Category Archives: Blog

Your blog category

ಮೂರು ತಿಂಗಳಲ್ಲಿ 80,000 ಟೆಕ್ಕಿಗಳ ಲೇ ಆಫ್; ಮುಂದೈತೆ ಇನ್ನೂ ದೊಡ್ಡ ಬಲಿ

ಮೂರು ತಿಂಗಳಲ್ಲಿ 80,000 ಟೆಕ್ಕಿಗಳ ಲೇ ಆಫ್; ಮುಂದೈತೆ ಇನ್ನೂ ದೊಡ್ಡ ಬಲಿ

ನವದೆಹಲಿ, ಏಪ್ರಿಲ್ 9: ಎಐ ಬೆಳವಣಿಗೆ ಮತ್ತು ಅಳವಡಿಕೆಯ ಫಲ ಪೂರ್ಣವಾಗಿ ಸಿಗುವಂತಾಗಲು ಬಹಳ ದಿನಗಳು ಬೇಕು. ಆದರೆ, ಈಗಲೇ ಹಲವು ಟೆಕ್ ಕಂಪನಿಗಳು ಲೇ ಆಫ್​ಗೆ ತೊಡಗಿವೆ. ಜಾಗತಿಕ ತಂತ್ರಜ್ಞಾನ ಕ್ಷೇತ್ರದ ಸಂಸ್ಥೆಗಳು ಈ ವರ್ಷದ ಮೊದಲ ಕ್ವಾರ್ಟರ್​ನಲ್ಲಿ (ಜನವರಿ-ಮಾರ್ಚ್) 80,000 ಉದ್ಯೋಗಿಗಳನ್ನು ಮನೆಗೆ ಕಳುಹಿಸಿವೆ. ರ್ಯಾಷನಲ್ ಎಫ್​ಎಕ್ಸ್ (RationalFX) ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ, ಜನವರಿ 1ರಿಂದ ಏಪ್ರಿಲ್ 1ರವರೆಗೆ 78,557 ಮಂದಿಯನ್ನು ಲೇ ಆಫ್ (Lay offs) ಮಾಡಲಾಗಿದೆ. ಇದು ಅಧಿಕೃತವಾಗಿ ಲೇ ಆಫ್ ಆಗಿರುವಂಥದ್ದು. ಇದರಲ್ಲಿ ಹೆಚ್ಚಿನ ಪರಿಣಾಮ ಬಿದ್ದಿರುವುದು ಅಮೆರಿಕದ ಮೇಲೆ.

ಕುತೂಹಲದ ಸಂಗತಿ ಎಂದರೆ ಈ ಹತ್ತಿರಹತ್ತಿರ 80,000 ಲೇಆಫ್ ಪ್ರಕರಣಗಳಲ್ಲಿ ಅರ್ಧದಷ್ಟು ಉದ್ಯೋಗಗಳು ಎಐ ಮತ್ತು ಆಟೊಮೇಶನ್ ಅಳವಡಿಕೆಯ ಪರಿಣಾಮದಿಂದ ಆಗಿರುವಂಥದ್ದು. ಆದರೆ, ಉದ್ಯೋಗ ಕ್ಷೇತ್ರದಲ್ಲಿ ಎಐನ ನಿಜವಾದ ಪರಿಣಾಮ ಇನ್ನೂ ಹೆಚ್ಚಿನ ಮಟ್ಟದಲ್ಲಿರುತ್ತದಂತೆ. ಈಗ ಲೇ ಆಫ್ ಆಗಿರುವುದು ಒಂದು ಸಣ್ಣ ಸ್ಯಾಂಪಲ್ ಮಾತ್ರ. ಮುಂಬರುವ ದಿನಗಳಲ್ಲಿ ಉದ್ಯೋಗ ಮಾರುಕಟ್ಟೆಯಲ್ಲಿ ದೊಡ್ಡ ಸಂಚಲನವೇ ಸೃಷ್ಟಿಯಾಗಬಹುದು ಎಂದು ಪರಿಣಿತರು ಎಚ್ಚರಿಸುತ್ತಿದ್ದಾರೆ.

ಇದನ್ನೂ ಓದಿ: ಧೋಬಿ ಎಲ್ಲಿ ಡೈಮಂಡ್ ಡೀಲ್ಸ್ ಎಲ್ಲಿ? ಬಟ್ಟೆ ಒಗೆಯುವವನಿಗೆ 598 ಕೋಟಿ ರೂ ಟ್ಯಾಕ್ಸ್ ನೋಟೀಸ್ ಬಂದಿದ್ದು ಯಾಕೆ?

ಎಐ ನೆಪದಲ್ಲಿ ಲೇ ಆಫ್ ಮಾಡಲಾಗುತ್ತಿದೆಯಾ?

ಲೇ ಆಫ್ ಟ್ರೆಂಡ್ ಕೋವಿಡ್ ಕಾಲಘಟ್ಟದಿಂದ ಹೆಚ್ಚಾಗಿದೆ. ಟೆಕ್ ಕಂಪನಿಗಳು ನಿಯಮಿತವಾಗಿ ಉದ್ಯೋಗಿಗಳ ಸಂಖ್ಯೆ ಇಳಿಸುತ್ತಿದೆ. ಈಗ ಎಐ ನೆಪವೊಡ್ಡಿ ಲೇ ಆಫ್ ಮಾಡಲಾಗುತ್ತಿದೆಯಾ? ಕಾಗ್ನೈಸೆಂಟ್​ನಲ್ಲಿ ಮುಖ್ಯ ಎಐ ಆಫೀಸರ್ ಆಗಿರುವ ಬಾಬಕ್ ಹಾಡ್​ಜಾಟ್ ಅವರು ಹೀಗೊಂದು ಅನುಮಾನಪಟ್ಟಿದ್ದಾರೆ.

ಎಐ ಈಗಷ್ಟೇ ಅಳವಡಿಕೆ ಆಗುತ್ತಿದೆ. ಅದರಿಂದ ಉತ್ಪಾದನೆ ಹೆಚ್ಚಳ ಶುರುವಾಗಲು ಹಲವು ತಿಂಗಳುಗಳೇ ಬೇಕು. ಕಂಪನಿಗಳು ಈ ಎಐ ಮತ್ತು ಆಟೊಮೇಶನ್ ನೆಪವೊಡ್ಡಿ ಈಗಲೇ ಉದ್ಯೋಗಿಗಳನ್ನು ತೆಗೆಯುತ್ತಿದ್ದಾರೆ ಎಂದು ಅವರು ಶಂಕಿಸಿದ್ದಾರೆ.

ಕಾಗ್ನೈಸೆಂಟ್ ಕಂಪನಿಯ ಶೇ. 70ರಷ್ಟು ಉದ್ಯೋಗಿಗಳು ಭಾರತದಲ್ಲಿದ್ದಾರೆ. ಬೆಮಗಳೂರಿನಲ್ಲಿ ಇದರ ಎಐ ಲ್ಯಾಬೊರೇಟರಿಗಳನ್ನು ತೆರೆಯಲಾಗಿದೆ. ಇಲ್ಲಿ ಎಐ ಏಜೆಂಟ್​ಗಳು ಸೇರಿದಂತೆ ಹೊಸ ಅಡ್ವಾನ್ಸ್ಡ್ ಟೂಲ್​ಗಳನ್ನು ತಯಾರಿಸುವ ಕಾರ್ಯವಾಗುತ್ತಿದೆ. ವಿವಿಧ ಉದ್ದಿಮೆಗಳಿಗೆ ಉತ್ಪನ್ನಶೀಲತೆ ಹೆಚ್ಚಿಸಲು ಈ ಎಐ ಪರಿಕರಗಳು ನೆರವಾಗಲಿವೆ.

ಇದನ್ನೂ ಓದಿ: ಬೇರೆಯವರ ಪ್ಯಾನ್ ಕಾರ್ಡ್ ದಾಖಲೆ ಬಳಸಿ ಸಾಲ ಸೂರೆಗೊಂಡ ವಂಚಕರು; ನಿಮ್ಮ ಪ್ಯಾನ್ ದುರ್ಬಳಕೆ ಗುರುತಿಸುವುದು ಹೇಗೆ?

ಆಟೊಮೇಶನ್​ನಿಂದ ಉದ್ಯೋಗ ನಶಿಸುವುದಿಲ್ಲ, ಬದಲಾಗಿ ಕೆಲಸದ ಬದಲಾವಣೆ ಆಗಬಹುದು. ಇದು ಕಾಗ್ನೈಸೆಂಟ್​ನ ಚೀಫ್ ಎಐ ಆಫೀಸರ್ ಹೇಳುವ ಮಾತು. ಎಐ ಅಳವಡಿಕೆಯಲ್ಲಿ ಸಕ್ರಿಯವಾಗಿ ತೊಡಗಿರುವ ಕಂಪನಿಯು ತನ್ನ ಉದ್ಯೋಗಿಗಳನ್ನು ಲೇ ಆಫ್ ಮಾಡುವ ಆಲೋಚನೆಯಲ್ಲಿ ಇಲ್ಲ ಎನ್ನುವುದು ಗಮನಾರ್ಹ. ಉದ್ಯೋಗಿಗಳಿಗೆ ಅಗತ್ಯ ಎಐ ಕೌಶಲ್ಯಗಳನ್ನು ನೀಡಿ ಅವರನ್ನು ಹೆಚ್ಚಿನ ಸಂಕೀರ್ಣ ಕೆಲಸಗಳಿಗೆ ಬಳಸಿಕೊಳ್ಳುವುದು ಕಂಪನಿಯ ಗುರಿ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಬಾಗಲಕೋಟೆ ಉಪಚುನಾವಣೆ: ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!

ಬಾಗಲಕೋಟೆ, ಏಪ್ರಿಲ್ 9: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಹಕ್ಕು ಚಲಾಯಿಸಲು ಗೋವಾದಲ್ಲಿ ನೆಲೆಸಿದ್ದ ಕರ್ನಾಟಕದ ಮತದಾರರು ವಿಶೇಷ ಆಸಕ್ತಿ ತೋರಿದ್ದಾರೆ. ಕ್ಷೇತ್ರದ ವ್ಯಾಪ್ತಿಯ ಮಾದಾಪುರ ಗ್ರಾಮದ ಸುಮಾರು 70 ರಿಂದ 80 ಮತದಾರರು ಎರಡು ಖಾಸಗಿ ಬಸ್‌ಗಳ ಮೂಲಕ ಗೋವಾದಿಂದ ಸ್ವಗ್ರಾಮಕ್ಕೆ ಆಗಮಿಸಿದ್ದಾರೆ. ಉದ್ಯೋಗಕ್ಕಾಗಿ ಗೋವಾಕ್ಕೆ ವಲಸೆ ಹೋಗಿದ್ದ ಇವರು, ಮಾದಾಪುರ ಗ್ರಾಮದ ಮತಗಟ್ಟೆಗಳಲ್ಲಿ ಉತ್ಸಾಹದಿಂದ ಸರದಿಯಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ.

ಚುನಾವಣೆ ಸಂಬಂಧಿತ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Havan Bhasma Power: ಕೈಯಲ್ಲಿ ಹಣ ನಿಲ್ಲುತ್ತಿಲ್ಲವೇ? ನಿಮ್ಮ ಲಾಕರ್‌ನಲ್ಲಿ ಈ ಒಂದು ವಸ್ತುವನ್ನಿಡಿ

ಹಿಂದೂ ಧರ್ಮದಲ್ಲಿ ಹವನ ಅಥವಾ ಯಜ್ಞ ಎನ್ನುವುದು ಕೇವಲ ಒಂದು ಧಾರ್ಮಿಕ ವಿಧಿ ವಿಧಾನವಲ್ಲ, ಅದು ಪರಿಸರ ಮತ್ತು ಅಂತಃಕರಣವನ್ನು ಶುದ್ಧೀಕರಿಸುವ ಒಂದು ವೈಜ್ಞಾನಿಕ ಪ್ರಕ್ರಿಯೆ. ವೇದ ಮಂತ್ರಗಳ ಘೋಷದ ನಡುವೆ, ಪವಿತ್ರ ಅಗ್ನಿಗೆ ಅರ್ಪಿತವಾದ ದ್ರವ್ಯಗಳು ದಹಿಸಿ ಉಳಿಯುವ ‘ಭಸ್ಮ’ (ಬೂದಿ) ಅಗಾಧವಾದ ದೈವಿಕ ಗುಣಗಳನ್ನು ಹೊಂದಿರುತ್ತದೆ. ಜ್ಯೋತಿಷ್ಯ ಶಾಸ್ತ್ರ ಮತ್ತು ಆಧ್ಯಾತ್ಮದ ಪ್ರಕಾರ, ಈ ಪವಿತ್ರ ಭಸ್ಮವನ್ನು ಸರಿಯಾದ ರೀತಿಯಲ್ಲಿ ಬಳಸುವುದರಿಂದ ಜೀವನದ ಅನೇಕ ಸಂಕಷ್ಟಗಳಿಂದ ಮುಕ್ತಿ ಪಡೆಯಬಹುದು. ಅದರ ಅದ್ಭುತ ಪ್ರಯೋಜನಗಳು ಇಲ್ಲಿವೆ:

ನಕಾರಾತ್ಮಕ ಶಕ್ತಿಗಳ ಸಂಹಾರಕ:

ನಿಮ್ಮ ಮನೆಯಲ್ಲಿ ಅಕಾರಣವಾಗಿ ಕಲಹಗಳು ನಡೆಯುತ್ತಿದ್ದರೆ ಅಥವಾ ಮನೆಯ ಸದಸ್ಯರು ಪದೇ ಪದೇ ಅಸ್ವಸ್ಥರಾಗುತ್ತಿದ್ದರೆ, ಅಲ್ಲಿ ನಕಾರಾತ್ಮಕ ಶಕ್ತಿಗಳ ಪ್ರಭಾವ ಇರಬಹುದು. ಹವನ ಭಸ್ಮವನ್ನು ಮನೆಯ ನಾಲ್ಕೂ ಮೂಲೆಗಳಲ್ಲಿ ಮತ್ತು ಹೊಸ್ತಿಲ ಬಳಿ ಸಿಂಪಡಿಸಿ. ಇದು ದುಷ್ಟ ಶಕ್ತಿಗಳನ್ನು ಹೊರಹಾಕಿ, ಮನೆಯಲ್ಲಿ ಧನಾತ್ಮಕ ಕಂಪನಗಳನ್ನು (Positive Vibrations) ಹೆಚ್ಚಿಸುತ್ತದೆ.

ದೃಷ್ಟಿ ದೋಷಕ್ಕೆ ರಾಮಬಾಣ:

ಮಕ್ಕಳಿಗೆ ಅಥವಾ ವಯಸ್ಕರಿಗೆ ಬೇರೆಯವರ ಕೆಟ್ಟ ದೃಷ್ಟಿ (Evil Eye) ತಗುಲಿ ಆರೋಗ್ಯದಲ್ಲಿ ಏರುಪೇರಾದಾಗ ಭಸ್ಮವು ರಕ್ಷಾ ಕವಚವಾಗಿ ಕೆಲಸ ಮಾಡುತ್ತದೆ. ಪ್ರತಿದಿನ ಸ್ನಾನದ ನಂತರ ಈ ಪವಿತ್ರ ಬೂದಿಯನ್ನು ಹಣೆಯ ಮೇಲೆ ತಿಲಕದಂತೆ ಧರಿಸಿ. ಇದು ಆತ್ಮವಿಶ್ವಾಸವನ್ನು ಹೆಚ್ಚಿಸುವುದಲ್ಲದೆ, ಬಾಹ್ಯ ದೃಷ್ಟಿ ದೋಷಗಳಿಂದ ನಿಮ್ಮನ್ನು ರಕ್ಷಿಸುತ್ತದೆ.

ಆರ್ಥಿಕ ಅಭಿವೃದ್ಧಿ ಮತ್ತು ಸಂಪತ್ತಿನ ವೃದ್ಧಿ:

ವ್ಯಾಪಾರದಲ್ಲಿ ಸತತ ನಷ್ಟ ಅಥವಾ ಎಷ್ಟೇ ದುಡಿದರು ಕೈಯಲ್ಲಿ ಹಣ ನಿಲ್ಲುತ್ತಿಲ್ಲ ಎಂಬ ಕೊರಗು ನಿಮಗಿದ್ದರೆ ಈ ಸಣ್ಣ ಪ್ರಯೋಗ ಮಾಡಿ ನೋಡಿ. ಸ್ವಲ್ಪ ಹವನ ಭಸ್ಮವನ್ನು ಕೆಂಪು ಬಟ್ಟೆಯಲ್ಲಿ ಕಟ್ಟಿ, ನಿಮ್ಮ ಕಚೇರಿಯ ಡ್ರಾಯರ್ ಅಥವಾ ಮನೆಯ ಹಣದ ಲಾಕರ್‌ನಲ್ಲಿ (Tijori) ಇರಿಸಿ. ಇದು ಲಕ್ಷ್ಮಿಯ ಕೃಪೆಗೆ ಪಾತ್ರವಾಗಲು ಮತ್ತು ಧನ ಹರಿವು ಹೆಚ್ಚಲು ಸಹಕಾರಿ ಎಂಬ ನಂಬಿಕೆಯಿದೆ.

ನೆಮ್ಮದಿಯ ನಿದ್ರೆ ಮತ್ತು ದುಃಸ್ವಪ್ನಗಳ ನಿವಾರಣೆ:

ರಾತ್ರಿ ವೇಳೆ ಕೆಟ್ಟ ಕನಸುಗಳು ಬೀಳುತ್ತಿದ್ದರೆ ಅಥವಾ ಅಕಾರಣ ಭಯದಿಂದ ನಿದ್ರೆ ಬರದಿದ್ದರೆ ಭಸ್ಮವು ಮನಸ್ಸನ್ನು ಶಾಂತಗೊಳಿಸುತ್ತದೆ. ಒಂದು ಸಣ್ಣ ಕಾಗದದಲ್ಲಿ ಸ್ವಲ್ಪ ಭಸ್ಮವನ್ನು ಸುತ್ತಿ ದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿ. ಇದು ಮನಸ್ಸಿನ ಆತಂಕವನ್ನು ದೂರ ಮಾಡಿ ಗಾಢ ನಿದ್ರೆಗೆ ಜಾರುವಂತೆ ಮಾಡುತ್ತದೆ.

ವಾಸ್ತು ದೋಷ ಮತ್ತು ದೈಹಿಕ ಶುದ್ಧಿ:

ಮನೆಯಲ್ಲಿ ವಾಸ್ತು ದೋಷವಿದ್ದರೆ ಮನೆಯವರ ಏಳಿಗೆಗೆ ತಡೆಯಾಗಬಹುದು. ಹಾಗೆಯೇ ದೈಹಿಕ ಆಯಾಸವು ಮಾನಸಿಕ ನೆಮ್ಮದಿಯನ್ನು ಕಡಿತಗೊಳಿಸುತ್ತದೆ. ಮನೆಯ ಈಶಾನ್ಯ (North-East) ದಿಕ್ಕಿನಲ್ಲಿ ಹವನ ಭಸ್ಮವನ್ನು ಒಂದು ಸಣ್ಣ ಪಾತ್ರೆಯಲ್ಲಿ ಇಡುವುದರಿಂದ ವಾಸ್ತು ದೋಷದ ಪ್ರಭಾವ ಕಡಿಮೆಯಾಗುತ್ತದೆ.ದೈಹಿಕ ಶುದ್ಧಿಗೆ ಸ್ನಾನ ಮಾಡುವ ನೀರಿಗೆ ಒಂದು ಚಿಟಿಕೆ ಭಸ್ಮವನ್ನು ಸೇರಿಸಿ ಸ್ನಾನ ಮಾಡುವುದರಿಂದ ಶರೀರದ ಮೇಲಿರುವ ನಕಾರಾತ್ಮಕ ಅಂಶಗಳು ದೂರವಾಗಿ ಚೈತನ್ಯ ಲಭಿಸುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಯೋಗೇಶ್ ಗೌಡ ಕೊಲೆ ಪ್ರಕರಣ: ಇಂದಲ್ಲ, ಏಪ್ರಿಲ್​​ 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ

ಬೆಂಗಳೂರು, ಏಪ್ರಿಲ್​​ 09: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತೀರ್ಪನ್ನು ಏಪ್ರಿಲ್ 15ಕ್ಕೆ ಮುಂದೂಡಿದೆ. ಪ್ರಮುಖ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಭವಿಷ್ಯ ಇಂದು ನಿರ್ಧಾರವಾಗುವ ನಿರೀಕ್ಷೆಯಿತ್ತು, ಆದರೆ ತೀರ್ಪು ಸಿದ್ಧಪಡಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ವಿಸ್ತೃತ ಪರಾಮರ್ಶೆಯ ಅಗತ್ಯವಿರುವುದರಿಂದ ಮುಂದೂಡಲಾಗಿದೆ. ವಾದ-ಪ್ರತಿವಾದದ ಸಮಯದಲ್ಲಿ ಎರಡೂ ಕಡೆಯ ವಕೀಲರು ಸಾವಿರಾರು ಪುಟಗಳ ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿದ್ದು, ಪ್ರಕರಣದಲ್ಲಿ ಅನೇಕ ದಾಖಲೆಗಳು ಮತ್ತು ಸಾಕ್ಷ್ಯಗಳಿವೆ. ಇವೆಲ್ಲವನ್ನೂ ಪರಿಶೀಲಿಸಿ, ತೀರ್ಪಿನಲ್ಲಿ ಯಾವುದೇ ಗೊಂದಲಗಳಾಗದಂತೆ ತಿದ್ದುಪಡಿ ಕಾರ್ಯ ನಡೆಯುತ್ತಿದೆ. ಹೀಗಾಗಿ ಏಪ್ರಿಲ್ 15ರಂದು ವಿನಯ್ ಕುಲಕರ್ಣಿ ದೋಷಿ ಅಥವಾ ನಿರ್ದೋಷಿ ಎಂಬುದು ಸ್ಪಷ್ಟವಾಗಲಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

‘ರಾಕಾ’ ಪೋಸ್ಟರ್ ರಿಲೀಸ್ ಬೆನ್ನಲ್ಲೆ Jr NTR ಸಿನಿಮಾದ ನಿರ್ದೇಶಕ ವೈರಲ್ ಆಗಿದ್ದೇಕೆ?

ಅಲ್ಲು ಅರ್ಜುನ್ (Allu Arjun) ನಟಿಸಿ ಅಟ್ಲಿ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾದ ಟೈಟಲ್ ಪೋಸ್ಟರ್ ನಿನ್ನೆಯಷ್ಟೆ ಬಿಡುಗಡೆ ಆಯ್ತು. ಸಿನಿಮಾಕ್ಕೆ ‘ರಾಕಾ’ ಎಂದು ಹೆಸರಿಟ್ಟಿದ್ದು, ಪೋಸ್ಟರ್​​ನಲ್ಲಿ ರಾಕ್ಷಸನ ರೀತಿ ಅಲ್ಲು ಅರ್ಜುನ್ ಕಾಣಿಸಿಕೊಂಡಿದ್ದಾರೆ. ಪೋಸ್ಟರ್ ಬಗ್ಗೆ ಅಲ್ಲು ಅರ್ಜುನ್ ಅಭಿಮಾನಿಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಪೋಸ್ಟರ್ ಬಿಡುಗಡೆ ಆದ ಬಳಿಕ ಜೂ ಎನ್​​ಟಿಆರ್ ಜೊತೆಗೆ ಸಿನಿಮಾ ಮಾಡಿದ್ದ ನಿರ್ದೇಶಕ ಟ್ರೆಂಡ್ ಆಗಲು ಆರಂಭಿಸಿದ್ದು, ಹಠಾತ್ತನೆ ಆ ನಿರ್ದೇಶಕನ ವಿಡಿಯೋಗಳು, ಹಳೆ ಸಂದರ್ಶನಗಳು ವೈರಲ್ ಆಗುತ್ತಿವೆ.

ಜೂ ಎನ್​​ಟಿಆರ್ ‘ಶಕ್ತಿ’ ಹೆಸರಿನ ಸಿನಿಮಾನಲ್ಲಿ ನಟಿಸಿದ್ದರು. ಆ ಸಿನಿಮಾ ಪೌರಾಣಿಕ ಹಿನ್ನೆಲೆಯುಳ್ಳ ಆಕ್ಷನ್ ಸಿನಿಮಾ ಆಗಿತ್ತು. ಸಿನಿಮಾನಲ್ಲಿ ಜೂ ಎನ್​​ಟಿಆರ್ ದ್ವಿಪಾತ್ರದಲ್ಲಿ ನಟಿಸಿದ್ದರು. ದಿವ್ಯ ಶಕ್ತಿ, ದುಷ್ಟ ಶಕ್ತಿ ಹೀಗೇ ಸಾಕಷ್ಟು ಕುತೂಹಲಕಾರಿ ಕತೆಯನ್ನು ಸಿನಿಮಾ ಒಳಗೊಂಡಿತ್ತು. ಆದರೆ ಆ ಸಿನಿಮಾ ಫ್ಲಾಪ್ ಆಯ್ತು. ಫ್ಲಾಪ್ ಆದರೂ ಸಹ ಸಿನಿಮಾ ಕಲ್ಟ್ ಎನಿಸಿಕೊಂಡಿತು. ಹಿಂದಿಗೆ ಡಬ್ ಆಗಿ ಸಾಕಷ್ಟು ಜನ ಮನ್ನಣೆಯನ್ನೂ ಸಹ ಗಳಿಸಿಕೊಂಡಿತು.

ಇದನ್ನೂ ಓದಿ:ಅಲ್ಲು ಅರ್ಜುನ್ ಸಿನಿಮಾ ‘ರಾಕಾ’ ಟೈಟಲ್ ಅರ್ಥವೇನು? ಶುರುವಾಗಿದೆ ಚರ್ಚೆ

‘ಶಕ್ತಿ’ ಸಿನಿಮಾವನ್ನು ಮೆಹರ್ ರಮೇಶ್ ನಿರ್ದೇಶನ ಮಾಡಿದ್ದರು. ಈಗ ಅಲ್ಲು ಅರ್ಜುನ್ ಅವರ ‘ರಾಕಾ’ ಸಿನಿಮಾದ ಪೋಸ್ಟರ್ ಬಿಡುಗಡೆ ಆಗುತ್ತಿದ್ದಂತೆ ಮೆಹರ್ ರಮೇಶ್ ಟ್ರೆಂಡ್ ಆಗುತ್ತಿದ್ದಾರೆ. ಅಲ್ಲು ಅರ್ಜುನ್ ನಟಿಸುತ್ತಿರುವ ಸಿನಿಮಾದ ಹೆಸರು ‘ರಾಕಾ’. ಮೆಹರ್ ರಮೇಶ್ ನಿರ್ದೇಶಿಸಿದ್ದ ‘ಶಕ್ತಿ’ ಸಿನಿಮಾನಲ್ಲಿ ವಿಲನ್ ಹೆಸರು ಸಹ ರಾಕಾ. ರಾಜಮೌಳಿ ನಿರ್ದೇಶನ ಮಾಡುತ್ತಿರುವ ‘ವಾರಣಾಸಿ’ ಸಿನಿಮಾನಲ್ಲಿ ನಾಯಕನ ಹೆಸರು ‘ರುದ್ರ’, ಮೆಹರ್ ನಿರ್ದೇಶಿಸಿದ್ದ ‘ಶಕ್ತಿ’ ಸಿನಿಮಾನಲ್ಲಿ ನಾಯಕನ ಹೆಸರು ಸಹ ರುದ್ರ ಆಗಿತ್ತು. ಇದೇ ಕಾರಣಕ್ಕೆ ಮೆಹರ್ ರಮೇಶ್ ಅವರು ಟ್ರೆಂಡ್ ಆಗುತ್ತಿದ್ದಾರೆ.

‘ರಾಕಾ’ ಸಿನಿಮಾನಲ್ಲಿ ಅಲ್ಲು ಅರ್ಜುನ್ ಅವರದ್ದು ದ್ವಿಪಾತ್ರ ಎನ್ನಲಾಗುತ್ತಿದೆ. ರಾಕ್ಷಸನ ಪಾತ್ರದಲ್ಲಿಯೂ ಅಲ್ಲು ಅರ್ಜುನ್ ನಟಿಸಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾನಲ್ಲಿ ದೀಪಿಕಾ ಪಡುಕೋಣೆ ನಾಯಕಿ. ರಶ್ಮಿಕಾ ಮಂದಣ್ಣ ಸಹ ಸಿನಿಮಾನಲ್ಲಿದ್ದಾರೆ. ಅಟ್ಲಿ ನಿರ್ದೇಶಿಸುತ್ತಿರುವ ಈ ಸಿನಿಮಾಕ್ಕೆ ಕಲಾನಿಧಿ ಮಾರನ್ ಬಂಡವಾಳ ಹೂಡಿದ್ದಾರೆ. ಹಾಲಿವುಡ್​​ನ ಕೆಲವು ಖ್ಯಾತನಾಮ ಸಂಸ್ಥೆಗಳು ಸಿನಿಮಾಕ್ಕಾಗಿ ಕೆಲಸ ಮಾಡಿವೆ. ಸಿನಿಮಾ ಇದೇ ವರ್ಷಾಂತ್ಯಕ್ಕೆ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆ ಆಗುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

RCB vs RR: ಜೋಶ್ ಹೇಝಲ್​ವುಡ್ ಕಣಕ್ಕಿಳಿಯುತ್ತಾರಾ, ಇಲ್ವಾ? ಇಲ್ಲಿದೆ ಮಾಹಿತಿ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19 ರಲ್ಲಿ ಬ್ಯಾಕ್ ಟು ಬ್ಯಾಕ್ ಎರಡು ಭರ್ಜರಿ ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ (RCB) ತಂಡಕ್ಕೆ ಮೂರನೇ ಪಂದ್ಯಕ್ಕೂ ಮುನ್ನ ಆನೆಬಲ ಬಂದಂತಾಗಿದೆ. ಏಕೆಂದರೆ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ವೇಗಿ ಜೋಶ್ ಹೇಝಲ್​ವುಡ್ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.

ಗಾಯದ ಸಮಸ್ಯೆ ಮತ್ತು ಪುನರಾಗಮನ:

ಹ್ಯಾಮ್‌ಸ್ಟ್ರಿಂಗ್ ಮತ್ತು ಅಕಿಲಿಸ್ ಸ್ನಾಯು ಸೆಳೆತದಿಂದಾಗಿ ಜೋಶ್ ಹೇಝಲ್‌ವುಡ್ ಈ ಸೀಸನ್‌ನ ಆರಂಭಿಕ ಪಂದ್ಯಗಳಿಂದ ಹೊರಗುಳಿದಿದ್ದರು. ಇತ್ತೀಚಿನ ವರದಿಗಳ ಪ್ರಕಾರ, ಅವರು ನೆಟ್ಸ್‌ನಲ್ಲಿ ಪೂರ್ಣ ಪ್ರಮಾಣದ ಬೌಲಿಂಗ್ ಅಭ್ಯಾಸ ಆರಂಭಿಸಿದ್ದು, ಪೂರ್ಣ ಫಿಟ್ನೆಸ್ ಮರಳಿಸಿಕೊಂಡಿದ್ದಾರೆ. ಸಿಎಸ್‌ಕೆ ವಿರುದ್ಧದ ಪಂದ್ಯಕ್ಕೇ ಅವರು ಲಭ್ಯರಿರಬೇಕಿತ್ತಾದರೂ, ಮುನ್ನೆಚ್ಚರಿಕೆ ಕ್ರಮವಾಗಿ ಅವರಿಗೆ ವಿಶ್ರಾಂತಿ ನೀಡಲಾಗಿತ್ತು.

ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಿರುವ ಜೋಶ್ ಹೇಝಲ್​ವುಡ್ ಅವರನ್ನು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ. ಅದರಂತೆ ಏಪ್ರಿಲ್ 10 ರಂದು ಗುವಾಹಟಿಯಲ್ಲಿ ನಡೆಯಲಿರುವ ಪಂದ್ಯದ ಮೂಲಕ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ.

ಹೇಝಲ್‌ವುಡ್ ಏಕೆ ಮುಖ್ಯ?

  • ಪವರ್‌ಪ್ಲೇ ನಿಯಂತ್ರಣ: ಈ ಬಾರಿ ಆರ್‌ಸಿಬಿ ಆರಂಭಿಕ ಓವರ್‌ಗಳಲ್ಲಿ ಹೆಚ್ಚು ರನ್ ಬಿಟ್ಟುಕೊಡುತ್ತಿದೆ. ಹೇಝಲ್‌ವುಡ್ ಅವರ ನಿಖರ ಲೈನ್ ಮತ್ತು ಲೆಂತ್ ರನ್ ವೇಗಕ್ಕೆ ಬ್ರೇಕ್ ಹಾಕಬಲ್ಲದು.
  • ಡೆತ್ ಓವರ್‌ಗಳ ಪರಿಣಿತಿ: ಪಂದ್ಯದ ಅಂತಿಮ ಹಂತದಲ್ಲಿ ಯಾರ್ಕರ್ ಮತ್ತು ಬೌನ್ಸರ್‌ಗಳ ಮೂಲಕ ವಿಕೆಟ್ ಪಡೆಯುವ ಕಲೆ ಹೇಝಲ್​ವುಡ್​ಗೆ ಕರಗತವಾಗಿದೆ.

ಆಡುವ ಬಳಗದಿಂದ ಯಾರು ಔಟ್?

ಜೋಶ್ ಹೇಝಲ್‌ವುಡ್ ತಂಡಕ್ಕೆ ಮರಳಿದರೆ, ಕಳೆದ ಪಂದ್ಯಗಳಲ್ಲಿ ಆಡಿದ್ದ ನ್ಯೂಝಿಲೆಂಡ್‌ನ ವೇಗಿ ಜೇಕ್ಕಬ್ ಡಫಿ ಅವರು ಸ್ಥಾನ ಬಿಟ್ಟುಕೊಡಬೇಕಾಗುತ್ತದೆ. ಡಫಿ ವಿಕೆಟ್ ಪಡೆದಿದ್ದರೂ, ಹೇಝಲ್‌ವುಡ್ ಅವರಷ್ಟು ಪ್ರಭಾವಶಾಲಿಯಾಗಿರಲಿಲ್ಲ. ಹೀಗಾಗಿ ಡಫಿ ಅವರನ್ನು ಹೊರಗಿಟ್ಟು ಹೇಝಲ್​ವುಡ್​ಗೆ ಅವಕಾಶ ನೀಡುವ ಸಾಧ್ಯತೆ ಹೆಚ್ಚು.

ರಾಜಸ್ಥಾನ್ ರಾಯಲ್ಸ್ ಸವಾಲು:

ರಾಜಸ್ಥಾನ್ ತಂಡದ ಅಗ್ರ ಕ್ರಮಾಂಕದಲ್ಲಿ ಯಶಸ್ವಿ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ ಅವರಂತಹ ಬಲಿಷ್ಠ ಬ್ಯಾಟರ್‌ಗಳಿದ್ದಾರೆ. ಇವರನ್ನು ಕಟ್ಟಿಹಾಕಲು ಹೇಝಲ್‌ವುಡ್ ಅವರ ಎತ್ತರದ ಬೌನ್ಸ್ ಮತ್ತು ಸ್ವಿಂಗ್ ಆರ್‌ಸಿಬಿಗೆ ಅಸ್ತ್ರವಾಗಲಿದೆ. ಗುವಾಹಟಿಯ ಪಿಚ್ ವೇಗಿಗಳಿಗೆ ತುಸು ನೆರವು ನೀಡುವುದರಿಂದ ಹೇಝಲ್‌ವುಡ್ ಆಟ ಇಲ್ಲಿ ನಿರ್ಣಾಯಕವಾಗಬಹುದು.

ಒಟ್ಟಾರೆಯಾಗಿ ಹೇಳುವುದಾದರೆ, ಜೋಶ್ ಹೇಝಲ್‌ವುಡ್ ಅವರ ಆಗಮನವು ಆರ್‌ಸಿಬಿ ಬೌಲಿಂಗ್ ವಿಭಾಗವನ್ನು ಮತ್ತಷ್ಟು ಬಲಿಷ್ಠಗೊಳಿಸುವುದರಲ್ಲಿ ಅನುಮಾನವೇ ಇಲ್ಲ. ಈ ಮೂಲಕ ಆರ್​ಆರ್ ಪಡೆಯನ್ನು ಬಗ್ಗು ಬಡಿದು ಆರ್​ಸಿಬಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆಯಾ ಕಾದು ನೋಡಬೇಕಿದೆ.

ಇದನ್ನೂ ಓದಿ: IPL 2026: ಐಪಿಎಲ್​ ನಡುವೆ 5 ಹೊಸ ನಿಯಮಗಳು ಜಾರಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್, ಯಶ್ ದಯಾಳ್ (ಅಲಭ್ಯ).

 

Source link

ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ: ವೀರಣ್ಣ ಚರಂತಿಮಠ

ಬಾಗಲಕೋಟೆ, ಏ.9: ಉಪಚುನಾವಣೆಗೆ ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಬೆಳ್ಳಂಬೆಳಿಗ್ಗೆಯೇ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ತಮ್ಮ ಕುಟುಂಬ ಸಮೇತರಾಗಿ ಮತದಾನ ಮಾಡಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿಯೂ ಗೆಲುವಿನ ಕುರಿತು ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದರು. ಕಳೆದ ಬಾರಿ ಕಡಿಮೆ ಅಂತರದಲ್ಲಿ ಸೋಲುಂಡಿದ್ದ ವೀರಣ್ಣ ಚರಂತಿಮಠ ಅವರು, ಈ ಬಾರಿಯ ವಾತಾವರಣ ಚೆನ್ನಾಗಿದೆ ಎಂದರು. ಇದೇ ವೇಳೆ, ಕಾಂಗ್ರೆಸ್ ಪಕ್ಷದ ವಿರುದ್ಧ ಗಂಭೀರ ಆರೋಪ ಮಾಡಿದರು. ಕಾಂಗ್ರೆಸ್‌ನವರು ಲಕ್ಷಾಂತರ, ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ ಎಂಬ ಮಾಹಿತಿ ಇದೆ ಎಂದು ಹೇಳಿದ್ದಾರೆ. ಅಲ್ಲದೆ, ಗೋಕಾಕ್, ಅರಬಾವಿ ಮತ್ತು ಬೆಳಗಾವಿ ಜಿಲ್ಲೆಗಳಿಂದ ಹೊರಗಿನವರು ಬಂದು ಬೀಡುಬಿಟ್ಟಿದ್ದಾರೆ ಎಂದು ಚುನಾವಣಾಧಿಕಾರಿಗಳ ಗಮನಕ್ಕೆ ತಂದಿರುವುದಾಗಿ ತಿಳಿಸಿದರು. ಎಲ್ಲ ಯುವಕ, ಯುವತಿಯರು, ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾರತೀಯ ಜನತಾ ಪಕ್ಷದ ಕಮಲದ ಗುರುತಿಗೆ ಮತ ಹಾಕುವಂತೆ ಮನವಿ ಮಾಡಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ

ವಿಘ್ನೇಶ್ ಶಿವನ್ ನಿರ್ದೇಶನದ ‘ಎಲ್​​ಯುಕೆ’ ಸಿನಿಮಾ ರಿಲೀಸ್​​ಗೆ ರೆಡಿ ಇದೆ. ಈ ಚಿತ್ರ ಏಪ್ರಿಲ್ 10ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾ ರಿಲೀಸ್​​ಗೂ ಮೊದಲು ವಿಘ್ನೇಶ್ ಹಾಗೂ ನಯನತಾರಾ ಅವರು ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಲಭ್ಯವಾಗಿದೆ. ಆ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

ಜಾತ್ರೆ ನೋಡಲು ಹೋಗಿ ಹಸೆಮಣೆ ಏರಬೇಕಿದ್ದವನ ದುರಂತ ಅಂತ್ಯ: ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್​ ಹರಿದು ಸಾವು

ಆನೇಕಲ್​​, ಏಪ್ರಿಲ್​​ 09: ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್​ ಹರಿದ ಪರಿಣಾಮ ಹಸೆಮಣೆ ಏರಬೇಕಿದ್ದ ಯುವಕ ದಾರುಣವಾಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಹುಳಿಮಾವು ಜಾತ್ರೆಯಲ್ಲಿ ನಡೆದಿದೆ. ಹುಳಿಮಾವು ಗ್ರಾಮದ ಶ್ರೀ ಕೋದಂಡ ರಾಮಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವ ನಿನ್ನೆ ನಡೆದಿದ್ದು, ರಥೋತ್ಸವ ಹಿನ್ನಲೆ ರಾತ್ರಿ ಪಲ್ಲಕ್ಕಿ ಉತ್ಸವ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪಲ್ಲಕ್ಕಿಗಳನ್ನ ನೋಡುತ್ತಾ ನಿಂತಿದ್ದ ಯುವಕನ ಮೇಲೆ ಟ್ರ್ಯಾಕ್ಟರ್​​ ಹರಿದಿದ್ದು, ಅಕ್ಷತ್ (27) ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಗಿತ್ತಾದರೂ ಮಾರ್ಗ ಮಧ್ಯೆಯೇ ಉಸಿರು ಚೆಲ್ಲಿದ್ದಾರೆ.

ಬನಶಂಕರಿ ನಿವಾಸಿಯಾಗಿರುವ ಅಕ್ಷತ್​​, ಸಂಬಂಧಿಕರಿಗೆ ಹಾಗೂ ಸ್ನೇಹಿತರಿಗೆ ಮದುವೆಯ ಅಹ್ವಾನ ಪತ್ರಿಕೆ ವಿತರಿಸಲೆಂದು ಬಂದಿದ್ದರು. ಹಾಗೆ ಜಾತ್ರೆಯನ್ನೂ ನೋಡಿ ಹೋಗೊಣ ಎಂದು ಅಲ್ಲಿಯೇ ಉಳಿದುಕೊಂಡಿದ್ದರು ಎನ್ನಲಾಗಿದೆ. ಇನ್ನು ಟ್ರ್ಯಾಕ್ಟರ್​ ಚಾಲಕನ ಅಜಾಗರೂಕತೆಯಿಂದಲೇ ಅಪಘಾತ ನಡೆದಿದೆ ಎನ್ನಲಾಗಿದ್ದು, ಘಟನೆ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಹುಳಿಮಾವು ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದ್ದು, ಸ್ಥಳಕ್ಕೆ ಬೆಂಗಳೂರು ದಕ್ಷಿಣ ಸಂಚಾರ ಡಿಸಿಪಿ ಗೋಪಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುರ್ಘಟನೆ ನಡೆದು ಓರ್ವ ಮೃತಪಟ್ಟಿದ್ದರೂ ದೇವಾಲಯದ ಟ್ರಸ್ಟಿಗಳು ಸ್ಥಳಕ್ಕೆ ಬಂದಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಬೆಳಗಾವಿ ಸಿದ್ದೇಶ್ವರ ಜಾತ್ರೆಯಲ್ಲಿ ರಕ್ತದೊಕುಳಿ; ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ

ಕಾರು ಡಿಕ್ಕಿ:ಮೂವರಿಗೆ ಗಂಭೀರ ಗಾಯ

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕೆಂದನಹಳ್ಳಿ ಗೇಟ್ ಬಳಿ ಕಾರು ಡಿಕ್ಕಿಯಾದ ಪರಿಣಾಮ ಬೈಕ್​ನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ವಿಜಯ್, ದೊಡ್ಡಗೌಡ, ಅಂಬರೀಶ್​​ ಗಾಯಾಳುಗಳಾಗಿದ್ದು, ಇವರನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

IPL 2026: 5 ಆಟಗಾರರ ಬಗ್ಗೆ ಬಿಗ್ ಅಪ್​ಡೇಟ್​

Source link