Headlines

ನೆಲಮಂಗಲ: ಖಾಸಗಿ ಕಂಪನಿಯ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ, ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

ನೆಲಮಂಗಲ, ಏಪ್ರಿಲ್ 9: ನೆಲಮಂಗಲದ ಅಡಕಮಾರನಹಳ್ಳಿಯಲ್ಲಿನ ಆಹಾರ ಸಂಗ್ರಹ ಗೋದಾಮಿನಲ್ಲಿ ಬುಧವಾರ ರಾತ್ರಿ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಆಂಜನೇಯ ದೇಗುಲದ ಬಳಿ ಇರುವ ಗೋದಾಮಿನಲ್ಲಿ ಸಂಭವಿಸಿದ ಈ ದುರ್ಘಟನೆಯಲ್ಲಿ ಗೋದಾಮಿನಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಆಹಾರ ಪದಾರ್ಥಗಳು ಬೆಂಕಿಗೆ ಆಹುತಿಯಾಗಿ ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಅವಘಡದ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ನೆಲಮಂಗಲ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ರಾತ್ರಿ ಸುಮಾರು 10 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ…

Read More

Karnataka 2nd PUC Results 2026: ಇಂದೇ ದ್ವಿತೀಯ ಪಿಯುಸಿ ಫಲಿತಾಂಶ: ವಿದ್ಯಾರ್ಥಿಗಳೇ ಈ ವಿಚಾರವನ್ನು ಕಡ್ಡಾಯವಾಗಿ ತಿಳಿದುಕೊಳ್ಳಬೇಕು

ಬೆಂಗಳೂರು, ಏ.9: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದೆ. ರಾಜ್ಯದಾದ್ಯಂತ ಸುಮಾರು 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ಪರೀಕ್ಷೆಯ ಫಲಿತಾಂಶ ಮತ್ತು ಅಂಕಪಟ್ಟಿ ಡೌನ್‌ಲೋಡ್ ಮಾಡಲು ಸಮಯ ನಿಗದಿಯಾಗಿದೆ. ಇಂದು (ಏಪ್ರಿಲ್ 9, 2026) ಇಂದು ಮಧ್ಯಾಹ್ನ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಫಲಿತಾಂಶ ಘೋಷಿಸಲಿದ್ದಾರೆ. ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಇಂದು ಸಂಜೆ 5:00 ಗಂಟೆಯ ನಂತರ…

Read More

ದಾವಣಗೆರೆ ಬಾಗಲಕೋಟೆ ಉಪಚುನಾವಣೆ 2026: ಇಂದು ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

ದಾವಣಗೆರೆ, ಬಾಗಲಕೋಟೆ, ಏಪ್ರಿಲ್ 9: ಕರ್ನಾಟಕದ (Karnataka By Elections) ವಿಧಾನಸಭೆ ಕ್ಷೇತ್ರಗಳಾದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣೆ (Assembly ByPolls) ನಡೆಯುತ್ತಿದೆ. ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಮತ್ತು ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಈ ಸ್ಥಾನಗಳಿಗೆ ಇಂದು ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಮತದಾರರು ಯಾರ ಕೈ ಹಿಡಿಯಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಆಡಳಿತಾರೂಢ ಕಾಂಗ್ರೆಸ್​​ಗೆ ಎರಡೂ ಕ್ಷೇತ್ರಗಳು ಪ್ರತಿಷ್ಠೆಯ ಕಣವಾಗಿದ್ದು, ಅತ್ತ ಪ್ರತಿಪಕ್ಷ ಬಿಜೆಪಿ ಸಹ ಗೆಲುವಿಗೆ…

Read More

Assembly Elections 2026 Voting: ಇಂದು ಕೇರಳ, ಅಸ್ಸಾಂ ಹಾಗೂ ಪುದುಚೇರಿಯಲ್ಲಿ ಮತದಾನ

ದೆಹಲಿ, ಏ.9: ದೇಶದ ಗಮನ ಸೆಳೆದಿರುವ ಕೇರಳ, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಇಂದು ವಿಧಾನಸಭಾ ಚುನಾವಣೆಯ (Assembly Elections 2026 Voting) ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. ಈ ಮೂರೂ ರಾಜ್ಯಗಳಲ್ಲಿ ಸರ್ಕಾರ ರಚನೆಗಾಗಿ ರಾಜಕೀಯ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಕೇರಳ: ಕೇರಳದ 140 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಆಡಳಿತಾರೂಢ ಎಲ್‌ಡಿಎಫ್ (LDF) ಮತ್ತು ಪ್ರತಿಪಕ್ಷ ಯುಡಿಎಫ್ (UDF) ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದರೆ, ಬಿಜೆಪಿ ಕೂಡ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಕೇವಲ ಮಾತಿನಿಂದ ತಮ್ಮ ಕೆಲಸವನ್ನು ಮಾಡಿಸಿಕೊಳ್ಳುವರು

ಮೇಷ ರಾಶಿ: ವಿದ್ಯಾರ್ಥಿಗಳು ಪರಿಶ್ರಮದ ಓದಿಗೆ ಫಲಸಿಗಬಹುದು. ಸಂಗಾತಿಯ ಪರೀಕ್ಷೆ ನಡೆಯುವುದು. ಉತ್ಸಾಹಕ್ಕೆ ತೊಂದರೆ ಬರುವ ಕಡೆ ನೀವು ಇರಲಾರಿರಿ. ಕಾರ್ಯಸ್ಥಾನದಲ್ಲಿ ಗೊಂದಲದ, ಹತಾಶೆಯ ವಾತಾವರಣ ಇರಬಹುದು. ಇಂದು ನಿಮ್ಮ ಮಾತಿನಲ್ಲಿ ಕಠೋರತೆ ಇರಲಿದ್ದು, ಅದನ್ನು ಕಡಿಮೆ‌ ಮಾಡಿಕೊಳ್ಳಬೇಕು. ಕಾರ್ಯಕ್ಷೇತ್ರದಲ್ಲಿ ನಿಮ್ಮ ಯೋಗ್ಯತೆಗೆ ತಕ್ಕಂತೆ ಕೆಲಸ ಸಿಗುತ್ತದೆ. ಹಿರಿಯರ ಸೇವೆಯಲ್ಲಿ ನೀವು ಇರುವಿರಿ. ನಕಾರಾತ್ಮಕ ಆಲೋಚನೆಗಳನ್ನು ತಲೆಯಿಂದ ತೆಗೆಯಿರಿ. ವೃಷಭ ರಾಶಿ: ನಿಮ್ಮ ಮೇಲೆ ಸಹಾನುಭೂತಿಯು ಉಂಟಾಗುವ ಸಾಧ್ಯತೆ ಇದೆ. ನಿಮ್ಮನ್ನು ನೀವೇ ಕಾಪಾಡಿಕೊಳ್ಳಿ. ಹಲವು ದಿನಗಳಿಂದ…

Read More

DC vs GT: ಸಿಂಗಲ್ ನಿರಾಕರಿಸಿದ ಮಿಲ್ಲರ್, ಕುಲ್ದೀಪ್ ಎಡವಟ್ಟು; 1 ರನ್​ನಿಂದ ಸೋತ ಡೆಲ್ಲಿ

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಐಪಿಎಲ್ 2026 ರ 14ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ 211 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ತಂಡ ಗೆಲುವಿಗಾಗಿ ಕೊನೆಯವರೆಗೂ ಹೋರಾಟ ನೀಡಿತ್ತಾದರೂ ಅದು ಸಾಧ್ಯವಾಗಲಿಲ್ಲ. ಡೆಲ್ಲಿ ಪರ ರಾಹುಲ್ 92 ರನ್​ಗಳ ಇನ್ನಿಂಗ್ಸ್ ಹಾಗೂ ಕೊನೆಯಲ್ಲಿ ಡೇವಿಡ್ ಮಿಲ್ಲರ್ 41 ರನ್​ಗಳ ಇನ್ನಿಂಗ್ಸ್ ಆಡಿದರಾದರೂ ತಂಡವನ್ನು ಗೆಲುವಿನ ದಡ ಮುಟ್ಟಿಸುವಲ್ಲಿ…

Read More

ಲೆಬನಾನ್ ಮೇಲಿನ ದಾಳಿಗೆ ಪ್ರತೀಕಾರ; ಮತ್ತೆ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದ ಇರಾನ್

ಟೆಹ್ರಾನ್, ಏಪ್ರಿಲ್ 8: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಜೊತೆ ಕದನ ವಿರಾಮ ಘೋಷಿಸಿದ 24 ಗಂಟೆಗಳ ಒಳಗೆ ಲೆಬನಾನ್ (Lebanon Attack) ಮೇಲೆ ಇಸ್ರೇಲ್ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ ಇರಾನ್ ಮತ್ತೆ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದೆ. ಇಂದು ಮುಂಜಾನೆ ಅಮೆರಿಕ ಮತ್ತು ಇರಾನ್ ಎರಡು ವಾರಗಳ ಕದನ ವಿರಾಮವನ್ನು ಘೋಷಿಸಿದ್ದವು. ಇದರ ಭಾಗವಾಗಿ ಇರಾನ್ ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಒಪ್ಪಿಕೊಂಡಿತ್ತು. ಆದರೆ, ಇಸ್ರೇಲ್ ಲೆಬನಾನ್ ಮೇಲೆ ನಡೆಸಿದ ದಾಳಿಯನ್ನು ಖಂಡಿಸಿರುವ ಇರಾನ್…

Read More

ಇದು ನನ್ನನ್ನು ಕಾಡಿದ ಕಥೆ: ಹೊಸ ಸಿನಿಮಾ ಬಗ್ಗೆ ಬಿಗ್ ಬಾಸ್ ಕಾರ್ತಿಕ್ ಮಹೇಶ್ ಮಾತು

ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ‘ಸೀತಾ ರಾಮ ರಾಜು’ (Seetha Rama Raju) ಸಿನಿಮಾ ಮುಹೂರ್ತ ನಡೆದಿದೆ. ಈ ಸಿನಿಮಾದಲ್ಲಿ ಬಿಗ್ ಬಾಸ್ ಖ್ಯಾತಿಯ ಕಾರ್ತಿಕ್ ಮಹೇಶ್ ಅವರು ನಟಿಸುತ್ತಿದ್ದಾರೆ. ‘ಮ್ಯಾಟ್ರಿಕ್ಸ್ ಮೂವೀ ಮೇಕರ್ಸ್’ ಸಂಸ್ಥೆಯ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಸುದ್ದಿಗೋಷ್ಠಿಯಲ್ಲಿ ಕಾರ್ತಿಕ್ ಮಹೇಶ್ ಅವರು ಮಾತನಾಡಿ, ಸಿನಿಮಾ ಬಗ್ಗೆ ಮಾಹಿತಿ ನೀಡಿದರು. ‘ನನಗೆ ತುಂಬ ಇಷ್ಟ ಆದ ಕಥೆ ಇದು. ತುಂಬಾ ಒಳ್ಳೆಯ ಲವ್ ಸ್ಟೋರಿ ಇದೆ. ಈ ಕಥೆ ನನ್ನನ್ನು ತುಂಬ ಕಾಡಿದೆ….

Read More

DC vs GT: ಕೊನೆಗೂ ಅಬ್ಬರಿಸಿದ ಕೆಎಲ್ ರಾಹುಲ್; ಸಿಡಿಯಿತು 41ನೇ ಅರ್ಧಶತಕ

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಐಪಿಎಲ್ 2026 ರ 14ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ 211 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ತಂಡದ ಪರ ಕನ್ನಡಿಗ ಕೆಎಲ್ ರಾಹುಲ್ ಸ್ಫೋಟಕ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಈ ಸೀಸನ್​ನಲ್ಲಿ ಇದು ರಾಹುಲ್ ಅವರ ಮೊದಲ ಅರ್ಧಶತಕವಾಗಿದೆ. ಮೊದಲೆರಡು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ರಾಹುಲ್,…

Read More

ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿಸಿದರೆ ಕದನ ವಿರಾಮದಿಂದ ಹಿಂದೆ ಸರಿಯುತ್ತೇವೆ; ಇರಾನ್ ಎಚ್ಚರಿಕೆ

ಟೆಹ್ರಾನ್, ಏಪ್ರಿಲ್ 8: ಕದನ ವಿರಾಮ ಘೋಷಿಸಿದ ಕೆಲವು ಗಂಟೆಗಳ ನಂತರ ಇಸ್ರೇಲ್ ಲೆಬನಾನ್ ಮೇಲೆ ದಾಳಿ ನಡೆಸಿದೆ. ಈ ರೀತಿ ಕದನವಿರಾಮವನ್ನು ಉಲ್ಲಂಘಿಸುವುದನ್ನು ಮುಂದುವರಿಸಿದರೆ ಅಮೆರಿಕದ ಕದನವಿರಾಮ (Ceasefire) ಒಪ್ಪಂದದಿಂದ ಹಿಂದೆ ಸರಿಯುವುದಾಗಿ ಇರಾನ್ (Iran) ಬೆದರಿಕೆ ಹಾಕಿದೆ.ಇಸ್ರೇಲಿ ಸೈನ್ಯವು 10 ನಿಮಿಷಗಳ ಅವಧಿಯಲ್ಲಿ ಲೆಬನಾನ್‌ನಾದ್ಯಂತ ಅನೇಕ ಸ್ಥಳಗಳಲ್ಲಿ 100 ವೈಮಾನಿಕ ದಾಳಿಗಳನ್ನು ಪ್ರಾರಂಭಿಸಿದಾಗ ಇರಾನ್‌ನಿಂದ ಈ ಹೇಳಿಕೆ ಬಂದಿದೆ. “ಲೆಬನಾನ್‌ನಲ್ಲಿ ಇಸ್ರೇಲ್ ಮಾಡಿದ ಅಪರಾಧ ಮತ್ತು ಕದನ ವಿರಾಮ ನಿಯಮಗಳ ಉಲ್ಲಂಘನೆಗೆ ಪ್ರತಿಕ್ರಿಯೆಯಾಗಿ ಇರಾನ್…

Read More