Horoscope Today 02 January: ಇಂದು ಈ ರಾಶಿಯವರ ಎಲ್ಲಾ ಕೆಲಸ ಕಾರ್ಯಗಳಲ್ಲಿ ಯಶಸ್ಸು – Kannada News | Daily Horoscope for January 2nd​ 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜನವರಿ 2, ಶುಕ್ರವಾರ ವಿಶ್ವಾವಸು ನಾಮ ಸಂವತ್ಸರ, ದಕ್ಷಿಣಾಯಣ, ಪುಷ್ಯಮಾಸ, ಹೇಮಂತ ಋತು, ಶುಕ್ಲಪಕ್ಷದ ಚತುರ್ದಶಿ, ಮೃಗಶಿರಾ ನಕ್ಷತ್ರವಿರುವ ಈ ಶುಭ ದಿನದ ಗ್ರಹಗಳ ಸಂಚಾರವನ್ನು ಆಧರಿಸಿ ಅವರು ಪ್ರತಿಯೊಂದು ರಾಶಿಯ ಮೇಲಿನ ಪ್ರಭಾವಗಳನ್ನು ವಿವರಿಸಿದ್ದಾರೆ. ಈ ದಿನ ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭ ಫಲಗಳಿದ್ದು, ಆರ್ಥಿಕ ಸುಧಾರಣೆ, ಹೊಸ ವಾಹನ ಯೋಗ, ಹಾಗೂ ಪೂರ್ವಿಕರ ಆಸ್ತಿ ವಿವಾದ ಇತ್ಯರ್ಥವಾಗಲಿದೆ. ವೃಷಭ…

Read More

ರೆಡ್ಡಿಗಳ ಸಂಘರ್ಷಕ್ಕೆ ಗಣಿ ನಾಡು ಉದ್ವಿಗ್ನ, ಕಾಂಗ್ರೆಸ್ ಕಾರ್ಯಕರ್ತ ಸಾವು: ಅಸಲಿಗೆ ಬಳ್ಳಾರಿಯಲ್ಲಿ ಆಗಿದ್ದೇನು? ಇಲ್ಲಿದೆ ವಿವರ – Kannada News | Ballari Clash: Congress Worker Killed in Violent Banner Dispute Between Bharat Reddy and Janardhana Reddy Supporters

ಬಳ್ಳಾರಿಯ ಅವಂಬಾವಿಯಲ್ಲಿ ಬಿಗಿ ಬಂದೋಬಸ್ತ್ ಬಳ್ಳಾರಿ, ಜನವರಿ 2: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ (Congress) ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ದಾರುಣ ಘಟನೆ ಬಳ್ಳಾರಿಯಲ್ಲಿ (Ballari) ಶಾಸಕ ಜನಾರ್ದನ ರೆಡ್ಡಿ (Janardhana Reddy) ಮನೆ ಎದುರು ನಡೆದಿದೆ. ಜನವರಿ 3ರಂದು ವಾಲ್ಮೀಕಿ ಪುತ್ತಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆ ಬಳ್ಳಾರಿ ನಗರದಾದ್ಯಂತ ಬ್ಯಾನರ್‌ಗಳನ್ನು ಅಳವಡಿಸಲಾಗುತ್ತಿದೆ. ಅದೇ ರೀತಿ, ಅವಂಬಾವಿಯ ಜನಾರ್ದನ ರೆಡ್ಡಿ ಅವರ ನಿವಾಸದೆದುರು ಬ್ಯಾನರ್ ಅಳವಡಿಸುವುದನ್ನು ಅವರ ಬೆಂಬಲಿಗರು ವಿರೋಧಿಸಿದ್ದಾರೆ. ಈ…

Read More

Horoscope Today 02 January: ಇಂದು ಈ ರಾಶಿಯವರ ಮೇಲೆ ಸಕಾರಣದಿಂದ ಒತ್ತಡ ಹೇರುವರು – Kannada News | Horoscope Today in Kannada on 02 January Thursday; Dina Bhavishya Tithi Panchanga Details here

ಮೇಷ ರಾಶಿ: ಅಪವಾದದ ಸಾಧ್ಯತೆ ಇರುವುದರಿಂದ ಮಾತಿನಲ್ಲಿ ಮೌನ ಪಾಲಿಸಿ. ಕೆಲಸಗಳಲ್ಲಿ ಆಸಕ್ತಿ ಕಡಿಮೆಯಾಗಬಹುದು. ಹಣ ಹಾಗೂ ವಸ್ತು ನಷ್ಟದ ಸೂಚನೆ. ವಾಹನದ ದುರಸ್ತಿ ಕಾರ್ಯಗಳಿಗೆ ಖರ್ಚು. ಮಕ್ಕಳ ವರ್ತನೆಗಳು ನಿಮಗೆ ಕಷ್ಟಕೊಡಬಹುದು. ಸ್ನೇಹಸಂಬಂಧ ಗಟ್ಟಿಮಾಡಿಕೊಳ್ಳಲು ಇಷ್ಟವಾಗುವುದು. ಮಕ್ಕಳ ವಿವಾಹದ ಬಗ್ಗೆ ಒಂದೊಂದೇ ಚಿಂತೆ ಆರಂಭವಾಗುವುದು. ಇಂದಿನ ನಿಮ್ಮ ಅಜಾಗರೂಕತೆಯಿಂದ ಹಣವನ್ನು ಕಳೆದುಕೊಳ್ಳುವಿರಿ. ಅನಿವಾರ್ಯ ಕಾರಣದಿಂದ ನೀವು ಅಧಿಕಾರವನ್ನು ವಹಿಸಿಕೊಳ್ಳಬೇಕಾಗಬಹುದು. ದುಃಸ್ವಪ್ನದಿಂದ ಭಯಗೊಳ್ಳುವಿರಿ. ದೂರಪ್ರಯಾಣದಿಂದ ಆಯಾಸ. ಬೋಧನೆ, ಮಾರ್ಗದರ್ಶನದಲ್ಲಿ ಜನರ ವಿಶ್ವಾಸ ಸಿಗುತ್ತದೆ. ಆದಾಯ ಹಂಚಿಕೆಯಲ್ಲಿ ನ್ಯಾಯ…

Read More

ಬಳ್ಳಾರಿಯಲ್ಲಿ ಬ್ಯಾನರ್​ ಗಲಾಟೆ: ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್; ಕಾಂಗ್ರೆಸ್​​ ಕಾರ್ಯಕರ್ತ ಸಾವು – Kannada News | Ballari Banner Row Turns Violent: Congress Activist Shot Dead Amid Clashes infront Janardhan Reddy House

ಬಳ್ಳಾರಿ, ಜನವರಿ 01: ನಗರದಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದೆ. ಈ ವೇಳೆ ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್ ನಡೆದಿದೆ. ಈ ವೇಳೆ ಕಾಂಗ್ರೆಸ್​ ಕಾರ್ಯಕರ್ತ ಬಲಿ ಆಗಿದ್ದಾರೆ. ಫೈರಿಂಗ್​​ನಲ್ಲಿ ಕಾರ್ಯಕರ್ತ ರಾಜಶೇಖರ್ ಸಾವನ್ನಪ್ಪಿದ್ದಾರೆ.​​ ಸದ್ಯ  ರಾಜಶೇಖರ್ ಮೃತದೇಹವನ್ನು ಬಳ್ಳಾರಿ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನೆ ಕುರಿತು ಗೃಹಸಚಿವ ಪರಮೇಶ್ವರ್​​​ ಶಾಸಕ ನಾರಾ ಭರತ್ ರೆಡ್ಡಿ ಮತ್ತು ಪೊಲೀಸ್​ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು…

Read More

ನನ್ನನ್ನು ಮುಗಿಸಲೆಂದೇ ಫೈರಿಂಗ್ ಮಾಡಿದ್ದಾರೆ; ಜನಾರ್ದನ ರೆಡ್ಡಿ ಆರೋಪ – Kannada News | Bellary MLA Janardhan Reddy reaction after Firing in front of his House

ಬಳ್ಳಾರಿ, ಜನವರಿ 1: ಬ್ಯಾನರ್ ಕಟ್ಟುವ ವಿಚಾರಕ್ಕೆ ಬಳ್ಳಾರಿಯಲ್ಲಿ 2 ಗುಂಪುಗಳ ನಡುವೆ ಗಲಾಟೆ ನಡೆದಿದೆ. ಶಾಸಕ ಜನಾರ್ದನ ರೆಡ್ಡಿ (Janardhan Reddy) ಮನೆ ಮುಂದೆ ಘಟನೆ ನಡೆದಿದ್ದು, ಈ ಬಗ್ಗೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಬಳ್ಳಾರಿ‌ ನಗರದ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ನಾರಾ ಭರತ್ ರೆಡ್ಡಿಯ ತಂದೆ ಸೂರ್ಯನಾರಾಯಣ ರೆಡ್ಡಿ ಈ ದಾಳಿ ಮಾಡಿಸಿದ್ದಾರೆ. ಭರತ್ ​​ರೆಡ್ಡಿ ಅಪ್ತ ಸತೀಶ್ ರೆಡ್ಡಿಯಿಂದ ನನ್ನ ಹತ್ಯೆಗೆ ಸಂಚು ರೂಪಿಸಲಾಗಿದೆ. ನನ್ನನ್ನು…

Read More

ಇಲ್ಲಿದ್ರೆ ಆನಂದ, ಮನೆಗೋದ್ರೆ ಗೋವಿಂದ: ಗಿಲ್ಲಿಯ ಬಿಗ್​ಬಾಸ್ ರ್ಯಾಪ್ ಸಾಂಗ್ – Kannada News | Bigg Boss Kannada house welcomes new year in style

ಗಿಲ್ಲಿ ನಟ (Gilli Nata) ಒಳ್ಳೆಯ ಆಶು ಕವಿ. ನಿಂತಲ್ಲೇ ಪದಗಳನ್ನು ಜೋಡಿಸಿ ಹಾಸ್ಯ ಕವಿತೆ ಕಟ್ಟಿಬಿಡುತ್ತಾರೆ. ಈ ಹಿಂದೆಯೂ ಸಹ ಬಿಗ್​​ಬಾಸ್ ಮನೆಯಲ್ಲಿ ತಮ್ಮ ಸ್ಪಾಂಟೇನಿಯಸ್ ಹಾಸ್ಯ, ಆಶು ಕವಿತೆಯಿಂದ ಗಮನ ಸೆಳೆದಿದ್ದಾರೆ. ವೀಕೆಂಡ್​​ನಲ್ಲಿ ಸುದೀಪ್ ಅವರು ಕೇಳಿದ ಪ್ರಶ್ನೆಗೆ ಮನೆ ಸದಸ್ಯರ ಬಗ್ಗೆ ‘ಡಮಾಲ್ ಡಿಮಿಲ್ ಢಕ್ಕ’ ಎಂದು ಅಲ್ಲಿಯೇ ಹಾಡು ಕಟ್ಟಿ ಹಾಡಿದ್ದರು. ಗಿಲ್ಲಿಯ ಈ ಪ್ರತಿಭೆ ಸುದೀಪ್ ಅವರಿಗೂ ಇಷ್ಟವಾಗಿತ್ತು. ಇದೀಗ ಬಿಗ್​​ಬಾಸ್ ಮನೆಯಲ್ಲಿ ಹೊಸ ವರ್ಷಾಚರಣೆ ಆಚರಣೆ ಮಾಡಲಾಗಿದ್ದು, ಹೊಸ…

Read More

ಬೆಂಗಳೂರಿಂದ ಕನ್ಯಾಕುಮಾರಿಗೆ 702 ಕಿ.ಮೀ ಸೈಕಲ್ ತುಳಿದ ಶಾಸಕ ಸುರೇಶ್ ಕುಮಾರ್; ಮೋದಿಯಿಂದ ಭಾರೀ ಮೆಚ್ಚುಗೆ – Kannada News | PM Modi lauds Karnataka BJP MLA Suresh Kumars 702 km cycle ride from Bengaluru to Kanniyakumari

ಬೆಂಗಳೂರು, ಜನವರಿ 1: ಬೆಂಗಳೂರಿನಿಂದ ಕನ್ಯಾಕುಮಾರಿಯವರೆಗೆ 702 ಕಿ.ಮೀ ಸೈಕಲ್ ಸವಾರಿ ಮಾಡಿದ ಬಿಜೆಪಿ ಶಾಸಕ ಸುರೇಶ್ ಕುಮಾರ್ (Suresh Kumar) ಅವರನ್ನು ಪ್ರಧಾನಿ ಮೋದಿ (PM Modi) ಶ್ಲಾಘಿಸಿದ್ದಾರೆ. “ಬೆಂಗಳೂರಿನಿಂದ ಕನ್ಯಾಕುಮಾರಿಯವರೆಗೆ ಸೈಕಲ್ ಸವಾರಿ ಕೈಗೊಂಡ ಎಸ್. ಸುರೇಶ್ ಕುಮಾರ್ ಅವರ ಸಾಧನೆ ಶ್ಲಾಘನೀಯ ಮತ್ತು ಸ್ಫೂರ್ತಿದಾಯಕವಾಗಿದೆ. ಆರೋಗ್ಯದ ಸಮಸ್ಯೆಗಳನ್ನು ಮೆಟ್ಟಿ ನಿಂತು ಅವರು ಈ ಸಾಧನೆ ಮಾಡಿರುವುದು ಅವರ ದೃಢ ನಿರ್ಧಾರ ಮತ್ತು ಅಚಲ ಮನೋಭಾವವನ್ನು ಎತ್ತಿ ತೋರಿಸುತ್ತದೆ. ಇದು ಫಿಟ್ನೆಸ್ ಕುರಿತು ಪ್ರಮುಖ…

Read More

ಅಶ್ವಿನಿಯ ಫಿನಾಲೆಗೆ ಕರೆದೊಯ್ಯುವ ಜವಾಬ್ದಾರಿ ಧನುಶ್​​​ಗೆ ವಹಿಸಿದ ಗಿಲ್ಲಿ – Kannada News | Bigg Boss Kannada: Gilli loose against Ashwini

ಅಶ್ವಿನಿ ಮತ್ತು ಗಿಲ್ಲಿ ಬಿಗ್​​ಬಾಸ್ (Bigg Boss) ಮನೆಯ ಟಾಮ್ ಆಂಡ್ ಜೆರ್ರಿ. ಬಿಗ್​​ಬಾಸ್ ಪ್ರಾರಂಭವಾದಾಗಿನಿಂದ ಇನ್ನೇನು ಮುಗಿಯುವ ಸಮಯ ಬಂದರೂ ಈ ಇಬ್ಬರ ವೈರತ್ವದಲ್ಲಿ ಬದಲಾವಣೆಯೇ ಆಗಿಲ್ಲ. ಮೊದಲ ವಾರದಂತೆಯೇ ಈಗಲೂ ಸಹ ಕಿತ್ತಾಡುತ್ತಾರೆ. ಆದರೆ ಈ ವಾರ ಗಿಲ್ಲಿ ನಟ ಮತ್ತು ಅಶ್ವಿನಿ ಅವರುಗಳು ಮನೆಯ ರಾಜ ಮತ್ತು ರಾಣಿ ಆಗಿದ್ದರು. ಇಬ್ಬರೂ ಒಟ್ಟಿಗೆ ಟಾಸ್ಕ್​​ನ ಉಸ್ತುವಾರಿ ನೋಡಿಕೊಳ್ಳಬೇಕಿತ್ತು. ಈ ಸಂದರ್ಭದಲ್ಲಿ ಹಲವು ಬಾರಿ ಗಿಲ್ಲಿ ಮತ್ತು ಅಶ್ವಿನಿ ಪರಸ್ಪರ ಜಗಳ ಆಡಿದರು, ಕಿತ್ತಾಡಿದರು….

Read More

VHT 2025-26: ಒಂದೇ ಪಂದ್ಯದಲ್ಲಿ ಐದು ಶತಕಗಳು; ಐತಿಹಾಸಿಕ ದಾಖಲೆ ಸೃಷ್ಟಿ

2025-26ರ ವಿಜಯ್ ಹಜಾರೆ ಟ್ರೋಫಿ ದಾಖಲೆಯ ಪಂದ್ಯಕ್ಕೆ ಸಾಕ್ಷಿಯಾಗಿದೆ. ಈ ಟೂರ್ನಿಯ ನಾಲ್ಕನೇ ಸುತ್ತಿನ ಪಂದ್ಯದಲ್ಲಿ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಹಿಂದೆಂದೂ ದಾಖಲಾಗದ ದಾಖಲೆಯೊಂದು ಸೃಷ್ಟಿಯಾಗಿದೆ. ಸನೋಸರಾ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬರೋಡಾ ಹಾಗೂ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಉಭಯ ತಂಡಗಳ ಒಟ್ಟು ಐವರು ಬ್ಯಾಟ್ಸ್‌ಮನ್‌ಗಳು ಶತಕ ಬಾರಿಸಿ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬರೋಡಾ ತಂಡದ ಮೂವರು ಬ್ಯಾಟ್ಸ್‌ಮನ್‌ಗಳು ಶತಕ ಸಿಡಿಸಿದರು. ಇದರ ಫಲವಾಗಿ ಬರೋಡಾ ತಂಡ…

Read More

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಸಕ ಶಾಕಿಂಗ್ ರಿಯಾಕ್ಷನ್ – Kannada News | MLA Janardhana Reddy Reacts to Ballari Incident: Clash Over Valmiki Jayanti Banners at His Residence

ಬಳ್ಳಾರಿ, ಜನವರಿ 01: ಬಳ್ಳಾರಿ ನಗರದಲ್ಲಿರುವ ಶಾಸಕ ಗಾಲಿ ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ಕಟ್ಟುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಈ ವೇಳೆ ಖಾಸಗಿ ಗನ್‌ಮ್ಯಾನ್‌ಗಳಿಂದ ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಈ ಘಟನೆ ಬಗ್ಗೆ ಶಾಸಕ ಜನಾರ್ದನ ರೆಡ್ಡಿ ಮಾತನಾಡಿದ್ದು, ಬೆಂಗಳೂರಿನಿಂದ ಬಂದು ದೇವಸ್ಥಾನಕ್ಕೆ ಭೇಟಿ ನೀಡಿ, ನಂತರ ಚಲಪತಿ ಅವರೊಂದಿಗೆ ಚರ್ಚಿಸಿ ವಾಪಸ್ ಬರುವ ಸಂದರ್ಭದಲ್ಲಿ ಈ ರೀತಿ ಆಗಿದೆ ಎಂದು ಕರೆ ಬಂತು. ಮನೆ ಮುಂದೆ ಬಂದು…

Read More