Category Archives: Blog

Your blog category

ಹೊಸ ವರ್ಷಾಚರಣೆ: ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಏನೆಲ್ಲ ಬಂದ್, ಯಾವುದೆಲ್ಲ ಓಪನ್? ಇಲ್ಲಿದೆ ಮಾಹಿತಿ – Kannada News | What is open and closed on New Year’s Eve and 1st January 2026 in Bangalore and other cities of Karnataka

ಬೆಂಗಳೂರು, ಡಿಸೆಂಬರ್ 31: ಹೊಸ ವರ್ಷಾಚರಣೆ (New Year 2026) ಪ್ರಯುಕ್ತ ಭದ್ರತೆ ಮತ್ತು ಸುರಕ್ಷತಾ ಕಾರಣಗಳಿಗಾಗಿ ಕರ್ನಾಟಕದ (Karnataka) ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಅದೇ ರೀತಿ ಬೆಂಗಳೂರಿನಲ್ಲಿ (Bengaluru) ಫ್ಲೈಓವರ್​ಗಳನ್ನು ಬಂದ್ ಮಾಡಲಾಗುತ್ತದೆ. ಮತ್ತೊಂದೆಡೆ ಬಿಎಂಟಿಸಿ ಬಸ್, ನಮ್ಮ ಮೆಟ್ರೋ ಸೇವೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಹೊಸ ವರ್ಷದ ಸಂದರ್ಭದಲ್ಲಿ ಕರ್ನಾಟಕದಲ್ಲಿ ಏನೇನು ಇರುತ್ತೆ? ಏನೇನು ಇರಲ್ಲ ಎಂಬ ಮಾಹಿತಿ ಇಲ್ಲಿದೆ.

ಹೊಸ ವರ್ಷಾಚರಣೆ: ಏನೇನಿರಲ್ಲ?

  • ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವಪ್ರಸಿದ್ಧ ಪ್ರವಾಸಿತಾಣ ನಂದಿಗಿರಿಧಾಮಕ್ಕೆ ಡಿಸೆಂಬರ್ 31ರ ಮಧ್ಯಾಹ್ನ 2 ಗಂಟೆಯಿಂದ ಜನವರಿ 1ರ ಬೆಳಗ್ಗೆ 10 ಗಂಟೆಯವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
  • ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ಎಲ್ಲ ಪ್ರವಾಸಿ ತಾಣಗಳಿಗೆ ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಗ್ಗೆ 6 ಗಂಟೆವರೆಗೆ ನಿರ್ಬಂಧ ಹೇರಲಾಗಿದೆ.
  • ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಧ್ಯರಾತ್ರಿ 12.30ರವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ ನೀಡಲಾಗಿದೆ. ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
  • ಕೊಡಗು ಜಿಲ್ಲೆಯಲ್ಲಿ ರಾತ್ರಿ 10 ಗಂಟೆಯ ಬಳಿಕ ಒಳಾಂಗಣದಲ್ಲಿ‌ ಮಾತ್ರ ಪಾರ್ಟಿ ಮಾಡಲು ಅವಕಾಶ.
  • ಬೆಂಗಳೂರಿನ ಚರ್ಚ್​​ ಸ್ಟ್ರೀಟ್, ಎಂಜಿ ರಸ್ತೆಯಲ್ಲಿ ಒಮ್ಮೆ ಹೋಗಿ ಹೊರಹೋದವರಿಗೆ ಮರಳಿ ಎಂಟ್ರಿ ಇಲ್ಲ.
  • ನಮ್ಮ ಮೆಟ್ರೋ ಎಂಜಿ ರಸ್ತೆ, ಟ್ರಿನಿಟಿ ನಿಲ್ದಾಣ ಬಂದ್.
  • ಬೆಂಗಳೂರಿನಲ್ಲಿ ಸಂಜೆ 6 ರ ನಂತರ ಪಾರ್ಕ್​ಗಳು ಬಂದ್.
  • ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್​ ಸ್ಟ್ರೀಟ್​ಗಳಲ್ಲಿ ಸಂಜೆಯ ನಂತರ ವಾಹನ ಸಂಚಾರ ಬಂದ್.

ಹೊಸ ವರ್ಷಾಚರಣೆ: ಏನೇನಿರುತ್ತೆ?

  • ಬೆಂಗಳೂರಿನಲ್ಲಿ ತಡರಾತ್ರಿ 2 ಗಂಟೆ ವರೆಗೆ ಬಿಎಂಟಿಸಿ ಬಸ್ ಸಂಚಾರ.
  • ಮುಂಜಾನೆ 3 ಗಂಟೆ ವರೆಗೆ ನಮ್ಮ ಮೆಟ್ರೋ ರೈಲು ಸೇವೆ.
  • ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಪಬ್, ಬಾರ್, ರೆಸ್ಟೋರೆಂಟ್​​ಗಳು ತಡರಾತ್ರಿ ವರೆಗೂ ಕಾರ್ಯಾಚರಿಸಲಿವೆ.
  • ಅಂಗಡಿಗಳು, ವಾಣಿಜ್ಯ ಮಳಿಗೆಗಳಿಗೆ ರಾತ್ರಿ 1 ರ ವರೆಗೂ ಕಾರ್ಯಾಚರಣೆಗೆ ಅನುಮತಿ ಇದೆ.
  • ಕರಾವಳಿ ನಗರಗಳಾದ ಮಂಗಳೂರು, ಉಡುಪಿಗಳಲ್ಲಿ ಬೀಚ್ ಬದಿಯ ರೆಸಾರ್ಟ್​ಗಳು, ಹೋಮ್​ ಸ್ಟೇಗಳು ತೆರೆದಿರಲಿವೆ.
  • ಮಂಗಳೂರು ನಗರದಲ್ಲಿ ರಾತ್ರಿ 12.30ರೊಳಗೆ ಹೊಸ ವರ್ಷ ಆಚರಣೆ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗಂಭೀರ ಸ್ಥಿತಿ… ಕೋಮಾಕ್ಕೆ ಜಾರಿದ ಆಸ್ಟ್ರೇಲಿಯಾ ಕ್ರಿಕೆಟಿಗ – Kannada News | Australian cricketer Damien Martyn hospitalised

ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೇಮಿಯನ್ ಮಾರ್ಟಿನ್ ಅವರನ್ನು ಆಸ್ಪತ್ರೆಗೆ ದಾಖಲಾಗಿದೆ. ಮೆನಿಂಜೈಟಿಸ್ ಸಮಸ್ಯೆಯಿಂದ ಬಳಲುತ್ತಿರುವ ಅವರ ಪರಿಸ್ಥಿತಿ ಗಂಭೀರವಾಗಿದ್ದು, ಇದೀಗ ಕೋಮಾಕ್ಕೆ ಜಾರಿದ್ದಾರೆ ಆಸ್ಟ್ರೇಲಿಯನ್ ಅಸೋಸಿಯೇಟೆಡ್ ಪ್ರೆಸ್ (AAP) ಉಲ್ಲೇಖಿಸಿ cricket.com.au ವರದಿ ಮಾಡಿದೆ.

ದಿ ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಪ್ರಕಾರ, ಮಾರ್ಟಿನ್ ಮೆನಿಂಜೈಟಿಸ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ನೀಡಲಾದ ಔಷಧಿಗಳ ರಿಯಾಕ್ಷನ್​ನಿಂದಾಗಿ ಅವರು ಕೋಮಾಕ್ಕೆ ಜಾರಿದ್ದಾರೆ. ವೈದ್ಯರು ಮಾರ್ಟಿನ್ ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಹೆಚ್ಚಿನ ಚಿಕಿತ್ಸೆಯ ವ್ಯವಸ್ಥೆಗೆ ಮುಂದಾಗಿದ್ದಾರೆ.

ಡೇಮಿಯನ್ ಮಾರ್ಟಿನ್​ ಅವರಿಗೆ ಸಾಧ್ಯವಾದಷ್ಟು ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಟ್ರೇಲಿಯಾ ತಂಡದ ಮಾಜಿ ವಿಕೆಟ್ ಕೀಪರ್ ಬ್ಯಾಟರ್ ಆ್ಯಡಂ ಗಿಲ್‌ಕ್ರಿಸ್ಟ್ ಹೇಳಿದ್ದಾರೆ. 

ಡೇಮಿಯನ್ ಮಾರ್ಟಿನ್ 18 ವರ್ಷಗಳ ಕಾಲ ಕ್ರಿಕೆಟ್ ಆಡಿದ್ದರು.  1991-92 ರಿಂದ ಶುರುವಾದ ಅವರ ಕ್ರಿಕೆಟ್ ಕೆರಿಯರ್ 2010 ರವರೆಗೆ ಮುಂದುವರೆದಿತ್ತು. ಈ ಅವಧಿಯಲ್ಲಿ ಒಟ್ಟು 509 ಪಂದ್ಯಗಳನ್ನಾಡಿದ್ದರು. ಈ ವೇಳೆ 54 ಶತಕಗಳೊಂದಿಗೆ ಒಟ್ಟು 23,000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.

ಡೇಮಿಯನ್ ಮಾರ್ಟಿನ್ ಬ್ಯಾಟಿಂಗ್ ವಿಡಿಯೋ:

ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 67 ಟೆಸ್ಟ್ ಪಂದ್ಯಗಳನ್ನಾಡಿರುವ ಡೇಮಿಯನ್ ಮಾರ್ಟಿನ್ 109 ಇನಿಂಗ್ಸ್​ಗಳ ಮೂಲಕ 4406 ರನ್ ಕಲೆಹಾಕಿದ್ದಾರೆ. ಈ ವೇಳೆ 13 ಶತಕ ಹಾಗೂ 23 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಹಾಗೆಯೇ 208 ಏಕದಿನ ಪಂದ್ಯಗಳನ್ನಾಡಿದ್ದ ಮಾರ್ಟಿನ್ 182 ಇನಿಂಗ್ಸ್ ಆಡಿದ್ದಾರೆ. ಈ ವೇಳೆ ಅವರ ಬ್ಯಾಟ್​ನಿಂದ 5 ಶತಕಗಳೊಂದಿಗೆ 5346 ರನ್​ಗಳು ಮೂಡಿಬಂದಿದ್ದವು.

ಇದರ ಜೊತೆಗೆ ಆಸ್ಟ್ರೇಲಿಯಾ ಪರ 4 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಒಟ್ಟು 120 ರನ್​ಗಳಿಸಿದ್ದರು. ಹಾಗೆಯೇ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಒಂದು ಪಂದ್ಯದಲ್ಲಿ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ನಿರ್ಮಿಸಿದ ಅಭಿಷೇಕ್ ಶರ್ಮಾ

ಇದೀಗ ಆಸ್ಪತ್ರೆಯಲ್ಲಿ ಜೀವನ್ಮರಣದ ವಿರುದ್ಧ ಹೋರಾಡುತ್ತಿರುವ ಡೇಮಿಯನ್ ಮಾರ್ಟಿನ್ ಅವರ ಶೀಘ್ರ ಗುಣಮುಖರಾಗಲೆಂದು ಅಭಿಮಾನಿಗಳು ಸೇರಿದಂತೆ ಅನೇಕರು ಸೋಷಿಯಲ್ ಮೀಡಿಯಾ ಮೂಲಕ ಹಾರೈಸಿದ್ದಾರೆ.

Published On – 10:14 am, Wed, 31 December 25

Source link

ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು? – Kannada News | Jaggesh Shows His Angriness over Movie Piracy

ಟ ಸುದೀಪ್ ಅವರು ಪೈರಸಿ ಬಗ್ಗೆ ಧ್ವನಿ ಎತ್ತಿದ್ದು ಗೊತ್ತೇ ಇದೆ. ಸುದೀಪ್ ಬಳಿಕ ಜಗ್ಗೇಶ್ ಅವರು ಪೈರಸಿ ಬಗ್ಗೆ ಮಾತನಾಡಿದ್ದಾರೆ. ಅವರ ಸಹೋದರ ಕೋಮಲ್ ಕುಮಾರ್ ನಟನೆಯ ‘ಕೋಣ’ ಸಿನಿಮಾ ಪೈರಸಿ ಆಗಿತ್ತು. ಇದನ್ನು ಮಾಡಿದವರ ವಿರುದ್ಧ ಜಗ್ಗೇಶ್ ದೂರು ನೀಡಿದ್ದರು. ಈಗ ನಂದಿನಿ ಲೇಔಟ್ ಪೊಲೀಸರು ಪೈರಸಿ ಮಾಡುತ್ತಿದ್ದ ಓರ್ವನ ಬಂಧಿಸಿದ್ದಾರೆ. ಫೇಸ್​ಬುಕ್ ಲೈವ್ ಬಂದು ಪೈರಸಿ ವಿರುದ್ಧ ನಟ ಜಗ್ಗೇಶ್ ಆಕ್ರೋಶ ಹೊರಹಾಕಿದ್ದಾರೆ. ‘ಸಿನಿಮಾ ಪೈರಸಿ ಕೊಲೆಗೆ ಸಮಾನ, ನಿರ್ಮಾಪಕನನ್ನು ಕೊಂದಂತೆ. ಪೈರಸಿ ಮಾಡೋದು ದರೋಡೆ ಮಾಡಿದಂತೆ’ ಎಂದು ನಟ ಜಗ್ಗೇಶ್​ ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Vaikuntha Dwadashi: ವೈಕುಂಠ ದ್ವಾದಶಿಯ ಮಹತ್ವ, ಆಚರಣೆ ಮತ್ತು ಫಲಗಳ ಮಾಹಿತಿ ಇಲ್ಲಿದೆ – Kannada News | Vaikuntha dwadashi the day of infinite blessings and divine culmination

ವೈಕುಂಠ ದ್ವಾದಶಿ ಅಥವಾ ಮುಕ್ಕೋಟಿ ದ್ವಾದಶಿಯ ಮಹತ್ವ, ಆಚರಣೆ ಮತ್ತು ಫಲಗಳ ಕುರಿತು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ವೈಕುಂಠ ಏಕಾದಶಿಯನ್ನು ಆಚರಿಸಿದ ಮಾರನೇ ದಿನ ಬರುವ ಈ ದ್ವಾದಶಿ ಅತೀ ಮಹತ್ವಪೂರ್ಣವಾದ ದಿನವಾಗಿದೆ. ಪೌರಾಣಿಕ ನಂಬಿಕೆಗಳ ಪ್ರಕಾರ, 33 ಕೋಟಿ ದೇವತೆಗಳು ವೈಕುಂಠದಲ್ಲಿ ಉತ್ತರ ದ್ವಾರದ ಮುಖಾಂತರ ಶ್ರೀ ವಿಷ್ಣುವಿನ ದರ್ಶನ ಪಡೆದ ಸಂದರ್ಭ ಇದಾಗಿದೆ. ಹೀಗಾಗಿ, ಈ ದಿನವನ್ನು ಮುಕ್ಕೋಟಿ ದ್ವಾದಶಿ ಎಂದು ಕರೆಯಲಾಗುತ್ತದೆ.

ಯಾವುದೇ ಕಾರ್ಯ ಅಥವಾ ಯಜ್ಞ ಮಾಡಿದಾಗ ಪೂರ್ಣಾಹುತಿ ಎಷ್ಟು ಮುಖ್ಯವೋ, ಹಾಗೆಯೇ ವೈಕುಂಠ ದ್ವಾದಶಿ ವೈಕುಂಠ ಏಕಾದಶಿ ವ್ರತದ ಪರಿಸಮಾಪ್ತಿಯ ದಿನವಾಗಿದೆ. ಏಕಾದಶಿಯಂದು ಪೂರ್ಣವಾಗಿ ಉಪವಾಸವಿದ್ದು, ದಾನ ಧರ್ಮಗಳು ಮತ್ತು ಜಪ ತಪಗಳನ್ನು ಕೈಗೊಂಡ ಭಕ್ತರು ಈ ದಿನ ಪಾರಣ ಮಾಡಿ ವ್ರತವನ್ನು ಪೂರ್ಣಗೊಳಿಸುತ್ತಾರೆ. ಇದು ಉಪವಾಸ ವ್ರತದ ಫಲವನ್ನು ಸಂಪೂರ್ಣವಾಗಿ ಪಡೆಯಲು ಅತ್ಯಂತ ಪ್ರಾಶಸ್ತ್ಯವಾದ ದಿನ. ಅತಿಥಿಗಳಿಗೆ ಪೂರ್ಣ ಗೌರವ ನೀಡಿ ಬೀಳ್ಕೊಡುವುದು ಎಷ್ಟು ಮುಖ್ಯವೋ, ಹಾಗೆಯೇ ಏಕಾದಶಿ ವ್ರತದ ಸಮರ್ಪಕ ಅಂತ್ಯ ವೈಕುಂಠ ದ್ವಾದಶಿಯಲ್ಲಾಗುತ್ತದೆ. ಈ ದಿನದಂದು ಉಪವಾಸವನ್ನು ಬಿಡುವುದು ಮತ್ತು ದಾನ ಧರ್ಮಗಳನ್ನು ಮಾಡುವುದು ನೂರು ಯಜ್ಞಗಳನ್ನು ಮಾಡಿದ ಫಲಕ್ಕೆ ಸಮಾನವೆಂದು ಶಾಸ್ತ್ರಗಳು ಹೇಳುತ್ತವೆ.

ವೈಕುಂಠ ದ್ವಾದಶಿಯಂದು ಭಕ್ತರು ಬ್ರಾಹ್ಮೀ ಮುಹೂರ್ತದಲ್ಲಿ ಎದ್ದು ಸ್ನಾನಾದಿಗಳನ್ನು ಮುಗಿಸಿ, ಭಗವಂತನ ಪೂಜೆ ಮಾಡಬೇಕು. ಈ ದಿನ ಸಾತ್ವಿಕ ಆಹಾರ ಸೇವನೆ ಮಾತ್ರ ಮಾನ್ಯವಾಗಿದ್ದು, ರಜೋ ಮತ್ತು ತಮೋ ಆಹಾರಗಳು ನಿಷಿದ್ಧವಾಗಿರುತ್ತವೆ. ಭಗವಂತನ ಆರಾಧನೆ ಮಾಡುತ್ತಾ, ಸಾಧ್ಯವಾದರೆ ಕನಿಷ್ಠ ಐದು ಜನ ನಿರ್ಗತಿಕರಿಗೆ ಅಥವಾ ಅಶಕ್ತರಿಗೆ ಆಹಾರ ದಾನ ಮಾಡಬೇಕು. ಇದರಿಂದ ಪೂರ್ಣ ಫಲ ದೊರೆಯುತ್ತದೆ. ತುಳಸಿಯಿಂದ ವಿಷ್ಣುವನ್ನು ಆರಾಧಿಸುವುದರಿಂದಲೂ ಅತಿ ಹೆಚ್ಚು ಪುಣ್ಯ ಲಭಿಸುತ್ತದೆ. ಕೆಲವರಿಗೆ ಏಕಾದಶಿಯಂದು ವಿಷ್ಣು ದರ್ಶನಕ್ಕೆ ಅವಕಾಶವಾಗದಿದ್ದರೆ, ದ್ವಾದಶಿಯಂದು ದರ್ಶನ ಮಾಡಿದರೂ ಅದರ ಫಲ ದೊರೆಯುತ್ತದೆ. ಕೆಲವು ದೇವಾಲಯಗಳಲ್ಲಿ ಉತ್ತರದ ದ್ವಾರವನ್ನು ದ್ವಾದಶಿಯಂದು ಸಹ ತೆರೆದಿಡಲಾಗುತ್ತದೆ.

ಇದನ್ನೂ ಓದಿ: ವೈಕುಂಠ ಏಕಾದಶಿಯನ್ನು ಮುಕ್ಕೋಟಿ ಏಕಾದಶಿ ಎಂದು ಕರೆಯುವುದೇಕೆ? ಮಾಹಿತಿ ಇಲ್ಲಿದೆ

ಈ ಪವಿತ್ರ ದಿನದಂದು ಅನ್ನದಾನ, ಸಂಕಲ್ಪಗಳು ಮತ್ತು ದಾನ ಧರ್ಮಗಳನ್ನು ಕೈಗೊಳ್ಳಲು ಬಹಳ ವಿಶೇಷ ಕಾಲ ಇದಾಗಿದೆ. ಕೇವಲ ವಿಷ್ಣುವಿನ ಅನುಗ್ರಹವಷ್ಟೇ ಅಲ್ಲದೆ, 33 ಕೋಟಿ ದೇವತೆಗಳ ಅನುಗ್ರಹವೂ ಸಹ ಈ ದಿನ ಲಭಿಸುತ್ತದೆ. ಸಂತೃಪ್ತಿಯಿಂದ ಮತ್ತು ಸಂತೋಷದಿಂದ ನಿರ್ಗತಿಕರಿಗೆ ಸಹಾಯ ಮಾಡುವುದು, ಅನ್ನದಾನ ಮಾಡುವುದರಿಂದ ಭಕ್ತರಿಗೆ ಬಹಳಷ್ಟು ಶುಭವಾಗುತ್ತದೆ. ಮುಕ್ಕೋಟಿ ಏಕಾದಶಿಗೆ ಎಷ್ಟು ಪ್ರಾಶಸ್ತ್ಯವಿದೆಯೋ, ಮುಕ್ಕೋಟಿ ದ್ವಾದಶಿಗೂ ಅಷ್ಟೇ ಪ್ರಾಶಸ್ತ್ಯವಿದೆ. ಸೂರ್ಯೋದಯದಿಂದ ಸೂರ್ಯಾಸ್ತದ ತನಕ ಓಂ ನಮೋ ವೆಂಕಟೇಶಾಯ ಎಂಬ ಮಂತ್ರವನ್ನು ನಿರಂತರವಾಗಿ ಜಪಿಸುವುದರಿಂದ ಉತ್ತಮ ಫಲಗಳು ಪ್ರಾಪ್ತವಾಗುತ್ತವೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವೇದಿಕೆ ಏರಿದ ಮಾಳು ವಿರುದ್ಧ ಸೇಡು ತೀರಿಸಿಕೊಂಡ ಗಿಲ್ಲಿ ಫ್ಯಾನ್ಸ್; ಭಾರೀ ಮುಜುಗರ – Kannada News | Bigg Boss Kannada 12: Malu Nipanal Trolled by Gilli Fans Over Controversial Statements

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಮೂರು ತಿಂಗಳು ಇದ್ದು ಮಾಳು ನಿಪನಾಳ ಅವರು ಎಲಿಮಿನೇಟ್ ಆಗಿದ್ದಾರೆ. ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನ ಸಾಕಷ್ಟು ಸೈಲೆಂಟ್ ಆಗಿದ್ದರು. ಬಿಗ್ ಬಾಸ್​ನಿಂದ ಹೊರ ಬರುತ್ತಿದ್ದಂತೆ ಅವರು ಮಾತು ಆರಂಭಿಸಿದ್ದಾರೆ. ಈ ಮಾತುಗಳು ಸಾಕಷ್ಟು ಚರ್ಚೆಗೆ ಕಾರಣ ಆಗಿವೆ. ಈಗ ಮಾಳು ವಿರುದ್ಧ ಗಿಲ್ಲಿ (Gilli) ಫ್ಯಾನ್ಸ್ ಸೇಡು ತೀರಿಸಿಕೊಂಡಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ಗಿಲ್ಲಿಗೆ ಇರೋ ಫ್ಯಾನ್ ಕ್ರೇಜ್ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರನ್ನು ದೊಡ್ಡ ವರ್ಗ ಆರಾಧಿಸುತ್ತದೆ. ಹೊರಗೆ ಬಂದ ಮಾಳುಗೆ ಈ ಕ್ರೇಜ್ ಬಗ್ಗೆ ತಿಳಿದಂತೆ ಇದೆ. ಅವರು ಸಂದರ್ಶನಗಳಲ್ಲಿ ‘ಯಾರೇ ಗೆದ್ದರೂ ಅದನ್ನು ಒಪ್ಪಿಕೊಳ್ಳಲ್ಲ’ ಎಂದಿದ್ದರು. ಅಲ್ಲದೆ ಬಿಗ್ ಬಾಸ್ ಮನೆಯಲ್ಲಿ ಇರುವ ಯಾರೊಬ್ಬರೂ ಈ ಬಾರಿ ಕಪ್​​ಗೆ ಅರ್ಹರಲ್ಲ ಎಂದಿದ್ದರು.

ಇಷ್ಟಕ್ಕೆ ನಿಂತಿಲ್ಲ, ‘ತಾವೇ ಈ ಬಾರಿ ಕಪ್ ಗೆಲ್ಲಬೇಕಿತ್ತು’ ಎಂಬರ್ಥದಲ್ಲೂ ಮಾಳು ಅವರು ಮಾತನಾಡಿದ್ದರು. ಈ ಎಲ್ಲಾ ವಿಡಿಯೋಗಳು ವೈರಲ್ ಆಗಿವೆ. ಅವರನ್ನು ಸಾಕಷ್ಟು ಟ್ರೋಲ್ ಮಾಡಲಾಗುತ್ತಿದೆ. ಹೀಗಿರುವಾಗಲೇ ಅವರು ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಅಲ್ಲಿ ಅವರು ಭಾರೀ ಮುಜುಗರ ಅನುಭವಿಸಿದ್ದಾರೆ.

ಮಾಳು ವೇದಿಕೆ ಏರುತ್ತಿದ್ದಂತೆ ಎಲ್ಲರೂ ‘ಗಿಲ್ಲಿ ಗಿಲ್ಲಿ’ ಎಂದು ಕೂಗಿದ್ದಾರೆ. ಈ ಮೂಲಕ ಮಾಳು ವಿರುದ್ಧ ಸೇಡು ತೀರಿಸಿಕೊಂಡಿದ್ದಾರೆ. ಸಾಮಾನ್ಯವಾಗಿ, ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಅವರು ವೇದಿಕೆ ಏರಿದರೆ ಅವರದ್ದೇ ಹೆಸರನ್ನು ಕೂಗಲಾಗುತ್ತದೆ. ಆದರೆ, ಈ ವಿಷಯದಲ್ಲಿ ಮಾತ್ರ ಬೇರೆಯೇ ಆಗಿದೆ. ಈ ವಿಡಿಯೋ ವೈರಲ್ ಆಗುತ್ತಿದೆ.

ಇದನ್ನೂ ಓದಿ: ‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್

‘ನನ್ನ ಎಲಿಮಿನೇಷನ್​​ನಿಂದ ಉತ್ತರ ಕರ್ನಾಟಕ ಅಳುತ್ತಿದೆ’ ಎಂದು ಮಾಳು ಹೇಳಿದ್ದರು. ಈ ವಿಷಯ ಸಾಕಷ್ಟು ಟ್ರೋಲ್ ಆಗಿತ್ತು. ಮಾಳು ಆ ರೀತಿ ಮಾತನಾಡಿದ್ದು ತಪ್ಪು ಎಂದು ಅನೇಕರು ಹೇಳಿದ್ದರು. ಈಗ ಅವರು ಹೋದಲ್ಲಿ ಬಂದಲ್ಲಿ ಗಿಲ್ಲಿ ಹೆಸರನ್ನು ಕೇಳಬೇಕಾದ ಪರಿಸ್ಥಿತಿ ಬಂದರೂ ಅಚ್ಚರಿ ಏನಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ – Kannada News | Sleeper Bus Crash on Bengaluru–Chennai Highway Near Anekal Leaves Four Seriously Injured

ಆನೇಕಲ್, ಡಿಸೆಂಬರ್ 31: ಆನೇಕಲ್ ತಾಲೂಕಿನ ಚಂದಾಪುರ ಫ್ಲೈಓವರ್ ಮೇಲೆ ಎರಡು ಸ್ಲೀಪರ್ ಕೋಚ್ ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಚೆನ್ನೈ ಕಡೆಗೆ ಹೊರಟಿದ್ದ ಎರಡು ಸ್ಲೀಪರ್ ಬಸ್‌ಗಳು ಬೆಂಗಳೂರು–ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಂದಾಪುರದ ಬಳಿ ಡಿಕ್ಕಿ ಹೊಡೆದಿವೆ. ಮುಂಬದಿ ಸಾಗುತ್ತಿದ್ದ ಸ್ಲೀಪರ್ ಬಸ್‌ಗೆ ಹಿಂಬದಿಯಿಂದ ಮತ್ತೊಂದು ಸ್ಲೀಪರ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಅತಿವೇಗದ ಚಾಲನೆಯಿಂದ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಅಪಘಾತದಲ್ಲಿ ಎರಡೂ ಬಸ್‌ಗಳು ತೀವ್ರವಾಗಿ ಜಖಂಗೊಂಡಿವೆ.

ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ಪರಿಣಾಮ ಬೆಂಗಳೂರು–ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು. ಘಟನೆ ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್ – Kannada News | Andries Gous slams the highest individual score in ILT20

ಅಬುಧಾಬಿಯಲ್ಲಿ ನಡೆದ ಇಂಟರ್​ನ್ಯಾಷನಲ್ ಲೀಗ್ ಟಿ20 ಟೂರ್ನಿಯ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಆಂಡ್ರೀಸ್ ಗೌಸ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಶೇಖ್ ಝಾಯೆದ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಡೆಸರ್ಟ್ ವೈಪರ್ಸ್ ಹಾಗೂ ಎಂಐ ಎಮಿರೇಟ್ಸ್ ತಂಡಗಳು ಮುಖಾಮುಖಿಯಾಗಿದ್ದವು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಎಂಐ ಎಮಿರೇಟ್ಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಡೆಸರ್ಟ್ ವೈಪರ್ಸ್ ಪರ ಇನಿಂಗ್ಸ್ ಆರಂಭಿಸಿದ ಆಂಡ್ರೀಸ್ ಗೌಸ್ 58 ಎಸೆತಗಳಲ್ಲಿ 9 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 120 ರನ್ ಬಾರಿಸಿದರು.

ಈ ಮೂಲಕ ಇಂಟರ್​ನ್ಯಾಷನಲ್ ಲೀಗ್ ಟಿ20 ಟೂರ್ನಿ ಇತಿಹಾಸದಲ್ಲೇ ಗರಿಷ್ಠ ವೈಯುಕ್ತಿಕ ಸ್ಕೋರ್​ಗಳಿಸಿದ ಬ್ಯಾಟರ್ ಎನಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಅಲೆಕ್ಸ್ ಹೇಲ್ಸ್​ ಹೆಸರಿನಲ್ಲಿತ್ತು. 2023 ರಲ್ಲಿ ಹೇಲ್ಸ್ 110 ರನ್​ಗಳಿಸಿದ್ದು ಈವರೆಗಿನ ದಾಖಲೆಯಾಗಿತ್ತು.

ಇದೀಗ 120 ರನ್​ಗಳೊಂದಿಗೆ ಆಂಡ್ರೀಸ್ ಗೌಸ್ ಇಂಟರ್​ನ್ಯಾಷನಲ್ ಲೀಗ್ ಟಿ20 ಟೂರ್ನಿಯಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಶತಕದ ನೆರವಿನೊಂದಿಗೆ ಡೆಸರ್ಟ್ ವೈಪರ್ಸ್ ತಂಡವು 20 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು 233 ರನ್ ಕಲೆಹಾಕಿತು.

ಈ ಕಠಿಣ ಗುರಿ ಬೆನ್ನತ್ತಿದ ಎಂಐ ಎಮಿರೇಟ್ಸ್ ತಂಡವು 20 ಓವರ್​ಗಳಲ್ಲಿ 188 ರನ್​ಗಳಿಸಿ 45 ರನ್​ಗಳಿಂದ ಸೋಲೊಪ್ಪಿಕೊಂಡಿದೆ. ಈ ಗೆಲುವಿನೊಂದಿಗೆ ಡೆಸರ್ಟ್ ವೈಪರ್ಸ್ ತಂಡವು ಇಂಟರ್​ನ್ಯಾಷನಲ್ ಲೀಗ್ ಟಿ20 ಟೂರ್ನಿಯ ಫೈನಲ್​ಗೆ ಪ್ರವೇಶಿಸಿದೆ.

Source link

ಹೊಸ ವರ್ಷಕ್ಕೆ ಜಮ್ಮು-ಕಾಶ್ಮೀರದಲ್ಲಿ ಕಟ್ಟೆಚ್ಚರ, 100ಕ್ಕೂ ಹೆಚ್ಚು ಉಗ್ರರು ಒಳನುಸುಳಲು ಸಂಚು – Kannada News | High Alert in Jammu and Kashmir Ahead of New Year Celebrations

ಶ್ರೀನಗರ, ಡಿಸೆಂಬರ್ 31: ಹೊಸ ವರ್ಷ(New Year)ವನ್ನು ಬರಮಾಡಿಕೊಳ್ಳಲು ಕೆಲವೇ ಕೆಲವು ಗಂಟೆಗಳು ಬಾಕಿ ಉಳಿದಿವೆ. ಜಮ್ಮು ಮತ್ತು ಕಾಶ್ಮೀರದ 740 ಕಿಲೋಮೀಟರ್ ಉದ್ದದ ನಿಯಂತ್ರಣ ರೇಖೆ (ಎಲ್‌ಒಸಿ) ಉದ್ದಕ್ಕೂ ಎಚ್ಚರಿಕೆ ನೀಡಲಾಗಿದೆ. ಗಡಿಯುದ್ದಕ್ಕೂ 60 ಲಾಂಚ್‌ಪ್ಯಾಡ್‌ಗಳಿಂದ ಕಾರ್ಯನಿರ್ವಹಿಸುತ್ತಿರುವ 100 ಕ್ಕೂ ಹೆಚ್ಚು ಭಯೋತ್ಪಾದಕರು ಹೊಸ ವರ್ಷದ ದಿನದಂದು ಒಳನುಸುಳಲು ಪ್ರಯತ್ನಿಸಬಹುದು ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ಈ ಗುಪ್ತಚರ ಮಾಹಿತಿಯ ನಂತರ, ಭಾರತೀಯ ಸೇನೆಯನ್ನು ಹೈ ಅಲರ್ಟ್‌ನಲ್ಲಿ ಇರಿಸಲಾಗಿದೆ. ಸರಿಸುಮಾರು 13,000 ಅಡಿಗಳಷ್ಟು ದೂರದಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದ್ದು, ಬಿಎಸ್‌ಎಫ್ ಸಿಬ್ಬಂದಿ ಹಗಲು ರಾತ್ರಿ ಕಾವಲು ಕಾಯುತ್ತಿದ್ದಾರೆ.

ಹೊಸ ವರ್ಷಕ್ಕೂ ಮುನ್ನ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಮಂಗಳವಾರ ಜಮ್ಮು ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಚೀಲವೊಂದು ಕಾಣಿಸಿಕೊಂಡ ವರದಿ ಭದ್ರತಾ ಸಂಸ್ಥೆಗಳಿಗೆ ಎಚ್ಚರಿಕೆ ನೀಡಿತು. ಚೀಲದ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಮತ್ತು ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರೆದು ಪ್ರಯಾಣಿಕರಿಗೆ ಸುರಕ್ಷಿತ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿದರು.

ಮತ್ತಷ್ಟು ಓದಿ: ಹೊಸ ವರ್ಷಕ್ಕೆ ಕೌಂಟ್​ಡೌನ್: ಖಾಕಿ ಅಲರ್ಟ್​​; ಎಣ್ಣೆ ಏಟಲ್ಲಿ ಎಲ್ಲಾದ್ರೂ ಮಲಗಿದ್ರೆ ಪೊಲೀಸರೇ ಮನೆಗೆ ಬಿಡ್ತಾರೆ!

ಸಾಕಷ್ಟು ಪ್ರಯತ್ನ ಮತ್ತು ತಾಂತ್ರಿಕ ತನಿಖೆಯ ನಂತರ, ಅಧಿಕಾರಿಗಳು ಬ್ಯಾಗ್‌ನಲ್ಲಿ ಯಾವುದೇ ಅನುಮಾನಾಸ್ಪದ ಅಥವಾ ಸ್ಫೋಟಕ ವಸ್ತುಗಳು ಇಲ್ಲ ಎಂದು ದೃಢಪಡಿಸಿದರು. ಪೊಲೀಸರು ಬ್ಯಾಗ್ ಅನ್ನು ವಶಪಡಿಸಿಕೊಂಡು ಹತ್ತಿರದ ಪೊಲೀಸ್ ಠಾಣೆಗೆ ಕೊಂಡೊಯ್ದರು. ಬ್ಯಾಗ್ ಅನ್ನು ಅಲ್ಲಿ ಯಾರು ಬಿಟ್ಟಿದ್ದಾರೆ ಅಥವಾ ಅದು ಆಕಸ್ಮಿಕವಾಗಿ ಬಿಟ್ಟು ಹೋಗಿರುವ ಪ್ರಯಾಣಿಕರ ಸಾಮಾನುಗಳೇ ಎಂಬುದನ್ನು ನಿರ್ಧರಿಸಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

ತನಿಖೆ ಪೂರ್ಣಗೊಂಡ ನಂತರ, ಬಸ್ ನಿಲ್ದಾಣದಲ್ಲಿ ಸಂಚಾರ ಮತ್ತು ಇತರ ಚಟುವಟಿಕೆಗಳು ಪುನರಾರಂಭಗೊಂಡಿವೆ. ಕಾಶ್ಮೀರವು 2025 ಕ್ಕೆ ವಿದಾಯ ಹೇಳಿ 2026 ಅನ್ನು ಸ್ವಾಗತಿಸಲು ಸಜ್ಜಾಗಿದೆ. ಕಣಿವೆಯಲ್ಲಿ ಪ್ರಸ್ತುತ ಹಬ್ಬದ ವಾತಾವರಣವಿದ್ದು, ದೇಶಾದ್ಯಂತದ ಪ್ರವಾಸಿಗರು ಕಾಶ್ಮೀರದ ಜನಪ್ರಿಯ ಪ್ರವಾಸಿ ತಾಣಗಳನ್ನು ತುಂಬುತ್ತಿದ್ದಾರೆ.

ನೀವು ಈ ಆಚರಣೆಯ ಭಾಗವಾಗಲು ಯೋಜಿಸುತ್ತಿದ್ದರೆ, ಜಾಗರೂಕರಾಗಿರಿ, ಏಕೆಂದರೆ ದಾಖಲೆಯ ಜನಸಂದಣಿ ಮತ್ತು ಕೊರೆಯುವ ಚಳಿಯು ನಿಮ್ಮ ಹೊಸ ವರ್ಷದ ಆಚರಣೆಯನ್ನು ಕುಂಠಿತಗೊಳಿಸಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

New Year 2026: ಹೊಸ ವರ್ಷಕ್ಕೆ ನೈಟ್ ಪ್ಲಾನ್ ಇದೆಯಾ? ಬಿಎಂಟಿಸಿ ನೀಡುತ್ತಿದೆ ತಡರಾತ್ರಿಯವರೆಗೂ ಬಸ್ ಸೇವೆ – Kannada News | Bangalore New Year Transport: BMTC Midnight Buses and Metro Extended Services

ಹೊಸ ವರ್ಷಕ್ಕೆ ನೈಟ್ ಪ್ಲಾನ್ ಇದೆಯಾ? ಬಿಎಂಟಿಸಿ ನೀಡುತ್ತಿದೆ ತಡರಾತ್ರಿಯವರೆಗೂ ಬಸ್ ಸೇವೆ

ಬೆಂಗಳೂರು, ಡಿಸೆಂಬರ್ 31: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ) ಸಾರ್ವಜನಿಕರಿಗೆ ಕೊಡುಗೆ ನೀಡಿದ್ದು, ಇಂದು (ಡಿಸೆಂಬರ್ 31) ತಡರಾತ್ರಿಯವರೆಗೂ ನಗರದ ಸಾರ್ವಜನಿಕರ ಪ್ರಯಾಣಕ್ಕೆ ಅನುಕೂಲವಾಗುವಂತೆ ಎಂ.ಜಿ. ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ವಿಶೇಷ ಮಧ್ಯರಾತ್ರಿ ಬಸ್ ಸೇವೆಗಳನ್ನು ಘೋಷಿಸಿದೆ. ನ್ಯೂ ಇಯರ್ ಪ್ರಯುಕ್ತ ಇಂದು ರಾತ್ರಿ 11 ಗಂಟೆಯಿಂದ ಜನವರಿ 1ರ ಬೆಳಗಿನ ಜಾವ 2 ಗಂಟೆಯವರೆಗೆ ವಿಶೇಷ ಬಸ್ ಸೇವೆಗಳು ಕಾರ್ಯನಿರ್ವಹಿಸಲಿದ್ದು, ಪ್ರಯಾಣಿಕರ ಬೇಡಿಕೆ ಹೆಚ್ಚಾದಲ್ಲಿ ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸಲಾಗುವುದೆಂದು ಬಿಎಂಟಿಸಿ ತಿಳಿಸಿದೆ.

ಎಂ.ಜಿ. ರಸ್ತೆ ಮತ್ತು ಬ್ರಿಗೇಡ್ ರಸ್ತೆಯಿಂದ ನೇರ ಸೇವೆಗಳು

ವಿಶೇಷ ಬಸ್‌ಗಳು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣ ಮತ್ತು ಬ್ರಿಗೇಡ್ ರಸ್ತೆಯಿಂದ ಹೊರಟು ಬೆಂಗಳೂರಿನ ಪ್ರಮುಖ ಪ್ರದೇಶಗಳಾದ ಎಲೆಕ್ಟ್ರಾನಿಕ್ಸ್ ಸಿಟಿ ಪೂರ್ವ, ಜಿಗಣಿ, ಸರ್ಜಾಪುರ, ಕೆಂಗೇರಿ ಕೆಎಚ್‌ಬಿ ಕ್ವಾರ್ಟರ್ಸ್, ಜನಪ್ರಿಯ ಟೌನ್‌ಶಿಪ್, ನೆಲಮಂಗಲ, ಯಲಹಂಕ (ಉಪನಗರ 5ನೇ ಹಂತ ಸೇರಿ), ಬಾಗಲೂರು, ಹೊಸಕೋಟೆ, ಚನ್ನಸಂದ್ರ, ಕಾಡುಗೋಡಿ, ಬನಶಂಕರಿ, ಜೀವನ್ ಭೀಮಾನಗರ ಸೇರಿದಂತೆ ಹಲವೆಡೆಗೆ ಬಸ್ ಸಂಚಾರ ಇರಲಿದೆ. ಈ ಕಾರಿಡಾರ್‌ಗಳಿಗೆ ಜಿ-ಸರಣಿ ಹಾಗೂ ನಿಯಮಿತ ಮಾರ್ಗದ ಬಸ್‌ಗಳನ್ನು ಮೀಸಲಿಡಲಾಗಿದೆ.

ಮಾರ್ಗ ಮತ್ತು ಬಸ್ ಸಂಖ್ಯೆಗಳ ವಿವರ

ಬ್ರಿಗೇಡ್ ರಸ್ತೆಯಿಂದ

  • ಎಲೆಕ್ಟ್ರಾನಿಕ್ಸ್ ಸಿಟಿ – ಜಿ-3
  • ಜಿಗಣಿ – ಜಿ-4

ಎಂ.ಜಿ. ರಸ್ತೆ ಮೆಟ್ರೊ ನಿಲ್ದಾಣದಿಂದ:

  •  ಸರ್ಜಾಪುರ – ಜಿ-2
  •  ಕೆಂಗೇರಿ ಕೆಎಚ್‌ಬಿ ಕ್ವಾರ್ಟರ್ಸ್ – ಜಿ-6
  •  ಜನಪ್ರಿಯ ಟೌನ್‌ಶಿಪ್ – ಜಿ-7
  •  ನೆಲಮಂಗಲ – ಜಿ-8
  •  ಯಲಹಂಕ ಉಪನಗರ 5ನೇ ಹಂತ – ಜಿ-9
  •  ಯಲಹಂಕ – ಜಿ-10
  •  ಬಾಗಲೂರು – ಜಿ-11
  •  ಹೊಸಕೋಟೆ – 317-ಜಿ
  •  ಚನ್ನಸಂದ್ರ / ಕಾಡುಗೋಡಿ – ಎಸ್‌ಬಿಎಸ್‌-13ಕೆ
  •  ಬನಶಂಕರಿ – 13 ಗೆ ಬಸ್​ಗಳು ಸಂಚರಿಸಲಿವೆ.

ಇದನ್ನೂ ಓದಿ New Year 2026: ಹೊಸ ವರ್ಷಾಚರಣೆಗೆ ಗುಡ್ ನ್ಯೂಸ್: ತಡರಾತ್ರಿ ವರೆಗೂ ಇರುತ್ತೆ ನಮ್ಮ ಮೆಟ್ರೋ ರೈಲು ಸಂಚಾರ!

ವಿಶೇಷ ಮೆಟ್ರೋ ಸೇವೆ

ಇದೇ ವೇಳೆ, ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳುವವರ ಅನುಕೂಲಕ್ಕಾಗಿ ನಮ್ಮ ಮೆಟ್ರೋ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಸೇವಾ ಅವಧಿಯನ್ನು ವಿಸ್ತರಿಸಿದೆ. ಡಿಸೆಂಬರ್ 31ರ ರಾತ್ರಿ 11 ಗಂಟೆಯಿಂದ ಜನವರಿ 1ರ ತಡರಾತ್ರಿ 2 ಗಂಟೆಯವರೆಗೆ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣವನ್ನು ಭದ್ರತಾ ಕಾರಣಗಳಿಂದ ತಾತ್ಕಾಲಿಕವಾಗಿ ಬಂದ್ ಮಾಡಲಾಗುತ್ತದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ವಾಚ್ ಟವರ್‌, ಹೀಟ್ ಮ್ಯಾಪ್, ಚೆನ್ನಮ್ಮ ಪಡೆ: ಹೊಸ ವರ್ಷಾಚರಣೆಗೆ ಬೆಂಗಳೂರಿನ ಎಲ್ಲೆಡೆ ಪೊಲೀಸ್ ಬಂದೋಬಸ್ತ್ – Kannada News | Bengaluru New Year 2026: Watch Towers, Heat Maps and 20000 Cops Deployed for Citywide Security

ಹೊಸ ವರ್ಷಾಚರಣೆಗೆ ಬೆಂಗಳೂರಿನ ಎಲ್ಲೆಡೆ ಪೊಲೀಸ್ ಬಂದೋಬಸ್ತ್

ಬೆಂಗಳೂರು, ಡಿಸೆಂಬರ್ 31: ಹೊಸ ವರ್ಷವನ್ನು ಸ್ವಾಗತಿಸಲು ಬೆಂಗಳೂರು (Bangalore) ಸಜ್ಜಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಮತ್ತು ಚರ್ಚ್ ಸ್ಟ್ರೀಟ್‌ನಂತಹ ಪ್ರಮುಖ ಕೇಂದ್ರಗಳು ದೀಪಾಲಂಕಾರದಿಂದ ಜಗಮಗಿಸುತ್ತಿವೆ. ಈ ಪ್ರದೇಶಗಳು ಮತ್ತು ಕೋರಮಂಗಲ ಸೇರಿದಂತೆ ಹೆಚ್ಚು ಜನಸಂದಣಿ ನಿರೀಕ್ಷಿತ ಸ್ಥಳಗಳಲ್ಲಿ ಪೊಲೀಸರು ಅತ್ಯಂತ ಹೆಚ್ಚಿನ ನಿಗಾ ವಹಿಸಿದ್ದಾರೆ. ನಗರದಾದ್ಯಂತ ಸುಮಾರು 20,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ರಸ್ತೆಗಳ ಎರಡೂ ಬದಿಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದ್ದು, 6,000ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾಗಳ ಮೂಲಕ ನಿರಂತರ ಕಣ್ಗಾವಲು ಇರಿಸಲಾಗಿದೆ.

ಪ್ರಮುಖ ರಸ್ತೆಗಳಲ್ಲಿ ವಾಚ್‌ಟವರ್‌

ಪ್ರಮುಖ ರಸ್ತೆಗಳಲ್ಲಿ ವಾಚ್‌ಟವರ್‌ಗಳನ್ನು ನಿರ್ಮಿಸಿ ಪೊಲೀಸರು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಿದ್ದಾರೆ. ಕುಡಿದು ವಾಹನ ಚಲಾಯಿಸುವುದನ್ನು ತಡೆಯಲು 66 ಡ್ರಿಂಕ್ ಅಂಡ್ ಡ್ರೈವ್ ಚೆಕ್ ಪಾಯಿಂಟ್‌ಗಳನ್ನು ಸ್ಥಾಪಿಸಲಾಗಿದೆ ಮತ್ತು 92 ವೀಲಿಂಗ್ ಸ್ಪಾಟ್‌ಗಳನ್ನು ಗುರುತಿಸಲಾಗಿದೆ.

ಭದ್ರತೆಗಾಗಿ ಬೆಂಗಳೂರು ನಗರದ ಹಲವೆಡೆ ವಾಚ್ ಟವರ್‌ಗಳ ನಿಯೋಜನೆ ಮಾಡಲಾಗಿದೆ. ಸುರಕ್ಷಿತ ವಲಯಗಳ ಗುರುತಿಸುವಿಕೆ ಹಾಗೂ ಹೀಟ್ ಮ್ಯಾಪ್ ವ್ಯವಸ್ಥೆ (ಕಲರ್ ಕೋಡೆಡ್ ವಿಶ್ಯುಯಲ್ ಟೂಲ್​ ಆಧಾರಿತ ಭದ್ರತಾ ವ್ಯವಸ್ಥೆ. ಇದು ಪೊಲೀಸರಿಗೆ ಹೆಚ್ಚಿನ ಚಟುವಟಿಕೆ ಇರುವ ಪ್ರದೇಶಗಳನ್ನು ಗುರುತಿಸಲು ನೆರವಾಗುತ್ತದೆ.) ಮಾಡಲಾಗಿದೆ.

ಮಹಿಳಾ ಸುರಕ್ಷತೆಗೆ ಚೆನ್ನಮ್ಮ ಪಡೆ

ಮಹಿಳಾ ಸುರಕ್ಷತೆಗೆ ಹೆಚ್ಚಿನ ಕ್ರಮ ಕೈಗೊಳ್ಳಲಾಗಿದ್ದು ಕ್ಯೂಆರ್‌ಟಿ, ಚೆನ್ನಮ್ಮ ಪಡೆ ಸೇರಿ ವಿಶೇಷ ಪೊಲೀಸ್ ಪಡೆ ನಿಯೋಜನೆ ಮಾಡಲಾಗುತ್ತದೆ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ, ಲೇಡಿ ಡಿ.ಸಿ.ಪಿ. ಶ್ರೇಣಿಯ ಅಧಿಕಾರಿಗಳು ಸಹ ನಿಯೋಜಿತರಾಗಿದ್ದಾರೆ. ಕ್ಯೂಆರ್ ಕೋಡ್ ಮೂಲಕ ಮಹಿಳಾ ಸಹಾಯವಾಣಿ ಕೇಂದ್ರಗಳ ಕುರಿತು ಮಾಹಿತಿ ನೀಡಲಾಗುತ್ತಿದೆ.

ಮಹಿಳಾ ಬೌನ್ಸರ್ಸ್ ನಿಯೋಜನೆ

ವುಮೆನ್ ಬೌನ್ಸರ್​ಗಳನ್ನೂ ಸಹ ನಿಯೋಜಿಸಲಾಗಿದೆ. ಅಸ್ವಸ್ಥರಾದವರಿಗೆ ಸುರಕ್ಷತೆ ಒದಗಿಸಲು ಸೇಫ್ಟಿ ಐಲ್ಯಾಂಡ್‌ಗಳನ್ನು ನಿರ್ಮಿಸಲಾಗಿದ್ದು, ವುಮೆನ್ ಶೆಲ್ಟರ್‌ಗಳಲ್ಲಿ ಮಹಿಳಾ ಸಿಬ್ಬಂದಿ ಮತ್ತು ಆರೋಗ್ಯ ಸಿಬ್ಬಂದಿ ಲಭ್ಯವಿರುತ್ತಾರೆ. 112 ತುರ್ತು ಸೇವೆಗೆ ಕರೆ ಬಂದ ತಕ್ಷಣ ದ್ವಿಗುಣ ಬಲದೊಂದಿಗೆ ಸ್ಪಂದಿಸಲು ವ್ಯವಸ್ಥೆ ಮಾಡಲಾಗಿದೆ. ಅಗ್ನಿಶಾಮಕ ದಳ ಮತ್ತು ಅಬಕಾರಿ ಇಲಾಖೆಗಳೊಂದಿಗೆ ಜಂಟಿ ತಪಾಸಣೆ ನಡೆಸಲಾಗಿದೆ.

ಬೆಂಗಳೂರು ಪೊಲೀಸ್ ಆಯುಕ್ತರಿಂದ ಭದ್ರತಾ ಪರಿಶೀಲನೆ

ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಡಿಸೆಂಬರ್ 30ರ ರಾತ್ರಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದ್ದು, ಜನಸಂದಣಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಜನರನ್ನು ಪದೇ ಪದೇ ಪ್ರಮುಖ ರಸ್ತೆಗಳಲ್ಲಿ ಅಡ್ಡಾಡಲು ಬಿಡುವುದಿಲ್ಲ, ಬದಲಾಗಿ ಹೋಟೆಲ್, ಪಬ್ ಮತ್ತು ರೆಸ್ಟೋರೆಂಟ್‌ಗಳಂತಹ ನಿರ್ದಿಷ್ಟ ಸ್ಥಳಗಳಿಗೆ ತೆರಳಲು ಅವಕಾಶ ನೀಡಲಾಗುವುದು ಎಂದಿದ್ದಾರೆ. ಸ್ಥಳೀಯ ಶಾಸಕ ಎನ್.ಎ. ಹ್ಯಾರಿಸ್ ಅವರು ಬ್ರಿಗೇಡ್ ರಸ್ತೆಗೆ ಭೇಟಿ ನೀಡಿ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ. ಅವರು ಜನರಿಗೆ ಶಿಸ್ತುಬದ್ಧವಾಗಿ ಸಂಭ್ರಮಿಸಲು ಕರೆ ನೀಡಿದ್ದು, ಪೊಲೀಸರ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮನವಿ ಮಾಡಿದ್ದಾರೆ. ಪೊಲೀಸ್ ಕಣ್ಗಾವಲು ವ್ಯವಸ್ಥೆ ಎಲ್ಲವನ್ನೂ ದಾಖಲಿಸುತ್ತಿದ್ದು, ಯಾವುದೇ ತಪ್ಪು ಮಾಡಿದರೆ ನಂತರವೂ ಪತ್ತೆಹಚ್ಚಲು ಸಾಧ್ಯ ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಭಾರಿ ಬಂದೋಬಸ್ತ್, ಎಲ್ಲೆಡೆ ಖಾಕಿ ಹದ್ದಿನಕಣ್ಣು

ಮುಂಜಾಗ್ರತಾ ಕ್ರಮವಾಗಿ, ಬೆಂಗಳೂರು ದಕ್ಷಿಣ ಜಿಲ್ಲೆಯ ಕೆಲವು ಪ್ರವಾಸಿ ತಾಣಗಳಾದ ಶ್ರೀರಾಮದೇವರ ಬೆಟ್ಟ, ಸಂಗಮ, ಮೇಕೆದಾಟು ಮತ್ತು ಚುಂಚಿ ಫಾಲ್ಸ್‌ಗಳಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಜಿಲ್ಲಾಧಿಕಾರಿ ಯಶ್ವಂತ್ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಜನವರಿ 1 ರ ಬೆಳಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ ಈ ತಾಣಗಳಿಗೆ ಭೇಟಿ ನೀಡಲು ಅವಕಾಶವಿರುವುದಿಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link