Category Archives: Blog

Your blog category

ಕೋಗಿಲು ಅಕ್ರಮ ವಸತಿ ತೆರವು ಪ್ರಕರಣ: ಹೈಕೋರ್ಟ್​​ಗೆ ಪಿಐಎಲ್ ಸಲ್ಲಿಕೆ; ಬೇಡಿಕೆಗಳೇನು? – Kannada News | Kogilu eviction pil submitted to high court seeking rehabilitation and basic facilities

ಬೆಂಗಳೂರು, ಜನವರಿ 01: ಕೋಗಿಲು ಬಡಾವಣೆಯಲ್ಲಿ ಅಕ್ರಮ ವಸತಿಗಳ ತೆರವು ಪ್ರಕರಣ ಸಂಬಂಧ ಒಂದೆಡೆ ರಾಜಕೀಯ ಜಟಾಪಟಿಗಳು ನಡೆಯುತ್ತಿದ್ದರೆ ಮತ್ತೊಂದೆಡೆ ಪುನರ್ವಸತಿ ಮತ್ತು ಪರಿಹಾರ ಕೋರಿ ಹೈಕೋರ್ಟ್​​ಗೆ ಪಿಐಎಲ್ ಸಲ್ಲಿಕೆಯಾಗಿದೆ. ಜೈಬಾ ತಬಸ್ಸುಮ್ ಮತ್ತಿತರರು ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದು, ಹಲವು ಬೇಡಿಕೆಗಳನ್ನು ನ್ಯಾಯಾಲಯದ ಮುಂದಿಟ್ಟಿದ್ದಾರೆ.

ಬೇಡಿಕೆಗಳು ಏನು?

30 ವರ್ಷಗಳಿಂದ ಇಲ್ಲಿ 3 ಸಾವಿರ ಜನರು ವಾಸಿಸುತ್ತಿದ್ದಾರೆ. ವಸೀಂ, ಫಕೀರ್ ಕಾಲೋನಿಗಳ ತೆರವಿನಿಂದ ನಿರ್ವಸತಿಕರಾಗಿದ್ದು, ಎಸ್​ಡಿಪಿಐ ಮತ್ತು ಎಂಐಎಂ ಪಕ್ಷಗಳು ಈಗ ನೆರವು ಒದಗಿಸುತ್ತಿವೆ. ಸರ್ಕಾರ 5 ಕಿ.ಮೀ. ಅಂತರದಲ್ಲೇ ಮರುವಸತಿ ಕಲ್ಪಿಸಬೇಕು ಮತ್ತು ಅಲ್ಲಿಯವರೆಗೆ 3 ಹೊತ್ತಿನ ಪೌಷ್ಟಿಕಾಂಶಯುತ ಆಹಾರ ಒದಗಿಸಬೇಕು. 300 ಪ್ರತ್ಯೇಕ ಟೆಂಟ್, ಶೌಚಾಲಯದ ವ್ಯವಸ್ಥೆ ಕಲ್ಪಿಸಬೇಕು. ವೈದ್ಯಕೀಯ ವ್ಯವಸ್ಥೆ ಕಲ್ಪಿಸಿ ಆರೋಗ್ಯ ತಪಾಸಣೆ ಮಾಡಬೇಕು. ಜೊತೆಗೆ ಕಟ್ಟಡ ತೆರವಿಗೆ ಪರಿಹಾರ ನೀಡಬೇಕೆಂದು ಆಗ್ರಹಿಸಲಾಗಿದೆ.

ಇದನ್ನೂ ಓದಿ: ಯೋಗಿ ಬುಲ್ಡೋಜರ್ ರಾಜ್ ಜತೆ ಹೋಲಿಕೆ ಬೇಡ; ಕೋಗಿಲು ಶೆಡ್​ಗಳ ತೆರವು ವಿಚಾರದಲ್ಲಿ ಕಾಂಗ್ರೆಸ್ ಬೆಂಬಲಕ್ಕೆ ನಿಂತ ಮುಸ್ಲಿಂ ಲೀಗ್

ನಿರಾಶ್ರಿತರಿಗೆ ನಾಳೆಯೂ ಮನೆ ಹಂಚಿಕೆ ಡೌಟ್​

ಕೋಗಿಲು ಬಡಾವಣೆ ನಿರಾಶ್ರಿತರಿಗೆ ನಾಳೆಯೂ ಮನೆ ಹಂಚಿಕೆ ನಡೆಯುವುದು ಅನುಮಾನವಾಗಿದೆ. ಇನ್ನೂ ನಮಗೆ ಪಟ್ಟಿ ಬಂದಿಲ್ಲ ಎಂದು ರಾಜೀವ್ ಗಾಂಧಿ ವಸತಿ ನಿಗಮದ ಎಂಡಿ ಪರಶುರಾಮ್ ಶಿನ್ನಾಳ್ಕರ್ ಹೇಳಿದ್ದಾರೆ. ಬೆಂಗಳೂರು ನಗರ ಜಿಲ್ಲಾಧಿಕಾರಿಯಿಂದ ನಮಗೆ ಪಟ್ಟಿ ಬರಬೇಕಾಗಿದೆ. ಆ ಬಳಿಕವೇ ಪರಿಶೀಲಿಸಿ ನಾವು ಮನೆ ಹಂಚಿಕೆಪತ್ರ ನೀಡಬೇಕು ಎಂದಿದ್ದಾರೆ. ಹೀಗಾಗಿ ಮನೆ ಹಂಚಿಕೆ ಇನ್ನೂ 2-3 ದಿನಗಳು ತಡವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಬಿಜೆಪಿಗೆ ಜಮೀರ್​​ ಕೌಂಟರ್​​

ಕೋಗಿಲು ನಿರಾಶ್ರಿತರಿಗೆ ಮನೆ ಹಂಚಿಕೆ ವಿಚಾರವಾಗಿ ಬಿಜೆಪಿ ಆರೋಪಗಳಿಗೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿರುಗೇಟು ನೀಡಿದ್ದಾರೆ. ಕರ್ನಾಟಕದವರಲ್ಲದೆ ಹೊರಗಿನವರಿಗೆ ಹೇಗೆ ಮನೆ ಕೊಡುತ್ತೇವೆ? ಬಾಂಗ್ಲಾದೇಶದವರು ಹೇಗೆ ಬೆಂಗಳೂರಿನಲ್ಲಿ ಇರಲು ಸಾಧ್ಯ? ಹಾಗೇನಾದ್ರೂ ಅವರು ಬಾಂಗ್ಲಾದೇಶದವರಾಗಿದ್ದರೆ ಸಾಬೀತುಪಡಿಸಲಿ. ಅದನ್ನು ಬಿಟ್ಟು ಬಾಯಿಗೆ ಬಂದಂತೆ ಮಾತನಾಡಬಾರದು. ಉರ್ದು ಮಾತನಾಡುವವರಿಗೂ ಮನೆ ಕೊಡಲ್ಲ. ಆಧಾರ್ ಕಾರ್ಡ್, ಬಿಪಿಎಲ್ ಕಾರ್ಡ್, ವೋಟರ್ ಐಡಿ ಇರಬೇಕು. ಎಲ್ಲಾ ದಾಖಲೆಗಳು ಇದ್ದರೆ ಮಾತ್ರ ಅವರಿಗೆ ಮನೆ ಕೊಡುತ್ತೇವೆ ಎಂದು ತಿಳಿಸಿದ್ದಾರೆ.

ಡಿಸಿ ರಿಪೋರ್ಟ್ ಬಂದ ನಂತರ ಅರ್ಹರ ಬಗ್ಗೆ ನಿಖರ ಮಾಹಿತಿ ಸಿಗುತ್ತೆ. ಯಾರಿಗೂ ಅನ್ಯಾಯ ಆಗಬಾರದೆಂದು ಒಂದು ದಿನ ಹೆಚ್ಚು ಸಮಯತೆಗೆದುಕೊಂಡು ಪರಿಶೀಲಿಸುತ್ತಿದ್ದೇವೆ. ಕೋಗಿಲು ಬಡಾವಣೆಯಲ್ಲಿ ಒಟ್ಟು 257 ಮನೆಗಳು ಇದ್ದವು. ಅದರಲ್ಲಿ 157 ಮನೆಗಳನ್ನಷ್ಟೇ ಡೆಮಾಲಿಷನ್ ಮಾಡಲಾಗಿದೆ. ಇವರಲ್ಲಿ ಯಾರು ಅರ್ಹರು ಅನ್ನೋದನ್ನ ಪತ್ತೆ ಮಾಡಲಾಗ್ತಿದೆ ಎಂದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಶ್ರವಣಕುಮಾರನ ಸಾಹಸ… ಟೆಂಪೋ ಡ್ರೈವರ್ ಆಗಿದ್ದವ ನಾಲ್ಕೇ ವರ್ಷದಲ್ಲಿ ವಿಮಾನ ಸಂಸ್ಥೆ ಕಟ್ಟಿದ ಕಥೆ..! – Kannada News | From tempo driver to airlines owner, story of Shankh Air founder Shravan Kumar Vishwakarma

ಕೇಂದ್ರ ಸರ್ಕಾರದಿಂದ ಲೈಸೆನ್ಸ್ ಪಡೆದ ಮೂರು ಹೊಸ ಏರ್ಲೈನ್ ಕಂಪನಿಗಳಲ್ಲಿ ಶಂಖ್ ಏರ್ (Shankh Air) ಒಂದು. ಇದರ ಸ್ಥಾಪನೆ ಹಾಗೂ ಸ್ಥಾಪಕನ ಹಿಂದಿನ ಕಥೆ ನಿಜಕ್ಕೂ ರೋಚಕ. ಮನಸ್ಸಿದ್ದರೆ ಮಾರ್ಗ ಎನ್ನುವುದಕ್ಕೆ ಮಾದರಿ ಶ್ರವಣ್ ಕುಮಾರ್ ವಿಶ್ವಕರ್ಮ (Shravan Kumar Vishwakarma). ಉತ್ತರಪ್ರದೇಶದ ಈ ವ್ಯಕ್ತಿ ಒಂದು ಕಾಲದಲ್ಲಿ ಕಾನಪುರ್​ನ ಬೀದಿಗಳಲ್ಲಿ ಟೆಂಪೋ ಡ್ರೈವರ್ ಆಗಿ ಜೀವನ ನಿರ್ವಹಣೆ ಮಾಡುತ್ತಿದ್ದವ. ಇವತ್ತು ವಿಮಾನ ಕಂಪನಿಯ ಮಾಲೀಕನಾಗಿ ಬೆಳೆದಿದ್ದಾರೆ. ಶಂಖ್ ಏರ್ ಶೀಘ್ರದಲ್ಲೇ ವಿಮಾನಗಳ ಹಾರಾಟ ನಡೆಸಲಿದೆ.

ಶ್ರವಣ್ ಕುಮಾರ್ ವಿಶ್ವಕರ್ಮ ಹೆಚ್ಚು ಓದಲಿಲ್ಲ. ಆಟೊರಿಕ್ಷಾ ಓಡಿಸುತ್ತಿದ್ದರು. ಟೆಂಪೋ ಇಟ್ಟುಕೊಂಡು ಕೆಲ ಬ್ಯುಸಿನೆಸ್​ಗಳಿಗೆ ವಿಫಲ ಯತ್ನ ಮಾಡಿದರು. ಆದರೆ, ಹತಾಶರಾಗಲಿಲ್ಲ. 2014ರಲ್ಲಿ ಸಿಮೆಂಟ್ ಬ್ಯುಸಿನೆಸ್​ಗೆ ಇಳಿದಾಗ ವಿಶ್ವಾಸ ಸಿಕ್ಕಿತು. ಟಿಎಂಟಿ ರೀಬಾರ್ ಉದ್ಯಮ ಕೈಹಿಡಿಯಿತು. ಸಿಮೆಂಟ್, ಮೈನಿಂಗ್ ಮತ್ತು ಟ್ರಾನ್ಸ್​ಪೋರ್ಟ್ ಸೆಕ್ಟರ್​ನಲ್ಲಿ ಬ್ಯುಸಿನೆಸ್ ಬೆಳೆಸಿದರು. ಹಲವು ಟ್ರಕ್​ಗಳನ್ನು ಖರೀದಿಸಿದರು. ಈ ಹಂತದಲ್ಲೇ ಅವರಿಗೆ ಭವಿಷ್ಯದ ಯೋಜನೆಗಳು ಮನಸ್ಸಿಗೆ ಬಂದವು. ಅಂಥ ಒಂದು ಆಲೋಚನೆಯ ಕುಡಿಯೇ ಶಂಖ್ ಏರ್.

ಇದನ್ನೂ ಓದಿ: ಬರಲಿವೆ ಹೊಸ ಏರ್ಲೈನ್ಸ್; ಶಂಖ್ ಏರ್ ಆಯ್ತು, ಈಗ ಅಲ್ ಹಿಂದ್ ಏರ್ ಮತ್ತು ಫ್ಲೈ ಎಕ್ಸ್​ಪ್ರೆಸ್​ಗೂ ಸಿಕ್ಕಿತು ಎನ್​ಒಸಿ

ನಾಲ್ಕು ವರ್ಷದ ಹಿಂದೆ, ಟ್ರಕ್​ನಂತೆ ವಿಮಾನಗಳನ್ನೂ ಓಡಿಸಬೇಕೆಂಬ ಆಲೋಚನೆ ವಿಶ್ವಕರ್ಮರ ತಲೆಯಲ್ಲಿ ಮೊದಲಿಟ್ಟಿತು. ಅಷ್ಟಕ್ಕೇ ಅದು ನಿಲ್ಲಲಿಲ್ಲ. ವಿಮಾನ ಸಂಸ್ಥೆ ಕಟ್ಟಲು ಏನು ಬೇಕು, ಆ ಉದ್ಯಮ ಹೇಗೆ ಕೆಲಸ ಮಾಡುತ್ತೆ ಎಂಬುದನ್ನು ಅರಿಯಲು ಯತ್ನಿಸಿದರು. ತಮ್ಮ ಟ್ರಾನ್ಸ್​ಪೋರ್ಟ್ ಬ್ಯುಸಿನೆಸ್​ನಲ್ಲಿ ವಿಮಾನದ ಸೇವೆಯನ್ನೂ ನಡೆಸಿ ಅನುಭವ ಇದ್ದ ಕಾರಣ ಶಂಖ್ ಏರ್​ಗೆ ಸರ್ಕಾರದಿಂದ ಎನ್​ಒಸಿ ಕೂಡ ಸಿಕ್ಕಿತು.

ಬಸ್, ಟೆಂಪೋದಂತೆ ವಿಮಾನವೂ ಕೂಡ ಒಂದು ಸಾರಿಗೆ ವಾಹನ ಎನ್ನುವ ವಿಶ್ವಕರ್ಮ

ವಿಮಾನಗಳ ಬಗ್ಗೆ ಶ್ರವಣಕುಮಾರ್ ವಿಶ್ವಕರ್ಮ ಅವರಿಗಿರುವ ಧೋರಣೆ ಗಮನಾರ್ಹ ಎನಿಸುತ್ತದೆ. ಅವರ ಪ್ರಕಾರ ವಿಮಾನ ಎಂಬುದು ಬಸ್ ಅಥವಾ ಟೆಂಪೋ ರೀತಿಯಲ್ಲೇ ಒಂದು ಸಾರಿಗೆ ವಾಹನ ಮಾತ್ರ. ಅದನ್ನು ಬೇರೆ ರೀತಿಯಲ್ಲಿ ನೋಡಬಾರದು ಎಂದು ಶಂಖ್ ಏರ್​ನ ಛೇರ್ಮನ್ ಆಗಿರುವ ಅವರು ಹೇಳುತ್ತಾರೆ.

ಇದನ್ನೂ ಓದಿ: ರಿಸರ್ಚ್ ಅನಾಲಿಸ್ಟ್ ಲೈಸೆನ್ಸ್ ಪಡೆದು, ಯಾರಿಗೋ ಪಾಸ್ವರ್ಡ್ ಕೊಟ್ಟು, ದಿನಸಿ ಅಂಗಡಿ ನಡೆಸುತ್ತಿದ್ದ ವ್ಯಕ್ತಿ

ಶಂಖ್ ಏರ್ ಇದೇ ಜನವರಿ ತಿಂಗಳಲ್ಲಿ ಕಾರ್ಯಾಚರಣೆಗೆ ಇಳಿಯುತ್ತದೆ. ಆರಂಭದಲ್ಲಿ ಏರ್​ಬಸ್​ನ ಮೂರು ವಿಮಾನಗಳನ್ನು ಬಾಡಿಗೆಗೆ ಪಡೆಯಲಾಗಿದೆ. ಲಕ್ನೋ, ಮುಂಬೈ, ದೆಹಲಿ ಮತ್ತಿತರ ಕೆಲ ನಗರಗಳಿಗೆ ಇವರ ವಿಮಾನಗಳ ಹಾರಾಟ ನಡೆಯುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಗುವಾಹಟಿ-ಕೊಲ್ಕತ್ತಾ ಮಾರ್ಗದಲ್ಲಿ ಶೀಘ್ರದಲ್ಲೇ ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ – Kannada News | New Vande Bharat sleeper train to To Run on Guwahati Kolkata Route it has advanced safety system, world class coaches

ನವದೆಹಲಿ, ಜನವರಿ 1: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲು (Vande Bharat Sleeper Train) ಗುವಾಹಟಿ-ಕೊಲ್ಕತ್ತಾ ಮಾರ್ಗದಲ್ಲಿ ಸಂಚಾರ ನಡೆಸಲಿದ್ದು, ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ ಇದನ್ನು ಉದ್ಘಾಟಿಸಲಿದ್ದಾರೆ. ಕೊಲ್ಕತ್ತಾದಿಂದ ಗುವಾಹಟಿಗೆ ಹೋಗುವ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಲಿದ್ದಾರೆ. ಮುಂದಿನ 15-20 ದಿನಗಳಲ್ಲಿ ಅಂದರೆ ಜನವರಿ 18 ಅಥವಾ 19ರ ಸುಮಾರಿಗೆ ವಂದೇ ಭಾರತ್ ಸ್ಲೀಪರ್ ರೈಲಿನ ಉದ್ಘಾಟನೆ ನಡೆಯುವ ನಿರೀಕ್ಷೆಯಿದೆ ಎಂದು ಕೇಂದ್ರ ರೈಲು ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಹೊಸ ಸ್ಲೀಪರ್ ರೈಲಿನ ಪರೀಕ್ಷೆ ಈಗಾಗಲೇ ಪೂರ್ಣಗೊಂಡಿದೆ.

“ಬಹಳ ದಿನಗಳಿಂದ ಹೊಸ ಪೀಳಿಗೆಯ ರೈಲುಗಳಿಗೆ ಬೇಡಿಕೆ ಹೆಚ್ಚಾಗಿದೆ. ವಂದೇ ಭಾರತ್ ಚೇರ್ ಕಾರ್ ಭಾರತೀಯ ರೈಲ್ವೆಯಲ್ಲಿ ಹೊಸ ಯುಗವನ್ನು ಪ್ರಾರಂಭಿಸಿದೆ. ಜನರು ಇದನ್ನು ತುಂಬಾ ಇಷ್ಟಪಡಲು ಪ್ರಾರಂಭಿಸಿದ್ದಾರೆ. ವಂದೇ ಭಾರತ್ ರೈಲುಗಳನ್ನು ಓಡಿಸಲು ದೇಶದ ಮೂಲೆ ಮೂಲೆಗಳಿಂದ ಬೇಡಿಕೆಗಳು ಬರುತ್ತಿವೆ” ಎಂದು ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಎರ್ನಾಕುಲಂ ವಂದೇ ಭಾರತ್ ರೈಲಿಗೆ ಮುಗಿಬೀಳ್ತಿದ್ದಾರೆ ಪ್ರಯಾಣಿಕರು! ಒಂದೇ ತಿಂಗಳಲ್ಲಿ 55 ಸಾವಿರ ಮಂದಿ ಸಂಚಾರ

ಹೊಸ ದರಗಳ ಪ್ರಕಾರ, 3ನೇ ಎಸಿ ಕೋಚ್‌ಗಳ ದರ ಆಹಾರ ಸೇರಿದಂತೆ 2,300 ರೂ., 2ನೇ ಎಸಿ ದರ 3,000 ರೂ. ಮತ್ತು 3ಡಿಡಿ ಎಸಿ ಕೋಚ್‌ಗಳ ದರ 3,600 ರೂ. ಆಗಿರುತ್ತದೆ. ಈ ಎಲ್ಲಾ ದರಗಳು ಆಹಾರವನ್ನು ಒಳಗೊಂಡಿರುತ್ತವೆ. “ಇದರ ಪ್ರಯಾಣ ದರವನ್ನು ವಿಮಾನದ ದರಕ್ಕಿಂತ ಕಡಿಮೆ ಇರಿಸಲಾಗಿದೆ. ಗುವಾಹಟಿಯಿಂದ ಹೌರಾಗೆ ವಿಮಾನ ದರ ಸಾಮಾನ್ಯವಾಗಿ 6,000 ರೂ.ನಿಂದ 8,000 ರೂ.ವರೆಗೆ ಇರುತ್ತದೆ. ವಂದೇ ಭಾರತ್ ರೈಲಿನಲ್ಲಿ 3ನೇ ಎಸಿ ದರವು ಊಟ ಸೇರಿದಂತೆ ಸುಮಾರು 2,300 ರೂ. ಇರಲಿದೆ. 2ನೇ ಎಸಿಗೆ ಸುಮಾರು 3,000 ರೂ. ಮತ್ತು 1ನೇ ಎಸಿಗೆ ಸುಮಾರು 3,600 ರೂ. ಆಗಿರುತ್ತದೆ. ಸಾಮಾನ್ಯ ಜನರನ್ನು ಗಮನದಲ್ಲಿಟ್ಟುಕೊಂಡು ಈ ದರಗಳನ್ನು ನಿಗದಿಪಡಿಸಲಾಗಿದೆ” ಎಂದು ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

“ವಂದೇ ಭಾರತ್ ಸ್ಲೀಪರ್ ರೈಲನ್ನು ಸಾವಿರ ಕಿಲೋಮೀಟರ್‌ಗಳಿಗೂ ಹೆಚ್ಚಿನ ದೂರದ ಪ್ರಯಾಣವನ್ನು ಗಮನದಲ್ಲಿಟ್ಟುಕೊಂಡು ವಿನ್ಯಾಸಗೊಳಿಸಲಾಗಿದೆ. ಈ ರೈಲು ದೂರದ ಪ್ರಯಾಣಿಕರಿಗೆ ವೇಗದ, ಆರಾಮದಾಯಕ ಮತ್ತು ಆಧುನಿಕ ಪ್ರಯಾಣದ ಅನುಭವವನ್ನು ನೀಡುತ್ತದೆ. ವಂದೇ ಭಾರತ್ ಸ್ಲೀಪರ್ ಸುಧಾರಿತ ಸುರಕ್ಷತಾ ವೈಶಿಷ್ಟ್ಯಗಳು, ಸುಧಾರಿತ ಸಸ್ಪೆನ್ಷನ್ ವ್ಯವಸ್ಥೆ ಮತ್ತು ರಾತ್ರಿ ಪ್ರಯಾಣವನ್ನು ಹೆಚ್ಚು ಅನುಕೂಲಕರವಾಗಿಸಲು ವಿಶ್ವ ದರ್ಜೆಯ ಸ್ಲೀಪರ್ ಕೋಚ್‌ಗಳನ್ನು ಹೊಂದಿದೆ” ಎಂದು ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಹೋಗುವವರಿಗೆ ಗುಡ್​​​ ನ್ಯೂಸ್​​ ನೀಡಿದ ಕೇಂದ್ರ, ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರಕ್ಕೆ ಸಿದ್ಧ

ಈ ವಂದೇ ಭಾರತ್ ಸ್ಲೀಪರ್ ರೈಲಿಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ವಾರಾಂತ್ಯದೊಳಗೆ ನೀಡಲಾಗುವುದು ಎಂದು ಸಚಿವ ಅಶ್ವಿನಿ ವೈಷ್ಣವ್ ಭರವಸೆ ನೀಡಿದರು. ಮೊದಲ ಹಂತವಾಗಿ ಎರಡು ಸ್ಲೀಪರ್ ರೈಲುಗಳನ್ನು ಪ್ರಾರಂಭಿಸಲಾಗುವುದು. ಇವು ಎರಡೂ ಕಡೆಯಿಂದ ಕಾರ್ಯನಿರ್ವಹಿಸುತ್ತವೆ. ಪ್ರಯಾಣವು ರಾತ್ರಿಯದ್ದಾಗಿರುತ್ತದೆ. ರೈಲಿನಲ್ಲಿ ರಾತ್ರಿ ಭೋಜನ ಮತ್ತು ಬೆಳಿಗ್ಗೆ ಚಹಾವನ್ನು ನೀಡಲಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ ಮಿಸ್​​ – Kannada News | Drunk Driver Rams Car Into Multiple Pedestrians near Mall of Asia in Bengaluru

ದೇವನಹಳ್ಳಿ, ಜನವರಿ 01: ಹೊಸ ವರ್ಷದ ಹಿನ್ನಲೆ ಕಂಠ ಪೂರ್ತಿ ಕುಡಿದ ಕಾರು ಚಾಲಕನೊಬ್ಬ ಮದ್ಯದ ಅಮಲಿನಲ್ಲಿ ಪಾದಚಾರಿಗಳ ಮೇಲೆ ಕಾರು ಹರಿಸಿರುವ ಘಟನೆ ಬೆಂಗಳೂರಿನ ಸಹಕಾರ ನಗರದಲ್ಲಿರುವ ಮಾಲ್ ಆಫ್​​ ಏಷ್ಯಾದ ಗೇಟ್ ನಂ.3ರಲ್ಲಿ ನಿನ್ನೆ ರಾತ್ರಿ ನಡೆದಿದೆ. ಈ ವೇಳೆ ಅದೃಷ್ಟವಶಾತ್​​ ಕೂದಲೆಳೆ ಅಂತರದಲ್ಲಿ ಬಾಲಕಿ ಬಚಾವ್​​ ಆಗಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಚಾಲಕ ಮದ್ಯದಮಲಿನಲ್ಲಿದ್ದ ಹಿನ್ನೆಲೆ ಮಾಲ್​ನಿಂದ ಹೊರಗೆ ಬರುವಾಗ ಕಾರು ನಿಯಂತ್ರಣ ತಪ್ಪಿದೆ. ಹೀಗಾಗಿ ಫುಟ್‌ಪಾತ್​​ಗೆ ಕಾರು ನುಗ್ಗಿದ ಪರಿಣಾಮ 7 ಜನರು ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಕಾರು‌ ಚಾಲಕ ಸುನೀಲ್ ಕುಮಾರ್ ಸಿಂಗ್ ಮತ್ತು ಮಾಲ್ ಆಫ್​​ ಏಷ್ಯಾ ಆಡಳಿತ ಮಂಡಳಿ ವಿರುದ್ಧ ಸಂಜಯ್​​ನಗರ ಸಂಚಾರಿ ಠಾಣೆ ಪೊಲೀಸರು ಸುಮೋಟೋ ಕೇಸ್​ ದಾಖಲಿಸಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

T20 World Cup 2026: ಟಿ20 ವಿಶ್ವಕಪ್​ಗೆ 6 ತಂಡಗಳು ಪ್ರಕಟ

Source link

ನಟನೆ ಆರಂಭಿಸಿದ ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ – Kannada News | AR Rahman acting in a movie with Prabhudeva

ಎಆರ್ ರೆಹಮಾನ್ (AR Rahman), ಭಾರತ ಚಿತ್ರರಂಗದ ಲೆಜೆಂಡರಿ ಸಂಗೀತ ನಿರ್ದೇಶಕ. ಕಳೆದ ಕೆಲವು ದಶಕಗಳಿಂದಲೂ ಸಂಗೀತ ಕ್ಷೇತ್ರದಲ್ಲಿ ನಂಬರ್ 1 ಸ್ಥಾನದಲ್ಲಿದ್ದಾರೆ ಎಆರ್ ರೆಹಮಾನ್. ಹಲವಾರು ಹೊಸ ಸಂಗೀತ ನಿರ್ದೇಶಕರು ಬಂದು ಹೋದರೂ ಸಹ ರೆಹಮಾನ್ ಸಂಗೀತ ಇಂದಿಗೂ ಸೂಪರ್ ಹಿಟ್ ಆಗುತ್ತಿದೆ. ಭಾರತದ ಸಿನಿಮಾಗಳು ಮಾತ್ರವೇ ಅಲ್ಲದೆ ಹಾಲಿವುಡ್​​ನಲ್ಲೂ ಬೇಡಿಕೆ ಹೊಂದಿದ್ದಾರೆ ಎಆರ್ ರೆಹಮಾನ್. ಸಂಗೀತ ಕ್ಷೇತ್ರದಲ್ಲಿ ಬಹಳ ಬ್ಯುಸಿ ಆಗಿರುವ ಹೊತ್ತಿನಲ್ಲಿಯೇ ರೆಹಮಾನ್, ನಟನೆಯನ್ನೂ ಆರಂಭಿಸಿದ್ದಾರೆ.

ರೆಹಮಾನ್ ಅವರು ಈ ಹಿಂದೆ ಕೆಲವು ಆಲ್ಬಂ ಹಾಡುಗಳಲ್ಲಿ ಕಾಣಿಸಿಕೊಂಡಿದ್ದಾರೆ, ಕೆಲವು ಹಾಡುಗಳಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಇತ್ತೀಚೆಗೆ ಕೆಲವು ಯೂಟ್ಯೂಬ್ ವಿಡಿಯೋಗಳಲ್ಲಿಯೂ ಸಹ ಕಾಣಿಸಿಕೊಂಡಿದ್ದಾರೆ ಆದರೆ ಎಂದೂ ಸಹ ಪೂರ್ಣ ಪ್ರಮಾಣದ ಪಾತ್ರದಲ್ಲಿ ನಟಿಸಿದ್ದೇ ಇಲ್ಲ. ಆದರೆ ಇದೀಗ ಎಆರ್ ರೆಹಮಾನ್ ಅವರು ಮೊದಲ ಬಾರಿಗೆ ಸಿನಿಮಾ ಪಾತ್ರವೊಂದರಲ್ಲಿ ನಟಿಸಲು ಮುಂದಾಗಿದ್ದಾರೆ. ರೆಹಮಾನ್ ಅವರ ಈ ಸಾಹಸ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ಎಆರ್ ರೆಹಮಾನ್ ಅವರು ತಮಿಳಿನ ‘ಮೂನ್ ವಾಕ್’ ಹೆಸರಿನ ಸಿನಿಮಾದ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ. ‘ಮೂನ್ ವಾಕ್’ ಸಿನಿಮಾದ ನಾಯಕ ಖ್ಯಾತ ನಟ ಪ್ರಭುದೇವ. ಎಆರ್ ರೆಹಮಾನ್ ಮತ್ತು ಪ್ರಭುದೇವ ಬಹಳ ಒಳ್ಳೆಯ ಗೆಳೆಯರು. ಇದೇ ಸಲುಗೆಯ ಕಾರಣಕ್ಕೆ ರೆಹಮಾನ್ ಅವರು ಮೊದಲ ಬಾರಿಗೆ ಸಿನಿಮಾನಲ್ಲಿ ಪಾತ್ರವೊಂದರಲ್ಲಿ ನಟಿಸಲು ಒಪ್ಪಿಗೆ ಸೂಚಿಸಿದ್ದಾರೆ. ಮನೋಜ್ ಎನ್​​ಎಸ್ ಎಂಬುವರು ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ಬಿಹೈಂದ್ ವೂಡ್ಸ್ ನಿರ್ಮಾಣ ಸಂಸ್ಥೆ ಸಿನಿಮಾದ ನಿರ್ಮಾಣ ಮಾಡಲಿದೆ.

ಇದನ್ನೂ ಓದಿ:ಮೈಸೂರು ಮೋಹನ್ ಸಂಗೀತ, ಹಿಮಾ ಎಂ. ಕಂಠದಲ್ಲಿ ಹೊಸ ವರ್ಷದ ಸಾಂಗ್

‘ಮೂನ್​ವಾಕ್’ ಹೆಸರೇ ಸೂಚಿಸುತ್ತಿರುವ ನೃತ್ಯದ ವಿಷಯ ಹೊಂದಿರುವ ಹಾಸ್ಯ ಪ್ರಧಾನ ಸಿನಿಮಾ ಇದಾಗಿದೆ. ಸಿನಿಮಾನಲ್ಲಿ ಎಆರ್ ರೆಹಮಾನ್ ಕೋಪಿಷ್ಟ ಸಿನಿಮಾ ನಿರ್ದೇಶಕನ ಪಾತ್ರದಲ್ಲಿ ನಟಿಸಲಿದ್ದಾರೆ. ‘ಮೂನ್​​ವಾಕ್’ ಸಿನಿಮಾನಲ್ಲಿ ಎಆರ್ ರೆಹಮಾನ್ ನಿರ್ವಹಿಸುತ್ತಿರುವ ಪಾತ್ರದ ಹೆಸರೂ ಸಹ ಎಆರ್ ರೆಹಮಾನ್ ಆಗಿರಲಿದೆ. ಆದರೆ ಅಲ್ಲಿ ಅವರದ್ದು ಸಿನಿಮಾ ನಿರ್ದೇಶಕನ ಪಾತ್ರ. ಅದು ಮಾತ್ರವೇ ಅಲ್ಲದೆ, ‘ಮೂನ್​​ವಾಕ್’ ಸಿನಿಮಾದ ಎಲ್ಲ ಐದೂ ಹಾಡುಗಳನ್ನು ರೆಹಮಾನ್ ಅವರೇ ಹಾಡಿರುವುದು ಮತ್ತೊಂದು ವಿಶೇಷ. ಈ ಹಿಂದೆ ಪೂರ್ಣ ಸಿನಿಮಾ ಆಲ್ಬಂನಲ್ಲಿ ರೆಹಮಾನ್ ಒಬ್ಬರೇ ಹಾಡಿದ್ದೇ ಇಲ್ಲ.

ಸಿನಿಮಾದ ಹಲವು ದೃಶ್ಯಗಳ ಚಿತ್ರೀಕರಣವನ್ನು ರೆಹಮಾನ್ ಅವರು ಈಗಾಗಲೇ ಮುಗಿಸಿದ್ದಾರೆ. ಇನ್ನು ಕೆಲವು ದೃಶ್ಯಗಳಷ್ಟೆ ಬಾಕಿ ಇವೆಯಂತೆ. ಸಿನಿಮಾ ನಟನೆಯನ್ನು ಬಹಳ ಎಂಜಾಯ್ ಮಾಡಿರುವುದಾಗಿ ರೆಹಮಾನ್ ಹೇಳಿಕೊಂಡಿದ್ದಾರೆ. ರೆಹಮಾನ್ ಅವರು ಸಂಗೀತ ನೀಡಿರುವ ‘ಪೆದ್ದಿ’ ಸಿನಿಮಾದ ಹಾಡುಗಳು ಸಖತ್ ಹಿಟ್ ಆಗಿವೆ. ಇದರ ಜೊತೆಗೆ ರೆಹಮಾನ್ ‘ರಾಮಾಯಣ’ ಸಿನಿಮಾಕ್ಕೂ ಸಂಗೀತ ನೀಡುತ್ತಿದ್ದಾರೆ. ಪ್ರಸ್ತುತ ಅವರ ಕೈಯಲ್ಲಿ 15ಕ್ಕೂ ಹೆಚ್ಚು ಸಿನಿಮಾಗಳಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಹುಣಸೆಹಣ್ಣನ್ನು ಚಪ್ಪರಿಸಿ ತಿನ್ನುವವರಿಗೆ ಈ ಆರೋಗ್ಯ ಸಮಸ್ಯೆಗಳು ಎಂದಿಗೂ ಬರುವುದಿಲ್ಲ – Kannada News | Unlock Tamarind’s Power: A Superfood You Need

ಹುಣಸೆಹಣ್ಣು (Tamarind’s) ಎಂಬ ಹೆಸರು ಕೇಳಿದಾಕ್ಷಣ ಯಾರಿಗಾದರೂ ಬಾಯಲ್ಲಿ ನೀರು ಬರುವುದು ಸಹಜ. ಹುಳಿ ಮತ್ತು ಸಿಹಿಯ ಮಿಶ್ರಣವಾದ ಹುಣಸೆಹಣ್ಣು ತಿನ್ನುವುದಕ್ಕೆ ರುಚಿಕರ ಮಾತ್ರವಲ್ಲ, ಆರೋಗ್ಯ ಪ್ರಯೋಜನಗಳಿಂದಲೂ ಸಮೃದ್ಧವಾಗಿದೆ. ಸಾಮಾನ್ಯವಾಗಿ ಹುಣಸೆಹಣ್ಣನ್ನು ಅದರ ಸುವಾಸನೆ ಮತ್ತು ಅದರಲ್ಲಿರುವ ರುಚಿಗೆ ಅನೇಕ ಭಕ್ಷ್ಯಗಳಲ್ಲಿ ಬಳಸಲಾಗುತ್ತದೆ. ಇದಿಲ್ಲದೆ ಕೆಲವು ಆಹಾರಗಳು ಅಪೂರ್ಣ ಎನಿಸಿಕೊಳ್ಳುತ್ತವೆ. ಹಾಗಾದರೆ ಹುಣಸೆಹಣ್ಣು ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೇನು, ಯಾಕಾಗಿ ಸೇವನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.

ಹುಣಸೆಹಣ್ಣಿನಲ್ಲಿ ಉತ್ಕರ್ಷಣ ನಿರೋಧಕಗಳು, ಫೈಟೊಕೆಮಿಕಲ್‌ಗಳು, ವಿಟಮಿನ್ ಎ, ಸಿ, ಇ, ಕೆ, ಬಿ6, ಮೆಗ್ನೀಸಿಯಮ್, ರಂಜಕ, ಕ್ಯಾಲ್ಸಿಯಂ, ಪ್ರೋಟೀನ್ ಮತ್ತು ಇತರ ಅಗತ್ಯ ಪೋಷಕಾಂಶಗಳಿವೆ. ಇವು ದೇಹವನ್ನು ವಿವಿಧ ಆರೋಗ್ಯ ಸಮಸ್ಯೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಹುಣಸೆಹಣ್ಣು ತಿನ್ನುವುದರಿಂದ ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಜೊತೆಗೆ, ತೂಕವನ್ನು ಕಡಿಮೆ ಮಾಡಿಕೊಳ್ಳುವ ಮೂಲಕ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು.

ರಕ್ತದೊತ್ತಡವನ್ನು ನಿಯಂತ್ರಿಸಲು ಸಹಕಾರಿ

ಹುಣಸೆಹಣ್ಣು ವಿಟಮಿನ್ ಸಿ ಯಿಂದ ಸಮೃದ್ಧವಾಗಿದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಬಲವಾದ ರೋಗನಿರೋಧಕ ಶಕ್ತಿ ದೇಹವನ್ನು ಅನೇಕ ರೀತಿಯ ಸೋಂಕುಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಆದರೆ ಇದರ ಸೇವನೆ ಮಿತವಾಗಿರಲಿ. ಮುಟ್ಟಿನ ಸಮಯದಲ್ಲಿ ಮಹಿಳೆಯರು ಅನುಭವಿಸುವ ಅಸ್ವಸ್ಥತೆಗೆ ಹುಣಸೆಹಣ್ಣು ಒಳ್ಳೆಯದು. ಇದು ಮುಟ್ಟಿನ ಸೆಳೆತವನ್ನು ನಿವಾರಿಸಲು, ದೇಹದಲ್ಲಿ ಎಲ್ಡಿಎಲ್ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ಎಚ್ಡಿಎಲ್ ಕೊಲೆಸ್ಟ್ರಾಲ್ ಹೆಚ್ಚಿಸಲು ಸಹಕಾರಿಯಾಗಿದೆ ಅಷ್ಟು ಮಾತ್ರವಲ್ಲ, ಇದು ರಕ್ತದೊತ್ತಡ ಮತ್ತು ಹೃದಯ ಬಡಿತವನ್ನು ನಿಯಂತ್ರಿಸಲು ಮತ್ತು ದೇಹದ ದ್ರವಗಳನ್ನು ಸಮತೋಲನಗೊಳಿಸಲು ಉಪಯುಕ್ತವಾಗಿದೆ.

ಇದನ್ನೂ ಓದಿ: ಚರ್ಮರೋಗ ಇದ್ಯಾ? ಚಳಿಗಾಲದಲ್ಲಿ ಸ್ನಾನ ಮಾಡುವಾಗ ಈ ತಪ್ಪು ಮಾಡಿದ್ರೆ ಸಮಸ್ಯೆ ಉಲ್ಬಣವಾಗುವುದು ಗ್ಯಾರೆಂಟಿ

ಚರ್ಮದ ಮೇಲಿನ ಸುಕ್ಕುಗಳಿಂದ ಮುಕ್ತಿ ನೀಡುತ್ತದೆ:

ಹುಣಸೆ ನೀರು ಮೊಡವೆಗಳಿಗೆ ರಾಮಬಾಣವಾಗಿದೆ. ಇದು ಚರ್ಮದ ಮೇಲಿನ ಸುಕ್ಕುಗಳು ಮತ್ತು ಕಲೆಗಳನ್ನು ತೆಗೆದುಹಾಕುತ್ತದೆ. ಸಣ್ಣ ಗಾಯಗಳು ಮತ್ತು ಸುಟ್ಟ ಗಾಯಗಳಿಂದ ಉಂಟಾಗುವ ಗುರುತುಗಳನ್ನು ತೆಗೆಯಲು ಸಹಾಯ ಮಾಡುತ್ತದೆ. ಜೊತೆಗೆ ಕೂದಲನ್ನು ಆರೋಗ್ಯಕರವಾಗಿ ಮತ್ತು ಬಲವಾಗಿಡಲು ಸಹಾಯ ಮಾಡುತ್ತದೆ. ಹಾಗಾಗಿ ಇದನ್ನು ಮಿತವಾಗಿ ಸೇವನೆ ಮಾಡುವುದರಿಂದ ಅನೇಕ ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:46 pm, Thu, 1 January 26

Source link

ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು – Kannada News | Kogilu Layout Housing Row: No Housing for Non Kannadigas in Kogilu Layout; Zameer Khan

ಬೆಂಗಳೂರು, ಜನವರಿ 01: ಕರ್ನಾಟಕದವರಲ್ಲದೆ ಹೊರಗಿನವರಿಗೆ ಹೇಗೆ ಮನೆ ಕೊಡಲು ಸಾಧ್ಯ? ಬಾಂಗ್ಲಾದೇಶದವರು ಹೇಗೆ ಬೆಂಗಳೂರಿನಲ್ಲಿ ಇರಲು ಸಾಧ್ಯ? ಹಾಗೇನಾದ್ರೂ ಅವರು ಬಾಂಗ್ಲಾದೇಶದವರಾಗಿದ್ದರೆ ಸಾಬೀತುಪಡಿಸಲಿ. ಬಾಯಿಗೆ ಬಂದಂತೆ ಮಾತನಾಡಬಾರದು ಎಂದು ವಿಪಕ್ಷ ನಾಯಕ ಆರ್​​. ಅಶೋಕ್​​ಗೆ ವಸತಿ ಸಚಿವ ಜಮೀರ್​​ ತಿರುಗೇಟು ನೀಡಿದ್ದಾರೆ. ಕರ್ನಾಟಕದವರನ್ನು ಬಿಟ್ಟು ಹೊರಗಿನವರಿಗೆ ಮನೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Source link

ವರ್ಷದ ಮೊದಲ ದಿನದಂದೇ ಸ್ಫೋಟಕ ಶತಕ ಸಿಡಿಸಿದ ಮಿಚೆಲ್ ಮಾರ್ಷ್ – Kannada News | Mitchell Marsh’s BBL Century: Perth Scorchers Captain Smashes 102 After T20 WC Squad

ಆಸ್ಟ್ರೇಲಿಯಾದ ಟಿ20 ನಾಯಕ ಮಿಚೆಲ್ ಮಾರ್ಷ್ 2025-26ರ ಬಿಗ್ ಬ್ಯಾಷ್ ಲೀಗ್​ನ 19 ನೇ ಪಂದ್ಯದಲ್ಲಿ ಹೋಬಾರ್ಟ್ ಹರಿಕೇನ್ಸ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿ ಮಿಂಚಿದ್ದಾರೆ. ಜನವರಿ 1, 2026 ರಂದು ಹೋಬಾರ್ಟ್‌ನ ಬೆಲ್ಲೆರಿವ್ ಓವಲ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪರ್ತ್ ಸ್ಕಾರ್ಚರ್ಸ್ 20 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 229 ರನ್ ಗಳಿಸಿತು. 2026 ರ ಟಿ20 ವಿಶ್ವಕಪ್‌ಗೆ ಆಸ್ಟ್ರೇಲಿಯಾ ತಂಡವನ್ನು ಘೋಷಿಸಿದ ಕೆಲವು ಗಂಟೆಗಳ ನಂತರ ಮಿಚೆಲ್ ಮಾರ್ಷ್ ಈ ಇನ್ನಿಂಗ್ಸ್ ಆಡಿದರು.

ಈ ಪಂದ್ಯದಲ್ಲಿ ಇನ್ನಿಂಗ್ಸ್ ಆರಂಭಿಸಿದ ಮಿಚೆಲ್ ಮಾರ್ಷ್ ಕೇವಲ 58 ಎಸೆತಗಳಲ್ಲಿ 102 ರನ್ ಗಳಿಸಿ ಸ್ಫೋಟಕ ಇನ್ನಿಂಗ್ಸ್ ಆಡಿದರು. ಅವರ ಇನ್ನಿಂಗ್ಸ್ 11 ಬೌಂಡರಿಗಳು ಮತ್ತು 5 ಸಿಕ್ಸರ್‌ಗಳನ್ನು ಒಳಗೊಂಡಿತ್ತು. ಕೇವಲ 55 ಎಸೆತಗಳಲ್ಲಿ ತಮ್ಮ ಶತಕವನ್ನು ಪೂರೈಸಿದ ಮಾರ್ಷ್​ಗೆ ಇದು ಬಿಬಿಎಲ್ ವೃತ್ತಿಜೀವನದ ಎರಡನೇ ಶತಕವಾಗಿದೆ.

ಈ ಪಂದ್ಯದಲ್ಲಿ, ಮಿಚೆಲ್ ಮಾರ್ಷ್ ಹೊರತುಪಡಿಸಿ, ಆರನ್ ಹಾರ್ಡಿ ಕೂಡ ಪರ್ತ್ ಸ್ಕಾರ್ಚರ್ಸ್ ಪರ ಅದ್ಭುತ ಇನ್ನಿಂಗ್ಸ್ ಆಡಿದರು. ಆರನ್ ಹಾರ್ಡಿ 43 ಎಸೆತಗಳಲ್ಲಿ 94 ರನ್ ಗಳಿಸಿ ಅಜೇಯರಾಗಿ ಉಳಿದರು. ಅವರ ಇನ್ನಿಂಗ್ಸ್ ಒಂಬತ್ತು ಬೌಂಡರಿಗಳು ಮತ್ತು ಐದು ಸಿಕ್ಸರ್‌ಗಳನ್ನು ಒಳಗೊಂಡಿತ್ತು. ಈ ಗುರಿ ಬೆನ್ನಟ್ಟಿದ ಹೋಬಾರ್ಟ್ ಹರಿಕೇನ್ಸ್ 189 ರನ್ ಕಲೆಹಾಕಲಷ್ಟೇ ಶಕ್ತವಾಗಿ 40 ರನ್​ಗಳಿಂದ ಸೊಲೊಪ್ಪಿಕೊಂಡಿತು.

Source link

ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು? – Kannada News | People in Bengaluru walked 26 km to advocate for better footpaths and pedestrian rights

ಬೆಂಗಳೂರು, ಜನವರಿ 01: ಪಾದಚಾರಿ ಮಾರ್ಗದ ಅಗತ್ಯ ಮತ್ತು ಪಾದಚಾರಿಗಳ ಹಕ್ಕು ಸಾರುವ ನಿಟ್ಟಿನಲ್ಲಿ 26 ಕಿ.ಮೀ. ನಡಿಗೆ ಬೆಂಗಳೂರಲ್ಲಿ ನಡೆದಿದೆ. ದಕ್ಷಿಣ ಬೆಂಗಳೂರಿನ ಆರ್‌ವಿ ರೋಡ್ ಮೆಟ್ರೋ ನಿಲ್ದಾಣದಿಂದ ಉತ್ತರ ಬೆಂಗಳೂರಿನ ಓರಾಯನ್ ಮಾಲ್ ಸಮೀಪದ ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಮೆಟ್ರೋ ನಿಲ್ದಾಣದವರೆಗೆ ಪಾದಚಾರಿಗಳು ಹೆಜ್ಜೆ ಹಾಕಿದ್ದಾರೆ. ಲಾಲ್‌ಬಾಗ್, ಜಯನಗರ, ಕಬ್ಬನ್ ಪಾರ್ಕ್, ಉಲ್ಸೂರು ಕೆರೆ, ಶಿವಾಜಿನಗರ ಮತ್ತು ಮೇಖ್ರಿ ಸರ್ಕಲ್ ಸೇರಿದಂತೆ ನಗರದ ಪ್ರಮುಖ ಸ್ಥಳಗಳ ಮೂಲಕ ಪಾದಚಾರಿಗಳು ಸಾಗಿದ್ದಾರೆ. ವಾಕಲೂರು ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಸಂಯುಕ್ತವಾಗಿ ಕಾರ್ಯಕ್ರಮ ಆಯೋಜಿಸಿತ್ತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link