‘ರಾಜಕೀಯ ಪದೋನ್ನತಿ ಆಸೆ ನನಗೂ ಇದೆ’: ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್ – Kannada News | Karnataka Home Minister G Parameshwar on Political Aspirations, Central Funds for Police, and Jail Security

ಬೆಂಗಳೂರು, ಜ.1: ಡಿಸಿಎಂ ಡಿಕೆ ಶಿವಕುಮಾರ್​ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಸಿಎಂ ಕುರ್ಚಿಗಾಗಿ ಗುದ್ದಾಟ ನಡೆಸುತ್ತಿರುವ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಕೂಡ ಇದೀಗ ತಾವು ಮುಖ್ಯಮಂತ್ರಿಯಾಗಬೇಕು ಎಂಬ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಈ ಮೂಲಕ ತಮ್ಮ ರಾಜಕೀಯ ಆಕಾಂಕ್ಷೆಗಳನ್ನು ಅವರು ಮಾಧ್ಯಮದ ಮುಂದೆ ವ್ಯಕ್ತಪಡಿಸಿದ್ದಾರೆ. “ರಾಜಕೀಯ ಪದೋನ್ನತಿ ಆಸೆ ನನಗೂ ಇದೆ” ಎಂದು ಹೇಳುವ ಮೂಲಕ ತಮ್ಮ ಹೈಕಮಾಂಡ್‌ನ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ. ಪ್ರತಿಯೊಬ್ಬ ವ್ಯಕ್ತಿಗೂ ಆಂಬಿಷನ್ ಇರಬೇಕು ಎಂದು ತಮ್ಮ…

Read More

ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಆದ ಕಲೆಕ್ಷನ್​ ಎಷ್ಟು? – Kannada News | Namma Metro Records Rupees 3 Crore New Year Earnings

ಬೆಂಗಳೂರು, ಜನವರಿ 01: ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ನಮ್ಮ ಮೆಟ್ರೋ ಭಾರಿ ಆದಾಯ ಗಳಿಸಿದೆ. ನಿನ್ನೆ ಒಂದೇ ದಿನದಲ್ಲಿ ಮೆಟ್ರೋಗೆ 3 ಕೋಟಿ 8 ಲಕ್ಷ ರೂ. ಆದಾಯ ಹರಿದುಬಂದಿದೆ ಎಂದು ಮೆಟ್ರೋ ಅಂಕಿಅಂಶಗಳು ತಿಳಿಸಿವೆ. ಸುಮಾರು 8,93,903 ಮಂದಿ ಪ್ರಯಾಣಿಕರು ಮೆಟ್ರೋ ಸೇವೆಗಳನ್ನು ಬಳಸಿಕೊಂಡಿದ್ದಾರೆ. ಹೊಸ ವರ್ಷದ ಸಂಭ್ರಮಾಚರಣೆಗೆ ಅನುಕೂಲವಾಗುವಂತೆ ಮೆಟ್ರೋ ಸಂಚಾರ ಸಮಯವನ್ನು ವಿಸ್ತರಿಸಲಾಗಿತ್ತು. ನಿನ್ನೆ ಬೆಳಗ್ಗೆ 5 ಗಂಟೆಯಿಂದ ಇಂದು ಬೆಳಗ್ಗಿನ ಜಾವ 3:10ರವರೆಗೆ ಮೆಟ್ರೋ ಸಂಚಾರ ಸಮಯ ವಿಸ್ತರಿಸಲಾಗಿತ್ತು. ಎಂ.ಜಿ. ರಸ್ತೆ…

Read More

Optical Illusion: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಮೊಲವನ್ನು ಕಂಡುಹಿಡಿಯಬಲ್ಲಿರಾ – Kannada News | Optical Illusion: Find the hidden rabbit in this picture

ಆಪ್ಟಿಕಲ್‌ ಇಲ್ಯೂಷನ್‌Image Credit source: Social Media ಮೋಜಿನ ಆಟಗಳ ಎಲ್ಲರಿಗೂ ಇಷ್ಟನೇ. ಆದರೆ ಈ ಆಪ್ಟಿಕಲ್‌ ಇಲ್ಯೂಷನ್ (optical illusion) ಸಂಬಂಧಿತ ಚಿತ್ರಗಳನ್ನು ಬಿಡಿಸುವುದು ಕಷ್ಟಕರ. ಹೀಗಾಗಿ ಇಂತಹ ಚಿತ್ರಗಳತ್ತ ಕಣ್ಣಾಯಿಸಿದರೂ ಮೊದಲ ಪ್ರಯತ್ನದಲ್ಲೇ ವಿಫಲರಾಗುವವರೇ ಹೆಚ್ಚು. ಅದಲ್ಲದೇ, ಒಗಟಿನ ಚಿತ್ರಗಳನ್ನು ಬಿಡಿಸುವಾಗ ಹತ್ತು ಜನರಲ್ಲಿ ಒಬ್ಬರಿಗೆ ಮಾತ್ರ ಕ್ಷಣಾರ್ಧದಲ್ಲಿ ಉತ್ತರ ಹೇಳಲು ಸಾಧ್ಯ. ಇದೀಗ ವೈರಲ್ ಆಗಿರುವ ಚಿತ್ರದಲ್ಲಿ ಜಾಣತನದಿಂದ ಮರೆ ಮಾಡಲಾಗಿರುವ ಮೊಲವನ್ನು 15 ಸೆಕೆಂಡುಗಳಲ್ಲಿ ಕಂಡುಹಿಡಿಯಬೇಕು. ಈ ಒಗಟು ಬಿಡಿಸಲು ನೀವು…

Read More

ಸಿಹಿ ಸುದ್ದಿ ಹಂಚಿಕೊಂಡ ‘ಸು ಫ್ರಮ್ ಸೋ’ ಭಾನು

‘ಸು ಫ್ರಮ್ ಸೋ’ ಸಿನಿಮಾದಲ್ಲಿ ಭಾನು ಪಾತ್ರ ಮಾಡಿದ ಸಂಧ್ಯಾ ಅರಕೆರೆ ಬಾಳಲ್ಲಿ ಈಗ ಖುಷಿಯ ಕ್ಷಣ ಬಂದಿದೆ. ಅವರು ಶೀಘ್ರವೇ ತಾಯಿ ಆಗುತ್ತಿದ್ದಾರೆ. ಬೇಬಿ ಬಂಪ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಗಮನ ಸೆಳೆದಿದ್ದಾರೆ. ತಾಯಿ ಆಗುತ್ತಿರುವ ಸಿಹಿ ಸುದ್ದಿಯನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ‘ಸು ಫ್ರಮ್ ಸೋ’ ಚಿತ್ರದಲ್ಲಿ ಭಾನು ಆಗಿ ಎಲ್ಲರನ್ನೂ ಆವರಿಸಿಕೊಂಡಿದ್ದರು ಸಂಧ್ಯಾ. ಅವರ ಬಾಳಲ್ಲಿ 2025 ವಿಶೇಷವಾಗಿತ್ತು. ಸಿನಿಮಾ 100 ಕೋಟಿ ರೂಪಾಯಿ ಕ್ಲಬ್ ಸೇರಿದ್ದು ಒಂದುಕಡೆಯಾದರೆ, ಅವರು ತಾಯಿ…

Read More

Kala Sarpa Dosha: ಜಾತಕದಲ್ಲಿ ಕಾಳ ಸರ್ಪ ದೋಷ ಇದ್ರೆ, ತಪ್ಪದೇ ಈ 5 ದೇವಾಲಯಗಳಿಗೆ ಭೇಟಿ ನೀಡಿ – Kannada News | Kala Sarpa Dosha Remedies: 5 Sacred Temples for Spiritual Relief

ನಿಮ್ಮ ಜಾತಕದಲ್ಲಿ ಕಾಲ ಸರ್ಪ ದೋಷವಿದ್ದರೆ ಚಿಂತಿಸಬೇಕಾಗಿಲ್ಲ. ಕಾಲ ಸರ್ಪ ದೋಷವನ್ನು ತಡೆಗಟ್ಟಲು ಅನೇಕ ಅದ್ಭುತ ದೇವಾಲಯಗಳಿವೆ. ನೀವು ಆ ದೇವಾಲಯಗಳಿಗೆ ಭೇಟಿ ನೀಡಿ ಪೂಜಿಸಿದರೆ, ನೀವು ಕಾಲ ಸರ್ಪ ದೋಷದ ಪರಿಣಾಮಗಳಿಂದ ಮುಕ್ತರಾಗುತ್ತೀರಿ. ಅವುಗಳಲ್ಲಿ, ವಿಶೇಷವಾಗಿ ಐದು ದೇವಾಲಯಗಳಿವೆ. ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ಮತ್ತು ಶ್ರೀ ಕಾಳಹಸ್ತಿಯಂತಹ ಸ್ಥಳಗಳಲ್ಲಿ ವಿಶೇಷ ಪೂಜೆಗಳನ್ನು ಮಾಡುವ ಮೂಲಕ ಮತ್ತು ನವಗ್ರಹ ಪೂಜೆಗಳನ್ನು ಮಾಡುವ ಮೂಲಕ, ನೀವು ದೋಷದ ಪರಿಣಾಮವನ್ನು ಕಡಿಮೆ ಮಾಡಬಹುದು. ಈ ಪ್ರಮುಖ ದೇವಾಲಯಗಳ ಬಗ್ಗೆ ಮಾಹಿತಿ…

Read More

ಹೂ, ಎಲೆಗಳ ಸಿಂಗಾರ: ಹೊಸ ವರ್ಷದ ಮೊದಲ ದಿನ ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ – Kannada News | Devotees Flock to Mysurus Chamundi Hills for New Years Day Darshan of Goddess Chamundeshwari

ಮೈಸೂರು, ಜನವರಿ 01: ಹೊಸ ವರ್ಷ 2026ರ ಮೊದಲ ದಿನದಂದು ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಸಡಗರ ಸಂಭ್ರಮ ಮನೆಮಾಡಿತ್ತು. ಚಾಮುಂಡಿ ಬೆಟ್ಟಕ್ಕೆ ಭಕ್ತಸಾಗರವೇ ಹರಿದು ಬಂದಿದ್ದು, ವಿಶೇಷ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದರು. ದೇವಿಗೆ ವಿಶೇಷ ಅಲಂಕಾರ, ಅಭಿಷೇಕ ಮತ್ತು ಮಂಗಳಾರತಿ ಸೇವೆಗಳನ್ನು ನೆರವೇರಿಸಲಾಯಿತು. ಹೊಸ ವರ್ಷದಂದು ದೇವಿಯನ್ನು ಪೂಜಿಸಿದರೆ ಶುಭವಾಗುತ್ತದೆ ಎಂಬ ನಂಬಿಕೆಯಿಂದಾಗಿ ರಾಜ್ಯದ ಮೂಲೆ ಮೂಲೆಗಳಿಂದ, ಹೊರ ರಾಜ್ಯಗಳಿಂದ ಹಾಗೂ ವಿದೇಶಗಳಿಂದಲೂ ಭಕ್ತರು ದರ್ಶನಕ್ಕೆ ಆಗಮಿಸಿದ್ದರು. ಚಾಮುಂಡಿ ದೇವಿ ಅಲಂಕಾರ ಪ್ರಿಯೆಯಾಗಿರುವ ಕಾರಣ,…

Read More

‘ಮಾರ್ಕ್’ ಹಾಗೂ ‘45’ ಸಿನಿಮಾಗಳು ಒಂದು ವಾರಕ್ಕೆ ಗಳಿಸಿದ್ದು ಎಷ್ಟು? – Kannada News | Mark and 45 Box Office Collection Day 7: Kannada Movies Cross 55 Cr in 1st Week

45-ಮಾರ್ಕ್ ಸಿನಿಮಾ ಬಾಕ್ಸ್ ಆಫೀಸ್ ಕಲೆಕ್ಷನ್ ‘ಮಾರ್ಕ್’ ಸಿನಿಮಾ ಹಾಗೂ ‘45’ ಚಿತ್ರಗಳು ತೆರೆಗೆ ಬಂದು ಒಂದು ವಾರ ಕಳೆದಿವೆ. ಏಳು ದಿನಗಳಲ್ಲಿ ಸಿನಿಮಾಗಳು ಉತ್ತಮ ಕಲೆಕ್ಷನ್ ಮಾಡಿವೆ. ಎರಡೂ ಸಿನಿಮಾಗಳಲ್ಲಿ ಸ್ಟಾರ್ ಹೀರೋಗಳು ನಟಿಸಿದ್ದಾರೆ. ಎರಡೂ ಚಿತ್ರಗಳು ಬಿಗ್ ಬಜೆಟ್​​​ನವು. ಈ ಕಾರಣದಿಂದ ಸಿನಿಮಾ ನಿರೀಕ್ಷೆ ಮೂಡಿಸಿತ್ತು. ಎರಡೂ ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ ಉತ್ತಮ ಗಳಿಕೆ ಮಾಡುತ್ತಿವೆ. ಈ ಚಿತ್ರಗಳ ಒಟ್ಟಾರೆ ಕಲೆಕ್ಷನ್ ವಿವರ ಇಲ್ಲಿದೆ. ‘ಮಾರ್ಕ್’ ಚಿತ್ರಕ್ಕೆ ಕಿಚ್ಚ ಸುದೀಪ್ ಹೀರೋ. ‘ಮ್ಯಾಕ್ಸ್’ ಸಿನಿಮಾ…

Read More

ಮನೆಯೊಳಗೆ ಗುಂಡಿಕ್ಕಿ ಆಭರಣ ವ್ಯಾಪಾರಿ ಮತ್ತವರ ಪತ್ನಿಯ ಹತ್ಯೆ – Kannada News | Madhya Pradesh: Jeweller and Wife Killed at Home, Police Probe Business Dispute Angle

ಆಭರಣ ವ್ಯಾಪಾರಿ ದಂಪತಿImage Credit source: India Today ಮಧ್ಯಪ್ರದೇಶ, ಜನವರಿ 01: ಆಭರಣ ವ್ಯಾಪಾರಿ ಮತ್ತವರ ಪತ್ನಿ(Wife) ಮನೆಯೊಳಗೆ ಶವವಾಗಿ ಪತ್ತೆಯಾಗಿರುವ ಘಟನೆ ಮಂಗಳವಾರ ಮಧ್ಯಪ್ರದೇಶದ ಮಂದ್ಸೌರ್​ನಲ್ಲಿ ನಡೆದಿದೆ. ಪ್ರಾಥಮಿಕ ತನಿಖೆಯಲ್ಲಿ ಅವರ ವ್ಯವಹಾರದ ವಿವಾದವೇ ಈ ಸಾವಿಗೆ ಕಾರಣ ಎನ್ನಲಾಗಿದೆ. ಇಬ್ಬರನ್ನೂ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅದೇ ಸ್ಥಳದಲ್ಲಿ ವಿಕಾಸ್ ಎಂಬುವವರ ಶವವೂ ದೊರೆತಿದೆ.  ಪೊಲೀಸರು ಸಾವಿಗೆ ಕಾರಣವೇನೆಂಬುದ ತಿಳಿಯಲು ಪ್ರಯತ್ನಿಸುತ್ತಿದ್ದಾರೆ. ಮೃತ ದಂಪತಿಯನ್ನು ದಿಲೀಪ್ ಜೈನ್ ಮತ್ತು ಅವರ ಪತ್ನಿ ರೇಖಾ ಎಂದು…

Read More

Gold Rate Today Bangalore: ಚಿನ್ನದ ಬೆಲೆ ತುಸು ಏರಿಕೆ; ಬೆಳ್ಳಿ ಅಲ್ಪ ಇಳಿಕೆ – Kannada News | Gold Price Today on 1st January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 1: ಸತತ ಮೂರು ದಿನ ಇಳಿಕೆ ಕಂಡಿದ್ದ ಚಿನ್ನದ ಬೆಲೆ (gold rate) ಇಂದು ಗುರುವಾರ ಅಲ್ಪ ಏರಿಕೆ ಕಂಡಿದೆ. 15 ರೂ ಹೆಚ್ಚಳವಾಗಿರುವ ಆಭರಣ ಚಿನ್ನದ ಬೆಲೆ 12,400 ಗಡಿಗಿಂತ ಕೆಳಗೆ ಇಳಿದಿದೆ. ನಿನ್ನೆ ಚಿನ್ನದ ಬೆಲೆ 120 ರೂಗಳಷ್ಟು ಇಳಿಕೆಯಾಗಿತ್ತು. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ಕಡಿಮೆ ಆಗಿದೆ. ಇದೇ ವೇಳೆ, ಬೆಳ್ಳಿ ಬೆಲೆಯ ಇಳಿಕೆಯೂ ಮುಂದುವರಿದಿದೆ. ನಿನ್ನೆ ಒಂದು ರೂ ಇಳಿದಿದ್ದ ಇದರ ಬೆಲೆ ಇವತ್ತು ಕೂಡ ಒಂದು…

Read More

ಗಾನವಿ ಕುಟುಂಬಸ್ಥರಿಗೆ ಶಾಕ್​​: ಸೂರಜ್​​ ಸಾವಿನ ಸಂಬಂಧ 9 ಮಂದಿ ಮೇಲೆ FIR – Kannada News | FIR Filed Against Nine Members of Ganavi Family Over Suraj’s Death

ಬೆಂಗಳೂರು, ಜನವರಿ 01: ರಾಜ್ಯಾದ್ಯಂತ ಸುದ್ದಿಯಾಗಿದ್ದ ನವ ವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣ ಸಂಬಂಧ ಆಕೆಯ ಕುಟುಂಬಸ್ಥರ ವಿರುದ್ಧವೇ ಈಗ ಎಫ್​​ಐಆರ್​ ದಾಖಲಾಗಿದೆ. ಸೂರಜ್ ಅತ್ತಿಗೆ ನೀಡಿದ ದೂರಿನ ಮೇರೆಗೆ 9 ಮಂದಿ ಮೇಲೆ ಪೊಲೀಸರು ಕೇಸ್​​ ದಾಖಲಿಸಿದ್ದಾರೆ. ಪತ್ನಿ ಗಾನವಿ ಕುಟುಂಬಸ್ಥರ ಆರೋಪಗಳ ಹಿನ್ನೆಲೆ ಪತಿ ಸೂರಜ್​​ ಕೂಡ ಸೂಸೈಡ್​​ ಮಾಡಿಕೊಂಡಿದ್ದ. ಹೀಗಾಗಿ ಆತನ ಸಾವಿಗೆ ಗಾನವಿ ಕುಟುಂಬಸ್ಥರೇ ಕಾರಣ ಎಂದು ದೂರು ನೀಡಲಾಗಿದೆ. ಸೂರಜ್ ತಾಯಿ ಜಯಂತಿ ಮೇಲೆ ವರದಕ್ಷಿಣೆ ಕಿರುಕುಳ ಆರೋಪದ ಜೊತೆಗೆ…

Read More