Headlines

Video: ನೋ ಕಿಡ್ಸ್, ಡಬಲ್ ಇನ್ಕಮ್; ಬೆಂಗಳೂರಿನಲ್ಲಿ ನೆಲೆಸಿರುವ ಈ ದಂಪತಿಯ ತಿಂಗಳ ಖರ್ಚು ಎಷ್ಟು ಗೊತ್ತಾ?

ಬೆಂಗಳೂರು, ಏಪ್ರಿಲ್‌ 10: ಇಂದಿನ ದುಬಾರಿ ದುನಿಯಾದಲ್ಲಿ ಎಷ್ಟು ದುಡಿದ್ರೂ ಕಡಿಮೆನೇ. ಈ ಬೆಂಗಳೂರಿನಲ್ಲಿ (Bengaluru) ತಿಂಗಳಿಗೆ ಲಕ್ಷ ಲಕ್ಷ ರೂ ದುಡಿಯುತ್ತಿದ್ರೂ ಖರ್ಚು ವೆಚ್ಚಗಳಿಗೆ ಲಗಾಮು ಹಾಕದೇ ಇದ್ರೆ ಉಳಿತಾಯ ಮಾಡೋದು ಅಷ್ಟು ಸುಲಭವಲ್ಲ. ಡ್ಯುಯಲ್ ಇನ್‌ಕಮ್ ಹಾಗೂ ಮಕ್ಕಳಿಲ್ಲದ (DINK) ದಂಪತಿ ಬೆಂಗಳೂರಿನಲ್ಲಿ ತಮ್ಮ ತಿಂಗಳ ಖರ್ಚು ವೆಚ್ಚದ ಬಗ್ಗೆ ಹಂಚಿಕೊಂಡು, ಮಾಸಿಕ ಖರ್ಚು 81,600 ರೂ ಆಗುತ್ತದಂತೆ ಎಂದು ತಿಳಿಸಿದ್ದಾರೆ. ದಂಪತಿಯ ತಿಂಗಳ ಖರ್ಚು ವೆಚ್ಚದ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರನ್ನು ಹುಬ್ಬೇರಿಸುವಂತೆ…

Read More

ಲೆಬನಾನ್‌ನಲ್ಲಿ ಇಸ್ರೇಲ್ ದಾಳಿ ಬಗ್ಗೆ ಭಾರತ ತೀವ್ರ ಕಳವಳ

ನವದೆಹಲಿ, ಏಪ್ರಿಲ್ 10: ಲೆಬನಾನ್ ಮೇಲಿನ ಇಸ್ರೇಲ್ ದಾಳಿಯಿಂದ (Israel Attack) ಜನರ ಸಾವಿನ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಇಸ್ರೇಲ್ ದಾಳಿಯಿಂದಾಗಿ ಲೆಬನಾನ್‌ನಲ್ಲಿ ಹೆಚ್ಚುತ್ತಿರುವ ಜನರ ಸಾವಿನ ಸಂಖ್ಯೆಯ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಕದನವಿರಾಮದ ನಂತರ ಲೆಬನಾನ್‌ನಲ್ಲಿ ಇಸ್ರೇಲ್ ತನ್ನ ಅತ್ಯಂತ ವಿನಾಶಕಾರಿ ದಾಳಿಗಳನ್ನು ನಡೆಸಿತ್ತು. ಈ ದಾಳಿಯಲ್ಲಿ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು ಮತ್ತು 1,150 ಜನರು ಗಾಯಗೊಂಡಿದ್ದರು. ಈ…

Read More

ಪ್ಯಾಸೆಂಜರ್ ವಿಚಾರಕ್ಕೆ ಗಲಾಟೆ: ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಆಟೋ ಚಾಲಕನ ಭೀಕರ ಹತ್ಯೆ

ಬೆಳಗಾವಿ, ಏಪ್ರಿಲ್​​ 10: ಸರತಿ ಸಾಲಿನಲ್ಲಿ ಆಟೋ ನಿಲ್ಲಿಸುವ ವಿಚಾರಕ್ಕೆ ನಡೆದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ನಡೆದಿದೆ. ಆಟೋ ಚಾಲಕ ಅಶೋಕ ವಡ್ಡರ್(27) ಕೊಲೆಯಾದ ವ್ಯಕ್ತಿಯಾಗಿದ್ದು, ಆರೋಪಿಗಳಾದ ಶಿವಾ ವಡ್ಡರ್​, ಸಾಗರ್​ ವಡ್ಡರ್​ ಮತ್ತು ವಿನೋದ್ ಎಂಬವರನ್ನು ಪೊಲೀಸರು​ ಬಂಧಿಸಿದ್ದಾರೆ. ಇನ್ನು 20 ದಿನದಲ್ಲಿ ಮದುವೆಯಾಗಬೇಕಿದ್ದ ಅಶೋಕ ಹಸೆಮಣೆ ಏರುವ ಬದಲು ಭೀಕರವಾಗಿ ಹತ್ಯೆಯಾಗಿದ್ದಾರೆ. ಮೊನ್ನೆ ದಿನ ಊರಲ್ಲಿ ದೇವರ ಜಾತ್ರೆ ನಡೆದ ಕಾರಣ, ಭಕ್ತರ…

Read More

ಸರ್ಕಾರಿ ವಸತಿ ಕಾಲೇಜ್​ ವಿದ್ಯಾರ್ಥಿಗಳಿಗೆ ಗುಡ್​​​ ನ್ಯೂಸ್​​: ಸಚಿವ ಮಹದೇವಪ್ಪ ಮಹತ್ವದ ಘೋಷಣೆ

ಬೆಂಗಳೂರು, ಏಪ್ರಿಲ್ 10: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ (2nd PUC Result) ಏಪ್ರಿಲ್​ 09ರಂದು ಪ್ರಕಟವಾಗಿದ್ದು, ಈ ಬಾರಿ ಶೇಕಡಾ 86ರಷ್ಟು ಮಕ್ಕಳು ಪಾಸ್​ ಆಗುವ ಮೂಲಕ ಫಲಿತಾಂಶ ದಾಖಲೆ ಮಟ್ಟಕ್ಕೆ ಏರಿಕೆ ಆಗಿದೆ. ಇನ್ನು ಸರ್ಕಾರಿ ವಸತಿ ಶಾಲೆಗಳಲ್ಲಿ ಶೇ.97.22 ಮಕ್ಕಳು ತೇರ್ಗಡೆಯಾಗಿದ್ದಾರೆ. ಆ ಮೂಲಕ ವಸತಿ ಶಾಲೆಗಳಲ್ಲೂ ಈ ಬಾರಿ ಉತ್ತಮ ಫಲಿತಾಂಶ ಬಂದಿದೆ. 72 ವಸತಿ ಕಾಲೇಜುಗಳಲ್ಲಿ ಜಿಇಇ, ಎಸ್​​ಇಇಟಿ ಮತ್ತು ಕೆಸಿಇಟಿ ಪ್ರವೇಶ ಪರೀಕ್ಷೆಗೆ ತರಬೇತಿ ನೀಡುವ ವ್ಯವಸ್ಥೆ ಮಾಡುತ್ತೇವೆ…

Read More

ಬೇಸಿಗೆಯ ಧಗೆಯ ನಡುವೆ ಅಡುಗೆಮನೆಯ ನಿರ್ವಹಣೆ ಮತ್ತು ಆಹಾರದ ಸುರಕ್ಷತೆ ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ

ಬೇಸಿಗೆ ಎಂದರೆ ಬರೀ ಬೆವರುವ ತಾಪಮಾನ ಮಾತ್ರವಲ್ಲ, ಅದು ಅಡುಗೆಮನೆಯ ತಾಳ್ಮೆಯ ಪರೀಕ್ಷೆಯೂ ಹೌದು. ಹೊರಗಿನ ಬಿಸಿಲಿಗೆ ಫ್ರಿಜ್ ಬಾಗಿಲು ತೆರೆದಾಗ ಸಿಗುವ ತಂಪು ಹಿತವೆನಿಸಿದರೂ, ಅಡುಗೆಮನೆಯೊಳಗಿನ ಪದಾರ್ಥಗಳು ಬಾಡದಂತೆ ನೋಡಿಕೊಳ್ಳುವುದು ಒಂದು ದೊಡ್ಡ ಕಲೆ. ಹಿರಿಯರು ಹೇಳುತ್ತಿದ್ದ ಒಂದು ಮಾತು ಇಂದಿಗೂ ಸತ್ಯ— “ಆಹಾರವನ್ನು ಅಡುಗೆ ಮಾಡುವುದು ಎಷ್ಟು ಮುಖ್ಯವೋ, ಅದನ್ನು ಕಾಪಾಡುವುದು ಅಷ್ಟೇ ಮುಖ್ಯ”. ಬೇಸಿಗೆಯ ಈ ದಿನಗಳಲ್ಲಿ ನಿಮ್ಮ ಅಡುಗೆಮನೆಯನ್ನು ತಾಜಾವಾಗಿಡಲು ಇಲ್ಲಿವೆ ಕೆಲವು ಸರಳ ಮತ್ತು ಪ್ರಭಾವಶಾಲಿ ಸೂತ್ರಗಳು. ಯಾವುದನ್ನು ಎಲ್ಲಿಡಬೇಕು?…

Read More

ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಣ್ಣೀರಿಟ್ಟ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ: ಕಾರಣ ಇಲ್ಲಿದೆ

ಹಾವೇರಿ, ಏಪ್ರಿಲ್​​ 10: ಜಿಲ್ಲಾ ಪಂಚಾಯತ್​​ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಕಣ್ಣೀರಿಟ್ಟ ಪ್ರಸಂಗ ನಡೆದಿದೆ. ಸ್ವತಂತ್ರಪೂರ್ವದಿಂದಲೂ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡು ಕೆಲವು ಗ್ರಾಮ ಇವೆ. ಅವು ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿ ಬರುತ್ತವೆ ಎಂದು ಜನರ ಮೇಲೆ FIR ದಾಖಲು ಮಾಡಿ ಜಾಗೆ ಖಾಲಿ ಮಾಡಿಸಿದ್ದಾರೆ. ಹಾವೇರಿಯ ಗುತ್ತಲ ತಾಂಡಾ, ಕರೂರು ಗ್ರಾಮ ನಿವಾಸಿಗಳನ್ನ ವಕ್ಕಲು ಎಬ್ಬಿಸಿದ್ದಾರೆ. ಸರ್ಕಾರವೇ ಮೂರು ದಶಕಗಳಿಂದ ಮನೆ ಮತ್ತು ಉಳುಮೆಗೆ ಅವಕಾಶ ಮಾಡಿದೆ. ಈಗ ಅರಣ್ಯ…

Read More

ವೇಗ ಅತಿವೇಗ.. ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಬಾಬರ್ ಆಝಂ

ಪಾಕಿಸ್ತಾನ ಸೂಪರ್ ಲೀಗ್ 2026 ರ 17 ನೇ ಪಂದ್ಯದಲ್ಲಿ ಕರಾಚಿ ಕಿಂಗ್ಸ್ ಹಾಗೂ ಪೇಶಾವರ್ ಝಲ್ಮಿ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬಾಬರ್ ಆಝಂ ನಾಯಕತ್ವದ ಪೇಶಾವರ್ ಝಲ್ಮಿ ತಂಡವು 20 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 246 ರನ್‌ ಗಳಿಸಿತು. ತಂಡದ ಪರ ಬಿರುಗಾಳಿಯ ಇನ್ನಿಂಗ್ಸ್ ಆಡಿದ ಬಾಬರ್ ಟಿ20 ಕ್ರಿಕೆಟ್‌ನಲ್ಲಿ ವಿಶ್ವ ದಾಖಲೆಯನ್ನು ಸಹ ಮುರಿದರು. ಈ ಪಂದ್ಯದಲ್ಲಿ 51 ಎಸೆತಗಳನ್ನು ಎದುರಿಸಿದ ಬಾಬರ್ ಆಝಂ…

Read More

ಟೋಲ್ ಬೂತ್​ನಲ್ಲಿ ಇನ್ಮುಂದೆ ಕ್ಯಾಷ್ ಪೇಮೆಂಟ್​ಗೆ ಅವಕಾಶವೇ ಇಲ್ಲ; ಫಾಸ್​ಟ್ಯಾಗ್ ಕಡ್ಡಾಯ

ನವದೆಹಲಿ, ಏಪ್ರಿಲ್ 10: ಹೆದ್ದಾರಿಗಳಲ್ಲಿರುವ ಟೋಲ್ ಬೂತ್​ಗಳಲ್ಲಿ ನೂರಕ್ಕೆ ನೂರು ಫಾಸ್​ಟ್ಯಾಗ್ (FASTag) ಕಡ್ಡಾಯ ಮಾಡಲಾಗಿದೆ. ಇವತ್ತಿನಿಂದಲೇ ಡಿಜಿಟಲ್ ಟೋಲ್ ಕಲೆಕ್ಷನ್ ಸಿಸ್ಟಂ (Digital toll collection system) ಜಾರಿಯಾಗಿದೆ. ದೇಶಾದ್ಯಂತ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳು ಹಾಗೂ ಎಕ್ಸ್​ಪ್ರೆಸ್​ವೇಗಳಲ್ಲಿ ಇರುವ ಟೋಲ್ ಬೂತ್​ಗಳಲ್ಲಿ ಫಾಸ್​ಟ್ಯಾಗ್ ಮೂಲಕವೇ ವಾಹನಗಳು ಟೋಲ್ ಪಾವತಿಸಬೇಕು. ಫಾಸ್​ಟ್ಯಾಗ್ ಇಲ್ಲದವರು ಟೂಲ್ ಬೂತ್​ಗಳಲ್ಲಿ ಕ್ಯಾಷ್ ನೀಡಿ ಪಾವತಿಸುವ ಅವಕಾಶ ನಿನ್ನೆಯೇ ಮುಕ್ತಾಯಗೊಂಡಿದೆ. ಫಾಸ್​ಟ್ಯಾಗ್ ಇಲ್ಲದ ವಾಹನಗಳಿಂದ ಟೋಲ್ ಬೂತ್​ಗಳಲ್ಲಿ ವಾಹನದಟ್ಟನೆ ಹೆಚ್ಚುತ್ತಿರುವುದು ಗಮನಕ್ಕೆ ಬಂದಿತ್ತು….

Read More

ಬಿಹಾರ ವಿಧಾನಸಭೆಗೆ ಬಾಂಬ್ ಬೆದರಿಕೆ; ತೀವ್ರ ಶೋಧ ಕಾರ್ಯಾಚರಣೆ ಆರಂಭ

ಪಾಟ್ನಾ, ಏಪ್ರಿಲ್ 10: ಬಿಹಾರ ವಿಧಾನಸಭೆಗೆ (Bihar Assembly) ಇಂದು ಇಮೇಲ್ ಮೂಲಕ ಬಾಂಬ್ ಬೆದರಿಕೆ (Bomb Threat) ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 2 ದಿನಗಳ ಹಿಂದಷ್ಟೇ ದೆಹಲಿ ವಿಧಾನಸಭೆ ಆವರಣದೊಳಗೆ ಕಾರಿನಲ್ಲಿ ನುಗ್ಗಿದ್ದ ವ್ಯಕ್ತಿಯೊಬ್ಬ ಸ್ಪೀಕರ್ ಕಚೇರಿ ಬಳಿ ಹೂವಿನ ಬೊಕ್ಕೆ ಇಟ್ಟು ಹೋಗಿದ್ದ. ಆತನನ್ನು ಬಂಧಿಸಲಾಗಿತ್ತು. ದೆಹಲಿ ವಿಧಾನಸಭೆಗೂ ಬಾಂಬ್ ಬೆದರಿಕೆ ಬಂದಿತ್ತು. ಅದರ ಬೆನ್ನಲ್ಲೇ ಇದೀಗ ಬಿಹಾರ ವಿಧಾನಸಭೆಗೂ ಬಾಂಬ್ ಬೆದರಿಕೆ ಬಂದಿರುವುದರಿಂದ ಶೋಧ ಕಾರ್ಯಾಚರಣೆ ತೀವ್ರವಾಗಿ ನಡೆದಿದೆ. “ಬಿಹಾರ ವಿಧಾನಸಭೆ ಅಧಿಕಾರಿಗಳಿಗೆ…

Read More

ಕೆವಿಎನ್ ಬೆಂಬಲಕ್ಕೆ ನಿಂತ ಚಿರಂಜೀವಿ; ದೊಡ್ಡ ಕರೆಕೊಟ್ಟ ನಟ

ದಳಪತಿ ವಿಜಯ್ ಅವರ ‘ಜನ ನಾಯಗನ್’ (Jana Nayagan) ಸಿನಿಮಾಗೆ ತೊಂದರೆ ಮೇಲೆ ತೊಂದರೆ ಎದುರಾಗುತ್ತಿದೆ. ಮೊದಲು ಸಿನಿಮಾ ರಿಲೀಸ್ ವಿಳಂಬ ಆಯಿತು. ಆ ಬಳಿಕ ತಂಡದವರು ಕೋರ್ಟ್​​ಗೆ ಹೋದರೂ ಯಾವುದೇ ಪ್ರಯೋಜನ ಆಗಿಲ್ಲ. ಈಗ ಪುನರ್ ವಿಮರ್ಶೆ ಸಮಿತಿಗೆ ಸಿನಿಮಾನ ಸಲ್ಲಿಕೆ ಮಾಡಲಾಗಿದ್ದು, ಅಲ್ಲಿ ಇನ್ನಷ್ಟೇ ವೀಕ್ಷಿಸಬೇಕಿದೆ. ಹೀಗಿರುವಾಗಲೇ ಚಿತ್ರದ ಪ್ರಮುಖ ದೃಶ್ಯಗಳು ಲೀಕ್ ಆಗಿದೆ. ಕೆಲವು ವರದಿ ಪ್ರಕಾರ ಇಡೀ ಚಿತ್ರವೇ ಲೀಕ್ ಆಗಿದೆ ಎಂದು ಕೂಡ ಹೇಳಲಾಗುತ್ತಿದೆ. ಈ ಬಗ್ಗೆ ಚಿರಂಜೀವಿ ಅವರು…

Read More