Video: ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು – Kannada News | Sakleshpur Miracle: Lost Child Found on Bus, Reunited with Mother by Police

ಹಾಸನ, ಡಿ.31 : ಪೋಷಕರಿಂದ ದೂರವಾಗಿದ್ದ ಮಗುವನ್ನು ತಾಯಿ ಮಡಿಲಿಗೆ ಸೇರಿಸಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಬಾಗೆ ಗ್ರಾಮದಲ್ಲಿ ನಡೆದಿದೆ. ಬಾಲಕಿ ನಿನ್ನೆ ರಾತ್ರಿ ತಾಯಿಯಿಂದ ತಪ್ಪಿಸಿಕೊಂಡಿದ್ದಾಳೆ. ತಾಯಿ, ಮಗು ಸೇರಿ ಆರು ಜನರ ತಂಡ ಧರ್ಮಸ್ಥಳದಿಂದ ಕೋಲಾರಕ್ಕೆ ತೆರಳುತ್ತಿದ್ದ ವೇಳೆ ಬಾಗೆ ಗ್ರಾಮದ ಬಳಿ ಸಾರಿಗೆ ಬಸ್ ಕೆಟ್ಟು ನಿಂತಿದೆ. ಈ ವೇಳೆ ಪ್ರಯಾಣಿಕರನ್ನು ಕಂಡಕ್ಟರ್ ಮತ್ತೊಂದು ಬಸ್ಸಿನಲ್ಲಿ ಕಳುಹಿಸಿದ್ದಾನೆ. ಆದರೆ ಬಾಲಕಿ ಗೊಂದಲದಿಂದ ಕೆಟ್ಟು ನಿಂತಿದ್ದ ಬಸ್ಸಿನಲ್ಲೇ ಕುಳಿತಿದ್ದಾಳೆ. ಮತ್ತೊಂದು ಕಡೆ…

Read More

ವರ್ಷಾಂತ್ಯದಲ್ಲಿ ಪೊಲೀಸ್​ ಇಲಾಖೆಗೆ ಮೇಜರ್​ ಸರ್ಜರಿ: ಹಲವರಿಗೆ ಬಡ್ತಿ, ಕೆಲವರಿಗೆ ವರ್ಗಾವಣೆ – Kannada News | Karnataka Police Major Changes: IPS Officers Promoted and Transferred by karnataka government

ಬೆಂಗಳೂರು, ಡಿಸೆಂಬರ್​ 31: ಸರ್ಕಾರ ವರ್ಷಾಂತ್ಯದಲ್ಲಿ ಕರ್ನಾಟಕ ಪೊಲೀಸ್​ ಇಲಾಖೆಗೆ ಮೇಜರ್​ ಸರ್ಜರಿ ಮಾಡಿದೆ. 23 ಐಪಿಎಸ್‌ ಅಧಿಕಾರಿಗಳಿಗೆ ಡಿಐಜಿಪಿ ಹುದ್ದೆಗೆ ಬಡ್ತಿ ನೀಡಿದ್ದು, 20 ಐಪಿಎಸ್​ (IPS) ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ (karnataka government) ಬುಧವಾರ ಆದೇಶ ಹೊರಡಿಸಿದೆ. 23 ಐಪಿಎಸ್‌ ಅಧಿಕಾರಿಗಳಿಗೆ ಡಿಐಜಿಪಿ ಹುದ್ದೆಗೆ ಬಡ್ತಿ ಭೀಮಾಶಂಕರ್ ಗುಳೇದ್-ಡಿಐಜಿಪಿ, ಸಿಐಡಿ ಆರ್ಥಿಕ ಅಪರಾಧ ಇಲಕ್ಕಿಯ ಕರುಣಾಗರನ್-ಡಿಐಜಿಪಿ, ವೈರ್‌ಲೆಸ್​​ ವೇದಮೂರ್ತಿ-ಡಿಐಜಿಪಿ, ರಾಜ್ಯ ಗುಪ್ತಚರ ಕೆ.ಎಂ.ಶಾಂತರಾಜು-ಡಿಐಜಿಪಿ, ಐಎಸ್‌ಡಿ ಹನುಮಂತರಾಯ-ಡಿಐಜಿಪಿ, ಎಸ್‌ಹೆಚ್‌ಆರ್‌ಸಿ ಡಿ.ದೇವರಾಜು-ಡಿಐಜಿಪಿ, ಪೊಲೀಸ್‌ ತರಬೇತಿ ಡಾ.ಸಿರಿ…

Read More

ಈ ಬಾರಿಯ ಗಣರಾಜ್ಯೋತ್ಸವ ಬಹಳ ಡಿಫರೆಂಟ್; ಸೇನೆಯಿಂದ ಒಂಟೆ, ಭಾರತೀಯ ತಳಿಯ ನಾಯಿಗಳ ಮೆರವಣಿಗೆ – Kannada News | Indian Armys Animal warriors to march On Kartavya Path in Republic Day Parade first time in India

ನವದೆಹಲಿ, ಡಿಸೆಂಬರ್ 31: ಭಾರತವು 2026ರ ಗಣರಾಜ್ಯೋತ್ಸವದಂದು (Republic Day) ಅಪರೂಪದ ದೃಶ್ಯಕ್ಕೆ ಸಾಕ್ಷಿಯಾಗಲಿದೆ. ಈ ಬಾರಿ ಭಾರತೀಯ ಸೇನೆಯ ಪ್ರಾಣಿಗಳು ಕರ್ತವ್ಯ ಪಥದಲ್ಲಿ ಮೆರವಣಿಗೆ ನಡೆಸಲಿವೆ. ಇದು ಸಹಿಷ್ಣುತೆ, ತ್ಯಾಗ ಮತ್ತು ಸೈನ್ಯದ ವಿಶಿಷ್ಟವಾದ ಕಾರ್ಯಾಚರಣೆಯ ಸಾಮರ್ಥ್ಯವನ್ನು ಸಂಕೇತಿಸುತ್ತದೆ. ಇದೇ ಮೊದಲ ಬಾರಿಗೆ, ರಿಮೌಂಟ್ ಮತ್ತು ಪಶುವೈದ್ಯಕೀಯ ದಳದ ಕ್ಯುರೇಟೆಡ್ ಪ್ರಾಣಿ ತುಕಡಿಯು ಮೆರವಣಿಗೆಯಲ್ಲಿ ಭಾಗವಹಿಸುತ್ತದೆ. ಈ ತುಕಡಿಯು ಎರಡು ಬ್ಯಾಕ್ಟ್ರಿಯನ್ ಒಂಟೆಗಳು, 4 ಝನ್ಸ್ಕಾರ್ ಪೋನಿಗಳು, 4 ರಾಪ್ಟರ್‌ಗಳು, 10 ಭಾರತೀಯ ತಳಿಯ ಸೇನಾ…

Read More

10 ನಿಮಿಷದ ಡೆಲಿವರಿ ಆಯ್ಕೆ ರದ್ದುಗೊಳಿಸಿ; ಗಿಗ್ ಕಾರ್ಮಿಕರಿಂದ ಬೃಹತ್ ಪ್ರತಿಭಟನೆ – Kannada News | Remove 10 minute delivery option Swiggy, Zomato and other Workers demanding

ನವದೆಹಲಿ, ಡಿಸೆಂಬರ್ 31: ಹೊಸ ವರ್ಷದ ಮುನ್ನಾದಿನವಾದ ಇಂದು ಡೆಲಿವರಿ ಏಜೆಂಟ್​​ಗಳು ಮುಷ್ಕರ ನಡೆಸುತ್ತಿದ್ದಾರೆ. ದೇಶಾದ್ಯಂತ ಮುಷ್ಕರದ ನಡುವೆ ಸ್ವಿಗ್ಗಿ (Swiggy), ಜೊಮಾಟೊ ವಿತರಣಾ ಪ್ರೋತ್ಸಾಹವನ್ನು ಹೆಚ್ಚಿಸಿವೆ. ಫುಡ್, ದಿನಸಿ ಮುಂತಾದ ವಿತರಣಾ ಅಪ್ಲಿಕೇಶನ್‌ಗಳ ಗಿಗ್ ಕಾರ್ಮಿಕರು ಇಂದು ದೇಶಾದ್ಯಂತ ಮುಷ್ಕರ ಘೋಷಿಸಿದ್ದಾರೆ. “10 ನಿಮಿಷದ ಡೆಲಿವರಿ ಆಯ್ಕೆಯನ್ನು ತೆಗೆದುಹಾಕಿ” ಎಂದು ಅವರು ಒತ್ತಾಯಿಸಿದ್ದಾರೆ. ಕಡಿಮೆ ವೇತನ, ಅಸುರಕ್ಷಿತ ಪರಿಸ್ಥಿತಿಗಳು ಮತ್ತು ಕಳಪೆ ಕೆಲಸದ ಭದ್ರತೆಯ ವಿರುದ್ಧ ಗಿಗ್ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. 10 ನಿಮಿಷದಲ್ಲಿ ಡೆಲಿವರಿ…

Read More

ಈ ಅಭ್ಯಾಸಗಳಿರುವವರು ಪಾರ್ಶ್ವವಾಯುವಿಗೆ ತುತ್ತಾಗುವ ಸಾಧ್ಯತೆ ಹೆಚ್ಚು; ಈ ಬಗ್ಗೆ ಜಾಗೃತೆ ವಹಿಸಬೇಕು ಎನ್ನುತ್ತಾರೆ ಡಾ. ಸಂತೋಷ್

ಇತ್ತೀಚಿನ ದಿನಗಳಲ್ಲಿ ಪಾರ್ಶ್ವವಾಯು ಅಥವಾ ಸ್ಟ್ರೋಕ್ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದೆ. ಅದರಲ್ಲಿಯೂ ಚಳಿಗಾಲದಲ್ಲಿ ಈ ಸಮಸ್ಯೆ ತುಸು ಹೆಚ್ಚಾಗಿಯೇ ಇರುತ್ತದೆ. ಹಾಗಾಗಿ ಈ ಆರೋಗ್ಯ ಸಮಸ್ಯೆಯ ಬಗ್ಗೆ ತಿಳಿದಿರುವುದು ಬಹಳ ಮುಖ್ಯವಾಗುತ್ತದೆ. ಕೆಲವೊಮ್ಮೆ ನಮ್ಮ ನಿರ್ಲಕ್ಷ್ಯವೇ ಇಂತಹ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಅದಕ್ಕಾಗಿಯೇ ಟಿವಿ9 ಕನ್ನಡ ಈ ವಿಷಯಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಪಡೆಯಲು ವೈಟ್ ಫೀಲ್ಡ್ ಮಣಿಪಾಲ ಆಸ್ಪತ್ರೆಯ ಕನ್ಸಲ್ಟೆಂಟ್ ನ್ಯೂರೋಲಾಜಿಸ್ಟ್ ಆಗಿರುವ ಡಾ. ಸಂತೋಷ್ ಎನ್ ಎಸ್ (Dr. Santhosh N.S) ಅವರನ್ನು…

Read More

‘ಜನ ನಾಯಗನ್’ ಆಡಿಯೋ ಲಾಂಚ್ ಕಾರ್ಯಕ್ರಮ ಒಟಿಟಿಯಲ್ಲಿ: ಎಲ್ಲಿ? ಯಾವಾಗ? – Kannada News | Jana Nayagan movie audio launch function to stream on OTT

ದಳಪತಿ ವಿಜಯ್ (Thalapathy Vijay) ನಟಿಸಿರುವ ‘ಜನ ನಾಯಗನ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರ ಚಾಲ್ತಿಯಲ್ಲಿದೆ. ವಿಜಯ್ ಸಾಮಾನ್ಯವಾಗಿ ಯಾವುದೇ ಸಂದರ್ಶನ ನೀಡಿ ಸಿನಿಮಾ ಪ್ರಚಾರ ಮಾಡುವುದಿಲ್ಲ ಬದಲಿಗೆ ಸಿನಿಮಾ ಬಿಡುಗಡೆಗೆ ಮುಂಚೆ ಒಂದು ಆಡಿಯೋ ಲಾಂಚ್ ಕಾರ್ಯಕ್ರಮ ಆಯೋಜಿಸುತ್ತಾರೆ, ಅಲ್ಲಿಯೇ ಸಿನಿಮಾ ಬಗ್ಗೆ, ಸಹ ನಟರುಗಳು ಬಗ್ಗೆ ಮಾತನಾಡುತ್ತಾರೆ. ಈ ಬಾರಿಯೂ ಸಹ ‘ಜನ ನಾಯಗನ್’ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮವನ್ನು ಬಲು ಅದ್ಧೂರಿಯಾಗಿ ಮಲೇಷಿಯಾನಲ್ಲಿ ಆಯೋಜಿಸಲಾಗಿತ್ತು. ದೂರದ ಮಲೇಷಿಯಾನಲ್ಲಿ ಕಾರ್ಯಕ್ರಮ…

Read More

ಇಂದೋರ್‌ನಲ್ಲಿ ಕಲುಷಿತ ನೀರು ಸೇವಿಸಿ 7 ಜನ ಸಾವು; ಆಸ್ಪತ್ರೆಯಲ್ಲಿ ಅಸ್ವಸ್ಥರ ಆರೋಗ್ಯ ವಿಚಾರಿಸಿದ ಸಿಎಂ – Kannada News | Madhya Pradesh CM Mohan Yadav meets the people hospitalised in Indore after drinking contaminated water

ಇಂದೋರ್‌, ಡಿಸೆಂಬರ್ 31: ಮಧ್ಯಪ್ರದೇಶದ ಇಂದೋರ್‌ನಲ್ಲಿ (Indore) ಕಲುಷಿತ ನೀರು ಸೇವನೆಯಿಂದ 7 ಜನರು ಸಾವನ್ನಪ್ಪಿದ್ದು, 35ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಜನರನ್ನು ಭೇಟಿಯಾದರು. ಮುನ್ನೆಚ್ಚರಿಕಾ ಕ್ರಮವಾಗಿ ಮುನ್ಸಿಪಲ್ ಕಾರ್ಪೊರೇಷನ್ ಮನೆಗಳಿಗೆ ನೀರು ಸರಬರಾಜು ಮಾಡುತ್ತಿದೆ, ಯಾವುದೇ ರೀತಿಯ ರೋಗಲಕ್ಷಣಗಳನ್ನು ಹೊಂದಿರುವವರಿಗೆ ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿದೆ. ಇಂದೋರ್‌ನ ಭಾಗೀರಥಪುರ ಪ್ರದೇಶದಲ್ಲಿ ಕಳೆದ 15 ದಿನಗಳಿಂದ ಕೊಳಕು ನೀರಿನ ಬಗ್ಗೆ ದೂರುಗಳು…

Read More

Video: ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ – Kannada News | Young man puts his hand on young woman’s chest while she falls asleep on bus

ಕಾರವಾರ, ಡಿ.31: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಲೈಂಗಿಕ ದೌರ್ಜನ್ಯ ಮಾಡಿರುವ ಘಟನೆ ಕಾರವಾರದಲ್ಲಿ ನಡೆದಿದೆ. ಕಾರವಾರದಿಂದ ಅಂಕೋಲಾ ಕಡೆಗೆ ಹೊಗುತ್ತಿದ್ದ ಬಸ್ಸಿನಲ್ಲಿ ನಡೆದಿದೆ. ಯುವತಿ ಬಸ್​​​​​​ನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಪಕ್ಕದಲ್ಲಿ ಕುಳಿತ ಯುವಕ ಎದೆ ಮೇಲೆ ಕೈ ಇಟ್ಟು ಲೈಂಗಿಕ ಕಿರುಕುಳ ನೀಡಿದ್ದಾನೆ. ಯುವತಿ ನಿದ್ದೆಯಿಂದ ಎಚ್ಚರಗೊಂಡು ನೋಡಿದಾಗ, ಕೈ ಆಕೆಯ ಎದೆ ಮೇಲಿತ್ತು. ಈ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ವಿಡಿಯೋ ಮಾಡಿ ಹಂಚಿಕೊಂಡಿದ್ದಾಳೆ. ಇನ್ನು ಯುವಕನಿಗೆ ಅವಾಚ್ಯ ಶಬ್ದಗಳಿಂದ ಉಗಿದು, ಧರ್ಮದೇಟು ನೀಡಿದ್ದಾಳೆ….

Read More

ಹಾಲಿವುಡ್​​ಗೆ ಪೈಪೋಟಿ ಕೊಡುತ್ತಿದೆ ಭಾರತದ ಈ ಕೋತಿ, ಆದಾಯ ಎಷ್ಟು ಗೊತ್ತೆ? – Kannada News | Bandar Apna Dost Youtube Chanel made 38 crore rs just from AI videos

ಸಾಮಾಜಿಕ ಜಾಲತಾಣದ (Social Media) ಈ ಜಮಾನಾನಲ್ಲಿ ಯಾವಾಗ ಯಾವುದು ವೈರಲ್ ಆಗುತ್ತದೆ, ಯಾವ ರೀತಿಯ ಕಂಟೆಂಟ್ ಜನರಿಗೆ ಇಷ್ಟವಾಗುತ್ತದೆ ಎಂದು ಊಹಿಸುವುದೇ ಕಷ್ಟ. ಭಾರತದ ಕೋತಿಯೊಂದು ವಿಶ್ವಮಟ್ಟದಲ್ಲಿ ಟಾಪ್ ಕಂಟೆಂಟ್ ಆಗಿ ಮಿಂಚಿದೆ ಮಾತ್ರವಲ್ಲದೆ ಕೆಲವೇ ತಿಂಗಳುಗಳಲ್ಲಿ 38 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಕೇವಲ ಯೂಟ್ಯೂಬ್ ಒಂದರಿಂದಲೇ ಗಳಿಸಿದೆ. ಆಶ್ಚರ್ಯ ಎನಿಸಿದರೂ ಸಹ ಇದು ನಿಜ. ವಿಶ್ವದಾದ್ಯಂತ ಅತಿ ಹೆಚ್ಚು ವೀಕ್ಷಿಸಲ್ಪಟ್ಟ ಎಐ ವಿಡಿಯೋಗಳಲ್ಲಿ ಭಾರತದ ಕೋತಿ ಸ್ಥಾನ ಗಳಿಸಿದೆ. ‘ಬಂದರ್ ಅಪ್ನ ದೋಸ್ತ್’…

Read More

ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ – Kannada News | Video of the last sunset of the year 2025 from Puri Shree Jagannatha Temple

ಪುರಿ, ಡಿಸೆಂಬರ್ 31: ಹೊಸ ವರ್ಷ ಸಮೀಪಿಸುತ್ತಿರುವುದರಿಂದ ಒಡಿಶಾದ ಪುರಿಯಲ್ಲಿರುವ ಶ್ರೀ ಜಗನ್ನಾಥ ದೇವಸ್ಥಾನದಲ್ಲಿ ಜಗನ್ನಾಥ ಮತ್ತು ಅವರ ಸಹೋದರರ ದರ್ಶನಕ್ಕಾಗಿ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದರು. ಹೊಸ ವರ್ಷದ ಮೊದಲ ದಿನವಾದ್ದರಿಂದ ನಾಳೆಯೂ ಇಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ. ಈ ನಡುವೆ ಇಂದು ಸಂಜೆ ಪುರಿ ಜಗನ್ನಾಥ ಸ್ವಾಮಿ ದೇವಾಲಯದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಗಮನಸೆಳೆಯಿತು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More