Headlines

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ವಿಶ್ವಾಸ ಕಳೆದುಕೊಳ್ಳಬೇಕಾಗುವುದು

ಮೇಷ ರಾಶಿ: ಕೃಷಿ ಚಟುವಟಿಕೆಯಲ್ಲಿ ನಿಮ್ಮದೇ ಆದ ಹೆಜ್ಜೆಗಳನ್ನು ಇಡುವಿರಿ‌. ನೀವು ಆಸ್ತಿಗೆ ಸಂಬಂಧಿಸಿದ ವಿವಾದವು ಇನ್ನೊಂದು ತಿರುವನ್ನು ಪಡೆಯಬಹುದು. ನಿಮ್ಮ ಸಂಗಾತಿಯ ಬೆಂಬಲವು ಖುಷಿ ಕೊಡುವುದು. ಯಾವುದೋ ಅಗಾಧ ಯೋಚನೆಯಲ್ಲಿ ನೀವು ಇರುವಿರಿ. ವ್ಯಾಪಾರದಲ್ಲಿ ನಷ್ಟ ಸಂಭವಿಸಬಹುದು. ಪಾಲುದಾರಿಕೆಗಾಗಿ ಇಂದು ದೂರ ಪ್ರಯಾಣ ಮಾಡಬೇಕಾಗುವುದು. ಉತ್ಸಾಹದಿಂದ ಎಲ್ಲರನ್ನೂ ಜೋಡಿಸಿಕೊಂಡು ಕೆಲಸವನ್ನು ಮುಗಿಸುವಿರಿ. ವೃಷಭ ರಾಶಿ: ವಿದ್ಯಾಭ್ಯಾಸದಲ್ಲಿ ಶ್ರಮದ ಅಗತ್ಯ ಬಹಳ ಕಾಣಿಸುವುದು. ಎಂತಹ ಸವಾಲನ್ನೂ ನೀವು ಎದುರಿಸುವ ಹುಂಬುತನದಲ್ಲಿ ಏನನ್ನಾದರೂ ಮಾಡಿಕೊಳ್ಳುಬಿರಿ. ಧೈರ್ಯದಿಂದ ಏನನ್ನೂ ಎದುರಿಸುವ…

Read More

KKR vs LSG: ಯುವ ಬ್ಯಾಟರ್ ಮುಕುಲ್ ಚೌಧರಿ ಎದುರು ಸೋತ ಕೆಕೆಆರ್

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್ 2026 ರ 15ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್​ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಲೀಗ್​ನಲ್ಲಿ ಮೊದಲ ಗೆಲುವಿಗಾಗಿ ಹುಡುಕಾಟ ನಡೆಸುತ್ತಿರುವ ಕೆಕೆಆರ್ ತಂಡ ತವರಿನಲ್ಲಿ ನಡೆದ ಸತತ ಎರಡನೇ ಪಂದ್ಯದಲ್ಲೂ ಸೋಲು ಕಂಡಿತು. ಈ ಮೂಲಕ ಲೀಗ್​ನಲ್ಲಿ ಕೆಕೆಆರ್​ಗೆ ಸತತ 4ನೇ ಸೋಲು ಎದುರಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 181 ರನ್ ಗಳಿಸಿ…

Read More

ಲೆಬನಾನ್‌ನೊಂದಿಗೆ ಶೀಘ್ರದಲ್ಲೇ ಇಸ್ರೇಲ್ ನೇರ ಮಾತುಕತೆ; ನೆತನ್ಯಾಹು ಘೋಷಣೆ

ಟೆಲ್ ಅವಿವ್, ಏಪ್ರಿಲ್ 9: ಹಿಜ್ಬೊಲ್ಲಾವನ್ನು ನಿಶ್ಯಸ್ತ್ರಗೊಳಿಸಲು ಮತ್ತು ಎರಡೂ ದೇಶಗಳ ನಡುವೆ ಶಾಂತಿ ಸಂಬಂಧಗಳನ್ನು ಸ್ಥಾಪಿಸಲು ಸಾಧ್ಯವಾದಷ್ಟು ಬೇಗ ಲೆಬನಾನ್‌ನೊಂದಿಗೆ ನೇರ ಮಾತುಕತೆಗಳನ್ನು ಪ್ರಾರಂಭಿಸಲು ನಮ್ಮ ಸಂಪುಟಕ್ಕೆ ಸೂಚನೆ ನೀಡಿದ್ದೇನೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಹೇಳಿದ್ದಾರೆ. ಬೈರುತ್, ಬೆಕಾ ಕಣಿವೆ ಮತ್ತು ಲೆಬನಾನ್​ನ ದಕ್ಷಿಣ ಭಾಗದಾದ್ಯಂತ ಇಸ್ರೇಲ್ ಮಾರಕ ದಾಳಿಗಳನ್ನು ನಡೆಸಿದ ಒಂದು ದಿನದ ನಂತರ ಅವರ ಈ ಹೇಳಿಕೆ ಬಂದಿದೆ. ಈ ದಾಳಿಯಲ್ಲಿ 200ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು….

Read More

ತಾಯಿ ನಿಧನದ ದುಃಖದಲ್ಲೇ ಪರೀಕ್ಷೆ ಬರೆದು ಈಗ ಕರ್ನಾಟಕಕ್ಕೆ ಟಾಪರ್:ನೋವಲ್ಲೂ ಸಾಧಿಸಿದ ದಿಶಾ

ಮಂಗಳೂರು, (ಏಪ್ರಿಲ್ 09): ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 1 ಫಲಿತಾಂಶ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಆಳ್ವಾಸ್‌ ಕಾಲೇಜಿನ ದಿಶಾ, ವಾಣಿಜ್ಯ ವಿಭಾಗದಲ್ಲಿ (ಕಾಮರ್ಸ್) 600ಕ್ಕೆ 600 ಅಂಕ ಗಳಿಸಿ ದಕ್ಷಿಣ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದಿದ್ದಾರೆ. ಪರೀಕ್ಷೆ ನಡೆಯುತ್ತಿದ್ದಾಗಲೇ ತಾಯಿಯನ್ನು ಕಳೆದುಕೊಂಡು ಮನಸ್ಸಿನಲ್ಲಿ ದುಃಖ, ಕಣ್ಣಲ್ಲಿ ನೀರು ತುಂಬಿಕೊಂಡು ಧೃತಿಗೆಡದೇ ಪರೀಕ್ಷೆ ಬರೆದು ಈಗ ಕರ್ನಾಟಕದ ಟಾಪರ್ ಆಗಿ ಹೊರಹೊಮ್ಮಿದ್ದಾಳೆ. ಈ ಮೂಲಕ ಮಾದರಿಯಾಗಿದ್ದಾಳೆ. ಇನ್ನು ದಿಶಾ ಸಾಧನೆಗೆ ಕುಟುಂಬಸ್ಥರು, ಕಾಲೇಜು ಆಡಳಿತ…

Read More

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫಸ್ಟ್ ಕ್ಲಾಸ್​ನಲ್ಲಿ ಪಾಸಾದ ಬಳ್ಳಾರಿ ಸೆಂಟ್ರಲ್ ಜೈಲಿನ ಶಿಕ್ಷಾ ಬಂಧಿ

ಬಳ್ಳಾರಿ, ಏಪ್ರಿಲ್​ 09: ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ (2nd PUC Results) ಗುರುವಾರ ಪ್ರಕಟಗೊಂಡಿದೆ. ಈ ಸಲ ದಾಖಲೆಯ ರಿಸಲ್ಟ್​ ಬಂದಿದ್ದು, ಎಂದಿನಂತೆ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಹಗಲು, ರಾತ್ರಿ ಕಷ್ಟಪಟ್ಟು ಓದಿ ಪಾಸ್​ ಆದವರು ಫುಲ್ ಖುಷ್ ಆಗಿದ್ದಾರೆ. ಅದರಲ್ಲೂ ವಿಶೇಷ ಎಂಬಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಓರ್ವ ಕೈದಿ 80.1% ಅಂಕಗಳನ್ನು ಗಳಿಸುವ ಮೂಲಕ ಸದ್ಯ ಗಮನ ಸೆಳೆದಿದ್ದಾರೆ. ಜೈಲಿನ ಪ್ರತ್ಯೇಕ ಸೆಲ್​ನಲ್ಲಿ ಅಭ್ಯಾಸ  ಶಿಕ್ಷಾಬಂಧಿ ಅಶೋಕ್ ಕುಮಾರ್ ದ್ವಿತೀಯ…

Read More

ಕಾರನ್ನು ಕಾಪಾಡಲು ತನ್ನ ಜೀವವನ್ನೂ ಲೆಕ್ಕಿಸದ ಮಹಿಳೆ!

ನವದೆಹಲಿ, ಏಪ್ರಿಲ್ 9: ಅಲ್ಲಿ ಸಾಲಾಗಿ ಕಾರುಗಳನ್ನು ನಿಲ್ಲಿಸಲಾಗಿತ್ತು. ಅವುಗಳ ಹಿಂದೆ ಎತ್ತರವಾದ ಕಾಂಪೌಂಡ್ ಇತ್ತು. ಶಿಥಿಲವಾಗಿದ್ದ ಆ ಕಾಂಪೌಂಡ್​ ಗೋಡೆ ಇನ್ನೇನು ಬೀಳುವುದರಲ್ಲಿತ್ತು. ಇದರ ಸುಳಿವು ಸಿಕ್ಕೊಡನೆ ಮಹಿಳೆ ಓಡಿಹೋಗಿ ತನ್ನ ಕಾರನ್ನು ಆ ಸ್ಥಳದಿಂದ ತೆಗೆದಿದ್ದಾರೆ. ಆಕೆ ಕಾರನ್ನು ತೆಗೆದ ಕೆಲವೇ ಸೆಕೆಂಡುಗಳಲ್ಲಿ ಆ ಗೋಡೆ ಮಗುಚಿಬಿದ್ದಿದೆ. ಅಲ್ಲಿದ್ದ ಕಾರುಗಳೆಲ್ಲ ಆ ಗೋಡೆಯಡಿ ಹೂತುಹೋಗಿವೆ. ಆ ಮಹಿಳೆ ತನ್ನ ಪ್ರಾಣವನ್ನೂ ಲೆಕ್ಕಿಸದೆ ಕಾರನ್ನು ತೆಗೆಯಲು ಓಡಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ನಡೆದಿದ್ದು…

Read More

ಬಿಡುಗಡೆಗೂ ಮುನ್ನವೇ ‘ಜನ ನಾಯಗನ್’ ದೃಶ್ಯ ಲೀಕ್: ದಳಪತಿ ವಿಜಯ್ ಸಿನಿಮಾಗೆ ಸಂಕಷ್ಟ

ತಮಿಳು ನಟ ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ (Jana Nayagan) ಸಿನಿಮಾಗೆ ಸದ್ಯ ಸಾಲು ಸಾಲು ಸಂಕಷ್ಟಗಳು ಎದುರಾಗುತ್ತಿವೆ. ಒಂದು ಕಡೆ ತಮಿಳುನಾಡು ವಿಧಾನಸಭಾ ಚುನಾವಣೆಯ ಕಾವು ಚಿತ್ರದ ಬಿಡುಗಡೆಗೆ ಅಡ್ಡಿಯಾಗಿದ್ದರೆ, ಮತ್ತೊಂದೆಡೆ ಚಿತ್ರದ ಪ್ರಮುಖ ದೃಶ್ಯವೊಂದು ಆನ್‌ಲೈನ್‌ನಲ್ಲಿ ಲೀಕ್ (Leak) ಆಗಿರುವುದು ಚಿತ್ರತಂಡವನ್ನು ಆತಂಕಕ್ಕೆ ತಳ್ಳಿದೆ. ಅಭಿಮಾನಿಗಳಿಗೆ ಈ ಬಗ್ಗೆ ಬೇಸರ ಆಗಿದೆ. ದಳಪತಿ ವಿಜಯ್ (Vijay) ಅವರ ವಿರೋಧಿಗಳು ಈ ಕೃತ್ಯದ ಹಿಂದೆ ಇದ್ದಾರೆ ಎಂಬುದು ಫ್ಯಾನ್ಸ್ ಆರೋಪ. ಸಾಮಾಜಿಕ ಜಾಲತಾಣಗಳಲ್ಲಿ…

Read More

ಬೆಂಗಳೂರಿನಲ್ಲಿ ಹಿಂದೂ ಬಾಲಕಿ ಮೇಲೆ ಮುಸ್ಲಿಂ ಯುವಕನಿಂದ ಅತ್ಯಾಚಾರ, ದುಡಿಯಲು ಬಂದವನಿಂದ ನೀಚ ಕೃತ್ಯ

ಬೆಂಗಳೂರು, ಏಪ್ರಿಲ್ 09):  ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಮಾನಗೇಡಿ ಕೃತ್ಯವೊಂದು ನಡೆದಿದೆ.  ಹಿಂದೂ ಬಾಲಕಿ ಮೇಲೆ ಮುಸ್ಲಿಂ ಯುವಕ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನ ಜ್ಞಾನ ಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರದ (Bihar) ಮೂಲದ ಮೊಹಮ್ಮದ್ ಮುನ್ನ ಎನ್ನುವ ಯುವಕ, ಆಟವಾಡುತ್ತಿದ್ದ 11 ವರ್ಷದ ಬಾಲಕಿಯನ್ನು ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಅಪ್ರಾಪ್ತೆ ಕೈಗೆ 150 ರೂಪಾಯಿ ಕೊಟ್ಟು ಎಸ್ಪೇಪ್ ಆಗಿದ್ದ ಮೊಹಮ್ಮದ್ ಮುನ್ನ ಪೊಲೀಸರು ಬಂಧಿಸಿದ್ದಾರೆ. ಹೊಟ್ಟೆಪಾಡಿಗಾಗಿ…

Read More

ಬೆಂಗಳೂರು ವೈರಲ್​ ಜೋಂಬಿ ಡ್ರಗ್ಸ್ ಕೇಸ್; ಪೊಲೀಸ್​​ ತನಿಖೆಯಲ್ಲಿ ಅಸಲಿಯತ್ತು ಬಯಲು

ಬೆಂಗಳೂರು, ಏಪ್ರಿಲ್​ 09: ಇತ್ತೀಚೆಗೆ ಒಂದು ವಿಡಿಯೋ ಭಾರೀ ವೈರಲ್​ ಆಗಿತ್ತು. ಅದರಲ್ಲಿ ಓರ್ವ ವ್ಯಕ್ತಿ  ಗಂಟೆಗಟ್ಟಲ್ಲೇ ನಿಂತಲ್ಲೇ ನಿಂತಿದ್ದ. ಇದನ್ನ ಕೆಲವರು ಬೆಂಗಳೂರಿನಲ್ಲಿ ಜೋಂಬಿ ಡ್ರಗ್ಸ್​ (zombie drug) ಕಾಲಿಟ್ಟಿದೆ ಎಂದು ವೈರಲ್ ಮಾಡಲಾಗಿತ್ತು. ಇನ್ನು ಇದೇ ವಿಚಾರವಾಗಿ ಸ್ಯಾಂಡಲ್​ವುಡ್​ ನಟ ದುನಿಯಾ ವಿಜಯ್ ಕೂಡ ಧ್ವನಿ ಎತ್ತಿದ್ದಾರೆ. ಇದೀಗ ಈಶಾನ್ಯ ವಿಭಾಗದ ಪೊಲೀಸರಿಂದ ಈ ಬಗ್ಗೆ ತನಿಖೆ ಮಾಡಲಾಗಿದ್ದು, ಈ ವೇಳೆ ಅಸಲಿಯತ್ತು ಬಯಲಾಗಿದೆ. ಜೋಂಬಿ ಡ್ರಗ್ಸ್ ಎನ್ನುವುದೇ ಇಲ್ಲಾ ಎಂಬ ಸ್ಫೋಟಕ ಸತ್ಯ…

Read More

ಅಸ್ಸಾಂ, ಕೇರಳ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ ಮುಕ್ತಾಯ

ನವದೆಹಲಿ, ಏಪ್ರಿಲ್ 9: ಅಸ್ಸಾಂ, ಕೇರಳ ಮತ್ತು ಪುದುಚೇರಿಯಲ್ಲಿ ನಡೆದ ವಿಧಾನಸಭಾ ಚುನಾವಣೆಗಳಿಗೆ (Assembly Elections) ಇಂದು (ಏಪ್ರಿಲ್ 9) ಮತದಾನ ಮುಕ್ತಾಯವಾಯಿತು. ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾದ ಮತದಾನ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಬಿಗಿ ಭದ್ರತೆಯಲ್ಲಿ ನಡೆಸಲಾಯಿತು. ಮೂರು ರಾಜ್ಯಗಳ ವಿಧಾನಸಭೆಗಳಲ್ಲಿ ನೂರಾರು ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲು ಮತದಾರರು ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಕೇರಳ ಸಿಎಂ ಪಿಣರಾಯಿ ವಿಜಯನ್ ಸೇರಿದಂತೆ ಪ್ರಮುಖ ನಾಯಕರು ಆರಂಭಿಕ ಮತದಾರರಲ್ಲಿ…

Read More