Category Archives: Blog

Your blog category

ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಮಾಜಿ ಸಚಿವ ಶ್ರೀರಾಮುಲು – Kannada News | Ballari Banner Dispute: Sriramulu Demands High Level Probe

ಬಳ್ಳಾರಿ, ಜನವರಿ 02: ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಘರ್ಷಣೆ ಸಂಬಂಧ ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಪಕ್ಷದ ಕಾರ್ಯಕರ್ತರ ವಿರುದ್ಧ ಗೂಂಡಾಗಿರಿಯ ಆರೋಪಗಳನ್ನು ತಳ್ಳಿಹಾಕಿದ ಶ್ರೀರಾಮುಲು, ವಿರೋಧಿಗಳೇ ಪೂರ್ವನಿಯೋಜಿತವಾಗಿ ಪೆಟ್ರೋಲ್ ಬಾಂಬ್‌ಗಳನ್ನು ತಂದು, ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಗುಂಡಿನ ದಾಳಿಯೂ ಅವರ ಕಡೆಯಿಂದಲೇ ನಡೆದಿದೆ. ಸತೀಶ್ ರೆಡ್ಡಿ ಅವರ ಬೆಂಬಲಿಗರು ಮತ್ತು ಅಂಗರಕ್ಷಕರು ಗುಂಡು ಹಾರಿಸಿದ್ದಾರೆ. ಹೀಗಾಗಿ ಸಿಟ್ಟಿಂಗ್ ಹೈಕೋರ್ಟ್ ನ್ಯಾಯಾಧೀಶರಿಂದ ಅಥವಾ ಸಿಬಿಐನಿಂದ ತನಿಖೆ ನಡೆಸಬೇಕು ಎಂದು ಶ್ರೀರಾಮುಲು ಒತ್ತಾಯಿಸಿದ್ದಾರೆ. ಜೊತೆಗೆ ಘಟನೆಗೆ ಸಂಬಂಧಿಸಿ ಸ್ಪೋಟಕ ವಿಡಿಯೋ ಸಾಕ್ಷಿಯನ್ನು ಬಹಿರಂಗೊಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಜನಾರ್ದನ ರೆಡ್ಡಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: ಕಾಂಗ್ರೆಸ್​​ ಶಾಸಕ ಹೇಳಿದ್ದೇ – Kannada News | Bharath Reddy Vows to Expose Janardhan Reddy Following Ballari Clash and Death

ಬಳ್ಳಾರಿ, ಜನವರಿ 02: ಬ್ಯಾನರ್​​ ವಿಚಾರಕ್ಕೆ ನಡೆದ ಗಲಾಟೆ ತೀವ್ರ ರೂಪಕ್ಕೆ ಹೋಗಿ ಓರ್ವ ಯುವಕ ಸಾವನ್ನಪ್ಪಿರುವ ಬಗ್ಗೆ ನಾರಾ ಭರತ್ ರೆಡ್ಡಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ತಮ್ಮ ವಿರೋಧಿಗಳ ಗುಂಪಿನಿಂದಲೇ ಗುಂಡು ಹಾರಿಸಲಾಗಿದೆ. ಯುವಕನ ಸಾವಿಗೆ ಅವರೇ ಕಾರಣ ಎಂದು ಆರೋಪಿಸಿದ್ದಾರೆ. ಮೃತಪಟ್ಟ ಯುವಕನ ತ್ಯಾಗವು ವಾಲ್ಮೀಕಿ ಅಜ್ಜನ ಉದ್ದೇಶಗಳಿಗಾಗಿ ಮತ್ತು ಜನಾರ್ದನ ರೆಡ್ಡಿ ರಾಜಕೀಯ ಅಂತ್ಯಕ್ಕಾಗಿ ಆಗಿದೆ. ಜನಾರ್ದನ ರೆಡ್ಡಿ ಎಂತಹ ಹೇಡಿ ಮತ್ತು ಅವರು ಯಾವ ರೀತಿಯ ಕೆಲಸಗಳನ್ನು ಮಾಡುತ್ತಾರೆ ಎಂಬುದನ್ನು ಜನರಿಗೆ ತೋರಿಸುತ್ತೇನೆ ಎಂದು ಈ ವೇಲೆ ಭರತ್​​ ರೆಡ್ಡಿ ಶಪಥನ ಕೂಡ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಹಿಂಡಲಗಾ ಜೈಲಿನ ಒಳಗೆ ಮೊಬೈಲ್, ಡ್ರಗ್ಸ್! ಸಿಬ್ಬಂದಿಯೇ ಅಕ್ರಮದಲ್ಲಿ ಶಾಮೀಲು? – Kannada News | Belagavi Hindalga Jail: Mobiles, Drugs Smuggled; captured in CCTV, Security Flaws Exposed

ಹಿಂಡಲಗಾ ಜೈಲಿನ ಒಳಗೆ ಮೊಬೈಲ್, ಡ್ರಗ್ಸ್! ಸಿಬ್ಬಂದಿಯೇ ಅಕ್ರಮದಲ್ಲಿ ಶಾಮೀಲು?

ಬೆಳಗಾವಿ, ಜನವರಿ 02: ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳು ಬಹಿರಂಗವಾಗಿದೆ. ಜೈಲಿನ ಹೊರಗಿನಿಂದ ಒಳಗೆ ಮೊಬೈಲ್ ಹಾಗೂ ಮಾದಕ ವಸ್ತುಗಳನ್ನು ಎಸೆಯುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಜೈಲಿನೊಳಗಿನ ಭದ್ರತಾ ವ್ಯವಸ್ಥೆಯ ಮೇಲೆಯೇ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿವೆ.

ಸಾಕ್ಷಿ ಇದ್ದರೂ ಆರೋಪಿಗಳನ್ನು ಬಂಧಿಸಿಲ್ಲ

ಮುಸುಕು ಧರಿಸಿದ ಅಪರಿಚಿತ ವ್ಯಕ್ತಿಯೊಬ್ಬ ಜೈಲಿನೊಳಗೆ ಮೊಬೈಲ್ ಮತ್ತು ಡ್ರಗ್ಸ್ ಎಸೆಯುತ್ತಿರುವ ಮೂರು ಸಿಸಿಟಿವಿ ದೃಶ್ಯಗಳು ವೈರಲ್ ಆಗಿವೆ. ಈ ಪೈಕಿ ಒಂದು ವೀಡಿಯೋ ಒಂದು ತಿಂಗಳ ಹಿಂದೆ ನಡೆದಿದ್ದು, ಮತ್ತೊಂದು ದೃಶ್ಯ ಡಿಸೆಂಬರ್ 29ರದ್ದು ಎನ್ನಲಾಗಿದೆ. ಈ ಸಂಬಂಧ ಈಗಾಗಲೇ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಆದರೆ ಅಕ್ರಮಕ್ಕೆ ಸಾಕ್ಷಿಯಾಗಿ ಸಿಸಿಟಿವಿ ಫೂಟೇಜ್ ಇದ್ದರೂ ಆರೋಪಿಯನ್ನು ಇನ್ನೂ ಬಂಧಿಸದಿರುವುದು ಟೀಕೆಗೆ ಕಾರಣವಾಗಿದೆ.

ಸಿಬ್ಬಂದಿಯೇ ಅಕ್ರಮದಲ್ಲಿ ಶಾಮೀಲಾಗಿರುವ ಶಂಕೆ

ಹಿಂಡಲಗಾ ಜೈಲಿನಲ್ಲಿ ಸಾವಿರಕ್ಕೂ ಹೆಚ್ಚು ಕೈದಿಗಳು ಇದ್ದು, ನಟೋರಿಯಸ್ ಕೈದಿಗಳ ಸಂಖ್ಯೆಯೂ ಹೆಚ್ಚಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಹಗಲಲ್ಲೇ ಅಕ್ರಮ ವಸ್ತುಗಳು ಒಳಗೆ ಹೋಗುತ್ತಿವೆ ಎಂದರೆ ಜೈಲು ಸಿಬ್ಬಂದಿಯೂ ಇದರಲ್ಲಿ ಶಾಮೀಲಾಗಿ ಇರಬೇಕು ಎಂಬ ಅನುಮಾನಗಳು ವ್ಯಕ್ತವಾಗಿವೆ.

ವಿಷಯ ಬಹಿರಂಗವಾಗುತ್ತಿದ್ದಂತೆ ಬಂದಿಖಾನೆ ಉತ್ತರ ವಲಯದ ಡಿಐಜಿ ಟಿ.ಪಿ. ಶೇಷ ಸ್ಪಷ್ಟನೆ ನೀಡಿದ್ದು, ಸಿಸಿಟಿವಿ ದೃಶ್ಯಗಳ ಕುರಿತು ತನಿಖೆ ಮುಂದುವರಿಯುತ್ತಿದೆ ಎಂದಿದ್ದಾರೆ. ಡಿಜಿ ಅಲೋಕ್ ಕುಮಾರ್ ಸೂಚನೆಯಂತೆ ಜೈಲು ತಪಾಸಣೆ ನಡೆಸಿದಾಗ 12 ಮೊಬೈಲ್, ಚಾರ್ಜರ್ ಹಾಗೂ ನಾಲ್ಕು ಸೀಮ್ ಕಾರ್ಡ್‌ಗಳು ಪತ್ತೆಯಾಗಿದ್ದವು. ಇತ್ತ ಬೆಳಗಾವಿ ಪೊಲೀಸ್ ಕಮೀಷನರ್ ಭೂಷಣ್ ಬೊರಸೆ ಜೈಲಿಗೆ ದಿಢೀರ್ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಹಿಂಡಲಗಾ ಜೈಲಿನ ಅಸಲಿ ಸ್ಥಿತಿ ಈಗ ಬಹಿರಂಗವಾಗಿದ್ದು, ಸರ್ಕಾರ ತಕ್ಷಣ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 1:41 pm, Fri, 2 January 26

Source link

Video: ಮಗಳ ಕಾಳಜಿಯುತ ಮಾತು ಕೇಳಿ ಭಾವುಕನಾದ ತಂದೆ – Kannada News | A daughter gave a word of advice to her father who had left for a distant city

ಮಗಳ ಪಾಲಿಗೆ ಅಪ್ಪ (father) ಎಲ್ಲವೂ ಆಗಿರುತ್ತಾನೆ. ಹೀಗಾಗಿ ಅಪ್ಪ ಅಂದ್ರೆ ಮಗಳಿಗೆ ಬೆಸ್ಟ್ ಫ್ರೆಂಡ್, ಹೀರೋ ಎಲ್ಲವೂ ಕೂಡ. ಇತ್ತ ತಂದೆಯ ಪಾಲಿಗೆ ಮಗಳು ಎರಡನೇ ತಾಯಿಯಾಗಿರುತ್ತಾಳೆ. ತನ್ನ ಜೀವನದಲ್ಲಿ ತಂದೆಗೆ ವಿಶೇಷ ಸ್ಥಾನ ನೀಡಿರುತ್ತಾಳೆ. ಆ ಸ್ಥಾನವನ್ನು ಬೇರೆ ಯಾರಿಂದಲೂ ತುಂಬಲು ಸಾಧ್ಯವಿಲ್ಲ. ಅಂದಹಾಗೆ, ಪುಟ್ಟ ಮಕ್ಕಳಿಗೆ (little kids) ಬುದ್ಧಿ ಮಾತು ಹೇಳುವಂತೆ ಇಲ್ಲೊಬ್ಬಳು ಮಗಳು ತನ್ನ ತಂದೆಗೆ ಕಿವಿ ಮಾತು ಹೇಳಿದ್ದಾಳೆ. ಮಗಳ ಕಾಳಜಿಯುತ ಮಾತು ಕೇಳಿ ತಂದೆ ಭಾವುಕರಾಗಿರುವ ವಿಡಿಯೋ ಸದ್ಯ ವೈರಲ್ ಆಗಿದೆ.

ಬ್ರಹ್ಮ (Brahma) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ವಿಡಿಯೋಗೆ ನಾನು ಅಪ್ಪನಂತೆ ವರ್ತಿಸಲು ಯೋಜಿಸಿದ್ದೆ… ಆದರೆ ಅಪ್ಪ ಗಂಭೀರವಾಗಿ ತೆಗೆದುಕೊಂಡರು ಎಂದು ಶೀರ್ಷಿಕೆ ನೀಡಲಾಗಿದೆ. ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಎಲ್ಲಿಗೋ ಹೊರಟಿದ್ದು ಆಟೋದಲ್ಲಿ ಕುಳಿತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಮುದ್ದಿನ ಮಕ್ಕಳು ಮೊದಲ ಬಾರಿಗೆ ಒಂಟಿಯಾಗಿ ದೂರದ ಊರಿಗೆ ಹೊರಟು ನಿಂತಾಗ ಹೆತ್ತವರು ಬಸ್ಸು ಅಥವಾ ರೈಲು ಹತ್ತಿದ ಕೂಡಲೇ ತಿಳಿಸಲು, ಅಪರಿಚಿತರು ಏನು ಕೊಟ್ಟರೂ ತೆಗೆದುಕೊಳ್ಳದಂತೆ, ಹಣದ ಅಗತ್ಯವಿದ್ದರೆ ತಿಳಿಸಲು ಹೀಗೆ ಕಾಳಜಿಯುತ ಮಾತುಗಳನ್ನು ಆಡುತ್ತಾರೆ. ಅದೇ ರೀತಿ ಈ ವಿಡಿಯೋದಲ್ಲಿ ಮಗಳು ಕೂಡ ತನ್ನ ತಂದೆಗೆ ಅದೇ ಮಾತನ್ನು ಹೇಳಿರುವುದನ್ನು ಕಾಣಬಹುದು. ಮಗಳ ಮಾತು ಕೇಳಿ ತಂದೆಯ ಕಣ್ಣಲ್ಲಿ ನೀರು ಬಂದಿದೆ. ಕೊನೆಗೆ ಮಗಳು ತಂದೆಯನ್ನು ತಬ್ಬಿಕೊಂಡು ಪ್ರೀತಿಯನ್ನು ವ್ಯಕ್ತ ಪಡಿಸಿದ್ದಾಳೆ.

ಇದನ್ನೂ ಓದಿ:ಮಗಳು ತನ್ನ ಪ್ರೀತಿ ವಿಷ್ಯ ಹೇಳುತ್ತಿದ್ದಂತೆ ಮುದ್ದಾಗಿ ರಿಯಾಕ್ಷನ್ ಕೊಟ್ಟ ತಂದೆ

ಈ ವಿಡಿಯೋ ಒಂಬತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಇದು ಸುಂದರ ಬಾಂಧವ್ಯ ಎಂದರೆ, ಮತ್ತೊಬ್ಬರು, ಇದು ತಂದೆ ಮತ್ತು ಮಗಳ ನಡುವಿನ ಶುದ್ಧ ಬಂಧ ಎಂದು ಹೇಳಿದ್ದಾರೆ. ಇನ್ನೊಬ್ಬರು, ಇದು ಪರಿಶುದ್ಧ ಬಾಂಧವ್ಯ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಫ್ಲಾಫ್​​ಗಳ ಸರದಾರ ವಿಜಯ್ ದೇವರಕೊಂಡ, ಸಿನಿಮಾಕ್ಕೆ ಬ್ರೇಕ್ ಹಾಕಿದ ನಿರ್ಮಾಪಕ – Kannada News | Vijay Deverakonda starrer Kingdom movie sequel shelved

ವಿಜಯ್ ದೇವರಕೊಂಡ (Vijay Deverakonda) ತೆಲುಗು ಚಿತ್ರರಂಗದಲ್ಲಿ ಕೇವಲ ಒಂದೇ ದೊಡ್ಡ ಹಿಟ್ ಸಿನಿಮಾ ಮೂಲಕ ಸ್ಟಾರ್ ನಟ ಎನಿಸಿಕೊಂಡರು. ‘ಅರ್ಜುನ್ ರೆಡ್ಡಿ’ ಸಿನಿಮಾ ವಿಜಯ್ ದೇವರಕೊಂಡ ಜೀವನವನ್ನೇ ಬದಲಾಯಿಸಿತು. ಅದಕ್ಕೆ ಮುನ್ನ ಕೆಲವು ಸಿನಿಮಾಗಳಲ್ಲಿ ವಿಜಯ್ ನಟಿಸಿದ್ದರಾದರೂ ಸ್ಟಾರ್ ಆಗಿದ್ದು ‘ಅರ್ಜುನ್ ರೆಡ್ಡಿ’ ಸಿನಿಮಾ ಮೂಲಕ. ಅರ್ಜುನ್ ರೆಡ್ಡಿ ಸಿನಿಮಾದ ಬಳಿಕ ನಟಿಸಿದ ‘ಗೀತ ಗೋವಿಂದಂ’ ಸಹ ದೊಡ್ಡ ಹಿಟ್ ಆಯ್ತು. ಆದರೆ ಅದಾದ ಬಳಿಕ ವಿಜಯ್ ನಟನೆಯ ಯಾವೊಂದು ಸಿನಿಮಾ ಸಹ ಹಿಟ್ ಆಗಿದ್ದಿಲ್ಲ. ಈಗಂತೂ ಪರಸ್ಥಿತಿ ಹೇಗಾಗಿದೆಯಂದರೆ ವಿಜಯ್ ಜೊತೆಗೆ ಘೋಷಣೆ ಮಾಡಿದ್ದ ಸಿನಿಮಾ ಸಹ ನಿಂತು ಹೋಗುತ್ತಿವೆ.

ವಿಜಯ್ ದೇವರಕೊಂಡ ನಟಿಸಬೇಕಿದ್ದ ಇನ್ನೊಂದು ಸಿನಿಮಾ ಇದೀಗ ನಿಂತು ಹೋಗಿದೆ. ಈ ಹಿಂದೆ ವಿಜಯ್ ನಟಿಸಬೇಕಿದ್ದ ಮೂರು ಸಿನಿಮಾಗಳು ನಿಂತು ಹೋಗಿದ್ದವು ಇದೀಗ ಈ ಸಿನಿಮಾ ಸೇರಿ ಸಂಖ್ಯೆ ನಾಲ್ಕಕ್ಕೆ ಏರಿದೆ. ವಿಜಯ್ ದೇವರಕೊಂಡ, ‘ಕಿಂಗ್ಡಮ್’ ಹೆಸರಿನ ಸಿನಿಮಾನಲ್ಲಿ ನಟಿಸಿದ್ದರು. ಸಿನಿಮಾ ಜುಲೈ ತಿಂಗಳಲ್ಲಿ ಬಿಡುಗಡೆ ಆಗಿತ್ತು. ಸಿನಿಮಾಕ್ಕೆ ಭಾರಿ ಪ್ರಚಾರ ಮಾಡಲಾಗಿತ್ತು, ಸಿನಿಮಾದ ನಿರ್ಮಾಣವೂ ಭಿನ್ನವಾಗಿತ್ತು. ಆದರೆ ‘ಕಿಂಗ್ಡಮ್’ ಸಿನಿಮಾ ಭಾರಿ ಫ್ಲಾಪ್ ಆಗಿತ್ತು. 130 ಕೋಟಿ ಬಜೆಟ್​ನ ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಗಳಿಸಿದ್ದು ಕೇವಲ 80 ಕೋಟಿ ರೂಪಾಯಿ.

ಅಸಲಿಗೆ ‘ಕಿಂಗ್ಡಮ್’ ಸಿನಿಮಾ ಬಿಡುಗಡೆಗೆ ಮುಂಚೆಯೇ ಸಿನಿಮಾದ ಸೀಕ್ವಲ್ ಸಹ ಘೋಷಣೆ ಮಾಡಲಾಗಿತ್ತು. ಆದರೆ ಇದೀಗ ‘ಕಿಂಗ್ಡಮ್’ ಸಿನಿಮಾದ ಸೀಕ್ವೆಲ್ ನಿಂತು ಹೋಗಿದೆ. ನಿರ್ಮಾಪಕ ನಾಗವಂಶಿ, ತಾವು ‘ಕಿಂಗ್ಡಮ್’ ಸಿನಿಮಾದ ಸೀಕ್ವೆಲ್ ನಿರ್ಮಿಸುವುದಿಲ್ಲ ಎಂದು ಹೇಳಿದ್ದಾರೆಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ಆ ಮೂಲಕ ವಿಜಯ್ ನಟಿಸಬೇಕಿದ್ದ ನಾಲ್ಕನೇ ಸಿನಿಮಾ ನಿಂತು ಹೋಗಿದೆ.

ಇದನ್ನೂ ಓದಿ:ರೋಮ್​​​ನಲ್ಲಿ ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ರೊಮ್ಯಾನ್ಸ್

ವಿಜಯ್ ಅವರು ‘ಹೀರೋ’ ಹೆಸರಿನ ಸಿನಿಮಾನಲ್ಲಿ ನಟಿಸಬೇಕಿತ್ತು ಆ ಸಿನಿಮಾ ನಿಂತು ಹೋಯ್ತು. ಬಳಿಕ ಪುರಿ ಜಗನ್ನಾಥ್ ನಿರ್ದೇಶನದಲ್ಲಿ ‘ಜನ ಗನ ಮನ’ ಹೆಸರಿನ ಸಿನಿಮಾ ಘೋಷಿಸಿದ್ದರು, ಟೀಸರ್ ಸಹ ಬಿಡುಗಡೆ ಆಗಿತ್ತು. ಆದರೆ ‘ಲೈಗರ್’ ಫ್ಲಾಪ್ ಬಳಿಕ ಆ ಸಿನಿಮಾ ಸಹ ನಿಂತು ಹೋಯ್ತು. ನಿರ್ದೇಶಕ ಸುಕುಮಾರ್ ಅವರು ವಿಜಯ್ ದೇವರಕೊಂಡ ಗಾಗಿ ಸಿನಿಮಾ ನಿರ್ದೇಶಿಸುವುದಾಗಿ ಹೇಳಿದ್ದರು, ಸಿನಿಮಾಕ್ಕೆ ಅಲ್ಲು ಅರ್ಜುನ್ ಬಂಡವಾಳ ಹೂಡುವುದು ಸಹ ಖಾತ್ರಿ ಆಗಿತ್ತು. ಆದರೆ ಆ ಸಿನಿಮಾ ಸಹ ನಿಂತು ಹೋಯ್ತು. ಇದೀಗ ವಿಜಯ್ ನಟನೆಯ ಮತ್ತೊಂದು ಸಿನಿಮಾ ಸಹ ನಿಂತು ಹೋಗಿದೆ.

ವಿಜಯ್ ದೇವರಕೊಂಡ ಪ್ರಸ್ತುತ ‘ರೌಡಿ ಜನಾರ್ಧನ’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾನಲ್ಲಿ ಸಖತ್ ವೈಯಲೆಂಟ್ ಆಗಿ ವಿಜಯ್ ದೇವರಕೊಂಡ ಕಾಣಿಸಿಕೊಳ್ಳುತ್ತಿದ್ದಾರೆ. ಇದರ ಬಳಿಕ ಹಲವು ವರ್ಷಗಳ ಬಳಿಕ ಮತ್ತೆ ರಶ್ಮಿಕಾ ಮಂದಣ್ಣ ಜೊತೆಗೆ ‘ಗೀತ ಗೋವಿಂದಂ 2’ ಸಿನಿಮಾನಲ್ಲಿ ವಿಜಯ್ ನಟಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಗಿಲ್ಲಿ ಬಳಿ ಕ್ಷಮೆ ಕೇಳಿದ ಧ್ರುವಂತ್; ಆ ಒಂದು ಘಟನೆ ಎಲ್ಲವನ್ನೂ ಬದಲಿಸಿತು? – Kannada News | Dhruvanth Apologizes to Gilli in Bigg Boss Kannada: A New Year Change

‘ಬಿಗ್ ಬಾಸ್’ ಮನೆಯಲ್ಲಿ ಯಾರು ಯಾವಾಗ ಬದಲಾಗುತ್ತಾರೆ ಎಂದು ಊಹಿಸೋದು ಕಷ್ಟ. ಈಗ ಧ್ರುವಂತ್ ವಿಷಯದಲ್ಲೂ ಹೀಗೆಯೇ ಆಗಿದೆ. ಗಿಲ್ಲಿ (Gilli) ಜೊತೆ ಸದಾ ಕಿತ್ತಾಡುತ್ತಿದ್ದ ಅವರು ಏಕಾಏಕಿ ಬದಲಾಗಿದ್ದಾರೆ. ಈ ಹಿಂದೆ ಮಾಡಿದ ಬೇಸರಕ್ಕೆ ಗಿಲ್ಲಿ ಬಳಿ ಧ್ರುವಂತ್ ಕ್ಷಮೆ ಕೇಳಿದ್ದಾರೆ. ಹೊಸ ವರ್ಷದ ಸಂದರ್ಭದಲ್ಲಿ ನಡೆದ ಈ ಬೆಳವಣಿಗೆ ಅಚ್ಚರಿ ತಂದಿದೆ.

ಬಿಗ್ ಬಾಸ್ ಕನ್ನಡದಲ್ಲಿ ಧ್ರುವಂತ್ ಅವರು ಸಾಕಷ್ಟು ಗಮನ ಸೆಳೆದಿದ್ದಾರೆ. ಅವರು ಯಾವ ಕ್ಷಣದಲ್ಲಿ ಹೇಗಿರುತ್ತಾರೆ ಎಂಬುದನ್ನು ಊಹಿಸೋದು ಕಷ್ಟ. ಅವರು ಬಹುತೇಕ ಸಂದರ್ಭಗಳಲ್ಲಿ ಗಿಲ್ಲಿ ಜೊತೆ ಕಿತ್ತಾಡಿಕೊಳ್ಳುತ್ತಾ ಕಾಣಿಸುತ್ತಿದ್ದರು. ಗಿಲ್ಲಿ ಏನೇ ಹೇಳಿದರೂ ಅದನ್ನು ವಿರೋಧಿಸುತ್ತಿದ್ದರು. ಜನವರಿ 1ರ ಎಪಿಸೋಡ್​​ನಲ್ಲೂ ಹಾಗೆಯೇ ಆಗಿದೆ.

ಗಿಲ್ಲಿಗೆ ರ್ಯಾಪ್ ಸಾಂಗ್ ಬರೆಯುವಂತೆ ಬಿಗ್ ಬಾಸ್ ಸೂಚಿಸಿದರು. ಮನೆಯ ಸದಸ್ಯರು ಹಾಗೂ ಇಷ್ಟು ದಿನಗಳ ಜರ್ನಿ ಬಗ್ಗೆ ಇದರಲ್ಲಿ ವಿವರಣೆ ಇರಬೇಕು ಎಂಬ ಸೂಚನೆ ಇತ್ತು. ಈ ಹಾಡು ಬರೆಯುವಾಗ ಗಿಲ್ಲಿ ಬಳಿ ಬಂದ ಧ್ರುವಂತ್ ಕಿರಿಕ್ ಮಾಡಿಕೊಂಡರು. ‘ನನ್ನ ಹೆಸರನ್ನು ಹಾಡಿನಿಂದ ತೆಗಿ’ ಎಂದು ಪದೇ ಪದೇ ಹೇಳಿದರು.

ಇದನ್ನೂ ಓದಿ: ಗೆಲ್ಲೋ ಮೊದಲೇ ಅಶ್ವಿನಿ ಎದುರು ಬೀಗಿದ ಗಿಲ್ಲಿ ನಟ; ಕೊನೆಗೆ ಸಿಕ್ಕಿದ್ದು ಸೋಲು

ಅಲ್ಲೇ ಇದ್ದ ರಘು ಅವರು ಇದನ್ನು ಅಲ್ಲಗಳೆದಿದ್ದಾರೆ. ‘ಪಾಸಿಟಿವ್ ಆಗಿ ಮಾತ್ರ ಹಾಡನ್ನು ಬರೆಯಲು ಹೇಳಿದ್ದೇನೆ. ಹೀಗಾಗಿ, ನಿನ್ನ ಬಗ್ಗೆ ಕೆಟ್ಟದಾಗಿ ಇರೋದಿಲ್ಲ’ ಎಂದು ರಘು ಗಿಣಿಗೆ ಹೇಳಿದಂತೆ ಹೇಳಿದರೂ ಕಿವಿಗೆ ಹಾಕಿಕೊಂಡಿಲ್ಲ ಧ್ರುವಂತ್. ನಂತರ ಹಾಡಿನಲ್ಲಿ ಧ್ರುವಂತ್ ಬಗ್ಗೆ ಇದ್ದ ಸಾಲುಗಳು ಕೇಳಿ ಅವರೇ ಖುಷಿಪಟ್ಟರು.

‘ಧ್ರುವಂತ್​​ ಅಂದ್ರೆ ಭಕ್ತಿ, ಅದೇ ಅವರಿಗೆ ಶಕ್ತಿ’ ಎಂದು ಹಾಡಿನಲ್ಲಿ ಬರೆದಿದ್ದರು ಗಿಲ್ಲಿ. ಈ ಸಾಲು ಧ್ರುವಂತ್​​ಗೆ ಖುಷಿ ಕೊಟ್ಟಿದೆ. ಇದಾದ ಬಳಿಕ ಅವರು ಕ್ಷಮೆ ಕೇಳಿದರೇ ಎಂಬ ಪ್ರಶ್ನೆ ಮೂಡಿದೆ. ‘ಹ್ಯಾಪಿ ನ್ಯೂ ಇಯರ್’ ಎಂದು ಇಬ್ಬರೂ ವಿಶ್ ಮಾಡಿಕೊಂಡರು. ಆ ಬಳಿಕ ಗಿಲ್ಲಿಗೆ ಫ್ಲೈಯಿಂಗ್ ಕಿಸ್ ಕೊಟ್ಟರು. ಕ್ಷಮೆ ಕೇಳಿದರು. ಇದನ್ನು ನೋಡಿ ಫ್ಯಾನ್ಸ್ ಶಾಕ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬಳ್ಳಾರಿಯಲ್ಲಿ ಬ್ಯಾನರ್​​ ಗಲಾಟೆ: ‘ಕೈ’ ಕಾರ್ಯಕರ್ತ ರಾಜಶೇಖರ್​ ಮೃತಪಟ್ಟಿದ್ದು ಯಾರ ಗುಂಡೇಟಿಗೆ? – Kannada News | Ballari Banner Dispute: Who Fired the Fatal Shot That Killed Rajasekhar?

ಬ್ಯಾನರ್​​ ಗಲಾಟೆವೇಳೆ ಗುಂಡೇಟಿಗೆ ಯುವಕ ಬಲಿ.

ಬಳ್ಳಾರಿ, ಜನವರಿ 02: ಬ್ಯಾನರ್​ ವಿಚಾರವಾಗಿ ನಡೆದ ಗಲಾಟೆಯಲ್ಲಿ ಓರ್ವ ಯುವಕ ಮೃತಪಟ್ಟಿರುವ ವಿಚಾರವೀಗ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತು ಬಳ್ಳಾರಿ ಎಂಎಲ್​​ಎ ನಾರಾ ಭರತ್​​ ರೆಡ್ಡಿ ವಿರುದ್ಧ ಸಮರಕ್ಕೆ ಕಾರಣವಾಗಿದೆ. ಉಭಯ ನಾಯಕರು ಒಬ್ಬರ ಮೇಲೊಬ್ಬರು ಆರೋಪಗಳ ಸುರಿಮಳೆಯನ್ನೇ ಗೈಯುತ್ತಿದ್ದಾರೆ. ಇದು ನನ್ನ ಕೊಲೆಗೆ ನಡೆದ ಸಂಚು ಎಂದು ಜನಾರ್ದನ ರೆಡ್ಡಿ ಆರೋಪಿಸಿದ್ದರೆ, ಅಕ್ರಮ ಗಣಿಗಾರಿಕೆ ವಿಷಯ ಡೈವರ್ಟ್​ ಮಾಡಲು ಇಂತಹ ನೀಜ ಕೃತ್ಯಕ್ಕೆ ಜನಾರ್ದನ ರೆಡ್ಡಿ ಇಳಿದಿದ್ದಾನೆ ಎಂದು ಏಕವಚನದಲ್ಲೇ ಭರತ್​​ ರೆಡ್ಡಿ ಕಿಡಿಕಾರಿದ್ದಾರೆ. ಇದೆಲ್ಲದರ ನಡುವೆ ಯುವಕ ರಾಜಶೇಖರ್​​ ಸಾವಿಗೆ ಕಾರಣವಾದ ಬುಲೆಟ್ ಫೈರ್​​ ಮಾಡಿದ್ದು ಯಾರು ಎಂಬ ಪ್ರಶ್ನೆ ಉದ್ಭವಿಸಿದೆ.

ಬ್ಯಾನರ್​​ ವಿಚಾರವಾಗಿ ಗಲಾಟೆ ವಿಕೋಪಕ್ಕೆ ಹೋಗುತ್ತಿದ್ದಂತೆ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಜೊತೆಗೆ ಶಾಸಕ ಭರತ್​​ ರೆಡ್ಡಿ ಆಪ್ತನ ಬಾಡಿಗಾರ್ಡ್​​ಗಳು ಕೂಡ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಪೊಲೀಸರು ​ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಪ್ರಕರಣ ಸಂಬಂಧ ಖಾಸಗಿ ಗನ್​ಮ್ಯಾನ್​​ಗಳ 3 ಗನ್​ ಸೀಜ್ ಮಾಡಿದ್ದಾರೆ. ಅವುಗಳನ್ನು ಪರಿಶೀಲನೆಗಾಗಿ FSLಗೆ ಕಳುಹಿಸಲಾಗಿದೆ. ಜನಾರ್ದನರೆಡ್ಡಿಗೆ ನೀಡಿದ್ದ ಗನ್​ಮ್ಯಾನ್​ಗಳ ಗನ್​ ಸಹ ಪರಿಶೀಲನೆ ನಡೆಸಲಾಗಿದ್ದು, ರೆಡ್ಡಿ ಗನ್​ಮ್ಯಾನ್​ಗಳ ಗನ್​ನಿಂದ ಬುಲೆಟ್​ ಬಳಕೆ ಆಗದಿರುವುದು ಪತ್ತೆಯಾಗಿದೆ ಎಂದು ಟಿವಿ9ಗೆ ಪೊಲೀಸ್ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ನನ್ನನ್ನು ಮುಗಿಸಲೆಂದೇ ಫೈರಿಂಗ್ ಮಾಡಿದ್ದಾರೆ; ಜನಾರ್ದನ ರೆಡ್ಡಿ ಆರೋಪ

ಬಳ್ಳಾರಿ ಘರ್ಷಣೆ ಬಗ್ಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ವಾಲ್ಮೀಕಿ ಬ್ಯಾನರ್ ಹಾಕಿದ ವಿಚಾರವಾಗಿ ಗಲಾಟೆಯಾಗಿದೆ. ಮನೆಯ ರಸ್ತೆಯಲ್ಲಿ ಬ್ಯಾನರ್ ಹಾಕಲು ಜನಾರ್ದನರೆಡ್ಡಿ ವಿರೋಧಿಸಿದ್ದಾರೆ ಎನ್ನಲಾಗಿದೆ. ಆ ವಿಚಾರಕ್ಕೆ ಗಲಾಟೆ ನಡೆದು, ಕಾಂಗ್ರೆಸ್​ನ ಓರ್ವ ಕಾರ್ಯಕರ್ತ ಮೃತಪಟ್ಟಿದ್ದಾನೆ. ಆ ವೇಳೆ ಯಾರು ಫೈರ್ ಮಾಡಿದ್ದಾರೆ ಎಂಬುದರ ಬಗ್ಗೆ ತನಿಖೆಗೆ ಸೂಚನೆ ನೀಡಿದ್ದೇನೆ. ಆ ಬಗ್ಗೆ ವರದಿ ಬಂದ ಮೇಲೆ ಕ್ರಮ ಕೈಗೊಳ್ಳಲಾಗುವುದು. ಮುನ್ನೆಚ್ಚರಿಕೆಯಾಗಿ ದಾವಣಗೆರೆ ಐಜಿ ಘಟನಾ ಸ್ಥಳಕ್ಕೆ ಹೋಗಿದ್ದು, ಖಾಸಗಿ ಗನ್ ಮ್ಯಾನ್​ಗಳ ರಿವಾಲ್ವಾರ್​ಗಳನ್ನು ಸೀಜ್ ಮಾಡಿದ್ದಾರೆ. ಸತೀಶ್ ರೆಡ್ಡಿ ಗನ್​ಮ್ಯಾನ್ ಫೈರ್ ಮಾಡಿದ್ದಾರೆ ಅಂತಾ ಹೇಳ್ತಿದ್ದಾರೆ. ಅದರ ಬಗ್ಗೆಯೂ ತನಿಖೆ ಆಗಬೇಕು. ಗಲಾಟೆ ಮಾಡಿದ ವಿಚಾರಕ್ಕೆ ಜನಾರ್ದನ ರೆಡ್ಡಿ ಸೇರಿ 11 ಜನರ ವಿರುದ್ಧ ಎಫ್​ಐಆರ್ ಆಗಿದೆ ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಉಂಡ ಮನೆಗೇ ದಂಪತಿಯಿಂದ ದ್ರೋಹ: ಉದ್ಯಮಿ ಮನೆಯಲ್ಲಿ ಕದ್ದಿದ್ದು 979 ಗ್ರಾಂ ಬಂಗಾರ! – Kannada News | Robbery at Bengaluru Entrepreneur’s House: 979 Grams of Gold Stolen by House Helpers

ಬೆಂಗಳೂರು, ಜನವರಿ 02: ಉದ್ಯಮಿಯೊಬ್ಬರ ಮನೆಯಲ್ಲಿ ಮನೆ ಕೆಲಸಗಾರರೇ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನ ಕದ್ದಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಹೊಸ ವರ್ಷಾಚರಣೆಗೆಂದು ಕುಟುಂಬ ಬೇರೆ ರಾಜ್ಯಕ್ಕೆ ತೆರಳುವ ವೇಳೆ ಕೆಲಸಗಾರರ ಬಳಿ ಕೀ ಕೊಟ್ಟು ತೆರಳಿತ್ತು. ಇದನ್ನೇ ಬಂಡವಾಳ ಮಾಡಕೊಂಡು ಮನೆಯಲ್ಲಿ ಆರೋಪಿಗಳು ಕಳ್ಳತನ ನಡೆಸಿದ್ದಾರೆ ಎನ್ನಲಾಗಿದೆ.

ಡಿ.30ರಂದು ಸದಾಶಿವ ನಗರದ ಉದ್ಯಮಿ ಅಭಿಷೇಕ್ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಬರೋಬ್ಬರಿ 1.37 ಕೋಟಿ ರೂ. ಮೌಲ್ಯದ ಚಿನ್ನ, ವಾಚ್​​ಗಳನ್ನು ಕಳವು ಮಾಡಲಾಗಿದೆ. ಆ ಪೈಕಿ ಚಿನ್ನ 1.27 ಕೋಟಿ ರೂ. ಮೌಲ್ಯದಾಗಿದ್ದರೆ, ವಾಚ್​​ಗಳು 10 ಲಕ್ಷ ಬೆಲೆಬಾಳುವಂತದ್ದು ಎಂದು ತಿಳಿದುಬಂದಿದೆ. ಆರೋಪಿಗಳಾದ ಹಾಜಿರ ಬೇಗಂ ಮತ್ತುಆಕೆಯಪತಿ ಶಾಹೀರ್​​ಗೆ ಖಾಕಿ ಬಲೆ ಬೀಸಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: ಮಗಳಿಗೆ ಟಾರ್ಚರ್ ಕೊಡ್ತಿದ್ದ ಅಳಿಯನಿಗೆ ಚಟ್ಟ ಕಟ್ಟಿದ ಮಾವ; ರಾಡ್​​ನಿಂದ ಹೊಡೆದು ಕೊಲೆ

ಪಶ್ಚಿಮ ಬಂಗಾಳ ಮೂಲದ ಹಾಜಿರ ಬೇಗಂ ಮತ್ತು ಶಾಹೀರ್​​ ದಂಪತಿ ಈ ಹಿಂದೆ 2022ರಿಂದ 2024ರ ವರೆಗೆ ಅಭಿಷೇಕ್ ಮನೆಯಲ್ಲೇ ಕೆಲಸ ಮಾಡಿದ್ದರು. ಆ ಬಳಿಕ ಕೆಲಸ ಬಿಟ್ಟಿದ್ದ ಇವರು ಮತ್ತೆ ಮತ್ತೆ 2025 ಡಿ.27ರಂದು ಕೆಲಸಕ್ಕೆ ಸೇರಿದ್ದರು. ಡಿ. 30ರಂದು ಹೊಸ ವರ್ಷಾಚರಣೆ ಸಲುವಾಗಿ ಕೊಯಮತ್ತೂರಿಗೆ ಅಭಿಷೇಕ್ ಕುಟುಂಬ ತೆರಳಿದ್ದು, ತಮ್ಮ ಅತ್ತೆಗೆ ಕೊಡು ಎಂದು ಹಾಜಿರಾ ಬಳಿ ಒಂದು ಕೀಯನ್ನು ಕೊಟ್ಟು ಹೋಗಿದ್ದರು. ಆದರೆ ಸಂಜೆಯಾದರೂ ಮನೆಯ ಕೀಯನ್ನ ಅತ್ತೆಗೆ ಹಾಜಿರಾ ಕೊಟ್ಟಿಲ್ಲ. ಹೀಗಾಗಿ ವಿಚಾರಿಸಲು ದೂರವಾಣಿ ಕರೆ ಮಾಡಲಾಗಿದ್ದು, ಆ ವೇಳೆ ಹಾಜಿರಾ ದಂಪತಿ ಮೊಬೈಲ್​​ ಸ್ವಿಚ್​​ಆಫ್​​ ಆಗಿತ್ತು. ಬಳಿಕ ತಮ್ಮ ಕಾರಿನ ಡ್ರೈವರ್ ಮೂಲಕ ಮನೆ ಪರಿಶೀಲನೆ ನಡೆಸಿದಾಗ, ಮನೆಯ ಕಬೋರ್ಡ್​​ಗಳು ಓಪನ್ ಆಗಿರೋದು ಬೆಳಕಿಗೆ ಬಂದಿದೆ.  979 ಗ್ರಾಂ ಚಿನ್ನಾಭರಣ ಮತ್ತು ವಾಚ್​​ಗಳನ್ನು ಕೆಲಸದವರು ಕದ್ದು ಎಸ್ಕೇಪ್​​ ಆಗಿರೋದು ಕುಟುಂಬಕ್ಕೆ ಗೊತ್ತಾಗಿದೆ.

ವರದಿ: ಪ್ರದೀಪ್​​ ಚಿಕ್ಕಾಟಿ, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 12:20 pm, Fri, 2 January 26

Source link

Grah Pravesh: ಗೃಹ ಪ್ರವೇಶ ಮಾಡುವುದರ ಹಿಂದಿನ ಧಾರ್ಮಿಕ ಮತ್ತು ವೈಜ್ಞಾನಿಕ ಕಾರಣ ತಿಳಿಯಿರಿ – Kannada News | Grah Pravesh: New Home Rituals, Vastu and Auspicious Timings Guide

ಹೊಸ ಮನೆ ಕಟ್ಟಿದಾಗ ಅದ್ಧೂರಿಯಾಗಿ ಗೃಹ ಪ್ರವೇಶ ಮಾಡುವುದು ಸಾಮಾನ್ಯ. ಆದರೆ ಈ ಸಡಗರ ಹಿಂದೆ ಧಾರ್ಮಿಕ ಕಾರಣಗಳಿವೆ. ಗೃಹ ಪ್ರವೇಶದ ಮುಖ್ಯ ಉದ್ದೇಶವೆಂದರೆ ಹೊಸ ಮನೆಯನ್ನು ಶುದ್ಧೀಕರಿಸುವುದು ಮತ್ತು ಅಲ್ಲಿ ಸಕಾರಾತ್ಮಕ ಶಕ್ತಿಯನ್ನು ತುಂಬುವುದು. ನಿರ್ಮಾಣದ ಸಮಯದಲ್ಲಿ, ಉತ್ಖನನ ಮತ್ತು ಇತರ ಕೆಲಸಗಳ ಸಮಯದಲ್ಲಿ ಅನೇಕ ಸೂಕ್ಷ್ಮಜೀವಿಗಳು ಸಾಯುತ್ತವೆ ಎಂದು ನಂಬಲಾಗಿದೆ, ಇದರಿಂದಾಗಿ ವಿವಿಧ ವಾಸ್ತು ದೋಷಗಳು ಉಂಟಾಗುತ್ತವೆ . ಕುಟುಂಬವು ಅಲ್ಲಿ ಸಂತೋಷದಿಂದ ಮತ್ತು ಶಾಂತಿಯುತವಾಗಿ ವಾಸಿಸಲು ಸಾಧ್ಯವಾಗುವಂತೆ ಈ ದೋಷಗಳು ಮತ್ತು ನಕಾರಾತ್ಮಕತೆಯನ್ನು ತೆಗೆದುಹಾಕಲು ಗೃಹ ಪ್ರವೇಶದ ವೇಳೆ ಪೂಜೆಗಳ ಮೂಲಕ ದೇವತೆಗಳನ್ನು ಪ್ರಾರ್ಥಿಸಲಾಗುತ್ತದೆ.

ಪ್ರಮುಖ ನಿಯಮಗಳು:

  • ವಾಸ್ತು ಶಾಂತಿ: ಮನೆಯ ಈಶಾನ್ಯ ಮೂಲೆಯಲ್ಲಿ ಕಲಶ ಸ್ಥಾಪನೆ ಮತ್ತು ವಾಸ್ತು ದೇವರ ಪೂಜೆ ಅಗತ್ಯ.
  • ಶುಭ ಸಮಯ: ಗೃಹಪ್ರವೇಶವನ್ನು ಯಾವಾಗಲೂ ಶುಭ ತಿಥಿ, ನಕ್ಷತ್ರ ಮತ್ತು ಲಗ್ನವನ್ನು ಆಧರಿಸಿ ಮಾಡಬೇಕು. ಮಾಘ, ಫಾಲ್ಗುಣ, ವೈಶಾಖ ಮತ್ತು ಜ್ಯೇಷ್ಠ ತಿಂಗಳುಗಳು ಇದಕ್ಕೆ ಅತ್ಯುತ್ತಮವೆಂದು ಪರಿಗಣಿಸಲಾಗಿದೆ.
  • ಮುಕ್ತಾಯ: ಮನೆಯ ಮುಖ್ಯ ದ್ವಾರದಲ್ಲಿ ಬಾಗಿಲುಗಳನ್ನು ಅಳವಡಿಸಿ ಛಾವಣಿ ಪೂರ್ಣಗೊಳ್ಳುವವರೆಗೆ ಗೃಹಪ್ರವೇಶ ಮಾಡಬಾರದು ಎಂದು ಶಾಸ್ತ್ರಗಳು ಹೇಳುತ್ತವೆ.

ಇದನ್ನೂ ಓದಿ: ಪ್ರಪಂಚದ ಏಕೈಕ ಜಲಾಧಿವಾಸ ಗಣಪ; ಗುಡ್ಡಟ್ಟು ವಿನಾಯಕ ದೇವಸ್ಥಾನದ ಇಂಟರೆಸ್ಟಿಂಗ್​ ಸಂಗತಿ ಇಲ್ಲಿದೆ

ಧಾರ್ಮಿಕ ಮತ್ತು ವೈಜ್ಞಾನಿಕ ಕಾರಣಗಳು:

ಗೃಹ ಪ್ರವೇಶವು ಕೇವಲ ಒಂದು ಆಚರಣೆಯಲ್ಲ, ಬದಲಾಗಿ ಒಂದು ರಕ್ಷಣಾತ್ಮಕ ಗುರಾಣಿಯಾಗಿದೆ. ಮಂತ್ರಗಳ ಪಠಣ ಮತ್ತು ಹವನದ ಹೊಗೆಯು ಮನೆಯ ವಾತಾವರಣದಲ್ಲಿರುವ ಸೂಕ್ಷ್ಮಜೀವಿಗಳು ಮತ್ತು ನಕಾರಾತ್ಮಕ ಅಲೆಗಳನ್ನು ನಾಶಮಾಡುತ್ತದೆ. ಪೂಜೆಯ ಮೂಲಕ ಗಣೇಶ (ಅಡೆತಡೆಗಳನ್ನು ನಿವಾರಿಸುವವನು), ಲಕ್ಷ್ಮಿ ದೇವತೆ (ಸಂಪತ್ತಿನ ದೇವತೆ) ಮತ್ತು ವಾಸ್ತು ಪುರುಷನ ಆಶೀರ್ವಾದವನ್ನು ಪಡೆಯುವ ಉದ್ದೇಶ. ಇದಲ್ಲದೇ ಶುದ್ಧ ಮನಸ್ಸಿನಿಂದ ಮತ್ತು ಆಚರಣೆಗಳನ್ನು ಅನುಸರಿಸುತ್ತಾ ಪ್ರವೇಶಿಸಿದಾಗ, ಕುಟುಂಬ ಸದಸ್ಯರಲ್ಲಿ ಸಾಮರಸ್ಯ ಮತ್ತು ಮಾನಸಿಕ ಸಂತೋಷ ಹೆಚ್ಚಾಗುತ್ತದೆ.

ಮನೆಯೊಳಗೆ ಪ್ರವೇಶಿಸುವಾಗ, ಮುಖ್ಯ ದ್ವಾರದಲ್ಲಿ ತೋರಣ (ಮಾವಿನ ಎಲೆಗಳ ತೋರಣ) ಇಡುವುದು ಮತ್ತು ಸ್ವಸ್ತಿಕವನ್ನು ಬರೆಯುವುದು ಕಡ್ಡಾಯವಾಗಿದೆ. ಮನೆಯ ಸ್ತ್ರೀ (ಲಕ್ಷ್ಮಿ) ಮೊದಲು ಬಲಗಾಲಿನಲ್ಲಿ ಮಂಗಳ ಕಲಶವನ್ನು ಇಟ್ಟುಕೊಂಡು ಒಳಗೆ ಬರಬೇಕು. ಒಳಗೆ ಪ್ರವೇಶಿಸುವಾಗ ಶಂಖವನ್ನು ಊದುವುದು ಶುಭವೆಂದು ಪರಿಗಣಿಸಲಾಗುತ್ತದೆ, ಏಕೆಂದರೆ ಅದು ದುಷ್ಟ ಶಕ್ತಿಗಳನ್ನು ದೂರವಿಡುತ್ತದೆ ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

21 ವರ್ಷದ ಬೆಂಗಳೂರು ಹುಡುಗ ಎಡ್ವರ್ಡ್​ಗೆ ಎರಡೂವರೆ ಕೋಟಿ ರೂ ಸಂಬಳ ಆಫರ್ – Kannada News | IIT Hyderabad student Edward Nathan Varghese gets Rs 2.5 crore package offer from The Netherlands firm

ಹೈದರಾಬಾದ್, ಜನವರಿ 2: ಇಲ್ಲಿಯ ಐಐಟಿಯಲ್ಲಿ ಕೊನೆಯ ವರ್ಷದ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ 21 ವರ್ಷದ ಎಡ್ವರ್ಡ್ ನೇತನ್ ವರ್ಗೀಸ್​ಗೆ (Edward Nathan Varghese) ದಾಖಲೆ ಸಂಬಳದ ಕೆಲಸಕ್ಕೆ ಆಫರ್ ಸಿಕ್ಕಿದೆ. ವರದಿ ಪ್ರಕಾರ, ಐಐಟಿ ಹೈದರಾಬಾದ್​ನ ಎಡ್ವರ್ಡ್​ಗೆ 2.5 ಕೋಟಿ ರೂ ಸ್ಯಾಲರಿ ಪ್ಯಾಕೇಜ್ ಕೊಡಲಾಗುತ್ತಿದೆ. ನೆದರ್​ಲ್ಯಾಂಡ್ಸ್ ಮೂಲದ ಗ್ಲೋಬಲ್ ಟ್ರೇಡಿಂಗ್ ಸಂಸ್ಥೆಯಾದ ಆಪ್ಟಿವರ್ (Optiver) ಇಂತಹದ್ದೊಂದು ಭರ್ಜರಿ ಆಫರ್ ಅನ್ನು ಭಾರತೀಯ ವಿದ್ಯಾರ್ಥಿಗೆ ಕೊಟ್ಟಿದೆ.

ಇಂಟರ್ನ್​ಶಿಪ್​ನಲ್ಲಿ ಕಂಪನಿಯನ್ನು ಸೆಳೆದ ಎಡ್ವರ್ಡ್

ಎಡ್ವರ್ಡ್ ನೇತನ್ ವರ್ಗೀಸ್ ಹಾಗೂ ಐಐಟಿ ಹೈದರಾಬಾದ್​ನ ಮತ್ತೊಬ್ಬ ವಿದ್ಯಾರ್ಥಿ, ಈ ಇಬ್ಬರೂ ಆಪ್ಟೀವರ್​ನ ಎರಡು ತಿಂಗಳ ಇಂಟರ್ನ್​ಶಿಪ್​ಗೆ ಸೇರಿಕೊಂಡಿದ್ದರು. ಈ ವೇಳೆ, ಎಡ್ವರ್ಡ್ ಅವರನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳಲು ಆಪ್ಟೀವರ್ ನಿರ್ಧರಿಸಿದೆ. ಜುಲೈ ತಿಂಗಳಲ್ಲಿ ಎಡ್ವರ್ಡ್ ಅವರು ಸಾಫ್ಟ್​ವೇರ್ ಎಂಜಿನಿಯರ್ ಆಗಿ ಆಪ್ಟೀವರ್ ಅನ್ನು ಸೇರಲಿದ್ದಾರೆ.

21 ವರ್ಷದ ಎಡ್ವರ್ಡ್​ಗೆ ಆಪ್ಟೀವರ್ 2.5 ಕೋಟಿ ರೂ ಸಂಬಳ ಆಫರ್ ಮಾಡಿದೆ. 2008ರಲ್ಲಿ ಆರಂಭವಾದ ಐಐಟಿ ಹೈದರಾಬಾದ್​ನಲ್ಲಿ ಈವರೆಗೆ ಯಾವ ವಿದ್ಯಾರ್ಥಿ ಕೂಡ ಕ್ಯಾಂಪಸ್ ಪ್ಲೇಸ್ಮೆಂಟ್​ನಲ್ಲಿ ಇಷ್ಟೊಂದು ಸ್ಯಾಲರಿ ಆಫರ್ ಪಡೆದಿದ್ದಿಲ್ಲ. ಆ ಮಟ್ಟಿಗೆ ಎಡ್ವರ್ಡ್ ದಾಖಲೆ ಮಾಡಿದ್ದಾರೆ. ವಿಶೇಷ ಎಂದರೆ, ಕ್ಯಾಂಪಸ್ ಪ್ಲೇಸ್ಮೆಂಟ್​ನಲ್ಲಿ ಎಡ್ವರ್ಡ್ ಇಂಟರ್ವ್ಯೂ ಫೇಸ್ ಮಾಡಿದ ಏಕೈಕ ಕಂಪನಿಯೂ ಅದಾಗಿತ್ತು.

ಇದನ್ನೂ ಓದಿ: ಪ್ಯಾಲೆಸ್ಟೀನ್ ಧ್ವಜದ ಸ್ಟಿಕರ್ ಅಂಟಿಸಿಕೊಂಡು ಆಡಿದ ಕಾಶ್ಮೀರೀ ಕ್ರಿಕೆಟಿಗ; ಪೊಲೀಸರಿಂದ ವಿಚಾರಣೆ

ಬೆಂಗಳೂರಿನಲ್ಲಿ ಹೈಸ್ಕೂಲ್ ಓದಿದ್ದ ಎಡ್ವರ್ಡ್

ಎಡ್ವರ್ಡ್ ನೇತನ್ ವರ್ಗೀಸ್ ಮೂಲತಃ ಹೈದರಾಬಾದ್​ನವರೇ. ಅಲ್ಲೇ ಹುಟ್ಟಿ ಬೆಳೆದಿದ್ದು. ಆದರೆ, ಏಳನೇ ತರಗತಿಯಿಂದ 12ನೇ ತರಗತಿಯವರೆಗೂ ಇವರು ಬೆಂಗಳೂರಿನಲ್ಲಿ ಓದಿದ್ದಾರೆ. 2022ರಲ್ಲಿ ಜೆಇಇ ಮೇನ್ ಪರೀಕ್ಷೆಯಲ್ಲಿ 1,100ನೇ ರ್ಯಾಂಕ್, ಜೆಇಇ ಅಡ್ವಾನ್ಸ್ಡ್​ನಲ್ಲಿ 558ನೇ ರ್ಯಾಂಕಿಂಗ್ ಪಡೆದಿದ್ದಾರೆ. 2025ರಲ್ಲಿ ನಡೆದ ಕ್ಯಾಟ್ ಪರೀಕ್ಷೆಯಲ್ಲಿ ಶೇ. 99.96 ಅಂಕಗಳೊಂದಿಗೆ 120ನೇ ರ್ಯಾಂಕ್ ಪಡೆದಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link