Category Archives: Blog

Your blog category

ಅಂತಾರಾಷ್ಟ್ರೀಯ ಜಾಲಕ್ಕೆ NCB ಶಾಕ್​​: 8 ಕೋಟಿ ಮೌಲ್ಯದ ಡ್ರಗ್ಸ್​​ ಸೀಜ್​ – Kannada News | Massive Drug Bust in Bengaluru: NCB Seizes 160kg Khat leaves, 8 Crore Value

ಜಪ್ತಿ ಮಾಡಲಾದ ಖಾಟ್​​ ಎಲೆಗಳು (ಸಾಂದರ್ಭಿಕ ಚಿತ್ರ)

ಬೆಂಗಳೂರು, ಡಿಸೆಂಬರ್​ 31: ಬೆಂಗಳೂರು ಮೂಲಕ ಕಾರ್ಯನಿರ್ವಹಿಸುತ್ತಿದ್ದ ಖಾಟ್ ಎಲೆಗಳ ಅಕ್ರಮ ಸಾಗಣೆ ಅಂತಾರಾಷ್ಟ್ರೀಯ ಜಾಲವನ್ನು ಭೇದಿಸಿರೋದಾಗಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ತಿಳಿಸಿದೆ. ಈ ಕಾರ್ಯಾಚರಣೆಯಲ್ಲಿ ಸುಮಾರು 160 ಕಿಲೋಗ್ರಾಂ ತೂಕದ ಖಾಟ್ ಎಲೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಮೌಲ್ಯವು ಸುಮಾರು 8 ಕೋಟಿ ರೂ. ಎಂದು ಅಂದಾಜಿಸಲಾಗಿದೆ. 2018ರಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಖಾಟ್ ಅನ್ನು ಮಾದಕ ವಸ್ತು ಪಟ್ಟಿಗೆ ಸೇರಿಸಿಸಲಾಗಿತ್ತು. ಆ ಬಳಿಕ ಇಷ್ಟು ದೊಡ್ಡ ಪ್ರಮಾಣದಲ್ಲಿ ಖಾಟ್​​ ಎಲೆಗಳನ್ನು ವಶಪಡಿಸಿಕೊಂಡಿರೋದು ರಾಜ್ಯದಲ್ಲಿ ಇದೇ ಮೊದಲು ಎಂದು ಎನ್​​ಸಿಬಿ ತಿಳಿಸಿದೆ.

ಈ ಅಕ್ರಮ ವಸ್ತುಗಳನ್ನು ಇಥಿಯೋಪಿಯಾದಿಂದ ಕೀನ್ಯಾ ಮೂಲಕ ಭಾರತಕ್ಕೆ ಅಂತಾರಾಷ್ಟ್ರೀಯ ಮಾರ್ಗದಲ್ಲಿ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾಗಿದ್ದು, ಸುಮಾರು 20ಕ್ಕೂ ಹೆಚ್ಚು ದೇಶಗಳಲ್ಲಿ ಈ ಜಾಲ ಸಕ್ರಿಯವಾಗಿರುವ ಮಾಹಿತಿ ದೊರೆತಿದೆ. ಈ ಜಾಲವು ಉತ್ತರ ಅಮೆರಿಕಾ, ಯುರೋಪ್, ಗಲ್ಫ್ ರಾಷ್ಟ್ರಗಳು ಮತ್ತು ಮಧ್ಯಪ್ರಾಚ್ಯಕ್ಕೆ ಸುಮಾರು 2,100 ಕಿಲೋಗ್ರಾಂ ತೂಕದ 550ಕ್ಕೂ ಹೆಚ್ಚು ಪಾರ್ಸೆಲ್‌ಗಳನ್ನು ಕಳುಹಿಸಿದೆ ಎಂದು ಎನ್‌ಸಿಬಿ ತಿಳಿಸಿದೆ.

ಇದನ್ನೂ ಓದಿ: ಡ್ರಗ್ ಫ್ಯಾಕ್ಟರಿ ಪತ್ತೆ ಮಾಡಿದ ಮಹಾ ಪೊಲೀಸ್; ಬೆಂಗಳೂರಿನ ಮೂವರು ಇನ್ಸ್​​​ಪೆಕ್ಟರ್​​​ಗಳ ತಲೆದಂಡ

ಮಾರ್ಗಮಧ್ಯದಲ್ಲಿರುವ ಪಾರ್ಸೆಲ್‌ಗಳ ಮಾಹಿತಿಯನ್ನು ಸಂಬಂಧಿತ ದೇಶಗಳ ಏಜೆನ್ಸಿಗಳಿಗೆ ನೀಡಲಾಗಿದೆ. ಭಾರತದಲ್ಲಿ ಹೆಚ್ಚು ಜನಪ್ರಿಯವಲ್ಲದ ಅಥವಾ ಕಡಿಮೆ ಬಳಕೆಯಲ್ಲಿರುವ ಮಾದಕ ವಸ್ತುವಾಗಿದ್ದರೂ ಖಾಟ್ ಎಲೆಗಳು ಮತ್ತು ಇತರೆ ಮನೋವೈಕಾರಿಕ ದ್ರವ್ಯಗಳ ಕಳ್ಳಸಾಗಣೆಗೆ ಸಂಬಂಧಿಸಿದಂತೆ ಎನ್‌ಸಿಬಿ ಕಠಿಣ ಕ್ರಮ ಕೈಗೊಂಡಿದೆ. ಅಂತಾರಾಷ್ಟ್ರೀಯ ಅಂಚೆ ಮತ್ತು ಕೋರಿಯರ್ ವ್ಯವಸ್ಥೆ ಬಳಸಿಕೊಂಡು, ಚಹಾ ಮುಂತಾದ ಸಾಮಾನ್ಯ ವಾಣಿಜ್ಯ ವಸ್ತುಗಳಂತೆ ಇವನ್ನು ಬಿಂಬಿಸಿ ಸಾಗಾಟ ಮಾಡಲಾಗುತ್ತಿತ್ತು ಎಂಬ ಬಗ್ಗೆಯೂ ತಿಳಿದುಬಂದಿದೆ. ಈ ಅಕ್ರಮ ಜಾಲದಲ್ಲಿ ಮುಖ್ಯವಾಗಿ ವಿದೇಶಿ ನಾಗರಿಕರು ಭಾಗಿಯಾಗಿದ್ದು, ಸ್ಥಳೀಯ ಸಹಕಾರಿಗಳ ಸಹಾಯದೊಂದಿಗೆ ಕಾರ್ಯನಿರ್ವಹಿಸುತ್ತಿದ್ದರು. ಹಲವರು ವಿದ್ಯಾರ್ಥಿ ಮತ್ತು ವೈದ್ಯಕೀಯ ವೀಸಾಗಳ ಹೆಸರಿನಲ್ಲಿ ಭಾರತದಲ್ಲಿ ವಾಸಿಸುತ್ತಿದ್ದರು ಎಂದು ಎನ್‌ಸಿಬಿ ಹೇಳಿರೋದಾಗಿ ಡೆಕ್ಕನ್​​ ಹೆರಾಲ್ಡ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 9:42 pm, Wed, 31 December 25

Source link

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ – Kannada News | Video of the last sunset of the year 2025 from Kanyakumari tamil Nadu

ಕನ್ಯಾಕುಮಾರಿ, ಡಿಸೆಂಬರ್ 31: ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತವನ್ನು (Sunset) ಕಣ್ತುಂಬಿಕೊಳ್ಳಲು ಜನಸಾಗರವೇ ಹರಿದುಬಂದಿತ್ತು. ಸೂರ್ಯಾಸ್ತವಾಗುತ್ತಿದ್ದಂತೆ ಕಿತ್ತಳೆ ಬಣ್ಣದ ಆಕಾಶದ ಅಡಿಯಲ್ಲಿ ಕನ್ಯಾಕುಮಾರಿಯ ಸಮುದ್ರ ತಟ ಬಹಳ ಸುಂದರವಾಗಿ ಕಾಣುತ್ತಿತ್ತು. ಸಮುದ್ರದ ದಂಡೆಯಲ್ಲಿ ನಿಂತಿದ್ದ ಜನರು ಮೊಬೈಲ್ ಫೋನ್‌ಗಳು ಮತ್ತು ಕ್ಯಾಮೆರಾಗಳಲ್ಲಿ 2025ರ ಕೊನೆಯ ಸೂರ್ಯಾಸ್ತದ ಕ್ಷಣವನ್ನು ಸೆರೆಹಿಡಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ – Kannada News | Sudeep talks about why he is watching Mark movie with fans

ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿದೆ. ಸಿನಿಮಾದ ಬಗ್ಗೆ ಒಳ್ಳೆಯ ಪ್ರತಿಕ್ರಿಯೆ ಕಾಣುತ್ತಿದೆ. ಇದೀಗ ಸುದೀಪ್ ಅವರು ರಾಜ್ಯದ ಕೆಲವು ಪ್ರಮುಖ ನಗರಗಳಿಗೆ ತೆರಳಿ ಅಭಿಮಾನಿಗಳ ಜೊತೆಗೆ ‘ಮಾರ್ಕ್’ ಸಿನಿಮಾ ವೀಕ್ಷಿಸುತ್ತಿದ್ದಾರೆ. ಮೈಸೂರು, ಬೆಂಗಳೂರು ಸೇರಿದಂತೆ ಇನ್ನೂ ಕೆಲವೆಡೆ ಸುದೀಪ್ ಓಡಾಡುತ್ತಿದ್ದಾರೆ. ಅಭಿಮಾನಿಗಳೊಟ್ಟಿಗೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು ಎಂಬುದನ್ನು ಸುದೀಪ್ ಅವರೇ ವಿವರಿಸಿದ್ದಾರೆ. ಅಭಿಮಾನಿಗಳೊಟ್ಟಿಗೆ ಸಿನಿಮಾ ನೋಡುವಾಗ ಸಿನಿಮಾ ಮಾಡುವಾಗ ನಾವು ಮಾಡಿದ ತಪ್ಪು, ಸರಿಗಳು ಏನು ಎಂಬುದು ಅರ್ಥವಾಗುತ್ತದೆ, ಅಲ್ಲದೆ ನಮ್ಮ ಸಿನಿಮಾ ನಾವೇ ನೋಡುವ ಅನುಭವವೇ ವಿಶೇಷವಾದುದು’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನಲ್ಲಿ ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​​ – Kannada News | Bengaluru: Rain Arrives Ahead of New Year Celebrations, Heavy Showers Lash Yelahanka

ಬೆಂಗಳೂರು, ಡಿಸೆಂಬರ್​ 31: 2026ರ ಆಗಮನಕ್ಕೆ ಕ್ಷಣಗಣನೆ ಶುರುವಾಗಿದ್ದು, ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರಾಗಿದೆ. ಆದರೆ ಇತ್ತ ಸಿಲಿಕಾನ್​ ಸಿಟಿಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಮಳೆರಾಯನ ಅಡ್ಡಿ ಉಂಟಾಗಿದೆ. ನಗರದ ಯಲಹಂಕ ಸುತ್ತಮುತ್ತ ಅರ್ಧ ಗಂಟೆಯಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಹೀಗಾಗಿ ಪಾರ್ಟಿ ಮೂಡಲ್ಲಿದ್ದವರು ವರುಣರಾಯನಿಗೆ ಹಿಡಿಶಾಪ ಹಾಕಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಹೋಗುವವರಿಗೆ ಗುಡ್​​​ ನ್ಯೂಸ್​​ ನೀಡಿದ ಕೇಂದ್ರ, ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರಕ್ಕೆ ಸಿದ್ಧತೆ – Kannada News | Vande Bharat Express Soon for Bengaluru Mangaluru: Big Travel News

ಮಂಗಳೂರು, ಡಿ.31: ಮಂಗಳೂರು ಜನರಿಗೆ ಬಿಗ್​​ ಗುಡ್​​​ನ್ಯೂಸ್​​ ನೀಡಿದ ಕೇಂದ್ರ ಸರ್ಕಾರ, ಇನ್ಮುಂದೆ ರೈಲು ಪ್ರಯಾಣಿಕರ ವೇಗವನ್ನು ಹೆಚ್ಚಿಸಲಿದೆ. ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ಸಂಪರ್ಕಿಸಲಿದೆ ಎಂದು ಹಿಂದೂಸ್ಥಾನ್​​​​​​​​​​​ ಟೈಮ್ಸ್​​​ ವರದಿ ಮಾಡಿದೆ. ಈ ಮೂಲಕ ಕರಾವಳಿಗೆ ಹೋಗುವ ಬೆಂಗಳೂರಿನ ಪ್ರಯಾಣಿಕರು ಶೀಘ್ರದಲ್ಲೇ ವೇಗವಾದ ಮತ್ತು ಹೆಚ್ಚು ಆರಾಮದಾಯಕ ರೈಲು ಪ್ರಯಾಣವನ್ನು ಆನಂದಿಸಬಹುದು. ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಬಹುನಿರೀಕ್ಷಿತ ಸೆಮಿ-ಹೈಸ್ಪೀಡ್ ರೈಲು ಸೇವೆ ಕೊನೆಗೂ ಹಳಿಗೆ ಬರಲಿದೆ ಎಂಬ ಸುಳಿವು ನೀಡಿದ್ದಾರೆ. ಇದೀಗ ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುವ ಜನರಿಗೆ ಇದು ಆಶಾಭಾವನೆಯನ್ನು ಮೂಡಿಸಿದೆ. ವಂದೇ ಭಾರತ್ ಸೇವೆಯನ್ನು ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಯೋಜಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯ ಕ್ಷೇತ್ರಗಳಿಗೆ ಹೋಗುವವರಿಗೆ ಇದು ಸಹಾಯವಾಗಲಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲೂ ಸಚಿವ ವಿ. ಸೋಮಣ್ಣ ಹಂಚಿಕೊಂಡಿದ್ದಾರೆ. ಈಗಾಗಲೇ ಮಂಗಳೂರು – ಬೆಂಗಳೂರು ವಂದೇ ಭಾರತ್ ಸೇವೆ ಅಂತಿಮವಾಗಿದೆ. ಕರ್ನಾಟಕದ ರಮಣೀಯ ಪಶ್ಚಿಮ ಘಟ್ಟಗಳ ಮೂಲಕ ಐಕಾನಿಕ್ ವಂದೇ ಭಾರತ್ ರೈಲುಗಳು ಶೀಘ್ರದಲ್ಲೇ ಓಡುವುದನ್ನು ಕಾಣಬಹುದು. ಮಂಗಳೂರು ಪ್ರದೇಶದ ಜನರ ಬಹುದಿನಗಳ ಬೇಡಿಕೆಯಾಗಿರುವ ವಂದೇ ಭಾರತ್ ರೈಲು ಓಡಾಟ ಆರಂಭಿಸುವ ಸಮಯ ಹತ್ತಿರವಾಗಿದೆ ಎಂದು ಬರೆದುಕೊಂಡಿದ್ದಾರೆ. ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆಯ ನಡುವಿನ 55 ಕಿಮೀ ಘಾಟ್ ವಿಭಾಗದಲ್ಲಿ ವಿದ್ಯುದೀಕರಣ ಕಾರ್ಯವನ್ನು ಪೂರ್ಣಗೊಳಿಸುವ ಮೂಲಕ ಹೊಸ ಸೇವೆಗೆ ದಾರಿ ಮಾಡಿಕೊಡಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಮಡಗಾಂವ್‌ ನಡುವೆ ವಂದೇ ಭಾರತ್​​ ರೈಲು ಆರಂಭಕ್ಕೆ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಮನವಿ

ಇದು ಮುಖ್ಯ ಮೂಲಸೌಕರ್ಯ ಮೈಲಿಗಲ್ಲು ಎಂದು ಹೇಳಿದ್ದಾರೆ. ಈ ರೈಲು ಮಾರ್ಗದಲ್ಲಿ ಸಂಪೂರ್ಣ ವಿದ್ಯುದ್ದೀಕರಣವಾಗಲಿದೆ. ಈ ರೈಲು ಕಾರ್ಯಾಚರಣೆ ಸ್ವಚ್ಛ, ತ್ವರಿತ ಮತ್ತು ಹೆಚ್ಚು ಇಂಧನ ಉಳಿತವನ್ನು ಮಾಡಲಿದೆ ಎಂದು ಹೇಳಿದ್ದಾರೆ. ಈ ಮೂಲಕ ಬೆಂಗಳೂರು ಮತ್ತು ಕರಾವಳಿ ಕರ್ನಾಟಕದ ನಡುವಿನ ರೈಲು ಜಾಲವನ್ನು ಬಲಪಡಿಸುತ್ತದೆ. ಇನ್ನು ಬೆಂಗಳೂರು ಮತ್ತು ಮಂಗಳೂರು ನಡುವೆ ವಂದೇ ಭಾರತ್ ರೈಲಿನ ದೀರ್ಘಕಾಲದ ಬೇಡಿಕೆಯ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ಇನ್ಫೋಸಿಸ್‌ನ ಮಾಜಿ ಸಿಎಫ್‌ಒ ಮೋಹನದಾಸ್ ಪೈ ಅವರ ಹಂಚಿಕೊಂಡಿದ್ದ ಪೋಸ್ಟ್​​​ಗೆ ಸಚಿವ ವಿ. ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗ್ರಹಚಾರ ಎಂದರೆ ಇದೇ ನೋಡಿ; ಸೋಫಾದಿಂದ ಏಳುವಾಗ ಆಕಸ್ಮಿಕವಾಗಿ ಗುಂಡು ಹಾರಿ ಎನ್​ಆರ್​ಐ ಸಾವು – Kannada News | NRI dies in Punjab as gun goes off while getting up from sofa cctv video viral

ಫಿರೋಜ್‌ಪುರ, ಡಿಸೆಂಬರ್ 31: ಪಂಜಾಬ್‌ನ ಫಿರೋಜ್‌ಪುರದಲ್ಲಿ ಸೋಫಾದಿಂದ ಎದ್ದೇಳುವಾಗ ಸೊಂಟದಲ್ಲಿ ತುಂಬಿದ್ದ ಲೋಡ್ ಮಾಡಿದ ಪಿಸ್ತೂಲ್​ನಿಂದ ಗುಂಡು ಹಾರಿ ಅನಿವಾಸಿ ಭಾರತೀಯ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಹರ್ಪಿಂದರ್ ಸಿಂಗ್ ಎಂಬ ವ್ಯಕ್ತಿ ಧನಿ ಸುಚಾ ಸಿಂಗ್ ಗ್ರಾಮದಲ್ಲಿ ಇತ್ತೀಚೆಗೆ ನೆಲೆಸಿದ್ದ ಅನಿವಾಸಿ ಭಾರತೀಯ. ಸೋಮವಾರ ಈ ಘಟನೆ ನಡೆದಿದೆ. ಮನೆಯೊಳಗೆ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಈ ಘಟನೆ ಸೆರೆಯಾಗಿದೆ.

ಹರ್ಪಿಂದರ್ ಸಿಂಗ್ ಅವರು ತಮ್ಮ ಸಂಬಂಧಿಕರೊಂದಿಗೆ ಸೋಫಾದಲ್ಲಿ ಕುಳಿತಿದ್ದವರು ಎದ್ದು ನಿಂತಿದ್ದಾರೆ. ಆಗ ಆಕಸ್ಮಿಕವಾಗಿ ಪಿಸ್ತೂಲ್ ಸಿಡಿದು, ಗುಂಡು ಅವರ ಕಿಬ್ಬೊಟ್ಟೆಗೆ ತಗುಲಿತು ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡೇಟಿನ ಶಬ್ದ ಕೇಳಿದ ನಂತರ ಅವರ ಕುಟುಂಬದ ಸದಸ್ಯರು ಹರ್ಪಿಂದರ್ ಅವರನ್ನು ಕರೆದುಕೊಂಡು ಹೊರಗೆ ಓಡುವುದನ್ನು ಸಿಸಿಟಿವಿ ವಿಡಿಯೋದಲ್ಲಿ ನೋಡಬಹುದು. ತಕ್ಷಣ, ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಅವರನ್ನು ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಹೇಳಿದರು. ಆದರೆ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದರು.

ಇದನ್ನೂ ಓದಿ: ನೆಲಮಂಗಲ: ಎಣ್ಣೆ ನಶೆಯಲ್ಲಿ ತಮಾಷೆ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಯುವಕ

ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಹರ್ಪಿಂದರ್ ಇತ್ತೀಚೆಗೆ ವಿದೇಶದಿಂದ ಹಿಂದಿರುಗಿ ವಿವಾಹವಾಗಿದ್ದರು. ಅವರಿಗೆ 2 ವರ್ಷದ ಹೆಣ್ಣು ಮಗುವಿದೆ. ಅವರ ಅಂತ್ಯಕ್ರಿಯೆಯನ್ನು ಇಂದು ಅವರ ಗ್ರಾಮದ ಅನೇಕ ಜನರ ಸಮ್ಮುಖದಲ್ಲಿ ನಡೆಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್ – Kannada News | Sudeep talks about his daughter Instagram post

ಮಾರ್ಕ್’ (Mark) ಸಿನಿಮಾದ ಪೈರಸಿ ವಿಚಾರಕ್ಕೆ ಕಿಚ್ಚ ಸುದೀಪ್ ಆಡಿದ ಮಾತು ಆ ನಂತರ ಹಲವು ಕವಲುಗಳಾಗಿ ಒಡೆದು ಏನೇನೋ ಆಗಿದೆ. ಸುದೀಪ್ ಅವರನ್ನು ಟಾರ್ಗೆಟ್ ಮಾಡಿರುವ ದರ್ಶನ್ ಅಭಿಮಾನಿಗಳು, ಅವರ ಪುತ್ರಿಯ ಬಗ್ಗೆಯೂ ಕೆಟ್ಟ ಕಮೆಂಟ್​​ಗಳನ್ನು ಮಾಡಿದ್ದಾರೆ. ಇದನ್ನು ಸುದೀಪ್ ಈಗಾಗಲೇ ಖಂಡಿಸಿದ್ದಾರೆ. ಅಲ್ಲದೆ, ಸುದೀಪ್ ಅವರ ಪುತ್ರಿ ಸಾನ್ವಿ ಸುದೀಪ್ ಸಹ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಇಂದು ಮಾಧ್ಯಮಗಳೊಟ್ಟಿಗೆ ಮಾತನಾಡಿದ ಸುದೀಪ್ ಅವರು, ಸಾನ್ವಿ ಸುದೀಪ್ ಹಂಚಿಕೊಂಡಿರುವ ಪೋಸ್ಟ್ ಬಗ್ಗೆ ಮಾತನಾಡುತ್ತಾ, ‘ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕೃಷ್ಣನೂರಿನಲ್ಲಿ ಸನ್ನಿ ಲಿಯೋನಿ ಶೋಗೆ ವಿರೋಧ: ಕಾರ್ಯಕ್ರಮ ರದ್ದು – Kannada News | Sunny Leone’s new year program canceled at Mathura for religious reasons

ಸನ್ನಿ ಲಿಯೋನಿ  (Sunny Leone), ನೀಲಿ ಚಿತ್ರಗಳ ಲೋಕಕ್ಕೆ ವಿದಾಯ ಹೇಳಿ ವರ್ಷಗಳೇ ಆಗಿದೆ. ಅವರು ಈಗ ಚಿತ್ರರಂಗದಲ್ಲಿ ಸೆಟಲ್ ಆಗಿದ್ದಾರೆ ಆದರೂ ಸಹ ಆಗಾಗ್ಗೆ ಅವರ ಇತಿಹಾಸದ ಕಾರಣಕ್ಕೆ ಆಗಾಗ್ಗೆ ಮುಜುಗರಕ್ಕೆ, ನಿಂದನೆಗೆ ಒಳಗಾಗುತ್ತಲೇ ಇರುತ್ತಾರೆ. ಸನ್ನಿ ಲಿಯೋನಿ, ನೀಲಿ ಚಿತ್ರಜಗತ್ತಿನೊಂದಿಗೆ ಸಂಪರ್ಕ ಕಡಿದುಕೊಂಡಿದ್ದರೂ, ಈಗಲೂ ಸಹ ಅವರನ್ನು ಗ್ಲಾಮರ್ ಕ್ವೀನ್ ಆಗಿ, ಪಾರ್ಟಿ ಗರ್ಲ್ ಆಗಿಯೇ ನೋಡಲಾಗುತ್ತದೆ. ಇದೇ ಕಾರಣಕ್ಕೆ ಹಲವು ಪಾರ್ಟಿಗಳಿಗೆ ವಿಶೇಷ ಅತಿಥಿಯಾಗಿ, ವಿಶೇಷ ಗ್ಲಾಮರಸ್ ಲೈವ್ ಶೋಗೆ ಆಹ್ವಾನಿಸಲಾಗುತ್ತದೆ. ಇಂಥಹುದೇ ಒಂದು ಶೋ ಇತ್ತೀಚೆಗೆ ರದ್ದಾಗಿದೆ.

ಹೊಸ ವರ್ಷಾಚರಣೆಗೆಂದು ಸನ್ನಿ ಲಿಯೋನಿ ಅವರ ಲೈವ್ ಶೋ ಅನ್ನು ಕೃಷ್ಣನ ಜನ್ಮಭೂಮಿ ಎಂದು ಖ್ಯಾತವಾಗಿರುವ ಮಥುರಾನಲ್ಲಿ ಆಯೋಜನೆ ಮಾಡಲಾಗಿತ್ತು. ಮಥುರಾದ ಐಶಾರಾಮಿ ಖಾಸಗಿ ಹೋಟೆಲ್ ಒಂದು ಹೊಸ ವರ್ಷಾಚರಣೆಗೆಂದು ಡಿಜಿ ಪಾರ್ಟಿ ಆಯೋಜಿಸಿತ್ತು, ಕಾರ್ಯಕ್ರಮದಲ್ಲಿ ಸನ್ನಿ ಲಿಯೋನಿ ವಿಶೇಷ ಅತಿಥಿ ಆಗಿದ್ದರು. ಗ್ಲಾಮರಸ್ ನೃತ್ಯ ಪ್ರದರ್ಶನವನ್ನೂ ಸಹ ಅವರು ಅಲ್ಲಿ ನೀಡಲಿದ್ದರು. ಹೋಟೆಲ್​​ನವರು ಮುಂಚಿತವಾಗಿಯೇ ಸ್ಥಳೀಯ ಆಡಳಿತ ಮತ್ತು ಪೊಲೀಸರಿಂದ ಅನುಮತಿಯನ್ನು ಸಹ ಪಡೆಯಲಾಗಿತ್ತು. ಆದರೆ ಕೆಲ ಸಂಪ್ರದಾಯವಾದಿಗಳು ಮತ್ತು ಧಾರ್ಮಿಕ ಮುಖಂಡರ ಆಕ್ಷೇಪಣೆಗೆ ಮೇರೆಗೆ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ.

ಇದನ್ನೂ ಓದಿ:ಕೊಲ್ಕತ್ತನಲ್ಲಿ ಮಿಂಚು ಹರಿಸಿದ ಸನ್ನಿ ಲಿಯೋನಿ: ವಿಡಿಯೋ ನೋಡಿ

ಸನ್ನಿ ಲಿಯೋನಿ ಅವರು ಕಾರ್ಯಕ್ರಮಕ್ಕೆ ಬರಲಿದ್ದಾರೆ ಎಂದು ಹೋಟೆಲ್​​ನವರು ಘೋಷಣೆ ಆದ ಬೆನ್ನಲ್ಲೆ ಹಿಂದೂಪರ ಸಂಘಟನೆಗಳವರು ಪ್ರತಿಭಟನೆ ಆರಂಭಿಸಿದ್ದರು. ಸ್ಥಳೀಯ ಧಾರ್ಮಿಕ ಮುಖಂಡರು, ಮಠದ ಗುರುಗಳು ಸಹ ಕಾರ್ಯಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಹೋಟೆಲ್​​ಗೆ ಮುತ್ತಿಗೆ ಹಾಕುವುದಾಗಿಯೂ ಸಹ ಕೆಲ ಧಾರ್ಮಿಕ ಸಂಘಟನೆ ಸದಸ್ಯರು ಎಚ್ಚರಿಕೆ ನೀಡಿದ್ದರು. ಇದೆಲ್ಲದರ ಬೆನ್ನಲ್ಲೆ ಇದೀಗ ಹೋಟೆಲ್​​ನವರೇ ಕಾರ್ಯಕ್ರಮವನ್ನು ರದ್ದು ಮಾಡಿದ್ದಾರೆ.

‘ಸನ್ನಿ ಲಿಯೋನಿ ಭಾರತದ ಜನಪ್ರಿಯ ನಟಿಯರಲ್ಲಿ ಒಬ್ಬರು, ಅವರು ನಮ್ಮ ಹೋಟೆಲ್ ಕಾರ್ಯಕ್ರಮಕ್ಕೆ ಬರುವುದು ವಿಶೇಷವಾಗಿತ್ತು. ಅದಕ್ಕೆ ಬೇಕಾದ ಎಲ್ಲ ಅನುಮತಿಗಳನ್ನೂ ಸಹ ನಾವು ತೆಗೆದುಕೊಂಡಿದ್ದೆವು. ಕಾರ್ಯಕ್ರಮವನ್ನು ನಾವು ಕಾನೂನು ನಿಯಮದ ಅಡಿಯಲ್ಲಿಯೇ ನಡೆಸಲಿದ್ದೆವು ಆದರೆ ಇದೀಗ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ. ಸಾಮಾಜಿಕ ಮತ್ತು ಧಾರ್ಮಿಕ ಭಾವನೆಗಳನ್ನು ಗೌರವಿಸುತ್ತಾ ಈ ನಿರ್ಣಯವನ್ನು ತೆಗೆದುಕೊಂಡಿದ್ದೇವೆ’ ಎಂದಿದೆ ಹೋಟೆಲ್ ಆಡಳಿತ ಮಂಡಳಿ.

ಸನ್ನಿ ಲಿಯೋನಿಗೆ ಇದು ಮೊದಲೇನೂ ಅಲ್ಲ. ಈ ಹಿಂದೆಯೂ ಸಹ ಅವರ ಕೆಲವು ಕಾರ್ಯಕ್ರಮಗಳು ಪ್ರತಿಭಟನೆ ಇನ್ನಿತರೆ ಕಾರಣಗಳಿಗೆ ರದ್ದಾಗಿದ್ದು ಇದೆ. ಇದೀಗ ಮತ್ತೊಮ್ಮೆ ಸನ್ನಿ ಲಿಯೋನಿಯ ಕಾರ್ಯಕ್ರಮ ಧಾರ್ಮಿಕ ಮುಖಂಡರ ಒತ್ತಾಯದ ಕಾರಣಕ್ಕೆ ರದ್ದಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕೋವಿಡ್ ಹಗರಣ: ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಿದ ನ್ಯಾ. ಮೈಕೆಲ್ ಡಿ ಕುನ್ಹಾ – Kannada News | Karnataka COVID scam: Justice D’Cunha submits final report to the government

ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು, ಡಿಸೆಂಬರ್​ 31: ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಕೋವಿಡ್ ಅವಧಿಯಲ್ಲಿ ನಡೆಸಿದೆ ಎನ್ನಲಾದ ಅವ್ಯವಹಾರದ ತನಿಖೆಯ ಅಂತಿಮ ವರದಿಯನ್ನು ನಿವೃತ್ತ ನ್ಯಾಯಮೂರ್ತಿಗಳಾದ ಮೈಕೆಲ್ ಡಿ ಕುನ್ಹಾ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್​​ಗೆ ರಿಪೋರ್ಟ್​​ ಹಸ್ತಾಂತರಿಸಿದ್ದಾರೆ.

ಸಿಎಂ ಕಚೇರಿ ಮಾಹಿತಿ

ಕೊರೊನಾ ಸೋಂಕು ಅಬ್ಬರದ ವೇಳೆ, ಔಷಧ ಮತ್ತು ಉಪಕರಣಗಳ ಖರೀದಿಯಲ್ಲಿನ ಭ್ರಷ್ಟಾಚಾರ ಆರೋಪದ ಕುರಿತು ತನಿಖೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​​ ಸರ್ಕಾರ ಆಗಸ್ಟ್ 25, 2023ರಲ್ಲಿ ಆದೇಶಿಸಿತ್ತು. ಹೈಕೋರ್ಟ್​​ ನಿವೃತ್ತ ನ್ಯಾಯಮೂರ್ತಿ ಜಾನ್​ ಮೈಕಲ್​ ಕುನ್ಹಾ ನೇತೃತ್ವದ ತನಿಖಾ ಆಯೋಗಕ್ಕೆ ಇದರ ಹೊಣೆ ನೀಡಲಾಗಿತ್ತು. ಬಳಿಕ ಈ ಬಗ್ಗೆ ತನಿಖೆ ನಡೆಸಿದ್ದ ಆಯೋಗ 2024ರ ಆಗಸ್ಟ್​​ ವೇಳೆಗೆ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಕೆ ಮಾಡಿತ್ತು. ಈಗ ತನಿಖೆಯ ಅಂತಿಮ ವರದಿ ಸಲ್ಲಿಸಿದೆ. ಈ ಬಗ್ಗೆ ಸಿಎಂ ಕಚೇರಿಯೇ ಮಾಹಿತಿ ನೀಡಿದೆ.

ಇದನ್ನೂ ಓದಿ: ಬಿಜೆಪಿ ಅವಧಿಯ ಕೋವಿಡ್ ಹಗರಣದ ವಿಸ್ತೃತ ಮಾಹಿತಿಗೆ ರಚನೆಯಾಗಲಿದೆ ಮತ್ತೊಂದು‌ ಸಮಿತಿ; ಅಧಿಕಾರಿಗಳಗೆ ಢವಢವ

ಅಂದಿನ ಸರ್ಕಾರ ಚೀನಾ ಕಂಪನಿಗಳಿಂದ ಪಿಪಿಇ ಕಿಟ್ ಖರೀದಿ ಮಾಡಿದ್ದು, ಕಿಟ್ ಖರೀದಿ ವೇಳೆ ದರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದಿದೆ. ದರ ವ್ಯತ್ಯಾಸದಿಂದ ಪಿಪಿಇ ಕಿಟ್ ಪೂರೈಕೆದಾರರಿಗೆ 14.21 ಕೋಟಿ ರೂ. ಲಾಭವಾಗಿದೆ. ಪೂರೈಕೆದಾರರಿಗೆ ಲಾಭ ಮಾಡಿಕೊಡುವ ದುರುದ್ದೇಶದಿಂದ ಅಕ್ರಮ ಎಸಗಲಾಗಿದೆ. ಒಟ್ಟು 769 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಹೇಳಲಾಗಿತ್ತು. ಪಿಪಿಇ ಕಿಟ್​ ಹಾಗೂ ಇತರೆ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ನಡೆದಿರುವುದು ದೃಢಪಟ್ಟಿದೆ ಎಂದು ತಿಳಿಸಿದ್ದ ನ್ಯಾಯಮೂರ್ತಿ ಜಾನ್​ ಮೂಕಲ್​ ಡಿ.ಮೈಕಲ್​ ಕುನ್ಹಾ ಆಯೋಗ, ಈ ಸಂಬಂಧ ಅಂದಿನ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಬಿ. ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್​ಗೆ ಶಿಫಾರಸು ಕೂಡ ಮಾಡಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Video: ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು – Kannada News | Sakleshpur Miracle: Lost Child Found on Bus, Reunited with Mother by Police

ಹಾಸನ, ಡಿ.31 : ಪೋಷಕರಿಂದ ದೂರವಾಗಿದ್ದ ಮಗುವನ್ನು ತಾಯಿ ಮಡಿಲಿಗೆ ಸೇರಿಸಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಬಾಗೆ ಗ್ರಾಮದಲ್ಲಿ ನಡೆದಿದೆ. ಬಾಲಕಿ ನಿನ್ನೆ ರಾತ್ರಿ ತಾಯಿಯಿಂದ ತಪ್ಪಿಸಿಕೊಂಡಿದ್ದಾಳೆ. ತಾಯಿ, ಮಗು ಸೇರಿ ಆರು ಜನರ ತಂಡ ಧರ್ಮಸ್ಥಳದಿಂದ ಕೋಲಾರಕ್ಕೆ ತೆರಳುತ್ತಿದ್ದ ವೇಳೆ ಬಾಗೆ ಗ್ರಾಮದ ಬಳಿ ಸಾರಿಗೆ ಬಸ್ ಕೆಟ್ಟು ನಿಂತಿದೆ. ಈ ವೇಳೆ ಪ್ರಯಾಣಿಕರನ್ನು ಕಂಡಕ್ಟರ್ ಮತ್ತೊಂದು ಬಸ್ಸಿನಲ್ಲಿ ಕಳುಹಿಸಿದ್ದಾನೆ. ಆದರೆ ಬಾಲಕಿ ಗೊಂದಲದಿಂದ ಕೆಟ್ಟು ನಿಂತಿದ್ದ ಬಸ್ಸಿನಲ್ಲೇ ಕುಳಿತಿದ್ದಾಳೆ. ಮತ್ತೊಂದು ಕಡೆ ಬಾಲಕಿಯ ತಾಯಿ ಮಗಳು ಬಸ್ ಹತ್ತಿದ್ದಾಳೋ ಇಲ್ಲವೋ ಎಂಬುದನ್ನು ಗಮನಿಸದೆ ಸ್ನೇಹಿತೆಯರ ಜೊತೆ ತೆರಳಿದ್ದಾಳೆ. ರಿಪೇರಿಯಾದ ನಂತರ ಬೆಂಗಳೂರು ಕಡೆಗೆ ಹೊರಟಿದ್ದ ಬಸ್​ನಲ್ಲಿ ಬಾಲಕಿಯನ್ನು ಕಂಡು ಬಸ್​​ ನಿರ್ವಾಹಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಬಾಲಕಿ ತಾಯಿಗೆ ಕರೆ ಮಾಡಿದ್ದಾರೆ. ಅಷ್ಟರಲ್ಲಿ ಹಾಸನ ಸಮೀಪ ಬಂದಿದ್ದ ತಾಯಿ, ವಾಪಾಸ್ ಬಂದು ಮಗಳನ್ನು ಕರೆದುಕೊಂಡು ಹೋಗಿದ್ದಾಳೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link