Category Archives: Blog

Your blog category

ಏರ್ ಇಂಡಿಯಾ ವಿಮಾನದಲ್ಲಿ ಕುಡಿದ ಮತ್ತಿನಲ್ಲಿ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜಿಸಿದ ವ್ಯಕ್ತಿ – Kannada News | Air India Passenger Urinates on Co passenger Flight Safety Concerns Rise

ನವದೆಹಲಿ, ಡಿಸೆಂಬರ್ 30: ದೆಹಲಿಯಿಂದ ಬ್ಯಾಂಕಾಕ್​ಹೆ ಹೊರಟಿದ್ದ ಏರ್ ಇಂಡಿಯಾ(Air India) ವಿಮಾನದಲ್ಲಿ ಮಾನಮತ್ತ ಪ್ರಯಾಣಿಕನೊಬ್ಬ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜಿಸಿರುವ ಘಟನೆ ನಡೆದಿದೆ. ಇದು ವಿಮಾನಯಾನ ಸುರಕ್ಷತೆ ಮತ್ತು ಪ್ರಯಾಣಿಕರ ನಡವಳಿಕೆಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದೆ .

ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ, ಕುಡುಕ ಪ್ರಯಾಣಿಕನೊಬ್ಬ ವಿಮಾನ ಕ್ಯಾಬಿನ್ ಒಳಗೆ ಮೂತ್ರ ವಿಸರ್ಜಿಸುತ್ತಿರುವುದನ್ನು ತೋರಿಸುತ್ತದೆ, ಅವರು ಬಿಸಿನೆಸ್ ಕ್ಲಾಸ್ ಕ್ಯಾಬಿನ್‌ನಲ್ಲಿ ಪ್ರಯಾಣಿಸುತ್ತಿದ್ದರು. ಸಹ ಪ್ರಯಾಣಿಕರಲ್ಲಿ ಒಬ್ಬರಾದ ಶಿವಮ್ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಇಡೀ ಘಟನೆಯನ್ನು ವಿವರಿಸಿದ್ದಾರೆ, ಕುಡಿದ ಅಮಲಿನಲ್ಲಿದ್ದ ಪ್ರಯಾಣಿಕ ಇತರ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜಿಸಲು ಪ್ರಾರಂಭಿಸಿದ್ದ.

ಆದರೆ ಆತನ ಮೇಲೆ ಯಾವುದೇ ಕ್ರಮ ಯಾಕೆ ಕೈಗೊಂಡಿಲ್ಲ ಎಂದು ಪ್ರಯಾಣಿಕರು ಪ್ರಶ್ನೆ ಮಾಡುತ್ತಿದ್ದಾರೆ. ವಿಮಾನದಲ್ಲಿರುವ ಪ್ರಯಾಣಿಕರನ್ನು ರಕ್ಷಿಸಲು ಯಾವುದೇ ಕಾನೂನು ಅಥವಾ ಸುರಕ್ಷತಾ ಪ್ರೋಟೋಕಾಲ್ ಇಲ್ಲವೇ, ಬಿಸಿನೆಸ್ ಕ್ಲಾಸ್​ನಲ್ಲಿ ಹೋಗುವ ನಮಗೆ ಯಾರಾದರೂ ಉಚಿತ ಪಾಸ್ ಕೊಡುತ್ತಿದ್ದಾರಾ, ಒಂದು-ಮಾರ್ಗ ಟಿಕೆಟ್‌ಗಾಗಿ ಸುಮಾರು $1,000 ( 80,000 ರೂ.) ಖರ್ಚು ಮಾಡಿ, ಇಂಥಾ ಘಟನೆಗಳನ್ನು ನೋಡುವುದು ನಿಜಕ್ಕೂ ವಿಪರ್ಯಾಸ ಎಂದು ಬರೆದಿದ್ದಾರೆ.

ಮತ್ತಷ್ಟು ಓದಿ: ಏರ್ ಇಂಡಿಯಾ ಅಪಘಾತ, ತಪ್ಪು ವರದಿ ಕೊಟ್ಟು ಮೃತ ಪೈಲಟ್ ಮೇಲೆ ಆರೋಪ ಹೊರಿಸ್ಬೇಡಿ, ಮೃತರ ಸಂಬಂಧಿಕರ ಮಾತು

ಅದೃಷ್ಟವಶಾತ್ ಬ್ಯುಸಿನೆಸ್ ಕ್ಲಾಸ್‌ನಲ್ಲಿ ಯಾವುದೇ ಮಹಿಳಾ ಪ್ರಯಾಣಿಕರು ಇರಲಿಲ್ಲ, ಒಬ್ಬ ಮಹಿಳೆ ಒಂಟಿಯಾಗಿ ಪ್ರಯಾಣಿಸುತ್ತಿದ್ದರೆ ಮತ್ತು ಈ ರೀತಿಯ ಅನುಭವವಾದರೆ ಮತ್ತೆಂದು ಒಬ್ಬಂಟಿಯಾಗಿ ಬರಲು ಹಿಂಜರಿಯುತ್ತಾಳೆ.

ಏರ್ ಇಂಡಿಯಾ ವಿಮಾನದಲ್ಲಿ ಈ ರೀತಿ ನಡೆದಿರುವುದು ಇದೇ ಮೊದಲಲ್ಲ, ನವೆಂಬರ್ 2022 ರಲ್ಲಿ ನ್ಯೂಯಾರ್ಕ್ ನಿಂದ ದೆಹಲಿಗೆ ಹೋಗುವ ಏರ್ ಇಂಡಿಯಾ ವಿಮಾನದಲ್ಲಿ, ಕುಡಿದ ಮತ್ತಿನಲ್ಲಿದ್ದ ಪ್ರಯಾಣಿಕರೊಬ್ಬರು ಬಿಸಿನೆಸ್ ಕ್ಲಾಸ್ ನಲ್ಲಿ ಹಿರಿಯ ಮಹಿಳಾ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದರು.

ವಿಮಾನದ ವಿಡಿಯೋ

ಆ ಸಂದರ್ಭದಲ್ಲಿ, ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಆ ಪ್ರಯಾಣಿಕನಿಗೆ 30 ದಿನಗಳವರೆಗೆ ಹಾರಾಟ ನಿಷೇಧಿಸಿತು, ಶಿಕ್ಷೆಯು ಅಸಮರ್ಪಕ ಎಂದು ಜನರು ಕರೆಯಲಾಗಿತ್ತು. ವಿಮಾನಗಳಲ್ಲಿ ಮದ್ಯಪಾನವನ್ನು ನಿಷೇಧಿಸಬೇಕು ಎನ್ನುವ ಒತ್ತಾಯ ಕೇಳಿಬಂದಿತ್ತು.ಘಟನೆಯ ಬಗ್ಗೆ ಏರ್ ಇಂಡಿಯಾ ಇಲ್ಲಿಯವರೆಗೆ ಯಾವುದೇ ಹೇಳಿಕೆಯನ್ನು ನೀಡಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕೆಸಿ ವೇಣುಗೋಪಾಲ್ ಮಾತು ಕೇಳಿ ಆಡಳಿತ ಮಾಡುವುದು 6 ಕೋಟಿ ಜನತೆಗೆ ಮಾಡಿದ ಅವಮಾನ; ಲಹರ್ ಸಿಂಗ್ – Kannada News | Governing by Listening to KC Venugopal Is an Insult to 6 Crore People: Says lahar singh siroya

ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ

ಬೆಂಗಳೂರು, ಡಿಸೆಂಬರ್​ 30: ಕೋಗಿಲು (Kogilu Layout) ನಿರಾಶ್ರಿತರ ಬೆನ್ನಿಗೆ ಸರ್ಕಾರ ನಿಂತಿದೆ. ರಾಜೀವ್ ಗಾಂಧಿ ವಸತಿ ಯೋಜನೆ ಅಡಿ ಮನೆ ಕೊಡಲು ಮುಂದಾಗಿದೆ. ಅಕ್ರಮ ಒತ್ತುವರಿ ತೆರವು ಮಾಡಿ, ಮನೆ ಕೊಡುತ್ತಿರುವ  ಸರ್ಕಾರದ ನಡೆ ವಿಪಕ್ಷಗಳ ಪಾಲಿಗೆ ಬ್ರಹ್ಮಾಸ್ತ್ರವಾಗಿವಾಗಿದೆ. ರಾಜ್ಯದ 6 ಕೋಟಿ ಜನ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​​ರನ್ನು ಆಯ್ಕೆ ಮಾಡಿದ್ದಾರೆ. ಕೆ.ಸಿ.ವೇಣುಗೋಪಾಲ್​ರನ್ನು ಆಯ್ಕೆ ಮಾಡಿಲ್ಲ. ಜುಜುಬಿ ವೇಣುಗೋಪಾಲ್ ಮಾತು ಕೇಳಿಕೊಂಡು ಆಡಳಿತ ಮಾಡುವುದು 6 ಕೋಟಿ ಜನರಿಗೆ ಮಾಡಿರುವ ಅವಮಾನ ಎಂದು ರಾಜ್ಯಸಭಾ ಬಿಜೆಪಿ ಸದಸ್ಯ ಲಹರ್ ಸಿಂಗ್ ಸಿರೋಯಾ (Lehar Singh Siroya) ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ಲಹರ್ ಸಿಂಗ್ ಸಿರೋಯಾ ಕಿಡಿ

ಕೋಗಿಲು ಲೇಔಟ್​ ನಿವಾಸಿಗಳಿಗೆ ಮನೆ ಹಂಚಿಕೆಗೆ ನಿರ್ಧಾರ ವಿಚಾರವಾಗಿ ಟಿವಿ9 ಜೊತೆಗೆ ಮಾತನಾಡಿದ ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ, ಈ ಸರ್ಕಾರದಿಂದ ಏನೂ ಅಪೇಕ್ಷೆ ಪಡಲು ಸಾಧ್ಯವೇ ಇಲ್ಲ. ಸೋ ಕಾಲ್ಡ್ ಪವರ್ ಫುಲ್ ಲೀಡರ್​​​ಗಳಾದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ಕೆ.ಸಿ.ವೇಣುಗೋಪಾಲ್ ಮಾತು ಕೇಳಿ ನಾಚಿಕೆಗೇಡಿನ ಕೆಲಸ ಮಾಡುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.

ಇದನ್ನೂ ಓದಿ: ಕೇರಳಿಗರ ‘ಚೇಟಾ ಸಿದ್ದರಾಮಯ್ಯ’ ಕೇರಳಕ್ಕಾಗಿ ಈವರೆಗೆ ಏನೇನು ಮಾಡಿದ್ರು? ಪಟ್ಟಿ ಸಮೇತ ಟಾಂಗ್ ಕೊಟ್ಟ ಜೆಡಿಎಸ್

ಕೆಸಿ ವೇಣುಗೋಪಾಲ ಅಂತಹವರು ನಮ್ಮ ಸರ್ಕಾರ ನಡೆಸಬೇಕಾ? ಅವರ ಆದೇಶ ನಾವು ಪಾಲಿಸಬೇಕಾ? ಈ ಸರ್ಕಾರ ಕೇವಲ ಕುರ್ಚಿ ಜಗಳಕ್ಕೆ ಮಾತ್ರ ಸೀಮಿತ ಅಷ್ಟೇ. ಪ್ರವಾಹ ಸಂತ್ರಸ್ತರಿಗೆ ಮನೆ ಕೊಟ್ಟಿಲ್ಲ, ಡ್ರಗ್ಸ್ ಸಮಸ್ಯೆ ಸರಿಪಡಿಸಿಲ್ಲ, ಇಂತಹ ಸರ್ಕಾರ ನಮಗೆ ಸಿಕ್ಕಿರುವುದು ದುರದೃಷ್ಟಕರ. ಪಾಕಿಸ್ತಾನ ಪ್ರತಿಕ್ರಿಯೆ ಕೊಡುತ್ತದೆ ಎಂದರೆ, ಇದು ಬಹಳ ಭಯನಕ ಟ್ರೆಂಡ್. ಪಶ್ಚಿಮ ಬಂಗಾಳ ರೀತಿ ಇಲ್ಲಿ ಆದರೆ ನಮ್ಮ ಗತಿ ಏನು ಎಂದು ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಬರ–ಪ್ರವಾಹಕ್ಕೆ ವರ್ಷಗಳ ನಿರೀಕ್ಷೆ, ಕೋಗಿಲು ಲೇಔಟ್‌ಗೆ ಎರಡು ದಿನಗಳಲ್ಲಿ ಪರಿಹಾರ: ಸರ್ಕಾರದ ವಿರುದ್ಧ ಗುಡುಗಿದ ಜೋಶಿ

ಇನ್ನು ಎಐಸಿಸಿಯ ಕೆ.ಸಿ. ವೇಣು ಗೋಪಾಲ್ ಹೇಳಿದ್ರು ಅನ್ನೋ ಒಂದೇ ಕಾರಣಕ್ಕೆ ಇಷ್ಟು ದೊಡ್ಡ ನಿರ್ಧಾರ ಮಾಡಿರೋದನ್ನ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ. ಕಾಂಪಿಟೇಷನ್ ಮೇಲೆ ಸಿಎಂ, ಡಿಸಿಎಂ ಹೈಕಮಾಂಡ್ ಓಲೈಕೆ ಮಾಡ್ತಿದ್ದಾರೆಂದು ಆರೋಪಿಸಿದ್ದಾರೆ. ಆದರೆ ಡಿಸಿಎಂ ಡಿಕೆ ಶಿವಕುಮಾರ್​ ಮಾತ್ರ ಇದನ್ನ ತಳ್ಳಿಹಾಕಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

BSF Recruitment 2025: 10th ಪಾಸಾದವರಿಗೆ ಗಡಿ ಭದ್ರತಾ ಪಡೆಗೆ ಸೇರಲು ಸುವರ್ಣವಕಾಶ; ಯಾವುದೇ ಲಿಖಿತ ಪರೀಕ್ಷೆಯಿಲ್ಲ! – Kannada News | BSF Constable Recruitment 2025: 549 Sports Quota Posts Apply Online Now!

ಗಡಿ ಭದ್ರತಾ ಪಡೆ (BSF) ಕ್ರೀಡಾ ಕೋಟಾದಡಿಯಲ್ಲಿ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 549 ಕಾನ್ಸ್‌ಟೇಬಲ್ ಹುದ್ದೆಗಳನ್ನು ಅಂದರೆ 277 ಹುದ್ದೆಗಳು ಪುರುಷರಿಗೆ ಮತ್ತು 272 ಹುದ್ದೆಗಳು ಮಹಿಳೆಯರಿಗೆ ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ 10 ನೇ ತರಗತಿ ಪಾಸಾದವರು ಮತ್ತು ಕ್ರೀಡೆಯಲ್ಲಿ ಪರಿಣತಿ ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು. ಅಲ್ಲದೆ, ಕಳೆದ ಎರಡು ವರ್ಷಗಳಲ್ಲಿ, ಅಥ್ಲೆಟಿಕ್ಸ್, ಬಾಕ್ಸಿಂಗ್, ಬ್ಯಾಸ್ಕೆಟ್‌ಬಾಲ್, ವಾಲಿಬಾಲ್, ಹ್ಯಾಂಡ್‌ಬಾಲ್, ಫುಟ್‌ಬಾಲ್, ಹಾಕಿ, ಈಜು, ಶೂಟಿಂಗ್, ಜೂಡೋ, ಕರಾಟೆ, ಕುಸ್ತಿ, ವೇಟ್‌ಲಿಫ್ಟಿಂಗ್, ಟೇಬಲ್ ಟೆನ್ನಿಸ್, ಬಿಲ್ಲುಗಾರಿಕೆ, ಬ್ಯಾಡ್ಮಿಂಟನ್, ಸೈಕ್ಲಿಂಗ್, ಜಲ ಕ್ರೀಡೆ, ವುಶು ಮುಂತಾದ ಯಾವುದೇ ಕ್ರೀಡೆಗಳಲ್ಲಿ ಅಂತರರಾಷ್ಟ್ರೀಯ ಸ್ಪರ್ಧೆಗಳಲ್ಲಿ ಚಿನ್ನ, ಬೆಳ್ಳಿ ಅಥವಾ ಕಂಚಿನ ಪದಕಗಳನ್ನು ಗೆದ್ದಿರಬೇಕು.

ಅಧಿಸೂಚನೆಯಲ್ಲಿ ಸೂಚಿಸಿದಂತೆ, ಪುರುಷರ ದೈಹಿಕ ಮಾನದಂಡಗಳು 170 ಸೆಂಟಿಮೀಟರ್ ಮತ್ತು ಮಹಿಳೆಯರಿಗೆ 157 ಸೆಂಟಿಮೀಟರ್ ಆಗಿರಬೇಕು. ಪುರುಷರ ಎದೆಯ ಸುತ್ತಳತೆ 80 ಸೆಂಟಿಮೀಟರ್ ಆಗಿರಬೇಕು. ಉಸಿರಾಡುವಾಗ 5 ಸೆಂಟಿಮೀಟರ್ ಹೆಚ್ಚಾಗಬೇಕು. ಎಸ್‌ಟಿಯ ಎತ್ತರ 76 ಸೆಂಟಿಮೀಟರ್ ಆಗಿರಬೇಕು ಮತ್ತು ಉಸಿರಾಡುವಾಗ 5 ಸೆಂಟಿಮೀಟರ್ ಹೆಚ್ಚಾಗಬೇಕು. ಎತ್ತರ ಮತ್ತು ತೂಕವು ವಯಸ್ಸಿಗೆ ಅನುಗುಣವಾಗಿರಬೇಕು. ವಯಸ್ಸು 23 ವರ್ಷ ಮೀರಬಾರದು. ಒಬಿಸಿಗಳಿಗೆ ಮೂರು ವರ್ಷ ಮತ್ತು ಎಸ್‌ಸಿ ಮತ್ತು ಎಸ್‌ಟಿಗೆ ಐದು ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್​​ನಲ್ಲಿ ಉದ್ಯೋಗವಕಾಶ; ಸಂಶೋಧನಾ ಸಹಾಯಕ ಹುದ್ದೆಗೆ ನೇಮಕಾತಿ

ಈ ಅರ್ಹತೆಗಳನ್ನು ಹೊಂದಿರುವವರಿಗೆ ಜನವರಿ 1 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸತಕ್ಕದ್ದು. ಸಾಮಾನ್ಯ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ. 159 ಪಾವತಿಸಬೇಕು. ಎಸ್‌ಸಿ, ಎಸ್‌ಟಿ ಮತ್ತು ಮಹಿಳೆಯರಿಗೆ ಯಾವುದೇ ಶುಲ್ಕವಿಲ್ಲ. ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ ದೈಹಿಕ ಗುಣಮಟ್ಟ ಪರೀಕ್ಷೆ (ಪಿಎಸ್‌ಟಿ) ಮತ್ತು ಅರ್ಹತೆಯ ಆಧಾರದ ಮೇಲೆ ಅಂತಿಮ ನೇಮಕಾತಿಗಳನ್ನು ಮಾಡಲಾಗುತ್ತದೆ. ಆಯ್ಕೆಯಾದವರಿಗೆ ತಿಂಗಳಿಗೆ 21,700 ರಿಂದ 69,100 ರೂ. ರವರೆಗೆ ವೇತನವನ್ನು ನೀಡಲಾಗುತ್ತದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:06 pm, Tue, 30 December 25

Source link

ಕೇರಳಿಗರ ‘ಚೇಟಾ ಸಿದ್ದರಾಮಯ್ಯ’ ಕೇರಳಕ್ಕಾಗಿ ಈವರೆಗೆ ಏನೇನು ಮಾಡಿದ್ರು? ಪಟ್ಟಿ ಸಮೇತ ಟಾಂಗ್ ಕೊಟ್ಟ ಜೆಡಿಎಸ್ – Kannada News | ‘Kerala’s Chetta Siddaramaiah’? JDS Slams CM Over Kogilu Issue, Releases List of Alleged Favors to Kerala

ಕೇರಳಿಗರ ‘ಚೇಟಾ ಸಿದ್ದರಾಮಯ್ಯ’ ಕೇರಳಕ್ಕಾಗಿ ಈವರೆಗೆ ಏನೇನು ಮಾಡಿದ್ರು? ಪಟ್ಟಿ ಸಮೇತ ಟಾಂಗ್ ಕೊಟ್ಟ ಜೆಡಿಎಸ್

ಬೆಂಗಳೂರು, ಡಿಸೆಂಬರ್ 30: ಬೆಂಗಳೂರಿನ (Bengaluru) ಕೋಗಿಲು ಕ್ರಾಸ್ ಬಡಾವಣೆಯಲ್ಲಿ ಅಕ್ರಮ ಶೆಡ್​​ಗಳ ತೆರವು ಹಾಗೂ ನಂತರದ ಬೆಳವಣಿಗೆಗಳು ಕರ್ನಾಟಕದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆ ಬೆನ್ನಲ್ಲೇ ತಕ್ಷಣವೇ ಅಕ್ರಮ ಶೆಡ್​ಗಳಲ್ಲಿ ವಾಸಿಸುತ್ತಿದ್ದ ಕೇರಳಿಗರಿಗೆ ಮನೆ ನೀಡಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರ, ಪ್ರವಾಹ ಸೇರಿದಂತೆ ಪ್ರಾಕೃತಿಕ ವಿಕೋಪಗಳಿಂದ ನಿರಾಶ್ರಿತರಾದ ಕನ್ನಡಿಗರಿಗೇ ವರ್ಷಗಳಿಂದ ಪರಿಹಾರ ನೀಡದೇ ಇರುವ ವಿಚಾರ ಮುನ್ನೆಲೆಗೆ ಬಂದಿದೆ. ಇದೀಗ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಎಕ್ಸ್ ಮೂಲಕ ವಾಗ್ದಾಳಿ ನಡೆಸಿದ್ದು, ಸಿಎಂ ಸಿದ್ದರಾಮಯ್ಯ ಅವರನ್ನು ಕೇರಳಿಗರ ‘ಚೇಟಾ ಸಿದ್ದರಾಮಯ್ಯ’ ಎಂದು ಜರೆದಿದೆ. ಅಲ್ಲದೆ, ಕೇರಳಕ್ಕಾಗಿ ಸಿದ್ದರಾಮಯ್ಯ ಈವರೆಗೆ ಏನೇನು ಮಾಡಿದ್ದಾರೆ ಎಂಬ ಪಟ್ಟಿ ನೀಡಿದೆ.

‘ಇದೊಂದು ಪ್ರಕರಣಕ್ಕೆ ಮಾತ್ರ ಸೀಮಿತ’ ಎಂದು ತಿಪ್ಪೇಸಾರುವ ಕೇರಳಿಗರ ಚೇಟಾ ಸಿದ್ದರಾಮಯ್ಯ ಅವರ ವಸತಿ ರಹಿತ ಕನ್ನಡಿಗರಿಗೆ ಮಿಡಿಯದ ಮಾನವೀಯತೆ, ಕೇರಳದ ಅಕ್ರಮ ವಲಸಿಗರಿಗೆ ಮಿಡಿಯುತ್ತಿರುವ ಇಬ್ಭಗೆ ನೀತಿಗೆ ಧಿಕ್ಕಾರವಿರಲಿ. ಹೈಕಮಾಂಡ್ ಆರ್ಡರ್‌ ಅನ್ನು ತಲೆಬಾಗಿ, ಕುರ್ಚಿ ಕಳೆದುಕೊಳ್ಳುವ ಭೀತಿಯಲ್ಲಿ ಅಕ್ರಮ ವಲಸಿಗರ ಪರವಾಗಿ, ತರಾತುರಿಯಲ್ಲಿ ಸಭೆಗಳನ್ನು ನಡೆಸಿ ಆದೇಶ ಹೊರಡಿಸಿ, ವಸತಿ ರಹಿತ ಕನ್ನಡಿಗರಿಗೆ ಬಗೆದ ವಿಶ್ವಾಸದ್ರೋಹವಲ್ಲವೇ? ಕರ್ನಾಟಕದಲ್ಲಿ ಸುಮಾರು 30 ಲಕ್ಷಕ್ಕೂ ಹೆಚ್ಚು ವಸತಿರಹಿತ ಬಡ ಕನ್ನಡಿಗರಿಗೆ ಸೂರಿಲ್ಲ. ವಸತಿ ಇಲಾಖೆಯ ಮನೆ ಹಂಚಿಕೆಗಾಗಿ ಅರ್ಜಿ ಸಲ್ಲಿಸಿ ಲಕ್ಷಾಂತರ ಜನರು ಹಗಲು ರಾತ್ರಿ ದುಡಿದ ಹಣವನ್ನು ಮುಂಗಡ ಕಟ್ಟಿ, ವರ್ಷಾನುಗಟ್ಟಲೇ ಇನ್ನೂ ಕಾಯುತ್ತಿದ್ದಾರೆ. ಇಂತಹ ನಿರ್ಗತಿಕರಿಗೆ ಮನೆಗಳನ್ನು ನೀಡುವ ಮನಸ್ಸು ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲವಾಗಿದೆ’ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

ವೋಟ್‌ ಬ್ಯಾಂಕ್‌ಗಾಗಿ ಒಂದು ಸಮುದಾಯದ ಓಲೈಕೆ ಮಾಡುತ್ತಿರುವ ಕಾಂಗ್ರೆಸ್‌ ಪಕ್ಷ, ವಸತಿ ಸಚಿವ ಜಮೀರ್ ಅಹ್ಮದ್ ಕನ್ನಡಿಗರ ತೆರಿಗೆ ಹಣದಲ್ಲಿ ವಲಸಿಗರಿಗೆ 11.20 ಲಕ್ಷ ರೂ ವೆಚ್ಚದ ಮನೆಗಳನ್ನು ನೀಡಿ, ರಾಜ ಮಾರ್ಯಾದೆ ಕೊಡುತ್ತಿರುವುದು ರಾಜ್ಯದ ಜನರಿಗೆ ಮಾಡುತ್ತಿರುವ ವಂಚನೆ ಎಂದು ಜೆಡಿಎಸ್ ಟೀಕಿಸಿದೆ.

ಜೆಡಿಎಸ್ ಎಕ್ಸ್ ಸಂದೇಶ

ಹೈಕಮಾಂಡ್‌ನ ತೊಗಲುಗೊಂಬೆಯಾದ ಕಾಂಗ್ರೆಸ್‌ ಸರ್ಕಾರ ಎಂದು ಮತ್ತೊಂದು ಎಕ್ಸ್ ಸಂದೇಶದ ಮೂಲಕ ಕಿಡಿಕಾರಿದೆ.

ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಇಬ್ಬರನ್ನು ಹೈಕಮಾಂಡ್‌ ತನ್ನ ಕೈಗೊಂಬೆಯಾಗಿಸಿಕೊಂಡು ಆಟವಾಡಿಸುತ್ತಿದೆ. ಕೇರಳದ ಅಕ್ರಮ ವಲಸಿಗರಿಗೆ ಬೆಂಗಳೂರಿನಲ್ಲಿ 11.20 ಲಕ್ಷ ರೂ. ಮೌಲ್ಯದ ಮನೆ ಗ್ಯಾರಂಟಿ, ಕೇರಳದ ವಯನಾಡಿನ ಸಂತ್ರಸ್ತರಿಗೆ 10 ಕೋಟಿ ರೂ. ವೆಚ್ಚದಲ್ಲಿ 100 ಮನೆ, ಆನೆದಾಳಿಗೆ ಬಲಿಯಾದ ಕೇರಳದ ವ್ಯಕ್ತಿಗೆ 15 ಲಕ್ಷ ರೂ. ಪರಿಹಾರ, ಇದು ಕನ್ನಡಿಗರ ವಿರೋಧಿ ಕಾಂಗ್ರೆಸ್​​​​ನಿಂದ ರಾಜ್ಯದ ಜನತೆಗೆ ನಿರಂತರವಾಗಿ ಆಗುತ್ತಿರುವ ಅನ್ಯಾಯ ಎಂದು ಜೆಡಿಎಸ್ ಹೇಳಿದೆ.

ಇದನ್ನೂ ಓದಿ: ಬರ–ಪ್ರವಾಹಕ್ಕೆ ವರ್ಷಗಳ ನಿರೀಕ್ಷೆ, ಕೋಗಿಲು ಲೇಔಟ್‌ಗೆ ಎರಡು ದಿನಗಳಲ್ಲಿ ಪರಿಹಾರ: ಸರ್ಕಾರದ ವಿರುದ್ಧ ಗುಡುಗಿದ ಜೋಶಿ

ಭೂಸ್ವಾಧೀನ ವಿರೋಧಿಸಿದ ರೈತರ ಮೇಲೆ ಕೋಪ, ಆಕ್ರೋಶ. ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನೆಲೆಸಿರುವ ವಲಸಿಗ ಕೇರಳಿಗರ ಮೇಲೆ ಮೃದುಧೋರಣೆ. ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕೀಯಕ್ಕೆ ಧಿಕ್ಕಾರ ಎಂದು ಜೆಡಿಎಸ್ ಉಲ್ಲೇಖಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ – Kannada News | Karnataka Teacher Uday Makes Students Wash Car; Education Dept Acts

ಉತ್ತರ ಕನ್ನಡ, ಡಿ.30: ಶಾಲೆ ವಿದ್ಯಾರ್ಥಿಗಳಿಂದ ಕಾರು ತೊಳೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಬಿ.ಕೆ.ಹಳ್ಳಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕ ಉದಯ್​​ ವಿದ್ಯಾರ್ಥಿಗಳಿಂದ ಶಾಲೆ ಮಕ್ಕಳಿಂದ ಕಾರು ತೊಳೆಸಿದ್ದಾರೆ. ಶಾಲಾ ಅವಧಿಯಲ್ಲೇ ತನ್ನ ಕಾರು ತೊಳೆಯುವಂತೆ ವಿದ್ಯಾರ್ಥಿಗಳಿಗೆ ಹೇಳಿದ್ದಾರೆ. ಮಕ್ಕಳು ಕಾರು ಕ್ಲಿನ್​​ ಮಾಡುವ ವಿಡಿಯೋವನ್ನು ವ್ಯಕ್ತಿಯೊಬ್ಬರು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಹಿಂದೆಯೂ ಕೂಡ ಶಿಕ್ಷಕ ಉದಯ್​​​​​​ ಇಂತಹ ಕೆಲಸ ಮಾಡಿಸಿದ್ದರು ಎಂದು ಹೇಳಿದ್ದಾರೆ. ಈ ಬಗ್ಗೆ ಶಿಕ್ಷಣ ಇಲಾಖೆಗೆ ದೂರು ಕೂಡ ನೀಡಲಾಗಿತ್ತು. ಈ ದೂರಿನ ಆಧಾರದ ಮೇಲೆ ಹಳಿಯಾಳ ಬಿಇಒ ಪ್ರಮೋದ ಮಹಾಲೆ ಈ ವಿಷಯದ ಬಗ್ಗೆ ವರದಿ ನೀಡುವಂತೆ ಶಾಲಾ ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಕ್ರಿಕೆಟ್​ ಇತಿಹಾಸದಲ್ಲೇ ಅತ್ಯಂತ ದುಬಾರಿ ಓವರ್​ಗಳನ್ನು ಎಸೆದ CSK ಆಟಗಾರ – Kannada News | Aman Khan Creates Unwanted Record in ODI Cricket

ಏಕದಿನ ಕ್ರಿಕೆಟ್ ಶುರುವಾಗಿ ಬರೋಬ್ಬರಿ 54 ವರ್ಷಗಳಾಗಿವೆ. ಈ ಐವತ್ತನಾಲ್ಕು ವರ್ಷಗಳಲ್ಲಿ ಅತ್ಯಂತ ದುಬಾರಿ ಓವರ್​ಗಳನ್ನು ಎಸೆದ ಹೀನಾಯ ದಾಖಲೆಯೊಂದು ಭಾರತೀಯ ಆಟಗಾರನ ಹೆಸರಿಗೆ ಸೇರ್ಪಡೆಯಾಗಿದೆ. ಅದು ಕೂಡ 10 ಓವರ್​ಗಳಲ್ಲಿ ಬರೋಬ್ಬರಿ 123 ರನ್​ಗಳನ್ನು ನೀಡುವ ಮೂಲಕ ಎಂಬುದೇ ಅಚ್ಚರಿ.

ವಿಜಯ ಹಝಾರೆ ಟೂರ್ನಿಯಲ್ಲಿ ಜಾರ್ಖಂಡ್ ವಿರುದ್ಧದ ಪಂದ್ಯದಲ್ಲಿ ಪುದುಚೇರಿ ಪರ ಕಣಕ್ಕಿಳಿದ ಅಮಾನ್ ಖಾನ್ 10 ಓವರ್​ಗಳಲ್ಲಿ ಬರೋಬ್ಬರಿ 123 ರನ್​​ಗಳನ್ನು ನೀಡಿದ್ದಾರೆ. ಈ ಮೂಲಕ ಲಿಸ್ಟ್​ ಎ (ಏಕದಿನ) ಕ್ರಿಕೆಟ್​ನಲ್ಲಿ 10 ಓವರ್​ಗಳಲ್ಲಿ ಅತ್ಯಧಿಕ ರನ್ ನೀಡಿದ ಬೌಲರ್ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ಹೀನಾಯ ದಾಖಲೆ ನೆದರ್​ಲೆಂಡ್ಸ್​ ತಂಡದ ಬಾಸ್ ಡಿ ಲೀಡೆ ಹೆಸರಿನಲ್ಲಿತ್ತು. 2023 ರ ಏಕದಿನ ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿದಿದ್ದ ಬಾಸ್ ಡಿ ಲೀಡೆ 10 ಓವರ್​ಗಳಲ್ಲಿ ಬರೋಬ್ಬರಿ 115 ರನ್ ನೀಡಿ ಈ ಅನಗತ್ಯ ದಾಖಲೆಗೆ ಕೊರೊಳೊಡ್ಡಿದ್ದರು.

ಇದೀಗ ಪುದುಚೇರಿ ತಂಡದ ನಾಯಕ ಅಮಾನ್ ಖಾನ್ ಈ ಹೀನಾಯ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಜಾರ್ಖಂಡ್ ವಿರುದ್ಧದ ಪಂದ್ಯದಲ್ಲಿ ಪ್ರತಿ ಓವರ್​ಗೆ 12.30 ರನ್ ನೀಡುವ ಮೂಲಕ ಅಮಾನ್ ಒಟ್ಟು 123 ರನ್​ ಚಚ್ಚಿಸಿಕೊಂಡಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ ಇತಿಹಾಸದ ಅತ್ಯಂತ ದುಬಾರಿ ಓವರ್​ಗಳನ್ನು ಎಸೆದ ಬೌಲರ್​ ಎನಿಸಿಕೊಂಡಿದ್ದಾರೆ.

ಅಮಾನ್ ಖಾನ್ ಸಿಎಸ್​ಕೆ ಆಟಗಾರ:

29 ವರ್ಷದ ಅಮಾನ್ ಖಾನ್ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿಯಲಿದ್ದಾರೆ. ಐಪಿಎಲ್​ 2026ರ ಮಿನಿ ಹರಾಜಿನ ಮೂಲಕ ಸಿಎಸ್​ಕೆ ಅಮಾನ್ ಖಾನ್ ಅವರನ್ನು 40 ಲಕ್ಷ ರೂ.ಗೆ ಖರೀದಿಸಿದ್ದಾರೆ.

ಇದನ್ನೂ ಓದಿ: 310ರ ಸ್ಟ್ರೈಕ್ ರೇಟ್​ನಲ್ಲಿ ಅಬ್ಬರಿಸಿದ ವೈಭವ್ ಸೂರ್ಯವಂಶಿ, ಆದರೆ…

ಇದಕ್ಕೂ ಮುನ್ನ ಅಮಾನ್ ಖಾನ್ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ಒಟ್ಟು 12 ಪಂದ್ಯಗಳನ್ನಾಡಿರುವ ಅಮಾನ್ ಒಂದು ಅರ್ಧಶತಕದೊಂದಿಗೆ ಒಟ್ಟು 115 ರನ್ ಕಲೆಹಾಕಿದ್ದಾರೆ. ಇದೀಗ ಐಪಿಎಲ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸುವ ಇರಾದೆಯಲ್ಲಿದ್ದ ಅಮಾನ್ ಖಾನ್ ಬೇಡದ ದಾಖಲೆಯೊಂದಿಗೆ ಎಲ್ಲರ ಗಮನ ಸೆಳೆದಿದ್ದಾರೆ.

Published On – 1:59 pm, Tue, 30 December 25

Source link

ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?

ಮಾಳು ಹಾಗೂ ಸೂರಜ್ ಅವರು ಎಲಿಮಿನೇಟ್ ಆಗಿದ್ದಾರೆ. ಕಳೆದ ವಾರ ಇಬ್ಬರೂ ಮನೆಯಿಂದ ಹೊರ ಹೋದರು. ಇವರ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಸೂಚನೆ ಸಿಕ್ಕಿತ್ತೇ ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ಕಾರಣವಾಗಿದ್ದು ಗಿಲ್ಲಿ ಆಡಿದ ಮಾತು. ರಕ್ಷಿತಾ ಅವರು ಮಾಳು ಹಾಗೂ ಸೂರಜ್ ಬಳಿ ಹೋಗಿ ಅತ್ತಿದ್ದರಂತೆ. ಇವರು ಹೋಗುವ ಬಗ್ಗೆ ರಕ್ಷಿತಾಗೆ ಮೊದಲೇ ಸೂಚನೆ ಇತ್ತು ಎಂದು ಗಿಲ್ಲಿ ನಟ ಮಾತನಾಡಿದ್ದಾರೆ. ಆ ಬಗ್ಗೆ ಚರ್ಚೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮೀ ಹಣ – Kannada News | Gruhalakshmi Schemes 24th Instalment Credited to Belagavi Beneficiaries

ಬೆಳಗಾವಿ, ಡಿಸೆಂಬರ್​​ 30: ಹೊಸ ವರ್ಷದ ಸಂದರ್ಭದಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಯೋಜನೆಯ 24ನೇ ಕಂತಿನ 2,000 ರೂ.  ಬೆಳಗಾವಿ ಜಿಲ್ಲೆಯ ಹಲವು ಮಹಿಳೆಯರ ಖಾತೆಗೆ ಸಂದಾಯವಾಗಿದೆ. ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯದಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಟಿವಿ9 ನಿರಂತರವಾಗಿ ವರದಿ ಪ್ರಸಾರ ಮಾಡಿತ್ತು. ಇನ್ನು ಹಣ ಪಡೆದ ಫಲಾನುಭವಿಗಳು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಹಣ ಹಾಕೋದು ವಿಳಂಬವಾದ ಹಿನ್ನೆಲೆ ಮಹಿಳೆಯರಲ್ಲಿ ಅಸಮಾಧಾನವಿತ್ತು.  ಆದರೆ ಈಗ ಹೊಸ ವರ್ಷದ ಹೊತ್ತಲ್ಲಿ ಹಣ ಬಂದಿರುವುದು ಸಂತಸ ತಂದಿದೆ ಎಂದು ಫಲಾನುಭವಿಗಳು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಗಾಂಧಿ ಕುಟುಂಬದಲ್ಲಿ ಶೀಘ್ರ ಮೊಳಗಲಿದೆ ಓಲಗದ ಸದ್ದು, ಮದುವೆ ಯಾರದ್ದು? – Kannada News | Raihan Vadra Takes Next Step, Engaged to Longtime Partner Aviva Baig

ನವದೆಹಲಿ, ಡಿಸೆಂಬರ್ 30: ಶೀಘ್ರವೇ ಗಾಂಧಿ ಕುಟುಂಬದಲ್ಲಿ ಮೊಳಗಲಿದೆ ಓಲಗದ ಸದ್ದು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ(Priyanka Gandhi Vadra) ಮತ್ತು ರಾಬರ್ಟ್​ ವಾದ್ರಾ ಪುತ್ರ ರೆಹಾನ್ ವಾದ್ರಾ ಶೀಘ್ರ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ರೆಹಾನ್ ತನ್ನ ಗೆಳತಿ ಅವಿವಾ ಬೇಗ್ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ರೆಹಾನ್ ವಾದ್ರಾ ಮತ್ತು ಅವಿವಾ ಕಳೆದ 7 ವರ್ಷಗಳಿಂದ ಪರಿಚಯವಿತ್ತು.

ರೆಹಾನ್ ಇತ್ತೀಚೆಗೆ ಅವಿವಾಗೆ ಪ್ರಪೋಸ್ ಮಾಡಿದ್ದಾರೆ. ಎರಡೂ ಕುಟುಂಬಗಳು ಅವರ ಮದುವೆಗೆ ಒಪ್ಪಿಗೆ ನೀಡಿವೆ. ಅವಿವಾ ರೆಹಾನ್ ಅವರ ವಿವಾಹ ಪ್ರಸ್ತಾಪವನ್ನು ಸಂತೋಷದಿಂದ ಒಪ್ಪಿಕೊಂಡಿದ್ದಾರೆ. ಹೊಸ ವರ್ಷದ ಮೊದಲು ಈ ಸಂತೋಷದ ಸಂಬಂಧದ ಔಪಚಾರಿಕ ಆರಂಭವನ್ನು ನಿರೀಕ್ಷಿಸಲಾಗಿದೆ.

ನಿಶ್ಚಿತಾರ್ಥ ಸಮಾರಂಭವು ರಾಜಸ್ಥಾನದಲ್ಲಿ ನಡೆಯಲಿದ್ದು, ಇದು ಎರಡು ಮೂರು ದಿನಗಳ ಖಾಸಗಿ ಕಾರ್ಯಕ್ರಮವಾಗಿದೆ. ನಿಶ್ಚಿತಾರ್ಥದ ದಿನಾಂಕಗಳನ್ನು ಇನ್ನೂ ಬಹಿರಂಗಗೊಂಡಿಲ್ಲ. ನಿಶ್ಚಿತಾರ್ಥವು 2026 ರ ಜನವರಿ ಆರಂಭದಲ್ಲಿ ನಡೆಯುವ ನಿರೀಕ್ಷೆಯಿದೆ. ರೆಹಾನ್ ಮತ್ತು ಅವಿವಾ ಅವರ ನಿಶ್ಚಿತಾರ್ಥದ ಬಗ್ಗೆ ಯಾವುದೇ ಕುಟುಂಬ ಅಧಿಕೃತವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಮದುವೆ ದಿನಾಂಕ ಇನ್ನೂ ಅಂತಿಮಗೊಂಡಿಲ್ಲ. ಶೀಘ್ರದಲ್ಲೇ ಅಂತಿಮಗೊಳ್ಳುವ ನಿರೀಕ್ಷೆಯಿದೆ. ಅವಿವಾ ಬೇಗ್ ಅವರ ಕುಟುಂಬ ದೆಹಲಿಯವರು.

ಮತ್ತಷ್ಟು ಓದಿ: ನೀವು ಚುನಾವಣೆಗಾಗಿ ಮಾತ್ರ, ನಾವು ದೇಶಕ್ಕಾಗಿ: ಬಿಜೆಪಿ ವಿರುದ್ಧ ಗುಡುಗಿದ ಪ್ರಿಯಾಂಕಾ ಗಾಂಧಿ

ಕಲೆ ಮತ್ತು ಛಾಯಾಗ್ರಹಣದಲ್ಲಿ ಉತ್ಸಾಹಿಯಾಗಿರುವ ರೆಹಾನ್, ರಾಜಕೀಯದಿಂದ ದೂರ ಇದ್ದಾರೆ,ದೆಹಲಿಯಲ್ಲಿ ತಮ್ಮ ಆರಂಭಿಕ ಶಿಕ್ಷಣವನ್ನು ಪೂರ್ಣಗೊಳಿಸಿದ ನಂತರ, ದೃಶ್ಯ ಕಲಾವಿದ ರೆಹಾನ್ ವಾದ್ರಾ ಡೆಹ್ರಾಡೂನ್ ಮತ್ತು ಲಂಡನ್‌ನಲ್ಲಿ ಹೆಚ್ಚಿನ ಅಧ್ಯಯನವನ್ನು ಮುಂದುವರೆಸಿದರು.
ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ವಿರಳವಾಗಿ ಕಾಣಿಸಿಕೊಳ್ಳುವ ರೆಹಾನ್ ರಾಜಕೀಯ ಪ್ರವೇಶಿಸುತ್ತಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಅವಿವಾ ಬೇಗ್ ಅವರ ಕುಟುಂಬವನ್ನು ವಾದ್ರಾ ಕುಟುಂಬಕ್ಕೆ ಹತ್ತಿರವೆಂದು ಪರಿಗಣಿಸಲಾಗಿದೆ ಎಂಬುದು ಗಮನಿಸಬೇಕಾದ ಸಂಗತಿ. ದೆಹಲಿಯಲ್ಲಿ ಪ್ರಾಥಮಿಕ ಶಿಕ್ಷಣವನ್ನು ಪೂರ್ಣಗೊಳಿಸಿದ ನಂತರ, ಅವಿವಾ ಮಾಧ್ಯಮ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಪದವಿ ಪಡೆದರು. ರೆಹಾನ್ ಅವರಂತೆಯೇ, ಅವಿವಾ ಬೇಗ್ ಕೂಡ ಛಾಯಾಗ್ರಹಣದಲ್ಲಿ ಆಸಕ್ತಿ ಹೊಂದಿದ್ದಾರೆ ಮತ್ತು ಛಾಯಾಗ್ರಾಹಕರಾಗಿದ್ದಾರೆ.

ಮಾಜಿ ರಾಷ್ಟ್ರೀಯ ಮಟ್ಟದ ಫುಟ್ಬಾಲ್ ಆಟಗಾರ್ತಿ ಅವಿವಾ ಬೇಗ್ ವೃತ್ತಿಪರ ಛಾಯಾಗ್ರಾಹಕಿ ಮತ್ತು ನಿರ್ಮಾಪಕಿ ಕೂಡ.ಯು ಕ್ಯಾನ್ಟ್ ಮಿಸ್ ದಿಸ್ ಮತ್ತು ದಿ ಇಲ್ಯೂಸರಿ ವರ್ಲ್ಡ್ ನಂತಹ ಪ್ರದರ್ಶನಗಳ ಮೂಲಕ ಖ್ಯಾತಿ ಗಳಿಸಿದ ಅವಿವಾ ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪೋರ್ಟಲ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ. ರೆಹಾನ್ ಅವರಂತೆಯೇ, ಅವಿವಾ ಬೇಗ್ ಕೂಡ ಪ್ರಕೃತಿ ಛಾಯಾಗ್ರಹಣದಲ್ಲಿ ಆಸಕ್ತಿ ಹೊಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಡಿಕಾಕ್ ಸಿಡಿಲಬ್ಬರ… ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್

ಸೌತ್ ಆಫ್ರಿಕಾ ಟಿ20 ಲೀಗ್​ನ 5ನೇ ಪಂದ್ಯದಲ್ಲಿ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡವು ಭರ್ಜರಿ ಜಯ ಸಾಧಿಸಿದೆ. ಗೆಬೆಹಾದಲ್ಲಿ ಸೇಂಟ್ ಜಾರ್ಜ್​ ಪಾರ್ಕ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಪ್ರಿಟೋರಿಯ ಕ್ಯಾಪಿಟಲ್ಸ್ ಹಾಗೂ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡಗಳು ಮುಖಾಮುಖಿಯಾಗಿದ್ದವು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡದ ಪರ ಆರಂಭಿಕನಾಗಿ ಕಣಕ್ಕಿಳಿದ ಕ್ವಿಂಟನ್ ಡಿಕಾಕ್ 47 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 77 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡವು 20 ಓವರ್​ಗಳಲ್ಲಿ 188 ರನ್ ಕಲೆಹಾಕಿತು.

189 ರನ್​ಗಳ ಗುರಿ ಬೆನ್ನತ್ತಿದ ಪ್ರಿಟೋರಿಯ ಕ್ಯಾಪಿಟಲ್ಸ್ ತಂಡವು 18 ಓವರ್​ಗಳಲ್ಲಿ 140 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡವು 48 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಈ ಭರ್ಜರಿ ಗೆಲುವಿನೊಂದಿಗೆ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡವು ಬೋನಸ್ ಪಾಯಿಂಟ್ ಪಡೆದುಕೊಂಡಿದೆ. ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ 1.25 ಕ್ಕಿಂತ ಹೆಚ್ಚಿನ ರನ್ ರೇಟ್ ವ್ಯತ್ಯಾಸದಲ್ಲಿ ಗೆಲ್ಲುವ ತಂಡಕ್ಕೆ ಹೆಚ್ಚುವರಿ ಒಂದು ಅಂಕಗಳನ್ನು ನೀಡಲಾಗುತ್ತದೆ. ಅದರಂತೆ ಪ್ರಿಟೋರಿಯ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿರುವ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡವು ಒಟ್ಟು 5 ಅಂಕಗಳನ್ನು ಪಡೆದುಕೊಂಡಿದೆ.

 

Source link