Category Archives: Blog

Your blog category

‘ಗೌರಿ’ ಧಾರಾವಾಹಿ ನಟಿ ನಂದಿನಿ ನಿಧನ: ಆರ್​ಆರ್​ ನಗರದಲ್ಲಿ ದುರಂತ ಅಂತ್ಯ – Kannada News | Gauri Serial actress Nandini CM Death in Bengaluru

ಕನ್ನಡ ಮತ್ತು ತಮಿಳು ಧಾರಾವಾಹಿಗಳಲ್ಲಿ (Serial) ನಟಿಸಿ ಖ್ಯಾತಿ ಪಡೆದಿದ್ದ ನಂದಿನಿ ಸಿಎಂ (Nandini CM) ಅವರು ನಿಧನರಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡು ಅವರು ಕೊನೆಯುಸಿರು ಎಳೆದಿದ್ದಾರೆ ಎನ್ನಲಾಗುತ್ತಿದೆ. ಬೆಂಗಳೂರಿನ ಆರ್​ಆರ್​ ನಗರದಲ್ಲಿ ನಂದಿನಿ ಅವರು ಸಾವಿಗೆ ಶರಣಾಗಿದ್ದಾರೆ. ಅವರ ಸಾವಿಗೆ (Nandini CM Death) ನಿಖರ ಕಾರಣ ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಬಣ್ಣದ ಲೋಕದಲ್ಲಿ ಮಿಂಚುವ ಕನಸು ಕಂಡಿದ್ದ ನಂದಿನಿ ಅವರು ಈ ರೀತಿ ದುರಂತ ಅಂತ್ಯ ಕಂಡಿರುವುದು ನೋವಿನ ಸಂಗತಿ.

ಕನ್ನಡದ ‘ಜೀವ ಹೂವಾಗಿದೆ’, ‘ನೀನಾದೆ ನಾ’, ‘ಸಂಘರ್ಷ’, ‘ಮಧುಮಗಳು’ ಧಾರಾವಾಹಿಗಳಲ್ಲಿ ನಂದಿನಿ ಅವರು ನಟಿಸಿದ್ದರು. ತಮಿಳಿನ ‘ಗೌರಿ’ ಧಾರಾವಾಹಿಯಲ್ಲಿ ನಂದಿನಿ ಅವರು ನಾಯಕಿಯ ಪಾತ್ರ ಮಾಡುತ್ತಿದ್ದರು. ದುರ್ಗಾ ಮತ್ತು ಕನಕ ಎಂಬ ಪಾತ್ರಗಳ ಮೂಲಕ ಅವರು ವೀಕ್ಷಕರಿಗೆ ಪರಿಚಿತರಾಗಿದ್ದರು. ಅವರ ನಿಧನದಿಂದ ಕಿರುತೆರೆ ಲೋಕದಲ್ಲಿ ಶೋಕ ಆವರಿಸಿದೆ.

ಇದನ್ನೂ ಓದಿ: ಸ್ತನ ಕ್ಯಾನ್ಸರ್​ನಿಂದ ಕಿರುತೆರೆ ನಟಿ ಕಮಲಶ್ರೀ ನಿಧನ

ನಂದಿನಿ ಅವರು ಮೂಲತಃ ಕೊಟ್ಟೂರಿನವರು. ಆದರೆ ಬೆಂಗಳೂರಿನಲ್ಲಿ ವಾಸವಿದ್ದರು. ಪಿಜಿಯಲ್ಲಿ ವಾಸವಿದ್ದ ಅವರು ತಾಯಿಗೆ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ನಂದಿನಿ ನಿಧನದ ಸುದ್ದಿ ಕೇಳಿ ‘ಗೌರಿ’ ಧಾರಾವಾಹಿ ತಂಡಕ್ಕೆ ಆಘಾತ ಎದುರಾಗಿದೆ. ವೀಕ್ಷಕರು ಹಾಗೂ ಆಪ್ತರು ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ.

‘ಗೌರಿ’ ಧಾರಾವಾಹಿಯಲ್ಲಿ ದ್ವಿಪಾತ್ರ ಮಾಡುವ ಅವಕಾಶವನ್ನು ನಂದಿನಿ ಅವರು ಪಡೆದಿದ್ದರು. ಅವರ ನಟನೆಗೆ ವೀಕ್ಷಕರಿಗೆ ಮೆಚ್ಚುಗೆ ಸಿಕ್ಕಿತ್ತು. ಕಿರುತೆರೆ ಲೋಕದಲ್ಲಿ ಹೊಸ ಹೊಸ ಅವಕಾಶಗಳು ಅವರಿಗೆ ಸಿಗುವ ಸಾಧ್ಯತೆ ದಟ್ಟವಾಗಿತ್ತು. ಈ ಸಮಯದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು ಯಾಕೆ ಎಂಬ ಪ್ರಶ್ನೆ ಕಾಡುತ್ತಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೇ ಸಿಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:21 pm, Mon, 29 December 25

Source link

ಕಿಡಿಗೇಡಿತನ; ಆರ್‌ಎಸ್‌ಎಸ್-ಬಿಜೆಪಿ ಕುರಿತ ದಿಗ್ವಿಜಯ ಸಿಂಗ್ ಹೊಗಳಿಕೆಗೆ ರಾಹುಲ್ ಗಾಂಧಿ ಅಸಮಾಧಾನ – Kannada News | You did mischief; Rahul Gandhi’s banter with Digvijaya Singh after RSS BJP praise

ನವದೆಹಲಿ, ಡಿಸೆಂಬರ್ 29: ಆರ್‌ಎಸ್‌ಎಸ್-ಬಿಜೆಪಿಯಿಂದ ನಮ್ಮ ಪಕ್ಷ ಕಲಿಯುವುದಿದೆ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಕಾಂಗ್ರೆಸ್ ಹೈಕಮಾಂಡ್​​ನ ಕೆಂಗಣ್ಣಿಗೆ ಗುರಿಯಾಗಿದ್ದರು. ಇಂದು ಕಾಂಗ್ರೆಸ್ ಸಂಸ್ಥಾಪನಾ ದಿನದಂದು ಪಕ್ಷದ ಪ್ರಧಾನ ಕಚೇರಿ ಇಂದಿರಾ ಭವನದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರನ್ನು ಮುಖಾಮುಖಿಯಾಗಿ ಭೇಟಿಯಾದರು.

ಮೂಲಗಳ ಪ್ರಕಾರ, ರಾಹುಲ್ ಗಾಂಧಿ ದಿಗ್ವಿಜಯ ಸಿಂಗ್ ಅವರೊಂದಿಗೆ ಕೈಕುಲುಕುತ್ತಾ, “ನೀವು ನಿನ್ನೆ ಕಿಡಿಗೇಡಿತನ ಮಾಡಿದ್ದೀರಿ” ಎಂದು ತಮಾಷೆಯಾಗಿ ಹೇಳಿದ್ದಾರೆ. ಇದು ದಿಗ್ವಿಜಯ ಸಿಂಗ್ ಸುತ್ತಲೂ ನಿಂತಿದ್ದ ನಾಯಕರಲ್ಲಿ ನಗು ಮೂಡಿಸಿತು. ಅವರಲ್ಲಿ ಸೋನಿಯಾ ಗಾಂಧಿ ಕೂಡ ಇದ್ದರು ಎನ್ನಲಾಗಿದೆ.

ಇದನ್ನೂ ಓದಿ: ಆರೆಸ್ಸೆಸ್, ಬಿಜೆಪಿಯ ಸಂಘಟನಾ ಶಕ್ತಿ ಶ್ಲಾಘಿಸಿದ ಮಾಜಿ ಸಿಎಂ ದಿಗ್ವಿಜಯ ಸಿಂಗ್; ಕಾಂಗ್ರೆಸ್ಸನ್ನು ಕಿಚಾಯಿಸಿದ ಬಿಜೆಪಿ

ಶನಿವಾರ ದಿಗ್ವಿಜಯ ಸಿಂಗ್ ಅವರು ಆರ್‌ಎಸ್‌ಎಸ್-ಬಿಜೆಪಿ ಮೈತ್ರಿಕೂಟವನ್ನು ಶ್ಲಾಘಿಸಿದ್ದರು. ಎಲ್​.ಕೆ ಅಡ್ವಾಣಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಹಳೆಯ ಫೋಟೋವನ್ನು ಪೋಸ್ಟ್ ಮಾಡಿದ್ದ ದಿಗ್ವಿಜಯ ಸಿಂಗ್ ಸಾಮಾನ್ಯ ಕಾರ್ಯಕರ್ತ ಉನ್ನತ ಹುದ್ದೆಗೇರಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. “ನಾನು ಈ ಫೋಟೋವನ್ನು ಗಮನಿಸಿದೆ. ಇದು ತುಂಬಾ ಪ್ರಭಾವಶಾಲಿ ಫೋಟೋ. ಒಬ್ಬ ತಳಮಟ್ಟದ ಆರ್‌ಎಸ್‌ಎಸ್ ಸ್ವಯಂಸೇವಕ ಮತ್ತು ಜನಸಂಘ, ಬಿಜೆಪಿ ಕಾರ್ಯಕರ್ತ ತನ್ನ ಪಕ್ಷದ ನಾಯಕರ ಪಾದಗಳ ಕೆಳಗೆ ನೆಲದ ಮೇಲೆ ಕುಳಿತು ಹೇಗೆ ಒಂದು ರಾಜ್ಯದ ಮುಖ್ಯಮಂತ್ರಿ ಮತ್ತು ದೇಶದ ಪ್ರಧಾನಿಯಾದರು ಎಂಬುದನ್ನು ನಾವು ಗಮನಿಸಬೇಕು. ಇದು ಸಂಘಟನೆಯ ಶಕ್ತಿ. ಜೈ ಸೀತಾ ರಾಮ್” ಎಂದು ದಿಗ್ವಿಜಯ ಸಿಂಗ್ ಪೋಸ್ಟ್ ಮಾಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತ್ರಿಪುರದ ವಿದ್ಯಾರ್ಥಿಯ ಭೀಕರ ಹತ್ಯೆಗೆ ಕಠಿಣ ಕ್ರಮದ ಭರವಸೆ ನೀಡಿದ ಸಿಎಂ; ಮರಣೋತ್ತರ ಪರೀಕ್ಷೆಯಲ್ಲೇನಿದೆ? – Kannada News | Tripura student killing Bleeding In Brain Damage To Spine what is in Medical Report

ಡೆಹ್ರಾಡೂನ್, ಡಿಸೆಂಬರ್ 29: ಡೆಹ್ರಾಡೂನ್‌ನಲ್ಲಿ ಓದುತ್ತಿದ್ದ ತ್ರಿಪುರದ ವಿದ್ಯಾರ್ಥಿಯ ಹತ್ಯೆಯಲ್ಲಿ ಭಾಗಿಯಾಗಿರುವ ಆರನೇ ಆರೋಪಿಯನ್ನು ಬಂಧಿಸಲು ಉತ್ತರಾಖಂಡದ (Uttarakhand) ಪೊಲೀಸರು ನೇಪಾಳಕ್ಕೆ ತಮ್ಮ ತಂಡವನ್ನು ಕಳುಹಿಸಿದ್ದಾರೆ. 24 ವರ್ಷದ ಏಂಜೆಲ್ ಚಕ್ಮಾ ಎಂಬ ಯುವಕ ಡೆಹ್ರಾಡೂನ್‌ನ ಖಾಸಗಿ ವಿಶ್ವವಿದ್ಯಾಲಯದಲ್ಲಿ ಎಂಬಿಎ ಓದುತ್ತಿದ್ದ. ಆತನ ಮೇಲೆ ಡಿಸೆಂಬರ್ 9ರಂದು 6 ಜನರ ಗುಂಪೊಂದು ಸಣ್ಣ ಜಗಳದ ಬಳಿಕ ಹಲ್ಲೆ ಮಾಡಿದ್ದರು. 17 ದಿನಗಳ ಜೀವನ್ಮರಣದ ಹೋರಾಟದ ಬಳಿಕ ಆತ ಡಿ. 26ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದ. ಈ ಹತ್ಯೆ ಜನಾಂಗೀಯ ಹಲ್ಲೆಯೆಂಬ ಹಣೆಪಟ್ಟಿ ಪಡೆದು ದೊಡ್ಡ ಸುದ್ದಿಯಾಗಿತ್ತು.

ಈ ಪ್ರಕರಣದ 6 ಆರೋಪಿಗಳಲ್ಲಿ ಐವರನ್ನು ಬಂಧಿಸಲಾಗಿದೆ. ಆದರೆ ನೇಪಾಳದ ಕಾಂಚನಪುರ ಜಿಲ್ಲೆಯ ನಿವಾಸಿ ಯಜ್ಞರಾಜ್ ಅವಸ್ಥಿ ತಲೆಮರೆಸಿಕೊಂಡಿದ್ದಾನೆ. ಆತನ ಬಂಧನಕ್ಕೆ 25,000 ರೂ. ಬಹುಮಾನ ಘೋಷಿಸಿರುವ ಪೊಲೀಸರು, ಆತನನ್ನು ಪತ್ತೆಹಚ್ಚಲು ನೇಪಾಳಕ್ಕೆ ತಂಡವನ್ನು ಕಳುಹಿಸಿದ್ದಾರೆ.

ಇದನ್ನೂ ಓದಿ: ಉನ್ನಾವ್ ಲೈಂಗಿಕ ದೌರ್ಜನ್ಯ ಪ್ರಕರಣ; ಕುಲದೀಪ್ ಸೆಂಗಾರ್ ಜಾಮೀನು ರದ್ದತಿಗೆ ಸುಪ್ರೀಂ ಕೋರ್ಟ್ ತಡೆ

ತ್ರಿಪುರದ ಯುವಕನ ಹತ್ಯೆಯಿಂದ ಆಕ್ರೋಶ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಎಚ್ಚರಿಸಿದ್ದಾರೆ. ಪರಾರಿಯಾಗಿರುವ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ. ಆ ಯುವಕನ ತಂದೆ ಭಾರತದ ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಯಲ್ಲಿ ಜವಾನರಾಗಿದ್ದಾರೆ.

ಇದನ್ನೂ ಓದಿ: 524 ವರ್ಷ ಹಿಂದಿನ ತ್ರಿಪುರ ಸುಂದರಿ ದೇವಸ್ಥಾನದ ವಿಶೇಷತೆ, ಇತಿಹಾಸವೇನು?

ತನ್ನ ವಿರುದ್ಧದ ಜನಾಂಗೀಯ ಹೇಳಿಕೆಗಳ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಕೊಲೆಯಾದ ತ್ರಿಪುರದ ವಿದ್ಯಾರ್ಥಿಯ ವೈದ್ಯಕೀಯ ವರದಿಯು ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದೆ ಎಂಬುದನ್ನು ತೋರಿಸಿದೆ. ತಲೆಗೆ ಗಾಯದ ಜೊತೆಗೆ, ಆತನ ತೋಳುಗಳು ಮತ್ತು ಪಾದಗಳಿಗೆ ಅನೇಕ ಗಾಯಗಳಾಗಿದ್ದವು. ಬೆನ್ನುಮೂಳೆಯು ಗಂಭೀರ ಹಾನಿಗೊಳಗಾಗಿತ್ತು. ಆತನ ದೇಹದ ಬಲಭಾಗದಲ್ಲಿ ಚಲನೆಯನ್ನು ಕಳೆದುಕೊಂಡಿದ್ದ ಎಂದು ವೈದ್ಯಕೀಯ ವರದಿ ತಿಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಗಳಿಗೆ ಗಾಳ, ಅಮ್ಮನಿಗೆ ಬೆಂಕಿ: ತಲೆಮರೆಸಿಕೊಂಡಿದ್ದ ಆಸಾಮಿ ಅಂದರ್ – Kannada News | Bengaluru: Man Arrested for Setting Mother on Fire After She Refused to Let Him Marry His Daughter

ಬೆಂಗಳೂರು, ಡಿಸೆಂಬರ್​ 29: ಪುತ್ರಿಯನ್ನು ಮದುವೆ ಮಾಡಿಕೊಡಲಿಲ್ಲವೆಂಬ ಕಾರಣಕ್ಕೆ ಆಕೆಯ ತಾಯಿಗೆ ವ್ಯಕ್ತಿಯೋರ್ವ ಬೆಂಕಿ (fire) ಹಚ್ಚಿರುವಂತಹ ಘಟನೆ ಬೆಂಗಳೂರಿನ ಬಸವೇಶ್ವರ ನಗರದ ಭೋವಿ ಕಾಲೋನಿಯಲ್ಲಿ ನಡೆದಿದೆ. ಗೀತಾ ಮೃತ ಮಹಿಳೆ. ಮುತ್ತು ಅಭಿಮನ್ಯು ಬೆಂಕಿ ಹಚ್ಚಿದ ವ್ಯಕ್ತಿ. ಸದ್ಯ ಆರೋಪಿ ಮುತ್ತು ಅಭಿಮನ್ಯುವನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ (Arrested). ಇನ್ನು ಗೀತಾ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಮಗಳನ್ನ ಮದುವೆ ಮಾಡಿಕೊಡು ಅಂತ ತಾಯಿಗೆ ಬೆಂಕಿ ಹಾಕಿದ್ದ ಕಿರಾತಕ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಕಳೆದ ಮಂಗಳವಾರ ಬಸವೇಶ್ವರ ನಗರದ ಭೋವಿ ಕಾಲೋನಿಯ ಮನೆಯಲ್ಲಿ ದುರ್ಘಟನೆ ನಡೆದಿತ್ತು. ಈ ಮನೆಯಲ್ಲಿ ವಾಸವಾಗಿದ್ದ ಗೀತಾಗೆ ಪೆಟ್ರೋಲ್ ಸುರಿದು ಬೆಂಕಿ ಹಾಕಿದ್ದ ಮುತ್ತು ಅಭಿಮನ್ಯು ಎಂಬಾತನೇ ಸೆರೆಸಿಕ್ಕಿರುವ ಆರೋಪಿ.

ಇದನ್ನೂ ಓದಿ: ಜವರಾಯನ ಅಟ್ಟಹಾಸಕ್ಕೆ ನಡುರಸ್ತೆಯಲ್ಲೇ ಪ್ರಾಣಬಿಟ್ಟ ಬಾವ-ಬಾಮೈದ: ಆಗಿದ್ದೇನು?

ಅನೇಕ ವರ್ಷಗಳ ಹಿಂದೆ ಗೀತಾ ಗಂಡ ಸಾವನ್ನಪ್ಪಿದ್ದರು. ಬಳಿಕ ಬಸವೇಶ್ವರ ನಗರದ ಭೋವಿ ಕಾಲೋನಿಯಲ್ಲಿ ತನ್ನ 19 ವರ್ಷದ ಮಗಳ ಜೊತೆ ವಾಸವಾಗಿದ್ದರು. ಪ್ರಾವಿಜನ್‌ ಸ್ಟೋರ್‌ ಇಟ್ಕೊಂಡಿದ್ದ ಗೀತಾರಿಗೆ ಅನೇಕ ವರ್ಷಗಳಿಂದ ಟೀ ಅಂಗಡಿ ಇಟ್ಕೊಂಡಿದ್ದ ಮುತ್ತು ಪರಿಚಯವಾಗಿತ್ತು. ಗೀತಾ ಮನೆಯಲ್ಲಿ ಒಬ್ಬನಾಗಿದ್ದ ಮುತ್ತು ತಾಯಿ ಮತ್ತು ಮಗಳ ಜೊತೆ ಸಲುಗೆಯಿಂದ ಇದ್ದ. ಆದರೆ ಗೀತಾ ಮಗಳ ಮೇಲೆ ಮುತ್ತುಗೆ ಪ್ರೇಮಾಂಕುರವಾಗಿ ಆಕೆಯನ್ನ ಮದುವೆ ಮಾಡಿಕೊಡುವಂತೆ ತಾಯಿ ಗೀತಾಗೆ ಬೆನ್ನುಬಿದ್ದಿದ್ದ.

ಇದನ್ನೂ ಓದಿ: ನೆಲಮಂಗಲ: ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್, ಕಾರಿನಲ್ಲಿದ್ದ ಕುಟುಂಬ ಪವಾಡಸದೃಶ ಪಾರು

ಗೀತಾಗೆ ಇದು ಇಷ್ಟ ಇರದಿದ್ದರೂ ಮುತ್ತು ಪದೇ ಪದೇ ಬಲವಂತ ಮಾಡಿದ್ರಿಂದ ಮನೆಯಲ್ಲಿ ಗಲಾಟೆ ಆಗ್ತಿತ್ತು. ಕೊನೆಗೆ ಮನೆಯಲ್ಲಿ ಮಲಗಿದ್ದ ಗೀತಾಗೆ ಬೆಂಕಿ ಹಾಕಿದ್ದ ಮುತ್ತು ತಮಿಳುನಾಡಿಗೆ ಎಸ್ಕೇಪ್ ಆಗಿದ್ದ.‌ ಸದ್ಯ ಬಸವೇಶ್ವರ ನಗರ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

ಪಶ್ಚಿಮ ವಿಭಾಗ ಡಿಸಿಪಿ ಗಿರೀಶ್ ಹೇಳಿದ್ದಿಷ್ಟು

ಇನ್ನು ಘಟನೆ ಬಗ್ಗೆ ಪಶ್ಚಿಮ ವಿಭಾಗ ಡಿಸಿಪಿ ಗಿರೀಶ್ ಹೇಳಿಕೆ ನೀಡಿದ್ದು, ಮಂಜುನಾಥ ನಗರದಲ್ಲಿ ಮಹಿಳೆಗೆ ಓರ್ವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಕೆಯ ಮಗಳನ್ನ ಮದುವೆ ಮಾಡಿಕೊಡುವಂತೆ ಕೇಳಿದ್ದಾನೆ. ಆದರೆ ಮಹಿಳೆ ಅದಕ್ಕೆ ಒಪ್ಪಿಕೊಂಡಿಲ್ಲ. ಅದೇ ಸಿಟ್ಟಿನಿಂದ ಬೆಂಕಿ ಹಚ್ಚಿದ್ದಾನೆ. ಆರೋಪಿ ಟೀ ಅಂಗಡಿ ಇಟ್ಟುಕೊಂಡಿದ್ದ. ಮಹಿಳೆ ಪ್ರಾವಿಜನ್‌ ಸ್ಟೋರ್‌ ಇಟ್ಟುಕೊಂಡಿದ್ದರು. ಮಹಿಳೆಯ ಮಗಳು ಮದುವೆ ಆಗಿ ಗಂಡನಿಂದ ದೂರವಾಗಿದ್ದರು. ಹಾಗಾಗಿ ಮದುವೆ ಮಾಡಿ ಕೊಡುವಂತೆ ಕೇಳಿದ್ದ. ಆರೋಪಿ ಮಹಿಳೆ ಮನೆಗೆ ಬಂದು ಹೋಗುತ್ತಿದ್ದ. ಹೀಗಾಗಿ ಎಲ್ಲರೂ ಪರಿಚಯಸ್ಥರೇ, ಆತ್ಮೀಯವಾಗಿದ್ದರು.

ವರದಿ: ಪ್ರದೀಪ್ ಚಿಕ್ಕಾಟಿ. tv9, ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಡ್ರಗ್ ಫ್ಯಾಕ್ಟರಿ ಪತ್ತೆ ಮಾಡಿದ ಮಹಾ ಪೊಲೀಸ್: ಬೆಂಗಳೂರಿನ ಮೂವರು ಇನ್ಸ್​​​ಪೆಕ್ಟರ್​​​ಗಳ ತಲೆದಂಡ – Kannada News | Maharashtra police bust three illegal drug manufacturing units in Bengaluru, 3 inspectors Suspended

ಬೆಂಗಳೂರು, (ಡಿಸೆಂಬರ್ 29): ಕರ್ನಾಟಕವನ್ನ ಡ್ರಗ್ಸ್ ಮುಕ್ತ ರಾಜ್ಯ ಮಾಡಬೇಕು ಎನ್ನುವ ಪೋಲಿಸರ ಕನಸು,ಸರ್ಕಾರದ ಯೋಜನೆಗೆ ಜನ ಶಬ್ಬಾಶ್ ಅಂದಿದ್ರು. ಆದರೆ, ಸಿಲಿಕಾನ್ ಸಿಟಿಯಲ್ಲೇ ಡ್ರಗ್ಸ್ ಫ್ಯಾಕ್ಟರಿ (drug manufacturing units) ಇರೋದನ್ನ ಪತ್ತೆ ಮಾಡಿದ್ದಾರೆ. ಹೌದು…ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿದ್ದ ಡ್ರಗ್ಸ್​ ಫ್ಯಾಕ್ಟರಿಯನ್ನು ಪತ್ತೆ ಮಾಡಿದ್ದು, ಈ ಸಂಬಂಧ ಇದೀಗ ಮೂವರು ಇನ್ಸ್​​ಪೆಕ್ಟರ್​ಗಳನ್ನು ಸಸ್ಪೆಂಡ್ ಮಾಡಲಾಗಿದೆ. ಬೆಂಗಳೂರಿನ (Bengaluru) ಕೊತ್ತನೂರು, ಆವಲಹಳ್ಳಿ ಮತ್ತು ಬಾಗಲೂರು ಠಾಣೆಯ ಇನ್ಸ್​​ಪೆಕ್ಟರ್​​ಗಳನ್ನು ಅಮಾನತು ಮಾಡಿ ಕಮಿನಷರ್ ಆದೇಶ ಹೊರಡಿಸಿದ್ದಾರೆ.

ಮೂರು ಠಾಣೆಯ ಇನ್ಸ್​​​ಪೆಕ್ಟರ್​​​ಗಳ ಅಮಾನತು

ಬೆಂಗಳೂರಿನ ಕೊತ್ತನೂರು ಠಾಣೆ ಇನ್ಸ್​ಪೆಕ್ಟರ್ ಚೇತನ್ ಕುಮಾರ್, ಆವಲಹಳ್ಳಿ ಠಾಣೆಯ ಇನ್ಸ್ ಪೆಕ್ಟರ್ ರಾಮಕೃಷ್ಣ ರೆಡ್ಡಿ ಹಾಗೂ ಬಾಗಲೂರು ಠಾಣೆ ಇನ್ಸ್ ಪೆಕ್ಟರ್ ಶಬರೀಶ್ ಅವರನ್ನು ಅಮಾನತು ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಮೂವರು ಇನ್ಸ್​​ಪೆಕ್ಟರ್​ಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.‌

ಇದನ್ನೂ ಓದಿ: ಬೆಂಗಳೂರಲ್ಲಿ ಡ್ರಗ್ಸ್ ಫ್ಯಾಕ್ಟರಿ ಸೀಜ್ ಪ್ರಕರಣ; ಇದರ ಹಿಂದಿದ್ಯಾ ಕೆಮಿಕಲ್ ಎಂಜಿನಿಯರ್ ಮಾಸ್ಟರ್ ಮೈಂಡ್?

ಪ್ರಭಾರಿ ಇನ್ಸ್ ಪೆಕ್ಟರ್ ಗಳ ನೇಮಕ

ಇನ್ನು ಅಮನತುಗೊಂಡಿರುವ ಮೂರು ಠಾಣೆಯ ಇನ್ಸ್​ಪೆಕ್ಟರ್​​ ಜಾಗಕ್ಕೆ ಹೊಸದಾಗಿ ಮೂವರು ಪ್ರಭಾರ ಇನ್ಸ್​​​​ಪೆಕ್ಟರ್​​ಗಳನ್ನು ನೇಮಿಕ ಮಾಡಲಾಗಿದೆ. ಶಾನ್ಯ ವಿಭಾಗ ಮಹಿಳಾ ಪೊಲೀಸ್ ಠಾಣೆ ಪಿಐ ವೆಂಕಟೇಶ್ ಅವರನ್ನು ಬಾಗಲೂರು ಠಾಣೆಗೆ ಪ್ರಭಾರ ಇನ್ಸ್ ಪೆಕ್ಟರ್ ಆಗಿ ನೇಮಿಸಲಾಗಿದೆ. ಸದ್ಯ ಕೆ.ಆರ್ ಪುರಂ ಠಾಣೆ ಇನ್ಸ್ ಪೆಕ್ಟರ್ ಆಗಿರುವ ರಾಮಮೂರ್ತಿ ಅವರನ್ನು ಆವಲಹಳ್ಳಿ ಠಾಣೆಗೆ ಪ್ರಾಭಾರಿಯಾಗಿ ನೇಮಕ ಮಾಡಲಾಗಿದೆ. ಇನ್ನು ಪ್ರಸ್ತುತ ಸಂಪಿಗೆಹಳ್ಳಿ ಠಾಣೆ ಇನ್ಸ್ ಪೆಕ್ಟರ್ ಚಂದ್ರಶೇಖರ್ ಅವರನ್ನ ಕೊತ್ತನೂರು ಠಾಣೆಗೆ ಪ್ರಭಾರಿ ಇನ್ಸ್​​ಪೆಕ್ಟರ್​​ ಆಗಿ ನೇಮಿಸಲಾಗಿದೆ.

ಕ್ರೆಡಿಟ್ ವಾರ್

ಇದೆಲ್ಲ ಒಂದು ಕಡೆಯಾದ್ರೆ ಬೆಂಗಳೂರು ಪೋಲಿಸರು ಕ್ರೆಡಿಟ್ ವಾರ್ ಗೆ ಇಳಿದಿದ್ದಾರೆ. ಡ್ರಗ್ಸ್ ಬೇಟೆಯಲ್ಲಿ ಮಹಾರಾಷ್ಟ್ರ ಪೊಲೀಸರ ಜೊತೆ ಬೆಂಗಳೂರು ಪೊಲೀಸರು, NCB ಅಧಿಕಾರಿಗಳ ಕೂಡ ಇದ್ರು ಎಂದಿದ್ದಾರೆ. ಅಷ್ಟಲ್ಲದೇ, ದಾಳಿ ವೇಳೆ ಕಾರ್ಖಾನೆ ಪತ್ತೆಯಾಗಿಲ್ಲ. MD ಡ್ರಗ್ಸ್ ಸಂಬಂಧಿಸಿದ ವಿಶೇಷ ಪರೀಕ್ಷೆಗಳಲ್ಲಿ ನೆಗೆಟಿವ್ ಫಲಿತಾಂಶ ಬಂದಿದೆ. ಆದರೆ ದಾಳಿ ವೇಳೆ 1.2 ಕೋಟಿ ರೂ. ಮೌಲ್ಯದ 4.2 ಕಿಲೋಗ್ರಾಂ MD ಮಾತ್ರ ವಶಕ್ಕೆ ಪಡೆಯಲಾಗಿದೆ. ಹಾಗೆ 17 ಕೆಜಿ ಕಚ್ಚಾ ವಸ್ತು ವಶಕ್ಕೆ ಪಡೆಯಲಾಗಿದ್ರು, ಕಚ್ಚಾ ವಸ್ತುಗಳ ಒಟ್ಟು ಮೌಲ್ಯ ಇನ್ನೂ ಗೊತ್ತಾಗಿಲ್ವಂತೆ‌‌. ಆದರೆ ಮಹಾರಾಷ್ಟ್ರ ಪೊಲೀಸರು ಸುಮಾರು 55 ಕೋಟಿ ರೂ. ಮೌಲ್ಯದ ಡ್ರಗ್ಸ್ ಎಂದಿರೋದರ ಬಗ್ಗೆ ಅಧಿಕೃತ ಸ್ಪಷ್ಟಿಕರಣ ಪಡೆಯಲಾಗುತ್ತಿದೆ ಎಂದು ಬೆಂಗಳೂರು ಪೊಲೀಸರ ಮಾಹಿತಿ ನೀಡಿದ್ದಾರೆ. ಸದ್ಯ ಡ್ರಗ್ಸ ಪತ್ತೆ ಬಗ್ಗೆ ನಾವು ಕೂಡ ತನಿಖೆ ಮಾಡುತ್ತಿದ್ದು. ಯಾವ ಅಧಿಕಾರಿಗಳ ನಿರ್ಲಕ್ಷ ಇದೆಯೋ ಅಂತವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಕಮೀಷನರ್ ಎಚ್ಚರಿಕೆ ಕೊಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಇನ್ನೊಮ್ಮೆ ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಹೊರಹಾಕುತ್ತೇವೆ; ಅಮಿತ್ ಶಾ – Kannada News | Vote again For BJP Will Remove Infiltrators Home Minister Amit Shah In Assam

ಗುವಾಹಟಿ, ಡಿಸೆಂಬರ್ 29: ಅಸ್ಸಾಂನಲ್ಲಿ ಇಂದು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಬಿಜೆಪಿಗೆ ಇನ್ನೂ 5 ವರ್ಷಗಳ ಅಧಿಕಾರವನ್ನು ನೀಡುವಂತೆ ಕೇಳಿಕೊಂಡರು. ಅಸ್ಸಾಂ ಮತ್ತು ದೇಶದ ಉಳಿದ ಭಾಗಗಳಿಂದ ಅಕ್ರಮ ನುಸುಳುಕೋರರನ್ನು ಹೊರಹಾಕಲು ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ಬಹಳ ಅಗತ್ಯವಿದೆ ಎಂದು ಅವರು ಹೇಳಿದರು.

15ನೇ ಶತಮಾನದ ವೈಷ್ಣವ ಸಂತ-ಸುಧಾರಕ ಶ್ರೀಮಂತ ಶಂಕರದೇವ ಅವರ ಜನ್ಮಸ್ಥಳವನ್ನು ಜಾಗತಿಕ ಆಧ್ಯಾತ್ಮಿಕ ಕೇಂದ್ರವಾಗಿ ಪುನರಾಭಿವೃದ್ಧಿ ಮಾಡುವ ನಾಗಾಂವ್‌ನಲ್ಲಿ 200 ಕೋಟಿ ರೂ. ವೆಚ್ಚದ ಬಟದ್ರವ ಸಾಂಸ್ಕೃತಿಕ ಯೋಜನೆಯನ್ನು ಉದ್ಘಾಟಿಸಿ ಅಮಿತ್ ಶಾ ಈ ಹೇಳಿಕೆ ನೀಡಿದ್ದಾರೆ.

“ಇನ್ನೂ 5 ವರ್ಷಗಳ ಕಾಲ ಬಿಜೆಪಿಗೆ ಮತ ನೀಡಿ, ನಾವು ಅಸ್ಸಾಂನಿಂದ ಮಾತ್ರವಲ್ಲದೆ ಇಡೀ ದೇಶದಿಂದಲೇ ಅಕ್ರಮ ನುಸುಳುವವರನ್ನು ಓಡಿಸುತ್ತೇವೆ. ನುಸುಳುಕೋರರು ಅತಿಕ್ರಮಿಸಿದ ಪ್ರತಿಯೊಂದು ಭೂಮಿಯನ್ನು ನಾವು ಮುಕ್ತಗೊಳಿಸುತ್ತೇವೆ” ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಲ್ಪಸಂಖ್ಯಾತರ ಮೇಲಿನ ದಾಳಿ ಬಗ್ಗೆ ಪಾಕಿಸ್ತಾನದ ಹೇಳಿಕೆಗೆ ಭಾರತ ತಿರುಗೇಟು – Kannada News | MEA rejects Pakistans remark over attacks on minorities in India

ನವದೆಹಲಿ, ಡಿಸೆಂಬರ್ 29: ಭಾರತದಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆಯುತ್ತಿದೆ ಎಂದು ಪಾಕಿಸ್ತಾನದ (Pakistan) ವಿದೇಶಾಂಗ ಸಚಿವಾಲಯದ ವಕ್ತಾರರು ನೀಡಿದ ಹೇಳಿಕೆಗಳನ್ನು ವಿದೇಶಾಂಗ ಸಚಿವಾಲಯ (MEA) ತಿರಸ್ಕರಿಸಿದೆ. ಅಲ್ಪಸಂಖ್ಯಾತರ ವಿರುದ್ಧ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಕೃತ್ಯಗಳೇ ಎಲ್ಲ ಹೇಳುತ್ತವೆ. ನಮ್ಮ ದೇಶದಲ್ಲಿ ಆ ರೀತಿಯ ಘಟನೆಗಳು ನಡೆಯಲು ಸಾಧ್ಯವಿಲ್ಲ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

ಭಾರತದಲ್ಲಿ ಅಲ್ಪಸಂಖ್ಯಾತರ ಮೇಲೆ ಕಿರುಕುಳ ನಡೆಯುತ್ತಿದೆ ಎಂದು ಆರೋಪಿಸಿರುವ ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರ ತಾಹಿರ್ ಅಂದ್ರಾಬಿ ಅವರ ಹೇಳಿಕೆಗಳ ಕುರಿತು ಮಾಧ್ಯಮ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ MEA ವಕ್ತಾರ ರಣಧೀರ್ ಜೈಸ್ವಾಲ್, ಭಾರತ ಅಂತಹ ಹೇಳಿಕೆಗಳನ್ನು ತಿರಸ್ಕರಿಸಿದೆ ಎಂದು ಹೇಳಿದ್ದಾರೆ. ಅಲ್ಪಸಂಖ್ಯಾತರ ಮೇಲೆ ದಾಳಿ ಮಾಡುತ್ತಲೇ ಬಂದಿರುವ ದೇಶದಿಂದ ಈ ಹೇಳಿಕೆ ಬಂದಿದೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಬಾಂಗ್ಲಾದೇಶ ಮಾರ್ಗದ ಮೂಲಕ ಭಾರತಕ್ಕೆ ಉಗ್ರರನ್ನು ನುಸುಳಿಸಲು ಪಾಕಿಸ್ತಾನ ಪ್ಲಾನ್

“ಈ ವಿಷಯದಲ್ಲಿ ಕಳಪೆ ದಾಖಲೆಯನ್ನು ಹೊಂದಿರುವ ದೇಶದ ಹೇಳಿಕೆಗಳನ್ನು ನಾವು ತಿರಸ್ಕರಿಸುತ್ತೇವೆ” ಎಂದು ಜೈಸ್ವಾಲ್ ಹೇಳಿದ್ದಾರೆ. ಧಾರ್ಮಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪಾಕಿಸ್ತಾನದ ಆಂತರಿಕ ಸಮಸ್ಯೆಗಳ ನಡುವೆ ನಮ್ಮ ದೇಶದ ಕಡೆ ಬೆರಳು ತೋರಿಸುವ ಪ್ರಯತ್ನಗಳ ಕಡೆಗೆ ನಾವು ಗಮನವನ್ನು ನೀಡುವುದಿಲ್ಲ. ತಮ್ಮ ದೇಶದ ಮೇಲಿನ ಆರೋಪವನ್ನು ನಮ್ಮೆಡೆಗೆ ತಿರುಗಿಸುವ ಉಪಾಯವಿದು” ಎಂದು ಜೈಸ್ವಾಲ್ ಟೀಕಿಸಿದ್ದಾರೆ.

ಕ್ರಿಸ್‌ಮಸ್ ಆಚರಣೆಯ ಸಮಯದಲ್ಲಿ ನಡೆದ ದಾಳಿಗಳು ಮತ್ತು ಭಾರತದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹಿಂಸಾಚಾರವನ್ನು ಗಮನಿಸುವಂತೆ ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಪಾಕಿಸ್ತಾನ ಅಂತಾರಾಷ್ಟ್ರೀಯ ಸಮುದಾಯವನ್ನು ಒತ್ತಾಯಿಸಿದ ನಂತರ ಭಾರತ ಈ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ಇತ್ತೀಚಿನ ಘಟನೆಗಳ ಕುರಿತು ಮಾಧ್ಯಮ ಪ್ರಶ್ನೆಗಳಿಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ವಕ್ತಾರ ತಹಿರ್ ಅಂದ್ರಾಬಿ ಈ ಹೇಳಿಕೆ ನೀಡಿದ್ದರು. ಭಾರತದಲ್ಲಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯವನ್ನು ತೀವ್ರ ಕಳವಳಕಾರಿ ಎಂದು ಅಂದ್ರಾಬಿ ಬಣ್ಣಿಸಿದ್ದರು.

ಇದನ್ನೂ ಓದಿ: ಪಹಲ್ಗಾಮ್ ದಾಳಿಯ ತನಿಖೆ ಪಾಕಿಸ್ತಾನವನ್ನು ಇಕ್ಕಟ್ಟಿಗೆ ಸಿಲುಕಿಸಿದೆ; ಅಮಿತ್ ಶಾ

ಪಾಕಿಸ್ತಾನವು ಇತರ ದೇಶಗಳ ಮೇಲೆ ಆಧಾರರಹಿತ ಆರೋಪಗಳನ್ನು ಮಾಡುವ ಬದಲು ಅಲ್ಪಸಂಖ್ಯಾತರ ಬಗ್ಗೆ ತನ್ನದೇ ಆದ ಮಾನವ ಹಕ್ಕುಗಳ ದಾಖಲೆಯನ್ನು ಸರಿಪಡಿಸುವತ್ತ ಗಮನಹರಿಸಬೇಕು ಎಂದು ಭಾರತ ಪದೇ ಪದೇ ಒತ್ತಿ ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ತುಂಗಭದ್ರಾ ಡ್ಯಾಂಗೆ ಹೊಸ ಕ್ರಸ್ಟ್ ಗೇಟ್ ಭಾಗ್ಯ, 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ – Kannada News | Tungabhadra reservoir New crest gates installation work Going Fast

ಕೊಪ್ಪಳ, (ಡಿಸೆಂಬರ್ 29): ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಜಿಲ್ಲೆಗಳ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ (Tungabhadra reservoir )ಒಟ್ಟು 33 ಕ್ರಸ್ಟ್​ ಗೇಟ್​​​ಗಳ ಬದಲಾವಣೆ ಮಾಡಲಾಗುತ್ತಿದೆ. ಹೀಗಾಗಿ ಎರಡನೇ ಬೆಳೆಗೆ ನೀರು ಹರಿಸುವುದನ್ನು ನಿಲ್ಲಿಸಲಾಗಿದೆ. ಇನ್ನು 52 ಕೋಟಿ ರೂ. ವೆಚ್ಚದಲ್ಲಿ ಗುಜರಾತ್ ಕಂಪನಿಯಿಂದ 33 ಕ್ರಸ್ಟ್​ ಗೇಟ್ ಬದಲಾವಣೆ ಕಾರ್ಯ ಭರದಿಂದ ಸಾಗಿದ್ದು, 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿಯಾಗಿದೆ. ಇನ್ನು ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರು ಟಿಬಿ ಡ್ಯಾಂಗೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ನೀನು ಏನೂ ಕಿತ್ತುಕೊಳ್ಳೋಕೆ ಆಗಲ್ಲ: ಗಿಲ್ಲಿ ಎದುರು ಉಗ್ರ ರೂಪ ತಾಳಿದ ಅಶ್ವಿನಿ ಗೌಡ – Kannada News | Ashwini Gowda and Gilli Nata exchange heated words in Bigg Boss Kannada Season 12

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ಈ ವಾರ ಗಿಲ್ಲಿ ನಟ ಅವರು ಕ್ಯಾಪ್ಟನ್ ಆಗಿದ್ದಾರೆ. ಈ ಮೊದಲು ಬೇರೆ ಸ್ಪರ್ಧಿಗಳು ಕ್ಯಾಪ್ಟನ್ ಆದಾಗ ಗಿಲ್ಲಿ ನಟ (Gilli Nata) ಅವರು ಕೆಲಸ ಮಾಡಲು ಸೋಮಾರಿತನ ತೋರಿದ್ದರು. ಆದರೆ ಈಗ ಅವರೇ ಕ್ಯಾಪ್ಟನ್ ಆಗಿದ್ದು, ಬೇರೆಯವರು ಅಸಹಕಾರ ತೋರಿದ್ದಕ್ಕೆ ಸಿಕ್ಕಾಪಟ್ಟೆ ಗರಂ ಆಗಿದ್ದಾರೆ. ಅದೇ ವಿಚಾರಕ್ಕೆ ಸಂಬಂಧಿಸಿದಂತೆ ಅಶ್ವಿನಿ ಗೌಡ ಮತ್ತು ಗಿಲ್ಲಿ ನಡುವೆ ಜಗಳ ಆಗಿದೆ. ಅಶ್ವಿನಿ ಗೌಡ (Ashwini Gowda) ಅವರನ್ನು ಗಿಲ್ಲಿ ನಟ ಏಕವಚನದಲ್ಲಿ ಮಾತನಾಡಿಸಿದ್ದಾರೆ. ಇದರಿಂದ ಅಶ್ವಿನಿ ಗೌಡ ಸಿಕ್ಕಾಪಟ್ಟೆ ಗರಂ ಆಗಿದ್ದಾರೆ.

ಕ್ಯಾಪ್ಟನ್ ಆಗಿರುವ ಗಿಲ್ಲಿ ನಟ ಅವರಿಗೆ ಬಿಗ್ ಬಾಸ್ ಒಂದು ವಿಶೇಷ ಅಧಿಕಾರ ನೀಡಿದರು. ಈ ವಾರ ನಾಮಿನೇಟ್ ಮಾಡುವ ಅವಕಾಶವನ್ನು ಒಬ್ಬರಿಂದ ಕಿತ್ತುಕೊಳ್ಳಬೇಕು ಮತ್ತು ಅದಕ್ಕೆ ಸೂಕ್ತ ಕಾರಣಗಳನ್ನು ನೀಡಬೇಕು ಎಂದು ಬಿಗ್ ಬಾಸ್ ಸೂಚಿಸಿದರು. ಆಗ ಗಿಲ್ಲಿ ನಟ ಅವರು ಈ ಅಧಿಕಾರವನ್ನು ಬಳಸಿ ಅಶ್ವಿನಿ ಗೌಡ ಅವರ ಅವಕಾಶವನ್ನು ಕಿತ್ತುಕೊಂಡರು.

‘ನಾನು ಕ್ಯಾಪ್ಟನ್ ಆಗಿ ಕಿಚನ್ ಕೆಲಸ ಹೇಳಿದರೆ ಅಶ್ವಿನಿ ಗೌಡ ಅವರು ಪ್ರತಿಕ್ರಿಯೆ ಕೂಡ ನೀಡಿಲ್ಲ. ಇತ್ತೀಚೆಗೆ ಅವರು ಮಾತಿನಲ್ಲಿ ಬಹಳ ಶುಗರ್ ಕೋಟಿಂಗ್ ಮಾಡುತ್ತಾರೆ. ಆಣೆ ಮಾಡಿಸಿಕೊಳ್ಳುವಂತಿಲ್ಲ ಎಂಬುದು ರೂಲ್​ ಬುಕ್​​ನಲ್ಲಿ ಇದೆ. ಆದರೂ ಹಾಗೆಯೇ ಮಾಡುತ್ತಿದ್ದಾರೆ. ಹಾಗಾಗಿ ನಾಮಿನೇಷನ್ ಮಾಡುವ ಅಧಿಕಾರವನ್ನು ಅವರಿಂದ ಕಸಿದುಕೊಳ್ಳುತ್ತೇನೆ’ ಎಂದು ಗಿಲ್ಲಿ ನಟ ಹೇಳಿದರು.

ಇದಕ್ಕೆ ಅಶ್ವಿನಿ ಗೌಡ ಅವರು ಪ್ರತಿಕ್ರಿಯೆ ನೀಡುವಂತೆ ಬಿಗ್ ಬಾಸ್ ಸೂಚಿಸಿದರು. ಈ ವೇಳೆ ಮಾತಿಗೆ ಮಾತು ಬೆಳೆಯಿತು. ‘ಮೂರ್ಖರ ಜೊತೆ ಮಾತಾಡೋದಕ್ಕಿಂತ ಮೌನವೇ ಲೇಸು. ಹಾಗಾಗಿ ನಿನ್ನ ಜೊತೆ ಮಾತನಾಡಿ ನಾನು ನನ್ನ ವ್ಯಕ್ತಿತ್ವವನ್ನು ಕೆಳಗೆ ಇಡಲು ಇಷ್ಟಪಡಲ್ಲ. ಕ್ಯಾಪ್ಟನ್ ಆದವರಿಗೆ 2 ಕೊಂಬು ಇರಲ್ಲ. ಈ ಮನೆಯ ಜವಾಬ್ದಾರಿಯನ್ನು ಎಲ್ಲರೂ ಮಾಡಬೇಕು. ನೀನು ಮೊದಲು ಕೆಲಸ ಮಾಡೋದು ಕಲಿ’ ಎಂದು ಅಶ್ವಿನಿ ಗೌಡ ಕೂಗಾಡಿದರು.

ಇದನ್ನೂ ಓದಿ: ಬಿಗ್ ಬಾಸ್ ಗೆಲ್ಲೋದು ಗಿಲ್ಲಿ ನಟ: ಖಚಿತವಾಗಿ ಹೇಳಿದ ಸೂರಜ್ ಸಿಂಗ್

‘ನಿನ್ನಂತವನು ಕ್ಯಾಪ್ಟನ್ ಆದರೆ ಇದೇ ಆಗೋದು. ನಾಮಿನೇಷನ್ ಅಧಿಕಾರ ಕಿತ್ತುಕೊಂಡಿದ್ದಕ್ಕೆ ನಾನು ಉತ್ತರ ಕೊಡುತ್ತೇನೆ. ನೀನು ಅಧಿಕಾರಿಂದ ಹೀಗೆ ಮಾಡಿಲ್ಲ. ಇದು ನಿನ್ನ ದುರಹಂಕಾರ. ಇದು ವ್ಯಕ್ತಿತ್ವದ ಆಟ, ದುರಹಂಕಾರದ ಆಟ ಅಲ್ಲ. ನನ್ನನ್ನು 2.0 ರೀತಿ ಇರಲು ಬಿಡು. ನೀನು ಏನೂ ಕಿತ್ತುಕೊಳ್ಳೋಕೆ ಆಗಲ್ಲ’ ಎಂದು ಅಶ್ವಿನಿ ಗೌಡ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಭಾರತಕ್ಕೆ ಹೆದರಿದ್ದಾರೆ ಪಾಕ್ ಸೇನಾ ಮುಖ್ಯಸ್ಥ; ವೈರಲ್ ಆಯ್ತು ಅಸಿಮ್ ಮುನೀರ್ ವಿಡಿಯೋ – Kannada News | Pakistan Army chief Asim Munir terrified of India hiding behind bulletproof glass

ಇಸ್ಲಮಾಬಾದ್, ಡಿಸೆಂಬರ್ 29: ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ (Asim Munir) ಭಾರತಕ್ಕೆ ಹೆದರಿದ್ದಾರೆ. ಭಾರತದಿಂದ ಭಯಭೀತರಾಗಿರುವ ಅವರು ಗುಂಡು ನಿರೋಧಕ ಗೇರ್ ಮತ್ತು ಗಾಜಿನ ಬಾಕ್ಸ್​​ನೊಳಗೆ ನಿಂತು ಭಾಷಣ ಮಾಡಿದ್ದಾರೆ. ಇದರ ವಿಡಿಯೋ ವೈರಲ್ ಆಗಿದೆ. ಭಾರತದ ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನದ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ನಿರಂತರ ಭಯದಲ್ಲಿ ಬದುಕುತ್ತಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್ತಾನದಲ್ಲಿ ವೈರಲ್ ಆಗುತ್ತಿರುವ ಸಾಮಾಜಿಕ ಮಾಧ್ಯಮದ ಪೋಸ್ಟ್​ಗಳ ಪ್ರಕಾರ, ಅಸಿಮ್ ಮುನೀರ್ ತುಂಬಾ ಭಯಗೊಂಡಿದ್ದಾರೆ.

ಇದರಿಂದಲೇ ಅವರು ಮುಂಭಾಗದಿಂದ ಹಿಂದಕ್ಕೆ ಆವರಿಸುವ ಗುಂಡು ನಿರೋಧಕ ಜಾಕೆಟ್ ಧರಿಸದೆ ಯಾರನ್ನೂ ಭೇಟಿಯಾಗುವುದಿಲ್ಲ. ಸೇನಾ ಪ್ರಧಾನ ಕಚೇರಿಯ ಒಳಗೆ ಸಹ, ಅವರು ಸಭೆಗಳ ಸಮಯದಲ್ಲಿ ಗುಂಡು ನಿರೋಧಕ ಗಾಜಿನ ಪರದೆಯ ಹಿಂದೆ ಕುಳಿತುಕೊಳ್ಳುತ್ತಾರೆ ಎಂದು ಹೇಳಲಾಗುತ್ತದೆ. ತಮ್ಮ ದೇಶದ ಸೇನಾ ಮುಖ್ಯಸ್ಥರು ಅಂತಹ ಭಯದಲ್ಲಿ ವಾಸಿಸುತ್ತಿರುವ ದೃಶ್ಯವು ಪಾಕಿಸ್ತಾನಿ ನಾಗರಿಕರಲ್ಲಿ ಕೋಪ ಮತ್ತು ಅಪಹಾಸ್ಯವನ್ನು ಉಂಟುಮಾಡಿದೆ. ನಮ್ಮ ದೇಶದೊಳಗೇ ಈ ರೀತಿ ಹೆದರುತ್ತಾ ಬದುಕುತ್ತಿರುವ ಇವರು ಭಾರತವನ್ನು ಹೇಗೆ ಎದುರಿಸುತ್ತಾರೆ ಎಂದು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ: ಭಾರತದ ಆಪರೇಷನ್ ಸಿಂಧೂರ್ ವೇಳೆ ನೂರ್ ಖಾನ್ ವಾಯುನೆಲೆಗೆ ಹಾನಿ; ಒಪ್ಪಿಕೊಂಡ ಪಾಕಿಸ್ತಾನ

ಪಾಕಿಸ್ತಾನದ ಸೇನಾ ಪ್ರಧಾನ ಕಚೇರಿಯ ಒಳಗಿನಿಂದ ಅಸಿಮ್ ಮುನೀರ್ ಪಾಕಿಸ್ತಾನಿ ಸೈನಿಕರನ್ನು ಉದ್ದೇಶಿಸಿ ಮಾತನಾಡುತ್ತಿರುವ ವೀಡಿಯೊ ಪಾಕಿಸ್ತಾನಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಗುಂಡು ನಿರೋಧಕ ಗಾಜಿನ ಶೀಟ್ ಹಿಂದೆ ಕುಳಿತು ಮಾತನಾಡುತ್ತಿರುವುದು ಕಂಡುಬರುತ್ತದೆ. ಪತ್ರಕರ್ತರಿಂದ ಹಿಡಿದು ಸಾಮಾನ್ಯ ನಾಗರಿಕರವರೆಗೆ ಅನೇಕ ಪಾಕಿಸ್ತಾನಿಗಳು ಈಗ ಮುನೀರ್ ಅವರನ್ನು ಭಯಭೀತ ಫೀಲ್ಡ್ ಮಾರ್ಷಲ್ ಎಂದು ಕರೆಯುತ್ತಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link