ಕೋಗಿಲು ನಿರಾಶ್ರಿತರ ಮೇಲೆ ಬಹುದೊಡ್ಡ ಅನುಮಾನ: ಒತ್ತುವರಿದಾರರ ಜನ್ಮಜಾಲಾಡಲು ಮುಂದಾದ ಜಿಲ್ಲಾಡಳಿತ, ಪೊಲೀಸ್ – Kannada News | Kogilu Eviction Row: Major Doubts Over Displaced Families, Police and District Administration Begin Verification Drive

ಬೆಂಗಳೂರು, ಜನವರಿ 2: ಕೋಗಿಲು ಲೇಔಟ್‌ನಲ್ಲಿನ (Kogilu Layout) ಸರ್ಕಾರಿ ಜಾಗ ಒತ್ತುವರಿ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ಪುನರ್ವಸತಿ ಒದಗಿಸುವ ಕರ್ನಾಟಕ (Karnataka) ಕಾಂಗ್ರೆಸ್ ಸರ್ಕಾರದ ಯೋಜನೆಯ ನಡುವೆ ಮಹತ್ವದ ಬೆಳವಣಿಗೆ ನಡೆದಿದೆ. ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿರುವವರ ಕುರಿತು ಗಂಭೀರ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಪರಿಶೀಲನೆಗೆ ಮುಂದಾಗಿವೆ. ಪುನರ್ವಸತಿ ಯೋಜನೆಯಡಿ ಅರ್ಜಿ ಸಲ್ಲಿಸಿರುವ ವಸೀಮ್ ಲೇಔಟ್ ಹಾಗೂ ಫಕೀರ್ ಲೇಔಟ್‌ನ ಸಂತ್ರಸ್ತರ ಪೈಕಿ ಕೆಲವರು ಬಾಂಗ್ಲಾದೇಶ (Bangladesh) ಮೂಲದವರಾಗಿರಬಹುದೆಂಬ…

Read More

ದೇಶದ್ರೋಹ ಆರೋಪಿ ಉಮರ್ ಖಾಲೀದ್​ಗೆ ನ್ಯೂಯಾರ್ಕ್ ಮೇಯರ್ ಕಾಳಜಿ ಪತ್ರ; 8 ಅಮೆರಿಕನ್ ಜನಪ್ರತಿನಿಧಿಗಳಿಂದಲೂ ಬೆಂಬಲ – Kannada News | Delhi Riots accused Umar Khalid gets support from 8 US lawmakers and New York Mayor Zohran Mamdani

ನವದೆಹಲಿ, ಜನವರಿ 2: ಐದು ವರ್ಷದ ಹಿಂದೆ ದೆಹಲಿಯಲ್ಲಿ ಸಂಭವಿಸಿದ ದಂಗೆ, ಪ್ರತಿಭಟನೆಯಲ್ಲಿ ಪಿತೂರಿ ಮಾಡಿದ ಆರೋಪದಲ್ಲಿ ಜೈಲಿನಲ್ಲಿರುವ ಉಮರ್ ಖಾಲೀದ್​ಗೆ ಅಮೆರಿಕದಲ್ಲಿ ಈಗ ಒಂದು ಗುಂಪು ಬೆಂಬಲ ಕೊಡಲು ಯತ್ನಿಸುತ್ತಿದೆ. ಅಮೆರಿಕದ ಎಂಟು ಮಂದಿ ಜನಪ್ರತಿನಿಧಿಗಳು ಉಮರ್ ಖಾಲೀದ್ ಬಿಡುಗಡೆಗೆ ಒತ್ತಾಯಿಸಿದ್ದಾರೆ. ಜಮ್ಮು ಕಾಶ್ಮೀರದ ವಿದ್ಯಾರ್ಥಿ ಮುಖಂಡರಾಗಿದ್ದ ಉಮರ್ ಖಾಲೀದ್ ಅವರು ಹಾಗೂ ಇತರ ಸಹ-ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಆಗ್ರಹಿಸಿ ಈ ಎಂಟು ಜನರು ಪತ್ರ ಬರೆದಿದ್ದಾರೆ. ಡಿಸೆಂಬರ್ 30ರಂದು ಬರೆಯಲಾಗಿರುವ ಈ…

Read More

‘ಧುರಂಧರ್​’ಗೆ ದೊಡ್ಡ ಹೊಡೆತ ಕೊಟ್ಟ ನೆಪೋ ಕಿಡ್ ಚಿತ್ರ – Kannada News | Dhurandhar Shows Cut: Agastya Nanda’s Ikkis Takes Over Screens and Box Office

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಚಿತ್ ಬಿಡುಗಡೆಯಾದಾಗಿನಿಂದ ಸಾಕಷ್ಟು ಮೆಚ್ಚುಗೆ ಪಡೆದಿದೆ. ಗಳಿಕೆ ಕೂಡ ಚೆನ್ನಾಗಿಯೇ ಆಗುತ್ತಿದೆ. ಈ ಚಿತ್ರದ ಮುಂದೆ, ‘ಕಿಸ್ ಕಿಸ್ಕೋ ಪ್ಯಾರ್ ಕರೂ 2’, ‘ಅವತಾರ್: ಫೈರ್ ಅಂಡ್ ಆ್ಯಶ್’ ಮತ್ತು ‘ತು ಮೇರಿ ಮೇ ತೇರಾ ಮೇ ತೇರಾ ತು ಮೇರಿ’ ಕೂಡ ಬಾಕ್ಸ್ ಆಫೀಸ್‌ನಲ್ಲಿ ಉಳಿಯಲು ವಿಫಲವಾಯಿತು. ಚಿತ್ರಮಂದಿರಗಳಲ್ಲಿ ಪರದೆ ಹಂಚಿಕೆ ಮತ್ತು ವಿತರಣೆಯ ವಿಷಯದಲ್ಲಿ ‘ಧುರಂಧರ್’ ಚಿತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿತ್ತು. ಆದರೆ ಈಗ ‘ಧುರಂಧರ್’ ಹೊಸ ವರ್ಷದಲ್ಲಿ…

Read More

ಕನ್ನಡತಿ ಭೂಮಿ ಶೆಟ್ಟಿ ಸಿನಿಮಾನಲ್ಲಿ ‘ಧುರಂಧರ್’ ಸ್ಟಾರ್ ಅಕ್ಷಯ್ ಖನ್ನಾ – Kannada News | Akshay Khanna acting in Bhoomi Shetty’s movie Mahakali

ಅಕ್ಷಯ್ ಖನ್ನಾ (Akshay Khanna), ದಶಕಗಳಿಂದ ಚಿತ್ರರಂಗದಲ್ಲಿದ್ದರೂ ಸಹ ಆರಕ್ಕೇರಿರಲಿಲ್ಲ, ಮೂರಕ್ಕಿಳಿದಿರಲಿಲ್ಲ. ಆದರೆ ಈಗ ‘ಧುರಂಧರ್’ ಸಿನಿಮಾ ಮೂಲಕ ಏಕಾಏಕಿ ಸ್ಟಾರ್ ಆಗಿದ್ದಾರೆ. ಅದ್ಭುತ ನಟ ಅಕ್ಷಯ್ ಖನ್ನಾ ಅವರ ನಟನಾ ಪ್ರತಿಭೆಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಹಠಾತ್ತನೇ ಅಕ್ಷಯ್ ಖನ್ನಾ ಬೇಡಿಕೆ ಏರಿಕೆ ಆಗಿದೆ. ಅದಕ್ಕೆ ತಕ್ಕಂತೆ ಅವರ ಸಂಭಾವನೆಯೂ ಸಹ ದುಪ್ಪಟ್ಟಾಗಿದೆ. ಹಠಾತ್ತನೇ ಬಂದ ಬೇಡಿಕೆ, ಜನಪ್ರಿಯತೆಯ ಪರಿಣಾಮ ಬಾಲಿವುಡ್​​ನ ಸ್ಟಾರ್ ನಟರ ಸಿನಿಮಾಗಳನ್ನೇ ಕೈಬಿಡುತ್ತಿದ್ದಾರೆ ಅಕ್ಷಯ್ ಖನ್ನಾ, ಆದರೆ ಇದೀಗ ಅವರು ಕನ್ನಡತಿ,…

Read More

ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ – Kannada News | Sonal Monteiro Tharun Sudhir New Home video And Photos Sharan Wish him Best of Luck

ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮೊಂತೆರೋ (Sonal) ಅವರು ವಿವಾಹ ಆಗಿ ವರ್ಷದ ಬಳಿಕ ಹೊಸ ಮನೆ ಪ್ರವೇಶಿಸಿದ್ದಾರೆ. ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದು, ಅದಕ್ಕೆ ಗೃಹಪ್ರವೇಶ ನಡೆದಿದೆ. ಆ ಸಂದರ್ಭದ ವಿಡಿಯೋನ ಸೋನಲ್ ಹಂಚಿಕೊಂಡಿದ್ದಾರೆ. ಮನೆಯಲ್ಲಿ ಸುಧೀರ್ ಫೋಟೋ ಇಟ್ಟು ಪೂಜೆ ಮಾಡಲಾಗಿದೆ. ಮನೆಗೆ ತರುಣ್ ಗೆಳೆಯ ಶರಣ್, ಶ್ರುತಿ ಮೊದಲಾದವರು ಆಗಮಿಸಿದ್ದರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಹೊಸ ವರ್ಷಕ್ಕೆ ಹೊಸ ರೂಲ್ಸ್​: ಫ್ರಿಡ್ಜ್, ಟಿವಿ ಖರೀದಿಸುವ ಮುನ್ನ ಸ್ಟಾರ್ ಲೇಬಲ್ ಕಡ್ಡಾಯವಾಗಿ​​ ಗಮನಿಸಲೇಬೇಕು – Kannada News | New Energy Star Rules: Appliances Must Have Labeling for Electricity Conservation

ಹೊಸ ವರ್ಷಕ್ಕೆ ಹೊಸ ಹೊಸ ರೂಲ್ಸ್​​​ಗಳನ್ನು ತರಲಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನಸಾಮಾನ್ಯರು ಪಾಲಿಸಲೇಬೇಕಾದ ಕೆಲವೊಂದು ನಿಯಮಗಳನ್ನು ತರಲು ಮುಂದಾಗಿದೆ. ಇದೀಗ ವಿದ್ಯುತ್ ಬಳಕೆಯನ್ನು ಕಡಿಮೆ ಮಾಡುವ ಸರ್ಕಾರದ ಪ್ರಯತ್ನದ ಭಾಗವಾಗಿ, ರೆಫ್ರಿಜರೇಟರ್‌ಗಳು, ಟೆಲಿವಿಷನ್‌ಗಳು, ಎಲ್‌ಪಿಜಿ ಗ್ಯಾಸ್ ಸ್ಟೌವ್‌ಗಳು, ಕೂಲಿಂಗ್ ಟವರ್‌ಗಳು ಸೇರಿದಂತೆ ಹೆಚ್ಚು ವಿದ್ಯುತ್​​ ಉಪಯೋಗವಾಗುವ ಉಪಕರಣಗಳಿಗೆ ಜನವರಿ 1 ರಿಂದ ಅಂದರೆ ನೆನ್ನೆಯಿಂದ ಇಂಧನ ದಕ್ಷತೆಯ ಸ್ಟಾರ್-ಲೇಬಲಿಂಗ್ (energy star labeling) ಕಡ್ಡಾಯವಾಗಲಿದೆ. ಪಿಟಿಐ ವರದಿ ಪ್ರಕಾರ, ಇಂಧನ ದಕ್ಷತೆ ಬ್ಯೂರೋ (ಬಿಇಇ)…

Read More

Ayyappa Swami: ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಫೋಟೋ ಇಡುವ ಮುನ್ನ ಈ ವಿಷ್ಯ ತಿಳಿದಿರಲಿ – Kannada News | Keeping Ayyappa Swamis Photo at Home: Guidelines and Benefits

“ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಟ್ಟುಕೊಳ್ಳಬಹುದೇ?” ಎಂಬ ಪ್ರಶ್ನೆಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಉತ್ತರ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ಹರಿಹರ ಸುತನಾದ ಅಯ್ಯಪ್ಪ ಸ್ವಾಮಿ, ಶಬರಿಮಲೆಯಲ್ಲಿ ಪೂಜಿಸಲ್ಪಡುವ ಪವಿತ್ರ ಹಿಂದೂ ದೇವರು. ಮಾಲಾಧಾರಿಗಳು ಶಬರಿಮಲೆ ಯಾತ್ರೆಗೆ ತೆರಳುವಾಗ ಕಪ್ಪು ವಸ್ತ್ರ ಧರಿಸಿ, ಚಪ್ಪಲಿ ಹಾಕದೆ, ಸಾತ್ವಿಕ ಆಹಾರ ಸೇವಿಸಿ, ನಿರಂತರ ಭಜನೆ ಮತ್ತು ಪ್ರಾರ್ಥನೆಯಲ್ಲಿ ತೊಡಗಿಕೊಂಡು ಕಠಿಣ ವ್ರತಗಳನ್ನು ಆಚರಿಸುತ್ತಾರೆ. ಮಕರ ಸಂಕ್ರಾಂತಿಯಂದು ಜ್ಯೋತಿ ದರ್ಶನದೊಂದಿಗೆ…

Read More

ಹೊಸ ವರ್ಷಕ್ಕೆ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗುಡ್​​​ನ್ಯೂಸ್​​: ಪ್ರಾಯೋಗಿಕ ಪರೀಕ್ಷೆಗಳಿಗೆ ಹೊಸ ರೂಲ್ಸ್​​​ ತಂದ ಇಲಾಖೆ – Kannada News | 2nd PUC Practical Exams Live Web Streamed by KSEAB for Transparency and Monitoring

ಬೆಂಗಳೂರು, ಜ.2: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಈ ವರ್ಷ ದ್ವಿತೀಯ ಪಿಯು ಕೋರ್ಸ್‌ಗಳ ಪ್ರಾಯೋಗಿಕ ಪರೀಕ್ಷೆಗಳಿಗೆ ವೆಬ್-ಸ್ಟ್ರೀಮಿಂಗ್ ಕಡ್ಡಾಯಗೊಳಿಸಿದೆ. ಪರೀಕ್ಷೆಯಲ್ಲಿ ಪಾರದರ್ಶಕತೆ ತರಲು ಈ ಕ್ರಮವನ್ನು ಕೆಎಸ್‌ಇಎಬಿ ತಂದಿದೆ. ಈ ಹೊಸ ವ್ಯವಸ್ಥೆಯನ್ನು ತರುವ ಮೂಲಕ ವಿದ್ಯಾರ್ಥಿಗಳಿಗೆ ಅಂಕದಲ್ಲಿ ಯಾವುದೇ ಅನ್ಯಾಯವಾಗದಂತೆ ನೋಡಿಕೊಳ್ಳುತ್ತದೆ. ಪರೀಕ್ಷಾ ಕೇಂದ್ರದಲ್ಲಿ ನಡೆಯುವ ಎಲ್ಲಾ ಚಟುವಟಿಕೆಯನ್ನು ರಿಯಲ್​​​ ಟೈಮ್​​ನಲ್ಲಿ ಲೈವ್​​ ಸ್ಟ್ರೀಮ್​​​​ ಮಾಡಲಾಗುತ್ತದೆ. ಕಳೆದ ವರ್ಷ ವಿದ್ಯಾರ್ಥಿಗಳು ಪ್ರಾಯೋಗಿಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ್ದರೂ, ಥಿಯರಿ ಪರೀಕ್ಷೆಯಲ್ಲಿ…

Read More

ಬಳ್ಳಾರಿ ಉದ್ವಿಗ್ನ: ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ – Kannada News | Ballari Tension Escalates: Video Reveals Severity of Clash Outside Janardhan Reddy’s Residence

ಬಳ್ಳಾರಿ, ಜನವರಿ 2: ಬಳ್ಳಾರಿ ನಗರದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಸಂಬಂಧ ಬ್ಯಾನರ್ ಅಳವಡಿಕೆ ವೇಳೆ ಶುರುವಾದ ಘರ್ಷಣೆ ಕಾಂಗ್ರೆಸ್ ಕಾರ್ಯಕರ್ತನ ಬಲಿತೆಗೆದುಕೊಂಡಿದೆ. ಜನವರಿ 3ರಂದು ನಡೆಯಲಿರುವ ಕಾರ್ಯಕ್ರಮಕ್ಕೆ ಶಾಸಕ ಜನಾರ್ದನ ರೆಡ್ಡಿ ಅವರ ಮನೆ ಮುಂದೆ ಬ್ಯಾನರ್ ಕಟ್ಟುತ್ತಿದ್ದಾಗ ಎರಡು ಗುಂಪುಗಳ ನಡುವೆ ಗಲಾಟೆ ಸಂಭವಿಸಿದೆ. ಈ ಘರ್ಷಣೆಯು ಕಲ್ಲು ತೂರಾಟ, ದೊಣ್ಣೆಗಳ ಬಳಕೆ ಮತ್ತು ಖಾರದ ಪುಡಿ ಎರಚಾಟ ಸೇರಿದಂತೆ ತೀವ್ರ ಸ್ವರೂಪ ಪಡೆದುಕೊಂಡಿತ್ತು ಎಂಬುದು ಘಟನಾ ಸ್ಥಳದ ವಿಡಿಯೋದಿಂದ ತಿಳಿದುಬಂದಿದೆ. ಪರಿಸ್ಥಿತಿ ನಿಯಂತ್ರಣಕ್ಕೆ…

Read More

ದೇವನಹಳ್ಳಿಯಲ್ಲಿ ಟೋಲ್ ಬೂತ್​ಗೆ ಗುದ್ದಿದ ಬಸ್; ರಕ್ಷಣೆಗೆ ಧಾವಿಸಿದವರು ಮೊಬೈಲ್ ಹೊತ್ತೊಯ್ದರು – Kannada News | Devanahalli Bus Accident: iPhone Theft Amidst Chaos

ದೇವನಹಳ್ಳಿಯಲ್ಲಿ ಟೋಲ್ ಬೂತ್​ಗೆ ಗುದ್ದಿದ ಬಸ್; ರಕ್ಷಣೆಗೆ ಬಂದವರು ಮೊಬೈಲ್ ಹೊತ್ತೊಯ್ದರು ದೇವನಹಳ್ಳಿ, ಜನವರಿ 02: ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರಲ್ಲಿನ ದೇವನಹಳ್ಳಿ ಹೊರವಲಯದ ಟೋಲ್ ಪ್ಲಾಜಾ ಬಳಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅಪಘಾತ ತಪ್ಪಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ (Bengaluru) ಬರುತ್ತಿದ್ದ ಟ್ರಾನ್ಸ್ ಇಂಡಿಯಾ ಸಂಸ್ಥೆಯ ಸ್ಲೀಪರ್ ಕೋಚ್ ಬಸ್ ಅತಿವೇಗದಿಂದ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಪ್ಲಾಜಾ ಬೂತ್‌ಗೆ ಡಿಕ್ಕಿ ಹೊಡೆದಿದೆ. ಇದೇ ಸಮಯದಲ್ಲಿ ರಕ್ಷಣೆಯ ನೆಪದಲ್ಲಿ ಬಂದ ಕಳ್ಳರು…

Read More