ಬೆಂಗಳೂರು: ಪಿಜಿಯಲ್ಲಿ ಸಿಲಿಂಡರ್ ಸ್ಫೋಟ, ನಿಜಕ್ಕೂ ಆಗಿದ್ದೇನು? ಪಿಜಿಯಲ್ಲಿ ಇದ್ದವರು ಹೇಳೋದೇನು ನೋಡಿ
ಬೆಂಗಳೂರು, ಡಿಸೆಂಬರ್ 30: ಬೆಂಗಳೂರಿನ ಕುಂದಲಹಳ್ಳಿ ಕಾಲೋನಿಯ ಪಿಜಿಯೊಂದರಲ್ಲಿ ಸೋಮವಾರ ಸಿಲಿಂಡರ್ ಸ್ಫೋಟಗೊಂಡು ಅರವಿಂದ್ (23) ಎಂಬ ಯುವಕ ಮೃತಪಟ್ಟಿದ್ದಾರೆ. ಹೆಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ದುರ್ಘಟನೆಯಲ್ಲಿ ಮೂರು ಮಂದಿ ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ಪಿಜಿಯಲ್ಲಿ ವಾಸವಿದ್ದವರೊಬ್ಬರು ‘ಟಿವಿ9’ಗೆ ಪ್ರತಿಕ್ರಿಯಿಸಿದ್ದು, ಘಟನೆಗೆ ಅನಿಲ ಸೋರಿಕೆಯೇ ಕಾರಣವೆಂದು ಶಂಕಿಸಲಾಗಿದೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದಾಗ ಸ್ಥಳಕ್ಕೆ ಬಂದಿದ್ದ ನಿವಾಸಿಗಳು ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ್ದಾರೆ. ಸಿಲಿಂಡರ್ ಸ್ಫೋಟದ ಪರಿಣಾಮವಾಗಿ ಕಟ್ಟಡದಲ್ಲಿ ವಿದ್ಯುತ್ ಸರಬರಾಜು ಕಡಿತಗೊಂಡಿದೆ. ಸುಮಾರು…