Category Archives: Blog

Your blog category

‘ಪೆದ್ದಿ’ ಚಿತ್ರದ  ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ನಿರ್ದೇಶಕ; ಹೊಸ ದೃಶ್ಯಗಳ ಸೇರ್ಪಡೆ  – Kannada News | Ram Charan’s Peddi Reigns Box Office: New Scenes Added to Smash Hit Film

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅಭಿನಯದ ಇತ್ತೀಚಿನ ಸೂಪರ್ ಹಿಟ್ ಸಿನಿಮಾ ‘ಪೆದ್ದಿ’ (Peddi Movie) ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಜೂನ್ 4 ರಂದು ವಿಶ್ವಾದ್ಯಂತ ತೆರೆಕಂಡ ಈ ಚಿತ್ರವು ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಭರ್ಜರಿ ಪ್ರಶಂಸೆ ಪಡೆದುಕೊಂಡಿದೆ. ಸದ್ಯ ಭಾರಿ ಕಲೆಕ್ಷನ್ ಮಾಡುತ್ತಿರುವ ಈ ಸಿನಿಮಾ 2026ರಲ್ಲಿ ದಕ್ಷಿಣ ಭಾರತದಲ್ಲೇ ಅತಿ ಹೆಚ್ಚು ಗಳಿಕೆ ಮಾಡಿದ ನಂಬರ್ ಒನ್ ಚಿತ್ರವಾಗಿ ಹೊರಹೊಮ್ಮಿದೆ. ಎಲ್ಲಾ ಕಡೆ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿರುವ ಹಿನ್ನೆಲೆಯಲ್ಲಿ ಚಿತ್ರತಂಡ ಇತ್ತೀಚೆಗೆ ಸಕ್ಸಸ್ ಪ್ರೆಸ್‌ಮೀಟ್ ಆಯೋಜಿಸಿತ್ತು.

ಈ ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕ ಬುಚಿ ಬಾಬು ಸನಾ, ನಿರ್ಮಾಪಕ ಸತೀಶ್ ಕಿಲಾರು, ಗೀತರಚನೆಕಾರ ಅನಂತ್ ಶ್ರೀರಾಮ್ ಮತ್ತು ಮೈತ್ರಿ ಸಂಸ್ಥೆಯ ಶಶಿ ಅವರು ಭಾಗವಹಿಸಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಇದೇ ವೇಳೆ ಮಾತನಾಡಿದ ನಿರ್ದೇಶಕ ಬುಚಿ ಬಾಬು, ಸಿನಿಮಾ ನೋಡಿದ ಶೇಕಡಾ 95 ರಷ್ಟು ಪ್ರೇಕ್ಷಕರು ಚಿತ್ರದ ಕಥೆ ಹಾಗೂ ರಾಮ್ ಚರಣ್ ಅವರ ಅದ್ಭುತ ನಟನೆಯನ್ನು ಕೊಂಡಾಡಿದ್ದಾರೆ. ಚಿತ್ರತಂಡವಾಗಿ ನಾವು ಏನನ್ನು ನಂಬಿ ಸಿನಿಮಾ ಮಾಡಿದ್ದೆವೋ, ಅದನ್ನು ಪ್ರೇಕ್ಷಕರು ನಿಜವಾಗಿಸಿ ತೋರಿಸಿದ್ದಾರೆ. ನಾವು ಭೇಟಿ ನೀಡಿದ ಪ್ರತಿಯೊಂದು ಚಿತ್ರಮಂದಿರದಲ್ಲೂ ಜನರಿಂದ ನಮಗೆ ಅಭೂತಪೂರ್ವ ಪ್ರತಿಕ್ರಿಯೆ ಸಿಕ್ಕಿದೆ ಎಂದು ಸಂತಸ ಹಂಚಿಕೊಂಡರು.

ಇದೇ ಸಂದರ್ಭದಲ್ಲಿ ಚಿತ್ರದ ಬಗ್ಗೆ ಪ್ರಮುಖ ಘೋಷಣೆ ಮಾಡಿದ ನಿರ್ದೇಶಕರು, ‘ಪೆದ್ದಿ’ ಸಿನಿಮಾಗೆ ಈಗ ಕೆಲವು ಹೊಸ ದೃಶ್ಯಗಳನ್ನು ಸೇರಿಸಲಾಗುತ್ತಿದೆ ಎಂದು ತಿಳಿಸಿದರು. ಈಗಾಗಲೇ ಈ ದೃಶ್ಯಗಳ ಎಡಿಟಿಂಗ್ ಕೆಲಸ ಮುಗಿದಿದ್ದು, ಬುಧವಾರದಿಂದ (ಜೂನ್ 17) ಚಿತ್ರಮಂದಿರಗಳಲ್ಲಿ ಇವು ಪ್ರದರ್ಶನಗೊಳ್ಳಲಿವೆ. ಸಿನಿಮಾದಲ್ಲಿ ಒಟ್ಟು ಮೂರು ಹೊಸ ದೃಶ್ಯಗಳನ್ನು ಹೆಚ್ಚುವರಿಯಾಗಿ ಸೇರಿಸಲಾಗುತ್ತಿದ್ದು, ಇದರಲ್ಲಿ ನಾಯಕಿಯ ಪಾತ್ರಕ್ಕೆ ಸಂಬಂಧಿಸಿದ ದೃಶ್ಯಗಳು ಮತ್ತು ನಟ ಜಗಪತಿ ಬಾಬು ಅವರ ಒಂದು ಮುಖ್ಯ ದೃಶ್ಯ ಒಳಗೊಂಡಿದೆ. ಈ ಹಿಂದೆ ಸಿನಿಮಾದಲ್ಲಿ ಮಿಸ್ ಆಗಿದ್ದ ಕೆಲವು ಮುಖ್ಯ ಅಂಶಗಳು ಈ ದೃಶ್ಯಗಳ ಮೂಲಕ ಪ್ರೇಕ್ಷಕರಿಗೆ ಸಿಗಲಿವೆ.

ಇದನ್ನೂ ಓದಿ: ‘ಪೆದ್ದಿ’ ಸಕ್ಸಸ್ ಮೀಟ್‌ಗೆ ಜಾನ್ವಿ ಕಪೂರ್ ಗೈರು: ರಾಮ್ ಚರಣ್ ಸಿನಿಮಾ ವಿವಾದಕ್ಕೆ ಹೆದರಿದ್ರಾ ನಟಿ?

ಮುಖ್ಯವಾಗಿ ನಾಯಕಿ ಜಾನ್ವಿ ಕಪೂರ್ ಪಾತ್ರಕ್ಕೆ ಸಂಬಂಧಿಸಿದ ಇನ್ನೂ ಎರಡು ದೃಶ್ಯಗಳನ್ನು ಸೇರಿಸುತ್ತಿರುವುದರಿಂದ, ಪ್ರೇಕ್ಷಕರು ಆ ಪಾತ್ರಕ್ಕೆ ಮತ್ತಷ್ಟು ಕನೆಕ್ಟ್ ಆಗಲಿದ್ದಾರೆ ಮತ್ತು ಜಾನ್ವಿ ಪಾತ್ರದ ತೂಕ ಇನ್ನೊಂದು ಹಂತಕ್ಕೆ ತಲುಪಲಿದೆ ಎಂದು ಬುಚಿಬಾಬು ವಿಶ್ವಾಸ ವ್ಯಕ್ತಪಡಿಸಿದರು. ಕೊನೆಯಲ್ಲಿ ತಮ್ಮ ಜೀವನದ ಮರೆಯಲಾಗದ ಘಟನೆಯೊಂದನ್ನು ನೆನೆದ ಅವರು, ‘ಒಂದು ದಿನ ನಾನು ಕಾರಿನಲ್ಲಿ ಹೋಗುತ್ತಿದ್ದಾಗ ಆಟೋ ಚಾಲಕರೊಬ್ಬರು ತಮ್ಮ ತಾಯಿಯೊಂದಿಗೆ ಬಂದು ನನ್ನನ್ನು ಮಾತನಾಡಿಸಿದರು. ‘ಬಾಬು, ತುಂಬಾ ಅದ್ಭುತವಾದ ಸಿನಿಮಾ ಮಾಡಿದ್ದೀರಿ. ನಾನು 25 ವರ್ಷಗಳ ನಂತರ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿದೆ’ ಎಂದು ಪ್ರೀತಿಯಿಂದ ಹೇಳಿದರು. ಈ ಮಾತುಗಳು ನನ್ನ ಜೀವನದುದ್ದಕ್ಕೂ ನೆನಪಿನಲ್ಲಿ ಉಳಿಯುವಂತಹ ಅತ್ಯುತ್ತಮ ಪ್ರಶಂಸೆ’ ಎಂದು ಭಾವುಕರಾದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸಿಕ್ಸ್ ಸಿಡಿಸಿಯೇ ಹೊಸ ಇತಿಹಾಸ ನಿರ್ಮಿಸಿದ ಸ್ಮೃತಿ ಮಂಧಾನ

Source link

ಕಂಗನಾ ರಣಾವತ್‌ಗೆ ಶಾಕ್: ‘ಭಾರತ ಭಾಗ್ಯ ವಿಧಾತಾ’ ಚಿತ್ರಕ್ಕೆ ಭಾರಿ ನಷ್ಟದ ಭೀತಿ – Kannada News | Kangana Ranaut’s ‘Bharat Bhagya Vidhata’ Faces Massive Box Office Loss

ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಅಭಿನಯದ ಬಹುನಿರೀಕ್ಷಿತ ಚಿತ್ರ ‘ಭಾರತ್ ಭಾಗ್ಯ ವಿಧಾತಾ’ ಬಾಕ್ಸ್ ಆಫೀಸ್‌ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡುತ್ತಿದೆ. ಜೂನ್ 12 ರಂದು ಬಿಡುಗಡೆಯಾದ ಈ ಸಿನಿಮಾ ಮೊದಲ ವೀಕೆಂಡ್‌ನಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ತತ್ತರಿಸಿ ಹೋಗಿದ್ದು, ಚಿತ್ರದ ನಿರ್ಮಾಪಕರಿಗೆ ಕೋಟ್ಯಂತರ ರೂಪಾಯಿ ನಷ್ಟವಾಗುವ ಮುನ್ಸೂಚನೆ ಸಿಕ್ಕಿದೆ. ಯಾವುದೇ ದೊಡ್ಡ ಸಿನಿಮಾದ ಅಬ್ಬರ ಇಲ್ಲದಿದ್ದರೂ ಚಿತ್ರಕ್ಕೆ ಪ್ರೇಕ್ಷಕರು ಬರುತ್ತಿಲ್ಲ.

ಕೋಟಿ ಬಜೆಟ್; ಗಳಿಸಿದ್ದು ಕೇವಲ 4 ಕೋಟಿ!

ಮೂಲಗಳ ಪ್ರಕಾರ, ‘ಭಾರತ ಭಾಗ್ಯ ವಿಧಾತಾ’ ಚಿತ್ರವನ್ನು ಬರೋಬ್ಬರಿ 60 ಕೋಟಿ ರೂಪಾಯಿ ಭಾರಿ ಬಜೆಟ್‌ನಲ್ಲಿ ನಿರ್ಮಿಸಲಾಗಿದೆ. ಕಂಗನಾ ರಣಾವತ್ ಅವರ ಸ್ವಂತ ಬ್ಯಾನರ್ ‘ಮಣಿಕರ್ಣಿಕಾ ಫಿಲ್ಮ್ಸ್’ ಕೂಡ ಈ ಚಿತ್ರಕ್ಕೆ ಬಂಡವಾಳ ಹೂಡಿದೆ. ಆದರೆ, ಬಿಡುಗಡೆಯಾದ ಮೊದಲ ಮೂರು ದಿನಗಳಲ್ಲಿ ಸಿನಿಮಾ ಗಳಿಸಿರುವುದು ಕೇವಲ 4.03 ಕೋಟಿ ರೂಪಾಯಿ ಮಾತ್ರ.

ಬಜೆಟ್‌ನ 10 ಹಣವನ್ನು ಕೂಡ ಸಿನಿಮಾ ಮರಳಿ ಪಡೆಯುವುದು ಅನುಮಾನ ಇದೆ.ಚಿತ್ರದ ಪ್ರದರ್ಶನ ಹೀಗೆಯೇ ಮುಂದುವರಿದರೆ, ನಿರ್ಮಾಣ ಸಂಸ್ಥೆಗೆ ಸುಮಾರು 45 ರಿಂದ 50 ಕೋಟಿ ರೂಪಾಯಿಗೂ ಅಧಿಕ ನಷ್ಟ ಉಂಟಾಗುವ ಸಾಧ್ಯತೆ ದಟ್ಟವಾಗಿದೆ.

ಸಾಮಾನ್ಯವಾಗಿ ವೀಕೆಂಡ್‌ನ ಕೊನೆಯ ದಿನವಾದ ಭಾನುವಾರ ಸಿನಿಮಾಗಳ ಗಳಿಕೆ ಹೆಚ್ಚಾಗುತ್ತದೆ. ಆದರೆ ಈ ಚಿತ್ರದ ವಿಷಯದಲ್ಲಿ ಉಲ್ಟಾ ಆಗಿದೆ. ಶನಿವಾರಕ್ಕೆ ಹೋಲಿಸಿದರೆ ಭಾನುವಾರ ಚಿತ್ರದ ಪ್ರದರ್ಶನಗಳ ಸಂಖ್ಯೆ ಗಣನೀಯವಾಗಿ ಕುಸಿದಿದೆ. ಎರಡನೇ ದಿನ 1,956 ಶೋ ಪ್ರದರ್ಶನ ಕಂಡಿದ್ದವು. ಅದು ಭಾನುವಾರಕ್ಕೆ 794 ಶೋಗಳಿಗೆ ಬಂದು ನಿಂತಿದೆ. ಭಾನುವಾರ ಥಿಯೇಟರ್‌ಗಳಲ್ಲಿ ಕೇವಲ 14ರಷ್ಟು ಮಾತ್ರ ಸೀಟುಗಳು ಭರ್ತಿಯಾಗಿದ್ದವು.

‘ಒಂದಕ್ಕೆ ಒಂದು ಉಚಿತ’ ಆಫರ್ ಕೊಟ್ಟರೂ ಪ್ರಯೋಜನವಾಗಿಲ್ಲ

ಸಿನಿಮಾದ ಕಲೆಕ್ಷನ್ ಸುಧಾರಿಸಲು ಶನಿವಾರದ ಬಳಿಕ ಚಿತ್ರತಂಡ ದೇಶಾದ್ಯಂತ ಒಂದು ಟಿಕೆಟ್ ಖರೀದಿಸಿದರೆ ಮತ್ತೊಂದು ಉಚಿತ ಎಂಬ ಆಫರ್ ಘೋಷಿಸಿತ್ತು. ಆದರೆ ಈ ಬಿಗ್ ಆಫರ್ ಕೂಡ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಸೆಳೆಯುವಲ್ಲಿ ವಿಫಲವಾಗಿದೆ. ದೆಹಲಿ ಮತ್ತು ಹರಿಯಾಣ ಸರ್ಕಾರಗಳು ಈ ಚಿತ್ರಕ್ಕೆ ‘ತೆರಿಗೆ ಮುಕ್ತ’ ಸ್ಥಾನಮಾನ ನೀಡಿದ್ದರೂ ಸಹ, ಗಲ್ಲಾಪೆಟ್ಟಿಗೆಯಲ್ಲಿ ಯಾವುದೇ ಪವಾಡ ನಡೆದಿಲ್ಲ.

ಇದನ್ನೂ ಓದಿ: ‘ಪೆದ್ದಿ’ ವಿವಾದ; ನಿರ್ದೇಶಕನ ಬೆಂಬಲಕ್ಕೆ ನಿಂತ ಕಂಗನಾ ರಣಾವತ್ 

ಮುಂಬೈನ 26/11 ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ಮುಂಬೈನ ‘ಕಾಮಾ ಆಸ್ಪತ್ರೆ’ಯ ವೈದ್ಯರು ಮತ್ತು ನರ್ಸ್‌ಗಳು ಗರ್ಭಿಣಿಯರು ಹಾಗೂ ನವಜಾತ ಶಿಶುಗಳನ್ನು ರಕ್ಷಿಸಲು ಪ್ರಾಣದ ಹಂಗು ತೊರೆದು ಹೋರಾಡಿದ ನೈಜ ಘಟನೆಯನ್ನು ಆಧರಿಸಿ ಈ ಚಿತ್ರವನ್ನು ಮಾಡಲಾಗಿದೆ. ವಿಷಯ ಗಂಭೀರವಾಗಿದ್ದರೂ, ಚಿತ್ರಕಥೆ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ವಿಫಲವಾಗಿರುವುದರಿಂದ ಕಂಗನಾ ರಣಾವತ್ ಖಾತೆಗೆ ಮತ್ತೊಂದು ದೊಡ್ಡ ಸೋಲು ಸೇರ್ಪಡೆಯಾದಂತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಯಾರೋ ಬೆಂಕಿ ಬೆಂಕಿ ಎಂದು ಕೂಗಿದ್ದಕ್ಕೆ ಭಯಗೊಂಡು ರೈಲಿನಿಂದ ಹಾರಿದ ನಾಲ್ವರಿಗೆ ಮತ್ತೊಂದು ರೈಲು ಡಿಕ್ಕಿ, ಎಲ್ಲರೂ ಸಾವು – Kannada News | Morena Train Tragedy: 4 Dead After Fire Rumor Causes Panic Jump, Hits Another Train

ಮೊರೆನಾ, ಜೂನ್ 15: ರೈಲಿನಲ್ಲಿ ಯಾರೋ ಬೆಂಕಿ ಬೆಂಕಿ ಎಂದು ಕೂಗೊಕೊಂಡಿದ್ದಕ್ಕೆ ಭಯಗೊಂಡು ನಾಲ್ವರು ರೈಲಿನಿಂದ ಹಾರಿ ಪ್ರಾಣ ಕಳೆದುಕೊಂಡಿರುವ ಹೃದಯವಿದ್ರಾವಕ ಘಟನೆ ಮಧ್ಯ ಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ನಡೆದಿದೆ. ಮೊರೆನಾ ಜಿಲ್ಲೆಯ ಹೇತಾಂಪುರ ನಿಲ್ದಾಣದ ಬಳಿಯ ಉದಯಪುರ ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ನಿಂದ ಗಾಬರಿಗೊಂಡ ಪ್ರಯಾಣಿಕರು ರೈಲಿ(Train)ನಿಂದ ಹಾರುವಾಗ ಪಕ್ಕದ ಹಳಿಯಲ್ಲಿ ಬರುತ್ತಿದ್ದ ಮತ್ತೊಂದು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಎಲ್ಲಾ ನಾಲ್ವರು ಅಲ್ಲೇ ಉಸಿರು ಚೆಲ್ಲಿದ್ದಾರೆ.

ಜೂನ್ 14 ರಂದು ಸಂಜೆ 4.15 ರ ಸುಮಾರಿಗೆ ಈ ದುರಂತ ಸಂಭವಿಸಿತು, ಖಜುರಾಹೊ-ಉದಯಪುರ ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ಗೆ ಬೆಂಕಿ ಹೊತ್ತಿಕೊಂಡಿದೆ ಎಂಬ ವದಂತಿಯು ಪ್ರಯಾಣಿಕರಲ್ಲಿ ವೇಗವಾಗಿ ಹರಡಿತ್ತು. ಹೇತಾಂಪುರ್-ಧೋಲ್ಪುರ್ ವಿಭಾಗದಲ್ಲಿ ಪ್ರಯಾಣಿಕರೊಬ್ಬರು ಸಾಮಾನ್ಯ ಬೋಗಿಯಲ್ಲಿ ಅಲಾರಾಂ ಸರಪಳಿಯನ್ನು ಎಳೆದ ನಂತರ ರೈಲು ನಿಂತಿತ್ತು.

ನಂತರದ ಭಯದಲ್ಲಿ, ಹಲವಾರು ಪ್ರಯಾಣಿಕರು ರೈಲಿನಿಂದ ಹಾರಿ ಪಕ್ಕದ ರೈಲ್ವೆ ಹಳಿಯ ಮೇಲೆ ಹೆಜ್ಜೆ ಹಾಕಿದರು. ಆ ಕ್ಷಣದಲ್ಲಿ, ಫಿರೋಜ್‌ಪುರ-ಸಿಯೋನಿ ಪಾತಾಳಕೋಟ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 20424) ವಿರುದ್ಧ ದಿಕ್ಕಿನಿಂದ ಬಂದಿದ್ದರಿಂದ ಮಾರಣಾಂತಿಕ ಅಪಘಾತ ಸಂಭವಿಸಿತು.

ಮತ್ತಷ್ಟು ಓದಿ: ಬ್ಯಾಂಕಾಕ್‌: ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ, ಬೆಚ್ಚಿಬೀಳಿಸುವ ಸಿಸಿಟಿವಿ ದೃಶ್ಯ ವೈರಲ್!

ಮೃತರನ್ನು ಅಫ್ರೀನ್ (35), ಅವರ ನಾಲ್ಕು ವರ್ಷದ ಮಗ ಅಸದ್, ಶಕುಂತಲಾ (60) ಮತ್ತು ವೀರ್ಮ ದೇವಿ (58) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೈಲ್ವೆ ಮತ್ತು ಪೊಲೀಸ್ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಆರಂಭಿಸಿದರು.

ಯಾರೋ ಬೆಂಕಿ ಬೆಂಕಿ ಎಂದು ಕೂಗಿದ್ದಕ್ಕೆ ಇನ್ಯಾರೂ ರೈಲಿನ ಚೈನ್ ಎಳೆದಿದ್ದಾರೆ, ರೈಲು ನಿಲ್ಲುವ ಸಮಯದಲ್ಲಿ ಕೆಲವು ಪ್ರಯಾಣಿಕರು ಕೆಳಗಿಳಿದು ಅಜಾಗರೂಕತೆಯಿಂದ ಇಳಿದು ಹಳಿಯ ಮೇಲೆ ಓಡಲು ಶುರು ಮಾಡಿದ್ದಾರೆ. ಆಗ ಎದುರಿನಿಂದ ಬರುತ್ತಿದ್ದ ರೈಲು ಅವರಿಗೆ ಡಿಕ್ಕಿ ಹೊಡೆದಿದೆ.

ವಿಡಿಯೋ

ಬೆಂಕಿಯ ವದಂತಿ ಹೇಗೆ ಹುಟ್ಟಿಕೊಂಡಿತು ಮತ್ತು ಪ್ರಯಾಣಿಕರು ಪಕ್ಕದ ಹಳಿಯ ಮೇಲೆ ಚಲಿಸಲು ಏನು ಕಾರಣ ಎಂಬುದು ಸೇರಿದಂತೆ ಘಟನೆಗಳ ಬಗ್ಗೆ ರೈಲ್ವೆ ಅಧಿಕಾರಿಗಳು ವಿವರವಾದ ತನಿಖೆಯನ್ನು ಪ್ರಾರಂಭಿಸಿದ್ದಾರೆ. ತನಿಖೆಯ ಮೇಲ್ವಿಚಾರಣೆ ನಡೆಸಲು ಮತ್ತು ಸಂತ್ರಸ್ತ ಕುಟುಂಬಗಳಿಗೆ ನೆರವು ನೀಡಲು ಝಾನ್ಸಿ ವಿಭಾಗದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Karnataka Weather Forecast: ರಾಜ್ಯದಲ್ಲಿ 2-3 ದಿನ ಮಳೆ ಅಬ್ಬರ; ಎಲ್ಲೆಲ್ಲಿ ವರುಣಾರ್ಭಟ? – Kannada News | Karnataka Weather Update: IMD Predicts Heavy Rainfall Across the State for Next 2 3 Days

ಬೆಂಗಳೂರು, ಜೂನ್​​ 15: ಮುಂಗಾರು ಮಳೆ ದೇಶದ ಹಲವು ಭಾಗಗಳಲ್ಲಿ ಮತ್ತಷ್ಟು ಮುನ್ನಡೆ ಸಾಧಿಸಿದ್ದು ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮುಂದಿನ ಎರಡರಿಂದ ಮೂರು ದಿನಗಳಲ್ಲಿ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಲಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಸೇರಿ ರಾಜ್ಯಾದ್ಯಂತ ಗುಡುಗು ಹಾಗೂ ಮಿಂಚು ಸಹಿತ ಮಳೆಯನ್ನು ಅಂದಾಜಿಸಲಾಗಿದ್ದು, ಬೆಂಗಳೂರಲ್ಲಿಯೂ ವರುಣನ ಅಬ್ಬರವಿರಲಿದೆ.

ಮುಖ್ಯಾಂಶಗಳು

  • ರಾಜ್ಯದಲ್ಲಿ ಮುಂದಿನ 2-3 ದಿನಗಳು ವರುಣನ ಅಬ್ಬರ
  • ರಾಜ್ಯದ ಹಲವೆಡೆ ಗುಡುಗು, ಮಿಂಚು ಸಹಿತ ಮಳೆ
  • ಬೆಂಗಳೂರಲ್ಲಿಯೂ ಭಾರಿ ಮಳೆಯಾಗುವ ಎಚ್ಚರಿಕೆ

ಇಂದು ಎಲ್ಲೆಲ್ಲಿ ಮಳೆ?

ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಇರಲಿದೆ. ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿಯೂ ವರುಣಾರ್ಭಟ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಭಾರಿ ಮಳೆಗೆ ಜಮಖಂಡಿ ತರಕಾರಿ ಮಾರುಕಟ್ಟೆ ಜಲಾವೃತ

ಹೇಗಿರಲಿದೆ ಬೆಂಗಳೂರಿನ ವಾತಾವರಣ?

ರಾಜಧಾನಿ ಬೆಂಗಳೂರಿನಲ್ಲಿ ಹಲವೆಡೆ ಬೆಳಿಗ್ಗೆಯಿಂದಲೇ ಮೋಡಕವಿದ ವಾತಾವರಣ ಇದ್ದು ಮಳೆಯನ್ನು ಅಂದಾಜಿಸಲಾಗಿದೆ. ನಗರದ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್​​ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್​​ ತಲುಪಲಿದೆ. ಗಾಳಿಯ ವೇಗ ಗಂಟೆಗೆ ಸುಮಾರು 20 ಕಿಲೋ ಮೀಟರ್​​ನಷ್ಟು ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬಾಗಲಕೋಟೆ: ಭಾರಿ ಮಳೆಗೆ ಜಮಖಂಡಿ ತರಕಾರಿ ಮಾರುಕಟ್ಟೆ ಜಲಾವೃತ – Kannada News | Bagalkot Rain Fury: Heavy Rains Flood Gotay Vegetable Market in Jamkhandi; Trees Uprooted on Vijayapura

ಬಾಗಲಕೋಟೆ, ಜೂನ್ 15: ಬಾಗಲಕೋಟೆ ಜಿಲ್ಲೆಯಾದ್ಯಂತ ಮುಂಗಾರು ಮಳೆಯ ಅಬ್ಬರ ತೀವ್ರಗೊಂಡಿದ್ದು, ಜಮಖಂಡಿ ತಾಲೂಕಿನ ಹಲವೆಡೆ ಭಾರಿ ಮಳೆಯಿಂದಾಗಿ ವ್ಯಾಪಕ ಅವಾಂತರಗಳು ಸೃಷ್ಟಿಯಾಗಿವೆ. ಜಮಖಂಡಿ ತಾಲೂಕಿನ ಗೋಟೆ ಗ್ರಾಮದ ಸಾಪ್ತಾಹಿಕ ಸಂತೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ತರಕಾರಿ ಮಾರುಕಟ್ಟೆ ಸಂಪೂರ್ಣ ಜಲಾವೃತಗೊಂಡಿತು. ಮಾರುಕಟ್ಟೆಯ ಮೈದಾನದಲ್ಲೆಲ್ಲಾ ಮಂಡಿಯುದ್ದ ನೀರು ನಿಂತಿದ್ದರಿಂದ ತರಕಾರಿ ಬುಟ್ಟಿಗಳು ಹಾಗೂ ಕ್ರೇಟ್‌ಗಳು ನೀರಿನಲ್ಲಿ ಮುಳುಗಡೆಯಾದವು. ಹಠಾತ್ ಮಳೆಯಿಂದ ಕಂಗಾಲಾದ ವ್ಯಾಪಾರಿಗಳು ತಮಗಾಗುವ ಭಾರಿ ನಷ್ಟವನ್ನು ತಪ್ಪಿಸಲು ಟೊಮೆಟೊ, ಹಸಿರು ಸೊಪ್ಪು ಹಾಗೂ ಇತರೆ ತರಕಾರಿಗಳನ್ನು ನೀರಿನಿಂದ ರಕ್ಷಿಸಲು ಹರಸಾಹಸ ಪಟ್ಟರು. ಅದರಲ್ಲೂ ವಿಶೇಷವಾಗಿ ಮಹಿಳಾ ವ್ಯಾಪಾರಿಗಳು ಮಳೆಯಲ್ಲೇ ನೆನೆಯುತ್ತಾ ತರಕಾರಿ ಬುಟ್ಟಿಗಳನ್ನು ಎತ್ತರದ ಸ್ಥಳಗಳಿಗೆ ಸಾಗಿಸುತ್ತಿದ್ದ ದೃಶ್ಯಗಳು ಕಂಡುಬಂದವು. ಹಳದಿ ಟಾರ್ಪಲ್‌ಗಳನ್ನು ಮುಚ್ಚಿ ತರಕಾರಿಗಳನ್ನು ರಕ್ಷಿಸಲು ವ್ಯಾಪಾರಿಗಳು ಯತ್ನಿಸಿದರಾದರೂ, ಬಹುತೇಕ ತರಕಾರಿಗಳು ಕೊಳೆತು ಹೋಗುವ ಸ್ಥಿತಿ ತಲುಪಿರುವುದರಿಂದ ಸಣ್ಣ ವ್ಯಾಪಾರಿಗಳು ಕಣ್ಣೀರು ಹಾಕುವಂತಾಗಿದೆ.

ಇದೇ ತಾಲೂಕಿನ ಚಿಕ್ಕಪಡಸಲಗಿ ಗ್ರಾಮದ ಬಳಿ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಬೃಹತ್ ಮರಗಳು ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದಿವೆ. ಜಮಖಂಡಿ-ವಿಜಯಪುರ ಮುಖ್ಯ ರಸ್ತೆಯಲ್ಲೇ ಈ ಘಟನೆ ಸಂಭವಿಸಿದ್ದರಿಂದ ರಸ್ತೆಯ ಎರಡೂ ಬದಿಗಳಲ್ಲಿ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತು, ಸಾರ್ವಜನಿಕರು ಹಾಗೂ ಪ್ರಯಾಣಿಕರು ತೀವ್ರ ಪರದಾಡುವಂತಾಯಿತು. ಸದ್ಯ ಜಮಖಂಡಿ-ವಿಜಯಪುರ ರಸ್ತೆಯಲ್ಲಿ ವಾಹನ ಸಂಚಾರ ಯಥಾಸ್ಥಿತಿಗೆ ಮರಳಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮಹಾರಾಷ್ಟ್ರ: ಸೋಲಾಪುರದಲ್ಲಿ ಯಾತ್ರಿಕರಿದ್ದ ವ್ಯಾನ್ ಬಾವಿಗೆ ಉರುಳಿ 8 ಮಂದಿ ಸಾವು, 7 ಮಂದಿಗೆ ಗಾಯ, ಪ್ರಧಾನಿ ನೆರವು – Kannada News | Solapur Van Accident: 8 Dead, 7 Injured as Pilgrim Vehicle Falls into Well; PM Announces Aid

ಸೋಲಾಪುರ, ಜೂನ್ 15: ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿ ಭಾನುವಾರ( ಜೂ.14) ಸಂಜೆ ಅಪಘಾತ(Accident)ವೊಂದು ಸಂಭವಿಸಿದೆ. ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಪಿಕಪ್ ವ್ಯಾನ್ ರಸ್ತೆ ಬದಿಯಿದ್ದ ಬಾವಿಗೆ ಉರುಳಿಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಮತ್ತು ಮಕ್ಕಳು ಸೇರಿ 8 ಮಂದಿ ಪ್ರಾಣಬಿಟ್ಟಿದ್ದಾರೆ. ಅಪಘಾತದಲ್ಲಿ ಇತರೆ 7 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತಪಟ್ಟವರು ಪಂಢರಪುರ ಪ್ರದೇಶದ ರಂಜನಿ ಗ್ರಾಮದ ನಿವಾಸಿಗಳಾಗಿದ್ದು, ದುರಂತ ಸಂಭವಿಸಿದಾಗ ತೀರ್ಥಯಾತ್ರೆಗೆ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ.

ಸೋಲಾಪುರ ಅಪಘಾತ ಸಂಭವಿಸಿದ್ಹೇಗೆ?
ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಸೋಲಾಪುರ ಜಿಲ್ಲೆಯ ಮಲ್ಶಿರಾಸ್ ತಹಸಿಲ್​ನ ತಂಡುಲ್ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. 15 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಪಿಕಪ್ ವ್ಯಾನ್ ಇದ್ದಕ್ಕಿದ್ದಂತೆ ರಸ್ತೆಯಿಂದ ಹೊರಟು ರಸ್ತೆ ಬದಿಯ ಬಾವಿಗೆ ಉರುಳಿ ಬಿದ್ದಿದೆ.

ಪ್ರಾಥಮಿಕ ತನಿಖೆಯ ಪ್ರಕಾರ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಎಂಟು ಜನರು ಸಾವನ್ನಪ್ಪಿದ್ದು, ಏಳು ಜನರು ಗಾಯಗೊಂಡಿದ್ದಾರೆ ಎಂದು ಸೋಲಾಪುರ ಪೊಲೀಸ್ ವರಿಷ್ಠಾಧಿಕಾರಿ ಅತುಲ್ ಕುಲಕರ್ಣಿ ತಿಳಿಸಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ತಕ್ಷಣ ರಕ್ಷಣಾ ತಂಡಗಳು ಸ್ಥಳಕ್ಕೆ ನಿನ್ನೆಯೇ ಧಾವಿಸಿತ್ತು.

ವಾಹನ ಬಾವಿಗೆ ಬಿದ್ದ ಕೂಡಲೇ ಸ್ಥಳೀಯ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಮತ್ತು ತುರ್ತು ಪ್ರತಿಕ್ರಿಯೆ ನೀಡುವವರು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಗಾಯಾಳುಗಳನ್ನು ಹೊರತೆಗೆದು ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಯಿತು.

ಮತ್ತಷ್ಟು ಓದಿ: ದುಬೈ ರಸ್ತೆ ಅಪಘಾತ ಸಂತ್ರಸ್ತರಿಗೆ ನೆರವಾದ ಅನಿವಾಸಿ ಭಾರತೀಯ ಉದ್ಯಮಿ: 2.6 ಕೋಟಿ ರೂ. ನೆರವು ಘೋಷಿಸಿದ ಡಾ. ಶಂಶೀರ್ ವಯಾಲಿಲ್

ಗಾಯಾಳುಗಳ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಮತ್ತು ಆಸ್ಪತ್ರೆ ಅಧಿಕಾರಿಗಳಿಂದ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಪಿಕಪ್ ವ್ಯಾನ್‌ನಲ್ಲಿದ್ದ 15 ಮಂದಿಯೂ ರಂಜನಿ ಗ್ರಾಮಕ್ಕೆ ಸೇರಿದವರಾಗಿದ್ದು, ಧಾರ್ಮಿಕ ಪ್ರಯಾಣದ ಭಾಗವಾಗಿ ಒಟ್ಟಿಗೆ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಅಪಘಾತವು ಸ್ಥಳೀಯ ಸಮುದಾಯದಲ್ಲಿ ಆಘಾತದ ಅಲೆಗಳನ್ನು ಉಂಟುಮಾಡಿದ್ದು, ತಮ್ಮ ಪ್ರೀತಿಪಾತ್ರರನ್ನು ಹಠಾತ್ ಕಳೆದುಕೊಂಡ ಕುಟುಂಬಗಳು ಶೋಕದಲ್ಲಿ ಮುಳುಗಿವೆ.

ಮಹಾರಾಷ್ಟ್ರದ ಸೋಲಾಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ದುಃಖ ವ್ಯಕ್ತಪಡಿಸಿದ್ದು, ಮೃತರ ಸಂಬಂಧಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ವಿಡಿಯೋ

ಮಹಾರಾಷ್ಟ್ರದ ಸೋಲಾಪುರ ಗ್ರಾಮೀಣ ಪ್ರದೇಶದಲ್ಲಿ ಸಂಭವಿಸಿದ ದುರಂತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ಈ ದುಃಖದ ಸಮಯದಲ್ಲಿ ಮೃತರ ಕುಟುಂಬಗಳೊಂದಿಗೆ ನಾವಿದ್ದೇವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ವಿಜಯ್ ದೇವರಕೊಂಡ ಮೇಲೆ ರಶ್ಮಿಕಾಗೆ ಎಷ್ಟು ಕಾಳಜಿ ನೋಡಿ; ವಿಡಿಯೋ ವೈರಲ್ – Kannada News | Vijay Deverakonda and Rashmika’s Viral Scholarship Video: Couple Goals and Philanthropy

ತೆಲುಗು ಚಿತ್ರರಂಗದ ಸ್ಟಾರ್ ಜೋಡಿಯಾದ ವಿಜಯ್ ದೇವರಕೊಂಡ (Vijay Devarakonda) ಮತ್ತು ರಶ್ಮಿಕಾ ಮಂದಣ್ಣ ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ಇತ್ತೀಚೆಗೆ ತೆಲಂಗಾಣಕ್ಕೆ ಭೇಟಿ ನೀಡಿದ್ದ ಸಂದರ್ಭದ ಇವರಿಬ್ಬರ ಕ್ಯೂಟ್ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಪರಸ್ಪರ ಪ್ರೀತಿಸಿ, ಸಪ್ತಪದಿ ತುಳಿದಿರುವ ಈ ಜೋಡಿಯ ನಡುವೆ ಎಂತಹ ಆಪ್ತತೆ ಮತ್ತು ಪ್ರೀತಿ ಇದೆ ಎಂಬುದಕ್ಕೆ ಈ ವಿಡಿಯೋವೇ ಸಾಕ್ಷಿ ಎನ್ನುತ್ತಿದ್ದಾರೆ ಅಭಿಮಾನಿಗಳು.

ವಿವಾಹದ ಸಂದರ್ಭದಲ್ಲಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡು ಒಂದು ಭರವಸೆ ನೀಡಿದ್ದರು. ತಮ್ಮ ತಂದೆಯ ಹುಟ್ಟೂರಾದ ತೆಲಂಗಾಣದ ತುಂಬನಪೇಟ್ ಗ್ರಾಮದ ಸರ್ಕಾರಿ ಶಾಲೆಯ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡೋದಾಗಿ ಹೇಳಿದ್ದರು. ಅವರು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ಈ ಗ್ರಾಮದಲ್ಲಿ ನಡೆದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮದಲ್ಲಿ ಈ ಇಬ್ಬರು ಭಾಗವಹಿಸಿದ್ದರು.

ವೇದಿಕೆ ಮೇಲೆ ವಿಜಯ್ ಹಾಗೂ ರಶ್ಮಿಕಾ ನಿಂತಿದ್ದರು. ತುಂಬಾನೇ ಸೆಖೆ ಇದ್ದ ಕಾರಣ ವಿಜಯ್ ದೇವರಕೊಂಡ ಅವರ ಹಣೆಯ ಮೇಲಿದ್ದ ಬೆವರಿನ ಹನಿಗಳನ್ನು ರಶ್ಮಿಕಾ ಅತ್ಯಂತ ಪ್ರೀತಿಯಿಂದ ನಾಪ್ಕಿನ್‌ನಿಂದ ಒರೆಸಿದ್ದಾರೆ. ಅಷ್ಟೇ ಅಲ್ಲದೆ, ವಿಜಯ್ ಅವರ ಮೀಸೆಯನ್ನು ಕೈಯಿಂದ ಸರಿಪಡಿಸಿಕೊಟ್ಟಿದ್ದಾರೆ.

ಸದಾ ಸಾರ್ವಜನಿಕವಾಗಿ ಒಬ್ಬರಿಗೊಬ್ಬರು ಬೆಂಬಲವಾಗಿ ನಿಲ್ಲುವ ಈ ದಂಪತಿ, ಇಲ್ಲಿಯೂ ತಮ್ಮ ನಡುವಿನ ಪ್ರೀತಿ ಎಂತದ್ದು ಎಂಬುದನ್ನು ತೋರಿಸಿದ್ದಾರೆ. ವಿಡಿಯೋ ನೋಡಿದ ನೆಟ್ಟಿಗರು ‘ಇವರಿಬ್ಬರು ನಿಜಕ್ಕೂ ಮೇಡ್ ಫಾರ್ ಈಚ್ ಅದರ್’ ಎಂದು ಕಮೆಂಟ್ ಮಾಡುತ್ತಿದ್ದಾರೆ.

ಎಷ್ಟು ಜನಕ್ಕೆ ವಿದ್ಯಾರ್ಥಿ ವೇತನ?

9 ಮತ್ತು 10ನೇ ತರಗತಿಯ ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ 180 ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ನೀಡುವುದು ವಿಜಯ್-ರಶ್ಮಿಕಾ ಉದ್ದೇಶ. ತಮ್ಮೂರಿನ ಮಗ ಮತ್ತು ಸೊಸೆ ಇಂತಹದ್ದೊಂದು ಸತ್ಕಾರ್ಯ ಮಾಡಿರುವುದಕ್ಕೆ ಹಳ್ಳಿಯ ಜನರೇ ಹೆಮ್ಮೆ ಪಟ್ಟಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ಮಾತ್ರವಲ್ಲ ವಿಜಯ್ ದೇವರಕೊಂಡ ಸಹ ‘ತಾಳಿ’ ಕಟ್ಟಿಕೊಂಡಿದ್ದಾರಾ?

‘ಗೀತ ಗೋವಿಂದಂ’ ಮತ್ತು ‘ಡಿಯರ್ ಕಾಮ್ರೇಡ್’ ಸಿನಿಮಾಗಳ ಮೂಲಕ ಪ್ರೇಕ್ಷಕರ ಹೃದಯ ಗೆದ್ದಿದ್ದ ಈ ಜೋಡಿ, ಈಗ ‘ರಣಬಾಲಿ’ ಎಂಬ ಪಿರಿಯಾಡಿಕಲ್ ಆಕ್ಷನ್ ಸಿನಿಮಾದಲ್ಲಿ ಒಟ್ಟಿಗೆ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹಲವು ಯುದ್ಧದ ಬಳಿಕ ಜಗತ್ತಿಗೆ ಶುಭ ಸುದ್ದಿ: ಅಮೆರಿಕ-ಇರಾನ್ ಶಾಂತಿ ಒಪ್ಪಂದ ಅಂತಿಮ, ಹೊರ್ಮುಝ್ ತೆರವು – Kannada News | US Iran War Ends! President Donald Trump Announces Peace Deal and Reopening of Strait of Hormuz

ಅಮೆರಿಕ-ಇರಾನ್ ಶಾಂತಿ ಒಪ್ಪಂದ ಅಂತಿಮImage Credit source: TV9 Network

ನವದೆಹಲಿ, ಜೂನ್ 15: ಜಾಗತಿಕ ಆರ್ಥಿಕತೆ ಮತ್ತು ತೈಲ ಮಾರುಕಟ್ಟೆಯನ್ನು ತಲ್ಲಣಗೊಳಿಸಿದ್ದ ಅಮೆರಿಕ ಹಾಗೂ ಇರಾನ್ ನಡುವಿನ ಮಹಾ ಸಮರಕ್ಕೆ (US Iran War) ಕೊನೆಗೂ ಶಾಶ್ವತ ಬ್ರೇಕ್ ಬೀಳುವ ಕಾಲ ಸನ್ನಿಹಿತವಾಗಿದೆ. ಕಳೆದ 100ಕ್ಕೂ ಹೆಚ್ಚು ದಿನಗಳಿಂದ ನಡೆಯುತ್ತಿದ್ದ ಭೀಕರ ಯುದ್ಧ ಮತ್ತು ರಾಜತಾಂತ್ರಿಕ ಹಗ್ಗಜಗ್ಗಾಟಕ್ಕೆ ತೆರೆಬಿದ್ದಿದ್ದು, ಉಭಯ ದೇಶಗಳ ನಡುವಿನ ಶಾಂತಿ ಒಪ್ಪಂದ ಅಂತಿಮಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಘೋಷಿಸಿದ್ದಾರೆ. ಈ ಮಹತ್ವದ ಬೆಳವಣಿಗೆಯಿಂದಾಗಿ ಇಡೀ ಜಗತ್ತಿಗೆ ತೈಲ ಬಿಕ್ಕಟ್ಟಿನ ಆತಂಕದಿಂದ ದೊಡ್ಡ ಮುಕ್ತಿ ಸಿಕ್ಕಂತಾಗಿದೆ.

ಮುಖ್ಯಾಂಶಗಳು

  • ಅಮೆರಿಕ-ಇರಾನ್ ನಡುವೆ ಶಾಂತಿ ಒಪ್ಪಂದ ಅಂತಿಮ
  • ಹೊರ್ಮುಝ್ ಜಲಸಂಧಿಯ ನೌಕಾ ದಿಗ್ಬಂಧನ ತೆರವು
  • ಜೂನ್ 19ರಂದು ಸ್ವಿಟ್ಚರ್ಲೆಂಡ್‌ನಲ್ಲಿ ಅಧಿಕೃತ ಸಹಿ

ವಿಶ್ವದ ಹಡಗುಗಳ ಮೂಲಕ ತೈಲ ಹರಿಯಲಿ: ಟ್ರಂಪ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ‘ಟ್ರೂತ್ ಸೋಷಿಯಲ್’ ಖಾತೆಯಲ್ಲಿ ಈ ಶುಭ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ‘ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಜೊತೆಗಿನ ಒಪ್ಪಂದವು ಈಗ ಪೂರ್ಣಗೊಂಡಿದೆ. ಎಲ್ಲರಿಗೂ ಅಭಿನಂದನೆಗಳು! ನಾನು ಇಂದಿನಿಂದ ಹಾರ್ಮುಜ್ ಜಲಸಂಧಿಯನ್ನು ಟೋಲ್-ಮುಕ್ತವಾಗಿ ಮುಕ್ತಗೊಳಿಸಲು ಸಂಪೂರ್ಣ ಅಧಿಕಾರ ನೀಡುತ್ತಿದ್ದೇನೆ. ಹಾಗೆಯೇ, ಅಮೆರಿಕ ನೌಕಾಪಡೆಯ ದಿಗ್ಬಂಧನವನ್ನು ತಕ್ಷಣವೇ ತೆಗೆದುಹಾಕಲು ಆದೇಶಿಸುತ್ತಿದ್ದೇನೆ. ವಿಶ್ವದ ಹಡಗುಗಳೇ, ನಿಮ್ಮ ಇಂಜಿನ್‌ಗಳನ್ನು ಸ್ಟಾರ್ಟ್ ಮಾಡಿ. ತೈಲವು ಮುಕ್ತವಾಗಿ ಹರಿಯಲಿ!’ ಎಂದು ಟ್ರಂಪ್ ಬರೆದುಕೊಂಡಿದ್ದಾರೆ. ಫೆಬ್ರವರಿ 28ರಂದು ಆರಂಭವಾಗಿದ್ದ ಈ ಯುದ್ಧದಿಂದಾಗಿ ಹೊರ್ಮುಝ್ ಜಲಸಂಧಿ ಬಂದ್ ಆಗಿತ್ತು. ಆದರೆ ಈಗ ಇರಾನ್ ಕೂಡ ಈ ಒಪ್ಪಂದವನ್ನು ಖಚಿತಪಡಿಸಿದ್ದು, ಇವತ್ತು ರಾತ್ರಿಯಿಂದಲೇ ಹೊರ್ಮುಝ್ ಮುಕ್ತಗೊಳ್ಳಲಿದೆ ಎಂದು ತಿಳಿಸಿದೆ.

ಅಮೆರಿಕದ ಮೇಲೆ ಇರಾನ್​ಗೆ ಇನ್ನೂ ಅನುಮಾನ!

ಇರಾನ್ ಮಾಧ್ಯಮಗಳ ಪ್ರಕಾರ, ‘ದೇವರ ಕೃಪೆಯಿಂದಾಗಿ ದುಷ್ಟ ಅಮೆರಿಕನ್ ಮತ್ತು ಜಿಯೋನಿಸ್ಟ್ ಶತ್ರುಗಳಿಗೆ ಶರಣಾಗುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂಬುದನ್ನು ನಮ್ಮ ಹೋರಾಟಗಾರರು ಸಾಬೀತುಪಡಿಸಿದ್ದಾರೆ. ಆದರೆ, ಈ ಒಪ್ಪಂದದ ಅರ್ಥ ನಮ್ಮ ಶತ್ರುವನ್ನು ಪೂರ್ತಿಯಾಗಿ ನಂಬುವುದು ಎಂದಲ್ಲ. ಇದನ್ನು ಅಪನಂಬಿಕೆಯೊಂದಿಗೇ ಅಂತಿಮಗೊಳಿಸಲಾಗಿದೆ. ಅಮೆರಿಕದ ಬದ್ಧತೆಗಳನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತೇವೆ’ ಎಂದು ಇರಾನ್ ಹೇಳಿದೆ. ಮುಂದಿನ 60 ದಿನಗಳ ಕದನ ವಿರಾಮದ ಅವಧಿಯಲ್ಲಿ ಅಂತಿಮ ಒಪ್ಪಂದದ ಮಾತುಕತೆಗಳು ಮುಂದುವರಿಯಲಿವೆ.

ಪಾಕಿಸ್ತಾನದ ಮಧ್ಯಸ್ಥಿಕೆ, ಜೂನ್ 19ಕ್ಕೆ ಸಹಿ

ಅಮೆರಿಕ ಮತ್ತು ಇರಾನ್ ನಡುವಿನ ಈ ಸಂಘರ್ಷವನ್ನು ತಣ್ಣಗಾಗಿಸಲು ಪಾಕಿಸ್ತಾನ ಪ್ರಮುಖ ಮಧ್ಯಸ್ಥಿಕೆ ವಹಿಸಿತ್ತು. ಈ ಬಗ್ಗೆ ಮಾಹಿತಿ ನೀಡಿರುವ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್, ‘ವ್ಯಾಪಕ ಮಾತುಕತೆಗಳ ನಂತರ ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದ ಏರ್ಪಟ್ಟಿದೆ ಎಂದು ಘೋಷಿಸಲು ಸಂತೋಷವಾಗುತ್ತಿದೆ. ಲೆಬನಾನ್ ಸೇರಿದಂತೆ ಎಲ್ಲಾ ರಂಗಗಳಲ್ಲಿ ಮಿಲಿಟರಿ ಕಾರ್ಯಾಚರಣೆಗಳನ್ನು ತಕ್ಷಣವೇ ಮತ್ತು ಶಾಶ್ವತವಾಗಿ ಕೊನೆಗೊಳಿಸಲು ಉಭಯ ದೇಶಗಳು ಒಪ್ಪಿಕೊಂಡಿವೆ. ಜೂನ್ 19ರ ಶುಕ್ರವಾರದಂದು ಸ್ವಿಟ್ಚರ್ಲೆಂಡ್‌ನಲ್ಲಿ ಅಧಿಕೃತ ಸಹಿ ಸಮಾರಂಭ ನಡೆಯಲಿದೆ’ ಎಂದು ತಿಳಿಸಿದ್ದಾರೆ. ಜುಲೈ ಆರಂಭದಲ್ಲಿ ಇರಾನ್‌ನ ಮಾಜಿ ಸುಪ್ರೀಂ ಲೀಡರ್ ಆಯತೊಲ್ಲಾ ಖಮೇನಿ ಅವರ ಅಂತ್ಯಕ್ರಿಯೆ ನಡೆಯಲಿದ್ದು, ಅದಕ್ಕೂ ಮುನ್ನವೇ ಈ ಕದನ ವಿರಾಮ ಜಾರಿಗೆ ಬರುತ್ತಿರುವುದು ಗಮನಾರ್ಹ.

ನೆತನ್ಯಾಹು ವಿರುದ್ಧ ಟ್ರಂಪ್ ಆಕ್ರೋಶ

ಒಂದೆಡೆ ಶಾಂತಿ ಮಾತುಕತೆಗಳು ಅಂತಿಮ ಹಂತ ತಲುಪಿದ್ದಾಗಲೇ, ಇಸ್ರೇಲ್ ಸೇನೆ ಲೆಬನಾನ್ ಮೇಲೆ ಭೀಕರ ದಾಳಿ ನಡೆಸಿತ್ತು. ಇಸ್ರೇಲ್‌ನ ಈ ಕ್ರಮಕ್ಕೆ ಅಮೆರಿಕ ಅಧ್ಯಕ್ಷ ಟ್ರಂಪ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಯುದ್ಧ ನಿಲ್ಲುವ ಮುನ್ಸೂಚನೆ ಸಿಕ್ಕಿದ್ದರೂ, ಲೆಬನಾನ್ ಮೇಲಿನ ದಾಳಿಯನ್ನು ಇಸ್ರೇಲ್ ಸಂಪೂರ್ಣವಾಗಿ ನಿಲ್ಲಿಸುತ್ತದೆಯೇ ಮತ್ತು ಇಸ್ರೇಲ್ ಈ ಒಪ್ಪಂದದ ಭಾಗವಾಗಿದೆಯೇ ಇಲ್ಲವೇ ಎಂಬುದು ಜಿನೇವಾದಲ್ಲಿ ನಡೆಯುವ ಸುದ್ದಿಗೋಷ್ಠಿಯ ಬಳಿಕವಷ್ಟೇ ಸ್ಪಷ್ಟವಾಗಬೇಕಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಕೊಲ್ಲೂರು ಮೂಕಾಂಬಿಕೆಯ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಅನಂತ್​​ ಅಂಬಾನಿ – Kannada News | Business Tycoon Mukesh Ambani’s Son Anant Ambani Visits Udupi Krishna Mutt

ಉಡುಪಿ, ಜೂನ್​​ 15: ಉದ್ಯಮಿ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಕುಟುಂಬದ ಗುರೂಜಿ ಅವರೊಂದಿಗೆ ಆಗಮಿಸಿದ್ದ ಅವರು ಕೊಲ್ಲೂರು ಮೂಕಾಂಬಿಕೆಯ ದರ್ಶನದ ಬಳಿಕ ಉಡುಪಿ ಕೃಷ್ಣನನ್ನೂ ಕಣ್ತುಂಬಿಕೊಂಡಿದ್ದಾರೆ. ಉಡುಪಿ ಮಠದ ಆಡಳಿತ ಮಂಡಳಿಯು ಅನಂತ್ ಅಂಬಾನಿ ಅವರನ್ನು ಸ್ವಾಗತಿಸಿದ್ದು, ಕೃಷ್ಣನ ದರ್ಶನದ ಬಳಿಕ ಪರ್ಯಾಯ ಶೀರೂರು ಮಠದ ಶ್ರೀಗಳನ್ನೂ ಅನಂತ್​​ ಭೇಟಿಯಾಗಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link