Category Archives: Blog

Your blog category

ರ‍್ಯಾಗಿಂಗ್, ಲೈಂಗಿಕ ಕಿರುಕುಳದಿಂದ ಹಿಮಾಚಲದ ವಿದ್ಯಾರ್ಥಿನಿ ಸಾವು; ಕಾಲೇಜು ಪ್ರಾಧ್ಯಾಪಕ, 3 ವಿದ್ಯಾರ್ಥಿಗಳ ವಿರುದ್ಧ ಕೇಸ್ ದಾಖಲು – Kannada News | Himachal Pradesh student dies after physical assault ragging College professor 3 students booked

ಧರ್ಮಶಾಲಾ, ಜನವರಿ 2: ಹಿಮಾಚಲ ಪ್ರದೇಶದ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಡಿಸೆಂಬರ್ 26ರಂದು ರ‍್ಯಾಗಿಂಗ್ (Ragging), ಲೈಂಗಿಕ ದೌರ್ಜನ್ಯ ನಡೆದಿದೆ. ಇದರಿಂದಾಗಿ ಆ ಯುವತಿ ಸಾವನ್ನಪ್ಪಿದ್ದಾಳೆ. ಈ ಹಿನ್ನೆಲೆಯಲ್ಲಿ ಕಾಲೇಜು ಪ್ರಾಧ್ಯಾಪಕ ಮತ್ತು ಮೂವರು ವಿದ್ಯಾರ್ಥಿನಿಯರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಮೃತ ಬಾಲಕಿಯ ತಂದೆಯ ದೂರಿನ ಆಧಾರದ ಮೇಲೆ ಪೊಲೀಸರು ಪ್ರಾಧ್ಯಾಪಕ ಮತ್ತು ಇತರ ಮೂವರ ವಿರುದ್ಧ ರ‍್ಯಾಗಿಂಗ್ ಮತ್ತು ಲೈಂಗಿಕ ಕಿರುಕುಳದ ಆರೋಪದ ಮೇಲೆ ಕೇಸ್ ದಾಖಲಿಸಿದ್ದಾರೆ.

ದೂರಿನ ಪ್ರಕಾರ, ಮೃತ ಯುವತಿ ಕಾಲೇಜಿನಲ್ಲಿ ಎರಡನೇ ವರ್ಷದ ಡಿಗ್ರಿ ವಿದ್ಯಾರ್ಥಿನಿಯಾಗಿದ್ದಳು. ಸೆಪ್ಟೆಂಬರ್ 18ರಂದು ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಆಕೆಯನ್ನು ಥಳಿಸಿ ಬೆದರಿಕೆ ಹಾಕಿದ್ದರು. ಇದರಿಂದಾಗಿ ಆಕೆ ಮಾನಸಿಕವಾಗಿ ಕುಗ್ಗಿ ಹೋಗಿದ್ದಳು ಎಂದು ಆರೋಪಿಸಲಾಗಿದೆ. ಇದರಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಡಿಸೆಂಬರ್ 26ರಂದು ಲುಧಿಯಾನ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಯುವತಿಯ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ರಾತ್ರಿ ಗಂಡನಿಲ್ಲದ ವೇಳೆ ಪ್ರೇಮಿಯನ್ನು ಮನೆಗೆ ಕರೆದು ಗುಪ್ತಾಂಗ ಕತ್ತರಿಸಿದ ಮಹಿಳೆ!

ಮೃತ ವಿದ್ಯಾರ್ಥಿನಿಯ ತಂದೆ ತಮ್ಮ ದೂರಿನಲ್ಲಿ ಮೂವರು ಹಿರಿಯ ವಿದ್ಯಾರ್ಥಿಗಳಾದ ಹರ್ಷಿತಾ, ಆಕೃತಿ ಮತ್ತು ಕೊಮೊಲಿಕಾ ಅವರು ಸೆಪ್ಟೆಂಬರ್ 18, 2025ರಂದು ತಮ್ಮ ಮಗಳನ್ನು ಥಳಿಸಿದ್ದರು. ಆ ಕಾಲೇಜು ಪ್ರಾಧ್ಯಾಪಕ ಅಶೋಕ್ ಕುಮಾರ್ ಅವರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದರು ಎಂದು ಆರೋಪಿಸಿದ್ದಾರೆ. ಬಳಿಕ ಆ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಯ ಸಮಯದಲ್ಲಿ ಆಕೆ ಸಾವನ್ನಪ್ಪಿದರು.

ಹೊಡೆತ ಮತ್ತು ಕಿರುಕುಳದಿಂದಾಗಿ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಹಲ್ಲೆ, ಕಿರುಕುಳ, ಬೆದರಿಕೆಯ ನಂತರ ನಮ್ಮ ಮಗಳು ತೀವ್ರ ಮಾನಸಿಕ ಒತ್ತಡ ಮತ್ತು ಭಯಕ್ಕೆ ಒಳಗಾದಳು. ಇದರಿಂದಾಗಿ ಆಕೆಯ ಆರೋಗ್ಯವು ಶೀಘ್ರವಾಗಿ ಹದಗೆಟ್ಟಿತು ಎಂದು ಮೃತ ಯುವತಿಯ ತಂದೆ ಆರೋಪಿಸಿದ್ದಾರೆ.

ಇದನ್ನೂ ಓದಿ: ಮಗಳಿಗೆ ಟಾರ್ಚರ್ ಕೊಡ್ತಿದ್ದ ಅಳಿಯನಿಗೆ ಚಟ್ಟ ಕಟ್ಟಿದ ಮಾವ: ರಾಡ್​​ನಿಂದ ಹೊಡೆದು ಕೊಲೆ

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮೃತ ವಿದ್ಯಾರ್ಥಿನಿ 2024ರಲ್ಲಿ ಕಾಲೇಜಿಗೆ ದಾಖಲಾಗಿದ್ದಳು. ಆಕೆ ಕೆಲವು ವಿದ್ಯಾರ್ಥಿಗಳಿಂದ ರ‍್ಯಾಕಿಂಗ್‌ಗೆ ಒಳಗಾಗಿದ್ದಳು. ಆಕೆ ಬಿಎ ಮೊದಲ ವರ್ಷದ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದಳು ಎಂದು ಬೆಳಕಿಗೆ ಬಂದಿದೆ. ಇದರಿಂದಾಗಿ ಆಗಸ್ಟ್ 21, 2025ರಂದು ಅವಳ ಹೆಸರನ್ನು ಕಾಲೇಜು ಲಿಸ್ಟ್​​ನಿಂದ ತೆಗೆದುಹಾಕಲಾಯಿತು. ಅವಳು ಸೆಪ್ಟೆಂಬರ್‌ನಲ್ಲಿ ಮತ್ತೆ ಪ್ರವೇಶ ಕೋರಿ ಕಾಲೇಜಿಗೆ ಭೇಟಿ ನೀಡಿದ್ದಳು. ಆಗ ಆಕೆ ಮರುಮೌಲ್ಯಮಾಪನದಲ್ಲಿ ಉತ್ತೀರ್ಣಳಾದರೆ ಮಾತ್ರ ಎರಡನೇ ವರ್ಷಕ್ಕೆ ಸೇರಿಸಿಕೊಳ್ಳಲಾಗುವುದು ಮತ್ತು ವಿಫಲವಾದರೆ ಅವಳು ಮೊದಲ ವರ್ಷಕ್ಕೆ ಮರು ದಾಖಲಾಗಬೇಕಾಗುತ್ತದೆ ಎಂದು ತಿಳಿಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಟೀಂ ಇಂಡಿಯಾಗೆ ನೂತನ ವಿದೇಶಿ ಕೋಚ್ ನೇಮಿಸಲು ಮುಂದಾದ ಬಿಸಿಸಿಐ – Kannada News | Indian Women’s Cricket Team Gets Nicolaas Lee as New Strength & Conditioning Coach

2025 ರಲ್ಲಿ ಚೊಚ್ಚಲ ಏಕದಿನ ವಿಶ್ವಕಪ್ ಗೆದ್ದು ಬೀಗಿದ್ದ ಭಾರತ ಮಹಿಳಾ ತಂಡ (Indian Women’s Cricket Team) ಇದೀಗ 2026 ರಲ್ಲೂ ಮತ್ತೊಂದು ಐಸಿಸಿ ಟೂರ್ನಿಯ ಮೇಲೆ ಕಣ್ಣಿಟ್ಟಿದೆ. ವಾಸ್ತವವಾಗಿ ಈ ವರ್ಷ ಮಹಿಳೆಯರ ಟಿ20 ವಿಶ್ವಕಪ್ (T20 World Cup 2026) ಕೂಡ ನಡೆಯಲಿದೆ. ಈ ಟೂರ್ನಿಗೆ ಈಗಿನಿಂದಲೇ ತಯಾರಿ ಆರಂಭಿಸಿರುವ ಭಾರತ ಮಹಿಳಾ ತಂಡವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಸಲುವಾಗಿ ಬಿಸಿಸಿಐ (BCCI), ತಂಡಕ್ಕೆ ನೂತನ ಸ್ಟ್ರೆಂಥ್ ಮತ್ತು ಕಂಡೀಷನಿಂಗ್ ಕೋಚ್ ನೇಮಿಸಲು ಮುಂದಾಗಿದೆ. 2026 ರ ಮಹಿಳಾ ಪ್ರೀಮಿಯರ್ ಲೀಗ್ ನಂತರ ಕೋಚ್ ನೇಮಕವಾಗಲಿದೆ ಎಂದು ವರದಿಯಾಗಿದೆ. ಅಷ್ಟಕ್ಕೂ ಈ ಹುದ್ದೆಗೆ ಯಾರನ್ನು ಆಯ್ಕೆ ಮಾಡಲಾಗುತ್ತದೆ ಎಂಬುದರ ಬಗ್ಗೆ ಊಹಾಪೋಹಗಳು ಹರಿದಾಡುತ್ತಿದ್ದು, ಸಧ್ಯದ ಮಾಹಿತಿಯ ಪ್ರಕಾರ, ಇಂಗ್ಲೆಂಡ್‌ ತಂಡದ ಮಾಜಿ ಅನುಭವಿ ಆಟಗಾರ್ತಿ ನಿಕೋಲಸ್ ಲೀ ಈ ಹೊಸ ಜವಾಬ್ದಾರಿಯನ್ನು ಹೊರಲಿದ್ದಾರೆ.

ಟೀಂ ಇಂಡಿಯಾಗೆ ಹೊಸ ಕೋಚ್

ಮೇಲೆ ಹೇಳಿದಂತೆ ಬಿಸಿಸಿಐ, ಇಂಗ್ಲೆಂಡ್‌ನ ನಿಕೋಲಸ್ ಲೀ ಅವರನ್ನು ತಂಡದ ಸ್ಟ್ರೆಂಥ್ ಮತ್ತು ಕಂಡೀಷನಿಂಗ್ ಕೋಚ್ ಆಗಿ ನೇಮಿಸಲು ನಿರ್ಧರಿಸಿದೆ. 2026 ರ ಮಹಿಳಾ ಪ್ರೀಮಿಯರ್ ಲೀಗ್ ಮುಗಿದ ನಂತರ ಅವರು ತಂಡವನ್ನು ಸೇರಿಕೊಳ್ಳಲಿದ್ದಾರೆ. ಈ ವರ್ಷದ WPL ಜನವರಿ 9 ರಂದು ಪ್ರಾರಂಭವಾಗಿ ಫೆಬ್ರವರಿ 5 ರವರೆಗೆ ನಡೆಯಲಿದೆ. ಇದಾದ ತಕ್ಷಣ, ಭಾರತೀಯ ಮಹಿಳಾ ತಂಡವು ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ, ಅಲ್ಲಿ ಫೆಬ್ರವರಿ 15 ರಿಂದ ಮಾರ್ಚ್ 9 ರವರೆಗೆ ವಿವಿಧ ಸ್ವರೂಪಗಳಲ್ಲಿ ಸರಣಿಗಳು ನಡೆಯಲಿವೆ. ಪಿಟಿಐ ವರದಿ ಮಾಡಿರುವ ಪ್ರಕಾರ, ‘WPL ನಂತರ, ಲೀ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಹೊಸ ಸ್ಟ್ರೆಂಥ್ ಮತ್ತು ಕಂಡೀಷನಿಂಗ್ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಸಾಕಷ್ಟು ಅನುಭವವಿರುವ ನಿಕೋಲಸ್ ಲೀ

ನಿಕೋಲಸ್ ಲೀ ಕ್ರಿಕೆಟ್​ನಲ್ಲಿ ವ್ಯಾಪಕ ಅನುಭವ ಹೊಂದಿದ್ದಾರೆ. ಅವರು ಮಾಜಿ ಪ್ರಥಮ ದರ್ಜೆ ಕ್ರಿಕೆಟಿಗರಾಗಿದ್ದು, 13 ಪಂದ್ಯಗಳಲ್ಲಿ 490 ರನ್ ಗಳಿಸಿದ್ದಾರೆ. ಹಾಗೆಯೇ ಇತ್ತೀಚೆಗೆ ಯುಎಇಯ ಐಎಲ್‌ಟಿ 20 ಲೀಗ್‌ನಲ್ಲಿ ಗಲ್ಫ್ ಜೈಂಟ್ಸ್ ತಂಡದೊಂದಿಗೆ ಕೆಲಸ ಮಾಡಿದ್ದಾರೆ. ಇದಕ್ಕೂ ಮೊದಲು, ಅವರು ಜನವರಿ 2024 ರಿಂದ ಡಿಸೆಂಬರ್ 2025 ರವರೆಗೆ ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ಸ್ಟ್ರೆಂಥ್ ಮತ್ತು ಕಂಡೀಷನಿಂಗ್ ತರಬೇತುದಾರರಾಗಿ ಸೇವೆ ಸಲ್ಲಿಸಿದರು. ಹಾಗೆಯೇ ಮಾರ್ಚ್ 2020 ರಿಂದ ಜನವರಿ 2024 ರವರೆಗೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯಲ್ಲಿಯೂ ಸೇವೆ ಸಲ್ಲಿಸಿದ್ದರು. ನಂತರ ಅಕ್ಟೋಬರ್ 2016 ರಿಂದ ಮಾರ್ಚ್ 2020 ರವರೆಗೆ ಶ್ರೀಲಂಕಾ ಪುರುಷರ ತಂಡದೊಂದಿಗೂ ಕೆಲಸ ಮಾಡಿದ್ದರು.

U19 World Cup: ಅಂಡರ್-19 ವಿಶ್ವಕಪ್​ಗೆ 15 ಸದಸ್ಯರ ಭಾರತ ತಂಡ ಪ್ರಕಟ

ದೇಶೀಯ ಮಟ್ಟದಲ್ಲಿ, ಲೀ ಮಾರ್ಚ್ 2012 ರಿಂದ ಸೆಪ್ಟೆಂಬರ್ 2016 ರವರೆಗೆ ಸಸೆಕ್ಸ್ ಕೌಂಟಿ ಕ್ರಿಕೆಟ್ ಕ್ಲಬ್‌ನಲ್ಲಿ ಪ್ರಮುಖ ತರಬೇತುದಾರರಾಗಿ ಸೇವೆ ಸಲ್ಲಿಸಿದ್ದಾರೆ. ಅದಕ್ಕೂ ಮೊದಲು, ಜನವರಿ 2010 ರಿಂದ ಮಾರ್ಚ್ 2012 ರವರೆಗೆ ಸಹಾಯಕ ತರಬೇತುದಾರರಾಗಿ ಸೇವೆ ಸಲ್ಲಿಸಿದ್ದರು. ಆಸ್ಟ್ರೇಲಿಯಾದ ಸವಾಲಿನ ಪ್ರವಾಸವನ್ನು ಗಮನದಲ್ಲಿಟ್ಟುಕೊಂಡು ಲೀ ಅವರ ನೇಮಕಾತಿ ಭಾರತೀಯ ಮಹಿಳಾ ತಂಡಕ್ಕೆ ಮಹತ್ವದ್ದಾಗಿದೆ. ಅವರ ಪರಿಣತಿಯು ತಂಡದ ಫಿಟ್‌ನೆಸ್ ಮತ್ತು ಪ್ರದರ್ಶನಕ್ಕೆ ಹೊಸ ಶಕ್ತಿಯನ್ನು ತುಂಬುವ ನಿರೀಕ್ಷೆಯಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು – Kannada News | Kannada actor Vajramuni Life Story Death Reason and other details

ಕನ್ನಡ ಚಿತ್ರರಂಗದಲ್ಲಿ (Kannada Film Industry) ನಟ ವಜ್ರಮುನಿ ಅವರು ತಮ್ಮದೇ ಛಾಪು ಮೂಡಿಸಿದ್ದರು. ಬಹುಬೇಡಿಕೆಯ ನಟನಾಗಿ ಅವರು ಮಿಂಚಿದ್ದರು. ಹೀರೋಗಳಿಗಿಂತ ವಜ್ರಮನಿ ಅವರೇ ಹೈಲೈಟ್ ಆಗುತ್ತಿದ್ದ ದಿನಗಳು ಅವು. ಸಿನಿಮಾದಲ್ಲಿ ವಿಲನ್ ಆದರೂ ರಿಯಲ್ ಲೈಫ್​​ನಲ್ಲಿ ವಜ್ರಮುನಿ ಅವರು ಮೃದು ಸ್ವಭಾವದ ವ್ಯಕ್ತಿ ಆಗಿದ್ದರು. ನಟನಾಗಿ ಫೇಮಸ್ ಆದ ಅವರು ನಿರ್ಮಾಪಕನಾಗಿಯೂ ಅದೃಷ್ಟಪರೀಕ್ಷೆ ಮಾಡಿಕೊಂಡರು. ನಿರ್ಮಾಪಕನಾದ ಬಳಿಕ ಅವರು ಸಾಲದ ಸುಳಿಗೆ ಸಿಲುಕಿದರು. ನಂತರದ ದಿನಗಳಲ್ಲಿ ವಜ್ರಮುನಿ (Vajramuni) ಅವರಿಗೆ ಆರೋಗ್ಯ ಕೈಕೊಟ್ಟಿತು. ಅದರಿಂದಾಗಿ ಅವರ ಕೊನೆಯ ದಿನಗಳು ನರಕ ಸದೃಶ್ಯ ಆಗಿದ್ದವು. ಕಿಡ್ನಿ, ಹೃದಯ ಸಂಬಂಧಿ ಕಾಯಿಲೆಗಳು ಕಾಣಿಸಿಕೊಂಡವು. ಶುಗರ್ ಮತ್ತು ರಕ್ತಹೀನತೆಯಿಂದ ಕಣ್ಣು ಕಾಣದಂತಾಯಿತು. ಕಿವಿ ಕೇಳಿಸುತ್ತಿರಲಿಲ್ಲ. ಅನೇಕ ಕಾಯಿಲೆಗಳಿಂದ ಅವರು 2006ರ ಜನವರಿ 5ರಂದು ನಿಧನರಾದರು. ಅವರು ಇಹಲೋಕ ತ್ಯಜಿಸಿ 20 ವರ್ಷ ಕಳೆದಿದೆ. ವಜ್ರಮುನಿ ರೀತಿಯ ಮತ್ತೋರ್ವ ಖಳನಟ ಕನ್ನಡ ಚಿತ್ರರಂಗದಲ್ಲಿ ಬರಲೇ ಇಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬಳ್ಳಾರಿ ಗಲಭೆಗೆ ಎಸ್ಪಿ ತಲೆದಂಡ: ಅಧಿಕಾರ ಸ್ವೀಕರಿಸಿದ ಒಂದೇ ದಿನಕ್ಕೆ ಪವನ್ ನೆಜ್ಜೂರು ಸಸ್ಪೆಂಡ್! – Kannada News | Newly appointed SP Pavan Nejjuru suspended In Bellary violence

ಬಳ್ಳಾರಿ, (ಜನವರಿ 02): ಹೊಸ ವರ್ಷ ದಿನದ ರಾತ್ರಿ ಬಳ್ಳಾರಿಯಲ್ಲಿ (Bellary) ನಡೆದ ಫೈರಿಂಗ್​ನಲ್ಲಿ ಕಾಂಗ್ರೆಸ್​ ಕಾರ್ಯಕರ್ತ ರಾಜಶೇಖರ್ ಬಲಿ ಆಗಿದ್ದಾನೆ. ಕಾಂಗ್ರೆಸ್​ ಶಾಸಕ ಭರತ್ ರೆಡ್ಡಿ ಹಾಗೂ ಗಾಲಿ ಜನಾರ್ದನ ರೆಡ್ಡಿ ಬೆಂಬಲಿಗರ ನಡುವೆ ಬರೀ ಟ್ವೆಂಟಿ ಬೈ ಟ್ವೆಂಟಿ ಬ್ಯಾನರ್, ಇಡೀ ಜಿಲ್ಲೆಯಲ್ಲಿ ಸಂಘರ್ಷವನ್ನೇ ಸೃಷ್ಟಿಸಿದೆ. ಕಲ್ಲು ತೂರಾಟ, ಖಾರದು ಪುಡಿ ಎರೆಚಾಟ, ಬಡಿದಾಟ ನಡೆದಿದೆ. ಸಾಲದಕ್ಕೆ ಫೈರಿಂಗ್ ಸಹ ಮಾಡಲಾಗಿದೆ. ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದನ್ನು ರಾಜ್ಯ ಸರ್ಕಾರವೂ ಸಹ ಗಂಭೀರವಾಗಿ ಪರಿಗಣಿಸಿದೆ. ಇದರಿಂದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರು ಅವರನ್ನ ಅಮಾನತು ಮಾಡಲಾಗಿದೆ. ರಾಜಕೀಯ ಕಿತ್ತಾಟದಿಂದ ಬಳ್ಳಾರಿ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ ಒಂದೇ ದಿನದಲ್ಲಿ ಪವನ್ ನೆಜ್ಜೂರು ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ಪರಿಸ್ಥಿತಿ ನಿಭಾಯಿಸುವಲ್ಲಿ ಪೊಲೀಸರು ವಿಫಲವಾಗಿದ್ದಾರೆ. ಘಟನೆಯನ್ನ ಸರಿಯಾಗಿ ನಿಭಾಯಿಸಿಲ್ಲ. ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿಲ್ಲ ಎಂದು ಡಿಜಿ & ಐಜಿಪಿ ವರದಿ ನೀಡಿದೆ. ಹೀಗಾಗಿ ಪವನ್ ನೆಜ್ಜೂರು ಅವರನ್ನು ಅಮಾನತು ಮಾಡುವಂತೆ ಬಳ್ಳಾರಿ ಡಿಐಜಿ ವರ್ತಿಕಾ ಕಟಿಯಾರ ಅವರು ಸರ್ಕಾರಕ್ಕೆ ವರದಿ ನೀಡಿದ್ದಾರೆ. ಇದರ ಬೆನ್ನಲ್ಲೇ ಸರ್ಕಾರ ಈ ಕ್ರಮಕೈಗೊಂಡಿದೆ. ನಿನ್ನೆ(ಜ.1) ರಂದು ಬಳ್ಳಾರಿ ಎಸ್‌ಪಿಯಾಗಿ ಪವನ್ ನೆಜ್ಜೂರ್ (Pavan Nejjuru) ಶೋಭಾರಾಣಿ ಅವರಿಂದ ಅಧಿಕಾರ ಸ್ವೀಕರಿಸಿದ್ದರು. ಈಗ ಈಗ ಬ್ಯಾನರ್‌ ಗಲಾಟೆ ಪ್ರಕರಣವನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂಬ ಕಾರಣ ನೀಡಿ ಅಮಾನತು ಮಾಡಲಾಗಿದೆ.

ಇದನ್ನೂ ನೋಡಿ: ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?

ಒಂದೇ ದಿನದಲ್ಲಿ ಸಸ್ಪೆಂಡ್!

ವಾಲ್ಮೀಕಿ ಪುತ್ತಳಿ ಅನಾವರಣ ನಿಮಿತ್ತ ಬಳ್ಳಾರಿಯಲ್ಲಿ ಬ್ಯಾನರ್ ಹಾಕುವ ಸಂಬಂಧ ಶಾಸಕ ಭರತ್ ರೆಡ್ಡಿ ಹಾಗೂ ಗಾಲಿ ಜನಾರ್ದನ ರೆಡ್ಡಿ ಬೆಂಬಲಿಗರ ನಡುವೆ ಗಲಾಟೆಯಾಗಿದ್ದು, ಪೊಲೀಸರು ಅಶ್ರುವಾಯು ಮೂಲಕ ಗಲಾಟೆಯನ್ನು ಹತೋಟಿಗೆ ತಂದಿದ್ದಾರೆ. ಆದರೂ ದೊಡ್ಡ ಮಟ್ಟದ ಗಲಾಟೆಯಾಗಿದ್ದು, ಒಂದು ಹೆಣ ಬಿದ್ದಿದೆ. ಇದರಿಂದ ಬಳ್ಳಾರಿ ಡಿಐಜಿ ವರ್ತಿಕಾ ಕಟಿಯಾರ ಅವರು ಸರ್ಕಾರಕ್ಕೆ ಅಮಾನತ್ತುಗೊಳಿಸುವಂತೆ ವರದಿ ನೀಡಿದ್ದಾರೆ. ಇದರ ಬೆನ್ನಲ್ಲೇ ಸರ್ಕಾರ, ಬಳ್ಳಾರಿ ಎಸ್ಪಿ ಎಸ್ಪಿ ಪವನ್ ನೆಜ್ಜೂರು ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ. ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್ಪಿ ಆಗಿದ್ದ ಪವನ್ ನೆಜ್ಜೂರು ಅವರನ್ನು ಸರ್ಕಾರ ಬಳ್ಳಾರಿ ಎಸ್ಪಿಯಾಗಿ ವರ್ಗಾವಣೆ ಮಾಡಿತ್ತು. ಅದರಂತೆ ನಿನ್ನೆ ಅಷ್ಟೇ ಪವನ್ ನೆಜ್ಜೂರು ಅವರು ಅಧಿಕಾರ ವಹಿಸಿಕೊಂಡಿದ್ದರು. ಆದ್ರೆ, ದುರದೃಷ್ಟವಶಾತ್ ಅಂದೇ ಈ ಗಲಭೆ ನಡೆದಿದ್ದು, ಒಂದೇ ದಿನದಲ್ಲಿ ಪವನ್ ನೆಜ್ಜೂರು ಸಸ್ಪೆಂಡ್ ಆಗಿದ್ದಾರೆ.

ಸತ್ಯಶೋಧನೆಗೆ ನಿಯೋಗ ರಚನೆ

ಬಳ್ಳಾರಿ ಗಲಭೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಬಗ್ಗೆ ಸಚಿವ ಸಂಪುಟದಲ್ಲೂ ಸಹ ಚರ್ಚೆಯಾಗಿದೆ. ಇದೀಗ ಸರ್ಕಾರ, ಪರಿಸ್ಥಿತಿ ಅವಲೋಕಿಸಲು ನಿಯೋಗ ಕಳುಹಿಸಲು ಮುಂದಾಗಿದ್ದು,ಸಂಬಂಧ ನಿಯೋಗ ನೇಮಕ ತೀರ್ಮಾನಿಸಿದೆ. ಇನ್ನೊಂದೆಡೆ ಪಕ್ಷದ ವತಿಯಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸತ್ಯಶೋಧನಾ ಸಮಿತಿ ರಚನೆ ಮಾಡಿದ್ದಾರೆ. H.M.ರೇವಣ್ಣ, ಜಯಪ್ರಕಾಶ್ ಹೆಗಡೆ, ಟಿ.ರಘುಮೂರ್ತಿ, ಕುಮಾರ್ ನಾಯಕ್, ಜಕ್ಕಪ್ಪನವರ್ ಬಸವನಗೌಡ ಬಾದರ್ಲಿ ಒಳಗೊಂಡ ಸಮಿತಿ ರಚನೆ ಮಾಡಿದ್ದು, ಸ್ಥಳಕ್ಕೆ ತೆರಳಿ ವಾಸ್ತವ ಸ್ಥಿತಿ ವರದಿ ನೀಡುವಂತೆ ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮಾರ್ಚ್ 2ರವರೆಗೂ ಎಲ್​ಐಸಿ ಸ್ಪೆಷನ್ ರಿವೈವಲ್ ಕೆಂಪೇನ್; ಲ್ಯಾಪ್ಸ್ ಆದ ಪಾಲಿಸಿಗಳನ್ನು ಸಕ್ರಿಯಗೊಳಿಸಲು ಭರ್ಜರಿ ಆಫರ್ – Kannada News | LIC special campaign till March 2nd to revive lapsed insurance policies

ನವದೆಹಲಿ, ಜನವರಿ 2: ಲ್ಯಾಪ್ಸ್ ಆಗಿರುವ ಅಥವಾ ಅವಧಿಮೀರಿದ ಇನ್ಷೂರೆನ್ಸ್ ಪಾಲಿಸಿಗಳನ್ನು (Lapsed insurance policies) ಸಕ್ರಿಯಗೊಳಿಸಲು ಎಲ್​ಐಸಿ ಆಕರ್ಷಕ ಆಫರ್​ವೊಂದನ್ನು ಮುಂದಿಟ್ಟಿದೆ. ಅದಕ್ಕಾಗಿ ಎರಡು ತಿಂಗಳ ವಿಶೇಷ ಅಭಿಯಾನ ನಡೆಸುತ್ತಿದೆ. ಜನವರಿ 1ರಂದು ಶುರುವಾದ ಈ ಸ್ಪೆಷಲ್ ರಿವೈವಲ್ ಕೆಂಪೇನ್ (Special Revival Campaign) 2026ರ ಮಾರ್ಚ್ 2ರವರೆಗೂ ಇರಲಿದೆ. ಇನ್ಷೂರೆನ್ಸ್ ಪಾಲಿಸಿಗಳನ್ನು ರಿವೈವಲ್ ಮಾಡಲು ಇರುವ ತಡಪಾವತಿ ಶುಲ್ಕದಲ್ಲಿ (Late Fee) 5,000 ರೂವರೆಗೂ ವಿನಾಯಿತಿ ನೀಡಲಾಗುತ್ತಿದೆ.

ಶೇ. 30ರಷ್ಟು ಲೇಟ್ ಫೀ ಡಿಸ್ಕೌಂಟ್

ಲ್ಯಾಪ್ಸ್ ಆದ ಎಲ್​ಐಸಿ ಪಾಲಿಸಿಗಳನ್ನು ರಿವೈವ್ ಮಾಡಬೇಕೆಂದರೆ ಲೇಟ್ ಫೀ ಕಟ್ಟಬೇಕು. ಈ ಶುಲ್ಕದಲ್ಲಿ ಮುಂದಿನ ಎರಡು ತಿಂಗಳು ಶೇ. 30ರಷ್ಟು ಡಿಸ್ಕೌಂಟ್ ಸಿಗಲಿದೆ. ತಡಪಾವತಿ ಶುಲ್ಕ 10,000 ರೂ ಇದ್ದಲ್ಲಿ 3,000 ರೂ ವಿನಾಯಿತಿ ಕೊಡಲಾಗುತ್ತದೆ. ಗರಿಷ್ಠ 5,000 ರೂವರೆಗೂ ಈ ರೀತಿ ವಿನಾಯಿತಿ ಇರುತ್ತದೆ.

ಇದನ್ನೂ ಓದಿ: ಎಲ್​ಐಸಿ ಎರಡು ಹೊಸ ಪ್ಲಾನ್​ಗಳು ಬಿಡುಗಡೆ; ಮಾರ್ಕೆಟ್ ಲಿಂಕ್ ಆದ ಪ್ರೊಟೆಕ್ಷನ್ ಪ್ಲಸ್ ಪ್ಲಾನ್ ಬಗ್ಗೆ ಮಾಹಿತಿ

ಪಾಲಿಸಿ ಪ್ರೀಮಿಯಮ್ 1,00,000 ರೂವರೆಗಿನ ಮೊತ್ತವಾದರೆ ಲೇಟ್ ಫೀಯಲ್ಲಿ ಶೇ. 30ರಷ್ಟು ವಿನಾಯಿತಿ ಇರುತ್ತದೆ. ಗರಿಷ್ಠ ವಿನಾಯಿತಿ 3,000 ರೂ ಇರುತ್ತದೆ.

1 ಲಕ್ಷ ರೂನಿಂದ 3 ಲಕ್ಷ ರೂವರೆಗಿನ ಮೊತ್ತದ ಪ್ರೀಮಿಯಮ್ ಆಗಿದ್ದರೆ ತಡಪಾವತಿ ಶುಲ್ಕದಲ್ಲಿ ಶೇ. 30 ಅಥವಾ 4,000 ರೂವರೆಗೆ ವಿನಾಯಿತಿ ಸಿಗುತ್ತದೆ.

3 ಲಕ್ಷ ರೂಗಿಂತ ಮೇಲ್ಪಟ್ಟ ಮೊತ್ತದ ಪ್ರೀಮಿಯಮ್ ಆದರೆ ಶುಲ್ಕದಲ್ಲಿ 5,000 ರೂವರೆಗೆ ಕನ್ಸಿಶನ್ ಇರುತ್ತದೆ.

ಮೈಕ್ರೋ ಇನ್ಷೂರೆನ್ಸ್ ಪ್ಲಾನ್ ಆದರೆ ತಡಪಾವತಿ ಶುಲ್ಕದಲ್ಲಿ ನೂರಕ್ಕೆ ನೂರು ವಿನಾಯಿತಿ ಇರುತ್ತದೆ.

ಎಷ್ಟು ವರ್ಷದಿಂದ ಲ್ಯಾಪ್ಸ್ ಆದ ಪಾಲಿಸಿಗಳನ್ನು ರಿವೈವ್ ಮಾಡಲು ಸಾಧ್ಯ?

ಸದ್ಯ ನಡೆಯುತ್ತಿರುವ ಸ್ಪೆಷಲ್ ಅಭಿಯಾನದಲ್ಲಿ 5 ವರ್ಷದಿಂದ ಲ್ಯಾಪ್ಸ್ ಆದ ಪಾಲಿಸಿಗಳನ್ನು ರಿವೈವ್ ಮಾಡಲು ಅವಕಾಶ ಇದೆ. ಪ್ರೀಮಿಯಮ್ ಪಾವತಿ ನಿಲ್ಲಿಸಿ 5 ವರ್ಷದವರೆಗೆ ಆಗಿದ್ದರೆ ಅಂಥ ಪಾಲಿಸಿಯನ್ನು ಈ ಕೆಂಪೇನ್ ವೇಳೆ ರಿವೈವ್ ಮಾಡಲು ಸಾಧ್ಯವಿದೆ.

ಇದನ್ನೂ ಓದಿ: ಕ್ಲೇಮ್ ಆಗದೇ ಉಳಿದಿದೆ ಲಕ್ಷ ಕೋಟಿ ರೂ; ಜನರಿಗೆ ಹಣ ಮರಳಿಸಲು ಸರ್ಕಾರ ಹರಸಾಹಸ

ಜನರು ಬೇರೆ ಬೇರೆ ಕಾರಣಗಳಿಂದ ಎಲ್​ಐಸಿ ಪಾಲಿಸಿಯ ಪ್ರೀಮಿಯಮ್ ಕಟ್ಟದೇ ನಿಲ್ಲಿಸಿರಬಹುದು. ಇನ್ಷೂರೆನ್ಸ್ ಎಂಬುದು ಬಹಳ ಅಗತ್ಯವಾಗಿರುವ ಹಣಕಾಸು ರಕ್ಷಣಾ ವ್ಯವಸ್ಥೆಯಾಗಿರುವುದರಿಂದ ಅದು ವ್ಯರ್ಥವಾಗಲು ಬಿಡಬಾರದು. ಹೀಗಾಗಿ, ಇನ್ಷೂರೆನ್ಸ್ ಪಾಲಿಸಿ ಹೊಂದುವುದು ಬಹಳ ಮುಖ್ಯ. ಪಾಲಿಸಿ ಲ್ಯಾಪ್ಸ್ ಆಗಿದ್ದರೆ ಅದನ್ನು ತಪ್ಪದೇ ರಿವೈವ್ ಮಾಡುವುದು ಇನ್ನೂ ಮುಖ್ಯ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ; ವಿಡಿಯೋ ವೈರಲ್ – Kannada News | Massive fire erupts inside Indian Army camp store in Uttarakhand Joshimath

ಜೋಶಿಮಠ, ಜನವರಿ 2: ಉತ್ತರಾಖಂಡದ ಜೋಶಿಮಠದ ಔಲಿ ರಸ್ತೆಯಲ್ಲಿರುವ ಸೇನಾ ಶಿಬಿರದ ಒಳಗಿನ ಅಂಗಡಿಯೊಳಗೆ ಇಂದು ಭಾರಿ ಬೆಂಕಿ (Fire Accident) ಕಾಣಿಸಿಕೊಂಡಿದೆ. ಆರಂಭಿಕ ಮಾಹಿತಿಯ ಪ್ರಕಾರ, ಅಗ್ನಿಶಾಮಕ ದಳದವರು ತಕ್ಷಣ ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಂದಿಸುವ ಪ್ರಯತ್ನಗಳನ್ನು ಪ್ರಾರಂಭಿಸಿದರು.

ಇದೇ ರೀತಿ ಕಳೆದ ವರ್ಷ ಮೇ ತಿಂಗಳಲ್ಲಿ ಲೇಹ್‌ನ ಡಿಗ್ರಿ ಕಾಲೇಜು ಬಳಿಯ ಸೇನಾ ಶಿಬಿರದಲ್ಲಿ ದೊಡ್ಡ ಬೆಂಕಿ ಕಾಣಿಸಿಕೊಂಡಿತ್ತು. ಆ ಬೆಂಕಿ ಕಟ್ಟಡದಾದ್ಯಂತ ವೇಗವಾಗಿ ಹರಡಿತು. ಸ್ಥಳೀಯ ಪೊಲೀಸರು, ಸೇನಾ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದ ನಡುವಿನ ತ್ವರಿತ ಸಮನ್ವಯದಿಂದಾಗಿ ಸಮಯಕ್ಕೆ ಸರಿಯಾಗಿ ಬೆಂಕಿಯನ್ನು ನಿಯಂತ್ರಿಸಲು ಸಾಧ್ಯವಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತೆಲುಗು ರಾಜ್ಯಗಳ ನಡುವಿನ ಕೃಷ್ಣಾ ಜಲ ವಿವಾದ ಬಗೆಹರಿಸಲು ಕೇಂದ್ರ ಸಮಿತಿ ರಚನೆ; ಸಚಿವ ಕಿಶನ್ ರೆಡ್ಡಿ ಮಾಹಿತಿ – Kannada News | Central Government form Committee to resolve Krishna water dispute between Telangana and Andhra Pradesh Kishan Reddy Says

ನವದೆಹಲಿ, ಜನವರಿ 2: ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳ ನಡುವಿನ ನದಿ ನೀರಿನ ಬಳಕೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಕೇಂದ್ರ ಸರ್ಕಾರ ಪ್ರಮುಖ ಹೆಜ್ಜೆ ಇಟ್ಟಿದೆ. ಈ ಸಮಸ್ಯೆಗಳನ್ನು ತಾಂತ್ರಿಕವಾಗಿ ಪರಿಶೀಲಿಸಲು ಮತ್ತು ಪರಿಹಾರಗಳನ್ನು ಸೂಚಿಸಲು ಜಲಶಕ್ತಿ ಸಚಿವಾಲಯವು ವಿಶೇಷ ಸಮಿತಿಗೆ ಸೂಚಿಸಿದೆ ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ (Kishan Reddy) ಮಾಹಿತಿ ನೀಡಿದ್ದಾರೆ. ಸಹಕಾರಿ ಒಕ್ಕೂಟದ ಮನೋಭಾವದಲ್ಲಿ ಕಳೆದ 11 ವರ್ಷಗಳಿಂದ ತೆಲುಗು ರಾಜ್ಯಗಳ ನಡುವಿನ ನೀರಿನ ವಿವಾದಗಳ ಪರಿಹಾರಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ ಬೆಂಬಲವನ್ನು ನೀಡುತ್ತಿದೆ ಎಂದು ಅವರು ಹೇಳಿದ್ದಾರೆ.

ಕೃಷ್ಣಾ ನದಿ ನೀರಿನ ವಿವಾದವನ್ನು ಪರಿಹರಿಸಲು ಕೇಂದ್ರ ಸರ್ಕಾರವು ಅಕ್ಟೋಬರ್ 6, 2023ರಂದು ಕೃಷ್ಣಾ ಜಲ ವಿವಾದ ನ್ಯಾಯಮಂಡಳಿ -2 (KWDT-II)ಗಾಗಿ ಹೆಚ್ಚುವರಿ ಅವಧಿಗಳನ್ನು ಸೂಚಿಸಿತ್ತು. 2 ವರ್ಷಗಳ ಅವಧಿ ಆಗಸ್ಟ್ 1, 2025ರಂದು ಕೊನೆಗೊಂಡಿದ್ದರೂ ಕೃಷ್ಣಾ ನೀರಿನ ಬಳಕೆಯ ಕುರಿತು ನಡೆಯುತ್ತಿರುವ ಚರ್ಚೆಗಳನ್ನು ಗಮನದಲ್ಲಿಟ್ಟುಕೊಂಡು ನ್ಯಾಯಮಂಡಳಿಯ ಅವಧಿಯನ್ನು ಜುಲೈ 31, 2026ರವರೆಗೆ ಮತ್ತೊಂದು ವರ್ಷ ವಿಸ್ತರಿಸಲಾಗಿದೆ. ಹೀಗಾಗಿ, ನೀರಿನ ವಿವಾದಗಳನ್ನು ಪರಿಹರಿಸಲು ಕೇಂದ್ರ ಸರ್ಕಾರವು ಎಲ್ಲ ರೀತಿಯಲ್ಲೂ ಸಹಕರಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಸಗೊಬ್ಬರಗಳ ಪೋಷಕಾಂಶ ಆಧಾರಿತ ಸಬ್ಸಿಡಿಗೆ ಸಂಪುಟ ಅನುಮೋದನೆ; ಸಚಿವ ಕಿಶನ್ ರೆಡ್ಡಿ ಹೇಳಿದ್ದೇನು?

ಕೇಂದ್ರ ಜಲಶಕ್ತಿ ಸಚಿವರು, ತೆಲಂಗಾಣ ಮತ್ತು ಆಂಧ್ರಪ್ರದೇಶದ ಮುಖ್ಯಮಂತ್ರಿಗಳು ಈ ಮಂಡಳಿಯ ಸದಸ್ಯರಾಗಿರುತ್ತಾರೆ. ಜುಲೈ 16, 2025ರಂದು ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸಿ ಜಲ ವಿವಾದಗಳ ಕುರಿತು ಚರ್ಚಿಸಿದ್ದರು ಎಂದು ಕಿಶನ್ ರೆಡ್ಡಿ ಹೇಳಿದ್ದಾರೆ. ಆ ಸಭೆಯಲ್ಲಿ, ಕೇಂದ್ರ ಮತ್ತು ಎರಡೂ ರಾಜ್ಯಗಳ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಲು ನಿರ್ಧರಿಸಲಾಯಿತು. ಜಲ ವಿವಾದಗಳನ್ನು ತಾಂತ್ರಿಕ ದೃಷ್ಟಿಕೋನದಿಂದ ಅಧ್ಯಯನ ಮಾಡಲು ನಿರ್ಧರಿಸಲಾಯಿತು.

ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ಎರಡೂವರೆ ಲಕ್ಷ ಕಲ್ಲಿದ್ದಲು ಕಾರ್ಮಿಕರಿಗೆ 1 ಲಕ್ಷ ರೂ. ಉಡುಗೊರೆ; ಸಚಿವ ಕಿಶನ್ ರೆಡ್ಡಿ ಘೋಷಣೆ

ಕೇಂದ್ರ ಜಲ ಆಯೋಗದ (CWC) ಅಧ್ಯಕ್ಷರು ಈ ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ತೆಲಂಗಾಣದಿಂದ ಜಲಸಂಪನ್ಮೂಲ ಇಲಾಖೆಯ ಸಲಹೆಗಾರ, ನೀರಾವರಿ ಇಲಾಖೆಯ ಪ್ರಧಾನ ಕಾರ್ಯದರ್ಶಿ, ವಿಶೇಷ ಕಾರ್ಯದರ್ಶಿ ಮತ್ತು ಮುಖ್ಯ ಎಂಜಿನಿಯರ್ ಸದಸ್ಯರಾಗಿರುತ್ತಾರೆ. ಆಂಧ್ರಪ್ರದೇಶದಿಂದ ಜಲಸಂಪನ್ಮೂಲ ಇಲಾಖೆಯ ವಿಶೇಷ ಕಾರ್ಯದರ್ಶಿ, ನೀರಾವರಿ ಇಲಾಖೆಯ ಸಲಹೆಗಾರ, ಮುಖ್ಯ ಎಂಜಿನಿಯರ್ ಮತ್ತು ಮುಖ್ಯ ಎಂಜಿನಿಯರ್ ಪ್ರತಿನಿಧಿಗಳಾಗಿರುತ್ತಾರೆ. ಕೇಂದ್ರ ಸಂಸ್ಥೆಗಳಿಂದ ಕೃಷ್ಣಾ ನದಿ ನಿರ್ವಹಣಾ ಮಂಡಳಿಯ (KRMB) ಅಧ್ಯಕ್ಷರು, ಗೋದಾವರಿ ನದಿ ನಿರ್ವಹಣಾ ಮಂಡಳಿಯ (GRMB) ಅಧ್ಯಕ್ಷರು, ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯ (NWDA) ಮುಖ್ಯ ಎಂಜಿನಿಯರ್ ಮತ್ತು ಕೇಂದ್ರ ಜಲ ಆಯೋಗದ (CWC) ಮುಖ್ಯ ಎಂಜಿನಿಯರ್ ಸದಸ್ಯರಾಗಿರುತ್ತಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:08 pm, Fri, 2 January 26

Source link

ಎರಡು ವರ್ಷದ ಬಳಿಕ ಶುರುವಾಗುತ್ತಿದೆ ‘ಕಲ್ಕಿ 2’ ಶೂಟಿಂಗ್, ‘ಸಲಾರ್ 2’ ಯಾವಾಗ? – Kannada News | Kalki 2898 AD movie sequel shooting starting in February

ಪ್ರಭಾಸ್ ಭಾರತದ ಸ್ಟಾರ್ ಪ್ಯಾನ್ ಇಂಡಿಯಾ (Pan Inda) ನಟ. ಅವರೆಷ್ಟು ಬ್ಯುಸಿ ಎಂದರೆ ಮುಂದಿನ ಮೂರು ನಾಲ್ಕು ವರ್ಷಗಳಿಗೆ ಈಗಲೇ ಡೇಟ್ಸ್ ಕೊಟ್ಟು ಕೂತಿದ್ದಾರೆ. ಒಟ್ಟಿಗೆ ಎರಡೆರಡು ಸಿನಿಮಾಗಳಲ್ಲಿ ನಟಿಸಿದರೂ ಈಗಿರುವ ಕಮಿಟ್​​ಮೆಂಟ್ ಮುಗಿಸಲು ಎರಡು ವರ್ಷವಾದರೂ ಬೇಕು. ಪ್ರಭಾಸ್ ಎಷ್ಟು ಬ್ಯುಸಿ ಎಂದರೆ ಈಗಾಗಲೇ ಬಿಡುಗಡೆ ಆಗಿ ಹಿಟ್ ಆಗಿರುವ ಸಿನಿಮಾಗಳ ಸೀಕ್ವೆಲ್​​ಗಳ ಭವಿಷ್ಯವೂ ಅತಂತ್ರದಲ್ಲಿದೆ. ಪ್ರಭಾಸ್ ಕೈಯಲ್ಲಿ ಪ್ರಸ್ತುತ ಎರಡು ಸೀಕ್ವೆಲ್ ಸಿನಿಮಾಗಳಿವೆ. ಒಂದು ‘ಕಲ್ಕಿ 2898 ಎಡಿ’ ಮತ್ತು ‘ಸಲಾರ್’ ಈ ಎರಡರಲ್ಲಿ ಮೊದಲಿಗೆ ‘ಕಲ್ಕಿ 2898 ಎಡಿ’ ಸಿನಿಮಾವನ್ನು ಪ್ರಭಾಸ್ ಪ್ರಾರಂಭಿಸುತ್ತಿದ್ದಾರೆ. ಆದರೆ ‘ಸಲಾರ್’ ಸೀಕ್ವೆಲ್ ಭವಿಷ್ಯ ಈಗಲೂ ಅತಂತ್ರದಲ್ಲಿಯೇ ಇದೆ.

ಪ್ರಶಾಂತ್ ನೀಲ್ ನಿರ್ದೇಶಿಸಿ, ಪ್ರಭಾಸ್ ನಟಿಸಿದ್ದ ‘ಸಲಾರ್’ ಸಿನಿಮಾ 2023 ರಲ್ಲಿ ಬಿಡುಗಡೆ ಆಗಿತ್ತು. ‘ಸಾಹೋ’, ‘ರಾಧೆ-ಶ್ಯಾಮ್’, ‘ಆದಿಪುರುಷ್’ ಸಿನಿಮಾಗಳ ಸತತ ಸೋಲಿನಿಂದ ಕಂಗೆಟ್ಟಿದ್ದ ಪ್ರಭಾಸ್ ಅವರನ್ನು ಸೋಲಿನ ಸುಳಿಯಿಂದ ಹೊರತಂಡ ಸಿನಿಮಾ ಅದಾಗಿತ್ತು. ಆದರೆ ‘ಸಲಾರ್’ ಬಿಡುಗಡೆ ಆಗಿ ಎರಡು ವರ್ಷಕ್ಕೂ ಹೆಚ್ಚು ಸಮಯವಾಗಿದೆ ಆದರೆ ಸಿನಿಮಾದ ಸೀಕ್ವೆಲ್ ಬಗ್ಗೆ ಯಾವುದೇ ಸುದ್ದಿ ಇಲ್ಲ. ಆದರೆ ‘ಸಲಾರ್’ ಬಿಡುಗಡೆ ಆಗಿ ಆರು ತಿಂಗಳ ಬಳಿಕ ಬಿಡುಗಡೆ ಆದ ‘ಕಲ್ಕಿ 2898 ಎಡಿ’ ಸಿನಿಮಾದ ಸೀಕ್ವೆಲ್​​ನ ಚಿತ್ರೀಕರಣಕ್ಕೆ ಓಕೆ ಹೇಳಿದ್ದಾರೆ ಪ್ರಭಾಸ್.

ಇದನ್ನೂ ಓದಿ:ಪ್ರಭಾಸ್ ಸಿನಿಮಾ ನಿರ್ದೇಶಕನ ಸಂಭಾವನೆ ಎಷ್ಟು ಕೋಟಿ ಗೊತ್ತೆ?

‘ಕಲ್ಕಿ 2898 ಎಡಿ’ ಸಿನಿಮಾ 2024ರ ಜೂನ್ ತಿಂಗಳಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಸಾಧಾರಣ ಕಲೆಕ್ಷನ್ ಮಾಡಿತು. ಇದೀಗ ಈ ಸಿನಿಮಾದ ಸೀಕ್ವೆಲ್ ಚಿತ್ರೀಕರಣಕ್ಕೆ ಒಪ್ಪಿಗೆ ಸೂಚಿಸಿರುವ ಪ್ರಭಾಸ್, ಇದೇ ವರ್ಷ ಫೆಬ್ರವರಿ ತಿಂಗಳಲ್ಲಿ ಸಿನಿಮಾದ ಚಿತ್ರೀಕರಣ ಪ್ರಾರಂಭಿಸಲಿದ್ದಾರೆ. ಆದರೆ ಅದಕ್ಕೂ ಮುಂಚೆ ಬಿಡುಗಡೆ ಆಗಿದ್ದ ‘ಸಲಾರ್’ ಸಿನಿಮಾದ ಬಗ್ಗೆ ಯಾವುದೇ ಸದ್ದಿಲ್ಲ.

‘ಕಲ್ಕಿ 2898 ಎಡಿ’ ಸಿನಿಮಾನಲ್ಲಿ ಪ್ರಭಾಸ್ ಜೊತೆಗೆ ದೀಪಿಕಾ ಪಡುಕೋಣೆ ಸಹ ಮಹತ್ವದ ಪಾತ್ರದಲ್ಲಿ ನಟಿಸಿದ್ದರು. ಆದರೆ ಸೀಕ್ವೆಲ್​​ನಲ್ಲಿ ದೀಪಿಕಾ ಪಡುಕೋಣೆ ಬದಲಿಗೆ ಬೇರೆ ನಟಿಯೊಬ್ಬರು ಅವರ ಪಾತ್ರದಲ್ಲಿ ನಟಿಸಲಿದ್ದಾರೆ. ದೀಪಿಕಾ ಪಡುಕೋಣೆ ಜೊತೆಗೆ ಭಿನ್ನಾಭಿಪ್ರಾಯ ಮೂಡಿದ ಕಾರಣ ಅವರನ್ನು ಸಿನಿಮಾದಿಂದ ಹೊರಗಿಡಲಾಗಿದೆ. ಫೆಬ್ರವರಿಯಲ್ಲಿ ಚಿತ್ರೀಕರಣ ಪ್ರಾರಂಭವಾಗಿ ಬಹುಷಃ 2027ರ ಆರಂಭದಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾದ ಸೀಕ್ವೆಲ್ ಬಿಡುಗಡೆ ಆಗಲಿದೆ. ಸೀಕ್ವೆಲ್​​ನಲ್ಲಿ ಕಮಲ್ ಹಾಸನ್ ಅವರು ಪ್ರಭಾಸ್ ಎದುರು ವಿಲನ್ ಆಗಿ ಅಬ್ಬರಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮುಂಬೈನಲ್ಲಿ ‘ಧುರಂಧರ್’ ಬಗ್ಗೆ ಮನಸಾರೆ ಮಾತಾಡಿದ ಶಿವರಾಜ್​ಕುಮಾರ್ – Kannada News | Shivarajkumar talk about Dhurandhar Movie in Mumbai during 45 movie press meet

ನಟ ಶಿವರಾಜ್​ಕುಮಾರ್ ಅವರು ಮುಂಬೈಗೆ ತೆರಳಿದ್ದಾರೆ. ಕನ್ನಡದ ‘45’ ಸಿನಿಮಾ (45 Movie) ಹಿಂದಿಯಲ್ಲಿ ಕೂಡ ಬಿಡುಗಡೆ ಆಗಲಿದ್ದು, ಆ ಚಿತ್ರದ ಪ್ರಚಾರವನ್ನು ಅವರು ಮುಂಬೈನಲ್ಲಿ ಮಾಡುತ್ತಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಶಿವಣ್ಣ ಭಾಗಿಯಾಗಿದ್ದಾರೆ. ಈ ವೇಳೆ ಅವರಿಗೆ ‘ಧುರಂಧರ್’ (Dhurandhar) ಸಿನಿಮಾ ಬಗ್ಗೆ ಹೇಳಲಾಯಿತು. ರಣವೀರ್ ಸಿಂಗ್, ಅಕ್ಷಯ್ ಖನ್ನಾ ಮುಂತಾದವರು ನಟಿಸಿದ ‘ಧುರಂಧರ್’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ಆ ಸಿನಿಮಾದಲ್ಲಿ ತಮಗೆ ಏನು ಇಷ್ಟ ಆಯಿತು ಎಂಬುದನ್ನು ಶಿವರಾಜ್​​ಕುಮಾರ್ (Shivarajkumar) ಅವರು ವಿವರಿಸಿದ್ದಾರೆ.

‘ಧುರಂಧರ್ ಸಿನಿಮಾ ಬಹಳ ಚೆನ್ನಾಗಿದೆ. ಸಿನಿಮಾದ ಮೇಕಿಂಗ್ ಮತ್ತು ಎಮೋಷನ್ ಚೆನ್ನಾಗಿದೆ. ಎಲ್ಲರ ನಟನೆ ಅತ್ಯುತ್ತಮವಾಗಿದೆ. ಅಕ್ಷಯ್ ಖನ್ನಾ ನಟನೆ ನನಗೆ ಇಷ್ಟ ಆಯಿತು. ಹಾಗೆಯೇ ರಣವೀರ್ ಸಿಂಗ್ ಕೂಡ ಅಮೇಜಿಂಗ್. ಪಾತ್ರಕ್ಕೆ ಬೇಕಾದ ಸೂಕ್ಷ್ಮವಾದ ಅಭಿನಯವನ್ನು ಅವರು ನೀಡಿದ್ದಾರೆ. ಏನು ಬೇಕಾದರೂ ಮಾಡುವ ಅವಕಾಶ ಅಕ್ಷಯ್ ಖನ್ನಾ ಅವರ ಪಾತ್ರಕ್ಕೆ ಇದೆ. ಆದರೆ ರಣವೀರ್ ಸಿಂಗ್ ಮಾಡಿದ ಪಾತ್ರ ಅಷ್ಟು ಸುಲಭವಲ್ಲ’ ಎಂದು ಶಿವರಾಜ್​​ಕುಮಾರ್ ಅವರು ಹೇಳಿದ್ದಾರೆ.

ಈ ಮೊದಲೇ ಶಿವರಾಜ್​​ಕುಮಾರ್ ಅವರಿಗೆ ಹಿಂದಿ ಸಿನಿಮಾದಲ್ಲಿ ನಟಿಸುವ ಅವಕಾಶ ಬಂದಿತ್ತು. ಆದರೆ ಡೇಟ್ಸ್ ಹೊಂದಾಣಿಕೆ ಆಗದ ಕಾರಣ ಅವರು ನಟಿಸಿರಲಿಲ್ಲ. ‘ಈಗ ಒಂದು ವೇಳೆ ಬಾಲಿವುಡ್ ಸಿನಿಮಾ ಮಾಡುವುದಾದರೆ ಅದು ಹಾಡು, ಡ್ಯಾನ್ಸ್ ಇರುವ ಕಮರ್ಷಿಯಲ್ ಸಿನಿಮಾ ಆಗಿರಬೇಕು. ಆ ಮೂಲಕ ಜನರ ಹೃದಯವನ್ನು ತಲುಪಬೇಕು. ಜನರು ನನ್ನನ್ನು ಪಾತ್ರವಾಗಿ ನೋಡಬೇಕು. ಭಾರತೀಯ ಸಂಸ್ಕೃತಿಯ ಭಾಗ ಆಗಿರಬೇಕು’ ಎಂದಿದ್ದಾರೆ ಶಿವಣ್ಣ.

ಕನ್ನಡ ಚಿತ್ರರಂಗವನ್ನು ಬಾಲಿವುಡ್ ಮಂದಿ ‘ಕೆಜಿಎಫ್: ಚಾಪ್ಟರ್ 2’, ‘ಕಾಂತಾರ: ಚಾಪ್ಟರ್ 1’ ಮುಂತಾದ ಸಿನಿಮಾಗಳ ಮೂಲಕ ಗುರುತಿಸುತ್ತಾರೆ. ಆ ಸಿನಿಮಾಗಳಿಂದಾಗಿ ಕನ್ನಡ ಚಿತ್ರರಂಗದ ಬಗ್ಗೆ ಹಿಂದಿ ಪ್ರೇಕ್ಷಕರು ಕೂಡ ಮಾತನಾಡುವಂತಾಗಿದೆ. ‘ನಮಗೆ ಆ ಸಿನಿಮಾಗಳ ಯಶಸ್ಸಿನಿಂದ ಹೆಮ್ಮೆ ಆಗಿದೆ. ಅವರು ಪ್ರಯತ್ನ ಮಾಡದೇ ಇದ್ದಿದ್ದರೆ ಈ ಸಿನಿಮಾಗಳು ಇಲ್ಲಿಗೆ ಬರುತ್ತಿರಲಿಲ್ಲ. ಅವರು ಧೈರ್ಯ ತೋರಿಸಿದರು. ಈಗ ನಾವು 45 ಸಿನಿಮಾ ತಂಡದವರು ಬಂದಿದ್ದೇವೆ. ಏನಾಗುತ್ತದೋ ನೋಡೋಣ’ ಎಂದು ಶಿವರಾಜ್​ಕುಮಾರ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಧುರಂಧರ್’ ಸಿನಿಮಾಗೆ 90 ಕೋಟಿ ರೂಪಾಯಿ ನಷ್ಟ ಆಗಿದ್ದು ಯಾಕೆ?

ಮ್ಯೂಸಿಕ್ ಡೈರೆಕ್ಟರ್ ಅರ್ಜುನ್ ಜನ್ಯ ಅವರು ‘45’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ರಮೇಶ್ ರೆಡ್ಡಿ ಅವರು ಬಂಡವಾಳ ಹೂಡಿದ್ದಾರೆ. ಉಪೇಂದ್ರ, ರಾಜ್ ಬಿ. ಶೆಟ್ಟಿ, ಶಿವರಾಜ್​​ಕುಮಾರ್ ಅವರು ಒಟ್ಟಾಗಿ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಕನ್ನಡದಲ್ಲಿ ತೆರೆಕಂಡ ಬಳಿಕ ಬೇರೆ ಭಾಷೆಯಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಅದಕ್ಕಾಗಿ ಪ್ರಚಾರ ಕಾರ್ಯದಲ್ಲಿ ಶಿವಣ್ಣ ತೊಡಗಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಂಗಳೂರು ನಗರ ವಿಶ್ವವಿದ್ಯಾಲಯ ಪ್ರಶ್ನೆಪತ್ರಿಕೆ ಲೀಕ್: ಆದ್ರೂ ನಡೆಯಿತು ಪರೀಕ್ಷೆ! – Kannada News | Bengaluru city university bcom 5th semester question paper leaked Before Exam

ಬೆಂಗಳೂರು, (ಜನವರಿ 02): ಹೊಸ ವರ್ಷದಂದೇ ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ (BCU) ಬಿಕಾಂ 5ನೇ ಸೆಮಿಸ್ಟರ್‌ನ ‘ಅಡ್ವಾನ್ಸ್ ಅಕೌಂಟಿಂಗ್’ ಪ್ರಶ್ನೆಪತ್ರಿಕೆ ಪರೀಕ್ಷೆಗೂ ಮುನ್ನ ಸೋರಿಕೆಯಾಗಿದೆ. ಇಂದು (ಜನವರಿ 02) ಬಿಕಾಂ ಐದನೇ ಸೆನಿಸ್ಟರ್ ಅಡ್ವಸನ್ಸ್ ಅಕೌಂಟಿಂಗ್ ಪರೀಕ್ಷೆ ಮುಗಿದು ಹೋಗಿದೆ. ಆದ್ರೆ, ಪರೀಕ್ಷೆಗೂ ಮುನ್ನ ಅಂದರೆ ನಿನ್ನೆ(ಜನವರಿ 01) ಸಂಜೆಯೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಈ ಅಕ್ರಮದ ಹಿಂದೆ ಖಾಸಗಿ ಕಾಲೇಜುಗಳ ಕೈವಾಡವಿದೆ ಎಂದು NSUI ಆರೋಪಿಸಿದ್ದು, ವಿವಿ ಪರೀಕ್ಷಾ ವಿಭಾಗದ ಮೌನವು ಅನುಮಾನಕ್ಕೆ ಕಾರಣವಾಗಿದೆ.

ಪರೀಕ್ಷೆಗೂ ಮೊದಲೇ ಪ್ರಶ್ನೆಪತ್ರಿಕೆ ಲೀಕ್!

ಇಂದು ಜರುಗಿದ ಬಿಕಾಂ ಐದನೇ ಸೆಮಿಸ್ಟರ್‌ನ ‘ಅಡ್ವಾನ್ಸ್ ಅಕೌಂಟಿಂಗ್’ ಪರೀಕ್ಷೆಯ ಪ್ರಶ್ನೆಪತ್ರಿಕೆ ನಿನ್ನೆ ಸಂಜೆಯೇ ಲೀಕ್ ಆಗಿದೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ನಿನ್ನೆ ಸಂಜೆಯಿಂದಲೇ ಪ್ರಶ್ನೆಪತ್ರಿಕೆಯ ಪ್ರತಿಗಳು ವಾಟ್ಸಾಪ್ ಗ್ರೂಪ್‌ಗಳಲ್ಲಿ ಹರಿದಾಡುತ್ತಿದ್ದು, ಇಂದು ಪರೀಕ್ಷಾ ಕೇಂದ್ರದಲ್ಲಿ ನೀಡಲಾದ ಪ್ರಶ್ನೆಪತ್ರಿಕೆಗೂ ಲೀಕ್ ಆದ ಪೇಪರ್‌ಗೂ ಸಂಪೂರ್ಣ ಸಾಮ್ಯತೆ ಇರುವುದು ದೃಢಪಟ್ಟಿದೆ. ಇನ್ನು ಈ ವ್ಯವಸ್ಥಿತ ನಕಲು ದಂಧೆಯ ಹಿಂದೆ ಕೆಲವು ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ತಮ್ಮ ಕಾಲೇಜಿನ ಫಲಿತಾಂಶ ಉತ್ತಮವಾಗಿ ಬರಲಿ ಎಂಬ ಉದ್ದೇಶದಿಂದ ಪರೀಕ್ಷಾ ವಿಭಾಗದ ಸಿಬ್ಬಂದಿಯೊಂದಿಗೆ ಶಾಮೀಲಾಗಿ ಪ್ರಶ್ನೆಪತ್ರಿಕೆಯನ್ನು ಮೊದಲೇ ಪಡೆದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: SSLC ಫಲಿತಾಂಶ ಸುಧಾರಣೆ ಮಾಡುವ ಶಿಕ್ಷಕರಿಗೆ ಬಂಪರ್ ಗಿಫ್ಟ್ ಘೋಷಿಸಿದ ಸರ್ಕಾರ

ವಿದ್ಯಾರ್ಥಿ ಸಂಘಟನೆ NSUI ಈ ವಿಚಾರದಲ್ಲಿ ವಿಶ್ವವಿದ್ಯಾಲಯದ ವಿರುದ್ಧ ಸಮರ ಸಾರಿದೆ. ಇಂದಿನ ಪ್ರಶ್ನೆಪತ್ರಿಕೆ ನಿನ್ನೆ ಸಂಜೆಯೇ ನಮಗೆ ಲಭ್ಯವಾಗಿತ್ತು. ಇದನ್ನು ದುರುಪಯೋಗಪಡಿಸಿಕೊಂಡು ಬಹುತೇಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪ್ರಾಮಾಣಿಕವಾಗಿ ಓದಿದ ವಿದ್ಯಾರ್ಥಿಗಳಿಗೆ ಇದು ಮಾಡಿದ ದ್ರೋಹ ಎಂದು ಸಂಘಟನೆಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಮಾಹಿತಿ ಇದ್ದರೂ ಸಹ ಬೆಂಗಳೂರು ನಗರ ವಿವಿಯ ಪರೀಕ್ಷಾ ವಿಭಾಗ ಯಾವುದೇ ಕ್ರಮ ಕೈಗೊಳ್ಳದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಹಗರಣದ ಬಗ್ಗೆ ವಿಶ್ವವಿದ್ಯಾಲಯವು ಮೌನಕ್ಕೆ ಶರಣಾಗಿರುವುದು ವಿದ್ಯಾರ್ಥಿಗಳ ಆಕ್ರೋಶವನ್ನು ಇನ್ನಷ್ಟು ಹೆಚ್ಚಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 7:43 pm, Fri, 2 January 26

Source link