ರಿಯನ್ನು ಹೋಲಿಕೆಯಾಗುವಂತೆ ಧ್ವನಿಯನ್ನು ಬಳಸಿಕೊಂಡು ಎಐ ಮೂಲಕ ಡೀಪ್​​​ಪೇಕ್​​ ಮಾಡಲಾಗಿದೆ.

ಮುಜಫರ್​​​ಪುರ ಪೊಲೀಸ್​​ ವರಿಷ್ಠಾಧಿಕಾರಿ ಕಚೇರಿ ಬಿಡುಗಡೆ ಮಾಡಿದ ಪ್ರಕಟಣೆ ಪ್ರಕಾರ, ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನಿ ಹಾಗೂ ರಾಷ್ಟ್ರಪತಿ ಅವರ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದು ಸಾರ್ವಜನಿಕರನ್ನು ದಾರಿತಪ್ಪಿಸುವ ಮತ್ತು ದೇಶದ ಅತ್ಯುನ್ನತ ಹುದ್ದೆಯಲ್ಲಿರುವವರ ಘನತೆ, ಪ್ರತಿಷ್ಠೆ, ವಿಶ್ವಾಸಕ್ಕೆ ಹಾನಿ ಮಾಡಿದೆ ಎಂದು ಹೇಳಿದ್ದಾರೆ.

ಈ ಮೂಲಕ ಸಾರ್ವಜನಿಕರಲ್ಲಿ ತಪ್ಪು ಕಲ್ಪನೆ ಮೂಡಿಸುವುದು, ಹಾಗೂ ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲೆ ಅಪನಂಬಿಕೆಯನ್ನು ಬರುವಂತೆ ಮಾಡುತ್ತಿದೆ ಎಂದು ಹೇಳಿದ್ದಾರೆ. ರಾಷ್ಟ್ರವಿರೋಧಿ ಭಾವನೆ, ವದಂತಿಗಳನ್ನು, ಸಾಮಾಜಿಕ ಅಶಾಂತಿಯನ್ನು ಸೃಷ್ಟಿಸುವ ಕೆಲಸವನ್ನು ಮಾಡಬಾರದು ಎಂದು ಹೇಳಿದ್ದಾರೆ. ಜತೆಗೆ ಇಂತಹ ಕೃತ್ಯ ಮಾಡಿದವರ ಮೇಲೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುವುದು.

ಇದನ್ನೂ ಓದಿ: ನಮ್ಮ ಬೆಂಬಲ ಭಾರತಕ್ಕೆ: ಚೀನಾ-ಪಾಕ್​​ ಸಂಬಂಧ ಬಲಗೊಳ್ಳುತ್ತಿದೆ, ಭಾರತಕ್ಕೆ ಎಚ್ಚರಿಕೆ ನೀಡಿದ ಬಲೂಚಿಸ್ತಾನ

ಇನ್ನು ಇಂತಹ ಪ್ರಕರಣಗಳನ್ನು ತಡೆಯಲು ಹಾಗೂ ಇದರ ತನಿಖೆಯನ್ನು ಮಾಡಲು ವಿಶೇಷ ತನಿಖೆ ತಂಡವನ್ನು ರಚನೆ ಮಾಡುವಂತೆ ಮುಜಪ್​​​ಪುರದ ಎಸ್​ಎಸ್​​​​​ಪಿ ನಿರ್ದೇಶನ ನೀಡಿದೆ. ಇನ್ನು ಪ್ರಧಾನಿ, ರಾಷ್ಟ್ರಪತಿ ಅವರ ಎಐ ವಿಡಿಯೋ ಮಾಡಿರುವ ವ್ಯಕ್ತಿಯಿಂದ ಮೊಬೈಲ್​​ನ್ನು ವಶಪಡಿಸಿಕೊಳ್ಳಲಾಗಿದೆ. 01/26ರಂತೆ ಪ್ರಕರಣ ದಾಖಲಾಗಿದ್ದು, ಪ್ರಮೋದ್​​ ಕುಮಾರ್​​ನ ಕ್ರಿಮಿನಲ್​​​ ಹಿನ್ನಲೆಗಳ ಬಗ್ಗೆ ಪರಿಶೀಲನೆ ಮಾಡಲಾಗಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಟಿ20 ವಿಶ್ವಕಪ್​​ಗೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಗುಡ್ ನ್ಯೂಸ್ – Kannada News | Josh Hazelwood will be available for T20 World Cup 2026

ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ಕ್ಯಾಮರೂನ್ ಗ್ರೀನ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ.

Source link

ಜೈಲಲ್ಲಿದ್ದ ಉಗ್ರನಿಗೆ ಹಣ, ಮೊಬೈಲ್, ವಾಕಿಟಾಕಿ ಕೊಡ್ತಿದ್ದ ಪೊಲೀಸ್-ಮನೋವೈದ್ಯ: ಎನ್​ಐಎ ಚಾರ್ಜ್​ಶೀಟ್​ನಲ್ಲಿ ಸ್ಫೋಟಕ ಅಂಶ – Kannada News | NIA Chargesheet Exposes Police Psychiatrist Nexus in Parappana Agrahara Jail Terror Funding Case

ಕಾನ್ಸ್​ಟೇಬಲ್ ಚಾನ್ ಪಾಷಾ, ಅನೀಸ್ ಫಾತಿಮಾ (ಸಂಗ್ರಹ ಚಿತ್ರ)

ಬೆಂಗಳೂರು, ಜನವರಿ 3: ಅದು ಪೊಲೀಸ್ ಇಲಾಖೆಯನ್ನೇ ಬೆಚ್ಚಿ ಬೀಳಿಸಿದ್ದ ಪ್ರಕರಣ. ಸಜಾಬಂಧಿ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ (Parappana Agrahara Jail) ಲಷ್ಕರ್ ಎ ತೊಯ್ಬಾ ಉಗ್ರ ಟಿ‌. ನಸೀರ್​​ಗೆ ನೆರವು ನೀಡಿದ್ದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ ಓರ್ವ ಎಎಸ್ಐ, ಜೈಲಿನ ಮನೋವೈದ್ಯ ಭಾಗಿಯಾಗಿದ್ದು ಎಲ್ಲರ ಹುಬ್ಬೇರುವಂತೆ ಮಾಡಿತ್ತು. ಪ್ರಕರಣದ ತನಿಖೆ ಕೈಗೊಂಡ ಎನ್ಐಎ (NIA) ಅಧಿಕಾರಿಗಳು ಮೂವರು ಆರೋಪಿಗಳ ವಿರುದ್ದ ಎನ್ಐಎ ಸ್ಪೆಷಲ್‌ ಕೋರ್ಟ್​​ಗೆ ಚಾರ್ಜ್​​ಶೀಟ್ ಸಲ್ಲಿಸಿದ್ದಾರೆ.

ಜೈಲಿನಲ್ಲಿದ್ದ ಉಗ್ರನಿಗಾಗಿ ಸಿದ್ಧವಾಗ್ತಿತ್ತು ಹ್ಯಾಂಡ್ ಗ್ರೆನೇಡ್!

ಉಗ್ರನಿಗೆ ನೆರವು ನೀಡಿದ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ಸಿಎಆರ್ ಕಾನ್ಸ್​ಟೇಬಲ್ ಚಾನ್ ಪಾಷಾ, ಜೈಲಿನ ಮನೋವೈದ್ಯ ನಾಗರಾಜ್ ಮತ್ತು ನಾಪತ್ತೆಯಾಗಿರುವ ಶಂಕಿತ ಉಗ್ರ ಜುನೈದ್ ಅಹಮದ್ ತಾಯಿ ಅನೀಸ್ ಫಾತೀಮಾಳನ್ನು ಬಂಧಿಸಿದ್ದರು. ಪ್ರಕರಣದ ತನಿಖೆ ವೇಳೆ, ಮೂವರು ಆರೋಪಿಗಳ‌ ಸಂಚು ಹಾಗೂ ಅಪರಾಧ ಕೃತ್ಯಗಳು ಬೆಳಕಿಗೆ ಬಂದಿವೆ. ಪ್ರಮುಖವಾಗಿ ಆರೋಪಿ ಅನೀಸ್ ಫಾತಿಮಾ, ತಲೆಮರೆಸಿಕೊಂಡಿರುವ ಜುನೈದ್ ಅಹಮದ್ ತಾಯಿಯಾಗಿದ್ದು, ಎಲ್ಇಟಿ ಉಗ್ರ ಟಿ. ನಸೀರ್​​ಗೆ ಹಣಕಾಸಿನ ವ್ಯವಸ್ಥೆ ಮಾಡುತ್ತಿದ್ದಳು. ಮಗನ‌ ಸೂಚನೆಯಂತೆ ಹ್ಯಾಂಡ್ ಗ್ರೆನೇಡ್, ವಾಕಿಟಾಕಿ ವ್ಯವಸ್ಥೆ ಮಾಡಿ ಆರೋಪಿಗಳ ನಡುವೆ ಸಂವಹನಕ್ಕೆ ದಾರಿಯಾಗಿದ್ದಳು ಎಂಬುದು ಗೊತ್ತಾಗಿದೆ.

ಅದೇ ರೀತಿ ಸಿಎಆರ್ ಎಎಸ್ಐ ಆಗಿದ್ದ ಆರೋಪಿ ಚಾನ್ ಪಾಷಾ ಉಗ್ರ ಟಿ. ನಸೀರ್​​​ನ ಮಾಹಿತಿಯನ್ನು ಹೊರಗಡೆಗೆ ರವಾನಿಸುತ್ತಿದ್ದ ಎನ್ನಲಾಗಿದೆ. ನಸೀರ್​​ಗೆ ಒದಗಿಸುವ ಬೆಂಗಾವಲು ಪಡೆ ವಿವರಗಳನ್ನು ಹಣದಾಸೆಗಾಗಿ ಸಲ್ಮಾನ್ ಖಾನ್ ಎಂಬಾತನಿಗೆ ನೀಡುತ್ತಿದ್ದ. ಇನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಮನೋವೈದ್ಯನಾಗಿದ್ದ ಡಾ. ನಾಗರಾಜ್, ಕಾನೂನು ಬಾಹಿರವಾಗಿ ಜೈಲಿಗೆ ಮೊಬೈಲ್ ಫೋನ್​ಗಳ‌ ಸಾಗಾಟ ಮಾಡುತ್ತಿದ್ದ. ಖೈದಿಗಳಿಂದ ಹಣ ಪಡೆದು ಮೊಬೈಲ್ ಮಾರಾಟ ಮಾಡುತ್ತಿದ್ದ. ಅದೇ ರೀತಿ ಟಿ. ನಸೀರ್​ಗೂ ಕೂಡ ಮೊಬೈಲ್ ಮಾರಾಟ ಮಾಡಿದ್ದು, ಇದೇ ಮೊಬೈಲ್ ಮೂಲಕ ನಸೀರ್ ಭಯೋತ್ಪಾದನಾ ಸಂಚು ರೂಪಿಸುತ್ತಿದ್ದ ಎನ್ನಲಾಗಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ತನಿಖೆ ನಡೆಸಿದ ಎನ್ಐಎ ತಂಡ ಮೂವರು ಆರೋಪಿಗಳ ವಿರುದ್ದ ಎನ್ಐಎ ಸ್ಪೆಷಲ್‌ ಕೋರ್ಟ್​​ಗೆ ಹೆಚ್ಚುವರಿ ಚಾರ್ಜ್​​ಶೀಟ್ ಸಲ್ಲಿಸಿದೆ.

ಇದನ್ನೂ ಓದಿ: ಉಗ್ರ ನಾಸೀರ್ ಜೈಲಿನಿಂದ ತಪ್ಪಿಸಿಕೊಳ್ಳಲು ನಡೆದಿತ್ತು ಸಿನಿಮೀಯ ರೀತಿ ಸಂಚು! ಎನ್​ಐಎ ತನಿಖೆಯಲ್ಲಿ ಸ್ಫೋಟಕ ಅಂಶ ಬಯಲು

ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಮನೋವೈದ್ಯ ಡಾ.ನಾಗರಾಜ್, ಪರಪ್ಪನ ಅಗ್ರಹಾರ ಜೈಲಿನ ಎಎಸ್ಐ ಚಾನ್ ಪಾಷಾ ಹಾಗೂ ಶಂಕಿತ ಉಗ್ರನ ತಾಯಿ ಅನೀಸ್ ಫಾತೀಮಾರನ್ನು 2025ರ ಜುಲೈ 8ರ ರಾತ್ರಿ ಎನ್​ಐಎ ಅಧಿಕಾರಿಗಳು ಬಂಧಿಸಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Paush Purnima 2026: ಇಂದು ವರ್ಷದ ಮೊದಲ ಹುಣ್ಣಿಮೆ; ಇಷ್ಟಾರ್ಥ ಈಡೇರಲು ಚಂದ್ರೋದಯ ಸಮಯದಲ್ಲಿ ಈ ರೀತಿ ಮಾಡಿ – Kannada News | Purnima Significance: Rituals, Benefits and Full Moon Day Worship Guide

ಹಿಂದೂ ನಂಬಿಕೆಗಳ ಪ್ರಕಾರ, ಒಂದು ವರ್ಷದ ಪ್ರತಿ ಹುಣ್ಣಿಮೆಗೂ ವಿಶೇಷ ಮಹತ್ವವಿದೆ. ಆ ದಿನ ಮಾಡುವ ಪೂಜೆ ಮತ್ತು ದಾನಗಳು ಅಪಾರ ಪುಣ್ಯವನ್ನು ತರುತ್ತವೆ ಮತ್ತು ಜೀವನದಿಂದ ನಕಾರಾತ್ಮಕತೆಯನ್ನು ತೆಗೆದುಹಾಕುತ್ತವೆ ಎಂದು ನಂಬಲಾಗಿದೆ. ಹುಣ್ಣಿಮೆಯ ದಿನದಂದು ಪವಿತ್ರ ಸ್ನಾನ, ಸತ್ಯನಾರಾಯಣ ಸ್ವಾಮಿ ವ್ರತ, ಲಕ್ಷ್ಮಿ ಪೂಜೆ, ಚಂದ್ರನ ಪೂಜೆ ಮತ್ತು ಹುಣ್ಣಿಮೆಯ ದಿನದಂದು ಮಾಡುವ ಉಪವಾಸವನ್ನು ಆಧ್ಯಾತ್ಮಿಕ ಪ್ರಗತಿ ಮತ್ತು ಜೀವನದಲ್ಲಿ ಸಕಾರಾತ್ಮಕ ಪ್ರಯೋಜನಗಳನ್ನು ಸಾಧಿಸುವ ಒಂದು ಮಾರ್ಗವೆಂದು ಪರಿಗಣಿಸಲಾಗಿದೆ.

ಇಂದು ವರ್ಷದ ಮೊದಲ ಹುಣ್ಣಿಮೆ:

ಇಂದು(ಜನವರಿ 03) ವರ್ಷದ ಮೊದಲ ಹುಣ್ಣಿಮೆ. ಅಂದರೆ ಪುಷ್ಯ ಮಾಸ ಶುಕ್ಲ ಪಕ್ಷದ ಹುಣ್ಣಿಮೆ. ಹುಣ್ಣಿಮೆಯಂದು ಚಂದ್ರನನ್ನು ಪೂಜಿಸುವುದರಿಂದ ಸಕಲ ಶುಭಗಳು ದೊರೆಯುತ್ತವೆ ಎಂದು ನಂಬಲಾಗಿದೆ. ಹುಣ್ಣಿಮೆಯಂದು, ಹಾಲು, ನೀರು, ಹೂವುಗಳು, ಅಕ್ಷತೆಗಳು ಮತ್ತು ಸ್ವಲ್ಪ ಸಕ್ಕರೆಯನ್ನು ತಾಮ್ರದ ಪಾತ್ರೆಯಲ್ಲಿ ಬೆರೆಸಿ ಚಂದ್ರೋದಯದ ಸಮಯದಲ್ಲಿ ನೈವೇದ್ಯವಾಗಿ ಅರ್ಪಿಸಬೇಕು. ನೈವೇದ್ಯವನ್ನು ಅರ್ಪಿಸುವಾಗ ಓಂ ಚಂದ್ರಾಯ ನಮಃ:, ಓಂ ಸೋಮಾಯ ನಮಃ: ಎಂಬ ಮಂತ್ರಗಳನ್ನು ಪಠಿಸಬೇಕು. ಈ ಮಂತ್ರಗಳನ್ನು 108 ಬಾರಿ ಪಠಿಸುವುದು ಹೆಚ್ಚು ಶುಭವೆಂದು ಪರಿಗಣಿಸಲಾಗುತ್ತದೆ. ಚಂದ್ರನನ್ನು ಪೂರ್ಣ ಹೃದಯದಿಂದ ಪೂಜಿಸುವುದರಿಂದ ಮಾನಸಿಕ ಶಾಂತಿ ಸಿಗುತ್ತದೆ ಮತ್ತು ಯಾವುದೇ ದೋಷಗಳು ದೂರವಾಗುತ್ತವೆ ಎಂದು ನಂಬಲಾಗಿದೆ.

ಇದನ್ನೂ ಓದಿ: ಪ್ರಪಂಚದ ಏಕೈಕ ಜಲಾಧಿವಾಸ ಗಣಪ; ಗುಡ್ಡಟ್ಟು ವಿನಾಯಕ ದೇವಸ್ಥಾನದ ಇಂಟರೆಸ್ಟಿಂಗ್​ ಸಂಗತಿ ಇಲ್ಲಿದೆ

ಹುಣ್ಣಿಮೆಯ ದಿನದಂದು ಶಿವ, ವಿಷ್ಣು, ಲಕ್ಷ್ಮಿ ಮತ್ತು ಸತ್ಯನಾರಾಯಣ ವ್ರತಗಳಿಗೆ ವಿಶೇಷ ಪೂಜೆಗಳು ವಿಶೇಷ ಫಲಿತಾಂಶಗಳನ್ನು ನೀಡುತ್ತವೆ ಎಂದು ಹೇಳಲಾಗುತ್ತದೆ. ಹುಣ್ಣಿಮೆಯ ದಿನದಂದು ನದಿಯಲ್ಲಿ ಸ್ನಾನ ಮಾಡುವುದು, ದೀಪಗಳನ್ನು ಪೂಜಿಸುವುದು, ವಿಶೇಷ ಪೂಜೆಗಳನ್ನು ಮಾಡುವುದು ಮತ್ತು ವ್ರತ ಮಾಡುವುದು ಹೆಚ್ಚಿನ ಪುಣ್ಯವನ್ನು ತರುತ್ತದೆ ಮತ್ತು ಪಾಪಗಳನ್ನು ತೆಗೆದುಹಾಕುತ್ತದೆ ಎಂದು ಆಧ್ಯಾತ್ಮಿಕ ವಿದ್ವಾಂಸರು ಹೇಳುತ್ತಾರೆ. ಈ ದಿನದಂದು ನೀವು ದಾನ ಮಾಡಿದರೆ, ನೀವು ಎದುರಿಸುತ್ತಿರುವ ಭಯಗಳು ದೂರವಾಗುತ್ತವೆ ಮತ್ತು ನೀವು ಕೈಗೊಂಡ ಕಾರ್ಯಗಳು ಯಶಸ್ವಿಯಾಗಿ ಪೂರ್ಣಗೊಳ್ಳುತ್ತವೆ ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:42 am, Sat, 3 January 26

Source link