ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಇನ್ನೇರಡು ದಿನಗಳ ಒಳಗೆ ಪ್ರಕಟಿಸುವ ಸಾಧ್ಯತೆಗಳಿವೆ. ಆದರೆ ಅದಕ್ಕೂ ಮುನ್ನ ತಂಡದ ಯುವ ಆಟಗಾರ ಸಾಯಿ ಸುದರ್ಶನ್ ಗಂಭೀರ ಗಾಯಕ್ಕೆ ತುತ್ತಾಗಿದ್ದು, ಕೆಲವು ವಾರಗಳ ವರೆಗೆ ಕ್ರಿಕೆಟ್ನಿಂದ ದೂರ ಉಳಿಯಲಿದ್ದಾರೆ ಎಂದು ವರದಿಯಾಗಿದೆ.
Your blog category
ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಇನ್ನೇರಡು ದಿನಗಳ ಒಳಗೆ ಪ್ರಕಟಿಸುವ ಸಾಧ್ಯತೆಗಳಿವೆ. ಆದರೆ ಅದಕ್ಕೂ ಮುನ್ನ ತಂಡದ ಯುವ ಆಟಗಾರ ಸಾಯಿ ಸುದರ್ಶನ್ ಗಂಭೀರ ಗಾಯಕ್ಕೆ ತುತ್ತಾಗಿದ್ದು, ಕೆಲವು ವಾರಗಳ ವರೆಗೆ ಕ್ರಿಕೆಟ್ನಿಂದ ದೂರ ಉಳಿಯಲಿದ್ದಾರೆ ಎಂದು ವರದಿಯಾಗಿದೆ.
ಟೈಟಲ್ ಮೂಲಕ ‘ಧರ್ಮಸ್ಥಳ ನಿಯೋಜಿಕವರ್ಗ್’ (Dharmasthala Niyogikavarg) ಸಿನಿಮಾ ಗಮನ ಸೆಳೆಯುತ್ತಿದೆ. ಹೊಸ ವರ್ಷದ ಪ್ರಯುಕ್ತ ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ‘ಮೂವಿಂಗ್ ಡ್ರೀಮ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಯ ಮೂಲಕ ಮೇರುಂ ಭಾಸ್ಕರ್ ಅವರು ‘ಧರ್ಮಸ್ಥಳ ನಿಯೋಜಿಕವರ್ಗ್’ ಸಿನಿಮಾವನ್ನು ನಿರ್ಮಿಸಿದ್ದಾರೆ. ಜೈ ಜ್ಞಾನ ಪ್ರಭಾ ತೋಟ ಅವರು ಈ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಸುಮನ್, ಸಾಯಿ ಕುಮಾರ್ (Sai Kumar) ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.
ಹಿರಿಯ ಕಲಾವಿದರಾದ ಸುಮನ್ ಹಾಗೂ ಸಾಯಿ ಕುಮಾರ್ ಅವರ ಜೊತೆ ಈ ಚಿತ್ರದಲ್ಲಿ ನಟರಾಜ್, ವಿತಿಕಾ ಶೇರು, ವರುಣ್ ಸಂದೇಶ್ ಅವರು ಕೂಡ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ‘ಧರ್ಮಸ್ಥಳ ನಿಯೋಜಿಕವರ್ಗ್’ ಸಿನಿಮಾದ ಶೂಟಿಂಗ್ ಈಗಾಗಲೇ ಪೂರ್ಣಗೊಂಡಿದೆ. ಸದ್ಯಕ್ಕೆ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ ಎಂದು ಚಿತ್ರತಂಡ ಹೇಳಿದೆ.
ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ‘ಧರ್ಮಸ್ಥಳ ನಿಯೋಜಿಕವರ್ಗ್’ ಸಿನಿಮಾ ತಂಡವು ಪ್ರೇಕ್ಷಕರಿಗೆ ಹೊಸ ವರ್ಷದ ಶುಭಾಶಯ ಕೋರಿದೆ. ಈ ವೇಳೆ ನಿರ್ದೇಶಕ ಜೈ ಜ್ಞಾನ ಪ್ರಭಾ ತೋಟ ಅವರು ಮಾತನಾಡಿ ಸಿನಿಮಾ ಬಗ್ಗೆ ಮಾಹಿತಿ ನೀಡಿದರು. ಈ ಸಿನಿಮಾದಲ್ಲಿ ರಾಜಕೀಯ ಹಿನ್ನೆಲೆಯ ಕಥಾಹಂದರ ಇರಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.
‘ನಮ್ಮ ಸಿನಿಮಾ ವಿಭಿನ್ನ ಶೈಲಿಯ ರಾಜಕೀಯ ಹಾಗೂ ಎಮೋಷನಲ್ ಎಂಟರ್ಟೈನರ್ ಆಗಿದೆ. ಹಿರಿಯ ನಟರಾದ ಸಾಯಿ ಕುಮಾರ್ ಹಾಗೂ ಸುಮನ್ ಅವರ ಜೊತೆಗೆ ಯುವ ನಟರು ಸಹ ಚೆನ್ನಾಗಿ ಅಭಿನಯಿಸಿದ್ದಾರೆ. ಚಿತ್ರಕಥೆಯಲ್ಲಿ ಆರಂಭದಿಂದ ಅಂತ್ಯದವರೆಗೆ ಕುತೂಹಲಕಾರಿಯಾದ ತಿರುವುಗಳು ಇರಲಿವೆ. ಖ್ಯಾತ ಸಾಹಿತಿ ಚಂದ್ರಬೋಸ್ ಬರೆದ ಸಾಹಿತ್ಯಕ್ಕೆ ಗಾಯಕಿ ಸುನೀತಾ ಧ್ವನಿಯಾಗಿದ್ದಾರೆ’ ಎಂದು ನಿರ್ದೇಶಕರು ಹೇಳಿದ್ದಾರೆ.
ಇದನ್ನೂ ಓದಿ: ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್: ಸನ್ಮಾನ ಮಾಡಿದ ಶಿವಣ್ಣ
ಸಾಯಿ ಕುಮಾರ್, ಸುಮನ್, ನಟರಾಜ್, ವರುಣ್ ಸಂದೇಶ್, ವಿತಿಕಾ ಶೇರು ಮಾತ್ರವಲ್ಲದೇ ಕಾಲಕೇಯ ಪ್ರಭಾಕರ್, ರಾಜಾ ರವೀಂದ್ರ, ಪೃಥ್ವಿ, ರಾಜೀವ್ ಕನಕಾಲ, ಶಿವ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ವೆಂಕಟ ಹನುಮ ಅವರು ಛಾಯಾಗ್ರಹಣ ಮಾಡಿದ್ದಾರೆ. ನಂದು ಮಾಸ್ಟರ್ ಅವರು ಸಾಹಸ ನಿರ್ದೇಶನ ಮಾಡಿದ್ದಾರೆ. ಸೃಷ್ಟಿ ವರ್ಮಾ ಅವರ ನೃತ್ಯ ನಿರ್ದೇಶನ, ಅಸ್ಲಂ ಅವರ ಸಂಭಾಷಣೆ, ಸಾಯಿ ಬಾಬು ತಲಾರಿ ಅವರ ಸಂಕಲನ, ಭಾರ್ಗವಾಚಾರಿ ನೌಂಡ್ಲಾಸ್ ಅವರ ಕಲಾ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಇಂದಿನ ವೇಗದ ಜೀವನದಲ್ಲಿ, ಹಗಲಿನಲ್ಲಿ ಸ್ವಲ್ಪ ವಿಶ್ರಾಂತಿ ಪಡೆಯಲು ನಿದ್ರೆ ಮಾಡುವುದು ಸಾಮಾನ್ಯ. ಆದರೆ ಅನೇಕರು ಗಂಟೆಗಟ್ಟಲೆ ಮಲಗುತ್ತಾರೆ. ಆದರೆ ಆರೋಗ್ಯ ತಜ್ಞರು ಈ ಅಭ್ಯಾಸ ಕೆಲವೊಮ್ಮೆ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹದು ಎನ್ನುತ್ತಾರೆ. ಇದಕ್ಕೆ ಪೂರಕವೆಂಬಂತೆ ನಡೆದ ಒಂದು ಸಂಶೋಧನೆ ಹಗಲಿನಲ್ಲಿ ನಿದ್ರೆ ಮಾಡುವಂತಹ ಅಭ್ಯಾಸ ಅದರಲ್ಲಿಯೂ ದಿನಕ್ಕೆ 30 ನಿಮಿಷಕ್ಕಿಂತ ಹೆಚ್ಚು ಹೊತ್ತು ನಿದ್ರೆ (Sleeping) ಮಾಡುವುದರಿಂದ ಎಷ್ಟೆಲ್ಲಾ ಸಮಸ್ಯೆಗಳಾಗುತ್ತದೆ, ಈ ರೀತಿ ಅಭ್ಯಾಸದಿಂದ ಮಧುಮೇಹದ (Diabetes) ಅಪಾಯ ಹೆಚ್ಚಾಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದೆ. ಹಾಗಾದರೆ ಹಗಲಿನಲ್ಲಿ ಮಲಗುವುದರಿಂದ ನಿಜವಾಗಿಯೂ ಡಯಾಬಿಟಿಸ್ ಬರುತ್ತದೆಯೇ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
ಈ ಸಂಶೋಧನೆ ಒಟ್ಟು 40 ವಿಭಿನ್ನ ಅಧ್ಯಯನಗಳನ್ನು ಒಳಗೊಂಡಿದ್ದು, ಇದರಲ್ಲಿ ಸಾವಿರಾರು ಜನರಿಂದ ಪಡೆದ ದತ್ತಾಂಶಗಳಿವೆ. ದತ್ತಾಂಶ ಸಂಗ್ರಹಣೆಯ ಸಮಯದಲ್ಲಿ, ಭಾಗವಹಿಸುವವರು ಹಗಲಿನಲ್ಲಿ ನಿದ್ರೆ ಮಾಡುತ್ತಾರೆಯೇ ಅಥವಾ ಇಲ್ಲವೇ ಎಂಬುದನ್ನು ಮತ್ತು ಅವರು ನಿದ್ರೆ ಮಾಡಿದರೆ, ಎಷ್ಟು ಸಮಯದವರೆಗೆ ಎಂಬುದನ್ನು ಗಮನಿಸಲಾಗಿದೆ. ನಂತರ ಈ ಮಾಹಿತಿಯನ್ನು ಅವರ ಮಧುಮೇಹ ಸ್ಥಿತಿ ಮತ್ತು ರಕ್ತದಲ್ಲಿನ ಸಕ್ಕರೆ ನಿಯಂತ್ರಣದೊಂದಿಗೆ ಹೋಲಿಸಲಾಗಿದೆ. ಈ ಮೂಲಕ 30 ನಿಮಿಷಗಳಿಗಿಂತ ಹೆಚ್ಚು ಕಾಲ, ಅದರಲ್ಲಿಯೂ 1 ಗಂಟೆ ಅಥವಾ ಅದಕ್ಕಿಂತ ಹೆಚ್ಚು ಕಾಲ ನಿದ್ರೆ ಮಾಡುವವರಲ್ಲಿ ಮಧುಮೇಹ ಬರುವ ಅಪಾಯ ಹೆಚ್ಚು ಎಂದು ಬಹಿರಂಗಪಡಿಸಿದೆ.
ಇದನ್ನೂ ಓದಿ: ಮಧುಮೇಹ ರೋಗಿಗಳು ಹೃದಯಾಘಾತಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚಿದೆಯೇ? ನೀವು ತಿಳಿಯಲೇಬೇಕಾದ ಮಾಹಿತಿ ಇದು
ಸಾಮಾನ್ಯವಾಗಿ ಹಗಲಿನಲ್ಲಿ ಹೆಚ್ಚು ಹೊತ್ತು ನಿದ್ರೆ ಮಾಡುವುದರಿಂದ ದೇಹದ ನೈಸರ್ಗಿಕ ಗಡಿಯಾರಕ್ಕೆ ಅಡ್ಡಿಯಾಗುತ್ತದೆ. ಇದು ಇನ್ಸುಲಿನ್ ಸರಿಯಾಗಿ ಕಾರ್ಯನಿರ್ವಹಿಸುವುದನ್ನು ತಡೆಯುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟದ ಮೇಲೆ ಪರಿಣಾಮ ಬೀರುತ್ತದೆ. ಅಷ್ಟು ಮಾತ್ರವಲ್ಲ, ಹಗಲಿನ ನಿದ್ರೆ ರಾತ್ರಿಯ ನಿದ್ರೆಯನ್ನು ಕೆಡಿಸುತ್ತದೆ ಇದರಿಂದ ಮಧುಮೇಹದ ಅಪಾಯ ಹೆಚ್ಚಾಗುತ್ತದೆ. ಅಷ್ಟೇ ಅಲ್ಲ, ದೀರ್ಘಕಾಲದವರೆಗೆ ನಿದ್ರೆ ಮಾಡುವುದು ಚಯಾಪಚಯ ಕ್ರಿಯೆಯನ್ನು ನಿಧಾನಗೊಳಿಸುತ್ತದೆ, ಇದು ಸಂಭಾವ್ಯ ತೂಕ ಹೆಚ್ಚಳಕ್ಕೆ ಕಾರಣವಾಗುತ್ತದೆ. ತೂಕ ಹೆಚ್ಚಾಗುವುದು ಮಧುಮೇಹಕ್ಕೆ ಪ್ರಮುಖ ಅಪಾಯಕಾರಿ ಅಂಶವಾಗಿದೆ. ಹಗಲಿನಲ್ಲಿ ನಿದ್ರೆ ಮಾಡುವುದು ತಪ್ಪಲ್ಲ, ಆದರೆ ಸಮಯದ ಬಗ್ಗೆ ಗಮನ ಕೊಡಬೇಕು. ನೀವು ನಿದ್ರೆ ಮಾಡುವುದೇ ಆದಲ್ಲಿ, ಅದನ್ನು 20 ರಿಂದ 30 ನಿಮಿಷಗಳಿಗೆ ಮಿತಿಗೊಳಿಸಿ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಅನೇಕರಿಗೆ ಸರ್ಕಾರಿ ಕೆಲಸ ಮಾಡುವುದು ಜೀವಮಾನದ ಕನಸಾಗಿರುತ್ತದೆ. ಆದರೆ ಕೆಲವರು ಮಾತ್ರ ಈ ಕನಸನ್ನು ನನಸಾಗಿಸುತ್ತಾರೆ. ಅದಕ್ಕೆ ಹಲವು ಕಾರಣಗಳಿವೆ. ವಿಶೇಷವಾಗಿ ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ, ಉದ್ಯೋಗ ಪಡೆಯಲು, ಕೇವಲ ಪದವಿ ಇದ್ದರೆ ಸಾಲದು. ಬದಲಾಗುತ್ತಿರುವ ಅಗತ್ಯಗಳಿಗೆ ಅನುಗುಣವಾಗಿ ನೀವು ಕಾಲಕಾಲಕ್ಕೆ ನವೀಕರಿಸಿಕೊಳ್ಳಬೇಕು. ತಂತ್ರಜ್ಞಾನದ ಜೊತೆಗೆ, ನೀವು ವೈಯಕ್ತಿಕ ಕೌಶಲ್ಯಗಳನ್ನು, ಅಂದರೆ ಮೃದು ಕೌಶಲ್ಯಗಳನ್ನು ಸಹ ಬೆಳೆಸಿಕೊಳ್ಳಬೇಕು. ಈ ವರ್ಷ ತಮ್ಮ ವೃತ್ತಿಜೀವನದಲ್ಲಿ ಉತ್ತಮ ಸಾಧನೆ ಮಾಡಲು ಬಯಸುವವರು ಈ ಕೆಳಗಿನ ಕೌಶಲ್ಯಗಳೊಂದಿಗೆ ನಿಮ್ಮ ಸುವರ್ಣ ಭವಿಷ್ಯಕ್ಕೆ ದಾರಿ ಮಾಡಿಕೊಡಬಹುದು.
ಕಲಿಕೆ ಕೇವಲ ಅಧ್ಯಯನ ಮಾಡುವುದರೊಂದಿಗೆ ನಿಲ್ಲಬಾರದು. ವಾಸ್ತವವಾಗಿ, ಇದು ಜೀವಮಾನದ ಪ್ರಕ್ರಿಯೆ. ಆದಾಗ್ಯೂ, ಉದ್ಯೋಗ ಪಡೆಯಲು ದೃಢನಿಶ್ಚಯ ಹೊಂದಿರುವವರಿಗೆ, ಈ ಗುಣವು ಸ್ವಲ್ಪ ಹೆಚ್ಚಾಗಿರಬೇಕು. ಏಕೆಂದರೆ ಬದಲಾಗುತ್ತಿರುವ ಕೈಗಾರಿಕಾ ಅಗತ್ಯಗಳಿಗೆ ಅನುಗುಣವಾಗಿ ಕೌಶಲ್ಯಗಳನ್ನು ಕಾಲಕಾಲಕ್ಕೆ ನಿರಂತರವಾಗಿ ಅಭಿವೃದ್ಧಿಪಡಿಸಬೇಕು. ಪ್ರಸ್ತುತ, ಕೃತಕ ಬುದ್ಧಿಮತ್ತೆ ಮತ್ತು ಡೇಟಾ ವಿಶ್ಲೇಷಣೆಯಂತಹ ತಂತ್ರಜ್ಞಾನಗಳು ಪ್ರಪಂಚದಾದ್ಯಂತ ವೇಗವಾಗಿ ವಿಸ್ತರಿಸುತ್ತಿವೆ. ಈ ಕ್ರಮದಲ್ಲಿ, ಮಾರುಕಟ್ಟೆ ಪ್ರವೃತ್ತಿಗಳಿಗೆ ಅನುಗುಣವಾಗಿ ಕೌಶಲ್ಯಗಳನ್ನು ನವೀಕರಿಸುವ ಮೂಲಕ ಮತ್ತು ಹೊಸ ವಿಷಯಗಳನ್ನು ಕಲಿಯುವ ಮೂಲಕ, ಒಬ್ಬರು ತಮ್ಮ ವೃತ್ತಿಜೀವನದಲ್ಲಿ ಬೆಳೆಯಬಹುದು.
ಬದಲಾಗುತ್ತಿರುವ ಜಾಗತಿಕ ಪ್ರವೃತ್ತಿಗಳಿಗೆ ಅನುಗುಣವಾಗಿ ಹೊಸ ಆಲೋಚನೆಗಳೊಂದಿಗೆ ಬರುವವರಿಗೆ ಕಂಪನಿಗಳು ಆದ್ಯತೆ ನೀಡುತ್ತಿವೆ. ಸಂದರ್ಶನಗಳಲ್ಲಿ ನಿಮ್ಮ ಸೃಜನಶೀಲತೆ ಮತ್ತು ಹೊಸ ವಿಷಯಗಳ ಮೇಲಿನ ಆಸಕ್ತಿಯನ್ನು ಉದಾಹರಣೆಗಳೊಂದಿಗೆ ವಿವರಿಸುವುದನ್ನು ನೀವು ಅಭ್ಯಾಸ ಮಾಡಿಕೊಳ್ಳಬೇಕು.
ಬೆಳೆಯಬೇಕೆಂಬ ಆಸೆ ಇದ್ದರೆ ಸಾಲದು, ಅದಕ್ಕಾಗಿ ಶ್ರಮಿಸಬೇಕು. ಪರಿಶ್ರಮದಿಂದ ಶ್ರಮಿಸಬೇಕು. ಸಣ್ಣ ಸಣ್ಣ ಗುರಿಗಳನ್ನು ಸಾಧಿಸುವ ಮೂಲಕ ಗುರಿಯತ್ತ ಮುನ್ನಡೆಯಬೇಕು. ಅದಕ್ಕಾಗಿ ತಾಳ್ಮೆ, ಪರಿಶ್ರಮ, ಅವಕಾಶಗಳನ್ನು ಬಳಸಿಕೊಳ್ಳುವ ಸಾಮರ್ಥ್ಯ ಬಹಳ ಮುಖ್ಯ. ಈ ಗುಣಗಳು ನಿಮ್ಮನ್ನು ಇತರರಿಗಿಂತ ಮುಂದೆ ಕೊಂಡೊಯ್ಯುತ್ತವೆ.
ಇದನ್ನೂ ಓದಿ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಪೈಲಟ್ ಸಂಬಳ ಎಷ್ಟು? ಆಯ್ಕೆ ಪ್ರಕ್ರಿಯೆ ಮತ್ತು ಜವಾಬ್ದಾರಿ ತಿಳಿಯಿರಿ
ಯಾವುದೇ ಸಮಸ್ಯೆಯನ್ನು ಕೇವಲ ಒಂದು ದೃಷ್ಟಿಕೋನದಿಂದ ಅಲ್ಲ, ವಿಭಿನ್ನ ಕೋನಗಳಿಂದ ಯೋಚಿಸಲು ನೀವು ಒಗ್ಗಿಕೊಳ್ಳಬೇಕು. ಇತರರ ಅಭಿಪ್ರಾಯಗಳನ್ನು ಸಹ ನೀವು ಪರಿಗಣಿಸಬೇಕು. ಇದು ಸರಿಯಾದ ಪರಿಹಾರಗಳನ್ನು ಕಂಡುಹಿಡಿಯಲು ನಿಮಗೆ ಸಹಾಯ ಮಾಡುತ್ತದೆ. ಹಠಮಾರಿ ವರ್ತನೆ ಸೂಕ್ತವಲ್ಲ. ಆದಾಗ್ಯೂ, ನೀವು ಏನನ್ನಾದರೂ ಸಾಧಿಸುವವರೆಗೆ ಬಿಟ್ಟುಕೊಡದಿರುವ ಅಭ್ಯಾಸವು ನಿಮ್ಮ ವೃತ್ತಿಜೀವನದ ಬೆಳವಣಿಗೆಗೆ ಕೊಡುಗೆ ನೀಡುತ್ತದೆ.
ಪ್ರತಿಯೊಬ್ಬರೂ ತಮ್ಮ ಕೆಲಸದ ಭಾಗವಾಗಿ ನಾಲ್ಕು ಜನರೊಂದಿಗೆ ಕೆಲಸ ಮಾಡುವ ಸಾಮರ್ಥ್ಯವನ್ನು ಹೊಂದಿರಬೇಕು. ಯಾರಾದರೂ ನಿಮ್ಮ ಅಭಿಪ್ರಾಯಗಳನ್ನು ವಿರೋಧಿಸಿದಾಗ ಕೋಪಗೊಳ್ಳಬೇಡಿ. ನೀವು ಎಲ್ಲರನ್ನೂ ಒಳಗೊಳ್ಳುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು. ಆಗ ಮಾತ್ರ ನೀವು ಪರಿಣಾಮಕಾರಿ ತಂಡದ ನಾಯಕರಾಗಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಆದ್ದರಿಂದ, ನೀವು ಕೆಲಸದ ಗುರಿಗಳನ್ನು ಸಾಧಿಸುವಾಗ ತಾಂತ್ರಿಕ ಕೌಶಲ್ಯಗಳ ಜೊತೆಗೆ ಮೃದು ಕೌಶಲ್ಯಗಳನ್ನು ಬೆಳೆಸಿಕೊಂಡರೆ, ನೀವು ಯಾವುದೇ ಕ್ಷೇತ್ರದಲ್ಲಿ ಸುಲಭವಾಗಿ ಉತ್ತಮ ಸಾಧನೆ ಮಾಡಬಹುದು.
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಹಿರಿಯ ಚಿತ್ರಕಥೆಗಾರ, ಸಾಹಿತಿ ಜಾವೇದ್ ಅಖ್ತರ್ ಅವರು ಓರ್ವ ನಾಸ್ತಿಕ (Atheist) ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಅಂದರೆ, ಜಾವೇದ್ ಅಖ್ತರ್ ಅವರು ದೇವರ ಮೇಲೆ ನಂಬಿಕೆ ಹೊಂದಿಲ್ಲ. ದೇವರ ಅಸ್ತಿತ್ವವನ್ನು ಅವರು ಒಪ್ಪುವುದಿಲ್ಲ. ಇದಕ್ಕೆ ಸಂಬಂಧಿಸಿದಂತೆ ಅವರು ಈಗಾಗಲೇ ಅನೇಕ ಸಂದರ್ಭಗಳಲ್ಲಿ ಮಾತನಾಡಿದ್ದಾರೆ. ಆದರೆ ಈಗ ಅವರು ತಮ್ಮ ಅಭಿಪ್ರಾಯ ಬದಲಾಯಿಸಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿದೆ. ಟೋಪಿ ಧರಿಸಿ ನಮಾಜ್ ಕೂಡ ಮಾಡಲು ಆರಂಭಿಸಿದ್ದಾರೆ ಎಂದು ಅಂತೆ-ಕಂತೆ ಹಬ್ಬಿಸಲಾಗಿದೆ. ಅದರ ವಿರುದ್ಧ ಜಾವೇದ್ ಅಖ್ತರ್ (Javed Akhtar) ಗರಂ ಆಗಿದ್ದಾರೆ.
ಎಕ್ಸ್ (ಟ್ವಿಟರ್) ಖಾತೆಯಲ್ಲಿ ಜಾವೇದ್ ಅಖ್ತರ್ ಅವರು ಒಂದು ವಿಡಿಯೋ ಲಿಂಕ್ ಹಂಚಿಕೊಂಡಿದ್ದಾರೆ. ತಲೆಗೆ ಮುಸ್ಲಿಂ ಟೋಪಿ ಹಾಕಿಕೊಂಡಿರುವ ಚಿತ್ರ ಇದರಲ್ಲಿ ಇದೆ. ‘ಜಾವೇದ್ ಅಖ್ತರ್ ಅವರು ಪೂರ್ತಿಯಾಗಿ ಇಸ್ಲಾಂ ಧರ್ಮವನ್ನು ಒಪ್ಪಿಕೊಂಡಿದ್ದಾರೆ. ಅಲ್ಲಾ ಇರುವುದನ್ನು ಒಪ್ಪಿಕೊಂಡು, ತಲೆ ಮೇಲೆ ಟೋಪಿ ಹಾಕಿಕೊಂಡು, ನಮಾಜ್ ಮಾಡಲು ಮಸೀದಿಗೆ ಹೋಗಿದ್ದಾರೆ. ಅವರೀಗ ಪಕ್ಕಾ ಮುಸಲ್ಮಾನ ಆಗಿದ್ದಾರೆ’ ಎಂದು ಕೆಲವರು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ.
ಈ ವದಂತಿಯ ವಿರುದ್ಧ ಜಾವೇದ್ ಅಖ್ತರ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂಥ ಎಐ ಫೋಟೋ ಮತ್ತು ಸುಳ್ಳು ಸುದ್ದಿಯನ್ನು ಹಬ್ಬಿಸಿದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಅವರು ಹೇಳಿದ್ದಾರೆ. ವಿಡಿಯೋ ಫಾರ್ವರ್ಡ್ ಮಾಡಿದವರಿಗೂ ಕಾನೂನಿನ ಮೂಲಕ ಪಾಠ ಕಲಿಸುವುದಾಗಿ ಜಾವೇದ್ ಅಖ್ತರ್ ಅವರು ಎಚ್ಚರಿಕೆ ನೀಡಿದ್ದಾರೆ.
A fake video is in circulation showing my fake computer generated picture with a topi on my head claiming that ultimately I have turned to God . It is rubbish . I am seriously considering to report this to the cyber police and ultimately dragged the person responsible for this…
— Javed Akhtar (@Javedakhtarjadu) January 1, 2026
‘ನಾನು ಟೋಪಿ ಧರಿಸಿರುವ ನಕಲಿ ಫೋಟೋವನ್ನು ವೈರಲ್ ಮಾಡಲಾಗುತ್ತಿದೆ. ದೇವರನ್ನು ನಾನು ಒಪ್ಪಿಕೊಂಡಿದ್ದೇನೆ ಎಂದು ಸುದ್ದಿ ಹಬ್ಬಿಸಲಾಗಿದೆ. ಇದೆಲ್ಲ ಸುಳ್ಳು. ಸೈಬರ್ ಪೊಲೀಸರಿಗೆ ದೂರು ನೀಡಲು ತೀರ್ಮಾನಿಸುತ್ತಿದ್ದೇನೆ. ಈ ಸುಳ್ಳು ಸುದ್ದಿಗೆ ಕಾರಣ ಆದ ವ್ಯಕ್ತಿಯನ್ನು ಹಿಡಿಯುತ್ತೇವೆ. ಇದರಿಂದ ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟಾಗಿದೆ’ ಎಂದು ಜಾವೇದ್ ಅಖ್ತರ್ ಅವರು ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: ಮೊಬೈಲ್ ನಾಸ್ತಿಕರ ಆವಿಷ್ಕಾರ ಅದನ್ನು ಬಳಸಂಗಿಲ್ಲ, ವಿದ್ಯಾರ್ಥಿಗಳ ಫೋನ್ ಪುಡಿ ಪುಡಿ ಮಾಡಿದ ಮದರಸ ಗುರು
ಕೆಲವೇ ದಿನಗಳ ಹಿಂದೆ ‘ದೇವರು ಇದ್ದಾನಾ’ ಎಂಬ ವಿಷಯದ ಮೇಲೆ ಜಾವೇದ್ ಅಖ್ತರ್ ಅವರು ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ಆ ಚರ್ಚೆಯ ವಿಡಿಯೋಗಳು ವೈರಲ್ ಆಗಿವೆ. ಅದರ ಬೆನ್ನಲ್ಲೇ ಈ ರೀತಿಯ ಫೇಕ್ ನ್ಯೂಸ್ ಹಬ್ಬಿದ್ದು, ಜಾವೇದ್ ಅಖ್ತರ್ ಅವರು ಗುಡುಗಿದ್ದಾರೆ. ಎಐ ಮೂಲಕ ಜಾವೇದ್ ಅಖ್ತರ್ ಅವರ ಫೇಕ್ ಫೋಟೋವನ್ನು ಕ್ರಿಯೇಟ್ ಮಾಡಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಸುನಿಲ್ ಶೆಟ್ಟಿ (Sunil Shetty), ಬಾಲಿವುಡ್ನ ಸ್ಟಾರ್ ನಟರಲ್ಲಿ ಒಬ್ಬರು. ಮಂಗಳೂರು ಮೂಲದವರಾದ ಸುನಿಲ್ ಶೆಟ್ಟಿ ದಶಕಗಳಿಂದಲೂ ಬಾಲಿವುಡ್ನಲ್ಲಿ ಸ್ಟಾರ್ ನಟರಾಗಿ ಗುರುತಿಸಿಕೊಂಡಿದ್ದಾರೆ. ಹಲವು ಅತ್ಯುತ್ತಮ ಸಿನಿಮಾಗಳಲ್ಲಿ ನಟಿಸಿರುವ ಸುನಿಲ್ ಶೆಟ್ಟಿ, ಬಾಲಿವುಡ್ನಲ್ಲಿ ಬಾಡಿ ಬಿಲ್ಡಿಂಗ್ ಸಂಸ್ಕೃತಿ ಶುರುವಾಗಲು ಕಾರಣರಾದವರಲ್ಲಿ ಒಬ್ಬರು ಸಹ. ಸುನಿಲ್ ಶೆಟ್ಟಿ ಹಿಂದಿ ಸಿನಿಮಾಗಳಲ್ಲಿ ಮಾತ್ರವೇ ಅಲ್ಲದೆ, ಕೆಲವಾರು ದಕ್ಷಿಣ ಭಾರತದ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಕನ್ನಡಕ್ಕಂತೂ ಸುನಿಲ್ ಶೆಟ್ಟಿ ಹೊಸಬರೇನೂ ಅಲ್ಲ. ಸುದೀಪ್ ಜೊತೆಗೆ ‘ಪೈಲ್ವಾನ್’ ಸಿನಿಮಾನಲ್ಲಿ ಈಗಾಗಲೇ ನಟಿಸಿದ್ದಾರೆ. ಇತ್ತೀಚೆಗಷ್ಟೆ ಅವರು ತಮ್ಮ ಮಾತೃಭಾಷೆಯಾದ ತುಳುವಿನಲ್ಲಿ ಸಿನಿಮಾ ಒಂದನ್ನು ಮಾಡಿದ್ದು, ಬಾಲಿವುಡ್ಗೆ ಸಂಬಂಧಿಸಿದ ವೇದಿಕೆಯೊಂದರಲ್ಲಿ ಈ ಬಗ್ಗೆ ಮಾತನಾಡಿದ್ದು, ಸಿನಿಮಾವನ್ನು ಕೊಂಡಾಡಿದ್ದಾರೆ.
ಹಲವು ಸೆಲೆಬ್ರಿಟಿಗಳು, ರಾಜಕಾರಣಿಗಳು, ಕ್ರೀಡಾಪಟುಗಳ ಸಂದರ್ಶನ ಮಾಡುವ, ಹಿಂದಿಯ ಜನಪ್ರಿಯ ಸಂದರ್ಶನದ ಶೋ ಆಗಿರುವ ‘ಲಲ್ಲನ್ಟಾಪ್’ನಲ್ಲಿ ಸುನಿಲ್ ಶೆಟ್ಟಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಸುನಿಲ್ ಶೆಟ್ಟಿ, ತಾವು ನಟಿಸಿರುವ ತುಳು ಸಿನಿಮಾ ‘ಜೈ’ ಬಗ್ಗೆ ಹೆಮ್ಮೆಯಿಂದ ಮಾತನಾಡಿರುವುದಲ್ಲದೆ, ಸಿನಿಮಾ ಬಗ್ಗೆ ಕೊಂಡಾಡಿದ್ದಾರೆ.
‘ನಾನು ತುಳುನಾಡಿನವನು, ಮಂಗಳೂರು ನನ್ನ ಮೂಲ ಊರು. ನಾನು ಇತ್ತೀಚೆಗಷ್ಟೆ ಒಂದು ತುಳು ಸಿನಿಮಾನಲ್ಲಿ ನಟಿಸಿದೆ. ತುಳು ಸಿನಿಮಾಗಳಿಗೆ ಬಹಳ ಎಂದರೆ ಬಹಳ ಕಡಿಮೆ ವೀಕ್ಷಕರಿದ್ದಾರೆ. ಆ ಚಿತ್ರರಂಗಕ್ಕೆ ಬೆಂಬಲ ನೀಡಲೆಂದು ನಾನು ತುಳು ಸಿನಿಮಾನಲ್ಲಿ ನಟಿಸಿದೆ. ಸಿನಿಮಾದ ಹೆಸರು ‘ಜೈ’ ಎಂದು. ಸಿನಿಮಾ ಬಹಳ ಚೆನ್ನಾಗಿ ಪ್ರದರ್ಶನ ಕಾಣುತ್ತಿದೆ. ನನ್ನ ನಟನೆಗೆ ಬಹಳ ಪ್ರಶಂಸೆಗಳು ವ್ಯಕ್ತವಾಗುತ್ತಿವೆ. ಬಹುಷಃ ನನ್ನ ಮೊದಲ ಸಿನಿಮಾ ‘ಬಲವಾನ್’ನಲ್ಲಿ ನನಗೆ ಸಿಕ್ಕಂಥ ಪ್ರಶಂಸೆ ಈಗ ‘ಜೈ’ ಸಿನಿಮಾಕ್ಕಾಗಿ ಸಿಗುತ್ತಿದೆ’ ಎಂದಿದ್ದಾರೆ ಸುನಿಲ್ ಶೆಟ್ಟಿ.
ಇದನ್ನೂ ಓದಿ:ಸುನಿಲ್ ಶೆಟ್ಟಿ ಮಗನ ಬಗ್ಗೆ ಇಲ್ಲ ಸಲ್ಲದ ಸುದ್ದಿ; ಸಿಟ್ಟಾದ ನಟ
‘ಈಗ ಭಾಷೆಯ ಗಡಿ ಇಲ್ಲ. ಅದು ಹೊರಟು ಹೋಗಿದೆ, ಈಗ ಇರುವುದು ಏನಿದ್ದರೂ ಕಂಟೆಂಟ್ನ ಗಡಿ. ನಿಮ್ಮಲ್ಲಿ ಒಳ್ಳೆಯ ಕಂಟೆಂಟ್ ಇದ್ದರೆ ಭಾಷೆ ಅದಕ್ಕೆ ಅಡ್ಡಿ ಆಗುವುದಿಲ್ಲ, ಯಾವುದೇ ಭಾಷೆ ಆದರೂ ಕಂಟೆಂಟ್ ಚೆನ್ನಾಗಿದ್ದರೆ ಖಂಡಿತ ಅದನ್ನು ಜನ ಒಪ್ಪುತ್ತಾರೆ. ಎಲ್ಲ ರೀತಿಯ ಜನರಿಗೂ ಅದು ಇಷ್ಟವಾಗುತ್ತದೆ’ ಎಂದಿದ್ದಾರೆ ಸುನಿಲ್ ಶೆಟ್ಟಿ.
ಅಂದಹಾಗೆ ಸುನಿಲ್ ಶೆಟ್ಟಿ ನಟಿಸಿರುವುದು, ಮಾಜಿ ಬಿಗ್ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ನಟಿಸಿ, ನಿರ್ದೇಶನ ಸಹ ಮಾಡಿರುವ ‘ಜೈ’ ಸಿನಿಮಾನಲ್ಲಿ. ಈ ಸಿನಿಮಾ ಈಗಾಗಲೇ 50 ದಿನಗಳನ್ನು ಪೂರೈಸಿದೆ. ರೂಪೇಶ್ ಶೆಟ್ಟಿ ಒಂದರ ಹಿಂದೊಂದು ತುಳು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ನಿರ್ದೇಶನ, ನಿರ್ಮಾಣವನ್ನೂ ಮಾಡುತ್ತಿದ್ದಾರೆ. ಸಿನಿಮಾವನ್ನು ದುಬೈ, ಕತಾರ್, ಗೋವಾ, ಮುಂಬೈ, ತುಳುನಾಡು, ಕರಾವಳಿ ಭಾಗದಲ್ಲಿ ಬಿಡುಗಡೆ ಮಾಡಿದ್ದರು. ‘ಜೈ’ ಸಿನಿಮಾ ಭರ್ಜರಿ ಗಳಿಕೆಯನ್ನು ಮಾಡಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬಿಗ್ಬಾಸ್ ಕನ್ನಡ ಸೀಸನ್ 12ರ (Bigg Boss Kannada 12) ಆರಂಭದಿಂದ ಇಲ್ಲಿಯವರೆಗೆ ಗಿಲ್ಲಿ ಮತ್ತು ಅಶ್ವಿನಿ ಪರಸ್ಪರ ಜಗಳ ಆಡುತ್ತಲೇ ಬಂದಿದ್ದಾರೆ. ಈ ವಾರ ಅಶ್ವಿನಿ ಮತ್ತು ಗಿಲ್ಲಿ ಇಬ್ಬರೂ ಟಾಸ್ಕ್ಗಳ ಉಸ್ತುವಾರಿ ವಹಿಸಿದ್ದರು. ಸಾಕಷ್ಟು ಸಮಯದಲ್ಲಿ ಈ ಇಬ್ಬರ ನಡುವೆ ಜಗಳಗಳು ನಡೆಯಿತು. ಇದೀಗ ವಾರಾಂತ್ಯದಲ್ಲೂ ಈ ಜಗಳ ಮುಂದುವರೆದಿದೆ. ಗಿಲ್ಲಿ, ಅಶ್ವಿನಿಯ ಯೋಗ್ಯತೆಯ ಕುರಿತಾಗಿ ಮಾತನಾಡಿದ್ದಾರೆ. ಇದು ಅಶ್ವಿನಿ ಅವರನ್ನು ಕೆರಳಿಸಿದೆ. ಇಬ್ಬರ ನಡುವೆ ಭರ್ಜರಿ ವಾಗ್ಯುದ್ಧವೇ ನಡೆದಿದೆ. ಬಿಗ್ ಬಾಸ್ ಶೋ ಮುಗಿಯಲು ಇನ್ನು ಕೆಲವೇ ದಿನಗಳು ಬಾಕಿ ಇರುವಾಗಲೂ ಸಹ ಈ ಇಬ್ಬರೂ ಇಂದಿಗೂ ಜಗಳ ಆಡುತ್ತಲೇ ಇದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಉಡುಪಿ, ಜನವರಿ 02: ರಿವರ್ಸ್ ತೆಗೆಯುವ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನಗಳು ಸೇರಿ ಪಾದಚಾರಿಗೆ ಡಿಕ್ಕಿಯಾಗಿರುವ ಘಟನೆ ಉಡುಪಿ ನಗರದ ಜಾಮಿಯ ಮಸೀದಿ ಬಳಿ ನಡೆದಿದೆ. ಕಟ್ಟಡವೊಂದರ ಮುಂಭಾಗ ಕಾರನ್ನು ಪಾರ್ಕ್ ಮಾಡಲಾಗಿತ್ತು. ಕಾರು ಮಾಲಿಕ ಹೊರಡುವ ಸಿದ್ಧತೆಯಲ್ಲಿ ಕಾರಿನೊಳಗೆ ಬಂದು ಕುಳಿತಾಗ ಆಟೋಮೆಟಿಕ್ ಕಾರು ನಿಯಂತ್ರಣ ತಪ್ಪಿ ಏಕಾಏಕಿ ಹಿಮ್ಮುಖವಾಗಿ ಚಲಿಸಿದೆ. ಈ ವೇಳೆ ಹಿಂಬದಿಯಲ್ಲಿ ಬರುತ್ತಿದ್ದ ಬೈಕ್, ಅಟೋ ಸೇರಿ ಪಾದಚಾರಿಗೂ ಗುದ್ದಿದ್ದು, ಗಂಭೀರ ಗಾಯಗೊಂಡ ದ್ವಿಚಕ್ರ ವಾಹನ ಸವಾರನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟೋ ಚಾಲಕ ಮತ್ತು ಪಾದಚಾರಿ ಸಣ್ಣಪುಟ್ಟ ಗಾಗಳೊಂದಿಗೆ ಪಾರಾಗಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
ಬಳ್ಳಾರಿ, (ಜನವರಿ 02): ಶಾಸಕರಾದ ಜನಾರ್ದನ ರೆಡ್ಡಿ ಹಾಗೂ ಭರತ್ ರೆಡ್ಡಿ ಬೆಂಬಲಿಗರ ನಡುವೆ ಬಳ್ಳಾರಿಯಲ್ಲಿ ಭೀಕರ ಸಂಘರ್ಷವೇ ನಡೆದುಹೋಗಿದೆ. ಈ ಸಂಘರ್ಷದ ನಡುವೆ ಅಚಾನಕ್ಕಾಗಿ ಸಿಡಿದ ಗುಂಡಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾರೆ. ರೆಡ್ಡಿ ಮನೆ ಎದುರು ಕಟ್ಟಿದ್ದ ಬ್ಯಾನರ್ ಅನ್ನ ಜಮಾಯಿಸಿದ್ದವರು ಹರಿದುಬಿಸಾಡಿದ್ರು. ಈ ವೇಳೆ ಜನಾರ್ದನ ರೆಡ್ಡಿ ಹಾಗೂ ಭರತ್ ರೆಡ್ಡಿ ಬೆಂಬಲಿಗರ ನಡುವೆ ಗಲಾಟೆ ಶುರುವಾಯ್ತು. ಗಲಾಟೆ ಜಾಗಕ್ಕೆ ಮಾಜಿ ಸಚಿವ ಶ್ರೀರಾಮುಲು ಕೂಡ ಭೇಟಿ ನೀಡಿದ್ದಾರೆ. ಆಗ ತಳ್ಳಾಟ-ನೂಕಾಟ ಆಗಿದೆ. ಪರಸ್ಪರ ಕಲ್ಲು ತೂರಾಡಿಕೊಂಡಿದ್ದು, ದೊಣ್ಣೆಗಳಿಂದ ಬಡಿದಾಡಿಕೊಂಡಿದ್ದಾರೆ. ಆಗ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಗನ್ಮ್ಯಾನ್ಗಳು, ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಯಾವಾಗ ಪರಿಸ್ಥಿತಿ ನಿಯಂತ್ರಣಕ್ಕೆ ಬರಲಿಲ್ವೋ ಆಗ ಪೊಲೀಸರೂ ಟಿಯರ್ ಗನ್ ಫೈರ್ ಮಾಡಿದ್ದಾರೆ. ಆದ್ರೆ ಅದೊಂದು ಗುಂಡು ಕಾಂಗ್ರೆಸ್ ಕಾರ್ಯಕರ್ತನ ಜೀವ ತೆಗೆದಿದೆ. ಹಾಗಿದ್ರೆ ಗಲಾಟೆ ಶುರುವಾಗಿದ್ದು ಹೇಗೆ? ಈ ಕುರಿತ ರಿಪೋರ್ಟ್ ಇಲ್ಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಮಂಗಳೂರು, ಡಿ.2: ಕರ್ನಾಟಕ ಎಲ್ಲದರಲ್ಲೂ ಶ್ರೀಮಂತಿಕೆಯನ್ನು ಪಡೆದುಕೊಂಡಿದೆ. ಸಂಸ್ಕೃತಿ, ಪರಂಪರೆ, ಆದಾಯದಲ್ಲೂ ಕೂಡ ಶ್ರೀಮಂತ ರಾಜ್ಯ, (Karnataka richest temples) ಇದೀಗ ದೇವಾಲಯದಲ್ಲೂ ಕೂಡ ಕರ್ನಾಟಕ ಶ್ರೀಮಂತಿಕೆಯನ್ನು ಪಡೆದುಕೊಂಡಿದೆ. ಶ್ರೀಮಂತ ದೇವಾಲಯಗಳ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿ ಬರುವ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು ರಾಜ್ಯದ ಅತ್ಯಂತ ಶ್ರೀಮಂತ ದೇವಾಲಯವಾಗಿ ಹೊರಹೊಮ್ಮಿದೆ. ಹಣಕಾಸು ದತ್ತಾಂಶದ ಪ್ರಕಾರ ಈ ವರದಿಯನ್ನು ನೀಡಲಾಗಿದೆ.
ಇನ್ನು ಈ ವರದಿ ಪ್ರಕಾರ, ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆದಾಯ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ, 2024–25ರಲ್ಲಿ 155 ಕೋಟಿ ರೂ. ತಲುಪಿದೆ. 2023–24ರಲ್ಲಿ ದೇವಾಲಯದ ಆದಾಯ 146 ಕೋಟಿ ರೂ. ಮತ್ತು 2022–23ರಲ್ಲಿ 123 ಕೋಟಿ ರೂ. ಇತ್ತು. ಈ ಬೆಳವಣಿಗೆ ಕಾರಣ, ಹೆಚ್ಚು ಭಕ್ತ ಸಮೂಹ ಇಲ್ಲಿಗೆ ಬರುತ್ತಿರವುದು. ಹಾಗೂ ವಿಶೇಷ ಪೂಜೆಗಳನ್ನು ಮಾಡಿಸಿಕೊಳ್ಳುವುದು, ಜತೆಗೆ ಧಾರ್ಮಿಕ ಪ್ರವಾಸೋದ್ಯಮವಾಗಿ ಹೊಂದಿಕೊಂಡಿರುವುದು ಎಂದು ಹೇಳಲಾಗಿದೆ. ಇದರ ನಂತರದ ಸಾಲಿನಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಮತ್ತು ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ ಇದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಹೋಗುವವರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ, ವಂದೇ ಭಾರತ್ ಎಕ್ಸ್ಪ್ರೆಸ್ ಸಂಚಾರಕ್ಕೆ ಸಿದ್ಧ
ಒಟ್ಟಾರೆಯಾಗಿ ರಾಜ್ಯದಲ್ಲಿ ದೇವಾಲಯದ ಆದಾಯಗಳು ಗಣನೀಯವಾಗಿ ಏರಿಕೆ ಕಂಡಿದೆ. ದತ್ತಿ ಇಲಾಖೆಯ ಪ್ರಕಾರ, ಕರ್ನಾಟಕವು 34,000 ಕ್ಕೂ ಹೆಚ್ಚು ದೇವಾಲಯಗಳನ್ನು ಹೊಂದಿದ್ದು, ಈ ಮೂರು ದೇವಾಲಯಗಳು ಇತರ ದೇವಾಲಯಕ್ಕಿಂತ ಹೆಚ್ಚಿನ ಆದಾಯವನ್ನು ಗಳಿಸಿದೆ. ಇನ್ನು ದೇವಾಲಯಗಳನ್ನು ಎ ವರ್ಗ ಹಾಗೂ ಬಿ ವರ್ಗ ಎಂದು ವಿಭಾಗ ಮಾಡಲಾಗಿದೆ. ಎ ವರ್ಗದಲ್ಲಿ ಒಟ್ಟು 205 ದೇವಾಲಯಗಳು ಬರುತ್ತದೆ. ಹಾಗೂ ಬಿ ವರ್ಗದಲ್ಲಿ 193 ದೇವಾಲಯಗಳು ಬರುತ್ತದೆ. ಆದಾಯ ಹಾಗೂ ಅಭಿವೃದ್ಧಿ ಆಧಾರದ ಮೇಲೆ ಇದನ್ನು ವರ್ಗೀಕರಣ ಮಾಡಲಾಗಿದೆ.
ಈ ಎ, ಬಿ ವರ್ಗೀಕರಣದಲ್ಲೂ 10 ಟಾಪ್ ದೇವಾಲಯಗಳನ್ನು ಗುರುತಿಸಲಾಗುವುದು. ಈ ಹತ್ತು ಟಾಪ್ ದೇವಾಲಯಗಳನ್ನು ಆದಾಯದ ಮಾನದಂಡದ ಆಧಾರದ ಮೇಲೆ ಮಾಡಲಾಗಿದೆ. ಅಧಿಕಾರಿಗಳ ಪ್ರಕಾರ, ಉತ್ತಮ ಆಡಳಿತ ವ್ಯವಸ್ಥೆ ಹಾಗೂ ಯಾತ್ರಿಕರ ಸಂಖ್ಯೆಯ ಹೆಚ್ಚಳವೇ ಈ ಆದಾಯ ವೃದ್ಧಿಗೆ ಪ್ರಮುಖ ಕಾರಣಗಳಾಗಿವೆ ಎನ್ನಲಾಗಿದೆ.ಮುಂದಿನ ದಿನಗಳಲ್ಲಿ ದೇವಾಲಯಗಳ ನಿರ್ವಹಣೆ, ಪಾರಂಪರಿಕ ಸಂರಕ್ಷಣೆ, ಯಾತ್ರಿಕರ ಸೌಲಭ್ಯಗಳ ಅಭಿವೃದ್ಧಿ ಹಾಗೂ ಸಮುದಾಯಮುಖಿ ಯೋಜನೆಗಳಿಗೆ ಹೆಚ್ಚಿನ ಹೂಡಿಕೆ ಸಾಧ್ಯವಾಗಲಿದೆ ಎಂದು ಹೇಳಲಾಗಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On – 5:16 pm, Fri, 2 January 26