ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್? ಎನ್ಐಎ ತನಿಖೆಗೆ ಆಗ್ರಹಿಸಿದ ಅಶೋಕ್ – Kannada News | Kogilu Displaced Persons Case: Is There a Pakistan Link? BJP Leader Ashok Demands NIA Probe
ಬೆಂಗಳೂರು, ಡಿಸೆಂಬರ್ 31: ಬೆಂಗಳೂರಿನ ಕೋಗಿಲು ಲೇಔಟ್ನಲ್ಲಿ ಅನಧಿಕೃತ ಶೆಡ್, ಮನೆಗಳಲ್ಲಿದ್ದವರ ಪೌರತ್ವ ಮತ್ತು ಮೂಲದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ (ಎನ್ಐಎ) ತನಿಖೆ ನಡೆಸಬೇಕೆಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಕೋಗಿಲು ಬಡಾವಣೆಗೆ ಬುಧವಾರ ಭೇಟಿ ನೀಡಿ ಮಾತನಾಡಿದ ಅಶೋಕ್, ಇಲ್ಲಿ ಮನೆಗಳ ತೆರವು ಮಾಡಿದ ಕೂಡಲೇ ಪಾಕಿಸ್ತಾನದ ಸಚಿವ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟು ಬೇಗ ಅಲ್ಲಿಗೆ ಹೇಗೆ ಮಾಹಿತಿ ಹೋಯಿತು? ಇಲ್ಲಿದ್ದ ಸ್ಲೀಪರ್ ಸೆಲ್ನಿಂದ ಹೋಗಿರಬಹುದಲ್ಲವೇ? ಈ ಅನುಮಾನದ ಬಗ್ಗೆ ಎನ್ಐಎ ತನಿಖೆಯಾಗಬೇಕು…