ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ! – Kannada News | Kobbari Hori Invades Haveri Restaurant: Video goes Viral

ಹಾವೇರಿ, ಡಿಸೆಂಬರ್ 29: ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ಅಚ್ಚರಿಯ ಘಟನೆ ನಡೆದಿದೆ. ಡಿ.ಜೆ. ಪ್ಯಾಲೇಸ್ ರೆಸ್ಟೋರೆಂಟ್ ಮತ್ತು ಲಾಜ್ಡ್‌ನ ಬಾರ್‌ಗೆ ಏಕಾಏಕಿ ಕೊಬ್ಬರಿ ಹೋರಿ ನುಗ್ಗಿದ್ದು, ಮಧ್ಯಪ್ರಿಯರು ಪ್ರಾಣಭೀತಿಯಿಂದ ಓಡಿ ತಪ್ಪಿಸಿಕೊಂಡಿದ್ದಾರೆ. ಕೆಲಕಾಲ ಗೊಂದಲ ಉಂಟಾದರೂ, ಹೋರಿಯ ಅಭಿಮಾನಿಗಳು ಕೇಕೆ ಹಾಕಿ ಹೋರಿಯನ್ನು ಹೊರ ಹಾಕಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಸ್ಮಶಾನದ ಬಳಿ ಮೃತ ಶಿಶುವನ್ನು ಬಾಯಲ್ಲಿ ಕಚ್ಚಿಕೊಂಡು ಓಡಿದ ನಾಯಿ – Kannada News | Madhya Pradesh: Newborn’s Body Found With Stray Dog Near Cremation Ground, Area on Alert

ನಾಯಿ-ಸಾಂದರ್ಭಿಕ ಚಿತ್ರImage Credit source: iStock ವಿದಿಶಾ, ಡಿಸೆಂಬರ್ 29: ಸ್ಮಶಾನದ ಬಳಿ ನಾಯಿ(Dog)ಯೊಂದು ಬಾಯಲ್ಲಿ ಮೃತ ಶಿಶುವನ್ನು ಕಚ್ಚಿಕೊಂಡು ಓಡುತ್ತಿರುವುದನ್ನು ಕಂಡು ಜನರು ಬೆಚ್ಚಿಬಿದ್ದಿದ್ದಾರೆ. ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಡಿಸೆಂಬರ್ 28 ರಂದು, ಪರಾಶರಿ ಸ್ಮಶಾನದ ಬಳಿ ಅಂತ್ಯಕ್ರಿಯೆಗೆ ಆಗಮಿಸಿದ ಜನರು  ಶಿಶುವಿನ ಶವವನ್ನು ನಾಯಿ ಕಚ್ಚಿಕೊಂಡು ಓಡುತ್ತಿರುವುದನ್ನು ಕಂಡು ಬೆಚ್ಚಿಬಿದ್ದಿದ್ದರು. ಈ ದೃಶ್ಯವು ಅಲ್ಲಿದ್ದವರನ್ನು ದಿಗ್ಭ್ರಮೆಗೊಳಿಸಿತು ಮತ್ತು ಅವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಡಿಸೆಂಬರ್ 28…

Read More

Gold Rate Today Bangalore: ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಬೆಲೆ ಮತ್ತೆ ದಾಖಲೆ – Kannada News | Gold Price Today on 29th December 2025, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಡಿಸೆಂಬರ್ 29: ಚಿನ್ನದ ಬೆಲೆ ಸೋಮವಾರ ಕಡಿಮೆಗೊಂಡಿದೆ. ನಿನ್ನೆ 100 ರೂನಷ್ಟು ಹೆಚ್ಚಿದ್ದ ಇದರ ಬೆಲೆ ಇವತ್ತು 65 ರೂ ಕಡಿಮೆಗೊಂಡಿದೆ. 13,000 ರೂ ದಾಟಿದ ಆಭರಣ ಚಿನ್ನದ ಬೆಲೆ (gold rates) ಇದೀಗ 12,990 ರೂಗೆ ಇಳಿದಿದೆ. ವಿದೇಶಗಳಲ್ಲೂ ಹಲವೆಡೆ ಬೆಲೆ ಇಳಿದಿದೆ. ಕೆಲ ದೇಶಗಳಲ್ಲಿ ಬೆಲೆ ಅಲ್ಪ ಹೆಚ್ಚಳ ಪಡೆದಿದೆ. ಆದರೆ, ಇದಕ್ಕೆ ತದ್ವಿರುದ್ಧವಾಗಿ, ಬೆಳ್ಳಿ ಬೆಲೆಯ ಭರ್ಜರಿ ಓಟ ಮುಂದುವರಿಯುತ್ತಲೇ ಇದೆ. ಇಂದು ಇದರ ಬೆಲೆ 4 ರೂ ಹೆಚ್ಚಿದೆ. ನಿನ್ನೆಯಿಂದ…

Read More

ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಗ್ಯಾಂಗ್​​ ಎಸ್ಕೇಪ್​ – Kannada News | Hunasuru Gold Shop Robbery: CCTV Footage of Accused Escape

ಮೈಸೂರು, ಡಿಸೆಂಬರ್​​ 29: ಹುಣಸೂರು ಚಿನ್ನದಂಗಡಿ ದರೋಡೆ ನಡೆಸಿ ದುಷ್ಕರ್ಮಿಗಳು ಎಸ್ಕೇಪ್​​ ಆಗಿರುವ ದೃಶ್ಯ ಟಿವಿ9ಗೆ ಲಭ್ಯವಾಗಿದೆ. ಕೇವಲ ಐದೇ ಐದು ನಿಮಿಷಗಳಲ್ಲಿ ಗೋಲ್ಡ್​​ ಶಾಪ್​​ ರಾಬರಿ ನಡೆಸಲಾಗಿದ್ದು, ಕೆಜಿಗಟ್ಟಲೆ ಚಿನ್ನ ಕದ್ದು ಚಾಲಾಕಿಗಳು ಪರಾರಿಯಾಗಿದ್ದಾರೆ. ಮಧ್ಯಾಹ್ನ 2 ಗಂಟೆ 4 ನಿಮಿಷಕ್ಕೆ ಅಂಗಡಿಗೆ ಎಂಟ್ರಿಕೊಟ್ಟಿದ್ದ ಗ್ಯಾಂಗ್​​ 2 ಗಂಟೆ 9 ನಿಮಿಷಕ್ಕೆ ಶಾಪ್​​ನಿಂದ ತೆರಳಿದೆ. ಚಿನ್ನ ತೆಗೆದುಕೊಂಡ ಹೋಗಲು ಎರಡು ಚೀಲದಂತಹ ಬ್ಯಾಗ್ ತಂದಿದ್ದ ದರೋಡೆಕೋರರು, ಚಿನ್ನದಂಗಡಿಯ ಶೋಕೆಸ್​​ನಲ್ಲಿಟ್ಟಿದ್ದ ದೊಡ್ಡ ದೊಡ್ಡ ಗಾತ್ರದ ಆಭರಣವನ್ನ ಎರಡಲೇ…

Read More

ಹೊಸ ವರ್ಷಾಚರಣೆಗೆ ಬೆಂಗಳೂರಿನ ಈ ಫ್ಲೈಓವರ್​ಗಳು, ಮಟ್ರೋ ಸ್ಟೇಷನ್ ಕ್ಲೋಸ್: ಯಾವ್ಯಾವ ಚಟುವಟಿಕೆ ಬ್ಯಾನ್? ಇಲ್ಲಿದೆ ಮಾಹಿತಿ – Kannada News | Bengaluru New Year 50 Flyovers Closed After 10 PM, 166 Drunk and Drive Checks, Police Issue Strict Guidelines

ಬೆಂಗಳೂರು, ಡಿಸೆಂಬರ್ 29: ಹೊಸ ವರ್ಷದ (New Year) ಸಂಭ್ರಮಾಚರಣೆಗೆ ಬೆಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಬೆಂಗಳೂರು (Bangalore) ನಗರಾದ್ಯಂತ ಪೊಲೀಸ್ ಹೈಅಲರ್ಟ್ ಘೋಷಿಸಲಾಗಿದೆ. ಡಿಸೆಂಬರ್ 31ರಂದು ರಾತ್ರಿ 10 ಗಂಟೆಯ ನಂತರ ನಗರದ ಪ್ರಮುಖ 50 ಫ್ಲೈಓವರ್‌ಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಎಲ್ಲೆಡೆ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ಹೊಸ ವರ್ಷದ ಸಂಭ್ರಮದ ವೇಳೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ನಗರದಲ್ಲಿ 166 ಕಡೆ ಡ್ರಂಕ್…

Read More

ಸರಿಯಾದ ಸಮಯಕ್ಕೆ ಸಿಂಧೂರ ತಂದು, ನಿಲ್ಲಬೇಕಿದ್ದ ಮದುವೆಯನ್ನು ಸರಾಗವಾಗಿ ನಡೆಯುವಂತೆ ಮಾಡಿದ ಬ್ಲಿಂಕಿಟ್ – Kannada News | Delhi: Wedding Ritual Resumes After Blinkit Rush Delivers Sindoor

ದೆಹಲಿ, ಡಿಸೆಂಬರ್ 29: ಇತ್ತೀಚಿನ ದಿನಗಳಲ್ಲಿ ಬ್ಲಿಂಕಿಟ್, ಸ್ವಿಗ್ಗಿ, ಜೊಮಾಟೊ ಹೀಗೆ ಆನ್​ಲೈನ್​ ಆ್ಯಪ್​ಗಳದ್ದೇ ಹವಾ. ಬ್ಲಿಂಕಿಟ್ ಕೂಡಾ ಕಣ್ಣು ಮಿಟುಕಿಸುವಷ್ಟರಲ್ಲಿ ನಾವು ಆರ್ಡರ್​ ಮಾಡಿದ್ದನ್ನು ನಮ್ಮ ಕಣ್ಣಮುಂದಿರಿಸುತ್ತದೆ. ಈ ಬಾರಿ ಬ್ಲಿಂಕಿಟ್ ನಿಲ್ಲಬೇಕಿದ್ದ ಮದುವೆ(Marriage)ಯನ್ನು ಸರಾಗವಾಗಿ ನಡೆಯುವಂತೆ ಮಾಡಿದೆ. ದೆಹಲಿಯಲ್ಲಿ ಮದುವೆ ಸಮಾರಂಭವೊಂದು ನಡೆಯುತ್ತಿತ್ತು, ಎಲ್ಲಾ ವಿಧಿ ವಿಧಾನಗಳು ನಡೆಯುತ್ತಿದ್ದವು. ಇನ್ನೇನು ವರ ವಧುವಿಗೆ ಸಿಂಧೂರ ಹಚ್ಚಬೇಕು ಎನ್ನುವಷ್ಟರಲ್ಲಿ ತಾವು ಸಿಂಧೂರವನ್ನು ತಂದೇ ಇಲ್ಲ ಎಂಬುದು ಕುಟುಂಬಕ್ಕೆ ನೆನಪಾಗಿದೆ. ಸಪ್ತಪದಿ ಮುಗಿದಿತ್ತು, ಪತ್ನಿ ಹಣೆಗೆ ಸಿಂಧೂರವಿಡಬೇಕು…

Read More

ತಮ್ಮ ಹೇಳಿದಂತೆ ಆಡಿದರೆ ಕಾವ್ಯಾಗೆ ನಷ್ಟ; ಸೂರಜ್ ನೇರ ಮಾತು – Kannada News | Suraj After Bigg Boss Kannada 12: Gilli’s Energy Shocked Me Kavya Game will face backlash Says Suraj

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಸೂರಜ್ ಅವರು ಶನಿವಾರ ಎಲಿಮಿನೇಟ್ ಆಗಿದ್ದಾರೆ. ಅವರು ಯಾವುದೇ ಸೆಲೆಬ್ರಿಟಿ ಅಲ್ಲ. ಆದಾಗ್ಯೂ ದೊಡ್ಮನೆ ಒಳಗೆ ಹೋಗುವ ಅವಕಾಶ ಸಿಕ್ಕಿತು. ಅವರು ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್​ ಮನೆ ಒಳಗೆ ತೆರಳಿದ್ದರು. 90 ದಿನ ಬಿಗ್ ಬಾಸ್ ಮನೆಯಲ್ಲಿ ಇದ್ದು ಅವರು ಎಲಿಮಿನೇಟ್ ಆಗಿದ್ದಾರೆ. ಗಿಲ್ಲಿ ನಟನ ಕ್ರೇಜ್ ಬಗ್ಗೆ ಅವರಿಗೆ ಮನೆಯ ಒಳಗೆ ಐಡಿಯಾ ಸಿಕ್ಕಿದೆ. ಗಿಲ್ಲಿ (Gilli) ಬಗ್ಗೆ ಅವರು ಮಾತನಾಡಿದ್ದಾರೆ. ಜೊತೆಗೆ ಕಾವ್ಯಾ…

Read More

ಪ್ರವಾಸಿ ಪ್ರಿಯರಿಗೆ ಶಾಕ್​​: ಹೊಸ ವರ್ಷದ ಹಿನ್ನೆಲೆ ಈ ಸ್ಥಳಗಳಿಗೆ ಇರಲಿದೆ ನಿರ್ಬಂಧ – Kannada News | Karnataka new year restrictions nandi hills mullayanagiri and seetalayyanagiri closed on december 31

ಬೆಂಗಳೂರು/ಚಿಕ್ಕಮಗಳೂರು, ಡಿಸೆಂಬರ್​​ 29: ಹೊಸ ವರ್ಷದ ಹಿನ್ನಲೆ ಫ್ಯಾಮಿಲಿ, ಸ್ನೇಹಿತರ ಜೊತೆ ಟೂರ್​​ ಹೋಗೋರ ಸಂಖ್ಯೆ ಅತ್ಯಧಿಕವಾಗಿರುತ್ತೆ. ನೀವು ಕೂಡ ಎಲ್ಲಾದರೂ ಪ್ರವಾಸಕ್ಕೆ ಹೋಗೋಣ ಎಂದುಕೊಂಡಿದ್ರೆ ಆ ಸ್ಥಳಗಳು ಅಂದು ಓಪನ್​​ ಇರುತ್ತಾ ಅಥವಾ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದ್ಯಾ ಎಂಬುದನ್ನು ಮೊದಲು ಪರೀಕ್ಷಿಸಿಕೊಳ್ಳಿ. ಯಾಕೆಂದ್ರೆ ಬೆಂಗಳೂರು ಸಮೀಪದ ನಂದಿಗಿರಿಧಾಮ, ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೇರಿ ವಿವಿಧ ಪ್ರವಾಸಿ ತಾಣಗಳಿಗೆ ಟೂರಿಸ್ಟ್​​ಗಳನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ನಂದಿಗಿರಿಧಾಮಕ್ಕಿಲ್ಲ ಪ್ರವೇಶ ಹೊಸ ವರ್ಷಾಚರಣೆ ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವಪ್ರಸಿದ್ಧ ಪ್ರವಾಸಿತಾಣ ನಂದಿಗಿರಿಧಾಮಕ್ಕೆ…

Read More

ಅಂತ್ಯಕ್ರಿಯೆಗೆಂದು ಬಂದವರು ಹೋಗಿದ್ದು ಆಸ್ಪತ್ರೆಗೆ, 200 ಜನರಿಗೆ ರೇಬಿಸ್ ಇಂಜೆಕ್ಷನ್, ಆಗಿದ್ದೇನು? – Kannada News | 200 UP Villagers Get Rabies Shots After Consuming Curd From Buffalo Killed By Dog

ಉತ್ತರ ಪ್ರದೇಶ, ಡಿಸೆಂಬರ್ 29: ಅಂತ್ಯಕ್ರಿಯೆಗೆ ಬಂದ 200ಕ್ಕೂ ಹೆಚ್ಚು ಮಂದಿ ರೇಬಿಸ್(Rabies) ಚುಚ್ಚುಮದ್ದು ಪಡೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಬುಡೌನ್‌ನ ಪಿಪ್ರೌಲಿ ಗ್ರಾಮದ ಸುಮಾರು 200 ನಿವಾಸಿಗಳು ಅಂತ್ಯಕ್ರಿಯೆಯೊಂದರಲ್ಲಿ ಪಾಲ್ಗೊಂಡಿದ್ದರು. ಎಲ್ಲರೂ ನಾಯಿ ಕಚ್ಚಿ ಸತ್ತ ಎಮ್ಮೆಯ ಹಾಲಿನಿಂದ ಮಾಡಿದ ರಾಯತಾವನ್ನು ತಿಂದಿದ್ದರು. ಬಳಿಕ 200 ಮಂದಿಗೂ ರೇಬಿಸ್ ಚುಚ್ಚುಮದ್ದು ನೀಡಲಾಗಿದೆ. ಗ್ರಾಮಸ್ಥರ ಪ್ರಕಾರ, ಡಿ.23ರಂದು ಗ್ರಾಮದಲ್ಲಿ ಅಂತ್ಯಕ್ರಿಯೆಯೊಂದು ನಡೆದಿತ್ತು. ಅಲ್ಲಿ ಜನರು ನಾಯಿ ಕಚ್ಚಿ ಸತ್ತ ಎಮ್ಮೆಯ ಹಾಲಿನಿಂದ ಮಾಡಿದ…

Read More

Viral: ಕಂಪನಿ ನನ್ನನ್ನು ನಡೆಸಿಕೊಂಡ ರೀತಿ ಇದು; ಟಾಯ್ಲೆಟ್ ಪೇಪರ್‌ನಲ್ಲಿ ರಾಜೀನಾಮೆ ಪತ್ರ ಬರೆದು ಉದ್ಯೋಗ ತೊರೆದ ವ್ಯಕ್ತಿ – Kannada News | Employee quits job by writing resignation letter on toilet paper

ಕಂಪನಿಯಲ್ಲಿ (company) ಕೆಲಸ ಮಾಡುವ ಉದ್ಯೋಗಿಗಳನ್ನು ಒತ್ತಡವು ಬೆಂಬಿಡದೆ ಕಾಡುತ್ತದೆ. ಅನೇಕ ಬಾರಿ ಕಂಪನಿಗಳು ಉದ್ಯೋಗಿಗಳನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತವೆ. ಹೀಗಾಗಿ ರಾಜೀನಾಮೆ (resignation) ನೀಡುವ ನಿರ್ಧಾರಕ್ಕೆ ಬರುತ್ತಾರೆ. ಇದೀಗ ರಾಜೀನಾಮೆ ಪತ್ರವೊಂದು ವೈರಲ್ ಆಗಿದೆ. ಉದ್ಯೋಗಿಯೂ ಟಾಯ್ಲೆಟ್ ಪೇಪರ್‌ನಲ್ಲಿ ರಾಜೀನಾಮೆ ನೀಡಿರುವುದೇ ಹೈಲೈಟ್ ಆಗಲು ಮುಖ್ಯ ಕಾರಣ. ಅದಲ್ಲದೇ, ತಾನು ಯಾವ ಕಾರಣಕ್ಕಾಗಿ ಈ ಪೇಪರ್ ಬಳಸಿದ್ದೇನೆ ಎನ್ನುವುದನ್ನು ರಾಜೀನಾಮೆಯಲ್ಲಿ ಉಲ್ಲೇಖಿಸಾಲಾಗಿದೆ. ಈ ರಾಜೀನಾಮೆ ಪತ್ರ ನೋಡಿ ನೆಟ್ಟಿಗರು ಫುಲ್ ಶಾಕ್ ಆಗಿದ್ದಾರೆ. ವೋಟ್ಪಿಸ್ಮಿಕ್‌ (Whotfismick) ಹೆಸರಿನ…

Read More