Category Archives: Blog

Your blog category

‘ರಾಜಕೀಯ ಪದೋನ್ನತಿ ಆಸೆ ನನಗೂ ಇದೆ’: ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್ – Kannada News | Karnataka Home Minister G Parameshwar on Political Aspirations, Central Funds for Police, and Jail Security

ಬೆಂಗಳೂರು, ಜ.1: ಡಿಸಿಎಂ ಡಿಕೆ ಶಿವಕುಮಾರ್​ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಸಿಎಂ ಕುರ್ಚಿಗಾಗಿ ಗುದ್ದಾಟ ನಡೆಸುತ್ತಿರುವ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಕೂಡ ಇದೀಗ ತಾವು ಮುಖ್ಯಮಂತ್ರಿಯಾಗಬೇಕು ಎಂಬ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಈ ಮೂಲಕ ತಮ್ಮ ರಾಜಕೀಯ ಆಕಾಂಕ್ಷೆಗಳನ್ನು ಅವರು ಮಾಧ್ಯಮದ ಮುಂದೆ ವ್ಯಕ್ತಪಡಿಸಿದ್ದಾರೆ. “ರಾಜಕೀಯ ಪದೋನ್ನತಿ ಆಸೆ ನನಗೂ ಇದೆ” ಎಂದು ಹೇಳುವ ಮೂಲಕ ತಮ್ಮ ಹೈಕಮಾಂಡ್‌ನ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ. ಪ್ರತಿಯೊಬ್ಬ ವ್ಯಕ್ತಿಗೂ ಆಂಬಿಷನ್ ಇರಬೇಕು ಎಂದು ತಮ್ಮ ಭಾವನೆಯನ್ನು ಅವರು ಹಂಚಿಕೊಂಡಿದ್ದಾರೆ. ತಾನು ಯಾವಾಗಲೂ ಆಶಾವಾದಿಯಾಗಿರಬೇಕು. ರಾಜಕೀಯಕ್ಕೆ ಸೇರುವಾಗ ಎಂಎಲ್‌ಎ ಆಗಿ, ನಂತರ ಮಂತ್ರಿಯಾಗಿ ಮುಂದುವರಿಯುವ ಆಸೆ ಇರುವುದು ಸಹಜ. ಪ್ರತಿಯೊಂದು ಹಂತದಲ್ಲೂ ಎತ್ತರದ ಸ್ಥಾನಕ್ಕೆ ಹೋಗುವ ಆಲೋಚನೆ ಇರುತ್ತದೆ ಎಂದು ಹೇಳಿದ್ದಾರೆ. ಇದರ ಜತೆಗೆ ತಮ್ಮ ಇಲಾಖೆಯ ಬಗ್ಗೆಯೂ ಮಾತನಾಡಿದ್ದಾರೆ. ಇದೇ ಮೊದಲ ಬಾರಿಗೆ 30ಕ್ಕೂ ಹೆಚ್ಚು ಡಿಐಜಿಗಳು ಮತ್ತು ಐಜಿಗಳಿಗೆ ಮುಂಬಡ್ತಿ ನೀಡಲಾಗಿದೆ ಎಂದು ಪರಮೇಶ್ವರ್ ತಿಳಿಸಿದರು. ಅವರೆಲ್ಲರೂ ಉತ್ತಮವಾಗಿ ತರಬೇತಿ ಪಡೆದ ಐಪಿಎಸ್ ಅಧಿಕಾರಿಗಳಾಗಿದ್ದು, ರಾಜ್ಯಕ್ಕೆ ಉತ್ತಮ ಸೇವೆ ನೀಡುವ ನಿರೀಕ್ಷೆಯಿದೆ ಎಂದು ಹೇಳಿದರು. ಇಲಾಖೆಯ ಆಧುನೀಕರಣಕ್ಕೆ ಕೇಂದ್ರ ಸರ್ಕಾರದಿಂದ 350 ಕೋಟಿ ರೂಪಾಯಿ ಅನುದಾನ ಮೊದಲ ಬಾರಿಗೆ ಬಂದಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು. ಎಡಿಜಿಪಿ ಮುರುಗನ್ ಅವರ ಪ್ರಯತ್ನದಿಂದ ಇದು ಸಾಧ್ಯವಾಗಿದೆ. ಬೆಳಗಾವಿ ಜೈಲಿನಲ್ಲಿ ಗಾಂಜಾ ಎಸೆಯುವಂತಹ ಘಟನೆಗಳ ಬಗ್ಗೆ ಡಿಜಿ ಅಲೋಕ್ ಕುಮಾರ್ ಸ್ಥಳ ಪರಿಶೀಲನೆಗೆ ಭೇಟಿ ನೀಡಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಆದ ಕಲೆಕ್ಷನ್​ ಎಷ್ಟು? – Kannada News | Namma Metro Records Rupees 3 Crore New Year Earnings

ಬೆಂಗಳೂರು, ಜನವರಿ 01: ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ನಮ್ಮ ಮೆಟ್ರೋ ಭಾರಿ ಆದಾಯ ಗಳಿಸಿದೆ. ನಿನ್ನೆ ಒಂದೇ ದಿನದಲ್ಲಿ ಮೆಟ್ರೋಗೆ 3 ಕೋಟಿ 8 ಲಕ್ಷ ರೂ. ಆದಾಯ ಹರಿದುಬಂದಿದೆ ಎಂದು ಮೆಟ್ರೋ ಅಂಕಿಅಂಶಗಳು ತಿಳಿಸಿವೆ. ಸುಮಾರು 8,93,903 ಮಂದಿ ಪ್ರಯಾಣಿಕರು ಮೆಟ್ರೋ ಸೇವೆಗಳನ್ನು ಬಳಸಿಕೊಂಡಿದ್ದಾರೆ. ಹೊಸ ವರ್ಷದ ಸಂಭ್ರಮಾಚರಣೆಗೆ ಅನುಕೂಲವಾಗುವಂತೆ ಮೆಟ್ರೋ ಸಂಚಾರ ಸಮಯವನ್ನು ವಿಸ್ತರಿಸಲಾಗಿತ್ತು. ನಿನ್ನೆ ಬೆಳಗ್ಗೆ 5 ಗಂಟೆಯಿಂದ ಇಂದು ಬೆಳಗ್ಗಿನ ಜಾವ 3:10ರವರೆಗೆ ಮೆಟ್ರೋ ಸಂಚಾರ ಸಮಯ ವಿಸ್ತರಿಸಲಾಗಿತ್ತು. ಎಂ.ಜಿ. ರಸ್ತೆ ನಿಲ್ದಾಣ ಹೊರತುಪಡಿಸಿ, ಹಳದಿ, ನೇರಳೆ ಮತ್ತು ಹಸಿರು ಮಾರ್ಗಗಳ ಎಲ್ಲಾ ನಿಲ್ದಾಣಗಳು ಕಾರ್ಯನಿರ್ವಹಿಸಿದ್ದವು. ಪ್ರಮುಖವಾಗಿ ಕೋರಮಂಗಲ, ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರದಂತಹ ಪ್ರದೇಶಗಳಲ್ಲಿ ಜನರು ಹೊಸ ವರ್ಷಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರಿಂದ ಮೆಟ್ರೋಗೆ ಅಧಿಕ ಆದಾಯ ಬಂದಿದೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Optical Illusion: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಮೊಲವನ್ನು ಕಂಡುಹಿಡಿಯಬಲ್ಲಿರಾ – Kannada News | Optical Illusion: Find the hidden rabbit in this picture

ಆಪ್ಟಿಕಲ್‌ ಇಲ್ಯೂಷನ್‌Image Credit source: Social Media

ಮೋಜಿನ ಆಟಗಳ ಎಲ್ಲರಿಗೂ ಇಷ್ಟನೇ. ಆದರೆ ಈ ಆಪ್ಟಿಕಲ್‌ ಇಲ್ಯೂಷನ್ (optical illusion) ಸಂಬಂಧಿತ ಚಿತ್ರಗಳನ್ನು ಬಿಡಿಸುವುದು ಕಷ್ಟಕರ. ಹೀಗಾಗಿ ಇಂತಹ ಚಿತ್ರಗಳತ್ತ ಕಣ್ಣಾಯಿಸಿದರೂ ಮೊದಲ ಪ್ರಯತ್ನದಲ್ಲೇ ವಿಫಲರಾಗುವವರೇ ಹೆಚ್ಚು. ಅದಲ್ಲದೇ, ಒಗಟಿನ ಚಿತ್ರಗಳನ್ನು ಬಿಡಿಸುವಾಗ ಹತ್ತು ಜನರಲ್ಲಿ ಒಬ್ಬರಿಗೆ ಮಾತ್ರ ಕ್ಷಣಾರ್ಧದಲ್ಲಿ ಉತ್ತರ ಹೇಳಲು ಸಾಧ್ಯ. ಇದೀಗ ವೈರಲ್ ಆಗಿರುವ ಚಿತ್ರದಲ್ಲಿ ಜಾಣತನದಿಂದ ಮರೆ ಮಾಡಲಾಗಿರುವ ಮೊಲವನ್ನು 15 ಸೆಕೆಂಡುಗಳಲ್ಲಿ ಕಂಡುಹಿಡಿಯಬೇಕು. ಈ ಒಗಟು ಬಿಡಿಸಲು ನೀವು ರೆಡಿ ಇದ್ದರೆ, ಈ ಚಿತ್ರದತ್ತ ಕಣ್ಣಾಯಿಸಿ.

ಈ ಚಿತ್ರದಲ್ಲಿ ಏನು ಕಾಣಿಸುತ್ತದೆ?

ಇಲ್ಯೂಷನ್ ಚಿತ್ರವು  ನಿಮ್ಮ ಮೆದುಳಿಗೆ ವ್ಯಾಯಾಮ ನೀಡುವುದಲ್ಲದೇ, ನಿಮ್ಮ ದೃಷ್ಟಿ ಸಾಮರ್ಥ್ಯ, ಯೋಚನಾ ಸಾಮರ್ಥ್ಯ ಎಷ್ಟಿದೆ ಪರೀಕ್ಷಿಸುತ್ತದೆ. ಇದೇ ತರಹದ ಚಿತ್ರ ಇದಾಗಿದ್ದು, ಇಲ್ಲಿ ಯುವಕ ಯುವತಿಯರು ಹಾಗೂ ಪುಟಾಣಿಗಳು ಸ್ವಚ್ಛತಾ ಕೆಲಸದಲ್ಲಿ ತೊಡಗಿ ಕೊಂಡಿರುವುದನ್ನು ಕಾಣಬಹುದು. ಕೆಲವರು ಕಸವನ್ನು ಗೋಣಿ ಚೀಲಕ್ಕೆ ತುಂಬಿಸುತ್ತಿದ್ದರೆ,  ಇನ್ನು ಕೆಲವರು ಗುಡಿಸಿ ಸ್ವಚ್ಛಗೊಳಿಸುವುದರಲ್ಲಿ ಬ್ಯುಸಿಯಾಗಿದ್ದಾರೆ. ಇಲ್ಲಿ ಮನೆಯ ಮುದ್ದಿನ ಶ್ವಾನವಿರುವುದನ್ನು ಕಾಣಬಹುದು. ಇದೆಲ್ಲದರ ನಡುವೆ ಮೊಲವೊಂದು ಅಡಗಿ ಕುಳಿತಿದ್ದು, ಈ ಪ್ರಾಣಿ ಎಲ್ಲಿದೆ ಎಂದು ಹುಡುಕುವ ಸವಾಲು ಇಲ್ಲಿದೆ.

ಇದನ್ನೂ ಓದಿ: ಒಣಗಿದ ಎಲೆಗಳ ನಡುವೆ ಅಡಗಿ ಕುಳಿತಿರುವ ಹಾವನ್ನು ಗುರುತಿಸಬಲ್ಲಿರಾ

ಮೊಲವನ್ನು ಗುರುತಿಸಲು ಸಾಧ್ಯವಾಯಿತೇ?

ಕೇವಲ ಹದಿನೈದು ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿ ಅಡಗಿರುವ ಮೊಲವನ್ನು ಗುರುತಿಸುವುದು ಅಸಾಧ್ಯ. ಆದರೆ ವೀಕ್ಷಣಾ ಸಾಮರ್ಥ್ಯ ಹೊಂದಿದವರು ಮಾತ್ರ ಈ ಒಗಟನ್ನು ಸಲೀಸಾಗಿ ಈಗಾಗಲೇ ಬಿಡಿಸಲು ಸಾಧ್ಯವಾಗಿದೆ. ನಿಮ್ಮ ಕಣ್ಣಿಗೆ ಮೊಲ ಕಾಣಿಸಿಲ್ಲ ಎಂದಾದರೆ ಟೆನ್ಶನ್ ಮಾಡಿಕೊಳ್ಳಬೇಡಿ, ನಾವೇ ಈ ಮುದ್ದಾದ ಪ್ರಾಣಿ ಎಲ್ಲಿದೆ ಎಂದು ಹೇಳುತ್ತೇವೆ. ಈ ಕೆಳಗಿನ ಫೋಟೋವನ್ನು ನೋಡಿ. ಇಲ್ಲಿ ಮೊಲವನ್ನು ಗುರುತಿಸಿದ್ದೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಿಹಿ ಸುದ್ದಿ ಹಂಚಿಕೊಂಡ ‘ಸು ಫ್ರಮ್ ಸೋ’ ಭಾನು

Source link

Kala Sarpa Dosha: ಜಾತಕದಲ್ಲಿ ಕಾಳ ಸರ್ಪ ದೋಷ ಇದ್ರೆ, ತಪ್ಪದೇ ಈ 5 ದೇವಾಲಯಗಳಿಗೆ ಭೇಟಿ ನೀಡಿ – Kannada News | Kala Sarpa Dosha Remedies: 5 Sacred Temples for Spiritual Relief

ನಿಮ್ಮ ಜಾತಕದಲ್ಲಿ ಕಾಲ ಸರ್ಪ ದೋಷವಿದ್ದರೆ ಚಿಂತಿಸಬೇಕಾಗಿಲ್ಲ. ಕಾಲ ಸರ್ಪ ದೋಷವನ್ನು ತಡೆಗಟ್ಟಲು ಅನೇಕ ಅದ್ಭುತ ದೇವಾಲಯಗಳಿವೆ. ನೀವು ಆ ದೇವಾಲಯಗಳಿಗೆ ಭೇಟಿ ನೀಡಿ ಪೂಜಿಸಿದರೆ, ನೀವು ಕಾಲ ಸರ್ಪ ದೋಷದ ಪರಿಣಾಮಗಳಿಂದ ಮುಕ್ತರಾಗುತ್ತೀರಿ. ಅವುಗಳಲ್ಲಿ, ವಿಶೇಷವಾಗಿ ಐದು ದೇವಾಲಯಗಳಿವೆ. ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ಮತ್ತು ಶ್ರೀ ಕಾಳಹಸ್ತಿಯಂತಹ ಸ್ಥಳಗಳಲ್ಲಿ ವಿಶೇಷ ಪೂಜೆಗಳನ್ನು ಮಾಡುವ ಮೂಲಕ ಮತ್ತು ನವಗ್ರಹ ಪೂಜೆಗಳನ್ನು ಮಾಡುವ ಮೂಲಕ, ನೀವು ದೋಷದ ಪರಿಣಾಮವನ್ನು ಕಡಿಮೆ ಮಾಡಬಹುದು. ಈ ಪ್ರಮುಖ ದೇವಾಲಯಗಳ ಬಗ್ಗೆ ಮಾಹಿತಿ ಇಲ್ಲಿದೆ.

ಸರ್ಪದೋಷದಿಂದಾಗಿ, ವೈಯಕ್ತಿಕ ಮತ್ತು ಕೌಟುಂಬಿಕ ಜೀವನದಲ್ಲಿ ಅನೇಕ ಸಮಸ್ಯೆಗಳು ಉದ್ಭವಿಸುತ್ತವೆ. ಮದುವೆಯಲ್ಲಿ ವಿಳಂಬ, ವೈವಾಹಿಕ ಜೀವನದಲ್ಲಿ ಅಡೆತಡೆಗಳು, ಗಂಡ ಮತ್ತು ಹೆಂಡತಿಯ ನಡುವೆ ಅನಗತ್ಯ ತಪ್ಪುಗ್ರಹಿಕೆಗಳು ಮತ್ತು ಜಗಳಗಳು ಹೆಚ್ಚಾಗಿ ಸಂಭವಿಸುತ್ತವೆ. ಕೆಲವರಿಗೆ ಮಕ್ಕಳ ಸಮಸ್ಯೆ ಇರುತ್ತದೆ. ಇನ್ನು ಕೆಲವರು ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಾರೆ. ಕೆಲವು ರೀತಿಯ ಅಸಮಾಧಾನ, ಅಶಾಂತಿ, ವಂಚನೆ ಮತ್ತು ಕೌಟುಂಬಿಕ ತೊಂದರೆಗಳು ಇರುತ್ತವೆ. ಅವರು ಆರೋಗ್ಯ ಸಮಸ್ಯೆಗಳನ್ನು ಸಹ ಎದುರಿಸುತ್ತಾರೆ. ಶಿವ, ಸುಬ್ರಹ್ಮಣ್ಯ ಮತ್ತು ನಾಗ ದೇವತೆಗಳಿಗೆ ವಿಶೇಷ ಪೂಜೆಗಳನ್ನು ಮಾಡುವ ಮೂಲಕ ಕಾಲಸರ್ಪದೋಷವನ್ನು ತಪ್ಪಿಸಬಹುದು.

ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ:

ಕರ್ನಾಟಕದ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನವು ಕಾಲಸರ್ಪ ದೋಷ ನಿವಾರಣೆಗೂ ಹೆಸರುವಾಸಿಯಾಗಿದೆ. ಈ ದೇವಸ್ಥಾನವು ಕಾರ್ತಿಕೇಯನ ಅವತಾರವಾದ ಸುಬ್ರಹ್ಮಣ್ಯ ಸ್ವಾಮಿಗೆ ಸಮರ್ಪಿತವಾಗಿದೆ. ಸುಬ್ರಹ್ಮಣ್ಯ ಸ್ವಾಮಿಯು ಹಾವು ಅಥವಾ ನಾಗ ದೇವತೆಯ ರೂಪದಲ್ಲಿ ಪೂಜಿಸಲ್ಪಡುತ್ತಾರೆ, ಏಕೆಂದರೆ ಪುರಾಣಗಳ ಪ್ರಕಾರ ವಾಸುಕಿ ಮತ್ತು ಇತರ ಹಾವುಗಳು ಗರುಡನಿಂದ ರಕ್ಷಣೆ ಪಡೆದು ಸುಬ್ರಹ್ಮಣ್ಯ ಸ್ವಾಮಿಯ ಆಶ್ರಯ ಪಡೆದಿದ್ದವು. ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ದೇವರನ್ನು ಹಾವಿನ ರೂಪದಲ್ಲಿ ಪೂಜಿಸಲಾಗುತ್ತದೆ, ಮತ್ತು ಇದು ಕಾಲಸರ್ಪ ದೋಷ ನಿವಾರಣೆಗೆ ಜನಪ್ರಿಯ ತಾಣವಾಗಿದೆ, ಇದರಲ್ಲಿ ಸರ್ಪ ಸಂಸ್ಕಾರವೂ ಸೇರಿದೆ. ಭಕ್ತರು ಸರ್ಪ ದೋಷದ ದುಷ್ಪರಿಣಾಮಗಳಿಂದ ರಕ್ಷಣೆ ಪಡೆಯಲು ವಿಶೇಷ ಪೂಜೆಗಳು ಮತ್ತು ಗುಣಪಡಿಸುವ ಆಚರಣೆಗಳನ್ನು ಮಾಡುತ್ತಾರೆ.

ಶ್ರೀ ಕಾಳಹಸ್ತೀಶ್ವರ ಸ್ವಾಮಿ ದೇವಸ್ಥಾನ:

ಆಂಧ್ರಪ್ರದೇಶ ರಾಜ್ಯದಲ್ಲಿರುವ ಶ್ರೀ ಕಾಳಹಸ್ತಿ ಸ್ವರ ಸ್ವಾಮಿ ದೇವಾಲಯವು ಶಿವನಿಗೆ ಅರ್ಪಿತವಾಗಿದೆ. ಇದು ನಿರ್ಣಾಯಕ ರಾಹು ಮತ್ತು ಕೇತು ಗ್ರಹಗಳೊಂದಿಗಿನ ಸಂಪರ್ಕಕ್ಕೆ ಹೆಸರುವಾಸಿಯಾಗಿದೆ. ಕಾಲ ಸರ್ಪ ದೋಷದ ಪರಿಣಾಮಗಳನ್ನು ಕಡಿಮೆ ಮಾಡಲು ಈ ದೇವಾಲಯದಲ್ಲಿ ರಾಹು-ಕೇತು ಸರ್ಪ ದೋಷ ಪೂಜೆಗಳನ್ನು ನಡೆಸಲಾಗುತ್ತದೆ.

ಮಹಾ ಕಾಲೇಶ್ವರ ದೇವಸ್ಥಾನ:

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಮಹಾ ಕಾಲೇಶ್ವರ ದೇವಾಲಯವು ಜ್ಯೋತಿರ್ಲಿಂಗಗಳಲ್ಲಿ ಒಂದಾಗಿದೆ. ಈ ದೇವಾಲಯವು ಕೃಷ್ಣ ಸರ್ಪದ ದುಷ್ಟಶಕ್ತಿಗಳನ್ನು ಕಡಿಮೆ ಮಾಡುವ ಶಕ್ತಿಶಾಲಿ ಸ್ಥಳವೆಂದು ಪರಿಗಣಿಸಲಾಗಿದೆ. ಕೃಷ್ಣ ಸರ್ಪದ ದುಷ್ಟಶಕ್ತಿಗಳನ್ನು ತಪ್ಪಿಸಲು ದೇಶಾದ್ಯಂತದ ಭಕ್ತರು ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಾರೆ. ಹಬ್ಬಗಳ ಸಮಯದಲ್ಲಿ ಇಲ್ಲಿ ವಿಶೇಷ ಪೂಜೆಗಳನ್ನು ನಡೆಸಲಾಗುತ್ತದೆ.

ಇದನ್ನೂ ಓದಿ: ಸಾಮಾನ್ಯ ಜನರು ದೇವಸ್ಥಾನದ ಗರ್ಭಗುಡಿ ಪ್ರವೇಶ ಮಾಡಬಾರದು ಯಾಕೆ?

ಓಂಕಾರೇಶ್ವರ ದೇವಸ್ಥಾನ:

ಮಧ್ಯಪ್ರದೇಶ ರಾಜ್ಯದ ನರ್ಮದಾ ನದಿಯ ದಡದಲ್ಲಿರುವ ಮತ್ತೊಂದು ಮಹಾನ್ ಯಾತ್ರಾ ಸ್ಥಳವೆಂದರೆ ಓಂಕಾರೇಶ್ವರ ದೇವಾಲಯ. ಇಲ್ಲಿನ ಪ್ರಮುಖ ದೇವರು ಶಿವ. ಈ ದೇವಾಲಯವು ಹಾವಿನ ದುಷ್ಟಶಕ್ತಿಗಳನ್ನು ಗುಣಪಡಿಸಲು ಪೂಜೆಗಳನ್ನು ಮಾಡಲು ಸಹ ಪ್ರಸಿದ್ಧವಾಗಿದೆ. ಹಾವಿನ ದುಷ್ಟಶಕ್ತಿಗಳನ್ನು ಗುಣಪಡಿಸಲು ಪೂಜೆಗಳನ್ನು ಮಾಡಲು ಹೆಚ್ಚಿನ ಸಂಖ್ಯೆಯ ಭಕ್ತರು ಇಲ್ಲಿಗೆ ಬರುತ್ತಾರೆ.

ತ್ರ್ಯಂಬಕೇಶ್ವರ ದೇವಸ್ಥಾನ:

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಪ್ರಸಿದ್ಧ ಶಿವ ದೇವಾಲಯ ತ್ರ್ಯಂಬಕೇಶ್ವರವು ಕಾಲ ಸರ್ಪ ದೋಷವನ್ನು ಗುಣಪಡಿಸುವಲ್ಲಿಯೂ ಹೆಸರುವಾಸಿಯಾಗಿದೆ. ಸರ್ಪ ದೋಷ ಪೂಜೆಗಳನ್ನು ವೇದ ವಿದ್ವಾಂಸರ ಸಹಾಯದಿಂದ ಇಲ್ಲಿ ನಡೆಸಲಾಗುತ್ತದೆ. ಕಾಲ ಸರ್ಪ ದೋಷದಿಂದ ಬಳಲುತ್ತಿರುವವರು ಈ ಐದು ದೇವಾಲಯಗಳಿಗೆ ಭೇಟಿ ನೀಡಿ ಪರಿಹಾರ ಪೂಜೆಗಳು ಮತ್ತು ಆಚರಣೆಗಳನ್ನು ಮಾಡುವ ಮೂಲಕ ಅದರಿಂದ ಮುಕ್ತಿ ಪಡೆಯಬಹುದು ಎಂದು ವಿದ್ವಾಂಸರು ಹೇಳುತ್ತಾರೆ. ನಾಗ ದೋಷ ಮತ್ತು ಜಾತಕದ ಪರಿಣಾಮವನ್ನು ಪರೀಕ್ಷಿಸುವ ಮೂಲಕ ಮತ್ತು ವಿದ್ವಾಂಸರು ಸೂಚಿಸಿದ ಸೂಕ್ತ ಪರಿಹಾರಗಳನ್ನು ತೆಗೆದುಕೊಳ್ಳುವ ಮೂಲಕ ಜೀವನದಲ್ಲಿ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಬಹುದು ಎಂದು ಹೇಳಲಾಗುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹೂ, ಎಲೆಗಳ ಸಿಂಗಾರ: ಹೊಸ ವರ್ಷದ ಮೊದಲ ದಿನ ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ – Kannada News | Devotees Flock to Mysurus Chamundi Hills for New Years Day Darshan of Goddess Chamundeshwari

ಮೈಸೂರು, ಜನವರಿ 01: ಹೊಸ ವರ್ಷ 2026ರ ಮೊದಲ ದಿನದಂದು ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಸಡಗರ ಸಂಭ್ರಮ ಮನೆಮಾಡಿತ್ತು. ಚಾಮುಂಡಿ ಬೆಟ್ಟಕ್ಕೆ ಭಕ್ತಸಾಗರವೇ ಹರಿದು ಬಂದಿದ್ದು, ವಿಶೇಷ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದರು. ದೇವಿಗೆ ವಿಶೇಷ ಅಲಂಕಾರ, ಅಭಿಷೇಕ ಮತ್ತು ಮಂಗಳಾರತಿ ಸೇವೆಗಳನ್ನು ನೆರವೇರಿಸಲಾಯಿತು. ಹೊಸ ವರ್ಷದಂದು ದೇವಿಯನ್ನು ಪೂಜಿಸಿದರೆ ಶುಭವಾಗುತ್ತದೆ ಎಂಬ ನಂಬಿಕೆಯಿಂದಾಗಿ ರಾಜ್ಯದ ಮೂಲೆ ಮೂಲೆಗಳಿಂದ, ಹೊರ ರಾಜ್ಯಗಳಿಂದ ಹಾಗೂ ವಿದೇಶಗಳಿಂದಲೂ ಭಕ್ತರು ದರ್ಶನಕ್ಕೆ ಆಗಮಿಸಿದ್ದರು. ಚಾಮುಂಡಿ ದೇವಿ ಅಲಂಕಾರ ಪ್ರಿಯೆಯಾಗಿರುವ ಕಾರಣ, ಹೂ ಮತ್ತು ಎಲೆಗಳಿಂದ ಅಲಂಕರಿಸಲಾಗಿತ್ತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

‘ಮಾರ್ಕ್’ ಹಾಗೂ ‘45’ ಸಿನಿಮಾಗಳು ಒಂದು ವಾರಕ್ಕೆ ಗಳಿಸಿದ್ದು ಎಷ್ಟು? – Kannada News | Mark and 45 Box Office Collection Day 7: Kannada Movies Cross 55 Cr in 1st Week

45-ಮಾರ್ಕ್ ಸಿನಿಮಾ ಬಾಕ್ಸ್ ಆಫೀಸ್ ಕಲೆಕ್ಷನ್

‘ಮಾರ್ಕ್’ ಸಿನಿಮಾ ಹಾಗೂ ‘45’ ಚಿತ್ರಗಳು ತೆರೆಗೆ ಬಂದು ಒಂದು ವಾರ ಕಳೆದಿವೆ. ಏಳು ದಿನಗಳಲ್ಲಿ ಸಿನಿಮಾಗಳು ಉತ್ತಮ ಕಲೆಕ್ಷನ್ ಮಾಡಿವೆ. ಎರಡೂ ಸಿನಿಮಾಗಳಲ್ಲಿ ಸ್ಟಾರ್ ಹೀರೋಗಳು ನಟಿಸಿದ್ದಾರೆ. ಎರಡೂ ಚಿತ್ರಗಳು ಬಿಗ್ ಬಜೆಟ್​​​ನವು. ಈ ಕಾರಣದಿಂದ ಸಿನಿಮಾ ನಿರೀಕ್ಷೆ ಮೂಡಿಸಿತ್ತು. ಎರಡೂ ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ ಉತ್ತಮ ಗಳಿಕೆ ಮಾಡುತ್ತಿವೆ. ಈ ಚಿತ್ರಗಳ ಒಟ್ಟಾರೆ ಕಲೆಕ್ಷನ್ ವಿವರ ಇಲ್ಲಿದೆ.

‘ಮಾರ್ಕ್’ ಚಿತ್ರಕ್ಕೆ ಕಿಚ್ಚ ಸುದೀಪ್ ಹೀರೋ. ‘ಮ್ಯಾಕ್ಸ್’ ಸಿನಿಮಾ ರಿಲೀಸ್ ಆಗಿ ಸರಿಯಾಗಿ ಒಂದು ವರ್ಷಕ್ಕೆ ಈ ಚಿತ್ರ ಬಿಡುಗಡೆ ಕಂಡಿದೆ. ಈಗ ‘ಮಾರ್ಕ್’ ಸಿನಿಮಾ ಅಬ್ಬರದ ಗಳಿಕೆ ಮಾಡಿದೆ. ನಾಲ್ಕು ದಿನಕ್ಕೆ ಚಿತ್ರ 35 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ತಂಡ ಮಾಹಿತಿ ನೀಡಿತ್ತು. ಇದಾದ ಬಳಿಕ ಸಿನಿಮಾ ನಿತ್ಯವೂ ಒಂದು ಕೋಟಿ ರೂಪಾಯಿಗೂ ಹೆಚ್ಚಿನ ಕಲೆಕ್ಷನ್ ಮಾಡಿದೆ. ‘ಮಾರ್ಕ್’ ಸಿನಿಮಾದ ಗಳಿಕೆ 40 ಕೊಟಿ ರೂಪಾಯಿ ದಾಟಿದೆ ಎನ್ನಲಾಗುತ್ತಿದೆ. ಸಿನಿಮಾ ರಿಲೀಸ್ ಆಗಿ ವಾರ ಕಳೆದ ಹಿನ್ನೆಲೆಯಲ್ಲಿ ಚಿತ್ರತಂಡ ಗಳಿಕೆ ಬಗ್ಗೆ ಅಧಿಕೃತ ಮಾಹಿತಿ ನೀಡುವ ಸಾಧ್ಯತೆ ಇದೆ.

ಇನ್ನು, ‘45’ ಚಿತ್ರದ ಲೆಕ್ಕಾಚಾರದ ಬಗ್ಗೆ ತಂಡದ ಕಡೆಯಿದ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಆದರೆ, sacnilk ಈ ಬಗ್ಗೆ ವರದಿ ಮಾಡಿದೆ. ಈ ವರದಿ ಪ್ರಕಾರ ಸಿನಿಮಾದ ಗ್ರಾಸ್ ಕಲೆಕ್ಷನ್ 15 ಕೋಟಿ ರೂಪಾಯಿ ದಾಟಿದೆ ಎನ್ನಾಗಿದೆ. ಚಿತ್ರತಂಡದ ಕಡೆಯಿಂದ ಅಧಿಕೃತ ಮಾಹಿತಿ ಸಿಕ್ಕರೆ ಅಭಿಮಾನಿಗಳಿಗೂ ಸ್ಪಷ್ಟತೆ ಸಿಕ್ಕಂತಾಗುತ್ತದೆ.

ಇದನ್ನೂ ಓದಿ: ‘ಮಾರ್ಕ್’ ವೀಕ್ಷಿಸುವಾಗ ಕಿಚ್ಚನ ಎದುರೇ ಗಿಲ್ಲಿ ಗೆಲ್ಲಬೇಕು ಎಂದ ಫ್ಯಾನ್ಸ್; ಸುದೀಪ್ ರಿಯಾಕ್ಷನ್ ಏನು?

ಮೂಲಗಳ ಪ್ರಕಾರ ‘45’ ಚಿತ್ರದ ಒಟಿಟಿ ಹಕ್ಕು, ಸ್ಯಾಟಲೈಟ್ ಹಕ್ಕು ಒಳ್ಳೆಯ ಬೆಲೆಗೆ ಮಾರಾಟ ಆಗಿದೆಯಂತೆ. ಹೀಗಾಗಿ, ನಿರ್ಮಾಪಕರಿಗೆ ಸಾಕಷ್ಟು ಹಣ ಹರಿದು ಬಂದಿದೆ. ಇದರಿಂದ ಅವರು ಸೇಫ್ ಆಗಿದ್ದಾರೆ ಎಂದು ಹೇಳಲಾಗುತ್ತಾ ಇದೆ.  ಇಂದು ಹೊಸ ವರ್ಷದ ಪ್ರಯುಕ್ತ ರಜೆ ಇದೆ. ಹೀಗಾಗಿ, ಚಿತ್ರದ ಕಲೆಕ್ಷನ್ ಹೆಚ್ಚುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮನೆಯೊಳಗೆ ಗುಂಡಿಕ್ಕಿ ಆಭರಣ ವ್ಯಾಪಾರಿ ಮತ್ತವರ ಪತ್ನಿಯ ಹತ್ಯೆ – Kannada News | Madhya Pradesh: Jeweller and Wife Killed at Home, Police Probe Business Dispute Angle

ಆಭರಣ ವ್ಯಾಪಾರಿ ದಂಪತಿImage Credit source: India Today

ಮಧ್ಯಪ್ರದೇಶ, ಜನವರಿ 01: ಆಭರಣ ವ್ಯಾಪಾರಿ ಮತ್ತವರ ಪತ್ನಿ(Wife) ಮನೆಯೊಳಗೆ ಶವವಾಗಿ ಪತ್ತೆಯಾಗಿರುವ ಘಟನೆ ಮಂಗಳವಾರ ಮಧ್ಯಪ್ರದೇಶದ ಮಂದ್ಸೌರ್​ನಲ್ಲಿ ನಡೆದಿದೆ. ಪ್ರಾಥಮಿಕ ತನಿಖೆಯಲ್ಲಿ ಅವರ ವ್ಯವಹಾರದ ವಿವಾದವೇ ಈ ಸಾವಿಗೆ ಕಾರಣ ಎನ್ನಲಾಗಿದೆ. ಇಬ್ಬರನ್ನೂ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅದೇ ಸ್ಥಳದಲ್ಲಿ ವಿಕಾಸ್ ಎಂಬುವವರ ಶವವೂ ದೊರೆತಿದೆ.  ಪೊಲೀಸರು ಸಾವಿಗೆ ಕಾರಣವೇನೆಂಬುದ ತಿಳಿಯಲು ಪ್ರಯತ್ನಿಸುತ್ತಿದ್ದಾರೆ. ಮೃತ ದಂಪತಿಯನ್ನು ದಿಲೀಪ್ ಜೈನ್ ಮತ್ತು ಅವರ ಪತ್ನಿ ರೇಖಾ ಎಂದು ಗುರುತಿಸಲಾಗಿದ್ದು, ಮೂರನೇ ವ್ಯಕ್ತಿಯನ್ನು ರಾಜಸ್ಥಾನದ ನಿವಾಸಿ ವಿಕಾಸ್ ಸೋನಿ ಎಂದು ಪೊಲೀಸರು ಗುರುತಿಸಿದ್ದಾರೆ.

ಗುಂಡಿನ ದಾಳಿ ನಡೆಯುವ ಮುನ್ನ ಮೂವರು ವ್ಯಕ್ತಿಗಳ ನಡುವೆ ತೀವ್ರ ವಾಗ್ವಾದ ನಡೆದಿದೆ ಎಂದು ಅಧಿಕಾರಿಗಳು ವರದಿ ಮಾಡಿದ್ದಾರೆ. ಮಂಗಳವಾರ ಸಂಜೆ 8.30 ರ ಸುಮಾರಿಗೆ ಮನೆಯೊಳಗೆ ಗುಂಡು ಹಾರಿಸಿದ ಸದ್ದು ಕೇಳಿಬಂದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿನೋದ್ ಕುಮಾರ್ ಮೀನಾ ತಿಳಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವಗಳನ್ನು ಪತ್ತೆ ಮಾಡಿದರು ಮತ್ತು ಒಂದು ಪಿಸ್ತೂಲ್ ಮತ್ತು ಚಾಕುವನ್ನು ವಶಪಡಿಸಿಕೊಂಡರು. ಸಾವಿಗೆ ನಿಖರವಾದ ಕಾರಣವನ್ನು ತಿಳಿಯಲು ಮತ್ತು ಘಟನೆಗಳ ಅನುಕ್ರಮವನ್ನು ನಿರ್ಧರಿಸಲು ಮೂರು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಮತ್ತಷ್ಟು ಓದಿ: ಮನೆಯೊಳಗೆ ಹಿರಿಯ ವಕೀಲರ ಪತ್ನಿಯ ಬರ್ಬರ ಹತ್ಯೆ; ಪಕ್ಕದ ಚೇರ್​​ನಲ್ಲಿದ್ದ ಸಹಾಯಕ!

ಪೊಲೀಸರ ಪ್ರಕಾರ, ದಿಲೀಪ್ ಜೈನ್ ಅವರ ಚಿನ್ನದ ವ್ಯವಹಾರಕ್ಕೆ ಸಂಬಂಧಿಸಿದ ಹಣಕಾಸಿನ ವಿವಾದವೇ ಈ ಮಾರಕ ಘಟನೆಗೆ ಕಾರಣವಾಗಿರುವ ಸಾಧ್ಯತೆಯ ಮೇಲೆ ತನಿಖೆ ಕೇಂದ್ರೀಕರಿಸಿದೆ. ಆದಾಗ್ಯೂ, ಹಿಂಸಾಚಾರವನ್ನು ಯಾರು ಪ್ರಾರಂಭಿಸಿದರು ಮತ್ತು ಹೊರಗಿನವರಾದ ವಿಕಾಸ್ ಸೋನಿ ಆಯುಧವನ್ನು ತಂದಿದ್ದಾರೋ ಅಥವಾ ಘಟನೆಯಲ್ಲಿ ಬೇರೆ ಯಾರದ್ದೋ ಪಾತ್ರವಿದೆಯೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮನೆಯ ಸುತ್ತಲೂ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸಾವಿಗೆ ಕಾರಣವಾದ ಸಂದರ್ಭಗಳನ್ನು ಸ್ಪಷ್ಟಪಡಿಸಲು ಅಧಿಕಾರಿಗಳು ಪ್ರಸ್ತುತ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 11:45 am, Thu, 1 January 26

Source link

Gold Rate Today Bangalore: ಚಿನ್ನದ ಬೆಲೆ ತುಸು ಏರಿಕೆ; ಬೆಳ್ಳಿ ಅಲ್ಪ ಇಳಿಕೆ – Kannada News | Gold Price Today on 1st January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 1: ಸತತ ಮೂರು ದಿನ ಇಳಿಕೆ ಕಂಡಿದ್ದ ಚಿನ್ನದ ಬೆಲೆ (gold rate) ಇಂದು ಗುರುವಾರ ಅಲ್ಪ ಏರಿಕೆ ಕಂಡಿದೆ. 15 ರೂ ಹೆಚ್ಚಳವಾಗಿರುವ ಆಭರಣ ಚಿನ್ನದ ಬೆಲೆ 12,400 ಗಡಿಗಿಂತ ಕೆಳಗೆ ಇಳಿದಿದೆ. ನಿನ್ನೆ ಚಿನ್ನದ ಬೆಲೆ 120 ರೂಗಳಷ್ಟು ಇಳಿಕೆಯಾಗಿತ್ತು. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ಕಡಿಮೆ ಆಗಿದೆ. ಇದೇ ವೇಳೆ, ಬೆಳ್ಳಿ ಬೆಲೆಯ ಇಳಿಕೆಯೂ ಮುಂದುವರಿದಿದೆ. ನಿನ್ನೆ ಒಂದು ರೂ ಇಳಿದಿದ್ದ ಇದರ ಬೆಲೆ ಇವತ್ತು ಕೂಡ ಒಂದು ರೂ ತಗ್ಗಿ 238 ರೂ ತಲುಪಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,23,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,35,060 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,23,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 23,800 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,600 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 1ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,506 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,380 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,129 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 238 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,506 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,380 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 238 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,380 ರೂ
  • ಚೆನ್ನೈ: 12,440 ರೂ
  • ಮುಂಬೈ: 12,380 ರೂ
  • ದೆಹಲಿ: 12,395 ರೂ
  • ಕೋಲ್ಕತಾ: 12,380 ರೂ
  • ಕೇರಳ: 12,380 ರೂ
  • ಅಹ್ಮದಾಬಾದ್: 12,385 ರೂ
  • ಜೈಪುರ್: 12,395 ರೂ
  • ಲಕ್ನೋ: 12,395 ರೂ
  • ಭುವನೇಶ್ವರ್: 12,380 ರೂ

ಇದನ್ನೂ ಓದಿ: LPG Price: ಕಮರ್ಷಿಯಲ್ ಗ್ಯಾಸ್ ಬೆಲೆ ಭರ್ಜರಿ ಹೆಚ್ಚಳ; 19 ಕಿಲೋ ಸಿಲಿಂಡರ್ ದರ 110.50 ರೂ ಏರಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 555 ರಿಂಗಿಟ್ (12,311 ರುಪಾಯಿ)
  • ದುಬೈ: 484.75 ಡಿರಾಮ್ (11,871 ರುಪಾಯಿ)
  • ಅಮೆರಿಕ: 134.50 ಡಾಲರ್ (12,098 ರುಪಾಯಿ)
  • ಸಿಂಗಾಪುರ: 174.70 ಸಿಂಗಾಪುರ್ ಡಾಲರ್ (12,219 ರುಪಾಯಿ)
  • ಕತಾರ್: 483 ಕತಾರಿ ರಿಯಾಲ್ (11,919 ರೂ)
  • ಸೌದಿ ಅರೇಬಿಯಾ: 493 ಸೌದಿ ರಿಯಾಲ್ (11,823 ರುಪಾಯಿ)
  • ಓಮನ್: 51.40 ಒಮಾನಿ ರಿಯಾಲ್ (12,016 ರುಪಾಯಿ)
  • ಕುವೇತ್: 39.27 ಕುವೇತಿ ದಿನಾರ್ (11,474 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 238 ರೂ
  • ಚೆನ್ನೈ: 256 ರೂ
  • ಮುಂಬೈ: 238 ರೂ
  • ದೆಹಲಿ: 238 ರೂ
  • ಕೋಲ್ಕತಾ: 238 ರೂ
  • ಕೇರಳ: 256 ರೂ
  • ಅಹ್ಮದಾಬಾದ್: 238 ರೂ
  • ಜೈಪುರ್: 238 ರೂ
  • ಲಕ್ನೋ: 238 ರೂ
  • ಭುವನೇಶ್ವರ್: 256 ರೂ
  • ಪುಣೆ: 238

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On – 11:48 am, Thu, 1 January 26

Source link

ಗಾನವಿ ಕುಟುಂಬಸ್ಥರಿಗೆ ಶಾಕ್​​: ಸೂರಜ್​​ ಸಾವಿನ ಸಂಬಂಧ 9 ಮಂದಿ ಮೇಲೆ FIR – Kannada News | FIR Filed Against Nine Members of Ganavi Family Over Suraj’s Death

ಬೆಂಗಳೂರು, ಜನವರಿ 01: ರಾಜ್ಯಾದ್ಯಂತ ಸುದ್ದಿಯಾಗಿದ್ದ ನವ ವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣ ಸಂಬಂಧ ಆಕೆಯ ಕುಟುಂಬಸ್ಥರ ವಿರುದ್ಧವೇ ಈಗ ಎಫ್​​ಐಆರ್​ ದಾಖಲಾಗಿದೆ. ಸೂರಜ್ ಅತ್ತಿಗೆ ನೀಡಿದ ದೂರಿನ ಮೇರೆಗೆ 9 ಮಂದಿ ಮೇಲೆ ಪೊಲೀಸರು ಕೇಸ್​​ ದಾಖಲಿಸಿದ್ದಾರೆ. ಪತ್ನಿ ಗಾನವಿ ಕುಟುಂಬಸ್ಥರ ಆರೋಪಗಳ ಹಿನ್ನೆಲೆ ಪತಿ ಸೂರಜ್​​ ಕೂಡ ಸೂಸೈಡ್​​ ಮಾಡಿಕೊಂಡಿದ್ದ. ಹೀಗಾಗಿ ಆತನ ಸಾವಿಗೆ ಗಾನವಿ ಕುಟುಂಬಸ್ಥರೇ ಕಾರಣ ಎಂದು ದೂರು ನೀಡಲಾಗಿದೆ.

ಸೂರಜ್ ತಾಯಿ ಜಯಂತಿ ಮೇಲೆ ವರದಕ್ಷಿಣೆ ಕಿರುಕುಳ ಆರೋಪದ ಜೊತೆಗೆ ಹನಿಮೂನ್​​ಗೆ ತೆರಳಿದ್ದ ಸೂರಜ್​ ಮತ್ತು ಗಾನವಿ ದಂಪತಿ ಶ್ರೀಲಂಕಾದಿಂದ ಅರ್ಧಕ್ಕೆ ಹಿಂತಿರುಗಿದ್ದ ಬಗ್ಗೆಯೂ ಇಲ್ಲಸಲ್ಲದ ಆರೋಪ ಮಾಡಲಾಗಿದೆ. ಮಾನಹಾನಿಕಾರ ಆರೋಪಗಳಿಂದ ಮನನೊಂದು ಸೂರಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸೂರಜ್​​ ಸಹೋದರ ಸಂಜಯ್ ಪತ್ನಿ ವಿದ್ಯಾರಣ್ಯಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರನ್ವಯ ಗಾನವಿ ಕುಟುಂಬಸ್ಥರಾದ ರಾಧಾ, ಬಾಬುಗೌಡ, ಕಾರ್ತಿಕ್, ಮಹದೇವ, ಗಗನ್, ಶಶಿಕುಮಾರ್, ರುಕ್ಮಿಣಿ, ಅಭಿಲಾಷ್, ಅಭಿಷೇಕ್ ವಿರುದ್ಧ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ಗಾನವಿ-ಸೂರಜ್ ಪ್ರಕರಣ; ಹನಿಮೂನ್‌ನಿಂದ ಅರ್ಧಕ್ಕೆ ಬಂದಿದ್ಯಾಕೆ? ಸ್ಫೋಟಕ ರಹಸ್ಯ ಬಯಲು

ಹನಿಮೂನ್​​ಗೆಂದು ಶ್ರೀಲಂಕಾಕ್ಕೆ ತೆರಳಿದ್ದ ವೇಳೆ ಗಾನವಿ ಲವ್​ ವಿಚಾರ ಸೂರಜ್​​ಗೆ ಗೊತ್ತಾಗಿದೆ. ಹರ್ಷ ಎಂಬಾತನನ್ನ ಪ್ರೀತಿಸುತ್ತಿದ್ದು, ಅವನನ್ನೆ ಮದುವೆಯಾಗುತ್ತೇನೆ ಎಂದು ಗಾನವಿ ಹೇಳಿದ್ದಳಂತೆ. ಈ ವಿಚಾರ ಕೇಳಿ ಸೂರಜ್ ದಿಗ್ಭ್ರಾಂತನಾಗಿದ್ದ. ಆದ್ರೆ ಆ ವಿಷಯ ಮುಚ್ಚಿಟ್ಟು ಸೂರಜ್ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ಗಾನವಿ ಸಹೋದರರು ಸೂರಜ್​​ಗೆ ಜೀವ ಬೆದರಿಕೆ ಕೂಡ ಹಾಕಲಾಗಿತ್ತು. ಈ ಎಲ್ಲಾ ವಿಚಾರಗಳಿಂದ ಮನನೊಂದು ಸೂರಜ್ ಪ್ರಾಣ ಕಳೆದುಕೊಂಡಿದ್ದರೆ, ಅವರ ತಾಯಿ ಜಯಂತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹೀಗಾಗಿ ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ನೀಡಲಾದ ದೂರಲ್ಲಿ ಉಲ್ಲೇಖಿಸಲಾಗಿದೆ.

ಅಕ್ಟೋಬರ್ 29ರಂದು ಗಾನವಿ ಮತ್ತು ಸೂರಜ್​​ ಮದುವೆ ನಡೆದಿದ್ದು, ಬೆಂಗಳೂರಿನ ಪ್ಯಾಲೆಸ್‌ ಗ್ರೌಂಡ್‌ನಲ್ಲಿ ಅದ್ದೂರಿ ರಿಸೆಪ್ಷನ್ ಕೂಡ ಹಮ್ಮಿಕೊಳ್ಳಲಾಗಿತ್ತು. ಬಳಿಕ ಹನಿಮೂನ್​​ಗೆಂದು ಶ್ರೀಲಂಕಾಕ್ಕೆ ತೆರಳಿದ್ದ ಇವರು ಅರ್ಧದಲ್ಲೇ ಹಿಂದಿರುಗಿದ್ದರು. ಆ ಬೆನ್ನಲ್ಲೇ 26 ವರ್ಷದ ಗಾನವಿ ಆತ್ಮಹತ್ಯೆ ಯತ್ನ ನಡೆಸಿದ್ದಳು. ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೆ ಆಕೆ ಮೃತಪಟ್ಟಿದ್ದಳು. ಮಗಳ ಸಾವಿಗೆ ಸೂರಜ್​​ ಕುಟುಂಬಸ್ಥರೇ ಕಾರಣ. ಆತ ಗಂಡಸೇ ಅಲ್ಲ ಎಂಬಿತ್ಯಾದಿ ಆರೋಪ ಗಾನವಿ ಕುಟುಂಬಸ್ಥರಿಂದ ಕೇಳಿಬಂದಿತ್ತು. ಈ ನಡುವೆ ಸೂರಜ್​​ ಕೂಡ ಆತ್ಮಹತ್ಯೆ ಶರಣಾಗಿರೋದು ಪ್ರಕರಣಕ್ಕೆ ಹೊಸ ಟ್ವಿಸ್ಟ್​​ ಕೊಟ್ಟಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 11:43 am, Thu, 1 January 26

Source link