ಬೆಂಗಳೂರು, ಜ.1: ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಟ್ಟುಕೊಳ್ಳಬಹುದೇ ಎಂಬ ಪ್ರಶ್ನೆಗೆ ಸ್ಪಷ್ಟ ಮಾಹಿತಿಯನ್ನು ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ನೀಡಿದ್ದಾರೆ. ಮಾಲಾಧಾರಿಗಳು ಮಾತ್ರವಲ್ಲದೆ, ಶ್ರದ್ಧಾ ಭಕ್ತಿ ಇರುವ ಯಾರಾದರೂ ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಟ್ಟು ಪೂಜಿಸಬಹುದು. ಅಯ್ಯಪ್ಪ ಸ್ವಾಮಿ ಚಿನ್ಮುದ್ರೆಯಲ್ಲಿ, 18 ಮೆಟ್ಟಿಲುಗಳೊಂದಿಗೆ ಕುಳಿತಿರುವ ಭಂಗಿಯಲ್ಲಿರುವ ಫೋಟೋ ಜನಪ್ರಿಯವಾಗಿದೆ. ಇನ್ನು ಅಯ್ಯಪ್ಪನ ಫೋಟೋವನ್ನು ಇಡುವಾಗ ಕೆಲವು ನಿಯಮಗಳನ್ನು ಪಾಲಿಸಬೇಕು. ಸಿಂಹದ್ವಾರದ ಮೇಲೆ ಅಥವಾ ವಾಹನಗಳಲ್ಲಿ ವರ್ಷವಿಡೀ ಇಡುವುದು ಸೂಕ್ತವಲ್ಲ. ವಾಹನದಲ್ಲಿ ಯಾತ್ರೆಯ ಸಮಯದಲ್ಲಿ ರಕ್ಷಣೆಯಾಗಿ ಇಡಬಹುದು. ಮನೆಯಲ್ಲಿ, ದೇವರ ಮನೆ ಅತ್ಯಂತ ಶುಭಕರವಾದ ಸ್ಥಳ. ಹಾಲ್ನಲ್ಲಿ ಇಡಲು ಬಯಸಿದರೆ, ಫೋಟೋಗೆ ತ್ರಿಕಾಲ ಆರತಿ ಮಾಡಬೇಕು. ಮಲಗುವ ಕೋಣೆ ಅಥವಾ ಅಶುದ್ಧ ಸ್ಥಳಗಳಲ್ಲಿ ಫೋಟೋ ಇಡುವುದು ಸರಿಯಲ್ಲ. ಶುದ್ಧ ಮತ್ತು ಪವಿತ್ರ ಸ್ಥಳಗಳಲ್ಲಿ ಇಟ್ಟು, ನಿತ್ಯ ಕರ್ಪೂರದ ಆರತಿ, ಪ್ರಾರ್ಥನೆ ಮತ್ತು ವಾರಕ್ಕೊಮ್ಮೆ ಬೆಲ್ಲದಿಂದ ಮಾಡಿದ ಸಿಹಿ ನೈವೇದ್ಯವನ್ನು ಅರ್ಪಿಸುವುದರಿಂದ ಶುಭ ಫಲಗಳು ದೊರೆಯುತ್ತವೆ. “ಸ್ವಾಮಿಯೇ ಶರಣಂ ಅಯ್ಯಪ್ಪ” ಘೋಷವನ್ನು ಪಠಿಸುವುದು ಶ್ರೇಷ್ಠ. ಹೀಗೆ ಶ್ರದ್ಧೆಯಿಂದ ಪೂಜಿಸುವುದರಿಂದ ಸಾಡೇಸಾತಿ, ಅಷ್ಟಮ, ಪಂಚಮ ಶನಿ ಕಾಟಗಳ ತೀವ್ರತೆ ಕಡಿಮೆಯಾಗುತ್ತದೆ. ನವಗ್ರಹ ದೋಷ ನಿವಾರಣೆಯಾಗಿ, ಮಾಟ-ಮಂತ್ರದ ದೃಷ್ಟಿ ಮನೆಯನ್ನು ಪ್ರವೇಶಿಸುವುದಿಲ್ಲ. ಮನೆಯ ಕಲಹಗಳು ಇತ್ಯರ್ಥವಾಗಿ, ಮಾನಸಿಕ ತೃಪ್ತಿ ಮತ್ತು ಸಂತೃಪ್ತಿ ಪ್ರಾಪ್ತವಾಗುತ್ತದೆ. ಇವೆಲ್ಲವೂ ನಂಬಿಕೆಯ ಆಧಾರದ ಮೇಲೆ ನಿಂತಿವೆ.
ಬೆಂಗಳೂರು, ಜನವರಿ 1: ಜನವರಿ 2 ರಂದು ಕೋಗಿಲು (Kogilu Layout) ನಿರಾಶ್ರಿತರಿಗೆ ಮನೆ ಹಸ್ತಾಂತರ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಬಂಡೆ ಹೊಸೂರಿನ ಬೈಯಪ್ಪನಹಳ್ಳಿಯಲ್ಲಿರೋ ಅಪಾರ್ಟ್ಮೆಂಟ್ನಲ್ಲಿ ಮನೆ ನೀಡಲು ನಿರ್ಧರಿಸಲಾಗಿದೆ. ಸುಮಾರು 1 ಸಾವಿರಕ್ಕೂ ಹೆಚ್ಚು 1 BHK ಫ್ಲ್ಯಾಟ್ಗಳು ಈ ಅಪಾರ್ಟ್ಮೆಂಟ್ನಲ್ಲಿವೆ. ಸದ್ಯ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಸಣ್ಣಪುಟ್ಟ ಕೆಲಸಗಳಷ್ಟೇ ಬಾಕಿ ಉಳಿದಿವೆ.
ಆದರೆ, ಸರ್ಕಾರ ಕೋಗಿಲು ನಿವಾಸಿಗಳಿಗೆ ಸೂರು ಕಲ್ಪಿಸಿಕೊಡುತ್ತಿದ್ದು, ಮನೆ ಕಳೆದುಕೊಂಡು ದಶಕಗಳೇ ಉರುಳಿದರೂ ರಾಜ್ಯದ ಅನೇಕ ಕಡೆಯಲ್ಲಿ ಅರ್ಹ ಸಂತ್ರಸ್ತರತ್ತ ಗಮನವೇ ಕೊಟ್ಟಿಲ್ಲ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಲಿಂಗನಮಕ್ಕಿ ಜಲಾಶಯಕ್ಕಾಗಿ ಭೂಮಿ ಕಳೆದುಕೊಂಡವರಿಗೆ 65 ವರ್ಷದಿಂದ ಹಕ್ಕುಪತ್ರ ನೀಡಿಲ್ಲ.
ಬೆಳಗಾವಿ ನೆರೆ ಸಂತ್ರಸ್ತರ ಗೋಳನ್ನೂ ಹೇಳುವವರಿಲ್ಲ. ಎರಡು ವರ್ಷಗಳಿಂದ 500 ಕುಟುಂಬಗಳು ಬೀದಿಗೆ ಬಿದ್ದಿದ್ದರೂ ಒಂದು ಸೂರಿನ ಗತಿ ಇಲ್ಲದ ಪರಿಸ್ಥಿತಿ ಇವರದ್ದು. ಸರ್ಕಾರ ಮಾತ್ರ ಒಂದು ಎರಡು ಕಂತಿನ ಹಣ ಕೊಟ್ಟು ಕೈತೊಳೆದುಕೊಂಡಿದೆ.
ಮಿನಿ ಬಾಂಗ್ಲಾ ಮಾಡ್ತಿದ್ದೀರಿ: ಬಿಜೆಪಿ ವಾಗ್ದಾಳಿ
ಮತ್ತೊಂದೆಡೆ, ಕೋಗಿಲು ಪ್ರಕರಣ ಸುತ್ತ ರಾಜಕೀಯ ಜಟಾಪಟಿ ಜೋರಾಗಿಯೇ ನಡೆಯುತ್ತಿದೆ. ಇದೇ ವಿಚಾರ ಮುಂದಿಟ್ಟು ವಿಪಕ್ಷ ಬಿಜೆಪಿ ಸರ್ಕಾರಕ್ಕೆ ಹಿಗ್ಗಾಮುಗ್ಗಾ ಜಾಡಿಸಿದೆ. ವಿಪಕ್ಷ ನಾಯಕ ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಿಯೋಗ ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಛಲವಾದಿ ನಾರಾಯಣಸ್ವಾಮಿ, ಅಶ್ವತ್ಥ್ ನಾರಾಯಣ್ ಸೇರಿದಂತೆ ಕೇಸರಿ ನಾಯಕರು, ಅಕ್ರಮ ಮನೆಗಳ ತೆರವು ಸ್ಥಳ ಪರಿಶೀಲನೆ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಮಿನಿ ಬಾಂಗ್ಲಾದೇಶ ಮಾಡಲು ಹೊರಟಿದೆ ಎಂದು ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಇಲ್ಲಿ ರೋಹಿಂಗ್ಯಾಗಳು, ಬಾಂಗ್ಲಾದವರು ಇದ್ದಾರೆ. ನಾವು ಬರುವ ವಿಷಯ ತಿಳಿದು ಬೇರೆ ಕಡೆ ಸ್ಥಳಾಂತರ ಮಾಡಿದ್ದಾರೆ. ದೇಶದ ಭದ್ರತೆ ಕಥೆ ಏನು ಎಂದು ಛಲವಾದಿ ನಾರಾಯಣಸ್ವಾಮಿ, ಅಶ್ವತ್ಥ್ ನಾರಾಯಣ್ ಕಳವಳ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ, ಸಚಿವ ಸತೀಶ್ ಜಾರಕಿಹೊಳಿ ಕೂಡ ಪಶ್ಚಿಮ ಬಂಗಾಳ, ಬಾಂಗ್ಲಾದವರ ಪತ್ತೆ ಆಗಬೇಕು ಎಂದಿದ್ದಾರೆ.
ಸತ್ಯಶೋಧನೆಗೆ ಸಮಿತಿ ರಚಿಸಿದ ಬಿಜೆಪಿ
ಕೋಗಿಲು ಲೇಔಟ್ನಲ್ಲಿ ಬಿಜೆಪಿ ಸತ್ಯ ಶೋಧನೆಗೆ ಮುಂದಾಗಿದೆ. ಯಲಹಂಕ ಶಾಸಕ ವಿಶ್ವನಾಥ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ಶಾಸಕ ಮುನಿರಾಜು, ಪರಿಷತ್ ಸದಸ್ಯ ನವೀನ್ ಸೇರಿ 7 ನಾಯಕರನ್ನು ಒಳಗೊಂಡ ಸತ್ಯಶೋಧನಾ ಸಮಿತಿ ರಚನೆ ಮಾಡಿರುವ ರಾಜ್ಯಾಧ್ಯಕ್ಷ ವಿಜಯೇಂದ್ರ, ಒಂದು ವಾರದಲ್ಲಿ ವರದಿ ನೀಡುವಂತೆ ಸೂಚಿಸಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಕುರ್ಚಿ ವ್ಯಾಮೋಹಕ್ಕೆ ರಾಜ್ಯದ ಜನರ ಹಿತಾಸಕ್ತಿ ಬಲಿ ಕೊಟ್ಟಿದ್ದಾರೆ ಎಂದು ಬಿಜೆಪಿ ಸಾಮಾಜಿಕ ತಾಲತಾಣದಲ್ಲಿ ಕುಟುಕಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಬೆಂಗಳೂರು, ಜ.1: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಹೊಸ ವರ್ಷದ ಮೊದಲ ದಿನವಾದ ಜನವರಿ 1ರ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಈ ವಿಶೇಷ ದಿನದಂದು ರವಿ ಧನು ರಾಶಿಯಲ್ಲಿ ಹಾಗೂ ಚಂದ್ರ ವೃಷಭ ರಾಶಿಯಲ್ಲಿ ರೋಹಿಣಿ ನಕ್ಷತ್ರದಲ್ಲಿ ಸಂಚಾರ ಮಾಡುತ್ತಾನೆ. ಇದು ಅನೇಕ ರಾಶಿಗಳ ಮೇಲೆ ಶುಭ ಪರಿಣಾಮ ಬೀರುತ್ತದೆಯೆಂದು ಗುರೂಜಿ ತಿಳಿಸಿದ್ದಾರೆ. ವಿದ್ಯಾರ್ಥಿಗಳು, ವ್ಯಾಪಾರಸ್ಥರು, ರೈತರು, ಸರ್ಕಾರಿ ನೌಕರರು ಸೇರಿದಂತೆ ಎಲ್ಲ ವರ್ಗದವರಿಗೂ ಈ ದಿನದ ಗ್ರಹಗತಿಗಳ ಪ್ರಭಾವವನ್ನು ವಿವರಿಸಲಾಗಿದೆ. ಕೆಲವರಿಗೆ ಆರ್ಥಿಕ ಲಾಭ, ವೃತ್ತಿಯಲ್ಲಿ ಪ್ರಗತಿ ಮತ್ತು ಮಕ್ಕಳಿಂದ ಶುಭ ಸಮಾಚಾರ ಲಭಿಸಿದರೆ, ಇನ್ನು ಕೆಲವರಿಗೆ ಆರೋಗ್ಯದ ಕಡೆ ಗಮನಹರಿಸಲು ಮತ್ತು ಸಂಬಂಧಗಳಲ್ಲಿ ಎಚ್ಚರಿಕೆ ವಹಿಸಲು ಸಲಹೆ ನೀಡಲಾಗಿದೆ. ಪ್ರತಿಯೊಂದು ರಾಶಿಗೂ ಅದೃಷ್ಟ ಸಂಖ್ಯೆ, ಶುಭ ಬಣ್ಣ ಮತ್ತು ಜಪಿಸಬೇಕಾದ ಮಂತ್ರಗಳನ್ನು ಸೂಚಿಸಲಾಗಿದೆ.
ಬೆಂಗಳೂರು, ಜ.1: ಹೊಸ ವರ್ಷಕ್ಕೆ ವಾತಾವರಣದಲ್ಲೂ (Karnataka Weather Forecast) ಕೂಡ ಬದಲಾವಣೆಗಳು ಆಗಿವೆ. ರಾಜ್ಯದ ಹಲವು ಭಾಗದಲ್ಲಿ ವಾತಾವರಣ ಬದಲಾಗಿದೆ. ಇಂದು ರಾಜ್ಯದ (ಜನವರಿ 1), ಕೆಲವು ಪ್ರದೇಶಗಳಲ್ಲಿ ಮುಂಜಾನೆ ಮಂಜು ಕವಿದ ವಾತಾವರಣ ಇದೆ. ಬೆಂಗಳೂರು ಮತ್ತು ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ, ಕನಿಷ್ಠ ತಾಪಮಾನ 13°C ಮತ್ತು 19°C ನಡುವೆ ಇರುತ್ತದೆ. ಗರಿಷ್ಠ ತಾಪಮಾನ ಸುಮಾರು 27°C-28°C ಇರಲಿದೆ. ಬೀದರ್ , ವಿಜಯಪುರ ಮತ್ತು ಕಲಬುರಗಿ ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಿಗೆ ಶೀತ ಅಲೆಯ ಪರಿಸ್ಥಿತಿ ಇರಲಿದ್ದು, ಈಗಾಗಲೇ ಎಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನ ಗಮನಾರ್ಹವಾಗಿ ಕಡಿಮೆಯಾಗಿದೆ. ಬೀದರ್ 6.4°C, ವಿಜಯಪುರ 9.9°C, ಬೆಳಗಾವಿ 8.7°Cರಷ್ಟು ತಾಪಮಾನ ಇದೆ.
ಕರಾವಳಿ ಕರ್ನಾಟಕದಲ್ಲಿ ಬೆಚ್ಚಗಿನ ಮತ್ತು ಇಬ್ಬಣಿಯಿಂದ ಕೂಡಿದ್ದು, ಕನಿಷ್ಠ ತಾಪಮಾನವು 19°C-20°C ಇರುತ್ತದೆ. ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಬೆಳಿಗ್ಗೆ ತಂಪಾದ ವಾತಾವರಣ ಇರಲಿದೆ. ಮಂಗಳೂರು ಭಾಗದಲ್ಲಿ ಗರಿಷ್ಠ ತಾಪಮಾನ ಸುಮಾರು 28°C-30°C , ಕನಿಷ್ಠ ತಾಪಮಾನ ಸುಮಾರು 20°C-21°C ಇರಲಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ, ಒಣ ಹವಾಮಾನವಿರುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮಳೆಯಾಗುವ ಸಾಧ್ಯತೆ ಬಹಳ ಕಡಿಮೆ ಎಂದು ಹೇಳಿದೆ.
ಬೆಳಗಾವಿ (8.7°C), ಬಾಗಲಕೋಟೆ (9.9°C), ರಾಯಚೂರು (10.4°C), ಧಾರವಾಡ ಮತ್ತು ಗದಗ (ತಲಾ 10.7°C) ತೀವ್ರ ಚಳಿಗಾಲದ ಚಳಿಯನ್ನು ಅನುಭವಿಸಿವೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ, ಚಿಕ್ಕಮಗಳೂರು (11.1°C), ಹಾಸನ (13.1°C), ತುಮಕೂರು (13.1°C), ಕೋಲಾರ (13.3°C) ಮತ್ತು ಚಿತ್ರದುರ್ಗ (13°C) ಶೀತದ ವಾತಾವರಣವನ್ನು ಹೊಂದಿದೆ. ಇನ್ನು ಬೆಂಗಳೂರಿನ ಐಎಂಡಿ ಪ್ರಕಾರ, ಬೆಂಗಳೂರಿನಲ್ಲಿ ತಕ್ಷಣಕ್ಕೆ ಮಳೆಯಾಗುವ ಮುನ್ಸೂಚನೆ ಇಲ್ಲ, ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ. ಮೋಡ ಕವಿದ ವಾತಾವರಣ ಕೂಡ ಹೆಚ್ಚಾಗಲಿದೆ. ರಾತ್ರಿ ಹೊತ್ತು ಕೂಡ ತಂಪಾದ ಗಾಳಿ ಇರಲಿದೆ.
ಮುಂದಿನ ಕೆಲವು ದಿನಗಳಲ್ಲಿ ಬೆಂಗಳೂರಿನಲ್ಲಿ ಬೆಳಿಗ್ಗೆ ಮತ್ತು ಮಧ್ಯಾಹ್ನದ ವೇಳೆ ತಂಪಾದ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ನಗರದಲ್ಲಿ ಹಗಲಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನವಿದ್ದರೂ, ರಾತ್ರಿ ಮತ್ತು ಮುಂಜಾನೆಯ ವೇಳೆ ಚಳಿಯ ವಾತಾವರಣ ಇರಲಿದೆ.
ಬೆಂಗಳೂರು, ಜನವರಿ 01: 2025ಕ್ಕೆ ಗುಡ್ ಬೈ ಹೇಳಿ ಹೊಸ ವರ್ಷ 2026ನ್ನು (New Year) ಎಲ್ಲರೂ ವೆಲ್ಕಂ ಮಾಡಿದರು. ರಾಜ್ಯದ ಜನರು ಹೊಸ ವರ್ಷವನ್ನು ಸಂಭ್ರಮ ಸಡಗರದಿಂದ ಬರಮಾಡಿಕೊಂಡಿದ್ದಾರೆ. ಬೆಂಗಳೂರಿನ (bangaluru) ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರ, ಚರ್ಚ್ ಸ್ಟ್ರೀಟ್, ಕೋರಮಂಗಲ ಸೇರಿದಂತೆ ಹಲವೆಡೆ ಸೆಲೆಬ್ರೇಷನ್ ಜೋರಾಗಿತ್ತು. ಕಿಕ್ಕೇರಿಸಿಕೊಂಡು ಎಲ್ಲರೂ ಕುಣಿದು ಕುಪ್ಪಳಿಸಿದ್ದು, ಹೊಸ ವರ್ಷವನ್ನ ಮಸ್ತ್ ಎಂಜಾಯ್ ಮಾಡಿದರು. ಸಂಭ್ರಮಾಚರಣೆ ನಡುವೆಯೇ ಕೆಲ ಕಿರಿಕ್ ಕೂಡ ನಡೆದಿದ್ದು, ಪೊಲೀಸರು ಲಾಠಿ ರುಚಿ ತೋರಿಸುತ್ತಿದ್ದಂತೆ ಮನೆ ದಾರಿ ಹಿಡಿದರು.
ಕುಡಿದ ಮತ್ತಿನಲ್ಲಿ ಗೆಳೆಯನಿಗೆ ಹಲ್ಲೆ ಮಾಡಿದ ಗೆಳತಿ
ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಓಪೇರಾ ರಸ್ತೆಯಲ್ಲಿ ಸೆಲೆಬ್ರೇಷನ್ ಜೋರಾಗಿತ್ತು. ಈ ವೇಳೆ ಸಂಭ್ರಮಾಚರಣೆ ನಡುವೆಯೇ ಹಲವು ಕಿರಿಕ್ ನಡೆದಿವೆ. ಒಪೇರಾ ರಸ್ತೆಯಲ್ಲಿ ಕುಡಿದ ಮತ್ತಿನಲ್ಲಿ ಗೆಳೆಯನ ಮೇಲೆ ಯುವತಿ ಹಲ್ಲೆ ಮಾಡಿದ್ದಾಳೆ. ನ್ಯೂಇಯರ್ ಆಚರಣೆಗೆ ಆಗಮಿಸಿದ್ದ ಜೋಡಿ ನಡುರೋಡಲ್ಲೇ ಹೈಡ್ರಾಮಾ ಕ್ರಿಯೇಟ್ ಮಾಡಿದೆ. ನಶೆಯಲ್ಲಿದ್ದ ಜೋಡಿಯನ್ನು ಸಮಾಧಾನಪಡಿಸಲು ಪೊಲೀಸು ಹರಸಹಾಸ ಪಡುವಂತಾಯ್ತು. ಕುಡಿದು ಟೈಟಾದ ಪ್ರೇಯಸಿಯನ್ನ ಮಗುವಿನ ರೀತಿ ಪ್ರಿಯಕರ ಹೊತ್ತೊಯ್ದಿದ್ದಾನೆ.
ಕೋರಮಂಗಲದ ಟೋಕಾ ಪಬ್ನಲ್ಲಿ ಯುವಕರಿಬ್ಬರ ನಡುವೆ ಗಲಾಟೆ ನಡೆದಿದೆ. ಗಲಾಟೆಯಲ್ಲಿ ಓರ್ವ ಯುವಕನ ತಲೆಗೆ ಗಾಯವಾಗಿದೆ. ಗಾಯಗೊಂಡ ವ್ಯಕ್ತಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದು, ಆ್ಯಂಬುಲೆನ್ಸ್ ಹತ್ತಲು ಹಿಂದೇಟು ಹಾಕಿದ ಯುವಕನಿಗೆ ಪೊಲೀಸರು ಕಪಾಳಮೋಕ್ಷ ಮಾಡಿದ್ದಾರೆ.
ಬ್ರಿಗೇಡ್ ರಸ್ತೆಯಲ್ಲಿ ನಡು ರಸ್ತೆಯಲ್ಲಿ ಪಟಾಕಿ ಸಿಡಿಸಿದ್ದಕ್ಕೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ನ್ಯೂ ಇಯರ್ ಖುಷಿಯಲ್ಲಿ ಯುವಕರು ನಡುರೋಡಲ್ಲೇ ಪಟಾಕಿ ಸಿಡಿಸಿದ್ದರು. ರಸ್ತೆಯಲ್ಲೇ ಪಟಾಕಿ ಹಚ್ಚಿದಕ್ಕೆ ಕುಡಿದು ಮತ್ತಿನಲ್ಲಿದ್ದ ಯುವಕರ ಗುಂಪಿಗೆ ಪೊಲೀಸರು ಲಾಠಿ ಬೀಸಿ ಕಿಕ್ ಇಳಿಸಿದರು. ಯುವಕರ ಗುಂಪು ಎದ್ನೋ ಬಿದ್ನೋ ಅಂತಾ ಓಡಿ ಹೋದರು.
ಇನ್ನು ಖುದ್ದು ಜನರನ್ನ ಕಂಟ್ರೋಲ್ ಮಾಡಲು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಫೀಲ್ಡಿಗಿಳಿದರು. ಯಾವುದೇ ತೊಂದರೆ ಇಲ್ಲದೆ ಸೇಫ್ಟಿ ನೀಡಿದ ಕಮಿಷನರ್ಗೆ ಕೆಲ ಜನರು ಹೂವಿನ ಗುಚ್ಚ ನೀಡಿದರು.
ಬೆಂಗಳೂರು, ಜನವರಿ 01: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಹೊಸ ವರ್ಷದ ಸಂಭ್ರಮಾಚರಣೆ ಸಡಗರದಿಂದ ಕೂಡಿತ್ತು. ಜನರು ಪಾರ್ಟಿ, ಕುಣಿತ ಮತ್ತು ಮೋಜಿನಲ್ಲಿ ಪಾಲ್ಗೊಂಡು 2026 ಅನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ಸಂಭ್ರಮಿಸುವುದು ಸಹಜವಾದರೂ, ಪಾರ್ಟಿಯ ನಂತರ ಪ್ರತಿಯೊಬ್ಬರೂ ಸುರಕ್ಷಿತವಾಗಿ ಮನೆ ತಲುಪುವುದು ಅತ್ಯಂತ ಮುಖ್ಯ. ಈ ವರ್ಷ ಬೆಂಗಳೂರು ಪೊಲೀಸರು ಈ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಹೊಸ ವರ್ಷದ ಪಾರ್ಟಿ ಮುಗಿದ ನಂತರ ಮನೆಗೆ ತೆರಳಲು ಕಷ್ಟಪಡುತ್ತಿದ್ದ ಮಹಿಳೆಯರಿಗಾಗಿ ಬೆಂಗಳೂರು ಪೊಲೀಸರು ಆಟೋ ವ್ಯವಸ್ಥೆ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
ಬೆಳಗಾವಿ, ಜನವರಿ 01: 2026ರ ಹೊಸ ಪರ್ವ ಶುರುವಾಗಿದೆ. ರಾಜ್ಯದ ಉದ್ದಗಲಕ್ಕೂ ಜನರು ಮೋಜುಮಸ್ತಿಯಲ್ಲಿ ತೊಡಗಿದ್ದಾರೆ. ಇತ್ತ ಬೆಳಗಾವಿಯಲ್ಲಿ ಹೊಸ ವರ್ಷವನ್ನು ಜನರು ಅದ್ದೂರಿಯಾಗಿ ಸ್ವಾಗತ ಮಾಡಿದರು. ಪಾರ್ಟಿ, ಡ್ಯಾನ್ಸ್ನಲ್ಲಿ ಫುಲ್ ಎಂಜಾಯ್ ಮಾಡಿದರು. ಅದರಲ್ಲೂ ಯುವಜನತೆ ಕುಣಿದು ಕುಪ್ಪಲಿಸಿದರು. ವಿಡಿಯೋ ನೋಡಿ.
2025 ಮುಕ್ತಾಯವಾಗುತ್ತಿದೆ. 2026 ರ ಹೊಸ ವರ್ಷದ ಉದಯವಾಗಿದೆ. ಕಾಲವು ಪರಿವರ್ತನೆಯನ್ನು ಹೇಳಿದ್ದು, ಮನುಕುಲವೂ ಪರಿವರ್ತನೆಯ ಕಡೆಗೆ ಹೆಜ್ಜೆ ಹಾಕಬೇಕು. ದ್ವೇಷ ಅಸೂಯೆ, ಸಿಟ್ಟು, ಅಶಾಂತಿ, ಎಲ್ಲವನ್ನೂ ಬಿಟ್ಟು ನೆಮ್ಮದಿಯ ಬದುಕನ್ನು ಹೊಸ ವರ್ಷದ ಆರಂಭದಲ್ಲಿ ಸಂಕಲ್ಪ ಮಾಡಬೇಕು. ಎಲ್ಲರಿಗೂ ಶುಭವಾಗಲಿ.
ಮೇಷ ರಾಶಿ:
ಶ್ರಮಕ್ಕೆ ಅಂತಿಮ ಫಲ ಸಿಗುತ್ತದೆ. ಆಪ್ತರ ಸಹಾನುಭೂತಿ ದೊರೆಯುತ್ತದೆ. ನ್ಯಾಯಾಲಯದ ವಿಚಾರದಲ್ಲಿ ಸಮಾಧಾನ. ನಿಮ್ಮನ್ನೇ ನೀವು ಪರೀಕ್ಷೆಗೆ ಒಡ್ಡಿಕೊಳ್ಳುವಿರಿ. ದೂರದ ಮಿತ್ರರ ಸಂಪರ್ಕದಿಂದ ಕೆಲವು ಸಮಸ್ಯೆಗಳು ಬಗೆಹರಿಯಬಹುದು. ಮಾಧ್ಯಮದಲ್ಲಿ ಕೆಲಸ ಮಾಡುವವರು ಸ್ವಲ್ಪ ಜಾಗರೂಕತೆಯಿಂದ ವ್ಯವಹರಿಸಿ. ತೆರೆದ ಮನಸ್ಸಿನಿಂದ ನೀವು ಯಾವ ಕಾರ್ಯವನ್ನೂ ಮಾಡುವುದೂ ಕಷ್ಟವಾದೀತು. ನಿಮ್ಮೊಳಗೆ ಹೇಳಿಕೊಳ್ಳಲಾಗದ ಭಯವು ಕಾಣಿಸುವುದು. ಅತಿಯಾದ ಸುಖದಿಂದ ನಿಮ್ಮ ಕ್ರಿಯಾಶೀಲತೆ ನಿಂತುಹೋಗುವುದು. ದುಷ್ಟಶಕ್ತಿಯ ಬಗ್ಗೆ ನಮಗೆ ಸಂದೇಹ ಬರಬಹುದು. ಕುಟುಂಬ ಮತ್ತು ಮನೆಕೆಲಸ ಜವಾಬ್ದಾರಿಯಿಂದ ಒತ್ತಡ. ಗೃಹನಿರ್ಮಾಣದಲ್ಲಿ ಸಣ್ಣ ವಿಘ್ನಗಳು. ಅತಿಯಾಸೆ ಮನಸ್ಸಿಗೆ ಕಳವಳ ತರಬಹುದು. ವಾಹನ ಖರೀದಿಯಲ್ಲಿ ಗೊಂದಲ ಉಂಟಾಗಬಹುದು. ತಾಯಿಯ ಜೊತೆ ಜಗಳ ಮಾಡಿಕೊಂಡು ಬೇಸರಗೊಳ್ಳುವಿರಿ. ಬಿಡಿಸಲಾಗದ ಸಮಸ್ಯೆಗಳು ನಿಮ್ಮನ್ನು ಇಬ್ಬಂದಿ ಮಾಡಬಹುದು. ಸರ್ಕಾರದಿಂದ ಬರುವ ಸೌಲಭ್ಯವನ್ನು ಪಡೆಯುವ ಕಡೆ ಕೆಲಸ ಮಾಡುವಿರಿ.
ವೃಷಭ ರಾಶಿ:
ಗೃಹಕ್ಕೆ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಮನೆಕೆಲಸ ಸುಧಾರಣೆ ಕಾಣುತ್ತದೆ. ಶ್ರಮಕ್ಕೆ ಫಲ ದೊರೆಯುತ್ತದೆ. ಅತಿಯಾಸೆ ತೊರೆದು ಯೋಜನೆ ಮಾಡಿದರೆ ಒತ್ತಡ ಕಡಿಮೆ. ನಿಮ್ಮದಾದ ಕಾರ್ಯಗಳೇ ಬಹಳ ಇರುವಾಗ ಬೇರೆಯ ಕಡೆ ನಿಮ್ಮ ಗಮನ ಹೋಗದು. ಕೋಪವನ್ನು ಕಡಿಮೆ ಮಾಡಿಕೊಳ್ಳಲು ನಿಮ್ಮ ಸತತ ಪ್ರಯತ್ನವು ಫಲಿಸೀತು. ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿಯನ್ನು ಕಾಣಲು ಸಾಧ್ಯ. ನಿಮ್ಮಿಂದ ಆಗದ ಕೆಲಸಕ್ಕೆ ಸಮಯವನ್ನು ಕೊಡುವುದು ಬೇಡ. ಸಹೋದರರ ಶೀತಲ ಸಮರವು ತಿಳಿಯಾಗಬಹುದು ವ್ಯಾಪಾರದ ನಿರ್ಲಕ್ಷ್ಯದಿಂದ ಅಲ್ಪ ನಷ್ಟವು ಸಂಭವಿಸಬಹುದು. ಇಂದು ಬಂಧುಗಳ ಮನೆಯಲ್ಲಿ ವಾಸಮಾಡಬೇಕಾಗಬಹುದು. ಉತ್ಸಾಹದ ಭರದಲ್ಲಿ ಏನ್ನಾದರೂ ಮಾಡಿಕೊಂಡೀರ. ದಾಂಪತ್ಯದಲ್ಲಿ ಪರಸ್ಪರ ಅನುರಾಗದ ಕೊರತೆ ಕಾಣಿಸಬಹುದು. ನ್ಯಾಯಾಲಯದ ವಿಷಯದಲ್ಲಿ ಅನುಕೂಲ. ದೇಹಾಯಾಸ ಇದ್ದರೂ ಅನಾರೋಗ್ಯ ದೂರ. ಉದ್ವೇಗಕ್ಕೆ ಒಳಗಾಗದೇ ಇರಲು ನೀವು ಪ್ರಯತ್ನಿಸುವಿರಿ. ಸ್ನೇಹಿತರ ಇಚ್ಛೆಯನ್ನು ಪೂರೈಸಲು ನೀವು ಸಮರ್ಥರಾಗುವಿರಿ.
ಮಿಥುನ ರಾಶಿ:
ಅತಿಯಾಸೆಯಿಂದ ನಿರ್ಧಾರದಲ್ಲಿ ಗೊಂದಲ ಹೆಚ್ಚು. ಆಪ್ತರ ವಿಯೋಗ ಭಾವ ಕಾಡುವುದು. ನ್ಯಾಯಾಲಯದ ವಿಚಾರದಲ್ಲಿ ಬಲ ಸಿಗುತ್ತದೆ. ಮನಸ್ತಾಪವನ್ನು ಹೇಗಾದರೂ ಮಾಡಿ ಹೊರಹಾಕಬೇಕು ಎಂದುಕೊಂಡಿರುವಿರಿ. ನಿಮ್ಮ ವಸ್ತುಗಳು ಕಾಣಿಸದೇ ನೀವು ಆತಂಕಪಡುವಿರಿ. ಸಿಕ್ಕ ಅವಕಾಶವನ್ನು ನೀವೇ ಬಿಟ್ಟುಕೊಂಡು ನಿಮ್ಮನ್ನೇ ಹಳಿದುಕೊಳ್ಳುವಿರಿ. ಅನ್ಯರ ಕುರಿತಾಗಿ ಸಂತಾಪವನ್ನು ವ್ಯಕ್ತಪಡಿಸುವುದು ವ್ಯರ್ಥವಾಗಬಹುದು. ಅಪರಿಚಿತರ ಬಂಧನದಿಂದ ನೀವು ಮುಕ್ತಾರಾಗಲು ಕಷ್ಟವಾಗಬಹುದು. ವಿದ್ಯಾಭ್ಯಾಸದಲ್ಲಿ ಸಾಮಾನ್ಯ ಪ್ರಗತಿಯನ್ನು ಕಾಣಬಹುದು. ತುರ್ತಾಗಿ ಹಣದ ಹೊಂದಾಣಿಕೆಯು ಕಷ್ಟವಾಗಬಹುದು. ಗೃಹನಿರ್ಮಾಣದಲ್ಲಿ ವಿಳಂಬ ಮತ್ತು ವಿಘ್ನಗಳು ಒತ್ತಡ ಹೆಚ್ಚಿಸುತ್ತವೆ. ಶ್ರಮಕ್ಕೆ ನಿಧಾನ ಫಲ. ಆರೋಗ್ಯದಲ್ಲಿ ಎಚ್ಚರ ಅಗತ್ಯ. ಮಕ್ಕಳ ಯಶಸ್ಸು ನೀವು ನಿರೀಕ್ಷಿಸಿದಂತೆ ಆಗುವುದು ಕಷ್ಟ. ಕೃಷಿಗೆ ಚಟುವಟಿಕೆಗಲ್ಲಿ ಆಸಕ್ತಿ ಹೆಚ್ಚಿರುವುದು. ನಿಮಗೆ ಸಂಬಂಧಿಸಿದ ಕಾರ್ಯವನ್ನು ಮಾತ್ರ ಮಾಡಿ. ಬಹಳ ದಿಮಗಳ ಅನಂತರ ನಿಮ್ಮ ಮನಸ್ಸು ಎಲ್ಲಿಲ್ಲದ ಉತ್ಸಾಹದಲ್ಲಿ ಇರುವುದು.
ಕರ್ಕಾಟಕ ರಾಶಿ:
ಶ್ರಮಕ್ಕೆ ಗೌರವ ಮತ್ತು ಪ್ರಶಂಸೆ ದೊರೆಯುತ್ತದೆ. ಗೃಹಸಂಬಂಧಿತ ಕೆಲಸಗಳಲ್ಲಿ ಮುನ್ನಡೆ. ಮನೆಕೆಲಸ ಇದ್ದರೂ ಮನಸ್ಸು ಹಗುರವಾಗಿರುವುದು. ಹಿರಿಯರ ಸಮ್ಮುಖದಲ್ಲಿ ನೂತನ ಗೃಹನಿರ್ಮಾಣವನ್ನು ಮಾಡುವಿರಿ. ಅಧಿಕಾರಿಗಳ ನಡವೆ ಕಲಹವಾಗಬಹುದು. ಉದ್ವೇಗದಿಂದ ಏನನ್ನಾದರೂ ಅನೀತಿ ಮಾರ್ಗದಲ್ಲಿ ಹೋಬೇಕಾದೀತು. ಸಂಗಾತಿಯ ಆಗಮನವನ್ನು ನಿರೀಕ್ಷಿಸುವಿರಿ. ಹಳೆಯ ಸ್ನೇಹವನ್ನು ಮರಳಿ ಪಡೆಯುವಿರಿ. ಬಂಧುಗಳ ಆಸ್ತಿಯ ನಿಮಗೆ ಸಿಗಬಹುದು. ಆರಂಭಿಸಿದ ಕಾರ್ಯವು ಪೂರ್ಣ ಸಫಲವಾಗುವವರೆಗೂ ನೀವು ನಿಲ್ಲಿಸುವುದಿಲ್ಲ. ಒತ್ತಡಕ್ಕೆ ಮಣಿದು ಇಷ್ಟವಿಲ್ಲದ ಕೆಲಸವನ್ನು ಮಾಡಬೇಕಾಗುವುದು. ಅತಿಯಾಸೆ ಹಣಕಾಸಿನ ಒತ್ತಡ ತರಬಹುದು. ನ್ಯಾಯಾಲಯದ ವಿಚಾರದಲ್ಲಿ ಜಯದ ಸಾಧ್ಯತೆ. ನೀವು ನಿಮ್ಮ ಪರಿಸ್ಥಿತಿಯನ್ನು ಇತರರಿಗೆ ತಿಳಿಸುವುದು ಕಷ್ಟವಾಗುವುದು. ಸಂತಾನದ ಖುಷಿಯು ಇರಲಿದೆ. ಸಹೋದರರ ಬಗ್ಗೆ ನಿಮ್ಮಲ್ಲಿ ನಕಾರಾತ್ಮಕ ಗುಣಗಳು ಕಾಣಿಸಿಕೊಳ್ಳಬಹುದು. ನೀವು ಕೈಗೊಂಡ ಕಾರ್ಯಗಳು ಸಫಲವಾಗಲಿಲ್ಲ ಎಂಬ ಹತಾಶಭಾವವೂ ಸಿಟ್ಟೂ ಏಕಕಾಲಕ್ಕೆ ಬರಲಿದೆ.
ಸಿಂಹ ರಾಶಿ:
ಗೃಹನಿರ್ಮಾಣದಲ್ಲಿ ತಾಂತ್ರಿಕ ವಿಘ್ನದಿಂದ ಆತಂಕ. ಆಪ್ತರಿಂದ ದೂರವಿರುವ ಭಾವ. ನ್ಯಾಯಾಲಯದ ವಿಚಾರದಲ್ಲಿ ವಿಳಂಬ. ಶ್ರಮಕ್ಕೆ ಫಲ ತಡವಾಗಿ ಸಿಗುವ ದಿನ. ಅಪಹಾಸ್ಯಕ್ಕೆ ಆಸ್ಪದ ಕೊಡಲಾರಿರಿ. ವೃತ್ತಿಯಲ್ಲಿ ಒಂದೇ ಕೆಲಸವನ್ನು ಇಬ್ಬರು ಮಾಡಲು ಹೋಗಿ ವೈಮನಸ್ಯ ಉಂಟಾಗುವುದು. ಅರಿವಿಲ್ಲದೇ ಎಲ್ಲರೆದುರು ಅಸಭ್ಯ ವರ್ತನೆಯನ್ನು ನೀವು ತೋರಿಸುವಿರಿ. ಹೊಂದಾಣಿಕೆಯಿಂದ ಇರುವುದು ಒಳ್ಳೆಯದು. ಉದ್ಯೋಗದಲ್ಲಿ ನಿರಂತರ ಯಾವುದಾದರೂ ಸಮಸ್ಯೆಯು ಬಾಧಿಸುತ್ತಿದ್ದು ದೈವಜ್ಞರಿಂದ ಸೂಕ್ತ ಪರಿಹಾರವನ್ನು ಕಂಡುಕೊಳ್ಳಬೇಕಾಗಬಹುದು. ನಂಬಿ ಬಂದವರನ್ನು ಬರಿಗೈಯಲ್ಲಿ ಕಳುಹಿಸಲಾರಿರಿ. ಸಂಗಾತಿಯ ಮಾತುಗಳು ನಿಮ್ಮ ಅಭಿಮಾನಕ್ಕೆ ತೊಂದರೆ ಕೊಡಬಹುದು. ಅತಿಯಾದ ಶ್ರಮದಿಂದ ದೇಹಾಯಾಸ ಹೆಚ್ಚಾಗುತ್ತದೆ. ಮನೆಕೆಲಸ ಮತ್ತು ಜವಾಬ್ದಾರಿ ಒತ್ತಡ ತರುತ್ತವೆ. ನಿಮ್ಮ ಉದ್ಯಮವನ್ನು ವಿಸ್ತಾರಗೊಳಿಸುವ ಆಲೋಚನೆಯು ಬೇರೆಯವರಿಂದ ಸಿಗಬಹುದು. ನಿಮ್ಮ ಶ್ರೇಯಸ್ಸಿನಲ್ಲಿ ಬಂಧುಗಳ ಪಾತ್ರವು ಇರುವುದು.
ಕನ್ಯಾ ರಾಶಿ:
ಆಪ್ತರ ಬೆಂಬಲದಿಂದ ಮನಸ್ಸಿಗೆ ಧೈರ್ಯ. ಗೃಹನಿರ್ಮಾಣದಲ್ಲಿ ಪ್ರಗತಿ ಕಂಡುಬರುತ್ತದೆ. ಅತಿಯಾಸೆ ನಿಯಂತ್ರಿಸಿದರೆ ಒತ್ತಡ ತಪ್ಪುತ್ತದೆ. ವಿಶ್ವಾಸವನ್ನು ಗಳಿಸದೇ ನೀವು ವ್ಯವಹಾರದಲ್ಲಿ ಯಶಸ್ಸು ಸಾಧ್ಯವಾಗದು. ವಿದೇಶ ಪ್ರಯಾಣದಿಂದ ಆಯಾಸ ಹೆಚ್ಚು. ಬೆಳಗಿನಿಂದಲೇ ಮನಸ್ಸು ಸರಿ ಇಲ್ಲದ ಕಾರಣ ಎಲ್ಲದಕ್ಕೂ ಸಿಟ್ಟು ಮಾಡುವಿರಿ. ಇಲ್ಲವೇ ಸುಮ್ಮನೆ ಇರುವಿರಿ. ಅಮೂಲ್ಯ ವಸ್ತುಗಳನ್ನು ಪಡೆದುಕೊಳ್ಳುವ ಹಂಬಲವಿರುವುದು. ಮಕ್ಕಳಿಗಾಗಿ ಹಣವನ್ನು ಇಡುವಿರಿ. ಸ್ನೇಹಿತರ ಸಹವಾಸದಿಂದ ದುರಭ್ಯಾಸವು ರೂಢಿಯಾಗಬಹುದು. ಆಲಸ್ಯದಿಂದ ಸಮಯವನ್ನು ಹಾಳುಮಾಡಿಕೊಳ್ಳುವಿರಿ. ನ್ಯಾಯಾಲಯದ ವಿಚಾರದಲ್ಲಿ ಸಮಾಧಾನ. ಆರೋಗ್ಯ ಸಾಮಾನ್ಯ, ದೇಹಾಯಾಸ ತಾತ್ಕಾಲಿಕ. ಮಿತ್ರರಿಂದ ಧನದ ವಿಚಾರದಲ್ಲಿ ಮೋಸವಾಗಬಹುದು. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಬರಲಿದ್ದು ಹಿರಿಯರಿಂದ ಕೇಳಿಪಡೆಯುವಿರಿ. ವೃತ್ತಿಯಲ್ಲಿ ಒಂದಿಲ್ಲೊಂದು ಕಾರಣಕ್ಕೆ ಕಲಹವಾಗುವ ಕಾರಣ ಸ್ಥಾನವು ಬದಲಾಗಬಹುದು.
ತುಲಾ ರಾಶಿ:
ಅತಿಯಾಸೆ ತಪ್ಪಿಸಿದರೆ ಒತ್ತಡ ಕಡಿಮೆ. ನ್ಯಾಯಾಲಯದ ವಿಷಯದಲ್ಲಿ ಅನುಕೂಲಕರ ಬೆಳವಣಿಗೆ. ದೇಹಾಯಾಸ ಇದ್ದರೂ ಅನಾರೋಗ್ಯ ತೀವ್ರವಾಗದು. ನಿಮ್ಮ ಜಾಣ್ಮೆಯಿಂದ ಭೂಮಿಯ ಕಲಹವನ್ನು ಸರಿಮಾಡಿಕೊಳ್ಳುವಿರಿ. ಮಿತ್ರನ ಬಗ್ಗೆ ಯಾರಾದರೂ ಸಲ್ಲದ ಮಾತನಾಡಬಹುದು. ಕಾರ್ಯದ ವಿಳಂಬದಿಂದ ಮನೆಗೆ ಬರುವುದು ವಿಳಂಬವಾಗುವುದು. ಲೆಕ್ಕ ಪರಿಶೋಧಕರು ಒತ್ತಡದಲ್ಲಿ ಇರುವರು. ನಾಜೂಕಿನಿಂದ ಇಂದಿನ ಕಾರ್ಯವನ್ನು ಮಾಡಿಕೊಳ್ಳುವಿರಿ. ವಿದ್ಯಾರ್ಥಿಗಳು ವಿಶೇಷ ತರಬೇತಿಯನ್ನು ಪಡೆಯಬೇಕಾಗಬಹುದು. ಮನೆಯಿಂದ ದೂರದಲ್ಲಿ ನಿಮ್ಮ ಹೊಸ ಜೀವನವನ್ನು ನಡೆಸಬಹುದು. ಯೋಜಿತ ಶ್ರಮಕ್ಕೆ ಉತ್ತಮ ಫಲ ಸಿಗುತ್ತದೆ. ಗೃಹನಿರ್ಮಾಣದಲ್ಲಿ ಸಣ್ಣ ತಿದ್ದುಪಡಿ ಅಗತ್ಯ. ಮನೆಕೆಲಸ ವ್ಯವಸ್ಥಿತವಾಗಿರುತ್ತದೆ. ಕಲಾವಿದರು ಕೆಲವು ಅವಕಾಶದಿಂದ ವಂಚಿತರಾಗಬಹುದು. ಖರ್ಚಿನ ಬಗ್ಗೆ ಅಂದಾಜಿರಲಿ. ನಿಮ್ಮ ಅಭಿರುಚಿಗೆ ಪ್ರೋತ್ಸಾಹವು ಸಿಗಲಿದೆ. ಅದಕ್ಕೆ ಇಂದು ಪಶ್ಚಾತ್ತಾಪವನ್ನು ಅನುಭವಿಸುವಿರಿ.
ವೃಶ್ಚಿಕ ರಾಶಿ:
ಅತಿಯಾಸೆ ನಿಮ್ಮ ಶಾಂತಿಯನ್ನು ಹಾಳುಮಾಡಬಹುದು. ಗೃಹನಿರ್ಮಾಣದಲ್ಲಿ ವಿಳಂಬ ಅಥವಾ ಅಡಚಣೆ. ಮನೆಕೆಲಸ ಹೆಚ್ಚಾಗಿ ಕಿರಿಕಿರಿ. ಸಮಯವನ್ನು ಸುಮ್ಮನೇ ವ್ಯರ್ಥವಾಗಿ ಕಳೆಯುವಿರಿ. ಆಲಸ್ಯದಿಂದ ಏನನ್ನೂ ಮಾಡಲಾಗದು. ಮೇಲಧಿಕಾರಿಗಳ ಮಾತುಗಳಿಂದ ನಿಮಗೆ ಅವಮಾನವಾಗಿದ್ದು ಮುಂದೇನು ಎಂಬುದರ ಬಗ್ಗೆ ನಿಮಗೆ ಚಿಂತೆ ಬರಬಹುದು. ಅಧಿಕ ಲಾಭದ ನಿರೀಕ್ಷೆಯಲ್ಲಿ ಹೊರಟ ನಿಮಗೆ ಅಲ್ಪ ಲಾಭವಾಗಬಹುದು. ಜಾಣ್ಮೆಯಿಂದ ಸರ್ಕಾರದ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಸ್ವಂತ ವಾಹನದ ದುರಸ್ತಿಗೆ ಖರ್ಚಾಗಬಹುದು. ಅತಿಯಾದ ಶ್ರಮಕ್ಕೆ ಭಾಗಶಃ ಫಲ ಮಾತ್ರ ಸಿಗಲಿದೆ. ನ್ಯಾಯಾಲಯದ ವಿಚಾರದಲ್ಲಿ ದಾಖಲೆ ಮತ್ತು ಮಾತಿನಲ್ಲಿ ಜಾಗ್ರತೆ ಅಗತ್ಯ. ದೇಹಾಯಾಸ ಮತ್ತು ಒತ್ತಡ ಹೆಚ್ಚಾಗುವ ಸಾಧ್ಯತೆ. ನಿಮ್ಮನ್ನು ಅತಿಥಿಗಳಾಗಿ ಆಹ್ವಾನಿಸಬಹುದು. ನಿಮ್ಮ ಪ್ರೇಮಸಂಬಂಧವು ಸಡಿಲಾಗಬಹುದು. ತಾನು ಕಂಡಿದ್ದು ಮಾತ್ರ ಸರಿ ಎಂಬ ವಾದವು ನಿಮ್ಮವರಿಗೆ ಬೇಸರ ತರಿಸೀತು.
ಧನು ರಾಶಿ:
ನ್ಯಾಯಾಲಯದ ವಿಚಾರದಲ್ಲಿ ಲಾಭದ ಸೂಚನೆ. ದೇಹಾಯಾಸ ಕಡಿಮೆ, ಆರೋಗ್ಯ ಸ್ಥಿರ. ಅದನ್ನು ಕೆರಳಿಸಲು ಹೋಗುವುದು ಬೇಡ. ಯಾರ ಜೊತೆ ಸ್ಪರ್ಧಿಸಲೂ ನೀವು ತಯಾರಿರುವಿರಿ. ಎಲ್ಲರ ಪ್ರಶ್ನೆಗಳಿಗೂ ಉತ್ತರವನ್ನೇ ಕೊಡಬೇಕೆಂದಿಲ್ಲ. ಕಾರ್ಯವನ್ನೂ ಮಾಡಿ ತೋರಿಸಲೂಬಹುದು. ಗಂಭೀರವಾದ ಸಣ್ಣ ವಿಚಾರವೂ ಮುಂದೆ ದೊಡ್ಡದಾಗಬಹುದು. ನಿಂತಲ್ಲಿ ನಿಲ್ಲುವುದು ಕಷ್ಟವಾಗಿ ಸುಮ್ಮನೇ ಅಡ್ಡಾಡುವಿರಿ. ಸಂಗಾತಿಯ ವಿರುದ್ಧ ಸಿಟ್ಟಾಗಬಹುದು. ಮಹಿಳೆಯರಿಗೆ ನಿಮ್ಮಿಂದ ಹೆಚ್ಚಿನ ಸಹಕಾರವು ಸಿಕ್ಕಬಹುದು. ಗೃಹನಿರ್ಮಾಣ ಅಥವಾ ಮನೆ ಸುಧಾರಣೆಗೆ ಉತ್ತಮ ಸೂಚನೆ. ಶ್ರಮಕ್ಕೆ ಸ್ಪಷ್ಟ ಫಲ ದೊರೆಯುತ್ತದೆ. ಕುಟುಂಬ ಜವಾಬ್ದಾರಿಯಿಂದ ಒತ್ತಡ ಇದ್ದರೂ ನಿರ್ವಹಣೆ ಸಾಧ್ಯ. ಆಪ್ತರಿಂದ ತಾತ್ಕಾಲಿಕ ದೂರ. ಅನಪೇಕ್ಷಿತ ಮಾತುಗಳಿಂದ ನಿಮ್ಮ ಸಮಯವು ವ್ಯರ್ಥವಾಗುವುದು. ವಿವಾಹಕ್ಕೆ ಅಪರಿಚಿತರಿಂದ ತಡೆ ಬರಬಹುದು. ನಿಮ್ಮ ಕನಸುಗಳಿಗೆ ನೀರೆರೆಯುವ ಅವಶ್ಯಕತೆ ಇದೆ.
ಮಕರ ರಾಶಿ:
ಗೃಹಸಂಬಂಧಿತ ವಿಷಯಗಳಲ್ಲಿ ಗೊಂದಲ ಹೆಚ್ಚಾಗುತ್ತದೆ. ಅತಿಯಾಸೆ ಹಣವ್ಯಯಕ್ಕೆ ಕಾರಣವಾಗಬಹುದು. ದೇಹಾಯಾಸ ಮತ್ತು ನಿದ್ರಾಭಂಗದಿಂದ ಕಿರಿಕಿರಿ ಹೆಚ್ಚುತ್ತದೆ. ಅವಕಾಶಗಳನ್ನು ನೀವು ಪರೀಕ್ಷಿಸಿ ಒಪ್ಪಿಕೊಳ್ಳುವಿರಿ. ಹೊಸ ಮನೆಯ ಖರೀದಿಗೆ ಆಪ್ತರಿಂದ ಹಣವನ್ನು ಪಡೆಯಬೇಕಾಗಬಹುದು. ಹಿತಶತ್ರುಗಳು ನಿಮ್ಮ ಅವನತಿಯನ್ನು ನಿರೀಕ್ಷಿಸಬಹುದು. ಮಾತನ್ನು ಸರಿಯಾಗಿ, ಸರಿಯಾದ ಸ್ಥಳದಲ್ಲಿ ಆಡಿ. ಊಹಿಸದ ಕೆಲವು ಸಂದರ್ಭಗಳು ಇಂದು ಬರಬಹುದು. ಗಣ್ಯರ ಭೇಟಿಯನ್ನು ಮಾಡುವಿರಿ. ಉದ್ಯೋಗಕ್ಕೆ ಸಂಬಂಧಿಸಿದ ಕಾನೂನಿನ ವಿಚಾರವನ್ನು ತಿಳಿದುಕೊಳ್ಳಿ. ವಿದ್ಯಾಭ್ಯಾಸಕ್ಕಾಗಿ ಮನೆಯನ್ನು ಬಿಟ್ಟು ಇರುವುದು ಕಷ್ಟವಾಗುವುದು. ಮನೆಕೆಲಸ ಒತ್ತಡ ತರುತ್ತದೆ. ಶ್ರಮಕ್ಕೆ ತಕ್ಷಣ ಫಲ ಸಿಗದು. ನ್ಯಾಯಾಲಯದ ವಿಚಾರ ಮುಂದೂಡಿಕೆ. ಮಾನಸಿಕ ಸಮತೋಲನ ಮುಖ್ಯ. ಇಂದು ನಿಮ್ಮ ರೂಪಕ್ಕೆ ಆಕರ್ಷಣೆ ಇರಲಿದೆ. ಎಲ್ಲರೂ ಪ್ರಶಂಸಿಸಬಹುದು. ವಾಹನದಲ್ಲಿ ಓಡಾಟವನ್ನು ನೀವು ನಿಲ್ಲಿಸಬೇಕಾಗಬಹುದು.
ಕುಂಭ ರಾಶಿ:
ಶ್ರಮಕ್ಕೆ ತಕ್ಕ ಫಲ ಸಿಗುವ ಸೂಚನೆ ನಿಮ್ಮ ಮನಸ್ಸಿಗೆ ಬರುವುದು. ಗೃಹನಿರ್ಮಾಣ ನಿಧಾನವಾಗಿ ಸಾಗುತ್ತದೆ. ಮನೆ ಕೆಲಸಗಳಲ್ಲಿ ಜವಾಬ್ದಾರಿ ಹೆಚ್ಚಾಗುತ್ತದೆ. ಬಹಳ ಕೆಲಸಗಳಿದ್ದರೂ ಎಲ್ಲವನ್ನೂ ನೀವು ಮರೆತಿರುವಿರಿ. ವಿದ್ಯೆಯು ಬೇಕಾದ ಸಮಯಕ್ಕೆ ಕೆಲಸಕ್ಕೆ ಬಾರದೇಹೋಗಬಹುದು. ಸಂಗಾತಿಯನ್ನು ಕೆಲವು ವಿಷಯಕ್ಕೆ ದ್ವೇಷಿಸಬಹುದು. ಹಳೆಯ ವಿಚಾರವನ್ನು ಮತ್ತೆ ಕೆದಕುವಿರಿ. ನಿಮ್ಮ ಸ್ಥಿತಿಯನ್ನು ಕೆಲವರು ಆಡಿಕೊಂಡಾರು. ಅಮೂಲ್ಯ ವಸ್ತುವನ್ನು ಖರೀದಿಸುವುದಕ್ಕಿಂತ ಅದನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ದೇವತಾಕಾರ್ಯದಲ್ಲಿ ಆಸಕ್ತಿ ಕಡಿಮೆ ಇರುವುದು. ಆರ್ಥಿಕತೆಯ ಬಗ್ಗೆ ನಿಮ್ಮನ್ನು ಬಂಧುಗಳು ಪ್ರಶ್ನಿಸಬಹುದು. ಆಪ್ತರ ವಿಯೋಗ ಅಥವಾ ದೂರವು ಮನಸ್ಸಿಗೆ ನೋವು. ಅತಿಯಾದ ನಿರೀಕ್ಷೆ ಒತ್ತಡ ತಂದೀತು. ನ್ಯಾಯಾಲಯದ ವಿಚಾರದಲ್ಲಿ ಅನುಕೂಲಕರ ತಿರುವು ಕಾಣಿಸುವುದು. ಕುರುಡನಂತೆ ಹೋಗುವುದು ಬೇಡ. ಸ್ನೇಹಿತರ ಬೆಂಬಲವನ್ನು ನೀವು ನಿರಾಕರಿಸಬಹುದು. ತಾಯಿಯಿಂದ ನಿಮಗೆ ಏನಾದರೂ ಉಡುಗೊರೆಯಾಗಿ ಸಿಗಬಹುದು.
ಮೀನ ರಾಶಿ:
ಮಾನಸಿಕ ಒತ್ತಡ ಮತ್ತು ದೇಹಾಯಾಸ ಹೆಚ್ಚಾಗುವ ದಿನ. ಮನೆಕೆಲಸ ಜಾಸ್ತಿ ಆಗಿ ಶಕ್ತಿ ಕುಂದಬಹುದು. ಗೃಹನಿರ್ಮಾಣದಲ್ಲಿ ಅನಿರೀಕ್ಷಿತ ವಿಘ್ನಗಳು ಎದುರಾಗುತ್ತವೆ. ಮಾಧ್ಯಮದಲ್ಲಿ ಇರುವವರು ಸ್ವಲ್ಪ ಎಚ್ಚರಿಕೆಯಿಂದ ಮಾತನಾಡಬೇಕಾದೀತು. ವೇಗದ ನಿಮ್ಮ ಕೆಲಸಕ್ಕೆ ಮೆಚ್ಚುಗೆ ಸಿಗಬಹುದು. ಉದ್ಯೋಗದಲ್ಲಿ ಬರುವ ಮನಸ್ತಾಪವನ್ನು ನಿಮ್ಮೊಳಗೇ ಇಟ್ಟುಕೊಂಡು ಮುಂದುವರಿಯುವಿರಿ. ಅನಾಯಾಸವಾಗಿ ಸಿಕ್ಕ ಅವಕಾಶದಿಂದ ಗೊಂದಲ ಬರಬಹುದು. ಯಾರ ಪ್ರಭಾವವನ್ನೂ ನೀವು ಉಪಯೋಗಿಸಿಕೊಳ್ಳಲು ಇಷ್ಟಪಡುವುದಿಲ್ಲ. ಅತಿಯಾಸೆಯ ನಿರ್ಧಾರಗಳನ್ನು ತಪ್ಪಿಸಬಹುದು. ನ್ಯಾಯಾಲಯದ ವಿಚಾರದಲ್ಲಿ ಎಚ್ಚರ ಅಗತ್ಯ. ಶ್ರಮಕ್ಕೆ ಫಲ ತಡವಾಗಿ ಗೊತ್ತಾಗುತ್ತದೆ. ಆಪ್ತರಿಂದ ದೂರಾಗುವಿರಿ. ನಿಮ್ಮ ವಿರುದ್ಧದ ಮಾತುಗಳಿಗೆ ನೀವು ಸಿಟ್ಟಾಗುವಿರಿ. ನಿಮ್ಮ ಉತ್ಸಾಹದಲ್ಲಿ ಮಿತಿ ಮೀರುವುದು ಬೇಡ. ಕಳೆದುಕೊಂಡಿದ್ದನ್ನು ಪುನಃ ಪಡೆದುಕೊಳ್ಳಲು ಸಮಯ ಬೇಕಾಗುವುದು. ಆದಷ್ಟು ಬೇರೆ ಚಟುವಟಿಕೆಗಳ ಮೂಲಕ ಒತ್ತಡದಿಂದ ಹೊರಬರುವ ಪ್ರಯತ್ನಮಾಡುವಿರಿ.
ಜನವರಿ 01 2026ರ ಪಂಚಾಂಗ:
ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಶ್ರವಣ, ವಾರ : ಗುರು, ಪಕ್ಷ : ಶುಕ್ಲ, ತಿಥಿ : ದ್ವಾದಶೀ ನಿತ್ಯನಕ್ಷತ್ರ : ಕೃತ್ತಿಕಾ, ಯೋಗ : ವೈಧೃತಿ, ಕರಣ : ಬಾಲವ, ಸೂರ್ಯೋದಯ – 06 – 50 am, ಸೂರ್ಯಾಸ್ತ – 06 – 05 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 13:32 – 15:17, ಯಮಗಂಡ ಕಾಲ 06:50 – 08:15, ಗುಳಿಕ ಕಾಲ 09:39 – 11:03
ಬೆಂಗಳೂರು, ಜನವರಿ 01: ಕರ್ನಾಟಕದ ಜನರು 2025ಕ್ಕೆ ಬೈಬೈ ಹೇಳಿ ಹೊಸ ವರ್ಷ 2026ಕ್ಕೆ ಹಾಯ್ ಹಾಯ್ ಹೇಳಿದರು. ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಹೊಸ ವರ್ಷ 2026ನ್ನು ಜನರು ಅದ್ಧೂರಿಯಾಗಿ ಸ್ವಾಗತಿಸಿದರು.
ಬೆಂಗಳೂರು, ಡಿಸೆಂಬರ್ 31: ರಾಜ್ಯಾದ್ಯಂತ ಹೊಸ ವರ್ಷ 2026ರ ಸಂಭ್ರಮಾಚರಣೆ ಶುರುವಾಗಿದೆ. ಈ ಮಧ್ಯೆ ಬೆಂಗಳೂರಿನ ಚರ್ಚ್ ಸ್ಟ್ರೀಟ್ನಲ್ಲಿ ಅಹಿತಕರ ಘಟನೆಯೊಂದು ನಡೆದಿದೆ. ಕುಡಿದ ಮತ್ತಿನಲ್ಲಿ ಓರ್ವ ವ್ಯಕ್ತಿ ಮಹಿಳಾ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿರುವಂತಹ ಘಟನೆ ನಡೆದಿದೆ. ಸದ್ಯ ಆತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿಡಿಯೋ ನೋಢಿ.